Power Point with HPK : ಸಿದ್ದರಾಮಯ್ಯ ಸೆಕ್ಯುಲರ್‌ ಅಲ್ಲ, ಗ್ಯಾರಂಟಿಯಿಂದ ಬದುಕೇ ಸರ್ವನಾಶ: ಸಿ.ಟಿ. ರವಿ Vistara News
Connect with us

ಕರ್ನಾಟಕ

Power Point with HPK : ಸಿದ್ದರಾಮಯ್ಯ ಸೆಕ್ಯುಲರ್‌ ಅಲ್ಲ, ಗ್ಯಾರಂಟಿಯಿಂದ ಬದುಕೇ ಸರ್ವನಾಶ: ಸಿ.ಟಿ. ರವಿ

Power Point with HPK : ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಮುಕ್ತವಾಗಿ ಮಾತನಾಡಿದ್ದಾರೆ. ಅವರು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದ ಹಲವು ಅಂಶಗಳ ಬಗ್ಗೆ ಮುಕ್ತವಾಗಿ ಚರ್ಚಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಗ್ಯಾರಂಟಿಯ ಅಪಾಯದ ವಿಚಾರವಾಗಿ ತಮ್ಮ ಮನದಾಳವನ್ನು ಹೊರಹಾಕಿದ್ದಾರೆ. ಅವರ ಸಂದರ್ಶನದ ಸಾರಾಂಶ ಇಲ್ಲಿದೆ.

VISTARANEWS.COM


on

Power Point With HPK CT Ravi Participate
Koo

ಬೆಂಗಳೂರು: ಉಚಿತ ಯೋಜನೆ ಎಂಬುದು ಎರೆಹುಳು ಇದ್ದಂತೆ. ನಾವು ಮೀನು ಹಿಡಿಯಬೇಕಾದರೆ ಎರೆಹುಳುವನ್ನು ಗಾಳಕ್ಕೆ ಸಿಕ್ಕಿಸುತ್ತಿದ್ದೆವು. ಆ ಎರೆ ಹುಳುವಿನ ಆಸೆಗೆ ಮೀನು ಗಾಳಕ್ಕೆ ಬೀಳುತ್ತಿತ್ತು. ಈಗ ಇಲ್ಲಾಗಿರುವುದೂ ಅದೇ. ಗ್ಯಾರಂಟಿ ಎನ್ನುವಂತಹ ಎರೆಹುಳುವನ್ನು ಗಾಳಕ್ಕೆ ಸಿಕ್ಕಿಸಿ ಮತ ಎನ್ನುವಂತಹ ಮೀನನ್ನು ಕಾಂಗ್ರೆಸ್‌ನವರು ಹಿಡಿದರು. ಆದರೆ, ಇದರಲ್ಲಿ ತನ್ನ ಬದುಕೇ ಹೋಗುತ್ತದೆ ಎಂಬುದು ಆ ಮೀನಿಗೆ ಗೊತ್ತಿಲ್ಲದಂತೆ, ಬದುಕೇ ನಾಶವಾಗುತ್ತದೆ ಎಂಬುದು ಮತದಾರನಿಗೂ ಗೊತ್ತಿಲ್ಲ. ಒಮ್ಮೆ ಅರಿವಿಗೆ ಬಂದಾಗ ಉಳಿದ ಮೀನುಗಳು ಎಚ್ಚರಿಸುತ್ತವೆ ಎಂದು ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಪವರ್‌ ಪಾಯಿಂಟ್‌ ವಿಥ್‌ ಎಚ್‌ಪಿಕೆ (Power Point with HPK) ಸಂದರ್ಶನದಲ್ಲಿ ಮಾರ್ಮಿಕವಾಗಿ ರಾಜ್ಯ ಸರ್ಕಾರವನ್ನು ತಿವಿದಿದ್ದಾರೆ.

ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿ.ಟಿ. ರವಿ ಅವರು, ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, 2024ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ಆಯ್ಕೆ ಆಗುತ್ತದೆ? ಬಿಜೆಪಿಯಲ್ಲಿ ಸರಿ-ತಪ್ಪುಗಳು, ಗೋಹತ್ಯೆ ನಿಷೇಧ ಕಾಯ್ದೆ, ಹಿಜಾಬ್‌ಗೆ ವಿರೋಧ, ಪಠ್ಯ ಪುಸ್ತಕ ಪರಿಷ್ಕರಣೆ, ಬಿಜೆಪಿ ಸೋಲಿನ ಪ್ರಮುಖ 3 ಕಾರಣಗಳು ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ಮುಕ್ತವಾಗಿ ಚರ್ಚೆ ನಡೆಸಿದ್ದಾರೆ.

ಕಾಂಗ್ರೆಸ್‌ಗೆ “ರೋಗ” ಬಂದಿದೆ

ಆಗಿದ್ದನ್ನೆಲ್ಲ ತಾನು ಮಾಡಿದೆ ಎಂದು ಹೇಳಿಕೊಳ್ಳುವುದು, ಆಗದಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿರುವುದು ಎಂದು ಹೇಳುವ “ರೋಗ” ಕಾಂಗ್ರೆಸ್‌ನವರಿಗೆ ಇದೆ. ಈಗ 5 ಕೆಜಿ ಅಕ್ಕಿ ಕೊಡುತ್ತಿರುವುದು ಮೋದಿ, ಕೋವಿಡ್‌ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಟ್ಟಿದ್ದು ಮೋದಿ, ಜನಧನ ಖಾತೆಗೆ, ಬೀದಿ ಬದಿ ಕಾರ್ಮಿಕರಿಗೆ ಹಣ ಹಾಕಿದ್ದು ಸಹ ಮೋದಿಯವರು. ಆಗ ಇವರು ಯಾವ ಬಿಲದಲ್ಲಿದ್ದರು? ಅವರಿಗೆ ಅಪ ಪ್ರಚಾರ ಮಾಡುವುದೇ ಒಂದು ರೋಗವಾಗಿ ಬಂದು ಬಿಟ್ಟಿದೆ ಎಂದು ಸಿ.ಟಿ. ರವಿ ಹೇಳಿದರು.

ಸಿಟಿ ರವಿ ಉತ್ತರ ಹೀಗಿದೆ…

2014ರಿಂದಲೂ ನರೇಂದ್ರ ಮೋದಿ ಅವರು ಅಕ್ಕಿ ನೀಡುತ್ತಾ ಬಂದಿದ್ದಾರೆ. ಹಾಗಾದರೆ ಕಾಂಗ್ರೆಸ್‌ನವರು ಯಾವತ್ತಾದರೂ ಮೋದಿ ಅವರ ಕೃಪೆಯಿಂದ ಅನ್ನಭಾಗ್ಯ ಅಕ್ಕಿ ಕೊಟ್ಟಿದ್ದೇವೆ ಎಂದು ಹೇಳಿದ್ದಾರಾ? ಈಗಲೂ ಕೇಂದ್ರ ಸರ್ಕಾರ ಕೊಡುತ್ತಿರುವ 5 ಕೆಜಿ ಅಕ್ಕಿ ಬಗ್ಗೆ ಮಾತನಾಡುತ್ತಾರಾ?‌

ಗ್ಯಾರಂಟಿಯ ವಾಗ್ದಾನ ಮಾಡಿದ್ದು ಕಾಂಗ್ರೆಸ್‌ ಪಕ್ಷ. ಅದನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ನರೇಂದ್ರ ಮೋದಿ ಅವರದ್ದಲ್ಲ. ಕಾಂಗ್ರೆಸ್‌ ಪಕ್ಷದ್ದಾಗಿದೆ. ತಾವು ಏನು ಬೇಕಾದರೂ ವಾಗ್ದಾನ ಮಾಡುತ್ತೇವೆ. ಅದನ್ನು ಮೋದಿ ಈಡೇರಿಸಬೇಕೆನ್ನುವುದು ಅಪಾಯಕಾರಿ ಬೆಳವಣಿಗೆಯಾಗಿದೆ.

ಕೇಂದ್ರದಲ್ಲಿರುವ ನರೇಂದ್ರ ಮೋದಿಯವರು ಇವರಂತೆ ಯೋಚನೆ ಮಾಡಿದ್ದರೆ ಭಾರತವು ಪ್ರಪಂಚದ 5ನೇ ಅತಿದೊಡ್ಡ ಆರ್ಥಿಕ ಸದೃಢತೆಯುಳ್ಳ ದೇಶವಾಗುತ್ತಿರಲಿಲ್ಲ. ನಾವೂ ಸಹ ಪಾಕಿಸ್ತಾನದ ಭಿಕ್ಷೆ ಬೇಡಬೇಕಿತ್ತು. ಇಲ್ಲವೇ ಶ್ರೀಲಂಕಾದಂತೆ ಅರಾಜಕತೆ ಸೃಷ್ಟಿಯಾಗುತ್ತಿತ್ತು.

ಸಾಲ ಕೊಟ್ಟು ಎಷ್ಟು ದಿನ ತೃಪ್ತಿಪಡಿಸುತ್ತೀರಿ?

ಕಡು ಬಡವನಿಗೆ ನೆರವು ನೀಡುವುದು ತಪ್ಪಲ್ಲ, ಅದು ಧರ್ಮ. ಆದರೆ, ದುಡಿಯುವ ಕೈಗೆ ಕೆಲಸ ಕೊಡಬೇಕು. ಮೂಲ ಸೌಕರ್ಯಕ್ಕೆ ಬಂಡವಾಳ ಹೂಡಿಕೆ ಮಾಡಿದರೆ ಅಷ್ಟು ಆರ್ಥಿಕತೆ ಬೆಳೆಯುತ್ತದೆ. ಸಾಲ ಕೊಟ್ಟು ಎಷ್ಟು ದಿನ ತೃಪ್ತಿ ಪಡಿಸಬಹುದು? ಸಾಲ ಮಾಡಿ ತುಪ್ಪ ತಿನ್ನೋದು, ತಿನ್ನಿಸೋದು ಎಷ್ಟು ದಿನ ನಡೆಯುತ್ತೆ? ಮುಂದೊಂದು ದಿನ ಏನಾಗಬಹುದು? ದೇಶದಲ್ಲಿರುವ ಆರ್ಥಿಕವಾಗಿ ಶಿಸ್ತಿಲ್ಲದ ಬಿಮಾರು ರಾಜ್ಯಗಳ ಸ್ಥಿತಿಗೆ ನಾವೂ ಹೋಗಿಬಿಡಬಹುದು.

ಗ್ಯಾರಂಟಿ ಬಗ್ಗೆ ನಾನು ವ್ಯಕ್ತಿಗತವಾಗಿ ಹೇಳಬೇಕೆಂದರೆ ಅವರನ್ನು ಅವರದ್ದೇ ಧಾಟಿಯಲ್ಲಿ ಎದುರಿಸಬೇಕು. ಆದರೆ, “ಇವರು ಭ್ರಷ್ಟಾಚಾರವನ್ನು ನಡೆಸಲೆಂದೇ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ 27ರಂದು ಹೇಳಿದ್ದರು. ಈ ಬೆಳವಣಿಗೆಯನ್ನು ನೋಡಿದಾಗ ನನಗೆ ಭಯವಾಗುತ್ತದೆ.

ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆಯಲ್ಲಿ ಸಿ.ಟಿ. ರವಿ ಅವರ ಮಾತು; ಇಲ್ಲಿದೆ ವಿಡಿಯೊ

150 ಪ್ಲಸ್‌ ಗೆಲ್ಲುತ್ತೇವೆಂದು ಹೇಳಿದ್ಯಾಕೆ?

ಚುನಾವಣೆಗೆ ಪೂರ್ವದಲ್ಲಿ ನಾವು ಮಾಡಿಸಿದ ಸರ್ವೇ ಪ್ರಕಾರ, ಕಾಂಗ್ರೆಸ್‌ ಹಾಗೂ ಬಿಜೆಪಿಯು 90 ಪ್ಲಸ್‌ ಸ್ಥಾನವನ್ನು ಗೆಲ್ಲಲಿದೆ ಎಂಬುದು ತಿಳಿದುಬಂದಿತ್ತು. ಆದರೆ, ಹೊರಗಡೆ ಕಾರ್ಯಕರ್ತರ ಉತ್ಸಾಹಕ್ಕೆ ನಾವು 130, 150 ಪ್ಲಸ್‌ ಎಂದು ಹೇಳುತ್ತಿದ್ದೆವು. ಆದರೆ, ಕೊನೆಯಲ್ಲಿ ನಾವು ಸೋತಿದ್ದೇವೆ. ಇದನ್ನು ಒಪ್ಪಿಕೊಂಡಿದ್ದೇವೆ.

ಒಳ ಮೀಸಲಾತಿ ಪಡೆದ ಸಮಯದಾಯ ಬೆಂಬಲಕ್ಕೆ ನಿಲ್ಲಲಿಲ್ಲ

ಒಳ ಮೀಸಲಾತಿಯನ್ನು ನಾವು ಸದುದ್ದೇಶದಿಂದ ಜಾರಿಗೆ ತಂದೆವು. ಈ ಹಿಂದೆ ಸದಾಶಿವ ಆಯೋಗವು ಲಂಬಾಣಿ ಮತ್ತು ಬೋವಿ ಸಮಾಜಗಳಿಗೆ ಶೇ. 3ರಷ್ಟು ಒಳ ಮೀಸಲಾತಿ ನೀಡಿತ್ತು. ನಾವದನ್ನು ಶೇ. 4.5ಕ್ಕೆ ಹೆಚ್ಚಿಸಿದೆವು. ಆದರೆ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲಿ ನಾವು ವಿಫಲವಾದೆವು. ಎಡಗೈ, ಬಲಗೈ ಸಮಾಜವು ನಮ್ಮ ಪರ ನಿಲ್ಲಲಿಲ್ಲ.

ಕಾಂಗ್ರೆಸ್‌ನಿಂದ ಮತದಾನದ ಮಾಫಿಯಾ

ಗೋವಿನ ಜತೆಗೆ ಭಾರತೀಯ ಸಂಸ್ಕೃತಿ ಅಡಗಿದೆ. ಬಿಜೆಪಿ ಪಕ್ಷ ಅಸ್ತಿತ್ವಕ್ಕೆ ಬರುವ ಮೊದಲೇ ಗೋಹತ್ಯೆ ನಿಷೇಧ ಇತ್ತು. ಈಗ ನಾವು ಅದನ್ನು ಬಲಪಡಿಸುವ ಕೆಲಸವನ್ನು ಮಾಡಿದ್ದೆವು. ಈಗ ಈ ಸರ್ಕಾರ ಅಕ್ರಮ ಗೋಹತ್ಯೆ ಮಾಡುವವರನ್ನು ಬೆಂಬಲಿಸುತ್ತಿದೆ. ಈ ಮೂಲಕ ಮತದಾನದ ಮಾಫಿಯಾವನ್ನು ಸೃಷ್ಟಿ ಮಾಡುತ್ತಿದೆ.

ಸಮವಸ್ತ್ರ್ರ V/s ಹಿಜಾಬ್‌ ಆಗಲಿಲ್ಲ

ಶಾಲೆಯಲ್ಲಿ ಸಮವಸ್ತ್ರ ಇರಬೇಕೆನ್ನುವುದು 1964ರಿಂದಲೇ ಬಂದಿರುವ ಕಾಯಿದೆಯಾಗಿದೆ. ಬಡವ- ಬಲ್ಲಿದ, ಜಾತಿ-ಧರ್ಮದ ಭೇದ ಇರಬಾರದು ಎಂಬ ನಿಟ್ಟಿನಲ್ಲಿ ನಾವು ಶಾಲೆಯಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಲಿಲ್ಲ. ಇಲ್ಲದಿದ್ದರೆ ಮತ್ತೊಬ್ಬ ಕೇಸರಿ ಶಾಲು ಹಾಕಿಕೊಂಡು ಬರುತ್ತಾನೆ. ಹೀಗಾಗಿ ಶಾಲೆಯಲ್ಲಿ ಮತೀಯ ಭಾವನೆ ಇರಬಾರದೆಂಬ ದೃಷ್ಟಿಯಲ್ಲಿ ಇದನ್ನು ಜಾರಿಗೆ ತಂದಿದ್ದೆವು. ಇದು ಬಳಿಕ ಸಮವಸ್ತ್ರ್ರ V/s ಹಿಜಾಬ್‌ ಎಂಬಂತೆ ಆಗಬೇಕಿತ್ತು. ಆದರೆ, ದಾರಿ ತಪ್ಪಿಸಿದರು.

ಬಿಜೆಪಿ ಮುಸ್ಲಿಮರ ಸಹಿತ ಯಾರನ್ನೂ ದೂರ ಇಟ್ಟಿಲ್ಲ. ನಾವು ಯಾವುದೇ ಯೋಜನೆಯನ್ನು ಮತೀಯ ಆಧಾರದಲ್ಲಿ ವಿಭಜನೆ ಮಾಡಿಲ್ಲ. 45 ಕೋಟಿ ಜನಧನ್‌ ಖಾತೆಯನ್ನು ತೆರೆಯಲಾಯಿತು. ಮುದ್ರಾ ಯೋಜನೆಯನ್ನು ಜಾರಿಗೆ ತರಲಾಯಿತು. ಈ ಎಲ್ಲದರಲ್ಲೂ ಮುಸ್ಲಿಮರೇ ಹೆಚ್ಚಿನ ಫಲಾನುಭವಿಗಳಿದ್ದಾರೆ.

ಬಿರಿಯಾನಿ ತಿಂದು ಮುಸ್ಲಿಮರನ್ನು ಬಕ್ರಾ ಮಾಡಿದರು!

ಅತಿ ಹೆಚ್ಚು ಬಡವರು, ಶೈಕ್ಷಣಿಕವಾಗಿ ಹಿಂದುಳಿದವರಲ್ಲಿ ಮುಸ್ಲಿಮರೇ ಇದ್ದಾರೆ. ಹಾಗಾದರೆ ಇವರು ಮಾಡಿದ್ದೇನು? ಅವರನ್ನು ಮತ ಬ್ಯಾಂಕ್‌ ಆಗಿ ಬಳಸಿಕೊಂಡು ಬಿರಿಯಾನಿ ತಿಂದಿದ್ದು ಬಿಟ್ಟರೆ ಮಾಡಿದ್ದೇನು? ಮುಸ್ಲಿಮರನ್ನು ಬಕ್ರಾಗಳನ್ನಾಗಿ ಮಾಡಿದರು!

ಪಠ್ಯ ಪರಿಷ್ಕರಣೆ ಚರ್ಚೆಗೆ ಬರಲಿ

ಆಗ ಬರಗೂರು ರಾಮಚಂದ್ರ ಅವರ ಸಮಿತಿ ಶಿಫಾರಸು ಮಾಡಿದ್ದ ವಿಚಾರದಲ್ಲಿ ದೋಷಗಳಿವೆ ಎಂದು ಎನ್‌ಸಿಇಆರ್‌ಟಿ ಸಾರಾಸಗಟಾಗಿ ತಿರಸ್ಕರಿಸಿತ್ತು. ಆ ಕಾರಣಕ್ಕಾಗಿ ನಾವು ಹೊಸ ಪಠ್ಯವನ್ನು ಮಾಡಿದ್ದೆವು. ಈಗ ದೇಶಭಕ್ತಿಯ ಪಠ್ಯವನ್ನು ಹಾಕಿದರೆ ತಪ್ಪೇ? ಹೆಗಡೇವಾರ್‌ ಏನು ಬಿನ್‌ ಲಾಡೆನ್‌ ಅಲ್ಲವಲ್ಲಾ? ಇವರು ಚರ್ಚೆಗೆ ಬರಲಿ.

ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ಸೇ ಜಾತ್ಯತೀತ ಅಲ್ಲ

ಓಲೈಕೆಯ ರಾಜಕೀಯ ಮಾಡುವ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ಸೇ ಜಾತ್ಯತೀತ ಅಲ್ಲ. ಇವರು ಜಾತ್ಯತೀತವಾಗಿದ್ದರೆ ಸಮಾನ ನಾಗರಿಕ ಸಂಹಿತೆಗೆ ಬೆಂಬಲ ನೀಡಬೇಕಿತ್ತು. ಆದರೆ, ಅವರಿಗಿದು ಬೇಡ! ಏಕರೂಪ ನಾಗರಿಕ ಸಂಹಿತೆ ಎಲ್ಲರನ್ನೂ ಸಮಾನವಾಗಿ ನೋಡುವಂತೆ ಹೇಳುತ್ತದೆ. ಇದು ಅಪರಾಧವೇ? ಇದರಲ್ಲಿ ವಿಭಜನೆ ರಾಜಕೀಯ ಇದೆಯಾ? ಅಂಬೇಡ್ಕರ್‌ ಅವರೇ ಸಂವಿಧಾನದಲ್ಲಿ ಇದರ ಬಗ್ಗೆ ಉಲ್ಲೇಖಿಸಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಆಗಿದೆ. ಇದನ್ನು ಅನುಷ್ಠಾನಕ್ಕೆ ತರಲು ಇನ್ನೆಷ್ಟು ವರ್ಷ ಬೇಕು?

ಅಬಕಾರಿ ಭ್ರಷ್ಟಾಚಾರದ ತನಿಖೆಯಾಗಲಿ

ಕಾಂಗ್ರೆಸ್‌ ಇಂದು ಭ್ರಷ್ಟಾಚಾರದಲ್ಲಿ ತೊಡಗಿದೆ. ಒಂದೇ ಹುದ್ದೆಗೆ ನಾಲ್ವರನ್ನು ನೇಮಕ ಮಾಡಿ ಆದೇಶಿಸಿದೆ. ಅಲ್ಲದೆ, ಅಬಕಾರಿ ಲೇಬಲ್‌ ಅಂಟಿಸುವ ಕಾಮಗಾರಿಯನ್ನು ಎಲ್‌ 3 ಹಂತದ ಸಂಸ್ಥೆಗೆ ನೀಡಲಾಗಿದೆ. 56 ಕೋಟಿ ರೂಪಾಯಿ ಸ್ಕ್ಯಾಮ್‌ ಇದಾಗಿದ್ದು, ತನಿಖೆಗೆ ಬಂದ ಕೂಡಲೇ ರದ್ದುಪಡಿಸಿದ್ದಾರೆ. ಇದರ ತನಿಖೆಯಾಗಲಿ.

ಬಿಜೆಪಿ ಸೋಲಿಗೆ ಸಿ.ಟಿ. ರವಿ ಕೊಟ್ಟ ಮೂರು ಕಾರಣ
ಫಲಾನುಭವಿಗಳನ್ನು ಮತದಾರರನ್ನಾಗಿ ಪರಿವರ್ತನೆ ಮಾಡುವಲ್ಲಿ ನಾವು ವಿಫಲ, ಗ್ಯಾರಂಟಿ ಯೋಜನೆ ಹಾಗೂ ಕಾಂಗ್ರೆಸ್‌ ಹಬ್ಬಿಸಿದ ಸುಳ್ಳು ಸುದ್ದಿಗಳನ್ನು ಜನರ ಮನಸ್ಸಿನಿಂದ ತೆಗೆದುಹಾಕುವುದರಲ್ಲಿ ನಾವು ಸೋತಿದ್ದೇ ಬಿಜೆಪಿ ಸೋಲಿಗೆ ನಾನು ನೀಡುವ ಮೂರು ಕಾರಣ ಎಂದು ಸಿ.ಟಿ. ರವಿ ಹೇಳಿದ್ದಾರೆ.

ಕೋವಿಡ್‌ ವೇಳೆ ದುಡಿಯುವ ಅವಕಾಶ ಕಡಿಮೆಯಾಗಿದ್ದಕ್ಕೆ 5 ಕೆಜಿ ಅಕ್ಕಿ ಜತೆ ಮತ್ತೈದು ಕೆಜಿ ಸೇರಿಸಿ ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟರು. ಆದರೆ, ಮೂರು ವರ್ಷದ ಬಳಿಕ ಸಹಜ ಸ್ಥಿತಿಗೆ ಬಂದಾಗ ಹತ್ತರಲ್ಲಿ ಐದು ಕೆಜಿ ಅಕ್ಕಿಯನ್ನು ಕಡಿತ ಮಾಡಿದರು. ಅದೇ ಸಂದರ್ಭದಲ್ಲಿ ಬೇರೆ ತೊಂದರೆಯಿಂದ ಇನ್ನೂ ಒಂದು ಕೆಜಿ ಅಕ್ಕಿಯನ್ನು ಕಡಿತ ಮಾಡಲಾಯಿತು. ಆಗ ಜನರಿಗೆ ಕಾಂಗ್ರೆಸ್‌ ಗ್ಯಾರಂಟಿ ಕನೆಕ್ಟ್‌ ಆಯಿತು. ಇದರ ಜತೆಗೆ ಬಿಜೆಪಿ ರೇಷನ್‌ ಕಾರ್ಡ್‌ ಅನ್ನೇ ತಗೆದುಬಿಡುತ್ತದೆ ಎಂಬ ಅಪ ಪ್ರಚಾರವೂ ಆಯಿತು. ನಾವದನ್ನು ತಿಳಿಹೇಳುವಲ್ಲಿ ಎಡವಿದೆವು.

ನಾಯಕರೆಲ್ಲರೂ ಒಟ್ಟಾಗೋಣ

ದೇಶದಲ್ಲಿ ಲೋಕಸಭಾ ಚುನಾವಣೆ ದೇಶದ ರಕ್ಷಣೆ, ಅಭ್ಯುದಯಕ್ಕಾಗಿ ನಾವು ಮೋದಿಯವರನ್ನು ಅಧಿಕಾರಕ್ಕೆ ತರಬೇಕು. ಇದಕ್ಕಾಗಿ ನಾವು ನಾಯಕರು ಒಗ್ಗಟ್ಟಾಗಬೇಕು. ಆ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಬೇಕು.

ಅಣ್ಣಾಮಲೈ ಮಾಸ್‌, ಪಾಪ್ಯುಲರ್‌ ಲೀಡರ್

ಅಣ್ಣಾಮಲೈ ಮಾಸ್‌, ಪಾಪ್ಯುಲರ್‌ ಲೀಡರ್ ಆಗಿದ್ದಾರೆ. ಅವರಿಗೆ ರಾಜ್ಯದಲ್ಲಿ ಅಭಿಮಾನಿಗಳಿದ್ದಾರೆ. ತಮಿಳುನಾಡಿನಲ್ಲಿ ಅವರು ಸಂಚಲನ ಮೂಡಿಸಿದ್ದಾರೆ. ತಮಿಳುನಾಡಿನಲ್ಲಿ ಒಂದು ಮೂಲೆಯಲ್ಲಿರುವ ಬಿಜೆಪಿಯನ್ನು ಚರ್ಚೆಯಾಗುವ ಪಕ್ಷವಾಗಿ ಬದಲಾಯಿಸಿರುವ ಖ್ಯಾತಿ ಅವರದ್ದಾಗಿದೆ. ಹೀಗಾಗಿ ರೇಣುಕಾಚಾರ್ಯ ಅವರು ಏನನ್ನೋ ಹೇಳುವ ಭರದಲ್ಲಿ ಒಬ್ಬ ವ್ಯಕ್ತಿಯನ್ನು ನಗಣ್ಯ ಎನ್ನುವ ರೀತಿ ನೋಡಬಾರದು.

ಅಡ್ಜೆಸ್ಟ್‌ಮೆಂಟ್‌ ಬಗ್ಗೆ ಸಿ.ಟಿ. ರವಿ ಹೇಳಿದ್ದಿಷ್ಟು!

ಬಿಜೆಪಿ ಅವಧಿಯ ಯೋಜನೆಗಳ ತನಿಖೆ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದರು. ಅರ್ಕಾವತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಕೆಂಪಣ್ಣ ಆಯೋಗ ಕೊಟ್ಟಿರುವ ವರದಿ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ನಾನು ಹೇಳಿದೆ. ನಾವೇ ಈ ಕೆಲಸವನ್ನು ಮಾಡಬೇಕಿತ್ತು. ಈ ವಿಷಯದಲ್ಲಿ ನಾವು ತಪ್ಪು ಮಾಡಿದ್ದೇವೆ. ನಾವೇ ಮಾಡಿದ್ದರೆ ಪೇಸಿಎಂ ಎಂದು ನಾವು ಹೇಳಿಸಿಕೊಳ್ಳುವ ಪ್ರಮೇಯ ಬರುತ್ತಿರಲಿಲ್ಲ. ಕಟಕಟೆಯಲ್ಲಿ ಕಾಂಗ್ರೆಸ್‌ನವರು ನಿಲ್ಲುತ್ತಿದ್ದರು ಎಂದು ಹೇಳಿದ್ದೆ. ಅದಕ್ಕೆ ಮಾಧ್ಯಮದವರು ಮರು ಪ್ರಶ್ನೆ ಹಾಕಿ, “ಇದೇನಿದು ಅಡ್ಜೆಸ್ಟ್‌ಮೆಂಟ್‌ ರಾಜಕಾರಣವಾ?” ಎಂದು ಕೇಳಿದ್ದರು. ಅದಕ್ಕೆ ನಾನು, “ಇರಬಹುದು” ಎಂದೆ ಅಷ್ಟೆ.

ಜೆಡಿಎಸ್‌ ಜತೆ ಮೈತ್ರಿ ಬಗ್ಗೆ ಏನಂದ್ರು?

ನಾನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಮೈತ್ರಿ ಸಂಬಂಧ ಮಾತುಕತೆ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಹಾಗಾಗಿ ನಾನು ಏನೂ ಗೊತ್ತಿಲ್ಲದೆ, ಇದನ್ನು ತಿರಸ್ಕರಿಸುವುದೂ ಇಲ್ಲ, ಪುರಸ್ಕರಿಸುವುದೂ ಇಲ್ಲ. ಆದರೆ, ಪಕ್ಷದ ಸಂಸದೀಯ ಮಂಡಳಿಯು ದೇಶ ಹಾಗೂ ಪಕ್ಷದ ಹಿತದೃಷ್ಟಿಯಿಂದ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ.

ರಾಹುಲ್‌ ಗಾಂಧಿಯನ್ನು ನಿರ್ಲಕ್ಷ್ಯ ಮಾಡಲ್ಲ; ಧಾರಾವಾಹಿ ಕಥೆ ಹೇಳಿದ ಸಿ.ಟಿ. ರವಿ
ನಾನು ರಾಹುಲ್‌ ಗಾಂಧಿ ಸಹಿತ ಯಾರನ್ನೂ ನಿರ್ಲಕ್ಷ್ಯ ಮಾಡುವುದಿಲ್ಲ. ಸಂಕ್ರಾಂತಿ ಎಂಬ ಧಾರಾವಾಹಿಯೊಂದು ಬಹಳ ಹಿಂದೆ ಬರುತ್ತಿತ್ತು. ಅದರಲ್ಲಿ ಬರುವ ತಾತಪ್ಪನ ಪಾತ್ರಧಾರಿಯೊಬ್ಬ ಹೇಳುವ ಮಾತು ನನಗೆ ಈಗಲೂ ಬಹಳ ನೆನಪಿದೆ. “ಮಗಾ ಯಾರನ್ನೂ ನಿರ್ಲಕ್ಷ್ಯ ಮಾಡಬಾರದು. ಗಾಳಿ ಬಂದಾಗ ಒಂದು ಹುಲ್ಲು ಕಡ್ಡಿ ಹೋಗಿ ಗೋಪುರದ ಮೇಲೆ ನಿಂತುಕೊಳ್ಳುತ್ತದೆ. ಜನ ಕೈ ಮುಗಿಯಬೇಕಾದರೆ ಆ ಹುಲ್ಲು ಕಡ್ಡಿಗೂ ಗೌರವ ಸಿಗುತ್ತದೆ. ಹಾಗೇ ಆ ಗಾಳಿಯು ಬಿರುಗಾಳಿಯಾದರೆ ಗಟ್ಟಿಯಾಗಿರುವ ಗೋಪುರವೂ ಬಿದ್ದು ಹೋಗುತ್ತದೆ. ಹೀಗಾಗಿ ಯಾವುದನ್ನೂ ನಿರ್ಲಕ್ಷ್ಯ ಮಾಡಬೇಡ!” ಎಂಬ ಡೈಲಾಗ್‌ ಅನ್ನು ಕೇಳಿದ್ದೆ.

ಇದನ್ನೂ ಓದಿ: ಪ್ರತಾಪ್‌ ಸಿಂಹ ಸಂದರ್ಶನ: ಭರವಸೆ ಈಡೇರಿಸಲು ಸಿದ್ದರಾಮಯ್ಯ ವಿಫಲ; ದೇಶದ ಭವ್ಯ ಭವಿಷ್ಯಕ್ಕಾಗಿ ಮತ್ತೊಮ್ಮೆ ಮೋದಿ ಗೆಲ್ಲಬೇಕು

ಮೋದಿ ಆಯ್ಕೆ ಯಾಕೆ?

ಮನಮೋಹನ್‌ ಸಿಂಗ್‌ ಸರ್ಕಾರವು 10 ವರ್ಷ ಆಡಳಿತ ನಡೆಸಿತ್ತು. ಪ್ರತಿ ಬಾರಿಯೂ ಹಗರಣಗಳು. ಆದರೆ, ನರೇಂದ್ರ ಮೋದಿ ನೇತೃತ್ವದಲ್ಲಿನ 9 ವರ್ಷದ ಆಡಳಿತದಲ್ಲಿ ಒಂದು ಹಗರಣವಿದ್ದರೆ ತೋರಿಸಲಿ. ಹೀಗಾಗಿ ದೇಶದ ಹಿತದೃಷ್ಟಿಯಿಂದ ಜನರು ಮೋದಿಗೆ ಮತ ಹಾಕುತ್ತಾರೆ ಎಂದು ಸಿ.ಟಿ. ರವಿ ಅಭಿಪ್ರಾಯಪಟ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Bandh : ಸೆ. 29ರ ಕರ್ನಾಟಕ ಬಂದ್‌ಗೆ ವಾಟಾಳ್‌ ಟೀಮ್‌ ರೆಡಿ; ಹಲವು ಸಂಘಟನೆ ಬಲ, ಏನಿರುತ್ತೆ? ಏನಿರಲ್ಲ?

Karnataka Bandh: ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್‌ಗೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ, ಕೆಲವು ಬೆಂಬಲ ಕೊಡುವುದಿಲ್ಲ ಎಂದಿವೆ. ಹಾಗಿದ್ದರೆ ಏನಿರುತ್ತದೆ ಬಂದ್‌? ಇಲ್ಲಿದೆ ವಿವರ

VISTARANEWS.COM


on

Edited by

Karnataka Bandh sep 29
Koo

ಬೆಂಗಳೂರು: ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ ಬೆಂಗಳೂರು ಬಂದ್‌ (Bangalore Bandh) ಯಶಸ್ಸಿನ ಬೆನ್ನಿಗೇ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ (Vatal Nagaraj) ನೇತೃತ್ವದ ಕನ್ನಡ ಒಕ್ಕೂಟ ಕರೆ ನೀಡಿದ ಸೆಪ್ಟೆಂಬರ್‌ 29ರ ಕರ್ನಾಟಕ ಬಂದ್‌ಗೆ (Karnataka Bandh) ಭರದ ಸಿದ್ಧತೆಗಳು ನಡೆಯುತ್ತಿದೆ. ಸಂಘಟಕರು ನಾನಾ ಸಂಘಟನೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಹಲವು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಆದರೆ, ಕೆಲವು ಸಂಘಟನೆಗಳು ಒಂದೇ ವಾರದಲ್ಲಿ ನಡೆಯುತ್ತಿರುವ ಎರಡನೇ ಬಂದ್‌ ಬೆಂಬಲ ನೀಡಲು ಹಿಂದೇಟು ಹಾಕುತ್ತಿವೆ. ಈ ನಡುವೆ ಒಂದು ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇನಾದರೂ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದರೆ ಈಗಲೇ ಬಂದ್‌ ಕರೆಯನ್ನು ಹಿಂದೆ ಪಡೆಯಲು ಸಿದ್ಧ ಎಂದು ವಾಟಾಳ್‌ ನಾಗರಾಜ್‌ ಘೋಷಿಸಿದ್ದಾರೆ.

ಬಿಜೆಪಿ, ಜೆಡಿಎಸ್‌ ಪಕ್ಷಗಳ ಬೆಂಬಲ

ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆಯುತ್ತಿರುವ ಈ ಬಂದ್‌ಗೆ ಸಾಥ್‌ ನೀಡುವುದಾಗಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಘೋಷಣೆ ಮಾಡಿವೆ. ಕಾವೇರಿ ವಿಚಾರಕ್ಕಾಗಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಬುಧವಾರ ಜಂಟಿ ಪ್ರತಿಭಟನೆ ನಡೆಸಿದ ಪಕ್ಷಗಳು ಕರ್ನಾಟಕ ಬಂದ್‌ಗೆ ಬೆಂಬಲ ಘೋಷಿಸಿದವು.

ವಾಟಾಳ್‌ ನಾಗರಾಜ್‌ ಅವರು ಬುಧವಾರ ಫಿಲಂ ಚೇಂಬರ್ ಜೊತೆ ಸಭೆ ನಡೆಸಿದರು. ಚಿತ್ರರಂಗ ಸಂಪೂರ್ಣವಾಗಿ ಬೆಂಬಲ ನೀಡುವುದಾಗಿ ಚೇಂಬರ್‌ ಪ್ರಕಟಿಸಿತು.

ಹಾಗಿದ್ದರೆ ಕರ್ನಾಟಕ ಬಂದ್‌ಗೆ ಯಾರ್ಯಾರ ಬೆಂಬಲ ಇದೆ?

-ಓಲಾ,ಊಬರ್ ಯೂನಿಯನ್
-ಆದರ್ಶ ಆಟೋ ಚಾಲಕರ ಸಂಘ
-ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ
-ಕರ್ನಾಟಕ ರಾಜ್ಯ ಕಾರ್ಮಿಕರ ಜಾಗೃತಿ ವೇದಿಕೆ
-ಕರುನಾಡ ರೈತ ಸಂಘ
-ಕರವೇ ಶಿವರಾಮೇಗೌಡ ಬಣ
-ಕರವೇ ಪ್ರವೀಣ್ ಶೆಟ್ಟಿ ಬಣ
-ಲಾರಿ ಮಾಲೀಕರ ಸಂಘ
-ಕೈಗಾರಿಕೆಗಳ ಒಕ್ಕೂಟ
-ಪೀಣ್ಯ ಕೈಗಾರಿಕಾ ಸಂಘ
-ಹೋಟೆಲ್ ಮಾಲೀಕರ ಸಂಘ

ಯಾರ್ಯಾರ ಬೆಂಬಲ ಇಲ್ಲ?

-ಕರ್ನಾಟಕ ಚಾಲಕರ ಸಂಘ
-ಪೀಸ್ ಆಟೋ ಯೂನಿಯನ್
-ಕಬ್ಬು ಬೆಳೆಗಾರರ ಸಂಘ

50:50: ಇವರು ಇನ್ನೂ ತೀರ್ಮಾನ ಮಾಡಿಲ್ಲ?

-ಖಾಸಗಿ ಶಾಲಾ ಸಂಘಟನೆಗಳು
-ಏರ್ ಪೋರ್ಟ್ ಟ್ಯಾಕ್ಸಿ
–ಖಾಸಗಿ ಸಾರಿಗೆ ಸಂಘಟನೆ

ರಾಜ್ಯದಲ್ಲಿ ಬಂದ್‌ ದಿನ ಏನೆಲ್ಲ ಇರುತ್ತೆ. ಏನಿರುವುದಿಲ್ಲ?

ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್‌ಗೆ ಸುಮಾರು 1 ಸಾವಿರಕ್ಕೂ ಹೆಚ್ಚು ಸಂಘಟನೆಗಳು ಸಾಥ್ ನೀಡಲಿವೆ ಎಂದು ಹೇಳಲಾಗಿದ್ದು, ರಾಜ್ಯ-ರಾಜ್ಯ ರಾಜಧಾನಿಯಲ್ಲಿ ಕೆಲ ಸೇವೆಗಳು ವ್ಯತ್ಯಯವಾಗಲಿವೆ

ಹಾಗಿದ್ದರೆ ಏನೆಲ್ಲ ಸೇವೆ ಇರುತ್ತದೆ?: -ಆಸ್ಪತ್ರೆ, ಮೆಡಿಕಲ್, ಆಂಬುಲೆನ್ಸ್, ಬೆಂಬಲ ನೀಡದ ಒಕ್ಕೂಟದ ಆಟೋ, ಟ್ಯಾಕ್ಸಿ
ಏನೆಲ್ಲ ಸೇವೆಗಳು ಇರುವುದಿಲ್ಲ?: ಹೋಟೆಲ್, ಸಿನಿಮಾ ಹಾಲ್, ಮಾಲ್, ಆಟೋ, ಕ್ಯಾಬ್, ಬೇಕರಿ, ಓಲಾ, ಊಬರ್

ಕುರುಬೂರು ಶಾಂತ ಕುಮಾರ್‌ ಟೀಮ್‌ ಬೆಂಬಲ ಇರುತ್ತಾ?

ಬೆಂಗಳೂರು ಬಂದ್ ಸಕ್ಸಸ್ ಖುಷಿಯಲ್ಲಿರೋ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಕುರುಬೂರು ಶಾಂತಕುಮಾರ್ ಮತ್ತು ಟೀಮ್‌ ಕರ್ನಾಟಕ ಬಂದ್‌ಗೆ ಬೆಂಬಲ ನೀಡಬೇಕಾ, ಬೇಡ್ವಾ ಅನ್ನೋದನ್ನ ಸಿಎಂ ಭೇಟಿ ಬಳಿಕ ನಿರ್ಧರಿಸುವುದಾಗಿ ತಿಳಿಸಿದೆ. ಸರ್ಕಾರದ ನಡೆ ನೋಡಿ ಮುಂದಿನ ತೀರ್ಮಾನ ಅನ್ನೋ ಮೂಲಕ ಸದ್ಯಕ್ಕೆ ಬೆಂಬಲ ಇಲ್ಲ ಅನ್ನೋ ಸುಳಿವು ನೀಡಿದೆ. ಬೆಂಗಳೂರು ಬಂದ್‌ಗೆ ವಾಟಾಳ್‌ ನಾಗರಾಜ್‌ ಟೀಮ್‌ ಬೆಂಬಲ ಕೊಟ್ಟಿರಲಿಲ್ಲ.

ಅಂದು ಏನೇನು ಘಟನಾವಳಿ ನಡೆಯಲಿದೆ?

ಯಾವ ಕಾರಣಕ್ಕೂ ಸೆಪ್ಟೆಂಬರ್‌ 29ರ ಬಂದ್‌ ವೇಳೆ ಸೆಕ್ಷನ್‌ 144 ಜಾರಿ ಮೂಲಕ ಪ್ರತಿಭಟನೆ ಹತ್ತಿಕ್ಕಬಾರದು ಎಂದು ಆಗ್ರಹಿಸಿರುವ ವಾಟಾಳ್‌ ನಾಗರಾಜ್‌ ಅವರು ಶುಕ್ರವಾರ ಬೆಂಗಳೂರಿನ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ರ‍್ಯಾಲಿ ನಡೆಸಲು ಪ್ಲ್ಯಾನ್ ಮಾಡಿದ್ದಾರೆ. ರಾಜ್ಯದ ವಿವಿಧೆಡೆ ಟೋಲ್, ಏರ್ ಪೋರ್ಟ್ ಬಂದ್ ಮಾಡುವುದಕ್ಕೂ ಕರೆ ನೀಡಿದ್ದಾರೆ.

ಸಿಎಂ ಮನೆಗೆ ಮುತ್ತಿಗೆ ಯತ್ನ, ವಾಟಾಳ್‌ ನಾಗರಾಜ್‌ ವಶಕ್ಕೆ

ಈ ನಡುವೆ ವಾಟಾಳ್‌ ನಾಗರಾಜ್‌ ಮತ್ತು ಇತರ ಕನ್ನಡ ಪರ ಹೋರಾಟಗಾರರು ಮುಖ್ಯಮಂತ್ರಿಗಳ ನಿವಾಸಕ್ಕೆ ದಾಳಿ ಮಾಡಲು ಮುಂದಾದರು. ಅವರನ್ನು ತಡೆದು ವಶಕ್ಕೆ ಪಡೆಯಲಾಯಿತು. ಮುತ್ತಿಗೆಯನ್ನು ವಿಫಲಗೊಳಿಸಲಾಯಿತು.

Continue Reading

ಕರ್ನಾಟಕ

Cauvery Dispute:‌ ಕಾವೇರಿ ಕಿಚ್ಚು; ಸತ್ತ ಇಲಿಯನ್ನು ಬಾಯಿ ಬಳಿ ಇಟ್ಟು ಪ್ರತಿಭಟನೆ ನಡೆಸಿದ ರೈತರು

Cauvery Water Dispute: ಕಾವೇರಿ ನದಿ ನೀರು ಹಂಚಿಕೆ (Cauvery Water Dispute) ಗಲಾಟೆ ಹೆಚ್ಚಾಗುತ್ತಿದೆ. ಈ ಮಧ್ಯೆ ತಮಿಳುನಾಡಿನ ರೈತರು ಕೈಯಲ್ಲಿ ಸತ್ತ ಇಲಿಯನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

VISTARANEWS.COM


on

Edited by

tamil nadu
Koo

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ(Cauvery Dispute) ಗಲಾಟೆ ದಿನ ಕಳೆದಂತೆ ಕಾವೇರುತ್ತಿದೆ. ಈ ವಿಚಾರ ಕರ್ನಾಟಕ ಮತ್ತು ತಮಿಳುನಾಡಿನ ಮಧ್ಯೆ ಒಡಕು ಮೂಡುವಂತೆ ಮಾಡಿದೆ. ಇತ್ತ ಕರ್ನಾಟಕದ ರೈತರು ನೀರು ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರೆ ಅತ್ತ ತಮಿಳುನಾಡಿನ ಕೃಷಿಕರು ಸತ್ತ ಇಲಿಯನ್ನು ತಮ್ಮ ಬಾಯಿಯ ಬಳಿ ಇಟ್ಟುಕೊಂಡು ವಿಚಿತ್ರ ರೀತಿಯಲ್ಲಿ ಹೋರಾಟಕ್ಕೆ ಇಳಿದಿದ್ದಾರೆ.

ತಮಿಳಿನಾಡಿನ ತಿರುಚಿರಪಳ್ಳಿಯಲ್ಲಿ ರೈತರು ಈ ರೀತಿಯ ವಿಚಿತ್ರ ಪ್ರತಿಭಟನೆಗೆ ಇಳಿದು ರಾಜ್ಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ಕಾವೇರಿ ನೀರು ಒದಗಿಸಬೇಕೆಂದು ಕರ್ನಾಟಕ ಮತ್ತು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಸದ್ಯ ಈ ವಿಡಿಯೊ ವೈರಲ್‌ ಆಗಿದೆ. ಕರ್ನಾಟಕವು ಕಾವೇರಿ ನೀರನ್ನು ತಡೆಹಿಡಿಯುವುದನ್ನು ಮುಂದುವರಿಸಿದರೆ, ಭತ್ತದ ಕೃಷಿಗೆ ನೀರಿನ ಕೊರತೆ ಕಾಡಲಿದೆ. ಇದರಿಂದ ರೈತರು ಬದುಕುಳಿಯಲು ಇಲಿ ಮಾಂಸವನ್ನು ಸೇವಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎನ್ನುವುದನ್ನು ಸಂಕೇತಿಸುವಂತೆ ಇಲಿಯ ಮೃತದೇಹವನ್ನು ಕೈಯಲ್ಲಿಟ್ಟು ಪ್ರತಿಭಟನೆ ನಡೆಸಲಾಗಿದೆ.

ಇದೇ ಮೊದಲ ಸಲ ಅಲ್ಲ

ವಿಶೇಷವೆಂದರೆ ರೈತರು ಈ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಇದು ಮೊದಲ ಸಲವೇನಲ್ಲ. 2017ರಲ್ಲಿ 65 ವರ್ಷದ ಚಿನ್ನಗೊಡಂಗಿ ಪಳನಿಸ್ವಾಮಿ ಎನ್ನುವ ರೈತರೊಬ್ಬರು ಜೀವಂತ ಇಲಿಯೊಂದನ್ನು ಹಲ್ಲಿನ ನಡುವೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದರು. ಆ ಮೂಲಕ ತಮಿಳುನಾಡಿನ ರೈತರ ಸಮಸ್ಯೆಯನ್ನು ಸರ್ಕಾರದ ಗಮನ ಸೆಳೆಯಲು ಯತ್ನಿಸಿದ್ದರು.

“ಪರಿಸ್ಥಿತಿ ಸುಧಾರಿಸದಿದ್ದರೆ ನಾವು ಇಲಿಗಳನ್ನು ಸೇವಿಸ ಬೇಕಾದ ಪರಿಸ್ಥಿತಿ ಎದುರಾಗಬಹುದು ಎಂಬ ಸಂದೇಶವನ್ನು ನಾನು ನನ್ನ ಸಹವರ್ತಿಗಳೊಂದಿಗೆ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದೆ” ಎಂದು ಚಿನ್ನಗೊಡಂಗಿ ಪಳನಿಸ್ವಾಮಿ ತಿಳಿಸಿದ್ದರು.

ಅದಕ್ಕೂ ಮೊದಲು 2016ರಲ್ಲಿ, ತಮಿಳುನಾಡಿನ ತಿರುಚ್ಚಿಯಲ್ಲಿ ಸುಮಾರು 30 ರೈತರ ಗುಂಪು ಸತ್ತ ಇಲಿಗಳನ್ನು ಬಾಯಿ ಬಳಿ ಹಿಡಿದುಕೊಂಡು ಪ್ರತಿಭಟನೆ ನಡೆಸಿತ್ತು. ನೀರಿನ ಬಿಕ್ಕಟ್ಟು ಭತ್ತದ ಕೃಷಿಯ ಮೇಲೆ ತೀವ್ರ ಪರಿಣಾಮ ಬೀರಿದೆ ಮತ್ತು ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತವಾಗದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ. ಆರ್ಥಿಕ ಸಂಕಷ್ಟದ ಪರಿಣಾಮವಾಗಿ ಇಲಿ ಮಾಂಸವನ್ನೂ ರೈತರು ಸೇವಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಬಹುದು ಎಂಬುದನ್ನು ಆ ಗುಂಪು ವಿವರಿಸಿತ್ತು.

ಇದನ್ನೂ ಓದಿ: Cauvery Dispute : 3000 ಕ್ಯೂಸೆಕ್‌ ನೀರು ಬಿಡುಗಡೆ ಆದೇಶವನ್ನೂ ಪಾಲಿಸುತ್ತಾ ಸರ್ಕಾರ?; ಸಿಎಂ ಹೇಳಿದ್ದೇನು?

ರಾಜ್ಯಕ್ಕೆ ಹೊಡೆತ

ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ. ಸೆ. 28ರಿಂದ ಅಕ್ಟೋಬರ್‌ 15ರವರೆಗೆ ಪ್ರತಿದಿನ 3,000 ಕ್ಯೂಸೆಕ್‌ ನೀರು ಬಿಡುವಂತೆ ಆದೇಶ ನೀಡಿದೆ. ಸೆಪ್ಟೆಂಬರ್‌ 13ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 15 ದಿನಗಳವರೆಗೆ ಪ್ರತಿದಿನ 5,000 ಕ್ಯೂಸೆಕ್‌ ನೀರು ಬಿಡುವಂತೆ ಸೂಚಿಸಿತ್ತು. ಸೆ. 18ರಂದು ನಡೆದ ಪ್ರಾಧಿಕಾರದ ಸಭೆ ಅದನ್ನು ಅನುಮೋದಿಸಿತ್ತು. ಸೆಪ್ಟೆಂಬರ್‌ 21ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆ ಈ ಆದೇಶವನ್ನು ಎತ್ತಿ ಹಿಡಿಯಲಾಗಿತ್ತು. ಇದೀಗ ಮಂಗಳವಾರ (ಸೆ. 26) ನಡೆದ ಸಭೆಯಲ್ಲಿ ಕರ್ನಾಟಕದ ಮಂಡಿಸಿದ ವಾದವನ್ನು ಪರಿಗಣಿಸಿದ ಸಮಿತಿ ನೀರೇ ಬಿಡುವುದಿಲ್ಲ ಎಂಬ ಮನವಿಯನ್ನು ಒಪ್ಪಲಿಲ್ಲ. ಐದು ಸಾವಿರ ಕ್ಯೂಸೆಕ್‌ ಬದಲಿಗೆ ಮೂರು ಸಾವಿರ ಕ್ಯೂಸೆಕ್‌ಗೆ ಇಳಿಸಿ ಎಂದು ಸೂಚನೆ ನೀಡಿದೆ.

ಇನ್ನಷ್ಟು ದೇಶದ ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Rowdism in Ramanagara : ರೋಡಲ್ಲೇ ರೌಡಿಸಂ; ಚುನಾವಣಾಧಿಕಾರಿಗಳ ಮೇಲೆ ಕಾರು ಹಾಯಿಸಿ ಬ್ಯಾಲೆಟ್‌ ಪೇಪರ್‌ ಲೂಟಿ

Rowdism in Ramanagara : ರಾಮನಗರದ ಒಂದು ಹಾಲು ಉತ್ಪಾದಕರ ಸಂಘಕ್ಕೆ ಚುನಾವಣೆ ನಡೆಸಬಾರದು ಎಂದು ಆಗ್ರಹಿಸಿದ ರೌಡಿಗಳ ಗ್ಯಾಂಗ್‌ ಚುನಾವಣಾ ಅಧಿಕಾರಿಗಳ ಮೇಲೆಯೇ ದಾಳಿ ನಡೆಸಿ ಬ್ಯಾಲೆಟ್‌ ಪೇಪರ್‌ ಎತ್ತಿಕೊಂಡು ಹೋಗಿದೆ. ಆರೋಪಿಗಳನ್ನು ಗುರುತಿಸಲಾಗಿದೆ.

VISTARANEWS.COM


on

Edited by

Election officers attacked in Ramanagara
ದಾಳಿಗೆ ಒಳಗಾದ ಚುನಾವಣಾಧಿಕಾರಿ ಉಮೇಶ್‌ ಮತ್ತು ಉಷಾ
Koo

ಬೆಂಗಳೂರು: ಹಾಲು ಉತ್ಪಾದಕರ ಸಂಘದ (Milk Producers Union) ನಿರ್ದೇಶಕರ ಆಯ್ಕೆಗಾಗಿ (Election of directors) ಬಂದ ಚುನಾವಣಾಧಿಕಾರಿಗಳ ಮೇಲೆ ಕಾರು ಹಾಯಿಸಿ (Attack on Election officers) ಅವರ ಕೈಯಲ್ಲಿದ್ದ ಬ್ಯಾಲೆಟ್ ಪ್ಯಾಪರ್ (Ballet Paper), ಲ್ಯಾಪ್‌ಟಾಪ್, ಮೊಬೈಲ್ ಮತ್ತು ಇತರ ಸಾಮಗ್ರಿ ದರೋಡೆ ಮಾಡಿದ ಭಯಾನಕ ಘಟನೆಯೊಂದು ರಾಮನಗರ ಜಿಲ್ಲೆಯ (Ramanagara News) ಮಾಗಡಿ ತಾಲೂಕಿನ ಹೊಸಪಾಳ್ಯ ಬಳಿ ನಡೆದಿದೆ.

ಇಲ್ಲಿನ ಹುಳ್ಳೇನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದಲ್ಲಿ ನಿರ್ದೇಶಕ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯುವುದಿತ್ತು. ಚುನಾವಣಾಧಿಕಾರಿ ಉಮೇಶ್ ಮತ್ತು ಉಷಾ ಅವರು ಹಾಲು ಉತ್ಪಾದಕರ ಸಂಘದತ್ತ ಹೋಗುವಾಗ ಅವರ ಮೇಲೆ ದಾಳಿ ಮಾಡಲಾಗಿದೆ. ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಸಹಚರರು ಈ ಕೃತ್ಯ ಮಾಡಿದ್ದು ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಾಗಡಿ-ಕುಣಿಗಲ್‌ ರಸ್ತೆಯಲ್ಲಿ ಈ ದಾಳಿ ನಡೆದಿದೆ.

ಹಾಡುಹಗಲೇ ಭಯಾನಕ ಕೃತ್ಯ

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹುಳ್ಳೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರ ಸಂಘದ ಚುನಾವಣೆಗೆ ಎಲ್ಲವೂ ಸಿದ್ಧತೆ ನಡೆದಿತ್ತು. ಆದರೆ, ಪಂಚಾಯಿತಿ ಅಧ್ಯಕ್ಷ ಬಲರಾಮ್‌ ಮತ್ತು ಇತರ ಚುನಾವಣೆ ನಡೆಸಬಾರದು ಎಂದು ಪಟ್ಟು ಹಿಡಿದಿದ್ದರು. ಆದರೆ, ದಿನಾಂಕ ನಿಗದಿಯಾಗಿ ಎಲ್ಲ ವ್ಯವಸ್ಥೆಗಳೂ ನಡೆದಿದ್ದವು.

ಉಮೇಶ್‌ ಮತ್ತು ಉಷಾ ಎಂಬ ಇಬ್ಬರು ಚುನಾವಣಾ ಅಧಿಕಾರಿಗಳಾಗಿ ನಿಯುಕ್ತರಾಗಿದ್ದರು. ಬುಧವಾರ ಅವರು ಕಾರಿನಲ್ಲಿ ಹಾಲು ಉತ್ಪಾದಕರ ಸಂಘದತ್ತ ಸಾಗುತ್ತಿದ್ದಂತೆಯೇ ಪುಂಡರ ತಂಡವೊಂದು ಅವರ ಕಾರನ್ನು ಅಡ್ಡಗಟ್ಟಿತ್ತು. ಮಾರಕಾಸ್ತ್ರಗಳನ್ನು ತೋರಿಸಿ ಕಾರಿನಿಂದ ಇಳಿಸಿತು.

Attack on Election officers in Magadi
ಚುನಾವಣಾಧಿಕಾರಿ ಮೇಲೆ ಕಾರು ಹಾಯಿಸಿದ ದೃಶ್ಯ ಮೊಬೈಲ್‌ನಲ್ಲಿ ದಾಖಲಾಗಿದೆ

ಚುನಾವಣಾಧಿಕಾರಿಗಳ ಕಾರನ್ನು ಅಡ್ಡಗಟ್ಟಿ ಅವರನ್ನು ಕೆಳಗೆ ಇಳಿಸಿದ ದುಷ್ಟರು ಕಾರಿನಲ್ಲಿದ್ದ ಬ್ಯಾಲೆಟ್‌ ಪೇಪರ್‌ ಮತ್ತು ಲ್ಯಾಪ್‌ಟಾಪ್‌ಗಳನ್ನು ಕಿತ್ತುಕೊಂಡಿತು. ಉಮೇಶ್‌ ಅವರು ತಮ್ಮ ಕೈಯಿಂದ ಕಿತ್ತುಕೊಂಡ ಪೇಪರ್‌ಗಳನ್ನು ಕಸಿದುಕೊಳ್ಳಲು ಅವರನ್ನು ಬೆನ್ನಟ್ಟಿದರು. ಆದರೆ ದುಷ್ಕರ್ಮಿಗಳು ತಾವು ಬಂದಿದ್ದ ಸ್ಯಾಂಟ್ರೋ ಕಾರಿನಲ್ಲಿ ಕುಳಿತು ಪರಾರಿಯಾದರು. ಈ ಹಂತದಲ್ಲಿ ಕೆಲವರು ಕಾರನ್ನು ನಿಲ್ಲಿಸಲು ಯತ್ನಿಸಿದರು. ಆದರೆ, ದುಷ್ಕರ್ಮಿಗಳು ಅವರನ್ನು ತಳ್ಳಿ ಮುಂದಕ್ಕೆ ಸಾಗಿದರು. ಈ ಹಂತದಲ್ಲಿ ಕಾರಿನ ಮುಂಭಾಗದಲ್ಲಿದ್ದ ಉಷಾ ಅವರ ಮೇಲೆಯೇ ಕಾರು ನುಗ್ಗಿತ್ತು. ಕಾರು ಡಿಕ್ಕಿಯಾಗಿ ಮುಗ್ಗರಿಸಿ ಬಿದ್ದ ಅವರು ರಸ್ತೆಗೆ ಉರುಳಿದರು.

ಮಾಜಿ ಅಧ್ಯಕ್ಷ ಬಲರಾಮ್‌ ಮತ್ತು ಟೀಮ್‌, ಕಾರಿಗಾಗಿ ಶೋಧ

ಇದು ಮಾಜಿ ಅಧ್ಯಕ್ಷ ಬಲರಾಂ ಮತ್ತು ಅವನ ಸಹಚರರ ಕೃತ್ಯ ಎಂದು ಪೊಲೀಸರಿಗೆ ತಿಳಿದುಬಂದಿದೆ. ಸ್ಥಳೀಯರು ಕೂಡಾ ಇದನ್ನು ದೃಢೀಕರಿಸಿದ್ದಾರೆ.

Attack on Election officers
ಬಲರಾಮ ಮತ್ತು ಅವನ ಗ್ಯಾಂಗ್‌

ಹುಲ್ಲೇನಹಳ್ಳಿ ನಾಲ್ಕು ವ್ಯಕ್ತಿಗಳಿಂದ ಕೃತ್ಯ ನಡೆಸಿದೆ. ಗ್ರಾಪಂ ಮಾಜಿ ಅಧ್ಯಕ್ಷ ಬಲರಾಮ ಬಳಗದಲ್ಲಿ ಗುರುತಿಸಿಕೊಂಡಿದ್ದ ಹೇಮಂತ್, ಸೀನು,‌ ದಾಸೇಗೌಡ, ಮತ್ತೊಬ್ಬನಿಂದ ಈ ಕೃತ್ಯ ನಡೆದಿದೆ ಎಂದು ಎಸ್‌ಪಿ ಕಾರ್ತಿಕ್‌ ರೆಡ್ಡಿ ತಿಳಿಸಿದ್ದಾರೆ. ಆರೋಪಿಗಳು ಮತ್ತು ಸ್ಯಾಂಟ್ರೋ ಕಾರು ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದರು.

ಮಾಜಿ ಶಾಸಕ ಮಂಜು ಕುಮ್ಮಕ್ಕು ಆರೋಪ

ಈ ನಡುವೆ, ದರೋಡೆಗೆ ಜೆಡಿಎಸ್ ಮಾಜಿ ಶಾಸಕ ಎ ಮಂಜು ಕುಮ್ಮಕ್ಕು ನೀಡಿದ್ದಾರೆ. ಮಾಜಿ ಅಧ್ಯಕ್ಷ ಬಲರಾಮ್ ತನ್ನ ಸಹಚರರ ಮೂಲಕ ಈ ಕೃತ್ಯ ನಡೆಸಿದ್ದಾನೆ ಎಂದು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂರ್ತಿ ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಪ್ರವೀಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

23 ವರ್ಷದ ಬಳಿಕ ಚುನಾವಣೆ ನಡೆಯುತ್ತಿತ್ತು!

ಹುಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಾಕಾರ ಸಂಘದ ನಿರ್ದೇಶಕರ ಚುನಾವಣೆ 23 ವರ್ಷಗಳ ಬಳಿಕ ನಡೆಯುತ್ತಿದೆ. ಇಲ್ಲಿ ಚುನಾವಣೆ ನಡೆಯಬೇಕು ಎನ್ನುವುದು ಬಹು ವರ್ಷಗಳ ಬೇಡಿಕೆಯಾಗಿತ್ತು. ಆದರೆ, ಹುಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಬೆಂಬಲಿಗರ ತಂಡವು ಹಾಲು ಉತ್ಪಾದಕರ ಸಂಘದ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಈ ಕೃತ್ಯವನ್ನು ಎಸಗಿದೆ ಎಂದು ಹೇಳಲಾಗುತ್ತಿದೆ.

Continue Reading

ಕರ್ನಾಟಕ

MP Muniswamy : ಸಚಿವ ಬೈರತಿ, ಶಾಸಕ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಸಂಸದ ಮುನಿಸ್ವಾಮಿ

MP Muniswamy : ಎರಡು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ತಮ್ಮ ಮೇಲೆ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದಲ್ಲದೆ, ಹಲ್ಲೆಗೆ ಮುಂದಾಗಲಾಗಿದೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಅವರು ಕೋಲಾರ ಶಾಸಕ ನಾರಾಯಣಸ್ವಾಮಿ, ಉಸ್ತುವಾರಿ ಸಚಿವ ಬೈರತಿ ಸುರೇಶ್, ಕೋಲಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

VISTARANEWS.COM


on

Edited by

Kolara MP Muniswamy complaint to governor of Karnataka
Koo

ಬೆಂಗಳೂರು: ಕೋಲಾರ ಶಾಸಕ ನಾರಾಯಣಸ್ವಾಮಿ (Kolar MLA Narayanaswamy) ಈಚೆಗೆ ಕಾರ್ಯಕ್ರಮವೊಂದರಲ್ಲಿ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಹಲ್ಲೆಗೆ ಮುಂದಾಗಿದ್ದಾರೆ. ಜತೆಗೆ ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್ (Kolar Incharge Minister Byrathi Suresh), ಕೋಲಾರ ಎಸ್‌ಪಿ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದಾರೆ ಎಂದು ಕೋಲಾರ ಸಂಸದ ಮುನಿಸ್ವಾಮಿ (Kolar MP Muniswamy) ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಹಲ್ಲೆ ಆರೋಪ ಪ್ರಕರಣ ಈಗ ರಾಜ್ಯಪಾಲರ ಅಂಗಳ ತಲುಪಿದೆ. ಉಸ್ತುವಾರಿ ಸಚಿವ ಬೈರತಿ ಸುರೇಶ್, ಕೋಲಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧವೂ ಸಂಸದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ (MLC Chalavadi Narayanaswamy), ಕೇಶವ್ ಪ್ರಸಾದ್ ಸೇರಿದಂತೆ 30 ಮಂದಿ ನಿಯೋಗ ತೆರಳಿ ದೂರು ನೀಡಿದೆ.

ಜನಪ್ರತಿನಿಧಿ ಮೇಲೆ ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ. ಹಾಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.

ನನ್ನನ್ನೂ ಸೇರಿದಂತೆ, ಎಲ್ಲರ ವಿರುದ್ಧ ತನಿಖೆ ಆಗಲಿ: ಕೋಲಾರ ಸಂಸದ ಮುನಿಸ್ವಾಮಿ

ಸಂವಿಧಾನದಲ್ಲಿ ಆಡಳಿತ ಪಕ್ಷಕ್ಕೆ ಎಷ್ಟು ಅಧಿಕಾರ ಇದೆಯೋ, ವಿಪಕ್ಷಗಳಿಗೂ ಅಷ್ಟೇ ಹಕ್ಕು ಇದೆ. ಇಡೀ ಕೋಲಾರ ಜಿಲ್ಲೆಯಲ್ಲಿ ಇರುವ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಅಂತ ಹೇಳಿದ್ದರು. ರೈತರ ಜಮೀನನ್ನು ಕಬಳಿಸುವ ಕೆಲಸ ಮಾಡಿದ್ದಾರೆ. ರೈತರ ವಿರುದ್ಧ ಒಕ್ಕಲೆಬ್ಬಿಸುವ ಕೆಲಸವನ್ನು ಮಾಡಿದ್ದೀರಿ. ರಾಜಕೀಯ ವೇದಿಕೆ ಮೇಲೂ ಭೂ ಕಳ್ಳರಿದ್ದಾರೆ ಎಂದು ನಾನು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ನನ್ನನ್ನು ಹೊರಗೆ ದಬ್ಬಿಸುವ ಕೆಲಸ ಮಾಡಿದ್ದಾರೆ

ಎಸ್‌ಎನ್‌ ಸಿಟಿ ಅಂತ ಲೇಔಟ್ ಮಾಡಿದ್ದಾರೆ. ನನ್ನನ್ನೂ ಸೇರಿದಂತೆ, ಎಲ್ಲರ ವಿರುದ್ಧ ತನಿಖೆ ಆಗಲಿ ಅಂತ ಹೇಳಿದೆ. ಆಗ ಕೋಲಾರ ಶಾಸಕ ನಾರಾಯಣಸ್ವಾಮಿ ಹಾಗೂ ಉಸ್ತುವಾರಿ ಸಚಿವರು ನನ್ನನ್ನು ಹೊರಗೆ ದಬ್ಬಿಸುವ ಕೆಲಸ ಮಾಡಿದರು. ಹಾಗಾಗಿ ಉಸ್ತುವಾರಿ ಸಚಿವ ಬೈರತಿ ಸುರೇಶ್, ಶಾಸಕ ನಾರಾಯಣಸ್ವಾಮಿ ಹಾಗೂ ಕೋಲಾರ ಎಸ್‌ಪಿ ವಿರುದ್ಧ ದೂರು ನೀಡಿದ್ದೇನೆ ಎಂದು ಸಂಸದ ಮುನಿಸ್ವಾಮಿ ಹೇಳಿದರು.

ಇದನ್ನೂ ಓದಿ: BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

ರೈತರ ಪರವಾಗಿ ಹೋರಾಟ ಮುಂದುವರಿಯಲಿದೆ

ಕೋಲಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡುವಂತೆ ಮನವಿ ಮಾಡಲಿದ್ದೇವೆ. ದೆಹಲಿಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರಿಗೂ ದೂರು ನೀಡುತ್ತೇನೆ. ಎಷ್ಟೇ ಗದಾ ಪ್ರಹಾರ ಮಾಡಿದರೂ ನಮ್ಮ ರೈತರ ಪರವಾಗಿ ನನ್ನ ಹೋರಾಟ ನಡೆಯಲಿದೆ ಎಂದು ಸಂಸದ ಮುನಿಸ್ವಾಮಿ ಇದೇ ವೇಳೆ ಹೇಳಿದರು.

Continue Reading
Advertisement
Karnataka Bandh sep 29
ಕರ್ನಾಟಕ49 seconds ago

Karnataka Bandh : ಸೆ. 29ರ ಕರ್ನಾಟಕ ಬಂದ್‌ಗೆ ವಾಟಾಳ್‌ ಟೀಮ್‌ ರೆಡಿ; ಹಲವು ಸಂಘಟನೆ ಬಲ, ಏನಿರುತ್ತೆ? ಏನಿರಲ್ಲ?

mobile
ಕ್ರೈಂ53 seconds ago

Mobile Explodes: ಮೊಬೈಲ್‌ ಸ್ಫೋಟಗೊಂಡು ಮೂವರಿಗೆ ಗಾಯ; ಚಾರ್ಜ್‌ಗೆ ಹಾಕುವ ಮುನ್ನ ಎಚ್ಚರ!

tamil nadu
ಕರ್ನಾಟಕ10 mins ago

Cauvery Dispute:‌ ಕಾವೇರಿ ಕಿಚ್ಚು; ಸತ್ತ ಇಲಿಯನ್ನು ಬಾಯಿ ಬಳಿ ಇಟ್ಟು ಪ್ರತಿಭಟನೆ ನಡೆಸಿದ ರೈತರು

Virat kohli
ಕ್ರಿಕೆಟ್19 mins ago

ind vs Aus : ಆಸೀಸ್​ ವಿರುದ್ಧ ಆರಂಭಿಕರಾಗಿ ಆಡಲಿದ್ದಾರೆ ರೋಹಿತ್​- ವಿರಾಟ್​ ಜೋಡಿ

Election officers attacked in Ramanagara
ಕರ್ನಾಟಕ38 mins ago

Rowdism in Ramanagara : ರೋಡಲ್ಲೇ ರೌಡಿಸಂ; ಚುನಾವಣಾಧಿಕಾರಿಗಳ ಮೇಲೆ ಕಾರು ಹಾಯಿಸಿ ಬ್ಯಾಲೆಟ್‌ ಪೇಪರ್‌ ಲೂಟಿ

Kolara MP Muniswamy complaint to governor of Karnataka
ಕರ್ನಾಟಕ53 mins ago

MP Muniswamy : ಸಚಿವ ಬೈರತಿ, ಶಾಸಕ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಸಂಸದ ಮುನಿಸ್ವಾಮಿ

Nepal Team
ಕ್ರಿಕೆಟ್1 hour ago

Asian Games 2023 : ಏಷ್ಯನ್ ಗೇಮ್ಸ್​ನಲ್ಲಿ ನೇಪಾಳ ತಂಡ ಸೃಷ್ಟಿಸಿದ ಮಾಡಿದ ದಾಖಲೆಗಳ ವಿವರ ಇಲ್ಲಿದೆ

Malayalam Film 2018
South Cinema1 hour ago

Oscars 2024: ‘ಆಸ್ಕರ್‌’ಗೆ ಪ್ರವೇಶ ಪಡೆದ ಮಲಯಾಳಂ ಸಿನಿಮಾ; ನೀವೂ ಇದನ್ನು ನೋಡಿರುತ್ತೀರಿ!

Mulayam Singh Yadav Statue
ದೇಶ1 hour ago

Mulayam Singh Yadav: ಮುಲಾಯಂ ಸಿಂಗ್‌ ಮೂರ್ತಿ ತೆರವು; ಯೋಗಿ ನಾಡಲ್ಲಿ ರೂಲ್ಸ್‌ ಎಂದರೆ ರೂಲ್ಸ್!

Parineeti Chopra with Raghav
ಬಾಲಿವುಡ್1 hour ago

Parineeti Chopra: ‘ಓ ಪ್ರಿಯಾ’; ಪತಿಗಾಗಿ ವಿಶೇಷ ಹಾಡು ರೆಕಾರ್ಡ್‌ ಮಾಡಿದ ಪರಿಣಿತಿ ಚೋಪ್ರಾ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

bangalore bandh
ಕರ್ನಾಟಕ1 day ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

dina bhavishya
ಪ್ರಮುಖ ಸುದ್ದಿ10 hours ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ2 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌