ಮಹಿಳಾ ಮೀಸಲಾತಿ ಕಾಂಗ್ರೆಸ್ ವಿರುದ್ಧ ಏಪ್ರಿಲ್. 25ರಂದು ಆಕ್ರೋಶ ಯಾತ್ರೆ: ಬಿಜೆಪಿ - Vistara News

Latest

ಮಹಿಳಾ ಮೀಸಲಾತಿ ಕಾಂಗ್ರೆಸ್ ವಿರುದ್ಧ ಏಪ್ರಿಲ್. 25ರಂದು ಆಕ್ರೋಶ ಯಾತ್ರೆ: ಬಿಜೆಪಿ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಮಹಿಳಾ ವಿರೋಧಿ ಕಾಂಗ್ರೆಸ್ ಮತ್ತು ಇಂಡಿ ಕೂಟದ ವಿರುದ್ಧ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಪ್ರಿಲ್. 25ರಂದು ಆಕ್ರೋಶ ಯಾತ್ರೆ ಮತ್ತು ಪ್ರತಿಭಟನಾ ಸಭೆಗಳನ್ನು ಏರ್ಪಡಿಸಲಾಗುವುದು ಎಂದು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು.ಸಿ.ಮಂಜುಳಾ ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಇದೇ 27ರಿಂದ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು ಬಿಜೆಪಿಯ 300 ಸಂಘಟನಾತ್ಮಕ ಮಂಡಲಗಳಲ್ಲಿ ಹೋರಾಟ ನಡೆಯಲಿದೆ. ಬಳಿಕ ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಇಂದಿನಿಂದ ಕೇಂದ್ರ ಸಚಿವರು, ಸಂಸದರು ವಿಭಾಗ ಕೇಂದ್ರಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಇಂದು ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರಿನಲ್ಲಿ ಸಂಸದ ಬೃಜೇಶ್ ಚೌಟ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ನಾಳೆ ಮತ್ತು ನಾಡಿದ್ದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್- ಬೆಳಗಾವಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿಯಲ್ಲಿ, ಕೇಂದ್ರ ಸಚಿವ ವಿ.ಸೋಮಣ್ಣ ಅವರು 23ರಂದು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ಮತ್ತು ಅವರ ಮಿತ್ರಪಕ್ಷಗಳ ಮಹಿಳಾ ವಿರೋಧಿ ನೀತಿಯ ಕುರಿತು ತಿಳಿಸಲಿದ್ದಾರೆ ಎಂದು ವಿವರ ನೀಡಿದರು. ಕಾಂಗ್ರೆಸ್ ಪಕ್ಷವು ಇತಿಹಾಸದ ಉದ್ದಕ್ಕೂ ತನ್ನ ಮಹಿಳಾ ವಿರೋಧಿ ಧೋರಣೆ ಪ್ರದರ್ಶನ ಮಾಡಿದ ಕುರಿತು ತಿಳಿಸಲಿದ್ದಾರೆ ಎಂದು ಹೇಳಿದರು. ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಅವರು ಮಾತ್ರ ಮಹಿಳೆಯರು ಎಂದು ಕಾಂಗ್ರೆಸ್ ಭಾವಿಸಿದಂತಿದೆ. ಸಾಮಾನ್ಯ ಮಹಿಳೆಯರಿಗೆ ಸಿಗುವ ಅವಕಾಶಗಳನ್ನು ಅದು ಕಿತ್ತುಕೊಂಡಿದೆ ಎಂದು ಆಕ್ಷೇಪಿಸಿದರು. ಭಾರತದ ನಾರಿಯರು ಕೇವಲ ಹೂವಲ್ಲ; ಅವರು ಜ್ವಾಲೆ ಕೂಡ ಎಂಬ ನಿಟ್ಟಿನಲ್ಲಿ ಈ ಆಕ್ರೋಶವನ್ನು ನಾವು ವ್ಯಕ್ತಪಡಿಸಲಿದ್ದೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ ಆಕ್ರೋಶ

VISTARANEWS.COM


on

ಲಖನೌ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳು ತಮ್ಮ ಮಹಿಳಾ ವಿರೋಧಿ ನೀತಿಯನ್ನು ಪ್ರದರ್ಶಿಸಿವೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಲಖನೌದಲ್ಲಿ ಇಂದು ನಡೆದ ಜನ ಆಕ್ರೋಶ ಮಹಿಳಾ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿರು. ದೇಶಾದ್ಯಂತ ಮಹಿಳೆಯರು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ಬೀದಿಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್, ಸಮಾಜವಾದಿ, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಮಹಿಳೆಯರು ಆಕ್ರೋಶ ಹೊರಹಾಕುತ್ತಿದ್ದಾರೆ. ಅವರ ಅಸಮಾಧಾನ ಈ ಪಾದಯಾತ್ರೆಯಲ್ಲಿ ಕಂಡುಬರುತ್ತಿದೆ ಎಂದರು. ಮಹಿಳಾ ಮೀಸಲಾತಿಗೆ ಸಂಬಂಧಿಸಿದ ನಿರ್ಣಾಯಕ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್‌ ನೇತೃತ್ವದ ಪಕ್ಷಗಳ ನಡೆ ವಿರುದ್ಧ ಈ ಪಾದಯಾತ್ರೆಯನ್ನು ಉತ್ತರಪ್ರದೇಶ ರಾಜ್ಯ ಸರ್ಕಾರ ಆಯೋಜಿಸಿತ್ತು.

Continue Reading

Latest

ನಟ, ರಾಜಕಾರಣಿ ವಿಜಯ್‌ ವಿರುದ್ಧ ಕಮಲ್‌ ಹಾಸನ್‌ ಆಕ್ರೋಶ; ಕಾರಣ ಏನು?

VISTARANEWS.COM


on

ತಿರುಚಿರಾಪಳ್ಳಿ: ಬಾಲ್ಯದಲ್ಲಿ ಮೇರುನಟ ಮತ್ತು ರಾಜಕಾರಣಿ ಎಂ.ಜಿ. ರಾಮಚಂದ್ರನ್, ಶಿವಾಜಿ ಗಣೇಶನ್ ಅವರ ಮಡಿಲಲ್ಲಿ ಬೆಳೆದಿದ್ದರೂ ನಾನು ರಾಜಕೀಯ ಲಾಭ ಮಾಡಿಕೊಳ್ಳಲಿಲ್ಲ ಎಂದು ನಟ ಹಾಗೂ ಮಕ್ಕಳ ನೀಧಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಹೇಳಿದ್ದಾರೆ. ಟಿವಿಕೆ ಮುಖ್ಯಸ್ಥ ವಿಜಯ್‌ ಅವರನ್ನು ಗುರಿಯಾಗಿಸಿಕೊಂಡೇ ಕಮಲ್‌ ಹಾಸನ್‌ ಈ ಟೀಕೆ ಮಾಡಿದ್ದಾರೆ.

ಪೂರ್ವ ತಿರುಚಿರಾಪಳ್ಳಿ ಕ್ಷೇತ್ರದ ಡಿಎಂಕೆ ಅಭ್ಯರ್ಥಿ ಇನಿಗೋ ಎಸ್.ಇರುದಯರಾಜ್ ಪರವಾಗಿ ಪ್ರಚಾರ ನಡೆಸಿದ ಕಮಲ್ ಹಾಸನ್ ಅವರು ವಿಜಯ್‌ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತೀಚೆಗೆ ರಾಜಕೀಯ ಪ್ರವೇಶಿಸಿರುವ ನಟ ವಿಜಯ್ ತಮ್ಮನ್ನು ಎಂಜಿಆರ್ ಅವರ ಉತ್ತರಾಧಿಕಾರಿ ಎಂಬಂತೆ ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿರುವುದಕ್ಕೆ ಕಮಲ್ ಹಾಸನ್ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ನಾನು ಕೂಡ ಬಾಲ್ಯದಲ್ಲೇ ಚಿತ್ರರಂಗ ಪ್ರವೇಶಿಸಿದೆ. ಎಂಜಿ ರಾಮಚಂರನ್‌ ಅವರಿಗೆ ನಾನು ಎಂದರೆ ತುಂಬಾ ಪ್ರೀತಿ ಇತ್ತು. ಆದರೂ ನಾನು ಆ ಸಂಪರ್ಕವನ್ನು ಎಲ್ಲೂ ಪ್ರದರ್ಶಿಸಿಕೊಳ್ಳಲಿಲ್ಲ ಅಥವಾ ದುರುಪಯೋಗಪಡಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದಾರೆ. ತಮಿಳುನಾಡಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 23 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

Continue Reading

Latest

ಭಾರತ ಈಗ ‘ವಿಶ್ವಗುರು’ ಅಲ್ಲ, ಆ ಪದ ಬಳಸಬೇಡಿ: ಮುರಳಿ ಮನೋಹರ ಜೋಶಿ ಪ್ರತಿಪಾದನೆ

VISTARANEWS.COM


on

ನವದೆಹಲಿ: ಭಾರತವು ಪ್ರಸ್ತುತ ‘ವಿಶ್ವಗುರು’ ಆಗಿ ಉಳಿದಿಲ್ಲ, ಆದ್ದರಿಂದ ಆ ಪದವನ್ನು ಬಳಸುವುದರಿಂದ ನಾವು ದೂರವಿರಬೇಕು ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ ಹೇಳಿದ್ದಾರೆ. ದೆಹಲಿಯಲ್ಲಿ ಆರ್‌ಎಸ್‌ಎಸ್ ಅಂಗಸಂಸ್ಥೆಯಾದ ‘ಸಂಸ್ಕೃತ ಭಾರತಿ’ ಕೇಂದ್ರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ತಮ್ಮ ವೈಯಕ್ತಿಕ ಮತ್ತು ವಾಸ್ತವಿಕ ನಿಲುವನ್ನು ಬಿಚ್ಚಿಟ್ಟರು.

ಸತ್ಯವನ್ನು ಒಪ್ಪಿಕೊಳ್ಳಬೇಕು:
ಭಾರತವು ‘ವಿಶ್ವಗುರು’ ಆಗುತ್ತಿರುವ ಮತ್ತು ಎ.ಐ (AI) ಕೇಂದ್ರವಾಗುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ನಾವು ಒಂದು ಕಾಲದಲ್ಲಿ ವಿಶ್ವಗುರು ಆಗಿದ್ದೆವು ಎಂಬುದು ಸತ್ಯ. ಆದರೆ ಇಂದು ನಾವು ಹಾಗಿಲ್ಲ ಎಂಬ ವಾಸ್ತವವನ್ನು ಒಪ್ಪಿಕೊಳ್ಳಬೇಕು. ಈ ಹಂತದಲ್ಲಿ ನಾವು ವಿಶ್ವಗುರು ಅಲ್ಲ, ಬದಲಾಗಿ ಆ ಸ್ಥಾನಕ್ಕೇರಲು ಪ್ರಯತ್ನಿಸಬೇಕಷ್ಟೇ,” ಎಂದು ಮಾರ್ಮಿಕವಾಗಿ ನುಡಿದರು.

ಸಂಸ್ಕೃತಕ್ಕೆ ಅಗ್ರಸ್ಥಾನ ನೀಡಲು ಕರೆ:
ಸಂಸ್ಕೃತ ಭಾಷೆಯ ಮಹತ್ವದ ಬಗ್ಗೆ ಮಾತನಾಡಿದ ಜೋಶಿ, ಕ್ವಾಂಟಮ್ ಕಂಪ್ಯೂಟಿಂಗ್‌ನಂತಹ ಆಧುನಿಕ ತಂತ್ರಜ್ಞಾನಗಳಲ್ಲಿ ಸಂಸ್ಕೃತವನ್ನು ಬಳಸಬೇಕು ಎಂದು ಆಶಿಸಿದರು. ಸಂಸ್ಕೃತವನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಮಾಡಲು ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹನೀಯರು ಶ್ರಮಿಸಿದ್ದರು. ಸಂಸ್ಕೃತದ ಹೆಚ್ಚಿನ ಪ್ರಚಾರ ಮತ್ತು ಬಳಕೆಯಿಂದ ಮಾತ್ರ ಭಾರತವು ತನ್ನ ಪ್ರಾಚೀನ ಗೌರವವನ್ನು ಮರಳಿ ಪಡೆಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

Continue Reading

Latest

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್ ಅನ್ನು ಗುರಿಯಾಗಿಸಿದೆ: ಸಿಎಂ ಸಿದ್ದರಾಮಯ್ಯ ಆರೋಪ

VISTARANEWS.COM


on

ಚಾಮರಾಜನಗರ: ಕೇಂದ್ರದ ಬಿಜೆಪಿ ಸರ್ಕಾರವು ಕೇವಲ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೂರಿದ್ದಾರೆ. ಚಾಮರಾಜನಗರದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಮನೆ ಮೇಲೆ ಇಡಿ (ED) ದಾಳಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, “ಬಿಜೆಪಿಯವರ ಮೇಲೆ ಇಂತಹ ದಾಳಿಗಳು ಏಕಾಗುತ್ತಿಲ್ಲ?” ಎಂದು ಪ್ರಶ್ನಿಸಿದರು.

ಕ್ಷೇತ್ರ ಮರು ವಿಂಗಡಣೆಗೆ ವಿರೋಧ, ಮೀಸಲಾತಿಗಲ್ಲ:
ಮಹಿಳಾ ಮೀಸಲಾತಿ ವಿಚಾರವಾಗಿ ಮಾತನಾಡಿದ ಸಿಎಂ, “ಬಿಜೆಪಿಯೇ ಮಹಿಳಾ ಮೀಸಲಾತಿಯ ನಿಜವಾದ ವಿರೋಧಿ. ರಾಜೀವ್ ಗಾಂಧಿಯವರ ಕಾಲದಲ್ಲೇ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ತರಲಾಗಿತ್ತು, ಆಗ ಅದನ್ನು ರಾಜ್ಯಸಭೆಯಲ್ಲಿ ತಡೆದಿದ್ದೇ ಎನ್.ಡಿ.ಎ. ಈಗ ರಾಜಕೀಯ ಲಾಭಕ್ಕಾಗಿ ಕ್ಷೇತ್ರ ಮರು ವಿಂಗಡಣೆಯ ಷರತ್ತನ್ನು ಸೇರಿಸಿ ಮಸೂದೆ ತರುತ್ತಿದ್ದಾರೆ. ನಮ್ಮ ವಿರೋಧವಿರುವುದು ಕ್ಷೇತ್ರ ಮರು ವಿಂಗಡಣೆಗೆ ಹೊರತು ಮಹಿಳಾ ಮೀಸಲಾತಿಗಲ್ಲ,” ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ತೃತೀಯ ಭಾಷೆ ಹಿಂದಿಗೆ ಅಂಕ ನೀಡುವ ಹೈಕೋರ್ಟ್ ಆದೇಶವನ್ನು ಸರ್ಕಾರ ಪಾಲಿಸಲಿದೆ ಎಂದೂ ಅವರು ತಿಳಿಸಿದರು.

ಅಲ್ಪಸಂಖ್ಯಾತರ ಕಡೆಗಣನೆ ಇಲ್ಲ:
ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗುತ್ತಿದೆ ಎಂಬ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುವಾಗ ಅಲ್ಪಸಂಖ್ಯಾತ ನಾಯಕರು ಉಪಸ್ಥಿತರಿದ್ದರು ಮತ್ತು ಅವರ ಸಮ್ಮುಖದಲ್ಲೇ ನಿರ್ಧಾರಗಳಾಗಿವೆ ಎಂದು ತಿಳಿಸಿದರು. ಇನ್ನು ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆಯನ್ನು ತಳ್ಳಿಹಾಕಿದ ಅವರು, “ಇಲ್ಲಿಗೆ ಬರುವುದರಿಂದ ನನ್ನ ಕುರ್ಚಿ ಗಟ್ಟಿಯಾಗುತ್ತದೆ,” ಎಂದು ಮಾರ್ಮಿಕವಾಗಿ ನುಡಿದರು. ಕೊನೆಯಲ್ಲಿ, ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Continue Reading
Advertisement
Latest38 ನಿಮಿಷಗಳು ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ ಆಕ್ರೋಶ

Latest48 ನಿಮಿಷಗಳು ago

ನಟ, ರಾಜಕಾರಣಿ ವಿಜಯ್‌ ವಿರುದ್ಧ ಕಮಲ್‌ ಹಾಸನ್‌ ಆಕ್ರೋಶ; ಕಾರಣ ಏನು?

Latest1 ಗಂಟೆ ago

ಮಹಿಳಾ ಮೀಸಲಾತಿ ಕಾಂಗ್ರೆಸ್ ವಿರುದ್ಧ ಏಪ್ರಿಲ್. 25ರಂದು ಆಕ್ರೋಶ ಯಾತ್ರೆ: ಬಿಜೆಪಿ

Latest2 ಗಂಟೆಗಳು ago

ಭಾರತ ಈಗ ‘ವಿಶ್ವಗುರು’ ಅಲ್ಲ, ಆ ಪದ ಬಳಸಬೇಡಿ: ಮುರಳಿ ಮನೋಹರ ಜೋಶಿ ಪ್ರತಿಪಾದನೆ

Latest2 ಗಂಟೆಗಳು ago

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್ ಅನ್ನು ಗುರಿಯಾಗಿಸಿದೆ: ಸಿಎಂ ಸಿದ್ದರಾಮಯ್ಯ ಆರೋಪ

Latest3 ಗಂಟೆಗಳು ago

ಅಮೆರಿಕ ಜತೆ ಮಾತುಕತೆಗೆ ಇರಾನ್‌ ಒಪ್ಪಿಗೆ; ಇಸ್ಲಾಮಾಬಾದ್‌ನತ್ತ ಜಗತ್ತಿನ ಕಣ್ಣು; ಬಗೆಹರಿಯಲಿದೆಯೇ ಬಿಕ್ಕಟ್ಟು?

Latest3 ಗಂಟೆಗಳು ago

ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ: ಸಿಎಂ ಸಿದ್ದರಾಮಯ್ಯ

Latest3 ಗಂಟೆಗಳು ago

ಕೃಷ್ಣಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್-ಡಿಎಂಕೆ ಅಭ್ಯರ್ಥಿಗಳ ಪರ ಸಚಿವ ಈಶ್ವರ ಖಂಡ್ರೆ ಪ್ರಚಾರ

Latest3 ಗಂಟೆಗಳು ago

ಸಿಇಟಿ ಪರೀಕ್ಷೆ: ವಸ್ತ್ರ ಸಂಹಿತೆ ಕಡ್ಡಾಯ; ಅಭ್ಯರ್ಥಿಗಳೂ ಈ ಸೂಚನೆಗಳನ್ನು ಪಾಲಿಸಿದರೆ ಕ್ಷೇಮ

Latest4 ಗಂಟೆಗಳು ago

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌