Site icon Vistara News

ಶಿವಮೊಗ್ಗದ ಬ್ರಹ್ಮ-ವಿಷ್ಣು-ಮಹೇಶ್ವರ ದೇವಸ್ಥಾನದ ರಥಕ್ಕೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು; ತೀವ್ರ ಖಂಡನೆ

poured petrol on the chariot of Brahma Vishnu Maheshwara temple in Shivamogga and set it on fire

ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿರುವ ಬ್ರಹ್ಮ -ವಿಷ್ಣು -ಮಹೇಶ್ವರ ದೇವಸ್ಥಾನದ ಆವರಣದಲ್ಲಿರುವ ರಥಕ್ಕೆ ಕಿಡಿಗೇಡಿಗಳು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿರುವ ಘಟನೆ ಸೋಮವಾರ (ಮಾ.6) ತಡರಾತ್ರಿ ನಡೆದಿದ್ದು, ಮಂಗಳವಾರ (ಮಾ.7) ಬೆಳಕಿಗೆ ಬಂದಿದೆ.

ಘಟನೆಯಲ್ಲಿ ರಥಕ್ಕೆ ಬಹುಪಾಲು ಹಾನಿಯಾಗಿದೆ. ಮಾಸ್ಕ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ ಎಸೆಗಲಾಗಿದೆ ಎಂಬುದು ತಿಳಿದುಬಂದಿದೆ. ಇವರು ಯಾರು? ಯಾವ ಕಾರಣಕ್ಕೆ ರಥಕ್ಕೆ ಬೆಂಕಿ ಹಚ್ಚಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ಈ ಸಂಬಂಧ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಭಕ್ತರು ತೀವ್ರ ಆಕ್ರೋಶವನ್ನು ಹೊರಹಾಕಿದ್ದು, ತಪ್ಪಿತಸ್ಥರು ಯಾರೇ ಇರಲಿ ಬಂಧಿಸಿ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Foxconn issue : ಫಾಕ್ಸ್‌ ಕಾನ್‌ ಒಪ್ಪಂದ ಸುಳ್ಳು ಎಂದ ದಿನೇಶ್‌ ಗುಂಡೂ ರಾವ್‌, ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಆಕ್ರೋಶ

ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಸುತ್ತಮುತ್ತಲು ಇರುವ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

Exit mobile version