ಶಿವಗಂಗೆ ಪ್ರವಾಸಿ ಮಂದಿರದಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ನೇಣಿಗೆ ಶರಣು; ವಿಜಯಪುರದಲ್ಲಿ ವ್ಯಕ್ತಿ ಆತ್ಮಹತ್ಯೆ - Vistara News

ಕರ್ನಾಟಕ

ಶಿವಗಂಗೆ ಪ್ರವಾಸಿ ಮಂದಿರದಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ನೇಣಿಗೆ ಶರಣು; ವಿಜಯಪುರದಲ್ಲಿ ವ್ಯಕ್ತಿ ಆತ್ಮಹತ್ಯೆ

ವಿಜಯಪುರದಲ್ಲಿ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದರೆ, ನೆಲಮಂಗಲದ ಶಿವಗಂಗೆ ಪ್ರವಾಸಿ ಮಂದಿರದಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

Suicide Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೆಲಮಂಗಲ/ವಿಜಯಪುರ: ನೆಲಮಂಗಲದ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ಪಿಡಬ್ಲ್ಯೂಡಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ನಿವಾಸಿ ಲಕ್ಷ್ಮೀನರಸಿಂಹಯ್ಯ (54) ಮೃತ ದುರ್ದೈವಿ.

ಕಚೇರಿಗೆ ಸಂಬಂಧಪಟ್ಟ ಕಡತವೊಂದು ಮಿಸ್ಸಿಂಗ್ ಆಗಿದ್ದು, ಇದರಿಂದ ಒತ್ತಡಕ್ಕೆ ಒಳಗಾಗಿ ಲಕ್ಷ್ಮೀನರಸಿಂಹಯ್ಯ ಅವರು ಪ್ರವಾಸಿ ಮಂದಿರದಲ್ಲಿ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ಬಾಯಿಗೆ ಕರವಸ್ತ್ರವನ್ನು ತುರುಕಿಕೊಂಡಿದ್ದರು. ಸ್ಥಳಕ್ಕೆ ದಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಮರಕ್ಕೆ ನೇಣು ಬಿಗಿದುಕೊಂಡ ವ್ಯಕ್ತಿ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ ರಸ್ತೆಯಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಯಾಳವಾರ ಗ್ರಾಮದ ಬಸವರಾಜ ಕೋಟಿ (36) ಆತ್ಮಹತ್ಯೆಗೆ ಶರಣಾದವರು.

ಇದನ್ನೂ ಓದಿ: Signature Forgery: ಬಿಎಂಟಿಸಿ ಎಂಡಿ ಸಹಿಯೇ ನಕಲು ಮಾಡಿದ ಅಧಿಕಾರಿಗಳು; ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ದೂರು

ಈ ಹಿಂದೆ ಕಾಳಸಂತೆಯಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಬಸವರಾಜ ನಷ್ಟ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election: ನಾಳೆ ಮೊದಲ ಹಂತದ ಮತದಾನ; ಪ್ರಜಾಪ್ರಭುತ್ವದ ಹಬ್ಬಕ್ಕೆ ಹೇಗಿದೆ ಸಿದ್ಧತೆ?

Lok Sabha Election: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಶುಕ್ರವಾರ ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆವರೆಗೆ ಜನರು ಹಕ್ಕು ಚಲಾಯಿಸಬಹುದಾಗಿದೆ. ಮೊದಲ ಹಂತದಲ್ಲಿ 1,626 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಹಂತದ ಮತದಾನದ ಹಿನ್ನೆಲೆಯಲ್ಲಿ ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯಲಾಗಿದೆ. ಛತ್ತೀಸ್‌ಗಢದಲ್ಲಿ ನಕ್ಸಲ್‌ ದಾಳಿಯ ಭೀತಿ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election 2024) ಶುಕ್ರವಾರ (ಏಪ್ರಿಲ್‌ 19) ಚಾಲನೆ ಸಿಗಲಿದೆ. ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಾಳೆ ಮೊದಲ ಹಂತದ ಮತದಾನ (First Phase Voting) ನಡೆಯಲಿದ್ದು, ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆವರೆಗೆ ಜನರು ಹಕ್ಕು ಚಲಾಯಿಸಬಹುದಾಗಿದೆ. ಮತಗಟ್ಟೆಗಳಲ್ಲಿ ಹೆಚ್ಚಿನ ಜನ ಇದ್ದರೆ ಇನ್ನೂ ಒಂದು ಗಂಟೆ ವಿಸ್ತರಣೆ ಮಾಡಬಹುದಾಗಿದೆ. ಮೊದಲ ಹಂತದಲ್ಲಿ 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಸಿದ್ಧತೆ ಹೇಗಿದೆ? ಯಾವ ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.

ಚುನಾವಣೆ ಆಯೋಗ ಸನ್ನದ್ಧ

ಪ್ರಜಾಪ್ರಭುತ್ವದ ಹಬ್ಬವನ್ನು ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ಆಚರಿಸಲು ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಮತಗಟ್ಟೆಗಳಿಗೆ ಮತಯಂತ್ರಗಳು ಸೇರಿ ಅಗತ್ಯ ಉಪಕರಣಗಳ ರವಾನೆ, ಸಿಬ್ಬಂದಿಯ ರವಾನೆ, ಮತದಾರರಿಗೆ ಸಕಲ ರೀತಿಯ ಸೌಲಭ್ಯ ಒದಗಿಸುವುದು ಸೇರಿ ಎಲ್ಲ ರೀತಿಯಲ್ಲೂ ಸಜ್ಜಾಗಿದೆ. ಇನ್ನು ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಶಾಂತಿಯುತ ಮತದಾನ ಪ್ರಕ್ರಿಯೆಗೆ ಅನುವು ಮಾಡಿಕೊಡುತ್ತಿದೆ.

ನಾಳೆ ಎಲ್ಲೆಲ್ಲಿ ಮತದಾನ?

ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಶುಕ್ರವಾರ ಮತದಾನ ನಡೆಯಲಿದೆ. ತಮಿಳುನಾಡಿನ 39, ಉತ್ತರಾಖಂಡ 5, ಅರುಣಾಚಲ ಪ್ರದೇಶ 2, ಮಣಿಪುರ 2, ಮಿಜೋರಾಂ 2, ನಾಗಾಲಾಂಡ್ಯ್‌ 1, ಸಿಕ್ಕಿಂ 1, ಬಿಹಾರ 4, ಛತ್ತೀಸ್‌ಗಢ 1, ಮಧ್ಯಪ್ರದೇಶ 6, ಮಹಾರಾಷ್ಟ್ರ 5, ರಾಜಸ್ಥಾನ 12, ತ್ರಿಪುರ 1, ಉತ್ತರ ಪ್ರದೇಶ 8, ಪಶ್ಚಿಮ ಬಂಗಾಳ 3, ಅಂಡಮಾನ್‌ ನಿಕೋಬಾರ್‌ ದ್ವೀಪಗಳು 1, ಜಮ್ಮು ಕಾಶ್ಮೀರ 1, ಲಕ್ಷದ್ವೀಪ 1 ಹಾಗೂ ಪುದುಚೇರಿಯ ಒಂದು ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಕಣದಲ್ಲಿರುವ ಪ್ರಮುಖರು ಯಾರು?

ಮೊದಲ ಹಂತದ ಚುನಾವಣೆಯಲ್ಲಿಯೇ ದೇಶದ ಘಟಾನುಘಟಿಗಳ ಭವಿಷ್ಯವು ಮತಯಂತ್ರದಲ್ಲಿ ಭದ್ರವಾಗಲಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ (ಕೊಯಮತ್ತೂರು), ಮಾಜಿ ರಾಜ್ಯಪಾಲೆ ತಮಿಳ್‌ಸಾಯಿ ಸುಂದರರಾಜನ್‌ (ಚೆನ್ನೈ ದಕ್ಷಿಣ), ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ (ಜಮುಯಿ), ಮಾಜಿ ಸಿಎಂ ಕಮಲ್‌ನಾಥ್‌ ಪುತ್ರ ನಕುಲ್‌ ನಾಥ್‌ (ಛಿಂದ್ವಾರ), ಕನಿಮೋಳಿ ಕರುಣಾನಿಧಿ (ತೂತುಕುಡಿ) ಸೇರಿ ಹಲವು ಪ್ರಮುಖ ಅಭ್ಯರ್ಥಿಗಳ ಭವಿಷ್ಯವು ನಾಳೆ ತೀರ್ಮಾನವಾಗಲಿದೆ.

ಲೋಕಸಭೆ ಚುನಾವಣೆಯು ಶುಕ್ರವಾರ ಆರಂಭವಾಗಲಿದ್ದು, ಜೂನ್‌ 1ರವರೆಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮೊದಲ ಹಂತದಲ್ಲಿ 1,626 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಹಂತದ ಮತದಾನದ ಹಿನ್ನೆಲೆಯಲ್ಲಿ ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯಲಾಗಿದೆ. ಛತ್ತೀಸ್‌ಗಢದಲ್ಲಿ ನಕ್ಸಲ್‌ ದಾಳಿಯ ಭೀತಿ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ ನಡೆಯಲಿದೆ.

ಇದನ್ನೂ ಓದಿ: Priyanka Vadra: ಇವಿಎಂ ತಿರುಚದಿದ್ದರೆ ಬಿಜೆಪಿಗೆ 180 ಸೀಟೂ ಬರಲ್ಲ ಎಂದ ಪ್ರಿಯಾಂಕಾ ವಾದ್ರಾ!

Continue Reading

ಪ್ರಮುಖ ಸುದ್ದಿ

Jai Shree Ram Slogan: ಬಿಜೆಪಿ ಪ್ರತಿಭಟನೆ ಆರಂಭ; ವಿಚಾರಣೆ ವೇಳೆ ಆರೋಪಿಗಳು ಹೇಳಿದ ಸಂಗತಿ ಇಲ್ಲಿದೆ!

Jai Shree Ram Slogan: ಟ್ರಾಫಿಕ್ ಜಾಂ ಆದ ಹಿನ್ನೆಲೆಯಲ್ಲಿ ಟ್ರಾಫಿಕ್ ಸಿಗ್ನಲ್‌ಗಾಗಿ ಆರೋಪಿಗಳು ಕಾಯುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಹಿಂದೂ ಯುವಕರು ಶ್ರೀರಾಮ ನವಮಿ ಹಿನ್ನೆಲೆಯಲ್ಲಿ ʼಜೈ ಶ್ರೀರಾಂʼ ಘೋಷಣೆ ಕೂಗಿದ್ದರು. ಈ ವೇಳೆ ಕ್ಯಾತೆ ತೆಗೆದ ಆರೋಪಿಗಳು, ಜೈಶ್ರೀರಾಂ ಕೂಗಬೇಡಿ, ಅಲ್ಲಾಹು ಅಕ್ಬರ್‌ ಮಾತ್ರ ಎಂದು ಹಲ್ಲೆ ನಡೆಸಿದ್ದರು.

VISTARANEWS.COM


on

bjp protest jai shree ram slogan
Koo

ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರದಲ್ಲಿ (Vidyaranyapura) ಜೈ ಶ್ರೀರಾಮ್‌ (Jai Shree Ram Slogan) ಎಂದವರಿಗೆ ಅಡ್ಡಿಪಡಿಸಿ ಹಲ್ಲೆ (Assault Case) ನಡೆಸಿದ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ ಪ್ರಶ್ನಿಸಲಾಗಿದ್ದು, ಮದ್ಯದ ನಶೆಯಲ್ಲಿ ಇಬ್ಬರು ಅಪ್ರಾಪ್ತರು ಸೇರಿ ನಾಲ್ವರು ಯುವಕರು ಹಲ್ಲೆಗೆ ಇಳಿದದ್ದು ಗೊತ್ತಾಗಿದೆ. ಇಂದು ಪ್ರಕರಣ ವಿರೋಧಿಸಿ ವಿದ್ಯಾರಣ್ಯಪುರ ಪೊಲೀಸ್‌ ಸ್ಟೇಶನ್‌ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದು, ಸ್ಥಳದಲ್ಲಿ ಜಮಾಯಿಸುತ್ತಿದ್ದಾರೆ. ಬಿಗಿ ಭದ್ರತೆ ಹಾಕಲಾಗಿದೆ.

ಯುವಕರ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಬಂಧಿತರು ಯಾರೂ ಗಾಂಜಾ ಸೇವನೆ ಮಾಡಿಲ್ಲ, ಆದರೆ ಆಲ್ಕೋಹಾಲ್‌ ಸೇವಿಸಿರುವುದು ದೃಢಪಟ್ಟಿದೆ. ಟ್ರಾಫಿಕ್ ಜಾಂ ಆದ ಹಿನ್ನೆಲೆಯಲ್ಲಿ ಟ್ರಾಫಿಕ್ ಸಿಗ್ನಲ್‌ಗಾಗಿ ಆರೋಪಿಗಳು ಕಾಯುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಹಿಂದೂ ಯುವಕರು ಶ್ರೀರಾಮ ನವಮಿ ಹಿನ್ನೆಲೆಯಲ್ಲಿ ʼಜೈ ಶ್ರೀರಾಂʼ ಘೋಷಣೆ ಕೂಗಿದ್ದರು. ಈ ವೇಳೆ ಕ್ಯಾತೆ ತೆಗೆದ ಆರೋಪಿಗಳು, ಜೈಶ್ರೀರಾಂ ಕೂಗಬೇಡಿ, ಅಲ್ಲಾಹು ಅಕ್ಬರ್‌ ಮಾತ್ರ ಎಂದು ಹಲ್ಲೆ ನಡೆಸಿದ್ದರು.

“ಹಲ್ಲೆ ಮಾಡೋದು ನಮ್ಮ ಉದ್ದೇಶ ಆಗಿರಲಿಲ್ಲ. ಜೊತೆಗೆ ಯಾವುದೇ ಪ್ರೀ ಪ್ಲಾನ್ ಕೂಡ ಇರಲಿಲ್ಲ. ನಿನ್ನೆ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ನಾಲ್ಕು ಜನರು ಎರಡು ಬೈಕ್‌ಗಳಲ್ಲಿ ಬರುತ್ತಿದ್ದೆವು. ಎಂಎಸ್ ಪಾಳ್ಯ ಮುಖ್ಯರಸ್ತೆಯಲ್ಲಿ ಬರುವಾಗ ಟ್ರಾಫಿಕ್ ಜಾಮ್ ಆಯ್ತು. ಈ ವೇಳೆ ಕಾರಿನಲ್ಲಿ ಮೂರು‌ ನಾಲ್ಕು ಯುವಕರು ಬಂದು ನಮ್ಮ ಬೈಕ್‌ ಪಕ್ಕ ನಿಲ್ಲಿಸಿದ್ರು. ಕಾರಿನ ಗ್ಲಾಸ್ ಓಪನ್ ಮಾಡಿ ನಮ್ಮ ಕಡೆ ತಿರುಗಿ ಜೈ ಶ್ರೀರಾಮ್ ಅಂತ ಜೋರಾಗಿ ಕಿರುಚಿದರು. ಜೊತೆಗೆ ನಮಗೂ ಜೈ ಶ್ರೀರಾಮ್ ಅಂತ ಕೂಗಿ ಅಂದರು. ಅದಕ್ಕೆ ನಾವು, ನೀವೇ ಅಲ್ಲಾ ಹೋ ಅಕ್ಬರ್ ಅಂತ ಕೂಗಿ ಅಂತ ಹೇಳಿದೆವು. ಅದಕ್ಕೆ ನಾವು ಯಾಕೆ ಕೂಗಬೇಕು ಅಂತ ಮಾತಿಗೆ ಮಾತು ಬೆಳೆದು ಸ್ವಲ್ಪ ಹೊಡೆದಾಟ ಆಯ್ತು ಅಷ್ಟೇ. ಯಾವುದೇ ಬೇರೆ ಉದ್ದೇಶ ಇರಲಿಲ್ಲ” ಎಂದು ಆರೋಪಿಗಳು ಪೊಲೀಸ್‌ ವಿಚಾರಣೆ ವೇಳೆ ಹೇಳಿದ್ದಾರೆ.

ಆರೋಪಿಗಳ ಹಿನ್ನೆಲೆಯನ್ನೂ ಪೊಲೀಸರು ಆಮೂಲಾಗ್ರವಾಗಿ ವಿಚಾರಿಸಿದ್ದು, ಯಾವುದೇ ಹಳೇಯ ಕೇಸ್‌ನಲ್ಲಿ ಇರುವುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೆಡಿಕಲ್ ಟೆಸ್ಟ್‌ ಮಾಡಿಸಲಾಗಿದ್ದು, ಗಾಂಜಾ ಸೇವನೆ ಬಗ್ಗೆ ಯಾವುದೇ ಮಾಹಿತಿ ದೃಡಪಟ್ಟಿಲ್ಲ. ಬದಲಾಗಿ ಆಲ್ಕೋಹಾಲ್ ಸೇವಿಸಿರುವುದು ಬಯಲಾಗಿದೆ. ಸದ್ಯ ಆರೋಪಿಗಳ ವಿಚಾರಣೆ ಮುಂದುವರಿದಿದೆ.

ಪ್ರತಿಭಟನೆಗೆ ಕಾರ್ಯಕರ್ತರ ಜಮಾವಣೆ

ವಿದ್ಯಾರಣ್ಯಪುರ ಪೊಲೀಸ್ ಠಾಣೆ ಎದುರು ಇಂದು ಬೆಳಗ್ಗಿನಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದು, 500ಕ್ಕೂ ಅಧಿಕ ಕಾರ್ಯಕರ್ತರು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಬಿಜೆಪಿಯ ಕೆಲ‌ ನಾಯಕರು ಭಾಗಿಯಾಗುವ ಸಾಧ್ಯತೆ ಇದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ರಾಮ ಧ್ವಜ ಹಿಡಿದು ಪ್ರತಿಭಟನೆ ಕೂಗಿದ ಬಿಜೆಪಿ ಕಾರ್ಯಕರ್ತರು, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿದರು. ಮಾಜಿ ಕಾರ್ಪೋರೇಟರ್ ಮುನೇಂದ್ರ ಕುಮಾರ್ ಹಾಗೂ ಎ. ರವಿ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ.

ಇದನ್ನೂ ಓದಿ: Jai Shree Ram slogan: ಜೈ ಶ್ರೀರಾಮ್ ಎಂದು ಕೂಗಿದ್ದಕ್ಕೆ ಹಲ್ಲೆ; ಕಾರು ಅಡ್ಡಗಟ್ಟಿ ಮುಸ್ಲಿಂ ಯುವಕರ ಪುಂಡಾಟ!

Continue Reading

Lok Sabha Election 2024

Lok Sabha Election 2024: ಇಂದು ಬಿವೈ ರಾಘವೇಂದ್ರ, ಗದ್ದಿಗೌಡರ್‌, ಉಮೇಶ್‌ ಜಾಧವ್ ನಾಮಪತ್ರ; ಬಿಜೆಪಿ ಶಕ್ತಿ ಪ್ರದರ್ಶನ

Lok Sabha Election 2024: ಇಂದು ನಾಮಪತ್ರ ಸಲ್ಲಿಸುವ ಹಿನ್ನೆಲೆ ನಿನ್ನೆ ವಿವಿಧ ದೇವಸ್ಥಾನಗಳಿಗೆ ರಾಘವೇಂದ್ರ ಭೇಟಿ ನೀಡಿದ್ದರು. ಇಂದು 11:45ರ ಸುಮಾರಿಗೆ ರಾಘವೇಂದ್ರ ನಾಮಪತ್ರ ಸಲ್ಲಿಸಲಿದ್ದಾರೆ. ಶಿವಮೊಗ್ಗದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.

VISTARANEWS.COM


on

Lok Sabha Election 2024 by raghavendra pc gaddigoudar umesh jadhav
Koo

ಶಿವಮೊಗ್ಗ/ಬಾಗಲಕೋಟೆ: ಲೋಕಸಭೆ ಚುನಾವಣೆ (Lok Sabha Election 2024) ಕಣದಲ್ಲಿರುವ ಶಿವಮೊಗ್ಗದ (Shimogga) ಬಿಜೆಪಿ ಅಭ್ಯರ್ಥಿ (BJP Candidate) ಬಿ.ವೈ.ರಾಘವೇಂದ್ರ (BY Raghavendra), ಬಾಗಲಕೋಟೆಯ (Bagalakote) ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್ (PC Gaddigoudar) ಹಾಗೂ ಕಲಬುರಗಿಯ ಬಿಜೆಪಿ ಅಭ್ಯರ್ಥಿ ಉಮೇಶ್‌ ಜಾಧವ್ ಇಂದು ತಮ್ಮ ನಾಮಪತ್ರಗಳನ್ನು (Nomination) ಸಲ್ಲಿಸಲಿದ್ದಾರೆ. ಮೂರೂ ಕಡೆ ಬಿಜೆಪಿ ಶಕ್ತಿಪ್ರದರ್ಶನ ನಡೆಯಲಿದೆ.

ಶಿವಮೊಗ್ಗದಲ್ಲಿ ರಾಘವೇಂದ್ರ ಬೃಹತ್ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಲಿದ್ದಾರೆ. ರೋಡ್ ಶೋನಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಎಚ್‌ಡಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ. ಶಿವಮೊಗ್ಗ ನಗರದ ರಾಮಣ್ಣ ಶೆಟ್ಟಿ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಬಿಜೆಪಿ ಬೃಹತ್ ಮೆರವಣಿಗೆ ನಡೆಸಲಿದೆ. ಮೆರವಣಿಗೆಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ.

ಇಂದು ನಾಮಪತ್ರ ಸಲ್ಲಿಸುವ ಹಿನ್ನೆಲೆ ನಿನ್ನೆ ವಿವಿಧ ದೇವಸ್ಥಾನಗಳಿಗೆ ರಾಘವೇಂದ್ರ ಭೇಟಿ ನೀಡಿದ್ದರು. ಇಂದು 11:45ರ ಸುಮಾರಿಗೆ ರಾಘವೇಂದ್ರ ನಾಮಪತ್ರ ಸಲ್ಲಿಸಲಿದ್ದಾರೆ. ಶಿವಮೊಗ್ಗದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರ ವಿರುದ್ಧ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಅವರು ಬಂಡಾಯದ ಬಾವುಟ ಹಾರಿಸಿದ್ದು, ಸ್ವತಂತ್ರವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈಶ್ವರಪ್ಪ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಹಲವು ಬಿಜೆಪಿ ನಾಯಕರು ಮನವೊಲಿಸಲು ಪ್ರಯತ್ನಿಸಿದ್ದು, ಈಶ್ವರಪ್ಪ ಒಪ್ಪಿಲ್ಲ.

ಗದ್ದಿಗೌಡರ್‌ ಶಕ್ತಿಪ್ರದರ್ಶನ

ಬಾಗಲಕೋಟೆ: ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಅದಕ್ಕೂ ಮುನ್ನ ಬಿಜೆಪಿ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಗರದ ಬಸವೇಶ್ವರ ಕಾಲೇಜು ಆವರಣದಲ್ಲಿರುವಶ್ರೀ ಕಣವಿ ವೀರಭದ್ರೇಶ್ವರ ದೇವಸ್ಥಾನದಿಂದ ಬಿಜೆಪಿ ಮೆರವಣಿಗೆ ಆರಂಭವಾಗಲಿದ್ದು, ಬಸವೇಶ್ವರ ವೃತ್ತ, ರೈಲ್ವೆ ನಿಲ್ದಾಣ, ರೋಟರಿ ಸರ್ಕಲ್, ಎಪಿಎಂಸಿ ಮಾರ್ಗವಾಗಿ ಡಿಸಿ ಕಚೇರಿವರೆಗೂ ನಡೆಯಲಿದೆ.

ಬಳಿಕ ಬಾಗಲಕೋಟೆ ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ಜಾನಕಿ ಕೆ.ಎಮ್. ಅವರಿಗೆ ಪಿ.ಸಿ. ಗದ್ದಿಗೌಡರ್ ನಾಮಪತ್ರ ಸಲ್ಲಿಸಲಿದ್ದಾರೆ. ಕೇಸರಿ ಕಲಿಗಳ ದುಂದುಭಿ ಮೊಳಗಲಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಬಾಲಚಂದ್ರ ಜಾರಕಿಹೊಳಿ, ದೊಡ್ಡನಗೌಡ ಪಾಟೀಲ್ ಕುಷ್ಟಗಿ, ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಶಾಸಕ ಸಿದ್ದು ಸವದಿ, ಮಾಜಿ ಶಾಸಕ ವೀರಣ್ಣ ಚರಂತಿಮಠ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ.

ಸತತ ನಾಲ್ಕು ಬಾರಿ ಗೆದ್ದು ಬೀಗಿರುವ ಗದ್ದಿಗೌಡರ್, ಐದನೇ ಬಾರಿ ಮತ್ತೆ ಗೆಲುವಿನ ವಿಶ್ವಾಸದಲ್ಲಿ ಸ್ಪರ್ಧಿಸಿದ್ದಾರೆ. ಇಲ್ಲಿನ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ಪಾಟೀಲ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.

ಉಮೇಶ್‌ ಜಾಧವ್‌ ನಾಮಪತ್ರ

ಕಲಬುರಗಿ: ಕಲಬುರಗಿಯಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ, ಅರವಿಂದ ಲಿಂಬಾವಳಿ, ವಿ.ರಾಜೀವ್ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆಯಾಗಲಿದೆ.

ಕಲಬುರ್ಗಿ ನಗರದ ನಗರೇಶ್ವರ ಶಾಲೆಯಿಂದ ಜಗತ ವೃತ್ತದ ವರೆಗೆ ಬಿಜೆಪಿ ಮೆರವಣಿಗೆ ನಡೆಯಲಿದ್ದು, ಜಿಲ್ಲಾಧಿಕಾರಿ ಕಚೇರಿಯ ವರೆಗೆ ಬೃಹತ್ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಬಳಿಕ ಚುನಾವಣಾಧಿಕಾರಿ ಫೌಜಿಯಾ‌‌ ತರನ್ನುಮ್ ಅವರಿಗೆ ನಾಮಪತ್ರ ಸಲ್ಲಿಕೆಯಾಗಲಿದೆ.

ಇದನ್ನೂ ಓದಿ: Lok Sabha Election 2024: ಜಯ ಘೋಷದ ಮಧ್ಯೆ ಪ್ರಲ್ಹಾದ್‌ ಜೋಶಿ ನಾಮಪತ್ರ ಸಲ್ಲಿಕೆ

Continue Reading

ಕ್ರೈಂ

Children Death: ಅವಳಿ ಮಕ್ಕಳಿಗೆ ಮೃತ್ಯುವಾದ ಐಸ್‌ಕ್ರೀಂ; ಸ್ಮೋಕ್‌ ಬಿಸ್ಕೆಟ್‌ ತಿಂದು ಮಗು ಆಸ್ಪತ್ರೆಪಾಲು

Children Death: ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತಪಟ್ಟವರು. ನಿನ್ನೆ ಸಂಜೆ ಗ್ರಾಮಕ್ಕೆ ಐಸ್‌ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್‌ಕ್ರೀಂ ತಾಯಿ ಮತ್ತು ಮಕ್ಕಳು ಖರೀದಿಸಿ ತಿಂದಿದ್ದರು. ನಂತರ ಅಸ್ವಸ್ಥರಾಗಿದ್ದರು.

VISTARANEWS.COM


on

twin children death
Koo

ಮಂಡ್ಯ: ಬೇಸಿಗೆಯಲ್ಲಿ ಸ್ವಚ್ಛತೆಯಿಲ್ಲದ ಬೀದಿ ಬದಿಯ ಆಹಾರ (Road side food) ಸೇವಿಸಿ ಅಸ್ಸಸ್ಥಗೊಳ್ಳುವ ಹಾಗೂ ಮೃತಪಡುವ ಪ್ರಕರಣಗಳು ಕಂಡುಬರುತ್ತಿವೆ. ಮಂಡ್ಯ (Mandy news) ಹಾಗೂ ದಾವಣಗೆರೆಯಲ್ಲಿ (Davanagere news) ಇವು ವರದಿಯಾಗಿವೆ. ಐಸ್ ಕ್ರೀಂ (Ice cream) ತಿಂದು ಒಂದುವರೆ ವರ್ಷದ ಅವಳಿ ಮಕ್ಕಳು (Twin Children death) ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಈ ದಾರುಣ ಘಟನೆ ನಡೆದಿದೆ.

ಗ್ರಾಮದ ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತಪಟ್ಟವರು. ನಿನ್ನೆ ಸಂಜೆ ಗ್ರಾಮಕ್ಕೆ ಐಸ್‌ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್‌ಕ್ರೀಂ ತಾಯಿ ಮತ್ತು ಮಕ್ಕಳು ಖರೀದಿಸಿ ತಿಂದಿದ್ದರು. ನಂತರ ಅಸ್ವಸ್ಥರಾಗಿದ್ದರು. ಮಕ್ಕಳು ಮನೆಯಲ್ಲಿ ಸಾವಿಗೀಡಾದರೆ, ತೀವ್ರ ಅಸ್ವಸ್ಥಗೊಂಡ ತಾಯಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮಕ್ಕಳ ಮೃತ ದೇಹವನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ಕೊಡಿಸಲಾಗುತ್ತಿದೆ. ಐಸ್‌ಕ್ರೀಂ ಮಾರಲು ಬಂದಿದ್ದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ ನಡೆಯುತ್ತಿದೆ. ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸ್ಮೋಕ್‌ ಬಿಸ್ಕೆಟ್‌ ತಿಂದು ಮಗು ಅಸ್ವಸ್ಥ

ದಾವಣಗೆರೆ: ದಾವಣಗೆರೆಯಲ್ಲಿ ನಡೆಯುತ್ತಿದ್ದ ಎಕ್ಸಿಬಿಷನ್‌ನಲ್ಲಿ ಬಾಲಕನೊಬ್ಬ ಸ್ಮೋಕ್‌ ಬಿಸ್ಕೆಟ್‌ ತಿಂದು ಅಸ್ವಸ್ಥನಾಗಿದ್ದಾನೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಸಿಕೊಂಡಿದ್ದಾನೆ. ದಾವಣಗೆರೆ ನಗರದ ಅರುಣ್ ಸರ್ಕಲ್ ಬಳಿಯ ಎಕ್ಸಿಬಿಷನ್‌ನಲ್ಲಿ ಘಟನೆ ನಡೆದಿದೆ. ಮಕ್ಕಳ ಮನರಂಜನೆಗಾಗಿ ನಡೆಯುತ್ತಿರುವ ಎಕ್ಸಿಬಿಷನ್‌ನ ಸ್ಟಾಲ್ ಒಂದರಲ್ಲಿ ಸ್ಮೋಕ್ ಬಿಸ್ಕೆಟ್ ಕೊಡಲಾಗುತ್ತಿತ್ತು. ಅದನ್ನು ಏಕಾಏಕಿ ಸೇವಿಸಿ ಬಾಲಕ ಅಸ್ವಸ್ಥನಾಗಿದ್ದಾನೆ.

ಸ್ಮೋಕ್ ಬಿಸ್ಕೆಟ್ ಸ್ಟಾಲ್ ದೊಡ್ಡವರಿಂದ ಚಿಕ್ಕ‌ ಮಕ್ಕಳವರೆಗೂ ಗಮನ ಸೆಳೆದಿತ್ತು. ಒಂದು ಕಪ್‌ನಲ್ಲಿ 80 ರೂಪಾಯಿಗೆ ಐದು ಚಿಕ್ಕ‌ ಚಿಕ್ಕ ಬಿಸ್ಕೇಟ್ ನೀಡಲಾಗುತ್ತಿತ್ತು. ಹೀಗೆ ಕೊಟ್ಟ ಬಿಸ್ಕೇಟ್ ಅನ್ನು ಮಗು ಒಂದೇ ಸಲ ಬಾಯಿಗೆ ಹಾಕಿಕೊಂಡಿದೆ. ನಂತರ ನುಂಗಲೂ ಆಗದೇ ಉಗಿಯಲೂ ಆಗದೇ ಕಷ್ಟಪಟ್ಟಿದೆ.

ಅಸ್ವಸ್ಥಗೊಂಡ ಮಗುವನ್ನು ಕೂಡಲೇ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗುವಿಗೆ ಚಿಕಿತ್ಸೆ ನೀಡಿದ ನಂತರ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಘಟನೆಯಿಂದ ಆಕ್ರೋಶಗೊಂಡ ಪೋಷಕರು ಎಕ್ಸಿಬಿಷನ್‌ನಲ್ಲಿ ಹಾಕಲಾಗಿದ್ದ ಸ್ಟಾಲ್ ಅನ್ನು ಕಿತ್ತು ಬಿಸಾಕಿದ್ದಾರೆ. ಇಂತಹ ಸ್ಮೋಕ್ ಬಿಸ್ಕೆಟ್ ಅನ್ನು ಮಕ್ಕಳಿಗೆ ಕೊಡಬೇಡಿ ಎಂದು ಎಚ್ಚರಿಸುವ ಆಡಿಯೋ ಹರಿಬಿಟ್ಟಿದ್ದಾರೆ. ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಗೆ ಪಾಲಕರು ದೂರು ನೀಡಿದ್ದಾರೆ.

ಇದನ್ನೂ ಓದಿ: Kids Care: ಪ್ರಯಾಣದ ವೇಳೆ ಮಕ್ಕಳು ಅಸ್ವಸ್ಥರಾಗದಂತೆ ನೋಡಿಕೊಳ್ಳಲು ಹೀಗೆ ಮಾಡಿ

Continue Reading
Advertisement
Uttarakaanda Movie doodh peda diganth mirchi mallige
ಸ್ಯಾಂಡಲ್ ವುಡ್2 mins ago

Uttarakaanda Movie: ʻಉತ್ತರಕಾಂಡʼ ಸಿನಿಮಾದಲ್ಲಿ ದೂದ್ ಪೇಡಾ ದಿಗಂತ್ ಈಗʻಮಿರ್ಚಿ ಮಲ್ಲಿಗೆʼ!

Shubman Gill
ಕ್ರೀಡೆ7 mins ago

Shubman Gill: ಗ್ಯಾಲರಿಯಲ್ಲಿ ಕುಳಿತಿದ್ದ ಸುಂದರ ಹುಡುಗಿಯನ್ನು ಕಂಡು ಕ್ಲೀನ್​ ಬೌಲ್ಡ್​ ಆದ ಗಿಲ್​; ವಿಡಿಯೊ ವೈರಲ್​

Lok Sabha Election
ದೇಶ22 mins ago

Lok Sabha Election: ನಾಳೆ ಮೊದಲ ಹಂತದ ಮತದಾನ; ಪ್ರಜಾಪ್ರಭುತ್ವದ ಹಬ್ಬಕ್ಕೆ ಹೇಗಿದೆ ಸಿದ್ಧತೆ?

Malaika Arora says son Arhaan mannerisms are like Arbaaz Khan
ಸಿನಿಮಾ23 mins ago

Malaika Arora: ಮಗನ ಮ್ಯಾನರಿಸಂ ಮಾಜಿ ಪತಿಯಂತೆ ಇದೆ, ಅಟ್ರ್ಯಾಕ್ಟಿವ್‌ ಇಲ್ಲ ಎಂದ ಮಲೈಕಾ!

Viral Video
ಪ್ರಮುಖ ಸುದ್ದಿ37 mins ago

Viral Video: ಅಕ್ಷರ ಕಲಿಸಿದ ಶಿಕ್ಷಕಿಯ ಕಪಾಳಕ್ಕೆ ಹೊಡೆದ ವಿದ್ಯಾರ್ಥಿ; ಎಂಥ ಕಾಲ ಬಂತು ನೋಡಿ!

Break Up
ದೇಶ1 hour ago

ಬ್ರೇಕಪ್‌ ಬಳಿಕ ಹುಡುಗ ಆತ್ಮಹತ್ಯೆ ಮಾಡಿಕೊಂಡರೆ ಪ್ರಿಯತಮೆ ಹೊಣೆ ಅಲ್ಲ; ಕೋರ್ಟ್‌ ಆದೇಶ

kl rahul
ಕ್ರಿಕೆಟ್1 hour ago

KL Rahul: 32ನೇ ವಸಂತಕ್ಕೆ ಕಾಲಿಟ್ಟ ಕನ್ನಡಿಗ ಕೆ.ಎಲ್​ ರಾಹುಲ್​; ಬಿಸಿಸಿಐಯಿಂದ ವಿಶೇಷ ಶುಭ ಹಾರೈಕೆ

bjp protest jai shree ram slogan
ಪ್ರಮುಖ ಸುದ್ದಿ1 hour ago

Jai Shree Ram Slogan: ಬಿಜೆಪಿ ಪ್ರತಿಭಟನೆ ಆರಂಭ; ವಿಚಾರಣೆ ವೇಳೆ ಆರೋಪಿಗಳು ಹೇಳಿದ ಸಂಗತಿ ಇಲ್ಲಿದೆ!

Nikhil Siddhartha reveals his son name
ಟಾಲಿವುಡ್2 hours ago

Nikhil Siddhartha: ಮಗನ ಹೆಸರನ್ನು ರಿವೀಲ್‌ ಮಾಡಿದ ʻಕಾರ್ತಿಕೇಯʼ ಸಿನಿಮಾ ಖ್ಯಾತಿಯ ನಟ!

T20 World Cup
ಕ್ರೀಡೆ2 hours ago

T20 World Cup: ಟಿ20 ವಿಶ್ವಕಪ್​ನಲ್ಲಿ ಈ ಆಟಗಾರರಿಗೆ ಅವಕಾಶ ಸಿಗುವುದು ಡೌಟ್​

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ7 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌