DCM DK Shivakumar says govt extends property tax rebate window for a monthProperty Tax: ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ಡಿ.ಕೆ. ಶಿವಕುಮಾರ್‌ ಬಂಪರ್‌ ಗಿಫ್ಟ್‌ ಘೋಷಣೆ Vistara News
Connect with us

ಕರ್ನಾಟಕ

Property Tax: ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ಡಿ.ಕೆ. ಶಿವಕುಮಾರ್‌ ಬಂಪರ್‌ ಗಿಫ್ಟ್‌ ಘೋಷಣೆ

ಬೆಂಗಳೂರಿನ ಅಭಿವೃದ್ಧಿ ಕುರಿತು ಚರ್ಚಿಸಲು ಸೋಮವಾರ ಬೆಂಗಳೂರಿನ ಎಲ್ಲ ಪಕ್ಷದ ಶಾಸಕರ ಸಭೆ ಕರೆಯುತ್ತಿದ್ದೇನೆ. ಆ ಮೇಲೆ ನಮ್ಮ ಪಕ್ಷದ ಶಾಸಕರ‌ ಪ್ರತ್ಯೇಕ ಸಭೆ ಕರೆಯುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

Congress Former Mayors Meeting with DK Shivakumar
Koo

ಬೆಂಗಳೂರು: ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಿಹಿಸುದ್ದಿ ನೀಡಿದ್ದಾರೆ. ಅನೇಕ ದಿನಗಳಿಂದ ಬೆಂಗಳೂರಿನ ಆಸ್ತಿ ಮಾಲೀಕರ ಆಗ್ರಹವನ್ನು ಒಪ್ಪಿದ್ದಾರೆ.

ಇಡೀ ವರ್ಷದ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಕಟ್ಟುವವರಿಗೆ ಶೇ.5 ವಿನಾಯಿತಿಯನ್ನು ಮೇ 31ರವರೆಗೆ ಬಿಬಿಎಂಪಿ ನೀಡಿತ್ತು. ಆದರೆ ಈ ಸಮಯದಲ್ಲಿ ಚುನಾವಣೆ ಕಾವು ಇದ್ದಿದ್ದರಿಂದ ಅನೇಕರು ಆಸ್ತಿ ತೆರಿಗೆ ಪಾವತಿಸಿರಲಿಲ್ಲ.

ಹಾಗಾಗಿ ಮತ್ತೊಂದು ತಿಂಗಳು ಈ ಅವಕಾಶವನ್ನು ವಿಸ್ತರಿಸಬೇಕು ಎಂದು ಅನೇಕರು ಒತ್ತಾಯ ಮಾಡಿದ್ದರು. ಬಿಬಿಎಂಪಿ ಆಡಳಿತದ ಕುರಿತು ಕಾಂಗ್ರೆಸ್‌ನ ಮಾಜಿ ಮೇಯರ್‌ಗಳ ಜತೆಗೆ ಡಿ.ಕೆ. ಶಿವಕುಮಾರ್‌ ಸಭೆ ನಡೆಸಿದ ನಂತರ ಈ ಕುರಿತು ಘೋಷಣೆ ಮಾಡಿದರು.

ಮೇ 31ರವರೆಗೆ ಇದ್ದ ತೆರಿಗೆ ವಿನಾಯಿತಿ ಅವಕಾಶವನ್ನು ಜೂನ್‌ 30ರವರೆಗೆ ವಿಸ್ತರಣೆ ಮಾಡಲಾಗಿದೆ. ಎಲ್ಲ ಮಾಜಿ ಮೇಯರ್‌ಗಳು ಹೇಳಿದ್ದರಿಂದ ಈ ಘೋಷಣೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಬೆಂಗಳೂರಿನ ಮಾಜಿ ಮೇಯರ್‌ ಸಭೆ ನಡೆಸಿದ್ದೇನೆ. ಬೆಂಗಳೂರನ್ನ ಯಾವ ರೀತಿ ಅಭಿವೃದ್ಧಿ ಮಾಡಬಹುದು ಅಂತ ಸಲಹೆ ಕೇಳಿದ್ದೇನೆ. ರಿಂಗ್‌ರೋಡ್‌ಗಳಲ್ಲಿ ತ್ಯಾಜ್ಯ ರಸ್ತೆ ಬದಿ ಹಾಕುತ್ತಿದ್ದಾರೆ. ಕೆರೆಗಳಿಗೆ, ಚರಂಡಿಗಳಿಗೆ ಕಸ ಸೆಯುತ್ತಿದ್ದಾರೆ. ಸಂಬಂಧ ಅನೇಕ ಸಲಹೆ ಕೇಳಿದ್ದಾರೆ.

ಸೋಮವಾರ ಬೆಂಗಳೂರಿನ ಎಲ್ಲ ಪಕ್ಷದ ಶಾಸಕರ ಸಭೆ ಕರೆಯುತ್ತಿದ್ದೇನೆ. ಆ ಮೇಲೆ ನಮ್ಮ ಪಕ್ಷದ ಶಾಸಕರ‌ ಪ್ರತ್ಯೇಕ ಸಭೆ ಕರೆಯುತ್ತೇನೆ. ಎಲ್ಲರನ್ನ ವಿಶ್ವಾಸಕ್ಕೆ ಪಡೆಯಲು ಅದು ಆಂತರಿಕ ಸಭೆ ನಡೆಸುತ್ತೇನೆ. ಮಾಜಿ ಮೇಯರ್‌ಗಳು, ನಮ್ಮ ಸರ್ಕಾರ ಬಂದಿದೆ, ಬೆಂಗಳೂರಿನ ಜನತೆಗೆ ಏನಾದ್ರೂ ಗಿಫ್ಟ್ ಕೊಡಿ ಅಂದ್ರು. ಅದಕ್ಕಾಗಿ ಮೇ 30 ರವರೆಗೆ ಇದ್ದ ತೆರಿಗೆ ವಿನಾಯ್ತಿಯನ್ನ ಜೂನ್ 30 ರವರೆಗೆ ವಿಸ್ತರಣೆ ಮಾಡಿದ್ದೇವೆ. ಜೂನ್ 30 ರವರೆಗೆ ಟ್ಯಾಕ್ಸ್ ಪೇ 5% ಡಿಸ್ಕೌಂಟ್ ಎಂದರು.

ಇದನ್ನೂ ಓದಿ: BBMP Election: ಬಿಬಿಎಂಪಿ ಎಲೆಕ್ಷನ್‌ಗೆ ಸಿದ್ಧತೆ ಆರಂಭಿಸಿದ ಕಾಂಗ್ರೆಸ್‌; ಪೂರ್ವತಯಾರಿ ಸಮಿತಿ ರಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

karnataka weather forecast : ಮುಕ್ಕಾಲು ಜಿಲ್ಲೆಗೆ ಕೈಕೊಟ್ಟ ಮಳೆರಾಯ; ಮತ್ತೆ ಮುಂಗಾರು ದುರ್ಬಲ

Rain News : ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ (karnataka weather forecast) ನಿರೀಕ್ಷೆ ಇದೆ. ಉಳಿದಂತೆ ಒಣ ಹವೆ ಇರಲಿದೆ.

VISTARANEWS.COM


on

Edited by

No Rain Girl waiting For rain and holding Umbrella
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಸಕ್ರಿಯವಾಗಿದ್ದ ಮುಂಗಾರು ರಾಜ್ಯದಲ್ಲಿ (karnataka weather forecast) ಮತ್ತೆ ದುರ್ಬಲಗೊಂಡಿದೆ. ಅಕ್ಟೋಬರ್‌ ಮೊದಲ ವಾರದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇದೀಗ ವರುಣ ಕೈಕೊಟ್ಟಿದ್ದಾನೆ. ಮುಂದಿನ 24 ಗಂಟೆಯಲ್ಲಿ ಒಣ ಹವೆ ಇರಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರು, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಒಣಹವೆ ಮೇಲುಗೈ ಸಾಧಿಸುತ್ತದೆ. ಬೆಂಗಳೂರು ನಗರ ಪ್ರದೇಶದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಬದಲಿಗೆ ಒಣಹವೆ ಇರಲಿದೆ.

ಇದನ್ನೂ ಓದಿ: Mangaluru News : ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದು ಮಹಿಳೆ ಸಾವು

ಉತ್ತರ ಒಳನಾಡಲ್ಲಿ ಲಘು ಮಳೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಾವೇರಿ, ಗದಗ, ವಿಜಯನಗರ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಗುಡುಗು ಮಳೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದ ಮಳೆ ಸುರಿಯಬಹುದು.

ಇನ್ನು ರಾಜ್ಯದಲ್ಲಿ ಸೋಮವಾರ ಕಲಬುರಗಿಯ ಅಡಕಿಯಲ್ಲಿ 3 ಸೆಂ.ಮೀ, ಮುಧೋಳದಲ್ಲಿ 2 ಸೆಂ.ಮೀ ಹಾಗೂ ಉತ್ತರ ಕನ್ನಡದ ಕದ್ರಾ, ಮಂಕಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Kuruba Conference: ಬೆಳಗಾವಿಯಲ್ಲಿ ಬೃಹತ್‌ ಕುರುಬ ಸಮಾವೇಶದ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಶಕ್ತಿ ಪ್ರದರ್ಶನ

Kuruba Conference: ಬೆಳಗಾವಿಯಲ್ಲಿ ಶೆಫರ್ಡ್ಸ್‌ ಇಂಡಿಯಾ ಇಂಟರ್ ನ್ಯಾಷನಲ್‌ನ 9ನೇ ರಾಷ್ಟ್ರೀಯ ಸಮಾವೇಶ ಮಂಗಳವಾರ ನಡೆಯಿತು. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕುರುಬ ನಾಯಕರು, ಸ್ವಾಮೀಜಿಗಳು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು.

VISTARANEWS.COM


on

Edited by

Siddaramaiah felicitated at Shepherds India International Conference
Koo

ಬೆಳಗಾವಿ: ಕಾಂಗ್ರೆಸ್‌ನಲ್ಲಿ ಲಿಂಗಾಯತ ಸಿಎಂ ಮತ್ತು ಮೂವರು ಡಿಸಿಎಂಗಳನ್ನು ಮಾಡಬೇಕು ಎಂಬ ಕೂಗು ಎದ್ದಿರುವ ಹೊತ್ತಿನಲ್ಲಿ ಸಿದ್ದರಾಮೋತ್ಸವ ಮಾದರಿಯಲ್ಲಿ ಬೃಹತ್ ಕುರುಬ ಸಮಾವೇಶ (Kuruba Conference) ನಡೆಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಪಕ್ಷದಲ್ಲಿ ಒಳಬೇಗುದಿಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ರಮುಖ ಕುರುಬ ನಾಯಕರಾಗಿರುವ ಸಿದ್ದರಾಮಯ್ಯ ಅವರ ರಾಜಕೀಯ ವಿರೋಧಿಗಳಿಗೆ ನೇರ ಸಂದೇಶ ರವಾನಿಸುವ ರೀತಿಯಲ್ಲಿ ಇಲ್ಲಿನ ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಮಂಗಳವಾರ ಶೆಫರ್ಡ್ಸ್‌ ಇಂಡಿಯಾ ಇಂಟರ್ ನ್ಯಾಷನಲ್‌ನ 9ನೇ ರಾಷ್ಟ್ರೀಯ ಸಮಾವೇಶ ಆಯೋಜಿಸಲಾಗಿತ್ತು. ಇದರಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕುರುಬ ನಾಯಕರು, ಸ್ವಾಮೀಜಿಗಳು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಗಣ್ಯರು ಸನ್ಮಾನ ಮಾಡಿದರು.

ಕುರುಬ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಹೆಚ್ಚಳದ ಬೇಡಿಕೆ ಸಮಾವೇಶದ ಪ್ರಮುಖ ಉದ್ದೇಶವಾಗಿತ್ತು. ಇನ್ನು ಸಮಾವೇಶದಲ್ಲಿ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರು ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

Siddaramaiah in Kuruba Conference

ಇದನ್ನೂ ಓದಿ | Caste Census Report : ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಬಿಡುಗಡೆ ಮಾಡಲಿ ಎಂದ ಬಿ.ಕೆ. ಹರಿಪ್ರಸಾದ್

ಸಭೆಯಲ್ಲಿ ಸರ್ಕಾರಕ್ಕೆ 7 ಬೇಡಿಕೆಗಳು

1) ಜಾತಿವಾರು ಜನಗಣತಿ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು.

2) ರಾಷ್ಟ್ರ ಮಟ್ಟದಲ್ಲಿ ಕುರುಬರ ಆರ್ಥಿಕ, ಸಮಾಜಿಕ ಸಮೀಕ್ಷೆ ನಡೆಸಬೇಕು.

3) ರಾಷ್ಟ್ರದಲ್ಲಿ ಇರುವ ಎಲ್ಲಾ ಕುರುಬರನ್ನು ಎಸ್‌ಟಿ ಸಮಾಜಕ್ಕೆ ಸೇರಿಸಬೇಕು.

4) ಕೇಂದ್ರ ಮಹಿಳಾ ಮೀಸಲಾತಿಗೆ ಸ್ವಾಗತ. ಹಿಂದುಳಿದ ಮಹಿಳೆಯರಿಗೆ ಒಳ ಮೀಸಲಾತಿ ‌ನೀಡಬೇಕು.

5) ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ನಂದಗಡ ಗ್ರಾಮವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಣೆ ಮಾಡಬೇಕು.

6) ಕುರಿ ಮೇಯಿಸಲು ಕಂದಾಯ ಭೂಮಿಯನ್ನು ಕಾಯ್ದಿರಿಸಬೇಕು. ಸಂಚಾರಿ ಆಸ್ಪತ್ರೆ, ಸಂಚಾರಿ ಶಾಲೆಗಳನ್ನು ಆರಂಭಿಸಬೇಕು. ಹಾನಿಗೆ ಒಳಗಾದ ಕುರಿಗಳಿಗೆ ಪರಿಹಾರ ನೀಡಬೇಕು.

7) ಕುರಿ, ಮೇಕೆ ಮಹಾಮಂಡಳಕ್ಕೆ 100 ಕೋಟಿ ರೂಪಾಯಿ ಕೊಡಬೇಕು.

ಜಾತಿ ರಾಜಕಾರಣ ಮಾಡಲ್ಲ, ಸಾಮಾಜಿಕ ನ್ಯಾಯ ನನ್ನ ಉಸಿರು: ಸಿದ್ದರಾಮಯ್ಯ

CM Siddaramaiah

ಸಮಾಜದ ಎಲ್ಲಾ ಜಾತಿ-ವರ್ಗದ ಜನಗಳು ಸಂಘಟಿತರಾಗಿ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಬೇಕು. ನಾನು ಯಾವತ್ತೂ ಜಾತಿ ಮಾಡುವವನಲ್ಲ. ಸಾಮಾಜಿಕ ನ್ಯಾಯ ನನ್ನ ಉಸಿರು. ಅವಕಾಶ ವಂಚಿತ ಜಾತಿಗಳ ಜನ ತಮ್ಮ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತ ಸಮಾವೇಶ ನಡೆಸುವುದು ತಪ್ಪಲ್ಲ ಎಂದು ಸಮಾಜವಾದಿ ನಾಯಕ ರಾಮಮನೋಹರ ಲೋಹಿಯಾ ಹೇಳಿದ್ದರು. ಅದರಂತೆ ಈ ಸಮಾವೇಷ ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ನಾನು ಈ ಜಾತಿ ವ್ಯವಸ್ಥೆಗೆ ಯಾವತ್ತಿದ್ದರೂ ವಿರುದ್ಧ. ಆದರೆ, ಅಶಕ್ತ ಜನ ಸಮುದಾಯಗಳು ತಮ್ಮ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತರಾಗುವುದು ತಪ್ಪಲ್ಲ ಎಂದು ನಂಬಿದ್ದೇನೆ. ಅಶಕ್ತ ಸಮುದಾಯಗಳು ಸಂಘಟಿತರಾಗದೇ ಇರುವುದರಿಂದ ಮತ್ತು ತಮ್ಮಲ್ಲಿ ನಾಯಕತ್ವ ಬೆಳೆಸಿಕೊಳ್ಳದೇ ಇರುವುದರಿಂದ ಅವರ ಪಾಲಿನ ಹಕ್ಕುಗಳು ಮತ್ತು ರಾಜಕೀಯ ಅಧಿಕಾರದಿಂದ ವಂಚಿತವಾಗಿವೆ ಎಂದು ವಿವರಿಸಿದರು.

ನಮ್ಮ ಸಮುದಾಯಕ್ಕೆ ರಾಜಕೀಯ ಇತಿಹಾಸ ಇದೆ. ಸಾಂಸ್ಕೃತಿಕ ಭವ್ಯತೆ ಇದೆ. ಹಕ್ಕ ಬುಕ್ಕರಿಂದ ಹಿಡಿದು ಅಹಲ್ಯಾಬಾಯಿ ಹೋಳ್ಕರ್‌ವರೆಗೂ ನಮಗೊಂದು ಚರಿತ್ರೆ ಇದೆ. ಆದರೆ, ಸಂಘಟನೆ ಇಲ್ಲದಿದ್ದರಿಂದ ನಮಗೆ ಸಲ್ಲಬೇಕಾಗಿದ್ದು ಸಲ್ಲುತ್ತಿರಲಿಲ್ಲ. ಸಂಘಟನೆ ಇಲ್ಲದಿದ್ದರೆ ಕಾಗಿನೆಲೆ ಗುರುಪೀಠ, ಸಂಸ್ಥಾನ ಆಗುತ್ತಿರಲಿಲ್ಲ. ಕಾಗಿನೆಲೆ ಪೀಠ ಒಂದು ಜಾತಿಯ ಮಠ ಅಲ್ಲ. ಎಲ್ಲಾ ಶೋಷಿತ ಸಮುದಾಯಗಳಿಗೆ ಸೇರಿದ್ದು ಕಾಗಿನೆಲೆ ಪೀಠ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ | Karnataka Politics : ಬಿಜೆಪಿಗೆ ಚಿಲುಮೆ ತಂದ ಸಂಕಟ! ರಾಜ್ಯ ಸರ್ಕಾರದಿಂದ ಮತ್ತೊಂದು ತನಿಖಾಸ್ತ್ರ

ಪ್ರತಿ ಸಮುದಾಯಗಳು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಬೆಳೆದರೆ ಮಾತ್ರ ಸಮಸಮಾಜದ ನಿರ್ಮಾಣ ಸಾಧ್ಯ. ಎಲ್ಲರಿಗೂ ಅವರವರ ಪಾಲಿನ ಅಧಿಕಾರ, ಅವಕಾಶ ಸಿಗಬೇಕು. ಈ ಸಾಮಾನ್ಯ ಜ್ಞಾನ ನಮ್ಮನ್ನು ಟೀಕಿಸುವವರಿಗೆ ಇಲ್ಲವಾಗಿದೆ ಎಂದರು.

ನಮ್ಮದು ಹೇಳಿ ಕೇಳಿ ಜಾತಿ ಮತ್ತು ತಾರತಮ್ಯದಿಂದ ಕೂಡಿರುವ ಸಮಾಜ. ಹೀಗಾಗಿ ಅವಕಾಶಗಳ ಹಂಚಿಕೆಯಲ್ಲೂ ತಾರತಮ್ಯ ಇರುತ್ತದೆ. ಇವನ್ನೆಲ್ಲಾ ಸರಿದೂಗಿಸಬೇಕಾದರೆ ಸಂಘಟನೆ, ಸಮಾವೇಶಗಳು ಅಗತ್ಯ ಎಂದ ಅವರು, ನಾನು ರೂಪಿಸಿದ ಐದು ಗ್ಯಾರಂಟಿ ಯೋಜನೆಗಳು ಒಂದು ಸಮಾಜಕ್ಕೆ, ಒಂದು ಧರ್ಮಕ್ಕೆ, ಒಂದು ಜಾತಿಗೆ ಸೀಮಿತವಾದವುಗಳಲ್ಲ. ಸರ್ವ ಜಾತಿ ಜನಗಳ ಬದುಕಿಗೆ ಅನುಕೂಲ ಕಲ್ಪಿಸುತ್ತಿವೆ ಎಂದು ಮುಖ್ಯಮಂತ್ರಿಗಳು ಉದಾಹರಿಸಿದರು.

ಕಾಗಿನೆಲೆ ಕನಕ ಗುರು ಪೀಠದ ಶ್ರೀ ನಿರಂಜನಾನಂದ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಸಿದ್ದರಾಮಾನಂದಪುರಿ ಸ್ವಾಮೀಜಿ ಹಾಗೂ ಅರ್ಜುನಾಭಾಯಿಪುರಿ ಸ್ವಾಮೀಜಿಯವರುಗಳ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.

ಹರಿಯಾಣದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸಮಾವೇಷ ಉದ್ಘಾಟಿಸಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್‌ನ ಅಧ್ಯಕ್ಷ ಮಾಜಿ ಮಂತ್ರಿ ಎಚ್.ವಿಶ್ವನಾಥ್ ಅವರು ವಹಿಸಿದ್ದರು.

ಇದನ್ನೂ ಓದಿ | Lingayat CM : ರಾಜ್ಯದಲ್ಲಿ 3 ಲಿಂಗಾಯತ ಡಿಸಿ, 7 ಎಸ್ಪಿ ಇದಾರೆ; ಶಾಮನೂರು ಹೇಳಿಕೆ 100% ತಪ್ಪು ಎಂದ ರಾಯರೆಡ್ಡಿ

ಮುಖ್ಯ ಅತಿಥಿಗಳಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿಯ ರಾಜ್ಯ ಸಚಿವ ಫಗ್ಗಾನ್ ಸಿಂಗ್ ಕುಲಾಸ್ತೆ, ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗೋವಾ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಚಂದ್ರಕಾಂತ್ ಬಾಬು ಕಾವಲೇಕರ್, ಮಹಾರಾಷ್ಟ್ರ ರಾಜ್ಯದ ಮಾಜಿ ಸಚಿವ ಮಹದೇವ್ ಜನಕಾರ್, ದತ್ತಾತ್ರೇಯ ಭರ್ನೆ, ರಾಮ ಶಂಕರ್ ಶಿಂದೆ, ಶೆಫರ್ಡ್ ಇಂಟರ್ ನ್ಯಾಷನಲ್ ಉಪಾಧ್ಯಕ್ಷ ಎಚ್.ಎಂ.ರೇವಣ್ಣ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ಆಂಧ್ರ. ಪ್ರದೇಶ ರಾಜ್ಯದ ಸಚಿವೆ ಕೆ.ವಿ.ಉಷಾಶ್ರೀ ಚರಣ್, ಮಾತಾ ಅಹಿಲ್ಯಾಬಾಯಿ ಹೋಳ್ಕರ್ ಅವರ ಮೊಮ್ಮಗ ಭೂಷಣ್ ರಾಜೆ ಹೋಳ್ಕರ್, ಗುಜರಾತ್ ರಾಜ್ಯದ ಮುಖಂಡರಾದ ಸಾಗರ್ ರಾಯ್ಕ ಸೇರಿ 60ಕ್ಕೂ ಹೆಚ್ಚು ಮಂದಿ ನಾನಾ ರಾಜ್ಯಗಳ ಕುರುಬ ಮತ್ತು ಗೋಪಾಲಕ ಸಮುದಾಯಗಳ ಮುಖಂಡರು ಭಾಗವಹಿಸಿದ್ದರು.

.

Continue Reading

ಕರ್ನಾಟಕ

Shivamogga Violence : ಎನ್‌ಕೌಂಟರ್‌ ಸುದ್ದಿ ಸುಳ್ಳು, ಮುಸ್ಲಿಮರು ಬಳಸಿದ್ದು ಆಟಿಕೆ ತಲವಾರ್‌ ಎಂದ ಎಸ್ಪಿ

Shivamogga Violence : ಶಿವಮೊಗ್ಗದಲ್ಲಿ ಪೊಲೀಸ್‌ ಎನ್‌ಕೌಂಟರ್‌ ನಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಆರೋಪಿ ಮೇಲೆ ಪೊಲೀಸರು ಎಫ್‌ಐಆರ್‌ ಹಾಕಿದ್ದಾರೆ. ಜತೆಗೆ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಬಳಸಿದ್ದು ಒರಿಜಿನಲ್‌ ತಲವಾರು ಅಲ್ಲ ಎಂದಿದ್ದಾರೆ.

VISTARANEWS.COM


on

Edited by

Shivamogga encounter Fake News
Koo

ಶಿವಮೊಗ್ಗ: ಶಿವಮೊಗ್ಗದಲ್ಲಿ ಪೊಲೀಸರು ಎನ್‌ಕೌಂಟರ್‌ (Police Encounter) ಮಾಡಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು (Fake News) ಹರಡಿಸಲಾಗುತ್ತಿದೆ. ನಮ್ಮಲ್ಲಿ ಯಾವುದೇ ಎನ್‌ಕೌಂಟರ್‌ ನಡೆದಿಲ್ಲ ಎಂದು ಶಿವಮೊಗ್ಗ ಎಸ್‌ಪಿ ಮಿಥುನ್‌ ಕುಮಾರ್‌ (Shivamogga SP Mithun Kumar) ಸ್ಪಷ್ಟಪಡಿಸಿದ್ದಾರೆ. ಈ ರೀತಿಯಾದ ಸುಳ್ಳು ಸುದ್ದಿಯನ್ನು ಫಾರ್ವರ್ಡ್‌ ಮಾಡಿ ಸಮಾಜದಲ್ಲಿ ಅಶಾಂತಿ ಹರಡಿಸುವ ಪ್ರಯತ್ನ ನಡೆಸಿದ ಅಜ್ಗರ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ತಿಳಿಸಿದರು. ಇದೇ ವೇಳೆ ಮುಸ್ಲಿಮರ ಮೆರವಣಿಗೆಯಲ್ಲಿ (Muslims Procession) ಬಳಸಿದ್ದು ಆಟಿಕೆಯ ತಲವಾರ್‌ (Toy Talwar) ಎಂದು ಅವರು ಸ್ಪಷ್ಟಪಡಿಸಿದರು.

ಶಿವಮೊಗ್ಗ ಪೊಲಿಸರು ಒಬ್ಬ ಆರೋಪಿಯನ್ನು ಎನ್‌ಕೌಂಟರ್‌ ಮಾಡಿದ್ದಾರೆ ಎಂದು ಹೇಳುವ ಚಿತ್ರ, ವರದಿ, ವಿಡಿಯೊಗಳು ಬೆಳಗ್ಗಿನಿಂದ ಹರಿದಾಡುತ್ತಿದ್ದವು. ಇದು ರಾಜ್ಯ ಮಾತ್ರವಲ್ಲ ಹೊರ ರಾಜ್ಯಗಳಲ್ಲೂ ಸದ್ದು ಮಾಡಿತ್ತು. ಕೂಡಲೇ ಎಚ್ಚೆತ್ತುಕೊಂಡ ಶಿವಮೊಗ್ಗ ಪೊಲೀಸರು ಶಿವಮೊಗ್ಗದಲ್ಲಿ ಈ ಫೋಟೊ ಮತ್ತು ಸುದ್ದಿ ಹರಡಲು ಯಾರು ಕಾರಣ ಎಂದು ಹುಡುಕಾಡಿದರು. ಕೊನೆಗೆ ಈ ಚಿತ್ರ ಮತ್ತು ವರದಿಯನ್ನು ಫಾರ್ವರ್ಡ್‌ ಮಾಡಿದ್ದು ಅಜ್ಗರ್‌ ಎಂಬಾತ ಎಂದು ತಿಳಿದುಬಂತು. ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇಷ್ಟು ಮಾತ್ರವಲ್ಲ, ಯಾರೆಲ್ಲ ಈ ಸುಳ್ಳು ಸುದ್ದಿಯನ್ನು ಫಾರ್ವರ್ಡ್‌ ಮಾಡಿದ್ದಾರೋ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಸ್‌ಪಿ ಮಿಥುನ್‌ ಕುಮಾರ್‌ ತಿಳಿಸಿದರು. ಫಾರ್ವರ್ಡ್ ಆಗಿದ್ದ ವಿಡಿಯೋ ಡಿಲಿಟ್ ಮಾಡಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಯಾರೂ ವದಂತಿಗಳಿಗೆ ಕಿವಿಗೊಡಬೇಡಿ ಎಂದ ಎಸ್‌ಪಿ

ʻʻಶಿವಮೊಗ್ಗದಲ್ಲಿ ಈಗ ಪರಿಸ್ಥಿತಿ ಶಾಂತವಾಗಿದೆ. ಸಹಜ ಸ್ಥಿತಿ ಮರುಕಳಿಸಿದೆ. ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ 24 ಕೇಸು ದಾಖಲಾಗಿದೆ. ಒಟ್ಟು 60 ಜನರನ್ನು ಬಂಧಿಸಲಾಗಿದೆ. ಎಲ್ಲೆಡೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಯಾರೂ ಕೂಡ ವದಂತಿಗೆ ಕಿವಿಗೊಡಬೇಡಿ. ಸಾರ್ವಜನಿಕರು ಸುಳ್ಳು ಸುದ್ದಿ ನಂಬಬೇಡಿʼʼ ಎಂದು ವಿನಂತಿಸಿರುವ ಎಸ್‌ಪಿ ಮಿಥುನ್‌ ಕುಮಾರ್‌ ಅವರು, ಇನ್ನೂ ಹಲವರನ್ನು ಬಂಧಿಸಲಿದ್ದೇವೆ. ಘಟನೆಗೆ ಕಾರಣರಾದ ಯಾರನ್ನೂ ಬಿಡುವ ಪ್ರಶ್ನೆ ಇಲ್ಲ. ಹೊರಗಿನಿಂದ ಬಂದವರ ತನಿಖೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮಗಳಲ್ಲಿ ಸಾಕ್ಷಿಗಳು ನಮಗೆ ಸಿಕ್ಕಿವೆ. ಯಾರು ಕಾರಣಕರ್ತರಿದ್ದಾರೆ ಅವರ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಯಾರು ತಪ್ಪಿತಸ್ಥರಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಮೆರವಣಿಗೆಯಲ್ಲಿ ಮಚ್ಚು, ಲಾಂಗು ತೋರಿಸಿದವರ ಬಗ್ಗೆ ತನಿಖೆ ನಡೆಯುತ್ತಿದೆʼʼ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: Shivamogga Violence : ಶಿವಮೊಗ್ಗ ಗಲಭೆ ವೇಳೆ ಕಾಣಿಸಿಕೊಂಡ ಹೊರ ಜಿಲ್ಲೆ ಕಾರುಗಳ ರಹಸ್ಯ ಬಯಲು

ಮೆರವಣಿಗೆಯಲ್ಲಿ ಜಳಪಿಸಿದ ಕತ್ತಿ ಒರಿಜಿನಲ್‌ ಅಲ್ಲ, ಆಟಿಕೆ

ಮಚ್ಚು, ಲಾಂಗ್‌ ತೋರಿಸಿದವರ ವಿರುದ್ಧ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು, ಮೆರವಣಿಗೆಯಲ್ಲಿ ಕತ್ತಿಗಳನ್ನು ಝಳಪಿಸಿರುವುದಕ್ಕೆ ಆಕ್ಷೇಪ ಮಾಡಲಾಗಿದೆ. ಆದರೆ, ಕೆಲವು ಕಡೆ ಆಟಿಕೆ ಕತ್ತಿಗಳನ್ನು ತರಲಾಗಿದೆ. ಇದು ಒರಿಜಿನಲ್ ಕತ್ತಿ ಅಲ್ಲ ಎಂಬುದು ತಿಳಿದು ಬಂದಿದೆ. ಆಕಸ್ಮಾತ್ ಒರಿಜಿನಲ್ ಕತ್ತಿ ಎಂದು ಕಂಡು ಬಂದರೆ, ಅಂತಹ ವಿಡಿಯೋ ನನಗೆ ಕಳಿಸಿ. ನಾನು ಪರಿಶೀಲನೆ ನಡೆಸಿ ತಿಳಿಸುತ್ತೇನೆ. ಆದರೆ, ಯಾವುದೇ ಸುಳ್ಳು ಸುದ್ದಿ ವಿಡಿಯೋಗಳನ್ನು ನಂಬಬೇಡಿ ಎಂದು ಅವರು ಹೇಳಿದರು.

ʻʻರಾಗಿಗುಡ್ಡದಲ್ಲಿ ಮೆರವಣಿಗೆ ದಿನ ಎರಡು ಮಾರುತಿ ವ್ಯಾನ್ ಬಂದಿರುವ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಅವರು ನ್ಯಾಮತಿಯಿಂದ ಮೆರವಣಿಗೆ ನೋಡಲು ಬಂದಿದ್ದವರಾಗಿದ್ದರು. ಅವರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ ಜರುಗಿಸಲಾಗುವುದುʼʼ ಎಂದು ಕೂಡಾ ಎಚ್ಚರಿಕೆ ನೀಡಿದರು.

Continue Reading

ಕರ್ನಾಟಕ

Lecturer Death : ಬಿಜಿಎಸ್‌ ಕಾಲೇಜಿನ ಉಪನ್ಯಾಸಕ ನೇಣಿಗೆ ಶರಣು; ಸಾವಿನ ಸುತ್ತ ಅನುಮಾನದ ಹುತ್ತ

Lecturer Death : ಅನುಮಾನಾಸ್ಪದ ರೀತಿಯಲ್ಲಿ ಉಪನ್ಯಾಸಕರೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

Edited by

BGS College lecturer Sudharshan
ಮೃತ ಸುದರ್ಶನ್‌
Koo

ಚಿಕ್ಕಬಳ್ಳಾಪುರ: ಇಲ್ಲಿನ ಅವಲಗುರ್ಕಿ ಗ್ರಾಮದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಉಪನ್ಯಾಸಕರೊಬ್ಬರು (Lecturer Death) ಮೃತಪಟ್ಟಿದ್ದಾರೆ. ಸುದರ್ಶನ್ (25) ಮೃತ ಉಪನ್ಯಾಸಕ.

ಸುದರ್ಶನ್ ಬಾಗೇಪಲ್ಲಿ ಮೂಲದ ನಿವಾಸಿ ಆಗಿದ್ದಾರೆ. ಬಿಜಿಎಸ್ ಕಾಲೇಜಿನಲ್ಲಿ ಗಣಿತ ವಿಭಾಗದ ಉಪನ್ಯಾಸಕನಾಗಿದ್ದರು. ಕಾಲೇಜು ಸಮೀಪದ ಆವಲಗುರ್ಕಿ ಗ್ರಾಮದಲ್ಲೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇದೇ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹವು ಪತ್ತೆಯಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Namma Metro: ಮೆಟ್ರೋ ಟ್ರ್ಯಾಕ್‌ನಲ್ಲಿ ಲಾಕ್‌ ಆದ ಮೆಂಟೈನ್ಸ್‌ ವೆಹಿಕಲ್‌! ಮೇಲೆತ್ತಲು ಕ್ರೇನ್‌ ಬಳಕೆ

ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದ ಮಹಿಳೆ ಸಾವು

ಮಂಗಳೂರು: ಇಲ್ಲಿನ ಸುಳ್ಯ ಬೆಳ್ಳಾರೆ ಸಮೀಪದ ಶೇಣಿ‌ ಎಂಬಲ್ಲಿ ವಿಷಕಾರಿ ಹಣ್ಣಿನ (Poison juice‌) ಜ್ಯೂಸ್ ಕುಡಿದು ಅಸ್ವಸ್ಥಗೊಂಡಿದ್ದ ಮಹಿಳೆಯೊಬ್ಬರು (Mangaluru News) ಮೃತಪಟ್ಟಿದ್ದಾರೆ. ಶೇಣಿಯ ಕುಳ್ಳಾಜೆ ನಿವಾಸಿ ಲೀಲಾವತಿ (35) ಮೃತ ದುರ್ದೈವಿ.

ಲೀಲಾವತಿ ವಾರದ ಹಿಂದೆ ಮೈರೋಲ್ ಎಂಬ ಕಾಡಿನ ಹಣ್ಣು ತಂದಿದ್ದರು. ಆದರೆ ಅದು ಮೈರೋಲ್ ಹಣ್ಣಿನಂತೇ ಹೋಲುವ ವಿಷದ ಹಣ್ಣಾಗಿತ್ತು. ಇದು ತಿಳಿಯದೆ ಆ ಹಣ್ಣಿನಲ್ಲಿ ಜ್ಯೂಸ್‌ ಮಾಡಿ ಲೀಲಾವತಿ ಹಾಗೂ ಆಕೆ ತಂದೆ ಕುಡಿದಿದ್ದರು. ಜ್ಯೂಸ್ ಕುಡಿಯುತ್ತಿದ್ದಂತೆ ಅಸ್ವಸ್ಥಗೊಂಡಿದ್ದರು.

ವಾಂತಿ, ಭೇದಿಯಾಗಿ ಸುಸ್ತು, ಆಯಾಸದಿಂದ ಬಳಲುತ್ತಿದ್ದ ಲೀಲಾವತಿಯನ್ನು ಕೂಡಲೇ ಸುಳ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಜೀವ ಬಿಟ್ಟಿದ್ದಾಳೆ. ಜ್ಯೂಸ್‌ ಕುಡಿದಿದ್ದ ಲೀಲಾವತಿ ತಂದೆಯವರು ಚೇತರಿಸಿಕೊಳ್ಳುತ್ತಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
No Rain Girl waiting For rain and holding Umbrella
ಉಡುಪಿ14 mins ago

karnataka weather forecast : ಮುಕ್ಕಾಲು ಜಿಲ್ಲೆಗೆ ಕೈಕೊಟ್ಟ ಮಳೆರಾಯ; ಮತ್ತೆ ಮುಂಗಾರು ದುರ್ಬಲ

Paris facing bed bugs and France government is trying to tackle crisis
ಪ್ರಮುಖ ಸುದ್ದಿ16 mins ago

Bed Bugs: ಪ್ಯಾರಿಸ್‌ನಲ್ಲಿ ಸಿಕ್ಕಾಪಟ್ಟೆ ತಿಗಣೆ ಕಾಟ! ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಎಂಟ್ರಿ ಕೊಟ್ಟ ಫ್ರಾನ್ಸ್ ಸರ್ಕಾರ

Parul won gold medal in asian Games
ಕ್ರೀಡೆ17 mins ago

Asian Games : ಭಾರತಕ್ಕೆ ಮತ್ತೊಂದು ಚಿನ್ನದ ಪದಕ, 5000 ಮೀಟರ್​ ಓಟದಲ್ಲಿ ಮೊದಲ ಸ್ಥಾನ ಪಡೆದ ಪಾರುಲ್​

Siddaramaiah felicitated at Shepherds India International Conference
ಕರ್ನಾಟಕ29 mins ago

Kuruba Conference: ಬೆಳಗಾವಿಯಲ್ಲಿ ಬೃಹತ್‌ ಕುರುಬ ಸಮಾವೇಶದ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಶಕ್ತಿ ಪ್ರದರ್ಶನ

Shivamogga encounter Fake News
ಕರ್ನಾಟಕ35 mins ago

Shivamogga Violence : ಎನ್‌ಕೌಂಟರ್‌ ಸುದ್ದಿ ಸುಳ್ಳು, ಮುಸ್ಲಿಮರು ಬಳಸಿದ್ದು ಆಟಿಕೆ ತಲವಾರ್‌ ಎಂದ ಎಸ್ಪಿ

boney kapoor
ಬಾಲಿವುಡ್41 mins ago

Boney Kapoor: ನಟಿ ಶ್ರೀದೇವಿ ಸಾವಿನ ಹಿಂದಿನ ಸತ್ಯ ಬಿಚ್ಚಿಟ್ಟ ಪತಿ ಬೋನಿ ಕಪೂರ್! ಅಂದು ಆಗಿದ್ದೇನು?

indvsned practice match
ಕ್ರಿಕೆಟ್43 mins ago

ICC World Cup 2023 : ಭಾರತ- ನೆದರ್ಲ್ಯಾಂಡ್ಸ್​ ​​​ ಅಭ್ಯಾಸ ಪಂದ್ಯವೂ ರದ್ದು

Bhagwant Mann
ದೇಶ56 mins ago

Punjab Debt: 47,107 ಕೋಟಿ ರೂ. ಸಾಲದ ಪೈಕಿ ಅರ್ಧದಷ್ಟು ಬಡ್ಡಿ ಪಾವತಿಗೆ ಬಳಕೆ ಎಂದ ಪಂಜಾಬ್ ಸಿಎಂ

Side Effects Of Bananas
ಆರೋಗ್ಯ1 hour ago

Side Effects Of Bananas: ಬಾಳೆಹಣ್ಣು ಹೆಚ್ಚು ತಿಂದರೆ ಏನಾಗುತ್ತದೆ?

BGS College lecturer Sudharshan
ಕರ್ನಾಟಕ1 hour ago

Lecturer Death : ಬಿಜಿಎಸ್‌ ಕಾಲೇಜಿನ ಉಪನ್ಯಾಸಕ ನೇಣಿಗೆ ಶರಣು; ಸಾವಿನ ಸುತ್ತ ಅನುಮಾನದ ಹುತ್ತ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Karnataka bandh Majestic
ಕರ್ನಾಟಕ1 week ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ3 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ10 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

The maintenance train finally lifted Metro services as usual
ಕರ್ನಾಟಕ3 hours ago

Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್‌ ವೆಹಿಕಲ್‌; ಎಂದಿನಂತೆ ಮೆಟ್ರೋ ಓಡಾಟ

BBK Season 10 KicchaSudeep
ಕಿರುತೆರೆ4 hours ago

BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

dina bhavishya
ಪ್ರಮುಖ ಸುದ್ದಿ14 hours ago

Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!

Actor Nagabhushana
ಕರ್ನಾಟಕ1 day ago

Actor Nagabhushana : ಡ್ರಂಕ್‌ ಆ್ಯಂಡ್‌ ಡ್ರೈವ್‌ನಲ್ಲಿ ನಟ ನಾಗಭೂಷಣ್‌ ನೆಗಟಿವ್‌; ವಿಚಾರಣೆಗೆ ಕರೆದ ಪೊಲೀಸರು

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಆಪ್ತರೊಂದಿಗೆ ಮಾಡುವ ವ್ಯಾಪಾರ ನಷ್ಟ ತಂದೀತು ಹುಷಾರ್‌!

Terrorist Attack in Turkey Suicide bomber blows himself near parliament
ಪ್ರಮುಖ ಸುದ್ದಿ2 days ago

Terrorist Attack: ಟರ್ಕಿ ಸಂಸತ್ ಬಳಿ ಆತ್ಮಹತ್ಯಾ ಬಾಂಬ್ ದಾಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಫೋಟದ ಕ್ಷಣಗಳು!

prajwal and yashswini
ಕರ್ನಾಟಕ2 days ago

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನ ಪೂರ್ತಿ ಈ ರಾಶಿಯವರಿಗೆ ಟೆನ್ಷನ್‌ ಜತೆಗೆ ಪ್ರೆಶರ್‌

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಮನೆಯಲ್ಲೂ ಕಿರಿಕಿರಿ, ಆಫೀಸ್‌ನಲ್ಲೂ ಕಿರಿಕ್‌!

ಟ್ರೆಂಡಿಂಗ್‌