ಎಲೆಕ್ಷನ್ ಹವಾ | ಭದ್ರಾವತಿ | ಬಿಜೆಪಿಯಿಂದ ಇನ್ನೂ ಭೇದಿಸಲಾಗದ ಕಾಂಗ್ರೆಸ್‌-ಜೆಡಿಎಸ್‌ 'ಭದ್ರʼ ಕೋಟೆ - Vistara News

ಕರ್ನಾಟಕ

ಎಲೆಕ್ಷನ್ ಹವಾ | ಭದ್ರಾವತಿ | ಬಿಜೆಪಿಯಿಂದ ಇನ್ನೂ ಭೇದಿಸಲಾಗದ ಕಾಂಗ್ರೆಸ್‌-ಜೆಡಿಎಸ್‌ ‘ಭದ್ರʼ ಕೋಟೆ

ಭದ್ರಾವತಿ ಕ್ಷೇತ್ರದಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದ ಅಪ್ಪಾಜಿ ಗೌಡರ ನಿಧನದ ಅನುಕಂಪದ ಲಾಭದೊಂದಿಗೆ ಶಾರದಾ ಅಪ್ಪಾಜಿ ಅವರನ್ನು ನಿಲ್ಲಿಸಿದರೆ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಬಿಜೆಪಿ ಲೆಕ್ಕಾಚಾರ ಹಾಕಿತ್ತು. ಆದರೆ ಶಾರದಾ ಅಪ್ಪಾಜಿ ಈಗಾಗಲೇ ಜೆಡಿಎಸ್​ನಲ್ಲಿ ಸಕ್ರಿಯವಾಗಿದ್ದಾರೆ.

VISTARANEWS.COM


on

Assembly Election, assembly elections 2023, Assembly2023, BJP Karnataka, bk sangameshwara, Congress, JDS, karnataka, latest, sharada appaji, Yeddyurappa, yediyurappa news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿವೇಕ ಮಹಾಲೆ, ಶಿವಮೊಗ್ಗ
ಬಿಜೆಪಿಯ ಶಕ್ತಿ ಕೇಂದ್ರ ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಭದ್ರಾವತಿಯಲ್ಲಿ ಮಾತ್ರ ಕಾಂಗ್ರೆಸ್​ ಶಾಸಕರಿದ್ದಾರೆ. ವಿಶೇಷವೆಂದರೆ, ಭದ್ರಾವತಿಯಲ್ಲಿ ಬಿಜೆಪಿ ಈವರೆಗೆ ಒಮ್ಮೆಯೂ ಗೆಲುವು ದಾಖಲಿಸಿಲ್ಲ. ಭದ್ರಾವತಿ ರಾಜಕಾರಣ ಇತರೆ ವಿಧಾನಸಭಾ ಕ್ಷೇತ್ರಕ್ಕಿಂತ ತುಂಬಾ ಭಿನ್ನ. ಇಲ್ಲಿ ಪಕ್ಷಕ್ಕಿಂತ ವ್ಯಕ್ತಿ ರಾಜಕಾರಣಕ್ಕೇ ಹೆಚ್ಚು ಮಹತ್ವ. 

ಭದ್ರಾವತಿ ಕ್ಷೇತ್ರ ಆರಂಭದಿಂದಲೂ ಕಾಂಗ್ರೆಸ್‌ನ ಭದ್ರಕೋಟೆ ಆಗಿತ್ತು. ನಂತರದ ದಿನಗಳಲ್ಲಿ ಕಾರ್ಮಿಕ ಹೋರಾಟದ ಮೂಲಕ ಅಪ್ಟಾಜಿಗೌಡ ಜನಪ್ರಿಯತೆ ಗಳಿಸಿ, ಕ್ಷೇತ್ರದ ರಾಜಕಾರಣಕ್ಕೆ ಎಂಟ್ರಿ ಕೊಟ್ಟರು. 1994ರಿಂದ ಕಳೆದ ಚುನಾವಣೆವರೆಗೂ ಕಾಂಗ್ರೆಸ್‌ನ ಬಿ.ಕೆ. ಸಂಗಮೇಶ್ವರ ಮತ್ತು ಜೆಡಿಎಸ್‌ನ ಅಪ್ಟಾಜಿಗೌಡ ನಡುವೆ ನೇರ ಪೈಪೋಟಿಯಿತ್ತು. ಕ್ಷೇತ್ರದಲ್ಲಿ ಸಂಗಮೇಶ್ವರ ಮತ್ತು ಅಪ್ಪಾಜಿಗೌಡ ಅವರಿಗೆ ಮತದಾರರು ಸಮಾನ ಅವಕಾಶ ನೀಡುತ್ತಾ ಬಂದಿದ್ದಾರೆ. ಇವರಿಬ್ಬರೂ ತಲಾ ಮೂರು ಬಾರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿ.ಕೆ. ಸಂಗಮೇಶ್ವರ್​ ಹಾಲಿ ಶಾಸಕರಾಗಿದ್ದಾರೆ.

ಅಧಿಕಾರಕ್ಕಾಗಿ ಬಿಜೆಪಿ ತವಕ

ಈವರೆಗೂ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಆಗದ ಬಿಜೆಪಿ ಈ ಬಾರಿ ಶತಾಯಗತಾಯ ಗೆಲಲ್ಲೇ ಬೇಕೆಂಬ ಪಣ ತೊಟ್ಟಿದೆ. ಮುಂದಿನ ಚುನಾವಣೆಯಲ್ಲಿ ಭದ್ರಾವತಿ ಸೇರಿದಂತೆ ಜಿಲ್ಲೆಯ ಎಲ್ಲ ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಕಳೆದೊಂದು ದಶಕದಿಂದ ಹೇಳುತ್ತಲೇ ಬಂದಿದ್ದಾರೆ. ಆದರೆ, ಯಶ ಮಾತ್ರ ಇನ್ನೂ ಸಿಕ್ಕಿಲ್ಲ. ಹಾಗಂತ, ಪ್ರಯತ್ನ ನಡೆದೇ ಇಲ್ಲ ಎಂದೇನಿಲ್ಲ. ಸ್ವತಃ ಯಡಿಯೂರಪ್ಪ ಕಾರ್ಯತಂತ್ರ ರೂಪಿಸಿದ್ದರೂ ಗೆಲುವು ಸಿಕ್ಕಿಲ್ಲ. ಕಳೆದ 30 ವರ್ಷಗಳಿಂದ ಸಂಗಮೇಶ್‌ ಮತ್ತು ಅಪ್ಪಾಜಿ ಅವರ ನೇರ ಸ್ಪರ್ಧೆಗೆ ಯಾರಿಗೂ ಪೈಪೋಟಿ ನೀಡಲು ಸಾಧ್ಯವಾಗಿಲ್ಲ. 1994ರ ಚುನಾವಣೆಯಲ್ಲಿ ನವನೀತ್‌ 16,830 ಮತಗಳನ್ನು ಪಡೆದುಕೊಂಡಿದ್ದೆ ಇದುವರೆಗಿನ ಬಿಜೆಪಿಯ ದೊಡ್ಡ ಸಾಧನೆಯಾಗಿದೆ. ಇನ್ನು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ಅಸ್ತಿತ್ವ ತೋರಿಸುವುದೇ ದೊಡ್ಡ ಸವಾಲು.

ಅಪ್ಪಾಜಿ ಗೌಡರ ಆಪ್ತ ಬಿಜೆಪಿ ಅಭ್ಯರ್ಥಿ

2020ರಲ್ಲಿ ಮಾಜಿ ಶಾಸಕ ಜೆಡಿಎಸ್​ನ ಅಪ್ಟಾಜಿಗೌಡ ಕೊರೊನಾದಿಂದಾಗಿ ನಿಧನರಾಗಿದ್ದು, ಜೆಡಿಎಸ್ ಓರ್ವ ಜನಪ್ರಿಯ ನಾಯಕನನ್ನು ಕ್ಷೇತ್ರದಲ್ಲಿ ಕಳೆದುಕೊಂಡಿದೆ. ಅಪ್ಟಾಜಿಗೌಡರ ಅನುಪಸ್ಥಿತಿಯನ್ನು ಬಿಜೆಪಿ ಮುಂದಿನ ಚುನಾವಣೆಯಲ್ಲಿ ಲಾಭವಾಗಿಸಲು ಹವಣಿಸುತ್ತಿದೆ. ಕಳೆದ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ತೀವ್ರ ಕಸರತ್ತು ನಡೆಸಿತ್ತು. ಕಬಡ್ಡಿ ಗಲಾಟೆ ಮುಂದಿಟ್ಟುಕೊಂಡು ಬಿಜೆಪಿ ಹಿಂದುತ್ವ ಅಸ್ತ್ರಕ್ಕೆ ಮುಂದಾಗಿತ್ತು. ಸಚಿವರಾಗಿದ್ದ ಕೆ.ಎಸ್​.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ನಗರಸಭೆ ಚುನಾವಣೆ ಸಂದರ್ಭ ಭದ್ರಾವತಿಯಲ್ಲೇ ಠಿಕಾಣಿ ಹೂಡಿದ್ದರು. ಆದರೆ ಅದು ಎಂದಿನಂತೆ ಫಲ ಕೊಡಲಿಲ್ಲ. ನಗರಸಭೆಯಲ್ಲಿ ಕೇವಲ ಎರಡು ಸ್ಥಾನಕ್ಕೆ ಬಿಜೆಪಿ ಸೀಮಿತವಾಯಿತು. ಇದೀಗ ಅಪ್ಪಾಜಿಗೌಡರ ಆಪ್ತರಾಗಿದ್ದ  ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್​. ಕುಮಾರ್​ ಅವರನ್ನು ಸಂಸದ ರಾಘವೇಂದ್ರ ಅವರು ಬಿಜೆಪಿಯತ್ತ ಸೆಳೆದುಕೊಂಡಿದ್ದಾರೆ. ಅವರಿಗೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ನೀಡುವ ಭರವಸೆ ಕೂಡ ನೀಡಲಾಗಿರುವುದು ಗುಟ್ಟಾಗಿ ಉಳಿದಿಲ್ಲ. 

 ಶಾರದಾ ಅಪ್ಪಾಜಿ ಜೆಡಿಎಸ್​ ಅಭ್ಯರ್ಥಿ

2023ರ ವಿಧಾನಸಭೆ ಚುನಾವಣೆಗೆ ಭದ್ರಾವತಿಯಿಂದ ಜೆಡಿಎಸ್ ಅಭ್ಯರ್ಥಿಯಾಗಿ ಶಾರದಾ ಅಪ್ಪಾಜಿ ಅವರನ್ನು ಕಣಕ್ಕಿಳಿಸುವುದಾಗಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಈಗಾಗಲೇ ಘೋಷಿಸಿದ್ದಾರೆ. ಕಳೆದ ವರ್ಷ ಭದ್ರಾವತಿಯ ಗೋಣೀಬೀಡುನಲ್ಲಿ ಅಪ್ಪಾಜಿ ಗೌಡರು ಅಗಲಿ ಒಂದು ವರ್ಷದ ಹಿನ್ನೆಲೆ ಹಮ್ಮಿಕೊಂಡ ಅಪ್ಪಾಜಿಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಿದ್ದರು. ಅದರಂತೆ ಶಾರದಾ ಗೌಡ ಕ್ಷೇತ್ರಾದ್ಯಂತ ಪ್ರವಾಸ ನಡೆಸುತ್ತಿದ್ದು, ಚುನಾವಣೆ ತಯಾರಿ ಮಾಡಿಕೊಂಡಿದ್ದಾರೆ. ಟಿಕೆಟ್​ ಆಕಾಂಕ್ಷಿಯಾಗಿದ್ದ ಅಪ್ಪಾಜಿಗೌಡರ ಆಪ್ತ ಎಸ್​. ಕುಮಾರ್​ ಇದರಿಂದ ಮುನಿಸುಕೊಂಡು ಕಮಲ ಪಾಳೆಯಕ್ಕೆ ಜಿಗಿದಿದ್ದಾರೆ.

ಬಿಜೆಪಿ ಸಿದ್ಧತೆ ಇಲ್ಲವೇ ಇಲ್ಲ

ಕಳೆದ ವರ್ಷ ನಗರಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಕಮಲ ಪಡೆ ಮತ್ತೆ ಮುದುಡಿಕೊಂಡಿದೆ. ಮುಂದಿನ ಅಭ್ಯರ್ಥಿ ಯಾರು ಎಂಬುದೇ ಅನಿಶ್ಚಿತತೆ ಇರುವುದರಿಂದ ಪ್ರಚಾರದ ನೇತೃತ್ವ ವಹಿಸುವವರು ಯಾರು ಎಂಬ ಪ್ರಶ್ನೆ ಎದ್ದಿದೆ. ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಆಯಾ ಶಾಸಕರು ಕ್ಷೇತ್ರ ಸುತ್ತಾಟ ಆರಂಭಿಸಿದ್ದರೂ ಭದ್ರಾವತಿಯಲ್ಲಿ ಮಾತ್ರ ಮೌನ ಆವರಿಸಿದೆ. ನಗರಸಭೆ ಚುನಾವಣೆ ನಂತರ ಯಾವೊಬ್ಬ ಮುಖಂಡ ಸಂಘಟನೆ ದೃಷ್ಟಿಯಿಂದ ಅತ್ತ ತಿರುಗಿ ನೋಡಿದ್ದಿಲ್ಲ. ಟಿಕೆಟ್​ ಆಕಾಂಕ್ಷಿತರು ಕೂಡ ಕಾದು ನೋಡುವ ತಂತ್ರದಲ್ಲಿದ್ದಾರೆ. ಟಿಕೆಟ್​ ಬಯಸಿ ಕೇಸರಿ ಪಡೆಗೆ ಸೇರಿರುವ ಕುಮಾರ್​ ಅವರಿಗೂ ಇದೀಗ ಟಿಕೆಟ್​ ಸಿಗುತ್ತದೆ ಎಂಬ ಖಾತ್ರಿ ಇದ್ದಂತಿಲ್ಲ. ಪಕ್ಷಕ್ಕೆ ಸೇರ್ಪಡೆಗೊಂಡ ಅವರನ್ನು ಮೂಲ ಬಿಜೆಪಿಗರು ಪಕ್ಷದ ಅಭ್ಯರ್ಥಿ ಎಂದು ಬಿಂಬಿಸುವುದಿರಲಿ, ವೇದಿಕೆಗೂ ಕರೆಯುತ್ತಿಲ್ಲ.

ಈ ಬಾರಿ ಹೊಸಬರಿಗೆ ಅವಕಾಶ

ಮುಂದಿನ ವರ್ಷದ ಚುನಾವಣೆಯಲ್ಲಿ ಹೊಸ ಮುಖ ಗೆದ್ದು ಬರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಜೆಡಿಎಸ್​ನ ಅಪ್ಪಾಜಿ ಗೌಡ ನಿಧನರಾಗಿದ್ದಾರೆ. ಅವರ ಬದಲಿಗೆ ಶಾರದಾ ಅಪ್ಪಾಜಿ ಸ್ಪರ್ಧಿಸಲಿದ್ದು, ಗೆದ್ದರೆ ಮೊದಲ ಬಾರಿ ಶಾಸಕರಾಗುತ್ತಾರೆ. ಇನ್ನು, ಹಾಲಿ ಶಾಸಕ ಕಾಂಗ್ರೆಸ್​ನ ಬಿ.ಕೆ.ಸಂಗಮೇಶ್ವರ ಅನಾರೋಗ್ಯದಿಂದ ಚುನಾವಣೆ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಎನ್ನುತ್ತವೆ ಕಾಂಗ್ರೆಸ್​ ಮೂಲಗಳು. ಹಾಗೇನಾದರೂ ಆದಲ್ಲಿ, ಅವರ ಪುತ್ರ ಅಥವಾ ಸಹೋದರ ಮೊದಲ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇನ್ನು ಬಿಜೆಪಿಯಿಂದ ಹಲವರು ಟಿಕೆಟ್​ ಆಕಾಂಕ್ಷಿತರಿದ್ದರು ಎಲ್ಲವೂ ಹೊಸಮುಖಗಳೇ.

ಶಾರದಾ ಅಪ್ಪಾಜಿ ಸೆಳೆಯಲು ಪ್ರಯತ್ನ

ಮಿಷನ್​ 150ರ ಗುರಿ ತಲುಪಲು ಬಿಜೆಪಿ ಶತಾಯಗತಾಯ ಪ್ರಯತ್ನದಲ್ಲಿದೆ. ಅದರ ಭಾಗವಾಗಿ ಭದ್ರಾವತಿ ಕ್ಷೇತ್ರವನ್ನೂ ದಕ್ಕಿಸಿಕೊಳ್ಳಲು ಬಿಜೆಪಿ ದೃಷ್ಟಿ ನೆಟ್ಟಿದೆ. ಅದರ ಭಾಗವಾಗಿ ಮಾಜಿ ಶಾಸಕ ದಿ.ಅಪ್ಪಾಜಿ ಗೌಡರ ಪತ್ನಿ ಶಾರದಾ ಅಪ್ಪಾಜಿಯನ್ನು ಸೆಳೆಯಲು ಬಿಜೆಪಿ ಮುಂದಾಗಿತ್ತು. ಅಪಾರ ಜನಪ್ರಿಯತೆ ಗಳಿಸಿದ್ದ ಅಪ್ಪಾಜಿ ಗೌಡರ ನಿಧನದ ಅನುಕಂಪದ ಲಾಭದೊಂದಿಗೆ ಶಾರದಾ ಅಪ್ಪಾಜಿ ಅವರನ್ನು ನಿಲ್ಲಿಸಿದರೆ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಬಿಜೆಪಿ ಲೆಕ್ಕಾಚಾರ ಹಾಕಿತ್ತು. ಆದರೆ ಶಾರದಾ ಅಪ್ಪಾಜಿ ಈಗಾಗಲೇ ಜೆಡಿಎಸ್​ನಲ್ಲಿ ಸಕ್ರಿಯವಾಗಿದ್ದಾರೆ. ಕಳೆದ ವರ್ಷವೇ ಜೆಡಿಎಸ್​ ಅಭ್ಯರ್ಥಿಯಾಗಿ ಬಿಂಬಿತಗೊಂಡು, ಪಕ್ಷ ಸಂಘಟನೆಯತ್ತ ಪ್ರಯತ್ನ ನಡೆಸಿದ್ದಾರೆ. ಇತ್ತೀಚೆಗೆ ಜೆಡಿಎಸ್​ ಪಕ್ಷದ ಜನತಾ ಜಲಧಾರೆ ಕಾರ್ಯಕ್ರಮವನ್ನೂ ಯಶಸ್ವಿಯಾಗಿ ಸಂಘಟಿಸಿ, ಗಮನಸೆಳೆದಿದ್ದಾರೆ. ಇದೀಗ ಬಿಜೆಪಿ ಅನಿವಾರ್ಯವಾಗಿ, ಅಪ್ಪಾಜಿ ಗೌಡರ ಆಪ್ತ ಎಸ್​. ಕುಮಾರ್​ ಅವರನ್ನು ಸೆಳೆದಿದೆ. ಆದರೆ ಮುಂದಿನ ಅಭ್ಯರ್ಥಿಯೆಂದು ಬಹಿರಂಗವಾಗಿ ಮಾತ್ರ ಹೇಳಿಲ್ಲ.

2023ಕ್ಕೆ ಸಂಭಾವ್ಯ ಪ್ರತಿಸ್ಪರ್ಧಿಗಳು
1. ಬಿ.ಕೆ.ಸಂಗಮೇಶ್ವರ(ಕಾಂಗ್ರೆಸ್)
2. ಶಾರದಾ ಅಪ್ಪಾಜಿ (ಜೆಡಿಎಸ್‌)
3. ಕೂಡ್ಲಗೆರೆ ಹಾಲೇಶ್, ಎಸ್​. ಕುಮಾರ್ (ಬಿಜೆಪಿ)

Assembly Election, assembly elections 2023, Assembly2023, BJP Karnataka, bk sangameshwara, Congress, JDS, karnataka, latest, sharada appaji, Yeddyurappa, yediyurappa news, ಭದ್ರಾವತಿ
Assembly Election, assembly elections 2023, Assembly2023, BJP Karnataka, bk sangameshwara, Congress, JDS, karnataka, latest, sharada appaji, Yeddyurappa, yediyurappa news, ಭದ್ರಾವತಿ

ಇದನ್ನೂ ಓದಿ | ಎಲೆಕ್ಷನ್‌ ಹವಾ | ಹಾಸನ | ಪ್ರೀತಂ ಗೌಡ ವಿರುದ್ಧ ರೇವಣ್ಣ ಯಾವ ಕಾರ್ಡ್‌ ಬಳಸುತ್ತಾರೆ ಎನ್ನುವುದೇ ಪ್ರಶ್ನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

KEA: ಕೆಸೆಟ್-‌2023ರ ಪರಿಷ್ಕೃತ ಕೀ ಉತ್ತರ ಪ್ರಕಟ; ಹೀಗೆ ಪರಿಶೀಲಿಸಿ

KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ವರ್ಷದ ಜನವರಿ 13ರಂದು ನಡೆಸಿದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2023)ಯ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಅದನ್ನು ಪರಿಶೀಲಿಸುವ ವಿಧಾನ ಇಲ್ಲಿದೆ.

VISTARANEWS.COM


on

kea
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ವರ್ಷದ ಜನವರಿಯಲ್ಲಿ ನಡೆಸಿದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2023)ಯ ಪರಿಷ್ಕೃತ ಕೀ ಉತ್ತರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಜನವರಿ 13ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 42 ವಿವಿಧ ವಿಷಯಗಳ ಪರೀಕ್ಷೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದ ಕೀ ಉತ್ತರಗಳನ್ನು ಜನವರಿ 29ರಂದು ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 7ರ ತನಕ ಅವಕಾಶ ನೀಡಿತ್ತು. ಬಳಿಕ ಕೆಲವು ಅಭ್ಯರ್ಥಿಗಳು ದಿನಾಂಕವನ್ನು ವಿಸ್ತರಿಸಬೇಕೆಂದು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕಾಲಾವಕಾಶವನ್ನು ಫೆಬ್ರವರಿ 17ರ ತನಕ ಮುಂದೂಡಲಾಗಿತ್ತು.

ಅದರಂತೆ ಪರೀಕ್ಷಾ ಪ್ರಾಧಿಕಾರಕ್ಕೆ 23 ಪತ್ರಿಕೆಗಳ ಆಯ್ದ ಕೀ ಉತ್ತರಗಳಿಗೆ ಮಾತ್ರ ಆಕ್ಷೇಪಣೆ ಸಲ್ಲಿಕೆಯಾಗಿದ್ದವು. ಬಳಿಕ ವಿಷಯ ತಜ್ಞರು ಒಟ್ಟು 22 ಪತ್ರಿಕೆಗಳ ಕೆಲವು ಉತ್ತರಗಳಿಗೆ ಬದಲಾವಣೆ ಸೂಚಿಸಿದ್ದರು. ಇನ್ನು ಒಂದು ಪತ್ರಿಕೆಯಲ್ಲಿನ ಆಕ್ಷೇಪಣೆಗೆ ಯಾವುದೇ ಬದಲಾವಣೆ ತಂದಿಲ್ಲ. ಅಲ್ಲದೆ ಉಳಿದ 19 ಪತ್ರಿಕೆಗಳಿಗೆ ಯಾವುದೇ ಆಕ್ಷೇಪಣೆ ಕಂಡು ಬರದ ಹಿನ್ನೆಲೆಯಲ್ಲಿ ಕೀ ಉತ್ತರದಲ್ಲಿ ಯಾವುದೇ ಬದಲಾವಣೆ ಇಲ್ಲ.

”ಆಕ್ಷೇಪಣೆ ವ್ಯಕ್ತವಾದ 23 ಪತ್ರಿಕೆಗಳ ಪ್ರಶ್ನೆಗಳನ್ನು ವಿಷಯ ತಜ್ಞರು ಕೂಲಂಕುಷವಾಗಿ ಪರಿಶೀಲಿಸಿದ್ದಾರೆ. ಆ ಪೈಕಿ ಮನಃಶಾಸ್ತ್ರ ವಿಷಯವನ್ನು ಹೊರತುಪಡಿಸಿ ಉಳಿದ 22 ಪತ್ರಿಕೆಗಳ ಪರಿಷ್ಕೃತ ಕೀ ಉತ್ತರಗಳನ್ನು ಈಗ ಪಕ್ರಟಿಸಲಾಗಿದೆ” ಎಂದು ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಪರಿಷ್ಕೃತ ಕೀ ಉತ್ತರ ಹೀಗೆ ಪರಿಶೀಲಿಸಿ

  • ಪರಿಷ್ಕೃತ ಕೀ ಉತ್ತರ ಪರಿಶೀಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ವೆಬ್‌ಪೇಜ್‌ನ ಮೇಲ್ಭಾಗದಲ್ಲಿರುವ ‘ಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಬಳಿಕ ʼಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ 2023′ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ನಂತರ ತೆರೆದ ವೆಬ್‌ಪೇಜ್‌ನಲ್ಲಿ ಕಂಡುಬರುವ ‘KSET ಪರಿಷ್ಕೃತ ಕೀ ಉತ್ತರಗಳು’ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಆಗ ವಿಷಯವಾರು ಪರಿಷ್ಕೃತ ಕೀ ಉತ್ತರಗಳ ಲಿಂಕ್ ಕಂಡು ಬರುತ್ತದೆ.
  • ನೀವೂ ನೋಡಲು ಇಚ್ಛಿಸುವ ವಿಷಯದ ಕೀ ಉತ್ತರದ ಲಿಂಕ್‌ ಮೇಲೆ ಕ್ಲಿಕ್ ಮಾಡಿ.
  • ತೆರೆದುಕೊಳ್ಳುವ ಪಿಡಿಎಫ್‌ ಪುಟದಲ್ಲಿ ಕೀ ಉತ್ತರ ಪರಿಶೀಲಿಸಿಕೊಳ್ಳಬಹುದು.

ಬೆಂಗಳೂರು ನಗರ ಸೇರಿದಂತೆ ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮಕೂರು, ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಗೆ ಒಟ್ಟು 1,17,302 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದರು. ಈ ಪೈಕಿ ವಾಣಿಜ್ಯಶಾಸ್ತ್ರದ ಪರೀಕ್ಷೆಯನ್ನು ಅತಿ ಹೆಚ್ಚು ಅಂದರೆ 16,000 ಜನ ತೆಗೆದುಕೊಂಡಿದ್ದರು. ಕನ್ನಡ ವಿಷಯವನ್ನು 11 ಸಾವಿರ ಮಂದಿ ಆಯ್ದುಕೊಂಡಿದ್ದರು. ಅತಿ ಕಡಿಮೆ ಅಂದರೆ 25 ಜನ ಭಾಷಾಶಾಸ್ತ್ರದ ವಿಷಯದಲ್ಲಿ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಬಿಗಿ ಭದ್ರತೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಪರೀಕ್ಷೆ ಬರೆದ ಒಟ್ಟು ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಅಂಕ ಪಡೆದ ಶೇ. 6 ಆಕಾಂಕ್ಷಿಗಳಿಗೆ ಅಂತಿಮವಾಗಿ ಕೆಸೆಟ್ ಪರೀಕ್ಷೆಯ ಅರ್ಹತೆ ಸಿಗಲಿದೆ. ಇದರಲ್ಲಿ ರೋಸ್ಟರ್ ನಿಯಮಗಳನ್ನು ಪಾಲಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಇದನ್ನೂ ಓದಿ: KEA Exam Scam: ಸರ್ಕಾರಿ ನೌಕರಿಗೆ ಸೇರಿ ಒಂದೇ ತಿಂಗಳಲ್ಲಿ ಜೈಲು ಸೇರಿದ ವಾರ್ಡನ್!

Continue Reading

ಬೆಂಗಳೂರು

Bengaluru News: ದೇಶದ ಸರ್ವಾಂಗೀಣ ಅಭಿವೃದ್ಧಿ ಆಗಿದ್ದೇ ಮೋದಿಯಿಂದ: ಗೋವಿಂದ ಕಾರಜೋಳ

Bengaluru News: ಪಿಎಂ ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತದಲ್ಲಿ ಅಸಾಧಾರಣ ಅಭಿವೃದ್ಧಿ ಆಗಿದ್ದು, ಪ್ರಪಂಚದ ಎಲ್ಲ ದೇಶಗಳ ಪ್ರೀತಿ, ವಿಶ್ವಾಸ, ಗೌರವವನ್ನು ಭಾರತ ಪಡೆಯುವಂತಾಗಿದೆ. ಭಾರತದ ಜತೆ ವ್ಯಾಪಾರ, ವಹಿವಾಟು, ಸ್ನೇಹಕ್ಕಾಗಿ ಪ್ರಪಂಚದ ಅನೇಕ ದೇಶಗಳು ಹಾತೊರೆಯುತ್ತಿವೆ. ಇದೆಲ್ಲಕ್ಕೂ ಮೋದಿ ಅವರ ಆಡಳಿತವೇ ಕಾರಣ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.

VISTARANEWS.COM


on

Former DCM Govinda Karajola pressmeet
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಅಭಿವೃದ್ಧಿ ಎಂಬುದು ಕೇವಲ ಭಾಷಣಕ್ಕೆ ಸೀಮಿತ ಆಗಲಿಲ್ಲ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಅವರು ಕಾರಣಕರ್ತರಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ (Bengaluru News) ತಿಳಿಸಿದರು.

ನಗರದ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತದಲ್ಲಿ ಅಸಾಧಾರಣ ಅಭಿವೃದ್ಧಿ ಆಗಿದೆ. ಪ್ರಪಂಚದ ಎಲ್ಲ ದೇಶಗಳ ಪ್ರೀತಿ, ವಿಶ್ವಾಸ, ಗೌರವವನ್ನು ಭಾರತ ಪಡೆಯುವಂತಾಗಿದೆ. ಭಾರತದ ಜತೆ ವ್ಯಾಪಾರ, ವಹಿವಾಟು, ಸ್ನೇಹಕ್ಕಾಗಿ ಪ್ರಪಂಚದ ಅನೇಕ ದೇಶಗಳು ಹಾತೊರೆಯುತ್ತಿವೆ. ಇದೆಲ್ಲಕ್ಕೂ ಮೋದಿ ಅವರ ಆಡಳಿತವೇ ಕಾರಣ ಎಂದು ತಿಳಿಸಿದರು.

ಇದನ್ನೂ ಓದಿ: SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

ನನ್ನ ಜೀವನದಲ್ಲಿ ಇದೊಂದು ಸುವರ್ಣಾವಕಾಶ ಎಂದು ಭಾವಿಸುವೆ. ನರೇಂದ್ರ ಮೋದಿ ಅವರು ಕಳೆದ 23 ವರ್ಷಗಳಿಂದ ಸಾಂವಿಧಾನಿಕ ಹುದ್ದೆಯಲ್ಲಿದ್ದು, ಗುಜರಾತ್ ಮುಖ್ಯಮಂತ್ರಿಗಳಾಗಿ, ದೇಶದ ಪ್ರಧಾನಮಂತ್ರಿಗಳಾಗಿ ದೇಶದ ಅಭಿವೃದ್ಧಿ ಮಾಡಿದ್ದಾರೆ. ಅಲ್ಲದೆ ಕಳಂಕರಹಿತ ರಾಜಕಾರಣ ಮಾಡಿದ ಏಕೈಕ ಶ್ರೇಷ್ಠ ವ್ಯಕ್ತಿ ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಒಂದೇ ಪಕ್ಷದವರು 60 ವರ್ಷಗಳ ಕಾಲ ಆಡಳಿತ ಮಾಡಿದ್ದಾರೆ. ಅವರು ಕಳಂಕ ಹೊತ್ತುಕೊಂಡರು. ಆದರೆ ಮೋದಿ ಅವರು ದೇಶದ ಅಭಿವೃದ್ಧಿ ಮಾಡಿ ಪ್ರಪಂಚದ ಅನೇಕ ದೇಶಗಳ ಪ್ರೀತಿ, ವಿಶ್ವಾಸ ಗಳಿಸಿದ್ದಾರೆ. ಅವರ ಜತೆ ಲೋಕಸಭಾ ಸದಸ್ಯನಾಗಿ ಕೆಲಸ ಮಾಡುವ ಅವಕಾಶ ನನಗೆ ಲಭಿಸುತ್ತಿರುವುದು ಜೀವನದ ಸುವರ್ಣಾವಕಾಶ ಎನ್ನಲು ಕಾರಣ ಎಂದು ವಿವರಿಸಿದರು.

ಮೋದಿ ಅವರ ನೇತೃತ್ವದ ಕಾರ್ಯಕ್ರಮಗಳು, ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಕಾಲದ ಅಭಿವೃದ್ಧಿ ಕಾರ್ಯಗಳನ್ನು ತಿಳಿಸುವ ಮೂಲಕ ಮತಯಾಚನೆ ಮಾಡಲಿದ್ದೇವೆ. ಜೆಡಿಎಸ್ ಪಕ್ಷವು ಎನ್‍ಡಿಎ ತೆಕ್ಕೆಗೆ ಬಂದಿರುವುದು ಸಂತಸದ ವಿಚಾರ ಎಂದು ತಿಳಿಸಿದರು.

ಇದನ್ನೂ ಓದಿ: Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ರುದ್ರಯ್ಯ, ಲಕ್ಷ್ಮೀನಾರಾಯಣ್, ರಾಜ್ಯ ವಕ್ತಾರರಾದ ಮೋಹನ್ ವಿಶ್ವ, ಸುರಭಿ ಹೋದಿಗೆರೆ, ವೆಂಕಟೇಶ್ ದೊಡ್ಡೇರಿ ಇದ್ದರು.

Continue Reading

ಪ್ರಮುಖ ಸುದ್ದಿ

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Women Slapped : ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Women Slapped
Koo

ಬೆಂಗಳೂರು: ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ (PTI) ಮಹಿಳಾ ವರದಿಗಾರರ (Female Journalist) ಮೇಲೆ ಮತ್ತೊಂದು ಸುದ್ದಿ ಸಂಸ್ಥೆ ಎಎನ್ಐನಲ್ಲಿ (ANI) ಕೆಲಸ ಮಾಡುತ್ತಿರುವ ಪತ್ರಕರ್ತನೊಬ್ಬ (Male Journalist) ದೈಹಿಕವಾಗಿ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ. ಉಪ ಮುಖ್ಯಮಂತ್ರಿ ಡಿ . ಕೆ. ಶಿವಕುಮಾರ್ ಅವರು ನಡೆಸಿದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಇಬ್ಬರೂ ವರದಿಗಾರರು ತೀವ್ರ ವಾಗ್ವಾದ ನಡೆಸಿದ್ದು, ಅಂತಿಮವಾಗಿ ಎಎನ್ಐ ವರದಿಗಾರ ಪಿಟಿಐ ವರದಿಗಾರ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇತರ ಸುದ್ದಿ ಸಂಸ್ಥೆಗೆ ಸೇರಿದವರು ಎಎನ್ಐ ವರದಿಗಾರನನ್ನು ದೂರ ತಳ್ಳಿ ಇನ್ನಷ್ಟು ಗಲಾಟೆಯಾಗದಂತೆ ನೋಡಿಕೊಂಡಿದ್ದಾರೆ. ಇವೆಲ್ಲವು ವಿಡಿಯೊದಲ್ಲಿ ದಾಖಲಾಗಿದೆ.

“ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಿಟಿಐ ಯುವ ವರದಿಗಾರ್ತಿಯೊಬ್ಬರ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಲೈಂಗಿಕ ಕಿರುಕುಳ ನೀಡಲಾಗಿದೆ. ಇದು ಎಎನ್ಐ ವರದಿಗಾರನ ಅಸಹ್ಯಕರ ವರ್ತನೆ. ಎಎನ್ಐ ತನ್ನ ಸಿಬ್ಬಂದಿಯ ಇಂತಹ ನಡವಳಿಕೆಯನ್ನು ಖಂಡಿಸುತ್ತದೆಯೇ? ಎಂದು ಪಿಟಿಐ ವಿಡಿಯೊ ಸಮೇತ ಟ್ವೀಟ್ ಮಾಡಿದೆ.

ಪಿಟಿಐ ಈ ಘಟನೆಯನ್ನು ಖಂಡಿಸಿದೆ ಮತ್ತು ವೀಡಿಯೊದಲ್ಲಿ ಕಾಣಿಸಿಕೊಂಡ ತಮ್ಮ ಉದ್ಯೋಗಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಎನ್ಐ ಆಡಳಿತ ಮಂಡಳಿಗೆ ಮನವಿ ಮಾಡಿದೆ. ಎಫ್ಐಆರ್ ಕೂಡ ದಾಖಲಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡುವುದಾಗಿ ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ : Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

“ನಮ್ಮ ಆಡಳಿತ ಮಂಡಳಿ ಮತ್ತು ಪತ್ರಕರ್ತೆಯ ಸಹೋದ್ಯೋಗಿಗಳು ಆಕ್ರೋಶಗೊಂಡಿದ್ದಾರೆ ಮತ್ತು ಈ ಅಪ್ರಚೋದಿತ ಹಲ್ಲೆಯನ್ನು ಬಲವಾಗಿ ಖಂಡಿಸಿದ್ದಾರೆ. ಪಿಟಿಐ ತನ್ನ ಉದ್ಯೋಗಿಗಳನ್ನು ರಕ್ಷಿಸಲು ಬದ್ಧವಾಗಿದೆ. ಆಘಾತಕಾರಿ ಘಟನೆಯ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ. ಪಿಟಿಐ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ದೂರು ಸಲ್ಲಿಸಿದ್ದೇವೆ” ಎಂದು ಪಿಟಿಐ ಹೇಳಿಕೆ ಬಿಡುಗಡೆ ಮಾಡಿದೆ.

ಘಟನೆಯ ಬಗ್ಗೆ ಅನೇಕ ನಾಯಕರು ಕಳವಳ ವ್ಯಕ್ತಪಡಿಸಿದರು ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ಮತ್ತು ಬಿಜೆಪಿ ನಾಯಕಿ ಖುಷ್ಬೂ ಸುಂದರ್, “ಇಂದು ಬೆಂಗಳೂರಿನಲ್ಲಿ ಪಿಟಿಐ ಪತ್ರಕರ್ತೆಯನ್ನು ದೈಹಿಕವಾಗಿ ಮತ್ತು ಮೌಖಿಕವಾಗಿ ನಿಂದಿಸಿದ ಪುರುಷ ಪತ್ರಕರ್ತನ ನಡವಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಯಸುತ್ತೇನೆ ಎಂದು ಬರೆದಿದ್ದಾರೆ.

ಏತನ್ಮಧ್ಯೆ, ಎಎನ್ಐ ವರದಿಗಾರ ತನ್ನ ಮೇಲೆ ಮೊದಲು ಮಹಿಳಾ ಪತ್ರಕರ್ತೆ ಹಲ್ಲೆ ನಡೆಸಿದ್ದರು ಎಂದು ಪ್ರತಿ ಎಫ್ಐಆರ್ ದಾಖಲಿಸಲಿದ್ದಾರೆ. ಅದಕ್ಕೆ ಪೂರಕವಾಗಿ ಪರಚಿದ ಮುಖದ ಚಿತ್ರ ಹಾಕಿದ್ದಾರೆ. ಆದಾಗ್ಯೂ, ಎಎನ್ಐ ಪತ್ರಕರ್ತ ನವೀನ್ ಕಪೂರ್ ನೀಡಿದ ಸ್ಪಷ್ಟೀಕರಣದ ಪ್ರಕಾರ, ಉದ್ಯೋಗದಾತರು ಅವರನ್ನು ತಾತ್ಕಾಲಿಕವಾಗಿ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

Continue Reading

ಕರ್ನಾಟಕ

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Road Accident: ಟಾಟಾ ಏಸ್‌ ವಾಹನದ ಟೈರ್‌ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಣೇಬೆನ್ನೂರು ತಾಲೂಕಿನ ಹಲಗೇರಿ ಬಳಿ ಈ ಘಟನೆ ನಡೆದಿದೆ.

VISTARANEWS.COM


on

Tata Ace vehicle overturned Two persons dead five seriously injured
Koo

ಹಾವೇರಿ: ಟಾಟಾ ಏಸ್‌ ವಾಹನದ ಟೈರ್‌ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಣೇಬೆನ್ನೂರು ತಾಲೂಕಿನ ಹಲಗೇರಿ ಬಳಿ (Road Accident) ಗುರುವಾರ ಸಂಜೆ ಈ ಘಟನೆ ನಡೆದಿದೆ.

ಲಕ್ಷ್ಮಣ ಗುಡ್ಡಪ್ಪ ಕುಳಗಟ್ಟಿ (50), ಸೈನಾಜಬೇಗಂ ಅಮಾನುಲ್ಲಾ (30) ಮೃತ ದುರ್ದೈವಿಗಳು. ಗದಿಗೆಮ್ಮ ಕುಳಗಟ್ಟಿ (40), ಬೀರಪ್ಪ ಬುಳ್ಳಾಪುರ (80), ಅಮಾನುಲ್ಲಾ ದಿವಾನ ಅಜ್ಜಣ್ಣನವರ (38), ಅನಿಶಾಬಾನು ದಿವಾನ ಅಜ್ಜಣ್ಣನವರ (11), ಜೀಶಾನ ಗುಡ್ಡಮ್ಮನವರ (9) ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

ಚಿಕ್ಕಕಬ್ಬಾರ ಗ್ರಾಮದಿಂದ ರಾಣೆಬೆನ್ನೂರಿನ ಎಪಿಎಂಸಿಗೆ ಸೂರ್ಯಕಾಂತಿ ಸಾಗಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹಲಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Continue Reading
Advertisement
kea
ಕರ್ನಾಟಕ15 mins ago

KEA: ಕೆಸೆಟ್-‌2023ರ ಪರಿಷ್ಕೃತ ಕೀ ಉತ್ತರ ಪ್ರಕಟ; ಹೀಗೆ ಪರಿಶೀಲಿಸಿ

Viral News: Holi at delhi metro
ದೇಶ60 mins ago

Viral News : ವೈರಲ್​ ವಿಡಿಯೊಗಾಗಿ ಅಸಭ್ಯವಾಗಿ ವರ್ತಿಸಿದ ಡೆಲ್ಲಿ ಯುವತಿಯರು ಅರೆಸ್ಟ್​!

Water Crisis
ಪ್ರಮುಖ ಸುದ್ದಿ1 hour ago

ವಿಸ್ತಾರ ಸಂಪಾದಕೀಯ: ನೀರಿನ ಸಮಸ್ಯೆಗೆ ಜನರೇ ಉತ್ತರ ಕಂಡುಕೊಳ್ಳಬೇಕು

IPL 2024- Riyan Parag
ಪ್ರಮುಖ ಸುದ್ದಿ1 hour ago

IPL 2024 : ರಾಯಲ್ಸ್​ಗೆ 2ನೇ ವಿಜಯ , ಡೆಲ್ಲಿಗೆ ಸತತ ಎರಡನೇ ಸೋಲು

Dolly Chaiwala
ವೈರಲ್ ನ್ಯೂಸ್2 hours ago

Dolly Chaiwala: ಅಬ್ಬಬ್ಬಾ ಲಾಟರಿ: ಬಿಲ್ ಗೇಟ್ಸ್ ಭೇಟಿ ಆಯ್ತು; ಈಗ ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್‌ವಾಲಾ ಮಿಂಚು

Mukthar Ansari
ಪ್ರಮುಖ ಸುದ್ದಿ2 hours ago

Mukhtar Ansari : ಗ್ಯಾಂಗ್​ಸ್ಟರ್​ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

Former DCM Govinda Karajola pressmeet
ಬೆಂಗಳೂರು2 hours ago

Bengaluru News: ದೇಶದ ಸರ್ವಾಂಗೀಣ ಅಭಿವೃದ್ಧಿ ಆಗಿದ್ದೇ ಮೋದಿಯಿಂದ: ಗೋವಿಂದ ಕಾರಜೋಳ

crime news
ಕ್ರೈಂ3 hours ago

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Women Slapped
ಪ್ರಮುಖ ಸುದ್ದಿ3 hours ago

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Tata Ace vehicle overturned Two persons dead five seriously injured
ಕರ್ನಾಟಕ3 hours ago

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202411 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202413 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ20 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌