Private bus overturns after hitting car 30 passengers injured in HonnavarHonnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ Vistara News
Connect with us

ಉತ್ತರ ಕನ್ನಡ

Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ

Honnavar News: ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ಅಪಘಾತ ನಡೆದಿದೆ. ಬಸ್‌ ಚಾಲಕ ಅಪಘಾತ ತಡೆಯಲು ಬ್ರೇಕ್‌ ಹಾಕಿದ್ದು, ಈ ವೇಳೆ ಕಾರಿಗೆ ಡಿಕ್ಕಿಹೊಡೆದು ಬಸ್‌ ಪಲ್ಟಿಯಾಗಿದೆ.

VISTARANEWS.COM


on

Bus accident in honnavar
Koo

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ನಡೆದಿದೆ. ಅಪಘಾತದಲ್ಲಿ (Honnavar News) ಗಾಯಗೊಂಡಿರುವ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.

ಮಂಕಿ ಬಳಿ ಒಳರಸ್ತೆಗೆ ಕಾರು ತಿರುಗಿಸುತ್ತಿದ್ದ ವೇಳೆ ಶುಕ್ರವಾರ ರಾತ್ರಿ ಹಿಂದಿನಿಂದ ಬಸ್‌ ಗುದ್ದಿದೆ. ಬಸ್ ಚಾಲಕ ಅಪಘಾತ ತಡೆಯಲು ಯತ್ನಿಸಿದನಾದರೂ ಕಾರಿಗೆ ಡಿಕ್ಕಿಯಾದ ಬಳಿಕ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು ಕಾರಿನಲ್ಲಿದ್ದ ಜಿಲ್ಲಾ ಪಂಚಾಯಿತಿ ಗುತ್ತಿಗೆದಾರ ಮೋಹನ್ ನಾಯ್ಕ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Theft Case: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮಹಿಳೆಯರ ತಲೆ ಒಡೆದು ದರೋಡೆ ಮಾಡಿದ ಕಿರಾತಕಿ

ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ; ಪಿಡಿಒ ಅಮಾನತು

PDO Renuka suspended in Devadurga

ರಾಯಚೂರು: ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣದಲ್ಲಿ ನಿರ್ಲಕ್ಷ್ಯ ಆರೋಪದಲ್ಲಿ ಜಾಗೀರ ಜಾಡಲದಿನ್ನಿ ಪಿಡಿಒ ರೇಣುಕಾ ಎಂಬುವವರನ್ನು ಅಮಾನತು ಮಾಡಲಾಗಿದೆ.

ದೇವದುರ್ಗ ತಾಲೂಕು ರೇಕಲಮರಡಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಪೈಪ್‌ಲೈನ್ ಒಡೆದು ಕಲುಷಿತ ನೀರು ಸರಬರಾಜು ಆಗಿತ್ತು. ಆ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಒಬ್ಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಘಟನೆಗೆ ಪಿಡಿಒ ನಿರ್ಲಕ್ಷ್ಯ ಕಾರಣ, ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು. ದೇವದುರ್ಗ ಇಒ ನೀಡಿದ ವರದಿ ಆಧರಿಸಿ, ಇಲಾಖಾ ವಿಚಾರಣೆ ಕಾಯ್ದಿರಿಸಿ ಪಿಡಿಒ ರೇಣುಕಾ ಅವರನ್ನು ರಾಯಚೂರು ಜಿ.ಪಂ. ಸಿಇಒ ಶಶಿಧರ್ ಕುರೇರ್ ಆದೇಶ ಹೊರಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Sirsi News: ತಮಿಳುನಾಡಿಗೆ ಕಾವೇರಿ ನೀರು; ಆಡಳಿತ, ವಿರೋಧ ಪಕ್ಷಗಳ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ: ಬೇಕ್ರಿ ರಮೇಶ್

Sirsi News: ಜಲಾನಯನ ಪ್ರದೇಶದ ರೈತರ ಹಿತ ಬಲಿಕೊಟ್ಟು ರಾಜ್ಯ ಸರ್ಕಾರವು, ತಮಿಳುನಾಡಿಗೆ ನೀರು ಹರಿಬಿಟ್ಟಿದ್ದು, ಇಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Edited by

Kadamba sainya State President Bekri Ramesh pressmeet in Sirsi
ಶಿರಸಿಯ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Koo

ಶಿರಸಿ: ಜಲಾನಯನ ಪ್ರದೇಶದ ರೈತರ (Farmers) ಹಿತ ಬಲಿಕೊಟ್ಟು ರಾಜ್ಯ ಸರ್ಕಾರ (State Government) ತಮಿಳುನಾಡಿಗೆ (Tamilnadu) ನೀರು ಹರಿಬಿಟ್ಟಿದ್ದು, ಇಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾವೇರಿ ನಿಯಂತ್ರಣ ಮಂಡಳಿ ಹಾಗೂ ಪ್ರಾಧಿಕಾರವು ಸುಪ್ರೀಂ ಕೋರ್ಟ್‌ಗೆ ಕರ್ನಾಟಕದ ಸಂಕಷ್ಟ ಪರಿಸ್ಥಿತಿ ಮನವರಿಕೆ ಮಾಡಿಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಮಸ್ಯೆ ಬಗೆಹರಿಸಲು ಮುಂದಾಗಬೇಕು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರು, ಶಾಸಕರು, ಸಂಸದರು, ಕಾವೇರಿ ವಿವಾದ ಬಗೆಹರಿಸಲು ವಿಫಲವಾಗಿದ್ದು, ಉನ್ನತ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ ಅವರು, ಕಾವೇರಿ ನೀರು ಸಂಕಷ್ಟ ಸೂತ್ರ ಮತ್ತು ರಾಷ್ಟ್ರೀಯ ವೈಜ್ಞಾನಿಕ ಜಲ ನೀತಿ ರೂಪಿಸುವಂತೆ ಮಧ್ಯಸ್ಥಿಕೆ ವಹಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: Venus Mission: ಇಸ್ರೋಗೆ ‘ಶುಕ್ರ’ದೆಸೆ; ಚಂದ್ರ, ಸೂರ್ಯನ ಬಳಿಕ ಶುಕ್ರನತ್ತ ಚಿತ್ತ; ಉಡಾವಣೆ ಯಾವಾಗ?

ಕಾವೇರಿ ವಿಷಯದಲ್ಲಿ ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಕಾವೇರಿ ನೀರು ಸಂಕಷ್ಟ ಸೂತ್ರ ರಚಿಸುವಂತೆ ಮಾಡಬೇಕಿದೆ. ಒಂದು ಎಕರೆಗೆ 25 ಸಾವಿರ ರೂ.‌ ಪರಿಹಾರ ಘೋಷಣೆ ಮಾಡಬೇಕಿದೆ. ಕಾವೇರಿ, ಮಹದಾಯಿ, ಕೃಷ್ಣ ಪ್ರತಿಯೊಬ್ಬ ಕನ್ನಡಿಗನ ಹೃದಯಬಡಿತವಾಗಬೇಕು ಎಂದರು.

ಪ್ರಸಕ್ತ ವರ್ಷದಲ್ಲಿ ಮಳೆ ಕೊರತೆಯಿಂದ ಬೆಳೆ ಉಳಿಸಿಕೊಳ್ಳಲು ರೈತರು ಪರಿತಪಿಸುತ್ತಿದ್ದಾರೆ. ಕಾವೇರಿ ನೀರು ತಮಿಳುನಾಡಿಗೆ ಬಿಡುವುದರಿಂದ 8 ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕಾವೇರಿ ನಮ್ಮದು ಎಂಬ ದಿಟ್ಟ ನಿರ್ಧಾರ ಕೈಗೊಂಡು ನೀರು ಬಿಡುವುದನ್ನು ಸ್ಥಗಿತಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಕಾವೇರಿ ನಿರ್ವಹಣಾ ಪ್ರಾಧಿಕಾರವು 18 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡಲು ಸೂಚನೆ ನೀಡಿದೆ. ನಮ್ಮ ರಾಜ್ಯವು ಬರಗಾಲದ ಪರಿಸ್ಥಿತಿ ಎದುರಿಸುತ್ತಿದ್ದು, ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ನೀರು ಬಿಟ್ಟರೆ 2 ತಿಂಗಳಿನಲ್ಲಿ ಕಾವೇರಿ ಬರಿದಾಗುತ್ತದೆ. ಮುಂದು ಏನು ಎಂಬ ಭಯ ಕಾಡುತ್ತಿದೆ. ಕಾವೇರಿ ಜಲಾನಯನ ಪ್ರದೇಶದ ರೈತರು ಸಂಕಷ್ಟಕ್ಕೆ ಸಿಲುಕಿರುವಾಗ ಕನ್ನಡ ಚಲನಚಿತ್ರರಂಗದ ನಟ-ನಟಿಯರು, ಕಿರುತೆರೆ ರಂಗದವರು ತಮಗೆ ಸಂಬಂಧಪಟ್ಟ ವಿಷಯವೇ ಅಲ್ಲ ಎಂದು ಮೌನವಾಗಿದ್ದಾರೆ. ಹೋರಾಟಕ್ಕೆ ಇಳಿಯಬೇಕು. ಇಲ್ಲದಿದ್ದರೆ ಚಿತ್ರರಂಗದವರು ಕನ್ನಡ ವಿರೋಧಿತನ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.‌

ಇದನ್ನೂ ಓದಿ: World Cup 2023 : ವಿಶ್ವ ಕಪ್​ ತಂಡದಲ್ಲಿ ಆರ್​. ಅಶ್ವಿನ್​ಗೆ ಸ್ಥಾನ? ಮತ್ತೆ ಸ್ಪಿನ್ನರ್​ಗಳ ಆಯ್ಕೆ ಗೊಂದಲ

ಸುದ್ದಿಗೊಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಡಾ.ದೇವನಹಳ್ಳಿ ದೇವರಾಜ, ರಾಜ್ಯ ಸಂಚಾಲಕ ಮೋಹನದಾಸ ನಾಯಕ, ಜಿಲ್ಲಾ ಸಂಚಾಲಕ ಪುರಂದರ ನಾಯ್ಕ, ಮೈಸೂರು ಜಿಲ್ಲಾ ಸಮಿತಿ ಸದಸ್ಯ ಪುಟ್ಟಸ್ವಾಮಿ, ಮಂಡ್ಯ ಜಿಲ್ಲಾ ಸಮಿತಿ ಸದಸ್ಯ ಜೋಸೆಫ್ ರಾಮು ಇದ್ದರು.

Continue Reading

ಉಡುಪಿ

Weather report : ಇನ್ನೆರಡು ದಿನ ಉತ್ತರ ಕರ್ನಾಟಕದ 7 ಜಿಲ್ಲೆ ಸೇರಿ ಕರಾವಳಿಯಲ್ಲಿ ಭಾರಿ ಮಳೆ

Weather report : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

Edited by

Woman Enjoying The Rain Outside A Grass Field
Koo

ಬೆಂಗಳೂರು: ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಈ ಭಾಗದಲ್ಲಿ ಐಎಂಡಿ ಯೆಲ್ಲೋ ಅಲರ್ಟ್‌ ನೀಡಿದೆ. ಇದಲ್ಲದೆ, ಕರಾವಳಿ ಜಿಲ್ಲೆಗಳಲ್ಲಿ ಸಹ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Weather report) ಹೇಳಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ಇದನ್ನೂ ಓದಿ: Mandya Accident: ಕೆಎಸ್ಸಾರ್ಟಿಸಿ ಬಸ್‌ ಡಿಕ್ಕಿ ಹೊಡೆದ ಕಾರು; ನಾಲ್ವರು ಸ್ಥಳದಲ್ಲೇ ದುರ್ಮರಣ

ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ

ಬುಧವಾರ (ಸೆ. 27) ಮತ್ತು ಗುರುವಾರ (ಸೆ. 28) ದಕ್ಷಿಣ ಒಳನಾಡಿನ ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ. ಉಳಿದ ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಬೀಳಬಹುದು ಎಂದು ಅಂದಾಜಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ. ಹೆಚ್ಚಿನ ಸಮಯ ಮೋಡ ಕವಿದ ವಾತಾವರಣ ಇರಲಿದೆ.

ಮಲೆನಾಡಲ್ಲೂ ಸಣ್ಣ ಮಳೆ

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಬಾರಿ ಭಾರಿ ಪ್ರಮಾಣದ ಮಳೆಯ ನಿರೀಕ್ಷೆ ಮಾಡುವಂತಿಲ್ಲ. ಇಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Elephant Attack : ಹಾಲು ತರಲು ಹೋಗುತ್ತಿದ್ದ ವೃದ್ಧನ ಬೆನ್ನಟ್ಟಿ ದಾಳಿ ಮಾಡಿದ ಕಾಡಾನೆ ಹಿಂಡು, ಗಂಭೀರ ಗಾಯ

ಬೆಂಗಳೂರಿನಲ್ಲಿ ರಾತ್ರಿ ಮಳೆ ಭರ್ಜರಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಮತ್ತು ಗುರುವಾರ ಬೆಳಗ್ಗೆ ಹೆಚ್ಚಿನ ಸಮಯ ಬಿಸಿಲಿದ್ದರೂ ನಂತರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯಂದು ಭಾರಿ ಪ್ರಮಾಣದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಹೀಗಾಗಿ ಸಂಜೆ ವೇಳೆಗೆ ಪ್ರಯಾಣ ಮಾಡುವವರು ಸೂಕ್ತ ತಯಾರಿ ಮಾಡಿಕೊಂಡಿರಲು ಸೂಚಿಸಲಾಗಿದೆ. ಇನ್ನು ಮಳೆ ವೇಳೆ ಸಂಚಾರ ದಟ್ಟಣೆ ಹೆಚ್ಚುವ ಸಂಭವವೂ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉತ್ತರ ಕನ್ನಡ

Uttara Kannada News: ಅನಿವಾರ್ಯವಿದ್ದಲ್ಲಿ ಮಾತ್ರ ಹೊಸ ಕಟ್ಟಡ ಕಾಮಗಾರಿ ಕೈಗೊಳ್ಳಿ; ರಿತೇಶ್ ಕುಮಾರ ಸಿಂಗ್

Uttara Kannada News: ಕಾರವಾರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿ.ಪಂ.ನ ಆಡಳಿತಾಧಿಕಾರಿ ರಿತೀಶ್ ಕುಮಾರ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು.

VISTARANEWS.COM


on

Edited by

Uttara Kannada News: District Level Monthly Best PDO Awarded Hitlalli Gram Panchayat PDO G.G. Shetty was felicitated at Karwar
ಕಾರವಾರದ ಜಿ.ಪಂ.ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಮಾಸಿಕ ಉತ್ತಮ ಪಿಡಿಓ ಪ್ರಶಸ್ತಿ ಪಡೆದ ಹಿತ್ಲಳ್ಳಿ ಗ್ರಾ.ಪಂ. ಪಿಡಿಓ ಜಿ.ಜಿ. ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
Koo

ಕಾರವಾರ: ಜಿಲ್ಲಾ ಪಂಚಾಯಿತಿ (Zilla Panchayat) ಸೇರಿದಂತೆ ಜಿಲ್ಲೆಯ ಎಲ್ಲ ಇಲಾಖೆಗಳಲ್ಲಿ (Departments) ಅತ್ಯಂತ ತುರ್ತು ಮತ್ತು ಅನಿವಾರ್ಯತೆ ಇದ್ದಲ್ಲಿ ಮಾತ್ರ ಹೊಸ ಕಟ್ಟಡ ಕಾಮಗಾರಿಗಳನ್ನು (New Building Work) ಕೈಗೊಂಡು ಸರ್ಕಾರದ ಅನುದಾನ ಸದುಪಯೋಗ ಮಾಡಿ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿ.ಪಂ.ನ ಆಡಳಿತಾಧಿಕಾರಿ ರಿತೀಶ್ ಕುಮಾರ್ ಸಿಂಗ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಜಿ.ಪಂ. ಕ್ರಿಯಾ ಯೋಜನೆ ಸಿದ್ಧಪಡಿಸುವಾಗ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡದೇ, ಪ್ರಸ್ತುತ ಇರುವ ಕಟ್ಟಡಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಅದೇ ಕಟ್ಟಡದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಿ ಎಂದರು.

ಶಾಲೆ, ಅಂಗನವಾಡಿ ಮತ್ತು ಗ್ರಂಥಾಲಯಗಳಿಗೆ ಅಗತ್ಯವಿರುವ ಕಲಿಕೋಪಕರಣಗಳು, ಪುಸ್ತಕಗಳನ್ನು ಖರೀದಿಸಿ. ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ಇಲ್ಲದೇ ಇದ್ದಲ್ಲಿ ಸಮೀಪದ ಶಾಲೆಯ ಕಟ್ಟಡಕ್ಕೆ ಗ್ರಂಥಾಲಯವನ್ನು ಸ್ಥಳಾಂತರಿಸುವಂತೆ ತಿಳಿಸಿದರು.

ಇದನ್ನೂ ಓದಿ: Benefits Of Ajwain: ಅಜವಾನವೆಂಬ ಘಾಟುಮದ್ದಿನ ಬಗ್ಗೆ ನಿಮಗೆ ಗೊತ್ತಿದೆಯೆ?

ಜಿಲ್ಲೆಯ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಯ ಸೇರಿದಂತೆ ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚನೆ ನೀಡಿದರು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಜಿಲ್ಲೆಯ ಎಲ್ಲ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು, ಯಾವುದೇ ಅರ್ಹ ಫಲಾನುಭವಿ ಸೌಲಭ್ಯದಿಂದ ವಂಚಿತರಾಗಬಾರದು. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ಗಮನಹರಿಸುವಂತೆ ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಎಲ್ಲ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆ ಆಗುವಂತೆ ನೋಡಿಕೊಳ್ಳಬೇಕು, ಬ್ಯಾಂಕ್ ಖಾತೆ ಜೋಡಣೆಯಲ್ಲಿ ಸಮಸ್ಯೆಗಳಿದ್ದಲ್ಲಿ ಲೀಡ್ ಬ್ಯಾಂಕ್ ಅಧಿಕಾರಿಗಳ ಜತೆಗೆ ಸಮನ್ವಯದೊಂದಿಗೆ ಸಮಸ್ಯೆ ಬಗೆಹರಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಗೃಹಜ್ಯೋತಿ ಯೋಜನೆಯಡಿ ಕೂಡಾ ಎಲ್ಲ ಅರ್ಹರಿಗೆ ಸೌಲಭ್ಯ ದೊರಕಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ, ಶಿರಸಿ ತಾಲೂಕಿನ ದೊಡ್ನಳ್ಳಿ, ಹುಲೇಕಲ್, ಅಂಡಗಿ, ಯಲ್ಲಾಪುರ ತಾಲೂಕಿನ ಉಮ್ಮಚಗಿ ಹೊನ್ನಾವರ ತಾಲೂಕಿನ ಕಾಸರಕೋಡು, ಹೆರಾಂಗಡಿ, ಕಾರವಾರ ತಾಲೂಕಿನ ಕಡವಾಡ, ಸುಪಾ ವಿಭಾಗದ ಜೋಯಿಡಾ, ಹಳಿಯಾಳದ ಸಾಂಬ್ರಾಣಿ ಮತ್ತು ಆರ್ಲವಾಡ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಜಿಲ್ಲಾ ಮಟ್ಟದ ಮಾಸಿಕ ಉತ್ತಮ ಪಿಡಿಓ ಪ್ರಶಸ್ತಿ ಪಡೆದ ಹಿತ್ಲಳ್ಳಿ ಗ್ರಾ.ಪಂ. ಪಿಡಿಓ ಜಿ.ಜಿ. ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: Namma Metro : ಮೆಟ್ರೋಗೆ ಚೀನಾದಿಂದ ಬರಲಿದೆ 12 ಬೋಗಿ; 2024ಕ್ಕೆ ಚಾಲಕ ರಹಿತ ಓಡಾಟ

ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ, ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Uttara Kannada News: ಕಾರವಾರ ಬಳಿ ಹೆದ್ದಾರಿ ಸುರಂಗ ಮಾರ್ಗ ಶೀಘ್ರದಲ್ಲೇ ಸಂಚಾರಕ್ಕೆ ಲಭ್ಯವಾಗುವ ಸಾಧ್ಯತೆ

Uttara Kannada News ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ನಿರ್ಮಿಸಲಾಗಿರುವ ಹೆದ್ದಾರಿ ಸುರಂಗ ಮಾರ್ಗ ಶೀಘ್ರದಲ್ಲೇ ಓಡಾಟಕ್ಕೆ ಲಭ್ಯವಾಗುವ ಲಕ್ಷಣಗಳು ಕಂಡುಬಂದಿದ್ದು, ಟನಲ್ ಮಾರ್ಗ ವಾಹನ ಸವಾರರಿಗೆ ಸುರಕ್ಷಿತವಾಗಿದೆ ಎನ್ನುವುದನ್ನು ಐಆರ್‌ಬಿ ಕಂಪನಿ ಮನವರಿಕೆ ಮಾಡಿದ ಬೆನ್ನಲ್ಲೇ ಟನಲ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿರುವ ಸಾಧ್ಯತೆಗಳಿವೆ.

VISTARANEWS.COM


on

Edited by

National Highway tunnel near Karwar likely to resume soon
ಕಾರವಾರ ಬಳಿ ಹೆದ್ದಾರಿ ಸುರಂಗ ಮಾರ್ಗ ಎದುರು ಹಾಕಲಾಗಿದ್ದ ಜಲ್ಲಿ ಕಲ್ಲುಗಳನ್ನು ತೆರವುಗೊಳಿಸಿ, ಕೇವಲ ಬ್ಯಾರಿಕೇಡ್‌ಗಳನ್ನು ಮಾತ್ರ ಉಳಿಸಿರುವುದು.
Koo

ಕಾರವಾರ: ಮಳೆಗಾಲದಲ್ಲಿ ನೀರು ಸೋರಿಕೆಯಿಂದಾಗಿ ಬಂದ್ ಆಗಿದ್ದ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ (National Highway) 66ಕ್ಕೆ ನಿರ್ಮಿಸಲಾಗಿರುವ ಹೆದ್ದಾರಿ ಸುರಂಗ ಮಾರ್ಗ (Tunnel) ಶೀಘ್ರದಲ್ಲೇ ಓಡಾಟಕ್ಕೆ ಲಭ್ಯವಾಗುವ ಲಕ್ಷಣಗಳು ಕಂಡುಬಂದಿದೆ. ಟನಲ್ ಮಾರ್ಗ ವಾಹನ ಸವಾರರಿಗೆ ಸುರಕ್ಷಿತವಾಗಿದೆ ಎನ್ನುವುದನ್ನು ಐಆರ್‌ಬಿ ಕಂಪನಿ ಮನವರಿಕೆ ಮಾಡಿದ ಬೆನ್ನಲ್ಲೇ ಟನಲ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ (Green Signal) ಸಿಕ್ಕಿರುವ ಸಾಧ್ಯತೆಗಳಿವೆ.

ಕಳೆದ ಎರಡು ತಿಂಗಳಿನಿಂದ ಬಂದ್ ಆಗಿರುವ ಟನಲ್ ಮಾರ್ಗವನ್ನು ಸಂಚಾರಕ್ಕೆ ಮುಕ್ತಗೊಳಿಸಿಕೊಡುವಂತೆ ಸಾಕಷ್ಟು ಒತ್ತಡಗಳು ಕೇಳಿಬಂದಿದ್ದವು. ಈ ಬೆನ್ನಲ್ಲೇ ಇದೀಗ ಹೆದ್ದಾರಿ ಅಗಲೀಕರಣ ಗುತ್ತಿಗೆ ಕಂಪನಿ ಐಆರ್‌ಬಿ ಮಂಗಳವಾರ ಟನಲ್ ಎದುರು ಹಾಕಲಾಗಿದ್ದ ಜಲ್ಲಿ ಕಲ್ಲುಗಳನ್ನು ತೆರವುಗೊಳಿಸಿದ್ದು ಕೇವಲ ಬ್ಯಾರಿಕೇಡ್‌ಗಳನ್ನು ಮಾತ್ರ ಉಳಿಸಿರುವುದು ಯಾವುದೇ ಕ್ಷಣದಲ್ಲಿ ಹೆದ್ದಾರಿ ಟನಲ್ ಮಾರ್ಗದಲ್ಲಿ ಸಂಚಾರ ಆರಂಭವಾಗುವ ಮುನ್ಸೂಚನೆ ನೀಡಿದೆ.

ಜುಲೈ 8 ರಂದು ವಿಸ್ತಾರ ನ್ಯೂಸ್‌ನ ವೆಬ್‌ಸೈಟ್‌ನಲ್ಲಿ ಟನಲ್ ಸೋರಿಕೆಯಾಗುತ್ತಿರುವ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಇದಾದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಸ್ಥಳೀಯ ಶಾಸಕ ಸತೀಶ ಸೈಲ್ ಟನಲ್ ಅವ್ಯವಸ್ಥೆ ಹಿನ್ನೆಲೆಯಲ್ಲಿ ಸಂಚಾರ ಬಂದ್ ಮಾಡಿ ಫಿಟ್ನೆಸ್ ಸರ್ಟಿಫಿಕೇಟ್ ನೀಡುವಂತೆ ಸೂಚನೆ ನೀಡಿದ್ದರು. ಇದಾದ ಬಳಿಕ ತಿಂಗಳು ಕಳೆದರೂ ಟನಲ್ ಸಂಚಾರ ಆರಂಭವಾಗದ್ದರಿಂದ ಕಾರವಾರದಿಂದ ಬಿಣಗಾ ಭಾಗಕ್ಕೆ ಸುಮಾರು 4 ಕಿ.ಮೀ ಹೆಚ್ಚುವರಿಯಾಗಿ ಸುತ್ತುವರಿದು ತೆರಳುವಂತಾಗಿದ್ದು ಪ್ರತಿನಿತ್ಯ ಪ್ರಯಾಣಿಸುವ ವಾಹನ ಸವಾರರು ಸಂಚಾರಕ್ಕೆ ಪರದಾಡುವಂತಾಗಿತ್ತು. ಅಲ್ಲದೇ ಟನಲ್ ಸುಸ್ಥಿತಿಯಲ್ಲಿದ್ದರೂ ಸಹ ಸಂಚಾರ ಆರಂಭಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: Benefits Of Ajwain: ಅಜವಾನವೆಂಬ ಘಾಟುಮದ್ದಿನ ಬಗ್ಗೆ ನಿಮಗೆ ಗೊತ್ತಿದೆಯೆ?

ಈಗಾಗಲೇ ಪುಣೆಯ ಟೆಕ್ನಾಲಜಿ ಯುನಿವರ್ಸಿಟಿ ಟನಲ್‌ನ್ನು ಪರಿಶೀಲಿಸಿ ಸುರಂಗ ಮಾರ್ಗ ಸುರಕ್ಷಿತವಾಗಿದೆ ಎಂದು ವರದಿ ಸಲ್ಲಿಸಿದೆ ಎನ್ನಲಾಗಿದ್ದು ಆದರೂ ಸಂಚಾರ ಆರಂಭಿಸದಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ವಾರದೊಳಗಾಗಿ ಟನಲ್ ಸಂಚಾರ ಆರಂಭಿಸದಿದ್ದಲ್ಲಿ ಸೆ.29 ರಂದು ಒತ್ತಾಯಪೂರ್ವಕವಾಗಿ ಟನಲ್‌ನ್ನು ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ಜಿಲ್ಲಾಡಳಿತಕ್ಕೆ ಟನಲ್‌ನ ಫಿಟ್ನೆಸ್ ಕುರಿತ ವರದಿ ತಲುಪಿದೆ ಎನ್ನಲಾಗಿದ್ದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸುರಂಗ ಮಾರ್ಗ ತೆರೆಯಲು ಜಿಲ್ಲಾಡಳಿತಕ್ಕೆ ಸೂಚನೆ‌ ನೀಡಿದ್ದಾರೆ ಎನ್ನಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಸಹ ಟನಲ್ ಸುರಕ್ಷಿತವಾಗಿದೆ ಎನ್ನುವ ಭರವಸೆಯನ್ನು ಐಆರ್‌ಬಿ ಕಂಪನಿ ನೀಡಿದಲ್ಲಿ, ಜಿಲ್ಲಾಡಳಿತದ ಅನುಮತಿ ಪಡೆದು ಸುರಂಗವನ್ನು ಸಂಚಾರಕ್ಕೆ ಮುಕ್ತಗೊಳಿಸಲಿ ಎಂದು ತಿಳಿಸಿದ್ದಾರೆ. ಫಿಟ್ನೆಸ್ ಪ್ರಮಾಣಪತ್ರವನ್ನು ಜಿಲ್ಲಾಧಿಕಾರಿಗಳಿಗೇ ಸಲ್ಲಿಕೆ ಮಾಡಿದರೂ ಸಹ ಯಾವುದೇ ಆಕ್ಷೇಪ ಇಲ್ಲವಾಗಿದ್ದು, ಜನರ ಜೀವದ ಸುರಕ್ಷತೆ ಕುರಿತು ಭರವಸೆ ನೀಡಿದಲ್ಲಿ ಸಂಚಾರ ಆರಂಭಿಸಬಹುದು ಎಂದು ಜನತಾದರ್ಶನದ ವೇಳೆ ಮಾಧ್ಯಮಗಳಿಗೆ ತಿಳಿಸಿದ್ದರು.

ಇದನ್ನೂ ಓದಿ: Namma Metro : ಮೆಟ್ರೋಗೆ ಚೀನಾದಿಂದ ಬರಲಿದೆ 12 ಬೋಗಿ; 2024ಕ್ಕೆ ಚಾಲಕ ರಹಿತ ಓಡಾಟ

ಈ ನಿಟ್ಟಿನಲ್ಲಿ ಟನಲ್‌ನ ಸಂಚಾರ ಆರಂಭಿಸಲು ಸಿದ್ಧತೆ ಮಾಡಿಕೊಂಡಿರುವ ಐಆರ್‌ಬಿ ಇದೀಗ ಜೆಸಿಬಿ ಮೂಲಕ ಎರಡೂ ಟನಲ್‌ಗಳ ಎದುರು ಹಾಕಿದ್ದ ಜೆಲ್ಲಿ ಕಲ್ಲುಗಳನ್ನು ತೆರವುಗೊಳಿಸಿ ರಸ್ತೆಯನ್ನು ಸ್ವಚ್ಛಗೊಳಿಸಿದೆ. ಸದ್ಯ ಬ್ಯಾರಿಕೇಡ್‌ಗಳನ್ನು ಮಾತ್ರ ಟನಲ್ ಎದುರು ಇರಿಸಿದ್ದು ಯಾವುದೇ ಕ್ಷಣದಲ್ಲಿ ಹೆದ್ದಾರಿ ಸುರಂಗ ಮಾರ್ಗ ಸಂಚಾರಕ್ಕೆ ಲಭ್ಯವಾಗುವ ಸಾಧ್ಯತೆಗಳಿವೆ.

Continue Reading
Advertisement
dina bhavishya September 27
ಪ್ರಮುಖ ಸುದ್ದಿ1 hour ago

Dina Bhavishya : ಈ ರಾಶಿಯವರಿಗೆ ಇಂದು ಕಿರಿಕಿರಿ, ಆತಂಕದ ಭಾವವೇ ಹೆಚ್ಚು; ಸ್ವಲ್ಪ ಎಚ್ಚರವಹಿಸಿ!

Sphoorti Salu
ಸುವಚನ1 hour ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

S somanath and HD DeveGowda
ಕರ್ನಾಟಕ6 hours ago

Honorary Doctorate: ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌, ಎಚ್‌.ಡಿ ದೇವೇಗೌಡರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್‌

Gujarat High Court
ದೇಶ6 hours ago

ಜಿಮೇಲ್ ಓಪನ್ ಆಗ್ಲಿಲ್ಲ, ಅದ್ಕೆ ಜೈಲಿನಿಂದ ಬಿಡಲಿಲ್ಲ! ಹೈಕೋರ್ಟ್ ಬೇಲ್ ನೀಡಿದ್ರೂ 3 ವರ್ಷ ಜೈಲಿನಲ್ಲೇ ಉಳಿದ ಯುವಕ!

World culture fest
ಕಲೆ/ಸಾಹಿತ್ಯ6 hours ago

World Culture Festival: ಸೆ.29ರಿಂದ ವಾಷಿಂಗ್ಟನ್‌ನಲ್ಲಿ ಸಾಂಸ್ಕೃತಿಕ ಒಲಿಂಪಿಕ್ಸ್; ಶ್ರೀ ರವಿಶಂಕರ್ ಗುರೂಜಿ ಮುಂದಾಳತ್ವ

credit cards
ದೇಶ7 hours ago

Flipkart, Amazon Sale: ಹಬ್ಬದ ಸೀಸನ್‌ ಆನ್‌ಲೈನ್ ಖರೀದಿ, ಕ್ರೆಡಿಟ್‌ ಕಾರ್ಡ್‌ದಾರರು ತಿಳಿದುಕೊಳ್ಳಬೇಕಾದ ಸಂಗತಿಗಳು

virat kohli dance
ಕ್ರಿಕೆಟ್7 hours ago

Viral Video: ಬ್ರೇಕ್​ ಪಡೆದ ಆಸೀಸ್​ ಆಟಗಾರರ ಮುಂದೆ ಬ್ರೇಕ್​ ಡ್ಯಾನ್ಸ್​ ಮಾಡಿದ ವಿರಾಟ್​ ಕೊಹ್ಲಿ

Knives
ಕರ್ನಾಟಕ7 hours ago

Kolar News: ಬಾರ್‌ನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ

Afghan cricketer Naveen-ul-Haq
ಕ್ರಿಕೆಟ್8 hours ago

​ಕೊಹ್ಲಿಗೆ ಹೆದರಿಯೇ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ 24 ವರ್ಷದ ನವೀನ್​ ಉಲ್​ ಹಕ್​

Vistara top 10 News 2709
ಕರ್ನಾಟಕ8 hours ago

VISTARA TOP 10 NEWS : ಎಲ್ಲರ ಕಣ್ಣು ಶುಕ್ರವಾರದ ಕರ್ನಾಟಕ ಬಂದ್‌ನತ್ತ, ಇಸ್ರೋ ಚಿತ್ತ ಮಾತ್ರ ಶುಕ್ರನತ್ತ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

bangalore bandh
ಕರ್ನಾಟಕ2 days ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

dina bhavishya
ಪ್ರಮುಖ ಸುದ್ದಿ1 day ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ3 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ3 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ3 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ3 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ4 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌