Pulse of Karnataka: ಸಮಸ್ತ ಕರ್ನಾಟಕ: ವಿಸ್ತಾರ-ಅಖಾಡ ಸಮೀಕ್ಷೆ: ಬಿಜೆಪಿ-ಕಾಂಗ್ರೆಸ್‌-ಜೆಡಿಎಸ್‌ ಬಲಾಬಲ ಇಲ್ಲಿದೆ; ನಾಯಕತ್ವ ಯಾರಿಗೆ? - Vistara News

ಕರ್ನಾಟಕ

Pulse of Karnataka: ಸಮಸ್ತ ಕರ್ನಾಟಕ: ವಿಸ್ತಾರ-ಅಖಾಡ ಸಮೀಕ್ಷೆ: ಬಿಜೆಪಿ-ಕಾಂಗ್ರೆಸ್‌-ಜೆಡಿಎಸ್‌ ಬಲಾಬಲ ಇಲ್ಲಿದೆ; ನಾಯಕತ್ವ ಯಾರಿಗೆ?

ಮೂರು ಹೋಳಾಗಿದ್ದ ಬಿಜೆಪಿ ಒಗ್ಗಟ್ಟಿನೊಂದಿಗೆ 2018ರಲ್ಲಿ ಚುನಾವಣೆ ಎದುರಿಸಿತು. ಆದರೂ ಸ್ಪಷ್ಟ ಬಹುಮತ ಬಿಜೆಪಿಗೆ ಸಿಗಲಿಲ್ಲ. ಬಿಜೆಪಿ-104, ಕಾಂಗ್ರೆಸ್- 82, ಜೆಡಿಎಸ್- 37, ಇತರರು: 1. ಸ್ಪಷ್ಟಬಹುಮತ ಇಲ್ಲದಿದ್ದರೂ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದರು. ಆದರೆ, ಸದನದಲ್ಲಿ ಬಹುಮತ ಸಾಬೀತು ಪಡಿಸಲು ವಿಫಲರಾದ ಹಿನ್ನೆಲೆಯಲ್ಲಿ ಒಂದೇ ವಾರಕ್ಕೆ ಬಿಎಸ್ವೈ ರಾಜೀನಾಮೆ ನೀಡಿದ್ರು. ಮತ್ತೊಂದೆಡೆ, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಸಲುವಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡವು. ಹೀಗಾಗಿ ಕುಮಾರಸ್ವಾಮಿ ಎರಡನೇ ಬಾರಿಗೆ ಸಿಎಂ ಆದರು. ಬಳಿಕ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಸಾರಥ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿತು. 4ನೇ ಬಾರಿಗೆ ಬಿಎಸ್ವೈ ಸಿಎಂ ಆದರು. ವಿಧಾನಸಭೆಯ ಹಾಲಿ ಬಲಾಬಲ: ಬಿಜೆಪಿ: 120, ಕಾಂಗ್ರೆಸ್: 72, ಜೆಡಿಎಸ್: 30, ಇತರರು: 2

VISTARANEWS.COM


on

pulse-of-karnataka-overall survey tally
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರುನಾಡಿನಲ್ಲಿ ಇದೀಗ ಎಲೆಕ್ಷನ್ ಫೀವರ್. 2023ರ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕದ ಜನ ಯಾವ ಪಕ್ಷದ ಕಡೆಗೆ ಒಲವು ತೋರುತ್ತಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾರ ಹವಾ ಇದೆ..? ವಲಯವಾರು ಯಾವ ರಿಸಲ್ಟ್ ಬರಬಹುದು..? ಹೀಗೆ ಒಟ್ಟು 12 ಪ್ರಶ್ನೆ ಹಾಗೂ ಒಂದು ವಲಯವಾರು ಪ್ರಶ್ನೆಯನ್ನು ರಾಜ್ಯದ ಜನತೆಯ ಮುಂದಿಟ್ಟು ನಾಡಿಮಿಡಿತವನ್ನ ಅರಿಯುವ ಪ್ರಯತ್ನವನ್ನು ವಿಸ್ತಾರ ನ್ಯೂಸ್ ನಡೆಸಿದೆ. ಇದಕ್ಕಾಗಿ ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜೊತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಇದುವೇ ಪಲ್ಸ್ ಆಫ್ ಕರ್ನಾಟಕ.

ಪಲ್ಸ್ ಆಫ್ ಕರ್ನಾಟಕ ಹಿಂದೆಂದೂ ಕರ್ನಾಟಕದಲ್ಲಿ ನಡೆದಿರದಂತಹ ಅತಿದೊಡ್ಡ ಸರ್ವೇ. ರಾಜ್ಯದ ಮೂಲೆಮೂಲೆಯಲ್ಲಿ ನಮ್ಮ 300ಕ್ಕೂ ಹೆಚ್ಚು ಸಿಬ್ಬಂದಿಯ ಜೊತೆಗೆ ಅಖಾಡದ ಅತಿದೊಡ್ಡ ತಂಡ ಮನೆಮನೆ ಬಾಗಿಲಿಗೆ ತೆರಳಿ ಸಂಗ್ರಹಿಸಿರೋ ಮಾಹಿತಿ ಇದು. ಕರುನಾಡಿನ ಜನರ ನಾಡಿಮಿಡಿತ ಅರಿಯಲು ಉದ್ಯಮಿಗಳು, ಸರ್ಕಾರಿ ನೌಕರರು, ಖಾಸಗಿ ಸಂಸ್ಥೆಗಳ ಸಿಬ್ಬಂದಿ, ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಹಿಂದುಳಿದ ವರ್ಗದ ಜನ, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಎಲ್ಲಾ ವರ್ಗ, ಸಮುದಾಯವನ್ನು ಪ್ರತಿನಿಧಿಸಿ ಈ ಸಮೀಕ್ಷೆ ನಡೆಸಲಾಗಿದೆ. ಇದರಲ್ಲಿ ಸ್ಥಳೀಯ, ಜಿಲ್ಲಾವಾರು, ರಾಜ್ಯ ಮತ್ತು ಕೇಂದ್ರ ನಾಯಕರು ಹೀಗೆ ಎಲ್ಲಾ ವಲಯ, ವಿಚಾರ, ನಾಯಕರಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ಹುಡುಕುವ ಪ್ರಯತ್ನ ಮಾಡಲಾಗಿದ್ದು, ನೂರಕ್ಕೆ ನೂರರಷ್ಟು ಯಶ ಪಡೆಯಲಾಗಿದೆ.

ಈ ಸರ್ವೇಯಲ್ಲಿ ಕರ್ನಾಟಕವನ್ನ ಭೌಗೋಳಿಕವಾಗಿ ಆರು ಭಾಗಗಳಾಗಿ ಗುರುತಿಸಲಾಗಿದೆ. ಅದರಲ್ಲಿ ಹಳೆ ಮೈಸೂರು, ಮಧ್ಯ ಕರ್ನಾಟಕ, ಕರಾವಳಿ & ಮಲೆನಾಡು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ವಲಯಗಳಾಗಿ ಗುರುತಿಸಿ ಅದರಡಿ ಬರೋ ವಿಧಾನಸಭಾ ಕ್ಷೇತ್ರಗಳ ಮತದಾರರ ಪಲ್ಸ್ ಅರಿತು ಆ ಸರ್ವೇ ರಿರ್ಪೋಟ್​​ ಅನ್ನು ನಾವು ನಿಮ್ಮ ಮುಂದಿಟ್ಟಿದ್ದೇವೆ. ಇದೀಗ ಸಮಗ್ರ ಕರ್ನಾಟಕದ ಚಿತ್ರಣವನ್ನು ಇರಿಸಲಿದ್ದೇವೆ.


ಪ್ರಶ್ನೆ 1 – ಈಗ ಚುನಾವಣೆ ನಡೆದರೆ ಯಾವ ಪಕ್ಷಕ್ಕೆ ಬಹುಮತ ನೀಡುತ್ತೀರಿ?

pulse-of-karnataka-overall survey tally

-ಒಟ್ಟಾರೆಯಾಗಿ ಹೇಳುವುದಾದರೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ನೆಕ್‌ ಟು ನೆಕ್‌ ಫೈಟ್‌ ಇರುವುದು ಕಂಡುಬರುತ್ತಿದೆ -ಎರಡು ಶೇಕಡಾದಷ್ಟು ಆಡಳಿತಾರೂಢ ಬಿಜೆಪಿಯೇ ಮುನ್ನಡೆ ಕಾಯ್ದುಕೊಂಡಿದೆ -ಸರ್ಕಾರದ ವಿರುದ್ಧ 40ಪರ್ಸೆಂಟ್‌ ಕಮಿಷನ್‌ ಆರೋಪ, ಕೊರೊನಾ ಸಮಯದಲ್ಲಿ ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಪ್ರತಿಪಕ್ಷಗಳ ಆರೋಗಪಗಳ ನಂತರವೂ ಆಡಳಿತ ವಿರೋಧಿ ಅಲೆಯನ್ನು ಸಾಕಷ್ಟು ಪ್ರಮಾಣದಲ್ಲಿ ನಿಯಂತ್ರಣದಲ್ಲಿಡುವಲ್ಲಿ ಬಿಜೆಪಿ ಸಫಲವಾಗಿದೆ ಎನ್ನಬಹುದು. 123 ಸ್ಥಾನಗಳನ್ನು ಗಳಿಸಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ಜೆಡಿಎಸ್‌ ಕನಸು ನನಸಾಗುವುದು ಬಹಳ ಕಷ್ಟ ಎನ್ನುವಂತೆ ಕಾಣುತ್ತಿದೆ -ಆದರೆ ತಟಸ್ಥ ಮತದಾರರು ಸುಮಾರು 10 ಪರ್ಸೆಂಟ್‌ ಇರುವುದು ಮುಖ್ಯ. ಯಾವ ರಾಜಕೀಯ ಪಕ್ಷವು ಮುಂದಿನ 20-30 ದಿನ ಮತದಾರರ ಮನವನ್ನು ಗೆಲ್ಲುತ್ತದೆಯೋ ಅವರಿಗೆ ಈ ತಟಸ್ಥ ಮಗಳು ಲಭಿಸುತ್ತವೆ, ಇದರಿಂದ ಬಹುದೊಡ್ಡ ಬದಲಾವಣೆ ಫಲಿತಾಂಶದ ಮೇಲೆ ಆಗುತ್ತದೆ.

ಪ್ರಶ್ನೆ 2 – ನೀವು ಈ ಬಾರಿ ಮತ ಚಲಾಯಿಸಲು ಇವುಗಳಲ್ಲಿ ಅತಿಹೆಚ್ಚು ಪ್ರಾಮುಖ್ಯತೆ ನೀಡುವ ವಿಚಾರ ಯಾವುದು.?

pulse-of-karnataka-overall survey tally

-ಪಕ್ಷದ ಅಲೆಯ ಮೇಲೆ ಚುನಾವಣೆ ಗೆಲ್ಲಲು ಹೊರಟಿರುವ ಬಿಜೆಪಿಗೆ ಇದು ಬಹು ದೊಡ್ಡ ಎಚ್ಚರಿಕೆ -ನರೇಂದ್ರ ಮೋದಿ ಸರ್ಕಾರ ಹಾಗೂ ಇತ್ತ ಬೊಮ್ಮಾಯಿ ಸರ್ಕಾರದ ಡಬಲ್‌ ಇಂಜಿನ್‌ ಸರ್ಕಾರದ ಕೆಲಸ ನೋಡಿ ಮತ ನೀಡಿ ಎಂದು ಬಿಜೆಪಿ ಕೇಳುತ್ತಿದೆ -ಆದರೆ ಮತದಾರರು ಪಕ್ಷಕ್ಕಿಂತಲೂ ಬಹುದೊಡ್ಡ ಪ್ರಮಾಣದಲ್ಲಿ ಅಭ್ಯರ್ಥಿಗೆ ಪ್ರಾಮುಖ್ಯತೆ ನೀಡಿದ್ದಾರೆ -ಪಕ್ಷ ಯಾವುದಾದರೇನು? ದಿನನಿತ್ಯದ ತಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುವವರು ಅಭ್ಯರ್ಥಿಯೇ ಆದ್ಧರಿಂದ ಅದರ ಕುರಿತು ಹೆಚ್ಚು ಗಮನ ನೀಡಿದ್ದಾರೆ -ಗುಜರಾತ್‌ನಲ್ಲಿ ಬಹಳಷ್ಟು ಶಾಸಕರನ್ನು ದೋಸೆ ಮಗುಚಿದಂತೆ ಬಿಜೆಪಿ ಬದಲಾಯಿಸಿ ಟಿಕೆಟ್‌ ನೀಡಿತ್ತು, ಅಷ್ಟು ದೊಡ್ಡ ಪ್ರಯೋಗಕ್ಕೆ ಇಲ್ಲಿ ಅವಕಾಶ ಇರುವಂತೆ ಕಾಣುತ್ತಿಲ್ಲ

ಪ್ರಶ್ನೆ 3 – ಈ ಚುನಾವಣೆಯಲ್ಲಿ ಯಾರಿಗೆ ಮತ ನೀಡಬೇಕು ಎಂಬುದನ್ನು ಇವುಗಳಲ್ಲಿ ಯಾವುದರ ಆಧಾರದಲ್ಲಿ ನಿರ್ಧಾರ ಮಾಡುತ್ತೀರಿ?

pulse-of-karnataka-overall survey tally

-ಇಡೀ ದೇಶದಲ್ಲಿ, ವಿದೇಶಗಳಲ್ಲೂ ಸದ್ದು ಮಾಡಿದ ಹಿಜಾಬ್‌ ವಿವಾದ ಆರಂಭವಾಗಿದ್ದು ಕರ್ನಾಟಕದಿಂದ, ಹಲಾಲ್‌ ವಿಚಾರವೂ ಕರ್ನಾಟಕದಿಂದಲೇ ಆರಂಭವಾಯಿತು -ಬಹುಶಃ ಧರ್ಮ ಆಧರಿತ ರಾಜಕಾರಣವು ಸಮುದಾಯಗಳ ನಡುವೆ ಪ್ರತ್ಯೇಕತೆಯನ್ನು ಮೂಡಿಸುತ್ತದೆಯೇ ವಿನಃ ಜೀವನ ಸುಧಾರಿಸುವುದಿಲ್ಲ ಎಂದು ಮತದಾರರು ಭಾವಿಸಿರಬೇಕು -ಧರ್ಮಕ್ಕಿಂತಲೂ, ಜಾತಿಗಿಂತಲೂ ಸ್ಥಳೀಯ ನಾಯಕತ್ವಕ್ಕೇ ಹೆಚ್ಚು ಆಸಕ್ತಿ ತೋರಿದ್ದಾರೆ -ಯಾವ ಸ್ಥಳೀಯ ನಾಯಕತ್ವವು ಅಭಿವೃದ್ಧಿಯನ್ನು ಕೇಂದ್ರವಾಗಿಸಿಕೊಂಡು ಚುನಾವಣೆ ಸ್ಪರ್ಧಿಸುತ್ತದೆಯೋ ಅವರಿಗೆ ಜಯ ಸಿಗುತ್ತದೆ ಎನ್ನುವ ಸಂಕೇತಗಳನ್ನು ರಿಪೋರ್ಟ್‌ ನೀಡುತ್ತಿದೆ.

ಪ್ರಶ್ನೆ 4 – ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ಕುರಿತು ನಿಮ್ಮ ಅಭಿಪ್ರಾಯ

pulse-of-karnataka-overall survey tally

-ರಾಜ್ಯ ಬಿಜೆಪಿ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡಿದೆ ಎಂಬ ಅಂಶ ರಾಜ್ಯದ ಕೆಲವೆಡೆ 30 ಪರ್ಸೆಂಟ್‌ ದಾಟಿದ್ದರೂ ಒಟ್ಟಾರೆ ರಾಜ್ಯದಲ್ಲಿ ಕೇವಲ 17.2 ಪರ್ಸೆಂಟ್‌ ಇದೆ. -ಆದರೆ ಅತ್ಯುತ್ತಮ, ಉತ್ತಮ ಹಾಗೂ ಸಾಮಾನ್ಯವನ್ನು ಸೇರಿಸಿದರೆ ಮೂರನೇ ಎರಡರಷ್ಟು ಮತದಾರರು ಆಡಳಿತಾರೂಢ ಪಕ್ಷದ ಪರವಾಗಿದ್ದಾರೆ ಎನ್ನುವುದನ್ನು ತೋರಿಸುತ್ತದೆ -ಮೂರೂವರೆ ವರ್ಷ ಆಡಳಿತದಲ್ಲಿದ್ದರು, ನಡುವೆ ಕೊರೊನಾದಂತಹ ಅಡ್ಡಿ ಎದುರಾಗಿದ್ದರೂ ಆಡಳತ ವಿರೋಧಿ ಅಲೆ ಅಷ್ಟಾಗಿ ಇಲ್ಲದಿರುವುದು ಬಿಜೆಪಿಗೆ ಧನಾತ್ಮಕ ಸಂದೇಶಗಳನ್ನು ನೀಡುತ್ತಿದೆ.

ಪ್ರಶ್ನೆ 5 – ಈ 5 ವರ್ಷಗಳಲ್ಲಿ ನಿಮ್ಮ ಕ್ಷೇತ್ರದ ಶಾಸಕರ ಕಾರ್ಯ ನಿರ್ವಹಣೆ ತೃಪ್ತಿ ನೀಡಿದೆಯೇ?

pulse-of-karnataka-overall survey tally

-ಪಕ್ಷಾತೀತವಾಗಿ ಕ್ಷೇತ್ರದ ಶಾಸಕರ ಕಾರ್ಯ ತೃಪ್ತಿ ತಂದಿರುವುದು ಕಾಣುತ್ತಿದ್ದು, ಈ ಬಾರಿ ಬಹುತೇಕ ಶಾಸಕರು ಮತ್ತೆ ಟಿಕೆಟ್‌ ಪಡೆಯುವ ಸಾಧ್ಯತೆಯನ್ನು ಸೂಚಿಸುತ್ತಿದೆ -ಮುಖ್ಯವಾಗಿ ಕೋವಿಡ್‌ ಕಾಲದಲ್ಲಿ ಎಲ್ಲ ಶಾಸಕರೂ ತಮ್ಮ ಕ್ಷೇತ್ರದ ಜನರಿಗೆ ಆಹಾರ, ಔಷಧ ಲಭಿಸುವಂತೆ ಶ್ರಮಿಸಿದ್ದು ಮತದಾರರು ಕಂಡಿದ್ದಾರೆ -ತೃಪ್ತಿ ತಂದಿಲ್ಲ ಎಂದು ಹೇಳಿದವರ ಸಂಖ್ಯೆಯೂ ಸಾಕಷ್ಟು ಪ್ರಮಾಣದಲ್ಲಿರುವುದು, ಮುಂದಿನ ದಿನಗಳಲ್ಲಿ ತಮ್ಮ ವರ್ಚಸ್ಸನ್ನು ಸರಿಪಡಿಸಿಕೊಳ್ಳಲು ಆ ಶಾಸಕರಿಗೆ ಅವಕಾಶವನ್ನು ನೀಡಿದೆ ಎನ್ನಬಹುದು.

ಪ್ರಶ್ನೆ 6 – ಮುಂದಿನ ಚುನಾವಣೆ ಬಳಿಕ ಯಾರು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತೀರಿ?

pulse-of-karnataka-overall survey tally

-ನಾಯಕತ್ವದ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಪೈಪೋಟಿ ನಡೆಯುತ್ತಿದ್ದರೂ ಕಾಂಗ್ರೆಸ್‌ನ ಇಬ್ಬರು ನಾಯಕರೇ ಮೊದಲ ಎರಡು ಸ್ಥಾನವನ್ನು ಗಳಿಸಿದ್ದಾರೆ. -ಒಟ್ಟಾರೆ ನಾಯಕತ್ವದಲ್ಲಿ ಸಿದ್ದರಾಮಯ್ಯ ಮೊದಲನೆ ಸ್ಥಾನದಲ್ಲಿದ್ದಾರೆ, ಈ ಮೂಲಕ ಸಿಎಂ ಕುರ್ಚಿಯಿಂದ ಕೆಳಗಿಳಿದು ಐದು ವರ್ಷವಾದರೂ ರಾಜ್ಯದ ಪ್ರಮುಖ ನಾಯಕರಾಗಿ ಸ್ಥಾನವನ್ನು ಉಳಿಸಿಕೊಂಡಿರುವುದು ಗಮನಾರ್ಹ. -ಸಿಎಂ ಸ್ಥಾನದಲ್ಲಿರುವ ಬಸವರಾಜ ಬೊಮ್ಮಾಯಿ ಅವರು ಮೂರನೇ ಸ್ಥಾನ ಗಳಿಸಿದ್ದು, ಎಚ್‌.ಡಿ. ಕುಮಾರಸ್ವಾಮಿ ಅವರಿಗಿಂತ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪ್ರಶ್ನೆ 7- ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರಬಲ್ಲ ಕೇಂದ್ರದ ನಾಯಕ ಯಾರು?

pulse-of-karnataka-overall survey tally

-ಸರಿಸುಮಾರು 60 ಪರ್ಸೆಂಟರ್‌ ಮತದಾರರ ಮನ ಗೆಲ್ಲುವ ಮೂಲಕ ನರೇಂದ್ರ ಮೋದಿ ತಮ್ಮ ಜನಪ್ರಿಯತೆಯನ್ನು ಕಾಪಾಡಿಕೊಂಡಿದ್ದಾರೆ. -ಕೆಪಿಸಿಸಿ ಅಧ್ಯಕ್ಷರಾದ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಜನಪ್ರಿಯತೆ ಹೆಚ್ಚಿದೆಯಾದರೂ, ಮೋದಿಯವರನ್ನು ಎದುರಿಸಲು ರಾಹುಲ್‌ ಗಾಂಧಿಯೇ ಉತ್ತಮ ಸ್ಪರ್ಧಿ ಎಂದು ತೀರ್ಮಾನಿಸಿದಂತಿದೆ. -ಅರವಿಂದ ಕೇಜ್ರಿವಾಲ್‌ಗೆ ರಾಜ್ಯದ ವಿವಿಧೆಡೆ ಅಲ್ಪ ಪ್ರಮಾಣದ ಜನಪ್ರಿಯತೆ ಇರುವುದು ಕಾಣುತ್ತಿದೆ, ಆದರೆ ಆ ಜನಪ್ರಿಯತೆಯನ್ನು ಮತವಾಗಿ ಪರಿವರ್ತಿಸಿಕೊಳ್ಳಲು ಯಾವುದೇ ಮೆಕ್ಯಾನಿಸಂ ಇದ್ದಂತೆ ಕಾಣುತ್ತಿಲ್ಲ.

ಪ್ರಶ್ನೆ 8 – ರಾಜ್ಯದಲ್ಲಿ ಸ್ಪಷ್ಟ ಬಹುಮತ ಬರದಿದ್ದರೆ ಯಾವ ಮೈತ್ರಿಕೂಟ ನಿಮಗಿಷ್ಟ?

pulse-of-karnataka-overall survey tally

-ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವಿನ ಪೈಪೋಟಿ ಇಲ್ಲಿಯೂ ಮುಂದುವರಿದಿದೆ. -ಅತ್ಯಂತ ಅಲ್ಪ ಪ್ರಮಾಣದಲ್ಲಿ, ರಾಜ್ಯದ ಜನರು ಜೆಡಿಎಸ್‌ನೊಂದಿಗೆ ಮಂತ್ರಿಯನ್ನೇ ಇಷ್ಟ ಪಟ್ಟಿದ್ದಾರೆ. -ಬಿಜೆಪಿಯೊಂದಿಗೆ ಜೆಡಿಎಸ್‌ ಒಂದು ಬಾರಿ ಮೈತ್ರಿ ಸರ್ಕಾರ ನಡೆಸಿದ್ದು, ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ನೇತೃತ್ವದ ಸರ್ಕಾರ ಉತ್ತಮ ಹೆಸರು ಗಳಿಸಿತ್ತು -ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಎರಡು ಬಾರಿ ಮೈತ್ರಿ ಸರ್ಕಾರ ನಡೆಸಿದ್ದು, ಎರಡು ಬಾರಿಯೂ ಅನೇಕ ವಿವಾದಗಳು, ನಿರ್ಧಾರ ಕೈಗೊಳ್ಳುವಲ್ಲಿ ನಿಧಾನಗತಿಯಂತಹ ಘಟನೆಗಳ ನಂತರ ಪತನವಾಗಿದ್ದವು

ಪ್ರಶ್ನೆ 9 – ಬಿಜೆಪಿಯವರು ಮತಕ್ಕಾಗಿ ಇವುಗಳಲ್ಲಿ ಯಾವ ಅಂಶವನ್ನು ನೆಚ್ಚಿಕೊಂಡಿದ್ದಾರೆ?

pulse-of-karnataka-overall survey tally

-ಬಿಜೆಪಿಯ ಹಿಂದುತ್ವ ಅಜೆಂಡಾವನ್ನು ಆ ಪಕ್ಷವು ನೆಚ್ಚಿಕೊಂಡಿದೆ ಎನ್ನುವುದಕ್ಕೂ ಮತದಾರರು ಹೆಚ್ಚಿನ ಅಂಕ ನೀಡಿದ್ದಾರೆ, ಆದರೆ ಅದನ್ನೂ ಮೀರಿ ಮೋದಿಯನ್ನು ನೆಚ್ಚಿಕೊಂಡಿದ್ದಾರೆ ಎಂದು ಮತದಾರರು ತಿಳಿಸಿದ್ದಾರೆ. -ಸ್ಥಳೀಯ ನಾಯಕತ್ವವನ್ನು ಬಿಜೆಪಿ ಕಡೆಗಣಿಸಿದೆ ಎಂಬ ವಾದಕ್ಕೆ ಅನುಗುಣವಾಗಿ ಮತದಾರರು ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ. -ಬಿಜೆಪಿಯು ಅಭಿವೃದ್ಧಿ ವಿಚಾರವನ್ನು ಮುಂದಿಟ್ಟುಕೊಂಡು ಹೋಗಲು ಸಾಕಷ್ಟು ಅವಕಾಶವನ್ನು ಮತದಾರರು ನೀಡಿದ್ದಾರೆ.

ಪ್ರಶ್ನೆ 10 – 40% ಕಮಿಷನ್ ಅಥವಾ ಭ್ರಷ್ಟಾಚಾರ ಆರೋಪ ಬಿಜೆಪಿಗೆ ಹಿನ್ನಡೆ ತರುತ್ತಾ?

pulse-of-karnataka-overall survey tally

-ಆಡಳಿತಾರೂಢ ಬಿಜೆಪಿ ಅತ್ಯಂತ ಕಡೆಗಣಿಸಿದ ಹಾಗೂ ರಾಜ್ಯದ ಜನರ ಗಮನವನ್ನು ಅತಿ ಹೆಚ್ಚು ಸೆಳೆದ ವಿಚಾರ ಇದು -40 ಪರ್ಸೆಂಟ್‌ ಆರೋಪ ಸುಳ್ಳು ಎಂದು ಬಿಜೆಪಿ ಹೇಳುತ್ತದೆಯಾದರೂ ಅದು ಸುಳ್ಳು ಎಂದು ಸಾಬೀತುಪಡಿಸುವ ಪ್ರಯತ್ನವನ್ನು ಸಾಕಷ್ಟು ಮಾಡಿಲ್ಲ -ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಂತಹ ಪ್ರಕರಣಗಳು, ಕಾಂಗ್ರೆಸ್‌ ಆರೋಪಕ್ಕೆ ಪುಷ್ಠಿ ನೀಡುತ್ತವೆ -ಇದೀಗ ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷ ಪುತ್ರನ ಮೇಲೆ ಲೋಕಾಯುಕ್ತ ದಾಳಿಯೂ ನಡೆದಿರುವುದು, ನಮ್ಮ ಸರ್ವೇಯು ಈ ದಾಳಿಗೆ ಮುನ್ನ ನಡೆದಿತ್ತು. ಬಹುಶಃ ಈಗ ಸರ್ವೇ ಮಾಡಿದರೆ 40 ಪರ್ಸೆಂಟ್‌ ಕಮಿಷನ್‌ ಆರೋಪದ ಕುರಿತು ಮತದಾರರು ಮತ್ತಷ್ಟು ಆಕ್ರೋಶ ಹೊರಹಾಕುತ್ತಿದ್ದರು.

ಪ್ರಶ್ನೆ 11 – ಕಾಂಗ್ರೆಸ್ ಒಳಜಗಳ ಚುನಾವಣೆಯ ವೇಳೆ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಾ?

pulse-of-karnataka-overall survey tally

-ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ನಡುವಿನ ಸಿಎಂ ಗಾದಿಗಾಗಿನ ಪೈಪೋಟಿಯು ಆ ಪಕ್ಷಕ್ಕೆ ನಷ್ಟ ಉಂಟು ಮಾಡುತ್ತದೆ ಎಂದು ಹೆಚ್ಚಿನ ಜನರು ಭಾವಿಸಿದ್ದಾರೆ. ಆದರೆ, ಪ್ರಭಾವ ಬೀರುವುದಿಲ್ಲ ಎನ್ನುವವರ ಪ್ರಮಾಣವೂ ತೀರಾ ಕಡಿಮೆಯೇನಿಲ್ಲ. -ನಮ್ಮ ಹಿಂದಿನ ಪ್ರಶ್ನೆಯಲ್ಲಿ ನೋಡಿದಂತೆ, ಕಾಂಗ್ರೆಸ್‌ನ ನಾಯಕತ್ವ ಪೈಪೋಟಿಯಿಂದಲೇ ರಾಜ್ಯದ ಇಬ್ಬರು ಪ್ರಬಲ ನಾಯಕರನ್ನು ಆ ಪಕ್ಷ ಸ್ಥಾಪಿಸಿದಂತಾಗಿದೆ -ಮತದಾರರಲ್ಲಿ ನಾಯಕತ್ವ ಸ್ಪರ್ಧೆಯು ಮತ್ತಷ್ಟು ಗೊಂದಲ ಮೂಡಿಸದಂತೆ ನೋಡಿಕೊಳ್ಳುವುದು ಆ ಪಕ್ಕಿರುವ ಗುರಿ.

ಪ್ರಶ್ನೆ 12 – ರಾಜಕೀಯ ಪಕ್ಷಗಳು ನೀಡುವ ಉಚಿತ ಕೊಡುಗೆಗಳಿಂದ ಮತ ಸೆಳೆಯಲು ಸಾಧ್ಯವೇ?

pulse-of-karnataka-overall survey tally

-ಇದು, ಈಗಾಗಲೆ ಮೂರು ಉಚಿತ ಘೋಷಣೆಗಳನ್ನು ಮಾಡಿರುವ ಕಾಂಗ್ರೆಸ್‌ ಪಕ್ಷ ಆಲೋಚನೆ ಮಾಡಬೇಕಾದ ವಿಚಾರ -ಉಚಿತ ವಿದ್ಯುತ್‌, ಮಾಸಿಕ 2 ಸಾವಿರ ರೂ. ಹಾಗೂ 10 ಕೆ.ಜಿ. ಅಕ್ಕಿ ನೀಡುವಿಕೆಯು ಜನರ ಮನಸ್ಸಿನಲ್ಲಿ ಅಷ್ಟಾಗಿ ನಾಟಿಲ್ಲ ಎನ್ನುವುದನ್ನು ತೋರಿಸುತ್ತಿದೆ. -ಪರಿಣಾಮ ಬೀರುವುದಿಲ್ಲ ಹಾಗೂ ಅಲ್ಪ ಪರಿಣಾಮ ಎಂಬ ಅಂಶವೇ ಮೂರನೇ ಎರಡರಷ್ಟು ಭಾಗವಿದೆ. -ಕಾಂಗ್ರೆಸ್‌ನ ಉಚಿತ ಘೋಷಣೆಗಳಿಗೆ ಹೆದರಿ ಬಿಜೆಪಿ ಸರ್ಕಾರವೂ ಬಜೆಟ್‌ನಲ್ಲಿ, ಕೃಷಿ ಕಾರ್ಮಿಕ ಮಹಿಳೆಯರಿಗೆ 1 ಸಾವಿರ ರೂ. ಘೋಷಣೆ ಮಾಡಿದ್ದು, ಈ ಕುರಿತೂ ಆಲೋಚಿಸುವಂತೆ ಮಾಡುತ್ತಿದೆ ಈ ವರದಿ.

ಪಕ್ಷಗಳ ಬಲಾಬಲ

pulse-of-karnataka-overall survey tally

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆಯಾದರೂ, ಈ ಸಮಯದಲ್ಲಿ ಚುನಾವಣೆ ನಡೆದರೆ ಕಾಂಗ್ರೆಸ್‌ ಪಕ್ಷಕ್ಕೆ ಸ್ವಲ್ಪ ಮೇಲುಗೈ ಸಿಗಬಹುದು ಎನ್ನುವುದನ್ನು ರಿಪೋರ್ಟ್‌ ಹೇಳುತ್ತಿದೆ. ಆದರೆಯಾರಿಗೂ ಬಹುಮತ ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಕಾಂಗ್ರೆಸ್‌ ಅಥವಾ ಬಿಜೆಪಿ, ಕಾಂಗ್ರೆಸ್‌ ಅಥವಾ ಜೆಡಿಎಸ್‌ ಎಂದು ಗೊಂದಲದಲ್ಲಿ 13 ಕ್ಷೇತ್ರಗಳಿದ್ದು, ಈ ಮತಗಳನ್ನು ಯಾವ ಪಕ್ಷ ಪಡೆದುಕೊಳ್ಳುತ್ತದೆ ಎನ್ನುವುದು ಗೆಲುವಿಗೆ ಹತ್ತಿರ ಕೊಂಡೊಯ್ಯುವ ವಿಚಾರವಾಗಿದೆ. ಜೆಡಿಎಸ್‌ 31 ಸ್ಥಾನ ಗಳಿಸಿದ್ದು, ಅತಂತ್ರ ನಿರ್ಮಾಣವಾದರೆ ಕಿಂಗ್‌ ಮೇಕರ್‌ ಆಗುವ ಸಾಧ್ಯತೆ ಮತ್ತೊಮ್ಮೆ ಎದುರಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Bangalore Rain: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ‌ಯಲ್ಲಿ ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ ಇದೆ.

VISTARANEWS.COM


on

Bangalore rain
Koo

ಬೆಂಗಳೂರು: ರಾಜಧಾನಿಯ ವಿವಿಧೆಡೆ ಶನಿವಾರ ಸಂಜೆ ಭರ್ಜರಿ ಮಳೆ (Bangalore Rain) ಸುರಿದಿದ್ದು, ಹಲವೆಡೆ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ನಗರದ ಹೊರವಲಯದ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ವೀರಸಂದ್ರ ಸಿಗ್ನಲ್ ಬಳಿ ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಯಿತು. ಇನ್ನು ನಗರದ ಕೆಲವು ಕಡೆ ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪ್ರತಿ ಬಾರಿ ಮಳೆ ಬಂದಾಗ ಹೆದ್ದಾರಿ ಕೆರೆಯಂತಾಗುತ್ತದೆ. ಮಳೆಯ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ರಸ್ತೆ ಜಲಾವೃತವಾಗುತ್ತದೆ. ಹೆದ್ದಾರಿಯಲ್ಲಿ ನಾಲ್ಕೈದು ಅಡಿಗಳಷ್ಟು ಮಳೆ ನೀರು ನಿಂತಿದ್ದರಿಂದ ಹೆದ್ದಾರಿಯ ಅವ್ಯವಸ್ಥೆಯಿಂದ ಹಲವು ವಾಹನಗಳು ಕೆಟ್ಟುನಿಂತಿವೆ. ಇನ್ನು ಜಲಾವೃತವಾದ ರಸ್ತೆಯಲ್ಲಿ ವಾಹನಗಳು ಸಂಚರಿಸಲಾಗದೆ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇನ್ನು ಸಿಲಿಕಾನ್ ಸಿಟಿಯ ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ವಿಜಯನಗರ, ಶಿವಾಜಿನಗರ, ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿ ನಗರ, ಕೋರಮಂಗಲ, ಎಂ.ಜಿ. ರಸ್ತೆ, ಕಬ್ಬನ್ ಪಾರ್ಕ್ ಸೇರಿ ನಗರದ ಹಲವೆಡೆ ಭರ್ಜರಿ ಮಳೆಯಾಗಿದೆ. ಪಾದಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಿದರು.

ಕೆಲಸ ಕಾರ್ಯ ಮುಗಿಸಿಕೊಂಡು ಮನೆಗಳಿಗೆ ತೆರಳುತ್ತಿದ್ದ ವೇಳೆ ಭಾರಿ ಮಳೆ ಬಿದ್ದಿದ್ದರಿಂದ ವಾಹನ ಸವಾರರು ಬಸ್ ನಿಲ್ದಾಣಗಳು, ಕಟ್ಟಡಗಳ ಬಳಿ ನಿಂತು ಆಶ್ರಯ ಪಡೆದರು. ಮಳೆ ನೀರಿನಿಂದ ಸಹಕಾರ ನಗರದ ಜಿ ಬ್ಲಾಕ್ ರಸ್ತೆಗಳು ಹಳ್ಳದಂತಾಗಿ ಬದಲಾಗಿದ್ದವು. ಇನ್ನು ಕೆಎಸ್ ಗಾರ್ಡನ್‌ನಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಪರದಾಡಿದರು.

ಸಂಜೆ ಸುರಿದ ಮಳೆಯಿಂದ ಯಲಚೇನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿ ಪರದಾಡಿದರು. ಮಳೆ ಬಂದರೆ ಇಲ್ಲಿನ ಜನ ಭಯದಲ್ಲೇ ದಿನ ಕಳೆಯುವ ಸ್ಥಿತಿ ಇದೆ. ಇನ್ನು ಮನೆಯ ಮುಂದೆ ಅಧಿಕಾರಿಗಳು ಗುಂಡಿ ತೆಗೆದು ಮುಚ್ಚದ ಹಿನ್ನೆಲೆಯಲ್ಲಿ ವಾಹನ ಸವಾರನೊಬ್ಬ ಬಿದ್ದು ಗಾಯಗೊಂಡಿದ್ದಾರೆ.

ಯಲಹಂಕದಲ್ಲಿ ಧರೆಗುರುಳಿದ ಮರ

ಮಳೆಯಿಂದಾಗಿ ಯಲಹಂಕ ವಲಯದಲ್ಲಿನ ಜಕ್ಕೂರು ಬಳಿ ಮರ ಧರೆಗುರುಳಿದ್ದು, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಸ್ಥಳಕ್ಕೆ ಭೇಟಿ ನೀಡಿ ಕೂಡಲೆ ಮರ ತೆರವುಗೊಳಿಸಲು ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಂದಿನ ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ‌ಯಲ್ಲಿ ರಾಜ್ಯದಲ್ಲಿ‌ ಇಂದಿನಿಂದ ಐದು ದಿನಗಳ‌ ಕಾಲ ಭಾರಿ‌ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಕೇರಳ ಪ್ರವೇಶಿಸಿರುವ ಮುಂಗಾರು, ನಂತರ ಕರ್ನಾಟಕಕ್ಕೆ ಪ್ರವೇಶಿಸಲಿದೆ. ಈ ಬಾರಿ ಅವಧಿಗೂ ಮೊದಲೇ ಮುಂಗಾರು ಪ್ರವೇಶ ಮಾಡುತ್ತಿದೆ. ಕಳೆದ ವರ್ಷ ಜೂನ್ 15 ರಿಂದ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಹೀಗಾಗಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ | Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

ಇನ್ನು ರಾಜ್ಯದಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಹವಮಾನ ಇಲಾಖೆ‌ ಅಲರ್ಟ್‌ ನೀಡಿದ್ದುಮ ಬೆಂಗಳೂರಿನಲ್ಲಿ ಇಂದಿನಿಂದ ಐದು ದಿನ ಮಳೆ ಇರಲಿದೆ. ಗುಡುಗು – ಮಿಂಚು ಸಹಿತ ಬೀರುಗಾಳಿ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದೆ.

Continue Reading

ದೇಶ

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Exit Poll 2024: ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Exit Poll 2024
Koo

ಬೆಂಗಳೂರು: ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶನಿವಾರ ರಾತ್ರಿ ಮಾಧ್ಯಮಗಳು, ಎಕ್ಸಿಟ್ ಪೋಲ್ ಸಮೀಕ್ಷೆಗಳ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಗರಿಷ್ಠ 8 ಸ್ಥಾನಗಳು ಸಿಗಬಹುದು ಎಂದು ಬಹುತೇಕ ಸಮೀಕ್ಷೆಗಳು ಹೇಳಿರುವ ಹಿನ್ನೆಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ.

ಇದನ್ನೂ ಓದಿ: Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿ ನಾವ್ಯಾರು ಎಕ್ಸಿಟ್ ಪೋಲ್ ನಂಬುವುದಿಲ್ಲ ಎಂದು ಹೇಳಿದ್ದಾರೆ. ಇದು ಗ್ರೌಂಡ್ ರಿಯಾಲಿಟಿಯಿಂದ ದೂರ ಇದೆ ಎಂದೇ ನಂಬುತ್ತೇವೆ ಎಂದು ನುಡಿದಿದ್ದಾರೆ. ಸಮೀಕ್ಷೆಗಳಲ್ಲಿ ಕೇವಲ ಐದಾರು ಸೀಟುಗಳನ್ನು ಮಾತ್ರ ಕೊಟ್ಟಿದ್ದಾರೆ. ಆದರೆ, ಜೂ 4ರಂದು ವಾಸ್ತವ ಗೊತ್ತಾಗಲಿದೆ. ಫಲಿತಾಂಶದಲ್ಲಿ ಕಾಂಗ್ರೆಸ್​ ಡಬಲ್​ ಡಿಜಿಟ್ ದಾಟಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಸಮೀಕ್ಷೆ ಹೇಗಿದೆ?

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಫಲಿತಾಂಶ ಬಿಜೆಪಿಗೆ 2019ರ ಚುನಾವಣೆಯಷ್ಟು ಪೂರಕವಾಗಿಲ್ಲ (Exit Poll 2024 ) ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿವೆ. ಈ ಬಾರಿ ಕರ್ನಾಟಕದಲ್ಲಿ 18 ಸೀಟುಗಳು ಬಿಜೆಪಿಗೆ ದೊರೆಯಲಿದ್ದು, 8 ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ ಎಂದು ಪೋಲ್​​ ಸ್ಟಾಟ್ ಹೇಳಿದೆ. ಜೆಡಿಎಸ್​​ ರೀತಿ ಸ್ಪರ್ಧಿಸಿರುವ ಒಟ್ಟು 3ರಲ್ಲಿ ಎರಡು ಸ್ಥಾನಗಳನ್ನು ಜೆಡಿಎಸ್​ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ. ದೇಶಾದ್ಯಂತ ಬಿಜಪಿಗೆ ಹಿಂದಿಗಿಂತ ಹೆಚ್ಚು ಸೀಟುಗಳು ಸಿಗಲಿವೆ ಎಂಬ ಟ್ರೆಂಡ್ ಇರುವ ಹೊರತಾಗಿಯೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಬಿಜೆಪಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ತಲಾ ಒಂದು ಸ್ಥಾನವನ್ನು ಹಂಚಿಕೊಂಡಿತ್ತು. ಪಕ್ಷೇತರರಾದ ಸುಮಲತಾ ಅವರು ಮಂಡ್ಯ ಕ್ಷೇತ್ರದಲ್ಲಿ ಗೆದ್ದಿದ್ದರು.

ವಿಸ್ತಾರ ನ್ಯೂಸ್​- COPS ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿಗೆ 18ರಿಂದ-22 ಸ್ಥಾನಗಳು ದೊರಕಿದೆ, ಕಾಂಗ್ರೆಸ್​ಗೆ 08ರಿಂದ 10 ಸ್ಥಾನಗಳು ಲಭಿಸಲಿವೆ. ಜೆಡಿಎಸ್​ಗೆ 2ರಿಂದ 3 ಸ್ಥಾನ ಸಿಗುವುದು ಎಂದು ಹೇಳಲಾಗಿದೆ. ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ರಿಂದ 22, ಕಾಂಗ್ರೆಸ್ 3ರಿಂದ 5 ಮತ್ತು ಜೆಡಿಎಸ್ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ . ಇಂಡಿಯಾ ಟುಡೆ ಪ್ರಕಾರ ಕರ್ನಾಟದಲ್ಲಿ ಬಿಜೆಪಿಗೆ 23ರಿಂದ 25 ಹಾಗೂ ಕಾಂಗ್ರೆಸ್​ಗೆ 04ರಿಂದ 05 ಹಾಗೂ ಜೆಡಿಎಸ್​ಗೆ 1ರಿಂದ 3ಸ್ಥಾನ ಸಿಗಲಿದೆ ಎಂದು ಅಂದಾಜಿಸಿದೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಕರ್ನಾಟಕದಲ್ಲಿ ಹೀಗಿದೆ ಚುನಾವಣಾ ಫಲಿತಾಂಶ ಸಮೀಕ್ಷೆ

  • ವಿಸ್ತಾರ-COPS: ಬಿಜೆಪಿ 18-20, ಕಾಂಗ್ರೆಸ್‌ 8-10, ಜೆಡಿಎಸ್‌ 2-3
  • ಜನ್ ಕೀ ಬಾತ್: ಬಿಜೆಪಿ 17-23, ಕಾಂಗ್ರೆಸ್ 4-8, ಜೆಡಿಎಸ್ 1-2
  • ಝೀ ನ್ಯೂಸ್: ಬಿಜೆಪಿ 18-22, ಕಾಂಗ್ರೆಸ್ 4-6, ಜೆಡಿಎಸ್ 1-3
  • CNN ನ್ಯೂಸ್ 18: ಬಿಜೆಪಿ 21-23, ಕಾಂಗ್ರೆಸ್ 3-7, ಜೆಡಿಎಸ್ 2-3
  • ಪೋಲ್‌ಸ್ಟ್ರಾಟ್‌: ಬಿಜೆಪಿ 18, ಕಾಂಗ್ರೆಸ್-08, ಜೆಡಿಎಸ್-02 ಸ್ಥಾನ
  • ಇಂಡಿಯಾ ಟಿವಿ: ಬಿಜೆಪಿ 18-22, ಕಾಂಗ್ರೆಸ್‌ 4-8, ಜೆಡಿಎಸ್‌ 1-3
  • ಸಿ-ವೋಟರ್: ಬಿಜೆಪಿ 21-22, ಕಾಂಗ್ರೆಸ್ 3-5, ಜೆಡಿಎಸ್ 1-3
  • ಇಂಡಿಯಾ ಟುಡೇ: ಬಿಜೆಪಿ 20-22, ಕಾಂಗ್ರೆಸ್ 3-5, ಜೆಡಿಎಸ್ 2-3
  • ಪೋಲ್ ಆಫ್ ಪೋಲ್: ಬಿಜೆಪಿ-20, ಕಾಂಗ್ರೆಸ್-6, ಜೆಡಿಎಸ್-2
  • ಟೈಮ್ಸ್ ನೌ: ಬಿಜೆಪಿ 21-25, ಕಾಂಗ್ರೆಸ್ 3-7, ಜೆಡಿಎಸ್ 1-2
  • ಇಂಡಿಯಾ ನ್ಯೂಝ್: ಬಿಜೆಪಿ-21, ಕಾಂಗ್ರೆಸ್-5, ಜೆಡಿಎಸ್-2
  • ನ್ಯೂಸ್ ನೇಷನ್: ಬಿಜೆಪಿ-16, ಕಾಂಗ್ರೆಸ್-10, ಜೆಡಿಎಸ್-02
  • ನ್ಯೂಸ್ 24-ಟುಡೇಸ್ ಚಾಣಕ್ಯ: ಬಿಜೆಪಿ-ಜೆಡಿಎಸ್ 24, ಕಾಂಗ್ರೆಸ್-4

Continue Reading

ಕರ್ನಾಟಕ

Prajwal Revanna Case: ಕಡೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ; 7 ಗಂಟೆ ಕಾದು ಎಸ್‌ಐಟಿ ತಂಡ ವಾಪಸ್

Prajwal Revanna Case: ಮನೆ ಬಳಿ ಎಷ್ಟು ಕಾದರೂ ಬಾರದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದ ಬಗ್ಗೆ ವರದಿ ಮಾಡಿಕೊಂಡು ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ.

VISTARANEWS.COM


on

Prajwal Revanna Case
Koo

ಹಾಸನ: ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ (Prajwal Revanna Case) ತನಿಖೆಗೆ ಸಹಕರಿಸುವುದಾಗಿ ಹೇಳಿದ್ದ ಭವಾನಿ ರೇವಣ್ಣ ಅವರು ಶನಿವಾರವೂ ಪ್ರತ್ಯಕ್ಷವಾಗಿಲ್ಲ. ಭವಾನಿ ರೇವಣ್ಣ (Bhavani Revanna) ಅವರನ್ನು ವಶಕ್ಕೆ ಪಡೆಯಲು ತೆರಳಿದ್ದ ಎಸ್‌ಐಟಿ ಅಧಿಕಾರಿಗಳು ಹೊಳೆನರಸೀಪುರ ನಿವಾಸದ ಎದುರು ಸತತ 7 ಗಂಟೆ ಕಾದು ವಾಪಸ್‌ ಆಗಿದ್ದಾರೆ.

ಮನೆ ಬಳಿ ಎಷ್ಟು ಕಾದರೂ ಬಾರದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದ ಬಗ್ಗೆ ವರದಿ ಮಾಡಿಕೊಂಡು ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ. ಬೆಳಗ್ಗೆ 11 ಗಂಟೆಗೆ ಮನೆ ಬಳಿ ತೆರಳಿದ್ದ ಎಸ್‌ಐಟಿ ಟೀಂನಲ್ಲಿ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಇನ್ಸ್‌ಪೆಕ್ಟರ್ ತೆರಳಿದ್ದರು. ಎಷ್ಟು ಕಾದರೂ ಭವಾನಿ ರೇವಣ್ಣ ಬಾರದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ವಾಪಸ್‌ ತೆರಳಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಯಿಂದ 5 ಗಂಟೆ ನಡುವೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿತ್ತು. ಆದರೆ ಬಂಧನ ಭೀತಿಯಿಂದ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗಿಲ್ಲ.

ಇದನ್ನೂ ಓದಿ | Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

ಭವಾನಿ ರೇವಣ್ಣಗೆ ನ್ಯಾಯಾಲಯದ ಬಗ್ಗೆ ಗೌರವವಿದೆ: ವಕೀಲೆ ಸುಮಾ

ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಪರ ವಕೀಲೆ ಸುಮಾ ಮಾತನಾಡಿ, ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ನಮಗೆ ಇಲ್ಲ. ಹೆಣ್ಣುಮಕ್ಕಳು ಮೇಡಂ ಪರವಾಗಿ ಕಷ್ಟದಲ್ಲೂ ಇರುತ್ತೇವೆ, ಸುಖದಲ್ಲೂ ಇರುತ್ತೇವೆ. ಆದರೆ ನಾನು ಇಂದು ಬಂದಿದ್ದು ವಕೀಲಳಾಗಿ. ಭವಾನಿ ರೇವಣ್ಣ ಅವರಿಗೆ ಆರೋಗ್ಯ ಸರಿಯಿಲ್ಲ, ಎರಡು ಮಂಡಿ ಆಪರೇಷನ್ ಆಗಿದೆ. ಅವರ ಅಣ್ಣ ಸಾವನ್ನಪ್ಪಿದ್ದು, ಆ ನೋವಿನಲ್ಲೂ ಇದ್ದಾರೆ. ಖಂಡಿತವಾಗಿಯೂ ತನಿಖೆಗೆ ಹಾಜರಾಗುತ್ತಾರೆ. ಕಾನೂನು ಬಗ್ಗೆ ಮೇಡಂಗೆ ಗೌರವವಿದೆ. ಅವರಿಗೆ ನ್ಯಾಯಾಲಯದ ಬಗ್ಗೆ ಗೌರವವಿದೆ. ಆದಷ್ಟು ಬೇಗ ಬರ್ತಾರೆ, ತನಿಖೆ ಎದುರಿಸುತ್ತಾರೆ, ನಿರ್ದೊಷಿಯಾಗಿ ಬರ್ತಾರೆ ಎಂದು ಹೇಳಿದರು.

Continue Reading

ಪ್ರಮುಖ ಸುದ್ದಿ

Exit Poll 2024: ಮುಸ್ಲಿಮರ ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ; ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು

Exit Poll 2024: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ವಿರುದ್ಧ “ವೋಟ್ ಜಿಹಾದ್” ಮಾಡಿ ಎಂದು ಭಾರತದ ಮುಸ್ಲಿಂ ಮತದಾರರಿಗೆ ಸಮಾಜವಾದಿ ಪಕ್ಷದ ನಾಯಕಿ ಮಾರಿಯಾ ಆಲಂ ಕರೆ ಕೊಟ್ಟಿದ್ದರು. ಇಂಥ ಹೇಳಿಕೆಗಳು ಮತ್ತು ಸ್ಥಳೀಯವಾಗಿ ಮುಸ್ಲಿಂ ಸಮುದಾಯದ ಮಂದಿ ಪಠಿಸಿದ ಒಗ್ಗಟ್ಟಿನ ಮಂತ್ರ ಕಾಂಗ್ರೆಸ್​ಗೆ ಅವರ ಮತಗಳು ಪರಿವರ್ತನೆಗೊಳ್ಳುವಂತೆ ಮಾಡಿದೆ.

VISTARANEWS.COM


on

exit poll 2024
Koo

ಬೆಂಗಳೂರು: ಬಿಜೆಪಿಯ ಜತೆ ಸೈದ್ಧಾಂತಿಕ ವಿರೋಧ ಇಟ್ಟುಕೊಂಡಿರುವ ಭಾರತದ ಮುಸ್ಲಿಮರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದಕ್ಕಾಗಿ ಒಟ್ಟಾಗಿ ‘ಕೈ’ ಜೋಡಿಸಿದ್ದಾರೆ. ಹೇಗಾದರೂ ಮಾಡಿ ಬಿಜೆಪಿ ನೇತೃತ್ವದ ಎನ್​ಡಿಎಯನ್ನು ಅಧಿಕಾರದಿಂದ ದೂರವಿರಿಸಿ ತಮಗೆ ಹೆಚ್ಚು ಅನುಕೂಲಕರ ಎನಿಸಿಕೊಂಡಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಪಣತೊಟ್ಟಿರುವುದು ಚುನಾವಣೋತ್ತರ ಸಮೀಕ್ಷೆಯಲ್ಲಿ ಪ್ರಕಟಗೊಂಡಿದೆ. ಸಮೀಕ್ಷೆಯು ಅಂದಾಜಿಸಿದ ಪ್ರಕಾರ ಮುಸ್ಲಿಂ ಸಮುದಾಯದವರು ಚಲಾವಣೆ ಮಾಡಿರುವ ಶೇಕಡಾ 72ರಷ್ಟು ಮತಗಳು ಕೈ ಪಕ್ಷದ ಪಾಲಾಗಿವೆ.

ಉತ್ತರ ಪ್ರದೇಶದ ಫರೂಕಾಬಾದ್​ನ್ಲಲಿ ಏಪ್ರಿಲ್ 29ರಂದು ನಡೆದ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಅವರ ಸೋದರ ಸೊಸೆ ಸಮಾಜವಾದಿ ಪಕ್ಷದ ನಾಯಕಿ ಮಾರಿಯಾ ಆಲಂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ವಿರುದ್ಧ “ವೋಟ್ ಜಿಹಾದ್” ಮಾಡಿ ಎಂದು ಭಾರತದ ಮುಸ್ಲಿಂ ಮತದಾರರಿಗೆ ಕರೆ ಕೊಟ್ಟಿದ್ದರು. ಇಂಥ ಹೇಳಿಕೆಗಳು ಮತ್ತು ಸ್ಥಳೀಯವಾಗಿ ಮುಸ್ಲಿ ಸಮುದಾಯದ ಮಂದಿ ಪಠಿಸಿದ ಒಗ್ಗಟ್ಟಿನ ಮಂತ್ರ ಕಾಂಗ್ರೆಸ್​ಗೆ ಅವರ ಮತಗಳು ಪರಿವರ್ತನೆಗೊಳ್ಳುವಂತೆ ಮಾಡಿದೆ.

ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಮರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕನ್ನು ಹೊಂದಿದ್ದಾರೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 2006ರ ಹೇಳಿಕೆಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದನ್ನು ಈ ವೇಳೆ ಸ್ಮರಿಸಬಹುದು. ಕಾಂಗ್ರೆಸ್ ತನ್ನ ಅಲ್ಪಸಂಖ್ಯಾತ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದು, ಒಬಿಸಿಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಮೀಸಲನ್ನು ಕಸಿದು ಮುಸ್ಲಿಮರಿಗೆ ನೀಡಲಿದೆ ಎಂದು ಪ್ರಧಾನಿ ಆರೋಪಿಸಿದ್ದರು. ಮೋದಿ ಅವರಿಗೆ ಮುಸ್ಲಿಮರು ಕಾಂಗ್ರೆಸ್​ಗಾಗಿ ಒಟ್ಟಾಗಿದ್ದಾರೆ ಎಂಬ ಸುಳಿವು ಸಿಕ್ಕಿತ್ತು. ಅದಕ್ಕಾಗಿಯೇ ಅವರು ಹಿಂದೂ ಮತಗಳ ಧ್ರುವೀಕರಣಕ್ಕೆ ತಂತ್ರ ಹೆಣೆದಿದ್ದರು.

ಇದನ್ನೂ ಓದಿ: Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

ಮುಸ್ಲಿಮರು ಏಕೆ ಚುನಾವಣೆಯಲ್ಲಿ ಮುಖ್ಯವಾಗಿದ್ದರು?

ಭಾರತವು ವಿಶ್ವದಲ್ಲಿ ಮೂರನೇ ಅತಿ ಹೆಚ್ಚು ಮುಸ್ಲಿಮರನ್ನು ಹೊಂದಿದ ರಾಷ್ಟ್ರ. ಇದು ದೇಶವೊಂದರ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯ. ಮುಸ್ಲಿಮರು ಭಾರತದ ಜನಸಂಖ್ಯೆಯ ಶೇಕಡಾ 14ರಷ್ಟಿದ್ದಾರೆ. ಭಾರತದ 543 ಲೋಕಸಭಾ ಕ್ಷೇತ್ರಗಳ ಪೈಕಿ 86ರಲ್ಲಿ ಮುಸ್ಲಿಮರ ಜನಸಂಖ್ಯೆ ಕನಿಷ್ಠ ಶೇ.20ರಷ್ಟಿದೆ. ಇದರಲ್ಲಿ 16 ಸ್ಥಾನಗಳಲ್ಲಿ, ಜನಸಂಖ್ಯೆಯಲ್ಲಿ ಆ ಪಾಲು ಶೇಕಡಾ 50ಕ್ಕಿಂತ ಹೆಚ್ಚಾಗಿದೆ. ಈ 86 ಸ್ಥಾನಗಳು 12 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (ಯುಟಿ) ಇವೆ. ಇದರಲ್ಲಿ 71 ಸ್ಥಾನಗಳು ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕೇರಳ, ಬಿಹಾರ, ಅಸ್ಸಾಂ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಹರಡಿದೆ.

Continue Reading
Advertisement
Exit Poll
ಪ್ರಮುಖ ಸುದ್ದಿ19 mins ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ35 mins ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Exit Poll 2024
ಪ್ರಮುಖ ಸುದ್ದಿ2 hours ago

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Bangalore rain
ಪ್ರಮುಖ ಸುದ್ದಿ2 hours ago

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Dinesh Karthik
ಪ್ರಮುಖ ಸುದ್ದಿ2 hours ago

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Exit Poll
ಪ್ರಮುಖ ಸುದ್ದಿ2 hours ago

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024
ದೇಶ3 hours ago

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Prajwal Revanna Case
ಕರ್ನಾಟಕ3 hours ago

Prajwal Revanna Case: ಕಡೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ; 7 ಗಂಟೆ ಕಾದು ಎಸ್‌ಐಟಿ ತಂಡ ವಾಪಸ್

Exit Poll 2024
ಪ್ರಮುಖ ಸುದ್ದಿ3 hours ago

Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

Exit Poll 2024
ದೇಶ4 hours ago

Exit Poll 2024: ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌, ಉತ್ತರ ಪ್ರದೇಶದಲ್ಲಿ ಮೇಲುಗೈ; ರಾಜ್ಯವಾರು ಎಕ್ಸಿಟ್‌ ಪೋಲ್‌ ವರದಿ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು7 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌