Pancharatna Rath Yatra : ಹೊಂಬುಜ ಜೈನ ಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ - Vistara News

ಕರ್ನಾಟಕ

Pancharatna Rath Yatra : ಹೊಂಬುಜ ಜೈನ ಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

Pancharatna Rath Yatra: ಪಂಚರತ್ನ ರಥ ಯಾತ್ರೆಯ ಸಂದರ್ಭದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹೊಂಬುಜ ಜೈನ ಮಠಕ್ಕೆ ಭೇಟಿ ನೀಡಿ ಪದ್ಮಾವತಿ ದೇವಿಯ ಆಶೀರ್ವಾದ ಪಡೆದರು.

VISTARANEWS.COM


on

Pancharatna Rath Yatra Devendra Keerthi Bhattaraka swamiji Hombuja Jain Mutt HDK
ಹೊಂಬುಜ ಜೈನ ಮಠದ ಜಗದ್ಗುರು ಡಾ.ಶ್ರೀಮದ್‌ ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಅವರು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಸ್ಥಳವಾದ ಹೊಂಬುಜ ಜೈನ ಮಠಕ್ಕೆ (Hombuja Jain Mutt ) ಶುಕ್ರವಾರ (ಫೆ.೨೪) ಭೇಟಿ ನೀಡಿ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು.

ನಂತರ ಮಠದ ಜಗದ್ಗುರು ಡಾ. ಶ್ರೀಮದ್‌ ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಶ್ರೀಗಳು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಎಂ.ಎಲ್.ಸಿ. ಬೋಜೇ ಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲೂಕು ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್, ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ನಿಯೋಜಿತ ಅಭ್ಯರ್ಥಿ ಯಡೂರು ರಾಜಾರಾಮ್‌ ಇನ್ನಿತರರು ಹಾಜರಿದ್ದರು.

ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ

“ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಾಜ್ಯದ 28 ಜಿಲ್ಲೆಗಳಲ್ಲಿ ಪಂಚರತ್ನ ರಥ ಯಾತ್ರೆಯ ಮೂಲಕ ಪ್ರವಾಸ ಕೈಗೊಂಡಿದ್ದೇನೆ. ಇತರೆ ಪಕ್ಷಗಳಲ್ಲಿ ನಾಯಕರ ಗುಂಪೇ ಇದೆ. ಆದರೆ ನನ್ನದು ಏಕಾಂಗಿ ಹೋರಾಟ” ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: IND VS AUS: ಮೂರನೇ ಟೆಸ್ಟ್​ ಪಂದ್ಯ ಗೆಲ್ಲಲು ಪಣ ತೊಟ್ಟ ಆಸ್ಟ್ರೇಲಿಯಾ

ರಿಪ್ಪನ್ ಪೇಟೆ ಸಮೀಪದ ಹುಂಚದ ಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಸಲುವಾಗಿ ಶುಕ್ರವಾರ (ಫೆ.೨೪) ಆಗಮಿಸಿದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಇದುವರೆಗೆ 74 ಕ್ಷೇತ್ರಗಳಲ್ಲಿ ಸುತ್ತಾಡಿದ್ದು ದಿನಕ್ಕೆ 35 ರಿಂದ 40 ಹಳ್ಳಿಗಳ ಭೇಟಿ ಮಾಡಿ ಜನರ ಸುಖ-ದುಃಖಗಳನ್ನು ಅರಿಯುವ ಪ್ರಯತ್ನ ಮಾಡುತ್ತಿದ್ದೇನೆ. ಎಲ್ಲಾ ರಾಷ್ಟ್ರೀಯ ಪಕ್ಷಗಳು ಜನರಿಗೆ ದುಡ್ಡು ನೀಡಿ ಜನರನ್ನು ಕರೆಸುತ್ತಾರೆ. ಆದರೆ ನಾನು ಜನರು ಇರುವ ಕಡೆಗೆ ನಾನೇ ಹೋಗುತ್ತಿದ್ದೇನೆ. ಜನರ ನಾಡಿ ಮಿಡಿತ ತಿಳಿಯುತ್ತದೆ. ಜೆಡಿಎಸ್ ಬಗ್ಗೆ ಇಡೀ ರಾಜ್ಯಾದ್ಯಂತ ಒಳ್ಳೆಯ ಒಲವಿದೆ. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಜಯಭೇರಿ ಬಾರಿಸಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾತೆ ತೆರೆಯಲಿದೆ” ಎಂದರು.

ಇದನ್ನೂ ಓದಿ: Tamannaah Bhatia: ತಮನ್ನಾಗೆ ನಟ ವಿಜಯ್ ವರ್ಮಾ ಇಟ್ಟ ಮುದ್ದಾದ ನಿಕ್‌ನೇಮ್‌ ಏನು?

ಅಮಿತ್ ಶಾ ಅವರು ದೇವೇಗೌಡರ ಕುಟುಂಬದಲ್ಲಿ ಎಲ್ಲರೂ ರಾಜಕೀಯ ಮಾಡಿದರೆ ಮನೆ ಕೆಲಸ ಮಾಡುವವರು ಯಾರು? ಎಂದಿದ್ದಾರೆ. ಹಾಗಾದರೆ ಅವರ ಪಕ್ಷದ ಯಡಿಯೂರಪ್ಪ ಕುಟುಂಬದಲ್ಲಿ ಎಲ್ಲರೂ ರಾಜಕೀಯ ಮಾಡುವವರೇ ಇದ್ದಾರೆ. ಹಾಗಾದರೆ ಅವರ ಮನೆ ಕೆಲಸ ಮಾಡುವವರು ಯಾರು? ಎಂದು ಕುಟುಕಿದರು.

ಇದನ್ನೂ ಓದಿ: Actress Waheeda Rehman : ವಾವ್ಹ್‌! ಮುಸ್ಲಿಂ ಹುಡುಗಿಯ ಭರತನಾಟ್ಯ? ವಹೀದಾ ನಾಟ್ಯಕ್ಕೆ ಬೆರಗಾಗಿದ್ದ ವೈಸರಾಯ್ ರಾಜಗೋಪಾಲಾಚಾರಿ

“ಮುಂಬರುವ ಚುನಾವಣೆಯಲ್ಲಿ ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ರಾಜಾರಾಮ್ ಯಡೂರು ಇವರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸಬೇಕು” ಎಂದು ಈ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ, ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Karnataka Election 2023: ಪ್ರಚಾರಕ್ಕೆ ಹೋಗಿದ್ದ ಎನ್‌.ಆರ್‌. ಸಂತೋಷ್‌ಗೆ ತರಾಟೆ; ಹಲ್ಲೆಗೆ ಮುಂದಾದರೇ ಗ್ರಾಮಸ್ಥರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

PSI Death: ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವು; 30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ ಖಿನ್ನತೆ?

PSI Death: ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸ್ಥಳೀಯ ದಲಿತ ಸಂಘಟನೆಗಳು ಶಾಸಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿವೆ.

VISTARANEWS.COM


on

psi death yadgir
Koo

ಯಾದಗಿರಿ: ಯಾದಗಿರಿ (Yadgir news) ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ (Heart Attack) ನಿನ್ನೆ (PSI Death) ಸಾವಿಗೀಡಾಗಿದ್ದಾರೆ. ಇತ್ತೀಚೆಗೆ ಸೈಬರ್ ಕ್ರೈಮ್ (Cyber Crime) ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

ಈ ಸಾವು ಅನುಮಾನ ಮೂಡಿಸಿದ್ದು, ಕುಟುಂಬಸ್ಥರನ್ನು ಶಾಕ್‌ಗೆ ದೂಡಿದೆ. ಪರಶುರಾಮ್‌ ಅವರ ಪತ್ನಿ ಗರ್ಭಿಣಿಯಾಗಿದ್ದು ತವರಿಗೆ ತೆರಳಿದ್ದವರು ಮರಳಿದ್ದಾರೆ. ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸ್ಥಳೀಯ ದಲಿತ ಸಂಘಟನೆಗಳು ಶಾಸಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿವೆ.

ಈ ಕುರಿತು ಪರಶುರಾಮ್‌ ಅವರ ಪತ್ನಿ ಶ್ವೇತಾ ದೂರು ನೀಡಿದ್ದಾರೆ. ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ‌ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿದ್ದರು ಎಂದು ಶ್ವೇತಾ ಆರೋಪಿಸಿದ್ದಾರೆ.

ನಿನ್ನೆಯಷ್ಟೇ ಸಚಿವ ಪ್ರಿಯಾಂಕ ಖರ್ಗೆ ಅವರೊಂದಿಗೂ ಪಿಎಸ್ಐ ಪರಶುರಾಮ್‌ ಫೋನ್‌ನಲ್ಲಿ ಮಾತಾಡಿದ್ದರು ಎಂದು ಪತ್ನಿ ಹೇಳಿದ್ದಾರೆ. ಸ್ಥಳಕ್ಕೆ ಶಾಸಕ ಬರುವಂತೆ ಪಿಎಸ್ಐ ಪತ್ನಿ ಪಟ್ಟು ಹಿಡಿದಿದ್ದು, ಅವರ ಗೋಳಾಟ ಕರುಳು ಚುರ್ ಎನ್ನುವಂತಿದೆ. ನನ್ನ ಗಂಡನ ಸಾವಿಗೆ‌ ನ್ಯಾಯ ಸಿಗಬೇಕು, ಶಾಸಕ ಎಲ್ಲಿ ಕರಿರಿ ಎಂದು ಪತ್ನಿ ಗೋಳಾಡಿದ್ದಾರೆ. ಮಧ್ಯರಾತ್ರಿಯೂ ನನ್ನ ಗಂಡ ಎಸ್ಪಿ‌ ಮೇಡಂ ಪೋನ್ ಹಚ್ಚಿದರು ಅಂತ ಓಡುತ್ತಿದ್ದರು. ಈ ಸಾವಿಗೆ ನನ್ನ ಗಂಡ ಏನು ಅನ್ಯಾಯ ಮಾಡಿದ್ದರು. ಎಂಎಲ್ಎ ಬರುವವರೆಗೂ ನಾನು ಇಲ್ಲಿಂದ ಹೋಗುವುದಿಲ್ಲ ಎಂದು ಯಾದಗಿರಿ ಎಸ್ಪಿ ಜಿ.‌ಸಂಗೀತಾ ಎದುರು ಪತ್ನಿ ಶ್ವೇತಾ ಕಣ್ಣೀರಿಟ್ಟಿದ್ದಾರೆ.

ಯಾದಗಿರಿ ಶಾಸಕ ಹಾಗೂ ಪುತ್ರನ ವಿರುದ್ಧ ದೂರು

ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಅವರ ಪುತ್ರ ಪಂಪನಗೌಡ (ಸನ್ನಿಗೌಡ) ವಿರುದ್ಧ ದೂರು ಪಿಎಸ್ಐ ಪತ್ನಿ ಶ್ವೇತಾ ಯಾದಗಿರಿ ಎಸ್ಪಿ ಸಂಗೀತಾ ಅವರಿಗೆ ದೂರು ನೀಡಿದ್ದಾರೆ. ಪೋಸ್ಟಿಂಗ್‌ಗಾಗಿ ಪದೇ ಪದೆ ಹಣಕ್ಕೆ ಕಿರುಕುಳ ನೀಡುತ್ತಿದ್ದ ಆರೋಪ ದಾಖಲಿಸಲಾಗಿದೆ. ಶಾಸಕ, ಅವರ ಪುತ್ರ ಹಣಕ್ಕಾಗಿ ನಿರಂತರ ಕಿರುಕುಳ ನೀಡುತ್ತಿದ್ದ ಬಗ್ಗೆ ಪತ್ನಿಗೆ ಪರಶುರಾಮ ಹೇಳಿದ್ದರು. 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಜಾತಿ ನಿಂದನೆಯನ್ನೂ ಮಾಡಿದ್ದರು. ಶಾಸಕರ ಕಿರುಕುಳದಿಂದ ಪರಶುರಾಮ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಪತ್ನಿ ದೂರಿದ್ದಾರೆ.

ಶಾಸಕ, ಆತನ ಪುತ್ರನ‌ ಮೇಲೆ ಕೇಸ್ ದಾಖಲಿಸಿದ ಬಳಿಕ‌ ಮರಣೋತ್ತರ ಪರೀಕ್ಷೆಗೆ ಪತ್ನಿ ಒಪ್ಪಿಗೆ ಸೂಚಿಸಿದ್ದು, ಯಾದಗಿರಿ ಯಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಪರಶುರಾಮ ಶವ ರವಾನೆಯಾಗಿದೆ.

ಪರಶುರಾಮ ಮಾವ ವೆಂಕಟಸ್ವಾಮಿ ಕೂಡ ಶಾಸಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಯಾದಗಿರಿ ಎಂಎಲ್‌ಗೆ ದುಡ್ಡಿನ ಆಸೆ ವಿಪರೀತವಾಗಿದೆ. ಅವಧಿ ಪೂರ್ವ ವರ್ಗಾವಣೆಯಿಂದ ಪರಶುರಾಮ ನೊಂದಿದ್ದರು. 7 ತಿಂಗಳ ಅವಧಿಯಲ್ಲಿ ಎಂಎಲ್‌ಎ ಬೇರೆಯವರನ್ನು ಪಿಎಸ್‌ಐ ಆಗಿ ಹಾಕಿಸಿದ್ದಾರೆ. ವರ್ಗಾವಣೆ ಆಗುತ್ತಿರುವುದು ಹೋಂ ಮಿನಿಸ್ಟರ್ ಹಾಗೂ ಸಿಎಂ ಗಮನಕ್ಕೆ ಬರುತ್ತಿಲ್ಲವೇ? ದಕ್ಷ ಅಧಿಕಾರಿಗಳು ಸಾಯುವುದಕ್ಕೆ ಇರುವುದೇ ಎಂದು ಅವರು ಪ್ರಶ್ನಿಸಿದ್ದಾರೆ.

ಸಂಘಟನೆಗಳಿಂದ ಪ್ರತಿಭಟನೆ

ಪಿಎಸ್ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಮೂಡುತ್ತಿದ್ದು, ಯಾದಗಿರಿಯ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ. ನಗರದ ಖಾಸಗಿ ಆಸ್ಪತ್ರೆ ಬಳಿ ಜಮಾಯಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು, ಆಂಬ್ಯುಲೆನ್ಸ್ ತಡೆದು ಪ್ರತಿಭಟಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವ ರವಾನೆ ಮಾಡುತ್ತಿದ್ದಾಗ ಆಂಬ್ಯುಲೆನ್ಸ್‌ ಅಡ್ಡಗಟ್ಟಿ ಕುಳಿತ ಸಂಘಟನೆಗಳ ಕಾರ್ಯಕರ್ತರು, ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Road Accident: ಆಡಿ ಕಾರ್‌ ಮರಕ್ಕೆ ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ದುರ್ಮರಣ; ಐಷಾರಾಮಿ ಕಾರಿನಲ್ಲಿ ಏರ್‌ಬ್ಯಾಗ್‌ ಇರಲೇ ಇಲ್ಲ!

Continue Reading

ಕೋಲಾರ

Road Accident: ಆಡಿ ಕಾರ್‌ ಮರಕ್ಕೆ ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ದುರ್ಮರಣ; ಐಷಾರಾಮಿ ಕಾರಿನಲ್ಲಿ ಏರ್‌ಬ್ಯಾಗ್‌ ಇರಲೇ ಇಲ್ಲ!

Road Accident: ಕೋಲಾರ ‌ಹೊರವಲಯದ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರ ಬಳಿ ಘಟನೆ ನಡೆದಿದೆ. ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಮೃತರನ್ನು ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಎಂದು ಗುರುತಿಸಲಾಗಿದೆ.

VISTARANEWS.COM


on

audi car road accident kolar
Koo

ಕೋಲಾರ: ಕೋಲಾರದ (Kolar news) ಹೊರವಲಯದಲ್ಲಿ ಭೀಕರ ದುರಂತ ಸಂಭವಿಸಿದೆ. ಆಡಿ ಕಾರ್ ಮರಕ್ಕೆ ಡಿಕ್ಕಿಯಾಗಿ (Audi Car Accident) ನಡೆದ ಭೀಕರ ಅಪಘಾತದಲ್ಲಿ (Road Accident) ಮೂವರು ವಿದ್ಯಾರ್ಥಿಗಳು (Students Death) ಸ್ಥಳದಲ್ಲೇ ಮೃತಪಟ್ಟಿದ್ದು, ಇತ್ತೊಬ್ಬ ಆಶ್ಚರ್ಯಕರ ರೀತಿಯಲ್ಲಿ ಬಚಾವ್ ಆಗಿದ್ದಾನೆ.

ಕೋಲಾರ ‌ಹೊರವಲಯದ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರ ಬಳಿ ಘಟನೆ ನಡೆದಿದೆ. ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಮೃತರನ್ನು ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಎಂದು ಗುರುತಿಸಲಾಗಿದೆ.

ಬಂಗಾರಪೇಟೆ ಮೂಲದ ಸಾಯಿ ಗಗನ್ ಬಚಾವ್ ಆಗಿದ್ದಾನೆ. ಅಪಘಾತದ ರಭಸಕ್ಕೆ ಆಡಿ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಚಾವಾದ ಸಾಯಿಗಗನ್‌ ಮನೆಗೆ ಸ್ನೇಹಿತರು ಬಂದಿದ್ದರು. ಮನೆಯಿಂದ ಕೋಲಾರಕ್ಕೆ ಮರಳುವಾಗ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಅತಿ ವೇಗ ಕಾರಣ ಎನ್ನಲಾಗಿದೆ. ಮದ್ಯ ಸೇವನೆಯ ಸಾಧ್ಯತೆಯನ್ನು ಪೋಸ್ಟ್‌ ಮಾರ್ಟಂ ಮೂಲಕ ನಿರ್ಣಯಿಸಲಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಅಪಘಾತಕ್ಕೆ ಒಳಗಾದ ಕಾರಿನಲ್ಲಿ ಏರ್‌ಬ್ಯಾಗ್‌ ಇರಲೇ ಇಲ್ಲ ಎಂದು ಗೊತ್ತಾಗಿದೆ. ಸುಮಾರು 50 ಲಕ್ಷ ರೂಪಾಯಿ ಬೆಲೆಬಾಳುವ ಕಾರಿನಲ್ಲಿ ಅಪಘಾತ ಸುರಕ್ಷತಾ ಕ್ರಮ ಅಳವಡಿಸದಿರುವುದು ಅಚ್ಚರಿಗೆ ಕಾರಣವಾಗಿದೆ.

ಬಸ್ಸಿಗೆ ಸಿಲುಕಿ ವಿದ್ಯಾರ್ಥಿ ಮೃತ್ಯು

ಕೋಲಾರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ (Road Accidentಸಂಭವಿಸಿದೆ. ಜವರಾಯನ ಅಟ್ಟಹಾಸಕ್ಕೆ ವಿದ್ಯಾರ್ಥಿ ಮಸಣ ಸೇರಿದ್ದಾನೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ತಮಟಂಪಲ್ಲಿ ಗ್ರಾಮದ ಭಾರ್ಗವ್ ರೆಡ್ಡಿ (18) ಮೃತ ದುರ್ದೈವಿ. ಭಾರ್ಗವ್‌ ಚಿಂತಾಮಣಿ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಬಸ್ ಮಿಸ್ ಆದ ಕಾರಣ ದ್ವಿಚಕ್ರ ವಾಹನದಲ್ಲಿ ಅಡ್ಡಗಲ್ ಗ್ರಾಮಕ್ಕೆ ಬರುತ್ತಿದ್ದ. ಈ ವೇಳೆ ಬಸ್‌ವೊಂದು ಬೈಕ್‌ಗೆ ಗುದ್ದಿದೆ. ಪರಿಣಾಮ ಕೆಳಗೆ ಬಿದ್ದ ಭಾರ್ಗವ್‌ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.

ಮಗನ ಮೃತ ದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಹಿಟ್‌ ಆ್ಯಂಡ್‌ ರನ್‌ ಮಾಡಿ ಎಸ್ಕೇಪ್‌ ಆದ ಬೈಕ್‌ ಸವಾರ

ಬೆಂಗಳೂರು: ಮಕ್ಕಳನ್ನು ರಸ್ತೆಯಲ್ಲಿ ಆಟವಾಡಲು ಬಿಡುವ ಪೋಷಕರೇ ಎಚ್ಚರವಾಗಿರಿ. ಯಾಕೆಂದರೆ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಟ್‌ ಆ್ಯಂಡ್‌ ರನ್‌ ಮಾಡಿ ಎಸ್ಕೇಪ್‌ ಆಗಿದ್ದಾನೆ. ಸೈಕಲ್ ತುಳಿಯುತ್ತಾ ಆಟವಾಡುತ್ತಿದ್ದ ಬಾಲಕನಿಗೆ ಗುದ್ದಿ ಕಾಲ್ಕಿತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನ ಬನಶಂಕರಿ 6ನೇ ಹಂತದಲ್ಲಿ ಈ ಅಪಘಾತ ನಡೆದಿದೆ. ನಂಬರ್ ಪ್ಲೇಟ್‌ ಇಲ್ಲದ ಆರ್‌ಎಕ್ಸ್ ಬೈಕ್‌ನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯ ಮುಂಭಾಗದ ರಸ್ತೆಯಲ್ಲಿ ಸೈಕಲ್ ತುಳಿಯುತ್ತಿದ್ದ ಬಾಲಕನಿಗೆ ವೇಗವಾಗಿ ಬಂದು ಗುದ್ದಿದ್ದಾನೆ.

ಬಾಲಕ ರಸ್ತೆಯಲ್ಲೇ ಬಿದ್ದು ಅಳುತ್ತಿದ್ದರು ಬೈಕ್‌ ಸವಾರ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಕಳೆದ ಆಗಸ್ಟ್ 1ರ ರಾತ್ರಿ 8 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಆರೋಪಿಗಾಗಿ ದಕ್ಷಿಣ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Love case : ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

Continue Reading

ಮಳೆ

Karnataka Weather : 7 ಜಿಲ್ಲೆಗಳಲ್ಲಿ ವ್ಯಾಪಿಸಲಿದೆ ಭರ್ಜರಿ ಮಳೆ

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲಗೊಂಡಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವಡೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Rain News) ಅಬ್ಬರ ಕಡಿಮೆ ಆಗುತ್ತಿದ್ದು, ಕೆಲವಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather forecast) ನೀಡಿದೆ. 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು,ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿತ

ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿದು ಬಿದ್ದಿದೆ. 15ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದ ವಾಚ್ ಟವರ್ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಕುಸಿದಿದೆ.

ಹಾವೇರಿಯಲ್ಲಿ ಬಾಲಕನ ಮೇಲೆ ಕುಸಿದ ಚಾವಣಿ

ಹಾವೇರಿ ಜಿಲ್ಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ನಿರಂತರ ಮಳೆಗೆ ಶಾಲೆಯ ಚಾವಣಿ ಕುಸಿದು ಬಾಲಕನಿಗೆ ಗಾಯವಾಗಿದೆ. ಹಾವೇರಿಯ ನೀರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. 25 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 5 ನೇ ತರಗತಿಯಲ್ಲಿ ಓದುತ್ತಿದ್ದ ವಿನಾಯಕ್ ಮೋರೆ ಗಾಯಗೊಂಡವನು. ಬಾಲಕನ ಕಾಲಿನ ಮೇಲೆ ಚಾವಣಿ ಕಂಬ ಬಿದ್ದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹರವಿ ಗ್ರಾಮದಲ್ಲೂ ಮನೆ ಕುಸಿದಿದೆ. ಕುಮಾರ ಮಳೆಪ್ಪನವರ ಮನೆಯು ಕುಸಿದು ಬಿದ್ದಿದೆ. ಬೆಳಗಿನ ಜಾವದಲ್ಲಿ ಮಣ್ಣು ಕುಸಿದಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪಾರಾಗಿದ್ದಾರೆ.

ಇದನ್ನೂ ಓದಿ: Governor Versus State: ಶುರುವಾಯ್ತು ರಾಜ್ಯದಲ್ಲಿ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲ ಸಂಘರ್ಷ; ರಾಜ್ಯಪಾಲರ ಮುಂದಿನ ನಡೆ ಏನು?

ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಸತತ ಮೂರನೇ ಬಾರಿಗೆ ನೆರೆ ಹಾವಳಿಯಿಂದಾಗಿ ಬೈಂದೂರು ತಾಲೂಕಿನ ನಾವುಂದ ಕುದ್ರು ವಿನಲ್ಲಿ ವಾಸವಾಗಿರುವ ಏಳು ಮನೆಗಳಿಗೆ ಜಲದಿಗ್ಬಂದನ ಹಾಕಲಾಗಿದೆ. ದೋಣಿಯ ಮೂಲಕವೇ ದೈನಂದಿನ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮನೆ ಮುಂಭಾಗವೇ ಭೂಮಿ ಛಿದ್ರ

ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ. ಭಾರಿ ಮಳೆಗೆ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಕೊಪ್ಪ ತಾಲೂಕಿನ ಬಸರಿ ಕಟ್ಟೆ ಚೆನ್ನಕಲ್ಲು ಗ್ರಾಮದಲ್ಲಿ ನಾಗರಾಜ್ ಎಂಬುವವರ ಮನೆ ಮುಂದೆ ಭೂಮಿ ಛಿದ್ರ ಛಿದ್ರಗೊಂಡಿದೆ. 300 ಅಡಿಯಷ್ಟು ದೂರಕ್ಕೆ ಭೂಮಿ ಜಾರಿ ಹೋಗಿದೆ. ಭೂಮಿ ಕುಸಿತದ ರಭಸಕ್ಕೆ ಮನೆಯ ಅಡಿಪಾಯ, ಗೋಡೆಗಳಲ್ಲಿ ಬಿರುಕು ಉಂಟಾಗಿದೆ. ಮಳೆ ಹೆಚ್ಚಾದಂತೆ ಮನೆಯ ಮುಂಭಾಗ ಮತ್ತಷ್ಟು ಧರೆ ಕುಸಿತ ಉಂಟಾಗುವ ಸಾಧ್ಯತೆ ಇದೆ. ಭೂ ಕುಸಿತದಿಂದಾಗಿ 4-5 ಎಕರೆ, ಅಡಿಕೆ ತೋಟವು ನಾಶವಾಗಿದೆ.

ಶಿರಾಡಿಘಾಟ್ ಭೂ ಕುಸಿತ; ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಟೀಂ ಭೇಟಿ

ಹಾಸನದ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಸಮೀಪದ ಗುಡ್ಡಕುಸಿತ ಸ್ಥಳಕ್ಕೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕುಸಿತಕ್ಕೆ ಕಾರಣ ತಿಳಿಯಲು ಸ್ಥಳ ಪರಿಶೀಲನೆ ನಡೆಸಿದ್ದರು. ಒಂದೇ ಸ್ಥಳದಲ್ಲಿ ನಿರಂತರವಾಗಿ ಭೂಮಿ ಕುಸಿಯುತ್ತಿದೆ. ಸಕಲೇಶಪುರ ತಾಲೂಕಿನ ಹಾರ್ಲೇ ಕೂಡಿಗೆ ಗ್ರಾಮದ ಸಮೀಪ ಭೂಮಿ ಕುಸಿದಿತ್ತು. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಕುಸಿತವಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ

RRB ALP Recruitment: ಆಗಸ್ಟ್ 3ರಂದು ನೈಋತ್ಯ ರೈಲ್ವೆಯ ಸಹಾಯಕ ಲೋಕೋ ಪೈಲಟ್‌ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್‌, ಹಿಂದಿ ಜತೆಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

VISTARANEWS.COM


on

RRB ALP Recruitment
Koo

ಬೆಂಗಳೂರು: ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿರುವ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ (RRB ALP Recruitment) ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ರೈಲ್ವೆ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಂಸದ ತೇಜಸ್ವಿ ಸೂರ್ಯ ಧನ್ಯವಾದ ಸಲ್ಲಿಸಿದ್ದಾರೆ.

ನೈಋತ್ಯ ರೈಲ್ವೆ ವಲಯದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಡಬೇಕೆಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ನೈಋತ್ಯ ರೈಲ್ವೆ ವಲಯದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ನೀಡಿದೆ. ಇದರಿಂದ ಕರ್ನಾಟಕದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೇಮಕವಾಗಲು ಅನುಕೂಲವಾಗಲಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು, ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿದ್ದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದಿರುವುದನ್ನು ರೈಲ್ವೆ ಇಲಾಖೆ ರಾಜ್ಯ ಸಚಿವರಾದ ವಿ.ಸೋಮಣ್ಣ ರವರ ಗಮನಕ್ಕೆ ತಂದಿದ್ದು, ಕನ್ನಡದಲ್ಲಿಯೂ ಪರೀಕ್ಷೆಗೆ ಅವಕಾಶ ಕಲ್ಪಿಸುವಂತೆ ಮಾಡಿದ್ದ ಮನವಿಯನ್ನು ತಕ್ಷಣವೇ ಪುರಸ್ಕರಿಸಿ ಆದೇಶ ಹೊರಡಿಸಿರುವುದು ಅಭಿನಂದನಾರ್ಹ ಕ್ರಮ.

ಕರ್ನಾಟಕ & ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಎಂದೆಂದಿಗೂ ಕಟಿಬದ್ಧವಾಗಿದೆ. ಇದರಿಂದ ಮಾತೃಭಾಷೆ ಕನ್ನಡದಲ್ಲಿ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ತುರ್ತಾಗಿ ಸ್ಪಂದಿಸಿ ಕ್ರಮ ಕೈಗೊಂಡಿರುವ ನಮ್ಮ ಕನ್ನಡದವರೇ ಆದ ಸಚಿವ ವಿ ಸೋಮಣ್ಣ ರವರಿಗೆ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ನೈಋತ್ಯ ರೈಲ್ವೆಯು ಸಹಾಯಕ ಲೋಕೋಪೈಲಟ್‌ ಹುದ್ದೆಗಳಿಗೆ ಮೇ ತಿಂಗಳಲ್ಲಿ ಸಾಮಾನ್ಯ ವಿಭಾಗದ ಸ್ಪರ್ಧಾತ್ಮಕ ಪರೀಕ್ಷೆಯ (ಜಿಡಿಸಿಇ) ಸುತ್ತೋಲೆ ಹೊರಡಿಸಿತ್ತು. ಆಗಸ್ಟ್ 3ರಂದು ಪರೀಕ್ಷೆ ನಡೆಯಲಿದ್ದು, ಪರೀಕ್ಷಾರ್ಥಿಗಳಿಗೆ ನೀಡಲಾದ ಹಾಲ್ ಟಿಕೆಟ್‌ನಲ್ಲಿ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆಯುವಂತೆ ಆಯ್ಕೆ ನೀಡಲಾಗಿದೆ. ಹೀಗಾಗಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದ ಕನ್ನಡಿಗ ಅಭ್ಯರ್ಥಿಗಳಲ್ಲಿ ಆತಂಕ ಶುರುವಾಗಿತ್ತು. ಅಲ್ಲದೆ, ತೀವ್ರ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಆದರೆ, ಇದೀಗ ಕನ್ನಡದಲ್ಲೂ ಪರೀಕ್ಷೆ ಬರೆಯಲು ರೈಲ್ವೆ ಇಲಾಖೆ ಅವಕಾಶ ನೀಡಿದೆ.

Continue Reading
Advertisement
psi death yadgir
ಪ್ರಮುಖ ಸುದ್ದಿ11 seconds ago

PSI Death: ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವು; 30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ ಖಿನ್ನತೆ?

FASTag new rule
ದೇಶ12 mins ago

FASTag new rule: ಫಾಸ್ಟ್ ಟ್ಯಾಗ್ ಹೊಸ ನಿಯಮ; ನವೀಕರಣ ಹೇಗೆ? ಕೊನೆಯ ದಿನ ಯಾವಾಗ?

Red Spinach Benefits
ಆರೋಗ್ಯ12 mins ago

Red Spinach Benefits: ಕೆಂಪು ಹರಿವೆ; ಇದು ಕೇವಲ ಸೊಪ್ಪಲ್ಲ, ಪೋಷಕಾಂಶಗಳ ಪವರ್‌ಹೌಸ್‌!

audi car road accident kolar
ಕೋಲಾರ37 mins ago

Road Accident: ಆಡಿ ಕಾರ್‌ ಮರಕ್ಕೆ ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ದುರ್ಮರಣ; ಐಷಾರಾಮಿ ಕಾರಿನಲ್ಲಿ ಏರ್‌ಬ್ಯಾಗ್‌ ಇರಲೇ ಇಲ್ಲ!

Mushroom Benefits
ಆರೋಗ್ಯ1 hour ago

Mushroom Benefits: ಅಣಬೆ ಎಂಬ ವಿಟಮಿನ್‌ ಡಿ! ಇದರ ಆರೋಗ್ಯ ಲಾಭ ತಿಳಿದರೆ ನೀವು ತಿನ್ನದೆ ಇರಲಾರಿರಿ!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಯಾವ ಸ್ಪರ್ಧಿಗಳು ಕಣಕ್ಕೆ ಇಳಿಯಲಿದ್ದಾರೆ? ಎಲ್ಲ ಮಾಹಿತಿ ಇಲ್ಲಿದೆ

karnataka weather forecast
ಮಳೆ2 hours ago

Karnataka Weather : 7 ಜಿಲ್ಲೆಗಳಲ್ಲಿ ವ್ಯಾಪಿಸಲಿದೆ ಭರ್ಜರಿ ಮಳೆ

Dina Bhavishya
ಭವಿಷ್ಯ3 hours ago

Dina bhavishya : ನಿಮ್ಮ ಅನುಮಾನಗಳು ಮನೆಯ ವಾತಾವರಣವನ್ನು ಹದಗೆಡಿಸುತ್ತೆ

Bigg Boss OTT 3
ಪ್ರಮುಖ ಸುದ್ದಿ6 hours ago

Bigg Boss OTT 3 : ಸನಾ ಮಕ್ಬುಲ್​ ಬಿಗ್​ಬಾಸ್​ ಒಟಿಟಿ 3 ವಿನ್ನರ್​, ನೈಜಿ ರನ್ನರ್​​ಅಪ್​​

Paris Olympics 2024
ಪ್ರಮುಖ ಸುದ್ದಿ8 hours ago

Paris Oylmpics 2024 : ಹಳದಿ ಬಣ್ಣದ ಜೆರ್ಸಿಯವರನ್ನು ಸೋಲಿಸುವುದೆಂದರೆ ಖುಷಿ; ಹಾಕಿ ತಂಡದ ಗೆಲುವನ್ನು ಮುಂದಿಟ್ಟುಕೊಂಡು ಸಿಎಸ್​​ಕೆಯನ್ನು ಲೇವಡಿ ಮಾಡಿದ ಆರ್​ಸಿಬಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ6 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌