Road Accident: ಯಲ್ಲಾಪುರದಲ್ಲಿ ಖಾಸಗಿ ಬಸ್‌ ಪಲ್ಟಿಯಾಗಿ ಚಾಲಕ ಸಾವು; 25 ಜನರಿಗೆ ಗಾಯ - Vistara News

ಉತ್ತರ ಕನ್ನಡ

Road Accident: ಯಲ್ಲಾಪುರದಲ್ಲಿ ಖಾಸಗಿ ಬಸ್‌ ಪಲ್ಟಿಯಾಗಿ ಚಾಲಕ ಸಾವು; 25 ಜನರಿಗೆ ಗಾಯ

Road Accident: ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು, 25 ಜನ ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆಯು ಯಲ್ಲಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶನಿವಾರ ಬೆಳಗ್ಗೆ ಜರುಗಿದೆ.

VISTARANEWS.COM


on

private bus overturned on National Highway 63 in Yallapur
ಯಲ್ಲಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಶನಿವಾರ ಬೆಳಿಗ್ಗೆ ಖಾಸಗಿ ಬಸ್ ಪಲ್ಟಿಯಾಗಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ (ಯಲ್ಲಾಪುರ): ಖಾಸಗಿ ಬಸ್ (Private bus) ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು, 25 ಜನ ಪ್ರಯಾಣಿಕರಿಗೆ ಗಾಯಗೊಂಡಿರುವ (Passengers injured) ಘಟನೆಯು ಯಲ್ಲಾಪುರ (Yallapur) ಹೊರವಲಯದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶನಿವಾರ ಬೆಳಗ್ಗೆ ಜರುಗಿದೆ.

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಇಂಟರ್ ಸಿಟಿ ಟ್ರಾವೆಲ್ಸ್‌ನ ಬಸ್ ಪಲ್ಟಿಯಾಗಿದ್ದು, ಮಂಡ್ಯ ಮೂಲದ ಚಾಲಕ ಕಿರಣ್ ದಿವಾಕರ್ (40) ಸ್ಥಳದಲ್ಲೇ ಮೃತಪಟ್ಟಿದ್ದಾನೆ. 30 ಜನ ಪ್ರಯಾಣಿಕರಿದ್ದ ಬಸ್ ಪಲ್ಟಿಯಾಗಿದ್ದು, 25 ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: IND vs WI: ಗಿಲ್​ ಅವರ ಶೈಲಿಯಲ್ಲಿ ಶತಕ ಸಂಭ್ರಮಿಸಿದ ಕಿಂಗ್​ ಕೊಹ್ಲಿ

ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. 50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಮರದಡಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುತ್ತದೆ.

ಇದನ್ನೂ ಓದಿ: Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

ಆರೆಂಜ್‌, ಯೆಲ್ಲೋ ಅಲರ್ಟ್‌

ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯೊಂದಿಗೆ ಗುಡುಗು, ಬಿರುಗಾಳಿಯು ಗಂಟೆಗೆ 30-40 ಕಿ.ಮೀ ಬೀಸಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Rain News: ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

VISTARANEWS.COM


on

Rain News Boy dies after being struck by lightning in Banavasi Heavy rains lash Chikkamagaluru and Hassan
ಮೃತ ಆಸ್ಪಕ್ ಅಲಿ
Koo

ಕಾರವಾರ/ಬೆಂಗಳೂರು: ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ (Rain News) ಆಗುತ್ತಿದ್ದು, ಸಾಕಷ್ಟು ಹಾನಿಯನ್ನುಂಟು ಮಾಡಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಾಲಕನೊಬ್ಬ ಆಟ ಆಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ, ಭಾನುವಾರ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಗುಡುಗು – ಸಿಡಿಲು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಹೆಚಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast Report) ಹೇಳಿದೆ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಬಾಲಕನೊಬ್ಬ ಆಟವಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಆಸ್ಪಕ್ ಅಲಿ (16) ಮೃತ ದುರ್ದೈವಿ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲೂ ಭಾರಿ ಮಳೆ

ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ಹಳ್ಳ ಕೊಳ್ಳಗಳು ಉಕ್ಕಿ ಹರಿದಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿದಿದೆ. ಸುತ್ತಮುತ್ತಲಿನ ತೋಟ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

Continue Reading

ಉತ್ತರ ಕನ್ನಡ

Uttara Kannada News: ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ: ಡಿಸಿ ಮಾನಕರ್‌

Uttara Kannada News: ಪ್ರಸಕ್ತ ಮಳೆಗಾಲದ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌, ಮಳೆಗಾಲದಲ್ಲಿ ಕಂಡುಬರಬಹುದಾದ ಡೆಂಗ್ಯು, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ನಿಯಂತ್ರಣ ಕುರಿತಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಿ, ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಗಳನ್ನು ಆಯೋಜಿಸುವಂತೆ ಅವರು ಸೂಚಿಸಿದ್ದಾರೆ.

VISTARANEWS.COM


on

Uttara Kannada News Take precautionary measures to prevent the spread of infectious diseases in the district says DC Gangubai manakar
Koo

ಕಾರವಾರ: ಪ್ರಸಕ್ತ ಮಳೆಗಾಲದ (Rain) ಅವಧಿಯಲ್ಲಿ ಜಿಲ್ಲೆಯಲ್ಲಿ (Uttara Kannada News) ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಸಮಿತಿಯ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: RCB vs CSK: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಚೆನ್ನೈ ಸೂಪರ್​ ಕಿಂಗ್ಸ್​

ಮಳೆಗಾಲದಲ್ಲಿ ಕಂಡುಬರಬಹುದಾದ ಡೆಂಗ್ಯು, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ನಿಯಂತ್ರಣ ಕುರಿತಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಿ, ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಗಳನ್ನು ಆಯೋಜಿಸಿ ಎಂದ ಅವರು, ಎಲ್ಲಾ ಸಾಂಕ್ರಾಮಿಕ ರೋಗಗಳಿಗೆ ಅಗತ್ಯವಿರುವ ಚುಚ್ಚುಮದ್ದು ಮತ್ತು ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇಟ್ಟುಕೊಳ್ಳುವಂತೆ ನಿರ್ದೇಶನ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಇದುವರೆಗೆ 1 ಮಲೇರಿಯಾ, 1 ಚಿಕನ್ ಗುನ್ಯಾ, 46 ಡೆಂಗಿ ಪ್ರಕರಣಗಳು ವರದಿಯಾಗಿರುವ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಡೆಂಗ್ಯು ಪ್ರಕರಣಗಳು ಹೆಚ್ಚಾಗದಂತೆ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸೋಂಕಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಿ, ತಕ್ಷಣ ಚಿಕಿತ್ಸೆ ನೀಡುವುದರ ಮೂಲಕ ರೋಗ ಹರಡದಂತೆ ನೋಡಿಕೊಳ್ಳಿ. ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ ಎಂದರು.

ಇದನ್ನೂ ಓದಿ: Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

ಜಿಲ್ಲೆಯಲ್ಲಿ ಈ ಬಾರಿ ಮಂಗನ ಕಾಯಿಲೆಯ 106 ಪ್ರಕರಣಗಳು ಕಂಡು ಬಂದಿದ್ದು, 9 ಸಾವುಗಳು ಸಂಭವಿಸಿದ್ದು, ಮಂಗನ ಕಾಯಿಲೆಯ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ ಎಂದರು.

ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಚರಂಡಿಗಳಲ್ಲಿ ಮಳೆ ನೀರು ನಿಲ್ಲದೇ ಸರಾಗವಾಗಿ ಹರಿದು ಹೋಗುವಂತೆ ಮಾಡಲು ತಕ್ಷಣದಿಂದಲೇ ಸ್ವಚ್ಚತಾ ಕ್ರಮಗಳನ್ನು ಕೈಗೊಂಡು, ಚರಂಡಿಯಲ್ಲಿ ತುಂಬಿರುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲಾ ತಾಲೂಕುಗಳಲ್ಲಿ 108 ಸೇರಿದಂತೆ ಎಲ್ಲಾ ಆಂಬ್ಯುಲೆನ್ಸ್ ಗಳು ಸುಸ್ಥಿತಿಯಲ್ಲಿರಬೇಕು. ತುರ್ತು ಸಂದರ್ಭದಲ್ಲಿ ತಕ್ಷಣವೇ ಸಾರ್ವಜನಿಕರ ಸೇವೆಗೆ ಲಭ್ಯವಿರಬೇಕು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಕುದಿಸಿ, ಆರಿಸಿದ ಕುಡಿಯುವ ನೀರು ಬಳಕೆ, ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಸೇರಿದಂತೆ‌, ತೆಗೆದುಕೊಳ್ಳಬೇಕಾದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಮಾಹಿತಿಯನ್ನು ಜಿಲ್ಲೆಯ ಎಲ್ಲಾ ಮನೆ ಮನೆಗಳಿಗೆ ತಲುಪಿಸಬೇಕು ಹಾಗೂ ಸೋಷಿಯಲ್ ಮೀಡಿಯಾಗಳ ಮೂಲಕ ಕೂಡಾ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅರ್ಚನಾ ನಾಯಕ್, ಆರ್.ಸಿ.ಎಚ್ ಅಧಿಕಾರಿ ಡಾ. ನಟರಾಜ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ರಮೇಶ್ ರಾವ್, ನಗರಸಭೆ ಪೌರಾಯುಕ್ತ ರವಿಕುಮಾರ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

Heavy rain : ಶನಿವಾರದಂದು ಚಿಕ್ಕಮಗಳೂರು, ಹಾಸನ, ತುಮಕೂರಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆ ಮೇಲೆ ನದಿಯಂತೆ ನೀರು ಹರಿಯುತ್ತಿದೆ. ರಾಜ್ಯಾದ್ಯಂತ ಇನ್ನೊಂದು ವಾರ ಮಳೆ (Rain News) ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast Rain alert
Koo

ಚಿಕ್ಕಮಗಳೂರು/ಹಾಸನ: ರಾಜ್ಯಾದ್ಯಂತ ಗುಡುಗು ಸಹಿತ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿಯುತ್ತಿರುದೆ.

ಇನ್ನೂ ಭಾರಿ ಮಳೆಗೆ ಸುತ್ತಮುತ್ತಲಿನ ತೋಟ, ಗದ್ದೆಯು ಸಂಪೂರ್ಣ ಜಲಾವೃತಗೊಂಡಿದೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನ ಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಾಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Electric shock in udupi
ಉಡುಪಿ21 mins ago

Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Anjali Murder Case
ಕರ್ನಾಟಕ29 mins ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

IT Raid
ದೇಶ31 mins ago

IT Raid: ಶೂ ವ್ಯಾಪಾರಿಗಳಿಗೆ ಐಟಿ ಶಾಕ್‌; 40 ಕೋಟಿ ರೂ. ಸೀಜ್‌-ಕಂತೆ ಕಂತೆ ನೋಟು ನೋಡಿ ದಂಗಾದ ಅಧಿಕಾರಿಗಳು

Suspicious Case in Mysuru
ಮೈಸೂರು50 mins ago

Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

IPL 2024 The people paid revenge for the controversial post ashwini Puneeth Rajkumar
ಸ್ಯಾಂಡಲ್ ವುಡ್51 mins ago

IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

Kattappa To Turn Modi Sathyaraj To Play Biopic On Prime Minister
ಬಾಲಿವುಡ್59 mins ago

Kattappa To Turn Modi: ಮೋದಿ ಪಾತ್ರದಲ್ಲಿ `ಬಾಹುಬಲಿ’ ಕಟ್ಟಪ್ಪ!

yelahanka flyover
ಬೆಂಗಳೂರು1 hour ago

Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

Bomb Threat
ಕರ್ನಾಟಕ1 hour ago

Bomb Threat: ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ ಎಂದು ತಮಾಷೆ ಮಾಡಲು ಹೋಗಿ ಜೈಲು ಪಾಲಾದ

Gold Rate Today
ಕರ್ನಾಟಕ1 hour ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

viral video
ವೈರಲ್ ನ್ಯೂಸ್2 hours ago

Viral Video: ಅಬ್ಬಾ..ಹಸುಗಳ ಫೈಟ್‌ಗೆ ಬಾಲಕಿ ಅಪ್ಪಚ್ಚಿ! ಶಾಕಿಂಗ್‌ ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌