Karnataka Election: 'ನಾಲಾಯಕ್'‌ ವಿಚಾರ; ಪ್ರಿಯಾಂಕ್‌ ಹೇಳಿದ್ದೇ ಬೇರೆ, ಮಾಧ್ಯಮದಲ್ಲಿ ತೋರಿಸೋದೇ ಬೇರೆ ಎಂದ ಖರ್ಗೆ - Vistara News

ಕರ್ನಾಟಕ

Karnataka Election: ‘ನಾಲಾಯಕ್’‌ ವಿಚಾರ; ಪ್ರಿಯಾಂಕ್‌ ಹೇಳಿದ್ದೇ ಬೇರೆ, ಮಾಧ್ಯಮದಲ್ಲಿ ತೋರಿಸೋದೇ ಬೇರೆ ಎಂದ ಖರ್ಗೆ

Karnataka Election: ನರೇಂದ್ರ ಮೋದಿ ನಾಲಾಯಕ್‌ ಎಂದು ಪ್ರಿಯಾಂಕ್‌ ಖರ್ಗೆ ನೀಡಿರುವ ಹೇಳಿಕೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಿಯಾಂಕ್‌ ಖರ್ಗೆ ಹಾಗೆ ಹೇಳಿಯೇ ಇಲ್ಲ ಎಂದು ತಿಳಿಸಿದ್ದಾರೆ.

VISTARANEWS.COM


on

Mallikarjun Kharge
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನರೇಂದ್ರ ಮೋದಿ ನಾಲಾಯಕ್‌ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ನೀಡಿರುವ ಹೇಳಿಕೆಯು ರಾಜ್ಯದಲ್ಲಿ ಮತ್ತೊಂದು (Karnataka Election) ವಿವಾದಕ್ಕೆ ಕಾರಣವಾಗಿದೆ. ಮೋದಿ ವಿಷದ ಹಾವಿದ್ದಂತೆ ಎಂದು ಹೇಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕ್ಷಮೆಯಾಚಿಸಿದ್ದರು. ಈಗ ಅವರ ಮಗ ಇಂತಹ ಹೇಳಿಕೆ ನೀಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇದರ ಬೆನ್ನಲ್ಲೇ, ಮಗನ ಹೇಳಿಕೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, “ಪ್ರಿಯಾಂಕ್‌ ಖರ್ಗೆ ಹಾಗೆ ಹೇಳಿಯೇ ಇಲ್ಲ” ಎಂದಿದ್ದಾರೆ.

“ಪ್ರಿಯಾಂಕ್‌ ಖರ್ಗೆ ಹಾಗೆ ಹೇಳಿಕೆ ನೀಡಿಯೇ ಇಲ್ಲ. ಮಾಧ್ಯಮಗಳಲ್ಲಿ ತೋರಿಸುತ್ತಿರುವುದೇ ಬೇರೆ, ಪ್ರಿಯಾಂಕ್‌ ಖರ್ಗೆ ಹೇಳಿದ್ದೇ ಬೇರೆ. ಮಾಧ್ಯಮದವರು ಮನಸ್ಸಿಗೆ ಬಂದಂತೆ ತೋರಿಸುತ್ತಿದ್ದಾರೆ. ನೀವು ಸುದ್ದಿ ಮಾಡುತ್ತಿದ್ದೀರಿ ಮಾಡಿ” ಎಂದು ಮಾಧ್ಯಮದವರ ಕುರಿತೇ ಖರ್ಗೆ ಬೇಸರ ವ್ಯಕ್ತಪಡಿಸಿದರು. ಪ್ರಿಯಾಂಕ್‌ ಖರ್ಗೆ ಕೂಡ, ನಾನು ನೀಡಿದ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸ್ಪಷ್ಟನೆ ನೀಡಿದ್ದರು.

ಕೇಂದ್ರದ ವಿರುದ್ಧ ವಾಗ್ದಾಳಿ

ಕೇಂದ್ರ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಹರಿಹಾಯ್ದರು. “ಕಾರ್ಮಿಕರ ವೇತನ ಶೇ.5 ರಷ್ಟು ಮಾತ್ರ ಹೆಚ್ಚಾಗಿದೆ. ನಾಲ್ಕು ಕಾನೂನು ತಂದಿದ್ದಾರೆ. ಆದರೆ, ನಾಲ್ಕೂ ಕಾನೂನು ಕಾರ್ಮಿಕರ ವಿರೋಧಿ ಇವೆ. ನಾಲ್ಕು ‌ಕಾನೂನುಗಳನ್ನು ನಾನು ಖಂಡಿಸುತ್ತೇನೆ. ಅವುಗಳನ್ನು ಕೂಡಲೇ ಹಿಂಪಡೆಯಬೇಕು. ಬಹುಮತ ಇದೆ ಅಂತ‌ ಕಾನೂನು ಪಾಸ್ ಮಾಡಿದ್ದಾರೆ. ಬಡವರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ” ಎಂದರು.

ಕೇಂದ್ರ ಹೇಳಿದ ಹಾಗೆ ರಾಜ್ಯ ಸರ್ಕಾರ ಕೇಳುತ್ತಿದೆ. ಕರ್ನಾಟಕ ಒಂದು ಪ್ರಗತಿಪರ ರಾಜ್ಯವಾಗಿದೆ. ಮೋದಿ ಹೇಳಿದ ಹಾಗೆ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಮೋದಿ ಉದ್ಯಮಿಗಳ‌ ಮಾತು ಕೇಳುತ್ತಾರೆ. ಉದ್ಯಮಿಗಳಿಗೆ ಅನುಕೂಲ ಆಗುವ ಹಾಗೆ ಮೋದಿ ಮಾಡಿದ್ದಾರೆ. ಮೊದಲು ಕಾರ್ಮಿಕರಿಗೆ 8 ಗಂಟೆಗಳ ಕಾಲ ಕೆಲಸದ ಅವಧಿ ಇತ್ತು. ಇಂದು ಬ್ರಿಟಿಷ್ ಲಾ ವಾಪಸ್ ತಂದಿದ್ದಾರೆ. 12 ಗಂಟೆಯವರೆಗೆ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ” ಎಂದು ಟೀಕಿಸಿದರು.

“ಮಹಿಳೆಯರು ಜಮೀನಿನಲ್ಲಿ, ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಾರೆ. ದೊಡ್ಡ ದೊಡ್ಡ ಕಂಪನಿಗಳು ಕೇಳಿದಾಕ್ಷಣ 12 ಗಂಟೆ ಕೆಲಸ ಮಾಡಲು ಅವಕಾಶ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ರಾತ್ರಿ ಪಾಳಿಯಲ್ಲಿ ಮಹಿಳೆಯರಿಗೆ ಕೆಲಸಕ್ಕೆ ಅವಕಾಶ ನೀಡಲಾಗಿದೆ. ನಮ್ಮ ದೇಶದ ಮಹಿಳೆಯರು ಜಮೀನಿನಲ್ಲಿ ಕೆಲಸ ಮಾಡುತ್ತಾರೆ. ಇದಕ್ಕೆ ನಮ್ಮ ಚಿಂತೆ ಇರಲಿಲ್ಲ. ಆದರೆ, ದೊಡ್ಡ ಕಂಪನಿಯವರು ಒತ್ತಡ ತರುತ್ತಿದ್ದಾರೆ. ಮಹಿಳೆಯರಿಗೆ ರಾತ್ರಿ ಪಾಳಿ ನೀಡುವಂತೆ ಒತ್ತಡ ತಂದಿದ್ದಾರೆ. ಪಿಎಫ್ ಫಂಡ್‌ ಹಣವನ್ನು ಉದ್ಯಮಿಗಳಿಗೆ ಸಾಲ ನೀಡುತ್ತಿದ್ದಾರೆ. ಕಡಿಮೆ ಬಡ್ಡಿಗೆ ಸಾಲ ನೀಡುತ್ತಿದ್ದಾರೆ. ಷೇರ್ ಮಾರ್ಕೆಟ್ ಮೇಲೆ ಹಣ ಹೂಡುತ್ತಿದ್ದಾರೆ. ಮಾರ್ಕೆಟ್ ಬಿದ್ದು ಹೊದರೆ ಏನು ಮಾಡುತ್ತಾರೆ? ಕಾರ್ಮಿಕರ ಹಣಕ್ಕೆ ಯಾರು‌ ಗ್ಯಾರಂಟಿ ಕೊಡುತ್ತಾರೆ” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಕರಾವಳಿಯಲ್ಲಿ ಬಿಜೆಪಿಗೆ ಕಾಂಗ್ರೆಸ್‌, ಜೆಡಿಎಸ್‌ ಪ್ರಬಲ ಪೈಪೋಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

SSLC Students Fight: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹೊಡಿಬಡಿ; ಮೂವರಿಗೆ ಚಾಕು ಇರಿತ

SSLC Students Fight: ಬ್ಯಾಗ್‌ ಇಡುವ ವಿಚಾರಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಪರೀಕ್ಷೆ ಮುಗಿಸಿ ಮನೆಗೆ ಹೋಗುವಾಗ ಮೂವರು ವಿದ್ಯಾರ್ಥಿಗಳಿಗೆ ಚಾಕು (Attempt to Murder Case) ಇರಿಯಲಾಗಿದೆ.

VISTARANEWS.COM


on

By

SSLC Students Fighting
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಎಸ್ಎಸ್ಎಲ್‌ಸಿ ಹುಡುಗರ ಮಾರಾಮಾರಿ ನಡೆದಿದ್ದು, ಮೂವರು ವಿದ್ಯಾರ್ಥಿಗಳು ಚಾಕು (SSLC Students Fight) ಇರಿತಕ್ಕೊಳಗಾಗಿದ್ದಾರೆ. ಪರೀಕ್ಷಾ ಕೊಠಡಿಯ ಹೊರಗೆ ಬ್ಯಾಗ್ ಇಡುವ ವಿಚಾರಕ್ಕೆ ರಾಗಿ ಗುಡ್ಡ ಹಾಗೂ ಸಾರಕ್ಕಿ ಬಳಿ ಇರುವ ಶಾಲಾ ವಿದ್ಯಾರ್ಥಿಗಳ ನಡುವೆ ಕಿರಿಕ್ ನಡೆದಿದೆ. ಪರೀಕ್ಷೆ ಮಗಿಸಿ ಮನೆಗೆ ಹೋಗುವಾಗ ಎರಡು ಶಾಲೆಗಳ ಮಕ್ಕಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಖಾಸಗಿ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಂದಿದ್ದ ಎರಡು ಶಾಲೆಯ ಮಕ್ಕಳು, ಪರೀಕ್ಷಾ ಕೇಂದ್ರದಲ್ಲಿ ಜಗಳ ನಡೆಸಿದ್ದಾರೆ. ಒಳಗೆ ಜಗಳವಾಡಿ ಅದೇ ದ್ವೇಷದಿಂದ ಹಿಂಬಾಲಿಸಿ ಬಂದಿದ್ದ ರಾಗಿ ಗುಡ್ಡ ಬಳಿ ಇರುವ ಶಾಲಾ ಬಾಲಕರು, ನಂತರ ಸಾರಕ್ಕಿ ಬಳಿ ಇರುವ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದು ಪರಾರಿ ಆಗಿದ್ದಾರೆ.

ನಿನ್ನೆ ಬುಧವಾರ ಮಧ್ಯಾಹ್ನ 1-45ಕ್ಕೆ ಘಟನೆ ನಡೆದಿದ್ದು, ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಎಲ್ಲ ಬಾಲಕರ ಮೇಲೂ ಕೊಲೆ ಯತ್ನ ಪ್ರಕರಣದಡಿ ಪ್ರಕರಣ ದಾಖಲಿಸಿದ್ದಾರೆ. ಪುಸ್ತಕ ಹಿಡಿಯಬೇಕಿದ್ದ ಕೈಗಳಿಗೆ ಈಗ ಕೋಳ ಬಿದ್ದಿದೆ.

ಇದನ್ನೂ ಓದಿ:Toll Hike: ಮತ್ತೆ ಟೋಲ್‌ ಬರೆ; ಬೆಂಗಳೂರು-ಮೈಸೂರು ಓಡಾಟ ಇನ್ನಷ್ಟು ದುಬಾರಿ

ಕುಡಿಯುವ ನೀರಿಗಾಗಿ ಚಿಮ್ಮಿತು ರಕ್ತ; ಚಾಕು ಇರಿದು ಯುವಕನ ಕೊಲೆ

ಯಾದಗಿರಿ: ಎಲ್ಲೆಡೆ ಕುಡಿಯುವ ನೀರಿಗಾಗಿ ಹಾಹಾಕರ (Water Crisis) ಶುರುವಾಗಿದೆ. ಗಂಟೆಗಟ್ಟಲೇ ಕಾಯುತ್ತಾ, ಹಗಲಿರುಳು ಎನ್ನದೇ ನಲ್ಲಿ ಮುಂದೆ ಕೂರುವಂತಾಗಿದೆ. ಬರಗಾಲವು ತೀವ್ರವಾಗಿ ಆವರಿಸಿದೆ. ಈ ಮಧ್ಯೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಸಂಬಂಧಿಕರೇ ಕಿತ್ತಾಡಿಕೊಂಡಿದ್ದು, ರಕ್ತವನ್ನೇ (Murder Case) ಹರಿಸಿದ್ದಾರೆ.

ಕುಡಿಯುವ ನೀರಿಗಾಗಿ ಶುರುವಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ನಂದಕುಮಾರ ಕಟ್ಟಿಮನಿ (21)ಕೊಲೆಯಾದವನು. ಹಣಮಂತ ಹಾಗೂ ಹಣಮವ್ವ ಕೊಲೆ ಆರೋಪಿಗಳಾಗಿದ್ದಾರೆ. ನೀರಿನ ವಿಚಾರವಾಗಿ ನಂದಕುಮಾರನ ಅಜ್ಜಿ ಜತೆ ಆರೋಪಿಗಳು ಜಗಳವಾಡಿದ್ದರು.

ಹೊರಹೋಗಿ ಮನೆಗೆ ವಾಪಸ್‌ ಬಂದ ನಂದಕುಮಾರಗೆ ಗಲಾಟೆ ವಿಚಾರವನ್ನು ಅಜ್ಜಿ ತಿಳಿಸಿದ್ದರು. ಹೀಗಾಗಿ ಅಜ್ಜಿ ಜತೆ ನೀವೂ ಯಾಕೆ ಜಗಳ ಮಾಡಿದ್ದೀರಿ ಎಂದು ಮೊಮ್ಮಗ ನಂದಕುಮಾರ್‌ ಸಂಬಂಧಿಗಳಾದ ಹಣಮಂತ ಮತ್ತು ಹಣಮವ್ವರಿಗೆ ಪ್ರಶ್ನೆ ಮಾಡಿದ್ದ. ಇದೇ ವೇಳೆ ಮಾತಿಗೆ ಮಾತು ಬೆಳೆದು ಜಗಳಕ್ಕೆ ತಿರುಗಿದೆ. ಜಗಳವು ವಿಕೋಪಕ್ಕೆ ತಿರುಗಿದ್ದು, ನಂದಕುಮಾರ್‌ಗೆ ಹಾಗೂ ಈತನ ತಾಯಿಗೂ ಹಲ್ಲೆ ನಡೆಸಿದ್ದಾರೆ.

murder case Youth killed over drinking water dispute
ಕೊಲೆಯಾದ ನಂದಕುಮಾರ ಕಟ್ಟಿಮನಿ

ಇಷ್ಟಕ್ಕೆ ಸುಮ್ಮನಾಗದೆ ಹಣಮಂತ ಹಾಗೂ ಹಣಮವ್ವ ಎಂಬುವವರು ನಂದಕುಮಾರಗೆ ಚಾಕು ಇರಿದು ಕೊಲೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ಸಂಬಂಧ ಹುಣಸಗಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಹಣಮಂತ ಹಾಗೂ ಹಣಮವ್ಬ ಇಬ್ಬರನ್ನು ಬಂಧಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Toll Hike: ಮತ್ತೆ ಟೋಲ್‌ ಬರೆ; ಬೆಂಗಳೂರು-ಮೈಸೂರು ಓಡಾಟ ಇನ್ನಷ್ಟು ದುಬಾರಿ

Toll Hike: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ (bengaluru mysuru expressway) ಟೋಲ್‌ ದರ ಹೆಚ್ಚಳವಾಗಿದ್ದು, ಏಪ್ರಿಲ್‌ 1ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಹಾಗಾದರೆ ಯಾವ್ಯಾವ ವಾಹನಕ್ಕೆ ಎಷ್ಟು ಶುಲ್ಕ ನಿಗದಿ ಮಾಡಲಾಗಿದೆ.

VISTARANEWS.COM


on

By

toll hike
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು-ಮೈಸೂರು ಹೆದ್ದಾರಿಯ (bengaluru mysuru expressway) ಟೋಲ್‌ ದರವನ್ನು ಹೆಚ್ಚಳ (Toll Hike) ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಟೋಲ್‌ ಬರೆ ಎಳೆದಿದೆ. ಏಪ್ರಿಲ್‌ 1ರಿಂದ ಪರಿಷ್ಕೃತ ದರವು ಜಾರಿಯಾಗಲಿದೆ.

ನಿಡಘಟ್ಟ, ಕಣಮಿಣಿಕ ಹಾಗೂ ಶೇಷಗಿರಿಹಳ್ಳಿ ಟೋಲ್‌ ಪ್ಲಾಜಾವರೆಗಿನ 56 ಕಿ.ಮೀ ಉದ್ದದ ಹೆದ್ದಾರಿಗೆ ಈ ಪರಿಷ್ಕೃತ ದರ ಅನ್ವಯವಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕರವು ಮಾಹಿತಿ ನೀಡಿದೆ. ಇದರೊಂದಿಗೆ ಹೆದ್ದಾರಿ ಟೋಲ್‌ ಎರಡು ಬಾರಿ ಪರಿಷ್ಕರಣೆಯಾಗಿದೆ.

ಪ್ರತಿ ಹಣಕಾಸು ವರ್ಷದಂದು ಎಲ್ಲ ರಾಷ್ಟ್ರೀಯ ಹೆದ್ದಾರಿಗಳ ಟೋಲ್‌ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಶುಲ್ಕದಲ್ಲೂ ಪರಿಷ್ಕರಣೆ ಮಾಡಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ರಾಹುಲ್‌ ಗುಪ್ತಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

ಕಳೆದ ವರ್ಷ ಏಪ್ರಿಲ್‌ನಲ್ಲಿ ಟೋಲ್‌ ದರ ಹೆಚ್ಚಳ ಮಾಡಲಾಗಿತ್ತು. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಕಾರಣಕ್ಕೆ ದರ ಹೆಚ್ಚಳವನ್ನು ಕೈ ಬಿಟ್ಟಿತ್ತು. ಆ ಬಳಿಕ ಜೂನ್‌ನಲ್ಲಿ ಏಕಾಏಕಿ ಶೇ.22ರಷ್ಟು ದರ ಹೆಚ್ಚಳಗೊಂಡಿತ್ತು. ಇದೀಗ 9 ತಿಂಗಳ ನಂತರ ಮತ್ತೆ ಟೋಲ್‌ ಏರಿಕೆ ಆಗಿದೆ.

ಯಾವ ವಾಹನಕ್ಕೆ ಎಷ್ಟು ಶುಲ್ಕ?

ವಾಹನಒನ್‌ ಸೈಡ್‌ರಿಟರ್ನ್‌ ಜರ್ನಿತಿಂಗಳ ಪಾಸ್‌(ಒನ್‌ಸೈಡ್‌)
ಕಾರು, ಜೀಪು, ವ್ಯಾನ್‌₹ 170₹ 255₹ 5,715
ಲಘು ವಾಹನ, ಮಿನಿ ಬಸ್‌2754159,230
2 ಆಕ್ಸೆಲ್‌ ಟ್ರಕ್‌/ಬಸ್‌58057019,345
3 ಆಕ್ಸೆಲ್‌ ವಾಣಿಜ್ಯ ವಾಹನ63595021,100
ಭಾರಿ ವಾಹನ (4-6 ಆಕ್ಸೆಲ್‌)‌9101,36530,335
ದೊಡ್ಡ ವಾಹನ (7ಕ್ಕಿಂತ ಹೆಚ್ಚು ಆಕ್ಸೆಲ್‌)1,1101,66036,930
ವಾಹನಹಳೆ ದರಹೊಸ ದರ ಹೆಚ್ಚಳ
ಕಾರು, ಜೀಪು, ವ್ಯಾನ್‌13517035
ಲಘು ವಾಹನ, ಮಿನಿ ಬಸ್‌22027555
2 ಆಕ್ಸೆಲ್‌ ಟ್ರಕ್‌/ಬಸ್‌460580120
3 ಆಕ್ಸೆಲ್‌ ವಾಣಿಜ್ಯ ವಾಹನ500635135
ಭಾರಿ ವಾಹನ (4-6 ಆಕ್ಸೆಲ್‌)720910190
ದೊಡ್ಡ ವಾಹನ (7ಕ್ಕಿಂತ ಹೆಚ್ಚು ಆಕ್ಸೆಲ್‌)8801,110880

ಇನ್ನೂ ಎಲ್ಲಾ ತರಹದ ವಾಹನಗಳು 24 ಗಂಟೆಯೊಳಗೆ ಹಿಂದಿರುಗಿ ಬಂದಲ್ಲಿ ಪಾವತಿಸಬೇಕಾದ ಟೋಲ್‌ನಲ್ಲಿ ಶೇ. 25ರಷ್ಟು ರಿಯಾಯಿತಿ ಸಿಗಲಿದೆ. ಅದೇ ರೀತಿ, ಎಲ್ಲಾ ವಾಹನಗಳು ಟೋಲ್‌ ಪಾವತಿ ದಿನದಿಂದ ಒಂದು ತಿಂಗಳೊಳಗೆ 50 ಬಾರಿ ಹೈವೆಯಲ್ಲಿ ಸಂಚಾರಿಸಿದ್ದರೆ ಶೇ. 35ರಷ್ಟು ರಿಯಾಯಿತಿ ಸಿಗಲಿದೆ. ಯಾವುದೇ ವಾಹನಗಳು ಅನುಮತಿಗಿಂತ ಹೆಚ್ಚಿನ ಸರಕು ಹೊಂದಿದ್ದರೆ ನಿಗದಿತ ಶುಲ್ಕಕ್ಕಿಂತ ಹತ್ತು ಪಟ್ಟು ಶುಲ್ಕ ಪಾವತಿಸಬೇಕಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಕಷ್ಟಕ್ಕೆ ಸ್ಪಂದಿಸುವ ಡಿಕೆಸು ಬೇಕೋ? ವೈಟ್‌ ಕಾಲರ್‌ ಡಾ. ಮಂಜುನಾಥ್‌ ಬೇಕೋ? ಸಿಎಂ ಪ್ರಶ್ನೆ

Lok Sabha Election 2024: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ನೂರಕ್ಕೆ ನೂರು ಗೆಲ್ಲುತ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಗೆಲ್ಲುತ್ತಾರೆ ಎಂಬುದು ನನಗೆ ಖಚಿತವಾಗಿ ಗೊತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

CM Siddaramaiah hugs DK Suresh in Bangalore Rural Lok Sabha constituency election campaign
Koo

ರಾಮನಗರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ (DK Suresh) ಅವರು ನೂರಕ್ಕೆ ನೂರು ಗೆಲ್ಲುತ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಃಸಿದ್ಧ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ನಿಮಗೆ ಕಷ್ಟಕ್ಕೆ ಸ್ಪಂದಿಸುವ ಸುರೇಶ್‌ ಬೇಕೋ? ಬಿಜೆಪಿಯ ವೈಟ್‌ ಕಾಲರ್‌ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್‌ (Dr CN Manjunath) ಬೇಕೋ ಎಂದು ಪ್ರಶ್ನೆ ಮಾಡಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯಲ್ಲಿ ಮಾತನಾಡಿ, ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂದರು.

CM Siddaramaiah in Bangalore Rural Lok Sabha constituency election campaign

ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ?

ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ ಎಂದರು.

ನಾವು ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಕನ್ನಡ ನಾಡಿನ‌ ಜನತೆಯ ಖಾತೆಗೆ ಹಣ ಜಮೆ ಮಾಡುತ್ತಿದ್ದೇವೆ. ಶೂದ್ರರು, ದಲಿತರು, ಮಹಿಳೆಯರು, ಶ್ರಮಿಕರು, ದುಡಿಯುವ ವರ್ಗಗಳ ಎಲ್ಲರ ಮನೆ ಮನೆಯನ್ನೂ ನಮ್ಮ ಗ್ಯಾರಂಟಿಗಳು ತಲುಪಿವೆ. ಇದು ನಮ್ಮ ಬದ್ಧತೆ. ನೀವು ಕೊಟ್ಟ ಒಂದೊಂದು ವೋಟಿಗೂ ಘನತೆ ತಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಕುಟುಂಬಗಳಿಗೂ ನಮ್ಮ ಸರ್ಕಾರ ಹಣ ಜಮೆ ಮಾಡುತ್ತಿದೆ. ಪಕ್ಷ, ಜಾತಿ, ಧರ್ಮ ಯಾವುದನ್ನೂ ನೋಡದೆ ಇಡೀ ನಾಡಿನ ಜನತೆಗೆ ಅವರ ಕುಟುಂಬಗಳಿಗೆ ಉಚಿತ ಅಕ್ಕಿ, ಉಚಿತ ವಿದ್ಯುತ್ ಜತೆಗೆ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ, ನಿರುದ್ಯೋಗಿಗಳ ಖಾತೆಗೆ ಭತ್ಯೆಯನ್ನು ಜಮೆ ಮಾಡುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬ ಮತದಾರರ ನಂಬಿಕೆ ಉಳಿಸಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

CM Siddaramaiah in Bangalore Rural Lok Sabha constituency election campaign

ಬಿಜೆಪಿ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿ ನಿಮ್ಮ ತೆರಿಗೆ ಹಣವನ್ನೂ ನಿಮಗಾಗಿ ಖರ್ಚು ಮಾಡಲಿಲ್ಲ. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

ಯಾರು ಬೇಕು ನಿಮಗೆ?

ಹೀಗಾಗಿ ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಎಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾಗ, ಮುಖ್ಯಮಂತ್ರಿ ಆಗಿದ್ದಾಗ ರಾಮನಗರ ಜಿಲ್ಲೆಯನ್ನು ಏಕೆ ಕಡೆಗಣಿಸಿದ್ದರು ಎನ್ನುವುದಕ್ಕೆ ಜನರಿಗೆ ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಮಂಕಾಳ ವೈದ್ಯ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ. ಶ್ರೀನಿವಾಸ್, ವಿಧಾನ‌ ಪರಿಷತ್ ಸದಸ್ಯ ಸುದಾಮ ದಾಸ್ ಸೇರಿ ರಾಮನಗರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Continue Reading

ರಾಜಕೀಯ

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು; ಸಿಎಂ, ಡಿಸಿಎಂಗೆ ಸಮನ್ಸ್‌

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಾಚಾರದ ರೇಟ್ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ವಿಚಾರಣೆಗೆ ಹಾಜರಾಗಲು ಜನಪ್ರತಿನಿಧಿಗಳ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿದೆ. ಏಪ್ರಿಲ್ 29ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಕೋರ್ಟ್‌ ಸೂಚಿಸಿದೆ.

VISTARANEWS.COM


on

40 per cent commission advertisement against BJP and Summons to CM Siddaramaiah and DCM DK Shivakumar
Koo

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆ ಚುನಾವಣೆ (Karnataka Assembly Elections 2023) ವೇಳೆ 40 ಪರ್ಸೆಂಟ್‌ ಕಮಿಷನ್ (40 percent commission) ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಸಮನ್ಸ್​ ಜಾರಿ ಮಾಡಿದೆ.

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಾಚಾರದ ರೇಟ್ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಸಮನ್ಸ್ ನೀಡಿದೆ. ಏಪ್ರಿಲ್ 29ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕೋರ್ಟ್‌ ಪೊಲೀಸರಿಗೆ ಸೂಚನೆ ನೀಡಿದೆ. ಡಿಸಿಎಂಗೆ ಸಮನ್ಸ್ ಜಾರಿ ಮಾಡಲು ಸದಾಶಿವನಗರ ಪೊಲೀಸರಿಗೆ ಸೂಚನೆ ನೀಡಿದರೆ, ಸಿಎಂಗೆ ಸಮನ್ಸ್ ಜಾರಿ ಮಾಡಲು ಹೈಗ್ರೌಂಡ್ಸ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ಜೂ. 1ಕ್ಕೆ ಹಾಜರಾಗಲು ರಾಹುಲ್‌ಗೆ ಸೂಚನೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ನಿಮಿತ್ತ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸಮಯ ವಿನಾಯಿತಿ ನೀಡಬೇಕು ಎಂದು ಕೋರ್ಟ್‌ಗೆ ಪರ ವಕೀಲರು ಅರ್ಜಿ ಸಲ್ಲಿಸಿದರು. ಹೀಗಾಗಿ ರಾಹುಲ್ ಗಾಂಧಿ ಅವರು ಜೂನ್ 1ರಂದು ಕೋರ್ಟ್‌ಗೆ ಹಾಜರಾಗುವಂತೆ ನ್ಯಾ.ಜೆ. ಪ್ರೀತ್ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

ಜಾಹೀರಾತು ವಿರುದ್ಧ ದೂರು ನೀಡಿದ್ದ ಬಿಜೆಪಿ

ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಭ್ರಷ್ಟಾಚಾರ ಮಾಡಿದೆ ಎಂದು ಕಾಂಗ್ರೆಸ್‌ ಜಾಹೀರಾತು ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿತ್ತು. ಕೆಪಿಸಿಸಿ ಹಾಗೂ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ರಾಜ್ಯ ಕಾರ್ಯದರ್ಶಿ ಎಸ್‌. ಶಿವಪ್ರಸಾದ್‌ ಖಾಸಗಿ ದೂರು ಸಲ್ಲಿಸಿದ್ದರು. ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ರಾಹುಲ್‌ ಗಾಂಧಿ, ಕೆಪಿಸಿಸಿ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು. ಈಗ ಈ ಅರ್ಜಿಯ ವಿಚಾರಣೆ ನಡೆಯುತ್ತಿದೆ.

ಬಿಜೆಪಿಗೆ ಡ್ಯಾಮೇಜ್‌ ಮಾಡಿದ್ದ 40 ಪರ್ಸೆಂಟ್‌ ಅಭಿಯಾನ

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ 40 ಪರ್ಸೆಂಟ್‌ ಅಭಿಯಾನ ಮಾಡಿದ್ದರಿಂದ ಬಿಜೆಪಿಗೆ ಭಾರಿ ಡ್ಯಾಮೇಜ್‌ ಆಗಿತ್ತು. ಈ ಸಂಬಂಧ ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟರ್‌ಗಳನ್ನು ಹರಿಬಿಡಲಾಗಿತ್ತು. ಅಲ್ಲದೆ, ಬೀದಿಗಳಲ್ಲಿ ಪೋಸ್ಟರ್‌ ಅಂಟಿಸಲಾಗಿತ್ತು. ಈ ಸಂಬಂಧ ಮೊಬೈಲ್‌ಗಳಲ್ಲಿ ಆಡಿಯೊ ಜಾಹೀರಾತು ಸೇರಿದಂತೆ ಟಿವಿ, ಪೇಪರ್‌ಗಳಲ್ಲಿ ಜಾಹೀರಾತುಗಳನ್ನು ನೀಡಲಾಗಿತ್ತು. ಈ ಸಂಬಂಧ ಬಿಜೆಪಿ ಕೋರ್ಟ್‌ ಮೆಟ್ಟಿಲೇರಿದ್ದರಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈಗ ಖುದ್ದು ಹಾಜರಾಗುವಂತೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್​​​ಗೆ ಸಮನ್ಸ್‌ ಜಾರಿ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಈಗ ಪ್ರತಿಕ್ರಿಯೆ ನೀಡಿದ್ದು, ವಕೀಲರು ಸೂಕ್ತ ಉತ್ತರ ನೀಡಲಿದ್ದಾರೆ. ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು ಎಂದು ಹೇಳಿದ್ದಾರೆ.

Continue Reading
Advertisement
SSLC Students Fighting
ಬೆಂಗಳೂರು5 mins ago

SSLC Students Fight: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹೊಡಿಬಡಿ; ಮೂವರಿಗೆ ಚಾಕು ಇರಿತ

RCB team
ಕ್ರೀಡೆ25 mins ago

IPL 2024 : ಕೊಹ್ಲಿ- ಗಂಭೀರ್ ಮುಖಾಮುಖಿಯಲ್ಲಿ ವಿಜಯ ಯಾರಿಗೆ?

toll hike
ಬೆಂಗಳೂರು32 mins ago

Toll Hike: ಮತ್ತೆ ಟೋಲ್‌ ಬರೆ; ಬೆಂಗಳೂರು-ಮೈಸೂರು ಓಡಾಟ ಇನ್ನಷ್ಟು ದುಬಾರಿ

Arvind Kejriwal
ದೇಶ48 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ತಪ್ಪದ ಸಂಕಷ್ಟ; ಇನ್ನೂ 4 ದಿನ ಜೈಲೇ ಗತಿ!

CM Siddaramaiah hugs DK Suresh in Bangalore Rural Lok Sabha constituency election campaign
Lok Sabha Election 202455 mins ago

Lok Sabha Election 2024: ಕಷ್ಟಕ್ಕೆ ಸ್ಪಂದಿಸುವ ಡಿಕೆಸು ಬೇಕೋ? ವೈಟ್‌ ಕಾಲರ್‌ ಡಾ. ಮಂಜುನಾಥ್‌ ಬೇಕೋ? ಸಿಎಂ ಪ್ರಶ್ನೆ

Mudhol Movie Sanjana
ಸ್ಯಾಂಡಲ್ ವುಡ್58 mins ago

Mudhol Movie: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನ ಜತೆ ಸಂಜನಾ ರೊಮ್ಯಾನ್ಸ್!

narendra modi
ದೇಶ1 hour ago

ಮೋದಿ ಅವರ ಡೀಸೆಲ್ ಚಾಲಿತ ವಿಶೇಷ ವಾಹನಗಳ ನೋಂದಣಿ ವಿಸ್ತರಣೆ ತಿರಸ್ಕರಿಸಿದ ಎನ್‌ಜಿಟಿ; ಕಾರಣವೇನು?

Varun Gandhi
ಪ್ರಮುಖ ಸುದ್ದಿ2 hours ago

Varun Gandhi: ಸಂಸದ ಅಲ್ಲದಿದ್ದರೂ ನಿಮ್ಮ ಮಗ; ಜನಕ್ಕೆ ಟಿಕೆಟ್‌ ವಂಚಿತ ವರುಣ್‌ ಗಾಂಧಿ ಭಾವುಕ ಪತ್ರ!

supreme court CJI DY chandrachud
ಪ್ರಮುಖ ಸುದ್ದಿ2 hours ago

CJI DY Chandrachud: 600 ವಕೀಲರಿಂದ ಮುಖ್ಯ ನ್ಯಾಯಮೂರ್ತಿಗೆ ಪತ್ರ; ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ಬಗೆಗೆ ಕಳವಳ

40 per cent commission advertisement against BJP and Summons to CM Siddaramaiah and DCM DK Shivakumar
ರಾಜಕೀಯ2 hours ago

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು; ಸಿಎಂ, ಡಿಸಿಎಂಗೆ ಸಮನ್ಸ್‌

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20243 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20244 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ12 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ1 day ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ2 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌