Agnipath | ಬೆಳಗಾವಿ ಬಂದ್‌ ಹಿನ್ನೆಲೆ, ಪೊಲೀಸರಿಂದ ಬಿಗಿ ಬಂದೋಬಸ್ತ್‌; ಬಂದ್‌ಗೆ ಕರೆ ಕೊಟ್ಟಿದ್ಯಾರು? - Vistara News

ಕರ್ನಾಟಕ

Agnipath | ಬೆಳಗಾವಿ ಬಂದ್‌ ಹಿನ್ನೆಲೆ, ಪೊಲೀಸರಿಂದ ಬಿಗಿ ಬಂದೋಬಸ್ತ್‌; ಬಂದ್‌ಗೆ ಕರೆ ಕೊಟ್ಟಿದ್ಯಾರು?

Agnipath | ಅಗ್ನಿಪಥ್‌ ಯೋಜನೆಯನ್ನು ವಿರೋಧಿಸಿ ಬೆಳಗಾವಿಯಲ್ಲಿ, ಬಂದ್‌ ಹಾಗೂ ʼಬೆಳಗಾವಿ ಚಲೊʼ ಮೂಲಕ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದ್ದು, ಪೊಲೀಸರು ಇದನ್ನು ನಿಭಾಯಿಸಲು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.

VISTARANEWS.COM


on

Agnipath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಅಗ್ನಿಪಥ್(Agnipath) ಯೋಜನೆ ವಿರೋಧಿಸಿ ಇಂದು ʼಬೆಳಗಾವಿ ಚಲೋʼ ಹಾಗೂ ಬೆಳಗಾವಿ ಬಂದ್‌ಗೆ ಕರೆ ನೀಡಿರುವುದರಿಂದ ಪೊಲೀಸರು ಬಿಗಿ ಬಂದೋಬಸ್ತ್‌ ಕೈಗೊಂಡಿದ್ದಾರೆ. ಜಿಲ್ಲೆಯಾದ್ಯಂತ ಖಾಕಿ ಪಡೆ ಅಲರ್ಟ್‌ ಆಗಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬಂದ್‌ಗೆ ಕರೆ ನೀಡಿರುವುದಲ್ಲದೆ ಪ್ರತಿಭಟನೆ ನಡೆಸುವಂತೆ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದು ಯಾವುದೇ ನಿರ್ಧಿಷ್ಟ ಸಂಘಟನೆಯಿಂದ ಬಂದ ಕರೆಯಲ್ಲ, ಬದಲಿಗೆ ವಾಟ್ಸಾಪ್‌ನಲ್ಲಿ ಹರಿದಾಡಿದ ಸಂದೇಶ. ಹಾಗಾಗಿ ಅಮಾಯಕರು ಈ ಸಂದೇಶಗಳ ಬಲೆಗೆ ಬಿದ್ದು ಪ್ರತಿಭಟನೆ ನಡೆಸಲು ಮುಂದಾಗಬಾರದು ಎಂದು ಪೊಲೀಸರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚರಿಕಾ ಕ್ರಮವಾಗಿ ಬೆಳಗಾವಿ ನಗರ ಹಾಗೂ ಜಿಲ್ಲಾ ಪೊಲೀಸರಿಂದ ‘ಹೈ’ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ಸಂದೇಶ ರವಾನೆ ಮಾಡಿದ ಯುವಕರಿಗೆ ಈಗಾಗಲೇ ಖಡಕ್‌ ವಾರ್ನಿಂಗ್‌ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ʻಪ್ರತಿಭಟನೆಗೆ ಯಾರು ಸಹ ನಮ್ಮ ಬಳಿ ಅ‌ನುಮತಿ ಪಡೆದಿಲ್ಲ. ಆದರೂ ಯಾವುದೇ ಅಹಿತಕರ ನಡೆಯದಂತೆ ತೀವ್ರ‌ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ನಗರದಲ್ಲಿ ಸಿಸಿ ಕ್ಯಾಮರಾ, ಸ್ಟಿಲ್ ಕ್ಯಾಮರಾಗಳು ಹಾಗೂ 5 ಡ್ರೋನ್‌ ಕ್ಯಾಮರಾಗಳ ಕಣ್ಗಾವಲಿದೆʼ ಎಂದು ಹೇಳಿದ್ದಾರೆ

ಬೆಳಗಾವಿಯ ಹಲವು ಪ್ರದೇಶಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡಿದ್ದಾರೆ. ಡಿಸಿಪಿ ರವೀಂದ್ರ ಗಡಾದಿ ನೇತೃತ್ವದಲ್ಲಿ ಪೊಲೀಸ್‌ ಭದ್ರತೆ ಮಾಡಲಾಗಿದೆ. ಬೆಳಗಾವಿ ಕೋಟೆ, ಹಿರೇಬಾಗೇವಾಡಿ ಟೋಲ್ ಗೇಟ್, ಕುಂದಾನಗರಿ, ನಗರದ ಚೆನ್ನಮ್ಮ ವೃತ್ತ, ಬಳಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡೊದ್ದಾರೆ. ಹೆಚ್ಚಿನ ಭದ್ರತೆಗಾಗಿ ನಗದಲ್ಲಿ ಹಲವೆಡೆ ಕೆಎಸ್‌ಆರ್‌ಪಿ ತುಕಡಿ, ರ‍್ಯಾಪಿಡ್‌ ಫೋರ್ಸ್‌ನ ಒಂದು ತುಕಡಿ ನಿಯೋಜಿಸಲಾಗಿದೆ.

ಬೆಳಗಾವಿಗೆ ಬರುತ್ತಿರುವ ಯವಕರ ಮೇಲೆ ನಗರ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಬೆಳಗಾವಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ್ದು ಕಂಡುಬಂದಲ್ಲಿ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ನಗರ ಪೊಲೀಸ್‌ ಆಯುಕ್ತ ಡಾ‌.ಬೋರಲಿಂಗಯ್ಯ, ಎಸ್‌ಪಿ ಲಕ್ಷ್ಮಣ ನಿಂಬರಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Agnipath |‌ ಅಗ್ನಿಪಥ್‌ ವಿರುದ್ಧ ಕರ್ನಾಟಕದಲ್ಲೂ ಪ್ರತಿಭಟನೆ ಜೋರು, ಬೆಳಗಾವಿ, ಧಾರವಾಡದಲ್ಲಿ ಲಾಠಿ ಚಾರ್ಜ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Prajwal Revanna Case: ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್‌ ರೇವಣ್ಣ ಬಳಿಕ ದುಬೈಗೆ ತೆರಳಿದ್ದಾರೆ ಎನ್ನಲಾಗಿತ್ತು. ಈಗ ಮತ್ತೊಂದು ದೇಶಕ್ಕೆ ಹಾರಿರುವ ಪ್ರಜ್ವಲ್‌ ರೇವಣ್ಣ, ಹಂಗೇರಿಯ ಬುಡಾಪೆಸ್ಟ್‌ನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದಾಗ್ಯೂ, ಹಾಸನ ಸಂಸದನ ವಿರುದ್ಧ ಬ್ಲ್ಯೂ ಕಾರ್ನರ್‌ ನೋಟಿಸ್‌ ಹೊರಡಿಸಬೇಕು ಎಂದು ಸಿಬಿಐಗೆ ಎಸ್‌ಐಟಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಅಶ್ಲೀಲ ವಿಡಿಯೊ, ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಹಾಸನ ಜೆಡಿಎಸ್‌ ಸಂಸದ (Hassan JDS MP) ಪ್ರಜ್ವಲ್‌ ರೇವಣ್ಣ (Prajwal Revanna Case) ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಹಾರಾಟ ಮುಂದುವರಿಸಿದ್ದಾರೆ. ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್‌ ರೇವಣ್ಣ ಬಳಿಕ ದುಬೈಗೆ ತೆರಳಿದ್ದಾರೆ ಎನ್ನಲಾಗಿತ್ತು. ಈಗ ಮತ್ತೊಂದು ದೇಶಕ್ಕೆ ಹಾರಿರುವ ಪ್ರಜ್ವಲ್‌ ರೇವಣ್ಣ, ಹಂಗೇರಿಯ ಬುಡಾಪೆಸ್ಟ್‌ನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಪಾಸ್‌ಪೋರ್ಟ್‌ ಎಂಟ್ರಿ ಮಾಹಿತಿಯ ಮೇರೆಗೆ ಒಂದಷ್ಟು ಸುಳಿವು ಪತ್ತೆಹಚ್ಚಿದ್ದಾರೆ. ಪಾಸ್‌ಪೋರ್ಟ್‌ ಎಂಟ್ರಿ ಆಧಾರದ ಮೇಲೆ ಪ್ರಜ್ವಲ್‌ ರೇವಣ್ಣ ಬುಡಾಫೆಸ್ಟ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಜ್ವಲ್‌ ರೇವಣ್ಣ ಪತ್ತೆಗೆ ಕಸರತ್ತು ನಡೆಸುತ್ತಿರುವ ಎಸ್‌ಐಟಿ ಅಧಿಕಾರಗಳು, ಬ್ಲ್ಯೂ ಕಾರ್ನರ್‌ ನೋಟಿಸ್‌ ಹೊರಡಿಸಬೇಕು ಎಂದು ಸಿಬಿಐಗೆ ಮನವಿ ಕೂಡ ಮಾಡಿದ್ದಾರೆ.

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟೀಸ್‌ ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೊಟೀಸ್ ಪಡೆಯಲಿದೆ.

ಅಜ್ಞಾತ ಸ್ಥಳದಲ್ಲಿ ರೇವಣ್ಣ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ರೇವಣ್ಣಗೆ ಎಸ್ಐಟಿ ಮೂರು ನೋಟಿಸ್ ಹಾಗೂ ಕೊನೆಗೆ ಲುಕೌಟ್ ನೋಟಿಸ್ ಜಾರಿ ಮಾಡಿದ್ದು, ರೇವಣ್ಣ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ರೇವಣ್ಣ ಅವರು ವಿದೇಶಕ್ಕೆ ಹಾರಬಹುದು ಎಂಬ ಮುಂದಾಲೋಚನೆಯಿಂದ ಲುಕೌಟ್‌ ನೋಟೀಸ್‌ ಜಾರಿ ಮಾಡಲಾಗಿದ್ದು, ಈಗ ಅವರು ಯಾವುದೇ ಏರ್‌ಪೋರ್ಟ್‌ ಮೂಲಕ ಹಾದು ಹೋಗಲು ಸಾಧ್ಯವಿಲ್ಲದಾಗಿದೆ.

ವಿದೇಶದಲ್ಲಿದ್ದುಕೊಂಡು ಲೈಂಗಿಕ ಹಗರಣ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್‌ಐಟಿ (SIT) ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇನ್ನೊಂದೆಡೆ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ನೀಡಿದೆ. ಸದ್ಯ ರೇವಣ್ಣ ವಿರುದ್ಧ ತನಿಖೆಗೆ ಒಳಗಾಗಬೇಕಾದ ಗಂಭೀರ ಆರೋಪವಿದೆ. ಮೈಸೂರಿನಲ್ಲಿ ಸಂತ್ರಸ್ತೆಯ ಪುತ್ರ ರೇವಣ್ಣ ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದಾರೆ. ಹೀಗಾಗಿ ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಪ್ರಜ್ವಲ್‌ ರೇವಣ್ಣ ಎಳೆತರಲು ರೆಡ್‌ ಕಾರ್ನರ್‌ ನೋಟಿಸ್?‌ ಭವಾನಿ ರೇವಣ್ಣಗೂ ವಿಚಾರಣೆಗೆ ಬುಲಾವ್

Continue Reading

ದಕ್ಷಿಣ ಕನ್ನಡ

Bomb Threat: ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ, ಪ್ರಕರಣ ತಡವಾಗಿ ಬೆಳಕಿಗೆ

Bomb Threat: ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕಳಿಸಲಾಗಿದೆ. “ಏರ್‌ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿದ್ದೇವೆ. ಇನ್ನು ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ” ಎಂದು ಬೆದರಿಕೆ ಒಡ್ಡಲಾಗಿತ್ತು. “ಟೆರರೈಸರ್ಸ್ 111” ಸಂಘಟನೆ ಈ ಕೃತ್ಯದ ಹಿಂದೆ ಇದೆ ಎಂದು ಬೆದರಿಕೆ ಇಮೇಲ್ ತಿಳಿಸಿತ್ತು.

VISTARANEWS.COM


on

mangaluru airport bomb threat
Koo

ಮಂಗಳೂರು: ಮಂಗಳೂರು ಏರ್‌ಪೋರ್ಟ್ (Mangaluru Airport) ಕಚೇರಿಗೆ ಬಾಂಬ್ ಬೆದರಿಕೆ (Bomb Threat) ಬಂದಿದೆ. ಏರ್‌ಪೋರ್ಟ್‌ ಆವರಣದಲ್ಲಿ ಹಾಗೂ ಮೂರು ವಿಮಾನಗಳಲ್ಲಿಯೂ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಇಮೇಲ್‌ (threat Email) ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅನುಮಾನ ಬಂದ ಕಡೆಗಳಲ್ಲಿ ತಪಾಸಣೆ ಕೂಡ ನಡೆಸಲಾಗಿದೆ.

ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕಳಿಸಲಾಗಿದೆ. “ಏರ್‌ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿದ್ದೇವೆ. ಇನ್ನು ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ” ಎಂದು ಬೆದರಿಕೆ ಒಡ್ಡಲಾಗಿತ್ತು. “ಟೆರರೈಸರ್ಸ್ 111” ಸಂಘಟನೆ ಈ ಕೃತ್ಯದ ಹಿಂದೆ ಇದೆ ಎಂದು ಬೆದರಿಕೆ ಇಮೇಲ್ ತಿಳಿಸಿತ್ತು.

ಎಪ್ರಿಲ್ 29ರಂದೇ ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ಬಂದಿದ್ದು, ಅಂದೇ ತಪಾಸಣೆ ನಡೆದು ಇದೊಂದು ಹುಸಿ ಬೆದರಿಕೆ ಎಂಬುದು ರುಜುವಾತಾಗಿದೆ. ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಂಬ್ ಬೆದರಿಕೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಬಾಂಬ್ ಬೆದರಿಕೆ ವಿಷಯವನ್ನು ಗೌಪ್ಯವಾಗಿಟ್ಟು ಪೊಲೀಸರು ಭದ್ರತೆ ಹೆಚ್ಚಿಸಿದ್ದರು.

ಎರಡು ದಿನಗಳ ಹಿಂದೆ ದಿಲ್ಲಿಯ ಶಾಲೆಗಳಿಗೆ ಇದೇ ರೀತಿಯ ಬಾಂಬ್‌ ಸ್ಫೋಟದ ಇಮೇಲ್‌ ಬೆದರಿಕೆ ಬಂದಿತ್ತು. ನೂರಾರು ಶಾಲೆಗಳಿಗೆ ಈ ಇಮೇಲ್‌ ಬಂದಿದ್ದು, ಇದರ ಮೂಲವನ್ನು ಪೊಲೀಸರು ಟ್ರೇಸ್‌ ಮಾಡಿದ್ದಾರೆ. ಬೆಂಗಳೂರಿನಲ್ಲಿಯೂ ಹಲವು ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಮೇಲ್‌ ಬಂದಿದ್ದುದನ್ನು ನೆನಪಿಸಿಕೊಳ್ಳಬಹುದು. ಇದುವರೆಗೂ ಇಂಥ ಬೆದರಿಕೆ ಮೇಲ್‌ಗಳು ನಿಜವಾದ ಉದಾಹರಣೆ ಇಲ್ಲ.

ಆದರೆ, ಭದ್ರತಾ ಪಡೆಗಳು ರಿಸ್ಕ್‌ ತೆಗೆದುಕೊಳ್ಳಲು ಇಚ್ಛಿಸದೆ ತೀವ್ರ ತಪಾಸಣೆ ನಡೆಸುತ್ತವೆ ಹಾಗೂ ಸೈಬರ್‌ ಪೊಲೀಸರು ಇಂಥ ಇಮೇಲ್‌ಗಳ ಮೂಲದ ಬೆನ್ನು ಬೀಳುತ್ತಾರೆ. ಆದರೆ ಹೆಚ್ಚಾಗಿ ಇಂಥ ಇಮೇಲ್‌ಗಳ ಮೂಲ ಪತ್ತೆಯಾಗದಂತೆ ವಿಪಿಎನ್‌ ಮೂಲಕ ಕಾರ್ಯಾಚರಿಸಿ, ಯಾವುದೋ ವಿದೇಶದ ಸರ್ವರ್‌ನಿಂದ ಬಂದದ್ದು ಎಂದು ಕಾಣಿಸುವಂತೆ ಮಾಡಲಾಗುತ್ತಿದೆ.

ಇದನ್ನೂ ಓದಿ: Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

Continue Reading

ತುಮಕೂರು

Self Harming : ಸಾಲಬಾಧೆಗೆ ನೊಂದು ಮನೆಯೊಳಗೆ ನೇಣಿಗೆ ಕೊರಳೊಡ್ಡಿದ ಗೃಹಿಣಿ

Self harming : ಸಾಲಬಾಧೆಯಿಂದ ನೊಂದ ಮಹಿಳೆಯೊಬ್ಬರು ಮನೆಯಲ್ಲಿ ಯಾರು ಇಲ್ಲದಾಗ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

By

Self Harming
Koo

ತುಮಕೂರು: ಸಾಲಬಾಧೆ ತಾಳಲಾರದೇ ಗೃಹಿಣಿಯೊಬ್ಬರು ಮನನೊಂದು ಆತ್ಮಹತ್ಯೆಗೆ (Self harming) ಶರಣಾಗಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಅರಳಗುಪ್ಪೆಯಲ್ಲಿ ಘಟನೆ ನಡೆದಿದೆ. ಭಾಗ್ಯಮ್ಮ (50) ಆತ್ಮಹತ್ಯೆಗೆ ಶರಣಾದವರು.

ಭಾಗ್ಯಮ್ಮ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ 5 ಲಕ್ಷ ಸಾಲ ಪಡೆದಿದ್ದರು. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ತೀವ್ರ ಬರಗಾಲ ಹಿನ್ನೆಲೆಯಲ್ಲಿ ಹಣ ಕಟ್ಟಲು ಸಾಧ್ಯವಾಗದೇ ಆತ್ಮಹತ್ಯೆ ದಾರಿ ತುಳಿದಿದ್ದಾರೆ.

ಮೈಕ್ರೋ ಫೈನಾನ್ಸ್ ಕಂಪನಿ ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Covishield vaccine: ಕೋವಿಶೀಲ್ಡ್‌ ಲಸಿಕೆಯಿಂದ ಸೈಡ್‌ ಎಫೆಕ್ಟ್‌ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

20 ವರ್ಷಗಳಲ್ಲಿ ಐಐಟಿಯ 115 ವಿದ್ಯಾರ್ಥಿಗಳು ಆತ್ಮಹತ್ಯೆ

ಮುಂಬಯಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿ – IIT) ಕನಿಷ್ಠ 115 ವಿದ್ಯಾರ್ಥಿಗಳು 2005ರಿಂದೀಚೆಗೆ ಆತ್ಮಹತ್ಯೆ (Students Self harming, students Suicide) ಮಾಡಿಕೊಂಡಿದ್ದಾರೆ ಎಂಬ ಕಳವಳಕಾರಿ ಅಂಶ ಬಯಲಾಗಿದೆ. ಇವುಗಳಲ್ಲಿ 98 ಸಾವುಗಳು ಕ್ಯಾಂಪಸ್‌ನಲ್ಲಿ ಆಗಿವೆ. 17 ಕ್ಯಾಂಪಸ್‌ನಿಂದ ಹೊರಗೆ ಆಗಿವೆ. 56 ಜನ ನೇಣು ಬಿಗಿದುಕೊಂಡಿದ್ದಾರೆ.

ಐಐಟಿ ಕಾನ್ಪುರದ ಹಳೆಯ ವಿದ್ಯಾರ್ಥಿ ಮತ್ತು ಗ್ಲೋಬಲ್ ಐಐಟಿ ಅಲುಮ್ನಿ ಸಪೋರ್ಟ್ ಗ್ರೂಪ್‌ನ ಸಂಸ್ಥಾಪಕ ಧೀರಜ್ ಸಿಂಗ್ ಅವರು ಕೇಳಿದ ಮಾಹಿತಿ ಹಕ್ಕು (ಆರ್‌ಟಿಐ) ಪ್ರಶ್ನೆಯ ಮೂಲಕ ಸ್ವೀಕರಿಸಿದ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಇದೇ ಫೆಬ್ರವರಿ 12, 2023ರಂದು ಐಐಟಿ ಬಾಂಬೆ ವಿದ್ಯಾರ್ಥಿ ದರ್ಶನ್ ಸೋಲಂಕಿ ಅವರ ಮರಣ ಸಂಭವಿಸಿತ್ತು. ಇದು ಕಳೆದ 20 ವರ್ಷಗಳಲ್ಲಿ ದೇಶಾದ್ಯಂತ ಐಐಟಿಯನ್ನರ ಸಾವಿನ ಬಗ್ಗೆ ಮಾಹಿತಿ ಕೋರಿ RTI ಅರ್ಜಿಯನ್ನು ಸಲ್ಲಿಸಲು ಸಿಂಗ್ ಅವರನ್ನು ಪ್ರೇರೇಪಿಸಿತ್ತು. ಅಂಕಿಅಂಶಗಳ ಪ್ರಕಾರ, 2005 ಮತ್ತು 2024ರ ನಡುವೆ, ಐಐಟಿ ಮದ್ರಾಸ್‌ನಲ್ಲಿ ಅತಿ ಹೆಚ್ಚು ಸಾವುಗಳು 26, ನಂತರ ಐಐಟಿ ಕಾನ್ಪುರದಲ್ಲಿ 18, ಐಐಟಿ ಖರಗ್‌ಪುರದಲ್ಲಿ 13 ಮತ್ತು ಐಐಟಿ ಬಾಂಬೆಯಲ್ಲಿ 10 ಸಾವುಗಳು ದಾಖಲಾಗಿವೆ. ಈ ವರ್ಷ ಇದುವರೆಗೆ ಐದು ಸಾವುಗಳು ದಾಖಲಾಗಿವೆ.

“ಕೇಂದ್ರ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಬರುವ ಉನ್ನತ ಶಿಕ್ಷಣ ಇಲಾಖೆಯು ಆರಂಭದಲ್ಲಿ ನನ್ನ ಅರ್ಜಿಯನ್ನು ತಿರಸ್ಕರಿಸಿತು ಮತ್ತು ಪ್ರತ್ಯೇಕ ಸಂಸ್ಥೆಗಳಿಗೆ ಪ್ರತ್ಯೇಕ ಆರ್‌ಟಿಐಗಳನ್ನು ಸಲ್ಲಿಸುವಂತೆ ಕೇಳಿತು. ಮನವಿಯ ನಂತರ, ಸಚಿವಾಲಯವು ಎಲ್ಲಾ ಐಐಟಿಗಳಿಗೆ ಡೇಟಾವನ್ನು ಹಂಚಿಕೊಳ್ಳಲು ಸೂಚಿಸಿತು” ಎಂದು ಸಿಂಗ್ ಹೇಳಿದರು.

ಆದಾಗ್ಯೂ, ಎಂಟು ತಿಂಗಳುಗಳಲ್ಲಿ, 23 ಐಐಟಿಗಳಲ್ಲಿ 13 ಮಾತ್ರ ಸಿಂಗ್ ಅವರೊಂದಿಗೆ ಡೇಟಾವನ್ನು ಹಂಚಿಕೊಂಡಿವೆ. “ನಾನು RTI ಪ್ರತಿಕ್ರಿಯೆಯಿಂದ ಕೆಲವು ಡೇಟಾವನ್ನು ಸ್ವೀಕರಿಸಿದ್ದೇನೆ. ಸಾರ್ವಜನಿಕ ಡೊಮೇನ್‌ನಲ್ಲಿನ ಅಧಿಕೃತ ಮೂಲಗಳಿಂದ ಕೆಲ ಡೇಟಾವನ್ನು ಸಂಗ್ರಹಿಸಿದ್ದೇನೆ. ಇದರಲ್ಲಿ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ಅಂಕಿಅಂಶಗಳು ಮತ್ತು ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಗಳು ಸೇರಿವೆ” ಎಂದಿದ್ದಾರೆ ಸಿಂಗ್.

ಕಳೆದ ವರ್ಷ ಐಐಟಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಹೆಚ್ಚಿನ ಆತಂಕವನ್ನು ಸೃಷ್ಟಿಸಿದೆ. ಐಐಟಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಮತ್ತು ಸಾಮಾಜಿಕ ಒತ್ತಡವನ್ನು ನಿಭಾಯಿಸಲು ಗಂಭೀರ ಕ್ರಮಗಳಿಗೆ ಕರೆ ನೀಡಿರುವ ಸಿಂಗ್, “ದೇಶದ ಪ್ರಮುಖ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಹೆಚ್ಚಿರುವ ಒತ್ತಡವನ್ನು ಎತ್ತಿ ತೋರಿಸಬೇಕಿದೆ. ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಪೋಷಕರಿಗೆ ಒತ್ತಡ ಕಡಿಮೆ ಮಾಡಲು ಐಐಟಿ ಶಿಕ್ಷಣವನ್ನು ಸುಧಾರಿಸುವ ತುರ್ತು ಅವಶ್ಯಕತೆಯಿದೆ” ಎಂದಿದ್ದಾರೆ.

ಸೋಲಂಕಿಯವರ ಮರಣದ ನಂತರ ವಿವಿಧ ಐಐಟಿ ವಿದ್ಯಾರ್ಥಿ ಸಂಘಟನೆಗಳು ನಡೆಸಿದ ಆಂತರಿಕ ಸಮೀಕ್ಷೆಗಳಲ್ಲಿ, 61% ಪ್ರತಿಸ್ಪಂದಕರು ವಿದ್ಯಾರ್ಥಿಗಳ ಸಾವುಗಳು ಶೈಕ್ಷಣಿಕ ಒತ್ತಡದ ಕಾರಣ ಎಂದು ನಂಬಿದ್ದರು. ಇದರ ನಂತರ ಉದ್ಯೋಗದ ಅಭದ್ರತೆ (12%), ಕೌಟುಂಬಿಕ ಸಮಸ್ಯೆಗಳು (10%) ಮತ್ತು ಕಿರುಕುಳ (6%). ಹನ್ನೊಂದು ಪ್ರತಿಶತ ವಿದ್ಯಾರ್ಥಿಗಳು ‘ಇತರ ಕಾರಣಗಳು’ ಅಂಕಣವನ್ನು ಟಿಕ್ ಮಾಡಿದ್ದಾರೆ.

ಸೋಲಂಕಿಯವರ ಮರಣದ ನಂತರ, ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು ವಿವಿಧ ಕ್ರಮಗಳನ್ನು ಕೈಗೊಂಡಿದೆ. ದೈಹಿಕ ಸಾಮರ್ಥ್ಯ ಮತ್ತು ಕ್ರೀಡೆಗಳನ್ನು ಉತ್ತೇಜಿಸಲು ಮತ್ತು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಆರೋಗ್ಯ, ಕಲ್ಯಾಣ ಮತ್ತು ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕೆ ಆದ್ಯತೆ ನೀಡಲು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಲಹೆಗಳನ್ನು ನೀಡಿತು. ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಕುಟುಂಬಗಳಿಗೆ ಮಾನಸಿಕ ಬೆಂಬಲವನ್ನು ಒದಗಿಸಲು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪ್ರಾರಂಭಿಸಲಾದ ಮನೋದರ್ಪಣ್ ಎಂಬ ಭಾರತ ಸರ್ಕಾರದ ಉಪಕ್ರಮವೂ ಇದೆ.

ಪ್ರಿವೆಂಟಿವ್ ಕ್ಯಾಂಪಸ್ ಕ್ರಮಗಳಲ್ಲಿ IIT-ಬಾಂಬೆ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ವರ್ಷಕ್ಕೆ ಒಂದು ವಿಷಯವನ್ನು ಕೈಬಿಟ್ಟಿತು. ಕಳೆದ ವರ್ಷ ಸೋಲಂಕಿ ಆತ್ಮಹತ್ಯೆಯ ನಂತರ ನಡೆದ IIT-ಬಾಂಬೆ ಸೆನೆಟ್‌ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕ್ರಮವು ಫ್ರೆಶರ್‌ಗಳ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಕ್ಯಾಂಪಸ್ ಜೀವನಕ್ಕೆ ಹೊಂದಿಕೊಳ್ಳಲು ಅವರಿಗೆ ಹೆಚ್ಚಿನ ವಿರಾಮ ಸಮಯವನ್ನು ನೀಡುತ್ತದೆ ಎಂದು ಐಐಟಿ-ಬಾಂಬೆ ಅಧಿಕಾರಿಗಳು ತಿಳಿಸಿದ್ದಾರೆ.

ಕಠಿಣ ಸ್ಪರ್ಧೆಯಲ್ಲಿ ಯಶಸ್ವಿಯಾದ ನಂತರ ವಿದ್ಯಾರ್ಥಿಗಳು ಐಐಟಿಗಳಲ್ಲಿ ತಮ್ಮ ಸ್ಥಾನವನ್ನು ಗಳಿಸಿರುತ್ತಾರೆ. ಆದರೆ ಅದರ ನಂತರ ಗಮನಾರ್ಹ ಸಾಂಸ್ಥಿಕ ಮತ್ತು ಸಾಮಾಜಿಕ ಒತ್ತಡಗಳನ್ನು ಎದುರಿಸುತ್ತಾರೆ. ಅವರು ಬಡ ಅಥವಾ ಶ್ರೀಮಂತ ಹಿನ್ನೆಲೆಯಿಂದ ಬಂದವರಾಗಿದ್ದರೂ, ವಿದ್ಯಾರ್ಥಿಗಳು ಉತ್ತಮವಾಗಿ ಕಾರ್ಯನಿರ್ವಹಿಸುವ ಸಾಮಾಜಿಕ ಒತ್ತಡವನ್ನು ಎದುರಿಸುತ್ತಾರೆ. ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡವನ್ನು ನಿವಾರಿಸಲು ಸಹಾಯ ಮಾಡುವ ಸಾಂಸ್ಥಿಕ ಮತ್ತು ಸಾಮಾಜಿಕ ಹಂತಗಳಲ್ಲಿ ನಾವು ಸೂಕ್ಷ್ಮ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ತಜ್ಞರು ಹೇಳಿದ್ದಾರೆ.

Continue Reading

ಚಿನ್ನದ ದರ

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಇಂದು ಖರೀದಿಗೆ ಮುನ್ನ ದರದ ಜೊತೆಗೆ ಇದು ತಿಳಿದಿರಲಿ

Gold Rate Today: ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,585ಕ್ಕೆ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,183 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,464 ಆಗಿದೆ.

VISTARANEWS.COM


on

gold rate today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ (Gold Market) ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಮತ್ತೆ ಇಳಿಕೆ ಕಂಡಿದೆ. ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ (Gold price today) ತಲಾ ₹10 ಇಳಿಕೆಯಾಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,585ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,680 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹65,850 ಮತ್ತು ₹6,58,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,183 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,464 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹71,830 ಮತ್ತು ₹7,18,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.25, ಎಂಟು ಗ್ರಾಂ ₹658 ಮತ್ತು 10 ಗ್ರಾಂ ₹822.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,225 ಮತ್ತು 1 ಕಿಲೋಗ್ರಾಂಗೆ ₹82,250 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,00071,980
ಮುಂಬಯಿ65,85071,830
ಬೆಂಗಳೂರು65,85071,830
ಚೆನ್ನೈ66,00072,000

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರ‌ ಇಂದೇ ತಗೊಳ್ಳಿ! ಚಿನ್ನದ ಬೆಲೆ ಭಾರೀ ಇಳಿಕೆ; ಇಂದು ಇಷ್ಟಿದೆ ನೋಡಿ

Continue Reading
Advertisement
Prajwal Revanna Case
ಕರ್ನಾಟಕ1 min ago

Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Money Guide
ಮನಿ-ಗೈಡ್11 mins ago

Money Guide: ಈ ರಜೆಯಲ್ಲಿ ಮಕ್ಕಳಿಗೆ ಆರ್ಥಿಕತೆಯ ಪ್ರಾಕ್ಟಿಕಲ್‌ ಪಾಠ ಮಾಡಿ

mangaluru airport bomb threat
ದಕ್ಷಿಣ ಕನ್ನಡ23 mins ago

Bomb Threat: ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ, ಪ್ರಕರಣ ತಡವಾಗಿ ಬೆಳಕಿಗೆ

Elvish Yadav
ದೇಶ53 mins ago

Elvish Yadav: ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ಗೆ ಮತ್ತೆ ಸಂಕಷ್ಟ; ಎಲ್ವಿಶ್‌ ವಿರುದ್ಧ ಇಡಿ ಕೇಸ್‌

Urvashi Rautela
ಕ್ರೀಡೆ1 hour ago

Urvashi Rautela: ಪಂತ್​ ಜತೆ ಮದುವೆಯಾಗುತ್ತೀರಾ?; ಅಭಿಮಾನಿಯ ಪ್ರಶ್ನೆಗೆ ಉತ್ತರಿಸಿದ ಊರ್ವಶಿ ರೌಟೇಲಾ; ವಿಡಿಯೊ ವೈರಲ್​

Self Harming
ತುಮಕೂರು1 hour ago

Self Harming : ಸಾಲಬಾಧೆಗೆ ನೊಂದು ಮನೆಯೊಳಗೆ ನೇಣಿಗೆ ಕೊರಳೊಡ್ಡಿದ ಗೃಹಿಣಿ

Bandaru Supritha Naidu surekha vani daughter wants to marry vijay deverakonda
ಟಾಲಿವುಡ್1 hour ago

Bandaru Supritha Naidu: ವಿಜಯ್‌ದೇವರಕೊಂಡರನ್ನು ಮದುವೆಯಾಗುತ್ತಿದ್ದಾರಂತೆ ತೆಲುಗು ಖ್ಯಾತ ನಟಿಯ ಮಗಳು!

gold rate today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಇಂದು ಖರೀದಿಗೆ ಮುನ್ನ ದರದ ಜೊತೆಗೆ ಇದು ತಿಳಿದಿರಲಿ

prajwal revanna case cm siddaramaiah rahul gandhi
ಪ್ರಮುಖ ಸುದ್ದಿ2 hours ago

Prajwal Revanna Case: ಸಿಎಂಗೆ ಪತ್ರ ಬರೆದು ಚುರುಕು ಮುಟ್ಟಿಸಿದ ರಾಗಾ; ಎಸ್‌ಐಟಿ ಜೊತೆ ಸಭೆ ನಡೆಸಿ ಸಿಎಂ ಖಡಕ್‌ ಸೂಚನೆ

Rahul Gandhi
ದೇಶ2 hours ago

Rahul Gandhi: ಪ್ರಧಾನಿ ದ್ವಾರಕಾ ಪೂಜೆ ಒಂದು ನಾಟಕ; ಮತ್ತೆ ಸನಾತನ ಆಚರಣೆ ಬಗ್ಗೆ ರಾಹುಲ್‌ ಪ್ರಶ್ನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ24 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌