ರಾಜಕೀಯದಲ್ಲಿ QR ಕೋಡ್‌ ಕದನ: ಕಾಂಗ್ರೆಸ್‌ನ ʼPay CMʼಗೆ ಉತ್ತರವಾಗಿ ಭಾರತ್‌ ಜೋಡೊ ಪೋಸ್ಟರ್‌ ಹರಿಬಿಟ್ಟ BJP - Vistara News

ಕರ್ನಾಟಕ

ರಾಜಕೀಯದಲ್ಲಿ QR ಕೋಡ್‌ ಕದನ: ಕಾಂಗ್ರೆಸ್‌ನ ʼPay CMʼಗೆ ಉತ್ತರವಾಗಿ ಭಾರತ್‌ ಜೋಡೊ ಪೋಸ್ಟರ್‌ ಹರಿಬಿಟ್ಟ BJP

ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಪೋಸ್ಟರ್‌ ಕದನ ನಡೆಯುತ್ತಿದ್ದು, ವಿವಿಧ ಬ್ರ್ಯಾಂಡ್‌ಗಳ ಹೆಸರನ್ನು ಬಳಸಿ ಪೋಸ್ಟರ್‌ಗಳನ್ನು ರೂಪಿಸಲಾಗುತ್ತಿರೆ.

VISTARANEWS.COM


on

bjp poster qr code
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರ ವಿರುದ್ಧ ಪೋಸ್ಟರ್‌ ಕದನ ಆರಂಭಿಸಿದ್ದ ಕಾಂಗ್ರೆಸ್‌ ಪೇ ಸಿಎಂ ಪೋಸ್ಟರ್‌ಗಳನ್ನು ಬೆಂಗಳೂರಿನ ವಿವಿಧೆಡೆ ಅಂಟಿಸಿತ್ತು. ಅದಕ್ಕೆ ಪ್ರತ್ಯುತ್ತರವಾಗಿ ಬಿಜೆಪಿ, ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೊ ಅಭಿಯಾನವನ್ನು ಟೀಕಿಸಿ ಸಾಮಾಜಿಕ ಜಾಲತಾಣ ಪೋಸ್ಟರ್‌ ಹರಿಬಿಟ್ಟಿದೆ.

ಬಿಜೆಪಿಯ ಸಾಮಾಜಿಯ ಜಾಲತಾಣ ಖಾತೆಯ ಮೂಲಕ, ಭಾರತ್‌ ಜೋಡೊ ಯಾತ್ರೆಯ ಸಮಯದಲ್ಲಿ ಕೇರಳದಲ್ಲಿ ನಡೆದಿದ್ದ ಘಟನೆಯನ್ನು ಉಲ್ಲೇಖಿಸಿದೆ.

ಭಾರತ್‌ ಜೋಡೊ ಯಾತ್ರೆಗಾಗಿ ಕೇರಳದ ಕೊಲ್ಲಂನಲ್ಲಿ ತರಕಾರಿ ಮಾರುವವರನ್ನು ಕಾಂಗ್ರೆಸ್‌ ಕಾರ್ಯಕರ್ತರು ದೋಚಿದ ಪ್ರಕರಣ ಬೆಳಕಿಗೆ ಬಂದಿತ್ತು. ಕಾಂಗ್ರೆಸ್ಸಿಗರೇ, ಯಾತ್ರೆಗಾಗಿ ರಾಹುಲ್‌ ಗಾಂಧಿ ಅವರ ಫೋಟೋ ಹಾಕಿ, ಕ್ಯುಆರ್‌ ಕೋಡ್‌ ಸೃಷ್ಟಿಸಿ ಭಿಕ್ಷೆ ಬೇಡಬಹುದಲ್ಲವೇ? ಎಂದು ಟೀಕೆ ಮಾಡಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟರ್‌ ಬಿಟ್ಟರೆ, ವಾಟ್ಸ್‌ಅಪ್‌ ಮೂಲಕ ಅನೇಕ ಪೋಸ್ಟರ್‌ಗಳನ್ನು ಬಿಜೆಪಿ ವಲಯದಲ್ಲಿ ಹಂಚಲಾಗುತ್ತಿದೆ. ಭಾರತ್‌ ಜೋಡೊ ಯಾತ್ರೆಗೆ ಹಣ ದೋಚಲು ಪೇಟಿಎಂ ಹೆಸರು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎನ್ನುವ ಜತೆಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಇಬ್ಬರೂ ಕಮಿಷನ್‌ ವಿಚಾರದಲ್ಲಿ ಮಾತನಾಡುತ್ತಿರುವಂತಡ ಪೋಸ್ಟರ್‌ ಡಿಸೈನ್‌ ಮಾಡಲಾಗಿದೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಫೋಟೊ ಬಳಸಿ, ಬರ್ನಾಲ್‌ ಬ್ರದರ್ಸ್‌ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರ ಫೊಟೊ ಬಳಸಲಾಗಿದೆ. ಈ ಮೂಲಕ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಪೋಸ್ಟರ್‌ ಜಗಳ ತಾರಕಕ್ಕೇರಿದೆ.

ಇದನ್ನೂ ಓದಿ | PAY CM ಅಭಿಯಾನ ಆರಂಭಿಸಿದ ಕಾಂಗ್ರೆಸ್‌: QR ಕೋಡ್‌ಗೆ ಸಿಟ್ಟಿಗೆದ್ದ ಬಿಜೆಪಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Road Accident : ವಾಕಿಂಗ್‌ ಹೊರಟಿದ್ದ ವೃದ್ಧೆಗೆ ಬೈಕ್‌ ಡಿಕ್ಕಿ; ಕ್ಷಣದಲ್ಲೇ ಹಾರಿಹೋಯ್ತು ಪ್ರಾಣ

Road Accident :ಕುಡಿದ ಮತ್ತಿನಲ್ಲಿ ಬೈಕ್‌ ಚಲಾಯಿಸಿದ ಯುವಕನೊಬ್ಬ ವೃದ್ಧೆಯೊಬ್ಬರ ಪ್ರಾಣವನ್ನೇ ಕಸಿದಿದ್ದಾನೆ. ವಾಕಿಂಗ್‌ ಮುಗಿಸಿ ಮನೆಗೆ ಹೋಗುತ್ತಿದ್ದ ವೃದ್ಧೆಗೆ ಹಿಂಬದಿಯಿಂದ ಬಂದ ಬೈಕ್‌ ಗುದ್ದಿದೆ. ಡಿಕ್ಕಿ ರಭಸಕ್ಕೆ ವೃದ್ಧೆ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಾಕಿಂಗ್‌ಗೆ (Walking) ತೆರಳಿದ್ದ ಮಹಿಳೆಗೆ ಬೈಕ್‌ವೊಂದು (Bike Hit) ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ. ಹೇರೋಹಳ್ಳಿ ನಿವಾಸಿ ಶಿವಮ್ಮ (66) ಮೃತ ದುರ್ದೈವಿ.

ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಬೆಂಗಳೂರಿನ ಹೇರೋಹಳ್ಳಿಯ ಸಮೀಪ ನಡೆದಿದೆ. ಶಿವಮ್ಮ ವಾಕಿಂಗ್‌ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಪಲ್ಸರ್ ಬೈಕ್‌ ಶಿವಮ್ಮರಿಗೆ ಗುದ್ದಿದೆ.

ಗುದ್ದಿದ ರಭಸಕ್ಕೆ ಕೆಳಗೆ ಬಿದ್ದ ಶಿವಮ್ಮ ತಲೆಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ ಶಿವಮ್ಮರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇತ್ತ ಬೈಕ್‌ ಸವಾರ ಸುನೀಲ್‌ ಎಂಬಾತನಿಗೂ ಗಾಯವಾಗಿದ್ದು, ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿರುವುದು ಪತ್ತೆಯಾಗಿದೆ.

ಸದ್ಯ ಘಟನೆ ಸಂಬಂಧ ಆರೋಪಿ ಸುನೀಲ್‌ನನ್ನು ಬಂಧಿಸಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Drowned in water : ಆಯತಪ್ಪಿ ಘಟಪ್ರಭಾ ನದಿಗೆ ಬಿದ್ದ ಟ್ರಾಕ್ಟರ್; ಓರ್ವ ನೀರುಪಾಲು, 12 ಮಂದಿ ಪಾರು

ಚಿಕ್ಕೋಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

ಬೆಳಗಾವಿ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು (Car Accident) ಅಪಘಾತಕ್ಕೀಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಮೃತ ದುರ್ದೈವಿಗಳು.

ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್‌ ಕಂಬ ಡಿಕ್ಕಿ ಹೊಡೆದಿದೆ. ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.

Car Accident

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ; ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಪರಮೇಶ್ವರ್‌

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಈಗಾಗಲೇ ರಾಜ್ಯ ಸರ್ಕಾರದ ಸಚಿವರೊಬ್ಬರ ತಲೆದಂಡವಾಗಿದೆ. ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿ, ಪ್ರಕರಣದ ತನಿಖೆ ನಡೆಯುತ್ತಿದೆ. ಬಿಜೆಪಿ ಆರೋಪಕ್ಕೆ ಸದ್ಯ ಉತ್ತರಿಸುವುದಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ (Valmiki Corporation Scam)ದಲ್ಲಿ ಈಗಾಗಲೇ ರಾಜ್ಯ ಸರ್ಕಾರದ ಸಚಿವರೊಬ್ಬರ ತಲೆದಂಡವಾಗಿದೆ. ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ (B Nagendra) ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ (G. Parameshwara) ಪ್ರತಿಕ್ರಿಯಿಸಿ, ಪ್ರಕರಣದ ತನಿಖೆ ನಡೆಯುತ್ತಿದೆ. ಬಿಜೆಪಿ ಆರೋಪಕ್ಕೆ ಸದ್ಯ ಉತ್ತರಿಸುವುದಿಲ್ಲ ಎಂದು ಹೇಳಿದ್ದಾರೆ.

ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ಹೆಸರೂ ಕೇಳಿ ಬಂದಿದೆ. ಅವರ ಕಚೇರಿಯಲ್ಲಿ ಸಾಕ್ಷ್ಯ ನಾಶ ಕುರಿತು ಚರ್ಚೆ ನಡೆದಿದೆ ಎಂದು ಪ್ರಕರಣದ 8ನೇ ಆರೋಪಿ, ಲೆಕ್ಕಾಧಿಕಾರಿ ಪರಶುರಾಮ್​ ಆರೋಪಿಸಿದ್ದಾರೆ. ಇದನ್ನೂ ಉಲ್ಲೇಖಿಸಿ ಬಿಜೆಪಿ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದೆ. ಹಗರಣದಲ್ಲಿ ಸರ್ಕಾರವೇ ಭಾಗಿಯಾಗಿದೆ ಎಂದು ಆರೋಪಿಸಿದೆ.

ಬಿಜೆಪಿ ಈ ಆರೋಪದ ಕುರಿತು ಖಾರವಾಗಿ ಉತ್ತರಿಸಿದ ಪರಮೇಶ್ವರ್‌ ಅವರು, ʼʼಬಿಜೆಪಿ ನಾಯಕರು ಹೇಳ್ತಾ ಇರುತ್ತಾರೆ. ಇದಕ್ಕೆಲ್ಲ ಹೌದು ಎನ್ನಲು ಆಗುವುದಿಲ್ಲ. ಈಗಾಗಲೇ ಎಸ್‌ಐಟಿ ಮತ್ತು ಸಿಬಿಐ ತನಿಖೆ ಆರಂಭಿಸಿದೆ. ಬ್ಯಾಂಕಿನಲ್ಲಿಯೂ ಅಕ್ರಮ ನಡೆದಿದೆ ಎನ್ನುವ ವಿಚಾರಕ್ಕೆ ಸಿಬಿಐ ಕೂಡ ಪ್ರವೇಶ ಮಾಡಿದೆ. ತನಿಖೆಯಲ್ಲಿ‌ ಏನು ಬರುತ್ತದೆ ಎನ್ನುವುದನ್ನು ನೋಡೋಣʼʼ ಎಂದು ತಿಳಿಸಿದ್ದಾರೆ.

ಸಚಿವ ಶರಣು ಪ್ರಕಾಶ ಪಾಟೀಲ್ ಕಚೇರಿಯಲ್ಲಿ ಸಾಕ್ಷಿ ನಾಶ ಕುರಿತು ಸಭೆ ನಡೆದಿದೆ ಎನ್ನುವ ಆರೋಪದ ಬಗ್ಗೆ ಉತ್ತರಿಸಿದ ಅವರು, ʼʼಬಂಧಿತರು ನೀಡಿದ ಹೇಳಿಕೆಯನ್ನು ಪರಿಶೀಲಿಸಲಾಗುತ್ತಿದೆ. ಅಗತ್ಯವಿದ್ದರೆ ಶರಣು ಪ್ರಕಾಶ ಪಾಟೀಲ್ ಅವರ ಕಚೇರಿಯಲ್ಲಿನ ಸಿಸಿ ಟಿವಿ ದೃಶ್ಯಾವಳಿಗಳನ್ನು ಎಸ್ಐ‌ಟಿ ಪಡೆದುಕೊಳ್ಳಲಿದೆ. ತನಿಖೆಗೆ ಸಿಬಿಐನಿಂದ ಯಾವುದೇ ಪತ್ರ ಬಂದಿಲ್ಲ. ಮೌಕಿಕವಾಗಿ ಕೇಳಿದ್ದಾರೆ ಎಂಬ ಮಾಹಿತಿ ಇದೆ. ನಿನ್ನೆ, ಮೊನ್ನೆ ಏನಾದ್ರೂ ಪತ್ರ ಬಂದಿದ್ಯಾ ಎನ್ನುವುದು ಗೊತ್ತಿಲ್ಲ. ಬಂದಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಶೀಘ್ರ ತನಿಖೆ ಮುಗಿಸುವಂತೆ ಎಸ್‌ಐಟಿಗೆ ಮನವಿ ಮಾಡಿದ್ದೇವೆ. ಆದರೆ ಇಷ್ಟೇ ದಿನದಲ್ಲಿ ತನಿಖೆ ಮಾಡಿ ಅಂತ ಹೇಳಲು ಆಗುವುದಿಲ್ಲ. ಅವರಿಗೂ ಸಮಯಾವಕಾಶ ಕೊಡಬೇಕಾಗುತ್ತದೆʼʼ ಎಂದು ಪರಮೇಶ್ವರ್‌ ತಿಳಿಸಿದ್ದಾರೆ.

ಮೋದಿಗೆ ಅಭಿನಂದನೆ

ಮೂರನೇ ಬಾರಿಗೆ ಪ್ರಧಾನಿ ಆಗಗುತ್ತಿರುವ ಮೋದಿ ಅವರಿಗೆ ಪರಮೇಶ್ವರ್‌ ಅಭಿನಂದನೆ ತಿಳಿಸಿದ್ದಾರೆ. ”ಕಳೆದ 10 ವರ್ಷದಲ್ಲಿ ಜನ ಸಮುದಾಯ ತೊಂದರೆಯಲ್ಲಿದೆ. ಜನರ ದೃಷ್ಟಿಯಿಂದ ಕೆಲಸ ಮಾಡಬೇಕು. ಹಿಂದೆ ಎನೆಲ್ಲ ತಪ್ಪುಗಳಾಗಿದೆ ಅದನ್ನ ಸರಿಪಡಿಸಿಕೊಳ್ಳಲಿ. ಕರ್ನಾಟಕಕ್ಕೆ ಹೆಚ್ಚು ಸ್ಥಾನ ಸಿಗಲಿ. ನಿರ್ಮಲಾ ಸೀತಾರಾಮನ್‌ ಸೇರಿದಂತೆ ರಾಜ್ಯದಲ್ಲಿನ ಸಚಿವರು ಹಿತ ಕಾಯುವಲ್ಲಿ ವಿಫಲರಾಗಿದ್ದಾರೆ. ಇನ್ನಾದರೂ ಜನರಿಗಾಗಿ ಕೆಲಸ ಮಾಡಬೇಕುʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Valmiki Corporation Scam: ಸಾಕ್ಷ್ಯ ನಾಶ ಆರೋಪ; ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ ಶರಣ ಪ್ರಕಾಶ್ ಪಾಟೀಲ್

Continue Reading

ಬೆಂಗಳೂರು

Assault case : ಮೊದಲನೇ ಹೆಂಡ್ತಿ ಮಕ್ಕಳೊಂದಿಗೆ ಬಂದು 2ನೇ ಹೆಂಡ್ತಿಗೆ ರಕ್ತ ಬರುವಂತೆ ಬಾರಿಸಿದ ಭೂಪ

Assault case : ಮೊದಲನೇ ಹೆಂಡತಿ ಹಾಗೂ ಮಕ್ಕಳೊಂದಿಗೆ ಸೇರಿ ಪತಿರಾಯನೊಬ್ಬ ಎರಡನೇ ಹೆಂಡತಿಗೆ ರಕ್ತ ಬರುವಂತೆ ಬಾರಿಸಿದ್ದಾರೆ. ಮಾರಣಾಂತಿಕ ಹಲ್ಲೆಯಿಂದಾಗಿ ಮಹಿಳೆ ಆಸ್ಪತ್ರೆ ಪಾಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

VISTARANEWS.COM


on

By

assault Case in Bengaluru
Koo

ಬೆಂಗಳೂರು: ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ತಮ್ಮ ಸ್ವಂತ ಪತಿಯಿಂದಲೇ ಮಾರಣಾಂತಿಕ ಹಲ್ಲೆಗೆ (Assault case) ಒಳಗಾಗಿದ್ದಾರೆ. ಸರಸ್ವತಿ (40) ಹಲ್ಲೆಗೊಳಗಾದವರು.

ಸರಸ್ವತಿ ಅವರು 20 ವರ್ಷದ ಹಿಂದೆ ಸುರೇಶ್ ಎಂಬಾತನನ್ನು ಎರಡನೇ ಮದುವೆಯಾಗಿದ್ದರು. ಇವರಿಬ್ಬರಿಗೆ ಇಬ್ಬರು ಮಕ್ಕಳು ಇದ್ದಾರೆ. ಸರಸ್ವತಿ ಅವರು ಪತಿ ಸುರೇಶ್ ಹಾಗೂ ಆತನ ಮೊದಲನೇ ಪತ್ನಿ ಲಕ್ಷ್ಮಿ ಕಾಟಕ್ಕೆ ಬೇಸತ್ತಿದ್ದರು. ಹೀಗಾಗಿ ಒಂದು ವರ್ಷದ ಹಿಂದೆ ಮನೆ ಬಿಟ್ಟು ಹೋಗಿ, ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆಗಾಗ ಮನೆ ಬಳಿ ಈ ದಂಪತಿ ಗಲಾಟೆ ಮಾಡುತ್ತಿದ್ದರು ಎನ್ನಲಾಗಿದೆ.

ಜೂನ್‌ 7ರ ತಡರಾತ್ರಿ ಸರಸ್ವತಿ ಮನೆ ಬಳಿ ಬಂದ ಸುರೇಶ್ ಹಾಗೂ ಮೊದಲನೇ ಹೆಂಡತಿ ಮಕ್ಕಳು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಮನೆ ಮುಂದೆ ಕೂಗಾಡುತ್ತಿದ್ದನ್ನು ಸರಸ್ವತಿ ಹಾಗೂ ಅವರ ಮಕ್ಕಳು ಪ್ರಶ್ನಸಿದ್ದಕ್ಕೆ ರಾಡ್‌ ಹಾಗೂ ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ.

ಈ ಹಲ್ಲೆಯಿಂದ ಸರಸ್ವತಿ ಅವರ ಮೂಗು ಮುರಿದಿದ್ದು, ಕುಸಿದು ಬಿದ್ದಿದ್ದಾರೆ. ಕೂಡಲೇ ಮಕ್ಕಳಿಬ್ಬರು ಸರಸ್ವತಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಪತಿ ಸುರೇಶ್‌ ಹಾಗೂ ಆತನ ಮೊದಲನೇ ಹೆಂಡತಿ ವಿರುದ್ಧ ಸರಸ್ವತಿ ಮತ್ತು ಅವರ ಮಕ್ಕಳು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Shivamogga Accident : ತಿರುವಿನಲ್ಲಿ ಖಾಸಗಿ ಬಸ್‌ ಪಲ್ಟಿ; ಉರುಳಿ ಬಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ

ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

ಬೆಂಗಳೂರು: ರಾಜಧಾನಿ ಬೆಂಗಳೂರಿ‌ನಲ್ಲಿ (Bengaluru News) ಭಯಂಕರ ಕೊಲೆ (Bengaluru Murder) ಪ್ರಕರಣವನ್ನು ಸಂಪಿಗೇಹಳ್ಳಿ ಪೊಲೀಸರು ಬಯಲು ಮಾಡಿದ್ದಾರೆ. ಮನೆಗೆ ಬಂದಿದ್ದ ವ್ಯಕ್ತಿಗೆ ಜಾಕ್‌ ರಾಡ್‌ನಿಂದ ಹೊಡೆದು ಕೊಂದು, ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದಿದ್ದಾನೆ. ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಈ ಕೃತ್ಯ ನಡೆದಿದೆ. ಕೆ.ವಿ.ಶ್ರೀನಾಥ್ (34) ಕೊಲೆಯಾದವನು. ಮಾಧವ ರಾವ್ ಎಂಬಾತ ಕೊಲೆ ಆರೋಪಿಯಾಗಿದ್ದಾನೆ.

ಥಣಿಸಂದ್ರದ ಅಂಜನಾದ್ರಿ ಲೇಔಟ್ ನಿವಾಸಿಯಾದ ಕೆ.ವಿ. ಶ್ರೀನಾಥ್‌ ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಮಾರ್ಗದರ್ಶಿ ಚಿಟ್‌ ಫಂಡ್‌ನಲ್ಲಿ ಡೆವಲಪ್ಮೆಂಟ್ ಆಫೀಸರ್ ಆಗಿದ್ದ. ಹೀಗಿರುವಾಗ ಕಳೆದ ಮೇ.28ರ ಬೆಳಗ್ಗೆ ಮನೆಯಿಂದ ಹೊರಹೋಗಿದ್ದ ಶ್ರೀನಾಥ್‌ ವಾಪಸ್ ಆಗಿರಲಿಲ್ಲ. ಇದರಿಂದ ಹೆದರಿದ ಶ್ರೀನಾಥ್‌ ಪತ್ನಿ ಮೇ.29ರಂದು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್‌ ಕೇಸ್‌ ದಾಖಲಿಸಿದ್ದರು.

ದೂರು ದಾಖಲಿಸಿಕೊಂಡು ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರಿಗೆ ಕೆ.ವಿ.ಶ್ರೀನಾಥ್ ಮೇ.28ರಂದು ಆರೋಪಿ ಮಾಧವರಾವ್ ಮನೆಗೆ ಹೋಗಿದ್ದು ಗೊತ್ತಾಗಿತ್ತು. ಕೆ.ಆರ್.ಪುರಂನ ವಿಜಿನಪುರದಲ್ಲಿರುವ ಮಾಧವರಾವ್ ಮನೆಗೆ ಶ್ರೀನಾಥ್‌ ಹೋಗುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದರೆ ಒಳಗೆ ಹೋದವನು ಹೊರಗೆ ಬಂದಿರಲಿಲ್ಲ. ಜತೆಗೆ ಮನೆಯ ಒಳಗಡೆ ಪರಿಶೀಲನೆ ಮಾಡಿದಾಗ ರಕ್ತದ ಕಲೆಗಳು ಪತ್ತೆಯಾಗಿದ್ವು. ಇದರಿಂದ ಮಾಧವರಾವ್ ಬಗ್ಗೆ ವಿಚಾರಿಸಿದಾಗ ಆತನೂ ನಾಪತ್ತೆಯಾಗಿದ್ದ.

ಬಳಿಕ ಆತನ ಮೊಬೈಲ್‌ ಲೋಕೇಶನ್‌ ಪತ್ತೆ ಮಾಡಿದ ಪೊಲೀಸರಿಗೆ ಆರೋಪಿ ಆಂಧ್ರಪ್ರದೇಶದಲ್ಲಿಇದ್ದಾನೆ ಎಂದು ಗೊತ್ತಾಗಿತ್ತು. ನಂತರ ಮಾಧವರಾವ್‌ನನ್ನು ಕರೆತಂದು ಪೊಲೀಸರು ವಿಚಾರಣೆಯನ್ನು ನಡೆಸಿದಾಗ ಅಸಲಿ ಕಥೆಯನ್ನು ತೆರೆದಿಟ್ಟಿದ್ದ.

Bengaluru  Murder
ತುಂಡು ತುಂಡಾಗಿ ಕತ್ತರಿಸಿದ ದೇಹಕ್ಕಾಗಿ ಹುಡುಕಾಟ

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ಅಕ್ರಮ ಸಂಬಂಧದ ಶಂಕೆ

ಮಾಧವರಾವ್ ಮತ್ತು ಕೆ.ವಿ.ಶ್ರೀನಾಥ್‌ ಇಬ್ಬರು ಎರಡು ವರ್ಷದಿಂದ ಪರಿಚಯಸ್ಥರಾಗಿದ್ದರು. ಕೆ.ವಿ.ಶ್ರೀನಾಥ್ ಬಳಿ ಮಾಧವರಾವ್ 5 ಲಕ್ಷ ರೂ. ಹಣದ ಚೀಟಿ ಹಾಕಿದ್ದ. ಈ ಚೀಟಿ ಹಣದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿತ್ತು. ಚೀಟಿ ಹಣ ವಾಪಸ್ ಕೊಡುವಂತೆ ಶ್ರೀನಾಥ್‌ ಒತ್ತಾಯ ಮಾಡುತ್ತಿದ್ದ. ಅಷ್ಟಲ್ಲದೇ ಮಾಧವರಾವ್‌ ಪತ್ನಿ ಜತೆ ಶ್ರೀನಾಥ್‌ ಅಕ್ರಮ ಸಂಬಂಧವನ್ನು ಹೊಂದಿದ್ದನಂತೆ.

ಹೀಗಿರುವಾಗ ಮೇ 28ರಂದು ಬೆಳಗ್ಗೆ ಮಾಧವರಾವ್ ಮನೆಗೆ ಶ್ರೀನಾಥ್‌ ಬಂದಿದ್ದ. ಈ ವೇಳೆ ಮನೆಯಲ್ಲಿ ಇಬ್ಬರಿಗೂ ಹಣದ ವಿಚಾರಕ್ಕೆ ಗಲಾಟೆ ಆಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿನಲ್ಲಿ ಮಾಧವರಾವ್ ಮನೆಯಲ್ಲಿದ್ದ ಜಾಕ್ ರಾಡ್‌ನಿಂದ ಶ್ರೀನಾಥ್ ತಲೆಗೆ ಹೊಡೆದಿದ್ದ. ಕುಸಿದು ಬಿದ್ದ ಶ್ರೀನಾಥ್‌ನ ದೇಹವನ್ನು ಮಚ್ಚಿನಿಂದ ತುಂಡು ತುಂಡಾಗಿ ಕತ್ತರಿಸಿದ್ದ.

ಬಳಿಕ ಸಾಕ್ಷಿ ನಾಶ ಮಾಡಲು ಶ್ರೀನಾಥ್‌ನ ಮೃತದೇಹವನ್ನು ಮೂರು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ. ಮೊದಲಿಗೆ ಒಂದು ಬ್ಯಾಗ್ ನಂತರ ಎರಡು ಬ್ಯಾಗ್‌ಗಳಲ್ಲಿ ಮೃತದೇಹದ ತುಂಡುಗಳನ್ನು ತುಂಬಿಕೊಂಡು ಬೆಳತ್ತೂರು ಬಳಿಯ ಮೋರಿಯಲ್ಲಿ (ಪಿನಾಕಿನಿ ನದಿ) ಹಾಕಿದ್ದ. ನಂತರ ತನ್ನ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಆಂಧ್ರಪ್ರದೇಶಕ್ಕೆ ಎಸ್ಕೇಪ್ ಆಗಿದ್ದ.

ಸದ್ಯ ಕೊಲೆ ಪ್ರಕರಣವನ್ನು ರಾಮಮೂರ್ತಿನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ರಾಮಮೂರ್ತಿನಗರ ಪೊಲೀಸರು ಕೊಲೆ (302) ಮತ್ತು ಸಾಕ್ಷಿ ನಾಶ(201)ರಡಿ ಕೇಸ್ ದಾಖಲು ಮಾಡಿಕೊಂಡು, ಶ್ರೀನಾಥ್‌ ಮೃತದೇಹದ ತುಂಡುಗಳಿಗೆ ಕಳೆದ ಮೂರು ದಿನದಿಂದ ಹುಡುಕಾಡುತ್ತಿದ್ದಾರೆ. ಸದ್ಯಕ್ಕೆ ಮೋರಿಯಲ್ಲಿ ಮೃತದೇಹದ ತುಂಡುಗಳು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದ್ದು, ಮಂಗಳೂರಿನಿಂದ ನುರಿತರನ್ನು ಕರೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Road Accident : ಟೆಂಪೋ ಪಲ್ಟಿ; ಓವರ್‌ಟೇಕ್‌ ಧಾವಂತಕ್ಕೆ ಕಾರ್ಮಿಕ ಸಾವು, ಮತ್ತೋರ್ವ ಗಂಭೀರ

Road Accident : ಓವರ್‌ಟೇಕ್‌ ಮಾಡುವ ಧಾವಂತದಲ್ಲಿ ಟೆಂಪೋ ಪಲ್ಟಿಯಾಗಿದ್ದು, ಕೂಲಿ ಕಾರ್ಮಿಕನೊರ್ವ ಮೃತಪಟ್ಟರೆ, ಮತ್ತೊರ್ವ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

road Accident
Koo

ಕಲಬುರಗಿ: ಗೂಡ್ಸ್ ಮಿನಿ ಟೆಂಪೋ ಪಲ್ಟಿಯಾಗಿ (Road Accident) ಸ್ಥಳದಲ್ಲೆ ಓರ್ವ ಮೃತಪಟ್ಟರೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಡೊಂಗರಗಾಂವ್ ಬಳಿ ಘಟನೆ ನಡೆದಿದೆ. ಹರಕಂಚಿ ಗ್ರಾಮದ ಕೂಲಿ ಕಾರ್ಮಿಕ ಶಿವಪ್ಪ ಸ್ಥಳದಲ್ಲೆ ಮೃತಪಟ್ಟ ದುರ್ದೈವಿ.

ಹರಕಂಚಿ ಗ್ರಾಮದಿಂದ ಕೂಲಿ ಕೆಲಸಕ್ಕೆಂದು ಹುಮನಬಾದ್ ಪಟ್ಟಣಕ್ಕೆ ತೆರಳುತ್ತಿದ್ದರು. ಈ ವೇಳೆ ವಾಹನವೊಂದಕ್ಕೆ ಓವರ್‌ಟೆಕ್ ಮಾಡಲು ಹೋಗಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಟೆಂಪೋ ಪಲ್ಟಿ ಹೊಡೆದಿದೆ.

ಪಲ್ಟಿ ಹೊಡೆದ ರಭಸಕ್ಕೆ ಶಿವಪ್ಪ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕಮಲಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಟೆಂಪೋವನ್ನು ತೆರವು ಮಾಡಿದ್ದಾರೆ.

ಇದನ್ನೂ ಓದಿ: Electric shock : ಬಟ್ಟೆ ಒಣ ಹಾಕಲು ಹೋದಾಗ ಕರೆಂಟ್‌ ಶಾಕ್‌ನಿಂದ ವಿದ್ಯಾರ್ಥಿ ಸಾವು

ಚಿಕ್ಕೋಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ; ಕಾರು ಬಿಟ್ಟು ಚಾಲಕ ಪರಾರಿ

ಬೆಳಗಾವಿ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು (Car Accident) ಅಪಘಾತಕ್ಕೀಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಮೃತ ದುರ್ದೈವಿಗಳು.

ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್‌ ಕಂಬ ಡಿಕ್ಕಿ ಹೊಡೆದಿದೆ. ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.

Car Accident

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಇದನ್ನೂ ಓದಿ: Shivamogga Accident : ತಿರುವಿನಲ್ಲಿ ಖಾಸಗಿ ಬಸ್‌ ಪಲ್ಟಿ; ಉರುಳಿ ಬಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ

ಕಾರಿಗೆ ಬೈಕ್ ಅಡ್ಡ ಹಾಕಿ ಬಾನೆಟ್‌ಗೆ ಒದ್ದ ಬೈಕ್ ಸವಾರ

ಬೆಂಗಳೂರು: ದಾರಿ ಬಿಡುವ ಸಂದರ್ಭದಲ್ಲಿ ಬೈಕ್‌ ಮತ್ತು ಕಾರು ಚಾಲಕನ ಮಧ್ಯೆ ಜಗಳ ನಡೆದಿರುವ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಮೂಲಕ ನಗರದಲ್ಲಿ ನಡೆಯುತ್ತಿರುವ ರೋಡ್ ರೇಜ್‌ಗೆ ಮತ್ತೊಂದು ಘಟನೆ ಸೇರ್ಪಡೆಯಾದಂತಾಗಿದೆ.

ಜಕ್ಕೂರಿನಲ್ಲಿ ಯೂ ಟರ್ನ್ ಮಾಡುವ ವೇಳೆ ಕಾರು ಚಾಲಕ ಪ್ರವೀಣ್ ಹಾಗೂ ದ್ವಿಚಕ್ರ ವಾಹನ ಸವಾರನ ನಡುವೆ ಕಿರಿಕ್ ನಡೆದಿದೆ. ಈ ವೇಳೆ ಕಾರನ್ನು ಅಡ್ಡ ಹಾಕಿ ಕಾರ್‌ನ ಬಾನೆಟ್‌ಗೆ ಒದ್ದು ಬೈಕ್‌ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಫಾಲೋ ಮಾಡಿಕೊಂಡು ಬಂದಿದ್ದ ದ್ವಿಚಕ್ರ ವಾಹನ ಸವಾರ ಶ್ರೀರಾಮಪುರ ವಿಲೇಜ್ ಬಳಿಯೂ ಕಿರಿಕ್‌ ಮಾಡಿದ್ದಾನೆ. ಕಾರ್ ಡ್ಯಾಷ್ ಕ್ಯಾಮ್‌ ಬೈಕ್‌ ಸವಾರನ ಕೃತ್ಯ ಸೆರೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Modi 3.0 Cabinet
ದೇಶ4 mins ago

Modi 3.0 Cabinet: ಬಿಜೆಪಿಯ 5, NDAಯ 10 ಸಂಸದರು INDIA ಜೊತೆ ಸಂಪರ್ಕ? ಹೊಸ ಬಾಂಬ್‌ ಸ್ಫೋಟಿಸಿದ TMC

Road Accident
ಬೆಂಗಳೂರು10 mins ago

Road Accident : ವಾಕಿಂಗ್‌ ಹೊರಟಿದ್ದ ವೃದ್ಧೆಗೆ ಬೈಕ್‌ ಡಿಕ್ಕಿ; ಕ್ಷಣದಲ್ಲೇ ಹಾರಿಹೋಯ್ತು ಪ್ರಾಣ

Valmiki Corporation Scam
ಕರ್ನಾಟಕ28 mins ago

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ; ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಪರಮೇಶ್ವರ್‌

Niveditha Gowda chandan matters told by Prashanth Sambargi
ಸ್ಯಾಂಡಲ್ ವುಡ್39 mins ago

Niveditha Gowda: ದುಡ್ಡಿನ ಹಿಂದೆ ಹೋದವರು ಯಾರಂತ ಗೊತ್ತಾಗುತ್ತೆ; ಚಂದನ್‌ಗೆ ನಮ್ಮ ಸಪೋರ್ಟ್‌ ಎಂದ ಪ್ರಶಾಂತ್‌ ಸಂಬರಗಿ!

assault Case in Bengaluru
ಬೆಂಗಳೂರು40 mins ago

Assault case : ಮೊದಲನೇ ಹೆಂಡ್ತಿ ಮಕ್ಕಳೊಂದಿಗೆ ಬಂದು 2ನೇ ಹೆಂಡ್ತಿಗೆ ರಕ್ತ ಬರುವಂತೆ ಬಾರಿಸಿದ ಭೂಪ

Puja Tomar
ಕ್ರೀಡೆ54 mins ago

Puja Tomar: ಯುಎಫ್​ಸಿ ಪಂದ್ಯ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಪೂಜಾ ತೋಮರ್

road Accident
ಕಲಬುರಗಿ1 hour ago

Road Accident : ಟೆಂಪೋ ಪಲ್ಟಿ; ಓವರ್‌ಟೇಕ್‌ ಧಾವಂತಕ್ಕೆ ಕಾರ್ಮಿಕ ಸಾವು, ಮತ್ತೋರ್ವ ಗಂಭೀರ

Modi 3.0 Cabinet
ದೇಶ1 hour ago

Modi 3.0 Cabinet: ರಾಜ್ಯದಿಂದ ಜೋಶಿ, ಶೋಭಾ ಕರಂದ್ಲಾಜೆ, ಕುಮಾರಸ್ವಾಮಿಗೆ ಸಚಿವ ಸ್ಥಾನ; ಡಾ. ಮಂಜುನಾಥ್‌ಗೆ ಇಲ್ಲ ಅವಕಾಶ

Gold Rate Today
ಚಿನ್ನದ ದರ1 hour ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬೆಲೆ ಗಮನಿಸಿ

Maharaj Movie Objects by Bajrang Dal Starring Junaid Khan
ಬಾಲಿವುಡ್1 hour ago

Maharaj Movie: ಹಿಂದು ಧರ್ಮ, ಶ್ರೀಕೃಷ್ಣನ ಅವಹೇಳನ; ಆಮೀರ್ ಖಾನ್ ಪುತ್ರನಿಗೆ ಬಜರಂಗದಳ ವಾರ್ನಿಂಗ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌