Site icon Vistara News

Political clash: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಆದವನ ಮೇಲೆ ಹಲ್ಲೆ; ನಾಲ್ವರ ಮೇಲೆ ಎಫ್‌ಐಆರ್‌ ದಾಖಲು

#image_title

ಚಿಕ್ಕಮಗಳೂರು: ಇಲ್ಲಿನ ಎನ್‌.ಆರ್‌ ಪುರ ತಾಲೂಕಿನ ನಾಗಲಾಪುರ ಸಮೀಪದ ರಾವೂರು ಗ್ರಾಮದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತನ ಮನೆಗೆ ನುಗ್ಗಿ ಆತನ ಮೇಲೆ ಮಾರಣಾಂತಿಕ ಹಲ್ಲೆ (Political clash) ನಡೆಸಿರುವ ಘಟನೆ ನಡೆದಿದೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ರಾವೂರು ಗ್ರಾಮದ ಬಿಜೆಪಿ ಕಾರ್ಯಕರ್ತ ಶಿವು ಮೇಲೆ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಹಿಂಬಾಲಕರಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಶಿವು ಅವರ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡಿರುವನನ್ನು ಎನ್‌.ಆರ್‌. ಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾಂಗ್ರೆಸ್‌ ಶಾಸಕ ಟಿ‌.ಡಿ.ರಾಜೇಗೌಡ ನಾಗಲಾಪುರ ಗ್ರಾಮದಲ್ಲಿ ಪಕ್ಷದ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆದರೆ, ಕಳೆದ ತಿಂಗಳ ಹಿಂದೆ ಕಾಂಗ್ರೆಸ್ ತೊರೆದು ಶಿವು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ. ಬಿಜೆಪಿ ಸೇರಿದ ವಿಚಾರವಾಗಿ ಶಿವು ಜತೆ ಶಾಸಕರ ಹಿಂಬಾಲಕರೊಂದಿಗೆ ಆಗಾಗ ಗಲಾಟೆ ಆಗುತ್ತಿತ್ತು.

ಇದನ್ನೂ ಓದಿ: Murder Case: ಕುಡಿದ ಮತ್ತಿನಲ್ಲಿದ್ದ ತಂದೆಯಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಇಬ್ಬರು ಮಕ್ಕಳು ಸಾವು

ಹಾಗೇ ಬುಧವಾರವೂ ಇದೇ ವಿಚಾರವಾಗಿ ಗಲಾಟೆ ನಡೆದಿದ್ದು, ಶಿವು ಬಲಗೈ ಮೂಳೆ ಮುರಿದು ಹೋಗಿದೆ. ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧವಾದ ಎನ್‌.ಆರ್‌ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version