Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ - Vistara News

ಕರ್ನಾಟಕ

Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

Prajwal Revanna Case: ಎಸ್‌ಐಟಿ ವಿಚಾರಣೆ ವೇಳೆ ಯಾವುದೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್‌ನ ಕೇಳಬೇಕು ಎಂದಷ್ಟೇ ಪ್ರಜ್ವಲ್ ಹೇಳುತ್ತಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಹೊಳೆನರಸೀಪುರ ನಿವಾಸಕ್ಕೆ ಕರೆದೊಯ್ದು ಮಹಜರು ನಡೆಸಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ.

VISTARANEWS.COM


on

Prajwal Revanna Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ (Prajwal Revanna Case) ಬಂಧನವಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿಚಾರಣೆ ತೀವ್ರಗೊಂಡಿದೆ. ಎಸ್‌ಐಟಿ ಕಸ್ಟಡಿಯಲ್ಲಿರುವ ಪ್ರಜ್ವಲ್‌, ಯಾವುದೇ ಪ್ರಶ್ನೆಗೂ ಉತ್ತರಿಸದೇ ಸುಮ್ಮನಿರುವುದರಿಂದ ಬಾಯಿಬಿಡಿಸುವುದು ಅಧಿಕಾರಿಗಳಿಗೆ ತಲೆನೋವಾಗಿದೆ. ಯಾವುದೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್‌ನ ಕೇಳಬೇಕು ಎಂದಷ್ಟೇ ಪ್ರಜ್ವಲ್ ಹೇಳುತ್ತಿದ್ದಾರೆ. ಮತ್ತೊಂದೆಡೆ ಹೊಳೆನರಸೀಪುರ ನಿವಾಸಕ್ಕೆ ಕರೆದೊಯ್ದು ಮಹಜರು ನಡೆಸಲು ಸಿದ್ಧತೆ ನಡೆಯುತ್ತಿದೆ.

ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇಂದು ಪ್ರಜ್ವಲ್‌ನ ಕರೆದೊಯ್ದು ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ. ಹೀಗಾಗಿ ಹೊಳೆನರಸೀಪುರ ಪೊಲೀಸರಿಗೆ ಬಂದೋಬಸ್ತ್ ಏರ್ಪಡಿಸಲು ಸೂಚನೆ ನೀಡಲಾಗಿದೆ. ಮನೆ ಕೆಲಸದಾಕೆ ಮೇಲಿನ ಲೈಂಗಿಕ ದೌರ್ಜನ್ಯ ಸಂಬಂಧ ಸ್ಥಳ ಮಹಜರು ನಡೆಯಲಿದೆ.

ಏನೇ ಕೇಳಿದ್ರೂ ಲಾಯರ್‌ ಬಳಿ ಕೇಳಿ ಹೇಳುವೆ ಎನ್ನುವ ಸಂಸದ

ನೆನ್ನೆ ಇಡೀ ದಿನದ ವಿಚಾರಣೆಯಲ್ಲಿ ಪ್ರಜ್ವಲ್ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡಿಲ್ಲ ಎನ್ನಲಾಗಿದೆ. ತನಿಖಾಧಿಕಾರಿ ಎಷ್ಟೇ ಪ್ರಶ್ನೆ ಮಾಡಿದರೂ ನಮ್ಮ ಲಾಯರ್‌ನ ಕೇಳಬೇಕು ಎಂದು ಪ್ರಜ್ವಲ್ ಹೇಳಿದ್ದಾರೆ, ನನಗೂ ಪ್ರಕರಣಕ್ಕೂ ಸಂಬಂಧವಿಲ್ಲ, ನೀವು ಏನೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್ ಹತ್ತಿರ ಮಾತನಾಡಿ ಹೇಳುವೆ. ಏನೇ ಉತ್ತರ ಕೊಡುವುದಿದ್ದರೂ ಲಾಯರ್ ಬಳಿ ಮಾತನಾಡಿ ಆ ನಂತರ ಉತ್ತರಿಸುತ್ತೇನೆ ಎಂದು ಪ್ರಜ್ವಲ್ ಹೇಳಿದ್ದಾರೆ.

ಮೊಬೈಲ್ ಪತ್ತೆ ಮಾಡೋದೆ ಸವಾಲು

ವಿಚಾರಣೆ ಚುರುಕುಗೊಳಿಸಿದ ಎಸ್‌ಐಟಿ ಅಧಿಕಾರಿಗಳಿಗೆ ಪ್ರಜ್ವಲ್ ಮೊಬೈಲ್ ಪತ್ತೆ ಮಾಡೋದೆ ದೊಡ್ಡ ಸವಾಲಾಗಿದೆ. ವಿಡಿಯೋ ರೆಕಾರ್ಡ್ ಮಾಡಿದ ಮೊಬೈಲ್‌ಗಾಗಿ ಎಸ್‌ಐಟಿ ಹುಡುಕಾಟ ನಡೆಸುತ್ತಿದೆ. ಆದರೆ, ಒಂದು ವರ್ಷದ ಹಿಂದೆಯೇ ಮೊಬೈಲ್ ಕಳೆದುಹೋಗಿದೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಒಂದು ವರ್ಷದ ಹಿಂದೆಯೇ ಮೊಬೈಲ್ ಕಳೆದುಹೋಗಿದೆ ಎಂದಿರುವ ಪ್ರಜ್ವಲ್, ಮೊಬೈಲ್ ಕಳೆದುಹೋಗಿದ್ದಕ್ಕೆ ನಾನು ಸ್ಥಳೀಯ ಠಾಣೆಯಲ್ಲೂ ದೂರು ನೀಡಿದ್ದೆ. ಕೆಎಸ್‌ಪಿ ಆ್ಯಪ್‌ ಮೂಲಕವೂ ದೂರು ದಾಖಲಿಸಿದ್ದೆ. ಕಳೆದ ವರ್ಷ ಮಾರ್ಚ್ 29 ರಂದು ಪಿಎ ಭರತ್ ರಾಜ್ ಮೂಲಕ ದೂರು ನೀಡಲಾಗಿದೆ. ಪೊಲೀಸರು ಕೂಡ ಕೇಸ್ ದಾಖಲಿಸಿಕೊಂಡು, ಮೊಬೈಲ್ ಪತ್ತೆಗೆ ಮುಂದಾಗಿದ್ದರು ಎಂದು ಹೇಳಿದ್ದಾರೆ.

ಪ್ರಜ್ವಲ್ ಹೇಳಿಕೆ ಬೆನ್ನಲ್ಲೇ ಹೊಳೆನರಸೀಪುರ ಪೊಲೀಸರನ್ನು ಎಸ್‌ಐಟಿ ಅಧಿಕಾರಿಗಳು ಸಂಪರ್ಕಿಸಿದ್ದು, ಈ ವೇಳೆ ಮೊಬೈಲ್ ಕಳೆದುಹೋದ ಬಗ್ಗೆ ಎನ್‌ಸಿಆರ್ ದಾಖಲಾಗಿರುವ ಮಾಹಿತಿ ಸಿಕ್ಕಿದೆ. ಆದರೆ ಎಷ್ಟೇ ಹುಡುಕಿದರೂ ಮೊಬೈಲ್ ಸಿಕ್ಕಿಲ್ಲ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ. ಹೀಗಾಗಿ‌ ಮೊಬೈಲ್ IMEI ನಂಬರ್ ಪಡೆದು ಮೊಬೈಲ್ ಪತ್ತೆ ಮುಂದಾದ ಎಸ್‌ಐಟಿ ಮುಂದಾಗಿದೆ.

ನೆನ್ನೆ ರಾತ್ರಿ 9 ಗಂಟೆಯವರೆಗೆ ಪ್ರಜ್ವಲ್ ವಿಚಾರಣೆ ನಡೆಸಿದ್ದ ಎಸ್ಐಟಿ ಅಧಿಕಾರಿಗಳು, ನಂತರ ಪ್ರಜ್ವಲ್‌ಗೆ ಊಟದ ವ್ಯವಸ್ಥೆ ಮಾಡಿದ್ದರು. ರಾತ್ರಿ 11.30ರ ತನಕ ನಿದ್ದೆ ಬರದೇ ಕೂತಿದ್ದ ಪ್ರಜ್ವಲ್‌, ನಂತರ ನಿದ್ದೆಗೆ ಜಾರಿದ್ದರು. ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ‌ ಅಸಮರ್ಪಕ ಉತ್ತರಗಳನ್ನು ನೀಡಿದ ಹಿನ್ನೆಲೆಯಲ್ಲಿ ಇಂದು ಕೂಡ ವಿಚಾರಣೆ ನಡೆಸಿ ಲೈಂಗಿಕ ದೌರ್ಜನ್ಯ ಸಂಬಂಧ ಹೇಳಿಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Bhavani Revanna: ಮಗ ಬಂದ, ಅಮ್ಮ ನಾಪತ್ತೆ! ಮನೆಯಿಂದ ಮಾಯವಾದ ಭವಾನಿ ರೇವಣ್ಣ; ಕಾದು ಕುಳಿತ ಎಸ್‌ಐಟಿ

6 ದಿನಕ್ಕೆ ಮುಗಿಯಲ್ವಾ ಪ್ರಜ್ವಲ್ ಪೊಲೀಸ್ ಕಸ್ಟಡಿ?

ಸದ್ಯ ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣರನ್ನು ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ. ಕ್ತೈಂ ನಂಬರ್ 107 ಸಂಬಂಧಿಸಿದಂತೆ ಮಾತ್ರ ವಿಚಾರಣೆ ನಡೆಸಲಾಗುತ್ತಿದೆ. ಇದಲ್ಲದೆ ಸಿಐಡಿ ಸೈಬರ್ ಠಾಣೆಯಲ್ಲಿ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಮೂರು ಎಫ್‌ಐಆರ್‌ಗಳಿಗೆ ಪ್ರತ್ಯೇಕ ತನಿಖಾಧಿಕಾರಿ ನೇಮಕ ಮಾಡಲಾಗಿದೆ. ಹೀಗಾಗಿ ಹೊಳೆ ನರಸೀಪುರ ಕೇಸ್ ಕಸ್ಟಡಿ ಮುಗಿದ ಬಳಿಕ ಸಿಐಡಿ ಸೈಬರ್ ಠಾಣೆಯ ಎಫ್‌ಐಆರ್ ಮೇರೆಗೆ ಅರೆಸ್ಟ್ ಮಾಡಲಾಗುತ್ತದೆ. ಸಿಐಡಿಯ ಎರಡೂ ಎಫ್‌ಐಆರ್‌ಗಳಲ್ಲಿ ಪ್ರತ್ಯೇಕವಾಗಿ ಪ್ರಜ್ವಲ್‌ನ ಕಸ್ಟಡಿಗೆ ಪಡೆಯಲು ಎಸ್‌ಐಟಿ ನಿರ್ಧಾರ ಮಾಡಿದೆ. ಹೀಗಾಗಿ 10 ರಿಂದ 15 ದಿನ ಪ್ರಜ್ವಲ್ ಪೊಲೀಸ್ ಕಸ್ಟಡಿಯಲ್ಲೇ ಇರುವ ಸಾಧ್ಯತೆ ಇದೆ. ಹೀಗಾಗಿ 6 ದಿನಕ್ಕೇ ಪ್ರಜ್ವಲ್‌ ವಿಚಾರಣೆ ಮುಗಿಯುವುದಿಲ್ಲ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

VISTARANEWS.COM


on

ನರೇಂದ್ರ ಮೋದಿ

ನರೇಂದ್ರ ಮೋದಿ ನಾಯಕತ್ವವನ್ನು ಶ್ಲಾಘಿಸಿದ ಕಿಚ್ಚ.

ಸುದೀರ್ಘ ಅವಧಿಗೆ ಭಾರತದ ಚುನಾಯಿತ ಪ್ರಧಾನಮಂತ್ರಿಯಾಗಿ ಹೊಸ ಇತಿಹಾಸ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಟ ಕಿಚ್ಚ ಸುದೀಪ್ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುದೀಪ್, “12 ವರ್ಷಗಳು ಕಳೆದರೂ ಅದೇ ಉತ್ಸಾಹ, ಅದೇ ಕಾರ್ಯವೇಗ, ಕಿಂಚಿತ್ತೂ ದಣಿವೇ ಇಲ್ಲ” ಎಂದು ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

ದೇಶದ ಅಭಿವೃದ್ಧಿ ಮತ್ತು ಜನಸೇವೆಯತ್ತ ಪ್ರಧಾನಿ ಮೋದಿ ತೋರಿರುವ ನಿರಂತರ ಬದ್ಧತೆ ಹಾಗೂ ಸಮರ್ಪಣೆಯನ್ನು ಕೊಂಡಾಡಿರುವ ಸುದೀಪ್, ಈ ಸಾಧನೆ ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ಅವರ ಮುಂದಿನ ದಿನಗಳಿಗೂ ಯಶಸ್ಸು, ಆರೋಗ್ಯ ಮತ್ತು ಇನ್ನಷ್ಟು ಸಾಧನೆಗಳು ತಮ್ಮದಾಗಲಿ ಎಂದು ಹಾರೈಸಿದ್ದಾರೆ.

ಭಾರತದ ಚುನಾವಣೋತ್ತರ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರು ಸತತವಾಗಿ 4,399 ದಿನಗಳ(ಜೂನ್‌ 10ಕ್ಕೆ) ಕಾಲ ಅಧಿಕಾರದಲ್ಲಿದ್ದು, ನೆಹರೂ ಅವರ 4,398 ದಿನಗಳ ಚುನಾವಣೋತ್ತರ ಪ್ರಧಾನಮಂತ್ರಿ ಅವಧಿಯನ್ನು ಮೀರಿಸಿದ್ದಾರೆ.

ಕಿಚ್ಚ ಸುದೀಪ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆದಿದ್ದು, ಅನೇಕರು ಪ್ರಧಾನಿ ಮೋದಿ ಅವರ ಐತಿಹಾಸಿಕ ಆಡಳಿತಾವಧಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

Also Read: ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

ಪ್ರಮುಖ ಸುದ್ದಿ

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

VISTARANEWS.COM


on

ರಾಜ್ಯಸಭೆ ಟಿಕೆಟ್‌

ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ- ಹೆಚ್‌ಡಿಡಿ

ರಾಜ್ಯಸಭಾ ಟಿಕೆಟ್‌ಗಾಗಿ ಮೋದಿ ನನ್ನ ಸಂಬಂಧ ಆರಂಭವಾಗಿಲ್ಲ. ಮೋದಿಯವರು ವಿಶ್ವನಾಯಕ, ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆ ಜೆಡಿಎಸ್‌ ಇರುತ್ತದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ಟಿಕೆಟ್‌ ಸಿಗದ ವಿಚಾರದ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಹೆಚ್‌.ಡಿ.ದೇವೇಗೌಡರು ಇಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯಸಭೆ ಟಿಕೆಟ್‌ ವಿಚಾರವಾಗಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ಜೆಡಿಎಸ್‌ ಪಕ್ಷದಲ್ಲಿ 18 ಶಾಸಕರು ಇದ್ದಾರೆ. ಹಾಗಾಗಿ ನಾವು ಟಿಕೆಟ್‌ಗೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನನ್ನ ಮತ್ತು ಮೋದಿಯವರ ಸಂಬಂಧ ಒಂದು ರಾಜ್ಯಸಭೆ ಟಿಕೆಟ್‌ನಿಂದ ಆರಂಭವಾಗಿದೆ ಅಥವಾ ಅದಕ್ಕಾಗಿಯೇ ಮುಂದುವರಿಯುತ್ತಿದೆ ಎಂದು ರಾಜ್ಯದ ಜನರು ಭಾವಿಸಬಾರದು. 2014ರಲ್ಲಿ ಮೋದಿ ಅವರು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಾಗಿನಿಂದಲೇ ಅವರ ಕಾರ್ಯವೈಖರಿಯನ್ನು ಗಮನಿಸುತ್ತಿದ್ದೇನೆ” ಎಂದು ದೇವೇಗೌಡರು ಹೇಳಿದ್ದಾರೆ.

ಗೋಧ್ರಾ ಘಟನೆಯ ಸಂದರ್ಭದಲ್ಲಿ ತಾವು ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮೋದಿ ಅವರನ್ನು ಟೀಕಿಸಿದ್ದ ವಿಚಾರವನ್ನೂ ಅವರು ನೆನಪಿಸಿಕೊಂಡರು. ಆದರೆ ನಂತರ ಪ್ರಧಾನಿಯಾದ ಬಳಿಕ ಮೋದಿ ಅವರನ್ನು ಹಲವು ಬಾರಿ ಭೇಟಿಯಾಗಿ ವಿವಿಧ ರಾಷ್ಟ್ರೀಯ ಹಾಗೂ ರಾಜ್ಯದ ವಿಚಾರಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ಧಿಗಾಗಿ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಗಮನಿಸಿದ್ದೇನೆ. ದೇಶದ ಆರ್ಥಿಕತೆ, ರಾಷ್ಟ್ರೀಯ ಭದ್ರತೆ, ವಿದೇಶಾಂಗ ನೀತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೇಶ ಗಮನಾರ್ಹ ಪ್ರಗತಿ ಸಾಧಿಸಿದೆ. ಜಾಗತಿಕ ಮಟ್ಟದಲ್ಲೂ ಮೋದಿ ಅವರಿಗೆ ವಿಶಿಷ್ಟ ಗೌರವ ಮತ್ತು ಸ್ಥಾನಮಾನ ದೊರೆತಿದೆ ಎಂದು ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.

“ಮೋದಿಯವರಂತಹ ನಾಯಕತ್ವವನ್ನು ಬೇರೆ ಯಾರಿಂದಲೂ ಸರಿಸಾಟಿಯಾಗಿ ನಿರ್ವಹಿಸಲು ಸಾಧ್ಯವಿಲ್ಲ. ವೈಯಕ್ತಿಕವಾಗಿ ಅವರೊಂದಿಗೆ ನನಗೆ ಆತ್ಮೀಯ ಸಂಬಂಧವಿದೆ. ನಾನು ರಾಜ್ಯಸಭಾ ಸದಸ್ಯನಾಗದಿದ್ದರೂ ಆ ಸಂಬಂಧ ಮುಂದುವರಿಯುತ್ತದೆ” ಎಂದು ಹೇಳಿದರು.

ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ವಿಚಾರ ಬಂದರೂ ಪ್ರಧಾನಿಯನ್ನು ಭೇಟಿ ಮಾಡುವ ಅಥವಾ ಪತ್ರ ಬರೆಯುವ ಅವಕಾಶ ನನಗಿದೆ. ನಮ್ಮ ಸಂಬಂಧ ರಾಜಕೀಯ ಹುದ್ದೆಗಳಿಗೆ ಸೀಮಿತವಲ್ಲ ಎಂದು ದೇವೇಗೌಡರು ಹೇಳಿದರು.

ಇದೇ ವೇಳೆ, ಎನ್‌ಡಿಎ ಜತೆಗಿನ ಜೆಡಿಎಸ್ ಬಾಂಧವ್ಯದ ಬಗ್ಗೆ ಮಾತನಾಡಿದ ಅವರು, “ಒಂದು ರಾಜ್ಯಸಭೆ ಸ್ಥಾನದ ಕಾರಣಕ್ಕೆ ಎನ್‌ಡಿಎ ಜೊತೆಗಿನ ಸಂಬಂಧ ಮುಕ್ತಾಯವಾಗುವುದಿಲ್ಲ. ನಾವು ರಾಜ್ಯಸಭಾ ಸ್ಥಾನವನ್ನು ಕೇಳಿಯೂ ಇಲ್ಲ ಎಂದ ಅವರು ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆಗಿನ ಮೈತ್ರಿ ಮತ್ತು ಸಂಬಂಧ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು.

Also Read: ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

VISTARANEWS.COM


on

ಆರೆಂಜ್ ಅಲರ್ಟ್‌

ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲ ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಘುದಿಂದ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನದಿಗಳು, ಹಳ್ಳ-ಕೊಳ್ಳಗಳು ತುಂಬುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜೂನ್ 15ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ.

ಮೀನುಗಾರರು ಸಮುದ್ರಕ್ಕೆ ತೆರಳುವ ಮುನ್ನ ಸ್ಥಳೀಯ ಹವಾಮಾನ ಇಲಾಖೆ ನೀಡುವ ಎಚ್ಚರಿಕೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಇಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Also Read: ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

VISTARANEWS.COM


on

ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

ಮೈತ್ರಿ ಬಿರುಕಿನ ಯತ್ನ ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಮೇಲಿನ ಕಾಂಗ್ರೆಸ್‌ನ ಅನುಕಂಪ ಕೇವಲ ರಾಜಕೀಯ ನಾಟಕ ಎಂದು ಮಂಡ್ಯದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ಕಾಂಗ್ರೆಸ್‌ನವರು ದೇವೇಗೌಡರನ್ನು ಯಾವ ರೀತಿ ನಡೆಸಿಕೊಂಡಿದ್ದಾರೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ಈಗ ಏಕಾಏಕಿ ಅವರ ಬಗ್ಗೆ ಅನುಕಂಪ ತೋರಿಸುತ್ತಿರುವುದು ರಾಜಕೀಯ ಲಾಭಕ್ಕಾಗಿ. ಅವರ ಉದ್ದೇಶ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿಸುವುದಷ್ಟೇ” ಎಂದು ಟೀಕಿಸಿದರು.

ರಾಜ್ಯಸಭೆ ಸದಸ್ಯತ್ವದ ವಿಚಾರವನ್ನು ಉಲ್ಲೇಖಿಸಿದ ಅವರು, “ನಾವು ದೇವೇಗೌಡರಿಗೆ ಟಿಕೆಟ್ ನೀಡಿ ಎಂದು ಯಾರ ಬಳಿಯೂ ಅರ್ಜಿ ಹಾಕಿಲ್ಲ. ದೇವೇಗೌಡರು ಕೂಡ ನನಗೆ ಟಿಕೆಟ್ ಕೊಡಿ ಎಂದು ಯಾರನ್ನೂ ಕೇಳಿಲ್ಲ. ಹೀಗಿರುವಾಗ ಈ ವಿಚಾರದಲ್ಲಿ ಕಾಂಗ್ರೆಸ್ ಅನಗತ್ಯ ರಾಜಕೀಯ ಮಾಡುತ್ತಿದೆ” ಎಂದು ಹೇಳಿದರು.

“ದೇವೇಗೌಡರು ರಾಜ್ಯಸಭೆಯಲ್ಲಿ ಇದ್ದಿದ್ದರೆ ಅಲ್ಲಿಯೂ ಜನರ ಪರವಾಗಿ ಧ್ವನಿ ಎತ್ತುತ್ತಿದ್ದರು ಎಂದು ಕೆಲವರು ಹೇಳುತ್ತಾರೆ. ಅದು ಬೇರೆ ವಿಷಯ. ಆದರೆ ಅವರು ಅಧಿಕಾರದಲ್ಲಿರಲಿ ಅಥವಾ ಅಧಿಕಾರದ ಹೊರಗಿರಲಿ, ಸದಾ ಜನಪರ ಧ್ವನಿಯನ್ನೇ ಎತ್ತಿದ್ದಾರೆ” ಎಂದು ಕುಮಾರಸ್ವಾಮಿ ಹೇಳಿದರು.

ದೇವೇಗೌಡರ ರಾಜಕೀಯ ಜೀವನ ಹೋರಾಟದಿಂದ ಕೂಡಿದ್ದು, ಅಧಿಕಾರಕ್ಕಾಗಿ ಅವರು ಎಂದಿಗೂ ಯಾರ ಮನೆಯ ಬಾಗಿಲಿಗೂ ಹೋಗಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಕಾಂಗ್ರೆಸ್ ನಾಯಕರ ಟೀಕೆಗಳಿಗೆ ತಿರುಗೇಟು ನೀಡಿದ ಅವರು, ದೇವೇಗೌಡರ ರಾಜಕೀಯ ವ್ಯಕ್ತಿತ್ವ ಮತ್ತು ಕೊಡುಗೆಯನ್ನು ಪ್ರಶ್ನಿಸುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Also Read: ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading
Advertisement
Latest1 hour ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest5 hours ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ1 day ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest1 day ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest1 day ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest1 day ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest2 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest2 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

ಪಿಂಕ್ ಲೈನ್ ಮೆಟ್ರೋ
Latest2 days ago

ಆಗಸ್ಟ್ 15ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರ ಆರಂಭ? ದಕ್ಷಿಣ ಬೆಂಗಳೂರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ನಿರೀಕ್ಷೆ

ಮುಂದಿನ ಐದು ದಿನ ಭಾರೀ ಮಳೆ
Latest2 days ago

ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌