Pin To PIn Details Of Narendra Modi Programs In KarnatakaModi In Karnataka: ನರೇಂದ್ರ ಮೋದಿ ಭಾನುವಾರ ಎಲ್ಲೆಲ್ಲಿ ಪ್ರಚಾರ? ಇಲ್ಲಿದೆ ಪಿನ್‌ ಟು ಪಿನ್‌ ಮಾಹಿತಿ - Vistara News

ಕರ್ನಾಟಕ

Modi In Karnataka: ನರೇಂದ್ರ ಮೋದಿ ಭಾನುವಾರ ಎಲ್ಲೆಲ್ಲಿ ಪ್ರಚಾರ? ಇಲ್ಲಿದೆ ಪಿನ್‌ ಟು ಪಿನ್‌ ಮಾಹಿತಿ

Modi In Karnataka: ರಾಜ್ಯದಲ್ಲಿ ಬಿಜೆಪಿಯನ್ನು ಶತಾಯ ಗತಾಯ ಅಧಿಕಾರಕ್ಕೆ ತರಲು ಪಣತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹಲವು ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

Pin To PIn Details Of Narendra Modi Programs In Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಕೇಂದ್ರ ನಾಯಕರು ಪಣತೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿ (Modi In Karnataka) ಹಲವು ಸಚಿವರು ರಾಜ್ಯದಲ್ಲಿ ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅದರಲ್ಲೂ, ಬೃಹತ್‌ ರ‍್ಯಾಲಿ, ಸಮಾವೇಶಗಳ ಮೂಲಕ ಮೋದಿ ಅವರು ಮತ ಬೇಟೆ ಆರಂಭಿಸಿದ್ದಾರೆ. ಶನಿವಾರ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದ ಮೋದಿ ಅವರು ಭಾನುವಾರವೂ (April 30) ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಹೀಗಿದೆ.

ಶನಿವಾರ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿರುವ ಮೋದಿ ಅವರು ಭಾನುವಾರ ಬೆಳಗ್ಗೆ 10.35ಕ್ಕೆ ರಾಜಭವನದಿಂದ ರಸ್ತೆ ಮಾರ್ಗವಾಗಿ ಬೆಂಗಳೂರು ಹೆಲಿಪ್ಯಾಡ್‌ಗೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಕೋಲಾರಕ್ಕೆ ತೆರಳಲಿರುವ ಮೋದಿ ಬೆಳಗ್ಗೆ 11.30ರಿಂದ 12.15ರವರೆಗೆ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೋಲಾರದಿಂದ ಮಧ್ಯಾಹ್ನ 12.30ಕ್ಕೆ ಹೆಲಿಕಾಪ್ಟರ್‌ನಲ್ಲಿ ಪ್ರಧಾನಿಯವರು ಚನ್ನಪಟ್ಟಣಕ್ಕೆ ತೆರಳಲಿದ್ದಾರೆ. ಚನ್ನಪಟ್ಟಣದಲ್ಲಿ ಮಧ್ಯಾಹ್ನ 1.30ರಿಂದ 2.15ರವರೆಗೆ ಚುನಾವಣೆ ಸಮಾವೇಶದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್‌ನಲ್ಲಿ ಪ್ರಧಾನಿಯು ಬೇಲೂರಿಗೆ ತೆರಳಲಿದ್ದಾರೆ. ಮಧ್ಯಾಹ್ನ 3.45ರಿಂದ ಬೇಲೂರಿನಲ್ಲಿ ಸಮಾವೇಶ ನಡೆಯಲಿದ್ದು, ಮೋದಿ ಅವರು ಸಂಜೆ 4.30ರವರೆಗೆ ಪಾಲ್ಗೊಳ್ಳಲಿದ್ದಾರೆ.

ಸಂಜೆ 4.45ಕ್ಕೆ ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ಹೊರಡಲಿರುವ ಮೋದಿ, 5.45ರಿಂದ 6.30ರವರೆಗೆ ಮೈಸೂರಿನಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ನಂತರ ಸಂಜೆ 7ಗಂಟೆಗೆ ಮೈಸೂರು ಏರ್‌ಪೋರ್ಟ್‌ನಿಂದ ದೆಹಲಿಗೆ ಹಾರಾಟ ನಡೆಸಲಿದ್ದಾರೆ. ರಾತ್ರಿ 9.50ಕ್ಕೆ ಅವರು ದೆಹಲಿ ತಲುಪಲಿದ್ದಾರೆ.

ಇದನ್ನೂ ಓದಿ: Modi In Karnataka: ಚನ್ನಪಟ್ಟಣದಲ್ಲಿ ಭಾನುವಾರ ಮೋದಿ ಪ್ರಚಾರ; ಬೆಂಗಳೂರು-ಮೈಸೂರು ಹೆದ್ದಾರಿ ಬಂದ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Lok Sabha Election: ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ.

VISTARANEWS.COM


on

Lok Sabha Election
Koo

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ (Narendra modi) ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಅವರು ಇಂದು ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ (Lok Sabha Election) ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.

ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ. ಬಸವಣ್ಣನವರ ವಿಚಾರಧಾರೆಯನ್ನು ಪಾಲಿಸಬೇಕೆಂಬ ಉದ್ದೇಶದಿಂದ ಅವರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಡಬೇಕೆಂದು ಆದೇಶ ಮಾಡಿದೆ. ಜಾತಿ ವರ್ಗ ವ್ಯವಸ್ಥೆ ತೊಲಗಿ ಸಮಾನತೆ ಸ್ಥಾಪನೆಯಾಗಿ, ಜಾತ್ಯಾತೀತ ಸಮಾಜ ನಿರ್ಮಾಣವಾಗಬೇಕೆಂಬ ಆಶಯವನ್ನು ಬಸವಣ್ಣನವರು ಹೊಂದಿದ್ದರು. ವಿಶ್ವಗುರು ಬಸವಣ್ಣನವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ಈ ಕಾರ್ಯವನ್ನು ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರಾಗಲಿ ಮಾಡಲಿಲ್ಲ ಎಂದರು.

ಮೋದಿಯವರು ಕಂಬಳಿ ಹಾಕಿಕೊಂಡು ಮಾಡಿದ ಭಾಷಣ ಕೇವಲ ನಾಟಕ

ಕಾಂಗ್ರೆಸ್ ನವರು ಶಿವಾಜಿ ಮಹಾರಾಜರು ಹಾಗೂ ಕಿತ್ತೂರು ರಾಣಿ ಚೆನ್ನಮ್ಮನಿಗೆ ಗೌರವ ನೀಡಲಿಲ್ಲ ಎಂದು ಮೋದಿಯವರು ಸುಳ್ಳು ಹೇಳಿದ್ದರು , ಆದರೆ ಸರ್ಕಾರದ ವತಿಯಿಂದ ಕಿತ್ತೂರು ಚೆನ್ನಮ್ಮ ದಿನಾಚರಣೆಯನ್ನು ಆಚರಿಸಬೇಕೆಂಬ ಆದೇಶವನ್ನು ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರವೇ. ಮೋದಿಯವರು ಕರಿಕಂಬಳಿ ವೇಷ ಹಾಕಿಕೊಂಡು ಭಾಷಣ ಮಾಡಿರುವುದು ಕೇವಲ ನಾಟಕವೇ ಹೊರತು, ಕುರುಬ ಸಮುದಾಯದ ಮೇಲಿನ ಪ್ರೀತಿಯಿಂದಲ್ಲ. ಇವರ ವೇಷ ಭೂಷಣ ನಾಟಕಗಳು ಭಾರತೀಯರಿಗೆ ಈಗ ಅರ್ಥವಾಗಿದೆ ಎಂದರು.

ಕರ್ನಾಟಕದ 28 ಲೋಕಸಭಾ ಚುನಾವಣೆಯಲ್ಲಿ ಒಬ್ಬ ಕುರುಬ ಸಮುದಾಯದವರಿಗಾದರೂ ಟಿಕೇಟನ್ನು ಬಿಜೆಪಿಯ ಮೋದಿ ನೀಡಿಲ್ಲ , ಒಬ್ಬ ಮುಸಲ್ಮಾನನಿಗಾಗಲಿ, ಒಬ್ಬ ಕ್ರಿಶ್ಚಯನ್ನರಿಗಾಗಲಿ ಟಿಕೇಟು ನೀಡಿಲ್ಲ. ಏಕೆಂದರೆ ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೇ ಇಲ್ಲ ಎಂದರು.

ಬಿಜೆಪಿ ರೈತ ಸಾಲ ಮನ್ನಾ ಮಾಡಿಲ್ಲ

ಸ್ವಾಮಿನಾಥನ್ ವರದಿ ಜಾರಿಯಾಗದೇ , ರೈತರು ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡಲು ಹೋರಾಟ ಮಾಡುತ್ತಲೇ ಇದ್ದಾರೆ. ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಮೃತಪಟ್ಟರು. ಮೋದಿಯವರು 10 ವರ್ಷಗಳ ಪ್ರಧಾನಿಯ ಅವಧಿಯಲ್ಲಿ ಒಮ್ಮೆಯೂ ರೈತರ ಸಾಲ ಮನ್ನಾ ಮಾಡಲಿಲ್ಲ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, 76 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದರು. ನಾನು ಸಿಎಂ ಆದ ನಂತರ 27 ಲಕ್ಷ ರೈತರಿಗೆ 8165 ಕೋಟಿ ರೈತ ಸಾಲ ಮನ್ನಾ ಮಾಡಿದೆ. ಬಿಜೆಪಿಯವರು ರೈತ ಸಾಲ ಮನ್ನಾ ಮಾಡಲೇ ಇಲ್ಲ. ಯಡಿಯೂರಪ್ಪನವರು ‘ರೈತ ಸಾಲ ಮನ್ನಾ ಮಾಡಲು ಮನವಿ ಮಾಡಿದಾಗ,’ನಮ್ಮಲ್ಲಿ ನೋಟು ಪ್ರಿಂಟ್ ಮಾಡುವ ಮಷೀನು ಇಲ್ಲ ’ ಎಂದಿದ್ದರು. ರೈತ ಸಾಲ ಮನ್ನಾ ಮಾಡದಿದ್ದ ಮೋದಿಯವರು ದೇಶದ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದರು.

ಇದನ್ನೂ ಓದಿ: Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳು ಎಲ್ಲ ಜಾತಿ ಧರ್ಮದವರಿಗೆ ತಲುಪುತ್ತಿದೆ. ಶಕ್ತಿ ಯೋಜನೆ ಸೇರಿದಂತೆ ಎಲ್ಲ ಗ್ಯಾರಂಟಿಗಳಿಗೆ ರಾಜ್ಯದ ಮಹಿಳೆಯರಿಂದ ಹೆಚ್ಚಿನ ಪ್ರಶಂಸೆ ದೊರೆತಿದೆ ಎಂದರು.

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ನರೇಂದ್ರ ಮೋದಿಯವರು ದಲಿತರಿಗೆ, ಹಿಂದುಳಿದವರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕಾಂಗ್ರೆಸ್ ಕೊಡುತ್ತಾರೆ ಎಂದು ಸುಳ್ಳು ತಮ್ಮ ಪ್ರಚಾರ ಭಾಷಣದಲ್ಲಿ ಹೇಳುತ್ತಾರೆ. ಮೋದಿಯವರು ನಮ್ಮ ಸಂವಿಧಾನವನ್ನು ಓದಬೇಕು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಜಾತಿ ಧರ್ಮ ಭೇದವಿಲ್ಲದೆ ಎಲ್ಲರೂ ಮೀಸಲಾತಿಗೆ ಅರ್ಹರು ಎಂದು ಸಂವಿಧಾನ ಸ್ಪಷ್ಟವಾಗಿ ಹೇಳುತ್ತದೆ. ನರೇಂದ್ರ ಮೋದಿಗೆ ದಲಿತರು, ಹಿಂದುಳಿದವರನ್ನು ಮುಸಲ್ಮಾನರ ವಿರುದ್ಧ ಎತ್ತಿ ಕಟ್ಟುತ್ತಾ ದ್ವೇಶದ ರಾಜಕಾರಣ ಮಾಡಲು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಗಳನ್ನು ಜಾರಿಗೆ ತಂದ ಮೇಲೆ ಸರ್ಕಾರದಲ್ಲಿ ಸಂಬಳ ಕೊಡಲು ದುಡ್ಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಅವರಿಗೆ ಕರ್ನಾಟಕದ ಹಣಕಾಸಿನ ಪರಿಸ್ಥಿತಿ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ.ಖಜಾನೆ ಖಾಲಿಯಾಗಿದ್ದರೆ ನಾವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿ ತ್ತೇ? 36000 ಕೋಟಿ ರೂಗಳನ್ನು ವೆಚ್ಚ ಮಾಡಲು ಸಾಧ್ಯವಾಗುತ್ತಿತ್ತೆ. ಯಾರಾದರೂ ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ. ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.

ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು.

1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಹಾಗೂ ಗ್ಯಾರಂಟಿಗಳಿಗೆ ಮೀಸಲಿರಿಸಲಾಗಿದೆ ನರೇಂದ್ರ ಮೋದಿಯವರೇ ಎಂದರು. ಕಾಂಗ್ರೆಸ್ ಸರ್ಕಾರದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಮೊದಲು ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತಾರೆ ಎನ್ನುತ್ತಿದ್ದವರು ಈಗ ಚುನಾವಣೆ ಯಾಗುವರೆಗೆ ಮಾತ್ರ ಗ್ಯಾರಂಟಿಗಳು ಇರಲಿವೆ ಎನ್ನುತ್ತಿದ್ದಾರೆ. ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು. ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದರು. ಇದು ನಿರಂತರ. ಜನ ಆಶೀರ್ವದಿಸಿ ಮತ್ತೆ ಅಧಿಕಾರ ಕೊಟ್ಟರೇ ಮುಂದೆಯೂ ಜಾರಿಯಾಗಲಿದೆ ಎಂದರು.

ಸಾಮಾಜಿಕವಾಗಿ ಶಕ್ತಿ ತುಂಬುವವರು

ಮೋದಿಯವರು ಲೂಟಿ ಹೊಡೆಯುವ ಗ್ಯಾಂಗ್ ಬಂದಿದೆ ಎಂದಿದ್ದಾರೆ. ನಾವು ಲೂಟಿ ಹೊಡೆಯುವವರಲ್ಲ. ಈ ರಾಜ್ಯದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬುವವರು. ಸಮಾಜದ ಮುಖ್ಯವಾಹಿನಿಗೆ ಅವರು ಬರಬೇಕೆಂದು ನಂಬಿಕೆ ಇಟ್ಟವರು ಕಾಂಗ್ರೆಸ್ ನವರು . ಲೂಟಿ ಮಾಡಲು ಬಂದಿದ್ದವರು ಬಿಜೆಪಿಯವರು ಎಂದರು.

40% ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ

ಗುತ್ತಿಗೆದಾರರ ಸಂಘದವರು 40% ಸರ್ಕಾರ ಎಂದು ಹೇಳಿದ್ದರು. ಇದರ ತನಿಖೆಗೆ ಆಯೋಗ ಈಗಾಗಲೇ ರಚನೆಯಾಗಿ ತನಿಖೆ ನಡೆಯುತ್ತಿದೆ. ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆದಿದ್ದೇವೆ. ಮತ ಹಾಕುವ ಮುನ್ನ ನುಡಿದಂತೆ ಯಾರು ನಡೆದಿದ್ದಾರೆ ಎಂದು ಮತದಾರರು ಪರಿಶೀಲಿಸಬೇಕು ಎಂದರು.

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಅವನ್ನೂ ಭರ್ತಿ ಮಾಡಿಲ್ಲ.ಭರ್ತಿ ಮಾಡಿದ್ದರೆ ದಲಿತರು ಹಿಂದುಳಿದವರಿಗೆ 50% ಮೀಸಲಾತಿ ದೊರೆಯುತ್ತಿತ್ತು. ಉಳಿದದ್ದು ಇತರರಿಗೆ ದೊರೆಯುತ್ತಿತ್ತು. ನರೇಂದ್ರ ಮೋದಿಯವರು ಅದನ್ನೂ ಮಾಡಲಿಲ್ಲ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಇವನ್ನು ಕಡಿಮೆ ಮಾಡುವುದಾಗಿ ಹೇಳಿದ್ದರು. ಯಾವುದರ ಬೆಲೆಯೂ ಕಡಿಮೆ ಮಾಡಲು ಆಗಲಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿ ಹತ್ತು ವರ್ಷ ಗಳಾದರೂ ಬಡವರ ಜೀವನ ಸುಧಾರಣೆ ಆಗಲಿಲ್ಲ. ಬದಲಿಗೆ ಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ರೈತರು ವ್ಯವಸಾಯಕ್ಕೆ ವೆಚ್ಚ ಮಾಡುವ ಹಣ ಮೂರು ಪಟ್ಟು ಹೆಚ್ಚಾಯಿತು ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು.

Continue Reading

ಪ್ರಮುಖ ಸುದ್ದಿ

Rain News : ಬೆಂಗಳೂರಿನಲ್ಲಿ ಸಂಜೆ ಸುರಿದ ಸಣ್ಣ ಮಳೆಗೆ ಕೆಲವೆಡೆ ಅನಾಹುತ

ಬೆಂಗಳೂರಿನಲ್ಲಿ ಹಗಲಡೀ 38 ಡಿಗ್ರಿ ಸೆಲ್ಸಿಯಸ್​ ತಾಪಮಾನವಿತ್ತು. ಸಂಜೆ ವೇಳೆ ಜೋಉ ಗಾಳಿಯೊಂದಿಗೆ ಮಳೆ ಬಂತು. ಮಳೆ ಜೋರಾಗಿರಲಿಲ್ಲ ಗಾಳಿಯ ವೇಗ ಮಿತಿ ಮೀರಿತ್ತು. ಹೀಗಾಗಿ ಕೊಂಬೆಗಳು ಉರುಳಿ ಬಿದ್ದವು. ಕೊಡಿಗೆಹಳ್ಳಿಯ ರೈಲ್ವೆ ಪ್ಯಾರಲ್ ರಸ್ತೆಯಲ್ಲಿ ಸಂಜೆ ವೇಳೆ ಮರ ಬಿದ್ದು ಬೈಕ್ ಸವಾರ ಗಾಯಗೊಂಡಿದ್ದಾನೆ. ಅವರು ಮರ ಬಿದ್ದ ರಭಸಕ್ಕೆ ಆಘಾತಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

Rain News
Koo

ಬೆಂಗಳೂರು: ಮಿತಿಮೀರಿದ ತಾಪಮಾನದಿಂದ ಬೇಸತ್ತಿದ ಬೆಂಗಳೂರಿನ ಮಂದಿಗೆ ಗುರುವಾರ ಸಂಜೆ ಸುರಿದ ಸಣ್ಣ ಮಳೆ ಸಮಾಧಾನ (Rain News) ತಂದಿತು. ಆದರೆ, ಮಳೆಗಿಂತ ಅಧಿಕ ಗಾಳಿಯೇ ಬೀಸಿದ ಕಾರಣ ಕೆಲವೆಡೆ ಸಣ್ಣ ಪುಟ್ಟ ಅನಾಹುತಗಳು ಸಂಭವಿಸಿದವು. ವಾಹನಗಳ ಮೇಲೆ ಮರದ ಕೊಂಬೆಗಳು ಬಿದ್ದು ಹಾನಿಗೊಂಡವು. ಬೈಕ್​ ಸವಾರರೊಬ್ಬರು ಏಟು ಬಿದ್ದು ಆಸ್ಪತ್ರೆ ಸೇರಿದರು. ಅದೇ ರೀತಿ ಮೊದಲ ಮಳೆಗೆ ಆಯಿಲ್​ ಬಿದ್ದಿದ್ದ ರಸ್ತೆಗಳು ಒದ್ದೆಯಾಗಿ 30ಕ್ಕೂ ಹೆಚ್ಚು ಬೈಕ್​ಗಳು ಸ್ಕಿಡ್ ಆಗಿ ಬಿದ್ದವು.

ಬೆಂಗಳೂರಿನಲ್ಲಿ ಹಗಲಿಡೀ 38 ಡಿಗ್ರಿ ಸೆಲ್ಸಿಯಸ್​ ತಾಪಮಾನವಿತ್ತು. ಸಂಜೆ ವೇಳೆ ಜೋಉ ಗಾಳಿಯೊಂದಿಗೆ ಮಳೆ ಬಂತು. ಮಳೆ ಜೋರಾಗಿರಲಿಲ್ಲ ಗಾಳಿಯ ವೇಗ ಮಿತಿ ಮೀರಿತ್ತು. ಹೀಗಾಗಿ ಕೊಂಬೆಗಳು ಉರುಳಿ ಬಿದ್ದವು. ಕೊಡಿಗೆಹಳ್ಳಿಯ ರೈಲ್ವೆ ಪ್ಯಾರಲ್ ರಸ್ತೆಯಲ್ಲಿ ಸಂಜೆ ವೇಳೆ ಮರ ಬಿದ್ದು ಬೈಕ್ ಸವಾರ ಗಾಯಗೊಂಡಿದ್ದಾನೆ. ಅವರು ಮರ ಬಿದ್ದ ರಭಸಕ್ಕೆ ಆಘಾತಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅದೇ ರೀತಿ ಕಾರಿನ ಮೇಲೆ ಮೇಲೆ ಮರ ಬಿದ್ದ ಪರಿಣಾಮ ಕಾರಿಗೆ ಹಾನಿಯಾಗಿದೆ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಪೆಟ್ಟಾಗಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

ಕೆಲ ರಸ್ತೆಗಳು ಆಯಿಲ್‌ ಮಯ

ಸಂಜೆ ವೇಳೆ ಮಳೆ ಸುರಿದ ಕಾರಣ ಬೇಸಿಗೆಯಲ್ಲಿ ರಸ್ತೆ ಮೇಲೆ ಬಿದ್ದಿದ್ದ ಆಯಿಲ್ ಮೇಲಕ್ಕೆ ಬಂದು ನಿಂತಿತು. ಇದರಿಂದಾಗಿ ದ್ವಿಚಕ್ರ ವಾಹನಗಳು ಆಯತಪ್ಪಿ ಬಿದ್ದವು ಸಣ್ಣ ಮಳೆ ಬಿದ್ದ ಕಡೆಗಳಲ್ಲಿ ರಸ್ತೆಗಳಲ್ಲಿ ಆಯಿಲ್ ಕಾಣಿಸಿಕೊಂಡಿತು. ವಿಚಾರ ತಿಳಿಯದೆ ವೇಗವಾಗಿ ಹೋದ ಸ್ಕೂಟರ್​ಗಳು ಬಿದ್ದವು. ವಿಧಾನಸೌಧದ ಮುಂಭಾಗದ ರಸ್ತೆ , ಹಾಗು ಪೀಣ್ಯ ಎಲಿವೇಟೆಡ್ ಫ್ಲೈ ಓವರ್ , ಸಿಐಡಿ ಮುಂಭಾಗದ ರಸ್ತೆಯಲ್ಲಿ ಅವಾಂತರ ನಡೆಯಿತು.

ರಸ್ತೆ ಮೇಲೆ ಮಣ್ಣು ಹಾಕಿ ದ್ವಿಚಕ್ರ ವಾಹನ ಸಂಚಾರಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟರು.

Continue Reading

ರಾಜಕೀಯ

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election 2024: ಬಾಗಲಕೋಟೆಯ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರ ಭರ್ಜರಿ ಮತಯಾಚನೆ ಮಾಡಲಾಯಿತು. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ಮುಖಂಡರು ಅಭ್ಯರ್ಥಿ ಪರ ಮತಯಾಚಿಸಿದರು.

VISTARANEWS.COM


on

Election campaign for Congress candidate Samyukta Patil in Prajadhwani convention at Bagalkot
Koo

ಬಾಗಲಕೋಟೆ: ಇಲ್ಲಿನ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರ ಭರ್ಜರಿ ಮತಯಾಚನೆ (Lok Sabha Election 2024) ಮಾಡಲಾಯಿತು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ಮುಖಂಡರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ, ಸಂಸತ್ತಿನಲ್ಲಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರಿಗೆ ಮತವೆಂಬ ಆಶೀರ್ವಾದ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

ಕಾಂಗ್ರೆಸ್‌ ಮುಖಂಡ ನಿಕೇತ್‌ ರಾಜ್‌ ಮೌರ್ಯ ಮಾತನಾಡಿ, ಕರ್ನಾಟಕ ಕಾಂಗ್ರೆಸ್‌ ಗ್ಯಾರಂಟಿ ಬಗ್ಗೆ ಇಡೀ ದೇಶದ ಜನ ಚರ್ಚೆ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದ್ದು, 5 ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಜನರಿಗೆ ತಲುಪಿಸಿದೆ. ಆದರೆ ಗ್ಯಾರಂಟಿ ನೋಡಿ ಸಹಿಸಲು ಸಾಧ್ಯವಾಗದೇ ಬಿಜೆಪಿ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಗೆದ್ದೇ ಗೆಲ್ಲುತ್ತಾರೆ. ಸಂಸದರಾಗುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಮಾತನಾಡಿದರು.

ಇದನ್ನೂ ಓದಿ: Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

ಸಮಾವೇಶದಲ್ಲಿ ಸಚಿವರಾದ ಕೆ.ಎನ್‌. ರಾಜಣ್ಣ, ಶಿವಾನಂದ ಪಾಟೀಲ್‌, ಶಾಸಕರಾದ ವಿಜಯಾನಂದ ಕಾಶಪ್ಪನವರ್‌, ಭೀಮಸೇನ್‌ ಚಿಮ್ಮನಕಟ್ಟಿ, ಎಚ್‌.ವೈ. ಮೇಟಿ, ಪ್ರದೀಪ್‌ ಈಶ್ವರ್‌, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಮೊಹಮ್ಮದ್‌ ನಲಪಾಡ್‌ ಹ್ಯಾರಿಸ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ನಂಜಯ್ಯನಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರಕ್ಷಿತಾ ಈಟಿ, ಆನಂದ ನ್ಯಾಮಗೌಡ, ಅಜಯ್‌ ಕುಮಾರ್‌ ಸರ್‌ ನಾಯಕ್‌, ಪಕ್ಷದ ಮುಖಂಡರಾದ ಬಿ.ಆರ್‌. ಯಾವಗಲ್‌, ಎಂ.ಪಿ. ನಾಡಗೌಡ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ದೇಶ

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Lok Sabha Election: ದೇಶದ ವಿಕಾಸ ಹಾಗೂ ಪ್ರಗತಿಯ ಚುನಾವಣೆ ಇದಾಗಿದೆ. ಜೋಶಿ ಅವರು 5ನೆಯ ಬಾರಿ ಸ್ಪರ್ದೆ ಮಾಡಿದ್ದಾರೆ. ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಅವರು ಗೆಲ್ಲಬೇಕು. ಆ ಮೂಲಕ ಮೋದಿಯವರ ಕೈ ಬಲಪಡಿಸಬೇಕು. ನಾನು ಕಾರ್ಯಕರ್ತನಾಗಿ ಕೆಲಸ ಮಾಡಿ ಸಿಎಂ ಆಗಿದ್ದೇನೆ. ಈಗಲೂ ಸಹ ನಾನು ಕಾರ್ಯಕರ್ತನಾಗಿಯೇ ಇದ್ದೇನೆ. ನೀವೆಲ್ಲ ಭಾಗ್ಯವಂತರು ಯಾಕೆಂದರೆ ಜೋಶಿ ಆದರ್ಶ ಸಂಸದರು. ಅವರು ಮೋದಿಯವರ ಹತ್ತಿರವೇ ಇರುವ ಸಂಸದರಾಗಿದ್ದಾರೆ ಎಂದು ನುಡಿದರು.

VISTARANEWS.COM


on

Lok Sabha Election
Koo

ಧಾರವಾಡ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಧಾರವಾಡ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್​ ಜೋಶಿ (pralhad joshi) ಪರ ಗುರುವಾರ ಮಹಾರಾಷ್ಟ್ರ ಸಿಎಂ ಹಾಗೂ ಶಿವಸೇನೆ (Eknath Shinde) ಮುಖ್ಯಸ್ಥ ಏಕನಾಥ ಶಿಂಧೆ ಅವರು ಪ್ರಚಾರ ಭಾಷಣೆ ಮಾಡಿದರು. ನಗರದ ಮೃತ್ಯುಂಜಯ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಮೋದಿ (Narendra Modi) ನೀಡುವ ಗ್ಯಾರಂಟಿ ಪಡೆಯಲು ಪ್ರಲ್ಹಾದ್ ಜೋಶಿಯನ್ನು ಗೆಲ್ಲಿಸಿ ಎಂದು ಕರೆಕೊಟ್ಟರು.

ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಸಿಎಂ ಶಿಂಧೆ ಅವರು, ಧಾರವಾಡದ ಜನತೆಯನ್ನು ಭೇಟಿ ಮಾಡಿದ್ದು ಖುಷಿ ತಂದಿದೆ ಎಂದು ಹೇಳಿದರು. ಛತ್ರಪತಿ ಶಿವಾಜಿ ಅವರಿಗೂ ಧಾರವಾಡಕ್ಕೂ ಸಂಬಂಧ ಇದೆ. ಪುಣೆ ಹಾಗೂ ಧಾರವಾಡ ಸಾಂಸ್ಕೃತಿಕ, ಶೈಕ್ಷಣಿಕ ಕೇಂದ್ರ ಎಂಬುದಾಗಿ ನುಡಿದರು.

ದೇಶದ ವಿಕಾಸ ಹಾಗೂ ಪ್ರಗತಿಯ ಚುನಾವಣೆ ಇದಾಗಿದೆ. ಜೋಶಿ ಅವರು 5ನೆಯ ಬಾರಿ ಸ್ಪರ್ದೆ ಮಾಡಿದ್ದಾರೆ. ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಅವರು ಗೆಲ್ಲಬೇಕು. ಆ ಮೂಲಕ ಮೋದಿಯವರ ಕೈ ಬಲಪಡಿಸಬೇಕು. ನಾನು ಕಾರ್ಯಕರ್ತನಾಗಿ ಕೆಲಸ ಮಾಡಿ ಸಿಎಂ ಆಗಿದ್ದೇನೆ. ಈಗಲೂ ಸಹ ನಾನು ಕಾರ್ಯಕರ್ತನಾಗಿಯೇ ಇದ್ದೇನೆ. ನೀವೆಲ್ಲ ಭಾಗ್ಯವಂತರು ಯಾಕೆಂದರೆ ಜೋಶಿ ಆದರ್ಶ ಸಂಸದರು. ಅವರು ಮೋದಿಯವರ ಹತ್ತಿರವೇ ಇರುವ ಸಂಸದರಾಗಿದ್ದಾರೆ ಎಂದು ನುಡಿದರು.

ಕಾಂಗ್ರೆಸ್ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಅವರು ಗೆಲ್ಲುವ ಮೊದಲು ಏನೇನೋ ಕೊಡ್ತೀನಿ ಅಂಥ ಹೇಳಿದ್ದರು. ಆದರೆ ಈಗ ನಮ್ಮಲ್ಲಿ ದುಡ್ಡಿಲ್ಲ ಅಂತಾರೆ. ಆದ್ರೆ ದೇಶದಲ್ಲಿ ಚಾಲ್ತಿ ಇರೋದು ಮೋದಿ ಗ್ಯಾರಂಟಿ ಎಂದು ಅವರು ಹೇಳಿದರು.

ಇದನ್ನೂ ಓದಿ: K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

ಜಾಗತಿಕ ಅರ್ಥ ವ್ಯವಸ್ಥೆಯಲ್ಲಿ ನಾವು 5ನೆಯ ಪಡೆಯಲು ಮೋದಿ ಕಾರಣ. ದೇಶದಲ್ಲಿ ಮೋದಿ ಅಭಿವೃದ್ಧಿ ಮಾಡಿದ್ದಾರೆ. ಒಂದೇ ಒಂದು ರಜೆ ಸಹ ಪಡೆಯದೆ ಕೆಲಸ ಮಾಡಿದ್ದಾರೆ. ಸ್ವಲ್ಪ ಚಳಿ ಆದರೆ ವಿದೇಶಕ್ಕೆ ತೆರಳುವವರು ಬೇರೆ ಪಾರ್ಟಿಯ ಯುವರಾಜ (ರಾಹುಲ್ ಗಾಂಧಿ) ಎಂದು ಶಿಂಧೆ ಹೇಳಿದರು.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ದ್ವಜ ಹಾರಿಸಿದ ಕೀರ್ತಿ ಜೋಶಿ ಅವರಿಗೆ ಇದೆ. ಪಾಕಿಸ್ತಾನದವರು ಮೊದಲು ನಮ್ಮ ದೇಶದಲ್ಲಿ ಬಾಂಬ್ ಹಾಕುತ್ತಿದ್ದರು. ಈಗ ಭಾರತ ಮೋದಿ ನೇತೃತ್ವದಲ್ಲಿ ಪಾಕ್ ನ ಒಳಗೆ ಹೊಕ್ಕು ಸದೆಬಡಿಯುತ್ತಿದೆ ಎಂದು ಹೇಳಿದರು.

ದ್ವಾರಕಾ ನಗರದಲ್ಲಿ ಸಮುದ್ರದ ಒಳಗೆ ಹೋಗಿ ಮೋದಿ ದೇಶದ ಒಳಿತಿಗೆ ಪ್ರಾರ್ಥನೆ ಮಾಡಿದ್ದಾರೆ. ಮೋದಿ ದೇಶದ ಕೆಲಸಕ್ಕಾಗಿ ಅವರು ಇದ್ದಾರೆ. ಕೋಟ್ಯಾನುಕೋಟಿ ರಾಮನ ಭಕ್ತರ ಸಂಕಲ್ಪ ಪೂರ್ಣ ಆಗಿದೆ. ಈಗ ಎಲ್ಲರೂ ಖುಷಿಯಿಂದ ಇದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಮಾಡಿದ ಚಂದ್ರಯಾನ ಫೇಲ್ ಆಗಿವೆ. ಪದೇ ಪದೇ ತಪ್ಪುಗಳನ್ನು ಮಾಡಿದ್ದಾರೆ. ಆದಾಗ್ಯೂ ಇಂಡಿಯಾ ಬಣ ಮೋದಿಯನ್ನು ಸೋಲಿಸುವುದಕ್ಕೆ ನಿಂತಿದೆ, ಅದು ಅದು ಎಂದಿಗೂ ಆಗುವುದಿಲ್ಲ ಎಂದು ನುಡಿದರು.

Continue Reading
Advertisement
Lok Sabha Election
ಪ್ರಮುಖ ಸುದ್ದಿ3 hours ago

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Tsering Namgyal
ದೇಶ3 hours ago

Tsering Namgyal: ಲಡಾಕ್‌ನಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್; ಭಾರಿ ಹೈಡ್ರಾಮಾ

IPL 2024
ಪ್ರಮುಖ ಸುದ್ದಿ3 hours ago

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

Ragini Khanna
ಸಿನಿಮಾ4 hours ago

Ragini Khanna: ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಕ್ಷಮೆ ಕೇಳಿದ ನಟ ಗೋವಿಂದ ಸೋದರ ಸೊಸೆ!

Rain News
ಪ್ರಮುಖ ಸುದ್ದಿ4 hours ago

Rain News : ಬೆಂಗಳೂರಿನಲ್ಲಿ ಸಂಜೆ ಸುರಿದ ಸಣ್ಣ ಮಳೆಗೆ ಕೆಲವೆಡೆ ಅನಾಹುತ

Election campaign for Congress candidate Samyukta Patil in Prajadhwani convention at Bagalkot
ರಾಜಕೀಯ4 hours ago

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election
ದೇಶ4 hours ago

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Amit Shah
ದೇಶ4 hours ago

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

K. Annamalai
ಪ್ರಮುಖ ಸುದ್ದಿ4 hours ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ5 hours ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ8 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ22 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20245 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌