Pralhad Joshi: ಸಿದ್ದರಾಮಯ್ಯ ದೇವಸ್ಥಾನಗಳ ಹುಂಡಿಗೆ ಕನ್ನ ಹಾಕೋ ಕನ್ನರಾಮಯ್ಯ: ಪ್ರಲ್ಹಾದ್‌ ಜೋಶಿ ಕಿಡಿ - Vistara News

ಕರ್ನಾಟಕ

Pralhad Joshi: ಸಿದ್ದರಾಮಯ್ಯ ದೇವಸ್ಥಾನಗಳ ಹುಂಡಿಗೆ ಕನ್ನ ಹಾಕೋ ಕನ್ನರಾಮಯ್ಯ: ಪ್ರಲ್ಹಾದ್‌ ಜೋಶಿ ಕಿಡಿ

Pralhad Joshi: ಸಿಎಂ ಸಿದ್ದರಾಮಯ್ಯ, ಸುಳ್ಳುರಾಮಯ್ಯ ಆದರು, ಸಾಲರಾಮಯ್ಯ ಆದರು, ಈಗ ಹಿಂದು ದೇಗುಲಗಳ ಹುಂಡಿಗಳಿಗೆ ಕನ್ನ ಹಾಕುವಂಥ ಕನ್ನರಾಮಯ್ಯ ಆಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Pralhad joshi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಹಿಂದು ದೇವಸ್ಥಾನಗಳ ಹುಂಡಿಗೆ ಕನ್ನ ಹಾಕೋ ಕನ್ನರಾಮಯ್ಯ ಆಗಿದ್ದಾರೆ. ಕಾಂಗ್ರೆಸ್ ಘೋಷಿಸಿದ ಬೋಗಸ್ ಗ್ಯಾರಂಟಿಗಳನ್ನು ನಿರ್ವಹಿಸಲು ಸಾಧ್ಯವಾಗದೇ, ದೇವಸ್ಥಾನಗಳ ಹುಂಡಿಗೆ ಕನ್ನ ಹಾಕುವ ಕೃತ್ಯ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ವಾಪರ ತಯಾರಿ ಮಾಡದೆ ಘೋಷಿಸಿದ ಗ್ಯಾರಂಟಿಗಳು ಎಲ್ಲಾ ಬೋಗಸ್ ಆಗಿವೆ. ಅವನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ ಇಂಥದ್ದನ್ನೆಲ್ಲ ಮಾಡುತ್ತಿದ್ದಾರೆ ಎಂದು ಸಚಿವ ಜೋಶಿ ಕಿಡಿಕಾರಿದರು.

ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸುವಲ್ಲಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಿತಿಮೀರಿದೆ. ಇದನ್ನು ನಾವಲ್ಲ, ಕಾಂಗ್ರೆಸ್‌ನವರೇ ಹೇಳುತ್ತಿದ್ದಾರೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ, ಸುಳ್ಳುರಾಮಯ್ಯ ಆದರು, ಸಾಲರಾಮಯ್ಯ ಆದರು, ಈಗ ಹಿಂದು ದೇಗುಲಗಳ ಹುಂಡಿಗಳಿಗೆ ಕನ್ನ ಹಾಕುವಂಥ ಕನ್ನರಾಮಯ್ಯ ಆಗಿದ್ದಾರೆ. ರಾಜ್ಯ ಸರ್ಕಾರ ಸಂಪೂರ್ಣ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಇದನ್ನೆಲ್ಲ ಡೈವರ್ಟ್ ಮಾಡಲು ಏನು ಬೇಕೋ ಅದನ್ನು ಮಾಡುತ್ತಿದ್ದಾರೆ ಎಂದು ಸಚಿವರು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ | H D Deve Gowda: ಎಚ್.ಡಿ.ದೇವೇಗೌಡರಿಗೆ ‘ಮಣ್ಣಿನ ಮಗ’ ಕೃತಿಯ ಪ್ರಥಮ ಪ್ರತಿ; ಫೆ.29ರಂದು ಬಿಡುಗಡೆ

ಯುಪಿಎ ಕಾಲದಲ್ಲಿ ಬಂದ ಅನುದಾನದ ಲೆಕ್ಕ ಕೊಡಿ

ಯುಪಿಎ ಅವಧಿಯಲ್ಲಿ ನೀವೇ ಅಧಿಕಾರದಲ್ಲಿ ಇದ್ದಿರಿ. ಆಗ ಎಷ್ಟು ಅನುದಾನ ಬಂದಿದೆ?. ಈಗಲೂ ನೀವೇ ಇದ್ದೀರಿ. ಈಗ NDA ಅವಧಿಯಲ್ಲಿ ಎಷ್ಟು ಬಂದಿದೆ ಮೊದಲು ಲೆಕ್ಕ ಕೊಡಿ. ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ 60,000 ಲಕ್ಷ ಕೋಟಿ ಬಂದಿದೆ. NDA ಅವಧಿಯಲ್ಲಿ 2.85 ಲಕ್ಷ ಕೋಟಿ ತೆರಿಗೆ ಹಂಚಿಕೆ ಕೊಟ್ಟಿದೆ. ಇದನ್ನೆಲ್ಲ ವಿಧಾನಸಭೆಗೆ ವಿವರಣೆ ಕೊಟ್ಟಿದ್ದೇವೆ ಎಂದು ಸಚಿವ ಜೋಶಿ ಹೇಳಿದರು.

ಮೋದಿ ಚಿಂತೆ ಮಾಡುವವರಲ್ಲ, ಚಿಂತನೆ ಮಾಡುವ ಪ್ರಧಾನಿ: ಪ್ರಲ್ಹಾದ್‌ ಜೋಶಿ

PM Narendra Modi is determined to make India a developing country by 2047 says Pralhad Joshi

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಭಾರತವನ್ನು 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿಸಲು ಸಂಕಲ್ಪ ತೊಟ್ಟಿದ್ದಾರೆ. ಅಲ್ಲದೆ, ಮೋದಿ ಚಿಂತೆ ಮಾಡುವವರಲ್ಲ. ಚಿಂತನೆ ಮಾಡುವ ಪ್ರಧಾನಿಯಾಗಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದರು.

ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ‘ವೀರಶೈವ ಲಿಂಗಾಯತ ಗ್ಲೋಬಲ್ ಬಿಜಿನೆಸ್ ಕಾನಕ್ಲೇವ್-2024’ (Veerashaiva Lingayat Global Business Conclave-2024) ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಲ್ಹಾದ್‌ ಜೋಶಿ, ವಿಕಸಿತ ಭಾರತಕ್ಕೆ ತಮ್ಮ ದೂರದೃಷ್ಟಿ ಹಾಗೂ ಅವಿಸ್ಮರಣೀಯ ಕಾರ್ಯವೈಖರಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಅಡಿಪಾಯ ಹಾಕಿದ್ದಾರೆ. ವಿಕಸಿತ ಭಾರತ ಮೋದಿ ಅವರ ಮಹೋನ್ನತ ಕನಸು ಎಂದು ಹೇಳಿದರು.

ಸ್ವಾತಂತ್ರ್ಯ ಸಿಕ್ಕು 75 ವರ್ಷವಾದರೂ ನಾವಿನ್ನೂ ಅಭಿವೃದ್ಧಿ ಹೊಂದುತ್ತಿರುವ ದೇಶ ಎನಿಸಿಕೊಂಡಿದೆ. ಇನ್ನು ಮೇಲೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಹೊರ ಹೊಮ್ಮಲಿದೆ ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದರು.

ಈಗ ಆರ್ಥಿಕವಾಗಿ 5ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಹೆಜ್ಜೆ ಇಡುತ್ತಿದ್ದೇವೆ. ಇನ್ನು 20 ವರ್ಷಗಳಲ್ಲಿ ಅಭಿವೃದ್ಧಿ ರಾಷ್ಟ್ರವಾಗಿ ಭಾರತ ಮೊದಲಿರುತ್ತದೆ ಎಂದು ಪ್ರಲ್ಹಾದ್‌ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ ಚಿಂತನೆಯುಳ್ಳ ಪ್ರಧಾನಿ

ನರೇಂದ್ರ ಮೋದಿ ಅವರು ಚಿಂತೆ ಮಾಡುವವರಲ್ಲ. ಚಿಂತನೆ ಮಾಡುವ ಪ್ರಧಾನಿಯಾಗಿದ್ದಾರೆ. ತಾವು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಇಲಾಖೆಗಳಲ್ಲಿ ಏನಿರಬೇಕು?, ಹೇಗಿರಬೇಕು? ಎಂಬುದನ್ನು ಈಗಲೇ ಅಧಿಕಾರಿ ವರ್ಗಕ್ಕೆ ಸಲಹೆ- ಸೂಚನೆ ನೀಡಿದ್ದಾರೆ ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದರು.

ಜಗತ್ತಿನ ವಿವಿಧ ದೇಶಗಳಲ್ಲಿ ಲಿಂಗಾಯತ ವೀರಶೈವರು ಉದ್ದಿಮೆಗಳನ್ನು ಸ್ಥಾಪಿಸಿ ಉದ್ಯೋಗ ಕಲ್ಪಿಸುವಲ್ಲಿ ಮುಂಚೂಣಿಯಲ್ಲಿ ಇದ್ದಾರೆ. ಸಮಾಜದ ಯುವ ಪೀಳಿಗೆ ಸಹ ಇದನ್ನು ಅನುಸರಿಸಬೇಕು ಎಂದು ಪ್ರಲ್ಹಾದ್‌ ಜೋಶಿ ಜೋಶಿ ಕರೆ ನೀಡಿದರು.

ಇದನ್ನೂ ಓದಿ: medical negligence: ನವಜಾತ ಶಿಶುವನ್ನು ಬಿಸಿನೀರಲ್ಲಿ ಮುಳುಗಿಸಿ ಚರ್ಮ ಕಾಯಿಲೆ ಕಥೆ ಕಟ್ಟಿದ್ದ ಆಸ್ಪತ್ರೆಗೆ 10 ಲಕ್ಷ ದಂಡ!

ಅಂತಾರಾಷ್ಟ್ರೀಯ ಬ್ಯುಸಿನೆಸ್ ಸಮಾವೇಶಗಳ ಆಯೋಜನೆಯಿಂದ ಯುವ ಜನತೆಯ ಉನ್ನತಿಗೆ ಮಾರ್ಗದರ್ಶನ ದೊರೆಯುತ್ತದೆ ಎಂದು ಇದೇ ವೇಳೆ ಪ್ರಲ್ಹಾದ್‌ ಜೋಶಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News : ಕೆಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Suspicious Death: ಬೆಂಗಳೂರಲ್ಲಿ (Bengaluru News) ಕೆಎಸ್ ಅಧಿಕಾರಿಯೊಬ್ಬರ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ನೇಣು ಬಿಗಿದ (Self Harming) ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸಂಜಯ್‌ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

VISTARANEWS.COM


on

By

Bengaluru News
Koo

ಬೆಂಗಳೂರು: ಬೆಂಗಳೂರಲ್ಲಿ (Bengaluru News ) ಹೈಕೋರ್ಟ್‌ ವಕೀಲೆಯೊಬ್ಬರು (High court lawyer) ಅನುಮಾನಾಸ್ಪದ ರೀತಿಯಲ್ಲಿ (Suspicious Death) ಮೃತಪಟ್ಟಿದ್ದಾರೆ. ವಕೀಲೆಯ ಪತಿ ಕೆಎಸ್‌ ಅಧಿಕಾರಿ ಆಗಿದ್ದು, ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ (Self harming) ಪತ್ತೆಯಾಗಿದೆ. ಚೈತ್ರಾ ಮೃತ ದುರ್ದೈವಿ. ಪತಿ ಶಿವಕುಮಾರ್‌ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಶಿವಕುಮಾರ್‌ ಮನೆಗೆ ವಾಪಸ್‌ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

2016ರಲ್ಲಿ ಮದುವೆ ಆಗಿದ್ದ ಶಿವಕುಮಾರ್ ಹಾಗೂ ಚೈತ್ರಾ ದಂಪತಿಗೆ 5 ವರ್ಷದ ಒಂದು ಮಗು ಇದೆ. ಈ ದಂಪತಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಚೈತ್ರಾ ಹೈಕೋರ್ಟ್ ವಕೀಲೆ ಆಗಿದ್ದರೆ, ಶಿವಕುಮಾರ್ ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೈಕೋರ್ಟ್‌ ವಕೀಲರಾಗಿರುವುದರಿಂದ ಯಾವುದಾದರೂ ಪ್ರಕರಣದಲ್ಲಿ ಯಾರಾದರೂ ಬೆದರಿಕೆ ಹಾಕಿದ್ದರಾ ಅಥವಾ ಕುಟುಂಬದಲ್ಲೇ ಏನಾದರೂ ಕಲಹ ಇತ್ತಾ ಎಂಬ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Bengaluru News Self harming by high court lawyer

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು,‌ ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

ಹಣಕ್ಕಾಗಿ ಕಿಡ್ನ್ಯಾಪ್‌; ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್‌!

ಕಲಬುರಗಿ: ಹಣಕ್ಕಾಗಿ‌ ಸೆಕೆಂಡ್‌ ಹ್ಯಾಂಡ್‌ ಕಾರು ವ್ಯಾಪಾರಿ ಮತ್ತು ಆತನ ಸ್ನೇಹಿತರಿಬ್ಬರನ್ನು ಅಪಹರಿಸಿರುವ (Kidnap Case) ಘಟನೆ ನಡೆದಿದೆ. ರೂಮಿನಲ್ಲಿ ಮೂವರನ್ನು ಕೂಡಿ ಹಾಕಿ ಬೆತ್ತಲೆ ಮಾಡಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಟಾರ್ಚರ್ ನೀಡಿ, ಹಣವನ್ನು ಲಪಟಾಯಿಸಿರುವ ಘಟನೆ (Assault Case) ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದ ನಿವಾಸಿ ಅರ್ಜುನ್‌ ಮಡಿವಾಳ ಎಂಬಾತನಿಗೆ ಹಲ್ಲೆ ನಡೆಸಲಾಗಿದೆ. ಅರ್ಜುನ್‌ ಬೆಂಗಳೂರಿನಿಂದ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಮೇ 5ರಂದು ಪರಿಚಯಸ್ಥನಾಗಿದ್ದ ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸಲು ಅರ್ಜುನ್‌ ತನ್ನಿಬ್ಬರು ಸ್ನೇಹಿತರಾದ ಎಂ.ಡಿ ಸಮೀರೊದ್ದಿನ್, ಅಬ್ದುಲ್ ರಹೇಮಾನ್ ಜತೆಗೆ ಹೋಗಿದ್ದರು.

ಇದನ್ನೂ ಓದಿ: Murder case : ಕೊಟ್ಟ ಹಣ ಕೇಳಿದ್ದಕ್ಕೆ ಗೆಳೆಯನನ್ನೇ ಕೊಂದಿದ್ದ ದ್ರೋಹಿ ಅರೆಸ್ಟ್‌

ಈ ವೇಳೆ ಆರೋಪಿ ರಮೇಶ್‌ ಕಾರಿನ ಟೆಸ್ಟ್‌ ಡ್ರೈವ್‌ ಮಾಡಿ, ಕಾರಿಗೆ ಹಣ ನೀಡುವವರು ಕಲಬುರಗಿ ನಗರದ ಹಾಗರಗಾ ಕ್ರಾಸ್ ಬಳಿ ಇದ್ದಾರೆ. ಅಲ್ಲಿಗೆ ಹೋಗೋಣಾ ಎಂದು ಮೂವರನ್ನು ಕರೆದುಹೋಗಿದ್ದಾರೆ. ನಂತರ ಯಾವುದೋ ಮನೆ ಬಳಿ ಕಾರು ನಿಲ್ಲಿಸಿದಾಗ ಸುಮಾರು ಹತ್ತಾರು ಮಂದಿ ಅರ್ಜುನ್‌ ಹಾಗೂ ಮತ್ತಿಬ್ಬರನ್ನು ಬಲವಂತದಿಂದ ಎಳೆದುಹೋಗಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. ರಮೇಶ್‌ ಸೇರಿ ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಸೇರಿ ಹಲವರು ಹಲ್ಲೆ ನಡೆಸಿದ್ದಾರೆ.

ಕಿರಾತಕರು ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಹಲ್ಲೆ ನಡೆಸಿದ್ದಾರೆ. ಕರೆಂಟ್ ಶಾಕ್ ಬಳಿಕ ಬಡಿಗೆಯಿಂದ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಹಲ್ಲೆ ಮಾಡುವ ದೃಶ್ಯವನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಹಲ್ಲೆ ಮಾಡಿ ಹಣ ಹಾಕಿಸಿಕೊಂಡು, ಬಳಿಕ ಪ್ರತಿ ಬಾರಿ ಕಾರು ಮಾರಾಟ ಮಾಡಿದಾಗ ಕಮಿಷನ್‌ ರೂಪದಲ್ಲಿ ಒಂದು ಲಕ್ಷ ರೂ. ಹಣ ಕೊಡಬೇಕು ಎಂದಿದ್ದಾರೆ. ಕೊಡದೆ ಹೋದರೆ ಮನೆಗೆ ನುಗ್ಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಸದ್ಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

ರಾಜ್ಯದಲ್ಲಿ ಇನ್ನೇನು ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಶಾಲೆಗಳಲ್ಲಿ ಅಡ್ಮಿಷನ್‌ ಪ್ರಕ್ರಿಯೆ ಕೂಡ ಆರಂಭವಾಗಲಿದೆ. ಇದಕ್ಕಾಗಿ ಮಕ್ಕಳು ಮಾತ್ರವಲ್ಲ ಪೋಷಕರು ಕೂಡ ಕಾಯುತ್ತಿದ್ದಾರೆ. ಇದರ ಬೆನ್ನಲ್ಲೇ, ಶಾಲಾ ಶುಲ್ಕ ಪಡೆಯುವಾಗ ಎಚ್ಚರದಿಂದ ಇರಿ ಎಂದು ಖಾಸಗಿ ಶಾಲೆಗಳಿಗೆ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Madhu Bangarappa
Koo

ಶಿವಮೊಗ್ಗ: ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result) ಫಲಿತಾಂಶ ಪ್ರಕಟವಾಗಿದೆ. ಇನ್ನೇನು ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಈಗಾಗಲೇ ಪೋಷಕರು ಮಕ್ಕಳನ್ನು ಯಾವ ಶಾಲೆಗೆ ಸೇರಿಸಿದರೆ ಒಳ್ಳೆಯದು? ಎಲ್ಲಿ ಎಷ್ಟು ಫೀ ಇದೆ? ಯಾವ ಶಾಲೆಗೆ ಸೇರಿಸಬೇಕು ಎಂದರೆ ಎಷ್ಟು ಡೊನೇಷನ್‌ ಕೊಡಬೇಕು ಎಂಬುದು ಸೇರಿ ಹಲವು ರೀತಿಯಲ್ಲಿ ಯೋಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಪ್ರಾಥಮಿಕ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಖಾಸಗಿ ಶಾಲೆಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

“ಖಾಸಗಿ ಶಾಲೆಗಳಿಗೆ ಒಂದು ಸಲಹೆ ಕೊಡುತ್ತೇನೆ. ಕಾನೂನಿನ ಪ್ರಕಾರವೇ ಶಾಲೆಯಲ್ಲಿ ಫೀಸ್‌ ತೆಗೆದುಕೊಳ್ಳಬೇಕು. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಖಾಸಗಿ ಶಾಲೆಗಳು ಸಹಾಯ ಮಾಡಬೇಕು. ಅಕ್ರಮವಾಗಿ ಫೀಸ್‌ ತೆಗೆದುಕೊಂಡರೆ, ಹೆಚ್ಚಿನ ಶುಲ್ಕವನ್ನು ಪೋಷಕರಿಂದ ವಸೂಲಿ ಮಾಡಿದರೆ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂಬುದಾಗಿ ಅವರು ಶಿವಮೊಗ್ಗದಲ್ಲಿ ಎಚ್ಚರಿಕೆ ನೀಡಿದರು.

ಅಂಕಿತಾಗೆ ವೈಯಕ್ತಿಕ ಸಹಾಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೇ ಮೊದಲ ರ‍್ಯಾಂಕ್‌ ಬಂದ ಬಾಗಲಕೋಟೆ ಜಿಲ್ಲೆಯ ಅಂಕಿತಾ ಕೊನ್ನೂರ್‌ಗೆ ವೈಯಕ್ತಿಕವಾಗಿಯೂ ನೆರವು ನೀಡುವುದಾಗಿ ಮಧು ಬಂಗಾರಪ್ಪ ಘೋಷಿಸಿದರು. “ಏನಾದರೂ ಸಹಾಯ ಬೇಕು ಎಂದರೆ ಕೇಳು ಎಂಬುದಾಗಿ ಅಂಕಿತಾಗೆ ಹೇಳಿದ್ದೇನೆ. ಸರ್ಕಾರದಿಂದ ಸಿಗುವ ಸೌಲಭ್ಯಗಳು ಆಕೆಗೆ ಸಿಗುತ್ತವೆ. ಉನ್ನತ ಶಿಕ್ಷಣಕ್ಕೆ ಬೇಕಾದರೆ ಆಕೆಗೆ ವೈಯಕ್ತಿಕವಾಗಿ ಸಹಾಯ ಮಾಡುತ್ತೇನೆ” ಎಂಬುದಾಗಿ ಮಧು ಬಂಗಾರಪ್ಪ ಹೇಳಿದರು.

“ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ನಾನೂ ಗಮನಿಸಿದ್ದೇನೆ. ಸರ್ಕಾರಿ ಶಾಲೆಗಳ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುತ್ತೇನೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ. ಇದು ಪುಣ್ಯದ ಕೆಲಸವಾಗಿದ್ದು, ಹಂತ ಹಂತವಾಗಿ ಎಲ್ಲ ಕೆಲಸವನ್ನೂ ಮಾಡುತ್ತೇವೆ. ಮಳೆಗಾಲ ಸಮೀಪಿಸುತ್ತಿದ್ದು, ಸರ್ಕಾರಿ ಶಾಲೆಗಳ ದುರಸ್ತಿಗೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ” ಎಂದು ತಿಳಿಸಿದರು. ಹಾಸನ ಪೆನ್‌ಡ್ರೈ ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕಾನೂನು ಇದೆ, ಅದರ ಅನ್ವಯ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದಷ್ಟೇ ಹೇಳಿದರು.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Continue Reading

ಕೊಡಗು

Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Murder Case : ಬಾಲಕಿಯ ತಲೆ ಕತ್ತರಿಸಿ ಕಾಡಿನಲ್ಲಿ ಅಡಗಿ ಕುಳಿತಿದ್ದ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತ ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿಯ ತಲೆ ಪತ್ತೆ ಆಗಿದ್ದು, ಮರದ ಮೇಲೆ ಇರಿಸಿದ್ದ ರುಂಡವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ರುಂಡ ಕಂಡು ಬಾಲಕಿ ಸಹೋದರ ಮೈಮೇಲೆ ಶಕ್ತಿ ಆವಾಹನೆ ಅದಂತೆ ವರ್ತಿಸಿದ ಘಟನೆಯೂ ನಡೆದಿದೆ.

VISTARANEWS.COM


on

By

Murder Case in kodagu
Koo

ಕೊಡಗು:‌ ಮದುವೆ ರದ್ದಾಗಿದ್ದಕ್ಕೆ ಕೋಪಗೊಂಡ ಪಾಗಲ್‌ ಪ್ರೇಮಿಯೊಬ್ಬ ಬಾಲಕಿಯನ್ನು ಕೊಲೆ (Murder Case) ಮಾಡಿ ರುಂಡದೊಂದಿಗೆ ಪರಾರಿ ಆಗಿದ್ದ. ಕಾಡಿನಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಶನಿವಾರ ಬಂಧಿಸಿದ್ದರು. ಆದರೆ ಆರೋಪಿ ಸಿಕ್ಕರೂ ಬಾಲಕಿಯ ರುಂಡ ಪತ್ತೆಯಾಗಿರಲಿಲ್ಲ. ಇದೀಗ ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿಯ ತಲೆ ಪತ್ತೆಯಾಗಿದೆ. ಬಾಲಕಿಯ ತಲೆಯನ್ನು ಆರೋಪಿ ಪ್ರಕಾಶ್ ಮರದ ಮೇಲೆ ಇರಿಸಿದ್ದ. ಬಾಲಕಿಯ ತಲೆ ಹಾಗೂ ಆಕೆಯ ಚಪ್ಪಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಶುಕ್ರವಾರ ಇಡೀ ದಿನ ಹುಡುಕಾಡಿದ್ದರೂ ಬಾಲಕಿ ಮೀನಾಳ ತಲೆ ಸಿಕ್ಕಿರಲಿಲ್ಲ. ಇತ್ತ ಮಗಳ ತಲೆ ಸಿಗದೆ ಮೃತದೇಹದ ಅಂತ್ಯ ಸಂಸ್ಕಾರ ಮಾಡುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದಿದ್ದರು. ಹೀಗಾಗಿ ಶನಿವಾರ ಮತ್ತೆ 40ಕ್ಕೂ ಹೆಚ್ಚು ಪೊಲೀಸರಿಂದ ಶೋಧ ಕಾರ್ಯ ನಡೆದಿದ್ದು, ಹತ್ಯೆಯಾಗಿದ್ದ ಮೀನಾ ರುಂಡ ಪತ್ತೆ ಮಾಡಿದ್ದಾರೆ. ತಲೆ ವಶಕ್ಕೆ ಪಡೆದು ಬಾಲಕಿ ಮನೆ ಬಳಿ ಮಹಜರ್‌ ನಡೆಸಿದ್ದಾರೆ.

ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ

ಕೊಡಗಿನಲ್ಲಿ ಬಾಲಕಿ ಹತ್ಯೆಯ ಸ್ಥಳ ಮಹಜರು ವೇಳೆ ವಿಚಿತ್ರ ಘಟನೆಯೂ ನಡೆದಿದೆ. ರುಂಡ ಪತ್ತೆ ಸ್ಥಳದಲ್ಲಿ ಬಾಲಕಿ ಸಹೋದರನ ಮೈಮೇಲೆ ಶಕ್ತಿ ಆವಾಹನೆ ಆದ ರೀತಿ ವರ್ತಿಸಿದ್ದಾನೆ. ರುಂಡ ಪತ್ತೆಯಾದ ಸ್ಥಳಕ್ಕೆ ಆರೋಪಿ ಪ್ರಕಾಶ್‌ ಮತ್ತು ಬಾಲಕಿ ಸಹೋದರ ಹೋದಾಗ ಏಕಾಏಕಿ ಶಕ್ತಿ ಆವಾಹನೆ ಆದಂತೆ ವರ್ತಿಸಿದ್ದಾನೆ. ಏಕಾಏಕಿ ಆತನ ವರ್ತನೆಗೆ ಪೊಲೀಸರು ಕ್ಷಣಕಾಲ ಬೆಚ್ಚಿ ಬಿದ್ದರು. ಕೂಡಲೇ ಅಲ್ಲಿದ್ದವರು ಮೀನಾಳ ಸಹೋದರನನ್ನು ಹಿಡಿದುಕೊಂಡು ಸಮಾಧಾನಪಡಿಸಿದರು.

ಏನಿದು ಪ್ರಕರಣ?

ಮೀನಾ ಇನ್ನೂ ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್‌ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.

ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್‌ ಕೊಲೆ ಮಾಡಿದ್ದ.

ಬಾಲಕಿಯನ್ನು ಆರೋಪಿ ಪ್ರಕಾಶ್‌ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Siddaramaiah: ಮೋದಿ ಸುಳ್ಳಿನ ಸರದಾರ, ಭಾವನಾತ್ಮಕ ಆಟ ನಡೆಯಲ್ಲ; ಸಿದ್ದರಾಮಯ್ಯ ತಿರುಗೇಟು

Siddaramaiah: ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ. ಪ್ರಧಾನಿಯವರನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ. ನರೇಂದ್ರ ಮೋದಿ 10 ವರ್ಷ ಪ್ರಧಾನಿಯಾಗಿ ಬಡವರ ಪರವಾಗಿ ಏನೂ ಮಾಡಿಲ್ಲ ಎನ್ನುವುದು ಹಾಗೂ ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಭರವಸೆಗಳನ್ನೂ ಈಡೇರಿಸಿಲ್ಲ ಎಂದು ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

VISTARANEWS.COM


on

Siddaramaiah
Koo

ಮೈಸೂರು: “ಪ್ರತಿಪಕ್ಷಗಳು ನನ್ನನ್ನು ಸಮಾಧಿ ಮಾಡಲು ಹೊರಟಿವೆ. ಜನರೇ ನನ್ನನ್ನು ಕಾಪಾಡಲು ಹೊರಟಿವೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿದ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ (Siddaramaiah), “ನರೇಂದ್ರ ಮೋದಿ ಸುಳ್ಳುಗಳ ಸರದಾರ ಆಗಿದ್ದಾರೆ. ಅವರ ಭಾವನಾತ್ಮಕ ಆಟವು ಭಾರತೀಯರಿಗೆ ಗೊತ್ತಾಗಿದೆ” ಎಂದು ಹೇಳಿದರು.

“ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ. ಪ್ರಧಾನಿಯವರನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ. ನರೇಂದ್ರ ಮೋದಿ 10 ವರ್ಷ ಪ್ರಧಾನಿಯಾಗಿ ಬಡವರ ಪರವಾಗಿ ಏನೂ ಮಾಡಿಲ್ಲ ಎನ್ನುವುದು ಹಾಗೂ ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ರಾಜಕೀಯವಾಗಿ ಅವರನ್ನು ಸೋಲಿಸಬೇಕೆನ್ನುವುದು ವಿರೋಧ ಪಕ್ಷಗಳ ಗುರಿ. ಏಕೆಂದರೆ ಈ ದೇಶ ಆರ್ಥಿಕ ಹಾಗೂ ಬಡವರ ಅಭಿವೃದ್ಧಿ ಆಗಿಲ್ಲ” ಎಂದರು.

ಮೇಲಕ್ಕೇರಿದವರು ಕೆಳಕ್ಕೆ ಇಳಿಯಲೇಬೇಕು

ನರೇಂದ್ರ ಮೋದಿ ಅವರಿಗೆ ಚುನಾವಣೆಯಲ್ಲಿ ಸೋಲುತ್ತೇವೆ ಎಂಬುದು ಖಾತರಿಯಾಗಿದೆ. ಹಾಗಾಗಿಯೇ ಅವರು ಹತಾಶರಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಅವರ ಭಾವನಾತ್ಮಕ ಆಟ ಜನರಿಗೆ ಗೊತ್ತಾಗಿದೆ. ಅವರು ಸುಳ್ಳು ಹೇಳುವುದು, ಭಾವನಾತ್ಮಕವಾಗಿ ಶೋಷಣೆ ಮಾಡುವುದು ಜನರಿಗೆ ಗೊತ್ತಾಗಿದೆ. ಜನರಿಗೆ ಗೊತ್ತಾದ ಮೇಲೆ ಮತ್ತೆ ಅದೇ ತಪ್ಪನ್ನು ಮಾಡುವುದಿಲ್ಲ. ಮೇಲಕ್ಕೇರಿದವರು ಕೆಳಕ್ಕೆ ಇಳಿಯಲೇಬೇಕು” ಎಂದು ಕುಟುಕಿದರು.

ನೈತಿಕ ಹಕ್ಕಿಲ್ಲ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದಲ್ಲಿ ಬರಗಾಲ ಇರುವುದರಿಂದ ರೈತರ ಸಾಲ ಮನ್ನಾ ಮಾಡಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಈ ಹಿಂದೆ ಸಾಲ ಮನ್ನಾ ಮಾಡಿ ಎಂದಾಗ ನಮ್ಮ ಬಳಿ ಪ್ರಿಂಟಿಂಗ್ ಮಶೀನ್ ಇಲ್ಲ ಎಂದಿದ್ದರು ಈಗ. ಇವರಿಗೆ ಯಾವ ನೈತಿಕತೆ ಇದೆ” ಎಂದು ಪ್ರಶ್ನಿಸಿದರು. ಮೈಸೂರಿನಲ್ಲಿ ಶ್ರೀನಿವಾಸ ಪ್ರಸಾದ್‌ ಅವರ ನಿಧನದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದರು.

ಇದನ್ನೂ ಓದಿ: BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Continue Reading
Advertisement
Bengaluru News
ಬೆಂಗಳೂರು4 mins ago

Bengaluru News : ಕೆಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Madhu Bangarappa
ಕರ್ನಾಟಕ13 mins ago

ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

Navneet Rana
ದೇಶ22 mins ago

Navneet Rana: ಮೋದಿಯವರ ಸಿಂಹಗಳು, ರಾಮಭಕ್ತರು ಗಲ್ಲಿ ಗಲ್ಲಿಯಲ್ಲಿದ್ದಾರೆ ಹುಷಾರ್‌!- ಓವೈಸಿಗೆ ಮತ್ತೆ ನವನೀತ್‌ ರಾಣಾ ಟಾಂಗ್

Murder Case in kodagu
ಕೊಡಗು1 hour ago

Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Arvind Kejriwal
ದೇಶ1 hour ago

Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Siddaramaiah
ಕರ್ನಾಟಕ1 hour ago

Siddaramaiah: ಮೋದಿ ಸುಳ್ಳಿನ ಸರದಾರ, ಭಾವನಾತ್ಮಕ ಆಟ ನಡೆಯಲ್ಲ; ಸಿದ್ದರಾಮಯ್ಯ ತಿರುಗೇಟು

accident case
ಕ್ರೈಂ2 hours ago

Accident Case : ಬ್ಯಾನರ್‌ ಕಟ್ಟುವಾಗ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಕಾರು

Chinese app
ವಿದೇಶ2 hours ago

Chinese Apps: ಟಿಕ್‌ಟಾಕ್‌ ಮಾತ್ರ ಅಲ್ಲ.. ಚೀನಾದ ಈ ಆಪ್‌ಗಳೂ ಅಷ್ಟೇ ಡೇಂಜರಸ್‌; ಶಾಕಿಂಗ್‌ ವರದಿ ಔಟ್‌

Jyoti Rai
ಕಿರುತೆರೆ2 hours ago

Jyoti Rai: ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ; ವಿಡಿಯೊ ವೈರಲ್‌ ಮಾಡುವಂತೆ ಸವಾಲು ಹಾಕಿದ್ದೇಕೆ?

BS Yediyurappa
ಕರ್ನಾಟಕ3 hours ago

BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌