ಕರ್ನಾಟಕ
Puneeth Rajkumar: ಎತ್ತರದಲ್ಲಿದ್ದೂ ಹತ್ತಿರವಿದ್ದ ಅಭಿಜಾತ ಕಲಾವಿದ ಪುನೀತ್ ರಾಜಕುಮಾರ್
Puneeth Rajkumar: ಪುನೀತರನ್ನು ಕಳೆದುಕೊಂಡಾಗ ಎದೆಯೊಳಗೆ ನೋವು ತುಂಬಿಕೊಂಡಿತ್ತು. ವಿಸ್ತಾರ ನ್ಯೂಸ್ ವೆಬ್ನಲ್ಲಿ ಇದನ್ನು ಬರೆದು ಇದೀಗ ಆ ನೋವನ್ನು ಹೊರಹಾಕುವ ಪ್ರಯತ್ನ ಮಾಡುತ್ತಿದ್ದೇನೆ.
| ನಾರಾಯಣ ಯಾಜಿ, ಖ್ಯಾತ ಲೇಖಕರು, ಅಂಕಣಕಾರರು
ಕರಾವಳಿಯವರಾದ ನಮಗೆ ಸಿನಿಮಾ ಎನ್ನುವುದು ಬದುಕಿನಲ್ಲಿ ಅಷ್ಟೇನೂ ಮುಖ್ಯ ಅಂತ ಅನಿಸ್ತಿರಲಿಲ್ಲ. ನಾವೆಲ್ಲರೂ ಯಕ್ಷಗಾನಕ್ಕೆ ಆತುಕೊಂಡವರು. ಬೆಳತನಕ ಯಕ್ಷಗಾನವನ್ನು ನೋದುವ ಸಲುವಾಗಿ ಆಟ ಪ್ರಾರಂಭವಾಗುವಾಗ ನೆಲದ ಮೇಲೆ ಕುಳಿತು ನಂತರ ಮಧ್ಯರಾತ್ರಿ ಆಗುತ್ತಿದ್ದಂತೆ ಪುಸಕ್ಕನೆಂದು ಗೇಟ್ ಕೀಪರನ ಕಣ್ಣು ತಪ್ಪಿಸಿ ಆರಾಂ ಖುರ್ಚಿಯ ಮೇಲೆ ಕುಳಿತು ರಾಕ್ಷಸ ವೇಷವನ್ನೋ, ಶಂಭುಹೆಗಡೆಯವರ ಕರ್ಣನನ್ನೋ ನೋಡುತ್ತಾ ಮೈಮರೆಯುತ್ತಿದ್ದೆವು. ಮತ್ತೊಂದು ಕಾರಣವೆಂದರೆ ತಾಲೂಕು ಕೇಂದ್ರದಲ್ಲಿ ಮಾತ್ರ ಸಿನಿಮಾ ಟಾಕೀಸ್ ಇರುವುದು ಹಾಗೂ ಅಲ್ಲಿಗೆ ಹೋಗಲು ಸರಿಯಾದ ಬಸ್ಸಿನ ವ್ಯವಸ್ಥೆಯಿಲ್ಲದಿರುವುದು. ಆ ಕಾಲದಲ್ಲಿ ಮನರಂಜನೆಯೆಂದರೆ ಯಕ್ಷಗಾನ ಮಾತ್ರ. ಆದರೂ ಆಗ ಡಾ. ರಾಜಕುಮಾರ್ ಸಿನಿಮಾ ಅಂದರೆ ಮಾತ್ರ ಊರಿನ ಎಲ್ಲರನ್ನೂ ಬಡಿದೆಬ್ಬಿಸುವುದು ಸಾಮಾನ್ಯವಾಗಿತ್ತು. ಹಿರಿಯರು ಕಿರಿಯರು ಎನ್ನುವ ಭೇದವಿಲ್ಲದೆ ಹೊನ್ನಾವರಕ್ಕೆ ಹೋಗಿ ಟಿಕೆಟ್ ಪಡೆವ ಗಲಾಟೆಯಲ್ಲಿ ಸಿನಿಮಾ ನೋಡಿ ನಂತರ ರಾತ್ರಿಹೊತ್ತು ಅವರ ಅಭಿನಯವನ್ನು ವಿಮರ್ಶೆ ಮಾಡುತ್ತಾ ಊರಿಗೆ ಬರುವುದಿತ್ತು.
ಈಗ ನಮಗನಿಸುವುದು ರಾಜಕುಮಾರ್ ಅವರ ಸಿನಿಮಾ ಮಾತ್ರ ನಮ್ಮನ್ನು ಸೆಳೆಯುತ್ತಿರುವುದು ಏಕೆಂದರೆ ಅವರ ಅಭಿನಯದಲ್ಲಿನ ವೈವಿಧ್ಯತೆ. ಮೂಲತಃ ನಾಟಕರಂಗದಿಂದ ಬಂದ ಅವರ ಅಭಿನಯದಲ್ಲಿ ನಾಟಕೀಯತೆಯ ಅಂಶ ಪ್ರಧಾನವಾಗಿರುತ್ತಿತ್ತು. ಈಗೇನಾದರೂ ಪೂನಾದ Film Institute ನವರ ಹತ್ತಿರ ಹೀಗೆ ಅಭಿನಯಿಸಬಹುದೋ ಎಂದು ಕೇಳಿದರೆ ಖಂಡಿತವಾಗಿ ಒಪ್ಪಲಿಕ್ಕಿಲ್ಲ. ಡಾ. ರಾಜ್ ಅವರು ಅಮ್ಮಾS ಅಮ್ಮಾS .. ಎನುತ್ತ ತುಂಬುತೋಳಿನ ಅಂಗಿಯನ್ನು ಹಾಕಿ ಬಿಳಿ ಬಣ್ನದ ಪ್ಯಾಂಟಿನಲ್ಲಿ ಹೊರಗಿನಿಂದ ಬರುವ ದೃಶ್ಯವನ್ನು ಮರೆಯಲಾರೆವು. ಅವೆಲ್ಲವೂ ಆದರ್ಶಮಯ ಪಾತ್ರಗಳು. ಅವರು ಯಾವತ್ತಿಗೂ ದೃಶ್ಯ ಮಾಧ್ಯಮದಲ್ಲಿ ಕುಡಿಯುವ ಅಥವಾ ಸಿಗರೇಟ್ ಸೇದುವ ದೃಶ್ಯಕ್ಕೆ ವಿರೋಧವಾಗಿದ್ದರು. ಅವರ ಒಂದು ಚಿತ್ರದ ಹೆಸರು ನೆನಪಾಗುತ್ತಿಲ್ಲ. ಅದರಲ್ಲಿ ಖಳನಾಯಕನಾಗಿ ತೂಗುದೀಪ ಇದ್ದರು ಎನ್ನುವ ನೆನಪು. ಅವರ ಮನೆಯಲ್ಲಿ ನಡೆಯುತಿರುವ ಪಾರ್ಟಿಯಲ್ಲಿ ವೇಟರ್ ಗ್ಲಾಸಿನಲ್ಲಿ ವಿಸ್ಕಿ ತಂದು ಎಲ್ಲರಿಗೂ ಕೊಡುತ್ತಿರುವಂತೆ ರಾಜ ಅವರ ಹತ್ತಿರವೂ ಬರುತ್ತಾನೆ. ಆಗ ತಮ್ಮ ಬಲಗಡೆ ತಿರುಗಿ ಆ ಉದ್ದ ಮೂಗು ಮತ್ತು ಚೂಪು ಮೀಸೆಯ ಕೆಳಗಡೆ ತುಂಟ ನಗುವಿನೊಂದಿಗೆ ತಲೆಯಲ್ಲಾಡಿಸಿ ಮತ್ತೊಬ್ಬ ವೇಟರನನ್ನು ಕರೆದು ಅವನಲ್ಲಿರುವ ತಂಪುಪಾನೀಯದ ಬಾಟಳನ್ನು ತೆಗೆದುಕೊಳ್ಳುತ್ತಾರೆ. ಆಗ ಖಳನಾಯಕಾನ ಹೆಂದತಿ Good, Keep it up ಎನ್ನುವ ಸೀನ್ ಒಂದಿದೆ. ಇದು ಅವರು ಪರದೆಯಮೇಲೂ ಕಾಣಿಸುವ ಇಮೇಜ್ ಆಗಿತ್ತು. ಇಂತಹ ಅನೇಕ ಸಂಗತಿಗಳು ಅವರನ್ನು ನಟಸಾರ್ವಭೌಮರನ್ನಾಗಿಸಿತ್ತು. ಇಂತಹ ಹೊತ್ತಿನಲ್ಲಿ ಬಂದ ಪ್ರೇಮದ ಕಾಣಿಕೆ ಚಿತ್ರದಲ್ಲಿ ಆರತಿಯ ಸಂಗಡ ಆರುತಿಂಗಳ ಮಗುವೊಂದು ಕಂಡು ಬಂದಾಗ ಅದು ರಾಜಕುಮಾರ ಅವರ ಮಗನಂತೆ ಎನ್ನುವುದು ದೊಡ್ಡ ಸುದ್ಧಿಯಾಗಿತ್ತು. ಮುದ್ದಾಗಿರುವ ಆತನನ್ನು ನೋಡಲು ನನ್ನ ಆಯಿಯ ಸಮೇತ ನಮ್ಮೂರಿನಲ್ಲಿ ಎಲ್ಲರೂ ಓಡೋಡಿ ಹೋಗಿ ಚಿತ್ರವನ್ನು ನೋಡಿ ಚಿತ್ರದ ಕಥೆಯನ್ನು ಅವರ ಮಗನ ವಿಷಯವನ್ನು ಬಣ್ಣಿಸ್ವ್ದುದನ್ನು ಕೇತ್ತಾ ಬೆಳೆದಿದ್ದೆವು. ಅದೇ ಕಾರಣಕ್ಕಾಗಿ ಈ ಚಿತ್ರವನ್ನೊಮ್ಮೆ ಕಾರಣಕ್ಕಾಗಿಯಾದರೂ ನೋಡಬೇಕೆಂದು ಹಂಬಲಿಸಿದುದರ ನೆನಪಾಗುತ್ತದೆ.
ಇದು ಡಾ. ರಾಜಕುಮಾರ್ ಅವರು ಕನ್ನಡಿಗರನ್ನು ಆವರಿಸಿರುವ ರೀತಿ. ಹೀಗೆ ಇರುವಾಗ ನಾವೂ ಬೆಳೆದು ದೊಡ್ದವರಾಗಿ ಹಾಯ್ಸ್ಕೂಲಿನ ಕೊನೆಯ ವರ್ಷದಲ್ಲಿಯೋ ಕಾಲೇಜಿನ ಮೊದಲ ವರ್ಷದಲ್ಲಿಯೋ ಇರಬೇಕು ಭಾಗ್ಯವಂತ ಸಿನೇಮಾ ಬಿಡುಗಡೆಯಾಯಿತು. ಇಡೀ ಕನ್ನಡನಾಡನ್ನು ಸೆರೆಹಿಡಿದ ಸಿನೇಮಾ ಅಂದರೆ ಇದು. “ಬಾನದಾರಿಯಲ್ಲಿ ಸೂರ್ಯ ಜಾರಿ ಹೋದ, ಚಂದ್ರ ಮೇಲೆ ಬಂದ” ಎನ್ನುವ ಈ ಒಂದು ಹಾಡಿನ ಕುರಿತು ಎಷ್ಟು ಹೇಳಿದರೂ ಕಡಿಮೆಯೇ. ಈ ಹಾಡಿನಲ್ಲಿ ಪುನೀತ ತನ್ನ ತಾತನನ್ನು ಮಲಗಿಸುವ ರೀತಿ ನಮ್ಮ ಮಕ್ಕಳು ಚಿಕ್ಕರವರಿರುವಾಗ ನಮ್ಮನ್ನು ತನ್ನ ಮಡಿಲಲ್ಲಿ ಮಲಗಿಸಿ ಆಟಾವಾಡುವ ಪರಿಯಲ್ಲಿದೆ. ಸರಿಯಾಗಿ ಹಲ್ಲು ಬಾರದ ಪುನೀತ ಅಶ್ವತ್ಥರನ್ನು ಮಲಗಿಸುವಾಗ ಥಟ್ಟಂತ ಹಾರಿ ಹಾಸಿಗೆಯಮೇಲೆ ಅಜ್ಜನ ಪಕ್ಕದಲ್ಲಿ ಕುಳಿತು ಅವನ ಎದೆಯಮೇಲೆ ಪುಟ್ಟ ಕೈ ಇಡುವರೀತಿ ಇದೆಯಲ್ಲಾ, ಅದು ನಿರ್ದೇಶಕರು ಹೇಳಿ ಬರುವಂತಹದ್ದಲ್ಲ. ತಕ್ಷಣವೇ ಹಾಸಿಗೆಯಿಂದ ಹಾರಿ ದೇವರ ಫೋಟೋಕ್ಕೆ ಅಜ್ಜನ ಕ್ಷೇಮಕ್ಕಾಗಿ ಹಾರೈಸುವ ಮತ್ತು ತಿರುಗಿ ಬಂದು ಅಶ್ವತ್ಥರನ್ನು ಲಾಲಿಸುವ ದೃಶ್ಯ ಇನ್ನೂ ನನ್ನ ಭಿತ್ತಿಯಲ್ಲಿ ಹಸಿರಾಗಿ ಇದೆ. ಅಶ್ವತ್ಥ ಅವರು ಅಸಾಮಾನ್ಯ ನಟ.
ಅವರೆದುರು ನಟನೆಯಲ್ಲಿ ಯಾರೂ ನಿಲ್ಲಲಾರರು. ಆ ಗಾಂಭೀರ್ಯ, ದೇಹದ ಭಾಷೆ, ನಾಟಕದ ಹಿನ್ನೆಲೆಯನ್ನು ಮೀರಿ ಸಿನೇಮಾದ ಕ್ಯಾಮರಾಕ್ಕೆ ಬದಲಾಯಿಸುವ ಅವರಂತೆ ನಟನಾ ಸಾಮರ್ಥ್ಯವುಳ್ಳ ನಟ ಭಾರತೀಯ ಇತಿಹಾಸದಲ್ಲಿ ಮತ್ತೊಬ್ಬ ಸಿಗಲಿಕ್ಕಿಲ್ಲ. ಅಂತಹ ಅಶ್ವತ್ಥ ಅವರು ಪುನೀತ ಅಭಿನಯವನ್ನು ನೋಡುತ್ತಾ ಅದನ್ನು ಅನುಭವಿಸಿ ಮೆಚ್ಚುಗೆಯನ್ನು ಸೂಚಿಸುವ ಕಣ್ಣುಗಳು ಈ ಪದ್ಯದ್ದುದ್ದಕ್ಕೂ ಇವೆ. ಅಭಿಜಾತ ಕಲಾವಿದನಾಗಿ ಹುಟ್ಟುವುದೆಂದೆರೆ ಇದೆ ಹೊರತೂ ಬೇರೇನೂ ಅಲ್ಲ. ಭಕ್ತ ಪ್ರಹ್ಲಾದ ಎನ್ನುವ ಸಿನೇಮಾವನ್ನು ಮಾಡುವ ಕನಸು ಡಾ. ರಾಜಕುಮಾರ ಅವರಿಗೆ ಯಾವತ್ತಿಗೂ ಇತ್ತಂತೆ. ಹಿರಣ್ಯ ಕಶಿಪುವನ್ನು ಅವರು ಅಭಿನಯಿಸಿದ ರೀತಿಗೆ ಅವರೇ ಉದಾಹರಣೆಯಾಗಿ ನಿಲ್ಲಬಲ್ಲರು. ಅದಕ್ಕೆ ಸರಿಯಾಗಿ ಸರಿತಾ ಕಯಾದುವಿನ ಪಾತ್ರ. ಲವಲವಿಕೆಯ ನಾರದನಾಗಿ ಅನಂತನಾಗ್ ಈ ಎಲ್ಲದರ ನಡುವೆ ಅವರೆಲ್ಲರನ್ನೂ ಮೀರಿಸಿದ ನಟನೆ ಬಾಲಕ ಪ್ರಹ್ಲಾದನದ್ದು. ಇಂತಹ ಪ್ರಹ್ಲಾದ ಸಿಕ್ಕಿದುದರಿಂದಲೇ ಡಾ. ರಾಜ್ ಈ ಚಿತ್ರವನ್ನು ಮಾಡಿರಬೇಕು. ಬಾಲನತ ಪುನೀಟ ಅಭಿನಯಿಸುತ್ತಿರಲಿಲ್ಲ. ಅದನ್ನು ಅನುಭವಿಸಿ ತನ್ನ ಎಚ್ಚರದಲ್ಲಿಯೇ ತಾನು ವಹಿಸಿದ ಪಾತ್ರವಾಗಿ ಬಿಡುತ್ತಿದ್ದರು.
ಹಾಡಿನ ಅಭಿನಯದ ಸಂಧರ್ಭ ಬಂದಾಗ ಹಾಲುಗಲ್ಲದ ಮುಗ್ಧಮನಸ್ಸಿನ ಅವರ ನಡತೆಯೆನ್ನುವುದು ನಾಟ್ಯಶಾಸ್ತ್ರದ ಯಾವ ಪ್ರಮೇಯಕ್ಕೂ ಸಿಗುವಂತಹದಲ್ಲ. ಪರಕಾಯ ಪ್ರವೇಶವಾಗಿರುತ್ತಿತ್ತು. ನಾಯಕನಟನಾಗಿ ಅವರ ಮಿಲನ ಸಿನೇಮಾ ಕನ್ನಡ ಚಿತ್ರರಂಗದಲ್ಲಿಯೇ ಒಂದು ಮಹತ್ವದ ಸಿನೇಮಾವಾಗಿ ನಿಲ್ಲುತ್ತದೆ. ಅರಿವಿಲ್ಲದೇ ಮದುವೆಯಾಗಿ, ಆಕೆ ಮತ್ತೊಬ್ಬನನ್ನು ಪ್ರೀತಿಸುವ ಸಂಗತಿ ತಿಳಿದು ಬೇಸರಿಸದೇ ಆಕೆಯ ಹಿತವನ್ನು ಬಯಸುವ ತನ್ನೊಳಗೆ ಆಕೆಯ ಮೇಲೆ ಪ್ರೀತಿಯಿದ್ದೂ ಅದನ್ನು ತೋರ್ಪಡಿಸದ ನಟನಾ ಸಾಮರ್ಥ್ಯವನ್ನು ಅವರು ಇಲ್ಲಿ ತೋರಿದ್ದಾರೆ. ಪುನೀತ ಅವರ ಅಭಿನಯ ತನ್ನ ತಂದೆಯಂತೆ ಅಲ್ಲ; ಹೆಬ್ಬೆರಳನ್ನು ಮೇಲಕ್ಕೆತ್ತಿ ಕಿರುಬೆರಳನ್ನು ಹೊರಚಾಚಿ ಏನು ಎಂದು ಕೇಳುವ ಅವರ ಭಾವವೇ ಚಂದ. ಪಾಶ್ಚಾತ್ಯ ಪ್ರಭಾವದಿಂದ ಅಭಿನಯದಲ್ಲಿ ಸಹಜತೆ ಎಂದು ಮುಖಭಾವವನ್ನಷ್ಟೇ ಅಭಿವ್ಯಕ್ತಿಸುವ ಪರಂಪರೆಯನ್ನು ಹಿಂದೀ ಚಿತ್ರರಂಗದಲ್ಲಿ ಕಾಣಬಹುದು. ದಕ್ಷಿಣಭಾರತೀಯ ಚಿತ್ರಗಳಲ್ಲಿ ಮಲೆಯಾಳಂ ಭಾಷೆಯನ್ನುಳಿದು ಚಿತ್ರಗಳಲ್ಲಿ ನಟನೆಯಲ್ಲಿ ಓವರ ಆಕ್ಟಿಂಗ್ ಇದೆ. ಕರ್ನಾಟದ ನಾಟಕ ಕಂಪನಿಗಳಂತೆ. ಆದರೆ ಪುನೀತರ ಅಭಿನಯದಲ್ಲಿ ಯಾರ ಹೋಲಿಕೆಯೂ ಇಲ್ಲ. ತಾನೇ ಹುತ್ತದಿಂದ ಉದ್ಭವಗೊಂಡ ವಾಲ್ಮೀಕಿಯಾಗಿ ಅವರು ಕಾಣಿಸಿಕೊಳ್ಳುತ್ತಾರೆ.
ಈ ನಡುವೆ ಪುನೀತ ನಡುವೆ ಅಭಿನಯದಿಂದ ಕೆಲಕಾಲ ಹೊರ ಉಳಿದುಬಿಟ್ಟಿದ್ದರು. ಆಗ ಶಿವರಾಜ ಕುಮಾರ, ರಾಘವೇಂದ್ರ ರಾಜಕುಮಾರ ತಮ್ಮ ತಮ್ಮ ಸಹಜಾಭಿನಯದಿಂದ ಕನ್ನಡದ ಪ್ರೇಕ್ಷಕರ ಮನವನ್ನು ಗೆದ್ದಿದ್ದಾರೆ. ಡಾ. ರಾಜ ಮತ್ತು ಕನ್ನಡನಾಡಿನ ನಡುವೆ ಒಂದು ಅಸ್ಮಿತತೆಯಿದೆ. ಅದನ್ನು ನಾವು ಗೋಕಾಕ ಚಳುವಳಿಯ ಕಾಲದಲ್ಲಿ ನೋಡಿದ್ದೇವೆ. ಕಾರ್ಯ ಆದಮೇಲೆ ಎಂತಹ ಒತ್ತಡವಿದ್ದರೂ ಅದನ್ನು ನಿರಾಕರಿಸಿ ರಾಜಕೀಯದೆಡೆ ತಲೆ ಹಾಕಿಯೂ ಮಲಗಲಿಲ್ಲ. ಈ ಗುಣ ಪುನೀತರಲ್ಲಿತ್ತು. ಇದನ್ನು ಗುರುತಿಸಿದ್ದು ಕರುನಾಡ ಸಹೃದಯ ಮನಸ್ಸುಗಳು. ಸಹಜವಾಗಿ ಇದು ಅವರನ್ನು ಎಲ್ಲ ಕಲಾವಿದರನ್ನು ಮೀರಿಸಿ ಡಾ. ರಾಜಕುಮಾರ ಅವರ ಜಾಗದಲ್ಲಿ ನೋಡಲು ಪ್ರಾರಂಭಿಸಿತೇ ಹೊರತು ಆ ಮಹಾನ್ ನಟನ ಮಗ ಎನ್ನುವ ಒಂದೇ ಕಾರಣದಿಂದ ಅಲ್ಲ.
ಈ ಗುಣವೇ ಅವರು ನಿರೂಪಕರಾಗಿ ನಡೆಸಿಕೊಟ್ಟ ಕನ್ನಡದ ಕೋಟ್ಯಧಿಪತಿಯ ಯಶಸ್ಸಿಗೆ ಕಾರಣ. ನಾನೊಮ್ಮೆ ನನ್ನ ಓರ್ವ ಸ್ನೇಹಿತರಿಗೆ ಈ ಕಾರ್ಯಕ್ರಮಕ್ಕೆ ಫೋನ್ ಫ್ರೆಂಡ್ ಆಗಿ ಭಾಗವಹಿದ್ದೆ. 1972ರಲ್ಲಿ ಇಳಾಬೆನ್ ಭಟ್ಟ್ ಅವರು ಸ್ಥಾಪಿಸಿದ ಸೇವಾ ಸಂಸ್ಥೆಯ ಕುರಿತಾದ ಪ್ರಶ್ನೆ ಅದಾಗಿತ್ತು. ತುಂಬಾ ಕ್ಲಿಷ್ಟಕರ ಪ್ರಶ್ನೆ. ನಾನು ತಕ್ಷಣವೇ ಉತ್ತರಿಸಿವುದನ್ನು ಗಮನಿಸಿ ನನ್ನೊಟ್ಟಿಗೆ ಮತ್ತೂ ಮಾತಾಡಿ ನನ್ನಿಂದಲೇ ಆ ವಿಷಯದ ವಿವರಣೆಯನ್ನು ಹೇಳಿಸಿರುವುದನ್ನು ಈಗ ನೆನಪಿಗೆ ಬರುತ್ತದೆ. ಅದನ್ನು ಟೀವಿ ಕಾರ್ಯಕ್ರಮದ ತಂತ್ರಗಾರಿಕೆ ಎನ್ನಬಹುದೇನೋ, ಆದರೆ ಆ ದಿವಸ ಕಾರ್ಯಕ್ರ್ಮ ಮುಗಿದ ತಕ್ಷಣ ಮತ್ತೆ ನನಗೆ ಫೋನ್ ಮಾಡಿ ಅವರ ವಯಕ್ತಿಕ ಅಭಿನಂದನೆಗಳನ್ನು ತಿಳಿಸಿ “ನೀವೇಕೆ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕೆ ಬಂದಿಲ್ಲ” ಎಂದು ಕೇಳಿದ್ದರು. ನಾನು ಏನೋ ತೇಲಿಸಿ ಉತ್ತರ ಕೊಟ್ಟಿದ್ದೆ. ಆಗ ನನಗೆ ಡಾ. ರಾಜ ಕುಮಾರ ಕುಟುಂಬದವರು ಎತ್ತರದಲ್ಲಿದ್ದವರಾದರೂ, ಹತ್ತಿರದಲ್ಲಿಯೂ ಇರುತ್ತಾರೆ ಎನ್ನುವ ಅನುಭವವಾಯಿತು.
ಪುನೀತರನ್ನು ಕಳೆಕೊಂಡಾಗ ಎದೆಯೊಳಗೆ ಈ ನೋವು ತುಂಬಿಕೊಂಡಿತ್ತು. ವಿಸ್ತಾರ ನ್ಯೂಸ್ ನಲ್ಲಿ ಇದನ್ನು ಬರೆದು ಇದೀಗ ಆ ನೋವನ್ನು ಹೊರಹಾಕುವ ಪ್ರಯತ್ನ ಮಾಡುತ್ತಿದ್ದೇನೆ.
ಇದನ್ನೂ ಓದಿ: Kabzaa Movie: ಕಬ್ಜ ಸೆಟ್ನಲ್ಲಿ ಪುನೀತ್ ರಾಜ್ಕುಮಾರ್: ಸಿನಿಮಾದಲ್ಲಿದ್ದಾರ ನಟ? ವಿಡಿಯೊ ವೈರಲ್!
ಕರ್ನಾಟಕ
Fire tragedy : ಹೊಸಕೋಟೆಯಲ್ಲಿ ಭೀಕರ ದುರಂತ; ಗ್ಯಾಸ್ ಸಿಲಿಂಡರ್ ಲೀಕ್ ಆಗಿ 7 ಕಾರ್ಮಿಕರ ದಾರುಣ ಸಾವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೇಡಹಳ್ಳಿಯಲ್ಲಿ ವಾರದ ಹಿಂದೆ ಸಂಭವಿಸಿದ ಗ್ಯಾಸ್ ಲೀಕೇಜ್ ಪ್ರಕರಣದಲ್ಲಿ ಗಾಯಗೊಂಡಿದ್ದವರು ದಿನಕ್ಕೊಬ್ಬರಂತೆ ಸಾಯುತ್ತಿದ್ದು, ಈಗ ಸಾವಿನ ಸಂಖ್ಯೆ ಏಳಕ್ಕೇರಿದೆ.
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಕಳೆದ ಭಾನುವಾರ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸೋರಿಕೆ (Fire tragedy) ಪ್ರಕರಣವೊಂದು ಏಳು ಮಂದಿಯ ಪ್ರಾಣವನ್ನೇ ಕಸಿದಿದೆ. ಸಾವನ್ನಪ್ಪಿದವರೆಲ್ಲರೂ ಉತ್ತರ ಪ್ರದೇಶ ಮತ್ತು ಬಿಹಾರ ಮೂಲದ ಕಾರ್ಮಿಕರಾಗಿರುವುದರಿಂದ ಆರು ದಿನಗಳ ಕಳೆದರೂ ಇದರ ಸ್ಪಷ್ಟ ಮಾಹಿತಿ ಹೊರಬಿದ್ದಿರಲಿಲ್ಲ.
ಹೊಸಕೋಟೆ ತಾಲೂಕಿನ ಮೇಡಹಳ್ಳಿಯಲ್ಲಿ ಕಳೆದ ಭಾನುವಾರ ಶೆಡ್ ಒಂದರಲ್ಲಿ ರಾತ್ರಿ ಅನಿಲ ಸೋರಿಕೆ ಆಗಿದ್ದು, ರಾತ್ರಿ ಯಾರೋ ಕರೆಂಟ್ ಹಾಕಿದಾಗ ಬೆಂಕಿ ಹತ್ತಿಕೊಂಡು ಎಂಟು ಮಂದಿಗೆ ಬೆಂಕಿಯ ಗಾಯಗಳಾಗಿದ್ದವು. ಆರಂಭಿಕ ಹಂತದಲ್ಲಿ ಇದೇನೂ ತುಂಬ ದೊಡ್ಡ ಅವಘಡದಂತೆ ಕಾಣಿಸಿರಲಿಲ್ಲ. ಆದರೆ, ದಿನ ಕಳೆದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು ಒಬ್ಬೊಬ್ಬರಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದ ಈಗ ಎಂಟು ಮಂದಿಯಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಉತ್ತರ ಪ್ರದೇಶ ಮತ್ತು ಬಿಹಾರ ಮೂಲದ ಕಾರ್ಮಿಕರನ್ನು ಕರೆದುಕೊಂಡು ಬಂದು ಇಲ್ಲಿ ಕಾಮಗಾರಿಗಳಲ್ಲಿ ದುಡಿಸಿಕೊಳ್ಳಲಾಗುತ್ತಿತ್ತು. ಅವರಿಗೆ ಒಂದು ಶೆಡ್ನಲ್ಲಿ ವಾಸವಾಗಿರಲು ವ್ಯವಸ್ಥೆ ಮಾಡಲಾಗಿತ್ತು. ಕಳೆದ ಭಾನುವಾರ ರಾತ್ರಿಯೂ ಈ ಕಾರ್ಮಿಕರು ಮೇಡಹಳ್ಳಿಯ ಅಂತಹುದೇ ಒಂದು ಶೆಡ್ನಲ್ಲಿ ಮಲಗಿದ್ದರು. ಹೊರಗಡೆ ಊಟ ಮಾಡಿಕೊಂಡು ಬಂದು ಅವರು ಇಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆಗ ಯಾವುದೋ ಕಾರಣದಿಂದ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿತ್ತು.
ನಡುವೆ ರಾತ್ರಿ ಯಾರೋ ಲೈಟ್ ಆನ್ ಮಾಡಿದಾಗ ಸೋರಿಕೆಯಾದ ಅನಿಲದಿಂದಾಗಿ ಬೆಂಕಿ ಹತ್ತಿಕೊಂಡಿತ್ತು. ಇದರಿಂದ ಮಲಗಿದ್ದವರಿಗೆಲ್ಲ ಸುಟ್ಟ ಗಾಯಗಳಾಗಿತ್ತು. ಅವರನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ಆರೋಗ್ಯವಾಗಿದ್ದಾರೆ ಎಂಬಂತೆ ಕಂಡುಬಂದ ಇವರ ದೇಹದ ಒಳಗೆ ಬೆಂದ ಗಾಯಗಳು ಘಾಸಿಗೊಳಿಸಿತ್ತು. ಹೀಗಾಗಿ ದಿನ ಕಳೆದಂತೆ ಒಬ್ಬೊಬ್ಬರೇ ಪ್ರಾಣ ಕಳೆದುಕೊಳ್ಳಲಾರಂಭಿಸಿದ್ದಾರೆ. ಶುಕ್ರವಾರ ಏಳನೇ ಸಾವು ಸಂಭವಿಸಿದೆ.
ಅಮಿತ್, ಸನೋಜ್, ನೀರಜ್, ಸೋಮಯ್ ಗುಪ್ತಾ, ತಿಲಕ್ ರಾಮ್, ಲಕ್ಷ್ಮಣ್ ಮತ್ತು ಚಂದ್ರಭಾನ್ ಮೃತ ಕಾರ್ಮಿಕರು. ಈ ಘಟನೆಗೆ ಸಂಬಂಧಿಸಿ ಅರವಿಂದ ಗುಪ್ತಾ, ಮತ್ತು ಬಾಸ್ಕರ್ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶದಿಂದ, ಬಿಹಾರದಿಂದ ಕಾರ್ಮಿಕರನ್ನು ಕರೆತರುವ ಲೇಬರ್ ಕಂಟ್ರಾಕ್ಟರ್ಗಳು ಮತ್ತು ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕೆಲಸಕ್ಕಾಗಿ ಕರೆತಂದು ಸೂಕ್ತ ಮೂಲ ಸೌಕರ್ಯ ನೀಡದ ಕಾರಣ ಅವಘಡ ಸಂಭವಿಸಿದೆ. ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು
ಕರ್ನಾಟಕ
Karnataka Election: ಜೆಡಿಎಸ್, ಬಿಜೆಪಿಯ ತಲಾ ಒಂದು ವಿಕೆಟ್ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ
ಅನೇಕ ವರ್ಷ ಕಾಂಗ್ರೆಸ್ನಲ್ಲಿದ್ದ ಗೋಪಾಲಕೃಷ್ಣ ಮತ್ತೆ ಅದೇ ಪಕ್ಷಕ್ಕೆ ತೆರಳಬಹುದು ಎನ್ನಲಾಗಿದ್ದು, ಎ.ಟಿ. ರಾಮಸ್ವಾಮಿ ಬಿಜೆಪಿ ಸೇರುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಒಬ್ಬರು ಬಿಜೆಪಿಗೆ, ಮತ್ತೊಬ್ಬರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಅರಕಲಗೂಡು ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎ.ಟಿ. ರಾಮಸ್ವಾಮಿ ಬೆಂಗಳೂರಿನಲ್ಲಿ ವಿಧಾನಸಭೆ ಕಾರ್ಯದರ್ಶಿ ಮೂಲಕ ಸ್ಪೀಕರ್ಗೆ ರಾಜೀನಾಮೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎ.ಟಿ. ರಾಮಸ್ವಾಮಿ, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸಂತೋಷದಿಂದ ರಾಜೀನಾಮೆ ನೀಡಿದ್ದೇನೆ. ಕಾರ್ಯದರ್ಶಿ ಗೆ ರಾಜೀನಾಮೆ ನೀಡಿದ್ದೇನೆ, ಸ್ಪೀಕರ್ ಬಂದ ಬಳಿಕ ಅಂಗೀಕಾರ ಮಾಡುವಂತೆ ಮನವಿ ಮಾಡುತ್ತೇನೆ ಎಂದರು.
ನಾನು ಇಂದೇ ಶಾಸಕರ ಭವನದ ಕೊಠಡಿ ಬಿಟ್ಟು ಕೊಡುತ್ತಿದ್ದೇನೆ. ಜೆಡಿಎಸ್ ನಾಯಕರು ನನಗೆ ಅವಕಾಶ ಮಾಡಿಕೊಟ್ಟಿದಕ್ಕೆ ಧನ್ಯವಾದಗಳನ್ನ ಸಲ್ಲಿಸುತ್ತೇನೆ. ನಾನು ಅಧಿಕಾರ ಆಸೆ ಪಡೆದವನಲ್ಲ. ನಾನು ವಿರೋಧ ಪಕ್ಷದವರ ಜತೆ ಸಹ ಉತ್ತಮವಾಗಿದ್ದೇನೆ. ನಾನು ರಾಜಕೀಯ ವಿರೋಧಿಗಳಿಗೂ ಒಳ್ಳೆಯದಾಗ್ಲಿ ಎಂದು ಭಾವಿಸುತ್ತೇನೆ. ಜನ ಸೇವೆಗಾಗಿ ಅವಕಾಶ ಸಿಕ್ಕಿತ್ತು.
ಮುಂದೆ ಅವಕಾಶ ಸಿಕ್ರೆ ಜನರ ಸೇವೆಗೆ ಮುಡುಪಾಗಿ ಇಡುತ್ತಿದ್ದೇನೆ. ಕರ್ನಾಟಕದ ರಾಜಕಾರಣ ಕೆಟ್ಟು ಹೋಗಿದೆ. ಒಲೈಕೆ ರಾಜಕಾರಣ ಜಾಸ್ತಿ ಆಗಿದೆ. ವಿಧಾನ ಸಭೆ ಮತ್ತು ಪರಿಷತ್ ಹಣದ ಸಭೆ ಆಗದೇ ಜನರ ಸಭೆ ಆಗಲಿ. ಜನರ ಹಿತಾಸಕ್ತಿಗೆ ಕೆಲಸ ಮಾಡಿಕೊಂಡು ಬಂದಿದ್ದೇನೆ. ನಾನು ಜೆಡಿಎಸ್ ಬಿಡಲಿಲ್ಲ. ಎಂದೂ ಸಹ ಸಹ ಜೆಡಿಎಸ್ ಬಿಡಲಿಲ್ಲ. ಎಲ್ಲ ಪಕ್ಷಗಳಲ್ಲೂ ಲೋಪದೋಷಗಳಿವೆ. ಮನಿ ಪವರ್ ಮುಂದೆ ಬಲಿಪಶು ಆದೆ. ಅಕ್ರಮಗಳನ್ನ ಎತ್ತಿ ಹಿಡಿದಿದ್ದೆ ಶಾಪ ಎನ್ನುವುದಾದರೆ ಅದನ್ನು ಚಾಲೆಂಜ್ ಆಗಿ ಸ್ವೀಕರಿಸುತ್ತೇನೆ ಎಂದರು.
ಯಾವ ಪಕ್ಷ ಸೇರುತ್ತೇನೆ ಎನ್ನುವ ಕುರಿತು ರಾಮಸ್ವಾಮಿ ಸ್ಪಷ್ಟವಾಗಿ ತಿಳಿಸಿಲ್ಲ. ಅವರು ಬಿಜೆಪಿ ಅಭ್ಯರ್ಥಿಯಾಗಿ ಅರಕಲಗೂಡಿನಿಂದ ಸ್ಪರ್ಧೆ ಮಾಡಬಹುದು ಎನ್ನಲಾಗುತ್ತಿದೆ.
ಗೋಪಾಲಕೃಷ್ಣ ರಾಜೀನಾಮೆ
ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮನೆಗೆ ತೆರಳಿ ರಾಜೀನಾಮೆ ನೀಡಿದ್ದಾರೆ. ವಯಸ್ಸಿನ ಕಾರಣಕ್ಕೆ ರಾಜಕೀಯ ನಿವೃತ್ತಿ ಪಡೆಯಲು ರಾಜೀನಾಮೆ ನೀಡುತ್ತೇನೆ ಎಂದು ಗೋಪಾಲಕೃಷ್ಣ ಹೇಳಿದ್ದಾರೆ.
ಆದರೆ ಅವರು ಮೊಳಕಾಲ್ಮೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಕನ್ಪರ್ಮ್ ಮಾಡಿಕೊಂಡೇ ರಾಜೀನಾಮೆ ನೀಡಿದ್ದಾರೆ. ಹಿಂದಿನ ಎಲೆಕ್ಷನ್ ನಲ್ಲಿ ಟಿಕೆಟ್ ನಿಂದ ವಂಚಿತ ಆಗಿದ್ದ ಗೋಪಾಲಕೃಷ್ಣ, ಜನಾರ್ದನ ರೆಡ್ಡಿ, ಶ್ರೀರಾಮುಲು ಪ್ರಭಾವದಿಂದ ಕೂಡ್ಲಿಗಿಯಿಂದ ಸ್ಪರ್ಧಿಸಿದ್ದರು. ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Elections : ಕೂಡ್ಲಿಗಿ ಶಾಸಕ ಗೋಪಾಲಕೃಷ್ಣ ನಾಳೆ ಬಿಜೆಪಿಗೆ ರಾಜೀನಾಮೆ, ಕಾಂಗ್ರೆಸ್ಗೆ ಸೇರ್ಪಡೆ
ಕರ್ನಾಟಕ
Hiriyur News: ಕಾಂಗ್ರೆಸ್ ಸೇರಿದ ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್; ಬಿಜೆಪಿಗೆ ಆಘಾತ
Hiriyur News: ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ ನಗರ ಸಭೆಯ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್ ಅವರನ್ನು ಮಾಜಿ ಸಚಿವ ಡಿ. ಸುಧಾಕರ್ ಅವರು ಪಕ್ಷಕ್ಕೆ ಬರ ಮಾಡಿಕೊಂಡರು.
ಹಿರಿಯೂರು: ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ನಗರಸಭೆಯ (city council) ಮಾಜಿ ಅಧ್ಯಕ್ಷ ಹಾಗೂ ಭೋವಿ ಸಮಾಜದ ನಾಯಕ ಟಿ. ಚಂದ್ರಶೇಖರ್ ಬಿಜೆಪಿಗೆ ಸದ್ದಿಲ್ಲದೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.
ಟಿ. ಚಂದ್ರಶೇಖರ್, ಎಸ್ಟಿ ಮೋರ್ಚಾ ಅಧ್ಯಕ್ಷ ಮಂಜುನಾಥ್, ತಿಮ್ಮಭೋವಿ, ರಂಗಸ್ವಾಮಿ ಸೇರಿದಂತೆ ಮತ್ತಿತರರನ್ನು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಮಾಜಿ ಸಚಿವ ಡಿ. ಸುಧಾಕರ್ ಅವರು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ.
ಕಾಂಗ್ರೆಸ್ನಲ್ಲಿದ್ದ ಟಿ. ಚಂದ್ರಶೇಖರ್ ಅವರು, ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ನಂತರ ನಗರಸಭಾ ಅಧ್ಯಕ್ಷರಾಗಿದ್ದರು. ಬಳಿಕ ನಡೆದ ನಗರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಶಾಸಕಿ ಕೆ. ಪೂರ್ಣಿಮಾ ಅವರ ಪತಿ ಡಿ.ಟಿ. ಶ್ರೀನಿವಾಸ್ ಅವರ ಜತೆಗಿದ್ದ ಚಂದ್ರಶೇಖರ್ ಅವರು ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಂತರ ಕಾಯ್ದುಕೊಂಡಿದ್ದರು. ಇದೀಗ ಗುರುವಾರ (ಮಾ.30) ರಾತ್ರಿ ಮಾಜಿ ಸಚಿವ ಡಿ. ಸುಧಾಕರ್ ಅವರು ತಮ್ಮ ಮನೆಯಲ್ಲಿಯೇ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.
ಚಂದ್ರಶೇಖರ್ ಅವರು ಬಿಜೆಪಿ ತೊರೆದಿರುವುದರಿಂದ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಹಿನ್ನಡೆ ಉಂಟಾಗಲಿದೆ ಎಂಬ ವಿಶ್ಲೇಷಣೆ ಸಹ ಈ ವೇಳೆ ನಡೆಯುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭೋವಿ ಸಮಾಜದ ಮತಗಳು ಹೆಚ್ಚು ಬಂದಿದ್ದವು. ಆದರೆ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸಹಕಾರಿಯಾಗಲಿದೆಯೇ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಪಕ್ಷ ಸೇರ್ಪಡೆ ಕುರಿತು ಮಾತನಾಡಿದ ಮಾಜಿ ಸಚಿವ ಡಿ. ಸುಧಾಕರ್, ಚಂದ್ರಶೇಖರ್ ಅವರು ಕಾಂಗ್ರೆಸ್ನ ತತ್ತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ವಾಪಸ್ ಬಂದಿದ್ದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಕ್ಷೇತ್ರದಲ್ಲಿ ಭ್ರಷ್ಟಾಚಾರ, ಜನ ವಿರೋಧಿ ಆಡಳಿತ ಕೊನೆಗೊಂಡಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆರೋಗ್ಯ
Shivamogga News: ವಿನ್ಲೈಫ್ ಟ್ರಸ್ಟ್ ವತಿಯಿಂದ ಏ. 2ರಂದು ಆರೋಗ್ಯ ಉತ್ಸವ ಜನ ಜಾಗೃತಿ ಸಮಾವೇಶ
Shivamogga News: ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶದಲ್ಲಿ ಜೀವ ರಕ್ಷಕ ತರಬೇತಿ, ಕಿರು ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ವಿನ್ಲೈಫ್ ಟ್ರಸ್ಟಿ ಡಾ.ಪೃಥ್ವಿ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ: ವಿನ್ಲೈಫ್ ಟ್ರಸ್ಟ್ (WinLife Trust) ವತಿಯಿಂದ ಕುವೆಂಪು ರಂಗ ಮಂದಿರದಲ್ಲಿ ಏ.2 ರಂದು ಆರೋಗ್ಯ ಉತ್ಸವ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿನ್ಲೈಫ್ ಟ್ರಸ್ಟಿ ಡಾ.ಪೃಥ್ವಿ, “ಈ ಸಮಾವೇಶದಲ್ಲಿ ತುರ್ತು ಜೀವ ರಕ್ಷಕ ತರಬೇತಿ ಮತ್ತು ಕಾರ್ಯಾಗಾರ ನಡೆಯಲಿದ್ದು, ದೈನಂದಿನ ಬದುಕಿನಲ್ಲಿ ಒತ್ತಡ ನಿರ್ವಹಣೆ, ಮಧುಮೇಹ @360 ಈ ವಿಷಯ ಕುರಿತು ಅರಿವು ಮೂಡಿಸಲಾಗುವುದು. ಆರೋಗ್ಯ ಕುರಿತು ಪ್ರಾಯೋಗಿಕ ತರಬೇತಿ, ಕಾರ್ಯಾಗಾರ, ಯೋಗ, ವಸ್ತು ಪ್ರದರ್ಶನ, ಕಿರು ನಾಟಕ ಪ್ರದರ್ಶನ, ಸಮಾಲೋಚನೆ ಹಾಗೂ ಉಪನ್ಯಾಸವನ್ನು ಏರ್ಪಡಿಸಲಾಗಿದೆ” ಎಂದು ಹೇಳಿದರು.
ಇದನ್ನೂ ಓದಿ: Ananya Panday: ತನ್ನನ್ನು ಎಸಿಪಿ ಎಂದು ಕರೆಯದಂತೆ ಮಾಧ್ಯಮಗಳಿಗೆ ವಿನಂತಿಸಿದ ಅನನ್ಯಾ ಪಾಂಡೆ
ಸುದ್ದಿಗೋಷ್ಠಿಯಲ್ಲಿ ವಿನ್ಲೈಫ್ ನಿರ್ದೇಶಕರಾದ ಡಾ.ಶಂಕರ್, ಡಾ.ವಿಜಯ ಕುಮಾರ್, ರೆಹಮತ್ ಹಾಗೂ ಬದ್ರಿನಾಥ್ ಉಪಸ್ಥಿತರಿದ್ದರು.
-
ಸುವಚನ10 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ7 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಕರ್ನಾಟಕ7 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಪ್ರಮುಖ ಸುದ್ದಿ16 hours ago
ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು
-
ಕ್ರಿಕೆಟ್23 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ವೈರಲ್ ನ್ಯೂಸ್22 hours ago
Viral Video: ಇದು ರೋಲ್ಸ್ ರಾಯ್ಸ್ ಆಫ್ ಆಟೋ; ಒಂದು ಬಟನ್ ಪ್ರೆಸ್ ಮಾಡಿದ್ರೆ ಸಾಕು ಮೇಲ್ಭಾಗ ತೆರೆದುಕೊಳ್ಳತ್ತೆ!
-
ಕರ್ನಾಟಕ19 hours ago
ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲ ಪ್ರಯತ್ನ ಇದು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ನಡೆಯಲಿದೆ ಆಂತರಿಕ ಚುನಾವಣೆ
-
ಕ್ರಿಕೆಟ್19 hours ago
IPL 203 : ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ