Purushothama Sanmana | ಗುಜರಾತ್‌ನ ಧನುಬೆನ್‌, ಮಗನ್ ಭಾಯ್ ರೈತ ಕುಟುಂಬಕ್ಕೆ ʻಪುರುಷೋತ್ತಮ ಸನ್ಮಾನʼ - Vistara News

ಕರ್ನಾಟಕ

Purushothama Sanmana | ಗುಜರಾತ್‌ನ ಧನುಬೆನ್‌, ಮಗನ್ ಭಾಯ್ ರೈತ ಕುಟುಂಬಕ್ಕೆ ʻಪುರುಷೋತ್ತಮ ಸನ್ಮಾನʼ

Purushothama Sanmana | ಜ.27ರಂದು ನಡೆಯುವ ಪುರುಷೋತ್ತಮ ಸನ್ಮಾನ ಕಾರ್ಯಕ್ರಮದಲ್ಲಿ ಸಾವಯವ ಕೃಷಿರಾಗಿರುವ ಗುಜರಾತ್‌ನ ಧನುಬೆನ್, ಮಗನ್ ಭಾಯ್ ಕುಟುಂಬವನ್ನು ಸನ್ಮಾನಿಸಲಾಗುವುದು. ಈ ಕಾರ್ಯಕ್ರಮಕ್ಕೆ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕೋರಲಾಗಿದೆ.

VISTARANEWS.COM


on

Purushothama Sanmana gujarat family theerthahalli
ಪ್ರಶಸ್ತಿ ಪುರಸ್ಕೃತರಾಗುವ ದಂಪತಿ ಕುಟುಂಬ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತೀರ್ಥಹಳ್ಳಿ: ಸಾವಯವ ಕೃಷಿಯ ಹರಿಕಾರ ‘ಕೃಷಿ ಋಷಿ’ ದಿವಂಗತ ಪುರುಷೋತ್ತಮ ರಾಯರು ಹಾಗೂ ಅವರ ಧರ್ಮ ಪತ್ನಿ ಶಾಂತಾ ಪುರುಷೋತ್ತಮ ರಾಯರ ನೆನಪಿನಲ್ಲಿ “ಪುರುಷೋತ್ತಮ ಸನ್ಮಾನ” (Purushothama Sanmana) ಕಾರ್ಯಕ್ರಮವು ನಗರದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಜ.27ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.

ಪ್ರಶಸ್ತಿ ಪುರಸ್ಕೃತರಾಗುವ ದಂಪತಿ

ತೀರ್ಥಹಳ್ಳಿಯ ಪುರುಷೋತ್ತಮ ರಾವ್‌ ಕೃಷಿ ಸಂಶೋಧನಾ ಪ್ರತಿಷ್ಠಾನವು ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಸಾವಯವ ಕೃಷಿ ಸಾಧಕರಾಗಿರುವ ಗುಜರಾತ್‌ನ ಧನುಬೆನ್ ಮತ್ತು ಮಗನ್ ಭಾಯ್ ಕುಟುಂಬವನ್ನು ಸನ್ಮಾನಿಸಲಾಗುವುದು. ಪ್ರತಿಷ್ಠಾನದ ಅಧ್ಯಕ್ಷ ವರದಾಚಾರ್ ಎಸ್. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ್ ಭೇಂಡೆ ಭಾಗವಹಿಸುವರು. ಪ್ರತಿಷ್ಠಾನದ ಉಪಾಧ್ಯಕ್ಷರೂ ಆದ ಗೃಹ ಸಚಿವ ಆರಗ ಜ್ಞಾನೇಂದ್ರ ಉಪಸ್ಥಿತರಿರುವರು. ಅಂದು ಸಾವಯವ ಕೃಷಿ ಉತ್ಪನ್ನಗಳು, ಪುಸ್ತಕಗಳು, ದೇಸಿ ಬೆಳೆ ಬೀಜಗಳ ಪ್ರದರ್ಶನ ಇರುತ್ತದೆ.

ಈ ಕಾರ್ಯಕ್ರಮಕ್ಕೆ ಕೃಷಿ ಪ್ರಯೋಗ ಪರಿವಾರ, ಸಾವಯವ ಕೃಷಿ ಪರಿವಾರ, ಸುಭಿಕ್ಷಾ ಆರ್ಗಾನಿಕ್ ಫಾರ್ಮ್ಸ್‌ ಮಲ್ಟಿಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಲಿ. ಹಾಗೂ ರಾಜ್ಯದ ವಿವಿಧ ತಾಲೂಕಿನ ಸಾವಯವ ಕೃಷಿ ಪರಿವಾರಗಳು ಸಹಕಾರ ನೀಡುತ್ತಿವೆ. ಈ ಕಾರ್ಯಕ್ರಮಕ್ಕೆ ರಾಜ್ಯದೆಲ್ಲೆಡೆಯಿಂದ ಸಾವಯವ ಕೃಷಿಕರು ಹಾಗೂ ಗ್ರಾಹಕರು ಆಗಮಿಸಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಎಸ್. ವರದಾಚಾರ್ ಪತ್ರಿಕಾಗೋಷ್ಠಿಯಲ್ಲಿ ವಿನಂತಿಸಿದ್ದಾರೆ.

ಪುರುಷೋತ್ತಮ ರಾಯರು ಮತ್ತು ಶಾಂತಾ ಪುರುಷೋತ್ತಮ ರಾಯರು

ಇದನ್ನೂ ಓದಿ | Stray Cattle : ಬೆಂಗಳೂರು ವಾಹನ ಸವಾರರಿಗೆ ಬಿಡಾಡಿ ದನಗಳ ಕಾಟ: ರಸ್ತೆಯಲ್ಲಿ ದನಗಳು ಕಂಡರೆ ಈ ಸಂಖ್ಯೆಗೆ ಕರೆ ಮಾಡಿ

ಪ್ರತಿಷ್ಠಾನದ ಕಿರು ಪರಿಚಯ

ತೀರ್ಥಹಳ್ಳಿಯ ಕೃಷಿ ಋಷಿ ದಿ. ಪುರುಷೋತ್ತಮ ರಾಯರು ಸಾವಯವ ಕೃಷಿಯ ಪ್ರಯೋಗ, ಪ್ರಚಾರಾಂದೋಲನದ ನೇತೃತ್ವ ವಹಿಸಿಕೊಂಡವರು. ಅವರ ಪ್ರೇರಣೆಯಿಂದ ಸಾವಯವ ಕೃಷಿಯನ್ನು ಅಳವಡಿಸಿಕೊಂಡ ರೈತರ ಸಂಖ್ಯೆ ನೂರಾರು. ಅವರು ತಮ್ಮ ಕರ್ಮಭೂಮಿ ‘ಕೃಷಿ ನಿವಾಸ’ವನ್ನು ಸಾವಯವ ಕೃಷಿಯಲ್ಲಿ ಪ್ರಯೋಗ, ಪ್ರಚಾರ ಮತ್ತು ಶಿಕ್ಷಣ ಕಾರ್ಯಗಳಿಗಾಗಿ ಮೀಸಲಿಟ್ಟಿವರಾಗಿದ್ದರು. 1998ರಲ್ಲಿ ವಿಧಿವಶರಾದರು. ಹೀಗಾಗಿ ಅವರ ಆಶಯದಂತೆ 1999ರಲ್ಲಿ ಅಸ್ತಿತ್ವಕ್ಕೆ ಬಂದ ಪುರುಷೋತ್ತಮ ರಾವ್‌ ಕೃಷಿ ಸಂಶೋಧನಾ ಪ್ರತಿಷ್ಠಾನವು ಕಳೆದ 24 ವರ್ಷಗಳಿಂದ ಸಾವಯವ ಕೃಷಿ ಮತ್ತು ಗ್ರಾಮ ವಿಕಾಸಗಳಿಗೆ ಪೂರಕವಾಗುವ ಪ್ರಯೋಗ, ಪ್ರಚಾರ, ಪ್ರಕಾಶನ ಹಾಗೂ ಶಿಕ್ಷಣ ಚಟುವಟಿಕೆಯನ್ನು ನಡೆಸಿಕೊಂಡು ಬರುತ್ತಿದೆ. ಪ್ರತಿಷ್ಠಾನವು ಪ್ರತಿ ವರ್ಷ ಶ್ರೀ ಪುರುಷೋತ್ತಮ ರಾವ್ ಹಾಗೂ ಶ್ರೀಮತಿ ಶಾಂತಾ ಪುರುಷೋತ್ತಮ ರಾವ್ ದಂಪತಿಗಳ ಸವಿ ನೆನಪಿನಲ್ಲಿ ಸಾವಯವ ಕೃಷಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಕೃಷಿಕ ದಂಪತಿಗೆ ಅಥವಾ ಸಂಸ್ಥೆಗೆ ‘ಪುರುಷೋತ್ತಮ ಸನ್ಮಾನ’ವನ್ನು ನೀಡಿ ಗೌರವಿಸುತ್ತಿದೆ.

ಇದನ್ನೂ ಓದಿ |Viral Video : ಐದು ವರ್ಷ ಬಾಲಕನೇ ಪೊಲೀಸರಿಗೆ ಮುಖ್ಯಸ್ಥ! ವೈರಲ್‌ ಆಯ್ತು ಈ ವಿಶೇಷ ವಿಡಿಯೊ

ಪುರುಷೋತ್ತಮ ಸನ್ಮಾನಕ್ಕೆ ಭಾಜನರಾದವರ ಕಿರು ಪರಿಚಯ

ಭೂಮಿಯನ್ನು ತಾಯಿಯಂತೆ ಕಾಣುವುದು ಎಂದರೇನು ಎಂಬ ಪ್ರಶ್ನೆಗೆ ಉತ್ತರ ಎನ್ನುವಂತೆ ಬದುಕುತ್ತಿರುವ ಅಪರೂಪದ ರೈತ ಕುಟುಂಬ ಧನುಬೆನ್ ಮತ್ತು ಮಗನ್ ಭಾಯ್ ಅವರದು. ಗುಜರಾತ್‌ನ ಕಟ್‌ ಜಿಲ್ಲೆಯಲ್ಲಿನ ಅಂಜ‌ ತಾಲೂಕಿನ ನಿಂಗಲ್ ಗ್ರಾಮದಲ್ಲಿ ಇವರು ತಮ್ಮ ಮಗ, ಸೊಸೆ, ಮೊಮ್ಮಕ್ಕಳೊಂದಿಗೆ ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ. ಈ ಪರಿವಾರವು ಭೂಮಿಗೆ ಕಿಂಚಿತ್ತೂ ವಿಷವುಣಿಸದೇ ಮರುಭೂಮಿ ಸೆರಗಿನ ಜವುಳು ಭೂಮಿಯಲ್ಲಿ ಅಕ್ಷರಶಃ ಚಿನ್ನದ ಬೆಳೆ ತೆಗೆಯುತ್ತಿದೆ. ಪರಿಸರ ಸ್ನೇಹಿ ಬೆಳೆ ಪದ್ಧತಿ, ಹೈನುಗಾರಿಕೆ, ಸಾವಯವ ಗೊಬ್ಬರ ಬಳಕೆ, ದೇಸಿ ತಳಿಗಳ ಬಳಕೆ, ನೀರಿನ ಸದ್ಬಳಕೆ.. ಹೀಗೆ ರೈತರ ಬದುಕಿನ ಭಾಗವಾಗಿರುವ ಎಷ್ಟೋ ಜಿಜ್ಞಾಸೆಗಳಿಗೆ ಇವರ ಕೃಷಿಯಲ್ಲಿ ಉತ್ತರವಿದೆ. ಕಠಿಣ ಪರಿಶ್ರಮ, ನಂಬಿದ ತತ್ತ್ವದ ಶ್ರದ್ಧೆಯ ಪಾಲನೆ ಈ ಕುಟುಂಬವನ್ನು ಇತರ ರೈತ ಕುಟುಂಬಗಳಿಗಿಂತ ಭಿನ್ನ ಎನ್ನುವಂತೆ ಮಾಡಿದೆ.

ಇದನ್ನೂ ಓದಿ | Congress Protest : ರಸ್ತೆ ಗುಂಡಿಗಳ ರಾಜಧಾನಿ ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್‌ ವಾಗ್ದಾಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Mysuru News : ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ

Mysuru News : ಐದು ದಿನಗಳ ಹಿಂದೆ ಸಾಲಗಾರರ ಕಾಟಕ್ಕೆ ಹೆದರಿ ಡೆತ್‌ನೋಟ್‌ (Death Note) ಬರೆದಿಟ್ಟು ನಾಪತ್ತೆಯಾಗಿದ್ದ (Missing Case) ಆಟೋ ಡ್ರೈವರ್‌ (Auto Driver)ಶವವಾಗಿ (Dead Body Found) ಪತ್ತೆಯಾಗಿದ್ದಾರೆ.

VISTARANEWS.COM


on

By

Mysuru News
Koo

ಮೈಸೂರು: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ (Death note) ಬರೆದು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆಯಾಗಿದ್ದಾರೆ. ಮೈಸೂರಿನ (Mysuru News) ಹುಣಸೂರು ತಾಲೂಕಿನ ಕುಟ್ಟುವಾಡಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಆಟೋ ಡ್ರೈವರ್ ಪ್ರಸಾದ್ (40) ನಾಪತ್ತೆಯಾಗಿದ್ದವರು.

ಕಳೆದ ಜುಲೈ 20 ರಂದು ಕಟ್ಟುವಾಡಿಯಿಂದ ಪ್ರಸಾದ್‌ ಕಾಣೆಯಾಗಿದ್ದರು. ಎಚ್.ಡಿ.ಕೋಟೆಯ ಸರಗೂರಿನ ಕಪಿಲಾ ನದಿ ದಂಡೆ ಸೋಮೇಶ್ವರ ದೇವಸ್ಥಾನದ ಬಳಿ ನೀರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಪ್ರಸಾದ್ ಡೆತ್‌ನೋಟ್ ಆಟೋದಲ್ಲಿ ಇಟ್ಟು ನಾಪತ್ತೆಯಾಗಿದ್ದರು. ಪ್ರಸಾದ್ ನಾಪತ್ತೆಯಿಂದಾಗಿ ಕುಟುಂಬಸ್ಥರು ಕಂಗಾಲಾಗಿದ್ದರು. ಈ ಸಂಬಂಧ ಬಿಳಿಕೆರೆ ಪೊಲೀಸರು ಮಿಸ್ಸಿಂಗ್‌ ಕೇಸ್‌ ದಾಖಲಾಗಿದ್ದು, ಪ್ರಸಾದ್‌ಗಾಗಿ ಶೋಧ ನಡೆಸುತ್ತಿದ್ದರು. ಡೆತ್‌ನೋಟ್‌ನಲ್ಲಿ ನನ್ನ ಸಾವಿಗೆ ಫೈನಾನ್ಸ್ ಮಧು, ಟೆಂಪೋ ಕಿರಣ್ ಕಾರಣ ಎಂದು ಉಲ್ಲೇಖಿಸಿದ್ದರು.

ಫೈನಾನ್ಸ್ ಮಧು ಬಳಿ ಕಿರಣ್ ಜಾಮೀನು ನೀಡಿ ಹಣ ಸಾಲ ಕೊಡಿಸಿದ್ದ.ನಿಗದಿತ ಸಮಯಕ್ಕೆ ಹಣ ಹಿಂದಿರುಗಿಸಿಲ್ಲ. ಹೀಗಾಗಿ ಕಿರಣ್ ಆಗಾಗ್ಗೆ ಮನೆಗೆ ಬಂದು ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಪ್ರಸಾದ್ ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ.

ಎಚ್.ಡಿ.ಕೋಟೆ ಸರಗೂರಿನಲ್ಲಿ ಪ್ರಸಾದ್ ಮೃತದೇಹ ದೊರೆತಿದೆ. ಸರಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Dog Meat: ಅಬ್ದುಲ್‌ ರಜಾಕ್‌ ತರಿಸುವ ಮಾಂಸದ ಮೇಲೆ ಹೆಚ್ಚುತ್ತಿದೆ ಅನುಮಾನ! ಹಲವು ಹೋಟೆಲ್‌ ಮಾಲಿಕರಿಗೆ ನೋಟೀಸ್‌

ಕೈ ಕಟ್‌ ಮಾಡಿದ ರೌಡಿಗಳ ಕಾಲಿಗೆ ಪೊಲೀಸರ ಗುಂಡೇಟು

ರಾಮನಗರ: ಬೆಳ್ಳಂಬೆಳಿಗ್ಗೆ ರೌಡಿಶೀಟರ್‌ಗಳ (Rowdysheeters) ಮೇಲೆ ಕನಕಪುರ ನಗರ ಪೊಲೀಸರು (Kanakapura Police) ಗುಂಡು ಹಾರಿಸಿ (Police Firing) ಬಂಧಿಸಿದ್ದಾರೆ. ವ್ಯಕ್ತಿಯೊಬ್ಬನ ಕೈ ಕತ್ತರಿಸಿ (Assault Case) ಪರಾರಿಯಾಗಿದ್ದ ರೌಡಿಗಳನ್ನು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಕನಕಪುರ ಟೌನ್ ಸಿಪಿಐ ಮಿಥುನ್ ಶಿಲ್ಪಿ ಹಾಗೂ ಪಿಎಸ್ಐ ಮನೋಹರ್ ಅವರಿಂದ ಫೈರಿಂಗ್ ನಡೆದಿದೆ. ಹರ್ಷ ಅಲಿಯಾಸ್ ಕೈಮ, ಕರುಣೇಶ್ ಅಲಿಯಾಸ್ ಕಣ್ಣ ಗಾಯಗೊಂಡ ರೌಡಿಶೀಟರ್‌ಗಳು. ಕಗ್ಗಲೀಪುರದ ವ್ಯಾಲಿ ಸ್ಕೂಲ್ ರೋಡ್ ಬಳಿ ಪೊಲೀಸರಿಂದ ಫೈರಿಂಗ್ ನಡೆದಿದೆ.

ಕಳೆದ ವಾರ ಕನಕಪುರದ ಮಾಳಗಾಳು ಬಡಾವಣೆಯಲ್ಲಿ ಗಲಾಟೆ ನಡೆದಿತ್ತು. ಗಲಾಟೆ ವೇಳೆ ಒಬ್ಬ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕೈ ಕಟ್ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಆರೋಪಿಗಳನ್ನು ಬಂಧಿಸುವಂತೆ ದಲಿತ‌‌ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇಂದು ಮುಂಜಾನೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಹೋಗಿದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಈ ರೌಡಿಗಳು ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದು ಅವರನ್ನು ಬಂಧಿಸಿದ್ದಾರೆ. ಹಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿ ರಾಜಶೇಖರ್, ಶಿವಕುಮಾರ್ ಎಂಬವರಿಗೂ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

HD Kumaraswamy: ಎಚ್‌ಡಿ ಕುಮಾರಸ್ವಾಮಿ ಬಂದರೂ ತೆಗೆಯದ ಪ್ರವಾಸಿ ಮಂದಿರ ಬೀಗ, ಕೇಂದ್ರ ಸಚಿವರಿಗೆ ಅವಮಾನ

HD Kumaraswamy: ಕೇಂದ್ರ ಸಚಿವರ ಭೇಟಿ ವಿಚಾರವನ್ನು ಪ್ರವಾಸಿ ಮಂದಿರದ ಅಧಿಕಾರಿಗಳಿಗೆ ಸಾಕಷ್ಟು ಮೊದಲೇ ತಿಳಿಸಲಾಗಿತ್ತು. ಈ ಬಗ್ಗೆ ಪ್ರವಾಸ ಪಟ್ಟಿಯನ್ನೂ ಸಚಿವಾಲಯದ ಅಧಿಕಾರಿಗಳು ಬಿಡುಗಡೆ ಮಾಡಿದ್ದರು. ಆದರೆ ಎಚ್‌ಡಿಕೆ ತೆರಳುವ ಹೊತ್ತಿಗೆ ಪ್ರವಾಸಿ ಮಂದಿರದ ಬಾಗಿಲಿಗೆ ಬೀಗ ಹಾಕಲಾಗಿತ್ತು. ಯಾರೂ ಅಧಿಕಾರಿಗಳು ಸ್ಥಳದಲ್ಲಿರಲಿಲ್ಲ.

VISTARANEWS.COM


on

hd kumaraswamy nanjanagudu
Koo

ಮೈಸೂರು: ಕೇಂದ್ರ ಸಚಿವರೇ (Union minister) ವಿಶ್ರಾಂತಿಗಾಗಿ ಬಂದರೂ ಬಾಗಿಲು ಬೀಗ ತೆಗೆಯದೆ ಅಧಿಕಾರಿಗಳು ಅವಮಾನ (insult) ಮಾಡಿ ಕಳಿಸಿದ ಘಟನೆ ನಂಜನಗೂಡಿನಲ್ಲಿ (Nanjanagudu) ನಡೆದಿದೆ. ಕೇಂದ್ರ ಸಚಿವ, ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಇಂದು ನಂಜನಗೂಡು ಪ್ರವಾಸದಲ್ಲಿದ್ದು, ಕೆಲ ನಿಮಿಷಗಳ ವಿಶ್ರಾಂತಿಗಾಗಿ ನಂಜನಗೂಡು ಪ್ರವಾಸಿ ಮಂದಿರಕ್ಕೆ (Tourist Guesthouse) ತೆರಳಿದ್ದರು.

ಕೇಂದ್ರ ಸಚಿವರ ಭೇಟಿ ವಿಚಾರವನ್ನು ಪ್ರವಾಸಿ ಮಂದಿರದ ಅಧಿಕಾರಿಗಳಿಗೆ ಸಾಕಷ್ಟು ಮೊದಲೇ ತಿಳಿಸಲಾಗಿತ್ತು. ಈ ಬಗ್ಗೆ ಪ್ರವಾಸ ಪಟ್ಟಿಯನ್ನೂ ಸಚಿವಾಲಯದ ಅಧಿಕಾರಿಗಳು ಬಿಡುಗಡೆ ಮಾಡಿದ್ದರು. ಆದರೆ ಎಚ್‌ಡಿಕೆ ತೆರಳುವ ಹೊತ್ತಿಗೆ ಪ್ರವಾಸಿ ಮಂದಿರದ ಬಾಗಿಲಿಗೆ ಬೀಗ ಹಾಕಲಾಗಿತ್ತು. ಯಾರೂ ಅಧಿಕಾರಿಗಳು ಸ್ಥಳದಲ್ಲಿರಲಿಲ್ಲ.

10 ನಿಮಿಷಕ್ಕೂ ಅಧಿಕ ಸಮಯ ಕಾದರೂ ಯಾವುದೇ ಸಿಬ್ಬಂದಿ ಬಾಗಿಲು ತೆಗೆಯಲು ಬರಲಿಲ್ಲ. ಈ ಸಂದರ್ಭದಲ್ಲಿ ಎಚ್‌ಡಿಕೆ ಕಾರಿನಲ್ಲೇ ಕುಳಿತಿದ್ದರು. ಜೊತೆಗೆ ಮಾಜಿ ಸಚಿವ ಸಾ.ರಾ.ಮಹೇಶ್ ಅವರೂ ಇದ್ದರು. ಕಾದು ಸುಸ್ತಾದ ಎಚ್‌ಡಿ ಕುಮಾರಸ್ವಾಮಿ ಬಳಿಕ ಅಲ್ಲಿಂದ ತೆರಳಿದರು.

ಈ ಬಗ್ಗೆ ಸಾ.ರಾ ಮಹೇಶ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರು ಬಂದರೂ ಬಾಗಿಲು ತೆರೆಯದೆ ಇರುವುದರ ಹಿಂದೆ ರಾಜ್ಯ ಸರಕಾರದ ಚಿತಾವಣೆ ಇದೆ. ಅವಮಾನ ಮಾಡುವ ಉದ್ದೇಶಕ್ಕಾಗಿಯೇ ಹೀಗೆ ಮಾಡಲಾಗಿದೆ ಎಂದು ಜೆಡಿಎಸ್‌ ಮುಖಂಡರು ಆರೋಪಿಸಿದ್ದಾರೆ.

ʼಸಮಯ ಬಂದಾಗ ಮಿಲಿಟರಿಯನ್ನೂ ತರುತ್ತೇವೆʼ ಎಂದ ಎಚ್‌ಡಿಕೆ

ಹಾಸನ: ʼʼನಾನು ಅಂಕೋಲಾಕ್ಕೆ ಭೇಟಿ ನೀಡಿದ ವಿಚಾರ ಮುಂದಿಟ್ಟುಕೊಂಡು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು, ಕುಮಾರಸ್ವಾಮಿ ಇಲ್ಲಿ ಏಕೆ ಬರ್ತಾರೆ, ಮಿಲಿಟರಿ ಕರೆದುಕೊಂಡು ಬಂದಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. ಅವರು ಏಕೆ ಆ ರೀತಿ ಹೇಳಿಕೆ ಕೊಟ್ಟರು ಅಂತ ಯೋಚನೆ ಮಾಡಿದೆ. ಈ ರಾಜ್ಯದಲ್ಲಿ ನಡೆಯುತ್ತಿರುವ ದರೋಡೆಯನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಅದಕ್ಕೊಂದು ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣʼʼ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದರು.

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗೆ ಹಾಸಕ್ಕೆ ಆಗಮಿಸಿದ ಅವರು ಕಾಂಗ್ರೆಸ್‌ ಮತ್ತು ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು. ಶನಿವಾರ ಅಂಕೋಲಾಕ್ಕೆ ಎಚ್.ಡಿ ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಡಿಕೆಶಿ, ʼʼಮಿಲಿಟರಿ ಕರೆದುಕೊಂಡು ಇಳಿದಿದ್ದರೆ ಎಚ್‌ಡಿಕೆ ಫೀಲ್ಡಿಗೆ ಬಂದಿದ್ದಾರೆ ಅಂತ ಹೇಳಬಹುದು. ಸುಮ್ಮನೇ ವಿಸಿಟ್ ಮಾಡಿ ಬಂದರೆ ಏನಾದ್ರೂ ಆಗುತ್ತಾ? ಒಂದೇ ಗಂಟೆಯಲ್ಲಿ ನಮ್ಮ ಕ್ಯಾಬಿನೆಟ್ ಸಚಿವರನ್ನು ಅಲ್ಲಿಗೆ‌ ಓಡಿಸಿದ್ದೇವೆ. ಮಂಕಾಳ್ ವೈದ್ಯ, ಕೃಷ್ಣಬೈರೇಗೌಡ ಅಲ್ಲಿಗೆ ಹೋಗಿದ್ದರು. ಏನೇನು ಮಾಡಬೇಕೊ ಅದನ್ನು ಮಾಡಿದ್ದಾರೆ, ಅಧಿಕಾರಿಗಳಿಗೆ ಸೂಚನೆ‌ ಕೊಟ್ಟಿದ್ದಾರೆ. ನಮ್ಮ ಸರ್ಕಾರ ಏನು ಮಾಡಬೇಕೋ ಅದನ್ನು ಮಾಡುತ್ತದೆ. ಈಗ ರಾಜಕಾರಣ ಬೇಡ, ಜನರನ್ನು ಉಳಿಸಿಕೊಳ್ಳುವ ಕೆಲಸ ಮಾಡೋಣʼʼ ಎಂದು ತಿಳಿಸಿದ್ದರು.

ʼʼಡಿಕೆಶಿ ಪಾಪ ಕನಕಪುರದವರು. ಬ್ರ್ಯಾಂಡ್‌ ಬೆಂಗಳೂರು ಮಾಡುತ್ತೇನೆ ಎಂದು ಹೇಳುತ್ತಾರೆ. ಇನ್ನು ಕುಮಾರಸ್ವಾಮಿ 39 ಸೀಟ್ ಗೆದ್ದರೂ ಮುಖ್ಯಮಂತ್ರಿ ಮಾಡಿದ್ವಿ, ದೇವೇಗೌಡರು 16 ಸೀಟ್ ಗೆದ್ದರು ಪ್ರಧಾನಮಂತ್ರಿ ಮಾಡಿದ್ವು ಎಂದು ಕಾಂಗ್ರೆಸ್‌ನವರು ಹೇಳುತ್ತಾರೆ. ಅದರ ಜತೆಗೆ ಸರ್ಕಾರವನ್ನು ತೆಗೆದವರು ಯಾರು ಎನ್ನುವುದನ್ನೂ ಹೇಳಬೇಕಲ್ವಾ?ಕಾಂಗ್ರೆಸ್‌ ಮನೆ ಬಾಗಿಲಿಗೆ ನಾನು, ದೇವೇಗೌಡರು ಬಂದಿದ್ವಾ? ಅದೂ ಅಲ್ಲದೆ ದೇವೇಗೌಡರನ್ನು ಪ್ರಧಾನಮಂತ್ರಿ ಮಾಡಿದ್ದು ಕಮ್ಯೂನಿಸ್ಟ್‌ ಹಾಗೂ ಇತರರು. ಒಬ್ಬ ಕನ್ನಡಿಗನನ್ನು ತೆಗೆದವರು ಯಾರು? ನಾನು ಏನು ತಪ್ಪು ಮಾಡಿದೆ ಅಂತ ಸರ್ಕಾರ ತೆಗೆದರು?ʼʼ ಎಂದು ಎಚ್‌ಡಿಕೆ ಕಾಂಗ್ರೆಸ್‌ ಅನ್ನು ತರಾಟೆಗೆ ತೆಗೆದುಕೊಂಡರು.

ʼʼದಲಿತರು ಅಂತ ಕರೆಯಬೇಡಿ ಎಂದು ಚರ್ಚೆ ನಡೆದಿದೆ. ಅಹಿಂದ ಅಂತಾ ಎಷ್ಟು ವರ್ಷದಿಂದ ಹೆಸರು ಇಟ್ಟುಕೊಂಡಿದ್ದೀರಾ? ಅಹಿಂದ ಹೆಸರು ಇಟ್ಟುಕೊಂಡು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಅವಮಾನ ಮಾಡುತ್ತಿದ್ದೀರ. ಅವರಿಗೆ ಮೀಸಲಿಟ್ಟಿದ್ದ ಹಣ ಉಪಯೋಗಿಸಿಕೊಂಡಿದ್ದೀರಿʼʼ ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.

ಇದನ್ನೂ ಓದಿ: DK Shivakumar: ನಮ್ಮ ಅಧಿಕಾರಿಗಳು ಬಹಳ ಖದೀಮರಿದ್ದಾರೆ, ಡಿ ಗ್ರೇಡ್ ಕ್ಲರ್ಕ್‌ಗಳೆಲ್ಲಾ ಅಧೀಕ್ಷಕ, ಎಂಡಿಗಳಾಗಿದ್ದಾರೆ ಎಂದ ಡಿಕೆಶಿ

Continue Reading

ರಾಯಚೂರು

Road Accident : ಕುಡಿದು ಕಾರು ಓಡಿಸಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು ; ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟ

Road Accident : ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಲು ಹೋದ ಯುವಕರಿಬ್ಬರು ಜೀವವನ್ನೇ ಕಳೆದುಕೊಂಡಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

By

road Accident
Koo

ರಾಯಚೂರು: ಕೆಎಸ್‌ಆರ್‌ಟಿಸಿ ಬಸ್ಸಿಗೆ (Ksrtc Bus) ಕಾರೊಂದು ಡಿಕ್ಕಿ (Road Accident) ಹೊಡೆದಿದೆ. ಪರಿಣಾಮ ಕಾರಿನೊಬ್ಬಗೆ ಇದ್ದ ಯುವಕರಿಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕುಡಿದು ಕಾರು ಚಲಾಯಿಸಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಾಯಚೂರಿನ (Raichur News) ಲಿಂಗಸಗರೂ ತಾಲೂಕಿನ ಅಡವಿಬಾವಿ ಕ್ರಾಸ್ ಬಳಿ ತಡರಾತ್ರಿ ಅಪಘಾತ ನಡೆದಿದೆ.

ವಿರೇಶ್ (25), ಚನ್ನಬಸವ (24) ಮೃತ ದುರ್ದೈವಿಗಳು. ಲಿಂಗಸಗೂರು ಹೊರವಲಯದ ಕರಡಕಲ್ ಗ್ರಾಮದ ನಿವಾಸಿಗಳಾದ ಇವರಿಬ್ಬರು, ನಾರಾಯಣಪುರ ಜಲಾಶಯದತ್ತ ಹೊರಟ್ಟಿದ್ದರು. ಇದೇ ವೇಳೆ ಮುದ್ದೇಬಿಹಾಳ ಕಡೆಯಿಂದ ಲಿಂಗಸಗೂರಿನತ್ತ ಬಸ್‌ ಬರುತ್ತಿತ್ತು.

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದರಿಂದ ಈ ವೇಳೆ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ವಿರೇಶ್‌ ಹಾಗೂ ಚನ್ನಬಸವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಲಿಂಗಸಗೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ಬಸ್ಸಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬಸ್‌ನ ಮುಂಭಾಗ ಜಖಂಗೊಂಡಿದೆ.

ಇದನ್ನೂ ಓದಿ:4 ಲಕ್ಷ ಬೈಕ್‌, ಸ್ಕೂಟರ್‌ ಹಿಂಪಡೆಯಲು ಮುಂದಾದ ಸುಜುಕಿ ಇಂಡಿಯಾ; ಈ ಪಟ್ಟಿಯಲ್ಲಿ ನಿಮ್ಮ ವಾಹನವೂ ಇದ್ಯಾ? ಹೀಗೆ ಚೆಕ್‌ ಮಾಡಿ

ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟಕ್ಕೆ ಇಬ್ಬರು ಗಂಭೀರ

ಉಡುಪಿಯ ಕಾರ್ಕಳದ ಆನೆಕೆರೆ ಸಮೀಪದ ಕೃಷ್ಣಾ ಅಪಾರ್ಟ್ಮೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸಿಲಿಂಡರ್ ಸ್ಫೋಟಕ್ಕೆ ಕಾರ್ಕಳದ ಜನತೆ ಬೆಚ್ಚಿ ಬಿದ್ದಿದ್ದಾರೆ. ಭಾರಿ ಶಬ್ದದೊಂದಿಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಅಪಾರ್ಟ್ಮೆಂಟ್‌ನ ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಮನೆಯ ಗೋಡೆಗಳು ಛಿದ್ರಗೊಂಡು ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಗಾಯಾಳುಗಳನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Dog Meat: ಅಬ್ದುಲ್‌ ರಜಾಕ್‌ ತರಿಸುವ ಮಾಂಸದ ಮೇಲೆ ಹೆಚ್ಚುತ್ತಿದೆ ಅನುಮಾನ! ಹಲವು ಹೋಟೆಲ್‌ ಮಾಲಿಕರಿಗೆ ನೋಟೀಸ್‌

Dog Meat: ಬೆಂಗಳೂರಿನಲ್ಲಿ ಕೆ.ಜಿ ಕುರಿ ಮಾಂಸ 700-800 ರೂಪಾಯಿ ಇದೆ. ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶದ ಭಾಗದಲ್ಲೂ ಕುರಿ ಮಾಂಸದ ಬೆಲೆ 700 ರೂಪಾಯಿ ಇದೆ. ಹೀಗಿರುವಾಗ, ಅಬ್ದುಲ್ ರಜಾಕ್ ತಂಡ ಆಮದು ಮಾಡುವ ಮಾಂಸದ ಬೆಲೆ 500 ರೂ. ಯಾಕೆ ಎಂಬ ಅನುಮಾನ ಮೂಡಿದೆ.

VISTARANEWS.COM


on

dog meat abdul razak
Koo

ಬೆಂಗಳೂರು: ಬೆಂಗಳೂರಿನಲ್ಲಿ ಕಳಪೆ ಮಾಂಸ (Poor meat) ಉಣಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಗರದ ಹಲವು ಪ್ರತಿಷ್ಠಿತ ಹೋಟೆಲ್, ರೆಸ್ಟೋರೆಂಟ್ (Hotel Owners) ಮಾಲೀಕರಿಗೆ ನೊಟೀಸ್ (Notice) ನೀಡಲಾಗಿದೆ. ಅಬ್ದುಲ್‌ ರಜಾಕ್‌ (Abdul Razak) ಆಮದು ಮಾಡುತ್ತಿರುವುದು ನಾಯಿ ಮಾಂಸ (Dog Meat) ಎಂಬ ಆರೋಪ ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಆರೋಗ್ಯ ಇಲಾಖೆಯ (Health Department) ಅಧಿಕಾರಿಗಳು ಚುರುಕಾಗಿ ಕಾರ್ಯಪ್ರವೃತ್ತರಾಗಿದ್ದಾರೆ.

ಮೊದಲ ಹಂತವಾಗಿ ಒಂಬತ್ತು ಜನ ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನೊಟೀಸ್ ನೀಡಲಾಗಿದೆ. ಇವರು ಅಬ್ದುಲ್ ರಜಾಕ್ ಅವರಿಂದ ಮಾಂಸ ಪಡೆಯುತ್ತಿದ್ದ ಹೋಟೆಲ್‌, ರೆಸ್ಟೋರೆಂಟ್‌ಗಳು. ಈ ಸಂಬಂಧ ವ್ಯವಹಾರದ ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಲಾಗಿದೆ. ನಿನ್ನೆ‌ ಇಬ್ಬರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ಉಳಿದವರು ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ನಿನ್ನೆ‌ ಅಬ್ದುಲ್ ರಜಾಕ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಸೋಮವಾರವೂ ವಿಚಾರಣೆ ಮುಂದುವರಿಯಲಿದೆ. ಡೆಸಿಗ್ನೇಟ್ ಆಫೀಸರ್ ಡಾ. ಜನಾರ್ದನ್ ಅವರಿಂದ ವಿಚಾರಣೆ ನಡೆಯುತ್ತಿದೆ. ನಿನ್ನೆ ಐದಾರು ಗಂಟೆಗಳ ಕಾಲ ಅಬ್ದುಲ್ ರಜಾಕ್ ವಿಚಾರಣೆ ಎದುರಿಸಿದ್ದರು. ಸೋಮವಾರ ಕೂಡ ವಿಚಾರಣೆಗೆ ಬರುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ.

ಯಾಕೆ ಅನುಮಾನ?

ಅಬ್ದುಲ್ ರಜಾಕ್ ತಂಡ ಆಮದು ಮಾಡಿಸಿಕೊಳ್ಳುತ್ತಿರುವ ಮಾಂಸದ ಮೇಲೆ ಅನುಮಾನ ಹೆಚ್ಚಿದ್ದು, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯಿಂದ ತೀವ್ರ ತನಿಖೆಗೆ ಒಳಪಡಲಿದೆ. ಅಬ್ದುಲ್ ರಜಾಕ್ ತಂಡ ಸಪ್ಲೈ ಮಾಡುತ್ತಿದ್ದ ಹೋಟೆಲ್‌ಗಳ ಮಾಹಿತಿ ಸಂಗ್ರಹಿಸಲಾಗಿದೆ.

ಬೆಂಗಳೂರಿನಲ್ಲಿ ಕೆ.ಜಿ ಕುರಿ ಮಾಂಸ 700-800 ರೂಪಾಯಿ ಇದೆ. ರಾಜ್ಯದ ಯಾವ ಜಿಲ್ಲೆಗೆ ಹೋದರೂ 700-800 ರೂಪಾಯಿ ಕೆ.ಜಿ. ಇದೆ. ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶದ ಭಾಗದಲ್ಲೂ ಕುರಿ ಮಾಂಸದ ಬೆಲೆ 700 ರೂಪಾಯಿ ಇದೆ. ಹೀಗಿರುವಾಗ, ಅಬ್ದುಲ್ ರಜಾಕ್ ತಂಡ ಆಮದು ಮಾಡುವ ಮಾಂಸದ ಬೆಲೆ 500 ರೂ. ಯಾಕೆ? 400-500 ರೂಪಾಯಿ ಕೆ.ಜಿಗೆ ಕುರಿ ಮಾಂಸ ಮಾರಾಟ ಮಾಡಲು ಹೇಗೆ ಸಾಧ್ಯ? ಎಂಬ ಪ್ರಶ್ನೆ ಮೂಡಿದೆ.

ಬೆಂಗಳೂರಿನ 108 ಹೋಟೆಲ್‌ಗಳಿಗೆ ರಜಾಕ್‌ ಮಾಂಸ ನೀಡುತ್ತಿದ್ದರು. ಜೈಪುರದಿಂದ ಬೆಂಗಳೂರಿನ ರೈಲು ನಿಲ್ದಾಣಕ್ಕೆ ಮಾಂಸ ಪಾರ್ಸೆಲ್ ಮಾಡಲು ಕೆಜಿಗೆ 8-10 ರೂಪಾಯಿ ಚಾರ್ಜ್ ಆಗುತ್ತದೆ. ರಾಜಸ್ಥಾನದಲ್ಲಿ ಮಾಂಸ ವಧೆ ಮಾಡುವ ಜಾಗದಿಂದ ಜೈಪುರ್ ನಿಲ್ದಾಣಕ್ಕೆ ತರುವ ವಾಹನದ ಬಾಡಿಗೆ, ರೈಲಿಗೆ ಲೋಡ್ ಮಾಡುವ ಕೂಲಿ, ಬೆಂಗಳೂರಿನಲ್ಲಿ ಅನ್‌ಲೋಡ್ ಮಾಡುವ ಕೂಲಿ, ಬೆಂಗಳೂರಿನಲ್ಲಿ ಮಾಂಸ ಸರಬರಾಜು ಮಾಡುವ ಟ್ರಾನ್ಸ್‌ಪೋರ್ಟ್ ಚಾರ್ಜ್- ಎಲ್ಲಾ ವೆಚ್ಚ ಅಂದಾಜು ಸೇರಿ ಕೆ.ಜಿ ಮಾಂಸಕ್ಕೆ 100 ರೂಪಾಯಿ ಹೆಚ್ಚಿಸಬೇಕು. ಹೀಗಿರುವಾಗ ಕೆ.ಜಿ ಮಾಂಸ 400-500 ರೂ. ಹೇಗೆ ಮಾರಾಟ ಮಾಡಲು ಸಾಧ್ಯ?

ಅಂದರೆ ಅಲ್ಲಿಗೆ ಅಬ್ದುಲ್ ರಜಾಕ್ ತಂಡಕ್ಕೆ ಕುರಿ‌ ಮಾಂಸ ಕೆ.ಜಿಗೆ 200 ರೂಪಾಯಿಗೆ ಸಿಗುತ್ತಿದೆಯಾ? ಎಂಬ ಅನುಮಾನ ಮೂಡಿದೆ. ಆದರೆ ಎಲ್ಲೂ ಇಷ್ಟು ಕಡಿಮೆ ಬೆಲೆಗೆ ಮಾಂಸ ಸಿಗಲಾರದು. ಹೀಗಾಗಿ ಇದು ಕಳಪೆ ಮಾಂಸ ಅಥವಾ ನಾಯಿ ಮಾಂಸ ಇರಲೂಬಹುದು ಎಂದು ಕೆಲವರು ತರ್ಕಿಸಿದ್ದಾರೆ.

ತನಿಖೆ ಚುರುಕುಗೊಳಿಸಿದ ಕಾಟನ್ ಪೇಟೆ ಪೊಲೀಸರು

ಮಾಂಸ ಸಾಗಣೆಯ ಬಗ್ಗೆ ಕಾಟನ್‌ಪೇಟೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ರೈಲ್ವೆ ಅಧಿಕಾರಿಗಳಿಗೆ ಪತ್ರ ಬರೆದು ಮಾಹಿತಿ ಕೇಳಿದ್ದಾರೆ. ರೈಲಿನಲ್ಲಿ ಮಾಂಸ ಎಲ್ಲಿಂದ ಬರ್ತಾ ಇತ್ತು? ಎಷ್ಟು ದಿನಗಳಿಗೊಮ್ಮೆ ಬರ್ತಾ ಇತ್ತು? ಯಾವ ಟ್ರೈನ್‌ನಲ್ಲಿ ಯಾರು ತಗೊಂಡು ಬರ್ತಾ ಇದ್ರು? ಯಾವ ಪ್ಲಾಟ್‌ಫಾರಂಗೆ ರೈಲು ಬರ್ತಾ ಇತ್ತು, ಆ ಪ್ಲಾಟ್ ಫಾರಂನ ಸಿಸಿಟಿವಿ ದಾಖಲೆ, ಮಾಂಸ ಬರುವ ಸಮಯದಲ್ಲಿ ಯಾರು ಬಂದು ರಿಸೀವ್ ಮಾಡ್ತಾ ಇದ್ರು ಎಂಬ ಬಗ್ಗೆ ವಿವರ ಕೇಳಲಾಗಿದೆ.

ಮಾಧ್ಯಮಗಳಲ್ಲಿ ಅಬ್ದುಲ್ ರಜಾಕ್ ನಾನೇ ಮಾಂಸ ತರಿಸುತ್ತಿದ್ದುದಾಗಿ ಹೇಳಿಕೊಂಡಿದ್ದರು. ಹಾಗಾಗಿ ಅಬ್ದುಲ್ ರಜಾಕ್‌ಗೆ ನೋಟಿಸ್ ಕೊಟ್ಟು ವಿಚಾರಣೆಗೆ ಕರೆಯಲಾಗಿದೆ. ಅಬ್ದುಲ್ ರಜಾಕ್ ಜೊತೆಗೆ ಕೆಲ ಹೋಟೆಲ್ ಮಾಲೀಕರಿಗೂ ನೊಟೀಸ್ ನೀಡಲಾಗಿದೆ.

ಇದನ್ನೂ ಓದಿ: Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Continue Reading
Advertisement
Geyser Blast
ತಂತ್ರಜ್ಞಾನ49 seconds ago

Geyser Blast: ಬಾಂಬ್‌‌ನಂತೆ ಬ್ಲಾಸ್ಟ್ ಆಗಬಹುದು ಗೀಸರ್! ಮಳೆಗಾಲದಲ್ಲಿ ಈ ಮುನ್ನೆಚ್ಚರಿಕೆ ಇರಲಿ

Mysuru News
ಕ್ರೈಂ21 mins ago

Mysuru News : ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ

Actor Darshan case Police Serve Notice To Siddarudha Who Claimed To Met Darshan
ಸ್ಯಾಂಡಲ್ ವುಡ್26 mins ago

Actor Darshan: ದರ್ಶನ್​ ಭೇಟಿ ಮಾಡಿ, ಯೋಗ, ಧ್ಯಾನ ಹೇಳಿಕೊಟ್ಟೆ ಎಂದ ಸಿದ್ಧಾರೂಢನಿಗೆ ಸಂಕಷ್ಟ! ನೋಟಿಸ್‌ ಕೊಟ್ಟ ಪೊಲೀಸರು!

hd kumaraswamy nanjanagudu
ಪ್ರಮುಖ ಸುದ್ದಿ29 mins ago

HD Kumaraswamy: ಎಚ್‌ಡಿ ಕುಮಾರಸ್ವಾಮಿ ಬಂದರೂ ತೆಗೆಯದ ಪ್ರವಾಸಿ ಮಂದಿರ ಬೀಗ, ಕೇಂದ್ರ ಸಚಿವರಿಗೆ ಅವಮಾನ

RRB Recruitment 2024
ಉದ್ಯೋಗ30 mins ago

RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Paris 2024 Olympics
ಕ್ರೀಡೆ31 mins ago

Paris 2024 Olympics: ಭಾರತೀಯ ಕ್ರೀಡಾಪಟುಗಳಿಗೆ ವಸ್ತ್ರ ವಿನ್ಯಾಸ ಮಾಡಿದ್ದ ತರುಣ್‌ ವಿರುದ್ಧ ಟೀಕೆಗಳ ಸುರಿಮಳೆ

road Accident
ರಾಯಚೂರು46 mins ago

Road Accident : ಕುಡಿದು ಕಾರು ಓಡಿಸಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು ; ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟ

Delhi Floods
ದೇಶ53 mins ago

Delhi Floods: ದೆಹಲಿಯಲ್ಲಿ ಕೋಚಿಂಗ್‌ ಸೆಂಟರ್‌ಗೆ ನುಗ್ಗಿದ ನೀರು; ಮೃತರ ಸಂಖ್ಯೆ 3ಕ್ಕೆ ಏರಿಕೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

dog meat abdul razak
ಕ್ರೈಂ60 mins ago

Dog Meat: ಅಬ್ದುಲ್‌ ರಜಾಕ್‌ ತರಿಸುವ ಮಾಂಸದ ಮೇಲೆ ಹೆಚ್ಚುತ್ತಿದೆ ಅನುಮಾನ! ಹಲವು ಹೋಟೆಲ್‌ ಮಾಲಿಕರಿಗೆ ನೋಟೀಸ್‌

Golden Star Ganesh krishnam pranaya sakhi in famous social media
ಸ್ಯಾಂಡಲ್ ವುಡ್1 hour ago

Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ22 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ23 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌