Puneeth Rajkumar, Who saw ordinary people as extraordinaryPuneeth Rajkumar: ಸಾಮಾನ್ಯರನ್ನು ಅಸಾಮಾನ್ಯರಂತೆ ಕಾಣುತ್ತಿದ್ದ ಅಪ್ಪು Vistara News
Connect with us

ಕರ್ನಾಟಕ

Puneeth Rajkumar: ಸಾಮಾನ್ಯರನ್ನು ಅಸಾಮಾನ್ಯರಂತೆ ಕಾಣುತ್ತಿದ್ದ ಅಪ್ಪು

Puneeth Rajkumar: ಅಪ್ಪು ಸೀನ್ ಮುಗಿದ ಬಳಿಕ ಒಬ್ಬರೇ ಬಂದು ಎಲ್ಲರನ್ನು ಪ್ರತ್ಯೇಕವಾಗಿ ಎಲ್ಲಿಂದ ಬಂದಿದ್ದೀರ? ಮನೇಲಿ ಎಲ್ಲರೂ ಕ್ಷೇಮವಾಗಿದ್ದೀರ ಎಂದು ವಿಚಾರಿಸಿದ ಅಪ್ಪುವನ್ನು ಕಂಡು ನಾವೆಲ್ಲ ನಿಜಕ್ಕೂ ಆಶ್ಚರ್ಯಚಕಿತವಾಗಿದ್ದಂತೂ ಸುಳ್ಳಲ್ಲ.

VISTARANEWS.COM


on

Appu Birthday
Koo

| ಕಾರ್ತಿಕ್ ಸೂರ್ಯ

ಚಿಕ್ಕ ವಯಸ್ಸಿನಲ್ಲಿ ಚಲನಚಿತ್ರ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿದ್ದ ನನಗೆ, ಚಿತ್ರವನ್ನು ನೋಡಿದ ಕೂಡಲೇ ಯಾವ ಚಿತ್ರ?ಯಾರು ನಟ ನಟಿಯರು? ನಿರ್ದೇಶಕ ಯಾರು? ಸಂಗೀತ ನಿರ್ದೇಶಕ ಯಾರು? ಸಾಹಿತ್ಯ ಬರೆದವರು ಯಾರು ? ಹಾಡು ಹಾಡಿದವರು ಯಾರು? ಎಂದು ಕ್ಷಣಾರ್ಧದಲ್ಲೇ ಉತ್ತರಿಸುತ್ತಿದ್ದೆ. ಈ ಪರಿ ಹುಚ್ಚು ಹೊಂದಿದ್ದ ನನಗೆ, ಮುಂದೆ ಬರಬರುತ್ತಾ ಚಿತ್ರನಟರೆಂದರೆ ಕೇವಲ ತೆರೆಯ ಮೇಲೆ ಹೀರೋಗಳಷ್ಟೇ, ಕೇವಲ ಮನರಂಜನೆಗೆ ಮಾತ್ರ ಹೀರೋಗಳು, ಚಿತ್ರದಲ್ಲಿ ಇರುವ ಹಾಗೆ ನಿಜ ಜೀವನದಲ್ಲಿ ಅವರು ಇರಲಾರರು, ಹಲವು ಸುದ್ದಿಗಳನ್ನು ನೋಡಿ ಕೇಳಿದ ಪರಿಣಾಮ ಆ ನಟ ಹಾಗಂತೆ ಈ ನಟ ಹೀಗಂತೆ ಎಂದು ಕೆಟ್ಟ ಅಭಿಪ್ರಾಯಗಳನ್ನು ಹೊಂದಿದ್ದೆ. ಆದರೂ ಕನ್ನಡ ಚಿತ್ರಗಳನ್ನು ಚಿತ್ರಮಂದಿರಲ್ಲಿ ಹೋಗಿ ವೀಕ್ಷಣೆ ಮಾಡುವುದು ಕಡಿಮೆ ಏನು ಆಗಿರಲಿಲ್ಲ. ಎಲ್ಲ ನಟರನ್ನು ಒಂದೇ ರೀತಿ ಕಾಣುತ್ತಿದ್ದ ನಾನು, ಎಲ್ಲ ನಟರ ಚಿತ್ರಗಳನ್ನು ಚಿತ್ರಮಂದಿರದಲ್ಲಿ ವೀಕ್ಷಣೆ ಮಾಡುತ್ತಿದ್ದೆ. ಆ ನಟ ಮೇಲೆ ಈ ನಟ ಕೆಳಗೆ ಅವರು ನಮ್ಮ ಬಾಸ್ ಇವರು ನಮ್ಮ ಬಾಸ್ ಅನ್ನೋ ಅಭಿಪ್ರಾಯ ನನ್ನಲ್ಲಿರಲಿಲ್ಲ. ಹೊಸ ನಟರ ಚಿತ್ರಗಳನ್ನು ಸಹ ನೋಡುತ್ತಿದ್ದೆ. ಎಲ್ಲ ನಟರಂತೆಯೇ ಪುನೀತ್ (Puneeth Rajkumar) ಅವರ ಮೇಲೆಯೂ  ಸಾಮಾನ್ಯ ಅಭಿಪ್ರಾಯವೇ ನನ್ನಲ್ಲಿತ್ತು. ಆದರೆ ಆ ಒಂದು ಘಟನೆ ನಿಜಕ್ಕೂ ಅಪ್ಪು ವಿಚಾರದಲ್ಲಿ  ಆಶ್ಚರ್ಯಚಕಿತನಾಗಿಸಿತ್ತು.

ನಾನು ಹುಟ್ಟಿ ಬೆಳೆದ ಪೀಣ್ಯದಿಂದ ಸ್ವಲ್ಪ ದೂರದಲ್ಲೇ HMT ವಾಚ್ ಕಾರ್ಖಾನೆಯಿದ್ದು, ಈ ಸ್ಥಳವು ಕನ್ನಡ ಚಿತ್ರರಂಗದ ಶೂಟಿಂಗ್ ಹಾಟ್ ಸ್ಪಾಟ್ ಎಂದರೆ ತಪ್ಪಾಗಲಿಕ್ಕಿಲ್ಲ. ಶೂಟಿಂಗ್ ನಡೆಯುತ್ತಿದೆ ಎಂದು ನಮಗೆ ತಿಳಿದ ಕೂಡಲೇ ಶೂಟಿಂಗ್ ಜಾಗಕ್ಕೆ ನಮ್ಮ ಗ್ಯಾಂಗ್ ಹಾಜರ್ ಆಗುತ್ತಿದ್ದ ಸಮಯವದು. ಅತಿ ಹೆಚ್ಚು ಫೈಟಿಂಗ್ ಸನ್ನಿವೇಶಗಳ ಚಿತ್ರೀಕರಣ ನಡೆಯುವ ಈ ಜಾಗದಲ್ಲಿ  ಈಗಲೂ ಅನೇಕ ಚಿತ್ರಗಳ ಶೂಟಿಂಗ್ ಭರದಿಂದ ಸಾಗುತ್ತಲೇ ಇರುತ್ತದೆ. ಅದರಲ್ಲೂ ಪುನೀತ್ ರಾಜಕುಮಾರ್ ಅವರ ಚಿತ್ರಗಳು ಅತಿ ಹೆಚ್ಚು ಚಿತ್ರೀಕರಣ ಇಲ್ಲೇ ನಡೆದಿವೆ. ಅಪ್ಪು, ವೀರ ಕನ್ನಡಿಗ, ಯಾರೇ ಕೂಗಾಡಲಿ, ಮಿಲನ… ಹೀಗೆ ಅಪ್ಪು ಅವರ ಅನೇಕ ಚಿತ್ರಗಳ ಸನ್ನಿವೇಶಗಳು HMTಯಲ್ಲೇ ಚಿತ್ರೀಕರಣಗೊಂಡಿವೆ. ಪ್ರಥಮವಾಗಿ ಪುನೀತ್ ಅವರನ್ನು ವೀರ ಕನ್ನಡಿಗ ಚಿತ್ರೀಕರಣದ ಸಮಯದಲ್ಲಿ ನೋಡಿ ಕೈ ಕುಲುಕಿದ್ದೆ.

ಹೀಗೆ ಒಂದು ದಿನ ನಾನು ಮತ್ತು ನನ್ನ ಗೆಳೆಯ ಬೈಕ್ ನಲ್ಲಿ HMT ಯತ್ತ ಸಾಗುತ್ತಿರಬೇಕಾದರೆ ಪಾಳು ಬಿದ್ದ HMT ಕಾರ್ಖಾನೆಯೊಳಗೆ ಯಾವುದೋ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ನನ್ನ ಗೆಳೆಯ ಬಾ ಮಗ ಯಾವ ಸಿನಿಮಾ ನೋಡೋಣ ಅಂತ ಹೇಳಿ ಬೈಕ್ ಪಾರ್ಕ್ ಮಾಡಿಸಿ ಶೂಟಿಂಗ್ ಜಾಗಕ್ಕೆ ಕರೆತಂದ. ನಾವು ನಿಂತಿದ್ದ ಗೇಟ್ ನಿಂದ ಸುಮಾರು 200 ಮೀಟರ್ ದೂರದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಗೇಟ್‌ನಲ್ಲಿದ್ದ ಕಾವಲುಗಾರನನ್ನು ಅಣ್ಣ ಯಾವ ಚಿತ್ರ ಅಣ್ಣ ಅಂತ ಕೇಳಿದಾಗ ಅಪ್ಪುರವರ ಅಂಜನಿಪುತ್ರ ಚಿತ್ರ ಎಂದು ಹೇಳಿದ ಕೂಡಲೇ ಹೋ ಹೌದಾ !! ಪುನೀತ್ ರಾಜಕುಮಾರ್‌ ಇದ್ದಾರಾ ಅಣ್ಣ ಅಂತ ನನ್ನ ಗೆಳೆಯ ಕೇಳಿದ,  ಹು ಕಣಪ್ಪ ಅಂತ ಕಾವಲುಗಾರ ಹೇಳಿದ ಕೂಡಲೇ ನನ್ನ ಗೆಳೆಯ ಮಗ ಪ್ಲೀಸ್ ಮಗ ನೋಡಿಕೊಂಡು ಹೋಗೋಣ ಪ್ಲೀಸ್ ಪ್ಲೀಸ್ ಅಂತ ಹಠ ಮಾಡಿದ. ನಾನು ಸರಿ ಆಯ್ತು ಅಂತ ಗೇಟ್ ನಲ್ಲೇ ಪುನೀತ್ ಅವರಿಗಾಗಿ ಕಾಯುತ್ತ ನಿಂತಿದ್ದೆವು. ಮಧ್ಯಾಹ್ನದ ಸಮಯ ಆ ಬಿಸಿಲಿನ ಝಳದಲ್ಲಿ ನಮ್ಮೊಡನೆ ಸುಮಾರು 30 ಜನ ನಿಂತಿದ್ದರು.

ಇದನ್ನೂ ಓದಿ: 100 Days Of Gandhadagudi: 100 ದಿನ ಪೂರೈಸಿದ ಪುನೀತ್‌ ಅಭಿನಯದ ಗಂಧದಗುಡಿ ಸಿನಿಮಾ, ಅಪ್ಪು ಪತ್ನಿ ಅಶ್ವಿನಿ ಸಂತಸ

ಒಂದು ಸನ್ನಿವೇಶ ಚಿತ್ರೀಕರಣ ಮುಗಿದ ಬಳಿಕ ಹೊರ ಬಂದ ಪುನೀತ್ ಕ್ಯಾರವಾನ್ ಕಡೆ ಹೆಜ್ಜೆ ಹಾಕುತ್ತಿದ್ದರು. ಇದನ್ನ ಕಂಡ ಎಲ್ಲರೂ ಅಪ್ಪು , ಅಪ್ಪು ಎಂದು ಕೂಗು ಹಾಕಲು ಶುರು ಮಾಡಿದರು. ಅಷ್ಟು ದೂರದಲ್ಲಿದ್ದ ಅಪ್ಪು ನಮ್ಮ ಕಡೆ ತಿರುಗಿ ನೋಡಿ ಹಾಯ್ ಮಾಡಿ ಕ್ಯಾರವಾನ್ ಕಡೆ ತೆರಳಲಿಲ್ಲ. ಎಲ್ಲರೂ ಕ್ಷಣ ಕಾಲ ಪುಳಕಿತರಾದರು. ಇಷ್ಟಕ್ಕೆ ಒಬ್ಬ ನಟ ಸುಮ್ಮನಾಗಿ ತಮ್ಮ ಕಾರ್ಯದ ಕಡೆ ಗಮನ ಕೊಡಬಹುದಿತ್ತು. ಆದರೆ ಅಪ್ಪು ಹಾಗೆ ಮಾಡಲಿಲ್ಲ ಅಷ್ಟು ದೂರದಿಂದ ನಾವಿದ್ದಲ್ಲಿಗೆ ನಡೆದುಕೊಂಡು ಬಂದು ನಮ್ಮನ್ನೆಲ್ಲ ನೋಡಿ ಖುಷಿಗೊಂಡು ನೋಡಿ “ತುಂಬಾ ಬಿಸಿಲಿದೆ ಆ ಕಡೆ ಸೈಡ್ ನಲ್ಲಿ ನೆರಳಲ್ಲಿ ನಿಂತಿರಿ, ಒಂದೇ ಒಂದು ಸೀನ್ ಬಾಕಿ ಇದೆ, ಅದು ಮುಗಿಸ್ಕೊಂಡು ಬಂದು ನಿಮ್ಮನ್ನ ಮಾತಾಡಿಸ್ತೀನಿ” ಅಂತ ನಗುಮುಖದಲ್ಲಿ ಹೇಳಿ ಹೊರಟರು. ಎಲ್ಲರ ಮುಖದಲ್ಲಿ ಏನೋ ಒಂದು ರೀತಿ ಸಂತೋಷ. ಅಪ್ಪು ಸೀನ್ ಮುಗಿದ ಕೂಡಲೇ ಏಕಾಂಗಿಯಾಗಿ ಬಂದು ಎಲ್ಲರನ್ನು ಪ್ರತ್ಯೇಕವಾಗಿ ಎಲ್ಲಿಂದ ಬಂದಿದ್ದೀರ? ಮನೇಲಿ ಎಲ್ಲರೂ ಕ್ಷೇಮವಾಗಿದ್ದೀರ ಎಂದು ವಿಚಾರಿಸಿದ ಅಪ್ಪುವನ್ನು ಕಂಡು ನಾವೆಲ್ಲ ನಿಜಕ್ಕೂ ಆಶ್ಚರ್ಯಚಕಿತವಾಗಿದ್ದಂತೂ ಸುಳ್ಳಲ್ಲ. ಚಿಕ್ಕ ವಯಸ್ಸಿನಿಂದ ಅನೇಕ ನಟರನ್ನು ಹತ್ತಿರದಿಂದ ನೋಡಿರುವ ನನಗೆ ಅಭಿಮಾನಿಗಳ ಕಡೆ ತಿರುಗಿಯೂ ನೋಡದ, ಕೆಲ ನಟರ ಮಧ್ಯೆ ಅಪ್ಪು ಸಾಮಾನ್ಯರನ್ನು ಅಸಮಾನ್ಯರಂತೆ ಕಂಡು ಗೌರವ ಕೊಟ್ಟು ಮಾತನಾಡಿಸುತ್ತಿದ್ದ ರೀತಿ ಕಂಡು ಬೆರಗಾಗದೆ ಇರಲು ಸಾಧ್ಯವಾಗಲಿಲ್ಲ.

ಇಂತಹ ಆದರ್ಶಗಳನ್ನು ಹೊಂದಿದ್ದ ಅಪ್ಪು ನೀವಿನ್ನು ಇರಬೇಕಿತ್ತು…  ಈ ಕನ್ನಡಿಗರಿಗಾಗಿ ಮತ್ತೊಮ್ಮೆ ಹುಟ್ಟಿ ಬನ್ನಿ… ಹ್ಯಾಪಿ ಬರ್ತ್‌ಡೇ ಅಪ್ಪು…

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Suicide Case: ಕೌಟುಂಬಿಕ ಕಲಹ; ಪತ್ನಿ ಆತ್ಮಹತ್ಯೆ ಕಂಡು ಪತಿಯೂ ನೇಣಿಗೆ ಶರಣು

Suicide Case: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಿಹಳ್ಳಿಯಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

VISTARANEWS.COM


on

Edited by

Man commits suicide after wife commits suicide in Srirangapatna
Koo

ಮಂಡ್ಯ: ಕೌಟುಂಬಿಕ ಕಲಹಕ್ಕೆ ಮನನೊಂದು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ. ಮಾಡಿಕೊಂಡಿರುವ ಘಟನೆ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ವಿದ್ಯಾ (32), ಪುರುಷೋತ್ತಮ (46) ಮೃತರು. ಮೊದಲಿಗೆ ಪತಿ ಕೆಲಸಕ್ಕೆ ತೆರಳಿದ್ದಾಗ ಪತ್ನಿ ವಿದ್ಯಾ (32) ಗುರುವಾರ ಸಂಜೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಿಷಯ ತಿಳಿದು ಮನೆಗೆ ಬಂದ ಪತಿ ಪುರುಷೋತ್ತಮ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಶರಣಾಗಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road Accident : ಹಾಸನದಲ್ಲಿ ಬೈಕ್‌ ಮೇಲೆಯೇ ಹರಿದ ಬಸ್‌: ಸವಾರ ಸ್ಥಳದಲ್ಲೇ ಮೃತ್ಯು, ಯುವತಿಗೆ ಗಾಯ

ಮಂಗಳೂರಿನಲ್ಲಿ ಬಸ್ಸಿನಡಿಗೆ ಬಿದ್ದು ಮಹಿಳೆ ಸಾವು

ಮಂಗಳೂರು: ನಗರದ ಬೆಂದೂರುವೆಲ್ ವೃತ್ತದಲ್ಲಿ ಬಸ್ಸಿನಡಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಖಾಸಗಿ ಬಸ್ಸಿನಿಂದ ಇಳಿದು ರಸ್ತೆ ದಾಟುವಾಗ ಅದೇ ಬಸ್ಸಿನಡಿಗೆ ಬಿದ್ದು ಮಹಿಳೆ ಸಾವಿಗೀಡಾಗಿದ್ದಾರೆ. ಐರಿನ್ ಡಿಸೋಜ (65) ಮೃತ ಮಹಿಳೆ. ಅಪಘಾತದ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರಿನಲ್ಲಿ ಖಾಸಗಿ ಬಸ್ಸಿನ ಧಾವಂತಕ್ಕೆ ನಾಲ್ಕು ದಿನದಲ್ಲಿ ಎರಡನೇ ಬಲಿ ಇದಾಗಿದೆ.

ಪರೀಕ್ಷೆ ಭಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ; ನದಿಯಲ್ಲಿ ಶವ ಪತ್ತೆ

ಕಡಬ (ಮಂಗಳೂರು): ಮಾರ್ಚ್‌ 31ರಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಳ್ಳುತ್ತಿದೆ. ಶಿಕ್ಷಣ ಇಲಾಖೆ ಮತ್ತು ವಿದ್ಯಾರ್ಥಿಗಳು ಇದಕ್ಕೆ ಎಲ್ಲ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಇಷ್ಟರ ನಡುವೆಯೇ ಪರೀಕ್ಷೆ ಭಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Student death) ಮಾಡಿಕೊಂಡಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಗುಂಡಿಮಜಲ್‌ ಗ್ರಾಮದಲ್ಲಿ ಅದ್ವೈತ್‌ ಶೆಟ್ಟಿ (15) ಎಂಬ ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸಿಕೊಳ್ಳುತ್ತಿದ್ದ ಅದ್ವೈತ್‌ ಬುಧವಾರ ಸಂಜೆಯಿಂದ ನಾಪತ್ತೆಯಾಗಿದ್ದ. ಮನೆಯಿಂದ ಹೊರಗೆ ಹೋದವನು ಕಣ್ಮರೆಯಾಗಿದ್ದ ಆತನಿಗಾಗಿ ಮನೆಯವರು ರಾತ್ರಿ ಇಡೀ ಹುಡುಕಾಟ ನಡೆಸಿದರು. ಬೆಳಗ್ಗೆವರೆಗೂ ಬಾಲಕ ಪತ್ತೆಯಾಗಿರಲಿಲ್ಲ.

ಗುರುವಾರ ಮುಂಜಾನೆಯೂ ಹುಡುಕಾಟ ಮುಂದುವರಿದಾಗ ಕುಮಾರಧಾರಾ ನದಿಯ ನಾಕೂರು ಗಯಾ ಎಂಬಲ್ಲಿ ನದಿಯ ಪಕ್ಕದಲ್ಲಿ ಸ್ಕೂಲ್ ಬ್ಯಾಗ್ ಪತ್ತೆಯಾಯಿತು. ಬಳಿಕ ಪುತ್ತೂರು ಅಗ್ನಿಶಾಮಕ ದಳದಿಂದ ನದಿಯಲ್ಲಿ ಶೋಧ ಕಾರ್ಯ ನಡೆಸಲಾಯಿತು. ಈ ವೇಳೆ ನದಿಯಲ್ಲಿ ಮೃತದೇಹ ಪತ್ತೆಯಾಯಿತು.

ಕಡಬ ಹಾಗೂ ಬೆಳ್ಳಾರೆ ಪೊಲೀಸರು ಆಗಮಿಸಿದ್ದು, ಪೋಷಕರ ಬಳಿ ವಿವರಣೆ ಪಡೆದಿದ್ದಾರೆ. ಮನೆಯವರಿಗೂ ಈ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮಾರ್ಚ್‌ 31ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿರುವುದರಿಂದ ಅದರ ಭಯದಿಂದಲೇ ಪ್ರಾಣ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.

Continue Reading

ಕರ್ನಾಟಕ

SELCO India: ಡಿಜಿಟಲ್ ಕಂದಕ ದಾಟಲು ಸೌರಚಾಲಿತ ವ್ಯವಸ್ಥೆ ಅತ್ಯುತ್ತಮ ಸಾಧನ: ಮನಮೋಹನ್ ಲಾಲ್ವಾನಿ

SELCO India: ಎಲ್ಲರಿಗೂ ಡಿಜಿಟಲ್ ಸೌಲಭ್ಯಗಳು ಕೈಗೆಟಕುವಂತೆ ಮಾಡಲು ನಮ್ಮ ನಡುವೆ ಇರುವ ಡಿಜಿಟಲ್ ಕಂದಕವನ್ನು ತುಂಬಬೇಕಿದೆ ಎಂದು ನೆಕ್ಸ್ಟ್ ಎಜುಕೇಷನ್‌ನ ಉಪಾಧ್ಯಕ್ಷ ಮನಮೋಹನ್ ಲಾಲ್ವಾನಿ ತಿಳಿಸಿದ್ದಾರೆ.

VISTARANEWS.COM


on

Edited by

Manmohan Lalwani says Solar powered system best tool to cross digital gap
Koo

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಶೈಕ್ಷಣಿಕವಾಗಿ ಸೃಷ್ಟಿಯಾಗುವ ವಿದ್ಯುನ್ಮಾನ (ಡಿಜಿಟಲ್) ಕಂದಕವನ್ನು ಯಶಸ್ವಿಯಾಗಿ ದಾಟಲು (SELCO India) ಸೌರಚಾಲಿತ ಶೈಕ್ಷಣಿಕ ಕಾರ್ಯಕ್ರಮವು (ಡಿಇಪಿ) ಅತ್ಯುತ್ತಮ ಪರ್ಯಾಯ ಸಾಧನವಾಗಿದೆ ಎಂದು ನೆಕ್ಸ್ಟ್ ಎಜುಕೇಷನ್‌ನ ಉಪಾಧ್ಯಕ್ಷ ಮನಮೋಹನ್ ಲಾಲ್ವಾನಿ ಅಭಿಪ್ರಾಯಪಟ್ಟರು.

ನಗರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನಲ್ಲಿ ಗುರುವಾರ ನಡೆದ ಸೆಲ್ಕೊ ಸಂಸ್ಥೆಯ 29ನೇ ಸಂಸ್ಥಾಪನಾ ದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.

ಯುನೆಸ್ಕೋ ಅಂದಾಜಿಸಿರುವಂತೆ ಭಾರತದಲ್ಲಿ ಸುಮಾರು 26 ಕೋಟಿ ಜನರಿಗೆ ಸರ್ಕಾರಿ ಶಾಲೆಗಳಲ್ಲಿರುವ ಡಿಜಿಟಲ್ ಸೌಲಭ್ಯಗಳು ಇನ್ನೂ ಕೈಗೆಟಕುತ್ತಿಲ್ಲ. ಹೀಗಾಗಿ ನಮ್ಮ ನಡುವೆ ಇರುವ ಇಂತಹ ಡಿಜಿಟಲ್ ಕಂದಕವನ್ನು ತುಂಬಬೇಕಿದೆ. ಸೆಲ್ಕೋ ಜತೆಗಿನ ಸಹಪಯಣದ ಸವಿನೆನಪಿಗಾಗಿ ನೆಕ್ಸ್ಟ್ ಎಜುಕೇಷನ್ ಸಂಸ್ಥೆಯು ರಾಜ್ಯದ ನಾಲ್ಕು ಸರ್ಕಾರಿ ಶಾಲೆಗಳಿಗೆ ಸಂಪೂರ್ಣ ಉಚಿತವಾಗಿ ವಿದ್ಯುನ್ಮಾನ ಶೈಕ್ಷಣಿಕ ವ್ಯವಸ್ಥೆಯ ಮೂಲಭೂತ ಸೌಕರ್ಯವನ್ನು ಒದಗಿಸಲಿದೆ ಎಂದು ಘೋಷಿಸಿದರು.

ಬೈಲಕುಪ್ಪೆಯ ತ್ಸೋ-ಇ-ಖಾಂಗಸರ್ ಚಾರಿಟಿ ಆಸ್ಪತ್ರೆಯ ಕಾಯನಿರ್ವಾಹಕ ಕಾರ್ಯದರ್ಶಿ ಸೋನಮ್ ಯೌಗ್ಯಾಲ್ ಮಾತನಾಡಿ, ಮುಂಬರುವ ದಿನಗಳಲ್ಲಿ ಎಲ್ಲ ವ್ಯವಸ್ಥೆಗಳೂ ಸೌರಮಯವಾಗುವುದರಲ್ಲಿ ಸಂಶಯವಿಲ್ಲ. ಅನಿಯಮಿತ ವಿದ್ಯುತ್ ವ್ಯವಸ್ಥೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಬಹಳ ಸಮಸ್ಯೆಗಳಾಗುತ್ತಿವೆ. ಈ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳಬೆಕಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳು ಅತ್ಯಂತ ತ್ವರಿತವಾಗಿ ಸೌರೀಕರಣಗೊಳ್ಳಬೇಕಿದೆ ಎಂದರು.

ಸಮಾರಂಭದಲ್ಲಿ ಸಾಧಕ ಮಹಿಳೆಯರಾದ ಕಲಬುರ್ಗಿಯ ಸೌರ ಉದ್ಯಮಿ ಭುವನೇಶ್ವರಿ, ಬೆಳಗಾವಿಯ ಸೌರ ಇಂಧನ ಸೇವೆಗಳ ಉದ್ಯಮಿ ರೇಣುಕಾತಾಯಿ ಪರಪ್ಪಗೊಳ್ ಮತ್ತು ಸೆಲ್ಕೊ ನೌಕರ ಎನ್. ಲೋಕೇಶ್ ಅವರನ್ನು ಹಾಗೂ ಸೌರಚಾಲಿತ ಶೈಕ್ಷಣಿಕ ಕಾರ್ಯಕ್ರಮ (ಡಿಇಪಿ)ವನ್ನು ಅಳವಡಿಸಿಕೊಂಡು ಅತ್ಯುತ್ತಮ ಸಾಧನೆ ಮಾಡಿರುವ ಐದು ಶಾಲೆಗಳ ಶಿಕ್ಷಕ ಪ್ರತಿನಿಧಿಗಳನ್ನು ನೆಕ್ಸ್ಟ್ ಎಜುಕೇಷನ್ ವತಿಯಿಂದ ಗೌರವಿಸಲಾಯಿತು.

ಪುಸ್ತಕ ಬಿಡುಗಡೆ

ಸೆಲ್ಕೊ ಸಂಸ್ಥೆಯಿಂದ ಕಳೆದ ವರ್ಷ ರಾಜ್ಯಾದ್ಯಂತ ಪತ್ರಕರ್ತರಿಗಾಗಿ ಏರ್ಪಡಿಸಲಾಗಿದ್ದ 4 ಕಾರ್ಯಾಗಾರಗಳ ಅವಲೋಕನ ಕುರಿತ ಪುಸ್ತಕವನ್ನು ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು. ಸೆಲ್ಕೋ ಸಂಸ್ಥಾಪಕರು ಮತ್ತು ಮ್ಯಾಗ್ಸೆಸ್ಸೆ ಪುರಸ್ಕೃತರಾದ ಹರೀಶ್ ಹಂದೆ, ಸೆಲ್ಕೊ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ, ಸೆಲ್ಕೋ ಫೌಂಡೇಷನ್‌ ಮುಖ್ಯ ಹಣಕಾಸು ಅಧಿಕಾರಿ ವಿ.ಕೆ. ಜೋಬಿ, ನಿರ್ದೇಶಕರಾದ ಹುದಾ ಜಾಫರ್, ಸೆಲ್ಕೋ ಇಂಡಿಯಾದ ಮಹಾ ಪ್ರಬಂಧಕರಾದ ಜಗದೀಶ್ ಪೈ ಹಾಗೂ ಸಿಬ್ಬಂದಿ ಹಾಜರಿದ್ದರು.

Continue Reading

ಕರ್ನಾಟಕ

Tumkur News: ಒತ್ತುವರಿ ತೆರವಿಗೆ ಆಕ್ಷೇಪಿಸಿದ್ದಕ್ಕೆ ಲಾಠಿ ಚಾರ್ಜ್ ಮಾಡಿದ ಅರಣ್ಯ ಸಿಬ್ಬಂದಿ; 4 ರೈತರಿಗೆ ಗಂಭೀರ ಗಾಯ

Tumkur News: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಅರಣ್ಯ ಪ್ರದೇಶ ಒತ್ತುವರಿ ತೆರವಿಗೆ ರೈತರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಅರಣ್ಯ ಸಿಬ್ಬಂದಿ ಲಾಠಿ ಪ್ರಹಾರ ಮಾಡಿದ್ದಾರೆ.

VISTARANEWS.COM


on

Edited by

Four farmers seriously injured in lathi charge by forest department personnel
Koo

ತುಮಕೂರು: ಅರಣ್ಯ ಪ್ರದೇಶ ಒತ್ತುವರಿ ತೆರವಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ರೈತರ ಮೇಲೆ ಅರಣ್ಯ ಸಿಬ್ಬಂದಿ ಮನಸೋ ಇಚ್ಛೇ ಲಾಠಿ ಚಾರ್ಜ್‌ ಮಾಡಿದ್ದರಿಂದ ನಾಲ್ವರು ರೈತರಿಗೆ ಗಂಭೀರ ಗಾಯಗಳಾಗಿವೆ. ಜಿಲ್ಲೆಯ (Tumkur News) ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಗಂಗಯ್ಯನಪಾಳ್ಯದಲ್ಲಿ ಘಟನೆ ನಡೆದಿದ್ದು, ಅರಣ್ಯ ಇಲಾಖೆಗೆ ಲಾಠಿ ಚಾರ್ಜ್ ಮಾಡುವ ಅಧಿಕಾರ ಕೊಟ್ಟವರು ಯಾರು ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.,

ಬಗರ್ ಹುಕುಂ ಭೂಮಿಯಲ್ಲಿ ಟ್ರಂಚ್ ಹೊಡೆಯಲು ಗ್ರಾಮಸ್ಥರು ವಿರೋಧಿಸಿದ್ದರು. ಆದರೆ, ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲು ಅಧಿಕಾರಿಗಳು ಮುಂದಾಗಿದ್ದರಿಂದ ಕಳೆದ 15 ದಿನಗಳಿಂದ ಅರಣ್ಯ ಇಲಾಖೆ ಮತ್ತು ರೈತರ ನಡುವೆ ಜಟಾಪಟಿ ನಡೆಯುತ್ತಿತ್ತು.

ಗುರುವಾರ ನೂರಕ್ಕೂ ಹೆಚ್ಚು ಸಿಬ್ಬಂದಿ ಜತೆ ಬಂದು ಅಧಿಕಾರಿಗಳು ಟ್ರಂಚ್ ಹೊಡೆಯಲು ಮುಂದಾಗಿದ್ದರು. ಈ ವೇಳೆ ರೈತರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೇರಿದಾಗ ಅರಣ್ಯ ಸಿಬ್ಬಂದಿ ರೈತರ ಮೇಲೆ ಲಾಠಿ ಬೀಸಿದ್ದಾರೆ. ಈ ವೇಳೆ ಮಹಿಳೆಯರು ಸೇರಿ ಹತ್ತಾರು ರೈತರಿಗೆ ಪೆಟ್ಟಾಗಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಅರಣ್ಯ ಸಿಬ್ಬಂದಿಗೂ ಗಾಯಗಳಾಗಿವೆ.

ಇದನ್ನೂ ಓದಿ | Road Accident : ಹಾಸನದಲ್ಲಿ ಬೈಕ್‌ ಮೇಲೆಯೇ ಹರಿದ ಬಸ್‌: ಸವಾರ ಸ್ಥಳದಲ್ಲೇ ಮೃತ್ಯು, ಯುವತಿಗೆ ಗಾಯ

ಗಲಾಟೆ ವೇಳೆ ರೈತ ಹೋರಾಟದ ನೇತೃತ್ವ ವಹಿಸಿದ್ದ ರೈತ ಮುಖಂಡ ದೊಡ್ಡನಂಜಯ್ಯ ಅವರನ್ನು ಕಾಲಲ್ಲಿ ತುಳಿದು ಜೀಪ್‌ನಲ್ಲಿ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಅರಣ್ಯ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ. ರೈತ ಮುಖಂಡ ದೊಡ್ಡನಂಜಯ್ಯ ಅವರನ್ನು ವಾಪಸ್‌ ಕಳುಹಿಸಿ ಎಂದು ಆಗ್ರಹಿಸಿ ಸ್ಥಳದಲ್ಲೇ ರೈತರು ಪ್ರತಿಭಟನೆ ಕೈಗೊಂಡಿದ್ದಾರೆ. ಹೀಗಾಗಿ ಸ್ಥಳಕ್ಕೆ ಪೊಲೀಸರು ಆಗಮಿಸಿ ಮೊಕ್ಕಾಂ ಹೂಡಿದ್ದಾರೆ.

ಶ್ರೀರಾಮ ನವಮಿ ಮೆರವಣಿಗೆ ವೇಳೆ ಗುಂಪು ಘರ್ಷಣೆ; ಲಘು ಲಾಠಿ ಪ್ರಹಾರ

ಯಾದಗಿರಿ: ಜಿಲ್ಲೆಯ ಸುರಪುರ ನಗರದಲ್ಲಿ ಶ್ರೀರಾಮ ನವಮಿ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ದೇವರ ಮೆರವಣಿಗೆ ವೇಲೆ ಕಾಲು ತುಳಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು. ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಸುರಪುರ ಪಟ್ಣದ ಗಾಂಧಿ ವೃತ್ತದಲ್ಲಿ ರಾಮಸೇನೆಯಿಂದ ಆಂಜನೇಯ ಹಾಗೂ ಶ್ರೀರಾಮನ ಮೂರ್ತಿ ಮೆರವಣಿಗೆ ಮಾಡುವ ವೇಳೆ ಗಲಾಟೆ ನಡೆದಿದೆ. ಡಿಜೆ ಸೌಂಡ್‌ಗೆ ಡಾನ್ಸ್ ಮಾಡುವಾಗ ಒಬ್ಬರಿಗೊಬ್ಬರು ಕಾಲು ತುಳಿತ ವಿಚಾರಕ್ಕೆ ಜಗಳ ಆರಂಭವಾಗಿದೆ. ಹೀಗಾಗಿ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ.

Continue Reading

ಕರ್ನಾಟಕ

ChatGPT Subscription: ದಕ್ಷತೆ ಹೆಚ್ಚಳ; ನೌಕರರಿಗೆ ಚಾಟ್‌ಜಿಪಿಟಿ ಉಚಿತ ಸಬ್‌ಸ್ಕ್ರಿಪ್ಶನ್‌ ನೀಡಿದ ಬೆಂಗಳೂರು ಕಂಪನಿ

ChatGPT Subscription:‌ ಚಾಟ್‌ಜಿಪಿಟಿಯು ಬಹುತೇಕ ಕ್ಷೇತ್ರಗಳನ್ನು ಆವರಿಸುತ್ತಿದೆ. ಬೆಂಗಳೂರಿನ ಕ್ಯಾಪಿಟಲ್‌ ಮೈಂಡ್‌ ಎಂಬ ಕಂಪನಿಯು ಚಾಟ್‌ಜಿಪಿಟಿಯ ಮಹತ್ವವನ್ನು ಅರಿತು, ಅದರ ನೋಂದಣಿಯನ್ನು ಉದ್ಯೋಗಿಗಳಿಗೆ ಉಚಿತವಾಗಿ ನೀಡಲು ತೀರ್ಮಾನಿಸಿದೆ.

VISTARANEWS.COM


on

Edited by

Bengaluru company to gift ChatGPT Plus subscription to employees after seeing rise in productivity
Koo

ಬೆಂಗಳೂರು: ಚಾಟ್‌ಜಿಪಿಟಿ ಚಾಟ್‌ಬಾಟ್‌ ಬಗ್ಗೆಯೇ ಈಗ ಎಲ್ಲಡೆ ಮಾತು ಕೇಳಿಬರುತ್ತಿವೆ. ಅದರಲ್ಲೂ, ಕೃತಕ ಬುದ್ಧಿಮತ್ತೆಯಿಂದ (Artificial Intelligence) ಇದು ಕಾರ್ಯನಿರ್ವಹಿಸುತ್ತಿರುವ ಕಾರಣ ಚಾಟ್‌ಜಿಪಿಟಿ ತಂತ್ರಜ್ಞಾನವನ್ನು ಬಹುತೇಕರು ಬಳಸುತ್ತಿದ್ದಾರೆ. ಹಾಗೆಯೇ, ಇದು ಯಾವುದೇ ವಿಷಯದ ಬಗ್ಗೆ ಲೇಖನ ಬರೆಯುವುದರಿಂದ ಹಿಡಿದು, ಕೋಡಿಂಗ್‌ವರೆಗೆ ಎಲ್ಲ ಕೆಲಸ ಮಾಡುತ್ತಿರುವ ಕಾರಣ ಮುಂದೊಂದು ದಿನ ಚಾಟ್‌ಜಿಪಿಟಿಯು ಉದ್ಯೋಗ ಕಸಿಯಲಿದೆ ಎಂಬ ಚರ್ಚೆಗಳು ಕೇಳಿಬರುತ್ತಿವೆ. ಹೀಗಿರುವ ಮಧ್ಯೆಯೇ, ಬೆಂಗಳೂರಿನ ಕಂಪನಿಯು ತನ್ನ ಉದ್ಯೋಗಿಗಳಿಗೆ ಚಾಟ್‌ಜಿಪಿಟಿಯ ಸಬ್‌ಸ್ಕ್ರಿಪ್ಶನ್‌ಅನ್ನು (ChatGPT Subscription) ಉಡುಗೊರೆಯಾಗಿದೆ ನೀಡಿದೆ.

ಬೆಂಗಳೂರು ಮೂಲದ ಕ್ಯಾಪಿಟಲ್‌ ಮೈಂಡ್‌ (Capital Mind) ಎಂಬ ಕಂಪನಿಯು ಉದ್ಯೋಗಿಗಳಿಗೆ ಉಚಿತವಾಗಿ ಚಾಟ್‌ಜಿಪಿಟಿ ಸಬ್‌ಸ್ಕ್ರಿಪ್ಶನ್‌ ನೀಡಿದೆ. ಇತ್ತೀಚೆಗೆ ಚಾಟ್‌ಜಿಪಿಟಿ ಬಳಕೆಯಿಂದ ಕಂಪನಿಯ ನೌಕರರ ಕಾರ್ಯದಕ್ಷತೆ ಹಾಗೂ ಉತ್ಪಾದಕೆಯು ಜಾಸ್ತಿಯಾದ ಕಾರಣ ಚಾಟ್‌ಜಿಪಿಟಿಯ ನೋಂದಣಿಯ ಶುಲ್ಕವನ್ನು ಕಂಪನಿಯೇ ಭರಿಸಲಿದೆ ಎಂದು ಘೋಷಿಸಲಾಗಿದೆ. ಚಾಟ್‌ಜಿಪಿಟಿಯ ನೋಂದಣಿ ಶುಲ್ಕವು ಮಾಸಿಕ 1,640‌ ರೂ. (20 ಡಾಲರ್) ಆಗಲಿದೆ. ಇಷ್ಟನ್ನೂ ಕಂಪನಿಯೇ ನೀಡಲಿದೆ.

ಕಂಪನಿ ಸಿಇಒ ಟ್ವೀಟ್

“ಚಾಟ್‌ಜಿಪಿಟಿಯಿಂದ ನೌಕರರ ಉತ್ಪಾದಕತೆ ಹೆಚ್ಚಾಗಿದೆ. ಅದರಲ್ಲೂ, ಕಿರಿಯ ಉದ್ಯೋಗಿಗಳ ಉತ್ಪಾದಕತೆಯು 5 ಪಟ್ಟು ಜಾಸ್ತಿಯಾಗಿದೆ. ಕೋಡಿಂಗ್‌ ರಚನೆ ಸೇರಿ ಹಲವು ವಿಧಗಳಲ್ಲಿ ನೌಕರರಿಗೆ ಚಾಟ್‌ಜಿಪಿಟಿಯು ಅನುಕೂಲವಾಗಿದೆ. ಬೇರೆ ವ್ಯಕ್ತಿಯ ನೆರವಿಲ್ಲದೆ, ಚಾಟ್‌ಜಿಟಿಪಿಯ ಸಹಾಯದಿಂದಲೇ ನೌಕರರು ಹಲವು ವಿಷಯಗಳನ್ನು ಕಲಿಯುತ್ತಿದ್ದಾರೆ. ಇದರಿಂದ ಕಂಪನಿಯ ಉತ್ಪಾದಕತೆಯು ಹೆಚ್ಚಾಗಿದೆ. ಎಲ್ಲ ಕೆಲಸವೂ ಈಗ ಉತ್ಕೃಷ್ಟ ಮಟ್ಟದಲ್ಲಿ ಸಾಗುತ್ತಿದೆ. ಹಾಗಾಗಿ, ನೌಕರರಿಗೆ ಉಚಿತವಾಗಿ ಚಾಟ್‌ಜಿಪಿಟಿ ನೋಂದಣಿ ನೀಡಲಾಗುತ್ತಿದೆ” ಎಂದು ಕಂಪನಿಯ ಸಿಇಒ ವಶಿಷ್ಠ ಅಯ್ಯರ್‌ ಮಾಹಿತಿ ನೀಡಿದ್ದಾರೆ.

ಉದ್ಯೋಗ/ಉದ್ಯಮ ವಲಯವನ್ನು ಚಾಟ್​ ಜಿಪಿಟಿ ಕಬಳಿಸುತ್ತಿದೆ, ಮನುಷ್ಯರು ಮಾಡುವ ಹಲವು ಸೃಜನಾತ್ಮಕ ಕೆಲಸಗಳನ್ನು ಇದು ಮಾಡುತ್ತಿರುವ ಕಾರಣ, ಅನೇಕರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂಬ ಆತಂಕವೂ ಮನೆಮಾಡಿದೆ. ಚಾಟ್​ಜಿಪಿಟಿ ಬಳಕೆ ಮಾಡುತ್ತಿರುವ ಅನೇಕರು ಒಂದಲ್ಲ ಒಂದು ಕಾರಣಕ್ಕೆ ಇದನ್ನು ಹೊಗಳುತ್ತಿದ್ದಾರೆ. ಲೇಖಕರು, ಕಂಟೆಂಟ್‌ ರೈಟರ್‌ಗಳು, ಕೋಡಿಂಗ್‌ ಕ್ಷೇತ್ರದಲ್ಲಿರುವವರಿಗೆ ಚಾಟ್‌ಜಿಪಿಟಿಯು ಮಾರಕ ಎಂಬ ವರದಿಗಳು ಕೂಡ ಲಭ್ಯವಾಗಿವೆ.

ಅಷ್ಟೇ ಅಲ್ಲ, ಇತ್ತೀಚೆಗಷ್ಟೇ ಚಾಟ್‌ ಜಿಪಿಟಿಯಿಂದ ನನ್ನ ನಾಯಿ ಬದುಕುಳಿಯಿತು ಎಂದು ವ್ಯಕ್ತಿಯೊಬ್ಬರು ಟ್ವಿಟರ್‌ನಲ್ಲಿ ತಿಳಿಸಿದ್ದರು. ಟ್ವಿಟರ್​ ಬಳಕೆದಾರರೊಬ್ಬರು ತಮ್ಮ ಟ್ವಿಟರ್​ ಅಕೌಂಟ್​ನಲ್ಲಿ ಚಾಟ್​ಬಾಟ್ ಚಾಟ್​ಜಿಪಿಟಿಯಿಂದ ತಮಗೆ ಆದ ಸಹಾಯವನ್ನು ಬರೆದುಕೊಂಡಿದ್ದಾರೆ. ‘ನನ್ನ ಪ್ರೀತಿಯ ನಾಯಿಯ ಜೀವನನ್ನು ಉಳಿಸಿದ್ದು ಚಾಟ್​ಜಿಪಿಟಿ’ ಎಂದು ಬರೆದುಕೊಂಡಿದ್ದು, ಅದು ಹೇಗೆ ಎಂಬುದನ್ನೂ ವಿವರಿಸಿದ್ದರು. @peakcooper ಎಂಬ ಟ್ವಿಟರ್​ ಅಕೌಂಟ್​​ನಲ್ಲಿ ಈ ಸ್ಟೋರಿ ಹಂಚಿಕೊಳ್ಳಲಾಗಿದೆ. ಅನಾರೋಗ್ಯಕ್ಕೀಡಾದ ನನ್ನ ನಾಯಿ ಸ್ಯಾಸಿಗೆ ಏನಾಗಿದೆ ಎಂದು ಕಂಡು ಹಿಡಿಯಲು ಪಶುವೈದ್ಯರಿಗೂ ಸಾಧ್ಯವಾಗಲಿಲ್ಲ. ಆದರೆ ಚಾಟ್​ಬಾಟ್ ಚಾಟ್​ಜಿಪಿಟಿ ನನ್ನ ನಾಯಿಯ ರೋಗ ಪತ್ತೆ ಮಾಡಿ, ಅದನ್ನು ಉಳಿಸಿಕೊಟ್ಟಿತು’ ಎಂದಿದ್ದರು.

ಇದನ್ನೂ ಓದಿ: ChatGpt: ನಾಯಿಯ ಜೀವ ಉಳಿಸಿದ ಚಾಟ್​ಜಿಪಿಟಿ; ಪಶುವೈದ್ಯರಿಗೂ ಗೊತ್ತಾಗಲಿಲ್ಲ ಎಂದ ಶ್ವಾನದ ಮಾಲೀಕ

Continue Reading
Advertisement
Man commits suicide after wife commits suicide in Srirangapatna
ಕರ್ನಾಟಕ3 hours ago

Suicide Case: ಕೌಟುಂಬಿಕ ಕಲಹ; ಪತ್ನಿ ಆತ್ಮಹತ್ಯೆ ಕಂಡು ಪತಿಯೂ ನೇಣಿಗೆ ಶರಣು

Amid wedding rumours, AAP MP Raghav Chadha picks up Parineeti Chopra from Delhi airport
ದೇಶ3 hours ago

Raghav-Parineeti: ಮತ್ತೆ ಒಟ್ಟಿಗೆ ಕಾಣಿಸಿದ ರಾಘವ್‌, ಪರಿಣೀತಿ; ವಾರದಲ್ಲಿ 3ನೇ ಭೇಟಿ, ಸ್ನೇಹಾನಾ? ಪ್ರೀತಿನಾ?

Do you know how much marks Virat Kohli got in iron pea maths?
ಕ್ರಿಕೆಟ್3 hours ago

Virat Kohli : ಕಬ್ಬಿಣದ ಕಡಲೆ ಗಣಿತದಲ್ಲಿ ವಿರಾಟ್​ ಕೊಹ್ಲಿ ಪಡೆದ ಮಾರ್ಕ್​ ಎಷ್ಟು ಗೊತ್ತಾ?

Manmohan Lalwani says Solar powered system best tool to cross digital gap
ಕರ್ನಾಟಕ3 hours ago

SELCO India: ಡಿಜಿಟಲ್ ಕಂದಕ ದಾಟಲು ಸೌರಚಾಲಿತ ವ್ಯವಸ್ಥೆ ಅತ್ಯುತ್ತಮ ಸಾಧನ: ಮನಮೋಹನ್ ಲಾಲ್ವಾನಿ

Four farmers seriously injured in lathi charge by forest department personnel
ಕರ್ನಾಟಕ3 hours ago

Tumkur News: ಒತ್ತುವರಿ ತೆರವಿಗೆ ಆಕ್ಷೇಪಿಸಿದ್ದಕ್ಕೆ ಲಾಠಿ ಚಾರ್ಜ್ ಮಾಡಿದ ಅರಣ್ಯ ಸಿಬ್ಬಂದಿ; 4 ರೈತರಿಗೆ ಗಂಭೀರ ಗಾಯ

Bengaluru company to gift ChatGPT Plus subscription to employees after seeing rise in productivity
ಕರ್ನಾಟಕ3 hours ago

ChatGPT Subscription: ದಕ್ಷತೆ ಹೆಚ್ಚಳ; ನೌಕರರಿಗೆ ಚಾಟ್‌ಜಿಪಿಟಿ ಉಚಿತ ಸಬ್‌ಸ್ಕ್ರಿಪ್ಶನ್‌ ನೀಡಿದ ಬೆಂಗಳೂರು ಕಂಪನಿ

No prejudice about Hindi, such imposition is not worth it
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು

Google Layoffs: Some employees may get up to Rs 2.60 crore in severance pay
ದೇಶ4 hours ago

Google Layoffs: ಗೂಗಲ್‌ನಿಂದ ವಜಾಗೊಂಡ ನೌಕರರಿಗೆ ಸಿಗಲಿದೆ 2.6 ಕೋಟಿ ರೂ., ಇವರಿಗೆ ಬೇರೆ ನೌಕರಿಯೇ ಬೇಕಿಲ್ಲ

Former bowler of Rajasthan Royals who joined Chennai Super Kings
ಕ್ರಿಕೆಟ್4 hours ago

IPL 2023 : ಚೆನ್ನೈ ಸೂಪರ್​ ಕಿಂಗ್ಸ್​ ಬಳಗ ಸೇರಿದ ರಾಜಸ್ಥಾನ್​ ರಾಯಲ್ಸ್​ನ ಮಾಜಿ ಬೌಲರ್​

ಕರ್ನಾಟಕ5 hours ago

Prof. Madhav Kulkarni: ಖ್ಯಾತ ಲೇಖಕ, ವಿಮರ್ಶಕ ಪ್ರೊ. ಮಾಧವ ಕುಲಕರ್ಣಿ ಇನ್ನಿಲ್ಲ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ8 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ14 hours ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 weeks ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

ಟ್ರೆಂಡಿಂಗ್‌

error: Content is protected !!