Pulse of Karnataka 2: ಹಳೆ ಮೈಸೂರು ವಲಯ: JDS ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಆಗುವರೇ ಕಿಂಗ್?‌ - Vistara News

ಕರ್ನಾಟಕ

Pulse of Karnataka 2: ಹಳೆ ಮೈಸೂರು ವಲಯ: JDS ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಆಗುವರೇ ಕಿಂಗ್?‌

ಹಳೆ ಮೈಸೂರು ಪ್ರಾಂತ್ಯ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಈ ಭಾಗದಲ್ಲಿ ಒಟ್ಟು 44 ವಿಧಾನಸಭಾ ಕ್ಷೇತ್ರಗಳಿವೆ. 2018ರಲ್ಲಿ ಜಿಜೆಪಿ – 05, ಕಾಂಗ್ರೆಸ್ -15, ಜೆಡಿಎಸ್ -22, ಇತರೆ -2 ಸ್ಥಾನ ಗೆಲ್ಲಲಾಗಿತ್ತು. ನಂತರ ಉಪಚುನಾವಣೆಯಲ್ಲಿ ಬಿಜೆಪಿ ಸಂಖ್ಯೆ ಹೆಚ್ಚಳವಾಗಿತ್ತು.

VISTARANEWS.COM


on

pulse-of-karnataka-vistara akhada survey Old Mysuru Region of Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಚುನಾವಣಾ ಪರ್ವಕಾಲ. ಸದ್ಯ ಜನರ ಒಲವು ಯಾವ ಪಕ್ಷದ ಕಡೆಗಿದೆ. ಯಾವ ಕ್ಷೇತ್ರದಲ್ಲಿ ಯಾರ ಹವಾ ಇದೆ.? ವಲಯವಾರು ಯಾವ ರಿಸಲ್ಟ್ ಬರಬಹುದು.? ಹೀಗೆ ಒಟ್ಟು 12 ಪ್ರಶ್ನೆಗಳನ್ನು ರಾಜ್ಯದ ಜನತೆಯ ಮುಂದಿಟ್ಟು ನಾಡಿಮಿಡಿತ ಅರಿಯೋ ಪ್ರಯತ್ನವನ್ನು ವಿಸ್ತಾರ ನ್ಯೂಸ್ ನಡೆಸಿದೆ. ಮಾರ್ಚ್‌ ಮೊದಲ ವಾರದಲ್ಲಿ ಪ್ರಕಟವಾಗಿದ್ದ ಪಲ್ಸ್‌ ಆಫ್‌ ಕರ್ನಾಟಕ ಸಮೀಕ್ಷೆಯ ನಂತರ ಇದೀಗ ಎರಡನೇ ಆವೃತ್ತಿ ಸಮೀಕ್ಷೆ ನಡೆದಿದೆ.

ಇದಕ್ಕಾಗಿ ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಇದುವೇ ಪಲ್ಸ್ ಆಫ್ ಕರ್ನಾಟಕ.

ಪಲ್ಸ್ ಆಫ್ ಕರ್ನಾಟಕ ಸರ್ವೇಯಲ್ಲಿ ವಿಸ್ತಾರ ನ್ಯೂಸ್​ನ 300ಕ್ಕೂ ಹೆಚ್ಚು ಸಿಬ್ಬಂದಿಯ ಜೊತೆಗೆ ಅಖಾಡದ ಅತಿದೊಡ್ಡ ತಂಡ ಮನೆಮನೆ ಬಾಗಿಲಿಗೆ ತೆರಳಿ ಮಾಹಿತಿ ಸಂಗ್ರಹಿಸಿದೆ. ಉದ್ಯಮಿಗಳು, ಸರ್ಕಾರಿ ನೌಕರರು, ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಬೀದಿ ಬದಿ ವ್ಯಾಪಾರಿಗಳು ಹೀಗೆ ಎಲ್ಲಾ ವರ್ಗ, ಸಮುದಾಯದ ಜನರನ್ನ ಮಾತನಾಡಿಸಿ ಸಮೀಕ್ಷೆ ನಡೆಸಲಾಗಿದೆ.

ಮೊದಲ ಹಂತದಲ್ಲಿ ಹಳೆ ಮೈಸೂರು ಭಾಗದ ಜನರ ಪಲ್ಸ್ ಹೇಗಿದೆ ಎನ್ನುವುದನ್ನು ಪ್ರಸ್ತುತಪಡಿಸುತ್ತಿದ್ದೇವೆ. ಹಳೆ ಮೈಸೂರು ಭಾಗದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಿದೆ.

ಇದನ್ನೂ ಓದಿ: Pulse of Karnataka 2: ಹಳೆ ಮೈಸೂರು ವಲಯ: JDS ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಆಗುವರೇ ಕಿಂಗ್?‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಅಮಿತ್‌ ಶಾ ರೌಡಿ ಎಂದಿದ್ದ ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Lok Sabha Election 2024: ಗೃಹ ಸಚಿವ ಅಮಿತ್‌ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮಾಡಿರುವ ಆರೋಪಕ್ಕೆ ಬಿಜೆಪಿ ಕೆಂಡಾಮಂಡಲವಾಗಿದೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಈ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಎನ್.‌ ರವಿಕುಮಾರ್‌ ಮಾತನಾಡಿ, ಯತೀಂದ್ರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರೌಡಿ, ಗೂಂಡಾ ಎಂಬೆಲ್ಲ ಪದ ಬಳಕೆಯನ್ನು ಮಾಡಿದ್ದಾರೆ. ಅಲ್ಲದೆ, ಕೊಲೆಗಡುಕರು ಎಂದೂ ಹೇಳಿದ್ದಾರೆ. ಹೀಗಾಗಿ ಯತೀಂದ್ರ ಅವರು ತಮ್ಮ ಹೇಳಿಕೆಯಲ್ಲಿ ಮಾಡಲಾಗಿರುವ ಆರೋಪವನ್ನು ನಿರೂಪಿಸಬೇಕು. ಇಲ್ಲವಾದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

VISTARANEWS.COM


on

Lok Sabha Election 2024 and BJP files complaint with Election Commission against Yathindra for calling Amit Shah a rowdy and also CM Siddaramaiah in this Photo
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಭಾಷಣದಲ್ಲಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ (BJP Karnataka) ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿರುದ್ಧ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಹಾಗೂ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗವು ದೂರು ನೀಡಿದೆ. ಈಗ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾರೆ. ಅವರು ತಮ್ಮ ಹೇಳಿಕೆಯನ್ನು ಸಾಬೀತು ಮಾಡಬೇಕು. ಸಾಬೀತುಪಡಿಸುವಲ್ಲಿ ಅವರು ವಿಫಲವಾದರೆ ಚುನಾವಣಾ ಆಯೋಗವು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ದೂರಿನಲ್ಲಿ ಉಲ್ಲೇಖಿಸಿದೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎನ್. ರವಿಕುಮಾರ್, ಮಾ. 28ರಂದು ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹಾಗೂ ಅಮಿತ್ ಶಾ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರೌಡಿ, ಗೂಂಡಾ ಎಂಬೆಲ್ಲ ಪದ ಬಳಕೆಯನ್ನು ಮಾಡಿದ್ದಾರೆ. ಅಲ್ಲದೆ, ಕೊಲೆಗಡುಕರು ಎಂದೂ ಹೇಳಿದ್ದಾರೆ. ಹೀಗಾಗಿ ಯತೀಂದ್ರ ಅವರು ತಮ್ಮ ಹೇಳಿಕೆಯಲ್ಲಿ ಮಾಡಲಾಗಿರುವ ಆರೋಪವನ್ನು ನಿರೂಪಿಸಬೇಕು. ಇಲ್ಲವಾದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಗೃಹ ಸಚಿವ ಅಮಿತ್‌ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಿಂದನೀಯ ಪದವನ್ನು ಬಳಕೆ ಮಾಡಲಾಗಿದೆ. ಖಂಡನೀಯ. ಈ ಬಗ್ಗೆ ದೂರು ನೀಡಿದ್ದೇವೆ. ಯತೀಂದ್ರ ಅವರು 153a, 153b, 171c, 295a, 505(2) ಈ ಸೆಕ್ಷನ್ ಉಲ್ಲಂಘನೆ ಮಾಡಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಾಗ ಅವರು ಇವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಮೊದಲ ಬಾರಿ ಮಾತನಾಡಿದ್ದಾರೆ. ಈ ಹಿಂದೆ ಈ ರೀತಿ ಮಾತನಾಡಿರುವವರ ವಿರುದ್ಧ ಕ್ರಮ ಆಗಿದೆ. ಇವರ ವಿರುದ್ಧವೂ ಕ್ರಮ ಆಗಬೇಕು. ಇಲ್ಲದೆ ಹೋದರೆ ಬಿಜೆಪಿಯಿಂದ ಉಗ್ರ ಪ್ರತಿಭಟನೆಯನ್ನು ಮಾಡಲಿದ್ದೇವೆ ಎಂದು ರವಿಕುಮಾರ್‌ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ (ಮಾ. 28) ಹನೂರಿನ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒಬ್ಬ ಗೂಂಡಾ, ರೌಡಿ ಎಂದು ಹೇಳಿಕೆ ನೀಡಿದ್ದರು. ಗುಜರಾತ್‌ನಲ್ಲಿ ನಡೆದಿದ್ದ ನರಮೇಧದ ರೂವಾರಿ ಎಂಬ ಆರೋಪವನ್ನು ಅಮಿತ್‌ ಹೊತ್ತಿದ್ದಾರೆ. ಅವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದು, ಇಂತಹವರನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ ಎಂದು ಹನೂರಿನಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್‌ ಸಮಾವೇಶದಲ್ಲಿ ಯತೀಂದ್ರ ಸಿದ್ದರಾಮಯ್ಯ ಆರೋಪ ಮಾಡಿದ್ದರು. ಇದಕ್ಕೆ ಈಗ ರಾಜ್ಯ ಬಿಜೆಪಿ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಯತೀಂದ್ರ ವಿರುದ್ಧ ವಾಗ್ದಾಳಿ ನಡೆಸಿದೆ. ಅಲ್ಲದೆ, ಈಗ ಚುನಾವಣಾ ಆಯೋಗಕ್ಕೂ ದೂರು ನೀಡಿದೆ.

ಬಿಜೆಪಿ ನಾಯಕರ ವಾಗ್ದಾಳಿ

ಯತೀಂದ್ರ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಾಯಕರು ತೀವ್ರ ವಾಗ್ದಾಳಿಯನ್ನು ನಡೆಸಿದ್ದರು. ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದೂ ಹೇಳಿದ್ದರು. ಅಲ್ಲದೆ, ಆಯೋಗಕ್ಕೆ ದೂರು ನೀಡುವುದಾಗಿಯೂ ಶುಕ್ರವಾರ ಬೆಳಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಯತೀಂದ್ರ ಕ್ಷಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹ

ಯತೀಂದ್ರ ವಿರುದ್ಧ ದೂರು ಕೊಡುತ್ತೇವೆ: ಅಶೋಕ್

ಯತೀಂದ್ರ ಸಿದ್ದರಾಮಯ್ಯ ಅವರಿಗೆ ಇನ್ನೂ ಮೆಚ್ಯುರಿಟಿ, ಬುದ್ಧಿ ಇಲ್ಲ. ಯಾರ ಬಗ್ಗೆ ಮಾತಾಡಬೇಕು ಎಂಬ ಬಗ್ಗೆ ಗೊತ್ತಿಲ್ಲ, ಸ್ಥಾನಮಾನ ಇಲ್ಲದ ವ್ಯಕ್ತಿ. ಅಮಿತ್ ಶಾ ಈ ದೇಶದ ಗೃಹ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ಕಾಂಗ್ರೆಸ್ ಹಿಂದಿನಿಂದಲೂ ಕೊಟ್ಟುಕೊಂಡು ಬರುತ್ತಿದೆ. ಸಿದ್ದರಾಮಯ್ಯ ಅವರ ಮಗ ಎಂಬ ಕಾರಣಕ್ಕೆ ಬಾಲಿಶ ಹೇಳಿಕೆ ನೀಡಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ಅವರು ಜೈಲು ಶಿಕ್ಷೆಯನ್ನು ಅನುಭವಿಸುವ ಹಂತಕ್ಕೆ ಬಂದಿದ್ದಾರೆ. ಇವರ ಡಿಎನ್ಎನಲ್ಲೇ ಇಂತಹ ವಿಚಾರಗಳು ಬಂದಿದೆ. ಇವರ ವಿರುದ್ಧ ದೂರು ನೀಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

ಅಪ್ಪನ ಹೆಸರ ಮೇಲೆ ಅಧಿಕಾರಕ್ಕೆ ಬಂದವರು ಹೀಗೆ: ಸಿಟಿ ರವಿ

ಅಪ್ಪನ ಹೆಸರ ಮೇಲೆ ಅಧಿಕಾರಕ್ಕೆ ಬಂದವರು ಹೀಗೆಯೇ ಮಾತನಾಡುತ್ತಾರೆ. ಎಂದಾದರೂ ಪಕ್ಷದ ಕೆಲಸ ಮಾಡಿದ್ದಾರಾ? 1982ರಲ್ಲಿ ಅಮಿತ್ ಶಾ ಬೂತ್ ಅಧ್ಯಕ್ಷ ಆಗಿದ್ದರು. ಆಗ ಇವರಪ್ಪ ಎಂಎಲ್‌ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು‌ ಇವರು. ನಾವು ವಿದ್ಯಾರ್ಥಿಗಳಾಗಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ನಮ್ಮ ಮೇಲೂ ಗೂಂಡಾ ಕೇಸ್‌ ಹಾಕಿದ್ದರು. ಹಾಗಾದರೆ ನಾನು ಗೂಂಡಾನಾ? ಅಪ್ಪನ ಹೆಸರು ಹೇಳಿಕೊಂಡು, ಅಧಿಕಾರ ಚಲಾಯಿಸುವವರಿಗೆ ಬಡವರ ಕಷ್ಟ ಕಾಣಿಸುತ್ತಾ? ಎಂದು ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಜತೆ ಚಾಟ್; ಭಾರತದ ಡಿಜಿಟಲ್ ಕ್ರಾಂತಿಗೆ ಬಿಲ್ ಗೇಟ್ಸ್ ಶ್ಲಾಘನೆ

ಕೂಡಲೇ ಯತೀಂದ್ರ ಕ್ಷಮೆ ಯಾಚಿಸಲಿ: ಅಶ್ವಥ್ ನಾರಾಯಣ್

ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ರಾಜಕೀಯದಲ್ಲಿ ಮಾತಿನ ಮೇಲೆ, ನಡವಳಿಕೆ ಮೇಲೆ ನಿಲ್ಲಬೇಕು. ಮಾತಿನಲ್ಲಿ ಲಕ್ಷ್ಮಣ ರೇಖೆ ಇರಬೇಕು. ಎಲ್ಲಿಯೂ ಎಲ್ಲೆ ಮೀರಿದ ಮಾತನಾಡಬಾರದು. ಯತೀಂದ್ರ ಅವರ ಇಂಥ ಕೀಳು ಮಟ್ಟದ ರಾಜಕೀಯ ಹೇಳಿಕೆಯನ್ನು ವಿರೋಧಿಸುತ್ತೇವೆ. ಅಲ್ಲದೆ, ನಮ್ಮ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ ಎಂದು ಕರೆದಿದ್ದಕ್ಕೆ ಯತೀಂದ್ರ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಮಾಜಿ ಸಚಿವ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ.

ಗೌರವಯುತವಾಗಿ ಮಾತನಾಡುವುದನ್ನು ಕಲಿಯಲಿ: ಡಿವಿಎಸ್‌

ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಮಾತನಾಡಿ, ಬೈಗುಳದಿಂದ ರಾಜಕಾರಣ ಮಾಡುವುದಾದರೆ ಅನೇಕರು ರಾಜಕಾರಣವನ್ನು ಮಾಡಬಹುದಿತ್ತು. ಬೈಗುಳದಿಂದ ರಾಜಕಾರಣ ಮಾಡುವವರ ಸಾಲಿಗೆ ಯತೀಂದ್ರ ಸೇರಿದ್ದಾರೆ. ಬಾಯಿಗೆ ಬಂದಂತೆ ಮಾತನಾಡಿ, ದೊಡ್ಡ ರಾಜಕಾರಣಿ ಆಗುತ್ತೇನೆ ಎಂದು ಭಾವಿಸಿದರೆ ಕೊನೇ ಮೊಳೆ ಆಗಲಿದೆ. ಅವರ ತಂದೆ ಮಂಡಿಸಿದ ಬಜೆಟ್ ಬಗ್ಗೆ ಮಾತಾಡಲಿ. ಅದು ಬಿಟ್ಟು ಬಿಜೆಪಿ, ಬಿಜೆಪಿ ನಾಯಕರ ಬಗ್ಗೆ ಮಾತನಾಡುವುದು ಸರಿಯಲ್ಲ. ಸಿದ್ದರಾಮಯ್ಯ ಅವರ ಮಗನಾಗಿ, ಗೌರವಯುತವಾಗಿ ಮಾತನಾಡುವುದನ್ನು ಕಲಿಯಲಿ ಎಂದು ಕಿವಿಮಾತು ಹೇಳಿದ್ದಾರೆ.

Continue Reading

ಬೆಂಗಳೂರು

Board Exams: ಬೋರ್ಡ್‌ ಎಕ್ಸಾಂ ವ್ಯಾಲ್ಯುವೇಶನ್‌; 3 ದಿನದ ಗಡುವು ಆದೇಶ ವಾಪಸ್‌

Board Exams : 5,8 ಮತ್ತು 9ನೇ ತರಗತಿಯ ಬೋರ್ಡ್‌ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು (Paper Evaluation) ಮೂರೇ ದಿನದಲ್ಲಿ ಮುಗಿಸುವಂತೆ ಶಿಕ್ಷಣ ಇಲಾಖೆ ಆದೇಶಿಸಿತ್ತು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಆದೇಶವನ್ನು ವಾಪಸ್‌ ಪಡೆದಿದೆ.

VISTARANEWS.COM


on

By

Board Exam
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಇಂದಿನಿಂದ (ಮಾ.29) 5, 8 ಮತ್ತು 9ನೇ ತರಗತಿ ಪಬ್ಲಿಕ್‌ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ (Paper Evaluation) ಶುರುವಾಗಿದೆ. ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಆದೇಶದ ವಿರುದ್ಧ ಶಿಕ್ಷಕರು ಕಿಡಿಕಾರಿದ್ದರು. 1 ಕೋಟಿಗೂ ಅಧಿಕ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಮೂರೇ ದಿನದಲ್ಲಿ ಮುಗಿಸುವಂತೆ ಆದೇಶ ಹೊರಡಿಸಿತ್ತು.

ಮೂರು ದಿನದಲ್ಲಿ ಮೌಲ್ಯಮಾಪನ ಮುಗಿಸಿ SATS ನಲ್ಲಿ ಅಪ್ ಲೋಡ್ ಮಾಡುವಂತೆ ಆದೇಶಿಸಿತ್ತು. 1.66 ಕೋಟಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ 3 ದಿನಗಳಲ್ಲಿ ಹೇಗೆ ಸಾಧ್ಯ ಎಂಬ ಪ್ರಶ್ನೆ ಉದ್ಭವಿಸಿತ್ತು. ಅನೇಕ ಒತ್ತಡಗಳ ಮಧ್ಯೆ ಶಿಕ್ಷರಿಗೆ ಮೌಲ್ಯಮಾಪನದ ಟಾಸ್ಕ್‌ ಭಯ ಹುಟ್ಟಿಸಿತ್ತು.

ಒಂದೆಡೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತೊಂದೆಡೆ ಪಬ್ಲಿಕ್‌ ಪರೀಕ್ಷೆ ಉತ್ತರ ಪತ್ರಿಕೆ ವ್ಯಾಲ್ಯುವೇಶನ್‌ ತಲೆನೋವು ತರಿಸಿತ್ತು. ಶಿಕ್ಷಣ ಇಲಾಖೆಯ ಅವೈಜ್ಞಾನಿಕ ಆದೇಶಕ್ಕೆ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳಿಂದ ವಿರೋಧ ವ್ಯಕ್ತವಾಗಿತ್ತು. ಶಿಕ್ಷಕರ ಕೊರತೆ ಮಧ್ಯೆ ಇಲಾಖೆಯ ಈ ನಿರ್ಧಾರ ಸರಿಯಲ್ಲ ಎಂದು ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಕಿಡಿಕಾರಿದ್ದರು.

ಇದನ್ನೂ ಓದಿ: Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಯಾವುದೇ ಸಂಭಾವನೆ ಪ್ರಕಟಿಸದೆ ಶಿಕ್ಷಕರ ಮೇಲೆ ಹೀಗೆ ಒತ್ತಡ ಹೇರುತ್ತಿರುವುದು ಸರಿಯಲ್ಲ. ಈ ರೀತಿಯ ಅವೈಜ್ಞಾನಿಕ ನಿರ್ಧಾರ ತೆಗೆದುಕೊಳ್ಳದಂತೆ ಇಲಾಖೆಗೆ ಮನವಿ ಮಾಡಿದ್ದರು. ಈ ಬಗ್ಗೆ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದರು.

ಶಿಕ್ಷಕರ ಮನವಿಗೆ ಸ್ಪಂದಿಸಿ ಆದೇಶ ಹಿಂಪಡೆದ ಇಲಾಖೆ

ಶಿಕ್ಷಕರ ಮನವಿಗೆ ಸ್ಪಂದಿಸಿದ ಕರ್ನಾಟಕ ಪರೀಕ್ಷಾ ಹಾಗೂ ಮೌಲ್ಯ ನಿರ್ಣಯಕ ಪರೀಕ್ಷಾ ಮಂಡಳಿ ಹಳೇ ಆದೇಶವನ್ನು ತಿದ್ದುಪಡೆದಿದೆ. ಪ್ರಸ್ತುತ 8ನೇ ತರಗತಿ 50 ಹಾಗೂ 9ನೇ ತರಗತಿ 30 ಪತ್ರಿಕೆ ಮೌಲ್ಯ ಮಾಪನ ಮಾಡಲು ಸೂಚನೆ ನೀಡಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಚುನಾವಣಾ ಕಾರ್ಯ ಇರುವ ಹಿನ್ನೆಲೆಯಲ್ಲಿ ತಡ ಮಾಡದೇ ಮೌಲ್ಯ ಮಾಪನ ಮಾಡುವಂತೆ ತಿಳಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

Utthana Essay Competition 2023:
ಕಾಲೇಜು ವಿದ್ಯಾರ್ಥಿಗಳಿಗೆ “ಕ್ರೀಡೆಯೆಂದರೆ ಕ್ರಿಕೆಟ್ ಮಾತ್ರವೇ? ಉಳಿದ ಕ್ರೀಡೆಗಳ ಬಗೆಗೆ ಭಾರತೀಯರಿಗೇಕೆ ನಿರಾಸಕ್ತಿ?” ಎಂಬ ವಿಷಯದ ಕುರಿತು ಉತ್ಥಾನ ರಾಜ್ಯ ಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗಿತ್ತು. ಬೆಂಗಳೂರಿನ ಎಸ್-ವ್ಯಾಸ್ ವಿಶ್ವವಿದ್ಯಾಲಯದ ಕಾವ್ಯಜೋಗಿ ಪ್ರಥಮ ಸ್ಥಾನ ಪಡೆದಿದ್ದಾರೆ.

VISTARANEWS.COM


on

Utthana Essay Competition 2023
Koo

ಬೆಂಗಳೂರು: ಉತ್ಥಾನ ಮಾಸಪತ್ರಿಕೆಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ವಾರ್ಷಿಕ ಉತ್ಥಾನ ಪ್ರಬಂಧ ಸ್ಪರ್ಧೆಯ (Utthana Essay Competition 2023) ಫಲಿತಾಂಶ ಪ್ರಕಟವಾಗಿದೆ. “ಕ್ರೀಡೆಯೆಂದರೆ ಕ್ರಿಕೆಟ್ ಮಾತ್ರವೇ? ಉಳಿದ ಕ್ರೀಡೆಗಳ ಬಗೆಗೆ ಭಾರತೀಯರಿಗೇಕೆ ನಿರಾಸಕ್ತಿ?” ಎಂಬ ವಿಷಯದ ಕುರಿತು ರಾಜ್ಯದೆಲ್ಲೆಡೆಯ ಕಾಲೇಜು ವಿದ್ಯಾರ್ಥಿಗಳು ಪ್ರಬಂಧ ಬರೆದಿದ್ದರು. ಈ ಸ್ಪರ್ಧೆಯಲ್ಲಿ ಬೆಂಗಳೂರಿನ ಎಸ್-ವ್ಯಾಸ್ ವಿಶ್ವವಿದ್ಯಾಲಯದ ಕಾವ್ಯಜೋಗಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಪ್ರಬಂಧ ಸ್ಪರ್ಧೆಯ ವಿಜೇತರನ್ನು ತೀರ್ಪುಗಾರರಾದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ ಹಾಗೂ ನಿವೃತ್ತ ಗ್ರಂಥಪಾಲಕ ಡಾ. ಎ. ನರೇಂದ್ರ ಅವರು ಆಯ್ಕೆ ಮಾಡಿದ್ದಾರೆ.

ವಿಜೇತರ ಪಟ್ಟಿ ಇಂತಿದೆ

ಮೊದಲ ಬಹುಮಾನ: (10,000 ರೂ)
ಕಾವ್ಯಜೋಗಿ, ಎಸ್-ವ್ಯಾಸ್ ವಿಶ್ವವಿದ್ಯಾಲಯ, ಬೆಂಗಳೂರು.

ಎರಡನೆಯ ಬಹುಮಾನ: (7,000 ರೂ.)
ಸ್ವಾತಿ ಇ.ಎಂ., ಬಿ.ಎ.ಎಂ.ಎಸ್. ಕಾಲೇಜು, ಬೆಂಗಳೂರು.

ಮೂರನೆಯ ಬಹುಮಾನ: (5,000 ರೂ.)
ಯಂಕನಗೌಡ, ಕಮಲಾ ಬಾಳಿಗಾ ಕಾಲೇಜು, ಕುಮಟಾ

ಹತ್ತು ಮೆಚ್ಚುಗೆಯ ಬಹುಮಾನಗಳು: ತಲಾ 2,000 ರೂ.

ಪ್ರತೀಕ್ಷಾ ಅಶೋಕ ಜಂತಿ, ಕೆ.ಆರ್.ಸಿ.ಎಸ್. ಪದವಿ ಮಹಾವಿದ್ಯಾಲಯ ಬೈಲಹೊಂಗಲ
ಅಮೃತಾ ರಾಜೇಂದ್ರ ಹೆಗಡೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿರಸಿ
ನಂದಕುಮಾರ್ ಯು.ಎಂ., ಶೇಷಾದ್ರಿಪುರಂ ಪ್ರಥಮದರ್ಜೆ ಕಾಲೇಜು, ಬೆಂಗಳೂರು
ಮೇಘಾ ಡಿ., ಅಂಬಿಕಾ ಮಹಾವಿದ್ಯಾಲಯ, ಬಪ್ಪಳಿಕೆ, ಪುತ್ತೂರು
ಪನ್ನಗ ಪಿ. ರಾಯ್ಕರ್, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಹೊಸದುರ್ಗ
ದರ್ಶನ್ ಎಸ್.ಎನ್., ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ, ಮೈಸೂರು
ಸಹನಾ ಎಂ., ಸೆಂಟ್ ಆನ್ಸ್ ಮಹಿಳಾ ಪದವಿ ಕಾಲೇಜು, ಬೆಂಗಳೂರು
ದೀಪಾ ಕೆ.ಬಿ., ಕಮಲಾ ಬಾಳಿಗ ಶಿಕ್ಷಣ ಮಹಾವಿದ್ಯಾಲಯ, ಕುಮಟಾ
ಶಿವಾನಿ ಬಿ. ಎಸ್., ಅಮೃತ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಪಡೀಲ್, ಮಂಗಳೂರು
ಪೃಥ್ವಿನಾಯಕ್, ಪೂರ್ಣಪ್ರಜ್ಞಾ ಕಾಲೇಜು, ಉಡುಪಿ

 Utthana Essay Competition 2023

ಇದನ್ನೂ ಓದಿ | Utthana Katha Spardhe: ಉತ್ಥಾನ ವಾರ್ಷಿಕ ಕಥಾಸ್ಪರ್ಧೆ 2023; ಶಿರಸಿಯ ಕರುಣಾಕರ ಹಬ್ಬುಮನೆ ಪ್ರಥಮ

Continue Reading

Lok Sabha Election 2024

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Lok Sabha Election 2024: ಯತೀಂದ್ರ ಸಿದ್ದರಾಮಯ್ಯ ಅವರದ್ದು ಬಾಲಿಶ, ಬುದ್ಧಿಭ್ರಮಣೆಯ ಹಾಗೂ ಅಪ್ರಬುದ್ಧ ಹೇಳಿಕೆಯಾಗಿದೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದ್ದರು. ಯತೀಂದ್ರ ಅವರಿಗೂ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ. ಗೂಂಡಾ ಗುರು ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ನದ್ದು ಗೂಂಡಾ ಸಂಸ್ಕೃತಿಯಾಗಿದೆ ಎಂದು ಆರ್.‌ ಅಶೋಕ್‌ ಗುಡುಗಿದ್ದಾರೆ.

VISTARANEWS.COM


on

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಭಾಷಣದಲ್ಲಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ (BJP Karnataka) ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ (Rahul Gandhi) ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಹಾಗೂ ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿದರೆ ದೊಡ್ಡ ವ್ಯಕ್ತಿಯಾಗುತ್ತೇನೆ, ಇದರಿಂದ ಬೆಲೆ ಬರುತ್ತದೆ ಎನ್ನುವ ಕಾರಣಕ್ಕೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕುರಿತು ಟೀಕೆ ಮಾಡಿದ್ದಾರೆ. ಹತಾಶ ಮನೋಭಾವ, ಬುದ್ಧಿಭ್ರಮಣೆ ಹಾಗೂ ಅಪ್ರಬುದ್ಧತೆಯಿಂದ ಅವರು ಮಾತನಾಡಿದ್ದಾರೆ. ಅವರ ಪ್ರಜ್ಞೆಯ ಮಟ್ಟ ಬಹಳ ಕಡಿಮೆ ಇದೆ ಎಂದರು.

ಮೈಸೂರಿನ ರಾಜಕಾರಣದ ಬಗ್ಗೆ ಮಾತನಾಡಲು ಯತೀಂದ್ರ ಅವರಿಗೆ ಯೋಗ್ಯತೆ ಇಲ್ಲ. ಅಲ್ಲಿನ ರಾಜಕಾರಣ ಬಿಟ್ಟು ಕೇಂದ್ರದ ರಾಜಕಾರಣದ ಬಗ್ಗೆ ಅವರು ಮಾತನಾಡಿದ್ದಾರೆ. ಇಂತಹ ಬಾಲಿಶ ಹಾಗೂ ಕೊಬ್ಬಿನ ಹೇಳಿಕೆ ನೀಡುವುದು ಕಾಂಗ್ರೆಸ್ಸಿನ ಡಿಎನ್‌ಎ ನಲ್ಲೇ ಇದೆ. ಈಗಾಗಲೇ ರಾಹುಲ್‌ ಗಾಂಧಿ ಬಾಲಿಶ ಹೇಳಿಕೆ ನೀಡಿ ಜೈಲಿಗೆ ಹೋಗುವ ಸ್ಥಿತಿ ಬಂದಿದೆ. ಯತೀಂದ್ರ ಅವರೂ ಹೀಗೆ ಮಾತನಾಡುತ್ತಿದ್ದರೆ ಕೊನೆಗೆ ಜೈಲೇ ಗತಿಯಾಗಲಿದೆ. ಅವರು ಎಚ್ಚರದಿಂದ ಮಾತನಾಡಲಿ ಎಂದರು.

ಸಿಎಂ ಸಿದ್ದರಾಮಯ್ಯ ಗೂಂಡಾ ಗುರು

ಯತೀಂದ್ರ ಅವರಿಗೆ ತಮ್ಮ ತಂದೆಯ ಗೂಂಡಾಗಿರಿ ಮಾತ್ರ ಕಣ್ಣಿಗೆ ಕಾಣುವುದಿಲ್ಲ. ರಾಜ್ಯದಲ್ಲೀಗ ಅಪ್ಪ-ಮಕ್ಕಳ ಗೂಂಡಾಗಿರಿ ಜಾರಿಯಲ್ಲಿದೆ. ಸದನದಲ್ಲಿ ಪೊಲೀಸರನ್ನು ಬೆದರಿಸುವುದು, ಸ್ಪೀಕರ್‌ಗೆ ಧಮ್ಕಿ ಹಾಕುವುದು ಮಹಿಳೆಯರ ಬಟ್ಟೆ ಎಳೆದು ದೌರ್ಜನ್ಯ ಮಾಡುವುದು, ಕಾರ್ಯಕರ್ತರ ಕಪಾಳಕ್ಕೆ ಹೊಡೆಯುವುದು-ಹೀಗೆ ಸಿಎಂ ಸಿದ್ದರಾಮಯ್ಯ ಮಾಡಿದ ರೌಡಿಸಂಗೆ ಲೆಕ್ಕವೇ ಇಲ್ಲ. ಪ್ರಧಾನಿಗೆ, ರಾಷ್ಟ್ರಪತಿಗೆ ಅವನು, ಇವಳು ಎಂದು ಕರೆಯುವವರು, ಪ್ರಧಾನಿಗೆ ಹೊಡೆಯುತ್ತೇನೆ ಎನ್ನುವವರು ನಿಜವಾದ ಗೂಂಡಾಗಳು. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ. ಆದರೆ ಇವರು ನಡೆಸುವುದು ರಾವಣ ರಾಜ್ಯ. ಯತಿ ಎಂದರೆ ಸನ್ಯಾಸಿ. ಆದರೆ ಇವರ ಬಾಯಲ್ಲಿ ಬರುವ ಮಾತು ರಾಕ್ಷಸನಂತಿದೆ. ಇವರ ಹೆಸರಿಗೂ ಮಾತಿಗೂ ಸಂಬಂಧವೇ ಇಲ್ಲ ಎಂದರು.

ರಾಜ್ಯದಲ್ಲಿ ಗೂಂಡಾ ಸರ್ಕಾರವಿದ್ದು, ಸಿಎಂ ಸಿದ್ದರಾಮಯ್ಯ ಗೂಂಡಾಗುರುವಾಗಿ ವರ್ತಿಸುತ್ತಿದ್ದಾರೆ. ಕರಸೇವಕರನ್ನು ಬಂಧಿಸಿ, ಹನುಮ ಧ್ವಜ ಇಳಿಸಿ, ಮುಸ್ಲಿಂ ದಂಗೆಕೋರರಿಗೆ ಆಶ್ರಯ ನೀಡಿದ್ದು ಇದೇ ಗೂಂಡಾ ಕಾಂಗ್ರೆಸ್‌. ಹನುಮಾನ್‌ ಚಾಲಿಸಾ ಹಾಕಿದ್ದಕ್ಕೆ ಹೊಡೆದವರು ಹಾಗೂ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದವರು ಗೂಂಡಾ ಕಾಂಗ್ರೆಸ್ಸಿಗರೇ ಆಗಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ಯಾರು ಗೂಂಡಾ ಎಂದು ಪಾಠ ಕಲಿಸಲಿದ್ದಾರೆ ಎಂದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

ಸಮನ್ವಯ ಸಭೆ

ಬಿಜೆಪಿ-ಜೆಡಿಎಸ್‌ ಹಾಲು ಜೇನಿನಂತೆ ಕೆಲಸ ಮಾಡುತ್ತಿದೆ. ಇನ್ನಷ್ಟು ಚೆನ್ನಾಗಿ ಕಾರ್ಯನಿರ್ವಹಿಸಲು ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಸಭೆ ನಡೆಸಲಾಗುವುದು. ರೈತರಿಗೆ ಪರಿಹಾರ ಕೊಡದ, ಕುಡಿಯುವ ನೀರು ಕೊಡದ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಿದೆ. ಇಂತಹ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಬೇಕು ಎಂದು ಮನವಿ ಮಾಡಿದರು.

Continue Reading
Advertisement
Summer Nail Colours Trend
ಫ್ಯಾಷನ್4 mins ago

Summer Nail Colours Trend: ಸಮ್ಮರ್‌ ಸೀಸನ್‌ನಲ್ಲಿ ಬದಲಾಯ್ತು ನೇಲ್‌ ಕಲರ್ಸ್‌ ಟ್ರೆಂಡ್‌

Lok Sabha Election 2024 and BJP files complaint with Election Commission against Yathindra for calling Amit Shah a rowdy and also CM Siddaramaiah in this Photo
Lok Sabha Election 20249 mins ago

Lok Sabha Election 2024: ಅಮಿತ್‌ ಶಾ ರೌಡಿ ಎಂದಿದ್ದ ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Board Exam
ಬೆಂಗಳೂರು14 mins ago

Board Exams: ಬೋರ್ಡ್‌ ಎಕ್ಸಾಂ ವ್ಯಾಲ್ಯುವೇಶನ್‌; 3 ದಿನದ ಗಡುವು ಆದೇಶ ವಾಪಸ್‌

income Tax - how to save tax
ಪ್ರಮುಖ ಸುದ್ದಿ25 mins ago

Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

Utthana Essay Competition 2023
ಕರ್ನಾಟಕ46 mins ago

Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Lok Sabha Election 202447 mins ago

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Kodagu University
ಕೊಡಗು48 mins ago

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Alia Bhatt wore diamond jewellery
ಸಿನಿಮಾ52 mins ago

Alia Bhatt: ಲಂಡನ್‌ ʻಹೋಪ್ ಗಾಲಾʼದಲ್ಲಿ ಆಲಿಯಾ ಭಟ್‌ ಧರಿಸಿದ ವಜ್ರದ ನೆಕ್ಲೇಸ್ ಬೆಲೆ ಎಷ್ಟು?

Heat Stroke
ಆರೋಗ್ಯ1 hour ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Rahul Gandhi And Tejashwi Yadav
Lok Sabha Election 20241 hour ago

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌