Site icon Vistara News

Praveen Nettaru | ಗೃಹ ಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ, ರಾಜೀನಾಮೆಗೆ ಒತ್ತಾಯ

Praveen Nettaru

ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು (Praveen Nettaru) ಬರ್ಬರ ಹತ್ಯೆ ಖಂಡಿಸಿ, ಕಾರ್ಯಕರ್ತರಿಗೆ ರಕ್ಷಣೆ ನೀಡಲಾಗದ ಸರಕಾರದ ಅಸಹಾಯಕತೆ ವಿರುದ್ಧ ಸಿಡಿದೆದ್ದ ಎಬಿವಿಪಿ ಕಾರ್ಯಕರ್ತರು ಶನಿವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.

ಬೆಂಗಳೂರಿನ ಜಯಮಹಲ್​ ರಸ್ತೆಯಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ಸುಮಾರು 50 ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ ಮತ್ತು ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ | ವಿಸ್ತಾರ TOP 10 NEWS | ಪ್ರವೀಣ್‌- ಫಾಜಿಲ್‌ ಹತ್ಯೆ ಹಿನ್ನೆಲೆ ನೈಟ್‌ ಕರ್ಫ್ಯೂ ಹಾಗೂ ಇನ್ನಿತರೆ ಪ್ರಮುಖ ಸುದ್ದಿಗಳಿವು

ಎಬಿವಿಪಿ ಕಾರ್ಯಕರ್ತರು ಗೃಹ ಸಚಿವರ ಮನೆಯ ಗೇಟ್ ತಳ್ಳಿ ಒಳಗೆ ನುಗ್ಗಿದ್ದಾರೆ. ಮನೆಗೆ ಭದ್ರತೆ ನೀಡಲು ಕೇವಲ ಕೆಲವೇ ಪೊಲೀಸರು ಇದ್ದರು. ಅವರು ತಡೆಯಲು ಯತ್ನಿಸಿದಾಗ ಎಬಿವಿಪಿ ಕಾರ್ಯಕರ್ತರ ಜತೆಗೆ ಭಾರಿ ನೂಕಾಟ, ತಳ್ಳಾಟ ಆಗಿದೆ. ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

Exit mobile version