PU Lecturer Recruitment: ಪ್ರೌಢಶಾಲಾ ಶಿಕ್ಷಕರು ಪಿಯು ಕಾಲೇಜಿಗೆ ಬಡ್ತಿ ಪಡೆಯಲು ಅರ್ಹತಾ ಅಂಕ ಶೇ.50ಕ್ಕೆ ಇಳಿಕೆ - Vistara News

ಕರ್ನಾಟಕ

PU Lecturer Recruitment: ಪ್ರೌಢಶಾಲಾ ಶಿಕ್ಷಕರು ಪಿಯು ಕಾಲೇಜಿಗೆ ಬಡ್ತಿ ಪಡೆಯಲು ಅರ್ಹತಾ ಅಂಕ ಶೇ.50ಕ್ಕೆ ಇಳಿಕೆ

PU Lecturer Recruitment: ಸದ್ಯ ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ವೇಳೆ ಶೇ.75 ನೇರ ನೇಮಕಾತಿ ಹಾಗೂ ಶೇ.25 ಹುದ್ದೆಗಳಿಗೆ ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ನೀಡಿ ಭರ್ತಿ ಮಾಡಲಾಗುತ್ತಿದೆ. ಹೀಗಾಗಿ ಪ್ರೌಢಶಾಲಾ ಶಿಕ್ಷಕರು ಪಿಯು ಉಪನ್ಯಾಸಕರಾಗಲು ಅರ್ಹತಾ ಅಂಕಗಳನ್ನು ಶೇ.55 ನಿಂದ 50ಕ್ಕೆ ಇಳಿಕೆ ಮಾಡಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರೌಢಶಾಲಾ ಶಿಕ್ಷಕರು ಪದವಿಪೂರ್ವ ಕಾಲೇಜು ಉಪನ್ಯಾಸಕರಾಗಿ ಬಡ್ತಿ (PU Lecturer Recruitment) ಪಡೆಯಲು ಅರ್ಹತಾ ಅಂಕಗಳನ್ನು ಶೇ.55 ನಿಂದ 50ಕ್ಕೆ ಇಳಿಸಲು, ʼಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ʼಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿಗೆ ‌ಸಂಬಂಧಿಸಿದಂತೆ ನಿಯಮಗಳನ್ನು ಬದಲಾವಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಉಪನ್ಯಾಸಕರಾಗಲು ಇಚ್ಛಿಸುವ ಶಿಕ್ಷಕರು ಅರ್ಹತಾ ಪರೀಕ್ಷೆ ಬರೆಯಬೇಕಿದ್ದು, ಇನ್ನು ಮುಂದೆ ಶೇ.50 ಅಂಕ ಪಡೆದರೆ ಪಿಯು ಕಾಲೇಜು ಉಪನ್ಯಾಸಕಗಲು ಅರ್ಹರಾಗುತ್ತಾರೆ.

ಸದ್ಯ ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ವೇಳೆ ಶೇ.75 ನೇರ ನೇಮಕಾತಿ ಹಾಗೂ ಶೇ.25 ಹುದ್ದೆಗಳಿಗೆ ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ನೀಡಿ ಭರ್ತಿ ಮಾಡಲಾಗುತ್ತಿದೆ. ಹೀಗಾಗಿ ಪ್ರೌಢಶಾಲಾ ಶಿಕ್ಷಕರು ಪಿಯು ಉಪನ್ಯಾಸಕರಾಗಲು ಅರ್ಹತಾ ಪರೀಕ್ಷೆಯಲ್ಲಿ ಸಾಮಾನ್ಯ ಅಭ್ಯರ್ಥಿಗಳು ಶೇ.55 ಅಂಕ, ಪರಿಶಿಷ್ಟ ಜಾತಿ, ಪಂಗಡದವರು ಶೇ.50 ಅಂಕ ಪಡೆಯಬೇಕಿದೆ. ಇದೀಗ ಅರ್ಹತಾ ಅಂಕಗಳನ್ನು ಶೇ.55 ನಿಂದ 50ಕ್ಕೆ ಇಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ; ಹೆಸರು ಬದಲಾವಣೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ತೀವ್ರ ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ (Ramanagara as Bengaluru South District) ಎಂದು ಬದಲಾವಣೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ (cabinet meeting) ಒಪ್ಪಿಗೆ ನೀಡಿದೆ. ರಾಮನಗರ ಜಿಲ್ಲೆಯ ಹೆಸರು (Bengaluru South District) ಮಾತ್ರ ಬದಲಾವಣೆಯಾಗಲಿದೆ, ಜಿಲ್ಲಾ ಕೇಂದ್ರ (ರಾಮನಗರ) ಸೇರಿ ಉಳಿದ ಎಲ್ಲವೂ ಹಾಗೆ ಉಳಿಯಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ದೃಷ್ಟಿಯಿಂದ ಈ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಉಳಿದ ಎಲ್ಲವೂ ಹಾಗೇ ಉಳಿಯಲಿದೆ. ಚುನಾವಣಾ ದೃಷ್ಟಿಯಿಂದ ಹೀಗೆ ಮಾಡಿಲ್ಲ. ಜನರ ಹಿತಾಸಕ್ತಿ ಕಾಪಾಡಲು ಜೊತೆಗೆ ಬ್ರ್ಯಾಂಡ್ ಬೆಂಗಳೂರು ದೃಷ್ಟಿಯಿಂದ ಹೀಗೆ ಮಾಡಲಾಗಿದೆ ಎಂದು ತಿಳಿಸಿದರು.

ರಾಮನಗರದವರೂ ಬ್ರ್ಯಾಂಡ್ ಬೆಂಗಳೂರಿಗೆ ಬರಬೇಕು ಎನ್ನುತ್ತಾರೆ. ಜನರ ಅಭಿಪ್ರಾಯ, ಶಾಸಕರ ಅಭಿಪ್ರಾಯ , ಕೆಲ ನಾಯಕರ ಅಭಿಪ್ರಾಯ ತೆಗೆದುಕೊಂಡು ತೀರ್ಮಾನ ಮಾಡಿದ್ದೇವೆ. ನೋಟಿಫೈ ಮಾಡಬೇಕು, ಆಮೇಲೆ ಹೆಸರು ಬದಲಾವಣೆ ಪ್ರಕ್ರಿಯೆ ಶುರುವಾಗುತ್ತೆ. ಇದಕ್ಕೆ ಒಂದು ಸಮಿತಿಯನ್ನು ಮಾಡಲಾಗುತ್ತದೆ ಎಂದು ರಾಮನಗರ ಹೆಸರು ಬದಲಾವಣೆಗೆ ಸಚಿವ ಎಚ್.ಕೆ ಪಾಟೀಲ್ ಸಮರ್ಥನೆ ಮಾಡಿಕೊಂಡರು.

ಇದನ್ನೂ ಓದಿ | Shalini Rajneesh: ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ನೇಮಕ; ಪತಿ ಜಾಗಕ್ಕೆ ಪತ್ನಿಯ ಆಯ್ಕೆ

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

  • 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ (ಕೆಎಎಸ್‌) ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ವಿಶೇಷ ಅವಕಾಶ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶಕ್ಕೆ ಕ್ಯಾಬಿನೆಟ್ ಅನುಮೋದನೆ.
  • KIADBಯ ಧಾರವಾಡ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2.64 ಎಕರೆ ಸಿಎ ನಿವೇಶನವನ್ನು ಲೋಕ ಶಿಕ್ಷಣ ಟ್ರಸ್ಟ್ ಗೆ ಹಂಚಿಕೆ ಮಾಡಲು ಕ್ಯಾಬಿನೆಟ್ ತೀರ್ಮಾನ. ಈ ಹಂಚಿಕೆ ಜೊತೆಗೆ ಶೇ.75 ರಿಯಾಯಿತಿ ನೀಡಲು ತೀರ್ಮಾನ.
  • ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್‌ (AVGC) 2.0.- “ಉತ್ಕೃಷ್ಟತಾ ಕೇಂದ್ರವನ್ನು ” 16 ಕೋಟಿಗಳ ಅಂದಾಜು ಮೊತ್ತದಲ್ಲಿ (CAPEX-ರೂ. 7.00 ಕೋಟಿಗಳು ಮತ್ತು” OPEX-ರೂ. 9.00 ಕೋಟಿಗಳು) ಸ್ಥಾಪನೆಗೆ ಅನುಮೋದನೆ.
  • ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ‌ ಸಂಬಂಧಿಸಿದಂತೆ “ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024”ಕ್ಕೆ ಅನುಮೋದನೆ.
  • ಪ್ರೌಢಶಾಲಾ ಶಿಕ್ಷಕರಿಂದ ಪದವಿಪೂರ್ವ ಕಾಲೇಜಿಗೆ ಬಡ್ತಿ ಪಡೆಯಲು 55% ನಿಂದ 50% ಅಂಕಕ್ಕೆ ಇಳಿಸಿ ಪರಿಷ್ಕರಣೆ.
  • ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ ಅಡಿ ಸ್ಥಾಪನೆಗೆ ಅನುಮೋದನೆ
  • ಕೆ ಆರ್ ಎಸ್ ಬೃಂದಾವನ ಉದ್ಯಾನವನವನ್ನು ಮೇಲ್ದರ್ಜೆಗೆ ಏರಿಸಲು ಕ್ಯಾಬಿನೆಟ್ ಅನುಮೋದನೆ. 2633 ಕೋಟಿ ರೂ. ದಲ್ಲಿ ಪಿಪಿಪಿ ಮಾಡೆಲ್‌ನಲ್ಲಿ ಮೇಲ್ದರ್ಜೆಗೆ ಏರಿಸಲು ಅನುಮೋದನೆ. ಟೆಂಡರ್ ಮೂಲಕ ಅನುಷ್ಠಾನ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

B.S.Yediyurappa: ಯಡಿಯೂರಪ್ಪಗೆ ಮತ್ತೆ ಬಿಗ್‌ ರಿಲೀಫ್‌; ಪೋಕ್ಸೊ ಕೇಸ್‌ನಲ್ಲಿ ಬಂಧಿಸದಂತೆ ಹೈಕೋರ್ಟ್‌ ಸೂಚನೆ

B.S.Yediyurappa: ಪೋಕ್ಸೊ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮತ್ತು ತನಿಖೆ ರದ್ದುಪಡಿಸುವಂತೆ ಕೋರಿ ಬಿಎಸ್‌ವೈ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ವೈರನ್ನು ಬಂಧಿಸದಂತೆ ಸಿಐಡಿಗೆ ಸೂಚನೆ ನೀಡಿದೆ.

VISTARANEWS.COM


on

B.S.Yediyurappa
Koo

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (B.S.Yediyurappa) ಅವರಿಗೆ ಮತ್ತೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಯನ್ನು ಬಂಧಿಸದಂತೆ ಸಿಐಡಿಗೆ ಹೈಕೋರ್ಟ್‌ ಸೂಚನೆ ನೀಡಿದೆ. ಜತೆಗೆ ಪೋಕ್ಸೋ ವಿಶೇಷ ಕೋರ್ಟ್‌ಗೆ ಹಾಜರಾಗುವುದಕ್ಕೆ ನೀಡಿದ್ದ ವಿನಾಯಿತಿಯನ್ನು ಕೋರ್ಟ್ ಮುಂದುವರಿಸಿದೆ.

ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮತ್ತು ತನಿಖೆ ರದ್ದುಪಡಿಸುವಂತೆ ಕೋರಿ ಬಿಎಸ್‌ವೈ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ವೈರನ್ನು ಬಂಧಿಸದಂತೆ ಸಿಐಡಿಗೆ ಸೂಚನೆ ನೀಡಿದೆ.

ಇದನ್ನೂ ಓದಿ | Martin Movie: ವಿಎಫ್‌ಎಕ್ಸ್‌ಗೆ 50 ಲಕ್ಷ ಕಮಿಷನ್‌ ಆರೋಪ; ʻಮಾರ್ಟಿನ್‌ʼ ನಿರ್ದೇಶಕ ಎ.ಪಿ. ಅರ್ಜುನ್‌ಗೆ ಸಂಕಷ್ಟ!

ಪೋಕ್ಸೊ ಪ್ರಕರಣಕ್ಕೆ (POCSO Case) ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಇತ್ತೀಚೆಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಿ.ಎಸ್. ಯಡಿಯೂರಪ್ಪ, ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಹೀಗಾಗಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಿಐಡಿ ಸಲ್ಲಿಸಿತ್ತು.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ದರ್ಶನ್‌ಗಾಗಿ ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ವಿಜಯಲಕ್ಷ್ಮಿ!

Actor Darshan wife Vijayalakshmi Darshan Visit Kollur Temple
Actor Darshan wife Vijayalakshmi Darshan Visit Kollur Temple

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ಇದೀಗ ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿ ದೇವಾಲಯದಲ್ಲಿ ನವ ಚಂಡಿಕಾ ಹೋಮ ಮಾಡಿಸಿದ್ದಾರೆ.

ಇದನ್ನೂ ಓದಿ | Koppala News: ಗಾಯಗೊಂಡ ರಣಹದ್ದಿಗೆ ಆರೈಕೆ ಮೂಲಕ ಮಾನವೀಯತೆ ತೋರಿದ ಸ್ನೇಕ್ ಪುಟ್ಟು

ನರಸಿಂಹ ಅಡಿಗ ನೇತೃತ್ವದಲ್ಲಿ ನವ ಚಂಡಿಕಾ ಹೋಮ, ಪಾರಾಯಣ ನಡೆದಿದೆ. ದರ್ಶನ್ ಬಂಧನ ಮುಕ್ತಿಗಾಗಿ ವಿಜಯಲಕ್ಷ್ಮೀ ಪ್ರಾರ್ಥನೆ ಮಾಡಿದ್ದಾರೆ. ಜುಲೈ 24ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ್ ಅವರು ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ ಮಾಡಿದ್ರು. ಮಗನ ಸ್ಕೂಲ್ ಸೀಟ್ ವಿಚಾರಕ್ಕೆ ಚರ್ಚೆ ಮಾಡಿದ್ರು ಎನ್ನಲಾಗ್ತಿದೆ. ದರ್ಶನ್ ವಿಚಾರವಾಗಿ ಮಾತುಕತೆ ನಡೆದಿಲ್ಲ ಎನ್ನಲಾಗ್ತಿದೆ.

Continue Reading

ಬೆಂಗಳೂರು

Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

Wonderla Offer: ಸ್ನೇಹಿತರ ದಿನಾಚರಣೆ ಪ್ರಯುಕ್ತ ಆಗಸ್ಟ್ 4ರಂದು ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ಲಾ ಹಾಲಿಡೇಸ್ ವಿಶೇಷ ಕೊಡುಗೆ ಘೋಷಿಸಿದೆ. ಆಗಸ್ಟ್‌ 4 ಸ್ನೇಹಿತರ ದಿನದಂದು ಒಂದು ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಉಚಿತವಾಗಿರಲಿದೆ. ಈ ಕೊಡುಗೆಯು ಆನ್‌ಲೈನ್‌ನಲ್ಲಿ ಬುಕ್‌ ಮಾಡುವವರಿಗೆ ಮಾತ್ರ ಅನ್ವಯವಾಗಲಿದೆ.

VISTARANEWS.COM


on

On the occasion of Friendship Day Wonderla announced a buy one ticket get another ticket free offer
Koo

ಬೆಂಗಳೂರು: ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ಲಾ ಹಾಲಿಡೇಸ್, ಸ್ನೇಹಿತರ ದಿನಾಚರಣೆ ಪ್ರಯುಕ್ತ ಆಗಸ್ಟ್ 4 ರಂದು ವಿಶೇಷ ಕೊಡುಗೆ ಘೋಷಿಸಿದೆ. (Wonderla Offer) ಆಗಸ್ಟ್‌ 4 ಸ್ನೇಹಿತರ ದಿನದಂದು ಒಂದು ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಉಚಿತವಾಗಿರಲಿದೆ. ಈ ಕೊಡುಗೆಯು ಆನ್‌ಲೈನ್‌ನಲ್ಲಿ ಬುಕ್‌ ಮಾಡುವವರಿಗೆ ಮಾತ್ರ ಅನ್ವಯವಾಗಲಿದೆ.

ಈ ಕುರಿತು ವಂಡರ್‌ಲಾ ಹಾಲಿಡೇಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ. ಚಿಟ್ಟಿಲಪ್ಪಿಳ್ಳಿ ಮಾತನಾಡಿ, ಸ್ನೇಹಿತರ ದಿನವನ್ನು ಇನ್ನಷ್ಟು ವಿಶೇಷಗೊಳಿಸಲು ವಂಡರ್‌ಲಾ ಟಿಕೆಟ್‌ ಖರೀದಿಯ ಮೇಲೆ ಕೊಡುಗೆ ನೀಡಿದೆ. ಪ್ರತಿಯೊಬ್ಬರು ಹೆಚ್ಚು ಮನರಂಜನೆ ಅನುಭವಿಸುವುದು ಸ್ನೇಹಿತರು ಜತೆಗಿದ್ದ ಸಂದರ್ಭದಲ್ಲಿ. ಈ ಮನರಂಜನೆಗೆ ವೇದಿಕೆಯಾಗಿ ವಂಡರ್‌ಲಾ ಈ ಕೊಡುಗೆ ನೀಡಿರುವುದು, ತಮ್ಮ ಸ್ನೇಹಿತರೊಂದಿಗೆ ವಂಡರ್‌ಲಾಗೆ ಆಗಮಿಸಿ ಇಲ್ಲಿನ ಇನ್ನಷ್ಟು ಮೋಜು ಮಸ್ತಿ ಮಾಡಲು ಪ್ರೇರೇಪಿಸುತ್ತದೆ.

ಇದನ್ನೂ ಓದಿ: Bengaluru Power Cut: ಜು.27, 28, 30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಈ ವಿಶೇಷ ಕೊಡುಗೆಗಳಲ್ಲಿ ಲೈವ್ ಡಿಜೆ, ವಿಶೇಷ ಸಂಜೆ ಜುಂಬಾ ಸೆಷನ್‌ಗಳು, ಮೋಜಿನ ಆಟಗಳು ಮತ್ತು ಬಹುಮಾನಗಳು, ಎಲ್ಲಾ ರೋಮಾಂಚಕ ಪಾರ್ಕ್ ರೈಡ್‌ಗಳು ಮತ್ತು ಸೌಕರ್ಯಗಳನ್ನು ಒದಗಿಸುತ್ತಿದ್ದು, ನಿಮ್ಮ ಸ್ನೇಹಿತರೊಂದಿಗೆ ಮೋಜು-ಮಸ್ತಿ ಮಾಡಲು ವಂಡರ್‌ಲಾ ಉತ್ತಮ ತಾಣವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ಎಲ್ಲಾ ಉದ್ಯಾನವನಗಳು ವಿಸ್ತೃತ ಅವಧಿಯವರೆಗೆ ತೆರೆದಿರಲಿವೆ. ಹೀಗಾಗಿ ಸಂಜೆಯ ಹೆಚ್ಚುವರಿ ಸಮಯವನ್ನು ವಂಡರ್‌ಲಾದಲ್ಲಿ ಕಳೆಯಬಹುದು.

ಇದನ್ನೂ ಓದಿ: Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

ಆನ್‌ಲೈನ್ ಪೋರ್ಟಲ್ https://bookings.wonderla.com/ ನಲ್ಲಿ ಮುಂಗಡವಾಗಿ ತಮ್ಮ ಪ್ರವೇಶ ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಅಥವಾ ಗ್ರಾಹಕರು ನೇರವಾಗಿ ಪಾರ್ಕ್ ಕೌಂಟರ್‌ಗಳಿಂದ ಟಿಕೆಟ್‌ಗಳನ್ನು ಖರೀದಿಸಬಹುದು. ಹೆಚ್ಚಿನ ಮಾಹಿತಿಗಾಗಿ +91 80372 30333 ಅಥವಾ +91 80350 73966 ಬೆಂಗಳೂರು ಪಾರ್ಕ್ ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಬೆಂಗಳೂರು

Kargil Vijay Diwas: ಬೆಂಗಳೂರಿನ ಐಟಿಐ ಸೆಂಟ್ರಲ್ ಶಾಲೆಯಲ್ಲಿ ಕಾರ್ಗಿಲ್ ವಿಜಯ್ ದಿನಾಚರಣೆ

Kargil Vijay Diwas: ಬೆಂಗಳೂರು ನಗರದ ದೂರವಾಣಿ ನಗರದ ಐ.ಟಿ.ಐ ಸೆಂಟ್ರಲ್ ಶಾಲೆಯ ಎನ್‌ಸಿಸಿ ಟ್ರೂಪ್‌ನ ನಂ. 2 ಕರ್ನಾಟಕ ಏರ್ (ಟೆಕ್ನಿಕಲ್) ಸ್ಕ್ವಾಡ್ರನ್ ಮಕ್ಕಳಿಂದ ಕಾರ್ಗಿಲ್ ವಿಜಯ್ ದಿವಸದ ರಜತ ಮಹೋತ್ಸವ ಕಾರ್ಯಕ್ರಮ ಜರುಗಿತು.

VISTARANEWS.COM


on

Kargil Vijay Diwas Silver Jubilee Programme at ITI Central School Bengaluru
Koo

ಬೆಂಗಳೂರು: ನಗರದ ದೂರವಾಣಿ ನಗರದ ಐ.ಟಿ.ಐ ಸೆಂಟ್ರಲ್ ಶಾಲೆಯ ಎನ್‌ಸಿಸಿ ಟ್ರೂಪ್‌ನ ನಂ. 2 ಕರ್ನಾಟಕ ಏರ್ (ಟೆಕ್ನಿಕಲ್) ಸ್ಕ್ವಾಡ್ರನ್ ಮಕ್ಕಳಿಂದ ಕಾರ್ಗಿಲ್ ವಿಜಯ್ ದಿವಸದ (Kargil Vijay Diwas) ರಜತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ಎನ್‌ಸಿಸಿ ಕೆಡೆಟ್‌ಗಳಿಂದ ವೀರಯೋಧರ ಭಾವಚಿತ್ರಗಳಿಗೆ ಪುಷ್ಪ ಅರ್ಪಿಸಿ, ಗೌರವ ನಮನ ಸಲ್ಲಿಸಿ, ಪರೇಡ್ ನಡೆಸುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಈ ವೇಳೆ ಅಮರರ ಬಗ್ಗೆ ಕನ್ನಡ, ಹಿಂದಿ ಹಾಗೂ ಆಂಗ್ಲ ಭಾಷೆಯಲ್ಲಿ ಅಂಕಣಗಳನ್ನು ವಾಚಿಸಿದರು. ಬಳಿಕ ಹಾಡು ಮತ್ತು ನೃತ್ಯದ ಮೂಲಕ ನಮನ ಸಲ್ಲಿಸಿದರು. ಎನ್.ಸಿ.ಸಿ. ಅಧಿಕಾರಿ ಬಾಲಕೃಷ್ಣ ವಿ.ಎಚ್. ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಇದನ್ನೂ ಓದಿ: Bengaluru Power Cut: ಜು.27, 28, 30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲೆ ಪೊನ್ಮಲಾರ್, ಉಪಪ್ರಾಂಶುಪಾಲೆ ಶೈಲಜಾ ಆರಾಧ್ಯ, ಮುಖ್ಯ ಶಿಕ್ಷಕಿ ಅರುಣಾ ಜಾನಕಿರಾಮನ್ ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ಧಾರಾಕಾರ ಮಳೆ ಹಿನ್ನೆಲೆ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast: ರಾಜ್ಯಾದ್ಯಂತ ಮಳೆ (rain News) ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಶನಿವಾರದಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಚಿಕ್ಕಮಗಳೂರು/ಕೊಡಗು: ಭಾರಿ ಗಾಳಿ-ಮಳೆ (Karnataka Weather Forecast) ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ (School Holiday) ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶನಿವಾರ ಮಾತ್ರ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪುರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನೂ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿಗೆ ಯಾವುದೇ ರಜೆ ಇಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕೊಡಗಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಲಕ್ಷ್ಮಣ ತೀರ್ಥ‌ನದಿಯಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಹರಿಹರ-ಬಲ್ಯಮುಂಡೂರು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ನದಿ ನೀರು ರಸ್ತೆ ಮೇಲೆ ಹರಿದಿದೆ. ಪೊನ್ನಂಪೇಟೆ ತಾಲೂಕಿನ ಗ್ರಾಮಗಳ ಗದ್ದೆಪ್ರದೇಶಗಳು ಮುಳುಗಡೆಯಾಗಿದೆ.

ಇನ್ನೂ ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ರಜೆ ಮುಂದುವರಿದಿದೆ. ರಾಮದುರ್ಗ ತಾಲೂಕು ಹೊರತುಪಡಿಸಿ ಎಲ್ಲ ಕಡೆ ಶಾಲಾ‌-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೊಹ್ಮದ್ ರೋಷನ್‌ರಿಂದ ರಜೆ‌ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲೂ ಮಳೆ ಜತೆಗೆ ಶೀತಗಾಳಿ ಮುಂದುವರಿದಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಇದೆ. ಮುಂದಿನ ಸಾರ್ವಜನಿಕ ರಜಾ ದಿನಗಳಲ್ಲಿ ಹೆಚ್ಚುವರಿ ವರ್ಗಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ (ಘಟ್ಟ ಪ್ರದೇಶಗಳು) ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು 40-50ಕಿ.ಮೀ ತಲುಪುವ ಸಾಧ್ಯತೆಯಿದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral News
Latest8 seconds ago

Viral News: ಊಟದ ಪಾರ್ಸೆಲ್‌‌ನಲ್ಲಿ ಉಪ್ಪಿನಕಾಯಿ ಹಾಕಲು ಮರೆತ ಹೋಟೆಲ್‌‌; 35,000 ರೂ. ದಂಡ ಹಾಕಿದ ಕೋರ್ಟ್‌!

B.S.Yediyurappa
ಕರ್ನಾಟಕ6 mins ago

B.S.Yediyurappa: ಯಡಿಯೂರಪ್ಪಗೆ ಮತ್ತೆ ಬಿಗ್‌ ರಿಲೀಫ್‌; ಪೋಕ್ಸೊ ಕೇಸ್‌ನಲ್ಲಿ ಬಂಧಿಸದಂತೆ ಹೈಕೋರ್ಟ್‌ ಸೂಚನೆ

On the occasion of Friendship Day Wonderla announced a buy one ticket get another ticket free offer
ಬೆಂಗಳೂರು11 mins ago

Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

Kargil Vijay Diwas Silver Jubilee Programme at ITI Central School Bengaluru
ಬೆಂಗಳೂರು13 mins ago

Kargil Vijay Diwas: ಬೆಂಗಳೂರಿನ ಐಟಿಐ ಸೆಂಟ್ರಲ್ ಶಾಲೆಯಲ್ಲಿ ಕಾರ್ಗಿಲ್ ವಿಜಯ್ ದಿನಾಚರಣೆ

FDCI & ICW 2024
ಫ್ಯಾಷನ್14 mins ago

FDCI & ICW 2024: ಇಂಡಿಯಾ ಕೌಚರ್‌ ವೀಕ್‌ನ 2ನೇ ದಿನ ಹೆಜ್ಜೆ ಹಾಕಿದ ಜಾಕ್ವೆಲೀನ್‌ ಫರ್ನಾಂಡಿಸ್‌

karnataka Weather Forecast
ಮಳೆ18 mins ago

Karnataka Weather : ಧಾರಾಕಾರ ಮಳೆ ಹಿನ್ನೆಲೆ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ

Kargil Vijay Diwas 2024
ದೇಶ19 mins ago

Kargil Vijay Diwas 2024: ಹುತಾತ್ಮರಾಗುವ ಮುನ್ನ ಕಾರ್ಗಿಲ್‌ ಹೀರೊ ಕ್ಯಾ. ವಿಕ್ರಮ್‌ ಬಾತ್ರಾ ಆಡಿದ್ದ ಈ ಮಾತುಗಳು ಸ್ಫೂರ್ತಿದಾಯಕ!

Venkatesh Iyer
ಪ್ರಮುಖ ಸುದ್ದಿ21 mins ago

Venkatesh Iyer : ಟೀಮ್ ಇಂಡಿಯಾದಿಂದ ನಿರ್ಲಕ್ಷ್ಯ, ಹೊಸ ತಂಡ ಸೇರಿದ ವೆಂಕಟೇಶ್ ಅಯ್ಯರ್​

Narendra Modi
ದೇಶ34 mins ago

Narendra Modi: ಮೋದಿ ಎಚ್ಚರಿಕೆಗೆ ಪಾಕಿಸ್ತಾನ ಥಂಡಾ; ಗಡಿಯಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ!

Viral Video
Latest56 mins ago

Viral Video: ವಿಚ್ಛೇದನ ಸಿಕ್ಕಿದ ಖುಷಿಗೆ ʼಡಿವೋರ್ಸ್‌ ಪಾರ್ಟಿʼ ಮಾಡಿ ಕುಣಿದು ಕುಪ್ಪಳಿಸಿದ ಯುವತಿ! ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ1 hour ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ4 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ1 day ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌