Site icon Vistara News

Accident | ಸಿದ್ದರಾಮೋತ್ಸವಕ್ಕೆ ಹೊರಟಿದ್ದ ಬಸ್‌- ಕಾರು ಡಿಕ್ಕಿ; ಚಾಲಕ ಸಾವು, ಆರು ಮಂದಿ ಗಂಭೀರ

Accident

ಶಿವಮೊಗ್ಗ: ಸಾಗರ ತಾಲೂಕಿನ ತಾಳಗುಪ್ಪ ಬಳಿಯ ಆಲಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ (Accident) ಸಂಭವಿಸಿದ್ದು, ಕಾರಿನಲ್ಲಿದ್ದವರಲ್ಲಿ ಒಬ್ಬರು ಮೃತಪಟ್ಟಿದ್ದು, ಆರು ಮಂದಿಗೆ ಗಂಭೀರ ಗಾಯಗಳಾಗಿವೆ.

ಚನ್ನಗಿರಿಯ ಶಾಭಾಜ್(23) ಮೃತ ಚಾಲಕ. ಕಾರಿನಲ್ಲಿದ್ದ ರಿಹಾನ್(14), ತಬಸ್ಸುಮ್(23), ಶಿಫಾ(27), ಖಮರುನ್ನಿಸಾ(45), ಜಬ್ರುನ್(55), ಮಹಮ್ಮದ್ ಉಸ್ಮಾನ್ (25) ಗಂಭೀರ ಗಾಯಗಳಾಗಿವೆ.
ಇವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಒಂದೇ ಕುಟುಂಬದವರಾಗಿದ್ದು, ಜೋಗ ಜಲಪಾತ ವೀಕ್ಷಿಸಿ ವಾಪಸ್ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಜೋಗದತ್ತ ತೆರಳುತ್ತಿದ್ದ ದಾವಣಗೆರೆ ಮೂಲದ ಜೈ ಹನುಮಾನ್ ಟೂರಿಸ್ಟ್ ಬಸ್ ಹಾಗೂ ಮಾರುತಿ ಇಕೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ದಾವಣಗೆರೆಯ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಚನ್ನಗಿರಿಯ 25ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿದ್ದ ಬಸ್‌ ಹೊರಟಿತ್ತು. ಜೋಗ ಜಲಪಾತ ವೀಕ್ಷಿಸಿ ಬಳಿಕ ದಾವಣಗೆರೆಗೆ ಬಸ್ ತೆರಳಬೇಕಿತ್ತು.

ತಾಳಗುಪ್ಪ ಬಳಿ ನಡೆದ ಅಪಘಾತದಲ್ಲಿ ಬಸ್‌ ಮುಂಭಾಗ ಹಾಗೂ ಕಾರು ಸಂಪೂರ್ಣ ಜಖಂಗೊಂಡಿದೆ. ಬಸ್‌ ಗುದ್ದಿದ ರಭಸಕ್ಕೆ ಕಾರಿನ ಚಾಲಕನ ರುಂಡ ದೇಹದಿಂದ ಬೇರ್ಪಟ್ಟಿದೆ. ಅಪಘಾತವಾಗುತ್ತಿದ್ದಂತೆ ಬಸ್‌ನಲ್ಲಿದ್ದವರೆಲ್ಲ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಇದನ್ನೂ ಓದಿ | Bike Accident | ಮೂರು ಪ್ರತ್ಯೇಕ ಅಪಘಾತ; ಮೂವರು ಸ್ಥಳದಲ್ಲೇ ಸಾವು

Exit mobile version