Site icon Vistara News

ಬಿ.ಎಲ್. ಸಂತೋಷ್‌ ವಿರುದ್ಧ ಪೋಸ್ಟ್‌: ದಿನೇಶ್ ಅಮಿನ್ ಮಟ್ಟು ವಿರುದ್ಧ ಕೇಸ್‌, ಒಬ್ಬನ ಬಂಧನ

BL Santosh

BL Santosh

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತ ದಿನೇಶ್‌ ಅಮಿನ್‌ ಮಟ್ಟು, ಬಿಂದು ಗೌಡ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಾಗೆಯೇ, ಸುಳ್ಳು ಹೇಳಿಕೆ ಇರುವ ಪತ್ರಿಕಾ ವರದಿಯನ್ನು ಡಿಸೈನ್‌ ಮಾಡಿದ್ದ ದಿಲೀಪ್‌ ಗೌಡ ಎಂಬ ಮೈಸೂರು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಅವಹೇಳನಕಾರಿ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದ ಹಲವು ಜನರ ವಿರುದ್ಧ ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಿಸಲಾಗಿದೆ. ಬಿಜೆಪಿ ಕಾನೂನು ಘಟಕದ ಯಶವಂತ ಅವರು ದೂರು ದಾಖಲಿಸಿದ್ದಾರೆ. ಇದಕ್ಕೂ ಮೊದಲು ಕೂಡ ಬಿಜೆಪಿಯು ಪೋಸ್ಟ್‌ ಕುರಿತು ದೂರು ನೀಡಿದ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸರು ದಿಲೀಪ್‌ ಗೌಡ ಎಂಬ ಯುವಕನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Karnataka Election: ಲೂಟಿ ಸರ್ಕಾರ ಬಿಡಿ, ಕಾಂಗ್ರೆಸ್‌ಗೆ ಮತ ಕೊಡಿ; ಹುಬ್ಬಳ್ಳಿಯಲ್ಲಿ ಸೋನಿಯಾ ಗಾಂಧಿ ಕರೆ

ವೈರಲ್‌ ಆಗಿದ್ದ ಪೋಸ್ಟ್‌

ಬೈರಪ್ಪ ಹರೀಶ್ ಕುಮಾರ್, ಹೇಮಂತ್ ಕುಮಾರ್, ದಿನೇಶ್ ಅಮಿನ್ ಮಟ್ಟು, ಬಿಂದು ಗೌಡ, ದಿಲೀಪ್ ಗೌಡ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. “ನಾವು ಹಿಂದುತ್ವದಲ್ಲಿ ಮುಂದುವರೆಯುತ್ತೇವೆ, ಲಿಂಗಾಯತರ ಅಗತ್ಯವಿಲ್ಲ” ಎಂದು ಬಿ.ಎಲ್. ಸಂತೋಷ್ ಹೇಳಿರುವುದಾಗಿ ತಲೆಬರಹವುಳ್ಳ ಪೋಸ್ಟ್ ವೈರಲ್‌ ಆಗಿತ್ತು. ಪತ್ರಿಕೆಯಲ್ಲಿ ವರದಿಯಾದಂತೆ ಪೋಸ್ಟರ್‌ ಡಿಸೈನ್‌ ಮಾಡಿ, ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿತ್ತು.

ಪೋಸ್ಟರ್‌ಅನ್ನು ದಿನೇಶ್‌ ಅಮಿನ್‌ ಮಟ್ಟು ಸೇರಿ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಹಾಗೆಯೇ, ಬಿ.ಎಲ್.ಸಂತೋಷ್‌ ವಿರುದ್ಧ ಹರಿಹಾಯ್ದಿದ್ದರು. ಪೋಸ್ಟ್‌ ಕುರಿತು ಆಕ್ರೋಶ ವ್ಯಕ್ತವಾಗುತ್ತಲೇ ದಿನೇಶ್‌ ಅಮಿನ್‌ ಮಟ್ಟು ಅವರು ಬಳಿಕ ಪೋಸ್ಟ್‌ ಡಿಲೀಟ್‌ ಮಾಡಿದ್ದರು.

Exit mobile version