ಕರ್ನಾಟಕ
ಹಣ ವಸೂಲಿಗಾಗಿ ಅರೆಬೆತ್ತಲೆ ಶಿಕ್ಷೆ ಕೊಟ್ಟ ಪೆಟ್ರೋಲ್ ಬಂಕ್ ಮಾಲೀಕ
ಬಾಕಿ ಹಣ ವಸೂಲಿಗಾಗಿ ಪೆಟ್ರೋಲ್ ಬಂಕ್ (Petrol Pump) ಮಾಲೀಕನೊಬ್ಬ ವ್ಯಕ್ತಿಗೆ ಅರೆ ಬೆತ್ತಲೆಯ ಶಿಕ್ಷೆಯನ್ನು (Naked punishment) ನೀಡಿದ್ದಾರೆ. ಇಂತಹದೊಂದು ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ: ಇಲ್ಲಿನ ಮುದ್ದೇಬಿಹಾಳ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು (Inhuman incident) ನಡೆದಿದೆ. ವಾಹನಗಳಿಗೆ ಡೀಸೆಲ್ ಹಾಕಿಸಿದ ವ್ಯಕ್ತಿಯೊಬ್ಬ ಬಾಕಿ ಹಣ (Recovery of money) ಕೊಡಲಿಲ್ಲ ಎಂದು ಬಂಕ್ ಮಾಲೀಕ ಅರೆಬೆತ್ತಲೆಯ ಶಿಕ್ಷೆ (Naked punishment) ನೀಡಿದ್ದಾನೆ.
ಭರತ ಭೋಸಲೆ ಎಂಬುವವರಿಗೆ ಭೋಸಲೆ ಪೆಟ್ರೋಲ್ ಡೀಸೆಲ್ ಬಂಕ್ನಲ್ಲಿ ಈ ಘಟನೆ ನಡೆದಿದೆ. ಮೌನೇಶ್ ಪತ್ತಾರ ಎಂಬಾತನನ್ನು ಅರೆಬೆತ್ತಲೆಗೊಳಿಸಿ ಬಂಕ್ನವರು ಕೂರಿಸಿದ್ದಾರೆ. ಮೌನೇಶ್ ತಮಿಳುನಾಡು ಮೂಲದ ಶಿವಶಕ್ತಿ ಬೋರ್ ವೆಲ್ಸ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಶಿವಶಕ್ತಿ ಬೋರ್ ವೆಲ್ಸ್ ವಾಹನಗಳಿಗೆ ಬೋಸಲೆ ಅವರ ಬಂಕ್ನಲ್ಲಿ ಡೀಸೆಲ್ ಹಾಕಿಸಿದ್ದಾರೆ. 10 ರಿಂದ 15 ಲಕ್ಷ ರೂ. ಬಾಕಿ ಹಣ ಉಳಿಸಿಕೊಂಡಿದ್ದು, ಕೂಡಲೇ ಪೂರ್ತಿ ಹಣ ನೀಡುವಂತೆ ಭೋಸಲೆ ಬಂಕ್ ಮಾಲೀಕರು ಪಟ್ಟುಹಿಡಿದಿದ್ದಾರೆ.
ಕಳೆದ 12 ದಿನಗಳಿಂದ ಮೌನೇಶ್ ಪತ್ತಾರನನ್ನು ಅರೆಬೆತ್ತಲೆಗೊಳಿಸಿ ಬಂಕ್ನಲ್ಲಿ ಕೂಡಿ ಹಾಕಿದ್ದಾರೆ ಎಂಬ ಆರೋಪ ಇದೆ. ಪೆಟ್ರೋಲ್ ಬಂಕ್ ಮಾಲೀಕರು ಹಲ್ಲೆ ಮಾಡಿ ಅರೆಬೆತ್ತಲೆಗೊಳಿಸಿ ಕೂರಿಸಿದ್ದಾರೆಂದು ಮೌನೇಶ್ ಕುಟುಂಬಸ್ಥರು ಆರೋಪಿಸಿದ್ದಾರೆ.
ಇದನ್ನೂ ಓದಿ: Snake Rescue: ಹೆಲ್ಮೆಟ್, ಶೂ, ಮಂಚದ ಒಳಗೂ ಹಾವು; ಮೈಸೂರೀಗ ಹಾವಿನ ನಗರಿ!
ಮೌನೇಶ್ ಬಿಡುಗಡೆಗಾಗಿ ಕಳೆದ ಮೂರು ದಿನಗಳಿಂದ ಭೋಸಲೆ ಬಂಕ್ನಲ್ಲೇ ಪತ್ನಿ ರಂಗಮ್ಮ ಮತ್ತು ಮಕ್ಕಳು ಜತೆಗೆ ಠೀಕಾಣಿ ಹಾಕಿದ್ದಾರೆ. ಮೌನೇಶ ಕುಟುಂಬಸ್ಥರನ್ನು ಪೊಲೀಸ್ ಠಾಣೆಗೂ ತೆರಳಲು ಬಿಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.
ತನಿಖೆಗೆ ಆದೇಶಿಸಿದ ಸಚಿವ ಎಂ ಬಿ ಪಾಟೀಲ
ಮುದ್ದೇಬಿಹಾಳ ಪಟ್ಟಣದಲ್ಲಿ ವ್ಯಕ್ತಿಯೊಬ್ಬನನ್ನು ಅರೆಬೆತ್ತಲೆ ಮಾಡಿ ಕೂಡಿಸಿದ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಡಿಸಿ ಮತ್ತು ಎಸ್ಪಿಗೆ ಸೂಚನೆ ನೀಡಿದ್ದಾರೆ.
ಹುಬ್ಬಳ್ಳಿ ಮತ್ತು ಧಾರವಾಡ ಪ್ರವಾಸದಲ್ಲಿರುವ ಸಚಿವರು ಈ ಘಟನೆ ಕುರಿತು ಮಾಧ್ಯಮಗಳಿಂದ ಮಾಹಿತಿ ತಿಳಿದ ತಕ್ಷಣ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಡಿ. ಆನಂದಕುಮಾರ ಅವರ ಜತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಅಲ್ಲದೇ ಈ ಪ್ರಕರಣದ ಸತ್ಯಾಸತ್ಯತೆ ಕುರಿತು ಕೂಲಂಕಷ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಶಿಕ್ಷೆಯಿಂದ ಬಿಡುಗಡೆಗೊಳಿಸಿದ ತಹಸೀಲ್ದಾರ್
ಅರೆಬೆತ್ತಲೆ ಶಿಕ್ಷೆ ವರದಿ ಪ್ರಸಾರವಾದ ಹಿನ್ನೆಲೆ ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಭೋಸಲೆ ಬಂಕ್ಗೆ ಭೇಟಿ ನೀಡಿದರು. ತಹಸೀಲ್ದಾರ್ ಟಿ ರೇಖಾ ಹಾಗೂ ಮುದ್ದೇಬಿಹಾಳ ಪೊಲೀಸ್ ಠಾಣೆಯ ಪಿಎಸ್ಐ ಆರೀಫ್ ಮುಶಾಪುರೆ ಭೇಟಿ ನೀಡಿ, ಸಿಬ್ಬಂದಿ ವಿಚಾರಣೆ ನಡೆಸಿದರು. ಅರೆಬೆತ್ತಲೆಗೊಳಿಸಿ ಕೂಡಿಟ್ಟಿದ್ದ ಮೌನೇಶ ಪತ್ತಾರನನ್ನು ರಕ್ಷಣೆ ಮಾಡಿದರು.
ಪತಿ ರಕ್ಷಣೆ ಮಾಡಿ ಎಂದು ಕಾಲಿಗೆ ಬಿದ್ದ ಪತ್ನಿ
ತನ್ನ ಪತಿಯನ್ನು ರಕ್ಷಣೆ ಮಾಡಿ ನ್ಯಾಯ ಕೊಡಿಸಿ ಎಂದು ಅಧಿಕಾರಿಗಳ ಕಾಲಿಗೆ ರಂಗಮ್ಮ ಎರಗಿದರು. ಬಳಿಕ ಆಕೆಗೆ ಸಮಾಧಾನ ಮಾಡಿ ಮೌನೇಶನನ್ನು ರಕ್ಷಣೆ ಮಾಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಸದ್ಯ ಘಟನೆ ಕುರಿತು ದೂರು ನೀಡಲು ಪೊಲೀಸ್ ಠಾಣೆಗೆ ಮೌನೇಶ ಪತ್ನಿ ರಂಗಮ್ಮ ಹಾಗೂ ಮಕ್ಕಳು ತೆರಳಿದ್ದಾರೆ. ಶಿವಶಕ್ತಿ ಬೋರ್ ವೆಲ್ಸ್ನ ಉಸ್ತುವಾರಿಯಾಗಿ ಮೌನೇಶ್ ಕೆಲಸ ಮಾಡುತ್ತಿದ್ದು, ಶಿವಶಕ್ತಿ ಬೋರ್ ವೆಲ್ಸ್ನವರು ಹಣ ನೀಡಿಲ್ಲ. ಹೀಗಾಗಿ ಬಾಕಿ ಹಣ ನೀಡುವಂತೆ ಒತ್ತಾಯಿಸಿ ಮೌನೇಶನನ್ನು ಅರೆಬೆತ್ತಲೆ ಮಾಡಿ ಬಂಕ್ನಲ್ಲಿ 12 ದಿನಗಳು ಕೂಡಿಟ್ಟಿದ್ದರು ಎನ್ನಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Karnataka Bandh : ಸೆ. 29ರ ಕರ್ನಾಟಕ ಬಂದ್ಗೆ ವಾಟಾಳ್ ಟೀಮ್ ರೆಡಿ; ಹಲವು ಸಂಘಟನೆ ಬಲ, ಏನಿರುತ್ತೆ? ಏನಿರಲ್ಲ?
Karnataka Bandh: ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ಗೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ, ಕೆಲವು ಬೆಂಬಲ ಕೊಡುವುದಿಲ್ಲ ಎಂದಿವೆ. ಹಾಗಿದ್ದರೆ ಏನಿರುತ್ತದೆ ಬಂದ್? ಇಲ್ಲಿದೆ ವಿವರ
ಬೆಂಗಳೂರು: ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ ಬೆಂಗಳೂರು ಬಂದ್ (Bangalore Bandh) ಯಶಸ್ಸಿನ ಬೆನ್ನಿಗೇ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ನೇತೃತ್ವದ ಕನ್ನಡ ಒಕ್ಕೂಟ ಕರೆ ನೀಡಿದ ಸೆಪ್ಟೆಂಬರ್ 29ರ ಕರ್ನಾಟಕ ಬಂದ್ಗೆ (Karnataka Bandh) ಭರದ ಸಿದ್ಧತೆಗಳು ನಡೆಯುತ್ತಿದೆ. ಸಂಘಟಕರು ನಾನಾ ಸಂಘಟನೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಹಲವು ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ. ಆದರೆ, ಕೆಲವು ಸಂಘಟನೆಗಳು ಒಂದೇ ವಾರದಲ್ಲಿ ನಡೆಯುತ್ತಿರುವ ಎರಡನೇ ಬಂದ್ ಬೆಂಬಲ ನೀಡಲು ಹಿಂದೇಟು ಹಾಕುತ್ತಿವೆ. ಈ ನಡುವೆ ಒಂದು ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇನಾದರೂ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದರೆ ಈಗಲೇ ಬಂದ್ ಕರೆಯನ್ನು ಹಿಂದೆ ಪಡೆಯಲು ಸಿದ್ಧ ಎಂದು ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.
ಬಿಜೆಪಿ, ಜೆಡಿಎಸ್ ಪಕ್ಷಗಳ ಬೆಂಬಲ
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯುತ್ತಿರುವ ಈ ಬಂದ್ಗೆ ಸಾಥ್ ನೀಡುವುದಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಘೋಷಣೆ ಮಾಡಿವೆ. ಕಾವೇರಿ ವಿಚಾರಕ್ಕಾಗಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಬುಧವಾರ ಜಂಟಿ ಪ್ರತಿಭಟನೆ ನಡೆಸಿದ ಪಕ್ಷಗಳು ಕರ್ನಾಟಕ ಬಂದ್ಗೆ ಬೆಂಬಲ ಘೋಷಿಸಿದವು.
ವಾಟಾಳ್ ನಾಗರಾಜ್ ಅವರು ಬುಧವಾರ ಫಿಲಂ ಚೇಂಬರ್ ಜೊತೆ ಸಭೆ ನಡೆಸಿದರು. ಚಿತ್ರರಂಗ ಸಂಪೂರ್ಣವಾಗಿ ಬೆಂಬಲ ನೀಡುವುದಾಗಿ ಚೇಂಬರ್ ಪ್ರಕಟಿಸಿತು.
ಹಾಗಿದ್ದರೆ ಕರ್ನಾಟಕ ಬಂದ್ಗೆ ಯಾರ್ಯಾರ ಬೆಂಬಲ ಇದೆ?
-ಓಲಾ,ಊಬರ್ ಯೂನಿಯನ್
-ಆದರ್ಶ ಆಟೋ ಚಾಲಕರ ಸಂಘ
-ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ
-ಕರ್ನಾಟಕ ರಾಜ್ಯ ಕಾರ್ಮಿಕರ ಜಾಗೃತಿ ವೇದಿಕೆ
-ಕರುನಾಡ ರೈತ ಸಂಘ
-ಕರವೇ ಶಿವರಾಮೇಗೌಡ ಬಣ
-ಕರವೇ ಪ್ರವೀಣ್ ಶೆಟ್ಟಿ ಬಣ
-ಲಾರಿ ಮಾಲೀಕರ ಸಂಘ
-ಕೈಗಾರಿಕೆಗಳ ಒಕ್ಕೂಟ
-ಪೀಣ್ಯ ಕೈಗಾರಿಕಾ ಸಂಘ
-ಹೋಟೆಲ್ ಮಾಲೀಕರ ಸಂಘ
ಯಾರ್ಯಾರ ಬೆಂಬಲ ಇಲ್ಲ?
-ಕರ್ನಾಟಕ ಚಾಲಕರ ಸಂಘ
-ಪೀಸ್ ಆಟೋ ಯೂನಿಯನ್
-ಕಬ್ಬು ಬೆಳೆಗಾರರ ಸಂಘ
50:50: ಇವರು ಇನ್ನೂ ತೀರ್ಮಾನ ಮಾಡಿಲ್ಲ?
-ಖಾಸಗಿ ಶಾಲಾ ಸಂಘಟನೆಗಳು
-ಏರ್ ಪೋರ್ಟ್ ಟ್ಯಾಕ್ಸಿ
–ಖಾಸಗಿ ಸಾರಿಗೆ ಸಂಘಟನೆ
ರಾಜ್ಯದಲ್ಲಿ ಬಂದ್ ದಿನ ಏನೆಲ್ಲ ಇರುತ್ತೆ. ಏನಿರುವುದಿಲ್ಲ?
ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ಗೆ ಸುಮಾರು 1 ಸಾವಿರಕ್ಕೂ ಹೆಚ್ಚು ಸಂಘಟನೆಗಳು ಸಾಥ್ ನೀಡಲಿವೆ ಎಂದು ಹೇಳಲಾಗಿದ್ದು, ರಾಜ್ಯ-ರಾಜ್ಯ ರಾಜಧಾನಿಯಲ್ಲಿ ಕೆಲ ಸೇವೆಗಳು ವ್ಯತ್ಯಯವಾಗಲಿವೆ
ಹಾಗಿದ್ದರೆ ಏನೆಲ್ಲ ಸೇವೆ ಇರುತ್ತದೆ?: -ಆಸ್ಪತ್ರೆ, ಮೆಡಿಕಲ್, ಆಂಬುಲೆನ್ಸ್, ಬೆಂಬಲ ನೀಡದ ಒಕ್ಕೂಟದ ಆಟೋ, ಟ್ಯಾಕ್ಸಿ
ಏನೆಲ್ಲ ಸೇವೆಗಳು ಇರುವುದಿಲ್ಲ?: ಹೋಟೆಲ್, ಸಿನಿಮಾ ಹಾಲ್, ಮಾಲ್, ಆಟೋ, ಕ್ಯಾಬ್, ಬೇಕರಿ, ಓಲಾ, ಊಬರ್
ಕುರುಬೂರು ಶಾಂತ ಕುಮಾರ್ ಟೀಮ್ ಬೆಂಬಲ ಇರುತ್ತಾ?
ಬೆಂಗಳೂರು ಬಂದ್ ಸಕ್ಸಸ್ ಖುಷಿಯಲ್ಲಿರೋ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಕುರುಬೂರು ಶಾಂತಕುಮಾರ್ ಮತ್ತು ಟೀಮ್ ಕರ್ನಾಟಕ ಬಂದ್ಗೆ ಬೆಂಬಲ ನೀಡಬೇಕಾ, ಬೇಡ್ವಾ ಅನ್ನೋದನ್ನ ಸಿಎಂ ಭೇಟಿ ಬಳಿಕ ನಿರ್ಧರಿಸುವುದಾಗಿ ತಿಳಿಸಿದೆ. ಸರ್ಕಾರದ ನಡೆ ನೋಡಿ ಮುಂದಿನ ತೀರ್ಮಾನ ಅನ್ನೋ ಮೂಲಕ ಸದ್ಯಕ್ಕೆ ಬೆಂಬಲ ಇಲ್ಲ ಅನ್ನೋ ಸುಳಿವು ನೀಡಿದೆ. ಬೆಂಗಳೂರು ಬಂದ್ಗೆ ವಾಟಾಳ್ ನಾಗರಾಜ್ ಟೀಮ್ ಬೆಂಬಲ ಕೊಟ್ಟಿರಲಿಲ್ಲ.
ಅಂದು ಏನೇನು ಘಟನಾವಳಿ ನಡೆಯಲಿದೆ?
ಯಾವ ಕಾರಣಕ್ಕೂ ಸೆಪ್ಟೆಂಬರ್ 29ರ ಬಂದ್ ವೇಳೆ ಸೆಕ್ಷನ್ 144 ಜಾರಿ ಮೂಲಕ ಪ್ರತಿಭಟನೆ ಹತ್ತಿಕ್ಕಬಾರದು ಎಂದು ಆಗ್ರಹಿಸಿರುವ ವಾಟಾಳ್ ನಾಗರಾಜ್ ಅವರು ಶುಕ್ರವಾರ ಬೆಂಗಳೂರಿನ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ರ್ಯಾಲಿ ನಡೆಸಲು ಪ್ಲ್ಯಾನ್ ಮಾಡಿದ್ದಾರೆ. ರಾಜ್ಯದ ವಿವಿಧೆಡೆ ಟೋಲ್, ಏರ್ ಪೋರ್ಟ್ ಬಂದ್ ಮಾಡುವುದಕ್ಕೂ ಕರೆ ನೀಡಿದ್ದಾರೆ.
ಸಿಎಂ ಮನೆಗೆ ಮುತ್ತಿಗೆ ಯತ್ನ, ವಾಟಾಳ್ ನಾಗರಾಜ್ ವಶಕ್ಕೆ
ಈ ನಡುವೆ ವಾಟಾಳ್ ನಾಗರಾಜ್ ಮತ್ತು ಇತರ ಕನ್ನಡ ಪರ ಹೋರಾಟಗಾರರು ಮುಖ್ಯಮಂತ್ರಿಗಳ ನಿವಾಸಕ್ಕೆ ದಾಳಿ ಮಾಡಲು ಮುಂದಾದರು. ಅವರನ್ನು ತಡೆದು ವಶಕ್ಕೆ ಪಡೆಯಲಾಯಿತು. ಮುತ್ತಿಗೆಯನ್ನು ವಿಫಲಗೊಳಿಸಲಾಯಿತು.
ಕರ್ನಾಟಕ
Cauvery Dispute: ಕಾವೇರಿ ಕಿಚ್ಚು; ಸತ್ತ ಇಲಿಯನ್ನು ಬಾಯಿ ಬಳಿ ಇಟ್ಟು ಪ್ರತಿಭಟನೆ ನಡೆಸಿದ ರೈತರು
Cauvery Water Dispute: ಕಾವೇರಿ ನದಿ ನೀರು ಹಂಚಿಕೆ (Cauvery Water Dispute) ಗಲಾಟೆ ಹೆಚ್ಚಾಗುತ್ತಿದೆ. ಈ ಮಧ್ಯೆ ತಮಿಳುನಾಡಿನ ರೈತರು ಕೈಯಲ್ಲಿ ಸತ್ತ ಇಲಿಯನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ(Cauvery Dispute) ಗಲಾಟೆ ದಿನ ಕಳೆದಂತೆ ಕಾವೇರುತ್ತಿದೆ. ಈ ವಿಚಾರ ಕರ್ನಾಟಕ ಮತ್ತು ತಮಿಳುನಾಡಿನ ಮಧ್ಯೆ ಒಡಕು ಮೂಡುವಂತೆ ಮಾಡಿದೆ. ಇತ್ತ ಕರ್ನಾಟಕದ ರೈತರು ನೀರು ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರೆ ಅತ್ತ ತಮಿಳುನಾಡಿನ ಕೃಷಿಕರು ಸತ್ತ ಇಲಿಯನ್ನು ತಮ್ಮ ಬಾಯಿಯ ಬಳಿ ಇಟ್ಟುಕೊಂಡು ವಿಚಿತ್ರ ರೀತಿಯಲ್ಲಿ ಹೋರಾಟಕ್ಕೆ ಇಳಿದಿದ್ದಾರೆ.
ತಮಿಳಿನಾಡಿನ ತಿರುಚಿರಪಳ್ಳಿಯಲ್ಲಿ ರೈತರು ಈ ರೀತಿಯ ವಿಚಿತ್ರ ಪ್ರತಿಭಟನೆಗೆ ಇಳಿದು ರಾಜ್ಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ಕಾವೇರಿ ನೀರು ಒದಗಿಸಬೇಕೆಂದು ಕರ್ನಾಟಕ ಮತ್ತು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಸದ್ಯ ಈ ವಿಡಿಯೊ ವೈರಲ್ ಆಗಿದೆ. ಕರ್ನಾಟಕವು ಕಾವೇರಿ ನೀರನ್ನು ತಡೆಹಿಡಿಯುವುದನ್ನು ಮುಂದುವರಿಸಿದರೆ, ಭತ್ತದ ಕೃಷಿಗೆ ನೀರಿನ ಕೊರತೆ ಕಾಡಲಿದೆ. ಇದರಿಂದ ರೈತರು ಬದುಕುಳಿಯಲು ಇಲಿ ಮಾಂಸವನ್ನು ಸೇವಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎನ್ನುವುದನ್ನು ಸಂಕೇತಿಸುವಂತೆ ಇಲಿಯ ಮೃತದೇಹವನ್ನು ಕೈಯಲ್ಲಿಟ್ಟು ಪ್ರತಿಭಟನೆ ನಡೆಸಲಾಗಿದೆ.
#WATCH | A group of Tamil Nadu farmers in Tiruchirappalli holding dead rats in their mouths protest against the Karnataka government and demand the release of Cauvery water to the state from Karnataka pic.twitter.com/CwQyVelyjF
— ANI (@ANI) September 26, 2023
ಇದೇ ಮೊದಲ ಸಲ ಅಲ್ಲ
ವಿಶೇಷವೆಂದರೆ ರೈತರು ಈ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಇದು ಮೊದಲ ಸಲವೇನಲ್ಲ. 2017ರಲ್ಲಿ 65 ವರ್ಷದ ಚಿನ್ನಗೊಡಂಗಿ ಪಳನಿಸ್ವಾಮಿ ಎನ್ನುವ ರೈತರೊಬ್ಬರು ಜೀವಂತ ಇಲಿಯೊಂದನ್ನು ಹಲ್ಲಿನ ನಡುವೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದರು. ಆ ಮೂಲಕ ತಮಿಳುನಾಡಿನ ರೈತರ ಸಮಸ್ಯೆಯನ್ನು ಸರ್ಕಾರದ ಗಮನ ಸೆಳೆಯಲು ಯತ್ನಿಸಿದ್ದರು.
“ಪರಿಸ್ಥಿತಿ ಸುಧಾರಿಸದಿದ್ದರೆ ನಾವು ಇಲಿಗಳನ್ನು ಸೇವಿಸ ಬೇಕಾದ ಪರಿಸ್ಥಿತಿ ಎದುರಾಗಬಹುದು ಎಂಬ ಸಂದೇಶವನ್ನು ನಾನು ನನ್ನ ಸಹವರ್ತಿಗಳೊಂದಿಗೆ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದೆ” ಎಂದು ಚಿನ್ನಗೊಡಂಗಿ ಪಳನಿಸ್ವಾಮಿ ತಿಳಿಸಿದ್ದರು.
ಅದಕ್ಕೂ ಮೊದಲು 2016ರಲ್ಲಿ, ತಮಿಳುನಾಡಿನ ತಿರುಚ್ಚಿಯಲ್ಲಿ ಸುಮಾರು 30 ರೈತರ ಗುಂಪು ಸತ್ತ ಇಲಿಗಳನ್ನು ಬಾಯಿ ಬಳಿ ಹಿಡಿದುಕೊಂಡು ಪ್ರತಿಭಟನೆ ನಡೆಸಿತ್ತು. ನೀರಿನ ಬಿಕ್ಕಟ್ಟು ಭತ್ತದ ಕೃಷಿಯ ಮೇಲೆ ತೀವ್ರ ಪರಿಣಾಮ ಬೀರಿದೆ ಮತ್ತು ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತವಾಗದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ. ಆರ್ಥಿಕ ಸಂಕಷ್ಟದ ಪರಿಣಾಮವಾಗಿ ಇಲಿ ಮಾಂಸವನ್ನೂ ರೈತರು ಸೇವಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಬಹುದು ಎಂಬುದನ್ನು ಆ ಗುಂಪು ವಿವರಿಸಿತ್ತು.
ಇದನ್ನೂ ಓದಿ: Cauvery Dispute : 3000 ಕ್ಯೂಸೆಕ್ ನೀರು ಬಿಡುಗಡೆ ಆದೇಶವನ್ನೂ ಪಾಲಿಸುತ್ತಾ ಸರ್ಕಾರ?; ಸಿಎಂ ಹೇಳಿದ್ದೇನು?
ರಾಜ್ಯಕ್ಕೆ ಹೊಡೆತ
ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ. ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ಸೆಪ್ಟೆಂಬರ್ 13ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 15 ದಿನಗಳವರೆಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿತ್ತು. ಸೆ. 18ರಂದು ನಡೆದ ಪ್ರಾಧಿಕಾರದ ಸಭೆ ಅದನ್ನು ಅನುಮೋದಿಸಿತ್ತು. ಸೆಪ್ಟೆಂಬರ್ 21ರಂದು ಸುಪ್ರೀಂಕೋರ್ಟ್ನಲ್ಲಿ ನಡೆದ ವಿಚಾರಣೆಯ ವೇಳೆ ಈ ಆದೇಶವನ್ನು ಎತ್ತಿ ಹಿಡಿಯಲಾಗಿತ್ತು. ಇದೀಗ ಮಂಗಳವಾರ (ಸೆ. 26) ನಡೆದ ಸಭೆಯಲ್ಲಿ ಕರ್ನಾಟಕದ ಮಂಡಿಸಿದ ವಾದವನ್ನು ಪರಿಗಣಿಸಿದ ಸಮಿತಿ ನೀರೇ ಬಿಡುವುದಿಲ್ಲ ಎಂಬ ಮನವಿಯನ್ನು ಒಪ್ಪಲಿಲ್ಲ. ಐದು ಸಾವಿರ ಕ್ಯೂಸೆಕ್ ಬದಲಿಗೆ ಮೂರು ಸಾವಿರ ಕ್ಯೂಸೆಕ್ಗೆ ಇಳಿಸಿ ಎಂದು ಸೂಚನೆ ನೀಡಿದೆ.
ಕರ್ನಾಟಕ
Rowdism in Ramanagara : ರೋಡಲ್ಲೇ ರೌಡಿಸಂ; ಚುನಾವಣಾಧಿಕಾರಿಗಳ ಮೇಲೆ ಕಾರು ಹಾಯಿಸಿ ಬ್ಯಾಲೆಟ್ ಪೇಪರ್ ಲೂಟಿ
Rowdism in Ramanagara : ರಾಮನಗರದ ಒಂದು ಹಾಲು ಉತ್ಪಾದಕರ ಸಂಘಕ್ಕೆ ಚುನಾವಣೆ ನಡೆಸಬಾರದು ಎಂದು ಆಗ್ರಹಿಸಿದ ರೌಡಿಗಳ ಗ್ಯಾಂಗ್ ಚುನಾವಣಾ ಅಧಿಕಾರಿಗಳ ಮೇಲೆಯೇ ದಾಳಿ ನಡೆಸಿ ಬ್ಯಾಲೆಟ್ ಪೇಪರ್ ಎತ್ತಿಕೊಂಡು ಹೋಗಿದೆ. ಆರೋಪಿಗಳನ್ನು ಗುರುತಿಸಲಾಗಿದೆ.
ಬೆಂಗಳೂರು: ಹಾಲು ಉತ್ಪಾದಕರ ಸಂಘದ (Milk Producers Union) ನಿರ್ದೇಶಕರ ಆಯ್ಕೆಗಾಗಿ (Election of directors) ಬಂದ ಚುನಾವಣಾಧಿಕಾರಿಗಳ ಮೇಲೆ ಕಾರು ಹಾಯಿಸಿ (Attack on Election officers) ಅವರ ಕೈಯಲ್ಲಿದ್ದ ಬ್ಯಾಲೆಟ್ ಪ್ಯಾಪರ್ (Ballet Paper), ಲ್ಯಾಪ್ಟಾಪ್, ಮೊಬೈಲ್ ಮತ್ತು ಇತರ ಸಾಮಗ್ರಿ ದರೋಡೆ ಮಾಡಿದ ಭಯಾನಕ ಘಟನೆಯೊಂದು ರಾಮನಗರ ಜಿಲ್ಲೆಯ (Ramanagara News) ಮಾಗಡಿ ತಾಲೂಕಿನ ಹೊಸಪಾಳ್ಯ ಬಳಿ ನಡೆದಿದೆ.
ಇಲ್ಲಿನ ಹುಳ್ಳೇನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದಲ್ಲಿ ನಿರ್ದೇಶಕ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯುವುದಿತ್ತು. ಚುನಾವಣಾಧಿಕಾರಿ ಉಮೇಶ್ ಮತ್ತು ಉಷಾ ಅವರು ಹಾಲು ಉತ್ಪಾದಕರ ಸಂಘದತ್ತ ಹೋಗುವಾಗ ಅವರ ಮೇಲೆ ದಾಳಿ ಮಾಡಲಾಗಿದೆ. ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಸಹಚರರು ಈ ಕೃತ್ಯ ಮಾಡಿದ್ದು ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಾಗಡಿ-ಕುಣಿಗಲ್ ರಸ್ತೆಯಲ್ಲಿ ಈ ದಾಳಿ ನಡೆದಿದೆ.
ಹಾಡುಹಗಲೇ ಭಯಾನಕ ಕೃತ್ಯ
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹುಳ್ಳೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರ ಸಂಘದ ಚುನಾವಣೆಗೆ ಎಲ್ಲವೂ ಸಿದ್ಧತೆ ನಡೆದಿತ್ತು. ಆದರೆ, ಪಂಚಾಯಿತಿ ಅಧ್ಯಕ್ಷ ಬಲರಾಮ್ ಮತ್ತು ಇತರ ಚುನಾವಣೆ ನಡೆಸಬಾರದು ಎಂದು ಪಟ್ಟು ಹಿಡಿದಿದ್ದರು. ಆದರೆ, ದಿನಾಂಕ ನಿಗದಿಯಾಗಿ ಎಲ್ಲ ವ್ಯವಸ್ಥೆಗಳೂ ನಡೆದಿದ್ದವು.
ಉಮೇಶ್ ಮತ್ತು ಉಷಾ ಎಂಬ ಇಬ್ಬರು ಚುನಾವಣಾ ಅಧಿಕಾರಿಗಳಾಗಿ ನಿಯುಕ್ತರಾಗಿದ್ದರು. ಬುಧವಾರ ಅವರು ಕಾರಿನಲ್ಲಿ ಹಾಲು ಉತ್ಪಾದಕರ ಸಂಘದತ್ತ ಸಾಗುತ್ತಿದ್ದಂತೆಯೇ ಪುಂಡರ ತಂಡವೊಂದು ಅವರ ಕಾರನ್ನು ಅಡ್ಡಗಟ್ಟಿತ್ತು. ಮಾರಕಾಸ್ತ್ರಗಳನ್ನು ತೋರಿಸಿ ಕಾರಿನಿಂದ ಇಳಿಸಿತು.
ಚುನಾವಣಾಧಿಕಾರಿಗಳ ಕಾರನ್ನು ಅಡ್ಡಗಟ್ಟಿ ಅವರನ್ನು ಕೆಳಗೆ ಇಳಿಸಿದ ದುಷ್ಟರು ಕಾರಿನಲ್ಲಿದ್ದ ಬ್ಯಾಲೆಟ್ ಪೇಪರ್ ಮತ್ತು ಲ್ಯಾಪ್ಟಾಪ್ಗಳನ್ನು ಕಿತ್ತುಕೊಂಡಿತು. ಉಮೇಶ್ ಅವರು ತಮ್ಮ ಕೈಯಿಂದ ಕಿತ್ತುಕೊಂಡ ಪೇಪರ್ಗಳನ್ನು ಕಸಿದುಕೊಳ್ಳಲು ಅವರನ್ನು ಬೆನ್ನಟ್ಟಿದರು. ಆದರೆ ದುಷ್ಕರ್ಮಿಗಳು ತಾವು ಬಂದಿದ್ದ ಸ್ಯಾಂಟ್ರೋ ಕಾರಿನಲ್ಲಿ ಕುಳಿತು ಪರಾರಿಯಾದರು. ಈ ಹಂತದಲ್ಲಿ ಕೆಲವರು ಕಾರನ್ನು ನಿಲ್ಲಿಸಲು ಯತ್ನಿಸಿದರು. ಆದರೆ, ದುಷ್ಕರ್ಮಿಗಳು ಅವರನ್ನು ತಳ್ಳಿ ಮುಂದಕ್ಕೆ ಸಾಗಿದರು. ಈ ಹಂತದಲ್ಲಿ ಕಾರಿನ ಮುಂಭಾಗದಲ್ಲಿದ್ದ ಉಷಾ ಅವರ ಮೇಲೆಯೇ ಕಾರು ನುಗ್ಗಿತ್ತು. ಕಾರು ಡಿಕ್ಕಿಯಾಗಿ ಮುಗ್ಗರಿಸಿ ಬಿದ್ದ ಅವರು ರಸ್ತೆಗೆ ಉರುಳಿದರು.
ಮಾಜಿ ಅಧ್ಯಕ್ಷ ಬಲರಾಮ್ ಮತ್ತು ಟೀಮ್, ಕಾರಿಗಾಗಿ ಶೋಧ
ಇದು ಮಾಜಿ ಅಧ್ಯಕ್ಷ ಬಲರಾಂ ಮತ್ತು ಅವನ ಸಹಚರರ ಕೃತ್ಯ ಎಂದು ಪೊಲೀಸರಿಗೆ ತಿಳಿದುಬಂದಿದೆ. ಸ್ಥಳೀಯರು ಕೂಡಾ ಇದನ್ನು ದೃಢೀಕರಿಸಿದ್ದಾರೆ.
ಹುಲ್ಲೇನಹಳ್ಳಿ ನಾಲ್ಕು ವ್ಯಕ್ತಿಗಳಿಂದ ಕೃತ್ಯ ನಡೆಸಿದೆ. ಗ್ರಾಪಂ ಮಾಜಿ ಅಧ್ಯಕ್ಷ ಬಲರಾಮ ಬಳಗದಲ್ಲಿ ಗುರುತಿಸಿಕೊಂಡಿದ್ದ ಹೇಮಂತ್, ಸೀನು, ದಾಸೇಗೌಡ, ಮತ್ತೊಬ್ಬನಿಂದ ಈ ಕೃತ್ಯ ನಡೆದಿದೆ ಎಂದು ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ. ಆರೋಪಿಗಳು ಮತ್ತು ಸ್ಯಾಂಟ್ರೋ ಕಾರು ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದರು.
ಮಾಜಿ ಶಾಸಕ ಮಂಜು ಕುಮ್ಮಕ್ಕು ಆರೋಪ
ಈ ನಡುವೆ, ದರೋಡೆಗೆ ಜೆಡಿಎಸ್ ಮಾಜಿ ಶಾಸಕ ಎ ಮಂಜು ಕುಮ್ಮಕ್ಕು ನೀಡಿದ್ದಾರೆ. ಮಾಜಿ ಅಧ್ಯಕ್ಷ ಬಲರಾಮ್ ತನ್ನ ಸಹಚರರ ಮೂಲಕ ಈ ಕೃತ್ಯ ನಡೆಸಿದ್ದಾನೆ ಎಂದು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂರ್ತಿ ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಪ್ರವೀಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
23 ವರ್ಷದ ಬಳಿಕ ಚುನಾವಣೆ ನಡೆಯುತ್ತಿತ್ತು!
ಹುಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಾಕಾರ ಸಂಘದ ನಿರ್ದೇಶಕರ ಚುನಾವಣೆ 23 ವರ್ಷಗಳ ಬಳಿಕ ನಡೆಯುತ್ತಿದೆ. ಇಲ್ಲಿ ಚುನಾವಣೆ ನಡೆಯಬೇಕು ಎನ್ನುವುದು ಬಹು ವರ್ಷಗಳ ಬೇಡಿಕೆಯಾಗಿತ್ತು. ಆದರೆ, ಹುಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಬೆಂಬಲಿಗರ ತಂಡವು ಹಾಲು ಉತ್ಪಾದಕರ ಸಂಘದ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಈ ಕೃತ್ಯವನ್ನು ಎಸಗಿದೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ
MP Muniswamy : ಸಚಿವ ಬೈರತಿ, ಶಾಸಕ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಸಂಸದ ಮುನಿಸ್ವಾಮಿ
MP Muniswamy : ಎರಡು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ತಮ್ಮ ಮೇಲೆ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದಲ್ಲದೆ, ಹಲ್ಲೆಗೆ ಮುಂದಾಗಲಾಗಿದೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಅವರು ಕೋಲಾರ ಶಾಸಕ ನಾರಾಯಣಸ್ವಾಮಿ, ಉಸ್ತುವಾರಿ ಸಚಿವ ಬೈರತಿ ಸುರೇಶ್, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಬೆಂಗಳೂರು: ಕೋಲಾರ ಶಾಸಕ ನಾರಾಯಣಸ್ವಾಮಿ (Kolar MLA Narayanaswamy) ಈಚೆಗೆ ಕಾರ್ಯಕ್ರಮವೊಂದರಲ್ಲಿ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಹಲ್ಲೆಗೆ ಮುಂದಾಗಿದ್ದಾರೆ. ಜತೆಗೆ ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್ (Kolar Incharge Minister Byrathi Suresh), ಕೋಲಾರ ಎಸ್ಪಿ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದಾರೆ ಎಂದು ಕೋಲಾರ ಸಂಸದ ಮುನಿಸ್ವಾಮಿ (Kolar MP Muniswamy) ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಹಲ್ಲೆ ಆರೋಪ ಪ್ರಕರಣ ಈಗ ರಾಜ್ಯಪಾಲರ ಅಂಗಳ ತಲುಪಿದೆ. ಉಸ್ತುವಾರಿ ಸಚಿವ ಬೈರತಿ ಸುರೇಶ್, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧವೂ ಸಂಸದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ (MLC Chalavadi Narayanaswamy), ಕೇಶವ್ ಪ್ರಸಾದ್ ಸೇರಿದಂತೆ 30 ಮಂದಿ ನಿಯೋಗ ತೆರಳಿ ದೂರು ನೀಡಿದೆ.
ಜನಪ್ರತಿನಿಧಿ ಮೇಲೆ ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ. ಹಾಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.
ನನ್ನನ್ನೂ ಸೇರಿದಂತೆ, ಎಲ್ಲರ ವಿರುದ್ಧ ತನಿಖೆ ಆಗಲಿ: ಕೋಲಾರ ಸಂಸದ ಮುನಿಸ್ವಾಮಿ
ಸಂವಿಧಾನದಲ್ಲಿ ಆಡಳಿತ ಪಕ್ಷಕ್ಕೆ ಎಷ್ಟು ಅಧಿಕಾರ ಇದೆಯೋ, ವಿಪಕ್ಷಗಳಿಗೂ ಅಷ್ಟೇ ಹಕ್ಕು ಇದೆ. ಇಡೀ ಕೋಲಾರ ಜಿಲ್ಲೆಯಲ್ಲಿ ಇರುವ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಅಂತ ಹೇಳಿದ್ದರು. ರೈತರ ಜಮೀನನ್ನು ಕಬಳಿಸುವ ಕೆಲಸ ಮಾಡಿದ್ದಾರೆ. ರೈತರ ವಿರುದ್ಧ ಒಕ್ಕಲೆಬ್ಬಿಸುವ ಕೆಲಸವನ್ನು ಮಾಡಿದ್ದೀರಿ. ರಾಜಕೀಯ ವೇದಿಕೆ ಮೇಲೂ ಭೂ ಕಳ್ಳರಿದ್ದಾರೆ ಎಂದು ನಾನು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನನ್ನನ್ನು ಹೊರಗೆ ದಬ್ಬಿಸುವ ಕೆಲಸ ಮಾಡಿದ್ದಾರೆ
ಎಸ್ಎನ್ ಸಿಟಿ ಅಂತ ಲೇಔಟ್ ಮಾಡಿದ್ದಾರೆ. ನನ್ನನ್ನೂ ಸೇರಿದಂತೆ, ಎಲ್ಲರ ವಿರುದ್ಧ ತನಿಖೆ ಆಗಲಿ ಅಂತ ಹೇಳಿದೆ. ಆಗ ಕೋಲಾರ ಶಾಸಕ ನಾರಾಯಣಸ್ವಾಮಿ ಹಾಗೂ ಉಸ್ತುವಾರಿ ಸಚಿವರು ನನ್ನನ್ನು ಹೊರಗೆ ದಬ್ಬಿಸುವ ಕೆಲಸ ಮಾಡಿದರು. ಹಾಗಾಗಿ ಉಸ್ತುವಾರಿ ಸಚಿವ ಬೈರತಿ ಸುರೇಶ್, ಶಾಸಕ ನಾರಾಯಣಸ್ವಾಮಿ ಹಾಗೂ ಕೋಲಾರ ಎಸ್ಪಿ ವಿರುದ್ಧ ದೂರು ನೀಡಿದ್ದೇನೆ ಎಂದು ಸಂಸದ ಮುನಿಸ್ವಾಮಿ ಹೇಳಿದರು.
ಇದನ್ನೂ ಓದಿ: BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್: ಎಚ್.ಡಿ. ಕುಮಾರಸ್ವಾಮಿ ಕಿಡಿ
ರೈತರ ಪರವಾಗಿ ಹೋರಾಟ ಮುಂದುವರಿಯಲಿದೆ
ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡುವಂತೆ ಮನವಿ ಮಾಡಲಿದ್ದೇವೆ. ದೆಹಲಿಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರಿಗೂ ದೂರು ನೀಡುತ್ತೇನೆ. ಎಷ್ಟೇ ಗದಾ ಪ್ರಹಾರ ಮಾಡಿದರೂ ನಮ್ಮ ರೈತರ ಪರವಾಗಿ ನನ್ನ ಹೋರಾಟ ನಡೆಯಲಿದೆ ಎಂದು ಸಂಸದ ಮುನಿಸ್ವಾಮಿ ಇದೇ ವೇಳೆ ಹೇಳಿದರು.
-
ದೇಶ15 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ23 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ16 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ಸುವಚನ10 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ16 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್22 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ23 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್19 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್