R Dhruvanarayana : ಸಾಮಾಜಿಕ ನ್ಯಾಯದ ಚಾಂಪಿಯನ್‌; ರಾಹುಲ್‌, ಪ್ರಿಯಾಂಕಾ, ದೇವೇಗೌಡರ ನುಡಿನಮನ - Vistara News

ಕರ್ನಾಟಕ

R Dhruvanarayana : ಸಾಮಾಜಿಕ ನ್ಯಾಯದ ಚಾಂಪಿಯನ್‌; ರಾಹುಲ್‌, ಪ್ರಿಯಾಂಕಾ, ದೇವೇಗೌಡರ ನುಡಿನಮನ

ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಆರ್‌. ಧ್ರುವನಾರಾಯಣ (R Dhruvanarayana) ಅವರನ್ನು ಸಾಮಾಜಿಕ ನ್ಯಾಯದ ಚಾಂಪಿಯನ್‌ ಎಂದು ಬಣ್ಣಿಸಿದ್ದಾರೆ.

VISTARANEWS.COM


on

R Dhruvanarayana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ, ಚಾಮರಾಜನಗರದ ಮಾಜಿ ಸಂಸದ ಆರ್‌. ಧ್ರುವನಾರಾಯಣ (R Dhruvanarayana) ಅವರ ನಿಧನಕ್ಕೆ ರಾಷ್ಟ್ರಾದ್ಯಂತ ಕಂಬನಿಯ ಮಹಾಪೂರವೇ ಹರಿದುಬಂದಿದೆ. ಕಾಂಗ್ರೆಸ್‌ನ ಹಿರಿಯ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಸಾಮಾಜಿಕ ನ್ಯಾಯದ ಚಾಂಪಿಯನ್‌ ಎಂದೇ ಹೆಸರಾದ ಧ್ರುವನಾರಾಯಣ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಸಾಮಾಜಿಕ ನ್ಯಾಯಕ್ಕಾಗಿನ ಬದ್ಧತೆ ಸದಾ ಸ್ಮರಣೀಯ: ಪ್ರಿಯಾಂಕಾ ಗಾಂಧಿ

ಧ್ರುವನಾರಾಯಣ ಅವರ ನಿಧನಕ್ಕೆ ಕಂಬನಿ ಮಿಡಿದಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು, ಸಮಾಜಸೇವೆ ಮತ್ತು ಸಾಮಾಜಿಕ ನ್ಯಾಯದ ಕಡೆಗಿನ ಅವರ ಬದ್ಧತೆ ಯಾವತ್ತೂ ಸ್ಮರಣೀಯ ಎಂದು ಹೇಳಿದ್ದಾರೆ. ಅವರ ಕುಟುಂಬ ಮತ್ತು ಬಂಧುಗಳಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.

ಕಠಿಣ ಪರಿಶ್ರಮಿ, ತಳಮಟ್ಟದ ನಾಯಕ: ರಾಹುಲ್‌ ಗಾಂಧಿ

ಧ್ರುವನಾರಾಯಣ ಅವರು ಒಬ್ಬ ಕಠಿಣ ಪರಿಶ್ರಮಿ ಮತ್ತು ವಿನಮ್ರ ತಳಮಟ್ಟದ ನಾಯಕ. ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್‌ನ ಹುದ್ದೆಗಳ ಮೂಲಕ ಬೆಳೆದು ಬಂದ ಅವರು ಸಾಮಾಜಿಕ ನ್ಯಾಯದ ಚಾಂಪಿಯನ್‌ ಎಂದು ಧ್ರುವ ನಾರಾಯಣ್‌ ನಿಧನಕ್ಕೆ ರಾಹುಲ್‌ ಗಾಂಧಿ ನೋವು ಹಂಚಿಕೊಂಡಿದ್ದಾರೆ. ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ.

ಆಘಾತ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ರಾಜ್ಯ ಕಾಂಗ್ರೆಸ್ ನ ಹಿರಿಯ ಮುಖಂಡ ಆರ್. ಧ್ರುವನಾರಾಯಣ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ಆಘಾತ ಮತ್ತು ದುಃಖವಾಗಿದೆ. ಇವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತೆಗೆ ಈ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ : R Dhruvanarayana : ಸಭ್ಯತೆಯ ಸವ್ಯಸಾಚಿ, ಶುದ್ಧ- ಮೌಲ್ಯಾಧರಿತ ರಾಜಕಾರಣದ ʻಧ್ರುವʼ ನಕ್ಷತ್ರ ಕಣ್ಮರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Sringeri Shankar Mutt: ಮೈಸೂರಿನಲ್ಲಿ ಮಾ.30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ

Sringeri Shankar Mutt: ಮೈಸೂರಿನಲ್ಲಿ ಶ್ರೀ ಶೃಂಗೇರಿ ಶಂಕರ ಮಠದಿಂದ ಮಾ. 30ರಿಂದ ಏಪ್ರಿಲ್ 6ರ ವರೆಗೆ ಅಭಿನವ ಶಂಕರಾಲಯದ ಶತಮಾನೋತ್ಸವ ಆಯೋಜಿಸಿದ್ದು, ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಹಸ್ರ ಮೋದಕ ಗಣಪತಿ ಹೋಮದೊಂದಿಗೆ ಶತಮಾನೋತ್ಸವ ಸಪ್ತಾಹ ವಿಧ್ಯುಕ್ತ ಚಾಲನೆ ಪಡೆಯಲಿದೆ.

VISTARANEWS.COM


on

Sringeri Shankar Mutt
Koo

ಮೈಸೂರು: ನಗರದ ಅಗ್ರಹಾರದ ಫೋರ್ಟ್ ಮೊಹಲ್ಲಾದಲ್ಲಿರುವ ಅಭಿನವ ಶಂಕರಾಲಯದ ಶತಮಾನೋತ್ಸವ ಸಂಭ್ರಮಾಚರಣೆಗೆ ಅರಮನೆ ನಗರಿ ಸಜ್ಜಾಗಿದೆ. ಶ್ರೀ ಶೃಂಗೇರಿ ಶಂಕರ ಮಠದಿಂದ (Sringeri Shankar Mutt) ಮಾ. 30ರಿಂದ ಏಪ್ರಿಲ್ 6ರವರೆಗೆ ಆಯೋಜಿಸಿರುವ ಒಂದು ವಾರದ ಕಾರ್ಯಕ್ರಮಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ.

ಸಹಸ್ರ ಮೋದಕ ಗಣಪತಿ ಹೋಮದೊಂದಿಗೆ ಮಾ. 30ರಂದು ಶತಮಾನೋತ್ಸವ ಸಪ್ತಾಹ ವಿಧ್ಯುಕ್ತ ಚಾಲನೆ ಪಡೆಯಲಿದೆ. ಅಂದು ಬೆಳಗ್ಗೆ ಮಠದ ಆವರಣದಲ್ಲಿ ನೂರಾರು ಋತ್ವಿಜರು, ಪಂಡಿತರು, ಅದ್ವೈತ ವಿದ್ವಾಂಸರು, ಮಠದ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಗಣಪತಿ ಹೋಮ ಸಂಪನ್ನಗೊಳ್ಳಲಿದೆ.

ಶೃಂಗೇರಿಯ ಪರಮಪೂಜ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಯವರು 30ರ ಸಂಜೆ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರನ್ನು ಪ್ರವೇಶ ಮಾಡಲಿದ್ದಾರೆ. ಸಂಜೆ 6ಕ್ಕೆ ನಗರದ ಸ್ಕೌಟ್ ಭವನದ ಸಮೀಪ ಅವರನ್ನು ಪೂರ್ಣಕುಂಭ ಸಮೇತ ಮಂಗಳವಾದ್ಯಗಳೊಂದಿಗೆ ಸ್ವಾಗತಿಸಲಾಗುವುದು. ಅಲ್ಲಿಂದ ಶ್ರೀ ಶಂಕರ ಮಠದವರೆಗೆ (ರಾಮಸ್ವಾಮಿ ಸರ್ಕಲ್, ಚಾಮರಾಜ ಜೋಡಿ ರಸ್ತೆ ಮೂಲಕ) ಅವರನ್ನು ಭವ್ಯ ಮೆರವಣಿಗೆ ಮೂಲಕ ಕರೆತರಲಾಗುವುದು. ಸಂಜೆ 7ಕ್ಕೆ ಜಗದ್ಗುರುಗಳು ಮಠದ ಆವರಣದಲ್ಲಿ ನಿರ್ಮಿಸಿರುವ ‘ಶ್ರೀ ಸಚ್ಚಿದಾನಂದ ವಿಲಾಸ’ ಗುರುಭವನ ಹಾಗೂ ಸಭಾಂಗಣವನ್ನು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಲಿದ್ದಾರೆ. ರಾತ್ರಿ 7:30ಕ್ಕೆ ಶ್ರೀ ಚಂದ್ರಮೌಳೇಶ್ವರ ಪೂಜೆ ನೆರವೇರಿಸಲಿದ್ದಾರೆ.

Sringeri Shankar Mutt

ಇದನ್ನೂ ಓದಿ | ತಾತಯ್ಯ ತತ್ವಾಮೃತಂ: ಯಮನಿಗೆ ಅಂಜದ ಸತ್ಯವ್ರತಿಗಳು

ಶತಚಂಡಿ ಪಾರಾಯಣ

ಮಾ. 31ರಂದು ಮಠದ ಆವರಣದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ಮಹಾರುದ್ರ ಜಪ ಮತ್ತು ಶತಚಂಡಿ ಪಾರಾಯಣ ನೆರವೇರಲಿದೆ. ಈ ಸಂದರ್ಭ ಶ್ರೀ ಜಗದ್ಗುರುಗಳು ಸಾರ್ವಜನಿಕ ದರ್ಶನ ನೀಡಲಿದ್ದು, ಪಾದಪೂಜೆ ಮತ್ತು ಭಿಕ್ಷಾವಂದನೆ ನಡೆಯಲಿದೆ. ಸಂಜೆ 4.30 ರಿಂದ 7ರವರೆಗೆ ನಗರದ ವಿವಿಧ ದೇವಾಲಯ ಹಾಗೂ ಸಂಘ-ಸಂಸ್ಥೆಗಳಿಗೆ ಅವರು ಭೇಟಿ ನೀಡಲಿದ್ದಾರೆ. ರಾತ್ರಿ 8.30ಕ್ಕೆ ಮಠದಲ್ಲಿ ಶ್ರೀ ಚಂದ್ರಮೌಳೇಶ್ವರ ಪೂಜೆ ನೆರವೇರಿಸಲಿದ್ದಾರೆ.

Sringeri Shankar Mutt

ನಂಜನಗೂಡಿಗೆ ಭೇಟಿ

ಏ. 1ರಂದು ಬೆಳಗ್ಗೆ 8ಕ್ಕೆ ಶ್ರೀ ಜಗದ್ಗುರುಗಳು ನಂಜನಗೂಡಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಂದು ರಾತ್ರಿ 8.30ಕ್ಕೆ ಮೈಸೂರಿನ ಶಂಕರ ಮಠದಲ್ಲಿ ಶ್ರೀ ಚಂದ್ರಮೌಳೇಶ್ವರ ಪೂಜೆ ನಡೆಸಲಿದ್ದಾರೆ. ಏ. 2ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಶಂಕರ ಮಠದ ಆವರಣದಲ್ಲಿ ಸಾರ್ವಜನಿಕ ದರ್ಶನ , ಪಾದಪೂಜೆ ಹಾಗೂ ಭಿಕ್ಷಾ ವಂದನೆ ನಡೆಯಲಿದೆ. ಸಂಜೆ 4:30ಕ್ಕೆ ನಗರದ ವಿವಿಧ ದೇವಾಲಯಗಳು ಹಾಗೂ ಸಂಘ-ಸಂಸ್ಥೆಗಳಿಗೆ ಜಗದ್ಗುರುಗಳು ಭೇಟಿ ನೀಡಲಿದ್ದಾರೆ.

ವಿಶ್ವೇಶ್ವರ ದೇವಸ್ಥಾನದಲ್ಲಿ ಕುಂಭಾಭಿಷೇಕ

ಏ. 3ರ ಬೆಳಗ್ಗೆ 9ಕ್ಕೆ ನಗರದ ಗೀತಾ ರಸ್ತೆಯ ಶ್ರೀ ಪ್ರಸನ್ನ ವಿಶ್ವೇಶ್ವರ ದೇವಸ್ಥಾನದಲ್ಲಿ ಆಯೋಜನೆ ಗೊಂಡಿರುವ ಕುಂಭಾಭಿಷೇಕದ ಸಾನ್ನಿಧ್ಯವನ್ನು ಶ್ರೀ ಜಗದ್ಗುರುಗಳು ವಹಿಸಲಿದ್ದಾರೆ. ಪಾದಪೂಜೆ ಮತ್ತು ಭಿಕ್ಷಾವಂದನೆಯನ್ನು ಜಗದ್ಗುರುಗಳು ಸ್ವೀಕರಿಸಲಿರುವುದು ವಿಶೇಷ. ಸಂಜೆ 4.30 ರಿಂದ 7 ರವರೆಗೆ ನಗರದ ವಿವಿಧ ದೇವಾಲಯ ಹಾಗೂ ಸಂಘ-ಸಂಸ್ಥೆಗಳಿಗೆ ಪೂಜ್ಯರು ಭೇಟಿ ನೀಡಿ ಭಕ್ತರನ್ನು ಅನುಗ್ರಹಿಸಲಿದ್ದಾರೆ.

ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ

ಏ. 4 ರ ಬೆಳಗ್ಗೆ 8.30 ರಿಂದ ಮಧ್ಯಾಹ್ನ 1ರ ವರೆಗೆ ಶಂಕರ ಮಠದ ಶ್ರೀ ಮಹಾಗಣಪತಿ, ಶ್ರೀ ಸತ್ಯನಾರಾಯಣ ಮತ್ತು ಶ್ರೀ ಶಂಕರಾಚಾರ್ಯರ ಸನ್ನಿಧಿಗಳಲ್ಲಿ ಕುಂಭಾಭಿಷೇಕ, ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ ನೆರವೇರಲಿದೆ. ಶ್ರೀ ವಿಧುಶೇಖರ ಭಾರತೀ ತೀರ್ಥ ಜಗದ್ಗುರುಗಳು ಸಾರ್ವಜನಿಕ ದರ್ಶನ, ಪಾದಪೂಜೆ ಮತ್ತು ಭಿಕ್ಷಾವಂದನೆ ಸಾನ್ನಿಧ್ಯ ವಹಿಸಿ ಭಕ್ತ ವೃಂದವನ್ನು ಆಶೀರ್ವದಿಸಲಿದ್ದಾರೆ. ಸಂಜೆ 4.30 ರಿಂದ 7ರವರೆಗೆ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಮರ್ಪಿಸಲಿದ್ದಾರೆ.

ಏ.5ರಂದು ಗುರುವಂದನಾ ಕಾರ್ಯಕ್ರಮ

ಏ. 5ರ ಬೆಳಗ್ಗೆ 8:30 ರಿಂದ ಮಧ್ಯಾಹ್ನ 1 ರ ವರೆಗೆ ಶಂಕರ ಮಠದ ಆವರಣದಲ್ಲಿ ಶ್ರೀ ಶಾರದಾಂಬಾ ಹಾಗೂ ಜಗದ್ಗುರು ಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹ ಭಾರತೀ ಮಹಾಸ್ವಾಮಿಗಳ ಸನ್ನಿಧಿಯಲ್ಲಿ ಕುಂಭಾಭಿಷೇಕ ಮತ್ತು ಶಿಖರ ಕುಂಭಾಭಿಷೇಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಲಿವೆ. ಸಂಜೆ 5.30ಕ್ಕೆ ಮಠದ ಆವರಣದ ವಿದ್ಯಾಶಂಕರ ನಿಲಯ ಕಲ್ಯಾಣ ಮಂಟಪದಲ್ಲಿ ‘ಗುರುವಂದನಾ’ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾರತ ಸರ್ಕಾರದ ಅಡಿಷನಲ್ ಸಾಲಿಸಿಟರ್ ಜನರಲ್ ಎನ್. ವೆಂಕಟರಾಮನ್ ಆಗಮಿಸಲಿದ್ದಾರೆ. ವಿವಿಧ ಸಂಘ ಸಂಸ್ಥೆ ಪ್ರಮುಖರು, ನಗರದ ಗಣ್ಯರು, ಸಾರ್ವಜನಿಕರು ಮತ್ತು ಮಠದ ಭಕ್ತರು ಸಾಕ್ಷಿಯಾಗಲಿದ್ದಾರೆ.

ಇದನ್ನೂ ಓದಿ | ಧವಳ ಧಾರಿಣಿ ಅಂಕಣ: ಶ್ರೀರಾಮ ಪಟ್ಟಾಭಿಷೇಕದ ಕನಸಿನ ವಿಹಾರ

ಮಂತ್ರಾಕ್ಷತೆ ಅನುಗ್ರಹ

ಏ. 6ರ ಬೆಳಗ್ಗೆ 9ಕ್ಕೆ ಪೂಜ್ಯ ಜಗದ್ಗುರುಗಳು ಸಾರ್ವಜನಿಕ ದರ್ಶನ ನೀಡಿ, ಪಾದಪೂಜೆ ಮತ್ತು ಭಿಕ್ಷಾ ವಂದನೆ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭ ಅವರು ಶಿಷ್ಯರಿಗೆ, ಭಕ್ತರಿಗೆ ಫಲ ಮಂತ್ರಾಕ್ಷತೆಯನ್ನು ಅನುಗ್ರಹಿಸಲಿದ್ದಾರೆ ಎಂದು ಅಭಿನವ ಶಂಕರಾಲಯದ ಧರ್ಮಾಧಿಕಾರಿ ಎಚ್. ರಾಮಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಬೀದರ್‌

Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

Dead Body Found : ಗ್ರಾಮದಲ್ಲಿರುವ ನೀರಿನ ಟ್ಯಾಂಕರ್‌ನಲ್ಲಿ ವ್ಯಕ್ತಿ ಶವ ಪತ್ತೆಯಾಗಿದ್ದು, ದಿನಗಟ್ಟಲೆ ಅದೇ ನೀರನ್ನು ಕುಡಿದಿದ್ದ ಜನರು (Water Tank) ಬೆಚ್ಚಿಬಿದ್ದಿದ್ದಾರೆ.

VISTARANEWS.COM


on

By

Dead Body Found in water tank
ವಾಟರ್‌ ಟ್ಯಾಂಕರ್‌ನಲ್ಲಿ ಶವ ಪತ್ತೆಯಾಗುತ್ತಿದ್ದಂತೆ ಜಮಾಯಿಸಿದ ಗ್ರಾಮಸ್ಥರು
Koo

ಬೀದರ್ : ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ (Water Tank) ಶವವೊಂದು (Dead Body Found) ಪತ್ತೆಯಾಗಿದ್ದು, ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಬೀದರ್‌ನ ಆಣದೂರ ಗ್ರಾಮದಲ್ಲಿ ಈ ಘಟನೆ (Bidar News) ನಡೆದಿದೆ. ಗ್ರಾಮದ ಮನೆ ಮನೆಗೆ ಸರಬರಾಜು ಮಾಡುತ್ತಿದ್ದ ನೀರು ಗಬ್ಬು ನಾರುತ್ತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರು.

ಮೊದಮೊದಲು ಕುಡಿಯುವ ನೀರಿಗೆ ಚರಂಡಿ ನೀರು ಏನಾದರೂ ಮಿಶ್ರಣ ಎಂದು ಶಂಕಿಸಲಾಗಿತ್ತು. ಮನೆಗೆ ಸರಬರಾಜು ಆಗುತ್ತಿದ್ದ ನೀರಲ್ಲಿ ಕೂದಲು ಬರುತ್ತಿದ್ದವು. ಇತ್ತ ದೂರು ಬಂದ ಕಾರಣಕ್ಕೆ ವಾಟರ್ ಟ್ಯಾಂಕ್ ಪರಿಶೀಲನೆ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ವೇಳೆ ಟ್ಯಾಂಕ್‌ನಲ್ಲಿ ಕೊಳೆತ ಸ್ಥಿಯಿಯಲ್ಲಿ ವ್ಯಕ್ತಿಯೊಬ್ಬಮ ಶವ ಪತ್ತೆಯಾಗಿದೆ.

ನೀರಿನ ಟ್ಯಾಂಕರ್‌ನಲ್ಲಿ ಎಷ್ಟು ದಿವಸದಿಂದ ಶವವಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಎಂಬುದು ತಿಳಿದು ಬಂದಿಲ್ಲ. ಗ್ರಾಮಸ್ಥರು ಹಲವು ದಿನದಿಂದ ಶವ ಬಿದ್ದಿದ್ದ ಟ್ಯಾಂಕಿನ ನೀರನ್ನೇ ಕುಡಿದಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಕುಡಿಯುವ ನೀರು ಗಬ್ಬು ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪರಿಶೀಲನೆ ಮಾಡಿದಾಗ ಶವ ಪತ್ತೆಯಾಗಿದೆ ಎಂದು ಗ್ರಾಮ ಪಂಚಾಯತಿ ಪಿಡಿಓ ಮಾಹಿತಿ ನೀಡಿದ್ದಾರೆ. ಮೊದಮೊದಲು ನೀರಿನೊಟ್ಟಿಗೆ ಕೂದಲು ಬಂದಿದೆ. ಜತೆಗೆ ಕುಡಿಯಲು ಆಗದಷ್ಟು ನೀರು ಗಬ್ಬು ನಾರುತ್ತಿತ್ತು. ಇದೀಗ ಸತ್ಯ ವಿಷಯವನ್ನು ತಿಳಿದು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಇದನ್ನೂ ಓದಿ: Bhadra canal : ಭದ್ರಾ ನಾಲೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

ಹೃದಯಾಘಾತ (Heart Attack) ವೃದ್ಧರೊಬ್ಬರ ಪ್ರಾಣವನ್ನು ಬಲಿ ಪಡೆದಿದೆ. ಈಗೀಗ ಹೃದಯಾಘಾತ (Heart attack) ಯಾವುದೇ ಕ್ಷಣದಲ್ಲಿ ಆಗಿಬಿಡಬಹುದು ಎನ್ನುವಷ್ಟು ಭಯಾನಕವಾಗಿದೆ. ಕುಳಿತಲ್ಲೇ, ಕುಸಿದುಬಿದ್ದು ಪ್ರಾಣ ಕಳೆದುಕೊಳ್ಳುವ, ನಿಂತಲ್ಲೇ ಉಸಿರು ನಿಲ್ಲುವ, ಮಲಗಿದ್ದಲ್ಲೇ ಉಸಿರು ಚೆಲ್ಲುವ ವಿದ್ಯಮಾನಗಳು ಏಕಾಏಕಿ ಹೆಚ್ಚಾಗಿದೆ.

ಇಂಥಹುದೇ ಒಂದು ಆತಂಕ ಮೂಡಿಸುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೃದ್ಧರೊಬ್ಬರು ಕುಳಿತಲ್ಲೇ ಕುಸಿದಿದ್ದು, ಕ್ಷಣಾರ್ಧದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹಠಾತ್ ಹೃದಯಾಘಾತದಿಂದ ವೃದ್ಧ ಪ್ರಾಣ ಕಳೆದುಕೊಂಡಿದ್ದಾರೆ.

ಕೃಷ್ಣ (60) ಮೃತ ದುರ್ದೈವಿ. 11 ಗಂಟೆ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಿಂದ ಬಸ್ ಹತ್ತಿದ್ದ ಕೃಷ್ಣ ಅವರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಿದ್ದರು. ನವರಂಗ್ ಬಳಿ ಬರುತ್ತಿದ್ದಂತೆ ಹದಿನೈದು ನಿಮಿಷದಲ್ಲೇ ಹೃದಯಾಘಾತವಾಗಿದೆ. ನೋಡನೋಡುತ್ತಿದ್ದಂತೆ ಬಸ್ಸಿನಲ್ಲೇ ಉಸಿರು ಚೆಲ್ಲಿದ್ದಾರೆ.

ಏಕಾಏಕಿ ವ್ಯಕ್ತಿ ಮೃತಪಟ್ಟಿದ್ದು ಕಂಡ ಸಹಪ್ರಯಾಣಿಕರು ಆತಂಕಗೊಂಡು ಕಿರುಚಾಡಿದ್ದಾರೆ. ಕೂಡಲೇ ಚಾಲಕ ಹಾಗು ನಿರ್ವಾಹಕರು ಬಿಎಂಟಿಸಿ ಬಸ್‌ನಲ್ಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಬಳಿಕ ಮೃತ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಅವಿವಾಹಿತ ಬ್ರಿಜೇಶ್ ಚೌಟ ಬಳಿ ಇಲ್ಲ ಕೋಟಿ ಕೋಟಿ ಆಸ್ತಿ! ಸಾಲ ಮಾಡಿ ಕಾರು ಖರೀದಿ

Lok Sabha Election 2024: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವು ಕಳೆದ 4 ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿದೆ. ಇಲ್ಲಿ ಯಾರೇ ಅಭ್ಯರ್ಥಿಯಾದರೂ ಕಮಲ ಅಭ್ಯರ್ಥಿಗೆ ನಿರಾಯಾಸ ಗೆಲುವು ಎಂಬ ಮಾತು ಚಾಲ್ತಿಯಲ್ಲಿದೆ. ಈ ಬಾರಿ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಸ್ವಪಕ್ಷೀಯ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದರಿಂದ ಅವರನ್ನು ಬದಲಾವಣೆ ಮಾಡಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರಿಗೆ ಮಣೆ ಹಾಕಲಾಗಿದೆ. ಈಗ ಬ್ರಿಜೇಶ್‌ ಚೌಟ ತಮ್ಮ ಆಸ್ತಿಯನ್ನು ಘೋಷಣೆ ಮಾಡಿಕೊಂಡಿದ್ದಾರೆ. ಇದರಿಂದ ಇವರು ಲಕ್ಷಾಧಿಪತಿ ಎಂದು ತಿಳಿದುಬಂದಿದ್ದು, ಇವರು ಹೊಂದಿರುವ ಕಾರಿಗೆ ಸಾಲ ಮಾಡಿದ್ದಾಗಿ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಬಿಎಸ್ಸಿ ಪದವೀಧರರಾಗಿರುವ ಇವರು, ಐಐಎಂ ಇಂದೋರ್‌ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫಿಸರ್ ಸರ್ಟಿಫಿಕೇಟ್ ಕೋರ್ಸ್ ಅನ್ನು ಸಹ ಪೂರೈಸಿದ್ದಾರೆ.

VISTARANEWS.COM


on

Lok Sabha Election 2024 Brijesh Chowta declares assets
Koo

ಮಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಈಗ ನಾಮಪತ್ರ ಸಲ್ಲಿಕೆ ಶುರುವಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ (Dakshina Kannada Lok Sabha constituency) ಬಿಜೆಪಿ ಅಭ್ಯರ್ಥಿ (BJP Candidate) ಕ್ಯಾಪ್ಟನ್​ ಬ್ರಿಜೇಶ್ ಚೌಟಾ (Brijesh Chowta) ಶುಕ್ರವಾರ (ಮಾ. 29) ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಅಫಿಡವಿಟ್‌ನಲ್ಲಿ ತಾವು 70 ಲಕ್ಷ ರೂಪಾಯಿ ಒಡೆಯ ಎಂದು ಘೋಷಿಸಿಕೊಂಡಿದ್ದಾರೆ. ಅಲ್ಲದೆ, ತಮ್ಮ ಬಳಿ ಇರುವ ಕಾರನ್ನು ಸಾಲ ಮಾಡಿ ತೆಗೆದುಕೊಂಡಿದ್ದಾಗಿ 42 ವರ್ಷದ ಬ್ರಿಜೇಶ್‌ ಹೇಳಿದ್ದಾರೆ. ಇವರು ಏಪ್ರಿಲ್‌ 4ರಂದು ಅಧಿಕೃತವಾಗಿ ನಾಮಪತ್ರವನ್ನು ಸಲ್ಲಿಸುವುದಾಗಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವು ಕಳೆದ 4 ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿದೆ. ಇಲ್ಲಿ ಯಾರೇ ಅಭ್ಯರ್ಥಿಯಾದರೂ ಕಮಲ ಅಭ್ಯರ್ಥಿಗೆ ನಿರಾಯಾಸ ಗೆಲುವು ಎಂಬ ಮಾತು ಚಾಲ್ತಿಯಲ್ಲಿದೆ. ಈ ಬಾರಿ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) ಅವರಿಗೆ ಸ್ವಪಕ್ಷೀಯ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದರಿಂದ ಅವರನ್ನು ಬದಲಾವಣೆ ಮಾಡಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರಿಗೆ ಮಣೆ ಹಾಕಲಾಗಿದೆ. ಈಗ ಚೌಟ ನಾಮಪತ್ರವನ್ನು ಸಾಂಕೇತಿಕವಾಗಿ ಸಲ್ಲಿಸಿದ್ದು, ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಸ್ಥಿರ ಮತ್ತು ಚರಾಸ್ತಿಯ ಒಟ್ಟು ಮೊತ್ತ 70,81,365 ಲಕ್ಷ ರೂಪಾಯಿ ಎಂದು ಬ್ರಿಜೇಶ್ ಚೌಟ ಉಲ್ಲೇಖಿಸಿದ್ದಾರೆ.

70,81,365 ಲಕ್ಷ ರೂಪಾಯಿಯ ಒಟ್ಟು ಆಸ್ತಿ ಮೌಲ್ಯದಲ್ಲಿ ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂಪಾಯಿ ಆಗಿದ್ದರೆ, ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂಪಾಯಿ ಆಗಿದೆ. ಇನ್ನು ಬ್ರಿಜೇಶ್ ಚೌಟ ಅವರು ಕಾರಿಗಾಗಿ ಸಾಲ ಮಾಡಿದ್ದು, ಒಟ್ಟು 9,62,010 ರೂಪಾಯಿ ಸಾಲ ಇರುವುದಾಗಿ ಘೋಷಿಸಿಕೊಂಡಿದ್ದಾರೆ.

ಬಿ.ಎಸ್ಸಿ ಪದವೀಧರ

ಬ್ರಿಜೇಶ್‌ ಚೌಟ ಅವರು ಬಿಎಸ್ಸಿ ಪದವೀಧರರಾಗಿದ್ದು, ಐಐಎಂ ಇಂದೋರ್‌ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫಿಸರ್ ಸರ್ಟಿಫಿಕೇಟ್ ಕೋರ್ಸ್ ಅನ್ನು ಸಹ ಪೂರೈಸಿದ್ದಾರೆ.

ಯಾರು ಈ ಬ್ರಿಜೇಶ್‌ ಚೌಟ?

ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾಜಿ ಸೈನಿಕ, ವಾಣಿಜ್ಯೋದ್ಯಮಿ, ಶಿಕ್ಷಣ ತಜ್ಞ ಮತ್ತು ಆಡಳಿತ ನಿರ್ವಹಣಾ ತಜ್ಞ. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿಯನ್ನು ಪಡೆದ ಅವರು ಇಂದೋರ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಿಂದ ಆಡಳಿತ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದವರು..

ಕ್ಯಾಪ್ಟನ್ ಚೌಟ ಅವರು ಭಾರತೀಯ ಸೇನೆಯ ಮಾನವ ಸಂಪನ್ಮೂಲ, ಭದ್ರತೆ, ಕಾರ್ಯಾಚರಣೆಗಳು, ಆಡಳಿತ ಮತ್ತು ಲಾಜಿಸ್ಟಿಕ್ಸ್‌ನ ಸ್ವತಂತ್ರ ನಿರ್ವಹಣೆಯಲ್ಲಿ ಏಳು ವರ್ಷಗಳ ಅನುಭವವನ್ನು ಹೊಂದಿರುವುದು ಅವರ ವಿಶೇಷತೆಯಾಗಿದೆ.

Lok Sabha Election 2024 Captain Brijesh Chowta with PM Narendra Modi

ಇದನ್ನೂ ಓದಿ : Lok Sabha Election 2024: ಅಮಿತ್‌ ಶಾ ರೌಡಿ, ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ; ಮೆಚ್ಯುರಿಟಿ, ಬುದ್ಧಿ ಇಲ್ಲವೆಂದ ಬಿಜೆಪಿ

ಎನ್‌ಸಿಸಿ ಮತ್ತು ಆರ್‌ಎಸ್‌ಎಸ್‌ ಪ್ರೇರಣೆಯಿಂದ ಸೇನೆ ಸೇರಿದ ಚೌಟ

ಬ್ರಿಜೇಶ್‌ ಚೌಟ ಅವರು ಕಾಲೇಜಿನಲ್ಲಿದ್ದಾಗ ಎನ್‌ಸಿಸಿ ಕೆಡೆಟ್‌ ಆಗಿದ್ದರು. ಅದರ ಜತೆಗೆ ಆರೆಸ್ಸೆಸ್‌ ಜತೆಗಿನ ಸಂಬಂಧ ಅವರನ್ನು ಸೇನೆಯನ್ನು ಸೇರಲು ಪ್ರೇರಣೆ ನೀಡಿತು. ಪದವಿ ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್‌ಗಾಗಿ UPSC ಪರೀಕ್ಷೆಯನ್ನು ಬರೆದರು. ಎಸ್‌ಎಸ್‌ಬಿ ಮೂಲಕ ಪರೀಕ್ಷೆ ತೇರ್ಗಡೆಯಾದ ನಂತರ OTI ಚೆನ್ನೈನಲ್ಲಿ ತರಬೇತಿ ಪಡೆದಿದ್ದಾರೆ.

Lok Sabha Election 2024 : ಏಳು ವರ್ಷಗಳ ಸೇನಾ ಸೇವೆ ಎಲ್ಲೆಲ್ಲಿ ನಡೆದಿತ್ತು?

ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಆರಂಭಿಕ ತರಬೇತಿ ಪಡೆದಿರುವುದು ಚೆನ್ನೈನಲ್ಲಿ. ಮುಂದಿನ ಮೂರು ತಿಂಗಳ ಕಾಲ ಶಿಲ್ಲಾಂಗ್‌ನಲ್ಲಿ ತರಬೇತಿ ನಡೆಯಿತು. ಪದಾತಿದಳದ ಗೂರ್ಖಾ ರೆಜಿಮೆಂಟ್‌ನಲ್ಲಿ ಕೆಲಸ ಮಾಡಿದ್ದ ಅವರು ಮೂರು ವರ್ಷಗಳ ಕಾಲ ಮಣಿಪುರದಲ್ಲಿ ಮತ್ತು ನಂತರ ಒಂದು ವರ್ಷ ಅಸ್ಸಾಂನಲ್ಲಿ ಬಂಡಾಯ ಉತ್ತುಂಗದಲ್ಲಿದ್ದಾಗ ಕೆಲಸ ಮಾಡಿದ್ದರು.

ಇವರದು ರಾಜಕೀಯ ಕುಟುಂಬವಲ್ಲ

ಬ್ರಿಜೇಶ್‌ ಚೌಟ ಅವರು ಮೂಡುಬಿದಿರೆಯ ಬಂಟ ಕುಟುಂಬಕ್ಕೆ ಸೇರಿದವರು. ಹಾಗಂತ ಇವರೇನೂ ಶ್ರೀಮಂತ ಕುಟುಂಬದವರಲ್ಲ. ಬ್ರಿಜೇಶ್‌ ಚೌಟ ಅವರು ಸೈನ್ಯಕ್ಕೆ ಸೇರಿದ ನಂತರ ಕುಟುಂಬ ಫರಂಗಿಪೇಟೆಯಲ್ಲಿ ನೆಲೆಸಿದೆ.

Captain Brijesh Chowta and cow

ಕಂಬಳದ ಸಂಯೋಜಕ ಬ್ರಿಜೇಶ್‌ ಚೌಟ

ಬ್ರಿಜೇಶ್‌ ಚೌಟ ಅವರು ಕರಾವಳಿಯ ಸಾಂಸ್ಕೃತಿಕ ಮತ್ತು ಕ್ರೀಡಾ ನೇತಾರರಾಗಿಯೂ ಹೆಸರಾಗಿದ್ದಾರೆ. ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಮಂಗಳೂರಿನಲ್ಲಿ ಆಯೋಜಿಸುವ ಮೂಲಕ ಅವರು ಗಮನ ಸೆಳೆದಿದ್ದಾರೆ.

Captain Brijesh Chowta and Kambala poster

ಬ್ರಿಜೇಶ್‌ ಚೌಟ ಅವರ ರಾಜಕೀಯ ಜೀವನ

ಬ್ರಿಜೇಶ್‌ ಚೌಟ ಅವರು ಕಾಲೇಜು ಜೀವನದಿಂದಲೇ ರಾಷ್ಟ್ರೀಯವಾದಿ, ಆರೆಸ್ಸೆಸ್‌ ಸ್ವಯಂಸೇವಕ. ಹೀಗಾಗಿ ಬಿಜೆಪಿಯ ಕಡೆಗೆ ಸಹಜ ಒಲವು ಹೊಂದಿದ್ದರು. ಅವರು ಬಿಜೆಪಿಯಲ್ಲಿ ಸಕ್ರಿಯವಾಗಿದ್ದು 2013ರ ವಿಧಾನಸಭಾ ಚುನಾವಣೆಯ ಬಳಿಕ. ಅವರು ಮೂರು ವರ್ಷಗಳ ಕಾಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು. ನಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರ ಹೆಸರು ಅಭ್ಯರ್ಥಿಯಾಗಿ ಕೇಳಿಬಂದಿತ್ತು. ಇದೀಗ ಅವರಿಗೆ ಸಂಸತ್‌ ಪ್ರವೇಶಕ್ಕೆ ಟಿಕೆಟ್‌ ಸಿಕ್ಕಿದೆ.

ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬ್ರಿಜೇಶ್‌ ಚೌಟ ಆಯ್ಕೆ ಆಗಿದ್ದು ಹೇಗೆ?

ಈ ಬಾರಿ ಲೋಕಸಭೆ ಅಭ್ಯರ್ಥಿ ಬದಲಾವಣೆ ಆಗಲೇಬೇಕೆಂದು ಪಕ್ಷದ ಕಾರ್ಯಕರ್ತರು ಅಭಿಯಾನ ಕೈಗೊಂಡಿದ್ದರು. ಕಾರ್ಯಕರ್ತರ ಮಾತಿಗೆ ಓಗೊಟ್ಟ ಬಿಜೆಪಿ ಹೈಕಮಾಂಡ್ ಯುವ ನಾಯಕ, 42 ವರ್ಷದ ಬ್ರಿಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಅಂದಹಾಗೆ, ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಆಯ್ದುಕೊಂಡಿರುವುದು ಮಹತ್ವದ ನಡೆಯಾಗಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ.

ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.

ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದ ಚೌಟರು ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್‌ನ ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡು 2013ರಲ್ಲಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು.‌ 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜತೆಗೂಡಿ ಪಕ್ಷದ ಕೆಲಸ ಮಾಡಿದ್ದರು. 2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ಇದಲ್ಲದೆ, 2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿರುತ್ತಾರೆ.

ಇದನ್ನೂ ಓದಿ: Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

ಲಿಟ್ ಫೆಸ್ಟ್ ಸಂಘಟನೆ

ಪಕ್ಷದ ಚಟುವಟಿಕೆ ಜತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಫೌಂಡೇಶನ್ ಮೂಲಕ ತಮ್ಮದೇ ಸ್ನೇಹಿತರನ್ನು ಕಟ್ಟಿಕೊಂಡು ಸದ್ದಿಲ್ಲದೆ ಸೇವಾ ಚಟುವಟಿಕೆಯನ್ನು ನಡೆಸಿದ್ದರು. ಇದಲ್ಲದೆ, ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರ ಇರುತ್ತಿದ್ದ ಲಿಟ್ ಫೆಸ್ಟ್ ಎನ್ನುವ ರಾಷ್ಟ್ರ ಮಟ್ಟದ ಸಾಹಿತ್ಯ ಕೂಟವನ್ನು ಮಂಗಳೂರಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಸಂಘಟಿಸಿದ್ದರು. ರಾಷ್ಟ್ರೀಯ ಮಟ್ಟದ ವಾಗ್ಮಿಗಳು, ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಜತೆಗೂಡಿಸಿ ಸಂವಾದ, ಧನಾತ್ಮಕ ಸಾಹಿತ್ಯ ಚಟುವಟಿಕೆಗೆ ವೇದಿಕೆ ಒದಗಿಸಿದ್ದಲ್ಲದೆ, 2019ರಿಂದ ಪ್ರತಿ ವರ್ಷ ಲಿಟ್ ಫೆಸ್ಟ್ ಸಂಘಟಿಸುತ್ತಿದ್ದಾರೆ, ಆಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಸಾಹಿತ್ಯ ಪ್ರಿಯರಿಗೆ ರಾಷ್ಟ್ರ ಮಟ್ಟದ ದಿಗ್ಗಜರ ಜತೆಗೆ ಸಂವಾದಕ್ಕೆ ವೇದಿಕೆ ಸೃಷ್ಟಿಸಿದ್ದರು.

ಕಂಬಳಕ್ಕಾಗಿ ಹೋರಾಟ

2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವ ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿಗ ಚರ್ಚೆ ನಡೆಯುತ್ತಿರುವಾಗಲೇ ಬ್ರಿಜೇಶ್ ಚೌಟ ಹೆಸರು ಮುನ್ನೆಲೆಗೆ ಬಂದಿತ್ತು. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿರುವ ಬ್ರಿಜೇಶ್ ಚೌಟ ಬಂಟ ಸಮುದಾಯದ ಪ್ರಮುಖ ಗುತ್ತಿನ ಮನೆಗೆ ಸೇರಿದ್ದರೂ ಅವಿವಾಹಿತರಾಗಿಯೇ ಇದ್ದು ತನ್ನ ಸಂಪೂರ್ಣ ಜೀವನವನ್ನು ದೇಶ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ.

Continue Reading

ದಾವಣಗೆರೆ

Bhadra canal : ಭದ್ರಾ ನಾಲೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

Drowned In River: ಸೆಕೆ ತಾಳಲಾರದೆ ಭದ್ರಾ ನಾಲೆಯಲ್ಲಿ ಸ್ನಾನ ಮಾಡಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆ.

VISTARANEWS.COM


on

By

Drowned in canal
ಮೃತ ದುರ್ದೈವಿ
Koo

ದಾವಣಗೆರೆ: ಭದ್ರಾ ನಾಲೆಯಲ್ಲಿ ಸ್ನಾನಕ್ಕೆ ಹೋಗಿದ್ದ ವಿದ್ಯಾರ್ಥಿ ಆಯತಪ್ಪಿ ಬಿದ್ದು (Drowned In River) ಮೃತಪಟ್ಟಿದ್ದಾನೆ. ಮಣಿಕಂಠ (16) ಮೃತಪಟ್ಟ ದುರ್ದೈವಿ. ದಾವಣಗೆರೆ ಜಿಲ್ಲೆಯ ಬಸವಾಪಟ್ಟಣದಲ್ಲಿ ಘಟನೆ ನಡೆದಿದೆ.

ಹೊನ್ನಾಳಿ ತಾಲೂಕಿನ ನೇರಲಗುಡಿ ಗ್ರಾಮದ ತಿಮ್ಮಪ್ಪ ಅವರ ಮಗ ಮಣಿಕಂಠ ಬಸವಾಪಟ್ಟಣ ಜನತಾ ಪ್ರೌಢಶಾಲೆಯಲ್ಲಿ ಎಸ್‌ಎಸ್ಎಲ್‌ಸಿ ಪರೀಕ್ಷೆ ಬರೆಯಲು ಹೋಗಿದ್ದ. ಪರೀಕ್ಷೆ ಮುಗಿಸಿ ವಾಪಸ್‌ ಬರುವಾಗ ಸೆಕೆ ಎಂದು ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿದ್ದಾನೆ. ಆದರೆ ಆಕಸ್ಮಿಕವಾಗಿ ಕಾಲುವೆಯಲ್ಲಿ ಬಿದ್ದು ಮೃತಪಟ್ಟಿದ್ದಾನೆ.

ಸಮೀಪದ ಹರೋಸಾಗರದ ಬಳಿ ಕಾಲುವೆಯಲ್ಲಿ ಮೃತ ದೇಹ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident : ತಲೆ ಮೇಲೆ ಹರಿದ ಲಾರಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು, ಮತ್ತೊಬ್ಬ ಗಂಭೀರ

ಮೂವರ ಜೀವ ತೆಗೆದ ಬಿಸಿಲು; ಕಪಿಲಾ ನದಿಯ ಸುಳಿಗೆ ಸಿಲುಕಿ ಸಾವು

ಮೈಸೂರು: ರಾಜ್ಯದಲ್ಲಿ ಸೆಕೆ ವಿಪರೀತವಾಗಿದೆ. ಬಿಸಿಲ ತಾಪದಿಂದ (Temperature rising) ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಕೆಲವರು ನೀರಿನಲ್ಲಿ ಈಜಲೂ ಹೋಗುವುದುಂಟು. ಆದರೆ ಮೈಸೂರಿನಲ್ಲಿ ಬಿಸಿಲ ತಾಪಮಾನವು ಮೂವರ ಜೀವ ತೆಗೆದಿದೆ. ಸೆಕೆ ತಾಳಲಾರದೆ ಮೂವರು ಕೆರೆಯಲ್ಲಿ ಈಜಲು (Drowned in River) ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.

ಮೈಸೂರಿನ ನಂಜನಗೂಡು ತಾಲೂಕಿನ ಗೊದ್ದನಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಿಹಾರ ಮೂಲದ ಮಿಲನ್ (25), ಮೋಹನ್ (19), ತರುಣ್ (19) ಮೃತ ಕಾರ್ಮಿಕರು. ಈ ಮೂವರು ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಹೊರ ಬಂದ ಯುವಕರು ಬೇಸಿಗೆಯ ಸೆಖೆ ತಾಳಲಾರದೆ ಕಪಿಲಾ ನದಿಗೆ ಇಳಿದಿದ್ದಾರೆ. ಆದರೆ ಕಪಿಲಾ ನದಿಗೆ ಇಳಿದವರು ಸುಳಿಗೆ ಸಿಲುಕಿ ಹೊರಬರಲು ಆಗದೆ ಮೃತಪಟ್ಟಿದ್ದಾರೆ.

Drowned in River
ಮೃತದೇಹಕ್ಕಾಗಿ ಹುಡುಕಾಟ ನಡೆಸಿರುವ ಅಗ್ನಿಶಾಮಕ ದಳ ಸಿಬ್ಬಂದಿ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಪಿಲಾ ನದಿಯಲ್ಲಿ ಕೊಚ್ಚಿ ಹೋದವರನ್ನು ಹುಡುಕುವ ಕಾರ್ಯಾಚರಣೆಯನ್ನು ಅಗ್ನಿಶಾಮಕ ದಳ ಅಧಿಕಾರಿಗಳು ಮುಂದುವರಿಸಿದ್ದಾರೆ. ಮಿಲನ್‌ನ ಶವ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇದನ್ನೂ ಓದಿ:Drowned in Pond : ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು

ಉಡುಪಿ: ಮೀನು ಹಿಡಿಯಲು ಹೋದ ಇಬ್ಬರಿಬ್ಬರು ನೀರುಪಾಲಾದ (Drowned in River) ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ (Seeta river) ನಡೆದಿದೆ. ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತಪಟ್ಟವರು.

ಸೋಮವಾರ ಬೆಳಗ್ಗೆ ಮೀನು ಹಿಡಿಯಲೆಂದು ನಾಗರಮಠದ ಸೀತಾ ನದಿಗೆ ಹೋಗಿದ್ದರು. ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಇದೇ ವೇಳೆ ಅಲ್ಲಿದ್ದ ಸ್ಥಳೀಯರು ಮುಳುಗುತ್ತಿರುವವರ ರಕ್ಷಣೆಗೆ ಯತ್ನಿಸಿದ್ದಾರೆ. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ರಕ್ಷಣೆ ಮಾಡುವಲ್ಲಿ ವಿಫಲರಾಗಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ, ಈಜು ತಜ್ಞ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Parliament Flashback: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರನ್ನೇ ಸೋಲಿಸಿದ್ದ ಬ್ಯಾರೇಜ್‌ ಸಿದ್ದು!

ಈಜಲು ಹೋಗಿ ನೀರುಪಾಲಾದ ಯುವಕ

ಕೆರೆಯಲ್ಲಿ ಈಜಾಡಲು ಹೋಗಿ ಯುವಕನೊಬ್ಬ ನೀರುಪಾಲಾಗಿದ್ದಾನೆ. ಯಾದಗಿರಿ ತಾಲೂಕಿನ ಅರಕೇರಾ ಬಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಸವಲಿಂಗಪ್ಪ (18) ಮೃತ ದುರ್ದೈವಿ.

ಬೆಳಗ್ಗೆ ಸ್ನೇಹಿತರ ಜತೆ ಬಣ್ಣದೋಕಳಿ ಆಡಿ ನಂತರ ತಮ್ಮನೊಟ್ಟಿಗೆ ಕೆರೆಗೆ ಈಜಾಡಲು ತೆರಳಿದ್ದಾನೆ. ಆದರೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳೀಯರು ಮೃತದೇಹವನ್ನು ಹೊರ ತೆಗೆದಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Alia Bhatt wore diamond jewellery
ಸಿನಿಮಾ14 seconds ago

Alia Bhatt: ಲಂಡನ್‌ ʻಹೋಪ್ ಗಾಲಾʼದಲ್ಲಿ ಆಲಿಯಾ ಭಟ್‌ ಧರಿಸಿದ ವಜ್ರದ ನೆಕ್ಲೇಸ್ ಬೆಲೆ ಎಷ್ಟು?

Heat Stroke
ಆರೋಗ್ಯ13 mins ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Rahul Gandhi And Tejashwi Yadav
Lok Sabha Election 202418 mins ago

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

IPL 2024
ಕ್ರೀಡೆ24 mins ago

IPL 2024: ಹಾರ್ದಿಕ್​ ಪಾಂಡ್ಯ ಮೇಲೆ ಬೌಲಿಂಗ್​ ಕೋಚ್​ ಮುನಿಸು; ವಿಡಿಯೊ ವೈರಲ್​​

Sringeri Shankar Mutt
ಮೈಸೂರು24 mins ago

Sringeri Shankar Mutt: ಮೈಸೂರಿನಲ್ಲಿ ಮಾ.30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ

LIC
ದೇಶ2 hours ago

LIC Offices: ವೀಕೆಂಡ್‌ನಲ್ಲೂ ಕಾರ್ಯನಿರ್ವಹಿಸಲಿವೆ ಎಲ್‌ಐಸಿ ಕಚೇರಿಗಳು; ಕಾರಣ ಇಲ್ಲಿದೆ

Dead Body Found in water tank
ಬೀದರ್‌2 hours ago

Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

Varthur Santhosh tears
ಬಿಗ್ ಬಾಸ್2 hours ago

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Lok Sabha Election 2024 Brijesh Chowta declares assets
Lok Sabha Election 20242 hours ago

Lok Sabha Election 2024: ಅವಿವಾಹಿತ ಬ್ರಿಜೇಶ್ ಚೌಟ ಬಳಿ ಇಲ್ಲ ಕೋಟಿ ಕೋಟಿ ಆಸ್ತಿ! ಸಾಲ ಮಾಡಿ ಕಾರು ಖರೀದಿ

Drowned in canal
ದಾವಣಗೆರೆ2 hours ago

Bhadra canal : ಭದ್ರಾ ನಾಲೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌