ಪ್ರತಾಪ್‌ ಸಿಂಹ ಸಂದರ್ಶನ: ಭರವಸೆ ಈಡೇರಿಸಲು ಸಿದ್ದರಾಮಯ್ಯ ವಿಫಲ; ದೇಶದ ಭವ್ಯ ಭವಿಷ್ಯಕ್ಕಾಗಿ ಮತ್ತೊಮ್ಮೆ ಮೋದಿ ಗೆಲ್ಲಬೇಕು Vistara News

ಕರ್ನಾಟಕ

ಪ್ರತಾಪ್‌ ಸಿಂಹ ಸಂದರ್ಶನ: ಭರವಸೆ ಈಡೇರಿಸಲು ಸಿದ್ದರಾಮಯ್ಯ ವಿಫಲ; ದೇಶದ ಭವ್ಯ ಭವಿಷ್ಯಕ್ಕಾಗಿ ಮತ್ತೊಮ್ಮೆ ಮೋದಿ ಗೆಲ್ಲಬೇಕು

Power Point with HPK: ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಫಲ, ಪಠ್ಯ ಪರಿಷ್ಕರಣೆ, ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸಂಸದ ಪ್ರತಾಪ್‌ ಸಿಂಹ ನೇರ ಮಾತುಗಳನ್ನು ಹೇಳಿದ್ದಾರೆ. ಅಲ್ಲದೆ, ನರೇಂದ್ರ ಮೋದಿ ಅವರು ಮುಂದಿನ ಚುನಾವಣೆಯಲ್ಲಿ ಏಕೆ ಗೆಲ್ಲಬೇಕು ಎಂದೂ ವಿವರಿಸಿದ್ದಾರೆ. ಅವರ ಸಂದರ್ಶನದ ಸಾರ ಇಲ್ಲಿದೆ.

VISTARANEWS.COM


on

Power Point with HPK MP Pratap Simha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚುನಾವಣೆಗೆ ಮೊದಲು ಘೋಷಣೆ ಮಾಡಿದ್ದ ಗ್ಯಾರಂಟಿಗಳನ್ನು ಈಡೇರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ದೇಶದ ಭವ್ಯ ಭವಿಷ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಗೆಲ್ಲಬೇಕು. ಮೋದಿ ವಿರುದ್ಧ ಭಾರತದಲ್ಲಿ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲೂ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ. ಮುಂಬರುವ ಚುನಾವಣೆಯಲ್ಲಿ ಮೋದಿಯವರನ್ನು ಗೆಲ್ಲಿಸುವ ಮೂಲಕ ಭಾರತವನ್ನು ವಿಶ್ವ ಗುರು ಮಾಡುವ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕು ಎಂದು ಸಂಸದ ಪ್ರತಾಪ್‌ ಸಿಂಹ ಅವರು ಪವರ್‌ ಪಾಯಿಂಟ್‌ ವಿಥ್‌ ಎಚ್‌ಪಿಕೆ (Power Point with HPK) ಸಂದರ್ಶನದಲ್ಲಿ ಹೇಳಿದರು.

ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಂಸದ ಪ್ರತಾಪ್‌ ಸಿಂಹ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ನಿರ್ಧಾರಗಳು, ಗ್ಯಾರಂಟಿ ಯೋಜನೆಗಳು, ಪಠ್ಯಪರಿಷ್ಕರಣೆ, ದೇಶದಲ್ಲಿ ನರೇಂದ್ರ ಮೋದಿ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಪಿತೂರಿ, ಮತಾಂತರ, ಗೋ ಹತ್ಯೆ ನಿಷೇಧ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮನದಾಳದ ಮಾತುಗಳನ್ನು ಆಡಿದ್ದಾರೆ. ಅವರ ಸಂದರ್ಶನದ ಸಾರ ಇಲ್ಲಿದೆ.

ಸಿದ್ದರಾಮಯ್ಯ ಹೇಳಿದಂತೆ ಅಧಿಕಾರ ಬಿಟ್ಟು ಹೋಗಲಿ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದು ಇನ್ನೂ ಒಂದು ತಿಂಗಳಾಗಿದೆ. ಈಗಲೇ ನೀವು ಅವರ ವಿರುದ್ಧ ಆಕ್ರಮಣ ಪ್ರಾರಂಭಿಸಿದ್ದೀರಿ, ಸ್ವಲ್ಪ ಕಾಲಾವಕಾಶವನ್ನು ಕೊಡಬೇಕು ಎಂದು ನಿಮಗೆ ಅನ್ನಿಸುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪ್‌ ಸಿಂಹ, ವಿಧಾನಸಭಾ ಚುನಾವಣೆ ನಡೆಯುವ ಆರು ತಿಂಗಳ ಹಿಂದಿನಿಂದಲೇ ಕಾಂಗ್ರೆಸ್‌ನವರು ಒಂದೊಂದೇ ಗ್ಯಾರಂಟಿಗಳನ್ನು ಘೋಷಣೆ ಮಾಡಿಕೊಳ್ಳುತ್ತಾ ಬಂದರು. ಸಿಕ್ಕ ಸಿಕ್ಕ ವೇದಿಕೆಯಲ್ಲೆಲ್ಲ ಸಿದ್ದರಾಮಯ್ಯ ಅವರು, ” ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿಯೇ ಘೋಷಣೆ ಮಾಡಿದ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಘಂಟಾಘೋಷವಾಗಿ ಹೇಳಿಕೆ ನೀಡಿದ್ದರು. ಹೀಗಾಗಿ ಅವರ ಐದು ಗ್ಯಾರಂಟಿಗಳನ್ನು ನಂಬಿಕೊಂಡು ಜನ ಮತ ಚಲಾವಣೆ ಮಾಡಿದ್ದಾರೆ. ಮೇ 20ಕ್ಕೆ ಸಿದ್ದರಾಮಯ್ಯ ಅವರು ಪ್ರಮಾಣ ವಚನವನ್ನು ಸ್ವೀಕಾರ ಮಾಡಿದರು. ಪ್ರಮಾಣ ವಚನ ಸ್ವೀಕಾರ ಮಾಡಿ ಒಂದು ಕ್ಯಾಬಿನೆಟ್‌ ಸಭೆಯನ್ನೂ ಮಾಡಿದರು. ಅಂದು ಐದು ಗ್ಯಾರಂಟಿಯನ್ನು ಜಾರಿಗೆ ತರುವುದಾಗಿ ಸರ್ಕಾರಿ ಆದೇಶವನ್ನು ಮಾಡಿದರೆ ಹೊರತು 24 ಗಂಟೆಯೊಳಗೆ ಅನುಷ್ಠಾನ ಮಾಡಿದರಾ ಎಂದು ಪ್ರಶ್ನೆ ಮಾಡಿದರು.

ಗ್ಯಾರಂಟಿ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಗುಡುಗಿದ್ದು ಹೀಗೆ; ಇಲ್ಲಿದೆ ನೋಡಿ ವಿಡಿಯೊ

ಇದನ್ನೂ ಓದಿ: Siddaramaiah: ಅಚ್ಛೇ ದಿನ್‌ ಸುಳ್ಳಾಗಿದೆ, ಮೋದಿ ಹವಾ ಡೌನ್ ಆಗಿದೆ: ಮಹಾರಾಷ್ಟ್ರದಲ್ಲಿ ಕತ್ತಿ ಝಳಪಿಸಿದ ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದು 24 ಗಂಟೆಯಲ್ಲಿ ಗ್ಯಾರಂಟಿಗಳನ್ನು ಅನುಷ್ಠಾನ ಮಾಡುವುದಿಲ್ಲ ಎಂದಾದರೆ ಒಂದು ಕ್ಷಣವೂ ಖರ್ಚಿಯಲ್ಲಿ ಕೂರುವುದಿಲ್ಲ ಎಂದು ಸಿದ್ದರಾಮಯ್ಯ ಅವರೇ ಹೇಳಿಕೊಂಡಿದ್ದರು. ಈಗ ಒಂದು ತಿಂಗಳಾಗಿ ಹೋಯಿತು. ಹಾಗಾದರೆ ನಾವು ಈಗಲೂ ಮಾತನಾಡಬಾರದಾ? ನೀವು ಹೇಳಿದ ಹಾಗೆ ನಡೆದುಕೊಳ್ಳಿ ಅಂದಷ್ಟೇ ನಾವು ಕೇಳುತ್ತಿದ್ದೇವೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ಏ ಮಹದೇವಪ್ಪ ನಿಂಗೂ ಕೊಡ್ತೇನೆ ಕಣಯ್ಯಾ ಅಂದವರು ಈಗೇಕೆ ಕೊಟ್ಟಿಲ್ಲ?

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರು ಚುನಾವಣೆಗೆ ಮುಂಚೆ ಪ್ರಚಾರ ಭಾಷಣದಲ್ಲಿ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಯೋಜನೆ, ಯುವ ನಿಧಿಯಾಗಲಿ ಯಾವುದರ ಬಗ್ಗೆಯಾದರೂ ಕಂಡೀಷನ್‌ ಬಗ್ಗೆ ಮಾತನಾಡಿದ್ದರಾ? ಆಗ ಎಲ್ಲರಿಗೂ ಕೊಡುತ್ತೇವೆ ಎಂದು ಹೇಳಿದ್ದರು. ಇನ್ನು ಸಿದ್ದರಾಮಯ್ಯ ಅವರು ನನ್ನ ಹೆಂಡರಿಗೂ ಕೊಡುತ್ತೇನೆ ಎಂದು ಹೇಳಿದ್ದರು. ಏ ಮಹದೇವಪ್ಪ ನಿಂಗೂ ಕೊಡ್ತೇನೆ ಕಣಯ್ಯಾ ಅಂತ ಹೇಳಿದ್ದರು. ಈಗ ಯಾಕೆ ಕೊಟ್ಟಿಲ್ಲ? ಇದನ್ನು ನಾವೀಗ ಪ್ರಶ್ನೆ ಮಾಡುತ್ತಿದ್ದೇವೆ. ಜನರು ನಮ್ಮನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿರುವುದರಿಂದ ನಾವೀಗ ಜನರ ಪರವಾಗಿ ಪ್ರಶ್ನೆ ಮಾಡುತ್ತಿದ್ದೇವೆ ಎಂದು ಪ್ರತಾಪ್‌ ಹೇಳಿದರು.

ಹಿಂದು ವಿರೋಧಿ ಸರ್ಕಾರ ಎಂದ ಪ್ರತಾಪ್‌ ಸಿಂಹ

ಧರ್ಮಾಂಧತೆ ಇದೆ ಎಂಬುದಾಗಿ ಅರ್ಥವಲ್ಲವೇ?

ಸಿದ್ದರಾಮಯ್ಯ ಅವರ ಸರ್ಕಾರವನ್ನು ಹಿಂದು ವಿರೋಧಿ ಸರ್ಕಾರ ಎಂದು ನಾನು ಹೇಳಲು ಕಾರಣವೂ ಇದೆ. ನಾನು ಮೈಸೂರು ಹಾಗೂ ಕೊಡಗಿನ ಸಂಸದನಾಗಿದ್ದೇನೆ. ಇನ್ನು ಯಾವ ಮುಸ್ಲಿಂ ವ್ಯಕ್ತಿಯೂ ಬಂದು ಟಿಪ್ಪು ಜಯಂತಿಯನ್ನು ಮಾಡಿ ಎಂದು ಅವರನ್ನು ಕೇಳಿರಲಿಲ್ಲ. ಮುಸ್ಲಿಮರಲ್ಲಿ ಅಲ್ಲಾಹುವನ್ನು ಬಿಟ್ಟರೆ ಬೇರೆ ಯಾರೂ ಸಹ ಪೂಜೆಗೆ ಅರ್ಹರಲ್ಲ. ಅಲ್ಲಿ ಸಂಗೀತ ಕೇಳುವುದು ಸಹ ನಿಷಿದ್ಧ. ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವಂತೆ ಇಲ್ಲ. ಮುಸ್ಲಿಮರು ಕೇಳದೇ ಇದ್ದರೂ ಇವರು ಯಾಕೆ ಟಿಪ್ಪು ಜಯಂತಿಯನ್ನು ಮಾಡಲು ಮುಂದಾದರು? ಅವರ ಮನಸ್ಥಿತಿ ಏನು ಎಂದು ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದರು.

ಈಗ ವಿದ್ಯುತ್‌ ಬಿಲ್‌ ಅನ್ನು ಹೆಚ್ಚಳ ಮಾಡಲಾಗಿದೆ. ಇದರ ಬಗ್ಗೆ ಕೇಳಿದರೆ ಬಿಜೆಪಿ ಸರ್ಕಾರ ಮಾಡಿದ್ದು ಎಂದು ಬೊಟ್ಟು ಮಾಡಲಾಗುತ್ತಿದೆ. ಆದರೆ, ಇದನ್ನು ಮಾಡಿರುವುದು ಕೆಇಆರ್‌ಸಿ ಆಗಿದೆ. ಅದೊಂದು ಸ್ವತಂತ್ರ ಸಂಸ್ಥೆಯಾಗಿದ್ದು, ಚುನಾವಣೆ ಮುಗಿದ ಬಳಿಕ ಅದು ನಿರ್ಧಾರವನ್ನು ತೆಗೆದುಕೊಂಡಿದೆ. ಅದು ಏನೇ ಆದೇಶ ಮಾಡಿದ್ದರೂ ಸಹ ಇವರು ಮುಖ್ಯಮಂತ್ರಿಯಾಗಿ ಅಧಿಕಾರವನ್ನು ಪಡೆದ ನಂತರ ಸರ್ಕಾರಿ ಆದೇಶವನ್ನು ಹೊರಡಿಸಬಹುದಿತ್ತು. ಆದರೆ, ನಮ್ಮ ಪ್ರಶ್ನೆ ಇಷ್ಟೇ. ಕ್ರಿಶ್ಚಿಯನ್ನರು ಕೇಳಿದ ಕೂಡಲೇ ಮತಾಂತರ ನಿಷೇಧ ಕಾಯ್ದೆಯನ್ನು ತೆಗೆದು ಹಾಕುತ್ತಾರೆ. ಮುಸ್ಲಿಮರು ಕೇಳಿದ ಕೂಡಲೇ ಗೋಹತ್ಯೆ ನಿಷೇಧ ಬಿಲ್‌ ಅನ್ನು ಕಿತ್ತು ಹಾಕುತ್ತಾರೆ. ಆದರೆ, ನಮ್ಮ ಹೊಟ್ಟೆಗೆ ಪೆಟ್ಟು ಬೀಳುತ್ತಿದೆ ಎಂದು ಸಾಮಾನ್ಯ ಜನರು ಕೇಳುತ್ತಾ ಇದ್ದರೂ ಇವರು ಅದಕ್ಕೆ ತಡೆ ನೀಡುವುದಿಲ್ಲ ಅಂದರೆ ಏನರ್ಥ? ಅಂದರೆ ಇವರಲ್ಲಿ ಧರ್ಮಾಂಧತೆ ಇದೆ ಎಂಬುದಾಗಿ ಅರ್ಥವಲ್ಲವೇ ಎಂದು ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದರು.

ಕೊಡುಗೆಯ ಆಮಿಷ ಇದು…

ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ, ಹಿಜಾಬ್‌ ನಿಷೇಧ ಮಾಡಿದಿರಿ. ಆದರೆ, ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದರೆ ಇವೆಲ್ಲವನ್ನೂ ವಾಪಸ್‌ ಪಡೆಯುವುದಾಗಿ ಹೇಳಿಕೊಂಡಿತ್ತು. ಜನರೂ ಸಹ ಅವರಿಗೆ ಮತ ಚಲಾವಣೆ ಮಾಡಿದರು. ಹಾಗಾದರೆ ಜನರಿಗೆ ಈ ಯಾವುದೂ ಆಸಕ್ತಿ ಇಲ್ಲವೇ ಎಂದು ನಾವು ಅರ್ಥೈಸಬಹುದಾ ಎಂಬ ಹರಿಪ್ರಕಾಶ್‌ ಕೋಣೆಮನೆ ಅವರ ಪ್ರಶ್ನೆಗೆ ಉತ್ತರಿಸಿದ ಸಂಸದ ಪ್ರತಾಪ್‌ ಸಿಂಹ, ದೆಹಲಿಯಲ್ಲಿ ಆಪ್‌ನ ಅರವಿಂದ ಕೇಜ್ರಿವಾಲ್‌ ಅಧಿಕಾರಕ್ಕೆ ಬಂದಿದ್ದೇ ಈ ಉಚಿತ ಘೋಷಣೆಗಳಿಂದಾಗಿದೆ. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೆ ಬರಲು ಯಾವ ಕಾರಣವೂ ಇರಲಿಲ್ಲ. ಆದರೆ, ಅಲ್ಲಿ ಸಹ ಇಲ್ಲಿನ ಗೃಹ ಲಕ್ಷ್ಮಿ ಮಾದರಿ ಒಂದು ಸಾವಿರ ರೂಪಾಯಿಯನ್ನು ಮಹಿಳೆಯರಿಗೆ ಕೊಡುವುದಾಗಿ ಘೋಷಿಸಿದರು. ಆದರೆ, ಇದುವರೆಗೂ ಅದನ್ನು ಕೊಡಲು ಆಗಲೇ ಇಲ್ಲ. ರಾಜಸ್ಥಾನ, ಹಿಮಾಚಲ ಹಾಗೂ ತಮಿಳುನಾಡಿನಲ್ಲಿಯೂ ಇದೇ ರೀತಿ ಆಗಿದೆ. ಜನರೂ ಸಹ ಈಗ ಟ್ರಾನ್ಸಾಕ್ಷನಲ್‌ (ಕೊಡು ಕೊಳ್ಳುವಿಕೆ ವ್ಯವಹಾರ) ಆಗಿದ್ದಾರೆ. “ನಿನಗೆ ನಾನು ಮತ ಹಾಕಬೇಕಾದರೆ, ನೀನು ನನಗೆ ಏನು ಕೊಡುತ್ತೀಯಾ?” ಎಂಬುದಾಗಿ ಕೇಳುತ್ತಿದ್ದಾರೆ. ನನಗೆ ಯಾರು ಹೆಚ್ಚು ಕೊಡುತ್ತಾರೋ ಅವರಿಗೆ ನನ್ನ ಮತ ಎಂಬಂತೆ ಆಗಿದೆ. ಇಲ್ಲಿ ಜಾತಿ, ಧರ್ಮ ಯಾವುದೂ ಬರುವುದಿಲ್ಲ ಎಂದು ಪ್ರತಾಪ್‌ ಸಿಂಹ ಚುನಾವಣೆ ನಡೆಯುತ್ತಿರುವ ರೀತಿಯನ್ನು ವಿಶ್ಲೇಷಿಸಿದರು.

ಮತಾಂತರ ವಿರೋಧಿಸಲು ಕಾರಣ ಇದೆ

ಮತಾಂತರ ನಿಷೇಧ ಕಾಯ್ದೆ ವಿಚಾರಕ್ಕೆ ಬರುವುದಾದರೆ, ಮತಾಂತರವನ್ನು ನಾವು ವಿರೋಧ ಮಾಡುವುದಕ್ಕೂ ಕಾರಣ ಇದೆ. ಜಗತ್ತಿನಾದ್ಯಂತ ನೂರಕ್ಕೂ ಹೆಚ್ಚು ಕ್ರಿಶ್ಚಿಯನ್‌ ರಾಷ್ಟ್ರಗಳಿವೆ. ಸುಮಾರು 53-54ರಷ್ಟು ಇಸ್ಲಾಮಿಕ್‌ ರಾಷ್ಟ್ರಗಳಿವೆ. ಭಾರತವೊಂದೇ ಈಗ ಹಿಂದು ರಾಷ್ಟ್ರವಾಗಿ ಉಳಿದುಕೊಂಡಿದೆ. ನಾವು ನೆಲ, ಜಲ, ಕಲ್ಲು, ಮಣ್ಣುಗಳನ್ನು ಗೌರವಿಸಿ, ಪೂಜಿಸುತ್ತೇವೆ. ಹೀಗಾಗಿ ಇದನ್ನು ಉಳಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಇರಾನ್‌, ಇರಾಕ್‌, ರೋಮ್‌, ಗ್ರೀಕ್‌ನಲ್ಲಿ ಇಂದು ಏನಾಗಿದೆ ಎಂಬುದನ್ನು ನಾವು ನೋಡಿದ್ದೇವೆ. ಮತಾಂತರ ಎಂದು ಹೇಳಿಕೊಂಡು ಬೇರೆ ಧರ್ಮಗಳನ್ನು ಮುಗಿಸಿಹಾಕಿ ಸಂಖ್ಯಾಬಲವನ್ನು ಹೆಚ್ಚು ಮಾಡಿಕೊಳ್ಳುತ್ತಾ ಹೋದರೆ ವಿವಿಧತೆಯಲ್ಲಿ ಏಕತೆ ಎಂಬ ಪರಿಕಲ್ಪನೆ ಎಲ್ಲಿ ಉಳಿಯುತ್ತದೆ? ಹೀಗಾಗಿ ಒಂದು ಬುಡಕಟ್ಟು ಸಮುದಾಯದ ಜನರು ಸೇರಿದಂತೆ ಸಂಸ್ಕೃತಿ, ಜಾನಪದ, ಕಲೆ, ಸಾಹಿತ್ಯ ಇತ್ಯಾದಿ ಅಂಶಗಳು ಉಳಿಯಬೇಕು ಎಂದು ಪ್ರತಾಪ್‌ ಸಿಂಹ ಹೇಳಿದರು.

ಪಠ್ಯದ ಬಗ್ಗೆ ಪ್ರತಾಪ್‌ ಹೇಳಿದ್ದೇನು?

ನೆಹರು ಯಾವತ್ತಾದರೂ ಬ್ರಿಟಿಷರ ವಿರುದ್ಧ ಒಂದು ಹುಲ್ಲು ಕಡ್ಡಿಯನ್ನು ಎತ್ತಿದ್ದರೇ?

ಕಾಂಗ್ರೆಸ್‌ ಪಠ್ಯಪುಸ್ತಕ ಪರಿಷ್ಕರಣೆ ನೀತಿ ಬಗ್ಗೆ ಕಿಡಿಕಾರಿದ ಪ್ರತಾಪ್‌ ಸಿಂಹ, ಕಾಂಗ್ರೆಸ್‌ನವರು ನೆಹರು ಪಾಠವನ್ನು ಹಾಕಿ ಸಾವರ್ಕರ್‌ ಪಾಠವನ್ನು ತೆಗೆಯುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ಇದರ ಲಾಜಿಕ್‌ ಏನು? ನೆಹರು ಅವರಿಗೆ ಸ್ವಾತಂತ್ರ್ಯ ಎಂದರೆ ಏನೆಂಬುದು ಗೊತ್ತಾಗುವುದರೊಳಗೆ ಸಾವರ್ಕರ್‌ ಅವರು ಎರಡೆರಡು ಬಾರಿ ಜೈಲುವಾಸವನ್ನು ಅನುಭವಿಸಿದ್ದರು. ನೆಹರು ಮೊದಲ ಬಾರಿಗೆ ಜೈಲಿಗೆ ಹೋಗಿದ್ದೇ 1923ರಲ್ಲಾಗಿದೆ. ಅಂದರೆ ಸಾವರ್ಕರ್‌ ಒಂದು ಜೀವಾವಧಿಯನ್ನು ಮುಗಿಸಿದ ಬಳಿಕ ಇವರು ಜೈಲಿಗೆ ಹೋಗುತ್ತಾರೆ. ಅವರು ಜೈಲಿಗೆ ಹೋಗಿ ಒಂದು ವಾರದೊಳಗೆ ಅವರ ಅಪ್ಪ ಮೋತಿಲಾಲ್‌ ಅವರು ಹುಡುಕಿಕೊಂಡು ಹೋಗಿದ್ದಲ್ಲದೆ, ಇನ್ಯಾವತ್ತೂ ನಬಾ ಕಡೆಗೆ ತಲೆ ಹಾಕುವುದಿಲ್ಲ, ಬ್ರಿಟಿಷರ ವಿರುದ್ಧ ಧ್ವನಿ ಎತ್ತುವುದಿಲ್ಲ ಎಂದು ಹೇಳಿ ನೆಹರು ಕಡೆಯಿಂದ ಮುಚ್ಚಳಿಕೆ ಬರೆಸಿಕೊಂಡು ಬರುತ್ತಾರೆ. ನೆಹರು ತಮ್ಮ ಜೀವನದಲ್ಲಿ ಯಾವತ್ತಾದರೂ ಬ್ರಿಟಿಷರ ವಿರುದ್ಧ ಒಂದು ಹುಲ್ಲು ಕಟ್ಟಿಯನ್ನು ಎತ್ತಿದ್ದರೇ? ಎಂದು ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದರು.

ಇನ್ನು ಸಾವರ್ಕರ್‌ ಅವರನ್ನು ಅಂಬೇಡ್ಕರ್‌ ಅವರೇ ಹೊಗಳಿದ್ದಾರೆ. ಇಬ್ಬರ ಪರಸ್ಪರ ಭೇಟಿ ಸಹ ಆಗಿದೆ. ಅಂಬೇಡ್ಕರ್‌ ಅವರನ್ನೇ ವಿರೋಧಿಸುವ, ಅವರ ವಿರುದ್ಧವೇ ಅಭ್ಯರ್ಥಿ ಹಾಕಿ ಸೋಲಿಸುವ ಕಾಂಗ್ರೆಸ್‌ನವರು ಯಾವತ್ತೂ ದೇಶಕ್ಕಾಗಿ ಕೆಲಸ ಮಾಡಲ್ಲ, ದೇಶ ಪ್ರೇಮಿಗಳನ್ನು ಸಹಿಸುವುದಿಲ್ಲ ಎಂದು ಪ್ರತಾಪ್‌ ಸಿಂಹ ಹೇಳಿದರು.

ಮತ್ತೆ ಟಿಪ್ಪು ಜಯಂತಿ ಮಾಡಲು ಹೊರಟರೆ ರೋಡಿಗಳಿಯುವೆ

ಈ ಬಾರಿ ಏನಾದರೂ ಸಿದ್ದರಾಮಯ್ಯ ಸರ್ಕಾರ ಮತ್ತೆ ಟಿಪ್ಪು ಜಯಂತಿ ಮಾಡಲು ಮುಂದಾದರೆ ನಾನು ಖಂಡಿತವಾಗಿಯೂ ರಸ್ತೆಗೆ ಇಳಿಯುತ್ತೇನೆ. ಅದನ್ನು ತಡೆದೇ ತಡೆಯುತ್ತೇನೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ಸ್ಪೀಕರ್ ಯು.ಟಿ. ಖಾದರ್‌ ನಿರ್ಧಾರ ಒಳ್ಳೆಯದಿತ್ತು

ನೂತನ ಶಾಸಕರಿಗೆ ತರಬೇತಿ ಕೊಡಲು ಸ್ಪೀಕರ್‌ ಯು.ಟಿ. ಖಾದರ್‌ ಆಹ್ವಾನ ಮಾಡಿರುವ ಮೂವರು ತಜ್ಞರಾದ ಡಾ. ವೀರೇಂದ್ರ ಹೆಗ್ಗಡೆ, ಶ್ರೀ ಶ್ರೀ ರವಿಶಂಕರ್‌ ಗುರೂಜಿ, ಡಾ. ಗುರುರಾಜ ಕರ್ಜಗಿ ಅವರನ್ನು ಕರೆಯಬಾರದು ಎಂದು ಬುದ್ಧಿಜೀವಿಗಳು ಮಾಡುವ ಆರೋಪಕ್ಕೆ, ತಕ್ಕಂತೆ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ಬಗ್ಗೆ ಪ್ರತಾಪ್‌ ಸಿಂಹ ಆಕ್ಷೇಪ ವ್ಯಕ್ತಪಡಿಸಿದರು. ಧರ್ಮಸ್ಥಳ ಧರ್ಮಾಧಿಕಾರಿ ಆಗಿರುವ ಡಾ. ವೀರೇಂದ್ರ ಹೆಗ್ಗಡೆಯವರು ಸ್ವಸಹಾಯ ಸಂಘವನ್ನು ಹುಟ್ಟುಹಾಕಿ ಗ್ರಾಮೀಣ ಅಭಿವೃದ್ಧಿಯಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿದ್ದಾರೆ. ಸರ್ಕಾರ ಮಾಡಲು ಸಾಧ್ಯವಾಗದಿರುವುದನ್ನು ಅವರು ಮಾಡಿದ್ದಾರೆ. ಪಂಚಾಯತ್‌ ರಾಜ್‌ ವ್ಯವಸ್ಥೆ ಮತ್ತು ಗ್ರಾಮೀಣಾಭಿವೃದ್ಧಿ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಂಡವರು ವೀರೇಂದ್ರ ಹೆಗ್ಗಡೆಯವರಾಗಿದ್ದಾರೆ. ಶಾಲೆಗಳನ್ನು ಉದ್ದಾರ ಮಾಡುವುದು, ದೇವಸ್ಥಾನಗಳ ಜೀರ್ಣೋದ್ಧಾರ ಹೇಗೆಂಬ ಬಗ್ಗೆ ಅವರಿಂದ ಕಲಿಯಬಹುದು. ಇವರಿಂದ ವೈದ್ಯಕೀಯ ಕ್ಷೇತ್ರದಲ್ಲಿಯೂ ಅವರ ಸಾಧನೆ ಬಹಳಷ್ಟು ಇದೆ. ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಮಹಿಳೆಯರ ಸಶಕ್ತೀಕರಣ ಬಗ್ಗೆ ಪಾಠ ಹೇಳಿಸಿಕೊಳ್ಳಬಹುದು ಎಂದು ಹೇಳಿದರು. ‌

ಇದನ್ನೂ ಓದಿ: Siddaramaiah: ಅಚ್ಛೇ ದಿನ್‌ ಸುಳ್ಳಾಗಿದೆ, ಮೋದಿ ಹವಾ ಡೌನ್ ಆಗಿದೆ: ಮಹಾರಾಷ್ಟ್ರದಲ್ಲಿ ಕತ್ತಿ ಝಳಪಿಸಿದ ಸಿದ್ದರಾಮಯ್ಯ

ಮೈಸೂರಿನ ವಿದ್ಯಾರಣ್ಯ ಪುರಂನಲ್ಲಿ ಕಸವನ್ನು ಸುರಿಯುವ ಜಾಗದಿಂದ ಕೆಟ್ಟ ವಾಸನೆ ಬರುತ್ತದೆ. ಇಲ್ಲಿ ಬಯೋ ಎಂಜನ್ಶನ್‌ ಸ್ಪ್ರೇ ಮಾಡಿ ವಾಸನೆಯನ್ನು ಹೋಗಿಸಬಹದು ಎಂದು ಹೇಳಿಕೊಟ್ಟವರು ರವಿಶಂಕರ್‌ ಗುರೂಜಿ ಅವರು. ಇಂಥವರಿಂದ ಕಲಿಯುವ ಅಂಶ ಇಲ್ಲವೇ? ಎಂದು ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದರು. ಗುರುರಾಜ ಕರ್ಜಗಿ ಅವರ ನೀತಿ ಪಾಠ, ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬಹುದು. ಇದು ಯು.ಟಿ. ಖಾದರ್‌ ಅವರ ಒಳ್ಳೆಯ ನಿರ್ಧಾರವಾಗಿದೆ ಎಂದು ಪ್ರತಾಪ್‌ ಸಿಂಹ ತಿಳಿಸಿದರು.

ಜನರಿಗೆ ಮನವರಿಕೆ ಮಾಡುವಲ್ಲಿ ನಾವು ವಿಫಲ

ಬಿಜೆಪಿಗೆ ಕಳೆದ ಚುನಾವಣೆಯಲ್ಲಿ ಶೇಕಡಾ 34ರಷ್ಟು ಪಡೆದು 110 ಸೀಟನ್ನು ಪಡೆದಿದ್ದೆವು. ಆದರೆ, ಈಗ ಕಳೆದುಕೊಂಡಿರುವುದು ಶೇ. 45 ಮತಗಳನ್ನಷ್ಟೇ. ಕೋವಿಡ್‌ ವೇಳೆ ವ್ಯಾಕ್ಸಿನೇಶನ್‌ ಸೇರಿದಂತೆ ಇನ್ನಿತರ ಕೆಲಸಗಳನ್ನು ಮಾಡಿದ್ದೇವೆ. ಇದನ್ನು ನಾವು ಜನರಿಗೆ ಮನವರಿಕೆ ಮಾಡುವಲ್ಲಿ ವಿಫಲವಾದೆವು. ಇದೇ ವೇಳೆ ಜೆಡಿಎಸ್‌ ಸಹ ಹೀನಾಯವಾಗಿ ಕುಸಿತ ಕಂಡಿದ್ದೂ ಸಹ ನಮ್ಮ ಸೋಲಿಗೆ ಕಾರಣವಾಯಿತು ಎಂದು ಪ್ರತಾಪ್‌ ಸಿಂಹ ವಿಧಾನಸಭಾ ಸೋಲನ್ನು ವಿಶ್ಲೇಷಣೆ ಮಾಡಿದರು.

ಇಂದು ಸೋಷಿಯಲ್‌ ಮೀಡಿಯಾ ನೋಡುತ್ತಿದ್ದರೆ ಮತೀಯ ಭಾವನೆ ಮುಸ್ಲಿಮರಲ್ಲಿ ಕಂಡು ಬರುತ್ತಿದೆ. ಕಾಂಗ್ರೆಸ್‌ ಗೆದ್ದಿದ್ದರಿಂದ ಮುಸ್ಲಿಮರು ಗೆದ್ದಿರುವಂತೆ ಭಾವನೆ ಮೂಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಹಿಜಾಬ್‌ ವಿರೋಧಕ್ಕೆ ಕಾರಣವಿದೆ

ಶಾಲೆಗೆ ಬರುವ ಮಕ್ಕಳು ಹಿಜಾಬ್‌ ಧರಿಸುವುದರಿಂದ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು, ನಾವೆಲ್ಲರೂ ಸಮಾನರು ಎಂಬ ಭಾವನೆ ಬರಬೇಕು ಎಂಬ ನಿಟ್ಟಿನಲ್ಲಿ ನಾವು ಹಿಜಾಬ್‌ ಅನ್ನು ವಿರೋಧಿಸಿದ್ದೇವೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ಮೋದಿಯನ್ನು ಕೇಳಿ ಅಕ್ಕಿ ಘೋಷಣೆ ಮಾಡಿದರಾ?

ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಕ್ಕೆ, ಅವರು ಅಧಿಕಾರಕ್ಕೆ ಬರಲು ನರೇಂದ್ರ ಮೋದಿ ಸರ್ಕಾರ ಅಕ್ಕಿ ಕೊಡಲು ಇರುವುದಲ್ಲ. ಎಲ್ಲ ರಾಜ್ಯಗಳನ್ನೂ ಸಮಾನವಾಗಿ ನೋಡಿಕೊಳ್ಳಬೇಕು. ಆ ಕೆಲಸವನ್ನು ಕೇಂದ್ರ ಮಾಡುತ್ತಾ ಬಂದಿದ್ದು, ಎಲ್ಲ ರಾಜ್ಯಗಳಿಗೆ 5 ಕೆ.ಜಿ. ಅಕ್ಕಿಯನ್ನು ಕೊಡುತ್ತಾ ಬಂದಿದೆ. ಒಬ್ಬ ಮನುಷ್ಯನಿಗೆ ತಿಂಗಳಿಗೆ ಆರು ಕೆಜಿ ಅಕ್ಕಿ ಬೇಕು. ಆ ನಿಟ್ಟಿನಲ್ಲಿ ಕೇಂದ್ರ ಕೊಡುತ್ತಿದೆ. ಆಗ ಸಿದ್ದರಾಮಯ್ಯ ಅವರು ಮೋದಿ ಅವರನ್ನು ಕೇಳಿಕೊಂಡು ಘೋಷಣೆ ಮಾಡಿದರಾ? ಎಂದು ಪ್ರಶ್ನೆ ಮಾಡಿದರು. ಬೆಂಬಲ ಬೆಲೆ ಘೋಷಿಸಿದರೆ ಜನರೇ ಅಕ್ಕಿ, ರಾಗಿಯನ್ನು ತಂದು ಕೊಟ್ಟು ಹೋಗುತ್ತಾರೆ. ಸುಮ್ಮನೇ ಯಾಕೆ ಮೋದಿ ಅವರನ್ನು ಬಯ್ಯಬೇಕು ಎಂದು ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Karnataka CM: 2028ಕ್ಕೆ ಕಾಂಗ್ರೆಸ್‌ನಿಂದ ಸತೀಶ್‌ ಜಾರಕಿಹೊಳಿ CM: ಈಗಲೇ ಟವೆಲ್‌ ಹಾಕಿದ ಸಚಿವ

ಅಕ್ಕಿ ದುಡ್ಡನ್ನು ಜನರ ಖಾತೆಗೆ ಹಾಕಲಿ

ಒಂದು ವೇಳೆ ಸರ್ಕಾರಕ್ಕೆ ಅಕ್ಕಿ ಸಿಗುತ್ತಿಲ್ಲ ಎಂದಾದರೆ ಜನರಿಗೆ ಮುಕ್ತ ಮಾರುಕಟ್ಟೆಯಲ್ಲಿ ಕೆಜಿಗೆ 37 ರೂಪಾಯಿಯಂತೆ ಅಕ್ಕಿ ಸಿಗಲಿದೆ. ಜನರ ಖಾತೆಗೆ ಹಣ ಹಾಕಲಿ ಎಂದು ಪ್ರತಾಪ್‌ ಸಿಂಹ ಸಲಹೆ ನೀಡಿದರು.

ಪೆದ್ದು ಪೆದ್ದಾಗಿ ಮಾತನಾಡಬೇಡಿ ಎಂದು ಕಾಂಗ್ರೆಸ್‌ ನಾಯಕರಿಗೆ ಸಲಹೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಂಪ್ಯೂಟರ್‌ ಹ್ಯಾಕ್‌ ಮಾಡುವುದು, ಗೃಹ ಜ್ಯೋತಿಯ ಸರ್ವರ್‌ ಹ್ಯಾಕ್‌ ಮಾಡುವಂತಹ ಪೆದ್ದು ಪೆದ್ದು ಹೇಳಿಕೆಗಳನ್ನು ಕಾಂಗ್ರೆಸ್‌ ನಾಯಕರು ನೀಡಿ ಕರ್ನಾಟಕವನ್ನು ನಗೆಪಾಟಿಲಿಗೆ ಈಡು ಮಾಡುತ್ತಿದ್ದಾರೆ. ದಯವಿಟ್ಟು ಇಂತಹ ಹೇಳಿಕೆ ನೀಡಬೇಡಿ ಎಂದು ಕಾಂಗ್ರೆಸ್‌ ಸಚಿವರಿಗೆ ಪ್ರತಾಪ್‌ ಸಿಂಹ ಮನವಿ ಮಾಡಿದರು.

ಬೊಮ್ಮಾಯಿ ತಮ್ಮ ಕೆಲಸವನ್ನು ಪ್ರಚಾರ ಮಾಡುವಲ್ಲಿ ವಿಫಲ

ಬಿಟ್‌ ಕಾಯಿನ್‌ ಹಗರಣ, ಪೇಸಿಎಂ, 40 ಪರ್ಸೆಂಟ್‌ ರಾಜಕಾರಣದ ಬಗ್ಗೆ ಆಗ ಮಾತನಾಡಿದ್ದೀರಿ? ಆದರೆ, ಈಗ ಯಾಕೆ ನೀವು ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಅವುಗಳನ್ನು ತನಿಖೆಗೆ ಒಳಪಡಿಸಿಲ್ಲ? ಏನು ಹೊಂದಾಣಿಕೆ ರಾಜಕಾರಣವನ್ನು ಮಾಡುತ್ತಿದ್ದೀರಾ? ಎಂದು ಪ್ರಶ್ನೆ ಮಾಡಿದ್ದೇನಷ್ಟೇ ಎಂದು ಪ್ರತಾಪ್‌ ಸಿಂಹ ಉತ್ತರಿಸಿದರು.

ನಾನು ಈ ಹೇಳಿಕೆಯನ್ನು ಬಸವರಾಜ ಬೊಮ್ಮಾಯಿ ಅವರಾಗಲೀ, ಯಾವುದೋ ವ್ಯಕ್ತಿಯನ್ನಾಗಲೀ ಅಥವಾ ಪಕ್ಷವನ್ನಾಗಲಿ ದೃಷ್ಟಿಯಲ್ಲಿಟ್ಟುಕೊಂಡು ಮಾತನಾಡಲಿಲ್ಲ. ನಾನು ಒಟ್ಟಾರೆ ಸ್ಥಿತಿ ಬಗ್ಗೆ ಅಷ್ಟೇ ಮಾತನಾಡಿದ್ದೇನೆ. ನನಗೆ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಅಪಾರವಾದ ಗೌರವ ಇದೆ. ಅವರು ಮಾಡಿದ ಒಳ್ಳೆಯ ಕೆಲಸವನ್ನು ಪ್ರಚಾರ ಮಾಡುವಲ್ಲಿ ಅವರು ವಿಫಲವಾದರು ಎನ್ನುವುದಕ್ಕಿಂತ ನಾವು ವಿಫಲವಾದೆವು ಎಂದು ಪ್ರತಾಪ್‌ ಸಿಂಹ ಹೇಳಿದರು.

ನಾನು ಮೋದಿ ಹೆಸರು ಹೇಳಿಕೊಂಡೇ ಗೆದ್ದಿರುವೆ

ನಾವು ಪ್ರತಿ ಚುನಾವಣೆಯಲ್ಲಿ ಮೋದಿ ಹೆಸರನ್ನು ಹೇಳಲು ನಮಗೆ ಅವರು ಸ್ಫೂರ್ತಿಯಾಗಿರುವುದೇ ಕಾರಣ. ನಾನು ಮೋದಿ ಅವರ ಹೆಸರನ್ನು ಹೇಳಿಕೊಂಡು ಗೆದ್ದಿರುವುದು ಎಂದು ಯಾವುದೇ ನಾಚಿಕೆ ಇಲ್ಲದೆ ಹೇಳುತ್ತೇನೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ನನಗೆ ಸರಿ ಕಾಣದ ವಿಷಯವನ್ನು ನಾನು ಪ್ರಶ್ನೆ ಮಾಡುವುದು ನನ್ನ ಪತ್ರಕರ್ತ ಗುಣ. ಸತ್ಯವನ್ನು ನುಂಗಿಕೊಂಡು ಇರಲು ನನ್ನ ಹತ್ತಿರ ಆಗದು. ನನ್ನೊಳಗಿನ ಪತ್ರಕರ್ತ ಇನ್ನೂ ಬದುಕಿದ್ದಾನೆ. ಹಾಗಾಗಿ ನನ್ನೊಳಗಿನ ರಾಜಕಾರಣಿಯನ್ನು ಬದಿಗಿಟ್ಟು ಆ ಪತ್ರಕರ್ತ ಮಾತನಾಡುತ್ತಾನೆ. ನನಗೆ ನನ್ನ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಆಸಕ್ತಿ, ಯೋಚನೆ ಇಲ್ಲ ಎಂದು ಪ್ರತಾಪ್‌ ಸಿಂಹ ತಿಳಿಸಿದರು.

ದೇವೇಗೌಡರ ಬಗ್ಗೆ ಮೋದಿಗೆ ಅಭಿಮಾನ

2016-17ರ ಸಂದರ್ಭದಲ್ಲಿ ಬಿಜೆಪಿಯಿಂದ ಜಿಎಸ್‌ಟಿ ಜಾರಿಗೆ ತರುವ ಸಂದರ್ಭದಲ್ಲಿ ಅವರನ್ನು ನರೇಂದ್ರ ಮೋದಿ ಅವರು ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡಿದ್ದಾರೆ. ಅವರು ಒಂದು ಸಾಮಾನ್ಯ ಕುಟುಂಬದಿಂದ ಬಂದು ಪ್ರಧಾನಿ ಹುದ್ದೆಗೇರಿರುವ ಬಗ್ಗೆ ಮನೆ ಕೆಲಸ ಮಾಡುವವಳ ಮಗನಾಗಿ ಹುಟ್ಟಿದ ನರೇಂದ್ರ ಮೋದಿಯವರಲ್ಲಿ ಅಭಿಮಾನ ಇದೆ. ಇನ್ನು ರಾಜಕೀಯವನ್ನು ಹೊರತುಪಡಿಸಿ ಮೋದಿಯವರು ಮಾಡಿದ ಕೆಲಸದ ಬಗ್ಗೆ ದೇವೇಗೌಡ ಅವರಿಗೂ ಸಂತಸ ಇದೆ ಎಂದು ಪ್ರತಾಪ್‌ ಸಿಂಹ ಅವರು ದೇವೇಗೌಡ ಹಾಗೂ ಬಿಜೆಪಿ ನಡುವೆ ಇರುವ ಸಂಬಂಧದ ಬಗ್ಗೆ ಮಾತನಾಡಿದರು.

ಇವರಿಗೆ ಬೈಯಲೂ ಬ್ರಾಹ್ಮಣರು ಬೇಕಾ?

ಎಂ.ಬಿ. ಪಾಟೀಲ್‌ ಅವರ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ. ಅವರು ನೀರಾವರಿ ಸಚಿವರಾಗಿದ್ದಾಗ ಮಾಡಿ ಒಳ್ಳೆಯ ಕೆಲಸದ ಬಗ್ಗೆ ಅಭಿಮಾನವಿದೆ. ಆದರೆ, ಅವರು ಅನಗತ್ಯವಾಗಿ ನನ್ನ ಹೆಸರನ್ನು ಎಳೆದು ತಂದಿದ್ದಾರೆ. ಪ್ರತಾಪ್‌ ಸಿಂಹ ಹೆಗಲ ಮೇಲೆ ಯಾರೋ ಬ್ರಾಹ್ಮಣರು ಕೋವಿ ಇಟ್ಟು ಹೊಡೆಯುತ್ತಿದ್ದಾರೆ ಎಂಬ ಹೇಳಿಕೆ ನೀಡಿದ್ದು ಎಷ್ಟು ಸರಿ? ಎಂದು ಪ್ರಶ್ನೆ ಮಾಡಿದ ಪ್ರತಾಪ್‌ ಸಿಂಹ, ಇವರಿಗೆ ಎಲ್ಲ ಕೆಲಸಗಳಿಗೂ ಬ್ರಾಹ್ಮಣರು ಬೇಕು. ಕೊನೆಗೆ, ಇವರಿಗೆ ಬಯ್ಯಲೂ ಬ್ರಾಹ್ಮಣರೇ ಬೇಕಾ? ನಾನು ಕೇಳಿದ ಪ್ರಶ್ನೆಗೆ ಉತ್ತರ ಇಲ್ಲದಿದ್ದಾಗ “ಚೇಳು” ಎಂಬಂತಹ ಮಾತುಗಳು ಬರುತ್ತವೆ. ನಾನು ಇವುಗಳಿಗೆಲ್ಲ ಅಷ್ಟಾಗಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪ್ರತಾಪ್‌ ಸಿಂಹ ಹೇಳಿದರು.

ಬೆಂಗಳೂರು-ಮೈಸೂರು ಹೆದ್ದಾರಿ ಕ್ರೆಡಿಟ್‌ ಸಿದ್ದರಾಮಯ್ಯಗೆ ಕೊಡಲ್ಲ

ಬೆಂಗಳೂರು-ಮೈಸೂರು ಹೆದ್ದಾರಿ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಭಿಮಾನ ಇದ್ದರೆ ಅನುಮೋದನೆ ಪಡೆದು ಮಾಡಬಹುದಿತ್ತು. ಆದರೆ, ಯಾಕೆ ಮಾಡಲಿಲ್ಲ? ನಾನು ಮುತುವರ್ಜಿ ವಹಿಸಿ ಡಿಪಿಆರ್‌ ಮಾಡಿಸಿ, 2018ರಲ್ಲಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವಾಗ ನಾನು ಅನಂತ್‌ ಕುಮಾರ್‌ ಅವರಿಗೆ ದುಂಬಾಲು ಬಿದ್ದು ಘೋಷಣೆ ಮಾಡಿಸಿದೆ. ಕೊನೆಗೆ ಮೋದಿ ಅವರು ಅನುಮೋದನೆ ನೀಡಿದರು. ಇದಕ್ಕೆ ನಾನು ಕ್ರೆಡಿಟ್‌ ಕೊಡುವುದಿದ್ದರೆ, ಎಸ್‌.ಎಂ. ಕೃಷ್ಣ, ಅನಂತಕುಮಾರ್‌, ನಿತಿನ್‌ ಗಡ್ಕರಿ ಹಾಗೂ ನರೇಂದ್ರ ಮೋದಿ ಅವರಿಗೆ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಬಗ್ಗೆ ಪ್ರತಾಪ್‌ ನುಡಿ

ಈಗ ಬಿಜೆಪಿ ಸೋತಿದೆ. ಈ ಸೋಲಿನ ಆಘಾತದಲ್ಲಿ ಯಾವುದೋ ಆತುರದ ನಿರ್ಧಾರವನ್ನು ತೆಗೆದುಕೊಳ್ಳಲು ಆಗುವುದಿಲ್ಲ. ಈಗ ಆತ್ಮಾವಲೋಕನದ ಸಮಯವಾಗಿದೆ. ಅಲ್ಲದೆ, ನಮ್ಮನ್ನು ಮುನ್ನಡೆಸಲು ಈ ವ್ಯಕ್ತಿ ಸೂಕ್ತ ಎಂದು ನಮ್ಮೆಲ್ಲರ ಮನಸ್ಸಿನಲ್ಲಿ ಬರಬೇಕು. ಈ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂಬ ಘಟ್ಟದಲ್ಲಿ ನಾವಿದ್ದೇವೆ. ಈ ಬಗ್ಗೆ ವಾರದಲ್ಲಿ ನಿರ್ಧಾರ ಆಗಲಿದೆ ಎಂದು ಪ್ರತಾಪ್‌ ಸಿಂಹ ಅವರು ವಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಪ್ರತಿಕ್ರಿಯೆಯನ್ನು ನೀಡಿದರು.

ಇದನ್ನೂ ಓದಿ: BJP Karnataka: ವೇದಿಕೆಯಲ್ಲೇ ಕಿತ್ತಾಡಿಕೊಂಡ ಬಸವರಾಜ ಬೊಮ್ಮಾಯಿ ಹಾಗೂ ಬಸನನೌಡ ಪಾಟೀಲ್‌ ಯತ್ನಾಳ್‌

2024ರ ಎಲೆಕ್ಷನ್‌ ಸವಾಲಿನದು ಆಗಿರಲಿದೆ

ನರೇಂದ್ರ ಮೋದಿ ಅವರು ಈ ಒಂಭತ್ತು ವರ್ಷದಿಂದ ನಡೆದುಕೊಂಡು ಬಂದ ರೀತಿಯನ್ನು ಎಲ್ಲರೂ ನೋಡಿದ್ದಾರೆ, ರಷ್ಯಾ ಹಾಗೂ ಉಕ್ರೇನ್‌ ಯುದ್ಧ ನಡೆದರೂ ಸಹ ರಷ್ಯಾ ಜತೆ ಕಚ್ಚಾ ತೈಲ ಖರೀದಿ ಮಾಡುವ ನಿರ್ಧಾರವನ್ನು ಪಡೆದರು. ಅವರು ಜಾಗತಿಕ ನಾಯಕ ಆಗುತ್ತಿದ್ದಾರೆ. ಹೀಗಾಗಿ ಅವರ ಮೇಲೆ ಎಲ್ಲ ನಾಯಕರಿಗೂ ಅಸೂಯೆ ಇದೆ. ಚೀನಾದವರಿಗೂ ಸಹ ಇದೇ ಭಾವನೆ ಇದೆ. ಹೀಗಾಗಿ ಫಂಡಿಂಗ್‌ ಮಾಡಲು ಅಂತಾರಾಷ್ಟ್ರಿಯ ಮಟ್ಟದಲ್ಲಿ ಜಾಲಗಳು ನಿರತವಾಗಿವೆ. ಮೋದಿ ವಿರುದ್ಧ ಹಲವರು ನಿಂತಿದ್ದಾರೆ. ಆದರೆ, ಅವರ ಜನಪ್ರಿಯತೆ ಎಲ್ಲೂ ಕುಗ್ಗಿಲ್ಲ. ಮೋದಿಯವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏನೂ ಮಾಡಲು ಆಗುವುದಿಲ್ಲ ಎಂಬುದಾಗಿ ರಷ್ಯಾ ಕೂಡಾ ಅರ್ಥ ಮಾಡಿಕೊಂಡಿದೆ. ಈ ಬಾರಿ ಮೋದಿ ವರ್ಸಸ್‌ ಆಲ್‌ ಇಂಡಿಯಾ ಪಾರ್ಟಿಗಳು ಒಂದಾಗುತ್ತಿವೆ. ಇದನ್ನು ಜನರಿಗೆ ತಿಳಿ ಹೇಳುವ ಕೆಲಸ ಆಗುತ್ತಿದೆ. ಖಂಡಿತ 2024ರ ಎಲೆಕ್ಷನ್‌ ಟಫೆಸ್ಟ್‌ ಆಗಿರಲಿದೆ. ಕಾರಣ ಮೋದಿ ವಿರುದ್ಧ ಭಾರತದಲ್ಲಷ್ಟೇ ಅಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ. ಕಾಣದ ಕೈಗಳು ಕೆಲಸ ಮಾಡುತ್ತದೆ. ಮೋದಿ ಅವರನ್ನು ಗೆಲ್ಲಿಸುವ ಮೂಲಕ ಜನರು ಒಳ್ಳೇ ಕೆಲಸವನ್ನು ಮಾಡಿದರೆ ಭಾರತ ವಿಶ್ವ ಗುರು ಆಗಲಿದೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ವಿಜಯಪುರ ಗೋದಾಮು ದುರಂತ: ಮೃತರ ಸಂಖ್ಯೆ 7ಕ್ಕೆ, ಇನ್ನೂ ನಾಲ್ಕು ಶವ ಸಿಕ್ಕಿಲ್ಲ

ಇದುವರೆಗೆ ಮೂವರು ಮೃತ ಕಾರ್ಮಿಕರ ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಇನ್ನೂ ನಾಲ್ಕು ಕಾರ್ಮಿಕರನ್ನು ಹೊರತೆಗೆಯಲು ಕಾರ್ಯಾಚರಣೆ ಮುಂದುವರಿದಿದೆ.

VISTARANEWS.COM


on

Koo

ವಿಜಯಪುರ: ವಿಜಯಪುರ (Vijayapura news) ರಾಜಗುರು ಫುಡ್ಸ್ ಗೋದಾಮಿನಲ್ಲಿ ಭಾರಿ ಯಂತ್ರ ಕುಸಿದು (godown tragedy) ಅದರಡಿ ಬಿಹಾರ ಕಾರ್ಮಿಕರು ಸಿಲುಕಿದ (Labors death) ಪ್ರಕರಣದಲ್ಲಿ ಮೂವರ ಮೃತದೇಹಗಳು ದೊರೆತಿವೆ. ಇನ್ನೂ ನಾಲ್ಕು ಮಂದಿ ಕಾರ್ಮಿಕರು ಯಂತ್ರದಡಿ ಸಿಲುಕಿದ್ದು, ಅವರು ಬದುಕಿರುವ ಸಾಧ್ಯತೆ ಬಹುತೇಕ ಕ್ಷೀಣವಾಗಿದೆ.

ವಿಜಯಪುರ ಕೈಗಾರಿಕಾ ಪ್ರದೇಶದ (Vijayapura News) ರಾಜಗುರು ಇಂಡಸ್ಟ್ರೀಸ್‌ ಗೋದಾಮಿನಲ್ಲಿ ಮೆಕ್ಕೆ ಜೋಳದ ಮೂಟೆ ತುಂಬುವ ಯಂತ್ರ ಕುಸಿದು ಮೂಟೆಗಳಡಿ 10ಕ್ಕೂ ಹೆಚ್ಚು ಕಾರ್ಮಿಕರು ನಿನ್ನೆ ಸಿಲುಕಿದ್ದರು. ಫುಡ್ ಪ್ರೊಸೆಸಿಂಗ್ ಯುನಿಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇವರು ಬಿಹಾರ ಮೂಲದ ಕಾರ್ಮಿಕರಾಗಿದ್ದರು. ಕಳೆದ ಹಲವು ವರ್ಷಗಳಿಂದ ರಾಜಗುರು ಇಂಡಸ್ಟ್ರೀಸ್‌ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದರು.

ಕಾರ್ಮಿಕರನ್ನು ರಕ್ಷಿಸಲು ನಿರಂತರವಾಗಿ 15 ಗಂಟೆಗಳಿಂದ 4 ಕ್ರೇನ್‌ ಹಾಗೂ ಜೆಸಿಬಿಗಳ ಮೂಲಕ ಸಂಸ್ಕರಣಾ ಘಟಕವನ್ನು ಎತ್ತಿ, ಅದರಡಿ ಸಿಲುಕಿದ ಕಾರ್ಮಿಕರ ಮೃತದೇಹ ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಎಸ್‌ಡಿಆರ್‌ಎಫ್ ತಂಡ, ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆದಿದೆ.

ಇದುವರೆಗೆ ಮೂವರು ಮೃತ ಕಾರ್ಮಿಕರ ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಇನ್ನೂ ನಾಲ್ಕು ಕಾರ್ಮಿಕರನ್ನು ಹೊರತೆಗೆಯಲು ಕಾರ್ಯಾಚರಣೆ ಮುಂದುವರಿದಿದೆ. ಅವರೆಲ್ಲಾ ಬಹುತೇಕ ಬದುಕಿರುವ ಸಾಧ್ಯತೆಗಳು ಕ್ಷೀಣ ಎನ್ನಲಾಗುತ್ತಿದೆ. ಒಟ್ಟು 11 ಕಾರ್ಮಿಕರು ಅವಘಡದಲ್ಲಿ ಸಿಲುಕಿದ್ದರು. ಘಟನಾ ಸಂದರ್ಭದಲ್ಲಿ ಮೂವರು ಬಚಾವ್ ಆಗಿದ್ದರು. ಕಾರ್ಯಾಚರಣೆ ವೇಳೆ ಓರ್ವನನ್ನು ಸಿಬ್ಬಂದಿ ರಕ್ಷಿಸಿದ್ದರು.

ಕಾರ್ಮಿಕರ ಪತ್ತೆಗೆ ಪುಣೆಯಿಂದ 30ಕ್ಕೂ ಅಧಿಕ ಸಿಬ್ಬಂದಿಗಳಿರುವ ಎನ್‌ಡಿಆರ್‌ಎಫ್‌ ತಂಡ ಆಗಮಿಸಿದೆ. ಸ್ಥಳಕ್ಕೆ ಎಸ್‌.ಪಿ. ಋಷಿಕೇಶ ಸೋನಾವಣೆ, ಡಿಸಿ ಟಿ.ಭೂಬಾಲನ್ ಭೇಟಿ ನೀಡಿ ಕಾರ್ಯಾಚರಣೆ ನೇತೃತ್ವ ವಹಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಯೂ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಗೋದಾಮಿನಲ್ಲಿ ಯಂತ್ರ ಕುಸಿತ; ಜೋಳದ ಮೂಟೆಗಳಡಿ ಸಿಲುಕಿದ 10 ಕಾರ್ಮಿಕರು

Continue Reading

ಕರ್ನಾಟಕ

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

ಕರ್ನಾಟಕದ ಹುತಾತ್ಮ ಯೋಧ ಪ್ರಾಂಜಲ್‌ (Captain Pranjal) ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರಧನವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮಂಜೂರು ಮಾಡಿದ್ದಾರೆ.

VISTARANEWS.COM


on

cm siddaramaih respect captain pranjal
Koo

ಬೆಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಮಡಿದ ಕರ್ನಾಟಕದ ವೀರ ಯೋಧ ಪ್ರಾಂಜಲ್‌ (Captain Pranjal) ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರಧನವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮಂಜೂರು ಮಾಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ (ಟ್ವಿಟರ್)‌ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. “ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆʼʼ ಎಂದು ಬರೆದಿದ್ದಾರೆ.

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಕರ್ನಾಟಕದ ವೀರ ಯೋಧ ಪ್ರಾಂಜಲ್‌ (Captain Pranjal) ಮೃತಪಟ್ಟಿದ್ದರು. ಇವರ ಮನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆಯಲ್ಲಿದೆ. ಯೋಧನ ಮನೆಯ ಆವರಣದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಸಂಸ್ಕಾರ ನಡೆದಿತ್ತು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲಿಗೆ ಭೇಟಿ ನೀಡಿ, ಹುತಾತ್ಮ ಯೋಧನ ಅಂತಿಮ ದರ್ಶನ ಪಡೆದಿದ್ದರು. ಸಂಬಂಧಿಕರು ಹಾಗೂ ಸಹಸ್ರಾರು ಸಾರ್ವಜನಿಕರ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರ ನಡೆದಿತ್ತು.

ಉಗ್ರರ ಜತೆಗಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಬಡಿದಾಡಿ ಪ್ರಾಣ ತ್ಯಾಗ ಮಾಡಿದ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅವರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ (MRPL) ನಿವೃತ್ತ ಆಡಳಿತ ನಿರ್ದೇಶಕ ವೆಂಕಟೇಶ್ ಅವರ ಏಕೈಕ ಪುತ್ರ. (MRPL) ನ ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಎಂಆರ್‌ಪಿಎಲ್‌ನ ಬಳಿಯೇ ಇರುವ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲೇ ಪ್ರಾಂಜಲ್‌ ವಿದ್ಯಾಭ್ಯಾಸ ಮಾಡಿದ್ದರು. ಕರಾವಳಿಯವರೇ ಆದ ವೆಂಕಟೇಶ್ ಅವರು ಮೇ 31ರಂದು ಸೇವಾ ನಿವೃತ್ತರಾಗಿದ್ದರು. ಕೆಲಕಾಲ ಮೈಸೂರಲ್ಲೂ ಇದ್ದರು. ತಂದೆಯ ನಿವೃತ್ತ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು. ನಿವೃತ್ತಿ ಬಳಿಕ ವೆಂಕಟೇಶ್ ಅವರು ಇದೀಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Continue Reading

ಉದ್ಯೋಗ

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

Teachers Recruitment : ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

VISTARANEWS.COM


on

Physical Education Teacher
Koo

ಬೆಂಗಳೂರು: ಸತತ 15 ವರ್ಷದಿಂದ ನೇಮಕಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ (Recruitment of Physical Education Teachers) ಈ ಸರ್ಕಾರದ ಅವಧಿಯಲ್ಲಿ ಗುಡ್‌ ನ್ಯೂಸ್‌ ಸಿಗಲಿದೆಯೇ? ಹೌದು ಎನ್ನುತ್ತದೆ ಶಿಕ್ಷಣ ಸಚಿವರ ಉತ್ತರ! ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು (Teachers Recruitment) ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪದವೀಧರ ಕ್ಷೇತ್ರದ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಳಲಾದ ಚುಕ್ಕೆ ಗುರುತಿನ ಪ್ರಶ್ನೆಗೆ ಶಿಕ್ಷಣ ಸಚಿವರು ಈ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: Karnataka Live News : ಪಿಎಸ್‌ಐ ಪರೀಕ್ಷೆ ಮುಂದೂಡಿಕೆ; ಜ. 23ಕ್ಕೆ ಎಕ್ಸಾಂ ಎಂದ ಗೃಹ ಸಚಿವ ಪರಮೇಶ್ವರ್‌

ರಾಜ್ಯದಲ್ಲಿ ಸುಮಾರು 17 ವರ್ಷಗಳಿಂದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕಾತಿ ಮಾಡಿಲ್ಲ ಎಂದು ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಯವರು ಆರೋಪ ಮಾಡುತ್ತಿದ್ದಾರೆ. ಇದು ನಿಜವೇ ಎಂದು ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದ ಸರ್ಕಾರಿ ಪ್ರಾಥಮಿಕ ಶಾಲೆಗೆ ಸಂಬಂಧಿಸಿದಂತೆ 2008ನೇ ಸಾಲಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದಂತೆ 2014-15ನೇ ಸಾಲಿಗೆ 148 ಹುದ್ದೆಗಳಿಗೆ ನೇಮಿಸಿಕೊಳ್ಳಲಾಗಿದೆ ಎಂದು ಉತ್ತರಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 41913 ಪ್ರಾಥಮಿಕ ಶಾಲೆಗಳಿದ್ದು, ಅವುಗಳಲ್ಲಿ ಮಂಜೂರಾದ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 6772 ಆಗಿದೆ. ಆದರೆ, ಕಾರ್ಯನಿರತ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 4127 ಆಗಿದೆ. ಹೀಗಾಗಿ ಇದರಲ್ಲಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಪ್ರೌಢಶಾಲೆಯಲ್ಲಿ ನೇಮಕಕ್ಕೆ ಸಚಿವರು ಹೇಳಿದ್ದೇನು?

ಇನ್ನು ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ 4844 ಸರ್ಕಾರಿ ಪ್ರೌಢ ಶಾಲೆಗಳು ಇವೆ. ಇದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಮಂಜೂರಾದ ಹುದ್ದೆ 5210 ಆಗಿದೆ. ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್‌ 1 ಶಿಕ್ಷಕರ ಕಾರ್ಯನಿರತ ಹುದ್ದೆಗಳ ಸಂಖ್ಯೆ 3589 ಆಗಿದೆ.

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ವೃಂದದ ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಸೇರಿ ಒಟ್ಟು 2500 ಶಿಕ್ಷಕರುಗಳ ಹುದ್ದೆಗಳನ್ನು 15000 ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿರುತ್ತದೆ.

ಆದರೆ, ಸದರಿ 15000 ಹುದ್ದೆಗಳಲ್ಲಿ ಪ್ರೌಢಶಾಲಾ ಶಿಕ್ಷಕರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರ ಉಳಿದಿರುವ ಪ್ರಯುಕ್ತ ಪ್ರಸ್ತುತ ಸಾಲಿನಲ್ಲಿ 200 ದೈಹಿಕ ಶಿಕ್ಷಕರ ಹುದ್ದೆಯು ಸೇರಿದ್ದು ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿಯಿಂದ ತೆರವಾಗಿರುವ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ಮಾಡಿಕೊಳ್ಳದಂತೆ ನೇಮಕಾತಿ ಆರ್ಥಿಕ ಇಲಾಖೆಯಿಂದ ಟಿಪ್ಪಣಿ ರೂಪದಲ್ಲಿ ಆದೇಶ ಬಂದಿದೆಯೇ? ಹಾಗಿದ್ದಲ್ಲಿ, ಈ ಕುರಿತು ಸರ್ಕಾರ ಕೈಗೊಂಡ ಕ್ರಮವೇನು? ಎಂದು ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: Belagavi Winter Session: ಸದನದಲ್ಲಿ ಮುಟ್ಟಿನ ಶುಚಿತ್ವ ಚರ್ಚೆ; ಜನವರಿಯಿಂದ ಶಾಲೆಗಳಿಗೆ ನ್ಯಾಪ್‌ಕಿನ್‌

ಇಲ್ಲಿ ಪಿಡಿಎಫ್‌ ಪ್ರತಿಯನ್ನು ಲಗತ್ತಿಸಿದ್ದು, ಡೌನ್‌ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಪಡೆದುಕೊಳ್ಳಬಹುದು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದೈಹಿಕ ಶಿಕ್ಷಣ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದಂತೆ ಆರ್ಥಿಕ ಇಲಾಖೆಯು ಯಾವುದೇ ನಿರ್ಬಂಧವನ್ನು ವಿಧಿಸಿರುವುದಿಲ್ಲ. ಆದರೆ, ಆರ್ಥಿಕ ಇಲಾಖೆಯು ದಿನಾಂಕ:14/06/2023ರಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಗೆ ಪ್ರಸ್ತುತ ಇರುವ 120 ವಿದ್ಯಾರ್ಥಿಗಳ ಕಾರ್ಯಭಾರದ ಮಾನದಂಡವನ್ನು 500 ವಿದ್ಯಾರ್ಥಿಗಳಿಗೆ ಹೆಚ್ಚಿಸಲು ನಿರ್ಣಯಿಸುವಂತೆ ಆರ್ಥಿಕ ಇಲಾಖೆಯು ಸಲಹೆ ನೀಡಿದ್ದು, ಈ ಬಗ್ಗೆ ಸರ್ಕಾರದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಹೇಳಿದ್ದಾರೆ.

Continue Reading

ಕರ್ನಾಟಕ

Karnataka Weather : ಇಂದು – ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಭಾರಿ ಮಳೆ; ಇದು ಮಿಚುಂಗ್ ಎಫೆಕ್ಟ್‌

Karnataka Weather : ಮಿಚುಂಗ್ ಸೈಕ್ಲೋನ್ ಪರಿಣಾಮ ರಾಜ್ಯದ ಮೇಲೆ ಆಗಲಿದೆ. ರಾಜ್ಯದ ಕೆಲವು ಕಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

VISTARANEWS.COM


on

Rain in Karnataka woman listening to music with an umbrella
Koo

ಬೆಂಗಳೂರು: ಮಂಗಳವಾರ ಮತ್ತು ಬುಧವಾರ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (karnataka Weather Forecast) ಹೇಳಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದ ಭಾರಿ ಮಳೆಯಾಗಲಿದೆ ಎಂದು ಅಂದಾಜಿಸಿದೆ.

ಮಿಚುಂಗ್ ಚಂಡಮಾರುತದ ಎಫೆಕ್ಟ್‌ ಮೊದಲು ತಮಿಳುನಾಡಿಗೆ ಬೀರಲಿದ್ದು, ನಂತರ ಕರ್ನಾಟಕದ ಗಡಿ ಭಾಗದ ಪ್ರದೇಶಗಳು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಪ್ರತಿ ಗಂಟೆಗೆ 30 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹೇಳಲಾಗಿದೆ.

ಎರಡು ದಿನ ಸೈಕ್ಲೋನ್‌ ಎಫೆಕ್ಟ್‌!

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದೆ. ಹೀಗಾಗಿ ರಾಜ್ಯದಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಸದ್ಯ ಬಂಗಾಳ ಕೊಲ್ಲಿಯಲ್ಲಿ 18 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ಕರ್ನಾಟಕದಲ್ಲಿಯೂ ಮಳೆಯಾಗಲಿದ್ದು, ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: Belagavi Winter Session: ಸದನದಲ್ಲಿ ಮುಟ್ಟಿನ ಶುಚಿತ್ವ ಚರ್ಚೆ; ಜನವರಿಯಿಂದ ಶಾಲೆಗಳಿಗೆ ನ್ಯಾಪ್‌ಕಿನ್‌

ಉತ್ತರ ಮತ್ತು ದಕ್ಷಿಣ ಒಳನಾಡಲ್ಲಿ ಹೇಗಿರಲಿದೆ ಮಳೆ?

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣದಿಂದ ತೀವ್ರ ಪ್ರಮಾಣದಲ್ಲಿ ಮಳೆಯಾಗಬಹುದಾಗಿದ್ದು, ಬಹುಭಾಗ ಮೋಡ ಕವಿದ ವಾತಾವರಣ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಅಲ್ಪ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇನ್ನು ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ ಹಾಗೂ ಬೀದರ್, ರಾಯಚೂರಿನ ಒಂದೆರಡು ಕಡೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಲೆನಾಡಿನ ಕೊಡಗಿನಲ್ಲಿ ಭರ್ಜರಿ ಮಳೆ ಸಾಧ್ಯತೆ

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಹೆಚ್ಚಿರಲಿದ್ದು, ಅಲ್ಪದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಎಫೆಕ್ಟ್‌?

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಹಾಗೂ ಉತ್ತರ ಕನ್ನಡದಲ್ಲಿ ಚಂಡಮಾರುತದ ಭಾರಿ ಪ್ರಭಾವ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅಲ್ಲಲ್ಲಿ ಭಾರಿ ಮಳೆಯಾಗಬಹುದು ಎಂದು ಹಮಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾತ್ರಿ, ಬೆಳಗಿನ ಜಾವ ಚಳಿ ಚಳಿ

ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಬಹುತೇಕ ಕಡೆ ರಾತ್ರಿ ವೇಳೆಗೆ ಹಾಗೂ ಬೆಳಗಿನ ಜಾವ ಚಳಿಗಾಳಿ ಬೀಸಲಿದ್ದು, ಚಳಿ ಚಳಿ ವಾತಾವರಣ ನಿರ್ಮಾಣವಾಗಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 25 ಡಿ.ಸೆ -19 ಡಿ.ಸೆ
ಮಂಗಳೂರು: 35 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 19 ಡಿ.ಸೆ
ಗದಗ: 33 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 33 ಡಿ.ಸೆ – 22 ಡಿ.ಸೆ
ಬೆಳಗಾವಿ: 31 ಡಿ.ಸೆ – 17 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
sadghuru with students
ಅಂಕಣ43 mins ago

Prerane Column : ವಿದ್ಯಾಭ್ಯಾಸ ಎಂದರೆ ದುಡ್ಡು ಮಾಡುವ ದಂಧೆಯ ಅಡಿಪಾಯವೇ?

ಕರ್ನಾಟಕ57 mins ago

ವಿಜಯಪುರ ಗೋದಾಮು ದುರಂತ: ಮೃತರ ಸಂಖ್ಯೆ 7ಕ್ಕೆ, ಇನ್ನೂ ನಾಲ್ಕು ಶವ ಸಿಕ್ಕಿಲ್ಲ

cm siddaramaih respect captain pranjal
ಕರ್ನಾಟಕ2 hours ago

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

Canara Bank Ammembala Subbarao Pai
ಅಂಕಣ2 hours ago

Raja Marga Column: ಹಿಡಿಯಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಕಟ್ಟಿದ ಅಮ್ಮೆಂಬಳ ಸುಬ್ಬರಾವ್ ಪೈ

CBSE Board Exam 2024 and many more changes proposed implemented in this year
ದೇಶ2 hours ago

ಸಿಬಿಎಸ್‌ಇ ಬೋರ್ಡ್‌ ಎಕ್ಸಾಂಗೆ ಘೋಷಿಸಿದ ಪ್ರಮುಖ ಬದಲಾವಣೆಗಳೇನು?

Saurav Gangly
ಕ್ರಿಕೆಟ್2 hours ago

Virat Kohli : ಕೊಹ್ಲಿಯನ್ನು ನಾಯಕತ್ವದಿಂದ ಇಳಿಸಿದ್ದಕ್ಕೆ ಕಾರಣ ತಿಳಿಸಿದ ಸೌರವ್​ ಗಂಗೂಲಿ

Physical Education Teacher
ಉದ್ಯೋಗ2 hours ago

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

sufi
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಸಯ್ಯಿದ್ ರಿಜ್ವಿ ಸ್ವತಃ ಹೇಳಿದ ಸೂಫಿಗಳ ನಿಜ ಕಥನ

Rain in Karnataka woman listening to music with an umbrella
ಕರ್ನಾಟಕ2 hours ago

Karnataka Weather : ಇಂದು – ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಭಾರಿ ಮಳೆ; ಇದು ಮಿಚುಂಗ್ ಎಫೆಕ್ಟ್‌

Congress party directed kamal nath to resign Madhya Pradesh Congress president post
ದೇಶ3 hours ago

ಎಂಪಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಮಲ್ ನಾಥ್‌ಗೆ ಸೂಚನೆ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌