Site icon Vistara News

R Dhruvanarayana : ಸಾಮಾಜಿಕ ನ್ಯಾಯದ ಚಾಂಪಿಯನ್‌; ರಾಹುಲ್‌, ಪ್ರಿಯಾಂಕಾ, ದೇವೇಗೌಡರ ನುಡಿನಮನ

R Dhruvanarayana

#image_title

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ, ಚಾಮರಾಜನಗರದ ಮಾಜಿ ಸಂಸದ ಆರ್‌. ಧ್ರುವನಾರಾಯಣ (R Dhruvanarayana) ಅವರ ನಿಧನಕ್ಕೆ ರಾಷ್ಟ್ರಾದ್ಯಂತ ಕಂಬನಿಯ ಮಹಾಪೂರವೇ ಹರಿದುಬಂದಿದೆ. ಕಾಂಗ್ರೆಸ್‌ನ ಹಿರಿಯ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಸಾಮಾಜಿಕ ನ್ಯಾಯದ ಚಾಂಪಿಯನ್‌ ಎಂದೇ ಹೆಸರಾದ ಧ್ರುವನಾರಾಯಣ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಸಾಮಾಜಿಕ ನ್ಯಾಯಕ್ಕಾಗಿನ ಬದ್ಧತೆ ಸದಾ ಸ್ಮರಣೀಯ: ಪ್ರಿಯಾಂಕಾ ಗಾಂಧಿ

ಧ್ರುವನಾರಾಯಣ ಅವರ ನಿಧನಕ್ಕೆ ಕಂಬನಿ ಮಿಡಿದಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು, ಸಮಾಜಸೇವೆ ಮತ್ತು ಸಾಮಾಜಿಕ ನ್ಯಾಯದ ಕಡೆಗಿನ ಅವರ ಬದ್ಧತೆ ಯಾವತ್ತೂ ಸ್ಮರಣೀಯ ಎಂದು ಹೇಳಿದ್ದಾರೆ. ಅವರ ಕುಟುಂಬ ಮತ್ತು ಬಂಧುಗಳಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.

ಕಠಿಣ ಪರಿಶ್ರಮಿ, ತಳಮಟ್ಟದ ನಾಯಕ: ರಾಹುಲ್‌ ಗಾಂಧಿ

ಧ್ರುವನಾರಾಯಣ ಅವರು ಒಬ್ಬ ಕಠಿಣ ಪರಿಶ್ರಮಿ ಮತ್ತು ವಿನಮ್ರ ತಳಮಟ್ಟದ ನಾಯಕ. ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್‌ನ ಹುದ್ದೆಗಳ ಮೂಲಕ ಬೆಳೆದು ಬಂದ ಅವರು ಸಾಮಾಜಿಕ ನ್ಯಾಯದ ಚಾಂಪಿಯನ್‌ ಎಂದು ಧ್ರುವ ನಾರಾಯಣ್‌ ನಿಧನಕ್ಕೆ ರಾಹುಲ್‌ ಗಾಂಧಿ ನೋವು ಹಂಚಿಕೊಂಡಿದ್ದಾರೆ. ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ.

ಆಘಾತ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ರಾಜ್ಯ ಕಾಂಗ್ರೆಸ್ ನ ಹಿರಿಯ ಮುಖಂಡ ಆರ್. ಧ್ರುವನಾರಾಯಣ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ಆಘಾತ ಮತ್ತು ದುಃಖವಾಗಿದೆ. ಇವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತೆಗೆ ಈ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ : R Dhruvanarayana : ಸಭ್ಯತೆಯ ಸವ್ಯಸಾಚಿ, ಶುದ್ಧ- ಮೌಲ್ಯಾಧರಿತ ರಾಜಕಾರಣದ ʻಧ್ರುವʼ ನಕ್ಷತ್ರ ಕಣ್ಮರೆ

Exit mobile version