Coal Production | ವಿದ್ಯುತ್ ಬೇಡಿಕೆ ದ್ವಿಗುಣಗೊಳ್ಳುವ ಸಂದರ್ಭದಲ್ಲಿ ಕಲ್ಲಿದ್ದಲು ಕ್ಷೇತ್ರ ಹೂಡಿಕೆಗೆ ಉತ್ತಮ: ಪ್ರಲ್ಹಾದ್ ಜೋಶಿ - Vistara News

ಕರ್ನಾಟಕ

Coal Production | ವಿದ್ಯುತ್ ಬೇಡಿಕೆ ದ್ವಿಗುಣಗೊಳ್ಳುವ ಸಂದರ್ಭದಲ್ಲಿ ಕಲ್ಲಿದ್ದಲು ಕ್ಷೇತ್ರ ಹೂಡಿಕೆಗೆ ಉತ್ತಮ: ಪ್ರಲ್ಹಾದ್ ಜೋಶಿ

2030ರ ವೇಳೆಗೆ ದೇಶಕ್ಕೆ ಬೇಕಾಗುವ ವಿದ್ಯುತ್ ಉತ್ಪಾದಿಸಲು ಕಲ್ಲಿದ್ದಲು ಉತ್ಪಾದನೆ ಹೆಚ್ಚಳ ಅನಿವಾರ್ಯ. ಕಲ್ಲಿದ್ದಲು ಗಣಿಗಾರಿಕೆ ವಿಚಾರದಲ್ಲಿ ಭಾರತ ಆತ್ಮನಿರ್ಭರದತ್ತ ಸಾಗುತ್ತಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

VISTARANEWS.COM


on

Absolutely no: Pralhad Joshi denies Karnataka CM aspirations, prefers to work under PM Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದೋರ್: ದೇಶದಲ್ಲಿ 2040ರ ವೇಳೆಗೆ ತಲಾ ವಿದ್ಯುತ್ ಬಳಕೆ ದ್ವಿಗುಣಗೊಳ್ಳಲಿದ್ದು, ಹೆಚ್ಚಿನ ಕಲ್ಲಿದ್ದಲು ಉತ್ಪಾದನೆಗೆ(Coal Production) ಕೇಂದ್ರ ಸರ್ಕಾರ ಒತ್ತು ನೀಡುತ್ತಿದೆ. ಕಲ್ಲಿದ್ದಲು ಕ್ಷೇತ್ರವನ್ನು ಖಾಸಗಿ ವಲಯಕ್ಕೂ ಮುಕ್ತಗೊಳಿಸುವ ಮೂಲಕ ಹೆಚ್ಚಿನ ಉತ್ಪಾದನೆಗೆ ಗಮನಹರಿಸಲಾಗಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ನಗರದಲ್ಲಿ ಕಲ್ಲಿದ್ದಲು ಸಚಿವಾಲಯದಿಂದ ಬುಧವಾರ ಆಯೋಜಿಸಿದ್ದ ಕಲ್ಲಿದ್ದಲು ಗಣಿಗಾರಿಕೆ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ಕ್ರಮಗಳಿಂದ ಕಲ್ಲಿದ್ದಲು ಆಮದನ್ನು ಶೇ.2 ಇಳಿಕೆಯಾಗಿದೆ. ಕಲ್ಲಿದ್ದಲು ಉತ್ಪಾದನೆಯಲ್ಲಿ ಭಾರತ ಆತ್ಮನಿರ್ಭರದತ್ತ ಸಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ | Lotus In G-20 Logo | ಜಿ-20 ಶೃಂಗಸಭೆ ಲೋಗೊದಲ್ಲಿ ಕಮಲ, ಬಿಜೆಪಿ-ಕಾಂಗ್ರೆಸ್ ಮಧ್ಯೆ ಕೋಲಾಹಲ

ವಿದ್ಯುತ್ ಬಳಕೆ ದ್ವಿಗುಣಗೊಳ್ಳುವ ಸಂದರ್ಭದಲ್ಲಿ ಕಲ್ಲಿದ್ದಲು ಉತ್ಪಾದನೆ ಹೆಚ್ಚಬೇಕಿದೆ. ಈ ನಿಟ್ಟಿನಲ್ಲಿ 6ನೇ ಹಂತದ 133 ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆ ಆರಂಭಿಸಲಾಗಿದೆ. ಈಗಾಗಲೇ 5ನೇ ಹಂತದ 64 ಕಲ್ಲಿದ್ದಲು ಗಣಿಗಳನ್ನು ಯಶಸ್ವಿಯಾಗಿ ಹರಾಜು ಮಾಡಲಾಗಿದೆ. ಅಲ್ಲದೇ 5ನೇ ಹಂತದ ಸೆಕೆಂಡ್ ಅಟೆಂಪ್ಟ್‌ನಲ್ಲಿ 8 ಗಣಿಗಳ ಹರಾಜು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಕಲ್ಲಿದ್ದಲು ಸಚಿವಾಲಯದಲ್ಲಿ ಸಂಪೂರ್ಣ ಪಾರದರ್ಶಕತೆ ತರಲಾಗಿದ್ದು, ಉದ್ಯಮ ಸ್ನೇಹಿ ವಾತಾವರಣ ರೂಪಿಸಲಾಗಿದೆ. ಹೂಡಿಕೆದಾರರು ಹೂಡಿಕೆ ಮಾಡಲು ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ. ಮುಂದಿನ 25 -30 ವರ್ಷಗಳವರೆಗೆ ಕಲ್ಲಿದ್ದಲಿಗೆ ಬೇಡಿಕೆ ಹೆಚ್ಚುತ್ತಲೇ ಹೋಗಲಿದೆ ಎಂದು ಅಭಿಪ್ರಾಯ ಪಟ್ಟರು.

ಇತರ ಅಭಿವೃದ್ಧಿ ಹೊಂದಿದ ಆರ್ಥಿಕತೆಗೆ ಹೋಲಿಸಿದರೆ ಭಾರತವು ಪ್ರಸ್ತುತ ತಲಾ ವಿದ್ಯುತ್ ಬಳಕೆಯ ಹತ್ತನೇ ಒಂದು ಭಾಗವನ್ನು ಹೊಂದಿಲ್ಲ. 2040ರ ವೇಳೆಗೆ ತಲಾ ಬಳಕೆ ದ್ವಿಗುಣಗೊಳ್ಳಲಿದೆ, ಇದಕ್ಕಾಗಿ ಕಲ್ಲಿದ್ದಲು ಅಗತ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಉತ್ತಮ ತಾಂತ್ರಿಕ ಪ್ರಕ್ರಿಯೆಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಜೋಶಿ ಹೂಡಿಕೆದಾರರಿಗೆ ಮಾಹಿತಿ ನೀಡಿದರು.

ನಿಶ್ಯಕ್ತ ಗಣಿಗಳನ್ನು ಮುಚ್ಚಲು ಕ್ರಮ
2030ರ ವೇಳೆಗೆ 1.3- 1.5 ಶತಕೋಟಿ ಟನ್ ನಿರೀಕ್ಷಿತ ಬೇಡಿಕೆಯೊಂದಿಗೆ ಭಾರತದ ಇಂಧನ ಭದ್ರತೆಗೆ ಕಲ್ಲಿದ್ದಲು ಅನಿವಾರ್ಯವಾಗಿದೆ. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಅನಿವಾರ್ಯ. ಹೀಗಾಗಿ ಕಲ್ಲಿದ್ದಲು ಉತ್ಪಾದನೆಯತ್ತ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಹೆಚ್ಚು ಒತ್ತು ನೀಡಲಾಗುತ್ತಿದೆ. ಅಲ್ಲದೇ ನಿಶ್ಯಕ್ತ ಕೆಲವು ಗಣಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ. ಟ್ರಾನ್ಸಿಶನ್ ಪ್ರಿನ್ಸಿಪಲ್ಸ್ ಆಧಾರಿತ ಪ್ಯಾನ್-ಇಂಡಿಯಾ ಮೈನ್ ಕ್ಲೋಸರ್ ಫ್ರೇಮ್‌ವರ್ಕ್ ಅನ್ನು ಅಳವಡಿಸಿಕೊಳ್ಳಲು ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ | Union Cabinet | 11 ವರ್ಷದ ಬಳಿಕ ಟಿವಿ ಚಾನೆಲ್‌ಗಳ ಅಪ್‌ಲಿಂಕಿಂಗ್‌, ಡೌನ್‌ಲಿಂಕಿಂಗ್‌ ಮಾರ್ಗಸೂಚಿ ಬದಲು, ಏನಿದೆ ವಿಶೇಷ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Kaladarpana-Art Reflects: ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.

VISTARANEWS.COM


on

Kaladarpana-Art Reflects
Koo

ಬೆಂಗಳೂರು: ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ (Kaladarpana-Art Reflects) ವತಿಯಿಂದ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ನಗರದ ನಾಗರಬಾವಿ 2ನೇ ಹಂತದ ಎನ್‌ಜಿಇಎಫ್‌ ಲೇಔಟ್‌ನ ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಭಾನುವಾರ (ಮೇ 5ರಂದು) ಬೆಳಗ್ಗೆ 8.30ಕ್ಕೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, 9ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.

ಅಂತರಾಷ್ಟ್ರೀಯ ಖ್ಯಾತಿಯ ತಬಲ ವಾದಕ ಪಂಡಿತ್ ಡಾ. ಸತೀಶ್ ಹಂಪಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಜಾವಾಣಿ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಮತ್ತು ಮಾರುತಿ ಮೆಡಿಕಲ್ಸ್ ಮಾಲೀಕರು ಮಹೇಂದ್ರ ಮುಣೋತ್ ಜೈನ್ ಅವರು ಭಾಗವಹಿಸಲಿದ್ದಾರೆ. ಈ ಮೂವರು ಗಣ್ಯರು, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಲಾದರ್ಪಣ ಪ್ರಶಸ್ತಿ ಪುರಸ್ಕೃತರು

  • ಗೋ.ನಾ. ಸ್ವಾಮಿ, ಅಂತಾರಾಷ್ಟ್ರೀಯ ಖ್ಯಾತಿಯ ಜನಪದ ಗಾಯಕರು
  • ವಿದುಷಿ ಅನಸೂಯ ದ್ವಾರಕನಾಥ, ಖ್ಯಾತ ಕರ್ನಾಟಕ ಶಾಸ್ತ್ರೀಯ ಸಂಗೀತಗಾರರು

ಇದನ್ನೂ ಓದಿ | Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಕರ್ನಾಟಕ ಚಿತ್ರಕಲಾ ಪರಿಷತ್‌ನ ಪ್ರಾಧ್ಯಾಪಕ ಪ್ರೊ. ವಿ.ಎಸ್. ನಾಯಕ ಬಳಕೂರು, ಎಸ್.ಎಸ್.ವಿ.ಎಸ್.ಪಿ.ಎಸ್. ಶಾಲೆ ಪ್ರಾಂಶುಪಾಲೆ ಲತಾ ಎಸ್. ಅವರು ಆಗಮಿಸಲಿದ್ದಾರೆ. ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ ಸಂಸ್ಥೆಯ ಹೇಮಾ ವಿನಾಯಕ್‌ ಪಾಟೀಲ್‌ ಹಾಗೂ ವಿನಾಯಕ್‌ ಪಾಟೀಲ್‌ ಅವರು ಉಪಸ್ಥಿತರಿರಲಿದ್ದಾರೆ. ಖ್ಯಾತ ನಿರೂಪಕಿ ಭವಾನಿ ಲೋಕೇಶ್‌ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Continue Reading

ಪ್ರಮುಖ ಸುದ್ದಿ

DK Shivakumar: ಅಶ್ಲೀಲ ಚಿತ್ರಕ್ಕೆ ಡಿಕೆಶಿ ಫೋಟೊ ಮಾರ್ಫಿಂಗ್ ಆರೋಪ; ಮೂವರ ವಿರುದ್ಧ ಎಫ್‌ಐಆರ್‌

DK Shivakumar: ಕೆಪಿಸಿಸಿ ಕಾನೂನು ಘಟಕದಿಂದ ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಅಶ್ಲೀಲ ಚಿತ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಫೋಟೊ ಮಾರ್ಫಿಂಗ್ ಮಾಡಿದ ಆರೋಪದಲ್ಲಿ ಕೇಸ್‌ ದಾಖಲಾಗಿದೆ.

VISTARANEWS.COM


on

DK Shivakumar
Koo

ಬೆಂಗಳೂರು: ಅಶ್ಲೀಲ ಚಿತ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಫೋಟೊ ಮಾರ್ಫಿಂಗ್ ಆರೋಪದಲ್ಲಿ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಿಜೆಪಿ ಮುಖಂಡರ ಅಶ್ಲೀಲ ಭಾವಚಿತ್ರಕ್ಕೆ ಡಿ.ಕೆ. ಶಿವಕುಮಾರ್ ಮುಖ ಜೋಡಣೆ ಮಾಡಿ, ಪೋಟೋ ವೈರಲ್ ಮಾಡಲಾಗಿದೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಕೆಪಿಸಿಸಿ ಕಾನೂನು ಘಟಕದಿಂದ ನೀಡಿದ ದೂರಿನ ಮೇರೆಗೆ ಸಂತೋಷ್, ರಾಜೇಶ್ ಮತ್ತು ಕೇಸರಿ ಸಾಮ್ರಾಟ್ ಎಂಬುವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಎಕ್ಸ್, ಫೇಸ್ ಬುಕ್, ಯುಟ್ಯೂಬ್‌ನಲ್ಲಿ ಡಿಕೆಶಿ ಫೋಟೊ ಎಡಿಟ್‌ ಮಾಡಿ ಪೋಸ್ಟ್ ಮಾಡಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣ (Hassan Pen Drive Case) ದೇಶಾದ್ಯಂತ ಸದ್ದು ಮಾಡುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಇದೀಗ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸಿಆರ್‌ಪಿಸಿ 41a ಅಡಿಯಲ್ಲಿ ಎಸ್‌ಐಟಿಯಿಂದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಎಚ್. ಡಿ. ರೇವಣ್ಣಗೆ ನೋಟಿಸ್ ನೀಡಲಾಗಿದೆ.

ಎಸ್ಐಟಿ ಸದಸ್ಯ, ತನಿಖಾಧಿಕಾರಿ ಎಸ್‌ಪಿ ಸೀಮಾ‌ ಲಾಟ್ಕರ್ ಅವರ ಮುಂದೆ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಎಚ್‌.ಡಿ. ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ನೊಟೀಸ್ ತಲುಪಿಸಿದ್ದು, ಹೊಳೆನರಸೀಪುರದಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌.ಡಿ.ರೇವಣ್ಣ ವಿರುದ್ಧ ಏ.28ರಂದು ಹೊಳೆನರಸೀಪುರ ಠಾಣೆಯಲ್ಲಿ ಮನೆಗೆಲಸದಾಕೆ ದೂರು ನೀಡಿದ್ದಳು. ಈ ಸಂಬಂಧ ವಿಚಾರಣೆಗಾಗಿ ಇದೀಗ ನೋಟಿಸ್‌ ನೀಡಲಾಗಿದೆ.

ಪ್ರಜ್ವಲ್‌ ಕೇಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ; 3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಎಂಟ್ರಿ ಕೊಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರು ದಿನದೊಳಗೆ ವರದಿ ನೀಡುವಂತೆ ಕರ್ನಾಟಕ ಪೊಲೀಸ್‌ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಮಹಿಳಾ ಆಯೋಗವು ಸುಮೊಟೊ ಕೇಸ್‌ ದಾಖಲು ಮಾಡಿಕೊಂಡಿದೆ. ಜತೆಗೆ ಡಿಜಿಗೆ ಪತ್ರ ಬರೆದು ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

Continue Reading

ಧಾರವಾಡ

Lok Sabha Election 2024: ಈ ಲೋಕಸಭಾ ಚುನಾವಣೆ ಭಾರತದ ಸುವರ್ಣ ಯುಗಕ್ಕೆ ನಾಂದಿ: ಪ್ರಲ್ಹಾದ್‌ ಜೋಶಿ

Lok Sabha Election 2024: ಶಿಗ್ಗಾಂವಿಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ‌ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

Union Minister Pralhad Joshi election campaign in Shiggavi
Koo

ಶಿಗ್ಗಾಂವಿ: ಪ್ರಸಕ್ತ ಲೋಕಸಭಾ ಚುನಾವಣೆ (Lok Sabha Election 2024) ಭಾರತದ ಸುವರ್ಣ ಯುಗಕ್ಕೆ ನಾಂದಿಯಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

ಶಿಗ್ಗಾಂವಿ ನಗರದ ಸಂತೆ ಮೈದಾನದಲ್ಲಿ ಮಂಗಳವಾರ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ಕೇವಲ ಒಂದು ಚುನಾವಣೆಯಲ್ಲ. ದೇಶದ ಅಭಿವೃದ್ಧಿ, ಸ್ವಾವಲಂಬಿ ಮತ್ತು ಸ್ವಾಭಿಮಾನಕ್ಕೆ ಸವಾಲಾದದ್ದಾಗಿದೆ ಎಂದು ತಿಳಿಸಿದರು.

ಪ್ರಸ್ತುತ ಸನ್ನಿವೇಶದಲ್ಲಿ ದೇಶ ರಕ್ಷಣೆ ಮತ್ತು ಹಿಂದೂಗಳ ಸಂರಕ್ಷಣೆಗಾಗಿ ನರೇಂದ್ರ ಮೋದಿ ಅವರ ಆಡಳಿತ ಮತ್ತೆ ಮಹತ್ವ ಪಡೆದುಕೊಂಡಿದೆ. ಇದಕ್ಕಾಗಿ ಎಲ್ಲರೂ ಎಚ್ಚೆತ್ತುಕೊಂಡು ಮತದಾನ ಮಾಡಬೇಕಿದೆ ಎಂದು ಕರೆ ನೀಡಿದರು.

ಇದನ್ನೂ ಓದಿ: Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದ ಬಿಜೆಪಿಗೆ ಅಮೂಲ್ಯವಾದ ಮತ ನೀಡಿ ದೇಶದ ಐತಿಹಾಸಿಕ ಕ್ಷಣಗಳಿಗೆ ಮುನ್ನುಡಿ ಬರೆಯಬೇಕು ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸದಾ ಜನರಿಗಾಗಿ ದುಡಿಯುವ ಸರ್ಕಾರ. ದೇಶದ ಎಲ್ಲ ಜನರ ಕ್ಷೇಮಕ್ಕಾಗಿ, ಅಭಿವೃದ್ದಿಗಾಗಿ ಮತ್ತು ಸರ್ವತೋಮುಖ ಬೆಳವಣಿಗಾಗಿ ಕೆಲಸ ಮಾಡುತ್ತಿದೆ ಎಂದು ಸಚಿವ ಜೋಶಿ ಪ್ರತಿಪಾದಿಸಿದರು.

ಜಗತ್ತಿಗೆ ಭಾರತ ಕೇವಲ ಒಂದು ದೇಶವಾಗಿ ಉಳಿದಿಲ್ಲ. ಪ್ರಪಂಚವೇ ಹಿರಿಯಣ್ಣನಾಗಿ ಸ್ವೀಕರಿಸಲು ಸಿದ್ಧವಾಗಿದೆ. ಆದ್ದರಿಂದ ದೇಶದ ಪ್ರತಿ ನಾಗರಿಕನೂ ನರೇಂದ್ರ ಮೋದಿಯವರನ್ನು ಬೆಂಬಲಿಸಿ ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕು ಎಂದು ಮನವಿ ಮಾಡಿದರು.

ರೋಡ್‌ ಶೋ

ಪ್ರಚಾರ ಸಭೆಗೂ ಮುನ್ನ ಶಿಗ್ಗಾಂವಿಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ‌ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ರೋಡ್ ಶೋ ನಡೆಸಿ, ಮತಯಾಚನೆ ನಡೆಸಿದರು.

ಇದನ್ನೂ ಓದಿ: Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

ಪ್ರಚಾರ ಸಭೆಯಲ್ಲಿ ವಿಧಾನಸಭಾ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ಮುಖಂಡರಾದ ಶಿವಾನಂದ ಮ್ಯಾಗೇರಿ, ಶ್ರೀಕಾಂತ ದುಂಡಿಗೌಡರ, ಶಶಿಧರ ಯಲಿಗಾರ, ತಿಪ್ಪಣ್ಣ ಸಾತಣ್ಣವರ, ಪ್ರಸಾದ್ ಸುರಗಿಮಠ, ರವಿ ಕುಡೊಕ್ಕಲಿಗಾರ, ಬಸವರಾಜ ನಾರಾಯಣಪುರ, ಗಂಗಾಧರ ಬಾಣದ ಹಾಗೂ ಅಸಂಖ್ಯಾತ ಕಾರ್ಯಕರ್ತರು, ಅಭಿಮಾನಿಗಳು, ಬೆಂಬಲಿಗರು ಪಾಲ್ಗೊಂಡಿದ್ದರು.

Continue Reading

ವಿಜಯನಗರ

Lok Sabha Election 2024: ಹೊಸಪೇಟೆಯಲ್ಲಿ ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ

Lok Sabha Election 2024: ಲೋಕಸಭಾ ಸಾರ್ವತ್ರಿಕ ಚುನಾವಣೆ- 2024ರ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಮಂಗಳವಾರ ಹೊಸಪೇಟೆ ನಗರದಲ್ಲಿ ಬೈಕ್ ರ‍್ಯಾಲಿ ನಡೆಯಿತು.

VISTARANEWS.COM


on

Lok Sabha Election 2024 Bike rally for voting awareness in Hosapete
Koo

ಹೊಸಪೇಟೆ: ಲೋಕಸಭಾ ಸಾರ್ವತ್ರಿಕ ಚುನಾವಣೆ- 2024ರ (Lok Sabha Election 2024) ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಮಂಗಳವಾರ ನಗರದಲ್ಲಿ ಬೈಕ್ ರ‍್ಯಾಲಿ ನಡೆಯಿತು.

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ಚೀಪ್ ಸಮಿತಿಯ ಸಹಯೋಗದಲ್ಲಿ ಹೊಸಪೇಟೆಯ ಡ್ಯಾಮ್ ರಸ್ತೆಯಲ್ಲಿರುವ ಜಿಲ್ಲಾಡಳಿತ ಭವನದ ಆವರಣದಲ್ಲಿ ಏರ್ಪಡಿಸಿದ್ದ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಡಿಸಿ ಎಂ.ಎಸ್.ದಿವಾಕರ್‌, ಮತದಾನವು ಪ್ರತಿಯೊಬ್ಬರಿಗೂ ಸಂವಿಧಾನಬದ್ಧವಾಗಿ ಬಂದಿರುವ ಹಕ್ಕಾಗಿದೆ. ಹೀಗಾಗಿ ಪ್ರತಿಯೊಬ್ಬರು ಮತದಾನದಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು ಬಿ. ಮಾತನಾಡಿ, ಜಿಲ್ಲಾಡಳಿತದ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲಾದ್ಯಂತ ಸಾಕಷ್ಟು ಸ್ವೀಪ್ ಕಾರ್ಯಕ್ರಮಗಳನ್ನು ರೂಪಿಸಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತದಾನದ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.

ವಿವಿಧೆಡೆ ಸಂಚಾರ

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರು ಸ್ವತಃ ತಾವೇ ಬೈಕ್ ಚಲಾಯಿಸಿ ಇತರರಿಗೆ ಸ್ಪೂರ್ತಿ ತುಂಬಿದರು. ನಗರದ ವಿವಿಧೆಡೆ ಬೈಕ್‌ ರ‍್ಯಾಲಿ ನಡೆಸಿ ಜಾಗೃತಿ ಮೂಡಿಸಲಾಯಿತು.

ಪ್ರತಿಜ್ಞಾವಿಧಿ ಬೋಧನೆ

ಬೈಕ್ ರ‍್ಯಾಲಿಯ ಆರಂಭಕ್ಕೂ ಮುನ್ನ ಮತದಾನ ಜಾಗೃತಿಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜಿ.ಪಂ. ಮುಖ್ಯ ಯೋಜನಾಧಿಕಾರಿ ಅನ್ನದಾನೇಶ್ವರ ಸ್ವಾಮಿ ಜೆ.ಎಂ. ಪ್ರತಿಜ್ಞಾವಿಧಿ ಬೋಧಿಸಿದರು.

ಇದನ್ನೂ ಓದಿ: Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಎಚ್.ಎಸ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶ ರಾಮಚಂದ್ರಪ್ಪ, ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಸುಧೀರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಯುವರಾಜ ನಾಯಕ, ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಹೊಸಪೇಟೆ ತಾಲೂಕು ಪಂಚಾಯಿತಿ ಇಒ ಹರೀಶ್, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ, ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ರವಿಕುಮಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂದು ಯಲಿಗಾರ ಸೇರಿದಂತೆ ಇತರರು ಇದ್ದರು.

Continue Reading
Advertisement
Kaladarpana-Art Reflects
ಬೆಂಗಳೂರು2 hours ago

Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Covishield Vaccine
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮ ಆತಂಕಕಾರಿ

Narendra modi
ಪ್ರಮುಖ ಸುದ್ದಿ2 hours ago

Narendra Modi : ನಾನು ಬದುಕಿರುವವರೆಗೂ ಮುಸ್ಲಿಮರಿಗೆ ಧರ್ಮದ ಆಧಾರದ ಮೀಸಲಾತಿ ಇಲ್ಲ ಎಂದ ಮೋದಿ

DK Shivakumar
ಪ್ರಮುಖ ಸುದ್ದಿ3 hours ago

DK Shivakumar: ಅಶ್ಲೀಲ ಚಿತ್ರಕ್ಕೆ ಡಿಕೆಶಿ ಫೋಟೊ ಮಾರ್ಫಿಂಗ್ ಆರೋಪ; ಮೂವರ ವಿರುದ್ಧ ಎಫ್‌ಐಆರ್‌

IPL 2024
Latest3 hours ago

IPL 2024 : ‘ಆಲ್​ರೌಂಡರ್​’ ಪಾಂಡ್ಯ ನೇತೃತ್ವದ ಮುಂಬೈ ತಂಡವನ್ನು ಸೋಲಿಸಿದ ರಾಹುಲ್ ನಾಯಕತ್ವದ ಲಕ್ನೊ

Union Minister Pralhad Joshi election campaign in Shiggavi
ಧಾರವಾಡ3 hours ago

Lok Sabha Election 2024: ಈ ಲೋಕಸಭಾ ಚುನಾವಣೆ ಭಾರತದ ಸುವರ್ಣ ಯುಗಕ್ಕೆ ನಾಂದಿ: ಪ್ರಲ್ಹಾದ್‌ ಜೋಶಿ

Lok Sabha Election 2024 Bike rally for voting awareness in Hosapete
ವಿಜಯನಗರ3 hours ago

Lok Sabha Election 2024: ಹೊಸಪೇಟೆಯಲ್ಲಿ ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ

BJP National President JP Nadda Election Campaign for Haveri Gadag Lok Sabha Constituency BJP Candidate Basavaraj Bommai
ಕರ್ನಾಟಕ3 hours ago

Lok Sabha Election 2024: ಮೋದಿಯವರ ವಿಕಸಿತ ಭಾರತ ಸಾಕಾರಗೊಳಿಸಲು ಬೊಮ್ಮಾಯಿಯವರನ್ನು ಗೆಲ್ಲಿಸಿ: ಜೆಪಿ ನಡ್ಡಾ

2nd PUC Paper Leak
ಕರ್ನಾಟಕ3 hours ago

2nd PUC Paper Leak: ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ವಜಾಗೊಂಡಿದ್ದ ಎಸ್‌ಡಿಎ ಮರು ನೇಮಕ!

Lok Sabha Election
Lok Sabha Election 20243 hours ago

Lok Sabha Election: ಕಳೆದ ಬಾರಿಗೆ ಹೋಲಿಸಿದರೆ ಮೊದಲೆರಡು ಹಂತಗಳ ಮತದಾನದ ಪ್ರಮಾಣದಲ್ಲಿ ಕುಸಿತ; ಇಲ್ಲಿದೆ ಅಂಕಿ-ಅಂಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ21 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌