Site icon Vistara News

Praveen Nettaru | ‌ಬಂಧಿತ ಶಫೀಕ್‌ ಕೆಲಸ ಮಾಡುತ್ತಿದ್ದ ಅಂಗಡಿ ಮೇಲೆ ಕಲ್ಲು ತೂರಾಟ

praveen police1

ಮಂಗಳೂರು: ಸುಳ್ಯ ತಾಲೂಕಿನ ಗುತ್ತಿಗಾರು ಎಂಬಲ್ಲಿ ಅಂಗಡಿಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಶಫೀಕ್‌ ಕೆಲಸ ಮಾಡುತ್ತಿದ್ದ ಅಂಗಡಿ ಅದಾಗಿದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಕೆಲವು ಯುವಕರ ತಂಡವು ಆ ಅಂಗಡಿ ಮೇಲೆ ಕಲ್ಲೆಸೆದಿದ್ದಾರೆ. ಅದು ಮುಸ್ಲಿಂ ಸಮುದಾಯಕ್ಕೆ ಸೇರಿದವರೊಬ್ಬರ ಅಂಗಡಿಯಾಗಿದೆ ಎನ್ನಲಾಗಿದೆ. ಆರೋಪಿಗಳ ಬಂಧನವಾಗುತ್ತಿದ್ದಂತೆ ಹಲವು ವಿಚಾರಗಳು ಸೋಷಿಯಲ್‌ ಮೀಡಿಯಾ ಸಹಿತ ಇನ್ನಿತರ ಕಡೆ ಹರಿದಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗುಂಪೊಂದರಿಂದ ಕಲ್ಲಿನ ದಾಳಿ ನಡೆದಿದೆ. ಇದೇ ವೇಳೆ ಇತರ ಕೆಲವು ಕಡೆ ಸಹ ಕೆಲವು ಗುಂಪುಗಳು ಕಲ್ಲು ತೂರಾಟ ಮಾಡಿ ಆಕ್ರೋಶವನ್ನು ಹೊರಹಾಕಿವೆ ಎಂದು ಹೇಳಲಾಗಿದೆ.

ಇದನ್ನೂ ಓದಿ | Praveen Nettaru | ಪ್ರವೀಣ್‌ ಜತೆ ಕೆಲಸ ಮಾಡುತ್ತಿದ್ದ ಬಂಧಿತ ಆರೋಪಿ ಶಫೀಕ್‌ ತಂದೆ

Exit mobile version