Praveen Nettaru: ಪ್ರವೀಣ್‌ ನೆಟ್ಟಾರು ಕನಸು ನನಸು, ಅದ್ಧೂರಿಯಾಗಿ ಗೃಹಪ್ರವೇಶ; ಹೇಗಿದೆ ಹೊಸ ಮನೆ? Vistara News

ಕರ್ನಾಟಕ

Praveen Nettaru: ಪ್ರವೀಣ್‌ ನೆಟ್ಟಾರು ಕನಸು ನನಸು, ಅದ್ಧೂರಿಯಾಗಿ ಗೃಹಪ್ರವೇಶ; ಹೇಗಿದೆ ಹೊಸ ಮನೆ?

Praveen Nettaru: ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಬಿಜೆಪಿಯು ಮನೆ ನಿರ್ಮಿಸಿಕೊಟ್ಟಿದೆ. ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಿಸಲಾಗಿದ್ದು, ಗೃಹಪ್ರವೇಶ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ.

VISTARANEWS.COM


on

Praveen Nettaru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸುಳ್ಯ (ದಕ್ಷಿಣ ಕನ್ನಡ): ಕಳೆದ ವರ್ಷ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ, ಹಿಂದು ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು (praveen nettaru) ಅವರ ಕನಸಿನ ಮನೆ ಸಾಕಾರವಾಗಿದೆ. ಗುರುವಾರ ಅದ್ಧೂರಿಯಾಗಿ ಗೃಹಪ್ರವೇಶ ಕಾರ್ಯಕ್ರಮ ನೆರವೇರಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಸೇರಿ ಬಿಜೆಪಿಯ ಹಲವು ನಾಯಕರು ಭಾಗಿಯಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮನೆ ನಿರ್ಮಾಣವಾಗಿದೆ. 2022ರಲ್ಲಿ ನವೆಂಬರ್‌ 2ರಂದು ನಳಿನ್ ಕುಮಾರ್ ಗುದ್ದಲಿ ಪೂಜೆ ನೆರವೇರಿಸಿದ್ದರು. ಈಗ ಗೃಹಪ್ರವೇಶ ನೆರವೇರಿದ್ದು, ಈ ಮೂಲಕ ಹತ್ಯೆಯಾದ ಕಾರ್ಯಕರ್ತನ ಕುಟುಂಬದ ಪರ ನಿಂತಿದ್ದೇವೆ ಎಂದು ಬಿಜೆಪಿ ಸಂದೇಶ ನೀಡಿದೆ. ಹತ್ಯೆ ವೇಳೆ ಪಕ್ಷದ ವರ್ಚಸ್ಸಿಗೆ ಹಾನಿಯಾದರೂ ಕುಟುಂಬದ ಪರ ನಿಂತು ಡ್ಯಾಮೇಜ್ ಸರಿಪಡಿಸಿಕೊಳ್ಳಲು ಯತ್ನಿಸಿದೆ.

60 ಲಕ್ಷ ರೂಪಾಯಿ ವ್ಯಯ

2,700 ಚದರ ಅಡಿಯಲ್ಲಿ ಒಟ್ಟು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣವಾಗಿದೆ. ಮನೆ ನಿರ್ಮಾಣದ ವೆಚ್ಚವನ್ನು ಪಕ್ಷ, ಸರ್ಕಾರ ಮತ್ತು ಯುವ‌ ಮೋರ್ಚಾ ಭರಿಸಿದೆ. ಬಿಜೆಪಿಯಿಂದ 25 ಲಕ್ಷ ರೂ., ಸರ್ಕಾರದಿಂದ 25 ಲಕ್ಷ ರೂ. ಹಾಗೂ ಯುವ ಮೋರ್ಚಾದಿಂದ 15 ಲಕ್ಷ ರೂಪಾಯಿಯನ್ನು ಭರಿಸಲಾಗಿದೆ. ಅಲ್ಲದೆ, ಪ್ರವೀಣ್‌ ನೆಟ್ಟಾರ್‌ ಮನೆಯವರೇ ಕೊಟ್ಟ ನಕ್ಷೆಯ ಪ್ರಕಾರ ಈ ಮನೆ ನಿರ್ಮಾಣ ಆಗುತ್ತಿದೆ ಎಂದು ಈ ಹಿಂದೆ ಕಟೀಲ್‌ ಹೇಳಿದ್ದರು. ಪ್ರವೀಣ್ ಪತ್ನಿಗೆ ಸದ್ಯ ‌ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ಸರ್ಕಾರಿ ಉದ್ಯೋಗ ನೀಡಲಾಗಿದೆ.

ಇದನ್ನೂ ಓದಿ: Karnataka Election : ಶಾಫಿ ಬೆಳ್ಳಾರೆ ಸ್ಪರ್ಧೆಗೆ ಪ್ರವೀಣ್‌ ನೆಟ್ಟಾರು ಮನೆಯವರ ವಿರೋಧ

2022ರ ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಅದರ ಮರುದಿನ ನಡೆದ ಅಂತ್ಯಕ್ರಿಯೆಯ ವೇಳೆ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಬಿಜೆಪಿ ನಾಯಕರನ್ನು ಅರ್ಧ ದಾರಿಯಲ್ಲೇ ತಡೆಯಲಾಗಿತ್ತು. ನಳಿನ್ ಕಟೀಲ್ ಮತ್ತು ಸುನೀಲ್ ಕುಮಾರ್ ಕಾರನ್ನು ಅಲುಗಾಡಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ, ಬಿಜೆಪಿ ನಾಯಕರು ಮಾತ್ರ ಮನೆಯವರನ್ನು ಸಮಾಧಾನ ಮಾಡಿ ಈಗ ಮನೆ ಕಟ್ಟಿಕೊಟ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Dengue Fever: ಸೊಳ್ಳೆಗಳಿಂದ ದೂರವಿರಿ! ಹೆಚ್ಚುತ್ತಿರುವ ಡೆಂಗ್ಯೂ ಜ್ವರ, 15 ಸಾವಿರ ಪ್ರಕರಣ ದಾಖಲು

ರಾಜ್ಯದಲ್ಲಿ ಡೆಂಗ್ಯು ಜ್ವರ (Dengue fever) ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಸೊಳ್ಳೆಗಳಿಂದ ದೂರವಿರುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

VISTARANEWS.COM


on

dengue flue
Koo

ಬೆಂಗಳೂರು: ಬದಲಾದ ವಾತಾವರಣದ ಪರಿಣಾಮ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು (Dengue Fever) ಹೆಚ್ಚಾಗಿ ವರದಿಯಾಗುತ್ತಿದೆ. 15 ಸಾವಿರದ ಗಡಿಯತ್ತ ಸಾಗುತ್ತಿದ್ದು, ಆತಂಕ ಮೂಡಿಸಿದೆ. ಆರೋಗ್ಯ ಇಲಾಖೆ (Health department) ಈ ವಿಚಾರದಲ್ಲಿ ಅಲರ್ಟ್‌ ಆಗಿದೆ.

ರಾಜ್ಯದಲ್ಲಿ ಡೆಂಗ್ಯೂ 14,955 ಪ್ರಕರಣಗಳು ದಾಖಲಾಗಿವೆ. ಒಂದು ತಿಂಗಳ ಅವಧಿಯಲ್ಲಿ 1,829 ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ರಾಜ್ಯದ 31 ಜಿಲ್ಲೆಗಳಿಂದ 7,282 ಪ್ರಕರಣಗಳು ದೃಢಪಟ್ಟಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 7,673 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಈಗಾಗಲೇ ಎರಡು ಲಕ್ಷಕ್ಕೂ ಅಧಿಕ ಡೆಂಗ್ಯೂ ಜ್ವರ ಶಂಕಿತರ ತಪಾಸಣೆ ಮಾಡಲಾಗಿದೆ. ಕಳೆದ ವರ್ಷ ರಾಜ್ಯದಲ್ಲಿ 9,620 ಮಂದಿ ಡೆಂಗ್ಯೂ ಜ್ವರದಿಂದ ಬಳಲಿದ್ದರು. ಕಳೆದ ವರ್ಷ ಡೆಂಗ್ಯೂನಿಂದ 9 ಮಂದಿ ಬಲಿಯಾಗಿದ್ದರು ಕೂಡ. ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಲ್ಕು ಸೇರಿ ಒಟ್ಟು ಒಂಬತ್ತು ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 52,721 ಡೆಂಗ್ಯು ಶಂಕಿತರನ್ನು ತಪಾಸಣೆ ಮಾಡಲಾಗಿದೆ. ಅವರಲ್ಲಿ 33,326 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಕಳೆದ ಒಂದು ತಿಂಗಳಲ್ಲಿ 839 ಮಂದಿಯಲ್ಲಿ ಡೆಂಗ್ಯು ದೃಢಪಟ್ಟಿದೆ. ಡೆಂಗ್ಯೂ ಜೊತೆಗೆ 28 ಜಿಲ್ಲೆಗಳಲ್ಲಿ ಚಿಕೂನ್‌ ಗುನ್ಯಾ ಪ್ರಕರಣಗಳೂ ಪತ್ತೆಯಾಗಿದ್ದು, ತಲೆನೋವು ಮೂಡಿಸಿದೆ. 60 ಸಾವಿರಕ್ಕೂ ಅಧಿಕ ಮಂದಿ ಚಿಕೂನ್‌ ಗುನ್ಯಾ ಶಂಕಿತರ ತಪಾಸಣೆ ಮಾಡಲಾಗಿದೆ.

ಸೊಳ್ಳೆಗಳನ್ನು ಆದಷ್ಟು ತಡೆಗಟ್ಟಲು ಸೂಚಿಸಲಾಗಿದೆ. ತೆರೆದ ಪ್ರದೇಶಗಳಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಹುಟ್ಟುತ್ತಿವೆ. ಇವುಗಳನ್ನು ನಿವಾರಿಸಬೇಕು. ಮನೆಗೆ ಹಾಗೂ ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಸುವುದು, ಮಾಸ್ಕಿಟೋ ರಿಪೆಲ್ಲೆಂಟ್‌ಗಳನ್ನು ಬಳಸಲು ಸೂಚಿಸಲಾಗಿದೆ.

ಜಿಲ್ಲೆ- ಪ್ರಕರಣಗಳು
ಕಲಬುರಗಿ- 662
ಮೈಸೂರು – 646
ಉಡುಪಿ – 635
ದಕ್ಷಿಣ ಕನ್ನಡ – 492
ಶಿವಮೊಗ್ಗ – 404
ತುಮಕೂರು – 315
ಚಿತ್ರದುರ್ಗ – 300

ಚಿಕೂನ್ ಗುನ್ಯಾ ಪ್ರಕರಣಗಳು
ಮೈಸೂರು – 196
ವಿಜಯಪುರ – 163
ಕಲಬುರಗಿ – 132
ಶಿವಮೊಗ್ಗದಲ್ಲಿ 125
ಒಟ್ಟು 1,481 ಮಂದಿ

Continue Reading

ಕರ್ನಾಟಕ

Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಾಪಾಸ್ ಪಡೆಯಲು ರಾಜ್ಯ ಸಚಿವ ಸಂಪುಟದಲ್ಲಿ (Karnataka Cabinet meeting) ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Vistara Editorial, Government should conduct exam without any lapse
Koo

ಬೆಂಗಳೂರು: ಬಿಜೆಪಿ ಸರ್ಕಾರ ಸಮಯದಲ್ಲಿ ಜಾರಿಗೆ ತರಲಾಗಿದ್ದ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಾಪಾಸ್ ಪಡೆಯಲು ರಾಜ್ಯ ಸಚಿವ ಸಂಪುಟದಲ್ಲಿ (Karnataka Cabinet meeting) ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಮೊದಲು ಕೃಷಿ ಭೂಮಿ‌ ಹೊಂದಿದವರು ಮಾತ್ರ ಕೃಷಿ ಭೂಮಿ ಖರೀದಿಗೆ ಅವಕಾಶ ಇತ್ತು. 2022ರಲ್ಲಿ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ತಂದು, ಆ ಮೂಲಕ ಯಾರು ಬೇಕಾದರೂ ಭೂಮಿ ಖರೀದಿಗೆ ಅವಕಾಶ ಮಾಡಿ ಕೊಡಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯ ಈ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಾಪಾಸ್ ಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೆಲವೊಂದು ಹೊಸ ತಿದ್ದುಪಡಿಗಳೊಂದಿಗೆ ನೂತನ ವಿಧೇಯಕವನ್ನು ಈ ಬಾರಿಯ ಅಧೀವೇಶನದಲ್ಲೇ ಮಂಡಿಸಲು ತೀರ್ಮಾನಿಸಲಾಗಿದೆ.

ಕೃಷಿ ಭೂಮಿಯನ್ನು ಯಾರು ಬೇಕಾದರೂ ಖರೀದಿ ಮಾಡಬಹುದೆನ್ನುವ ಕಾನೂನು ಈ ಮೂಲಕ ರದ್ದಾಗಲಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೆ ತಂದ ಈ ಕಾನೂನಿಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಹೋರಾಟಕ್ಕೆ ಬಿಜೆಪಿ ಸರ್ಕಾರ ಮಣಿಯದೆ ಕಾಯ್ದೆ ಜಾರಿ‌ ಮಾಡಿತ್ತು. ಈ ಮೂಲಕ ನಗರವಾಸಿ ಶ್ರೀಮಂತರು ರೈತರಿಂದ ಕೃಷಿ ಭೂಮಿ ಖರೀದಿ ಮಾಡುವುದು ಸುಲಭವಾಗಿತ್ತು. ಇದನ್ನು ತಡೆಗಟ್ಟಲು ಹೊಸ ವಿಧೇಯಕ ತರಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷ ವಿರೋಧ ವ್ಯಕ್ತಪಡಿಸುವ ಸಾಧ್ಯತೆಯಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಕೆಲವು ಕಾನೂನುಗಳನ್ನು ರದ್ದುಗೊಳಿಸುವ ತೀರ್ಮಾನಗಳನ್ನು ಹಾಲಿ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟ ಈಗಾಗಲೇ ಕೈಗೊಂಡಿದೆ. ಇದನ್ನು ಬಿಜೆಪಿ ವಿರೋಧಿಸಿದೆ.

ಇದನ್ನೂ ಓದಿ: Cabinet Meeting: ಸಮವಸ್ತ್ರ ಪೂರೈಕೆಗೆ ತಡೆಹಿಡಿದಿದ್ದ ಹಣ ಬಿಡುಗಡೆಗೆ ಸಚಿವ ಸಂಪುಟ ಸಮ್ಮತಿ

Continue Reading

ಉಡುಪಿ

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

karnataka Weather Forecast : ಎರಡು ದಿನಗಳ ಕಾಲ ಬ್ರೇಕ್‌ ಕೊಟ್ಟಿದ್ದ ಮಳೆರಾಯ (Rain News) ಮತ್ತೆ ಸಕ್ರಿಯಗೊಂಡಿದ್ದಾನೆ. ದಕ್ಷಿಣ ಒಳನಾಡಲ್ಲಿ ಭಾರಿ ಮಳೆ ಸೂಚನೆ ಇದ್ದು, ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

VISTARANEWS.COM


on

By

Heavy Rain warning In karnataka
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಡಿ.8ರ ಶುಕ್ರವಾರ ಸಂಜೆಯಿಂದಲೇ ಹಲವೆಡೆ ಮಳೆಯಾಗುವ ಸೂಚನೆ (Karnataka Weather Forecast) ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ (Dry weather) ಮೇಲುಗೈ ಸಾಧಿಸಲಿದೆ.

ರಾಮನಗರ-ಮಂಡ್ಯದಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಉಳಿದಂತೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಮೋಡ ಕವಿದ ವಾತಾವರಣವಿರಲಿದೆ.

ಇನ್ನು ಉತ್ತರ ಒಳನಾಡಿನ ಕೊಪ್ಪಳ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ. ಜತೆಗೆ ಮಲೆನಾಡಿನ ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ ಇದ್ದು, ಗುಡುಗು ಸಾಥ್‌ ನೀಡಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Wedding Fashion: ಮದುಮಗನ ಆರತಕ್ಷತೆಯ ಗ್ರ್ಯಾಂಡ್‌ ಔಟ್‌ಫಿಟ್‌ ಆಯ್ಕೆಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -19 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 30 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

ವಿಸ್ತಾರ ನ್ಯೂಸ್ ಇಂಪ್ಯಾಕ್ಟ್; ಎಸ್ಸಿ, ಎಸ್ಟಿ‌ ಹಣ ಅನ್ಯ ಕಾರ್ಯದ ಬಳಕೆಗೆ ತಡೆ, ಕಾಯ್ದೆ ತಿದ್ದುಪಡಿಗೆ ಸಂಪುಟ ನಿರ್ಧಾರ

VISTARANEWS.COM


on

Vistara News impact, Governmet to scrap 7 d rule of SCSP and TSP act
Koo

ಬೆಳಗಾವಿ: ಚಳಿಗಾಲದ ಅಧಿವೇಶನಕ್ಕಾಗಿ ಬೆಳಗಾವಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಹಾಗೂ ಅವರು ಮಂತ್ರಿ ಮಂಡಲ ಸದಸ್ಯರು ಗುರುವಾರ ಸಚಿವ ಸಂಪುಟ ನಡೆಸಿ(Cabinet Meeting), ಪ್ರಮುಖ ನಿರ್ಧಾರಗಳನ್ನು ಕೈಗೊಂಡರು. ಈ ಪೈಕಿ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಧಿನಿಯಮಕ್ಕೆ ತಿದ್ದುಪಡಿ (SCSP and TSP act) ತರಲು ರಾಜ್ಯ ಸಚಿವ ಸಂಪುಟವು ತನ್ನ ಒಪ್ಪಿಗೆಯನ್ನು ನೀಡಿದೆ. ಈ ಸಮುದಾಯಗಳಿಗೆ ಮೀಸಲಾದ ಹಣವನ್ನು ಸರ್ಕಾರವು ಅನ್ಯ ಕಾರ್ಯಗಳಿಗೆ ಬಳಸುತ್ತಿದೆ ಎಂದು ವಿಸ್ತಾರ ನ್ಯೂಸ್ (Vistara News) ವರದಿ ಮಾಡಿತ್ತು. ಅದರ ಬೆನ್ನಲ್ಲೇ, ಸಂಪುಟ ಸಭೆಯಲ್ಲಿ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದೆ.

ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಧಿನಿಯಮಕ್ಕೆ ತಿದ್ದುಪಡಿ ತಂದು, ನಿಯಮ 7-ಡಿ ರದ್ದು ಮಾಡಲು ಒ್ಪಪಿಗೆ ನೀಡಿದೆ. ಈ ಸಮುದಾಯಗಳಿಗೆ ಮೀಸಲಿದ್ದ ಹಣವನ್ನು ರಾಜ್ಯ ಸರ್ಕಾರವು ರಸ್ತೆ, ಚರಂಡಿ, ಫ್ಲೈಓವರ್, ನೀರಾವರಿ ಯೋಜನೆಗಳಿಗೆ ಸರ್ಕಾರ ಬಳಿಕೊಳ್ಳುತ್ತಿತ್ತು. ಇದಕ್ಕೆ ನಿಯಮ 7-ಡಿನಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಈಗ ಅದೇ ನಿಯಮನ್ನು ತಿದ್ದುಪಡಿ ಮಾಡಲಾಗುತ್ತಿದ್ದು, ಮೀಸಲಾದ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ.

ಸರ್ಕಾರವು ತನ್ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಎಸ್‌ಸಿ ಮತ್ತು ಎಸ್‌ಟಿ ಮೀಸಲಿಗೆ ಇದ್ದ ಸುಮಾರು 10 ಸಾವಿರ ಕೋಟಿ ರೂ. ಬಳಸಿತ್ತು. ಈ ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್, ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ ಮತ್ತು ಎಸ್‌ಟಿ ಮೀಸಲು ಹಣ ಬಳಕೆ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಸಾರ ಮಾಡಿತ್ತು.

ಎಸ್‌ಸಿಎಸ್‌ಪಿಟಿ ಟಿಎಸ್‌ಪಿ ಎಂದರೆ ಏನು?

ಷೆಡ್ಯೂಲ್‌ ಕ್ಯಾಸ್ಟ್‌ ಸಬ್‌‌ ಪ್ಲಾನ್‌‌ (ಎಸ್‌‌ಸಿಎಸ್‌ಪಿ). ಟ್ರೈಬಲ್‌ ಸಬ್‌ ಪ್ಲಾನ್‌‌( ಟಿಎಸ್‌‌‌ಪಿ). ಎಸ್‌‌ಸಿಎಸ್‌‌ಟಿ ಸಮುದಾಯಕ್ಕೆ ನೇರವಾಗಿ ತಲುಪುವ ಯೋಜನೆ ರೂಪಿಸಬೇಕು. ಉದಾಹರಣೆಗೆ ಎಸ್‌‌ಸಿಎಸ್‌ಟಿ ಮಕ್ಕಳಿಗೆ ವಿದ್ಯಾರ್ಥಿವೇತನ, ಎಸ್‌ಸಿಎಸ್‌ಟಿಗಳಿಗೆ ಮನೆ ನಿರ್ಮಾಣ, ಬೋರ್‌ವೆಲ್‌‌, ಕಾಲನಿಗಳಲ್ಲಿ ಮೂಲಸೌಕರ್ಯ, ಇತ್ಯಾದಿ… ಎಲ್ಲ ಸಾರ್ವಜನಿಕರಿಗೂ ಉಪಯೋಗವಾಗುವ ಸಾರ್ವತ್ರಿಕ ಯೋಜನೆಗಳಿಗೆ ಈ ಹಣವನ್ನು ಬಳಸುವಂತಿಲ್ಲ. ಉದಾಹರಣೆಗೆ, ಊರಿನ ರಸ್ತೆ ನಿರ್ಮಿಸಿ ಇದರಲ್ಲಿ ಇಎಸ್‌ಸಿಎಸ್‌ಟಿಗಳೂ ಓಡಾಡುತ್ತಾರೆ ಎನ್ನುವುದು, ಉಚಿತ ಬಸ್‌‌ನಲ್ಲಿ ಎಸ್‌ಸಿಎಸ್‌‌ಟಿ ಮಹಿಳೆಯರೂ ಓಡಾಡುತ್ತಾರೆ ಎನ್ನುವುದು, ಇತ್ಯಾದಿ. ಕಾಯ್ದೆಯಲ್ಲಿ 7(ಡಿ) ಎಂಬ ಕಲಂ ಅನ್ವಯ, ಸಾರ್ವತ್ರಿಕ ಯೋಜನೆಗಳನ್ನೂ ಎಸ್‌ಸಿಎಸ್‌ಟಿಗಳು ಬಳಸುತ್ತಾರೆ ಎಂದು ಭಾವಿಸಿ (ಡೀಮ್ಡ್‌) ಒಂದಷ್ಟು ಎಸ್‌ಸಿಎಸ್‌ಟಿ ಮೀಸಲು ನಿಧಿಯಿಂದ ಪಡೆಯಲು ಅವಕಾಶವಿದೆ.

-ಕರ್ನಾಟಕದಲ್ಲಿ ಎಸ್‌‌ಸಿಎಸ್‌‌ಪಿ ಟಿಎಸ್‌‌ಪಿ ಅನುದಾನ ಒಟ್ಟು ಬಜೆಟ್‌‌‌ನ ಶೇ.24 ಇರುತ್ತದೆ. ಈ ವರ್ಷ ಬಜೆಟ್‌‌ನಲ್ಲಿ 31 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಎಸ್‌ಸಿಎಸ್‌ಟಿ ಹಣವನ್ನು ಗ್ಯಾರಂಟಿಗೆ ಬಳಸಬಾರದು ಎಂದು ಬಿಜೆಪಿ ಈ ಹಿಂದೆ ಆಕ್ಷೇಪಿಸಿತ್ತು.

2013ರ ಕಾಂಗ್ರೆಸ್ ಸರ್ಕಾರದಿಂದ ಜಾರಿ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಅಧಿನಿಯಮ ಜಾರಿ ಮಾಡಿತ್ತು. ಇದರ ಅನುಸಾರ ಜನಸಂಖ್ಯೆಗೆ ತಕ್ಕಂತೆ ಆ ಸಮುದಾಯಗಳಿಗೆ ಬಜೆಟ್‌ನಲ್ಲಿ ಹಣ ಮೀಸಲು ಮಾಡಲಾಯಿತು. ಅದು ಸುಮಾರು ಬಜೆಟ್‍‌ನ ಶೇಕಡಾ 23 ರಷ್ಟು ಆಗುತ್ತಿತ್ತು. ಮೀಸಲಾರಿಸಿದ ಹಣ ಆ ವರ್ಷದಲ್ಲಿ ಖರ್ಚು ಆಗದಿದ್ರೆ ಅದು ಮುಂದಿನ ವರ್ಷಕ್ಕೆ ಕ್ಯಾರಿ ಓವರ್ ಆಗುತ್ತಿತ್ತು. ಇದರಿಂದ ಸಿದ್ದರಾಮಯ್ಯ ಸರ್ಕಾರದ ಮೊದಲ ಅವಧಿಯ ನಾಲ್ಕು ವರ್ಷಗಳ ಕಾಲ ಹಣ ಖರ್ಚು ಆಗದೇ ಉಳಿಯಿತು. ಹೀಗಾಗಿ ಇದನ್ನ ಬೇರೆ ಉದ್ದೇಶಗಳಿಗೆ ಬಳಸಿಕೊಳ್ಳಲು ತೀರ್ಮಾನ ಮಾಡಿದ ಅಂದಿನ ಕ್ಯಾಬಿನೆಟ್ 7 ನಿಯಮಕ್ಕೆ ತಿದ್ದುಪಡಿ ತಂದು 7-ಡಿ ಸೇರಿಸಲಾಯಿತು. ಆ ಮೂಲಕ ವೆಚ್ಚವಾಗದೇ ಉಳಿದ ಹಣವನ್ನು ಸಾರ್ವಜನಿಕ ಹಿತಾಸಕ್ತಿ ಯೋಜನೆಗಳಿಗೆ ಈ ಹಣ ಬಳಸಬಹುದು ಅನ್ನೋ ತಿದ್ದುಪಡಿ ತರಲಾಯಿತು

ಬಳಿಕ ಬಂದ ಸಮ್ಮಿಶ್ರ ಸರ್ಕಾರ, ಯಡಿಯೂರಪ್ಪ, ಬೊಮ್ಮಯಿ ಸರ್ಕಾರದಲ್ಲಿ ಈ ಹಣವನ್ನ ನೀರಾವರಿ ಸೇರಿದಂತೆ ಫ್ಲವರ್ ಹಾಗೂ ಇಂದಿನ ಸರ್ಕಾರ ಗ್ಯಾರೆಂಟಿಗಳಿಗೆ ಬಳಸಲಾಯಿತು. ಹೀಗಾಗಿ ಇದು ದೊಡ್ಡ ಸುದ್ದಿಯಾದ ಬೆನ್ನಲ್ಲೇ ತಿದ್ದುಪಡಿ ತರಲು ಮುಂದಾಗಿದೆ. ಸರ್ಕಾರ ಇದು ಸಮುದಾಯಕ್ಕೆ ರೀಚ್ ಆಗಿ ಎಚ್ಚೇತ್ತುಕೊಂಡ್ರೆ ಲೋಕಸಭಾ ಚುನಾವಣೆಯಲ್ಲಿ ನಮ್ಮ ವಿರುದ್ಧ ನಿಲ್ಲಬಹುದು ಅನ್ನೋ ಲೆಕ್ಕಾಚಾರ ಹಾಕಿ ಈಗ ತಿದ್ದುಪಡಿ ಮಾಡುತ್ತಿದೆ.

ಡಿಕೆಶಿ ಮೇಲಿನ ಸಿಬಿಐ ಕೇಸ್ ವಾಪಸ್ ತೆಗೆದುಕೊಳ್ಳುವ ವಿಚಾರ.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಮೇಲಿನ ಸಿಬಿಐ ಕೇಸ್ ವಾಪಸ್ ತೆಗೆದುಕೊಳ್ಳುವ ನಿರ್ಧಾರವನ್ನು ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಕ್ರಮ ಬದ್ಧ ಮಾಡಲು ಒಪ್ಪಿಗೆ ನೀಡಲಾಯಿತು. ಕಳೆದ ಬಾರಿ ಸಂಪುಟ ಸಭೆಯಲ್ಲಿ ಸಿಬಿಐಗೆ ವಹಿಸಿದ್ದ ಕೇಸ್ ವಾಪಸ್ ಪಡೆಯಲು ನಿರ್ಧರಿಸಲಾಗಿತ್ತು.

ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್

ರೈತರು ನೀರಾವರಿ ಪಂಪ್ ಸೆಟ್‌ಗಳಿಗೆ ಸ್ವಂತ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಳ್ಳಬೇಕು ಎಂಬ ಆದೇಶ ವಿಚಾರ ಮುಂದಿನ ಸಂಪುಟ ಸಭೆಯಲ್ಲಿ ತಗೆದುಕೊಳ್ಳಲು ನಿರ್ಧಾರ ಮಾಡಲಾಯಿತು.ಸ್ವಂತ ವೆಚ್ಚದಲ್ಲಿ ವಿದ್ಯುತ್ ಸಂಪರ್ಕದ ನಿರ್ಣಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ನಿರ್ಣಯಕ್ಕೆ ಸ್ಚಪಕ್ಷ ಸೇರಿದಂತೆ ವಿಪಕ್ಷಗಳು ಮತ್ತು ರೈತ ಸಂಘಟನೆಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದವು. ಸದ್ಯಕ್ಕೆ ಈ ನಿರ್ಣಯವನ್ನ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ನಿರ್ಧಾರ ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಓದಿ: Karnataka Drought: ಬರ ಪರಿಹಾರ ಭಿಕ್ಷೆಯಲ್ಲ, ಅದು ರಾಜ್ಯದ ತೆರಿಗೆ ಹಣ ಎಂದ ಸಿದ್ದರಾಮಯ್ಯ

Continue Reading
Advertisement
dengue flue
ಆರೋಗ್ಯ20 mins ago

Dengue Fever: ಸೊಳ್ಳೆಗಳಿಂದ ದೂರವಿರಿ! ಹೆಚ್ಚುತ್ತಿರುವ ಡೆಂಗ್ಯೂ ಜ್ವರ, 15 ಸಾವಿರ ಪ್ರಕರಣ ದಾಖಲು

Vistara Editorial, Government should conduct exam without any lapse
ಕರ್ನಾಟಕ41 mins ago

Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

Raja Marga Father and Daughter
ಅಂಕಣ54 mins ago

Raja Marga Column : 13 ವರ್ಷದ ನನ್ನ ಮಗಳು ಒಮ್ಮಿಂದೊಮ್ಮೆಗೆ ಮಂಕಾಗಿದ್ದು ಯಾಕೆ?

Hair Care Tips
ಆರೋಗ್ಯ1 hour ago

Hair Care Tips: ಕೂದಲು ಚೆನ್ನಾಗಿರಬೇಕೆಂದರೆ ಯಾವ ಆಹಾರ ಸೇವಿಸಬೇಕು?

Heavy Rain warning In karnataka
ಉಡುಪಿ2 hours ago

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

Vistara editorial, Let's take precautions for pneumonia infection
ಆರೋಗ್ಯ2 hours ago

ವಿಸ್ತಾರ ಸಂಪಾದಕೀಯ: ನ್ಯುಮೋನಿಯಾ ಸೋಂಕಿನ ಬಗ್ಗೆ ಈಗಲೇ ಎಚ್ಚರ ವಹಿಸೋಣ

How To Remove Tea Stains From Clothes
ಲೈಫ್‌ಸ್ಟೈಲ್2 hours ago

How To Remove Tea Stains From Clothes: ಬಟ್ಟೆಯ ಮೇಲಿನ ಚಹಾ ಕಲೆಯನ್ನು ತೆಗೆಯುವ ಸುಲಭದ ಉಪಾಯ ಇದು!

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Vistara News impact, Governmet to scrap 7 d rule of SCSP and TSP act
ಕರ್ನಾಟಕ9 hours ago

ವಿಸ್ತಾರ ನ್ಯೂಸ್ ಇಂಪ್ಯಾಕ್ಟ್; ಎಸ್ಸಿ, ಎಸ್ಟಿ‌ ಹಣ ಅನ್ಯ ಕಾರ್ಯದ ಬಳಕೆಗೆ ತಡೆ, ಕಾಯ್ದೆ ತಿದ್ದುಪಡಿಗೆ ಸಂಪುಟ ನಿರ್ಧಾರ

WPL Auction 2024
ಕ್ರಿಕೆಟ್9 hours ago

WPL Auction 2024: ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಗೆ ಕೇವಲ 2 ದಿನ ಬಾಕಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ14 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ14 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ20 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ1 day ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌