R Dhruvanarayana : ಸಭ್ಯತೆಯ ಸವ್ಯಸಾಚಿ, ಶುದ್ಧ- ಮೌಲ್ಯಾಧರಿತ ರಾಜಕಾರಣದ ʻಧ್ರುವʼ ನಕ್ಷತ್ರ ಕಣ್ಮರೆ - Vistara News

ಕರ್ನಾಟಕ

R Dhruvanarayana : ಸಭ್ಯತೆಯ ಸವ್ಯಸಾಚಿ, ಶುದ್ಧ- ಮೌಲ್ಯಾಧರಿತ ರಾಜಕಾರಣದ ʻಧ್ರುವʼ ನಕ್ಷತ್ರ ಕಣ್ಮರೆ

ಜನಪರ ಮಾತ್ರವಲ್ಲ ಎಲ್ಲ ಪಕ್ಷ, ನಾಯಕರ ಜತೆಗೂ ಅತ್ಯುತ್ತಮ ಬಾಂಧವ್ಯ ಹೊಂದಿದ್ದವರು ಆರ್‌. ಧ್ರುವನಾರಾಯಣ (R Dhruvanarayana). ಸಭ್ಯ ರಾಜಕಾರಣಕ್ಕೆ, ಒಳ್ಳೆಯತನಕ್ಕೆ ಮತ್ತೊಂದು ಹೆಸರು

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪರಿಶುದ್ಧ ರಾಜಕಾರಣ, ಸಭ್ಯ ನಡೆ-ನುಡಿಗಳಿಗೆ ಹೆಸರಾಗಿದ್ದ ಚಾಮರಾಜ ನಗರದ ಕಾಂಗ್ರೆಸ್‌ ನಾಯಕ ಆರ್‌. ಧ್ರುವ ನಾರಾಯಣ(62) ಕಣ್ಮರೆಯಾಗಿದ್ದಾರೆ (R Dhruvanarayana). ಈ ಮೂಲಕ ಶುದ್ಧ-ಮೌಲ್ಯಾಧರಿತ ರಾಜಕೀಯದ ಧ್ರುವ ನಕ್ಷತ್ರವೊಂದು ಕಳಚಿಬಿದ್ದಂತಾಗಿದೆ.

ವಿದ್ಯಾರ್ಥಿ ನಾಯಕರಾಗಿ ನಾಯಕತ್ವದ ಪಟ್ಟುಗಳನ್ನು ಬೆಳೆಸಿಕೊಂಡು ಕಾಂಗ್ರೆಸ್‌ ಪಕ್ಷದ ಮೂಲಕ ರಾಜಕಾರಣವನ್ನು ಪ್ರವೇಶಿಸಿದ ಧ್ರುವನಾರಾಯಣ ಅವರು ಎರಡು ಸೋಲು ಮತ್ತು ನಾಲ್ಕು ಗೆಲುವುಗಳ ನಡುವೆ ಜೀಕಿದವರು. ಎರಡು ಬಾರಿ ವಿಧಾನಸಭೆಗೆ, ಎರಡು ಬಾರಿ ಲೋಕಸಭೆಗೆ ಆಯ್ಕೆಯಾದವರು. ಸದ್ಯ ರಾಜ್ಯ ಕಾಂಗ್ರೆಸ್‌ನಲ್ಲಿ ಕಾರ್ಯಾಧ್ಯಕ್ಷರಾಗಿ ತಂತ್ರಗಾರಿಕೆ ಹೆಣೆಯುತ್ತಿರುವ ಹೊತ್ತಿನಲ್ಲೇ ಹೃದಯಾಘಾತದಿಂದ ಕಾಲವಶರಾಗಿದ್ದಾರೆ. 2004ರಲ್ಲಿ ಕೇವಲ ಒಂದೇ ಒಂದು ಮತದಿಂದ ಗೆಲ್ಲುವ ಮೂಲಕ ಇಡೀ ದೇಶದಲ್ಲಿ ಗಮನ ಸೆಳೆದ ಧ್ರುವನಾರಾಯಣ ಅವರು ತಮ್ಮ ಉತ್ತಮ ನಡವಳಿಕೆಗಳ ಮೂಲಕವೂ ಜನಮಾನದಲ್ಲಿ ಶಾಶ್ವತ ನೆನಪುಗಳನ್ನು ಬಿಟ್ಟುಹೋಗಿರುವ ನಾಯಕ.

ಕಾಂಗ್ರೆಸ್‌ ಪ್ರಚಾರ ಕಾರ್ಯಕ್ರಮದಲ್ಲಿ

ಯಾವತ್ತೂ ವಿರೋಧಿಗಳ ಬಗ್ಗೆ ಕೆಟ್ಟ ಮಾತುಗಳನ್ನು ಆಡದೆ, ಕುತಂತ್ರಗಳನ್ನು ಮಾಡದೆ ನೇರ ರಾಜಕೀಯದ ಮೂಲಕವೇ ತಮ್ಮ ದಿಟ್ಟ ಹೆಜ್ಜೆಗಳನ್ನು ಇಟ್ಟವರು ಧ್ರುವನಾರಾಯಣ ಎನ್ನುವುದು ಇಡೀ ರಾಜಕೀಯ ವಲಯದಲ್ಲಿ ಒಪ್ಪುವಂತ ಮಾತು. ಯಾವತ್ತೂ ತಾಳ್ಮೆ ಕಳೆದುಕೊಳ್ಳದೆ, ಸೋತರೂ ದ್ವೇಷ ಸಾಧಿಸದೆ ಪಕ್ಷದೊಳಗೆ ಮಾತ್ರವಲ್ಲ ವಿರೋಧ ಪಕ್ಷದಲ್ಲೂ ಗೌರವವನ್ನು ಪಡೆದುಕೊಂಡಿದ್ದ ಸಜ್ಜನಿಕೆಯ ವ್ಯಕ್ತಿತ್ವ ಧ್ರುವನಾರಾಯಣ ಅವರದು.

ಕೃಷಿ ಪದವೀಧರ ರಂಗಸ್ವಾಮಿ ಧ್ರುವನಾರಾಯಣ

ಚಾಮರಾಜ ನಗರ ಜಿಲ್ಲೆಯ ಹಗ್ಗವಾಡಿ ಗ್ರಾಮದಲ್ಲಿ 1961ರ ಜುಲೈ 31ರಂದು ಜನಿಸಿದ ಧ್ರುವ ನಾರಾಯಣ ಅವರು ಕೇವಲ ರಾಜಕಾರಣಿಯಲ್ಲ. ಅವರೊಬ್ಬ ಕೃಷಿ ವಿಜ್ಞಾನಿ ಕೂಡಾ. ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಕೃಷಿಯಲ್ಲಿ ಬಿಎಸ್‌ಸಿ ಮತ್ತು ಎಂಎಸ್‌ಸಿ ಪದವಿಯನ್ನು ಪಡೆದಿದ್ದ ಅವರು ಕಾಲೇಜು ಜೀವನದಲ್ಲೇ ನಾಯಕತ್ವದ ಗುಣಗಳನ್ನು ತೋರಿಸಿದ್ದರು. ಕೃಷಿಯ ವಿಚಾರದಲ್ಲೂ ಅಪಾರ ಜ್ಞಾನವನ್ನು ಹೊಂದಿದ್ದರು.

ದೇವರ ಮುಂದೆ ಧ್ರುವನಾರಾಯಣ

1983ರಲ್ಲಿ ರಾಜಕೀಯ ಪ್ರವೇಶ

1983ರಲ್ಲಿ ಕಾಂಗ್ರೆಸ್‌ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸೇರಿದ್ದರು. 1984ರಲ್ಲಿ ಹೆಬ್ಬಾಳದ ಕೃಷಿ ವಿವಿಯ ವಿದ್ಯಾರ್ಥಿ ನಾಯಕನಾಗಿ ಆಯ್ಕೆಯಾದ ಅವರು ಮುಂದೆ ಅದೇ ವರ್ಷ ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆಯಾದ ಎನ್‌ಎಸ್‌ಯುಐನ ಬೆಂಗಳೂರು ನಗರಾಧ್ಯಕ್ಷರಾಗಿ ಆಯ್ಕೆಯಾದರು.

1986ರಲ್ಲಿ ಅವರು ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿ ಹೊಸ ಜೀವನಕ್ಕೆ ಕಾಲಿಟ್ಟರು.

ಅವರ ಚುನಾವಣಾ ರಾಜಕೀಯ ಆರಂಭವಾಗಿದ್ದು 1999ರಲ್ಲಿ ಸಂತೇಮಾರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಅವರು ಜೆಡಿಯು ಅಭ್ಯರ್ಥಿ ಎ.ಆರ್‌. ಕೃಷ್ಣಮೂರ್ತಿ ಅವರ ವಿರುದ್ಧ ಸೋಲನ್ನು ಅನುಭವಿಸಿದ್ದರು. ಆದರೆ, ಅದೇ ಕ್ಷೇತ್ರ ಮತ್ತು ಅದೇ ಕೃಷ್ಣಮೂರ್ತಿ ಅವರ ವಿರುದ್ಧ 2004ರ ಚುನಾವಣೆಯಲ್ಲಿ ಒಂದು ಮತದಿಂದ ಗೆಲುವು ಸಾಧಿಸಿದ್ದು ಚರಿತ್ರೆಯಾಗಿ ದಾಖಲಾಯಿತು.

ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಅಭಿವೃದ್ಧಿಗಾಗಿ ಮನವಿ

2008ರಲ್ಲಿ ಅವರು ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11,800 ಮತಗಳಿಂದ ಗೆದ್ದರು. 2009ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ 4020 ಮತಗಳಿಂದ ಗೆದ್ದ ಅವರು 2014ರ ಹೊತ್ತಿಗೆ ಗೆಲುವಿನ ಅಂತರವನ್ನು 1,41,182 ಮತಗಳಿಗೆ ವಿಸ್ತರಿಸುವಲ್ಲಿ ಯಶಸ್ವಿಯಾಗಿದ್ದರು. ಅದರೆ, 2019ರ ಚುನಾವಣೆಯಲ್ಲಿ ಅವರು ಬಿಜೆಪಿಯ ಶ್ರೀನಿವಾಸ್‌ ಪ್ರಸಾದ್‌ ಅವರ ವಿರುದ್ಧ ಸೋಲು ಕಾಣಬೇಕಾಯಿತು. ಆದರೆ, ಪ್ರಬಲ ಮೋದಿ ಅಲೆಯ ನಡುವೆಯೂ ಅವರು ಸೋತಿದ್ದು ಕೇವಲ 12,716 ಮತಗಳಿಂದ ಎಂಬುದು ವಿಶೇಷ.

ಇವತ್ತು ಧ್ರುವ ನಾರಾಯಣ ಅವರದು ಕಾಂಗ್ರೆಸ್‌ನಲ್ಲಿ ದೊಡ್ಡ ಹೆಸರು. ಯಾವುದೆ ಕಾರ್ಯತಂತ್ರಗಳಲ್ಲಿ ಅವರಿಗೆ ಮುಂಚೂಣಿ ಸ್ಥಾನ. ದಾಖಲೆಗಳೊಂದಿಗೆ ಮಾತನಾಡಬಲ್ಲ ಈ ಶಕ್ತಿವಂತ ರಾಜಕಾರಣಿ, ವಿರೋಧ ಪಕ್ಷದವರನ್ನೂ ಗೌರವದಿಂದಲೇ ಕಾಣುವ ಗುಣವನ್ನು ಹೊಂದಿದ್ದಾರೆ. ಹೀಗಾಗಿ ಅವರು ಎಲ್ಲ ಪಕ್ಷ, ರಾಜಕಾರಣಿಗಳ ನಡುವೆ ಒಂದು ರೀತಿಯ ಅಜಾತಶತ್ರು.

ಕೇಂದ್ರದಲ್ಲಿ ಸಚಿವರಾಗಿದ್ದ ಪ್ರಣಬ್‌ ಮುಖರ್ಜಿ ಅವರಿಗೆ ಮನವಿ ಸಲ್ಲಿಕೆ

ಅತ್ಯುತ್ತಮ ಕೆಲಸಗಾರ ಧ್ರುವನಾರಾಯಣ

ಧ್ರುವ ನಾರಾಯಣ ಅವರು ಕೇವಲ ಸಭ್ಯ ರಾಜಕಾರಣಿಯಾಗಿ ಮಾತ್ರವಲ್ಲ ಉತ್ತಮ ಕೆಲಸಗಾರನಾಗಿಯೂ ಗಮನ ಸೆಳೆದವರು. ಅವರು ಶಾಸಕರಾಗಿ ಮತ್ತು ಲೋಕಸಭಾ ಸದಸ್ಯರಾಗಿ ಅತ್ಯುತ್ತಮ ಕೆಲಸ ಮಾಡಿದವರು. ಸಂಸದರ ನಿಧಿಯನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡ ಹೆಗ್ಗಳಿಕೆ.

ಸೋಲು ಮತ್ತು ಗೆಲುವುಗಳ ನಡುವೆ

ಧ್ರುವನಾರಾಯಣ ಅವರ ಚುನಾವಣಾ ರಾಜಕೀಯ ಆದಿ ಮತ್ತು ಅಂತ್ಯದ ಎರಡು ಸೋಲು ಮತ್ತು ನಡುವಿನ ನಾಲ್ಕು ಗೆಲುವುಗಳ ನಡುವೆ ಜೀಕಾಡಿದೆ.

1999: ವಿಧಾನಸಭಾ ಚುನಾವಣೆ- ಸಂತೇಮಾರಹಳ್ಳಿಯಲ್ಲಿ ಎ.ಆರ್‌. ಕೃಷ್ಣಮೂರ್ತಿ ವಿರುದ್ಧ ಸೋಲು
2004: ವಿಧಾನಸಭಾ ಚುನಾವಣೆ-ಸಂತೇಮಾರಹಳ್ಳಿಯಲ್ಲಿ ಎ.ಆರ್‌. ಕೃಷ್ಣಮೂರ್ತಿ ವಿರುದ್ಧ 1 ಮತದ ಗೆಲುವು
2008: ವಿಧಾನಸಭಾ ಚುನಾವಣೆ-ಕೊಳ್ಳೇಗಾಲ ಕ್ಷೇತ್ರದಲ್ಲಿ 11,800 ಮತಗಳಿಂದ ಗೆಲುವು
2009: ಲೋಕಸಭಾ ಚುನಾವಣೆ- ಚಾಮರಾಜ ನಗರದ ಕ್ಷೇತ್ರದಲ್ಲಿ 4080 ಮತಗಳಿಂದ ಗೆಲುವು
2014: ಲೋಕಸಭಾ ಚುನಾವಣೆ- ಚಾಮರಾಜ ನಗರದ ಕ್ಷೇತ್ರದಲ್ಲಿ 1,41,182 ಮತಗಳಿಂದ ಗೆಲುವು
2019: ಲೋಕಸಭಾ ಚುನಾವಣೆ- ಚಾಮರಾಜ ನಗರದ ಕ್ಷೇತ್ರದಲ್ಲಿ 12,716 ಮತಗಳಿಂದ ಸೋಲು

ಇದನ್ನೂ ಓದಿ : R Dhruvanarayan: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೃದಯಾಘಾತದಿಂದ ನಿಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

Love Jihad: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯಕೋಮಿನ ಯುವಕನಿಗೆ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

VISTARANEWS.COM


on

love jihad
Koo

ಹುಬ್ಬಳ್ಳಿ: ನೇಹಾ ಹಿರೇಮಠ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ (Love Jihad Case) ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯಕೋಮಿನ ಯುವಕನಿಗೆ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಹುಬ್ಬಳ್ಳಿಯ ಗಬ್ಬೂರನಲ್ಲಿ ಅನ್ಯಕೋಮಿನ ಯುವಕನ ಜತೆ ಬಾಲಕಿ ಇದ್ದಳು. ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಬಾಲಕಿಯನ್ನು ಯುವಕ ಕರೆತಂದಿದ್ದ. ಗಬ್ಬೂರ ಹೋಟೆಲ್‌ನಲ್ಲಿ ಇದ್ದವನನ್ನು ಗಮನಿಸಿ ಸ್ಥಳೀಯರು ಪೊಲೀಸ್ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಈ ವೇಳೆ ಹಿಂದು ಜಾಗರಣಾ ವೇದಿಕೆ ಮುಖಂಡರು, ಯುವಕನಿಗೆ ಥಳಿಸಿ, ಹುಬ್ಬಳ್ಳಿಯ ಬೇಂಡಿಗೇರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಕುರಿತು ಕೇಸ್ ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗಳು ಸಾವು

ಕೋಲಾರ: ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಗ್ರಾಮದ ವೃಷಭಾವತಿ ಕರೆಯಲ್ಲಿ ನಡೆದಿದೆ. ಮಜರಾಗೊಲ್ಲಹಳ್ಳಿ ಗ್ರಾಮದಲ್ಲಿ ಮದುವೆ ಕಾರ್ಯಕ್ರಮಕ್ಕೆಂದು ಬಂದಿದ್ದ ತಂದೆ-ಮಗಳು, ಕೆರೆ ಬಳಿ ಸೆಲ್ಫಿ ತೆಗದುಕೊಳ್ಳಲು ಹೋದಾಗ, ಮಗಳು ಕಾಲು ಜಾರಿ ನೀರಗೆ ಬಿದ್ದಿದ್ದಾಳೆ. ಹೀಗಾಗಿ ಮಗಳನ್ನು ರಕ್ಷಿಸಲು ಹೋದ ತಂದೆಯೂ ಮುಳುಗಿದ್ದಾರೆ

ಬೆಂಗಳೂರು ಮೂಲದ ಸಯ್ಯದ್ ಅಯ್ಯೂಬ್ (35) ಹಾಗೂ ಫಾತಿಮಾ (10) ಮೃತ ತಂದೆ, ಮಗಳು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Continue Reading

ಕರ್ನಾಟಕ

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ಪ್ರವಾಸಿ ಬಸ್‌ ಒಂದು ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನೂ 29 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

VISTARANEWS.COM


on

BUS
Koo

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ದತ್ತಪೀಠದಲ್ಲಿ ಪ್ರವಾಸಿ ಬಸ್‌ ಒಂದು ಪಲ್ಟಿಯಾಗಿದ್ದು, 6 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನು 29 ಮಂದಿ ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು (Chikkamagalur) ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ 100 ಅಡಿ ಆಳಕ್ಕೆ ಬಸ್‌ ಬಿದ್ದ ಕಾರಣ ಹೆಚ್ಚಿನ ಜನರಿಗೆ ಗಾಯಗಳಾಗಿವೆ. ಗಾಯಾಳುಗಳಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಂದಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಪ್ರವಾಸಿಗರು ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ತೆರಳಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದವರಲ್ಲಿ ಮೊಹಮ್ಮದ್‌ ಸವಾಜ್‌ ಎಂಬ ಆರು ವರ್ಷದ ಬಾಲಕನು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮಾಣಿಕ್ಯಾರದಿಂದ ದತ್ತಪೀಠದ ಬಳಿ ಹೋಗುತ್ತಿದ್ದಾಗ ಬಸ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಕಾರು ಪಲ್ಟಿಯಾಗಿ ಯುವತಿ ಸಾವು

ಭಾನುವಾರವೇ (ಏಪ್ರಿಲ್‌ 28) ಅತಿ ವೇಗದಲ್ಲಿ ಸಾಗುತ್ತಿದ್ದ ಇನೋವಾ ಕಾರು ಪಲ್ಟಿಯಾಗಿ ಯುವತಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚೆನ್ನಪಟ್ಟಣ ಮೂಲದ ಯುವತಿ ಕೀರ್ತಿ ಎಂಬುವರು ಅಪಘಾತದಲ್ಲಿ ಮೃತಪಟ್ಟವರು.

ಚೆನ್ನಪಟ್ಟಣ ಮೂಲದ ಅವರು ಧರ್ಮಸ್ಥಳಕ್ಕೆ ಬಂದಿದ್ದರು. ಅಲ್ಲಿಂದ ಅವರು ಮುರುಡೇಶ್ವರಕ್ಕೆ ಹೊರಟಿದ್ದರು. ಅತಿ ವೇಗದಲ್ಲಿ ಸಾಗುತ್ತಿದ್ದ ಕಾರು ಹುಣ್ಸೆಮಕ್ಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಳಿಕ ರಸ್ತೆ ಬದಿಯ ಮರಕ್ಕೂ ಢಿಕ್ಕಿ ಹೊಡೆದು ಇನ್ನೋವಾ ಮಾತು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ತೀವ್ರತೆಗೆ ಕಾರಿನಲ್ಲಿದ್ದ 5 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಕೆಲ ದಿನಗಳ ಹಿಂದಷ್ಟೇ ವಿಜಯಪುರ ಜಿಲ್ಲೆಯಲ್ಲಿ ಕಾರು ಪಲ್ಟಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಬಳಿ ಅಪಘಾತ ನಡೆದಿತ್ತು. ದೊಡ್ಡಯ್ಯ ಪುರಾಣಿಕಮಠ (37), ಪುಷ್ಪಾವತಿ (55) ಮೃತರು.

ಇದನ್ನೂ ಓದಿ: Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Continue Reading

ತುಮಕೂರು

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

Sira News: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ (Sira News) ದೊಡ್ಡಗೂಳ ಗ್ರಾಮದ ಕೆರೆಯಲ್ಲಿ ಬಿಸಿಲ ಬೇಗೆಗೆ ಸಾವಿರಾರು ಮೀನುಗಳು ಮೃತಪಟ್ಟಿವೆ.

VISTARANEWS.COM


on

Koo

ಶಿರಾ: ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಈ ನಡುವೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ (Sira News) ದೊಡ್ಡಗೂಳ ಗ್ರಾಮದ ಕೆರೆಯಲ್ಲಿ ಬಿಸಿಲ ಬೇಗೆ ಮೀನುಗಳಿಗೂ ತಟ್ಟಿದೆ. ಮಳೆಯಾಗದ ಹಿನ್ನೆಲೆ ಕೆರೆಯ ನೀರು ಬತ್ತಿದ್ದರಿಂದ ಸಾವಿರಾರು ಮೀನುಗಳು ಮೃತಪಟ್ಟಿರುವ ಘಟನೆ ನಡೆದಿದೆ. ಜನವರಿಯಿಂದ ಬಿಸಿಲಿನ ತಾಪಮಾನ ಹೆಚ್ಚಾಗಿದ್ದರಿಂದ ಕೆರೆಯಲ್ಲಿನ ನೀರು ಬತ್ತಿದ ಪರಿಣಾಮ ಮೀನುಗಳು ಸಾವನ್ನಪ್ಪಿವೆ.

ಮಳೆ ಕೊರತೆಯಿಂದ ಕೆರೆಕಟ್ಟೆಗಳು ಸಂಪೂರ್ಣವಾಗಿ ಖಾಲಿಯಾಗಿವೆ. ಕೆರೆಯ ಗುಂಡಿಗಳಲ್ಲಿ ಇದ್ದ ಅಲ್ಪಸ್ವಲ್ಪ ನೀರಿನಲ್ಲಿ ಮೀನುಗಳು ಜೀವ ಉಳಿಸಿಕೊಂಡಿದ್ದವು. ಅದರೆ ಇತ್ತೀಚೆಗೆ ಬಿಸಿಲಿನ ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಕೆರೆಯಲ್ಲಿನ ನೀರು ಸಂಪೂರ್ಣವಾಗಿ ಬತ್ತಿದೆ. ಹೀಗಾಗಿ ಕೆರೆಯಲ್ಲಿದ್ದ ಮೀನುಗಳು ವಿಲವಿಲ ಒದ್ದಾಡಿ ಪ್ರಾಣಬಿಟ್ಟಿವೆ.

ಕೆರೆಯಲ್ಲಿ ನೀರು ಕಡಿಮೆಯಾಗಿ, ಇರುವ ನೀರು ಕಲುಷಿತಗೊಂಡು ಮೀನುಗಳು ಸತ್ತಿವೆ. ಒಂದು ವಾರದಿಂದ ಮೀನುಗಳು ಸಾಯುತ್ತಿದ್ದರೂ ಯಾರೂ ಭೇಟಿ ನೀಡಿ ಪರಿಶೀಲಿಸುವ, ಸತ್ತ ಮೀನು ತೆರವುಗೊಳಿಸುವ ಕಾರ್ಯ ಮಾಡಿರಲಿಲ್ಲ. ಇದರಿಂದ ದುರ್ವಾಸನೆ ಉಂಟಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ್ದರು. ಹೀಗಾಗಿ ರತ್ನಸಂದ್ರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಸತ್ತ ಮೀನುಗಳನ್ನು ಜೆಸಿಬಿ ಬಳಸಿ ತೆರವು ಮಾಡಿಸಿದರು.

ಇದನ್ನೂ ಓದಿ | Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

ಚಳ್ಳಕೆರೆ: ಬರಗಾಲಕ್ಕೆ ತುತ್ತಾದ ಚಳ್ಳಕೆರೆ ತಾಲೂಕಿನ ರೈತರಿಗೆ ಅನಿವಾರ್ಯವಾದದ್ದೇ ಅಡಿಕೆ ಬೆಳೆ (Arecanut Cultivation). ಸಾವಿರಾರು ಹೆಕ್ಟೇರ್​ನಲ್ಲಿ ಅಡಿಕೆ ಬೆಳೆದು ಬದುಕು ಸಾಗಿಸಲು ಕನಸು ಕಂಡಿದ್ದ ಬೆಳೆಗಾರರ ಬದುಕೀಗ ಬಿಸಿಲ ಬೇಗೆಗೆ ಸುಟ್ಟು ಕರಕಲಾಗಿದೆ. ಹಚ್ಚ- ಹಸಿರಿನಿಂದ ರಾರಾಜಿಸುತ್ತಿದ್ದ ಅಡಿಕೆ ಮರಗಳು ನೀರಿಲ್ಲದೇ ಒಣಗಿ ನಿಲ್ಲುತ್ತಿವೆ. ಬೋರ್​ವೆಲ್​ನಲ್ಲಿ ನೀರು ನಿಲ್ಲುತ್ತಿದ್ದಂತೆ ಮರಗಳು ಸುಡಲು ಆರಂಭಿಸಿವೆ. ಒಣಗುತ್ತಿರುವುದು ಮರಗಳಲ್ಲ. ನಮ್ಮ ಬದುಕು ಎಂದು ಬೆಳೆಗಾರರು ಕಂಗಾಲಾಗಿದ್ದಾರೆ.

ಅತ್ತ ಮಳೆ ಇಲ್ಲ. ಇತ್ತ ನೆಲದಲ್ಲಿ ನೀರಿಲ್ಲ. ಎಷ್ಟು ಬೋರ್ ಕೊರೆಯಿಸಿದರು. ನೀರು ಬರುತ್ತಿಲ್ಲ.
ಇನ್ನು ಒಂದು ತಿಂಗಳ ಕಾಲ ಭೂಮಿಗೆ ಮಳೆ ಬಾರದಿದ್ದರೆ ಅದೆಷ್ಟೋ ಅಡಿಕೆ ತೋಟಗಳು ಒಣಗಿ ಹೋಗುತ್ತವೆ ಎನ್ನುತ್ತಾರೆ ರೈತ ತಿಪ್ಪೇಸ್ವಾಮಿ.

ತಾಲೂಕಿನ ಕಾಪರಹಳ್ಳಿ ಗ್ರಾಮದ ಗುರುಸ್ವಾಮಿ ರೈತ ತಮ್ಮ ಜಮೀನಿನಲ್ಲಿ ಅಡಿಕೆ ಬೆಳೆಯನ್ನು ಬೆಳೆದಿದ್ದು, ಈಗ ಕೊಳವೆ ಬಾವಿಯಲ್ಲಿ ನೀರಿಲ್ಲದೆ ಅಡಿಕೆ ಬೆಳೆ ಸಂಪೂರ್ಣ ಒಣಗುತ್ತಿದೆ.

Continue Reading

ಕರ್ನಾಟಕ

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

ಭಾರತೀಯ ರಿಸರ್ವ್‌ ಬ್ಯಾಂಕ್‌ ಮಾರ್ಗಸೂಚಿಗಳನ್ನು ಪಾಲಿಸದೆ ಇಬ್ಬರು ಆರೋಪಿಗಳು ನೋಟುಗಳನ್ನು ನಗದೀಕರಣ ಮಾಡಿಕೊಂಡಿದ್ದಾರೆ. ಹಾಗಾಗಿ, ಇಬ್ಬರಿಗೂ ನ್ಯಾಯಾಲಯವು ತಲಾ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.

VISTARANEWS.COM


on

Notes
Koo

ಬೆಂಗಳೂರು: ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ನಿಯಮಗಳನ್ನು ಉಲ್ಲಂಘಿಸಿ ನೋಟುಗಳನ್ನು ನಗದೀಕರಣ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯವು (CBI Special Court) ಇಬ್ಬರು ಆರೋಪಿಗಳಿಗೆ ತಲಾ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನೋಟು ನಗದೀಕರಣ ಮಾಡಿದ ಎಸ್.‌ ಗೋಪಾಲಯ್ಯ ಹಾಗೂ ಎಲ್‌ಐಸಿ ಏಜೆಂಟ್‌ ಕೆ.ರಾಘವೇಂದ್ರ ಎಂಬುವರಿಗೆ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

2016ರಲ್ಲಿ ಕೇಂದ್ರ ಸರ್ಕಾರವು ಐನೂರು ಹಾಗೂ ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿದ ಸಂದರ್ಭದಲ್ಲಿ ನಿಷೇಧಿತ ಕರೆನ್ಸಿಗಳ ನಗದೀಕರಣಕ್ಕೆ ಆರ್‌ಬಿಐ ಹಲವು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೆ, ಇಬ್ಬರೂ ಆರ್‌ಬಿಐ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ನೋಟುಗಳನ್ನು ನಗದೀಕರಣ ಮಾಡಿಕೊಂಡಿದ್ದರು. ಹಾಗಾಗಿ, ಸಿಬಿಐ ನ್ಯಾಯಾಲಯವು ಇಬ್ಬರಿಗೂ ಜೈಲು ಶಿಕ್ಷೆಯ ಜತೆಗೆ ಭಾರಿ ದಂಡ ವಿಧಿಸಿದೆ. ಎಸ್‌.ಗೋಪಾಲಯ್ಯಗೆ 2.10 ಲಕ್ಷ ರೂ. ಹಾಗೂ ರಾಘವೇಂದ್ರಗೆ 1.6 ಲಕ್ಷ ರೂ. ದಂಡ ವಿಧಿಸಿದೆ.

money guide

ಮಾರ್ಗಸೂಚಿ ಅನುಸರಿಸದೆ ನೋಟುಗಳನ್ನು ನಗದೀಕರಣ ಮಾಡಿಕೊಂಡ ಹಿನ್ನೆಲೆಯಲ್ಲಿ ಸಿಬಿಐ 2017ರ ಮಾರ್ಚ್‌ನಲ್ಲಿ ಈಗ ಶಿಕ್ಷೆಗೆ ಗುರಿಯಾಗಿರುವ ಇಬ್ಬರು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಿಸಿತ್ತು. ತನಿಖೆ ವೇಳೆ ಇವರ ದುರುದ್ದೇಶ ಬಯಲಾಗಿತ್ತು. ತನಿಖೆ ಪೂರ್ಣಗೊಳಿಸಿದ್ದ ತಂಡವು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದರಂತೆ, ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ.

ಕೆಲ ತಿಂಗಳ ಹಿಂದಷ್ಟೇ, ರಾಷ್ಟ್ರೀಯ ತನಿಖಾ ದಳವು ನಕಲಿ ನೋಟು ಜಾಲದ ಮೇಲೆ ಮುಗಿಬಿದ್ದಿತ್ತು. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಎನ್‌ಐಎ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅದರಲ್ಲಿ ಕರ್ನಾಟಕದ ಬಳ್ಳಾರಿಯಲ್ಲೂ ಒಬ್ಬನನ್ನು ಸೆರೆ ಹಿಡಿದಿತ್ತು. ಬಳ್ಳಾರಿಯಲ್ಲಿ ಬಂಧಿತ ಆರೋಪಿಯನ್ನು ಮಹೇಂದ್ರ ಎಂದು ಗುರುತಿಸಲಾಗಿದ್ದು, ಆತನಿಂದ ಭಾರಿ ಪ್ರಮಾಣದ ನಕಲಿ ನೋಟು, ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮೆಷಿನ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಈತ 500, 200, ಹಾಗೂ 100 ರೂ ಮುಖಬೆಲೆಯ ನೋಟು ತಯಾರಿಸುತ್ತಿದ್ದ ಎಂದು ತಿಳಿದುಬಂದಿತ್ತು.

ಇದನ್ನೂ ಓದಿ: Fake Currency: ಬಳ್ಳಾರಿಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಇಬ್ಬರ ಬಂಧನ

Continue Reading
Advertisement
love jihad
ಕರ್ನಾಟಕ4 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ5 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು5 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ5 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ5 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20245 hours ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ6 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ6 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ6 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ6 hours ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202412 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202414 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202416 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202416 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ19 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ24 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ3 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌