Nonbailable warrant : ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಬಂಧನಕ್ಕೆ ವಾರಂಟ್‌ ಜಾರಿ, ಎಸ್‌ಪಿಗೆ ಆರ್ಡರ್‌ - Vistara News

ಕರ್ನಾಟಕ

Nonbailable warrant : ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಬಂಧನಕ್ಕೆ ವಾರಂಟ್‌ ಜಾರಿ, ಎಸ್‌ಪಿಗೆ ಆರ್ಡರ್‌

ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರ ವಿರುದ್ಧ ಜಾಮೀನುರಹಿತ ಬಂಧನ ವಾರಂಟ್‌ (Nonbailable warrant) ಹೊರಡಿಸಲಾಗಿದೆ. ಈ ಬಾರಿ ಬಂಧನ ಖಚಿತ ಎನ್ನುತ್ತಿವೆ ಮೂಲಗಳು.

VISTARANEWS.COM


on

MP Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಸಿಗುತ್ತದೆಯೇ ಇಲ್ಲವೇ ಎಂಬ ಗೊಂದಲದಲ್ಲಿರುವ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಇನ್ನೊಂದು ಆಘಾತ ಎದುರಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಅವರ ಬಂಧನಕ್ಕೆ ಜಾಮೀನುರಹಿತ ವಾರಂಟ್‌ (Nonbailable warrant) ಹೊರಡಿಸಿದೆ.

ಚೆಕ್‌ ಬೌನ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಎಂ.ಪಿ. ಕುಮಾರಸ್ವಾಮಿ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿತ್ತಾದರೂ ಕುಮಾರಸ್ವಾಮಿ ಅವರು ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ಮಾರ್ಚ್‌ 28ರಂದು ಕೋರ್ಟ್‌ ಜಾಮೀನುರಹಿತ ವಾರಂಟ್‌ ಹೊರಡಿಸಿದೆ.

ಕುಮಾರಸ್ವಾಮಿ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಅದು ಚಿಕ್ಕಮಗಳೂರು ಎಸ್ಪಿಗೆ ಸೂಚನೆ ನೀಡಿದೆ.

ಏನಿದು ಚೆಕ್‌ ಬೌನ್ಸ್‌ ಪ್ರಕರಣ?

ಎಂ.ಪಿ. ಕುಮಾರಸ್ವಾಮಿ ಅವರು ಹೂವಪ್ಪ ಗೌಡ ಎಂಬವರಿಂದ ಸಾಲ ಪಡೆದಿದ್ದು ಅದರ ಮರುಪಾವತಿಗಾಗಿ ಕೊಟ್ಟಿರುವ ಎಂಟು ಚೆಕ್‌ಗಳು ಬೌನ್ಸ್‌ ಆಗಿದ್ದವು. ಹೂವಪ್ಪ ಗೌಡ ಅವರು ಇದರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಹೂವಪ್ಪ ಗೌಡರಿಂದ ಪಡೆದ ಸಾಲದಲ್ಲಿ ಒಟ್ಟು ಒಂದು ಕೋಟಿ 38 ಲಕ್ಷದ‌ 65 ಸಾವಿರ ಸಾಲ‌ ಬಾಕಿ ಇತ್ತು. ಇದಕ್ಕೆ ಪ್ರತಿಯಾಗಿ ಸಾಲದ ಕಂತುಗಳೆಂಬಂತೆ ಕುಮಾರಸ್ವಾಮಿ ಅವರು ಎಂಟು ಚೆಕ್‌ಗಳನ್ನು ನೀಡಿದ್ದರು. ಆದರೆ, ಅವೆಲ್ಲವೂ ಬೌನ್ಸ್‌ ಆಗಿದ್ದವು.

ಈ ಎಂಟು ಚೆಕ್ ಬೌನ್ಸ್ ಪ್ರಕರಣಗಳ ವಿಚಾರಣೆ ನಡೆಸಿದ ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ. ಜೆ. ಪ್ರೀತ್ ಅವರು ಆರು ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದರು. ಆಗ ಎಂ.ಪಿ. ಕುಮಾರಸ್ವಾಮಿ ಪರ ವಕೀಲರು ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿದ್ದರು. ಕೋರ್ಟ್‌ 10 ದಿನಗಳ ಕಾಲಾವಕಾಶವನ್ನೂ ನೀಡಿತ್ತು. ಆದರೆ, ಶಾಸಕರ ಪರವಾಗಿ ಮೇಲ್ಮನವಿ ಸಲ್ಲಿಕೆ ಆಗಲೇ ಇಲ್ಲ! ಹೀಗಾಗಿ ಬಂದಿಸಿ ಕೋರ್ಟ್‌ ಮುಂದೆ ಹಾಜರುಪಡಿಸುವಂತೆ ಎಸ್‌ಪಿಗೆ ಕೋರ್ಟ್‌ ಸೂಚಿಸಿತು.

ಇದನ್ನೂ ಓದಿ : BJP Karnataka: ಸಿ.ಟಿ. ರವಿ ವಿರುದ್ಧ ದೂರು ನೀಡಲು ರಾಜಧಾನಿಗೆ ಬಂದ ಎಂ.ಪಿ. ಕುಮಾರಸ್ವಾಮಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Karnataka Drought: ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ 4,860 ಕೋಟಿ ರೂಪಾಯಿ ಕೊಟ್ಟರೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇ ಪದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

VISTARANEWS.COM


on

Karnataka Drought Relief HDK accuses Congress government of lying says HD Kumarswamy
Koo

ಬೆಂಗಳೂರು: ಕರ್ನಾಟಕದ ಬರ ಪರಿಹಾರ (Karnataka Drought Relief) ವಿಷಯದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ. ಯುಪಿಎ ನೇತೃತ್ವದ ಕಾಂಗ್ರೆಸ್ ಸರ್ಕಾರ ಶೇ. 8ರಷ್ಟು ಬರ ಪರಿಹಾರವನ್ನು ಕೊಟ್ಟಿದ್ದರೆ, ಎನ್‌ಡಿಎ ಸರ್ಕಾರ ಈಗಿನ ಅನುದಾನವನ್ನು ಹೊರತುಪಡಿಸಿಯೇ ಶೇ. 38ರಷ್ಟು ಹಣವನ್ನು ಕರ್ನಾಟಕಕ್ಕೆ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ‌ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಅತ್ಯಲ್ಪ ಪರಿಹಾರ ಕೊಟ್ಟು ರಾಜ್ಯದ ಜನರಿಗೆ ವಂಚನೆ ಎಸಗಿದ್ದು ಯುಪಿಎ ಸರ್ಕಾರ ಎಂದು ಹೇಳಿದರು.

ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ಕಡಿಮೆ ಹಣ ಕೊಟ್ಟಿದೆ ಎಂಬ ಕಾಂಗ್ರೆಸ್‌ ಸರ್ಕಾರದ ಆರೋಪವನ್ನು ಟೀಕಿಸಿದ ಮಾಜಿ ಮುಖ್ಯಮಂತ್ರಿ‌ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ 4,860 ಕೋಟಿ ರೂಪಾಯಿ ಕೊಟ್ಟರೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇ ಪದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ನನಗಿರುವ ಮಾಹಿತಿ ಪ್ರಕಾರ ಮನಮೋಹನ್ ಸಿಂಗ್ ಅವರ ಯುಪಿಎ ಸರಕಾರದ 2004ರಿಂದ 2013ರವರೆಗಿನ ಅವಧಿಯಲ್ಲಿ ವಿವಿಧ ಸಂದರ್ಭದಲ್ಲಿ ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಬರ ಪರಿಹಾರಕ್ಕಾಗಿ ಕೇವಲ ಶೇ. 8ರಷ್ಟು ಹಣ ನೀಡಿದ್ದಾರೆ. ನರೇಂದ್ರ ಮೋದಿ ಅವರು ಬಂದ ಮೇಲೆ ಅಂದರೆ, 2014ರಿಂದ ಇಲ್ಲಿಯವರೆಗೆ ಈಗ ಬಿಡುಗಡೆ ಆಗಿರುವ 3,454 ಕೋಟಿ ರೂಪಾಯಿ ಹೊರತುಪಡಿಸಿ ಶೇ. 38ರಷ್ಟು ಬರ ಪರಿಹಾರ ಹಣ ರಾಜ್ಯಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರ 8% ಕೊಟ್ಟರೆ, ಎನ್‌ಡುಎ ಸರ್ಕಾರ 38% ಹಣ ಕೊಟ್ಟಿದೆ. ಅನ್ಯಾಯ ಯಾರಿಂದ ಆಗಿದೆ ಎಂಬುದು ಇಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ ಎಂದು‌ ಎಚ್.ಡಿ. ಕುಮಾರಸ್ವಾಮಿ ಅವರು ಅಂಕಿ-ಅಂಶ ನೀಡಿದರು.

ಇವರು ಕೇಂದ್ರ ಸರ್ಕಾರದ ಸುಳ್ಳುಗಳನ್ನು ಹೇಳುತ್ತಾ ಅಪಪ್ರಚಾರ ಮಾಡುವುದನ್ನು ಬಿಟ್ಟು ಕೇಂದ್ರದಿಂದ ಬಂದಿರುವ ಹಣವನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡಲಿ ಎಂದು ಎಚ್.ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದರು.‌

ಹಾಸನ ಪ್ರಕರಣ: ಉಪ್ಪು ತಿಂದವರು ನೀರು ಕುಡಿಯುತ್ತಾರೆ

ಹಾಸನ ಜಿಲ್ಲೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ನಡೆದಿದೆ ಎನ್ನಲಾದ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

ತನಿಖೆಯ ಮೂಲಕ ಎಲ್ಲ ಸತ್ಯಾಂಶಗಳು ಹೊರಗೆ ಬರಲಿ. ಯಾರೇ ತಪ್ಪೆಸಗಿದ್ದರೂ, ಅವರು ಯಾರೇ ಆಗಿದ್ದರೂ ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸುವ ಪ್ರಶ್ನೆ ಬರುವುದಿಲ್ಲ. ಆದ್ದರಿಂದ ತನಿಖೆಯ ವರದಿ ಸಂಪೂರ್ಣವಾಗಿ ಹೊರ ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Continue Reading

Lok Sabha Election 2024

Parliament Flashback: ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಮಧ್ಯೆ ನಡೆದಿತ್ತು ಐತಿಹಾಸಿಕ ಕದನ!

Parliament Flashback: ಆಗಷ್ಟೇ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ಏರಿಸಲಾಗಿತ್ತು. ಅವರನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನವಾಗಿತ್ತು. ತಮ್ಮ ಪತಿ ರಾಜೀವ್‌ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಅಮೇಠಿ ಲೋಕಸಭೆ ಕ್ಷೇತ್ರ ಸೋನಿಯಾ ಅವರ ಮೊದಲ ಆಯ್ಕೆಯಾಗಿತ್ತು. ಅಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಆದರೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ 1998ರ ಲೋಕಸಭೆ ಚುನಾವಣೆಯಲ್ಲಿ ಮೊಟ್ಟ ಮೊದಲ ಬಾರಿ ಕಾಂಗ್ರೆಸ್‌ಗೆ ಸೋಲಾಗಿತ್ತು. ಹಾಗಾಗಿ ಅಲ್ಲಿ ಸೋಲುವ ಭಯದಿಂದ ಬಳ್ಳಾರಿಗೆ ಬಂದು ಸ್ಪರ್ಧಿಸಿದ್ದರು.

VISTARANEWS.COM


on

Parliament Flashback
Koo

ಬೆಂಗಳೂರು: 1999ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿತ್ತು. ಇದಕ್ಕೆ ಕಾರಣ ಕಾಂಗ್ರೆಸ್‌ ವರಿಷ್ಠ ನಾಯಕಿ ಸೋನಿಯಾ ಗಾಂಧಿ (Sonia Gandhi) ಮತ್ತು ಬಿಜೆಪಿಯ ಫೈರ್‌ ಬ್ರಾಂಡ್‌ ನಾಯಕಿ, ದಿಲ್ಲಿಯ ಮುಖ್ಯಮಂತ್ರಿಯೂ ಆಗಿದ್ದ ಸುಷ್ಮಾ ಸ್ವರಾಜ್‌ (Sushma Swaraj) ನಡುವಿನ ಮುಖಾಮುಖಿ (Parliament Flashback).

ಆಗಷ್ಟೇ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ಏರಿಸಲಾಗಿತ್ತು. ಅವರನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನವಾಗಿತ್ತು. ತಮ್ಮ ಪತಿ ರಾಜೀವ್‌ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಅಮೇಠಿ ಲೋಕಸಭೆ ಕ್ಷೇತ್ರ ಸೋನಿಯಾ ಅವರ ಮೊದಲ ಆಯ್ಕೆಯಾಗಿತ್ತು. ಅಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಆದರೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ 1998ರ ಲೋಕಸಭೆ ಚುನಾವಣೆಯಲ್ಲಿ ಮೊಟ್ಟ ಮೊದಲ ಬಾರಿ ಕಾಂಗ್ರೆಸ್‌ಗೆ ಸೋಲಾಗಿತ್ತು. ರಾಜೀವ್‌ ಗಾಂಧಿ ಅವರ ಪರಮಾಪ್ತರಾಗಿದ್ದ ಕ್ಯಾಪ್ಟನ್‌ ಸತೀಶ್‌ ಶರ್ಮಾ ಅವರನ್ನು ಬಿಜೆಪಿ ಅಭ್ಯರ್ಥಿ ಡಾ. ಸಂಜಯ್‌ ಸಿಂಗ್‌ ಸೋಲಿಸಿದ್ದರು. ಹಾಗಾಗಿ ಅಲ್ಲಿ ಸುಲಭವಾಗಿ ಗೆಲ್ಲುವ ವಿಶ್ವಾಸ ಸೋನಿಯಾಗಿರಲಿಲ್ಲ. ಹಾಗಾಗಿ ಸೋನಿಯಾ ಗಾಂಧಿ ಹಿತೈಷಿಗಳೆಲ್ಲ ಸೇರಿ ಲೆಕ್ಕಾಚಾರ ಹಾಕಿ ಆರಿಸಿದ ಮತ್ತೊಂದು ಕ್ಷೇತ್ರವೇ ಬಳ್ಳಾರಿ.

ಏಕೆಂದರೆ 1952ರಿಂದ 1999ರವರೆಗೆ ನಡೆದ 12 ಚುನಾವಣೆಗಳಲ್ಲೂ ಕಾಂಗ್ರೆಸ್‌ ಬಳ್ಳಾರಿಯಲ್ಲಿ ಜಯ ಸಾಧಿಸಿತ್ತು.
ಹೈದರಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಬಳ್ಳಾರಿಗೆ ಬಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದರು. ಸೋನಿಯಾ ನಾಮಪತ್ರದ ಬೆನ್ನಿಗೇ ಸುಷ್ಮಾ ಸ್ವರಾಜ್‌ ಅವರನ್ನು ಕಣಕ್ಕಿಳಿಸಿ ಕಾಂಗ್ರೆಸ್‌ಗೆ ಬಿಜೆಪಿ ನಡುಕ ಹುಟ್ಟಿಸಿತು. ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಅವರ ಚುನಾವಣಾ ಪ್ರಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿತು. ವಿದೇಶಿ ಸೊಸೆ ಮತ್ತು ಸ್ವದೇಶಿ ಮಗಳ ನಡುವಿನ ಸ್ಪರ್ಧೆ ಎಂದೇ ಮಾಧ್ಯಮಗಳು ಬಣ್ಣಿಸಿದವು. ಸುಷ್ಮಾ ಸ್ವರಾಜ್‌ ಅವರು ಕನ್ನಡದಲ್ಲೇ ಭಾಷಣ ಮಾಡಿ ಅಚ್ಚರಿ ಮೂಡಿಸಿದರು. ಕಾಂಗ್ರೆಸ್‌ ಮತ್ತು ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಇಲ್ಲಿಗೆ ಬಂದು ಪ್ರಚಾರ ಮಾಡಿದರು. ಆದರೆ ಅಂತಿಮವಾಗಿ ಸೋನಿಯಾ ಗಾಂಧಿ ಅವರು 56,100 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಅತ್ತ ಅಮೇಠಿಯಲ್ಲಿ ಸುಮಾರು 3 ಲಕ್ಷ ಮತಗಳ ಅಂತರದಿಂದ ಗೆದ್ದ ಸೋನಿಯಾ ಗಾಂಧಿ ಬಳ್ಳಾರಿ ಕ್ಷೇತ್ರ ತೊರೆದರು. ಸುಷ್ಮಾ ಸ್ವರಾಜ್‌ ಇಲ್ಲಿ ಸೋತರು. ಆದರೆ ಪ್ರತಿವರ್ಷ ವರ ಮಹಾಲಕ್ಷ್ಮೀ ಹಬ್ಬದ ದಿನ ಬಳ್ಳಾರಿಗೆ ಬಂದು ಪೂಜೆಯಲ್ಲಿ ಭಾಗಿಯಾಗುತ್ತಿದ್ದರು. ಅವರ ಸ್ಪರ್ಧೆ ಬಳ್ಳಾರಿಯಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಿತು. ಮುಂದೆ 2004, 2009, 20014 ಮತ್ತು 20019ರ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಜಯ ದಾಖಲಿಸಿದ್ದೇ ಇದಕ್ಕೆ ಸಾಕ್ಷಿ.

ಗುರುವಿಗೇ ಸೋಲಿನ ರುಚಿ ತೋರಿಸಿದ ಆಸ್ಕರ್‌ ಫೆರ್ನಾಂಡಿಸ್‌!

ಡಾ. ಟಿ.ಎ.ಪೈ ಅವರು ಖ್ಯಾತ ವೈದ್ಯ, ಶಿಕ್ಷಣ ತಜ್ಞ ಮತ್ತು ಅರ್ಥ ಶಾಸ್ತ್ರಜ್ಞರೆಂದು ಖ್ಯಾತಿ ಪಡೆದವರು. ಆಧುನಿಕ ಮಣಿಪಾಲದ ನಿರ್ಮಾತೃರು. ಇಂದು ಮಣಿಪಾಲ ಆರೋಗ್ಯ ಮತ್ತು ಶಿಕ್ಷಣದಲ್ಲಿ ವಿಶ್ವ ಪ್ರಸಿದ್ಧಿ ಪಡೆಯಲು ಡಾ. ಟಿ.ಎ. ಪೈ ಅವರೇ ಕಾರಣರು. ಇಂಥ ಶ್ರೇಯಸ್ಸಿನ ಪೈ ಅವರು 1977ರಲ್ಲಿ ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಪ್ರಚಂಡ ಜಯ ದಾಖಲಿಸಿದರು. ಆದರೆ ಇವರ ಬಗ್ಗೆ ವೈಯಕ್ತಿಕ ಕಾರಣಕ್ಕೆ ಮುನಿಸು ಹೊಂದಿದ್ದ ಇಂದಿರಾ ಗಾಂಧಿ ಅವರು 1980ರ ಚುನಾವಣೆಯಲ್ಲಿ ಟಿಕೆಟ್‌ ನಿರಾಕರಿಸಿದರು. ಅಷ್ಟೇ ಅಲ್ಲ ಇವರ ಶಿಷ್ಯರಾಗಿದ್ದ ಆಸ್ಕರ್‌ ಫೆರ್ನಾಂಡಿಸ್‌ ಅವರಿಗೆ ಟಿಕೆಟ್‌ ನೀಡಿ ಅಚ್ಚರಿ ಮೂಡಿಸಿದರು.

ಪುರಸಭೆ ಸದಸ್ಯರಾಗಿ ಉಡುಪಿಗೆ ಸೀಮಿತರಾಗಿ ಓಡಾಡಿಕೊಂಡಿದ್ದ, ಲೋಕಸಭೆಯ ಕನಸೂ ಕಾಣದಿದ್ದ ಯುವಕ ಆಸ್ಕರ್‌ ಫೆರ್ನಾಂಡಿಸ್‌ ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್‌ ಆಗಿ ಬಿಟ್ಟರು. ಟಿ.ಎ. ಪೈ ಅವರು ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ (ಯು) ಪಕ್ಷದಿಂದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಅಂದ ಹಾಗೆ ಈ ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ (ಯು) ಎನ್ನುವುದು ಇಂದಿರಾ ಗಾಂಧಿ ಅವರ ವಿರುದ್ಧ ಬಂಡೆದ್ದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಸ್ಥಾಪಿಸಿದ ಪಕ್ಷವಾಗಿತ್ತು.

ಅಂದಿನ ಚುನಾವಣೆಯಲ್ಲಿ ಟಿ.ಎ.ಪೈ ಅವರು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು! ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿ.ಎಸ್‌. ಆಚಾರ್ಯ ಎರಡನೇ ಸ್ಥಾನ ಪಡೆದರು. ಆಸ್ಕರ್‌ ಫೆರ್ನಾಂಡಿಸ್‌ ಸಂಸದರಾಗಿ ಆಯ್ಕೆಯಾದರು.
ಮುಂದಿನ 1984ರ ಚುನಾವಣೆಯಲ್ಲಿ ಆಸ್ಕರ್‌ ಫರ್ನಾಂಡಿಸ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನ್ಯಾ. ಕೆ.ಎಸ್‌. ಹೆಗ್ಡೆ ಅವರನ್ನೇ ಸೋಲಿಸಿದರು. ನ್ಯಾ. ಹೆಗ್ಡೆ ಅವರು 1977ರಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಜನತಾ ಪರಿವಾರದ ಅಭ್ಯರ್ಥಿಯಾಗಿ ಗೆದ್ದಿದ್ದರು. ಹೀಗೆ ಆಸ್ಕರ್‌ ಫರ್ನಾಂಡಿಸ್‌ ನಿರಂತರ ನಾಲ್ಕು ಬಾರಿ ಉಡುಪಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು.

ಇದನ್ನೂ ಓದಿ: Parliament Flashback: ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದ ಕಾಂಗ್ರೆಸ್‌ ಕಿರುಕುಳದಿಂದಾಗಿ ಪ್ರಧಾನಿ ಹುದ್ದೆ ತೊರೆದಿದ್ದ ದೇವೇಗೌಡರು!

ಆದರೆ 1998ರಲ್ಲಿ ಬಿಜೆಪಿಯ ಐ.ಎಂ. ಜಯರಾಂ ಶೆಟ್ಟಿ ಅವರೆದುರು ಆಸ್ಕರ್‌ ಫೆರ್ನಾಂಡಿಸ್‌ ಸೋತು ಹೋದರು. ಮತ್ತೆಂದೂ ಅವರು ಲೋಕಸಭೆಗೆ ಸ್ಪರ್ಧಿಸಲು ಹೋಗಲಿಲ್ಲ. ಬದಲಿಗೆ ನಾಲ್ಕು ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದರು. ಇಂದಿರಾ ಗಾಂಧಿ, ರಾಜೀವ್‌ ಗಾಂಧಿ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಆಪ್ತರಾಗಿದ್ದ ಆಸ್ಕರ್‌, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಪ್ರಮುಖ ಖಾತೆಯನ್ನು ನಿರ್ವಹಿಸಿದ್ದರು. 2021ರಲ್ಲಿ ಆಸ್ಕರ್‌ ಫೆರ್ನಾಂಡಿಸ್‌ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದರು.

Continue Reading

ಕರ್ನಾಟಕ

Hassan Pen Drive Case: ಪ್ರಜ್ವಲ್‌ ಜತೆಗೆ ಎಚ್‌.ಡಿ.ರೇವಣ್ಣ ಮೇಲೂ ಎಫ್‌ಐಆರ್‌; ದೂರಿನಲ್ಲಿದೆ ಭಯಾನಕ ಡಿಟೇಲ್ಸ್‌!

Hassan Pen Drive Case: 47 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

Hassan Pen Drive Case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣ (Hassan Pen Drive Case) ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಇದರ ಬೆನ್ನಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಮಹಿಯೊಬ್ಬರು ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ತಂದೆ-ಮಗ ಇಬ್ಬರ ಮೇಲೂ ಮನೆ ಕೆಲಸದಾಕೆಯೇ ದೂರು ನೀಡಿದ್ದಾಳೆ.

ದೂರಿನಲ್ಲಿ ಏನಿದೆ?

47 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ದೂರುದಾರೆಗೆ ಭವಾನಿ ರೇವಣ್ಣ ಸೋದರತ್ತೆ ಮಗಳು. ಎಚ್‌.ಡಿ. ರೇವಣ್ಣ ಶಾಸಕರಾಗಿದ್ದಾಗ ನಾಗಲಾಪುರ ಹಾಲಿನ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ ಬಿಸಿಎಂ ಹಾಸ್ಟೆಲ್‌ನಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. 2015ರಲ್ಲಿ ರೇವಣ್ಣ ಅವರ ಮನೆಯಲ್ಲೇ ಕೆಲಸಕ್ಕೆ ಸೇರಿಸಿಕೊಂಡಿದ್ದರು. ಒಟ್ಟು 6 ಹೆಣ್ಣು ಮಕ್ಕಳು ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಸೇರಿಕೊಂಡ ನಾಲ್ಕು ತಿಂಗಳಿಗೆ ಕೊಠಡಿಗೆ ಬರುವಂತೆ ರೇವಣ್ಣ ಆಹ್ವಾನಿಸಿದ್ದರು.

ಇನ್ನು ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಿದ್ದಾಗ ಎಚ್.ಡಿ. ರೇವಣ್ಣ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸ್ಟೋರ್ ರೂಮ್‌ನಲ್ಲಿ ಹಣ್ಣು ಕೊಡೋ ನೆಪದಲ್ಲಿ ಕೈ ಹಿಡಿದು ಎಳೆದಾಡಿದ್ದರು. ಅದೇ ರೀತಿ ಅಡುಗೆ ಮನೆಯಲ್ಲಿ ಇದ್ದಾಗ ಪ್ರಜ್ವಲ್ ರೇವಣ್ಣ ಹಿಂಬದಿಯಿಂದ ಬಂದು ಮೈ‌ಮುಟ್ಟಿ ಹೊಟ್ಟೆ ಜಿಗುಟುತ್ತಿದ್ದರು. ಜೊತೆಗೆ ಎಣ್ಣೆ ಹಚ್ಚಲು ಪದೇ ಪದೇ ಕರೆದು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮನೆಯಲ್ಲಿದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಮಗಳ ಜೊತೆ ಅಸಭ್ಯವಾಗಿ ಮಾತನಾಡುತ್ತಿದ್ದರು. ಇದಕ್ಕೆ ಮಗಳು ಹೆದರಿಕೊಂಡು ನಂಬರ್ ಬ್ಲಾಕ್ ಕೂಡ ಮಾಡಿದ್ದಳು. ಇದರಿಂದ‌ ಮನೆ ಕೆಲಸ ಬಿಟ್ಟು ಹೊರಗಡೆ ಬಂದಿದ್ದಾಗಿ ದೂರಿನಲ್ಲಿ ತಿಳಿಸಿದ್ದಾಳೆ.

ಇದನ್ನೂ ಓದಿ | Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

ಈಗ ಕೆಲ ವಿಡಿಯೊಗಳು ವೈರಲ್ ಆಗುತ್ತಿದ್ದು, ನನ್ನ ಗಂಡ ಶೀಲ ಶಂಕಿಸುತ್ತಿದ್ದಾನೆ. ಇದರಿಂದ ಮನನೊಂದು ದೂರು ನೀಡುತ್ತಿರೋದಾಗಿ 47 ವರ್ಷದ ಮಹಿಳೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಮಹಿಳೆ ದೂರಿನನ್ವಯ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಇಬ್ಬರ ಮೇಲೂ ಎಫ್‌ಐಆರ್ ದಾಖಲಾಗಿದೆ.

ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ಬಂತು ದೂರು

ಹಾಸನ ಆಶ್ಲೀಲ ವಿಡಿಯೊ ಪ್ರಕರಣದಲ್ಲಿ ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ದೂರು ಬಂದಿದೆ ಎಂದು ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ನಿನ್ನೆ ಸಂತ್ರಸ್ತೆಯೊಬ್ಬರು ಮಹಿಳಾ ಆಯೋಗಕ್ಕೆ ವಾಟ್ಸ್‌ಆ್ಯಪ್ ಮೂಲಕ ದೂರು ನೀಡಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಮಹಿಳೆ ಹೇಳಿದ್ದಾರೆ. ಅವರಿಗೆ ಪೊಲೀಸ್‌ ರಕ್ಷಣೆ ಒದಗಿಸಲಾಗಿದೆ. ಸಂತ್ರಸ್ತೆ ಅನೇಕ ವಿಚಾರಗಳನ್ನು ಹೇಳಿರುವುದಾಗಿ ತಿಳಿಸಿದ್ದಾರೆ.

ಸಾಕಷ್ಟು ಮಹಿಳೆಯರ ಅಶ್ಲೀಲ ವಿಡಿಯೊ ಚಿತ್ರೀಕರಣ ಮಾಡಲಾಗಿದೆ. ಪೆನ್‌ಡ್ರೈವ್‌ನಲ್ಲಿ ಲೈಂಹಿಕ ದೌರ್ಜನ್ಯದ ವಿಡಿಯೊಗಳಿವೆ. ಅಧಿಕಾರ ಹಾಗೂ ಸ್ಥಾನ ದೂರುಪಯೋಗ ಮಾಡಿಕೊಂಡು, ಅಸಹಾಯಕ ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದರಿಂದ ಸಾವಿರಾರು ಮಹಿಳೆಯರ ಭವಿಷ್ಯ ಹಾಗೂ ಜೀವನ ಹಾಳಾಗಿದೆ. ಇತಂಹ ಘಟನೆ ಮತ್ತೆ ಎಲ್ಲೂ ಮರಕಳಿಸಬಾರದು. ಹಾಸನ ಎಸ್‌ಪಿಗೆ ಸುಮೋಟೊ ಕೇಸ್ ದಾಖಲಿಸುವಂತೆ ಹೇಳಿದ್ದೆ, ಆದರೆ, ಕೇಸ್ ದಾಖಲಿಸಿಕೊಂಡಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಾಹಿತಿ ನೀಡಿದ್ದಾರೆ.

ಅಶ್ಲೀಲ ವಿಡಿಯೊ ಶೇರ್‌ ಮಾಡಬೇಡಿ

ವಿಡಿಯೊ ನೋಡಿದರೆ ನೊಂದ ಮಹಿಳೆಯರ ಬಗ್ಗೆ ಕನಿಕರ ಮೂಡುತ್ತದೆ. ಮಹಿಳೆಯರ ಕುಟುಂಬಸ್ಥರೇ ಈಗ ಅವರಿಗೆ ಧೈರ್ಯ ತುಂಬಬೇಕು. ತಪ್ಪು ಎಲ್ಲರೂ ಮಾಡುತ್ತಾರೆ, ಆದ್ರೆ ಇಲ್ಲಿ ನಡೆದಿರೋದು ಕೇವಲ ತಪ್ಪಲ್ಲ.
ಆರೋಪಿಯಾಗಿರೋ ಪ್ರಭಾವಿ ರಾಜಕಾರಣಿಯನ್ನು ರಕ್ಷಣೆ ಮಾಡೋ ಕೆಲಸ ಸಹಜವಾಗಿ ನಡೆಯುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಆರೋಪಿಸಿದ್ದಾರೆ.

ಇದನ್ನೂ ಓದಿ | Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ಅಧಿಕಾರಿಗಳನ್ನು ಬಳಸಿಕೊಂಡು ಪ್ರಕರಣದ ದಿಕ್ಕು ತಪ್ಪಿಸುವ ಯತ್ನ ನಡೆಯುತ್ತಿದೆ. ನಾನೂ ಒಬ್ಬ ವೈದ್ಯೆಯಾಗಿ ಆತನ ಹೀನಾಯ ಮನಸ್ಥಿತಿಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದಯಮಾಡಿ ಜನರು ಆ ವಿಡಿಯೊಗಳನ್ನು ಹಂಚಬೇಡಿ. ನೊಂದ ಮಹಿಳೆಯರ ಜೀವ ಹಾಗೂ ಜೀವನದ ಮೇಲೆ ಅದು ಕೆಟ್ಟ ಪ್ರಭಾವ ಬೀರುತ್ತಿದೆ. ವಿಡಿಯೊ ಮಾಡಿರೋ ವ್ಯಕ್ತಿ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾನೆ. ಹೆದರಿಸಿ‌ ಬೆದರಿಸಿ ಒಪ್ಪಿಗೆ ಇಲ್ಲದಿದ್ದರೂ ಒತ್ತಡ ಹೇರಿದ್ದಾನೆ. ಆತನಿಗೆ ಕೋರ್ಟ್ ಕಡ್ಡಾಯವಾಗಿ ಶಿಕ್ಷೆ ನೀಡುವಂತೆ ಮಾಡಲಾಗುತ್ತದೆ. ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಅವರಿಗೆ ಭದ್ರತೆ ನೀಡಲಾಗಿದೆ. ಕೋರ್ಟ್‌ನಲ್ಲಿ ಸಾಕ್ಷಿಗಳು ಬೇಕಿರುವುದರಿಂದ ನೊಂದ ಮಹಿಳೆಯರು ದೂರು ನೀಡುವಂತೆ ಕೋರುತ್ತೇವೆ. ಕೋರ್ಟ್ ಮೇಲೆ ನಂಬಿಕೆಯಿದೆ, ಆತನಿಗೆ ಶಿಕ್ಷೆ ಆಗುತ್ತದೆ ಎಂದು ನಂಬಿರುವುದಾಗಿ ಹೇಳಿದರು.

Continue Reading

ಕರ್ನಾಟಕ

Delivery Boy: ಬೆಂಗಳೂರಲ್ಲಿ ವ್ಯಕ್ತಿಯ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ ಡೆಲಿವರಿ ಬಾಯ್‌ ಅಹ್ಮದ್!

Delivery Boy: ಇಶಾನ್‌ ಶರ್ಮಾ ಎಂಬ ಯುವಕ ಜೆಪ್ಟೋದಲ್ಲಿ ಹಲವು ವಸ್ತುಗಳನ್ನು ಆರ್ಡರ್‌ ಮಾಡಿದ್ದಾರೆ. ಸಾಜನ್‌ ಅಹ್ಮದ್‌ ಲಷ್ಕರ್‌ ಎಂಬ ಡೆಲಿವರಿ ಬಾಯ್‌, ಇಶಾನ್‌ ಶರ್ಮಾ ಅವರ ಮನೆಬಾಗಿಲಿಗೆ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ವಸ್ತುಗಳನ್ನು ಡೆಲಿವರಿ ಮಾಡಿದ ಬಳಿಕ ಅವರು ಮೊದಲಿಗೆ ಯುವಕನ ಗುಪ್ತಾಂಗವನ್ನು ಸ್ಪರ್ಶಿಸಿದ್ದಾರೆ. ಯುವಕನು ಕೂಗಾಡಿದ ಬಳಿಕ ಆತನು ಅಲ್ಲಿಂದ ಕಾಲ್ಕಿತ್ತಿದ್ದಾನೆ.

VISTARANEWS.COM


on

Delivery Boy
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಡೆಲಿವರಿ ಬಾಯ್ಸ್‌ (Delivery Boy) ಆಹಾರ ಸೇರಿ ಹಲವು ವಸ್ತುಗಳನ್ನು ಮಳೆ, ಬಿಸಿಲು, ಚಳಿ, ರಾತ್ರಿ ಎನ್ನದೆ ಮನೆಬಾಗಿಲಿಗೆ ತಲುಪಿಸುವ ಮೂಲಕ ಗ್ರಾಹಕರ ಅಗತ್ಯಗಳನ್ನು ಪೂರೈಸುತ್ತಾರೆ. ಆದರೆ, ಕೆಲವು ಡೆಲಿವರಿ ಬಾಯ್‌ಗಳು ಗ್ರಾಹಕರ ಜತೆ ಜಗಳ ಆಡುವುದು, ವಾದ ಮಾಡುವುದು, ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದುರ್ವರ್ತನೆ ತೋರುವ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ನಗರದಲ್ಲಿ ಡೆಲಿವರಿ ಬಾಯ್‌ ಒಬ್ಬ ಗ್ರಾಹಕನ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ್ದಾನೆ. ಈ ಕುರಿತು ಗ್ರಾಹಕ ಇಶಾನ್‌ ಶರ್ಮಾ ಎಂಬುವರು ದೂರು ದಾಖಲಿಸಿದ್ದಾರೆ.

ಇಶಾನ್‌ ಶರ್ಮಾ ಎಂಬ ಯುವಕ ಜೆಪ್ಟೋದಲ್ಲಿ ಹಲವು ವಸ್ತುಗಳನ್ನು ಆರ್ಡರ್‌ ಮಾಡಿದ್ದಾರೆ. ಸಾಜನ್‌ ಅಹ್ಮದ್‌ ಲಷ್ಕರ್‌ ಎಂಬ ಡೆಲಿವರಿ ಬಾಯ್‌, ಇಶಾನ್‌ ಶರ್ಮಾ ಅವರ ಮನೆಬಾಗಿಲಿಗೆ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ವಸ್ತುಗಳನ್ನು ಡೆಲಿವರಿ ಮಾಡಿದ ಬಳಿಕ ಅವರು ಮೊದಲಿಗೆ ಯುವಕನ ಗುಪ್ತಾಂಗವನ್ನು ಸ್ಪರ್ಶಿಸಿದ್ದಾರೆ. ಆಕಸ್ಮಿಕ ಎಂದುಕೊಂಡ ಯುವಕ ಸುಮ್ಮನಾಗಿದ್ದಾರೆ. ಆದರೆ, ಎರಡನೇ ಬಾರಿಯೂ ಮುಟ್ಟಿದಾಗ ಉದ್ದೇಶಪೂರ್ವಕ ವರ್ತನೆ ಎಂಬುದು ಬಯಲಾಗಿದೆ. ಇದೇ ವೇಳೆ, ಯುವಕ ಕೂಗಿದ ಕಾರಣ ಡೆಲಿವರಿ ಬಾಯ್‌ ಅಲ್ಲಿಂದ ಕಾಲ್ಕಿತ್ತದ್ದಾನೆ ಎಂದು ಯುವಕ ತಿಳಿಸಿದ್ದಾರೆ.

ಡೆಲಿವರಿ ಬಾಯ್‌ ವರ್ತನೆ ಕುರಿತು ಇಶಾನ್‌ ಶರ್ಮಾ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೊಲೀಸರನ್ನು ಟ್ಯಾಗ್‌ ಮಾಡಿ ದೂರಿದ್ದಾರೆ. “ಜೆಪ್ಟೋದಲ್ಲಿ ನಾನು ಕೆಲ ವಸ್ತುಗಳನ್ನು ಆರ್ಡರ್‌ ಮಾಡಿದ್ದೆ. ಆದರೆ, ವಸ್ತುಗಳನ್ನು ಡೆಲಿವರಿ ಮಾಡಿದ ಆತನು ನನ್ನ ಗುಪ್ತಾಂಗವನ್ನು ಮುಟ್ಟಿದ್ದಾನೆ. ಮೊದಲಿಗೆ ಆಕಸ್ಮಿಕ ಎಂಬುದಾಗಿ ನಾನು ಸುಮ್ಮನಿದ್ದೆ. ಆದರೆ, ಆತನು ಎರಡನೇ ಬಾರಿಯೂ ಉದ್ದೇಶಪೂರ್ವಕವಾಗಿ ನನ್ನ ಗುಪ್ತಾಂಗವನ್ನು ಮುಟ್ಟಿ ಅಸಭ್ಯ ವರ್ತನೆ ತೋರಿದ್ದಾನೆ. ಈತನ ವಿರುದ್ಧ ದಯಮಾಡಿ ಕ್ರಮ ತೆಗೆದುಕೊಳ್ಳಿ” ಎಂಬುದಾಗಿ ಆರೋಪಿಸಿದ್ದಾನೆ. ಏಪ್ರಿಲ್‌ 26ರಂದು ಘಟನೆ ನಡೆದಿದೆ.

ಕೆಲ ವಾರಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಬೈಯ್ಯಪ್ಪನಹಳ್ಳಿ ಪೊಲೀಸರು ನಟೋರಿಯಸ್ ಬೈಕ್ ಕಳ್ಳನನ್ನು ಬಂಧಿಸಿದ್ದರು. ದೀಪಕ್ ಅಲಿಯಾಸ್‌ ದೀಪು ಬಂಧಿತ ಆರೋಪಿಯಾಗಿದ್ದಾನೆ. ದೀಪಕ್‌ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಈತನ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಸುಮಾರು 14 ಪ್ರಕರಣ ದಾಖಲಾಗಿವೆ.

ಬೆಳಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ. ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಬೈಕ್‌ ಮಾರಾಟಕ್ಕೂ ಮೊದಲು ದಾಖಲಾತಿಯನ್ನೆಲ್ಲ ನಂತರ ಕೊಡುತ್ತೇನೆ ಎಂದು ಯಮಾರಿಸಿ, ಕಡಿಮೆ ಬೆಲೆಗೆ ಬೈಕ್ ಮಾರುತ್ತಿದ್ದ ಎಂಬುದು ಗೊತ್ತಾಗಿತ್ತು.

ಇದನ್ನೂ ಓದಿ: Viral Video: ಐಷಾರಾಮಿ ಹಾರ್ಲೆ –ಡೇವಿಡ್ಸನ್​ ಬೈಕ್​ನಲ್ಲಿ ಫುಡ್​ ಡೆಲಿವರಿ ಕೊಟ್ಟ ಯುವಕ; ವಿಡಿಯೊ ವೈರಲ್

Continue Reading
Advertisement
KKR vs DC
ಕ್ರಿಕೆಟ್5 mins ago

KKR vs DC: ಮೊದಲ ಸೋಲಿಗೆ ಸೇಡು ತೀರಿಸಿಕೊಂಡೀತೇ ಡೆಲ್ಲಿ?; ಕೆಕೆಆರ್​ ಎದುರಾಳಿ

Karnataka Drought Relief HDK accuses Congress government of lying says HD Kumarswamy
ರಾಜಕೀಯ7 mins ago

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Parliament Flashback
Lok Sabha Election 20248 mins ago

Parliament Flashback: ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಮಧ್ಯೆ ನಡೆದಿತ್ತು ಐತಿಹಾಸಿಕ ಕದನ!

Hassan Pen Drive Case
ಕರ್ನಾಟಕ29 mins ago

Hassan Pen Drive Case: ಪ್ರಜ್ವಲ್‌ ಜತೆಗೆ ಎಚ್‌.ಡಿ.ರೇವಣ್ಣ ಮೇಲೂ ಎಫ್‌ಐಆರ್‌; ದೂರಿನಲ್ಲಿದೆ ಭಯಾನಕ ಡಿಟೇಲ್ಸ್‌!

Delivery Boy
ಕರ್ನಾಟಕ33 mins ago

Delivery Boy: ಬೆಂಗಳೂರಲ್ಲಿ ವ್ಯಕ್ತಿಯ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ ಡೆಲಿವರಿ ಬಾಯ್‌ ಅಹ್ಮದ್!

Job Alert
ಉದ್ಯೋಗ34 mins ago

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆ ಖಾಲಿ ಇದೆ; ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

POCSO Case 7 year old girl attempted to rape on pretext of giving her chocolates
ಕರ್ನಾಟಕ38 mins ago

POCSO Case: ಚಾಕೋಲೆಟ್‌ ಕೊಡೋದಾಗಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರು ಯುವಕರಿಗೆ ಧರ್ಮದೇಟು

Ishan Kishan
ಕ್ರೀಡೆ1 hour ago

Ishan Kishan: ಐಪಿಎಲ್​ ನೀತಿ ಸಂಹಿತೆ ಉಲ್ಲಂಘನೆ; ಇಶಾನ್​ ಕಿಶನ್​ಗೆ ಬಿತ್ತು ದಂಡದ ಬರೆ

5 PM for 5 years if Congress comes to power says PM Narendra Modi
Lok Sabha Election 20241 hour ago

PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

Summer Fashion
ಫ್ಯಾಷನ್1 hour ago

Summer Fashion: ಬೇಸಿಗೆಯಲ್ಲಿ ಕ್ರಾಪ್‌ ಟೀ ಶರ್ಟ್‌ ಸ್ಟೈಲಿಂಗ್‌ಗೆ 3 ಐಡಿಯಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20242 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20246 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20246 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ9 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌