Pulse of Karnataka: ಮಲೆನಾಡು-ಕರಾವಳಿ: ವಿಸ್ತಾರ-ಅಖಾಡಾ ಸಮೀಕ್ಷೆ: ಹಿಂದುತ್ವದ ಪ್ರಯೋಗಶಾಲೆಯಲ್ಲಿ ಜನರಿಗೆ ಯಾವುದರತ್ತ ಒಲವು? - Vistara News

ಕರ್ನಾಟಕ

Pulse of Karnataka: ಮಲೆನಾಡು-ಕರಾವಳಿ: ವಿಸ್ತಾರ-ಅಖಾಡಾ ಸಮೀಕ್ಷೆ: ಹಿಂದುತ್ವದ ಪ್ರಯೋಗಶಾಲೆಯಲ್ಲಿ ಜನರಿಗೆ ಯಾವುದರತ್ತ ಒಲವು?

2018 ರಲ್ಲಿ ಬಿಜೆಪಿ -24 , ಕಾಂಗ್ರೆಸ್ -3 ಸ್ಥಾನ ಗಳಿಸಿತ್ತು. 27ರಲ್ಲಿ 24 ಅಂದರೆ ಸರಿಸುಮಾರು ಶೇ.90 ಸ್ಥಾನಗಳಲ್ಲಿ ಬಿಜೆಪಿ ಜಯಿಸಿ, ಸರಳ ಬಹುಮತಕ್ಕೆ ಹತ್ತಿರವಾಗಲು ಬಹುದೊಡ್ಡ ಕಾಣಿಕೆ ನೀಡಿತ್ತು.

VISTARANEWS.COM


on

pulse-of-karnataka vistara akhada survey Malenadu and coastal karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರುನಾಡಿನಲ್ಲಿ ಇದೀಗ ಎಲೆಕ್ಷನ್ ಫೀವರ್. 2023ರ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕದ ಜನ ಯಾವ ಪಕ್ಷದ ಕಡೆಗೆ ಒಲವು ತೋರುತ್ತಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾರ ಹವಾ ಇದೆ..? ವಲಯವಾರು ಯಾವ ರಿಸಲ್ಟ್ ಬರಬಹುದು..? ಹೀಗೆ ಒಟ್ಟು 13 ಪ್ರಶ್ನೆಗಳನ್ನು ರಾಜ್ಯದ ಜನತೆಯ ಮುಂದಿಟ್ಟು ನಾಡಿಮಿಡಿತವನ್ನ ಅರಿಯುವ ಪ್ರಯತ್ನವನ್ನು ವಿಸ್ತಾರ ನ್ಯೂಸ್ ನಡೆಸಿದೆ. ಇದಕ್ಕಾಗಿ ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜೊತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಇದುವೇ ಪಲ್ಸ್ ಆಫ್ ಕರ್ನಾಟಕ (Pulse of Karnataka).

ಪಲ್ಸ್ ಆಫ್ ಕರ್ನಾಟಕ ಹಿಂದೆಂದೂ ಕರ್ನಾಟಕದಲ್ಲಿ ನಡೆದಿರದಂತಹ ಅತಿದೊಡ್ಡ ಸರ್ವೇ. ರಾಜ್ಯದ ಮೂಲೆಮೂಲೆಯಲ್ಲಿ ನಮ್ಮ 300ಕ್ಕೂ ಹೆಚ್ಚು ಸಿಬ್ಬಂದಿಯ ಜೊತೆಗೆ ಅಖಾಡದ ಅತಿದೊಡ್ಡ ತಂಡ ಮನೆಮನೆ ಬಾಗಿಲಿಗೆ ತೆರಳಿ ಸಂಗ್ರಹಿಸಿರೋ ಮಾಹಿತಿ ಇದು. ಕರುನಾಡಿನ ಜನರ ನಾಡಿಮಿಡಿತ ಅರಿಯಲು ಉದ್ಯಮಿಗಳು, ಸರ್ಕಾರಿ ನೌಕರರು, ಖಾಸಗಿ ಸಂಸ್ಥೆಗಳ ಸಿಬ್ಬಂದಿ, ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಹಿಂದುಳಿದ ವರ್ಗದ ಜನ, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಎಲ್ಲಾ ವರ್ಗ, ಸಮುದಾಯವನ್ನು ಪ್ರತಿನಿಧಿಸಿ ಈ ಸಮೀಕ್ಷೆ ನಡೆಸಲಾಗಿದೆ. ಇದರಲ್ಲಿ ಸ್ಥಳೀಯ, ಜಿಲ್ಲಾವಾರು, ರಾಜ್ಯ ಮತ್ತು ಕೇಂದ್ರ ನಾಯಕರು ಹೀಗೆ ಎಲ್ಲಾ ವಲಯ, ವಿಚಾರ, ನಾಯಕರಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ಹುಡುಕುವ ಪ್ರಯತ್ನ ಮಾಡಲಾಗಿದ್ದು, ನೂರಕ್ಕೆ ನೂರರಷ್ಟು ಯಶ ಪಡೆಯಲಾಗಿದೆ.

ಈ ಸರ್ವೇಯಲ್ಲಿ ಕರ್ನಾಟಕವನ್ನ ಭೌಗೋಳಿಕವಾಗಿ ಆರು ಭಾಗಗಳಾಗಿ ಗುರುತಿಸಲಾಗಿದೆ. ಅದರಲ್ಲಿ ಹಳೆ ಮೈಸೂರು, ಮಧ್ಯ ಕರ್ನಾಟಕ, ಕರಾವಳಿ & ಮಲೆನಾಡು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ವಲಯಗಳಾಗಿ ಗುರುತಿಸಿ ಅದರಡಿ ಬರೋ ವಿಧಾನಸಭಾ ಕ್ಷೇತ್ರಗಳ ಮತದಾರರ ಪಲ್ಸ್ ಅರಿತು ಆ ಸರ್ವೇ ರಿರ್ಪೋಟ್​​ ಅನ್ನು ನಾವು ನಿಮ್ಮ ಮುಂದಿಡುತ್ತಿದ್ದೇವೆ. ಇದರ ಜೊತೆಗೆ ರಾಜಧಾನಿ ಬೆಂಗಳೂರಿನಲ್ಲೂ ಯಾರ ಹವಾ ಹೇಗಿದೆ ಅನ್ನೋದನ್ನ ನಿಮಗೆ ತಿಳಿಸಲಿದ್ದೇವೆ.

ಈಗ ನಾವು ಮಲೆನಾಡು ಮತ್ತು ಕರಾವಳಿ ಭಾಗದ ಜನರ ಪಲ್ಸ್ ಹೇಗಿದೆ ಅನ್ನೋದನ್ನ ನಿಮ್ಮ ಮುಂದೆ ಇಡ್ತಿದ್ದೇವೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮಂಗಳೂರು ಮತ್ತು ಉಡುಪಿ ಜಿಲ್ಲೆಗಳನ್ನ ತೆಗೆದುಕೊಂಡಿದ್ದು, ಈ ಭಾಗದಲ್ಲಿ ಜನಾಭಿಪ್ರಾಯ ಹೇಗಿದೆ ನೋಡೋಣ ಬನ್ನಿ…

ಪ್ರಶ್ನೆ 1 – ಈಗ ಚುನಾವಣೆ ನಡೆದರೆ ಯಾವ ಪಕ್ಷಕ್ಕೆ ಬಹುಮತ ನೀಡುತ್ತೀರಿ.?

ಬಿಜೆಪಿಯ ಹಿಂದುತ್ವದ ಪ್ರಯೋಗಶಾಲೆ ಎಂದೇ ಗುರುತಿಸಲಾಗುವ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಉಡುಪಿ ಜಿಲ್ಲೆಗಳನ್ನು ಒಳಗೊಂಡಿದೆ. ಹೀಗಾಗಿ ಸರಿಸುಮಾರು ಅರ್ಧದಷ್ಟು ಮತದಾರರು ಬಿಜೆಪಿ ಕಡೆಗೆ ಒಲವು ಹೊಂದಿರುವುದು ಕಾಣುತ್ತಿದೆ. ಈ ಜಿಲ್ಲೆಗಳಲ್ಲಿ ಬಿಜೆಪಿ ಜತೆಗೆ ನೇರ ಹಣಾಹಣಿ ಇರುವುದು ಕಾಂಗ್ರೆಸ್​ ಜತೆಗೆ ಶಿವಮೊಗ್ಗದಲ್ಲಿ ಮಾತ್ರ ಜೆಡಿಎಸ್​​​​​​ ಕೆಲವು ಕ್ಷೇತ್ರಗಳಲ್ಲಿ ಸೆಣೆಸಾಡುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಡುತ್ತದೆ ಇದೇ ಕಾರಣಕ್ಕೆ ಜೆಡಿಎಸ್​​​ ಕುರಿತು ಶೇ.8.5 ಮತದಾರರು ಒಲವು ಹೊಂದಿದ್ದಾರೆ. ಹಿಂದುತ್ವ ಕಾರ್ಯಕರ್ತರ ಹತ್ಯೆ ವಿಚಾರದಲ್ಲಿ ಸರ್ಕಾರ ಸರಿಯಾಗಿ ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನ ಕರಾವಳಿಯಲ್ಲಿ ಹೊಗೆಯಾಡಿತ್ತು. ಸ್ವತಃ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್​ ಕುಮಾರ್​ ಕಟೀಲ್​​ ಕಾರನ್ನು ಕಾರ್ಯಕರ್ತರು ಹಿಡಿದು ಅಲುಗಾಡಿಸಿದ್ದರು. ಈ ಅಸಮಾಧಾನವನ್ನು ಸ್ವಲ್ಪಮಟ್ಟಿಗೆ ತಣಿಸಲು ಬಿಜೆಪಿ ಯಶ ಕಂಡಿರುವಂತೆ ಈ ಸಮೀಕ್ಷೆಯಲ್ಲಿ ಕಾಣುತ್ತಿದೆ. ಆದ್ರೆ ತಟಸ್ಥ ಮತದಾರರ ಸಂಖ್ಯೆ ಈ ಭಾಗದಲ್ಲೂ ಶೇ.6.6 ರಷ್ಟಿದ್ದು ಅಂತಿಮ ಕ್ಷಣದ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ.

ಪ್ರಶ್ನೆ 2 – ನೀವು ಈ ಬಾರಿ ಮತ ಚಲಾಯಿಸಲು ಇವುಗಳಲ್ಲಿ ಅತಿಹೆಚ್ಚು ಪ್ರಾಮುಖ್ಯತೆ ನೀಡುವ ವಿಚಾರ ಯಾವುದು.?

ಬಿಜೆಪಿಯು ಬೂತ್​​ ಪ್ರಮುಖರನ್ನು, ಪೇಜ್​ ಪ್ರಮುಖರನ್ನು ನೇಮಕ ಮಾಡಿದ್ದೇ ಮೊದಲಿಗೆ ಈ ಜಿಲ್ಲೆಗಳಲ್ಲಿ, ಸಂಘಟನೆ ಸದೃಢವಾಗಿದೆ. ಕಾಂಗ್ರೆಸ್​​​ ಸಂಘಟನೆಯೂ ಸಾಕಷ್ಟು ಭದ್ರವಾಗಿದೆ. ಇದೇ ಕಾರಣಕ್ಕೆ ಸರಿಸುಮಾರು ಅರ್ಧದಷ್ಟು ಮತದಾರರು ಪಕ್ಷದ ಕುರಿತು ಒಲವು ಹೊಂದಿದ್ದಾರೆ. ಆದರೆ ಶೇ.47 ಮತದಾರರು ಕ್ಷೇತ್ರದ ಅಭ್ಯರ್ಥಿಗೆ ಮಣೆ ಹಾಕಿರುವುದರಿಂದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷಗಳಿಗೆ ಇದು ಎಚ್ಚರಿಕೆ ಘಂಟೆ ಎನ್ನುವ ಸಂದೇಶ ನೀಡಿದೆ. ಸಂಘಟನೆ ಸದೃಢವಾಗಿದೆ ಎನ್ನುತ್ತಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಎಡವಿದ್ರೆ, ಸಾಮರ್ಥ್ಯ ಇಲ್ಲದವರನ್ನು ಆಯ್ಕೆ ಮಾಡಿದ್ರೆ ತಕ್ಕ ಪಾಠ ಕಲಿಸುವ ಮುನ್ಸೂಚನೆಯನ್ನೂ ಈ ರಿಪೋರ್ಟ್​ ನೀಡುತ್ತದೆ.

ಪ್ರಶ್ನೆ 3 – ಈ ಚುನಾವಣೆಯಲ್ಲಿ ಯಾರಿಗೆ ಮತ ನೀಡಬೇಕು ಎಂಬುದನ್ನು ಇವುಗಳಲ್ಲಿ ಯಾವುದರ ಆಧಾರದಲ್ಲಿ ನಿರ್ಧಾರ ಮಾಡುತ್ತೀರಿ?

ರಾಜ್ಯದಲ್ಲಿ ಹಿಜಾಬ್​​​​​​​ ಹಾಗೂ ಹಲಾಲ್​​ ಕುರಿತ ಗಲಾಟೆ ಆರಂಭವಾಗಿದ್ದೇ ಈ ಪ್ರದೇಶದಿಂದ, ಆದರೂ ಧರ್ಮದ ಕುರಿತು ಜನರಿಗೆ ಹೆಚ್ಚು ಒಲವಿಲ್ಲ. ರಸ್ತೆ, ಚರಂಡಿಯಂತಹ ವಿಚಾರ ಕೇಳಬೇಡಿ, ಹಿಜಾಬ್​​ ಕುರಿತು ಆಲೋಚಿಸಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್​ ಕುಮಾರ್​ ಕಟೀಲ್​​ ಹೇಳಿದ್ದ ಮಾತು ವೈರಲ್​ ಆಗಿತ್ತು. ಆದರೆ ಇಲ್ಲಿನ ಜನರು ಮಾತ್ರ ಹಿಜಾಬ್​, ಹಲಾಲ್​​​ನಂತಹ ಧಾರ್ಮಿಕ ವಿಚಾರಕ್ಕಿಂತಲೂ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವಂತೆ ರಿಪೋರ್ಟ್​​ನಲ್ಲಿ ತಿಳಿದುಬಂದಿದೆ. ಅಭಿವೃದ್ಧಿ ನಂತರದಲ್ಲಿ ಶೇ.29 ಮತದಾರರು ನಾಯಕತ್ವಕ್ಕೆ ಬೆಂಬಲ ಸೂಚಿಸಿದ್ದಾರೆ. ಅಂದರೆ ಧರ್ಮದ ವಿಚಾರದಲ್ಲಿ ಮತದಾರರನ್ನು ಎಳೆದಾಡುವ ನಾಯಕನಿಗಿಂತಲೂ ಅಭಿವೃದ್ಧಿಯನ್ನು ಕೇಂದ್ರವಾಗಿಸಿಕೊಂಡ ನಾಯಕತ್ವ ಬೇಕು ಎಂಬ ಸಂದೇಶವನ್ನು ಮತದಾರರು ನೀಡಿದ್ದಾರೆ ಎನ್ನಬಹುದು.

ಪ್ರಶ್ನೆ 4 – ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ಕುರಿತು ನಿಮ್ಮ ಅಭಿಪ್ರಾಯ

ಮುಖ್ಯವಾಗಿ ಹಿಂದು ಕಾರ್ಯಕರ್ತರ ಹತ್ಯೆ ವಿಚಾರದಲ್ಲಿ ಇಲ್ಲಿನ ಮತದಾರರಿಗೆ ಸರ್ಕಾರದ ಮೇಲೆ ಕೋಪ ಇರುವುದನ್ನು ಇಲ್ಲಿ ತೋರಿಸುತ್ತಿದೆ. ಬೆಂಗಳೂರಿನಿಂದ ದಕ್ಷಿಣ ಕನ್ನಡವನ್ನು ಸಂಪರ್ಕಿಸುವ ಶಿರಾಡಿ ಘಾಟ್​ ರಸ್ತೆ ಇಷ್ಟು ವರ್ಷವಾದರೂ ಅಭಿವೃದ್ಧಿ ಆಗದ ಅಸಮಾಧಾನ ಎದ್ದು ಕಾಣುತ್ತಿದೆ. ಹಿಂದುತ್ವದ ಪೋಸ್ಟರ್​​ ಬಾಯ್​​ಗಳು ಎಂದೇ ಪರಿಗಣಿಸಲ್ಪಡುವ ಸಿ.ಟಿ. ರವಿ ಪ್ರತಿನಿಧಿಸುವ ಚಿಕ್ಕಮಗಳೂರು ಹಾಗೂ ವಿ. ಸುನಿಲ್​​ ಕುಮಾರ್​​​ ಪ್ರತಿನಿಧಿಸುವ ಉಡುಪಿ ಕ್ಷೇತ್ರವೂ ಇದರಲ್ಲಿವೆ. ಅತ್ಯುತ್ತಮ ಎಂದು ಕೇವಲ ಶೇ.20 ಮತದಾರರು ಮಾತ್ರ ಹೇಳಿರುವುದು, ಈ ಕ್ಷೇತ್ರಗಳಲ್ಲಿ ಪ್ರತಿಪಕ್ಷ ಕಾಂಗ್ರೆಸ್​​​​​ ಪ್ರಚಾರಾಂದೋಲನ ಯಶ ಕಂಡಿರುವಂತೆ ಭಾಸವಾಗುತ್ತಿದೆ. ಮುಖ್ಯವಾಗಿ 40 ಪರ್ಸೆಂಟ್​ ಕಮಿಷನ್​​ ಆರೋಪ ಮುನ್ನೆಲೆಗೆ ಬಂದಿದ್ದಾಗ, ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಮಾಡಿಕೊಂಡಿದ್ದು ಇದೇ ಉಡುಪಿಯಲ್ಲಿ. ಈ ಆತ್ಮಹತ್ಯೆ ಪ್ರಕರಣದ ನಂತರ ರಾಜ್ಯ ಸರ್ಕಾರದ ಹಿರಿಯ ಸಚಿವ ಕೆ.ಎಸ್​. ಈಶ್ವರಪ್ಪ ರಾಜೀನಾಮೆ ನೀಡಬೇಕಾಗಿ ಬಂದಿದ್ದು, ಬಿಜೆಪಿ ಕಾರ್ಯಕರ್ತರಿಗೆ ಮುಜುಗರ ಉಂಟುಮಾಡಿತ್ತು. ಈ ಕಾರಣಕ್ಕಾಗಿಯೂ ಒಟ್ಟಾರೆ ಸರ್ಕಾರದ ಕುರಿತು ಮತದಾರರಲ್ಲಿ ಸಮಾಧಾನ ಇರುವಂತೆ ಕಾಣುತ್ತಿಲ್ಲ.

ಪ್ರಶ್ನೆ 5 – ಈ 5 ವರ್ಷಗಳಲ್ಲಿ ನಿಮ್ಮ ಕ್ಷೇತ್ರದ ಶಾಸಕರ ಕಾರ್ಯ ನಿರ್ವಹಣೆ ತೃಪ್ತಿ ನೀಡಿದೆಯೇ?

ಈ ಭಾಗದ 27 ಶಾಸಕರಲ್ಲಿ 24 ಬಿಜೆಪಿ ಶಾಸಕರೇ ಇರುವುದರಿಂದ ಶೇ.36.1 ಮತದಾರರಿಗೆ ಶಾಸಕರ ಬಗ್ಗೆ ಸಮಾಧಾನ ಇರುವುದನ್ನು ತೋರಿಸುತ್ತಿದೆ. ಶಾಲೆಯ ಲೆಕ್ಕದಲ್ಲಿ ಹೇಳುವುದಾದರೆ ಜಸ್ಟ್​ ಪಾಸ್​​ ಎಂದು ಹೇಳಬಹುದು. ಹರೀಶ್​​ ಪೂಂಜಾ, ಭರತ್​ ಶೆಟ್ಟಿ ಅವರಂತಹ ಹೊಸ ಶಾಸಕರು, ಬಿ.ಎಸ್​.ಯಡಿಯೂರಪ್ಪ ಅವರಂತಹ ಅತ್ಯಂತ ಹಿರಿಯ ಶಾಸಕರೂ ಈ ವಲಯದಲ್ಲಿದ್ದಾರೆ. ಕ್ಷೇತ್ರದ ಶಾಸಕರು ಬದಲಾಗಬೇಕು ಎಂದು ಶೇ.20 ಮತದಾರರು ಹೇಳಿರುವುದು ಹಾಲಿ ಶಾಸಕರಿಗೆ ಎಚ್ಚರಿಕೆ ಗಂಟೆ ಎಂದು ಪರಿಗಣಿಸಬಹುದು. ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರವೇ ಇರುವುದರಿಂದ ಆಡಳಿತ ವಿರೋಧಿ ಅಲೆಯ ಪರಿಣಾಮ ಶಾಸಕರ ಮೇಲೆಯೂ ಬೀರಿರುವ ಸಾಧ್ಯತೆಯಿರುತ್ತದೆ. ಚುನಾವಣೆಯಲ್ಲಿ ಟಿಕೆಟ್​ ನೀಡುವಾಗ ಈ ಅಂಶವು ಗಂಭಿರವಾಗಿ ಪರಿಗಣಿಸಬೇಕಾದ ಸಾಧ್ಯತೆಯನ್ನು ಇದು ಸೂಚಿಸುತ್ತದೆ.

ಪ್ರಶ್ನೆ 6 – ಮುಂದಿನ ಚುನಾವಣೆ ಬಳಿಕ ಯಾರು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತೀರಿ?

ಸಿಎಂ ಬಸವರಾಜ ಬೊಮ್ಮಾಯಿ ಅವರೇ ಸಿಎಂ ಸ್ಥಾನಕ್ಕೆ ಫೇವರಿಟ್​ ಎನ್ನುವುದು, ಹಿಂದುತ್ವ ನೆಲದಲ್ಲಿ ಸಿಎಂ ಜನಪ್ರಿಯತೆಯನ್ನು ಸೂಚಿಸುತ್ತಿದೆ. ಸಾಮಾನ್ಯವಾಗಿ ಹಿಂದುತ್ವಕ್ಕೆ ಹೆಚ್ಚು ಆಸಕ್ತಿ ತೋರದ ಸಿಎಂ ಕುರಿತ ಈ ಆಸಕ್ತಿಯು, ಅಭಿವೃದ್ದಿ ಕುರಿತು ಜನರ ಒಲವನ್ನು ತೋರಿಸುತ್ತಿದೆ. ಸಿದ್ದರಾಮಯ್ಯ ಅವರಿಗೆ ಬಹುತೇಕ ಸಿಎಂ ಬೊಮ್ಮಾಯಿ ಅವರಷ್ಟೇ ಜನಪ್ರಿಯತೆ ಇರುವುದು ಕಾಂಗ್ರೆಸ್​​ ಪಕ್ಷಕ್ಕೆ ಪ್ಲಸ್​​ ಆಗುವ ಅಂದಾಜಿದೆ. ಬಿಜೆಪಿಯನ್ನು ಪ್ರಬಲವಾಗಿ ವಿರೋಧಿಸುವ ನಾಯಕರಾಗಿ ಸಿದ್ದರಾಮಯ್ಯ ಗುರುತಿಸಿಕೊಂಡಿರುವುದು, ಬಿಜೆಪಿ ವಿರೋಧಿ ಮತಗಳಿಗೆ ನಾಯಕರಂತೆ ಕಂಡಿರುವ ಸಾಧ್ಯತೆಯಿದೆ. ಹಳೆ ಮೈಸೂರಿನ ಭಾಗದವರೇ ಆದರೂ ಈ ಭಾಗದಲ್ಲಿಯೂ ಬಿ.ವೈ.ವಿಜಯೇಂದ್ರ ಪರ ವಾತಾವರಣ ಇರುವುದು, ಯುವ ಮತದಾರರು ಇತ್ತ ಒಲವು ಹೊಂದಿದ್ದಾರೆ ಎಂದು ತೋರುತ್ತಿದೆ.

ಪ್ರಶ್ನೆ 7- ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರಬಲ್ಲ ಕೇಂದ್ರದ ನಾಯಕ ಯಾರು?

ಕರಾವಳಿಗೆ ಪ್ರಧಾನಿ ನರೇಂದ್ರ ಮೋದಿ ಬಂದಾಗೆಲ್ಲ ಅಭೂತ ಪೂರ್ವ ಸ್ವಾಗತವೇ ಲಭಿಸಿದೆ. ವಿಮಾನ ನಿಲ್ದಾಣದಿಂದ ಕಾರ್ಯಕ್ರಮದ ಮೈದಾನದವರೆಗೆ ಚೈನ್​ ಲಿಂಕ್​ ಮಾಡಿ ಮತದಾರರು ಸ್ವಾಗತ ಕೋರಿದ್ದರು. ರಾಹುಲ್​ ಗಾಂಧಿ ಅವರ ಹೋಲಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡು ಪಟ್ಟಿಗಿಂತಲೂ ಹೆಚ್ಚು ಜನಪ್ರಿಯತೆ ಹೊಂದಿರುವುದು ಕಾಂಗ್ರೆಸ್​​ಗೆ ಚಿಂತೆಯ ವಿಷಯ ಎನ್ನಬಹುದು. ಕಾಂಗ್ರೆಸ್​​​ ಇಲ್ಲಿ ಸಂಘಟನೆಯನ್ನು ಹೊಂದಿದ್ದರೂ ಮಲ್ಲಿಕಾರ್ಜುನ ಖರ್ಗೆ ಹೋಲಿಕೆಯಲ್ಲಿ ಅರವಿಂದ ಕೇಜ್ರಿವಾಲ್​​ ಜನಪ್ರಿಯತೆಯೇ ಹೆಚ್ಚಿರುವುದು ಕಂಡುಬರುತ್ತಿದೆ.

ಪ್ರಶ್ನೆ 8 – ರಾಜ್ಯದಲ್ಲಿ ಸ್ಪಷ್ಟ ಬಹುಮತ ಬರದಿದ್ದರೆ ಯಾವ ಮೈತ್ರಿಕೂಟ ನಿಮಗಿಷ್ಟ?

ಬಿಜೆಪಿ ಪರವಾಗಿರುವ ಮತದಾರರು ಸಹಜವಾಗಿ ಬಿಜೆಪಿ ಅಧಿಕಾರದಲ್ಲಿರಬೇಕು ಎಂದು ಬಯಸುತ್ತಿರುವುದು ಕಾಣುತ್ತಿದೆ. ಜೆಡಿಎಸ್​​​ನೊಂದಿಗೆ ಈ ಹಿಂದೆ ಬಿಜೆಪಿ ಮೈತ್ರಿ ಸರ್ಕಾರ ನಡೆಸಿದ ಅನುಭವವಿದೆ, ಆಗ ಉತ್ತಮ ಆಡಳಿತ ಸಿಕ್ಕಿತು ಎಂಬ ವಿಚಾರವೂ ಮತದಾರರಿಗೆ ನೆನಪಿರುವಂತಿದೆ – ಜೆಡಿಎಸ್​​ಗೆ ಅಧಿಕಾರ ಸಿಕ್ಕರೂ ಸರಿ, ಕಾಂಗ್ರೆಸ್​​​ ಅನ್ನು ಅಧಿಕಾರದಿಂದ ದೂರ ಇಡಬೇಕು ಎಂಬ ಮನಃಸ್ಥಿತಿ ಹೆಚ್ಚಾಗಿ ಕಾಣುತ್ತಿದೆ. ಇದರ ನಡುವೆಯೂ ಕಾಂಗ್ರೆಸ್​​ ಜೆಡಿಎಸ್​​ ಮೈತ್ರಿ ಸರ್ಕಾರಕ್ಕೆ ತೀರಾ ಕಡಿಮೆ ಬೆಂಬಲವೇನೂ ಇಲ್ಲ ಎನ್ನುವುದು ಈ ರಿಪೋರ್ಟ್​ ನಲ್ಲಿ ಕಾಣಬಹುದಾಗಿದೆ.

ಪ್ರಶ್ನೆ 9 – ಬಿಜೆಪಿಯವರು ಮತಕ್ಕಾಗಿ ಇವುಗಳಲ್ಲಿ ಯಾವ ಅಂಶವನ್ನು ನೆಚ್ಚಿಕೊಂಡಿದ್ದಾರೆ?

ಹಿಂದುತ್ವದ ಪ್ರಯೋಗಶಾಲೆಯ ಜಿಲ್ಲೆಗಳೇ ಆದ್ದರಿಂದ ಶೇ.40 ಮತದಾರರು, ಬಿಜೆಪಿಯು ಹಿಂದುತ್ವ ಅಜೆಂಡಾವನ್ನೇ ನೆಚ್ಚಿಕೊಂಡಿದೆ ಎಂದಿದ್ದಾರೆ. ಹಿಂದುತ್ವದ ನಂತರ ನರೇಂದ್ರ ಮೋದಿ ಜನಪ್ರಿಯತೆ, ಆ ನಂತರದಲ್ಲಿ ಅಭಿವೃದ್ಧಿ ರಾಜಕಾರಣವನ್ನು ಬಿಜೆಪಿ ಅನುಸರಿಸುತ್ತದೆ ಎನ್ನುವುದು ಜನರ ಮನದಾಳ. ಪ್ರತಿಪಕ್ಷಗಳು ಹೇಳುವುದಕ್ಕೆ ಅನುಗುಣವಾಗಿ, ರಾಜ್ಯ ನಾಯಕತ್ವಕ್ಕೆ ಬೆಲೆ ನೀಡುವುದಿಲ್ಲ ಎನ್ನುವ ಅಭಿಪ್ರಾಯವನ್ನೇ ಮತದಾರರೂ ವ್ಯಕ್ತಪಡಿಸಿದ್ದಾರೆ.

ಪ್ರಶ್ನೆ 10 – 40% ಕಮಿಷನ್ ಅಥವಾ ಭ್ರಷ್ಟಾಚಾರ ಆರೋಪ ಬಿಜೆಪಿಗೆ ಹಿನ್ನಡೆ ತರುತ್ತಾ?

ಬಿಜೆಪಿ ಭದ್ರಕೋಟೆಯಲ್ಲೇ 40 ಪರ್ಸೆಂಟ್​ ಕಮಿಷನ್​​ ವಿಚಾರ ಗಂಭೀರವಾಗಿ ಪರಿಗಣಿತವಾಗಿರುವುದು ಆ ಪಕ್ಷಕ್ಕೆ ಎಚ್ಚರಿಕೆ ಗಂಟೆ ಎನ್ನಬಹುದು. ಮುಖ್ಯವಾಗಿ ಕರಾವಳಿ, ಕೊಡಗು, ಶಿವಮೊಗ್ಗ ಭಾಗದಲ್ಲಿ ಭ್ರಷ್ಟಾಚಾರ ವಿಚಾರವನ್ನು ಮತದಾರರು ಹೆಚ್ಚು ಗಂಭೀರವಾಗಿ ಪರಿಗಣಿಸುತ್ತಾರೆ. ಅರ್ಧಕ್ಕಿಂತಲೂ ಹೆಚ್ಚು ಮತದಾರರು, ಬಿಜೆಪಿಗೆ ಹಿನ್ನೆಡೆ ತರುತ್ತದೆ ಎಂದು ಹೇಳಿರುವುದು ಕಾಂಗ್ರೆಸ್​​​​​​ ಪ್ರಚಾರ ಅಭಿಯಾನ ಸಾಕಷ್ಟು ಸಫಲವಾಗಿದೆ ಎನ್ನುವುದನ್ನು ಸೂಚಿಸುತ್ತಿದೆ. 40 ಪರ್ಸೆಂಟ್​​ ಭ್ರಷ್ಟಾಚಾರ ಆರೋಪವನ್ನು ನಿರಾಕರಿಸಲು ಬಿಜೆಪಿ ಸರ್ಕಾರವು ಪರಿಣಾಮಕಾರಿ ಹೆಜ್ಜೆಗಳನ್ನು ಇಡಲಿಲ್ಲವೇ ಎಂಬ ಅನುಮಾನಗಳನ್ನು ಇದು ಹುಟ್ಟುಹಾಕಿದೆ. ಬಿಜೆಪಿಯು ನಡೆಸಿದ ಬೂತ್​ ವಿಜಯ ಅಭಿಯಾನವು ಈ ಭಾಗದಲ್ಲಿ ಪಕ್ಷದ ಪರ ಅಭಿಪ್ರಾಯ ನಿರ್ಮಾಣ ಮಾಡಲು ಎಷ್ಟು ಸಫಲವಾಗಿದೆ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪ್ರಶ್ನೆ 11 – ಕಾಂಗ್ರೆಸ್ ಒಳಜಗಳ ಚುನಾವಣೆಯ ವೇಳೆ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಾ?

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಇಬ್ಬರೂ ಈ ಭಾಗದವರಲ್ಲ, ಆದರೆ ಕಾಂಗ್ರೆಸ್​​ನಲ್ಲಿ ಇಬ್ಬರು ನಾಯಕರೂ ಬೆಂಬಲಿಗರನ್ನು ಹೊಂದಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್​​​ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡೆಸುತ್ತಿರುವುದು ಮತದಾರರಲ್ಲಿ ನಕಾರಾತ್ಮಕ ಭಾವನೆ ಮೂಡಿಸಿರುವುದು ಕಂಡುಬರುತ್ತಿದೆ. ಈ ವಿಚಾರವು ಪಕ್ಷಕ್ಕೆ ಡ್ಯಾಮೇಜ್​ ಮಾಡುತ್ತದೆ ಹಾಗೂ ಆಗಬಹುದು ಎಂಬ ಎರಡು ಉತ್ತರವನ್ನು ಸೇರಿಸಿದರೆ ಶೇ.55 ಆಗುತ್ತದೆ. ನಾಯಕತ್ವದಲ್ಲಿನ ಗೊಂದಲವು ಕಾರ್ಯಕರ್ತರಲ್ಲಿ, ಮತದಾರರಲ್ಲಿ ಗೊಂದಲವನ್ನು ನಿರ್ಮಿಸಿರುವುದನ್ನು ಈ ರಿಪೋರ್ಟ್​ ತೋರಿಸುತ್ತಿದೆ.

ಪ್ರಶ್ನೆ 12 – ರಾಜಕೀಯ ಪಕ್ಷಗಳು ನೀಡುವ ಉಚಿತ ಕೊಡುಗೆಗಳಿಂದ ಮತ ಸೆಳೆಯಲು ಸಾಧ್ಯವೇ?

ಕಾಂಗ್ರೆಸ್​ ಈಗಾಗಲೇ ಮೂರು ಉಚಿತ ಘೋಷಣೆಗಳನ್ನು ಮಾಡಿದೆ, ಬಿಜೆಪಿ ಸರ್ಕಾರವೂ ಬಜೆಟ್​​ನಲ್ಲಿ ಕೆಲವು ಯೋಜನೆ ಘೋಷಣೆ ಮಾಡಿದೆ. ಆದರೆ ಸ್ವತಃ ಪ್ರಧಾನಿ ಮೋದಿ ಮಾತನಾಡುತ್ತ, ಉಚಿತ ಘೋಷಣೆಗಳು ಆರ್ಥಿಕತೆಗೆ ಒಳ್ಳೆಯದಲ್ಲ ಎಂದು ಹೇಳಿದ್ದರು. ಇಷ್ಟರ ನಂತರವೂ ಉಚಿತ ಘೋಷಣೆಗಳು ಜನರ ಮನಸ್ಸನ್ನು ಸೆಳೆಯುವಲ್ಲಿ ಸಫಲವಾಗಿದೆ ಎಂಬ ಸೂಚನೆಯನ್ನು ಈ ರಿಪೋರ್ಟ್​ ನೀಡುತ್ತಿದೆ.

ಪ್ರಶ್ನೆ 13 – ಹಿಂದು-ಮುಸ್ಲಿಂ ಕಾರ್ಯಕರ್ತರ ಹತ್ಯೆ ಘಟನೆಗಳು ನಿಮಗೆ ಮತ ಚಲಾಯಿಸಲು ನಿರ್ಣಾಯಕ ವಿಚಾರಗಳಾಗುತ್ತವೆಯೇ?

ಈ ಹಿಂದಿನ ಪ್ರಶ್ನೆಗಳಿಗೆ ಉತ್ತರಿಸಿದಂತೆಯೇ, ಮತದಾರರು ಹೆಚ್ಚು ಅಭಿವೃದ್ಧಿ, ಉತ್ತಮ ಜೀವನದ ಪರವಾಗಿದ್ದಾರೆ. ಹಿಂದುವಾಗಲಿ ಮುಸ್ಲಿಂ ಆಗಲಿ ಯಾವುದೇ ಕಾರ್ಯಕರ್ತರು ನಿಧನರಾಗುವುದು ಹೆಚ್ಚಿನ ಮತದಾರರಿಗೆ ಇಷ್ಟವಿಲ್ಲದ ವಿಚಾರ ಎನ್ನುವುದು ಕಾಣುತ್ತದೆ. ಹಿಂದುತ್ವವಾಗಲಿ ಮುಸ್ಲಿಂ ತುಷ್ಟೀಕರಣವೇ ಆಗಲಿ ಎರಡಕ್ಕಿಂತಲೂ ಅಭಿವೃದ್ಧಿ ವಿಚಾರವೇ ಮುಖ್ಯ ಎಂಬ ವಿಚಾರವನ್ನು ಮುಂದಿಟ್ಟಿರುವುದು ತಿಳಿಯುತ್ತಿದೆ. ಇದು ಎಲ್ಲ ಪಕ್ಷಗಳಿಗೂ ಚುನಾವಣೆಯ ದಿಕ್ಸೂಚಿ ಎಂದು ಹೇಳಬಹುದು.

ಇದನ್ನೂ ಓದಿ: Pulse of Karnataka: ಹಳೆ ಮೈಸೂರು: ವಿಸ್ತಾರ-ಅಖಾಡಾ ಸಮೀಕ್ಷೆ: ಮೂವರು ಸಿಎಂ ಅಭ್ಯರ್ಥಿಗಳ ತವರು ಜನರ ಮನದಲ್ಲೇನಿದೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Street Dogs‌ : ಬೀದಿ ನಾಯಿಗಳಿಗೆ ಆಹಾರ ವ್ಯವಸ್ಥೆ ಮಾಡಲು ಹೊಸ ಯೋಜನೆ ಜಾರಿಗೆ ಕ್ರಮವಹಿಸಲಾಗುವುದು ಎಂದು ಬಿಬಿಎಂಪಿ ಪಶುಸಂಗೋಪನಾದ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

VISTARANEWS.COM


on

By

BBMP plans to make arrangements for food in areas where stray dogs do not get food
Koo

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ (Street dogs) ಆಹಾರ ಸಿಗದಂತಹ ಪ್ರದೇಶದಲ್ಲಿ ಆಹಾರದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಬಿಬಿಎಂಪಿಯ ಪಶುಸಂಗೋಪನಾ ವಿಭಾಗದಿಂದ ಪ್ರಾಯೋಗಿಕವಾಗಿ ಹೊಸ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಪಶುಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

ಬೀದಿನಾಯಿಗಳ ಅಟ್ಯಾಕ್‌ಗೆ ಕಾರಣ ಹಸಿವು?

ನಗರದಲ್ಲಿ ಅನೇಕ ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರವೂ ಸಹ ಸಿಗದಿರುವುದು ಪಾಲಿಕೆಯ ಗಮನಕ್ಕೆ ಬಂದಿದೆ. ಇದರಿಂದ ಬೀದಿ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಬೀದಿ ನಾಯಿಗಳು ಸಾರ್ವಜನಿಕರಿಗೆ ಕಚ್ಚುವ ಪ್ರಕರಣಗಳು ಕಂಡಬರುತ್ತಿದ್ದು, ಅದನ್ನು ನಿಂಯಂತ್ರಿಸಬೇಕಿದೆ. ಆದ್ದರಿಂದ ನಾಯಿಗಳಿಗೆ ಸರಿಯಾಗಿ ಆಹಾರ ಸಿಗುವಂತೆ ಮಾಡಲು ಪಾಲಿಕೆಯು ಪ್ರಾಣಿ ಪಾಲಕರು, ಪೌರಕಾರ್ಮಿಕರು, ಹೋಟೆಲ್ ಮಾಲಿಕರು, ಆರೋಗ್ಯ ವಿಭಾಗದ ಸಿಬ್ಬಂದಿ ಹಾಗೂ ಇತರೆ ಆಸಕ್ತರೊಂದಿಗೆ ಸಮನ್ವಯ ಸಾಧಿಸಿ ಇದನ್ನು ಮಾಡಲಾಗುತ್ತಿದೆ.

BBMP plans to make arrangements for food in areas where stray dogs do not get food
BBMP plans to make arrangements for food in areas where stray dogs do not get food

ಯೋಜನೆಯ ಜಾರಿ ವಿಧಾನ

ಪ್ರಾಣಿಗಳಿಗೆ ಆಹಾರ ನೀಡುವ ಪ್ರಾಣಿ ಪ್ರಿಯರ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು. ನಂತರ ಪೌರ ಕಾರ್ಮಿಕರು ಮತ್ತು ಖಾಸಗಿ ಹೋಟೆಲ್ ಮಾಲಿಕರನ್ನು ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಿ ಆಹಾರ ನೀಡುವ ಸ್ಥಳಗಳನ್ನು ಗುರುತಿಸಿ ಬೀದಿ ನಾಯಿಗಳಿಗೆ ಸರಿಯಾಗಿ ಆಹಾರ ಸಿಗುವಂತೆ ಮಾಡುವುದು. ಅದಾದ ಬಳಿಕ ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಆಯ್ದ ಸ್ಥಳಗಳಲ್ಲಿ ಅನುಷ್ಟಾನಗೊಳಿಸಿ ಎಲ್ಲಾ ಪಾಲುದಾರರ ಪ್ರತಿಕ್ರಿಯೆಯನ್ನು ಸಂಗ್ರಹಿಸಲಾಗುವುದು. ಯೋಜನೆ ಯಶಸ್ವಿಯಾದಲ್ಲಿ ಪಾಲಿಕೆಯ ಎಲ್ಲಾ ವಾರ್ಡ್ಗಳಲ್ಲಿ ಈ ಅಭಿಯಾನವನ್ನು ಅನುಷ್ಟಾನಗೊಳಿಸುವುದು ಎಂದು ಆಯಕ್ತರು ಮಾಹಿತಿ ನೀಡಿದ್ದಾರೆ.

ವಿವರವಾದ ಯೋಜನೆಯ ಶೀಘ್ರ ಬಿಡುಗಡೆ:

ಸಮುದಾಯದ ಪ್ರಾಣಿಗಳಿಗೆ ಉತ್ತಮ ಸಹಾಯ ಮಾಡಲು ಕೇರ್‌ಟೇಕರ್‌ಗಳನ್ನು ಬಲಪಡಿಸುವುದರ ಜೊತೆಗೆ, ಪ್ರಾಣಿಗಳ ಸಂರಕ್ಷಣೆ ಕಾರ್ಯಾಚರಣೆ ಹಾಗೂ ಶಸ್ತ್ರಚಿಕಿತ್ಸಾ ನಂತರದ ಆರೈಕೆ, ವೈದ್ಯಕೀಯ ಮೇಲ್ವಿಚಾರಣೆಗೆ ಅಗತ್ಯವಿರುವ ಸಂದರ್ಭಗಳಲ್ಲಿ ಪ್ರತ್ಯೇಕ ವಲಯಗಳಲ್ಲಿ ರಕ್ಷಣೆ ಮತ್ತು ಚೇತರಿಸಿಕೊಳ್ಳುವಿಕೆಯನ್ನು ಬೆಂಬಲಿಸುವ ಸಾಮರ್ಥ್ಯವನ್ನು ಪಾಲಿಕೆ ನಿರ್ಮಿಸುತ್ತಿದೆ. ಈ ಕುರಿತು ವಿವರವಾದ ಯೋಜನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು.

ಪ್ರಾಣಿ ಪಾಲಕರು ನೋಂದಣಿ ಮಾಡಿಕೊಳ್ಳಿ:

ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಯಿಗಳಿಗೆ ಆಹಾರ ನೀಡುತ್ತಿರುವ ಪ್ರಾಣಿ ಪಾಲಕರು ಪಾಲಿಕೆ ಪಶುಸಂಗೋಪನಾ ಇಲಾಖೆಯಿಂದ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಪಶಸಂಗೋಪನೆ ವಿಬಾಗದ ಸಾಮಾಜಿಕ ಜಾಲತಾಣವಾದ X, Facebook ಮತ್ತು Instagram (@bbmp_animalhusbandry) ಪುಟಗಳಲ್ಲಿ ನೋಂದಣಿಯ ಮಾಡಿಕೊಳ್ಳುವ ಲಿಂಕ್ ಅನ್ನು ನೀಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆಯನ್ನು ಯಶಸ್ವಿಗೊಳಿಸಲು ಪಾಲಿಕೆ ಜೊತೆ ಕೈಜೋಡಿಸುವಂತೆ ಎಲ್ಲಾ ಸಮುದಾಯ ಪ್ರಾಣಿ ಪಾಲಕರಲ್ಲಿ ಕೋರಲಾಗಿದೆ.

ನೋಂದಣಿ ಕಡ್ಡಾಯವಲ್ಲ:

ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ಪಾಲಕರ ನೋಂದಣಿಯು 2ನೇ ಅಕ್ಟೋಬರ್ 2024 ರಿಂದ ಪ್ರಾರಂಭವಾಗಲಿದ್ದು, 31ನೇ ಅಕ್ಟೋಬರ್ 2024ರವರೆಗೆ ನೊಂದಣಿಯಾಗಲು ಅವಕಾಶವಿರುತ್ತದೆ. ಪ್ರಾಣಿ ಪಾಲಕರ ನೋಂದಣಿ ಕಡ್ಡಾಯವಾಗಿರುವುದಿಲ್ಲ. ಈ ನೋಂದಣಿಯು ಅಭಿಯಾನವನ್ನು ಯೋಜಿಸಲು ಮತ್ತು ಅದನ್ನು ಸಮರ್ಥನೀಯವಾಗಿ ಡೇಟಾಬೇಸ್ ರಚಿಸುವ ದೃಷ್ಟಿಯಿಂದ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ.

ಪಾಲಿಕೆ ಜೊತೆ ಕೈ ಜೋಡಿಸಿ:

ಬೀದಿ ನಾಯಿಗಳಿಗೆ ಆಹಾರ ನೀಡುವ ಅಭಿಯಾನದ ಮೂಲಕ, ನಾಗರೀಕರಲ್ಲಿ ಸಹಾನುಭೂತಿಯ ಅರ್ಥವನ್ನು ಹಾಗೂ ಪ್ರಾಣಿಗಳೊಂದಿಗಿನ ಸಹಬಾಳ್ವೆಯ ಅನುಕೂಲವನ್ನು ಮನವರಿಕೆ ಮಾಡಲು Coexisting Champion ಆಗಿ ಪಾಲಿಕೆ ಜೊತೆ ಕೈ ಜೋಡಿಸಲು ಕೋರುತ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸ್ಥಳೀಯರು ತಮ್ಮ ಪ್ರದೇಶದಲ್ಲಿ ಸಮುದಾಯದ ಪ್ರಾಣಿಗಳ ಆರೈಕೆಯ ಸಾಮಾಜಿಕ ಕಾಳಜಿಯ ಕಾರ್ಯವನ್ನು ಕೈಗೊಳ್ಳಲು ಪ್ರೋತ್ಸಾಹಿಸಲು ಕೋರಿದೆ.

1533ಗೆ ಕರೆ ಮಾಡಿ:

ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಪಾಲಿಕೆಯ ಪಶಸಂಗೋಪನಾ ವಿಭಾಗದಿಂದ ಸಾಕಷ್ಟು ಉಪ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಾಗರೀಕರಿಗೆ ಅಗತ್ಯವಿರುವ ಯಾವುದೇ ಸಹಾಯಕ್ಕಾಗಿ ಬಿಬಿಎಂಪಿ ಸಹಾಯವಾಣಿ ಸಂಖ್ಯೆಯಾದ 1533 ಗೆ ಸಂಪರ್ಕಿಸಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

VISTARANEWS.COM


on

By

Cm Siddaramaiah
Koo

ಬೆಂಗಳೂರು: ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನೆ ಮಾಡಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತೀರ್ಮಾನ ಮಾಡಿದ್ದಾರೆ. ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ದೆಹಲಿಯಿಂದ ವಾಪಸ್‌ ಆಗಿದ್ದು, ಎರಡು ಪ್ರತ್ಯೇಕ ಅಪೀಲು ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಸಿಎಂ ಪರ ವಕೀಲರು ಸೋಮವಾರ ದ್ವಿಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಏಕಸದಸ್ಯ ಪೀಠದ ಆದೇಶದಲ್ಲಿ ಕೆಲ ವಿಚಾರಗಳ ಬಗ್ಗೆ ಅಪೀಲು ಸಲ್ಲಿಸಲಿದ್ದಾರೆ.

ಮತ್ತೊಂದು ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ವಿರುದ್ಧ ಅಪೀಲು ಅರ್ಜಿ ಅಲ್ಲಿಸಲಿದ್ದಾರೆ. ಜುಲೈ ಒಂದು 2024 ರಿಂದ ಹೊಸ ಕಾನೂನು ಬಂದಿದೆ. ಬಿಎನ್ಎಸ್ಎಸ್ ಅಡಿಯಲ್ಲಿ ವಿಚಾರಣೆ ಆಗಬೇಕು. ಹಳೆಯ ಸಿಪಿಆರ್ಪಿ ಐಪಿಸಿಯಲ್ಲಿ ಆರೋಪಿಗೆ ರಕ್ಷಣೆ ಕಡಿಮೆ ಇದೆ. ಹೀಗಾಗಿ ಬಿಎನ್ಎಸ್ಎಸ್ ಅಡಿಯಲ್ಲಿ ತನಿಖೆಗೆ ಆದೇಶ ಮಾಡಬೇಕಿತ್ತು. ಆದರೆ ನ್ಯಾಯಲಯದ ಹಳೆಯ ಕಾನೂನು ಪ್ರಕಾರ ಮಾಡಿರುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ವಕೀಲರು ಅಪೀಲು ಸಲ್ಲಿಕೆ ಮಾಡಲಿದ್ದಾರೆ. ಅರ್ಜಿ ತೀರ್ಮಾನ ಆಗುವವರೆಗೂ ಮುಡಾ ತನಿಖೆಗೆ ಸಿದ್ದರಾಮಯ್ಯ ತಡೆ ಕೋರಲಿದ್ದಾರೆ.

ಸಿಎಂ ವಿರುದ್ಧದ ತನಿಖೆಗೆ ನಾಲ್ಕು ತಂಡಗಳ ರಚನೆ

ಸಿದ್ದರಾಮಯ್ಯ ವಿರುದ್ಧದ ಎಫ್ಐಆರ್ ದಾಖಲು‌ ಹಿನ್ನೆಲೆಯಲ್ಲಿ ತನಿಖೆಗೆ ನಾಲ್ಕು ತಂಡಗಳ ರಚನೆ ಮಾಡಲಾಗಿದೆ.
ಎಸ್‌ಪಿ ಉದೇಶ್, ಡಿವೈಎಸ್‌ಪಿ ಎಸ್.ಮಾಲತೀಶ್, ಚಾಮರಾಜನಗರ ಡಿವೈಎಸ್‌ಪಿ ಮ್ಯಾಥ್ಯೂ ಥಾಮಸ್ ಹಾಗೂ ಇನ್‌ಸ್ಪೆಕ್ಟರ್‌ ಒಳಗೊಂಡ ತನಿಖಾ ತಂಡ ಇದಾಗಿದೆ. ಎಲ್ಲಾ ಅಧಿಕಾರಿಗಳ ಜತೆ ಎಸ್‌ಪಿ ಸಭೆ ನಡೆಸಿದ್ದು, ಕೋರ್ಟ್‌ನಿಂದ ನೀಡಿರುವ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದೂರಿನಲ್ಲಿ ಅಡಕವಾಗಿರುವ ದಾಖಲೆಗಳನ್ನು ಇನ್ನು ಒಂದೆರಡು ದಿನಗಳ ಕಾಲ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಪ್ರತಿಯೊಬ್ಬ ಅಧಿಕಾರಿಗಳ ಕೆಲಸವನ್ನು ವಿಂಗಡಣೆ ಮಾಡಿಕೊಳ್ಳಲಿದ್ದಾರೆ. ಸದ್ಯಕ್ಕೆ ಎಲ್ಲ ದಾಖಲೆಗಳನ್ನು ಓದಿಕೊಂಡು ಪಾಯಿಂಟ್ಸ್ ಮಾಡಿಕೊಳ್ಳುತ್ತಿದ್ದಾರೆ.

ಏನಿದು ಮುಡಾ ಪ್ರಕರಣ?

ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೇ ದೂರು ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದಿತ್ತು. ಟಿ.ಜೆ. ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಯಾಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್​ ನೋಟಿಸ್ ನೀಡಿದ್ದರು. ಸಿದ್ದರಾಮಯ್ಯಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಆದರೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪ್ರದೀಪ್ ಕುಮಾರ್ ಎಸ್.ಪಿ, ಟಿ.ಜೆ. ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಅರ್ಜಿಗಳನ್ನು ಸಲ್ಲಿಸಿದ್ದರು.

ಮೈಸೂರಿನ ಸ್ನೇಹಮಯಿ ಕೃಷ್ಣ, ಸಿಎಂ ವಿರುದ್ಧ ಮತ್ತೂಂದು ದೂರು ಸಲ್ಲಿಸಿದ್ದರು. ಅಕ್ರಮ ಭೂ ಡಿನೋಟಿಫಿಕೇಶನ್‌ಗೆ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆಂದು ಆರೋಪಿಸಿದ್ದರು. ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ ಬಂದಿದ್ದು, ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ ಕೇಳಿ ಬಂದಿದೆ.

VISTARANEWS.COM


on

By

Mahalaya Amavasya on Gandhi Jayanti Poultry Association demands withdrawal of ban on sale of meat
Koo

ಬೆಂಗಳೂರು: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆಯ (Mahalaya Amavasya 2024) ಪಿತೃಪಕ್ಷ ಹಬ್ಬ ಬರುತ್ತಿದೆ. ಗಾಂಧಿ ಜಯಂತಿ ಹಿನ್ನೆಲೆ ಅಂದು ಮಾಂಸ ಮಾರಾಟ ನಿಷೇಧ ಇದೆ. ಹೀಗಾಗಿ ವಿಶೇಷ ಸಂದರ್ಭ ಎಂದು ಪರಿಣಗಣಿಸಿ ಮಾಂಸ ಮಾರಾಟ ನಿಷೇಧ ಆದೇಶ ಹಿಂಪಡೆಯುವಂತೆ ಕರ್ನಾಟಕ ಪೌಲ್ಟ್ರಿ ಅಸೋಸಿಯೇಶನ್ ಅಧ್ಯಕ್ಷ ಕೆ ಎನ್ ನಾಗರಾಜ್ ಒತ್ತಾಯಿಸಿದ್ದಾರೆ.

ಮಹಾಲಯ ಅಮಾವಾಸ್ಯೆಯ ಹಬ್ಬದ ದಿನದಂದು ರಾಜ್ಯದ ಕೋಟ್ಯಂತರ ಜನರು, ಮಾಂಸಾಹಾರ ಸಿದ್ಧಪಡಿಸಿ ತಮ್ಮ ಹಿರಿಯರಿಗೆ ಎಡೆ ಇಟ್ಟು, ಪೂಜೆ ಮಾಡಿ ಬಂಧು ಬಳಗ, ಸ್ನೇಹಿತರೊಂದಿಗೆ ಊಟ ಮಾಡುವ ಪದ್ಧತಿ ಇದೆ. ಈ ಬಾರಿ ಅದೇ ದಿನದಂದು ಗಾಂಧಿ ಜಯಂತಿ ಇರುವುದರಿಂದ ಈ ಬಗ್ಗೆ ಪರಿಶೀಲಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಅ.2 ರಂದು ರಾಜ್ಯಾದ್ಯಂತ ಗಾಂಧಿ ನಡಿಗೆ

“ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಕ್ಟೋಬರ್ 2 ರಂದು ರಾಜ್ಯಾದ್ಯಂತ ‘ಗಾಂಧಿ ನಡಿಗೆ’ ಹಾಗೂ ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಶಿವಕುಮಾರ್ ಅವರು “ಕಾರ್ಯಕ್ರಮದ ಮೊದಲ ಭಾಗವಾಗಿ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು 1 ಕಿ. ಮೀ. ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತಾ ಪ್ರತಿಜ್ಞಾ ಸ್ವೀಕಾರ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬೆಂಗಳೂರಿನಲ್ಲಿಯೂ ಬರುವ ಬುಧವಾರ ಬೆಳಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು” ಎಂದು ತಿಳಿಸಿದರು.

500 ಶಾಲಾ ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ

“ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಜನ್ಮದಿನವೂ ಒಂದೇ ದಿನ ಆಗಿರುವ ಕಾರಣ ಇಬ್ಬರ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಗುವುದು. ನಂತರ ನಡಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾಗೂ ಬೆಂಗಳೂರಿನ 500 ಶಾಲಾ, ಕಾಲೇಜು ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ, ಗಾಂಧಿ ಅವರ ಆದರ್ಶವನ್ನು ಯುವ ಪೀಳಿಗೆಗೆ ತಲುಪಿಸಲು ಈ ಕಾರ್ಯಕ್ರಮ ರೂಪಿಸಿದೆ” ಎಂದರು.

ಶ್ವೇತ ವಸ್ತ್ರ ಧರಿಸಿ ನಡಿಗೆ

“ಜಿಲ್ಲಾ ಕೇಂದ್ರದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ಈ ನಡಿಗೆ ವೇಳೆ ಬಿಳಿ ವಸ್ತ್ರ, ಗಾಂಧಿ ಟೋಪಿ ಧರಿಸಿ ಹೆಜ್ಜೆ ಹಾಕುವಂತೆ ಮನವಿ ಮಾಡಲಾಗುವುದು. ಗಾಂಧಿ ಜಯಂತಿಯನ್ನು ವಿಶಿಷ್ಟವಾಗಿ ಆಚರಣೆ ಮಾಡುತ್ತಿದ್ದು, ಇಡೀ ವರ್ಷ ಗಾಂಧೀಜಿ ಅವರ ಆಚಾರ ವಿಚಾರವನ್ನು ಯುವ ಪೀಳಿಗೆಗೆ ತಿಳಿಸಲು ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತ್ಯೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರತಿಜ್ಞಾ ವಿಧಿಗಾಗಿ ಆ್ಯಪ್ ಮೂಲಕ ನೋಂದಣಿ

ಪ್ರತಿಜ್ಞಾ ವಿಧಿ ತೆಗೆದುಕೊಳ್ಳಲು ಒಂದು ಆ್ಯಪ್ ಸಿದ್ಧಪಡಿಸಲಾಗಿದ್ದು, ಈಗಾಗಲೇ 35 ಸಾವಿರ ಮಂದಿ ಈ ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿಜ್ಞಾ ವಿಧಿ ಪಡೆದವರಿಗೆ ಆನ್‌ಲೈನ್‌ನಲ್ಲೇ ಪ್ರಮಾಣಪತ್ರ ನೀಡಲಾಗುವುದು. ಇದು ಮೊದಲ ಹಂತದ ಕಾರ್ಯಕ್ರಮವಾಗಿದ್ದು, ಇಡೀ ವರ್ಷ ಬೇರೆ ಬೇರೆ ಕಾರ್ಯಕ್ರಮ ಮಾಡಲಾಗುವುದು. ನಂತರ ಪಕ್ಷದ ವತಿಯಿಂದ ನಡೆಯುವ ಕಾರ್ಯಕ್ರಮವನ್ನು ಮಧ್ಯಾಹ್ನ 12 ಗಂಟೆ ನಂತರ ಬೆಂಗಳೂರಿನ ಭಾರತ ಜೋಡೋ ಭವನದಲ್ಲಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇನ್ನೂ ಬೆಂಗಳೂರಿನ ರಸ್ತೆಗಳು ಗುಂಡಿಮುಕ್ತವಾಗಿವೆಯೇ ಎಂದು ಕೇಳಿದಾಗ, “ಸಂಪೂರ್ಣವಾಗಿ ಗುಂಡಿ ಮುಚ್ಚಲಾಗಿದೆ ಎಂದು ನಾನು ಹೇಳುವುದಿಲ್ಲ. ನಾನು ಕೆಲವು ಭಾಗಗಳಲ್ಲಿ ರಸ್ತೆ ಗುಂಡಿ ನೋಡಿದ್ದೇನೆ. ಅಧಿಕಾರಿಗಳು ದಾಖಲೆ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ನಾನು ಈ ಬಗ್ಗೆ ಈಗ ಏನು ಹೆಚ್ಚಿಗೆ ಹೇಳುವುದಿಲ್ಲ. ಮತ್ತೊಂದು ಸುತ್ತಿನ ಪರಿಶೀಲನೆ ಮಾಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಮತ್ತೊಮ್ಮೆ ವಿವರವಾಗಿ ಮಾತನಾಡುತ್ತೇನೆ” ಎಂದು ತಿಳಿಸಿದರು.

ಸಿಎಂ ವಿರುದ್ಧ ಎಫ್ಐಆರ್ ಪದೇ ಪದೇ ಚರ್ಚೆ ಬೇಡ

ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಈಗಾಗಲೇ ಸಾಕಷ್ಟು ಮಾತನಾಡಿದ್ದೇನೆ. ನಮ್ಮ ಎಐಸಿಸಿ ಅಧ್ಯಕ್ಷರು ಈ ಬಗ್ಗೆ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಪದೇ ಪದೆ ಈ ಬಗ್ಗೆ ಚರ್ಚೆ ಮಾಡಲು ಬಯಸುವುದಿಲ್ಲ” ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಜೀವ ಬಿಟ್ಟಿದ್ದಾಳೆ. ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು ಸಂಭವಿಸಿದ್ದು, ಸವಾರರು ಪ್ರಾಣವನ್ನು ಕಳೆದುಕೊಂಡಿದ್ದಾರೆ.

VISTARANEWS.COM


on

By

Road Accident
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ (Road Accident) ಸಂಭವಿಸಿದ್ದು, ಲಾರಿ-ಆಟೋ ಮುಖಾಮುಖಿ ಡಿಕ್ಕಿಯಾಗಿ ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ. ಶಾಲಿನಿ, ಮೃತ ದುರ್ದೈವಿ. ಬೆಂಗಳೂರಿನ ವಿಧಾನಸೌಧ ಕೂಗಳತೆಯ ಕಾಫಿ ಬೋರ್ಡ್ ಸಿಗ್ನಲ್ ಬಳಿ ಬೆಳಗಿನ ಜಾವ 4 ಗಂಟೆಗೆ ಅಪಘಾತ ಸಂಭವಿಸಿದೆ.

ನಮ್ಮ ಯಾತ್ರಿ ಆ್ಯಪ್‌ ಮೂಲಕ ಆಟೋ ಚಾಲಕ ಇಮ್ರಾನ್ ಶಾಲಿನಿಯನ್ನು ಪಿಕಪ್ ಮಾಡಿದ್ದರು. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್‌ನಿಂದ ಮೆಜೆಸ್ಟಿಕ್‌ಗೆ ಶಾಲಿನಿಯನ್ನು ಡ್ರಾಪ್ ಮಾಡಲು ಆಟೋ ಬರುತ್ತಿತ್ತು. ಈ ವೇಳೆ ಸಿಗ್ನಲ್ ಜಂಪ್ ಮಾಡಿ ಆಟೋಗೆ ಲೋಡ್ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಲೋಡ್ ಸಮೇತ ಲಾರಿ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Road Accident
Road Accident

ನಿದ್ರೆ ಮಂಪರಿನಲ್ಲಿ ಅಪಘಾತ

ಅಪಘಾತದ ಬಳಿಕ ಕಾಲ್ಕಿತ್ತಿದ್ದ ಚಾಲಕನನ್ನು ಟ್ರಾಫಿಕ್ ಪೊಲೀಸರು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಸಂಚಾರ ಪೊಲೀಸರಿಂದ ಅಭಿ ಎಂಬಾತನ ಬಂಧನವಾಗಿದ್ದು, ವಿಚಾರಣೆ ವೇಳೆ ನಿದ್ರೆ ಮಂಪರಿನಲ್ಲಿ ಅಪಘಾತ ಆಯಿತು ಎಂದು ಹೇಳಿದ್ದಾನೆ. ಇನ್ನೂ ಮೃತ ಶಾಲಿನ ಕೇರಳ ಮೂಲದವಳಾಗಿದ್ದಾಳೆ. ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಶಾಲಿನಿ ಬೆಳಗ್ಗೆ ಮೆಜೆಸ್ಟಿಕ್‌ಗೆ ತೆರಳುವಾಗ ಅಪಘಾತ ನಡೆದಿದೆ. ಘಟನೆಯಲ್ಲಿ ಆಟೋ ಪೂರ್ತಿ ಛಿದ್ರಗೊಂಡಿತ್ತು.

ಇದನ್ನೂ ಓದಿ: Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

ಲಾರಿ ಹಾಗೂ ಕಾರು ನಡುವೆ ಅಪಘಾತ; ಮಹಿಳಾ ಯಾತ್ರಿ ಸಾವು

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮೊಗಿಲಿ ಘಾಟ್ ಹೆದ್ದಾರಿಯಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿದೆ. ಸದ್ಯ ಲಾರಿ ಹಾಗೂ ಕಾರು ನಡುವೆ ಡಿಕ್ಕಿಯಾಗಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಲಾರಿ ಪಲಮನೇರು ಕಡೆಯಿಂದ ಚಿತ್ತೂರಿಗೆ ಹೋಗುತ್ತಿದ್ದರೆ, ಮೊಗಿಲಿ ಘಾಟ್ ಬಳಿ ಕಾರಿಗೆ ಡಿಕ್ಕಿ ಹೊಡೆದು ಪಾದಚಾರಿ ರಸ್ತೆ ಮೇಲೆ ಪಲ್ಟಿ ಹೊಡೆದಿದೆ. ಮಹಿಳಾ ಯಾತ್ರಿ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ‌ ಸ್ಥಳಕ್ಕೆ ಬಂಗಾರುಪಾಳ್ಯಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡದಲ್ಲಿ ಅಪರಿಚಿತ ವಾಹನಕ್ಕೆ ಸವಾರ ಬಲಿ

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರನೊಬ್ಬ ಮೃತಪಟ್ಟಿದ್ದಾನೆ. ಧಾರವಾಡದ ಹೊಯ್ಸಳ ನಗರದ ಬ್ರಿಡ್ಜ್ ಮೇಲೆ ಘಟನೆ ನಡೆದಿದೆ. ರಾಣೆಬೆನ್ನೂರು ಮೂಲದ ಸುಲ್ತಾನ್ ಸಾಬ್ ಮೃತಪಟ್ಟವರು. ಸವಾರರಿಬ್ಬರು ರಾಣೆಬೆನ್ನೂರಿನಿಂದ ಕಿತ್ತೂರಿನ ಮಠಕ್ಕೆ ಹೊರಟಿದ್ದರು. ಈ ವೇಳೆ ಹಿಂದಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡಬಳ್ಳಾಪುರದಲ್ಲಿ ಗೂಡ್ಸ್‌ ವಾಹನಕ್ಕೆ ಸವಾರ ಸ್ಪಾಟ್‌ ಡೆತ್‌

ಕೋಳಿ ಸಾಗಿಸುವ ಗೂಡ್ಸ್ ವಾಹನವು ಬೈಕ್‌ಗೆ ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರವೀಣ್ (35) ಮೃತ ದುರ್ದೈವಿ. ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಿಹಳ್ಳಿ ಬಳಿ ಅಪಘಾತ ನಡೆದಿದೆ. ಬೈಕ್ ಸವಾರ ಪ್ರವೀಣ್‌ ಮಧುಗಿರಿ ತಾಲ್ಲೂಕಿನ ಸುದ್ದಗುಂಟೆ ಮೂಲದವರಾಗಿದ್ದು, ಬಾಶೆಟ್ಟಿಹಳ್ಳಿ ಬಳಿ ಚಿಲ್ಲರೆ ಅಂಗಡಿ ಇಟ್ಟುಕೊಂಡಿದ್ದರು. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
BBMP plans to make arrangements for food in areas where stray dogs do not get food
ಬೆಂಗಳೂರು36 ನಿಮಿಷಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು49 ನಿಮಿಷಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು2 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು3 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು4 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು5 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ6 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Fraud Case
ಬೆಂಗಳೂರು6 ಗಂಟೆಗಳು ago

Fraud Case : ಆನ್‌ಲೈನ್ ಜಾಬ್, ಹೂಡಿಕೆ ಹೆಸರಲ್ಲಿ ವಂಚನೆ; ಕನ್ನ ಹಾಕಿದ ಕೋಟಿ ಹಣ ಚೈನಾ ವ್ಯಾಲೆಟ್‌ಗೆ ರವಾನೆ!

Dina Bhavishya
ಭವಿಷ್ಯ6 ಗಂಟೆಗಳು ago

Dina Bhavishya : ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ, ಅಪಾಯ ತಂದುಕೊಳ್ಳುವುದು ಬೇಡ

Siddeshwara Temple
ಬೆಂಗಳೂರು1 ದಿನ ago

Siddheshwar Temple : ಸೊಲ್ಲಾಪುರದ ಸಿದ್ದೇಶ್ವರ ದೇಗುಲದ ಆವರಣದಲ್ಲಿ ವಚನಕಾರ ಸಿದ್ದರಾಮನ ವಚನಗಳ ಅಳವಡಿಕೆಗೆ ಕಸಾಪ ಆಗ್ರಹ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌