ಕರ್ನಾಟಕ
Praveen Nettaru murder: ಮನೆ ಬಾಡಿಗೆ ಪಡೆದುಕೊಂಡವನೇ ಬೇರೆ; ತುಫೈಲ್ ಇದ್ದಿದ್ದೇ ಗೊತ್ತಿಲ್ಲ: ಮನೆ ಮಾಲೀಕ ಹೇಳಿದ್ದೇನು?
Praveen Nettaru murder: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಪ್ರಮುಖ ಆರೋಪಿಯಲ್ಲೊಬ್ಬನಾಗಿರುವ ತುಫೈಲ್ ಕೊನೆಗೂ ಎನ್ಐಎ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾಣೆ. ಈತ ಕಳೆದ ಆರು ತಿಂಗಳಿನಿಂದ ಇದೇ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. ಆದರೆ, ಈ ಬಗ್ಗೆ ಮನೆ ಮಾಲೀಕನಿಗೆ ಯಾವುದೇ ವಿಷಯ ತಿಳಿದಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ಹಿಂದು ಕಾರ್ಯಕರ್ತ ಮಂಗಳೂರಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ (Praveen Nettaru murder) ಪ್ರಕರಣದ ಪ್ರಮುಖ ಆರೋಪಿ ನಿಷೇಧಿತ ಪಿಎಫ್ಐ ಸಂಘಟನೆಯ ಮೋಸ್ಟ್ ವಾಂಟೆಡ್ ಮುಖಂಡ, ಮಡಿಕೇರಿ ಮೂಲದ ತುಫೈಲ್ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದೇ ಒಂದು ರೋಚಕವಾದರೆ, ಆತ ಮನೆಯಲ್ಲಿ ಇದ್ದಿದ್ದು ಮನೆ ಮಾಲೀಕರಿಗೇ ಗೊತ್ತಿಲ್ಲ ಎಂಬ ಸಂಗತಿ ಈಗ ಬಯಲಾಗಿದೆ!
ರಾಜ್ಯವಿಡೀ ಸುದ್ದಿಯಾಗಿದ್ದ ಸುಳ್ಯದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ. ಈತನ ಸುಳಿವು ಕೊಟ್ಟವರಿಗೆ ಪೊಲೀಸರು 5 ಲಕ್ಷ ರೂಪಾಯಿ ಬಹುಮಾನವನ್ನೂ ಘೋಷಣೆ ಮಾಡಿದ್ದರು. ಈತನಿಗಾಗಿ ಕೇರಳ, ತಮಿಳುನಾಡು ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲಿಯೂ ಹುಡುಕಾಟ ನಡೆಸಲಾಗಿತ್ತು. ಆದರೆ, ಯಾರ ಕಣ್ಣಿಗೂ ಬೀಳದೆ ಆರಾಮವಾಗಿ ಓಡಾಡಿಕೊಂಡಿದ್ದ ಎಂದು ಈಗ ತಿಳಿದುಬಂದಿದೆ. ಈಗ ನಿಖರ ಮಾಹಿತಿ ಮೇರೆಗೆ ಎನ್ಐಎ ದಾಳಿ ಮಾಡಿದ್ದರಿಂದ ಆತ ಸಿಕ್ಕಿಬಿದ್ದಿದ್ದಾನೆ.
ತುಫೈಲ್ ಇದ್ದಿದ್ದೇ ಗೊತ್ತಿಲ್ಲವೆಂದ ಮನೆ ಮಾಲೀಕ
ಮಹಮ್ಮದ್ ಶಫಿ ಎಂಬಾತ ಮನೆಯನ್ನು ಬಾಡಿಗೆಗೆ ಪಡೆದುಕೊಂಡಿದ್ದ. ಆತ ಬಾಡಿಗೆಗೆ ಪಡೆದುಕೊಂಡು 2 ವರ್ಷವಾಗಿದೆ. ಪ್ರತಿ ಬಾರಿಯೂ ಶಫಿಯೇ ಮನೆ ಬಾಡಿಗೆಯನ್ನು ಪಾವತಿ ಮಾಡುತ್ತಿದ್ದ. ಫ್ಯಾಮಿಲಿಯವರು ಇರುತ್ತೇವೆ ಎಂದು ಬಾಡಿಗೆಗೆ ಪಡೆದುಕೊಂಡಿದ್ದ. ಆದರೆ, ಹೆಂಡತಿ ಡೆಲಿವರಿಗಾಗಿ ಊರಿನಲ್ಲಿರುವುದಾಗಿ ಹೇಳಿದ್ದಾರೆ. ಇಲ್ಲಿ ಬ್ಯುಸಿನೆಸ್ ಮಾಡಿಕೊಂಡಿರುವುದಾಗಿ ಹೇಳಿದ್ದರು. ಆದರೆ, ತುಫೈಲ್ ಇಲ್ಲಿಗೆ ಬಂದಿರುವ ಬಗ್ಗೆ ನನಗೆ ಮಾಹಿತಿ ಇರಲಿಲ್ಲ ಎಂದು ಮನೆ ಮಾಲೀಕ ನಂಜುಡಪ್ಪ ಅವರು ವಿಸ್ತಾರ ನ್ಯೂಸ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ, ಮಹಮ್ಮದ್ ಶಫಿ ಸೋಮವಾರಪೇಟೆ ನಿವಾಸಿಯಾಗಿದ್ದಾನೆ.
6 ತಿಂಗಳಿಂದ ವಾಸ?
ಅಮೃತಹಳ್ಳಿಯ ದಾಸರಹಳ್ಳಿಯ ಭುವನೇಶ್ವರಿ ನಗರದ ಅಪಾರ್ಟ್ಮೆಂಟ್ನಲ್ಲಿ ಸಿಕ್ಕಿಬಿದ್ದಿರುವ ತುಫೈಲ್ ಕಳೆದೆರಡು ತಿಂಗಳಿನಿಂದ ವಾಸವಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಅಪಾರ್ಟ್ಮೆಂಟ್ನ ಮೊದಲ ಮಹಡಿಯಲ್ಲಿನ ಮನೆಯಲ್ಲಿ ಈತ ವಾಸವಿದ್ದ. ಆದರೆ, ಹೆಚ್ಚಾಗಿ ಹೊರಗೆ ಕಾಣಿಸಿಕೊಳ್ಳುತ್ತಿರಲಿಲ್ಲ. ನಾವು ಈತನನ್ನು ನೋಡಿದ್ದೇ ಕಡಿವೆ. ಸುಮಾರು ಎರಡು ತಿಂಗಳಿನಿಂದ ಆಗಾಗ ಕಾಣಿಸಿಕೊಳ್ಳುತ್ತಿದ್ದ ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ, ಮಾಹಿತಿಗಳ ಪ್ರಕಾರ ಆರು ತಿಂಗಳಿನಿಂದ ವಾಸವಾಗಿದ್ದಾನೆ ಎನ್ನಲಾಗಿದೆ.
ಉಳಿದ ಆರೋಪಿಗಳಿಗಾಗಿ ಶೋಧ
ಸದ್ಯ ತುಫೈಲ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು, ಇನ್ನುಳಿದ ಮೂವರು ಆರೋಪಿಗಳಿಗಾಗಿ ತೀವ್ರ ಶೋಧ ಮುಂದುವರಿಸಿದ್ದಾರೆ. ಮಹಮ್ಮದ್ ಮುಸ್ತಾಫ್ ಪತ್ತೆಗಾಗಿ 5 ಲಕ್ಷ ರೂ., ಉಮ್ಮರ್ ಫಾರೂಖ್ಗೆ 2 ಲಕ್ಷ ರೂ., ಅಬೂಬಕರ್ ಸಿದ್ದಿಕ್ಗೆ 2 ಲಕ್ಷ ರೂಪಾಯಿ ಘೋಷಣೆ ಮಾಡಲಾಗಿದೆ. ನಾಲ್ವರೂ ನಿಷೇಧಿತ ಸಂಘಟನೆ ಪಿಎಫ್ಐನ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.
ಅಡಗಲು ಅಚ್ಚುಕಟ್ಟು ತಾಣವನ್ನೇ ಆಯ್ದುಕೊಂಡಿದ್ದ ತುಫೈಲ್
ತುಫೈಲ್ ಅಡಗಿ ಕೂರಲು ಅಚ್ಚುಕಟ್ಟು ತಾಣವನ್ನೇ ಆಯ್ದುಕೊಂಡಿದ್ದ. ನೆಟ್ಟಾರು ಹತ್ಯೆಗೆ ಮೊದಲೇ ಮಹಮ್ಮದ್ ಶಫಿಗೆ ತುಫೈಲ್ ಪರಿಚಿತನಾಗಿದ್ದ ಎನ್ನಲಾಗಿದೆ. ಅಪಾರ್ಟ್ಮೆಂಟ್ನಲ್ಲಿ ಸಿಸಿಟಿವಿ ಇಲ್ಲದಿರುವುದನ್ನು ಗಮನಿಸಿಕೊಂಡಿದ್ದ ಈತ ಜನರ ಓಡಾಟ ಕಡಿಮೆ ಇರುವುದನ್ನು ಗಮನಿಸಿಕೊಂಡಿದ್ದ. ತನ್ನ ಚಲನವಲನಗಳು ಎಲ್ಲಿಯೂ ತಿಳಿಯದಂತೆ ಸಾಕಷ್ಟು ಮುನ್ನೆಚ್ಚರಿಗೆ ವಹಿಸಿಕೊಂಡಿದ್ದ.
ನೆಟ್ಟಾರು ಕೊಲೆ ಬಳಿಕ ಅಲ್ಲಲ್ಲಿ ಅಡ್ಡಾಡಿ ಮಹಮ್ಮದ್ ಶಫಿ ಮನೆಯಲ್ಲಿ ಅಡಗಿದ್ದ ಎಂದು ಹೇಳಲಾಗುತ್ತಿದೆ. ತುಫೈಲ್ ಬಂದ ನಂತರ ಶಫಿ ತನ್ನ ಹೆಂಡತಿಯನ್ನು ತವರಿಗೆ ಕಳಿಸಿದ್ದ ಎನ್ನಲಾಗಿದೆ. ತುಫೈಲ್ಗೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಶಫಿ ಮಾಡಿಕೊಡ್ಡುತ್ತಿದ್ದ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Praveen Nettaru Murder: ಪ್ರವೀಣ್ ಹತ್ಯೆ ಆರೋಪಿ ತುಫೈಲ್ನನ್ನು NIA ಹಿಡಿದದ್ದು ಹೀಗೆ!
ಟ್ರೇಗಟ್ಟಲೆ ಮೊಟ್ಟೆ, ವಾರಕ್ಕೆ ಬೇಕಾದ ಮಟನ್ ಸೇರಿ ಬೇಕಿದ್ದ ಆಹಾರ ಸಾಮಗ್ರಿಯನ್ನು ಶಫಿಯೇ ಪೂರೈಕೆ ಮಾಡುತ್ತಿದ್ದ. ತುಫೈಲ್ ಕೊಲೆ ಆರೋಪಿ ಎಂದು ತಿಳಿದಿದ್ದರೂ ಮಹಮ್ಮದ್ ಶಫಿ ರಕ್ಷಣೆ ನೀಡಿದ್ದ. ಆತನ ರಕ್ಷಣೆಯಲ್ಲಿಯೇ ಕಳೆದ 6 ತಿಂಗಳಿನಿಂದ ವಾಸ ಮಾಡಿದ್ದಾನೆಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಈಗ ಕೊಲೆ ಆರೋಪಿಗೆ ರಕ್ಷಣೆ ನೀಡಿದ ಹಿನ್ನೆಲೆಯಲ್ಲಿ ಮಹಮ್ಮದ್ ಶಫಿ ಮೇಲೆಯೂ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಹಮ್ಮದ್ ಶಫಿ ಸಹ ಎಸ್ಕೇಪ್ ಆಗಿದ್ದಾನೆ. ಆತನಿಗೂ ಶೋಧ ಕಾರ್ಯ ಮುಂದುವರಿದಿದೆ.
ತುಫೈಲ್ಗೆ ನಾನು ಮನೆ ಬಾಡಿಗೆ ಕೊಟ್ಟಿರಲಿಲ್ಲ- ಮನೆ ಮಾಲೀಕ ಮಾತನಾಡಿದ ವಿಡಿಯೊ ಇಲ್ಲಿದೆ
ಏನಿದು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ?
2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಳ್ಳಾರೆಯಲ್ಲಿ ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ನಿಷೇಧಿತ ಪಿಎಫ್ಐ ಸಂಘಟನೆಯ ಹಲವರು ಬರ್ಬರವಾಗಿ ಹತ್ಯೆ ಮಾಡಿದ್ದರು. ಪ್ರವೀಣ್ ನೆಟ್ಟಾರು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಇವರನ್ನು ಹತ್ಯೆ ಮಾಡಲು ಸುಳ್ಯ ಮತ್ತು ಬೆಳ್ಳಾರೆಯ ಪಿಎಫ್ಐ ಸದಸ್ಯರು ಸ್ಕೆಚ್ ಹಾಕಿದ್ದರು. ಅದರಂತೆ ಬೆಳ್ಳಾರೆಯಲ್ಲಿ ಜುಲೈ 26ರ ರಾತ್ರಿ ಕೊಲೆ ಮಾಡಿದ್ದರು.
ಪ್ರಕರಣದ ಆರೋಪಿಗಳು ಯಾರ್ಯಾರು?
ಸುಳ್ಯ ಪಟ್ಟಣದ ಮಹಮ್ಮದ್ ಶಿಯಾಬ್, ಅಬ್ದುಲ್ ಬಶೀರ್, ಪಾಲ್ತಾಡಿಯ ರಿಯಾಜ್, ಸುಳ್ಯ ತಾಲೂಕಿನ ಮುಸ್ತಫಾ ಪೈಚರ್, ನೆಕ್ಕಿಲಾಡಿಯ ಮಸೂದ್ ಕೆ.ಎ., ಬಂಟ್ವಾಳದ ಕೊಡಾಜೆ ಮೊಹಮ್ಮದ್ ಶೆರಿಫ್, ಬೆಳ್ಳಾರೆಯ ಅಬೂಬಕ್ಕರ್ ಸಿದ್ದಿಕ್, ಸುಳ್ಯ ತಾಲೂಕಿನ ನೌಫಾಲ್ ಎಂ., ಬೆಳ್ಳಾರೆ ಗ್ರಾಮದ ಇಸ್ಮಾಯಿಲ್ ಶಫಿ ಕೆ., ಶೇಖ್ ಸದ್ದಾಂ ಹುಸೇನ್, ಎನ್. ಅಬ್ದುಲ್ ಹ್ಯಾರಿಸ್ ಮತ್ತು ಕೆ. ಮೊಹಮ್ಮದ್ ಇಕ್ಬಾಲ್, ಬೆಳ್ಳಾರೆಯ ಮೊಹಮ್ಮದ್ ಶಫೀಕ್, ಮಂಗಳಂತಿಯ ಶಹೀದ್ ಎಂ., ಸುಳ್ಯದ ಉಮ್ಮರ್ ಫಾರೂಕ್ ಎಂಆರ್, ಅಬ್ದುಲ್ ಕಬೀರ್, ನೆಲ್ಲೂರು ಕೆಮ್ರಾಜೆ ಗ್ರಾಮದ ಮುಹಮ್ಮದ್ ಇಬ್ರಾಹಿಂ ಶಾ, ನಾವೂರ್ನ ಸೈನುಲ್ ಅಬಿದ್ ವೈ, ಸವಣೂರಿನ ಝಕಿಯಾರ್ ಎ., ಮಡಿಕೇರಿಯ ತುಫೈಲ್ ಎಂ.ಎಚ್. ಪ್ರಕರಣದ ಆರೋಪಿಗಳಾಗಿದ್ದಾರೆ.
ಇಷ್ಟು ಜನ ಆರೋಪಿಗಳಲ್ಲಿ ಮುಸ್ತಫಾ ಪೈಚರ್, ಮಸೂದ್ ಕೆ.ಎ., ಕೊಡಾಜೆ ಮೊಹಮ್ಮದ್ ಶರೀಫ್, ಅಬೂಬಕ್ಕರ್ ಸಿದ್ದಿಕಿ, ಉಮ್ಮರ್ ಫಾರೂಕ್ ಎಂ.ಆರ್. ತಲೆಮರೆಸಿಕೊಂಡಿದ್ದ ಆರೋಪಿಗಳಾಗಿದ್ದಾರೆ. ಈಗ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಖೆಡ್ಡಾಕ್ಕೆ ಕೆಡವಲು ಎನ್ಐಎ ಮುಂದಾಗಿದೆ.
ಇದನ್ನೂ ಓದಿ: BJP Politics: ಬಿಜೆಪಿಯಲ್ಲಿ ಸಂಸದ ವರ್ಸಸ್ ಶಾಸಕ: ಈರಣ್ಣ ಕಡಾಡಿ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 120ಬಿ (ಅಪರಾಧ ಸಂಚಿನ ಶಿಕ್ಷೆ), 153ಎ (ವಿಭಿನ್ನ ಗುಂಪುಗಳ ನಡುವೆ ವೈರತ್ವ ಪ್ರಚೋದನೆ), 302 (ಕೊಲೆ) ಮತ್ತು 34 (ಸಾಮಾನ್ಯ ಉದ್ದೇಶದಿಂದ ಅನೇಕ ವ್ಯಕ್ತಿಗಳು ನಡೆಸಿರುವ ಕೃತ್ಯ), ಯುಎಪಿಎ ಕಾಯ್ದೆಯ 16, 18 ಮತ್ತು 20ನೇ ಸೆಕ್ಷನ್ಗಳು, ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 15 (1) (a) ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಕರ್ನಾಟಕ
Cauvery Water Dispute: ಜನರ ಸಂಕಷ್ಟದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ: ಬಿ.ವೈ.ವಿಜಯೇಂದ್ರ
Cauvery Water Dispute: ರಾಜ್ಯದ ಸ್ಥಿತಿ ಬಗ್ಗೆ ಕಾವೇರಿ ಜಲ ನಿಯಂತ್ರಣ ಸಮಿತಿಯ ಮುಂದೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಬೆಂಗಳೂರು: ಬದ್ಧತೆ, ಇಚ್ಛಾಶಕ್ತಿ ಇಲ್ಲದ ಸರ್ಕಾರವೊಂದು ಜನರ ಸಂಕಷ್ಟದೊಂದಿಗೆ ಹೇಗೆ ಚೆಲ್ಲಾಟವಾಡಬಹುದು ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಉದಾಹರಣೆಯಾಗಿದೆ. ಮಳೆ ಇಲ್ಲದೆ ಬೆಳೆ ಇಲ್ಲದೆ, ಕುಡಿಯುವ ನೀರಿಗೂ ಸಂಚಕಾರ ಬಂದೊದಗಿರುವ ಕಠೋರ ಪರಿಸ್ಥಿತಿಯನ್ನು. ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ) (Cauvery Water Dispute) ಮುಂದೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿ.ವೈ.ವಿಜಯೇಂದ್ರ ಅವರು, ‘ಗಾಯದ ಮೇಲೆ ಬರೆ’ ಎಳೆದಂತೆ ಸಿಡಬ್ಲ್ಯುಆರ್ಸಿಯಿಂದ ಮತ್ತೆ 3000 ಕ್ಯೂಸೆಕ್ ನೀರು ಬಿಡುವ ಆದೇಶ ಪಡೆದು, ಸರ್ಕಾರವು ಕರ್ನಾಟಕದ ಪಾಲಿಗೆ ಕರಾಳ ಶಾಸನ ಬರೆಸಿಕೊಂಡಿದೆ ಎಂದು ಟೀಕಿಸಿದ್ದಾರೆ.
ಕರುನಾಡು ಉದ್ವಿಗ್ನ ಗೊಂಡಿದೆ, ಜನರ ಆಕ್ರೋಶ ಮುಗಿಲು ಮುಟ್ಟಿದೆ, ರೈತ ಬಂಧುಗಳು ಕಂಗಾಲಾಗಿದ್ದಾರೆ. ಇಷ್ಟಾದರೂ ಕಾವೇರಿ ಉಳಿಸಲು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಮರ್ಥವಾಗಿ ಹೋರಾಡಲು ಕನಿಷ್ಠ ಕಾಳಜಿಯೂ ತೋರದೇ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಉಡಾಫೆಯ ಮಾತನಾಡಿಕೊಂಡು ಕನ್ನಡಿಗರ ಕತ್ತು ಹಿಸುಕುತ್ತಿದ್ದಾರೆ. ಕಾವೇರಿ ಪರ ಹೋರಾಟವನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬದ್ಧತೆ, ಇಚ್ಛಾಶಕ್ತಿ ಇಲ್ಲದ ಸರ್ಕಾರವೊಂದು ಜನರ ಸಂಕಷ್ಟದೊಂದಿಗೆ ಹೇಗೆ ಚೆಲ್ಲಾಟವಾಡಬಹುದು ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಉದಾಹರಣೆಯಾಗಿದೆ. ಮಳೆ ಇಲ್ಲದೆ ಬೆಳೆ ಇಲ್ಲದೆ, ಕುಡಿಯುವ ನೀರಿಗೂ ಸಂಚಕಾರ ಬಂದೊದಗಿರುವ ಕಠೋರ ಪರಿಸ್ಥಿತಿಯನ್ನು ಕಾವೇರಿ ಜಲ ನಿಯಂತ್ರಣ ಸಮಿತಿಯ ಮುಂದೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ…
— Vijayendra Yediyurappa (@BYVijayendra) September 26, 2023
ಇದನ್ನೂ ಓದಿ | Cauvery water dispute : ಕಾವೇರಿ ಪ್ರಾಧಿಕಾರದ ಆದೇಶ ಕರ್ನಾಟಕಕ್ಕೆ ಮರಣ ಶಾಸನವೆಂದ ಬಿಎಸ್ವೈ
CWRCಯಿಂದ ಮತ್ತೆ ಹೊಡೆತ, ಇನ್ನೂ 18 ದಿನ 3000 ಕ್ಯೂಸೆಕ್ ನೀರು ಬಿಡಲು ಆದೇಶ
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ.ಈವರೆಗೆ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದ ಸಮಿತಿ ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ.
ಕಳೆದ ಸೆಪ್ಟೆಂಬರ್ 13ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 15 ದಿನಗಳವರೆಗೆ ಪ್ರತಿದಿನ 5000 ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿತ್ತು. ಸೆ. 18ರಂದು ನಡೆದ ಪ್ರಾಧಿಕಾರದ ಸಭೆ ಅದನ್ನು ಅನುಮೋದಿಸಿತ್ತು. ಸೆಪ್ಟೆಂಬರ್ 21ರಂದು ಸುಪ್ರೀಂಕೋರ್ಟ್ನಲ್ಲಿ ನಡೆದ ವಿಚಾರಣೆಯ ವೇಳೆ ಈ ಆದೇಶವನ್ನು ಎತ್ತಿಹಿಡಿಯಲಾಗಿತ್ತು.
ಇದೀಗ ಮಂಗಳವಾರ (ಸೆ. 26) ನಡೆದ ಸಭೆಯಲ್ಲಿ ಕರ್ನಾಟಕದ ಮಂಡಿಸಿದ ವಾದವನ್ನು ಪರಿಗಣಿಸಿದ ಸಮಿತಿ ನೀರೇ ಬಿಡುವುದಿಲ್ಲ ಎಂಬ ಮನವಿಯನ್ನು ಒಪ್ಪಲಿಲ್ಲ. ಐದು ಸಾವಿರ ಕ್ಯೂಸೆಕ್ ಬದಲಿಗೆ ಮೂರು ಸಾವಿರ ಕ್ಯೂಸೆಕ್ಗೆ ಇಳಿಸಿ ಎಂದು ಸೂಚನೆ ನೀಡಿದೆ.
ಸೆ. 13ರಂದು ಹದಿನೈದು ದಿನಗಳವರೆಗೆ ಐದು ಸಾವಿರ ಕ್ಯೂಸೆಕ್ ನೀರು ಬಿಡಬೇಕು ಎಂದು ನೀಡಿದ ಆದೇಶ ಊರ್ಜಿತದಲ್ಲಿರುವುದರಿಂದ ಸೆ. 28ರಿಂದ ಹೊಸ ಆದೇಶ ಜಾರಿಗೆ ಬರಲಿದೆ. ಆಗ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕಾಗುತ್ತದೆ. ಈ ಆದೇಶವು ಅಕ್ಟೋಬರ್ 15ರವರೆಗೆ ಜಾರಿಯಲ್ಲಿ ಇರಲಿದ್ದು, ಅಲ್ಲಿವರೆಗೆ ಪ್ರತಿ ದಿನವೂ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕಾಗುತ್ತದೆ.
CWRC ಯ ಮುಂದೆ ವಾಸ್ತವ ಸ್ಥಿತಿ ಸಲ್ಲಿಕೆ ಮಾಡಿದ ಕರ್ನಾಟಕ
ಇದಕ್ಕಿಂತ ಮೊದಲು ಕರ್ನಾಟಕವು ತನ್ನ ನೀರಿನ ಪರಿಸ್ಥಿತಿಯ ವಿವರಣೆಯನ್ನು ನೀಡಿತು.
25.09.2023 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಟ್ಟೂ ಒಳಹರಿವಿನ ಕೊರತೆ 53.04% ಆಗಿದೆ. ಕರ್ನಾಟಕ ಸರ್ಕಾರವು ದಿನಾಂಕ 13.09.2023 ರ ಆದೇಶದಲ್ಲಿ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಈ ಹಿನ್ನೆಲೆಯಲ್ಲಿ ಈ ಅಂಶಗಳನ್ನು ಈ ಅಂಶವು ಸಮಿತಿ ಗಂಭೀರವಾಗಿ ಪರಿಗಣಿಸಬೇಕೆಂದು ಕರ್ನಾಟಕ ಮನವಿ ಮಾಡಿತು.
ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ. ರಾಜ್ಯದ ಜಲಾಶಯಗಳಿಂದ ಯಾವುದೇ ಹರಿವನ್ನು ಅಂತಾರಾಜ್ಯ ಗಡಿಯಾದ ಬಿಳಿಗುಂಡ್ಲುನಲ್ಲಿ ನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿತು.
ಇದನ್ನೂ ಓದಿ | Cauvery water dispute : ತಮಿಳುನಾಡು ಬೇಡಿಕೆ ತಿರಸ್ಕಾರ ಮಾಡಿದ್ದು ಸಂತಸ ತಂದಿದೆ: ಡಿ.ಕೆ. ಶಿವಕುಮಾರ್
ಇದಕ್ಕೆ ಪ್ರತಿಯಾಗಿ ತಮಿಳುನಾಡು ನಿಯಮ ಪ್ರಕಾರ 12500 ಕ್ಯೂಸೆಕ್ ನೀರು ಪ್ರತಿದಿನವೂ ಬಿಡುಗಡೆ ಮಾಡಬೇಕು ಎಂಬ ವಾದವನ್ನೇ ಮುಂದೆ ಮಾಡಿತು.
ಅಂತಿಮವಾಗಿ ನಿಯಂತ್ರಣ ಸಮಿತಿಯು ನೀರಿನ ಪ್ರಮಾಣವನ್ನು ಇಳಿಸಿ ಆದೇಶ ಹೊರಡಿಸಿತು.
ಇದೀಗ ಕರ್ನಾಟಕವು ಈ ಅದೇಶವನ್ನು ಮತ್ತೆ ಕಾವೇರಿ ನದಿ ನೀರು ಪ್ರಾಧಿಕಾರದ ಮುಂದೆ ಪ್ರಶ್ನಿಸಲು ಅವಕಾಶವಿದೆ.
ಕಲೆ/ಸಾಹಿತ್ಯ
Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ
Yakshagana Show: ಮದರ್ ಫೌಂಡೇಶನ್ ಅರ್ಪಿಸುವ ಯಕ್ಷನೂಪುರ ʼರಾಜಾ ತ್ರೀʼ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟಿರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್ ಚಾನೆಲ್ ಮಾಧ್ಯಮ ಸಹಯೋಗ ನೀಡಿದೆ.
ಬೆಂಗಳೂರು: ರಾಜ್ ಭಟ್ ಜಕ್ಕೂರು ಅವರ ಸಂಯೋಜನೆಯಲ್ಲಿ ಜಲವಳ್ಳಿ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಅಕ್ಟೋಬರ್ 7ರಂದು ರಾತ್ರಿ 9.30ಕ್ಕೆ ನಗರ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ, ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನ ಹಾಗೂ ಅಜ್ಞಾನ ಕವಿ ವಿರಚಿತ ʼರಾಜಾ ಉರಗಕೇತನʼ ಯಕ್ಷಗಾನ ಪ್ರಸಂಗ (Yakshagana Show) ಪ್ರದರ್ಶನವಾಗಲಿದೆ.
ಮದರ್ ಫೌಂಡೇಶನ್ ಅರ್ಪಿಸುವ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟಿರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್ ಚಾನೆಲ್ ಮಾಧ್ಯಮ ಸಹಯೋಗ ನೀಡಿದೆ.
ಕೊಳಗಿ, ಜನ್ಸಾಲೆ, ಮೂಡುಬೆಳ್ಳೆ, ಬ್ರಹ್ಮೂರು ಅವರ ಗಾನ ರಸಧಾರೆ, ಅನಿರುದ್ಧ್, ಶಶಾಂಕ್, ಶ್ರೀನಿವಾಸ್ ಪ್ರಭು, ಸುಜನ್ ಹಾಗೂ ಅರುಣ ಅವರ ಚಂಡೆ ಮದ್ದಳೆಯ ಜೇಂಕಾರದಲ್ಲಿ ʼರಾಜಾ ತ್ರೀʼ ಪ್ರದರ್ಶನ ಮೂಡಿಬರಲಿದೆ.
ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ ಪ್ರಸಂಗದಲ್ಲಿ ತಾಮ್ರಧ್ವಜನಾಗಿ ವಿದ್ಯಾಧರ್ ಜಲವಳ್ಳಿ, ಮಯೂರಧ್ವಜನಾಗಿ ಮಂಕಿ ಈಶ್ವರ್ ನಾಯ್ಕ, ಕೃಷ್ಣನಾಗಿ ನಿಲ್ಕೋಡು ಶಂಕರ ಹೆಗಡೆ, ಅರ್ಜುನನಾಗಿ ಹೆನ್ನಾಬೈಲ್ ವಿಶ್ವನಾಥ್, ಹಾಸ್ಯ ಪಾತ್ರಗಳಲ್ಲಿ ರಮೇಶ್ ಭಂಡಾರಿ, ಸಿತಾರಾಮ ಕುಮಾರ್ ಅಭಿನಯಿಸಲಿದ್ದಾರೆ.
ಇದನ್ನೂ ಓದಿ | ದಶಮುಖ ಅಂಕಣ: ಕೋಶ ಓದಲಾಗದಿದ್ದರೆ ದೇಶವನ್ನಾದರೂ ಸುತ್ತಿ!
ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನʼ ಪ್ರದರ್ಶನದಲ್ಲಿ ಕಂಸನಾಗಿ ತೀರ್ಥಹಳ್ಳಿ ಗೋಪಾಲಾಚಾರ್, ಉಗ್ರಸೇನಾ ಪಾತ್ರದಲ್ಲಿ ಪ್ರಸನ್ನ ಶೆಟ್ಟಿಗಾರ್, ರುಚಿಮತಿಯಾಗಿ ಸಂತೋಷ್ ಹಿಲಿಯಾಣ, ದೂತನಾಗಿ ಸೀತಾರಾಮ್ ಕುಮಾರ್, ಬ್ರಾಹ್ಮಣನಾಗಿ ಶ್ರೀಧರ್ ಕಾಸರಕೋಡು, ಮಾಗಧ ಆಗಿ ನಾಗರಾಜ ಭಂಡಾರಿ, ಆಸ್ತೀಯಾಗಿ ಉದಯ ಕಡಬಾಳ್, ಪಾಸ್ತಿಯಾಗಿ ಹರೀಶ್ ಜಪ್ತಿ, ದೃಮಿಳ ಆಗಿ ಕಾರ್ತಿಕ್ ಕಣ್ಣಿ ಬಣ್ಣ ಹಚ್ಚಲಿದ್ದಾರೆ.
ಅಜ್ಞಾತ ಕವಿ ವಿರಚಿತ ʼʼರಾಜಾ ಉರಗಕೇತನʼ ಯಕ್ಷಗಾನದಲ್ಲಿ ರಾಜೇಶ್ ಭಂಡಾರಿ, ಪ್ರಕಾಶ್ ಕಿರಾಡಿ, ವಿಶ್ವನಾಥ್ ಹೆನ್ನಾಬೈಲ್ ಅವರು (ಕೌರವ, ಭೀಮ, ಕೃಷ್ಣ ಪಾತ್ರದಲ್ಲಿ), ವಿನಾಯಕ ಗುಂಡುಬಾಳ, ಕಾರ್ತಿಕ್ ಹೆಗಡೆ, ಶ್ರೀಕಾಂತ್ ರಟ್ಟಾಡಿ, ನಾಗರಾಜ್ ದೇವಲ್ಕುಂದ ಪ್ರಮುಖ ಪಾತ್ರಗಳಲ್ಲಿ ರಂಜಿಸಲಿದ್ದಾರೆ.
ಪ್ರವೇಶ ದರ ಇರಲಿದ್ದು, ಮುಂಗಡ ಟಿಕೆಟ್ ಬುಕಿಂಗ್ಗಾಗಿ ರಾಜ್ ಭಟ್ ಮೊ.9019776411 ಸಂಪರ್ಕಿಸಿ.
ವಿಜಯನಗರ
Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ
Vijayanagara News: ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ ಜರುಗಿತು.
ಕೂಡ್ಲಿಗಿ: ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ , ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಸಹಯೋಗದಲ್ಲಿ ಮಂಗಳವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನ (Foot and Mouth Disease Vaccination campaign) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕೂಡ್ಲಿಗಿ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪಶುಪಾಲನೆ ಭಾಗವಾದ ಆಕಳು ಎತ್ತು, ಎಮ್ಮೆ, ಕುರಿ, ಮೇಕೆ ಸೇರಿದಂತೆ ಜಾನುವಾರುಗಳ ಆರೋಗ್ಯದ ಸಮಸ್ಯೆ ಕಂಡುಬಂದ ವೇಳೆ ತಾಲೂಕಿನ ರೈತರು ಕರೆ ಮಾಡಿದಾಗ ವೈದ್ಯಕೀಯ ತಂಡ ತಕ್ಷಣ ಭೇಟಿ ನೀಡಿ, ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ತಿಳಿಸಿದರು.
ಇದನ್ನೂ ಓದಿ: SBI SO Recruitment 2023: ಎಸ್ಬಿಐಯಲ್ಲಿದೆ 439 ಹುದ್ದೆ; ಪದವಿ ಹೊಂದಿದವರು ಅರ್ಜಿ ಸಲ್ಲಿಸಿ
ಇದೇ ವೇಳೆ ಕೂಡ್ಲಿಗಿ ತಾಲೂಕಿನ ವೈದ್ಯರ ಸಿಬ್ಬಂದಿ, ಔಷಧಿ ಗುಣಮಟ್ಟ, ವೈದ್ಯಕೀಯ ಸೇವೆ, ಲಸಿಕೆ ವಿಧಾನ, ಆಸ್ಪತ್ರೆ ಕಟ್ಟಡಗಳ ಸ್ಥಿತಿ ಹಾಗೂ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ ಕಾರ್ಯ ನಿರ್ವಹಣೆ ಇತ್ಯಾದಿ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಹಿರಿಗುಂಬಳಗುಂಟೆ ಪಶುವೈದ್ಯಾಧಿಕಾರಿ ಡಾ. ಮಂಜುಶ್ರೀ, ಚಿರತಗುಂಡು ಪಶುವೈದ್ಯಾಧಿಕಾರಿ ಡಾ. ಇಸ್ಮಾಯಿಲ್ ಜಬೀಉಲ್ಲ, ಡಾ. ಲೋಹಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಶಿವಮೊಗ್ಗ
Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ
Death News: ಸೊರಬ ತಾಲೂಕು ಕಡಸೂರು ಗ್ರಾಮದ ಹಿರಿಯ ಸಾಹಿತಿ, ಪ್ರಾಜ್ಞ ಬಸವಣ್ಯಪ್ಪ(80) ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಸೊರಬ: ತಾಲೂಕು ಕಡಸೂರು ಗ್ರಾಮದ ಹಿರಿಯ ಸಾಹಿತಿ, ಪ್ರಾಜ್ಞ ಬಸವಣ್ಯಪ್ಪ (80) ಮಂಗಳವಾರ ಬೆಳಿಗ್ಗೆ ನಿಧನರಾದರು. (Death News)
ಕೇವಲ ನಾಲ್ಕನೇ ತರಗತಿ ಓದಿ, ಸಂಸ್ಕೃತ, ಇಂಗ್ಲೀಷ್, ಕನ್ನಡ ಭಾಷೆಯಲ್ಲಿ ಪಾಂಡಿತ್ಯ ಹೊಂದಿದ್ದ ಅವರು ತಮ್ಮ ಇಳಿ ವಯಸ್ಸಿನಲ್ಲಿ ಮೂರು ಕೃತಿಗಳನ್ನು ರಚಿಸಿದ್ದರು.
ಕಾವ್ಯಗಳನ್ನು ರಾಗದ ಮೂಲಕ ರಚಿಸಿ ಮನ್ನಣೆ ಪಡೆದ ಅವರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ದಕ್ಷಿಣ ಭಾರತ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿತ್ತು.
ಇವರ ವಯೋಸಹಜ ನಿಧನಕ್ಕೆ ಅಭಾಸಾಪ ಸೇರಿದಂತೆ ತಾಲ್ಲೂಕು ಕನ್ನಡ ಸಾಂಸ್ಕೃತಿಕ ಜಗಲಿ, ಕಸಾಪ, ಕಜಾಪ, ಕಸಾಸಾಂವೇ ಸಾಹಿತ್ಯ ಘಟಕಗಳು ಕಂಬನಿ ಮಿಡಿದಿವೆ.
-
Live News22 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ13 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ5 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ಸುವಚನ4 mins ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
South Cinema16 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಕರ್ನಾಟಕ16 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ಆಟೋಮೊಬೈಲ್12 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ13 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!