Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌! - Vistara News

ಕರ್ನಾಟಕ

Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Prajwal Revanna Video: ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಸ್‌ಪೋರ್ಟ್‌ ರದ್ದತಿಯ ಪ್ರಕ್ರಿಯೆ ಆರಂಭಿಸಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣನಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಇದರ ಬೆನ್ನಲ್ಲೇ, ವಿದೇಶದಿಂದಲೇ ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದಾರೆ.

VISTARANEWS.COM


on

Prajwal revanna Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Video) ಕೂಡಲೇ ಕರ್ನಾಟಕಕ್ಕೆ ಬಂದು, ನೆಲದ ಕಾನೂನು ಗೌರವಿಸಬೇಕು ಎಂದು ಸಂಸದನ ಅಜ್ಜ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (H D Deve Gowda) ಅವರು ಬಹಿರಂಗ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಬರುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದು, “ಮೇ 31ರಂದು ಭಾರತಕ್ಕೆ ಬಂದು ವಿಚಾರಣೆಗೆ ಹಾಜರಾಗುವುದಾಗಿ ಘೋಷಣೆ ಮಾಡಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಸೇರಿ ಹಲವು ಪ್ರಕರಣಗಳಲ್ಲಿ ಪ್ರಜ್ವಲ್‌ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇಷ್ಟಾದರೂ, ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರದ ಕಾರಣ ಅವರ ತಾತ ಎಚ್‌.ಡಿ.ದೇವೇಗೌಡ ಅವರು ಬಹಿರಂಗ ಪತ್ರ ಬರೆದಿದ್ದರು. ನನ್ನ ಮೇಲೆ ಗೌರವ ಇದ್ದರೆ ವಾಪಸ್‌ ಬಾ ಎಂದಿದ್ದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಆಗಸ್ಟ್‌ 31ರ ಒಳಗೆ GBA ಚುನಾವಣೆ ನಡೆಸಿ- ಸುಪ್ರೀಂ ಕೋರ್ಟ್‌

VISTARANEWS.COM


on

ಆಗಸ್ಟ್‌ 31ರ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌, ಆಗಸ್ಟ್‌ 31ರವರೆಗೆ ಕಾಲಾವಕಾಶ ನೀಡಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಮೂರು ತಿಂಗಳ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಈ ಹಿಂದೆ ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಆದರೆ ಇದೀಗ ಸರ್ಕಾರದ ಮನವಿ ಮೇರೆಗೆ ಚುನಾವಣಾ ಗಡುವನ್ನು ಆಗಸ್ಟ್‌ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಆಲಿಸಿದ ಸಿಜೆಐ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದವು.

Continue Reading

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading

Latest

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ ಬಂದ್‌

VISTARANEWS.COM


on

ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಕರೆ ನೀಡಲಾಗಿದೆ. ದೇಶದಾದ್ಯಂತ ಸುಮಾರು 9 ಲಕ್ಷ ಔಷಧ ಅಂಗಡಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಸುಮಾರು 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದ್ದು, ಗ್ರಾಹಕರು ಅಗತ್ಯ ಔಷಧಿಗಳನ್ನು ಮುಂಚಿತವಾಗಿ ಖರೀದಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ.

ಇ-ಫಾರ್ಮಸಿ ವೇದಿಕೆಗಳ ಮೂಲಕ ಭಾರಿ ರಿಯಾಯಿತಿಯಲ್ಲಿ ಔಷಧ ಮಾರಾಟವಾಗುತ್ತಿರುವುದು ಸಣ್ಣ ಹಾಗೂ ಮಧ್ಯಮ ಮಟ್ಟದ ಮೆಡಿಕಲ್ ಅಂಗಡಿಗಳಿಗೆ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಜೊತೆಗೆ ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ವಿತರಣೆ ನಡೆಯುತ್ತಿರುವುದರಿಂದ ರೋಗಿಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
ಆನ್‌ಲೈನ್ ಮೂಲಕ ಔಷಧ ಖರೀದಿ ವ್ಯವಸ್ಥೆಯನ್ನು ನಿಯಂತ್ರಿಸುವುದು ಹಾಗೂ ಇ-ಫಾರ್ಮಸಿ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

Continue Reading

Latest

ಕಂಜನ್ ದಾಳಿಗೆ ತುತ್ತಾಗಿದ್ದ ಮಾರ್ತಾಂಡ ದುರ್ಮರಣ

VISTARANEWS.COM


on

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ನಡೆದ ಸಾಕಾನೆಗಳ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ನಿನ್ನೆ ಕಂಜನ್ ಮತ್ತು ಮಾರ್ತಾಂಡ ನಡುವೆ ನಡೆದ ಕಾದಾಟ ನಡೆದಿತ್ತು. ಈ ವೇಳೆ ಆನೆಯ ಕೆಳಗೆ ಸಿಲುಕಿ ಪ್ರವಾಸಿ ಮಹಿಳೆ ದುರ್ಮರಣ ಹೊಂದಿದ್ದರು.

ಘಟನೆಯ ಬೆನ್ನಲ್ಲೇ ದುಬಾರೆ ಆನೆ ಶಿಬಿರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಇದೇ ವೇಳೆ ರಾಜ್ಯದ ಎಲ್ಲಾ ಸಾಕಾನೆ ಶಿಬಿರಗಳಿಗೆ ಹೊಸ SOP ಜಾರಿಗೊಳಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ನೀಡಿದ್ದಾರೆ. ಹೊಸ ಮಾರ್ಗಸೂಚಿಗಳ ಪ್ರಕಾರ ಆನೆಗಳಿಂದ ಕನಿಷ್ಠ 100 ಅಡಿ ದೂರ ಕಾಪಾಡಿಕೊಳ್ಳಬೇಕು, ಆನೆಗಳ ಬಳಿ ಸೆಲ್ಫಿ ಹಾಗೂ ಫೋಟೋ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಜೊತೆಗೆ ಪ್ರವಾಸಿಗರು ಸಾಕಾನೆಗಳಿಗೆ ಯಾವುದೇ ಆಹಾರ ನೀಡಬಾರದು ಎಂದು ಸೂಚಿಸಲಾಗಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌