Modi in Karnataka : ಮೋದಿಗೆ ಸಿದ್ದರಾಮಯ್ಯ 21 ಪ್ರಶ್ನೆ; ಅದಾನಿ, ಎಚ್‌ಎಎಲ್‌, ವಿದ್ಯುತ್‌ ಸೇರಿ ನಾನಾ ವಿಷಯಗಳ ಮೂಲಕ ಕೆಣಕಿದ ಕೈ ನಾಯಕ - Vistara News

ಕರ್ನಾಟಕ

Modi in Karnataka : ಮೋದಿಗೆ ಸಿದ್ದರಾಮಯ್ಯ 21 ಪ್ರಶ್ನೆ; ಅದಾನಿ, ಎಚ್‌ಎಎಲ್‌, ವಿದ್ಯುತ್‌ ಸೇರಿ ನಾನಾ ವಿಷಯಗಳ ಮೂಲಕ ಕೆಣಕಿದ ಕೈ ನಾಯಕ

ಕರ್ನಾಟಕಕ್ಕೆ ಆಗಮಿಸಿದ ಮೋದಿ (Modi in Karnataka) ಅವರ ಮುಂದೆ 21 ಪ್ರಶ್ನೆಗಳನ್ನು ಇಟ್ಟ ಸಿದ್ದರಾಮಯ್ಯ ಅವರು ತನ್ನ ಬಳಿ ಸಾವಿರ ಪ್ರಶ್ನೆಗಳಿವೆ ಅಂದಿದ್ದಾರೆ.

VISTARANEWS.COM


on

Modi siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದಾಗಲೆಲ್ಲ (Modi in Karnataka) ಹಲವು ಪ್ರಶ್ನೆಗಳ ಮೂಲಕ ಕೆಣಕುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಬಾರಿಯೂ ೨೧ ಪ್ರಶ್ನೆಗಳನ್ನು ಕೇಳಿದ್ದಾರೆ. ʻʻಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಂದ 21 ಪ್ರಶ್ನೆಗಳುʼʼ ಎಂಬ ಪ್ರಶ್ನಾವಳಿಯನ್ನೇ ಅವರು ಮುಂದಿಟ್ಟಿದ್ದಾರೆ.

ʻʻಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರೆ, 21 ಪ್ರಶ್ನೆಗಳ ಮೂಲಕ ನಿಮಗೆ ಸ್ವಾಗತ
ಚುನಾವಣೆಗೆ ಮೊದಲು ಕರ್ನಾಟಕವೆಂಬುದೊಂದು ರಾಜ್ಯವಿದೆ ಎಂಬುದನ್ನೆ ಮರೆತುಬಿಟ್ಟಿದ್ದ ತಾವು ಮತ್ತು ತಮ್ಮ ಗೃಹ ಸಚಿವರಿಗೆ ಈಗ ಓಟು ಬೇಕು. ಆದ್ದರಿಂದ ಪದೇಪದೆ ಕರ್ನಾಟಕ ನೆನಪಾಗುತ್ತಿದೆ. ಕನಾಟಕದಲ್ಲಿ ನೀವು ಸಾಲು ಸಾಲು ಉದ್ಘಾಟಿಸುತ್ತಿರುವ ಬಹುಪಾಲು ಕಾಮಗಾರಿಗಳು/ ಯೋಜನೆಗಳು ಕಾಂಗ್ರೆಸ್ ಸರ್ಕಾರದವು ಎಂಬುದನ್ನು ನೆನಪಿಸಿಕೊಂಡು ಉದ್ಘಾಟನೆ ಮಾಡಿ ಎಂಬುದನ್ನು ನಿಮ್ಮ ಗಮನಕ್ಕೆ ತರುತ್ತೇನೆ. ಹಾಗೆ ಸ್ಮರಣೆ ಮಾಡಿಕೊಂಡು ಕಾಮಗಾರಿ ಉದ್ಘಾಟಿಸುವುದು ನೈತಿಕ ರಾಜಕಾರಣದ ಮಾದರಿ ಎಂಬುದನ್ನು ನಿಮಗೆ ನೆನಪಿಸಿ ನೀವು ಈ ಸಂದರ್ಭದಲ್ಲಿ ಕನ್ನಡಿಗರಿಗೆ ಉತ್ತರಿಸಬೇಕಾದ ಕೆಲವು ಪ್ರಶ್ನೆಗಳಿವೆ. ಅವುಗಳಿಗೆ ಉತ್ತರಿಸಬೇಕೆಂದು ಆಗ್ರಹಿಸುತ್ತೇನೆʼʼ ಎಂದಿರುವ ಅವರು, ಅದಾನಿ ಷೇರು ಹಗರಣ, ಎಚ್‌ಎಎಲ್‌ಗೆ ಅನ್ಯಾಯವೂ ಸೇರಿದಂತೆ ಕಾಂಗ್ರೆಸ್‌ ಪ್ರತಿಪಾದಿಸುತ್ತಿರುವ ಹಲವು ಸಂಗತಿಗಳನ್ನು ಉಲ್ಲೇಖ ಮಾಡಿದ್ದಾರೆ.

ವಿದ್ಯುತ್‌ ಉತ್ಪಾದನೆಯ ಕ್ರೆಡಿಟ್‌ ಯಾರಿಗೆ?

೧. ನೀವು ಇಂದು ಇಂಡಿಯಾ ಎನರ್ಜಿ ಸಪ್ತಾಹದಲ್ಲಿ ಭಾಗವಹಿಸುತ್ತಿದ್ದೀರಿ. ಅಸಾಂಪ್ರದಾಯಿಕ ವಿದ್ಯುತ್ ಉತ್ಪಾದನೆ ಬಗ್ಗೆಯೂ ಮಾತನಾಡಲಿದ್ದೀರಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ 2013ರಲ್ಲಿ ಸೋಲಾರ್ ಮತ್ತು ವಿಂಡ್ ಪವರ್ ಎರಡೂ ಸೇರಿ ಸುಮಾರು 4500 ಮೆಗಾವ್ಯಾಟ್ ಉತ್ಪಾದನೆಯಾಗುತ್ತಿತ್ತು. ಇದನ್ನು ನಮ್ಮ ಸರ್ಕಾರದ ಅಂತ್ಯದ ವೇಳೆಗೆ 13000 ಮೆಗಾವ್ಯಾಟ್‍ಗೆ ಹೆಚ್ಚಿಸಿದ್ದೆವು. ಆಪರೇಷನ್ ಕಮಲ ಮಾಡಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಅಸಾಂಪ್ರದಾಯಿಕ ವಿದ್ಯುತ್ ಉತ್ಪಾದನೆ 14 ಸಾವಿರ ಮೆಗಾವ್ಯಾಟ್ ದಾಟಿತ್ತು. ಎಲ್ಲ ಮೂಲಗಳಿಂದ 2014 ರಲ್ಲಿ 14825 ಮೆಗಾವ್ಯಾಟ್ ಉತ್ಪಾದನೆ ಇತ್ತು. 2018ರ ವೇಳೆಗೆ 28000 ಮೆಗಾವ್ಯಾಟ್ ಆಗಿತ್ತು. ಹಾಗಿದ್ದರೆ ಇದರ ಕ್ರೆಡಿಟ್ ಯಾರಿಗೆ ಸಲ್ಲಬೇಕು?

ಹಿಮಾಲಯವನ್ನೇ ನಾಶ ಮಾಡಿದ್ದೀರಿ..

೨. ಕರ್ನಾಟಕದಲ್ಲಿ ವಿದ್ಯುತ್ ಬಳಕೆಯಾಗುತ್ತಿರುವುದು 11-12 ಸಾವಿರ ಮೆಗಾವ್ಯಾಟ್ ಮಾತ್ರ. ಈ ವಿದ್ಯುತ್ತನ್ನು ಖರೀದಿಸಿ ಉತ್ತರದ ರಾಜ್ಯಗಳಲ್ಲಿ ಬಳಸಬಹುದಲ್ಲ? ಅದನ್ನು ಬಿಟ್ಟು ಹಿಮಾಲಯಕ್ಕೆ ಹೋಗಿ ಜೆಸಿಬಿ, ಹಿಟಾಚಿಗಳನ್ನು ಮತ್ತು ಡೈನಾಮೈಟುಗಳನ್ನು ಬಳಸಿ ಭಾರತದ ಪವಿತ್ರವಾದ ಪರ್ವತಗಳನ್ನು ನಾಶ ಮಾಡಲು ಹೊರಟಿದ್ದೀರಿ? ಗಂಗೆ, ಯಮುನೆ, ಬಾಗೀರಥಿ, ಸರಸ್ವತಿ, ಗೋಮತಿ, ಸಿಂಧೂ ಎಂಬ ನಮ್ಮ ಪವಿತ್ರ ನದಿಗಳ ಮೇಲೆ ನೀವು ಮಾಡುತ್ತಿರುವುದು ಅತ್ಯಾಚಾರವೆನ್ನಿಸುತ್ತಿಲ್ಲವೆ? ನಮ್ಮ ಶೂದ್ರ ನಾಯಕ ದೇವರಾದ ಶಿವನ ಮೇಲೆ, ಶಿವನ ಹೆಸರಿನ ಜಾಗಗಳ ಮೇಲೆ ನೀವು ಮಾಡುತ್ತಿರುವ ದಾಳಿ, ಅತ್ಯಾಚಾರ, ಅನಾಚಾರಗಳನ್ನು ಕೂಡಲೆ ನಿಲ್ಲಿಸಬೇಕೆಂದು ಆಗ್ರಹಿಸುತ್ತೇನೆ. ನಿಮಗೆ ಬೇಕಾದಷ್ಟು ವಿದ್ಯುತ್ತನ್ನು ಉತ್ಪಾದಿಸಿಕೊಡಲು ನಮ್ಮ ಕಾಂಗ್ರೆಸ್ ಸರ್ಕಾರ ಮುನ್ನುಡಿಯನ್ನು ಬರೆದಿದೆ. ಹೇಗಿದ್ದರೂ ನಮ್ಮ ರೈತರ ಎದೆಯ ಮೇಲೆ ಬರೆ ಎಳೆದ ಹಾಗೆ ವಿದ್ಯುತ್ ಲೈನುಗಳನ್ನು ದೇಶದ ಉದ್ದಗಲಕ್ಕೂ ಎಳೆದಿದ್ದೀರಿ. ಅದರ ಮೂಲಕ ನಾವು ವಿದ್ಯುತ್ ಸರಬರಾಜು ಮಾಡುತ್ತೇವೆ.

೩. ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಬ್ಯಾಂಕುಗಳಿಂದ ಲಕ್ಷಾಂತರ ಕೋಟಿ ರೂಪಾಯಿ ಸಾಲ ಮಾಡಿ ದೇಶ ಬಿಟ್ಟು ಓಡಿ ಹೋಗಲು 28 ಜನಕ್ಕೂ ಹೆಚ್ಚಿನ ದಗಾಕೋರ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಟ್ಟಿದೆ. ಆ 28 ಜನರಲ್ಲಿ 27 ಜನ ಗುಜರಾತಿನವರೆ ಇದ್ದಾರೆ, ಇದು ಕಾಕತಾಳಿಯವೊ ಇಲ್ಲ ಉದ್ದೇಶ ಪೂರ್ವಕವಾದ ದೇಶದ್ರೋಹವೊ?

ಬ್ಯಾಂಕ್‌ ವಿಲೀನದಿಂದ ರಾಜ್ಯಕ್ಕೆ ನಷ್ಟ ಮಾಡಿದಿರಿ..

೪. ನಿಮ್ಮ ರಾಜ್ಯದ ವ್ಯಾಪಾರಿಗಳಿಗೆ ಸಾಲಕೊಟ್ಟು ಅವರು ದೇಶದಿಂದ ಓಡಿಹೋಗಲು ಅವಕಾಶ ಮಾಡಿಕೊಟ್ಟು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಶನಲ್ ಬ್ಯಾಂಕು, ಬರೋಡಾ ಬ್ಯಾಂಕು ಮುಂತಾದ ಹಣಕಾಸು ಸಂಸ್ಥೆಗಳು ದಿವಾಳಿಯಾಗುವಂತೆ ಮಾಡಿದಿರಿ. ಅವುಗಳನ್ನು ಸರಿಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮೂಲದ ಸಂಪದ್ಭರಿತವಾಗಿದ್ದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ವಿಜಯಾ ಬ್ಯಾಂಕು, ಕಾರ್ಪೊರೇಷನ್ ಬ್ಯಾಂಕು ಮುಂತಾದವುಗಳಲ್ಲಿದ್ದ ಲಕ್ಷಾಂತರ ಕೋಟಿ ಸಂಪತ್ತನ್ನು ದೋಚಿಕೊಂಡು ದಿವಾಳಿಯಾಗುತ್ತಿದ್ದ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದು ಸರಿಯೆ?

೫. ಅದಾನಿ ಎಂಬ ದೇಶದ್ರೋಹಿ ವ್ಯಾಪಾರಿಗೆ ನೀವೆ ಸ್ವತಃ ಸಾಲ ಕೊಡಿ ಎಂದು ಬ್ಯಾಂಕುಗಳಿಗೆ ಪತ್ರ ಬರೆದಿದ್ದೀರೆಂದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ ಇದು ನಿಜವೆ? ಆಸ್ಟ್ರೇಲಿಯಾದಲ್ಲಿ ಗಣಿಗಾರಿಕೆ ಮಾಡಲು 7500 ಕೋಟಿ ಕೊಡಿ ಎಂದು ಎಸ್‍ಬಿಐ ಗೆ ಬರೆದಿರುವುದು ನಿಜ ತಾನೆ?

೬. ಮೋದಿ ಸರ್ಕಾರದ ಅವಧಿಯಲ್ಲಿ ಜಗತ್ತಿನ ಯಾವ ದೇಶದಲ್ಲೂ ಇಲ್ಲದ ಪ್ರಮಾಣದಲ್ಲಿ ಕಾರ್ಪೊರೇಟ್ ಕರಪ್ಷನ್ ನಡೆಯುತ್ತಿದೆ ಎಂದು ನಾನು ಹೇಳುತ್ತಲೆ ಬಂದಿದ್ದೇನೆ, ನನ್ನ ಮಾತುಗಳು ನಿಮ್ಮ ಕಿವಿಗೂ ಬಿದ್ದಿರಬೇಕು. ಆದರೂ ನೀವು ಅದನ್ನು ತಡೆಯಲು ಯಾವ ಕ್ರಮಗಳನ್ನೂ ತೆಗೆದುಕೊಳ್ಳಲಿಲ್ಲ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ಭಾರತವು ಜಗತ್ತಿನ ಮುಂದೆ ತಲೆ ತಗ್ಗಿಸುವಂತಾಗಿದೆ. ಅದಾನಿ ದೇಶದ ಗೌರವನ್ನು ಬೀದಿಗೆ ಎಳೆದು ತಂದಿದ್ದಾನೆ. ಈಗ ಅದಾನಿ ಎಂದರೆ ಭಾರತ, ಭಾರತ ಎಂದರೆ ಅದಾನಿ ಎಂದು ಹೇಳುವ ಮಟ್ಟಕ್ಕೆ ಬರಲಾಗಿದೆ, ಇದು ನಾಚಿಕೆಗೇಡಿನ ಸಂಗತಿಯಲ್ಲವೆ?

೭. ಭಾರತದ ಬ್ಯಾಂಕುಗಳು, ಭಾರತದ ಪ್ರತಿಷ್ಠಿತವಾದ ಬಡವರು ಮತ್ತು ಮಧ್ಯಮ ವರ್ಗದ ಜನರ ಆಶಾಕಿರಣವಾದ ಎಲ್‍ಐಸಿ ಸೇರಿದಂತೆ ಎಲ್ಲ ಹಣಕಾಸು ಸಂಸ್ಥೆಗಳು ಸುಮಾರು 2.5 ಲಕ್ಷ ಕೋಟಿಗೂ ಹೆಚ್ಚು ಸಾಲವನ್ನು ಅದಾನಿಗೆ ಕೊಟ್ಟಿವೆ. ಈಗ ಆತನ ದುಷ್ಕೃತ್ಯದಿಂದಾಗಿ ಈ ಹಣಕಾಸು ಸಂಸ್ಥೆಗಳು ದಿವಾಳಿಯಾಗುವ ಹಂತಕ್ಕೆ ಬರುತ್ತಿವೆ. ಇವು ದಿವಾಳಿಯಾದರೆ ಬಡವರು ಮತ್ತು ಮಧ್ಯಮ ವರ್ಗದವರಿಗೆ ಅನ್ಯಾಯವಾಗುತ್ತದೆ. ಇದರ ಹೊಣೆಯನ್ನು ನೀವು ಮತ್ತು ನಿಮ್ಮ ಸರ್ಕಾರವೆ ಹೊರಲೇಬೇಕಲ್ಲವೆ?

೮. ಅದಾನಿಯ 720000000000 ಕೋಟಿಗೂ (72 ಸಾವಿರ ಕೋಟಿ ರೂ.) ಹೆಚ್ಚಿನ ಸಾಲವನ್ನು 2017ರ ವೇಳೆಗೆ ಮನ್ನಾ ಮಾಡಲಾಗಿದೆ. ಇದು ಅನ್ಯಾಯದ ಕೃತ್ಯವೆಂದು ನಿಮಗೆ ಅನ್ನಿಸುತ್ತಿಲ್ಲವೆ?

೯. ಮನಮೋಹನ್‌ ಸಿಂಗ್‌ ಅವರು ಕೋಟ್ಯಾಂತರ ರೈತರ 70 ಸಾವಿರ ಕೋಟಿಗೂ ಅಧಿಕ ಮೊತ್ತದ ಸಾಲವನ್ನು ಮನ್ನಾ ಮಾಡಿದಾಗ ನಿಮ್ಮನ್ನೂ ಸೇರಿದಂತೆ ನಿಮ್ಮ ಬಿಜೆಪಿ ಪಕ್ಷದವರು ಅಂದಿನ ಯುಪಿಎ ಸರ್ಕಾರದ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿದ್ದು ತಪ್ಪು ಎಂದು ಈಗಲಾದರೂ ಅನ್ನಿಸುತ್ತಿದೆಯೆ? ಅಥವಾ ಆತ್ಮಸಾಕ್ಷಿಯೆಂಬುದು ನಿಮ್ಮ ಪಕ್ಷದ ಜನರಿಗೆ ಸಂಪೂರ್ಣವಾಗಿ ಸತ್ತು ಹೋಗಿದೆಯೆ?

೧೦. ದೇಶದ್ರೋಹಿ ವ್ಯಾಪಾರಿ ಅದಾನಿಯ ವಿಮಾನಗಳನ್ನು ಬಳಸಿ ನೀವು ಚುನಾವಣಾ ರ‍್ಯಾಲಿಗಳನ್ನು ಮಾಡಿದಿರಿ, ಆ ಪಾಪದ ಕೊಳೆಯನ್ನು ಈಗ ಯಾವ ಗಂಗೆಯಲ್ಲಿ ತೊಳೆದುಕೊಂಡು ಪುನೀತರಾಗುತ್ತೀರಿ?

ಅದಾನಿಯ ಪಾಪವನ್ನು ನೀವು ಹೊರುವಿರಾ?

೧೧. ಅದಾನಿಗೆ ದೇಶದ ಬಹುಪಾಲು ಬಂದರುಗಳು, ವಿಮಾನ ನಿಲ್ದಾಣಗಳು, ಬಂದರುಗಳ ಹತ್ತಿರದ ಎಸ್‍ಇಜೆಡ್‍ಗಳನ್ನು ನೀಡಿದ್ದೀರಿ, ಆದರೆ ಗುಜರಾತಿನ ಮುಂದ್ರಾ ಬಂದರಿನಲ್ಲಿ ಲಕ್ಷ ಲಕ್ಷ ಕೋಟಿ ರೂಪಾಯಿ ಮೌಲ್ಯದ ಗಾಂಜಾ ಸೇರಿದಂತೆ ವಿದೇಶಿ ಡ್ರಗ್ಸ್ ಸಿಗುತ್ತಿದೆ. ಇಂದು ದೇಶದ ಯುವಜನರು ಮಾದಕ ವ್ಯಸನಗಳಿಗೆ ಬಲಿಯಾಗಿ ಲಕ್ಷಾಂತರ ಕುಟುಂಬಗಳ ಬದುಕು ಕತ್ತಲೆಯತ್ತ ಸಾಗುತ್ತಿದೆ, ತಂದೆ ತಾಯಿಗಳು ತಲೆಯ ಮೇಲೆ ಕೈಹೊತ್ತು ಕೂರುವಂತಾಗಿದೆ ಇದರ ಪಾಪವನ್ನು ನೀವು ಹೊರುತ್ತೀರೊ ಇಲ್ಲ ಅದಾನಿಯ ಮೇಲೆ ಹೊರಿಸುತ್ತೀರೊ?

೧೨. ಡ್ರಗ್ಸ್ ರಾಜಧಾನಿ ಅಫ್ಘನಿಸ್ತಾನವೆಂದು ಕೆಲವು ಮಾಧ್ಯಮಗಳು ಹೇಳುತ್ತಿವೆ. ಆದರೆ ಅಲ್ಲಿನ ತಾಲಿಬಾನ್ ಸರ್ಕಾರಕ್ಕೆ ದೇಶದಿಂದ ಹಣಕಾಸು ನೆರವು, ಧವಸ ಧಾನ್ಯ, ಔಷಧಗಳನ್ನು ತುಂಬಿ ಕಳಿಸುವುದರ ಜೊತೆಗೆ ಹತ್ತಾರು ಸಾವಿರ ಕೋಟಿ ನೆರವು ನೀಡುತ್ತಿದ್ದೀರಿ ಇದನ್ನು ಕೇವಲ ರಾಜತಾಂತ್ರಿಕ ಸಂಬಂಧಕ್ಕಾಗಿ ಕೊಡುತ್ತಿದ್ದೀರೊ? ಅದಾನಿ ಅಂಬಾನಿಗಳು ಸುಲಭವಾಗಿ ವ್ಯವಹಾರ ನಡೆಸಲಿ ಎಂದು ಕೊಡುತ್ತಿದ್ದೀರೊ ದೇಶದ ಜನರಿಗೆ ತಿಳಿಸಿ.

ಸುಳ್ಳಿನ ಫ್ಯಾಕ್ಟರಿಯಾದ ಬಜೆಟ್‌

೧೩. ಸುಳ್ಳಿನ ಫ್ಯಾಕ್ಟರಿಯಂತಾಗಿರುವ ನಿಮ್ಮ ಬಿಜೆಪಿ ಸರ್ಕಾರಗಳು ಈ ವರ್ಷದ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಸಾವಿರಾರು ಕೋಟಿ ಅನುದಾನ ಬರುತ್ತವೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ, ಆದರೆ 2023ರ ಕಡೆಗೆ 4 ಲಕ್ಷ ಕೋಟಿ ರೂಪಾಯಿ ತೆರಿಗೆ, ಸೆಸ್ಸು, ಸರ್‍ಚಾರ್ಜುಗಳನ್ನು ಕರ್ನಾಟಕದಿಂದ ದೋಚಿಕೊಳ್ಳುತ್ತಿದ್ದೀರಿ. ಇದರಲ್ಲಿ ನಮಗೆ ಶೇ.42ರಷ್ಟು ಪಾಲು ಕೊಡಬೇಕು. ಹಾಗೆ ಕೊಟ್ಟರೆ ನಮಗೆ ನೀವು ನೀಡಬೇಕಾದ ಪಾಲು 1.70 ಲಕ್ಷ ಕೋಟಿ. ಆದರೆ ನೀವು ಈ ವರ್ಷ ಕೊಡುತ್ತೇವೆ ಎಂದು ಹೇಳುತ್ತಿರುವುದು ಕೇವಲ 37 ಸಾವಿರ ಕೋಟಿ ಮಾತ್ರ. 1.33 ಲಕ್ಷ ರೂಪಾಯಿಗಳನ್ನು ನಮಗೆ ಕೊಡದೆ ನೀವೆ ಕರ್ನಾಟಕದ ಜನರ ಋಣದಲ್ಲಿದ್ದೀರಿ. ಇದರ ಜೊತೆಗೆ 2.30 ಲಕ್ಷ ಕೋಟಿಯನ್ನು ನೀವೆ ಉಳಿಸಿಕೊಳ್ಳುತ್ತಿದ್ದೀರಿ. ಎರಡೂ ಸೇರಿದರೆ 3.63 ಲಕ್ಷ ಕೋಟಿ ರೂಪಾಯಿಗಳಷ್ಟಾಗುತ್ತದೆ. ವರ್ಷವೊಂದಕ್ಕೆ ಇಷ್ಟು ಮೊತ್ತವನ್ನು ಕೇಂದ್ರ ಸರ್ಕಾರವೆ ಉಳಿಸಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿರುವುದು ನ್ಯಾಯವೆ?

೧೪. 3.63 ಲಕ್ಷ ಕೋಟಿ ರೂಗಳಷ್ಟು ಕರ್ನಾಟಕದ ಹಣವನ್ನು ತಮ್ಮ ಬಳಿಯೆ ಉಳಿಸಿಕೊಂಡು ಭದ್ರಾ ಯೋಜನೆಗೆ 5300 ಕೋಟಿ ಕೊಡುತ್ತೇವೆ, ರೈಲ್ವೆಗೆ 7 ಸಾವಿರ ಕೋಟಿ ಕೊಡುತ್ತೇವೆ ಎಂದು ಹೇಳುವುದು ರಾಜ್ಯದ 7 ಕೋಟಿ ಜನರಿಗೆ ಮಾಡುವ ಅವಮಾನ ಎಂದು ನಿಮ್ಮ ಸರ್ಕಾರಕ್ಕೆ ಅನ್ನಿಸುತ್ತಿಲ್ಲವೆ? ಯಾಕೆಂದರೆ ಹತ್ತಾರು ರೈಲ್ವೆ ಯೋಜನೆಗಳು ಹಣ ಇಲ್ಲದೆ ನೆನೆಗುದಿಗೆ ಬಿದ್ದಿವೆ. ತುಮಕೂರು ರಾಯದುರ್ಗ ಮತ್ತು ದಾವಣೆಗೆರೆ ಯೋಜನೆಗಳಿಗೇನೆ ನೀವು ಕೊಡಬೇಕಾದಷ್ಟು ಹಣ ಕೊಟ್ಟಿಲ್ಲ.

೧೫. ಕರ್ನಾಟಕಕ್ಕೆ ನೀವು ಕೊಡುತ್ತಿರುವ ಕಿರುಕುಳಗಳ ನಡುವೆಯೆ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚಲು ಆದೇಶ ಹೊರಡಿಸಿದ್ದೀರಿ. ಇದು ಕರ್ನಾಟಕಕ್ಕೆ ನೀವು ಕೊಡುತ್ತಿರುವ ಕೊಡುಗೆಯೆಂದು ಜನರು ಮೋದಿ ಮೋದಿ ಎಂದು ಸ್ವಾಗತಿಸಿ ಕೂಗಬೇಕೆ?

೧೬. ಎಚ್‍ಎಎಲ್‍ಗೆ ಕೊಡಬೇಕಾದ ಸಾವಿರಾರು ಕೋಟಿ ರೂಪಾಯಿಗಳ ಗುತ್ತಿಗೆಯನ್ನು ಯಾವ ಅನುಭವವೂ ಇಲ್ಲದ ಅನಿಲ್ ಅಂಬಾನಿಗೆ ಕೊಟ್ಟು ರಾಫೆಲ್ ಹಗರಣಕ್ಕೆ ಸಾಕ್ಷಿಯಾದಿರಿ, ಇದು ಬೆಂಗಳೂರಿಗೆ ನೀವು ಕೊಟ್ಟ ಕೊಡುಗೆ ಎಂದು ಜನರು ಭಾವಿಸಬೇಕೆ?

೧೭. ತುಮಕೂರು ಜಿಲ್ಲೆ ಅಡಿಕೆ, ತೆಂಗು ಬೆಳೆಯುವ ಪ್ರಮುಖ ಜಿಲ್ಲೆ. ಕೊಬ್ಬರಿಯ ಬೆಲೆ ಬಿದ್ದು ಹೋಗಿದೆ, ಆದರೆ ನಿಮ್ಮ ಸರ್ಕಾರ ಮೌನವಾಗಿದೆ ಯಾಕೆ?

೧೮. ಅಡಿಕೆ ಬೆಲೆ ಹಿಂದಿನ ವರ್ಷಗಳಿಗಿಂತ ಕಡಿಮೆಯಾಗಿದೆ, ಆದರೂ ಭೂತಾನ್‍ನಿಂದ ಅಡಿಕೆ ಆಮದು ಮಾಡಿಕೊಂಡು ನಮ್ಮ ರೈತರ ಬದುಕಿನ ಮೇಲೆ ಬರೆ ಎಳೆಯುತ್ತಿದ್ದೀರಿ ಇದು ನ್ಯಾಯವೆ?

೧೯. ಸಿರಿಧಾನ್ಯಗಳನ್ನು ಅತಿ ಹೆಚ್ಚು ಬೆಳೆಯುವ ಜಿಲ್ಲೆ ಕೂಡ ತುಮಕೂರೇ ಆಗಿದೆ. ಆದರೆ ನಿಮ್ಮ ಬಿಜೆಪಿ ಸರ್ಕಾರ ಸಿರಿಧಾನ್ಯ ಬೆಳೆಯುವ ರೈತರಿಗೆ 10 ಸಾವಿರ ಕೊಡುತ್ತೇವೆ ಎಂದು ಹೇಳಿ 6 ಸಾವಿರಕ್ಕೆ ಇಳಿಸಿದ್ದಾರೆ. ಅದೂ ಕೂಡ ಸಮರ್ಪಕವಾಗಿ ಸಿಗುತ್ತಿಲ್ಲ. ಒಂದು ಎಕರೆಯಲ್ಲಿ 3-4 ಕ್ವಿಂಟಾಲ್ ಕೂಡ ಸಿರಿಧಾನ್ಯ ಬೆಳೆಯುವುದಿಲ್ಲ. ನೀವು ವಿದೇಶಗಳ ಮುಂದೆ ಸಿರಿಧಾನ್ಯಗಳ ಬಗ್ಗೆ ಭಾಷಣ ಬಿಗಿಯುವುದಕ್ಕೆ ನಮ್ಮ ರೈತರು ತಮ್ಮ ಬದುಕನ್ನು ಬರ್ಬಾದು ಮಾಡಿಕೊಂಡು ಬೆಳೆದುಕೊಡಬೇಕೆ? ರೈತರಿಗೆ ಏನು ಮಾಡಿದ್ದೀರಿ ಎಂದು ಹೇಳಿ ಮೊದಲು.

ಡೀಸೆಲ್‌ ಬೆಲೆ ೧೦೦ ರೂ. ದಾಟಿಸಿದ್ದೇ ಸಾಧನೆ

೨೦. ಮನಮೋಹನ್ ಸಿಂಗರ ಕಾಲದಲ್ಲಿ 47 ರೂಪಾಯಿ ಇದ್ದ ಡೀಸೆಲ್ ಬೆಲೆಯನ್ನು ಲೀಟರಿಗೆ 100 ರೂ ದಾಟಿಸಿದರಿ. ಈಗ 90 ರೂ ಇದೆ. ಡೀಸೆಲ್ ಬೆಲೆ ಹೆಚ್ಚಿಸಿದ್ದರಿಂದ ಜಾನುವಾರುಗಳಿಗೆ ಬಳಸುವ ಹಿಂಡಿ, ಬೂಸಾ, ಫೀಡ್ ಬೆಲೆಗಳು ಜಾಸ್ತಿಯಾಗಿವೆ. ಕೇವಲ 5 ವರ್ಷಗಳ ಹಿಂದೆ 300-400 ರೂ ಇದ್ದ ಹಿಂಡಿ, ಬೂಸ ಈಗ 45 ಕೆಜಿ ಚೀಲಕ್ಕೆ 1400 ರುಪಾಯಿವರೆಗೆ ರೈತರು ಪಾವತಿಸಬೇಕಾಗಿದೆ. ಆದರೆ ಹಾಲಿನ ಬೆಲೆ ಹಿಂದೆ 32 ರೂ ಸಿಗುತ್ತಿತ್ತು ಈಗ 36 ರೂ ಸಿಗುತ್ತಿದೆ. ನಿಮ್ಮ ತೆರಿಗೆ ದಾಹಕ್ಕೆ ಜನ ಕಂಗೆಟ್ಟು ಹೋಗಿದ್ದಾರೆ, ರಾಜ್ಯದ ಜನರ ಆದಾಯ ಹೆಚ್ಚುತ್ತಿಲ್ಲ, ಬಡವರಾಗುತ್ತಿದ್ದಾರೆ ಈ ಅನ್ಯಾಯಕ್ಕೆ ನೀವೆ ಹೊಣೆಯಲ್ಲವೆ ಮೋದೀಜಿ?

೨೧. ಬೆಂಗಳೂರಿನ ರಸ್ತೆಗಳ ಗುಂಡಿ ಮುಚ್ಚಲು ನಿಮ್ಮ ಬಿಜೆಪಿ ಸರ್ಕಾರವು 7200 ಕೋಟಿ ರೂ. ಖರ್ಚು ಮಾಡಿದೆಯಂತೆ. ಒಂದು ಗುಂಡಿ ಮುಚ್ಚಲು 9.2 ಲಕ್ಷ ರೂಪಾಯಿ ಖರ್ಚಾಗಿದೆಯಂತೆ, ಈ ಹಗಲು ದರೋಡೆಯ ಕುರಿತು ತನಿಖೆ ಮಾಡಿಸುತ್ತೀರಾ? ಅಥವಾ ‘ನಾ ಖಾವೂಂಗಾ ನಾ ಖಾನೆದೂಂಗ’ಎಂದು ಪುಕ್ಕಟ್ಟೆ ಮಂತ್ರ ಹೇಳಿ ಹಾಗೆ ಪುರ್ರೆಂದು ಹಾರಿ ಹೋಗುತ್ತೀರಾ?

ʻʻಕೇಳಬೇಕಾದ ಪ್ರಶ್ನೆಗಳು ನನ್ನ ಬಳಿ ಸಾವಿರ ಇವೆ. ನೀವು ಮತ್ತೆ ಮತ್ತೆ ಬರುತ್ತೀರಿ ಎಂಬುದು ನನಗೆ ಗೊತ್ತು. ಆದ್ದರಿಂದ ಒಂದೇ ದಿನ ನಿಮಗೆ ಹೆಚ್ಚು ತ್ರಾಸ ಕೊಡುವುದಿಲ್ಲ. ಇಂದು ಇಷ್ಟು ಪ್ರಶ್ನೆಗಳಿಗೆ ಉತ್ತರ ಹೇಳಿ ಸಾಕು. ನೀವು ಉತ್ತರ ಹೇಳದಿದ್ದರೆ ಕರ್ನಾಟಕಕ್ಕೆ ನೀವು ಮಾಡಿರುವ ದ್ರೋಹವನ್ನು ಒಪ್ಪಿಕೊಂಡಿದ್ದೀರಿ ಎಂದು ನನ್ನ ರಾಜ್ಯದ ಜನರು ಅರ್ಥ ಮಾಡಿಕೊಳ್ಳುತ್ತಾರೆ. ಜನರು ಸರಿಯಾದ ಸಮಯದಲ್ಲಿ ಸರಿಯಾದ ಉತ್ತರವನ್ನು ನಿಮಗೆ ಕೊಡುತ್ತಾರೆʼʼ ಎಂದಿದ್ದಾರೆ ಸಿದ್ದರಾಮಯ್ಯ.

ಇದನ್ನೂ ಓದಿ : PM Modi in Karnataka : ರಾಜ್ಯದ ವರ್ಗಾವಣೆ ದಂಧೆ ಬಗ್ಗೆ ಮಾತಾಡಲ್ಲ; ಇದು ಮೋದಿ ಗ್ಯಾರಂಟಿ ಎಂದು ಗೇಲಿ ಮಾಡಿದ ಕಾಂಗ್ರೆಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading
Advertisement
Rakshit Shetty Richard Anthony Produce By Hombale
ದೇಶ3 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ3 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ1 day ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ1 day ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ1 day ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ1 day ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ1 day ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest2 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌