Seer suicide| ಬಂಡೇಮಠ ಶ್ರೀ ಆತ್ಮಹತ್ಯೆಗೆ ಖಾಸಗಿ ವಿಡಿಯೊ ಕಾರಣ? ಮಹಿಳೆ, ಗ್ಯಾಂಗ್‌ನಿಂದ ಬ್ಲ್ಯಾಕ್‌ಮೇಲ್‌ - Vistara News

ಕರ್ನಾಟಕ

Seer suicide| ಬಂಡೇಮಠ ಶ್ರೀ ಆತ್ಮಹತ್ಯೆಗೆ ಖಾಸಗಿ ವಿಡಿಯೊ ಕಾರಣ? ಮಹಿಳೆ, ಗ್ಯಾಂಗ್‌ನಿಂದ ಬ್ಲ್ಯಾಕ್‌ಮೇಲ್‌

ಬಂಡೇಮಠದ ಶ್ರೀ ಬಸವಲಿಂಗ ಸ್ವಾಮೀಜಿ (೪೫) ಅವರ ಆತ್ಮಹತ್ಯೆಯ ಹಿಂದಿನ ಕಾರಣ ಸ್ವಲ್ಪ ಮಟ್ಟಿಗೆ ಬಯಲಾಗಿದೆ. ಖಾಸಗಿ ವಿಡಿಯೊ ಹಿಡಿದುಕೊಂಡು ನಡೆಯುತ್ತಿದ್ದ ಬ್ಲ್ಯಾಕ್‌ ಮೇಲ್‌ನಿಂದಾಗಿ ಅವರು ನೊಂದಿದ್ದರು ಎನ್ನಲಾಗಿದೆ.

VISTARANEWS.COM


on

swameeji suicide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ/ನೆಲಮಂಗಲ: ಮಾಗಡಿ ತಾಲೂಕಿನ ಕಂಚುಗಲ್‌ ಬಂಡೇಮಠದ ಶ್ರೀ ಬಸವಲಿಂಗ ಸ್ವಾಮೀಜಿ (೪೫) ಅವರ ಆತ್ಮಹತ್ಯೆಗೆ ಒಂದು ಖಾಸಗಿ ವಿಡಿಯೊ ಕಾರಣ. ಅದನ್ನು ಹಿಡಿದುಕೊಂಡು ಒಬ್ಬ ಮಹಿಳೆ ಮತ್ತು ಗ್ಯಾಂಗ್‌ ಅವರನ್ನು ಬ್ಲ್ಯಾಕ್‌ ಮೇಲ್‌ ಮಾಡುತ್ತಿತ್ತು ಎಂದು ತಿಳಿದುಬಂದಿದೆ. ಸ್ವಾಮೀಜಿ ಅವರು ಬರೆದಿರುವ ಎರಡು ಪುಟಗಳ ಡೆತ್‌ ನೋಟದಲ್ಲಿ ಈ ಬಗ್ಗೆ ಉಲ್ಲೇಖ ಮಾಡಿದ್ದಾರೆ ಎಂದು ಹೇಳಲಾಗಿದೆ.

ಒಬ್ಬ ಮಹಿಳೆ ಮತ್ತು ಗ್ಯಾಂಗ್‌ ತನಗೆ ಕಿರುಕುಳ ಕೊಡುತ್ತಿದ್ದಾರೆ ಎಂದು ಡೆತ್‌ ನೋಟ್‌ನಲ್ಲಿ ಸ್ವಾಮೀಜಿ ಬರೆದಿದ್ದಾರೆ ಎನ್ನಲಾಗಿದೆ. ಆದರೆ, ಸ್ವಾಮೀಜಿ ಆ ಮಹಿಳೆಯ ಹೆಸರನ್ನು ಹೇಳಿಲ್ಲ. ಕಿರುಕುಳ ನೀಡುತ್ತಿದ್ದ ಗ್ಯಾಂಗ್‌ನವರ ಹೆಸರು ಬರೆದಿದ್ದಾರೆ ಎಂದು ವಿಸ್ತಾರ ನ್ಯೂಸ್‌ಗೆ ಬಲ್ಲ ಮೂಲಗಳಿಂದ ಮಾಹಿತಿ ದೊರಕಿದೆ.

ಸ್ವಾಮೀಜಿಯವರೂ ಭಾಗಿಯಾಗಿರುವ ಒಂದು ಖಾಸಗಿ ವಿಡಿಯೊವನ್ನು ಹಿಡಿದುಕೊಂಡು ಈ ತಂಡ ಕಿರುಕುಳ ನೀಡುತ್ತಿದೆ ಎನ್ನಲಾಗಿದೆ. ಜತೆಗೆ ಆಡಿಯೊ ರೆಕಾರ್ಡಿಂಗ್‌ ಕೂಡಾ ಇದೆ ಎನ್ನಲಾಗಿದೆ.

ಸೋಮವಾರವೇ ಏಕೆ ಆತ್ಮಹತ್ಯೆ?
ಬಂಡೇ ಮಠ ಅತ್ಯಂತ ಪ್ರಭಾವಿ ಮತ್ತು ಜನಪ್ರಿಯ ಮಠಗಳಲ್ಲಿ ಒಂದು. ಬಹುದೊಡ್ಡ ಭಕ್ತ ವೃಂದವನ್ನು ಹೊಂದಿದೆ. ಇಂಥ ಮಠದಲ್ಲಿ ಈ ರೀತಿಯ ವಿದ್ಯಮಾನಗಳು ನಡೆದಿವೆ ಎನ್ನುವುದು ಪ್ರಚಾರವಾದರೆ ಮಠ ಮತ್ತು ತಮ್ಮ ಮರ್ಯಾದೆಗೆ ಕುಂದುಂಟಾಗುತ್ತದೆ ಎಂದು ಭಾವಿಸಿ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇದು ಸಿದ್ದಗಂಗಾ ಮಠದ ಶಾಖಾ ಮಠವಾಗಿದ್ದು, ಈ ವಿಡಿಯೊದ ವಿಷಯ ಸಿದ್ದಗಂಗಾ ಶ್ರೀಗಳಿಗೆ ತಲುಪಿದರೆ ತುಂಬ ಅಪಮಾನವಾಗುತ್ತದೆ, ಅವರ ಮುಂದೆ ಮುಖ ತೋರಿಸುವುದು ಭಾರಿ ಕಷ್ಟ ಎಂದು ಭಾವಿಸಿ ಪ್ರಾಣ ಕಳೆದುಕೊಂಡರು ಎನ್ನಲಾಗಿದೆ.

ಸಿದ್ದಗಂಗಾ ಶ್ರೀಗಳು ವಿದೇಶ ಪ್ರವಾಸದಲ್ಲಿದ್ದರು. ಸೋಮವಾರ ಅವರು ಮರಳಿ ಬರುತ್ತಾರೆ ಎಂಬುದನ್ನು ಖಚಿತಪಡಿಸಿಕೊಂಡಿದ್ದ ಶ್ರೀಗಳು ಅಂದೇ ಜೀವನ ಅಂತ್ಯಗೊಳಿಸಲು ನಿರ್ಧರಿಸಿದರು ಎಂಬ ಮಾಹಿತಿ ಇದೆ. ಅದಲ್ಲದೆ, ಸಿದ್ದಗಂಗಾ ಶ್ರೀಗಳು ತಮ್ಮ ಮೇಲೆ ತುಂಬಾ ನಂಬಿಕೆ ಇಟ್ಟಿದ್ದಾರೆ, ಅದಕ್ಕೆ ದ್ರೋಹ ಬಗೆದು ಬದುಕುವುದು ಹೇಗೆ ಎಂದು ಆತಂಕಗೊಂಡಿದ್ದರು ಎಂದು ಹೇಳಲಾಗಿದೆ.

ಮುಂದೇನು?
ಸ್ವಾಮೀಜಿಗಳು ಉಲ್ಲೇಖಿಸಿರುವ ಮಹಿಳೆ ಯಾರು, ವಿಡಿಯೊದಲ್ಲಿ ಏನಿದೆ ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲ. ಪೊಲೀಸರು ಈ ವಿಚಾರವನ್ನು ತನಿಖೆ ಮೂಲಕ ಬೆಳಕಿಗೆ ತರಬೇಕಾಗಿದೆ.

ಇತ್ತೀಚೆಗೆ ಖಿನ್ನತೆ ಆವರಿಸಿತ್ತು?
ದೇಹ ತೂಕದ ಬಗ್ಗೆ ಸಾಕಷ್ಟು ತಲೆ ಕೆಡಿಸಿಕೊಂಡಿದ್ದ ಸ್ವಾಮೀಜಿ ಅವರಿಗೆ ಇತ್ತೀಚಿನ ದಿನಗಳಲ್ಲಿ ಖಿನ್ನತೆ ಆವರಿಸಿತ್ತು ಎಂದು ಹೇಳಲಾಗುತ್ತಿತ್ತು. ಅವರು ಹೆಚ್ಚು ಅಂತರ್ಮುಖಿಯಾಗಿದ್ದರು. ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ. ಆದರೆ, ಅವರಿಗೆ ಇಷ್ಟು ನೋವು ತಂದ ಸಂಗತಿ ಯಾವುದು ಎನ್ನುವುದು ಅವರು ಆತ್ಮಹತ್ಯೆ ಮಾಡಿಕೊಂಡು, ಡೆತ್‌ ನೋಟ್‌ ಸಿಗುವ ವರೆಗೂ ಯಾರಿಗೂ ಗೊತ್ತಿರಲಿಲ್ಲ.

ಇದನ್ನು ಓಡಿ | ಬಂಡೇ ಮಠದ ಶ್ರೀಗಳ ಆತ್ಮಹತ್ಯೆ | 3 ಪುಟಗಳ ಡೆತ್‌ ನೋಟ್‌ನಲ್ಲಿ ಏನಿದೆ? ಸಾವಿನ ಕಡೆಗೆ ತಳ್ಳಿದ ನೋವೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Karnataka Weather: ರಾಜ್ಯದ ಬಹುತೇಕ ಕಡೆ ಮೇ 5ರವರೆಗೆ ರಣ ಬಿಸಿಲು ಕಾಡಲಿದೆ. ಇನ್ನು ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಏಪ್ರಿಲ್ 29ರಂದು ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ.

ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಕರ್ನಾಟಕ

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

Love Jihad: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯಕೋಮಿನ ಯುವಕನಿಗೆ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

VISTARANEWS.COM


on

love jihad
Koo

ಹುಬ್ಬಳ್ಳಿ: ನೇಹಾ ಹಿರೇಮಠ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ (Love Jihad Case) ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯಕೋಮಿನ ಯುವಕನಿಗೆ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಹುಬ್ಬಳ್ಳಿಯ ಗಬ್ಬೂರನಲ್ಲಿ ಅನ್ಯಕೋಮಿನ ಯುವಕನ ಜತೆ ಬಾಲಕಿ ಇದ್ದಳು. ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಬಾಲಕಿಯನ್ನು ಯುವಕ ಕರೆತಂದಿದ್ದ. ಗಬ್ಬೂರ ಹೋಟೆಲ್‌ನಲ್ಲಿ ಇದ್ದವನನ್ನು ಗಮನಿಸಿ ಸ್ಥಳೀಯರು ಪೊಲೀಸ್ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಈ ವೇಳೆ ಹಿಂದು ಜಾಗರಣಾ ವೇದಿಕೆ ಮುಖಂಡರು, ಯುವಕನಿಗೆ ಥಳಿಸಿ, ಹುಬ್ಬಳ್ಳಿಯ ಬೇಂಡಿಗೇರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಕುರಿತು ಕೇಸ್ ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗಳು ಸಾವು

ಕೋಲಾರ: ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಗ್ರಾಮದ ವೃಷಭಾವತಿ ಕರೆಯಲ್ಲಿ ನಡೆದಿದೆ. ಮಜರಾಗೊಲ್ಲಹಳ್ಳಿ ಗ್ರಾಮದಲ್ಲಿ ಮದುವೆ ಕಾರ್ಯಕ್ರಮಕ್ಕೆಂದು ಬಂದಿದ್ದ ತಂದೆ-ಮಗಳು, ಕೆರೆ ಬಳಿ ಸೆಲ್ಫಿ ತೆಗದುಕೊಳ್ಳಲು ಹೋದಾಗ, ಮಗಳು ಕಾಲು ಜಾರಿ ನೀರಗೆ ಬಿದ್ದಿದ್ದಾಳೆ. ಹೀಗಾಗಿ ಮಗಳನ್ನು ರಕ್ಷಿಸಲು ಹೋದ ತಂದೆಯೂ ಮುಳುಗಿದ್ದಾರೆ

ಬೆಂಗಳೂರು ಮೂಲದ ಸಯ್ಯದ್ ಅಯ್ಯೂಬ್ (35) ಹಾಗೂ ಫಾತಿಮಾ (10) ಮೃತ ತಂದೆ, ಮಗಳು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Continue Reading

ಕರ್ನಾಟಕ

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ಪ್ರವಾಸಿ ಬಸ್‌ ಒಂದು ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನೂ 29 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

VISTARANEWS.COM


on

BUS
Koo

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ದತ್ತಪೀಠದಲ್ಲಿ ಪ್ರವಾಸಿ ಬಸ್‌ ಒಂದು ಪಲ್ಟಿಯಾಗಿದ್ದು, 6 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನು 29 ಮಂದಿ ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು (Chikkamagalur) ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ 100 ಅಡಿ ಆಳಕ್ಕೆ ಬಸ್‌ ಬಿದ್ದ ಕಾರಣ ಹೆಚ್ಚಿನ ಜನರಿಗೆ ಗಾಯಗಳಾಗಿವೆ. ಗಾಯಾಳುಗಳಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಂದಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಪ್ರವಾಸಿಗರು ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ತೆರಳಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದವರಲ್ಲಿ ಮೊಹಮ್ಮದ್‌ ಸವಾಜ್‌ ಎಂಬ ಆರು ವರ್ಷದ ಬಾಲಕನು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮಾಣಿಕ್ಯಾರದಿಂದ ದತ್ತಪೀಠದ ಬಳಿ ಹೋಗುತ್ತಿದ್ದಾಗ ಬಸ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಕಾರು ಪಲ್ಟಿಯಾಗಿ ಯುವತಿ ಸಾವು

ಭಾನುವಾರವೇ (ಏಪ್ರಿಲ್‌ 28) ಅತಿ ವೇಗದಲ್ಲಿ ಸಾಗುತ್ತಿದ್ದ ಇನೋವಾ ಕಾರು ಪಲ್ಟಿಯಾಗಿ ಯುವತಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚೆನ್ನಪಟ್ಟಣ ಮೂಲದ ಯುವತಿ ಕೀರ್ತಿ ಎಂಬುವರು ಅಪಘಾತದಲ್ಲಿ ಮೃತಪಟ್ಟವರು.

ಚೆನ್ನಪಟ್ಟಣ ಮೂಲದ ಅವರು ಧರ್ಮಸ್ಥಳಕ್ಕೆ ಬಂದಿದ್ದರು. ಅಲ್ಲಿಂದ ಅವರು ಮುರುಡೇಶ್ವರಕ್ಕೆ ಹೊರಟಿದ್ದರು. ಅತಿ ವೇಗದಲ್ಲಿ ಸಾಗುತ್ತಿದ್ದ ಕಾರು ಹುಣ್ಸೆಮಕ್ಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಳಿಕ ರಸ್ತೆ ಬದಿಯ ಮರಕ್ಕೂ ಢಿಕ್ಕಿ ಹೊಡೆದು ಇನ್ನೋವಾ ಮಾತು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ತೀವ್ರತೆಗೆ ಕಾರಿನಲ್ಲಿದ್ದ 5 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಕೆಲ ದಿನಗಳ ಹಿಂದಷ್ಟೇ ವಿಜಯಪುರ ಜಿಲ್ಲೆಯಲ್ಲಿ ಕಾರು ಪಲ್ಟಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಬಳಿ ಅಪಘಾತ ನಡೆದಿತ್ತು. ದೊಡ್ಡಯ್ಯ ಪುರಾಣಿಕಮಠ (37), ಪುಷ್ಪಾವತಿ (55) ಮೃತರು.

ಇದನ್ನೂ ಓದಿ: Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Continue Reading

ತುಮಕೂರು

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

Sira News: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ (Sira News) ದೊಡ್ಡಗೂಳ ಗ್ರಾಮದ ಕೆರೆಯಲ್ಲಿ ಬಿಸಿಲ ಬೇಗೆಗೆ ಸಾವಿರಾರು ಮೀನುಗಳು ಮೃತಪಟ್ಟಿವೆ.

VISTARANEWS.COM


on

Koo

ಶಿರಾ: ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಈ ನಡುವೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ (Sira News) ದೊಡ್ಡಗೂಳ ಗ್ರಾಮದ ಕೆರೆಯಲ್ಲಿ ಬಿಸಿಲ ಬೇಗೆ ಮೀನುಗಳಿಗೂ ತಟ್ಟಿದೆ. ಮಳೆಯಾಗದ ಹಿನ್ನೆಲೆ ಕೆರೆಯ ನೀರು ಬತ್ತಿದ್ದರಿಂದ ಸಾವಿರಾರು ಮೀನುಗಳು ಮೃತಪಟ್ಟಿರುವ ಘಟನೆ ನಡೆದಿದೆ. ಜನವರಿಯಿಂದ ಬಿಸಿಲಿನ ತಾಪಮಾನ ಹೆಚ್ಚಾಗಿದ್ದರಿಂದ ಕೆರೆಯಲ್ಲಿನ ನೀರು ಬತ್ತಿದ ಪರಿಣಾಮ ಮೀನುಗಳು ಸಾವನ್ನಪ್ಪಿವೆ.

ಮಳೆ ಕೊರತೆಯಿಂದ ಕೆರೆಕಟ್ಟೆಗಳು ಸಂಪೂರ್ಣವಾಗಿ ಖಾಲಿಯಾಗಿವೆ. ಕೆರೆಯ ಗುಂಡಿಗಳಲ್ಲಿ ಇದ್ದ ಅಲ್ಪಸ್ವಲ್ಪ ನೀರಿನಲ್ಲಿ ಮೀನುಗಳು ಜೀವ ಉಳಿಸಿಕೊಂಡಿದ್ದವು. ಅದರೆ ಇತ್ತೀಚೆಗೆ ಬಿಸಿಲಿನ ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಕೆರೆಯಲ್ಲಿನ ನೀರು ಸಂಪೂರ್ಣವಾಗಿ ಬತ್ತಿದೆ. ಹೀಗಾಗಿ ಕೆರೆಯಲ್ಲಿದ್ದ ಮೀನುಗಳು ವಿಲವಿಲ ಒದ್ದಾಡಿ ಪ್ರಾಣಬಿಟ್ಟಿವೆ.

ಕೆರೆಯಲ್ಲಿ ನೀರು ಕಡಿಮೆಯಾಗಿ, ಇರುವ ನೀರು ಕಲುಷಿತಗೊಂಡು ಮೀನುಗಳು ಸತ್ತಿವೆ. ಒಂದು ವಾರದಿಂದ ಮೀನುಗಳು ಸಾಯುತ್ತಿದ್ದರೂ ಯಾರೂ ಭೇಟಿ ನೀಡಿ ಪರಿಶೀಲಿಸುವ, ಸತ್ತ ಮೀನು ತೆರವುಗೊಳಿಸುವ ಕಾರ್ಯ ಮಾಡಿರಲಿಲ್ಲ. ಇದರಿಂದ ದುರ್ವಾಸನೆ ಉಂಟಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ್ದರು. ಹೀಗಾಗಿ ರತ್ನಸಂದ್ರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಸತ್ತ ಮೀನುಗಳನ್ನು ಜೆಸಿಬಿ ಬಳಸಿ ತೆರವು ಮಾಡಿಸಿದರು.

ಇದನ್ನೂ ಓದಿ | Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

ಚಳ್ಳಕೆರೆ: ಬರಗಾಲಕ್ಕೆ ತುತ್ತಾದ ಚಳ್ಳಕೆರೆ ತಾಲೂಕಿನ ರೈತರಿಗೆ ಅನಿವಾರ್ಯವಾದದ್ದೇ ಅಡಿಕೆ ಬೆಳೆ (Arecanut Cultivation). ಸಾವಿರಾರು ಹೆಕ್ಟೇರ್​ನಲ್ಲಿ ಅಡಿಕೆ ಬೆಳೆದು ಬದುಕು ಸಾಗಿಸಲು ಕನಸು ಕಂಡಿದ್ದ ಬೆಳೆಗಾರರ ಬದುಕೀಗ ಬಿಸಿಲ ಬೇಗೆಗೆ ಸುಟ್ಟು ಕರಕಲಾಗಿದೆ. ಹಚ್ಚ- ಹಸಿರಿನಿಂದ ರಾರಾಜಿಸುತ್ತಿದ್ದ ಅಡಿಕೆ ಮರಗಳು ನೀರಿಲ್ಲದೇ ಒಣಗಿ ನಿಲ್ಲುತ್ತಿವೆ. ಬೋರ್​ವೆಲ್​ನಲ್ಲಿ ನೀರು ನಿಲ್ಲುತ್ತಿದ್ದಂತೆ ಮರಗಳು ಸುಡಲು ಆರಂಭಿಸಿವೆ. ಒಣಗುತ್ತಿರುವುದು ಮರಗಳಲ್ಲ. ನಮ್ಮ ಬದುಕು ಎಂದು ಬೆಳೆಗಾರರು ಕಂಗಾಲಾಗಿದ್ದಾರೆ.

ಅತ್ತ ಮಳೆ ಇಲ್ಲ. ಇತ್ತ ನೆಲದಲ್ಲಿ ನೀರಿಲ್ಲ. ಎಷ್ಟು ಬೋರ್ ಕೊರೆಯಿಸಿದರು. ನೀರು ಬರುತ್ತಿಲ್ಲ.
ಇನ್ನು ಒಂದು ತಿಂಗಳ ಕಾಲ ಭೂಮಿಗೆ ಮಳೆ ಬಾರದಿದ್ದರೆ ಅದೆಷ್ಟೋ ಅಡಿಕೆ ತೋಟಗಳು ಒಣಗಿ ಹೋಗುತ್ತವೆ ಎನ್ನುತ್ತಾರೆ ರೈತ ತಿಪ್ಪೇಸ್ವಾಮಿ.

ತಾಲೂಕಿನ ಕಾಪರಹಳ್ಳಿ ಗ್ರಾಮದ ಗುರುಸ್ವಾಮಿ ರೈತ ತಮ್ಮ ಜಮೀನಿನಲ್ಲಿ ಅಡಿಕೆ ಬೆಳೆಯನ್ನು ಬೆಳೆದಿದ್ದು, ಈಗ ಕೊಳವೆ ಬಾವಿಯಲ್ಲಿ ನೀರಿಲ್ಲದೆ ಅಡಿಕೆ ಬೆಳೆ ಸಂಪೂರ್ಣ ಒಣಗುತ್ತಿದೆ.

Continue Reading
Advertisement
Sleeping Tips
ಆರೋಗ್ಯ4 mins ago

Sleeping Tips: ದಿನಕ್ಕೆಷ್ಟು ತಾಸು ನಿದ್ದೆ ಮಾಡುತ್ತೀರಿ ನೀವು? ಇದು ಗಂಭೀರ ವಿಷಯ!

Rishabh Pant
ಅಂಕಣ6 mins ago

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Karnataka Weather
ಕರ್ನಾಟಕ34 mins ago

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Tooth Decay
ಆರೋಗ್ಯ1 hour ago

Tooth Decay: ನಮ್ಮ ಈ ದುರಭ್ಯಾಸಗಳು ಹಲ್ಲಿನ ಹುಳುಕಿಗೆ ಕಾರಣವಾಗುತ್ತವೆ

dina bhavishya read your daily horoscope predictions for April 29 2024
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

love jihad
ಕರ್ನಾಟಕ7 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ7 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು7 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ8 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ8 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202414 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202417 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202418 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202419 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ22 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌