Panchamasali Reservation : ಪಂಚಮಸಾಲಿ ಹೋರಾಟ ಮತ್ತೆ ತೀವ್ರ; ಅಧಿವೇಶನ ಮುಗಿಯುವ ಮುನ್ನ ಮೀಸಲು ಘೋಷಣೆಗೆ ಆಗ್ರಹ - Vistara News

ಕರ್ನಾಟಕ

Panchamasali Reservation : ಪಂಚಮಸಾಲಿ ಹೋರಾಟ ಮತ್ತೆ ತೀವ್ರ; ಅಧಿವೇಶನ ಮುಗಿಯುವ ಮುನ್ನ ಮೀಸಲು ಘೋಷಣೆಗೆ ಆಗ್ರಹ

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮತ್ತೆ ಕಾವು ದೊರೆತಿದೆ. ಹಾಲಿ ಬಜೆಟ್‌ ಅಧಿವೇಶನ ಮುಗಿಯುವುದರ ಒಳಗೆ 2ಎ ಮೀಸಲಾತಿ ಕೊಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.

VISTARANEWS.COM


on

Panchamasali
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಮೂವತ್ತೊಂದು ದಿನಗಳಿಂದ ನಡೆಯುತ್ತಿರುವ 2ನೇ ಹಂತದ ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತೆ ಚುರುಕುಗೊಂಡಿದೆ. ವಿಧಾನಮಂಡಲದ ಅಧಿವೇಶನ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಮೀಸಲಾತಿ ಹೋರಾಟವನ್ನು ಮತ್ತೆ ತೀವ್ರಗೊಳಿಸಲು ನಿರ್ಧರಿಸಲಾಗಿದೆ. ಜತೆಗೆ ಅಧಿವೇಶನ ಮುಗಿಯುವ ಮೊದಲು ಮೀಸಲು ಘೋಷಣೆ ಮಾಡಬೇಕು ಎಂದು ಗಡುವು ನೀಡಲಾಗಿದೆ.

ಸೋಮವಾರ ಫ್ರೀಡಂ ಪಾರ್ಕ್‌ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಮುಂದಿನ ಹೋರಾಟದ ರೂಪುರೇಷೆಗಳನ್ನು ತೆರೆದಿಟ್ಟರು.

ಕಳೆದ ಒಂದು ವರ್ಷದಿಂದಲೇ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದೇವೆ. ಲಕ್ಷಾಂತರ ಜನರು ಭಾಗವಹಿಸಿದ್ದಾರೆ. ನಮ್ಮ ಸಮುದಾಯಕ್ಕೆ ೨ಎ ಮೀಸಲಾತಿ ನೀಡಬೇಕು ಎನ್ನುವ ಬೇಡಿಕೆಯನ್ನು ಮುಂದಿಟ್ಟಿದ್ದೇವೆ. ಇಂಥ ಹೋರಾಟ ಕಳೆದ ವರ್ಷದ ಡಿಸೆಂಬರ್‌ ೨೯ರಂದು ಒಂದು ನಿರ್ಧಾರಕ ಹಂತಕ್ಕೆ ಬಂದಿತ್ತು. ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದ ಸಂದರ್ಭದಲ್ಲಿ ಹೋರಾಟ ತೀವ್ರ ಘಟ್ಟಕ್ಕೆ ತಲುಪಿದಾಗ ಮುಖ್ಯಮಂತ್ರಿಗಳು ಚಾಣಾಕ್ಷತೆಯ ನಡೆ ಮೂಲಕ ಉತ್ತರ ನೀಡಿದರು ಎಂದು ನೆನಪಿಸಿದರು.

ಹಿಂದುಳಿದ ವರ್ಗಗಳ ಆಯೋಗದ ವರದಿಯ ಆಧಾರದಲ್ಲಿ ೨ಸಿ ಎಂಬ ಹೊಸ ಪ್ರವರ್ಗವನ್ನು ಸೃಷ್ಟಿ ಮಾಡಿ ಕೇಂದ್ರ ಸರ್ಕಾರ ಮೇಲ್ವರ್ಗದ ಬಡವರಿಗೆಂದು ನಿಗದಿ ಮಾಡಿರುವ ಶೇ. ೧೦ ಮೀಸಲಾತಿಯಲ್ಲಿ ಪಾಲು ನೀಡಲಾಗುವುದು ಎಂದು ಘೋಷಿಸಿದರು.ನಾವು ಕೂಡಾ ಕಾನೂನು ಮೂಲಕವೇ ಬರಲಿ ಎಂದು ಕಾದಿದ್ದೆವು. ಆದರೆ, ಈ ರೀತಿಯ ಮೀಸಲಾತಿಯಿಂದ ಸಮುದಾಯಕ್ಕೆ ಯಾವುದೇ ಲಾಭವಾಗುವುದಿಲ್ಲ ಎನ್ನುವುದು ನಮಗೆ ಗೊತ್ತಾಗಿದೆ. ಹಾಗಾಗಿ, ೨ಎ ಪ್ರವರ್ಗದಡಿಯೇ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಹೋರಾಟ ಮಾಡುತ್ತಿದ್ದೇವೆ.

ಮುಖ್ಯಮಂತ್ರಿಯವರು ಅಧಿವೇಶನದ ಸಮಯದಲ್ಲಿ ಯಾರೂ ಮಾಡದ ಪ್ರಮಾಣ ಮಾಡಿದ್ದರು, ನಮ್ಮ ಸಮುದಾಯದವರಿಗೆ ಭಾವನಾತ್ಮಕ ಪ್ರಮಾಣ ಮಾಡಿದರು. ದೇವ್ರ ಮೇಲೆ ಆಣೆ ಮಾಡಿದ್ರು, ಕೊನೆಗೆ ತಮ್ಮ ತಾಯಿ ಮೇಲೆಯೂ ಆಣೆ ಮಾಡಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಬೇಡಿ ಅಂದಿದ್ದರು. ಅವರ ಮಾತು ಕೇಳಿ ನಾವು ಹೋರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆವು. ಆದರೆ, ಅವರು ಸಚಿವ ಸಂಪುಟದಲ್ಲೂ ೨ಎ ಮೀಸಲಾತಿ ಬಗ್ಗೆ ಮಾತನಾಡಲಿಲ್ಲ. ಯಾವುದೇ ಚಕಾರವನ್ನು ಎತ್ತಿಲ್ಲ ಎಂದು ನೆನಪಿಸಿದರು.

ಇದೆಲ್ಲವನ್ನೂ ಗಮನಿಸಿ ನಾವು ಮತ್ತೆ ಚಳವಳಿ ಶುರು ಮಾಡಿದ್ದೇವೆ. ಕಳೆದ ಮೂವತ್ತೊಂದು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ, ಸರ್ಕಾರವಾಗಲೀ, ಸಚಿವರಾಗಲೀ, ಮುಖ್ಯಮಂತ್ರಿಗಳಾಗಲೀ ತುಟಿ ಬಿಚ್ಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು ಜಯಮೃತ್ಯುಂಜಯ ಸ್ವಾಮೀಜಿ.

ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ

ʻʻನೀವು ಪದೇಪದೆ ಸಮುದಾಯವನ್ನು ದಾರಿ ತಪ್ಪಿಸುವುದು ಒಳ್ಳೆಯದಲ್ಲಿ. ಹಿಂಗೇ ಮಾಡಿದ್ರೆ ಮುಂದೆ ಎಲೆಕ್ಷನ್ ನಲ್ಲಿ ನಿಮಗೆ ಹೊಡೆತ ಬೀಳುತ್ತದೆ. ನಮಗೆ ಅನ್ಯಾಯ ಮಾಡಿದ್ರೆ ಗಂಡಾಂತರ ತಪ್ಪಿದ್ದಲ್ಲʼʼ ಎಂದು ಎಚ್ಚರಿಕೆ ನೀಡಿದ ಅವರು, ʻʻಎರಡು ವರ್ಷದಿಂದ ನಂಬಿದ್ದೀವಿ.. ತಾಯಿ ಮೇಲೆ ಆಣೆ ಮಾಡಿದ್ರೂ ಮೋಸ ಮಾಡಿದ್ರಿ.. 224 ಕ್ಷೇತ್ರದಲ್ಲೂ ನಮ್ಮ ಸಮುದಾಯದವರು ಇದ್ದಾರೆ. ಕರ್ನಾಟಕದಲ್ಲಿ 15% ಮತದಾರರಿದ್ದೇವೆ. ನಮಗೆ ಮೀಸಲಾತಿ ಕೊಡದಿದ್ರೆ ನಿಮಗೆ ವೋಟಿನ ಮೂಲಕ ಉತ್ತರ ಕೊಡ್ತೀವಿʼʼ ಎಂದು ಹೇಳಿದರು.

ʻʻಕಳೆದ ಬಾರಿ ನಮ್ಮ ಸಮುದಾಯ ನಿಮಗೆ (ಬಿಜೆಪಿ) ಸಪೋರ್ಟ್ ಮಾಡಿದ್ದೆವು. ಆದರೆ ಈ ಬಾರಿ ನಮ್ಮ ಕೈ ಬಿಟ್ರೆ ನಾವೂ ನಿಮ್ಮ ಕೈ ಬಿಡ್ತೀವಿʼʼ ಎಂದು ಸರ್ಕಾರಕ್ಕೆ ನೇರವಾಗಿ ಎಚ್ಚರಿಕೆ ಕೊಟ್ಟರು ಜಯ ಮೃತ್ಯುಂಜಯ ಸ್ವಾಮೀಜಿ.

ʻʻನಾವು ಪ್ರಧಾನ ಮಂತ್ರಿಗೆ ಮನವಿ ಮಾಡುತ್ತಿದ್ದೇವೆ. ಅಮಿತ್ ಶಾ ಅವರಿಗೂ ಮಧ್ಯಸ್ಥಿಕೆ ವಹಿಸಲು ಮನವಿ ಮಾಡಿದ್ದೇವೆ. ಮೋದಿಯರನ್ನು ನೋಡಿ ನಾವು ಪಕ್ಷಕ್ಕೆ ವೋಟ್ ಹಾಕಿದ್ದೇವೆ. ಹಾಗಾಗಿ ಅವರು ನಮ್ಮ ಸಮಸ್ಯೆಯನ್ನು ಗಮನಿಸಬೇಕುʼʼ ಎಂದು ಆಗ್ರಹಿಸಿದರು ಸ್ವಾಮೀಜಿ.

ಈಗ ನಡೆಯುತ್ತಿರುವ ಬಜೆಟ್‌ ಅಧಿವೇಶನ ಮುಕ್ತಾಯ ಆಗುವುದರೊಳಗೆ ನಮ್ಮ ಹೋರಾಟಕ್ಕೆ ಪ್ರತಿಫಲ ಸಿಗಬೇಕು. ನಮಗೆ ಮೀಸಲಾತಿ ಕೊಡಲೇಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಶುರು‌ ಮಾಡುತ್ತೇವೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು.

ಇದನ್ನೂ ಓದಿ : Panchamasali Reservation : ಮೀಸಲಾತಿ ನೀಡದಿದ್ದರೆ 224 ಕ್ಷೇತ್ರದಲ್ಲೂ ಪ್ರವಾಸ : ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident: ಭೀಕರ ಕಾರು ಅಪಘಾತ, 3 ಸಾವು, ಮರದಲ್ಲಿ ನೇತಾಡಿದ ಪ್ರಯಾಣಿಕನ ಶವ

Road Accident: ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ.

VISTARANEWS.COM


on

road accident gauribidanuru
Koo

ಚಿಕ್ಕಬಳ್ಳಾಪುರ: ಭೀಕರ ಕಾರು ಅಪಘಾತವೊಂದರಲ್ಲಿ (Road Accident) ಕಾರು ಕಾಲುವೆಗೆ ಬಿದ್ದು (car Accident) ಮೂವರು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಪ್ರಯಾಣಿಕರೊಬ್ಬರ ಶವ ಮರದಲ್ಲಿ ನೇತಾಡುತ್ತಿದ್ದುದು ಕಂಡುಬಂದಿದ್ದು, ಇದನ್ನು ನೋಡಿದವರೇ ಬೆಚ್ಚಿಬಿದ್ದಿದ್ದಾರೆ.

ಗೌರಿಬಿದನೂರು (Gauribidanur) ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ದುರ್ಘಟನೆ ನಡೆದಿದೆ. ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ. ಕಾರಿನಲ್ಲಿ ನಾಲ್ವರಿದ್ದು, ಮೂವರು ಮೃತಪಟ್ಟಿದ್ದಾರೆ. ಒಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಮೃತಪಟ್ಟವರು ಬೆಸ್ಕಾಂ ಸಿಬ್ಬಂದಿ ಎಂದು ತಿಳಿದುಬಂದಿದೆ. ಇವರನ್ನು ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್‌ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ. ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಚಿಮ್ಮಿದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಯತ್ನ; ಅಕ್ಷರ ದಾಸೋಹದಲ್ಲಿ ಮೇಲಧಿಕಾರಿಗಳ ಕಿರುಕುಳ?

ರಾಯಚೂರು: ರಾಯಚೂರಲ್ಲಿ ಅಕ್ಷರ ದಾಸೋಹ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಇದು ಕಳೆದ ಒಂದು ತಿಂಗಳಲ್ಲಿ ವರದಿಯಾಗುತ್ತಿರುವ ಇಂಥ ಮೂರನೇ ಪ್ರಕರಣವಾಗಿದೆ.

ಲಿಂಗಸಗೂರು ತಾಲೂಕಿನ ಅಕ್ಷರ ದಾಸೋಹದ ನಿರ್ದೇಶಕ ಮೌನೇಶ್ ಕಂಬಾರ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ಸುಮಾರು 40ಕ್ಕೂ ಹೆಚ್ಚು ನಿದ್ರೆ ಟ್ಯಾಬ್ಲೆಟ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಂದು ತಿಂಗಳು ಹಿಂದಷ್ಟೇ ಸಹಾಯ ನಿರ್ದೇಶಕರಾಗಿ ಇವರು ನೇಮಕಗೊಂಡಿದ್ದರು. ಕೆಲಸದ ಜತೆ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು ಎಂದು ತಿಳಿದುಬಂದಿದೆ.

ನಿನ್ನೆ ಏಕಾಏಕಿ ಕಚೇರಿಯಿಂದ ಒಂದು ದಿನದ ಮಟ್ಟಿಗೆ ರಜೆ ಪಡೆದಿದು ಮನೆಗೆ ಬಂದಿದ್ದ ಮೌನೇಶ್, ಮನೆಯಲ್ಲೇ ಟ್ಯಾಬ್ಲೆಟ್‌ಗಳನ್ನು ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಲಿಂಗಸಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕರೆದೊಯ್ಯಲಾಗಿದೆ. ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳೆದ ತಿಂಗಳು ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದಲ್ಲಿ ನಡೆದ ಹಗರಣದ ಬಗ್ಗೆ ಅವರು ಬರೆದಿಟ್ಟ ಡೆತ್‌ನೋಟ್‌ ಇದೀಗ ಸಚಿವರ ತಲೆದಂಡ ಪಡೆದಿದೆ. ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಮಹಾ ನಿರ್ದೇಶಕರೊಬ್ಬರು ಕಾಮಗಾರಿ ನಡೆಸಿದ 8 ಕೋಟಿ ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತುಮಕೂರಿನ ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಬಿಲ್‌ ಹಣ ಬಿಡುಗಡೆಯಾಗಿತ್ತು.

ಕುರಿ ಮೇಯಿಸಲು ಹೋದ ಬಾಲಕ ಸಾವು

ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಡಿಲಿಗೆ ರೈತ ಮಹಿಳೆ ಬಲಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ ರಾಂಪುರದಲ್ಲಿ ಸಿಡಿಲು ಬಡಿದು ರೈತ ಮಹಿಳೆ ರತ್ನಮ್ಮ ಓತಗೇರಿ(43) ಎಂಬುವವರು ಮೃತಪಟ್ಟಿದ್ದಾರೆ. ಹೊಲಕ್ಕೆ ರತ್ನಮ್ಮನೊಂದಿಗೆ ಆಕೆಯ ಅಕ್ಕ ದೇವಮ್ಮ ಸಹ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ದೇವಮ್ಮ ಮನೆ ಸೇರಿದ್ದರು. ಆದರೆ ಹೊಲದಲ್ಲಿದ್ದ ರತ್ನಮ್ಮಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Murder Case : ಸ್ನೇಹಿತರೇ ಕೊಲೆಗಾರರು; ಬರ್ತ್‌ ಡೇ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

Continue Reading

ಕ್ರೈಂ

Self Harming Attempt: ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಯತ್ನ; ಅಕ್ಷರ ದಾಸೋಹದಲ್ಲಿ ಮೇಲಧಿಕಾರಿಗಳ ಕಿರುಕುಳ?

Self Harming Attempt: ಲಿಂಗಸಗೂರು ತಾಲೂಕಿನ ಅಕ್ಷರ ದಾಸೋಹದ ನಿರ್ದೇಶಕ ಮೌನೇಶ್ ಕಂಬಾರ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ಸುಮಾರು 40ಕ್ಕೂ ಹೆಚ್ಚು ನಿದ್ರೆ ಟ್ಯಾಬ್ಲೆಟ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಂದು ತಿಂಗಳು ಹಿಂದಷ್ಟೇ ಸಹಾಯ ನಿರ್ದೇಶಕರಾಗಿ ಇವರು ನೇಮಕಗೊಂಡಿದ್ದರು.

VISTARANEWS.COM


on

self harming attempt
Koo

ರಾಯಚೂರು: ರಾಯಚೂರಲ್ಲಿ (Raichur news) ಅಕ್ಷರ ದಾಸೋಹ (Akshra dasoha) ಅಧಿಕಾರಿಯೊಬ್ಬರು ಆತ್ಮಹತ್ಯೆಗೆ (Self Harming Attempt) ಯತ್ನಿಸಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಇದು ಕಳೆದ ಒಂದು ತಿಂಗಳಲ್ಲಿ ವರದಿಯಾಗುತ್ತಿರುವ ಇಂಥ ಮೂರನೇ ಪ್ರಕರಣವಾಗಿದೆ.

ಲಿಂಗಸಗೂರು ತಾಲೂಕಿನ ಅಕ್ಷರ ದಾಸೋಹದ ನಿರ್ದೇಶಕ ಮೌನೇಶ್ ಕಂಬಾರ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ಸುಮಾರು 40ಕ್ಕೂ ಹೆಚ್ಚು ನಿದ್ರೆ ಟ್ಯಾಬ್ಲೆಟ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಂದು ತಿಂಗಳು ಹಿಂದಷ್ಟೇ ಸಹಾಯ ನಿರ್ದೇಶಕರಾಗಿ ಇವರು ನೇಮಕಗೊಂಡಿದ್ದರು. ಕೆಲಸದ ಜತೆ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು ಎಂದು ತಿಳಿದುಬಂದಿದೆ.

ನಿನ್ನೆ ಏಕಾಏಕಿ ಕಚೇರಿಯಿಂದ ಒಂದು ದಿನದ ಮಟ್ಟಿಗೆ ರಜೆ ಪಡೆದಿದು ಮನೆಗೆ ಬಂದಿದ್ದ ಮೌನೇಶ್, ಮನೆಯಲ್ಲೇ ಟ್ಯಾಬ್ಲೆಟ್‌ಗಳನ್ನು ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಲಿಂಗಸಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕರೆದೊಯ್ಯಲಾಗಿದೆ. ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳೆದ ತಿಂಗಳು ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಭಾರಿ ಸುದ್ದಿಯಾಗಿದೆ. ನಿಗಮದಲ್ಲಿ ನಡೆದ ಹಗರಣದ ಬಗ್ಗೆ ಅವರು ಬರೆದಿಟ್ಟ ಡೆತ್‌ನೋಟ್‌ ಇದೀಗ ಸಚಿವರ ತಲೆದಂಡ ಪಡೆದಿದೆ. ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಮಹಾ ನಿರ್ದೇಶಕರೊಬ್ಬರು ಕಾಮಗಾರಿ ನಡೆಸಿದ 8 ಕೋಟಿ ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತುಮಕೂರಿನ ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಬಿಲ್‌ ಹಣ ಬಿಡುಗಡೆಯಾಗಿತ್ತು.

ಸಿಡಿಲಿಗೆ ಬಾಲಕ, ಮಹಿಳೆ ಬಲಿ

ಗದಗ/ಕೊಪ್ಪಳ: ಎರಡು ಪ್ರತ್ಯೇಕ ಮಳೆ ಅವಘಡಗಳಲ್ಲಿ ಸಿಡಿಲು ಬಡಿದು ಬಾಲಕ ಮತ್ತು ಮಹಿಳೆ ದುರ್ಮರಣ ಹೊಂದಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಿಡಿಲಿಗೆ ಬಾಲಕನೊಬ್ಬ ಬಲಿಯಾಗಿದ್ದರೆ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಕುರಿ ಮೇಯಿಸಲು ಹೋದ ಬಾಲಕ ಸಾವು

ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಡಿಲಿಗೆ ರೈತ ಮಹಿಳೆ ಬಲಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ ರಾಂಪುರದಲ್ಲಿ ಸಿಡಿಲು ಬಡಿದು ರೈತ ಮಹಿಳೆ ರತ್ನಮ್ಮ ಓತಗೇರಿ(43) ಎಂಬುವವರು ಮೃತಪಟ್ಟಿದ್ದಾರೆ. ಹೊಲಕ್ಕೆ ರತ್ನಮ್ಮನೊಂದಿಗೆ ಆಕೆಯ ಅಕ್ಕ ದೇವಮ್ಮ ಸಹ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ದೇವಮ್ಮ ಮನೆ ಸೇರಿದ್ದರು. ಆದರೆ ಹೊಲದಲ್ಲಿದ್ದ ರತ್ನಮ್ಮಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Continue Reading

ಕ್ರೈಂ

Love Sex Dhoka: ಪ್ರೀತಿಸುವ ನಾಟಕವಾಡಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌; ಯುವಕನ ಬಂಧನಕ್ಕಾಗಿ ಪೊಲೀಸ್‌ ಠಾಣೆ ಮುಂದೆ ಯುವತಿ ಧರಣಿ

Love Sex Dhoka: ಕಾರಟಗಿಯ ರವಿರಾಜ್‌ ಎಂಬ ಯುವಕ ಮದುವೆ ಆಗ್ತೀನಿ ಎಂದು ನಂಬಿಸಿ ತನ್ನ ಮೇಲೆ ಎರಡು ವರ್ಷದಿಂದ ಅತ್ಯಾಚಾರವೆಸಗಿದ್ದಾನೆ. ಈತನನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಪಾಲಕರೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು.

VISTARANEWS.COM


on

love sex dhoka koppala
Koo

ಕೊಪ್ಪಳ: ಕೊಪ್ಪಳದಲ್ಲೊಂದು ಲವ್ ಸೆಕ್ಸ್ ದೋಖಾ (love dhoka) ಪ್ರಕರಣ (Fraud Case) ನಡೆದಿದೆ. ಪ್ರೀತಿಸುವ ನಾಟಕವಾಡಿ ಅತ್ಯಾಚಾರ (Physical abuse) ಎಸಗಿ ಕೈ ಕೊಟ್ಟ ಯುವಕನನ್ನು ಬಂಧಿಸಲು ಆಗ್ರಹಿಸಿ ಯುವತಿಯೊಬ್ಬಳು ಪೊಲೀಸ್‌ ಠಾಣೆ ಮುಂದೆ ಧರಣಿ ಕೂತಿದ್ದಾಳೆ.

ಕಾರಟಗಿಯ ರವಿರಾಜ್‌ ಎಂಬ ಯುವಕ ಮದುವೆ ಆಗ್ತೀನಿ ಎಂದು ನಂಬಿಸಿ ತನ್ನ ಮೇಲೆ ಎರಡು ವರ್ಷದಿಂದ ಅತ್ಯಾಚಾರವೆಸಗಿದ್ದಾನೆ. ಈತನನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಪಾಲಕರೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಮೊಸ ಮಾಡಿದ ಯುವಕನ ವಿರುದ್ಧ ದೂರು ದಾಖಲಿಸಿದ್ದಳು. ಪ್ರಕರಣ ದಾಖಲಾದರೂ ಯುವಕನನ್ನು ಆರೆಸ್ಟ್ ಮಾಡಲು ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಾರಟಗಿ ಪೊಲೀಸ್ ಠಾಣೆ ಮುಂದೆ ಯುವತಿ ಮತ್ತು ಆಕೆಯ ಕುಟುಂಬ ಧರಣಿ ಕುಳಿತಿವೆ.

ಯುವಕ ಹಾಗೂ ಯುವತಿ ಕಾಲೇಜ್‌ಮೇಟ್‌ ಆಗಿದ್ದರು ಎಂದು ತಿಳಿದುಬಂದಿದೆ. ಪ್ರೀತಿಸುವ ನಾಟಕವಾಡಿ ಸತತ ಎರಡು ವರ್ಷ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮದುವೆಯಾಗುವ ಆಮಿಷವೊಡ್ಡಿ ಮೋಸ ಮಾಡಿದ್ದಾನೆ. ತನ್ನ ಖಾಸಗಿ ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ. ನನ್ನ ವಿಡಿಯೋ ಇಟ್ಟುಕೊಂಡು ಮತ್ತೆ ಮತ್ತೆ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ

ಗದಗ : ಕ್ಷುಲ್ಲಕ ಕಾರಣವೊಂದಕ್ಕೆ ಮನೆಗಳಿಗೆ ನುಗ್ಗಿ ಮಹಿಳೆಯರು ಸೇರಿದಂತೆ ಮನೆ ಮಂದಿಗೆಲ್ಲ ಡೊಣ್ಣೆ, ಬಡಿಗೆಗಳಿಂದ ಹಲ್ಲೆ ನಡೆಸಿದ ಪ್ರಕರಣವೊಂದು ದಾಖಲಾಗಿದೆ. ಗದಗ (Gadag News) ತಾಲೂಕಿನ ಅಡವಿಸೋಮಾಪೂರ ಸಣ್ಣ ತಾಂಡಾದಲ್ಲಿ ಘಟನೆ ನಡೆದಿದೆ. ಇಬ್ಬರು ಮಹಿಳೆಯರು ಸೇರಿ ಐವರ ಮೇಲೆ ಹಲ್ಲೆ ನಡೆದಿದೆ.

ಜಮೀನು ಬದುವಿನ ವಿಷಯಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಏಕಾಏಕಿ ಮನೆಗಳಿಗೆ ನುಗ್ಗಿ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ. ಗಲಾಟೆಯು ಎರಡು ದಿನದ ಹಿಂದೆ ಆರಂಭಗೊಂಡಿತ್ತು. ಪೊಲೀಸ್​ ಠಾಣೆಯ ಮೆಟ್ಟಿಲೇರಿತ್ತು. ಅಲ್ಲಿ ಸಮಾಧಾನ ಮಾಡಿ ಕಳುಹಿಸಿದ್ದರು. ಹಿರಿಯರ ಮಧ್ಯಸ್ಥಿಕೆಯಲ್ಲಿ ಗಲಾಟೆ ಬಗೆಹರಿಸಿಕೊಳ್ಳಲಾಗಿತ್ತು. ಇದೀಗ ಮತ್ತೆ ಏಕಾ ಏಕಿ ಗಲಾಟೆ ಮಾಡಿ ಐವರು ಜನರ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

ಎರಡು ಪ್ರತ್ಯೇಕ ಮಳೆ ಅವಘಡಗಳಲ್ಲಿ ಸಿಡಿಲು ಬಡಿದು ಬಾಲಕ ಮತ್ತು ಮಹಿಳೆ ದುರ್ಮರಣ ಹೊಂದಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಿಡಿಲಿಗೆ ಬಾಲಕನೊಬ್ಬ ಬಲಿಯಾಗಿದ್ದರೆ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: Murder Case : ಸ್ನೇಹಿತರೇ ಕೊಲೆಗಾರರು; ಬರ್ತ್‌ ಡೇ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

Continue Reading

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ; ಇಂದಿನಿಂದ 5 ದಿನ ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ

Karnataka Weather forecast : ಒಳನಾಡು, ಮಲೆನಾಡು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರಿ (Heavy Rain news) ಮಳೆಯಾಗಲಿದೆ. ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 7 ರಿಂದ 10ರವರೆಗೆ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಐದು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾಗುವ (Heavy Rain alert) ನಿರೀಕ್ಷೆ ಇದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದ ಭಾರಿ ಮಳೆ ಸಾಧ್ಯತೆ ಇದೆ. ವಿಜಯಪುರ, ಕೊಪ್ಪಳ, ವಿಜಯನಗರ ಮತ್ತು ಹಾವೇರಿ, ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Physical Abuse : ಮಹಿಳೆಯರು ಚಳಿ ಬಿಡಿಸಲು ಬಂದಾಗ ಕಾಂಪೌಂಡ್‌ ಹಾರಿದ ಪುರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಧರ್ಮದೇಟು

ಯೆಲ್ಲೋ ಅಲರ್ಟ್ ಘೋಷಣೆ:

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಐದು ದಿನಗಳು ಸಮುದ್ರಕ್ಕೆ ಇಳಿಯುವಂತಿಲ್ಲ

ಜೂನ್ 7ರಿಂದ 10 ರವರೆಗೆ ಹಲವೆಡೆ ಗಂಟೆಗೆ 35 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Parliament Security Breach
ದೇಶ3 mins ago

Parliament Security Breach: ನಕಲಿ ಆಧಾರ್‌ ಕಾರ್ಡ್‌ ಬಳಸಿ ಸಂಸತ್‌ಗೆ ಎಂಟ್ರಿ ಕೊಡೋಕೆ ಯತ್ನ; ತಪ್ಪಿದ ಭಾರೀ ಅವಘಡ

road accident gauribidanuru
ಕ್ರೈಂ6 mins ago

Road Accident: ಭೀಕರ ಕಾರು ಅಪಘಾತ, 3 ಸಾವು, ಮರದಲ್ಲಿ ನೇತಾಡಿದ ಪ್ರಯಾಣಿಕನ ಶವ

Bigg Boss OTT 3 Know when and where to stream the show
ಬಿಗ್ ಬಾಸ್15 mins ago

Bigg Boss OTT 3: ಬಿಗ್​ ಬಾಸ್​ ಒಟಿಟಿ ಪ್ರಸಾರಕ್ಕೆ ಮುಹೂರ್ತ ಫಿಕ್ಸ್​: ಹೊಸ ನಿರೂಪಕನಾಗಿ ಅನಿಲ್​ ಕಪೂರ್​ ಎಂಟ್ರಿ!

Election Results 2024
Lok Sabha Election 202431 mins ago

Election Results 2024: ಸಂಸದರಾಗಿ ಆಯ್ಕೆಯಾದ ಉತ್ತರ ಪ್ರದೇಶದ ಎಂಟು ಶಾಸಕರು; ಶೀಘ್ರ ಉಪಚುನಾವಣೆ

self harming attempt
ಕ್ರೈಂ32 mins ago

Self Harming Attempt: ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಯತ್ನ; ಅಕ್ಷರ ದಾಸೋಹದಲ್ಲಿ ಮೇಲಧಿಕಾರಿಗಳ ಕಿರುಕುಳ?

Lok Sabha Election 2024
ರಾಜಕೀಯ34 mins ago

Lok Sabha Election 2024: ಈ ಬಾರಿ ಆಯ್ಕೆಯಾದ 105 ಸಂಸದರು ಪಿಯುಸಿ ದಾಟಿಲ್ಲ!

Lok Sabha Election 2024
ರಾಜಕೀಯ42 mins ago

Lok Sabha Election 2024: ಈ ಬಾರಿ 24 ಮುಸ್ಲಿಂ ಸಂಸದರ ಆಯ್ಕೆ; ಕಾಂಗ್ರೆಸ್‌, ಎಸ್‌ಪಿಯಿಂದಲೇ ಹೆಚ್ಚು

Viral Video
ವೈರಲ್ ನ್ಯೂಸ್44 mins ago

Viral Video: ಪುಷ್ಪ 2 ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ಅಜ್ಜಿ; ವಾವ್ಹ್‌ ಕ್ಯೂಟ್ ಎಂದ ನೆಟ್ಟಿಗರು

Manipur violence
ದೇಶ51 mins ago

Manipur Violence: ಮಣಿಪುರ ಹಿಂಸಾಚಾರ; ಮೋಸ್ಟ್‌ ವಾಂಟೆಡ್‌ ಗಲಭೆಕೋರ ಅರೆಸ್ಟ್‌

love sex dhoka koppala
ಕ್ರೈಂ1 hour ago

Love Sex Dhoka: ಪ್ರೀತಿಸುವ ನಾಟಕವಾಡಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌; ಯುವಕನ ಬಂಧನಕ್ಕಾಗಿ ಪೊಲೀಸ್‌ ಠಾಣೆ ಮುಂದೆ ಯುವತಿ ಧರಣಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌