ಕರ್ನಾಟಕ
PM Modi: ನಾಳೆ ಕುಂದಾನಗರಿಯಲ್ಲಿ ಮೋದಿ ಮೇನಿಯಾ; ಪೌರ ಕಾರ್ಮಿಕ ಮಹಿಳೆ ಸೇರಿ ಐವರು ಸಾಮಾನ್ಯ ಕಾರ್ಮಿಕರಿಂದ ಪ್ರಧಾನಿಗೆ ಸ್ವಾಗತ
PM Modi: ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೃಹತ್ ರೋಡ್ ಶೋವನ್ನು ಹಮ್ಮಿಕೊಂಡಿದ್ದು, ಈ ವೇಳೆ ಅದ್ಧೂರಿ ಸ್ವಾತಗಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೆ, ಆಟೋ ಚಾಲಕ, ಪೌರ ಕಾರ್ಮಿಕ ಮಹಿಳೆ, ನೇಕಾರ, ರೈತ ಮಹಿಳೆ ಹಾಗೂ ಕಟ್ಟಡ ಕಾರ್ಮಿಕರಿಂದ ಪ್ರಧಾನಿಗೆ ಸ್ವಾಗತ ಸಿಗಲಿದೆ.
ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ನಿರಂತರವಾಗಿ ಭೇಟಿ ನೀಡುತ್ತಾ ಬರುತ್ತಿದ್ದು, ಸೋಮವಾರ (ಫೆ. ೨೭) ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ಅಲ್ಲಿಂದ ಬೆಳಗಾವಿ ಆಗಮಿಸಿ 10.7 ಕಿ.ಮೀ. ವರೆಗೆ ಬೃಹತ್ ರೋಡ್ ಶೋದಲ್ಲಿ (Road show) ಪಾಲ್ಗೊಳ್ಳುತ್ತಿದ್ದಾರೆ. ಈ ವೇಳೆ ಐವರು ಜನಸಾಮಾನ್ಯರಾದ ಆಟೋ ಚಾಲಕ, ಪೌರ ಕಾರ್ಮಿಕ ಮಹಿಳೆ, ನೇಕಾರ, ರೈತ ಮಹಿಳೆ ಹಾಗೂ ಕಟ್ಟಡ ಕಾರ್ಮಿಕರು ಸ್ವಾಗತ ಕೋರಲಿದ್ದಾರೆ.
ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ಐವರು ಕಾಯಕಯೋಗಿಗಳನ್ನು ಆಯ್ಕೆ ಮಾಡಲಾಗಿದ್ದು, ಅವರೆಲ್ಲರಿಗೂ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಸೋಮವಾರ ಮಧ್ಯಾಹ್ನ ೨.೩೦ಕ್ಕೆ ಪ್ರಧಾನಿ ರೋಡ್ ಶೋ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.
ಆಟೋ ಚಾಲಕ ಮಯೂರ ಚವಾಣ್, ಪೌರ ಕಾರ್ಮಿಕ ಮಹಿಳೆ ಮೀನಾಕ್ಷಿ ತಳವಾರ, ಕಟ್ಟಡ ಕಾರ್ಮಿಕ ಮಂಗೇಶ ಬಸ್ತವಾಡಕರ್, ರೈತ ಮಹಿಳೆ ಶೀಲಾ ಬಾಬಾರುವಾಕ್ ಖನ್ನುಕರ್, ನೇಕಾರ ಕಲ್ಲಪ್ಪ ಟೋಪಗಿ ಅವರು ಸ್ವಾಗತ ಕೋರಲಿದ್ದಾರೆ.
ಮೋದಿ ಸ್ವಾಗತಕ್ಕೆ ಸಜ್ಜಾಗಿರುವ ಆಟೋ ಚಾಲಕ ಸೇರಿ ಐವರು ಶ್ರಮಿಕರ ಏನು ಹೇಳಿದ್ದಾರೆಂಬ ವಿಡಿಯೊ ಇಲ್ಲಿದೆ
10.7 ಕಿ.ಮೀ. ರೋಡ್ ಶೋ
ಬೆಳಗಾವಿಯಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು 10.7ಕಿಮೀ ರೋಡ್ ಶೋ ನಡೆಸಲಿದ್ದು, ಎಪಿಎಂಸಿ ಬಳಿಯ ಕೆಎಸ್ಆರ್ಪಿ ಮೈದಾನದಿಂದ ಚಾಲನೆ ಸಿಗಲಿದೆ. ಕೆಎಸ್ಆರ್ಪಿ ಮೈದಾನದಿಂದ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತ, ಧರ್ಮವೀರ ಸಂಭಾಜಿ ವೃತ್ತ, ರಾಮಲಿಂಗಖಿಂಡ ಬೀದಿ, ಕಪಿಲೇಶ್ವರ ಮಂದಿರ ಬಳಿ ಮೇಲ್ಸೇತುವೆ, ಶಹಾಪುರ ರಸ್ತೆ, ಶಿವಚರಿತ್ರೆ ಮುಂಭಾಗದ ರಸ್ತೆ, ಹಳೆಯ ಪಿಬಿ ರಸ್ತೆ, ಬಿ.ಎಸ್.ಯಡಿಯೂರಪ್ಪ ಮಾರ್ಗವಾಗಿ ಮಾಲಿನಿ ಸಿಟಿ ಮೈದಾನವರೆಗೆ ರೋಡ್ ಶೋ ನಡೆಯಲಿದೆ.
ಇದನ್ನೂ ಓದಿ: Mann Ki Baat: ‘ಮಲಗು ಕಂದ, ಮಲಗು ಕೂಸೆ‘; ಕರ್ನಾಟಕದ ಕವಿ ಮಂಜುನಾಥ್ ಬರೆದ ಲಾಲಿಹಾಡನ್ನು ಪ್ರಶಂಸಿಸಿದ ಪ್ರಧಾನಿ ಮೋದಿ
ಇರಲಿದೆ ಲೈವ್ ಶೋ
ಪ್ರಧಾನಿ ನರೇಂದ್ರ ಮೋದಿ ಅವರ ಈ ರೋಡ್ ಶೋವನ್ನು ಐತಿಹಾಸಿಕವಾಗಿ ದಾಖಲೆ ಮಾಡುವ ನಿಟ್ಟಿನಲ್ಲಿ ಬಿಜೆಪಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ರೋಡ್ ಶೋ ಮಾರ್ಗದಲ್ಲಿ ಲೈವ್ ಶೋಗಳನ್ನು ನಡೆಸಲು ತೀರ್ಮಾನ ಮಾಡಲಾಗಿದೆ. 10.7 ಕಿಮೀ ಮಾರ್ಗದ ರಸ್ತೆಯ ಎರಡು ಬದಿಗಳಲ್ಲಿ 90 ಪಾಯಿಂಟ್ಗಳನ್ನು ಗುರುತಿಸಲಾಗಿದೆ.
ಮೋದಿ ಕೊಡುಗೆ ಸಾರಲಿರುವ ನಾನಾ ರಾಜ್ಯಗಳ ಜನ
ದೇಶದ 29 ರಾಜ್ಯ 8 ಕೇಂದ್ರಾಡಳಿತ ಪ್ರದೇಶಗಳ ಜನರು ಅಲ್ಲಿನ ಸ್ಥಳೀಯ ವೇಷಭೂಷಣ ಧರಿಸಿ ಪ್ರಧಾನಿ ಮೋದಿ ನೀಡಿದ ಕೊಡುಗೆಗಳ ಬಗ್ಗೆ ರೋಡ್ ಶೋದಲ್ಲಿ ಪ್ರದರ್ಶಿಸಲಿದ್ದಾರೆ. ಇದಕ್ಕಾಗಿ 29 ರಾಜ್ಯದ 8 ಕೇಂದ್ರಾಡಳಿತ ಪ್ರದೇಶದ ತಲಾ 12 ಜನರನ್ನು ಕರೆಸಿಕೊಳ್ಳಲಾಗಿದೆ. ಸುಮಾರು 400 ಕಲಾವಿದರು ಭಾಗಿಯಾಗಲಿದ್ದಾರೆ.
10 ಸಾವಿರ ಮಹಿಳೆಯರಿಂದ ಪೂರ್ಣಕುಂಭ ಸ್ವಾಗತ
ರೋಡ್ ಶೋ ಬೆಳಗಾವಿ ದಕ್ಷಿಣ ಕ್ಷೇತ್ರ ಪ್ರವೇಶಿಸುತ್ತಿದ್ದಂತೆ ಪೂರ್ಣಕುಂಭ ಹೊತ್ತ 10 ಸಾವಿರ ಮಹಿಳೆಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಕೋರಲಿದ್ದಾರೆ. ಕೇಸರಿ ಪೇಟ ತೊಟ್ಟು, ಪೂರ್ಣಕುಂಭ ಹೊತ್ತು ಸ್ವಾಗತಿಸಲಿದ್ದಾರೆ. ಅಲ್ಲದೆ, ಈ ರೋಡ್ ಶೋದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ದೇಶದಲ್ಲಿ ಏನೇನಾಗಿತ್ತು. ನಂತರ ಬಂದ ಮೋದಿ ಯುಗದಲ್ಲಿ ಏನೇನಾಗಿದೆ ಎಂಬುದನ್ನು ಪ್ರದರ್ಶನ ಮಾಡಲಿದ್ದಾರೆಂದು ತಿಳಿದುಬಂದಿದೆ.
ರೋಡ್ ಶೋ ಬಗ್ಗೆ ಶಾಸಕ ಅಭಯ್ ಪಾಟೀಲ್ ಹೇಳಿಕೆ ಇಲ್ಲಿದೆ
ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ
ಶಿವಾಜಿ, ರಾಯಣ್ಣ, ಅಂಬೇಡ್ಕರ್, ಮದಕರಿ ನಾಯಕ, ಚೆನ್ನಮ್ಮ ಹೀಗೆ ಮಹಾಪುರುಷರ ಜೀವನ ಚರಿತ್ರೆ ಲೈವ್ ಶೋ ಸಹ ನಡೆಯಲಿದೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರು ರೋಡ್ ಶೋಗೆ ಸಾಕ್ಷಿಯಾಗಲಿದ್ದಾರೆ. ಅಲ್ಲದೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಾಧನೆಗಳುಳ್ಳ ಬ್ಯಾನರ್ಗಳನ್ನೂ ಹಾಕಲಾಗಿದೆ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ವಿಸ್ತಾರ ನ್ಯೂಸ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: HD Kumaraswamy: ಮೊದಲು ನಿಮ್ಮ ಕುಟುಂಬವನ್ನು ನೆಟ್ಟಗೆ ಇಟ್ಟುಕೊಳ್ಳಿ; ಜೋಶಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು
ಮೋದಿ ಕಾರ್ಯಕ್ರಮವೇನು?
ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಂತೆ ಮಾಲಿನಿ ಸಿಟಿ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮಾಲಿನಿ ಸಿಟಿ ಮೈದಾನದಲ್ಲಿ ಹತ್ತು ಎಕರೆ ಜಾಗದಲ್ಲಿ ಬೃಹದಾಕಾರದ ಟೆಂಟ್ ನಿರ್ಮಾಣ ಮಾಡಲಾಗಿದ್ದು, 60 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತನ್ನು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. 8 ಕೋಟಿಗೂ ಹೆಚ್ಚು ರೈತರ ಖಾತೆಗೆ ತಲಾ 2000 ರೂಪಾಯಿಯಂತೆ 16 ಸಾವಿರ ಕೋಟಿ ರೂಪಾಯಿ ಜಮೆಯಾಗಲಿದೆ.
ಬಳಿಕ ನವೀಕೃತ ಬೆಳಗಾವಿ ರೇಲ್ವೆ ನಿಲ್ದಾಣ ಉದ್ಘಾಟನೆ, ಬೆಳಗಾವಿ ಕಿತ್ತೂರು ಧಾರವಾಡ ರೈಲು ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಲಿರುವ ಮೋದಿ, ಬೆಳಗಾವಿ ಲೋಂಡಾ ರೈಲು ಮಾರ್ಗ ಡಬ್ಲಿಂಗ್ ಕಾಮಗಾರಿ, ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಫಲಾನುಭವಿಗಳ ಕರೆ ತರಲು ಸಾವಿರಕ್ಕೂ ಹೆಚ್ಚು ಬಸ್
ಮಾಲಿನಿ ಸಿಟಿ ಮೈದಾನದಲ್ಲಿ ನಡೆಯುವ ಸಮಾವೇಶಕ್ಕೆ ಆಗಮಿಸುವ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಕರೆ ತರಲು ಬೆಳಗಾವಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಿಂದ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾವಿರಕ್ಕೂ ಹೆಚ್ಚು ಸರ್ಕಾರಿ ಬಸ್ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಮಾಲಿನಿ ಸಿಟಿ ಮೈದಾನದ ಅರ್ಧ ಕಿ.ಮೀ. ಅಂತರದಲ್ಲಿ ಮೂರು ಸ್ಥಳ ಗುರುತಿಸಿ ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗಿದೆ. ವಾಹನಗಳ ಪಾರ್ಕಿಂಗ್ಗೆ ಮೂರು ಸ್ಥಳಗಳಲ್ಲಿ 50 ಎಕರೆ ಜಾಗವನ್ನು ಮೀಸಲಿಡಲಾಗಿದೆ. ಪಾರ್ಕಿಂಗ್ ಸ್ಥಳದಲ್ಲಿಯೇ ಜನರಿಗೆ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಪಿಯು ಪರೀಕ್ಷೆ ಮುಂದೂಡಿಕೆ
ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ಪ್ರಥಮ ಪಿಯು ಪರೀಕ್ಷೆಯನ್ನು ಮುಂದೂಡಲಾಗಿದೆ. ಫೆ. 27ಕ್ಕೆ ಜಿಲ್ಲೆಯಲ್ಲಿ ನಡೆಯಬೇಕಿದ್ದ ಪ್ರಥಮ ಪಿಯು ವಾರ್ಷಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಜಿಲ್ಲೆಯ 19 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬೇಕಿತ್ತು. ಮುಂದೂಡಿದ ಪರೀಕ್ಷೆಗಳನ್ನು ಮಾರ್ಚ್ 6ರಂದು ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅಲ್ಲದೆ, ಮೋದಿ ಆಗಮನ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಹಾಗೂ ಖಾಸಗಿ
ವಾಹನಗಳ ಓಡಾಟಕ್ಕೆ ಕೆಲವೆಡೆ ನಿರ್ಬಂಧ ಹೇರಲಾಗಿದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನನುಕೂಲ ಆಗಬಹುದೆಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕರ್ನಾಟಕ
Bangalore Bandh : ಬೆಂಗಳೂರು ಬಂದ್ ಫಿಕ್ಸ್; ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಬಸ್ ಸಂಚಾರ ಡೌಟ್; ಏನಿರುತ್ತೆ? ಏನಿರಲ್ಲ?
Bangalore Bandh : ಮಂಗಳವಾರದ ಬೆಂಗಳೂರು ಬಂದ್ಗೆ ವೇದಿಕೆ ಸಿದ್ಧವಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗುವ ಸಾಧ್ಯತೆ ಇದೆ. ಹಾಗಿದ್ದರೆ ಬಂದ್ ವೇಳೆ ಏನಿರುತ್ತದೆ? ಏನಿರಲ್ಲ ಎಂಬುದರ ಪೂರ್ಣ ವಿವರ ಇಲ್ಲಿದೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery water Dispute) ಮಾಡಬಾರದು ಎಂದು ಆಗ್ರಹಿಸಿ ಜಲ ಸಂರಕ್ಷಣಾ ಸಮಿತಿ (Jala Samrakshana Samiti) ಕರೆ ನೀಡಿರುವ ಸೆ. 26ರ ಬೆಂಗಳೂರು ಬಂದ್ (Bangalore bandh) ಮೊದಲು ಪ್ರಕಟಿಸಿದಂತೆ ಯಥಾವತ್ತಾಗಿ ನಡೆಯಲಿದೆ. ಆದರೆ, ವಾಟಾಳ್ ನಾಗರಾಜ್ (Vatal Nagaraj) ನೇತೃತ್ವದಲ್ಲಿ ಸೆ. 29ರಂದು ಕರ್ನಾಟಕ ಬಂದ್ಗೆ (Karnataka Bandh) ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ಈ ಹಿಂದೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿವೆ.
ರೈತ ಸಂಘದ ಕುರುಬೂರು ಶಾಂತ ಕುಮಾರ್ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ಹಲವಾರು ಸಂಘಟನೆಗಳ ಬೆಂಬಲದೊಂದಿಗೆ ಬೆಂಗಳೂರು ಬಂದ್ ನಡೆಯಲಿದೆ. ಬಂದ್ನಿಂದಾಗಿ ಮಕ್ಕಳಿಗೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕಾಗಿ ಬೆಂಗಳೂರು ಜಿಲ್ಲಾಧಿಕಾರಿಗಳು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ (Holiday announced for School and Colleges) ಘೋಷಿಸಿದ್ದಾರೆ. ಕಾಲೇಜುಗಳು ಮತ್ತು ವಿವಿಗಳು ನಿಗದಿ ಮಾಡಿದ್ದ ಪರೀಕ್ಷೆಗಳನ್ನು ಮುಂದೂಡಿವೆ (Exams Postponed).
ಈ ನಡುವೆ ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಬಿಎಂಟಿಸಿ ಮತ್ತು ಕರ್ನಾಟಕ ಸಾರಿಗೆ ಬಸ್ಗಳ ಸಂಚಾರ ವ್ಯತ್ಯಯಗೊಳ್ಳುವ ಸಾಧ್ಯತೆಗಳಿವೆ. ಯಾಕೆಂದರೆ, ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ನೌಕರರ ಸಂಘಟನೆ ಬಂದ್ಗೆ ಬೆಂಬಲ ಘೋಷಿಸಿವೆ. ಆದರೆ ಮೆಟ್ರೋ ಸಂಚಾರ ಎಂದಿನಂತೆ ಇರುತ್ತದೆ.
ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ
ಕನ್ನಡ ಮತ್ತು ನೀರಿಗೆ ಸಂಬಂಧಿಸಿದ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಕನ್ನಡ ರಕ್ಷಣಾ ವೇದಿಕೆ ಈ ಬಾರಿ ತಟಸ್ಥವಾಗಿ ಉಳಿದಿದೆ. ಸೆ. 26 ಅಥವಾ ಸೆ. 29 ಯಾವ ಬಂದ್ಗೂ ಬೆಂಬಲ ಕೊಡುವುದಿಲ್ಲ ಎಂದು ಅದು ಪ್ರಕಟಿಸಿದೆ. ಇದು ಬಂದ್ ಆಯೋಜಕರಿಗೆ ದೊಡ್ಡ ಹಿನ್ನಡೆಯಾಗಲಿದೆ.
ಹಲವು ಸಂಘಟನೆಗಳ ಬೆಂಬಲ ವಾಪಸ್
ಬೆಂಗಳೂರು ಬಂದ್, ಕರ್ನಾಟಕ ಬಂದ್ ಎರಡು ಬಂದ್ ಘೋಷಣೆಯಾಗಿದ್ದರಿಂದ ಕೆಲವು ಸಂಘಟನೆಗಳು ಸೆ. 26ರ ಬಂದ್ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿವೆ.
1. ಬೆಂಗಳೂರಿನ ಓಲಾ, ಊಬರ್ ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ತಾವು ಸೆ. 26ರ ಬದಲು ಸೆ. 29ರ ಬಂದ್ ಬೆಂಬಲಿಸುವುದಾಗಿ ಹೇಳಿದೆ.
2. ಬೆಂಗಳೂರಿನ ಆದರ್ಶ ಆಟೋ ಚಾಲಕರ ಯೂನಿಯನ್ ಕೂಡಾ ಸೆ. 26ರ ಬದಲು ಸೆ. 29ಕ್ಕೆ ಶಿಫ್ಟ್ ಆಗಿದೆ.
3. ಈ ಹಿಂದೆ ಸೆ. 26ರ ಬೆಂಗಳೂರು ಬಂದ್ಗೆ ಬೆಂಬಲ ಘೋಷಿಸಿದ್ದ ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಅವರು ಈಗ ಸೆ. 29ರ ಬಂದ್ಗೆ ಬೆಂಬಲ ಸೂಚಿಸಿದ್ದಾರೆ.
ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ ಇರುವುದಿಲ್ಲ ಅಂದಿದೆ ಸಂಘಟನೆ
ಸೆ. 26ರಂದು ನಡೆಯುವ ಬೆಂಗಳೂರು ಬಂದ್ ಗೆ ಬಿಎಂಟಿಸಿ ಹಾಗೂ KSRTC ನೌಕರರು ಬೆಂಬಲ ಕೊಡುತ್ತಾರೆ ಎಂದು ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಕೂಟದ ಪ್ರಧಾನ ಕಾರ್ಯದರ್ಶಿ ಎಸ್ ನಾಗರಾಜ್ ಹೇಳಿಕೆ ನೀಡಿದ್ದಾರೆ. ನಾವು ಹಾಗೂ ಸಮಾನ ಮನಸ್ಕರ ವೇದಿಕೆ ಹಾಗೂ ಬಿಎಂಟಿಸಿ ನೌಕರರ ಸಂಘಗಳು ತೀರ್ಮಾನ ಮಾಡಿದ್ದೇವೆ. ಯಾವ ವಾಹನಗಳನ್ನು ರಸ್ತೆಗೆ ಇಳಿಸಬೇಡಿ ಅಂತ ನಾವು ಸೂಚನೆ ಕೊಟ್ಟಿದ್ದೇವೆ. ಈ ಹಿಂದೆಯೂ ನಾವು ಬೆಂಬಲ ಕೊಟ್ಟಿದ್ದೆವು, ನಾಳೆಯೂ ಬೆಂಬಲ ಕೊಡುತ್ತೇವೆ ಎಂದಿದ್ದಾರೆ ನಾಗರಾಜ್.
ಸೆ. 26ರ ಬಂದ್ನಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗಿ ಆಗುವಂತೆ ಕರೆ ಕೊಟ್ಟಿದ್ದೇವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಹೇಳಿದ್ದಾರೆ. ಶಾಂತಿಯುತ ಹೋರಾಟಕ್ಕೆ ನಾವು ಒಟ್ಟು ಕೊಡುತ್ತೇವೆ, ಅಹಿತಕರ ಘಟನೆ ಆಸ್ಪದ ಕೊಡಲ್ಲ. ಇದರಲ್ಲಿ ನಮ್ಮ ನೌಕರರನ್ನು ವಿಭಜನೆ ಮಾಡಿ ನೋಡುವ ಅಗತ್ಯ ಇಲ್ಲ ಎಂದು ಚಂದ್ರಶೇಖರ್ ಹೇಳಿದ್ದಾರೆ.
ಇದನ್ನೂ ಓದಿ: Cauvery water dispute : ನಾಳೆ ಬಂದ್ ಯಶಸ್ವಿ ಆಗಬೇಕು; ಹೋಟೆಲ್ ಓಪನ್ ಮಾಡ್ಬೇಡಿ, ಸಮಸ್ಯೆಗೆ ನೀವೇ ಹೊಣೆ: ಬಿಎಸ್ವೈ
ಹಾಗಿದ್ದರೆ ಸೆ. 26ರ ಬೆಂಗಳೂರು ಬಂದ್ನಲ್ಲಿ ಏನಿರುತ್ತದೆ? ಏನಿರುವುದಿಲ್ಲ?
ಏನೇನು ಇರುವುದಿಲ್ಲ?
-ಶಾಲೆ, ಕಾಲೇಜುಗಳು ಬಂದ್: ಪರೀಕ್ಷೆಗಳು ಕೂಡಾ ಮುಂದಕ್ಕೆ
-ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳು ಬಹುತೇಕ ಇರುವುದಿಲ್ಲ
– ಓಲಾ, ಊಬರ್ ಹೊರತಾದ ಆಟೋ ರಿಕ್ಷಾಗಳು ಡೌಟ್
– ಸಿನಿಮಾ ಥಿಯೇಟರ್ಗಳು ಬಂದ್
– ಖಾಸಗಿ ಬಸ್ಗಳು, ಗೂಡ್ಸ್ ವಾಹನಗಳು
-ಸೂಪರ್ ಮಾರ್ಕೆಟ್, ಮಾಲ್ಗಳು
– ಬಹುತೇಕ ಅಂಗಡಿಗಳು ಬಂದ್
– ಕೈಗಾರಿಕೆಗಳು
– ಜುವೆಲ್ಲರಿ ಶಾಪ್ಗಳು
– ಬಿಬಿಎಂಪಿ ಕಾರ್ಮಿಕರು, ನೌಕರರು ಕೆಲಸ ಮಾಡಲ್ಲ
ಏನೇನು ಸೇವೆಗಳು ಲಭ್ಯ ಇರುತ್ತವೆ?
– ತುರ್ತು ಅಗತ್ಯದ ಎಲ್ಲ ಸೇವೆಗಳು ಇರುತ್ತವೆ.
– ಹಾಲಿನ ಬೂತ್ ಓಪನ್, ಪತ್ರಿಕೆಗಳು ಸಿಗುತ್ತವೆ
– ನಗರದಲ್ಲಿ ಹೋಟೆಲ್ಗಳು ತೆರೆದಿರುತ್ತವೆ.
– ಓಲಾ ಮತ್ತು ಊಬರ್ ಟ್ಯಾಕ್ಸಿಗಳು ಓಡಾಡುತ್ತವೆ
– ಹೆಚ್ಚಿನ ಆಟೋಗಳು ಓಡಾಡುತ್ತವೆ.
– ಆಸ್ಪತ್ರೆ, ಮೆಡಿಕಲ್ಗಳ ಸೇವೆ ಯಥಾಸ್ಥಿತಿ
– ಸರ್ಕಾರಿ ಕಚೇರಿಗಳು ಇರುತ್ತವೆ, ಜನ ಕಡಿಮೆ ಇರಬಹುದು
– ಆಂಬ್ಯುಲೆನ್ಸ್ ಸೇವೆಗಳು ಸಿಗುತ್ತವೆ.
– ಮೆಟ್ರೋ ಸೇವೆ ಎಂದಿನಂತೆ ಇರುತ್ತದೆ.
ಬಲವಂತವಾಗಿ ಬಂದ್ ಮಾಡುವಂತಿಲ್ಲ
ಸುಪ್ರೀಂಕೋರ್ಟ್ ತೀರ್ಪಿನಂತೆ ಬಂದ್ ಎಂಬ ಪದವೇ ಇಲ್ಲ. ಪ್ರತಿಭಟನೆಗೆ ಮಾತ್ರ ಅವಕಾಶ. ಬೆಂಗಳೂರು ಬಂದ್ ವೇಳೆ ಯಾರೂ ಯಾವುದೇ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸುವಂತಿಲ್ಲ, ವಾಹನಗಳನ್ನು ತಡೆಯುವಂತಿಲ್ಲ. ಹಾಗೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಬಂದ್ನಿಂದಾಗಿ ಆಸ್ತಿಪಾಸ್ತಿಗೆ ಹಾನಿ ಉಂಟಾದರೆ ಸಂಘಟಕರಿಂದಲೇ ವಸೂಲಿ ಮಾಡಲಾಗುವುದು.
ಕರ್ನಾಟಕ
Bangalore Bandh : ಯಾವ ಬಂದ್ಗೂ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ; ನಾರಾಯಣ ಗೌಡ ಘೋಷಣೆ
Bangalore Bandh : ಬಂದ್ ಯಾವತ್ತೂ ಕೊನೆಯ ಅಸ್ತ್ರವಾಗಬೇಕು ಎಂದಿರುವ ಕರ್ನಾಟಕ ರಕ್ಷಣಾ ವೇದಿಕೆ ಸೆ. 26 ಅಥವಾ 29ರ ಯಾವ ಬಂದ್ಗೂ ಬೆಂಬಲ ಕೊಡುವುದಿಲ್ಲ ಎಂದು ಪ್ರಕಟಿಸಿದೆ.
ಬೆಂಗಳೂರು: ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ಸೆ. 26ರಂದು ನಡೆಯಲಿರುವ ಬೆಂಗಳೂರು ಬಂದ್ (Bangalore Bandh) ಮತ್ತು ಸೆ. 29ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ಗಳಲ್ಲಿ (Karnataka Bandh) ಯಾವುದಕ್ಕೂ ತಾನು ಬೆಂಬಲ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಘೋಷಿಸಿದೆ.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ (TA Narayana Gowda) ಅವರು ಈ ಬಗ್ಗೆ ಆಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಕಾವೇರಿ ನೀರು ವಿಚಾರದಲ್ಲಿ ನಮ್ಮ ಹೋರಾಟ ಮುಂದುವರೆಯುತ್ತದೆ, ಆದರೆ ಯಾವುದೇ ಬಂದ್ಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಆಗ್ರಹಿಸಿ ಸೆಪ್ಟೆಂಬರ್ 26ರಂದು ಕುರುಬೂರು ಶಾಂತಕುಮಾರ್ ನೇತೃತ್ವದ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್ಗೆ ಕರೆ ನೀಡಿದರೆ ಮತ್ತು ಸೆಪ್ಟೆಂಬರ್ 29ರಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹಲವು ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಪ್ರತ್ಯೇಕವಾಗಿ ನಡೆಯಲಿರುವ ಈ ಯಾವ ಬಂದ್ಗೂ ನಮ್ಮ ಬೆಂಬಲವಿಲ್ಲ ಎಂದು ರಕ್ಷಣಾ ವೇದಿಕೆ ಸ್ಪಷ್ಟಪಡಿಸಿದೆ. ಇದೇ ವೇಳೆ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟ ರಾಜ್ಯಾದ್ಯಂತ ಮುಂದುವರೆಯುತ್ತದೆ ಎಂದು ಹೇಳಿದೆ.
ಸೋಮವಾರ ಬೆಳಗ್ಗೆ ಸಭೆ ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಉನ್ನತಾಧಿಕಾರ ಸಮಿತಿ ಹಲವು ನಿರ್ಣಯಗಳನ್ನು ಕೈಗೊಂಡಿದ್ದು, ಅದರ ಪ್ರಮುಖಾಂಶಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.
ಬಂದ್ಗೆ ರಕ್ಷಣಾ ವೇದಿಕೆ ಬೆಂಬಲ ಯಾಕಿಲ್ಲ?
- ಸೆಪ್ಟೆಂಬರ್ 26 ಮತ್ತು 29ರಂದು ಕರೆ ನೀಡಲಾಗಿರುವ ಬೆಂಗಳೂರು ಬಂದ್, ಕರ್ನಾಟಕ ಬಂದ್ಗಳನ್ನು ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲಿಸುವುದಿಲ್ಲ.
- ಆದರೆ ಈಗಾಗಲೇ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಹೋರಾಟ ಪ್ರತಿದಿನವೂ ನಡೆಯಲಿದೆ.
- ಸೆಪ್ಟೆಂಬರ್ 26ರಂದು ಮಂಗಳವಾರ ವೇದಿಕೆಯ ಗಾಂಧಿನಗರ ಕಚೇರಿ ಆವರಣದಿಂದ ವೇದಿಕೆ ಕಾರ್ಯಕರ್ತರು ಮೆರವಣಿಗೆ ಹೊರಟು ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ.
- ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ಯಾವುದೇ ಚಳವಳಿ ಕೈಗೆತ್ತಿಕೊಂಡರೂ ಜನಜಾಗೃತಿ ಮೂಡಿಸುವುದನ್ನು ಮೊದಲನೇ ಆದ್ಯತೆಯಾಗಿ ತೆಗೆದುಕೊಳ್ಳುತ್ತದೆ.
- ದಿಢೀರನೆ ಬಂದ್ ಕರೆ ನೀಡಿ ಜನಸಾಮಾನ್ಯರಿಗೆ ತೊಂದರೆ ನೀಡುವುದನ್ನು ರಕ್ಷಣಾ ವೇದಿಕೆ ಒಪ್ಪುವುದಿಲ್ಲ. ಬಂದ್ ಹೋರಾಟದ ಕೊನೆಯ ಅಸ್ತ್ರವಾಗಿರಬೇಕು.
ಇದನ್ನೂ ಓದಿ: Bangalore Bandh : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್ ಬಂದ್ ಬಿಸಿ, ಬೇಕಿತ್ತಾ ಎರಡೆರಡು ಬಂದ್?
ನಾವು ಯಾವುದೇ ಅಂಗಡಿ ಮುಂಗಟ್ಟು ಬಂದ್ ಮಾಡಿಸುವುದಿಲ್ಲ
ಎರಡೂ ದಿನಗಳ ಬಂದ್ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಯಾವುದೇ ಪದಾಧಿಕಾರಿ, ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವುದಿಲ್ಲ. ಬಂದ್ಗೆ ಸಂಬಂಧಪಟ್ಟಂತೆ ಯಾವುದೇ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ. ಕಾವೇರಿಗಾಗಿ ನಮ್ಮ ಪ್ರಜಾಸತ್ತಾತ್ಮಕ ಮಾದರಿಯ ಹೋರಾಟಗಳು ಮುಂದುವರೆಯುತ್ತವೆ ಎಂದು ಕರವೇ ಹೇಳಿದೆ.
ಇದೇ ವೇಳೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.
ಉತ್ತರ ಕನ್ನಡ
Uttara Kannada News: ಜನತಾ ದರ್ಶನದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ: ಸಚಿವ ಮಂಕಾಳ ವೈದ್ಯ
Uttara Kannada News: ಕಾರವಾರ ನಗರದ ಕೋಡಿಭಾಗದ ಸಾಗರ ದರ್ಶನ ಸಭಾಂಗಣದಲ್ಲಿ ಸೋಮವಾರ ‘ಜನತಾ ದರ್ಶನ’ ಕಾರ್ಯಕ್ರಮ ಜರುಗಿತು.
ಕಾರವಾರ: ಜನತಾ ದರ್ಶನ ಕಾರ್ಯಕ್ರಮದ (Janata Darshan) ಮೂಲಕ ಒಂದೇ ಸೂರಿನಡಿ ಜಿಲ್ಲೆಯ ಬಡವರು, ಅಸಹಾಯಕರು ಸೇರಿದಂತೆ ಎಲ್ಲಾ ವರ್ಗಗಳ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡಾ ಸರ್ಕಾರದ ಸೌಲಭ್ಯಗಳನ್ನು (Government Facilities) ತಲುಪಿಸುವ ಮೂಲಕ ನ್ಯಾಯ (Justice) ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್ ವೈದ್ಯ ತಿಳಿಸಿದರು.
ನಗರದ ಕೋಡಿಭಾಗದ ಸಾಗರ ದರ್ಶನ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ‘ಜನತಾ ದರ್ಶನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆದಷ್ಟು ಶೀಘ್ರದಲ್ಲಿ ಅವರ ಅರ್ಜಿಗಳನ್ನು ಪರಿಶೀಲಿಸಿ ಅಗತ್ಯ ಸೌಲಭ್ಯ ಮಂಜೂರು ಮಾಡಬೇಕು. ಸರ್ಕಾರಿ ಕಚೇರಿಗಳಿಗೆ ವಿನಾ ಕಾರಣ ಅಲೆದಾಡಿಸುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳು ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: Indian Coast Guard: 290 ನಾವಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಅಪ್ಲೈ ದಿನಾಂಕ ವಿಸ್ತರಣೆ
ಸಾರ್ವಜನಿಕರು ನೀಡುವ ಅರ್ಜಿಗಳನ್ನು ಅಧಿಕಾರಿಗಳು ಮಾನವೀಯತೆ ನೆಲೆಯಲ್ಲಿ ಪರಿಶೀಲಿಸಿ ಸರ್ಕಾರಿ ಸೌಲಭ್ಯಗಳನ್ನು ಮಂಜೂರು ಮಾಡುವಂತೆ ತಿಳಿಸಿದರು.
ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿಯೂ ಸಹ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸುವ ಮೂಲಕ ಜಿಲ್ಲೆಯ ಸಾರ್ವಜನಿಕರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಶಾಸಕ ಸತೀಶ್ ಸೈಲ್ ಮಾತನಾಡಿ, ಜಿಲ್ಲೆಯ ಜನರಿಗೆ ನ್ಯಾಯ ಒದಗಿಸಲು ನಿರಂತರ ಸೇವೆ ಸಲ್ಲಿಸಲಾಗುವುದು ಹಾಗೂ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಜನತಾ ದರ್ಶನದಲ್ಲಿ ಕಂದಾಯ ಇಲಾಖೆಯ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳು, ಪಡಿತರ ಚೀಟಿ ವರ್ಗಾವಣೆ ಸಮಸ್ಯೆ, ವಸತಿ ಮಂಜೂರು ಸಮಸ್ಯೆ, ಪಂಚಾಯತ್ ಮಟ್ಟದ ಸಮಸ್ಯೆಗಳು, ಮಾಜಿ ಸೈನಿಕರಿಗೆ ಭೂ ಮಂಜೂರಾತಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಅರ್ಜಿಗಳನ್ನು ಸಲ್ಲಿಸಿದರು. ಈ ಎಲ್ಲಾ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಬಗೆಹರಿಸಿ ವರದಿ ನೀಡುವಂತೆ ಮತ್ತು ಎಲ್ಲಾ ಅರ್ಜಿಗಳಿಗೆ ಹಿಂಬರಹ ನೀಡಿ, ಪೂರಕ ದಾಖಲೆಗಳ ಅಗತ್ಯವಿದ್ದಲ್ಲಿ ಅರ್ಜಿದಾರರಿಂದ ಸಂಗ್ರಹಿಸಿ ಅಗತ್ಯ ಸೌಲಭ್ಯಗಳನ್ನು ಮಂಜೂರು ಮಾಡುವಂತೆ ಸಚಿವರು ನಿರ್ದೇಶನ ನೀಡಿದರು.
ಇದನ್ನೂ ಓದಿ: Ganesh Chaturthi: 100 ಫ್ಯಾನ್ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್ ಕಂಪೆನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ
ಜನತಾ ದರ್ಶನದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲು 6 ಪ್ರತ್ಯೇಕ ವಿಭಾಗಗಳನ್ನು ತೆರೆಯಲಾಗಿದ್ದು, ಕಂದಾಯ ಇಲಾಖೆಗೆ ಸಂಬಂಧಿಸಿದ 41, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 17 ಅರ್ಜಿಗಳು ಸೇರಿದಂತೆ ಸುಮಾರು 115ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್, ಜಿ.ಪಂ. ಸಿಇಒ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ವಿಷ್ಣ್ಣುವರ್ಧನ್, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ.ಪ್ರಶಾಂತ ಕುಮಾರ ಕೆ.ಸಿ., ರವಿಶಂಕರ್, ದಾಂಡೇಲಿ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ನಿಲೇಶ ಶಿಂಧೆ ದೇವೋಬ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ ಸ್ವಾಗತಿಸಿದರು.
ವಿಜಯನಗರ
Vijayanagara News: ವಿಜಯನಗರದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಚಾಲನೆ
Vijayanagara News: ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತದ ವತಿಯಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜನತಾ ದರ್ಶನ ಕಾರ್ಯಕ್ರಮ ಜರುಗಿತು.
ಹೊಸಪೇಟೆ: ಜನತಾ ದರ್ಶನ (Janata Darshan) ಮೂಲಕ ಕೇವಲ ಸಾರ್ವಜನಿಕರ (Publics) ಅಹವಾಲು ಕೇಳುವುದು ಮಾತ್ರವಲ್ಲದೇ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ಕ್ರಮವನ್ನು ಕೈಗೊಂಡು ನಾಗರಿಕರಲ್ಲಿ ಭರವಸೆ ಮೂಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಖ್ಯಮಂತ್ರಿಗಳ ಬಳಿ ಸಲ್ಲಿಸಲು ತೆರಳುತ್ತಿದ್ದರು. ಅದರ ಬದಲಾಗಿ ಜಿಲ್ಲೆಯಲ್ಲೆ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಕೆಲವೊಂದನ್ನು ಸ್ಥಳದಲ್ಲಿಯೇ ಪರಿಹರಿಸಿ, ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳನ್ನು ಐಪಿಜಿಆರ್ಎಸ್ ತಂತ್ರಾಂಶದಲ್ಲಿ ನಮೂದಿಸಿ ಮೊಬೈಲ್ ಮೂಲಕ ಅರ್ಜಿದಾರರನ್ನು ಸಂಪರ್ಕಿಸಿ ಪರಿಹಾರ ಒದಗಿಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಆಯಾ ಇಲಾಖೆಯ ಕೌಂಟರ್ ಬಳಿ ಅರ್ಜಿ ಸಲ್ಲಿಸಿದರೆ ಇನ್ನೂ ಕೆಲವರು ನೇರವಾಗಿ ಉಸ್ತುವಾರಿ ಸಚಿವರನ್ನು, ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿದರು. 1 ಗಂಟೆಗಳ ಕಾಲ ಸ್ವತಃ ಸಚಿವರೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಜಿಲ್ಲಾಧಿಕಾರಿಗಳು ಸಹ ಸ್ಥಳದಲ್ಲೇ ಇದ್ದು ಇದರ ಬಗ್ಗೆ ಮಾಹಿತಿ ಪಡೆದುಕೊಂಡರು.
ವಿವಿಧ ಇಲಾಖೆಯ 20 ಕೌಂಟರ್ ಸ್ಥಾಪನೆ
ಸಾರ್ವಜನಿಕರಿಂದ ಅಹವಾಲು ಸಲ್ಲಿಕೆಗೆ ಜಿಲ್ಲಾಡಳಿತದಿಂದ 20 ಕೌಂಟರ್ ಸ್ಥಾಪಿಸಲಾಗಿತ್ತು, ಇಲಾಖಾವಾರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ತಲಾ ಇಬ್ಬರು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ಕಂದಾಯ ಇಲಾಖೆ ಸೇರಿದಂತೆ ಭೂ ದಾಖಲೆ, ಆಹಾರ ಮತ್ತು ನಾಗರಿಕ ಸರಬರಾಜು , ಮಜೂರಿ, ಜಿಲ್ಲಾ ನೋಂದಣಿ, ಗ್ರಾಮೀಣಾಭಿವೃದ್ಧಿ , ಗ್ರಾಮೀಣ ಕುಡಿಯುವ ನೀರು ಸರಬರಾಜು, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತು ಪಶುಸಂಗೋಪನೆ, ಅರಣ್ಯ, ಅಬಕಾರಿ, ಗಣಿ ಮತ್ತು ಭೂವಿಜ್ಞಾನ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಎಲ್ಲಾ ನಿಗಮ ಮಂಡಳಿಗಳು, ಶಿಕ್ಷಣ, ಜೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗೃಹ, ನಗರಸಭೆ ಮತ್ತು ಸ್ಥಳೀಯ ಸಂಸ್ಥೆಗಳು, ನೀರಾವರಿ, ನಗರಾಭಿವೃದ್ಧಿ, ಹಂಪಿ ವಿಶ್ವಪಾರಪಂರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ(ಹವಾಮಾ), ಕಾರ್ಮಿಕ, ಪ್ರಾದೇಶಿಕ ಸಾರಿಗೆ ಇಲಾಖೆ(ಆರ್ಟಿಒ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಆಯುಷ್ ಸೇರಿದಂತೆ ಒಟ್ಟು 20ಕ್ಕೂ ಹೆಚ್ಚು ಇಲಾಖೆಗಳ ಕೌಂಟರ್ ತೆರೆದು ಸಾರ್ವಜನಿಕರಿಂದ ಅರ್ಜಿ ಮತ್ತು ಅಹವಾಲುಗಳನ್ನು ಸ್ವೀಕರಿಸಿ ಕಂಪ್ಯೂಟರ್ನಲ್ಲಿ ನಮೂದಿಸಿ ಸ್ವೀಕೃತಿಯನ್ನು ಅರ್ಜಿದಾರರಿಗೆ ನೀಡಲಾಯಿತು.
ಇದನ್ನೂ ಓದಿ: Ganesh Chaturthi: 100 ಫ್ಯಾನ್ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್ ಕಂಪೆನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ
ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಸೇರಿದಂತೆ ಕೆಲ ಪಿಂಚಣಿ ಸೌಲಭ್ಯವನ್ನು ಸ್ಥಳದಲ್ಲಿಯೇ ಇತ್ಯಾರ್ಥ ಮಾಡಿಕೊಡಲಾಯಿತು.
ಸಂಜೆಯವರೆಗೂ ನಡೆದ ಜನತಾ ದರ್ಶನದಲ್ಲಿ ವಿವಿಧ ತಾಲೂಕಿನಿಂದ ಆಗಮಿಸಿದ್ದ ಸಾರ್ವಜನಿಕರು ಆಯಾ ಇಲಾಖೆಯ ಕೌಂಟರ್ಗಳ ಬಳಿ ತೆರಳಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.
ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 154 ಹಾಗೂ ನಗರಸಭೆಗೆ 520 ಅರ್ಜಿಗಳು ಸೇರಿದಂತೆ ಒಟ್ಟು 992 ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ಇದನ್ನೂ ಓದಿ: Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
ಈ ಸಂದರ್ಭದಲ್ಲಿ ಶಾಸಕರಾದ ಎಚ್.ಆರ್.ಗವಿಯಪ್ಪ, ಡಾ.ಎನ್.ಟಿ.ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ದಿವಾಕರ್ ಎಂ.ಎಸ್., ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಆರ್ಎಫ್ಒ ಅರ್ಸಲನ್, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಉಪವಿಭಾಗಾಧಿಕಾರಿ ನೋಂಗ್ಡಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ ಸೇರಿದಂತೆ ಅಧಿಕಾರಿಗಳು ಇದ್ದರು.
-
ಕ್ರಿಕೆಟ್24 hours ago
IND vs AUS: ಸರಣಿ ವಶಪಡಿಸಿಕೊಂಡ ಭಾರತ; ದ್ವಿತೀಯ ಪಂದ್ಯದಲ್ಲಿ 99 ರನ್ ಗೆಲುವು
-
ಸುವಚನ17 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ವಿದೇಶ8 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ದೇಶ23 hours ago
Viral News: ಎಲ್ಕೆಜಿ ಬಾಲಕನಿಗೆ ಕಾಲು ಮುರಿಯುವ ಹಾಗೆ ಬಡಿದ ಮೇಷ್ಟ್ರು , ಗಾಯಗಳನ್ನು ನೋಡಿ ಬೆಚ್ಚಿದ ಅಮ್ಮ
-
ಕರ್ನಾಟಕ6 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ22 hours ago
India Canada Row : ಖಲಿಸ್ತಾನಿ ಉಗ್ರರ ಕಡೆಗೆ ಮೃದು ಧೋರಣೆ; ಟ್ರುಡೊ ವಿರುದ್ಧ ಆರ್ಯ ಮತ್ತೆ ವಾಗ್ದಾಳಿ
-
ಅಂಕಣ9 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ದೇಶ6 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!