R Dhruvanarayana : ನನ್ನ ಮಾರ್ಗದರ್ಶಕ, ಸ್ನೇಹಿತ, ಹಿತೈಷಿಯಾಗಿದ್ದ ಧ್ರುವ ನಾರಾಯಣ; ಹರಿಪ್ರಕಾಶ್‌ ಕೋಣೆಮನೆ ಕಂಬನಿ - Vistara News

ಕರ್ನಾಟಕ

R Dhruvanarayana : ನನ್ನ ಮಾರ್ಗದರ್ಶಕ, ಸ್ನೇಹಿತ, ಹಿತೈಷಿಯಾಗಿದ್ದ ಧ್ರುವ ನಾರಾಯಣ; ಹರಿಪ್ರಕಾಶ್‌ ಕೋಣೆಮನೆ ಕಂಬನಿ

ಇಷ್ಟು ಬೇಗ ಧ್ರುವ ನಾರಾಯಣ (R. Dhruvanarayana) ಅವರ ಕುರಿತು ಶ್ರದ್ಧಾಂಜಲಿ ಲೇಖನ ಬರೆಯುವಂತಾಗಿದ್ದು ನೋವಿನ ಸಂಗತಿ. ವಿಧಿಯು ಧ್ರುವ ನಾರಾಯಣ ಅವರನ್ನು ಕಸಿದುಕೊಂಡಿದೆ. ಅವರು ಬಿಟ್ಟು ಹೋದ ಸಜ್ಜನಿಕೆ, ಪ್ರಜಾಪ್ರಭುತ್ವ ಪರವಾದ ನಡೆ, ಶುದ್ಧ ರಾಜಕಾರಣದ ಉದಾಹರಣೆಯಾಗಿ ನಮ್ಮನ್ನೆಲ್ಲ ಮುನ್ನಡೆಸಲಿ.

VISTARANEWS.COM


on

dhruva
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಹರಿಪ್ರಕಾಶ್‌ ಕೋಣೆಮನೆ, ಸಿಇಒ ಮತ್ತು ಪ್ರಧಾನ ಸಂಪಾದಕ, ವಿಸ್ತಾರ ನ್ಯೂಸ್

ನುಡಿದರೆ ಮುತ್ತಿನ ಹಾರದಂತಿರಬೇಕು,
ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು,
ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು,
ನುಡಿದರೆ ಲಿಂಗ ಮೆಚ್ಚಿ ಅಹುದಹುದೆನಬೇಕು,
ನುಡಿಯೊಳಗಾಗಿ ನಡೆಯದಿದ್ದಡೆ,
ಕೂಡಲ ಸಂಗಮದೇವನೆಂತೊಲಿವನಯ್ಯ?

ಎಂಬ ಮಾತಿಗೆ ಅನುಗುಣವಾಗಿದ್ದವರು ಧ್ರುವ ನಾರಾಯಣ.
ಅವರೊಂದಿಗೆ ಅತ್ಯಂತ ಆಪ್ತ ಒಡನಾಟ ಹೊಂದಿದ್ದವನಾಗಿ ಈ ಮಾತನ್ನು ಖಡಾಖಂಡಿತವಾಗಿ ಹೇಳಬಲ್ಲೆ. ನನಗಿಂತ ವಯಸ್ಸಿನಲ್ಲಿ ಹಿರಿಯರಾದರೂ ಅತ್ಯಂತ ಸಹಜವಾಗಿ, ಯಾವ ಹಮ್ಮುಬಿಮ್ಮು ಇಲ್ಲದೇ ನನ್ನ ಜತೆಗೆ ಮುಕ್ತವಾಗಿ ಮಾತುಕತೆ ನಡೆಸುತ್ತಿದ್ದರು. ಅವರ ಜತೆಗೆ ಪ್ರತಿ ಬಾರಿ ಮಾತನಾಡಿದಾಗಲೂ ಇಂಥ ರಾಜಕಾರಣಿ ಇರುತ್ತಾರೆಯೇ ಎಂಬ ಅಚ್ಚರಿಯೂ, ಇರುವರಲ್ಲ ಎಂಬ ಸಮಾಧಾನವೂ ಉಂಟಾಗುತ್ತಿತ್ತು. ಅವರ ಪ್ರತಿ ಮಾತಿನಲ್ಲೂ ಸಮಾಜದೆಡೆಗೆ ವಿಪರೀತ ಕಾಳಜಿ, ತುಡಿತ ವ್ಯಕ್ತವಾಗುತ್ತಿತ್ತು.

ದಲಿತ ಸಮುದಾಯದಿಂದ ಬಂದಿದ್ದ ಧ್ರುವನಾರಾಯಣ್, ಆ ಸಮುದಾಯದ ಏಳಿಗೆಗೆ ಶ್ರಮಿಸುತ್ತಿದ್ದ ಹೊತ್ತಲ್ಲೇ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೂ ಕನಸು ಕಾಣುತ್ತಿದ್ದರು, ದುಡಿಯುತ್ತಿದ್ದರು.

ಏಳಿಗೆಗೆ ಶಿಕ್ಷಣವನ್ನೇ ಮಂತ್ರ ಮಾಡಿಕೊಂಡವರು

ದಲಿತ ಸಮುದಾಯದ ಏಳಿಗೆಗೆ ʻಶಿಕ್ಷಣ ಸಂಘಟನೆ ಹೋರಾಟ” ಎಂಬುದು ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರು ನೀಡಿದ ಮಂತ್ರ. ಈ ಪೈಕಿ ಧ್ರುವನಾರಾಯಣ ಆಯ್ಕೆ ಮಾಡಿಕೊಂಡಿದ್ದು ಶಿಕ್ಷಣ. ಒಂದು ಸಮುದಾಯ ಸರಿಯಾಗಿ ಶಿಕ್ಷಣ ಪಡೆದರೆ, ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂಬ ವಿಶಾಲ ಆಲೋಚನೆಯನ್ನು ಮೈಗೂಡಿಸಿಕೊಂಡಿದ್ದರು. ಹಾಗಾಗಿಯೇ ಅವರು ಹಳೆ ಮೈಸೂರು ಭಾಗದಲ್ಲಿ ದಲಿತ ನಾಯಕ ಎಂಬ ಹಣೆಪಟ್ಟಿ ಮೀರಿ, ಲಿಂಗಾಯತರೂ ಸೇರಿದಂತೆ ಎಲ್ಲ ಸಮಾಜದ ನಾಯಕರಾಗಿ ಬೆಳೆಯುತ್ತಿದ್ದರು.

ಸಿದ್ದರಾಮಯ್ಯ, ಶ್ರೀನಿವಾಸ ಪ್ರಸಾದ್ ಬಳಿಕ ಮೈಸೂರು ಭಾಗದಲ್ಲಿ ಪ್ರಗತಿಪರ ರಾಜಕಾರಣಿಯಾಗುವ ಭರವಸೆ ಮೂಡಿಸಿದ್ದರು. ದೇವರಾಜ ಅರಸು ಅವರ ಒಳಗೊಳ್ಳುವಿಕೆ, ರಾಜಶೇಖರಮೂರ್ತಿ ಅವರ ಪ್ರಾಮಾಣಿಕತೆ, ರಾಚಯ್ಯ ಅವರ ಸಜ್ಜನಿಕೆ- ಎಲ್ಲವನ್ನೂ ಹದವಾಗಿ ಮೈಗೂಡಿಸಿಕೊಂಡಿದ್ದ ಧ್ರುವನಾರಾಯಣ್, ಜನನಾಯಕರಾಗಿ ರೂಪುಗೊಳ್ಳುತ್ತಿದ್ದರು.

ಸ್ವತಃ ಕೃಷಿ ಪದವೀಧರರಾಗಿದ್ದ ಧ್ರುವ ನಾರಾಯಣ, ಸಹಜವಾಗಿಯೇ ರೈತರ ಸಮಸ್ಯೆಗಳ ಕುರಿತು ಅಪಾರ ಕಾಳಜಿ ಹೊಂದಿದ್ದರು. ಡಾ. ಬಿ.ಆರ್. ಅಂಬೇಡ್ಕರರು ದಲಿತ ಸಮುದಾಯದವರಾದರೂ, ಅವರಿಗೆ ಸಂವಿಧಾನ ರಚನೆಯ ಅವಕಾಶ ಲಭಿಸಿದಾಗ ಅವರು ಇಡೀ ಭಾರತದ, ಎಲ್ಲ ಭಾರತೀಯರ ಕಲ್ಯಾಣಕ್ಕಾಗಿ ಸಂವಿಧಾನ ರಚಿಸಿದರು. ಅಂತೆಯೇ ಅಧಿಕಾರಕ್ಕೆ ಬರುವ ಮುನ್ನವೂ, ನಂತರವೂ ಎಲ್ಲ ಸಮುದಾಯಗಳ ಏಳಿಗೆಯನ್ನೇ ಬಯಸಿದವರು ಧ್ರುವ ನಾರಾಯಣ.

ಮಾತು ಮೃದುವಾದರೂ ನಿರ್ಧಾರಗಳು ಮಾತ್ರ ದೃಢ

ಇಂದು ಎದುರಾಳಿ ರಾಜಕಾರಣಿಗಳನ್ನು ವಾಚಾಮಗೋಚರವಾಗಿ ನಿಂದಿಸುವ, ಅವರನ್ನು ರಾಕ್ಷಸನಿಂದ ನೀಚನವರೆಗೆ ಮನಬಂದಂತೆ ಹೋಲಿಕೆ ಮಾಡುವುದು ನೋಡುತ್ತಿದ್ದೇವೆ. ಒಮ್ಮೆ ಮಾತಿಗೆ ಬೆಲೆ ನೀಡುತ್ತಿದ್ದ ಭಾರತದ ರಾಜಕಾರಣದಲ್ಲಿ ಮಾತು ತನ್ನ ಮೌಲ್ಯವನ್ನೇ ಕಳೆದುಕೊಂಡಿದೆ. ಆದರೆ ಇದಕ್ಕೆ ಅಪವಾದದಂತಿದ್ದವರು ಧ್ರುವ ನಾರಾಯಣ.

ರಾಜ್ಯದಲ್ಲಿ ಚುನಾವಣೆ ಕಾವು ಏರಿ ವಾಗ್ದಾಳಿಗಳು ನಡೆಯುತ್ತಿದ್ದರೂ ಒಮ್ಮೆಯೂ ಧ್ರುವ ನಾರಾಯಣ ಅವರ ಬಾಯಿಂದ ಅಂತಹ ಮಾತನ್ನು ಕೇಳಲು ಸಾಧ್ಯವಿರಲಿಲ್ಲ. ರಾಜಕಾರಣವನ್ನು ಶುದ್ಧಗೊಳಿಸಬೇಕು, ಸಭ್ಯರು ರಾಜಕಾರಣಕ್ಕೆ ಬರಬೇಕು ಎಂದು ಎಲ್ಲರೂ ಹೇಳುತ್ತಾರೆ. ಆದರೆ ಅದನ್ನು ಎಲ್ಲಿಂದ ಆರಂಭಿಸಬೇಕು? ಧ್ರುವ ನಾರಾಯಣ ಅಂಥವರು ಶುದ್ಧ ರಾಜಕಾರಣದ ಅಭಿಯಾನದ ಆರಂಭದ ಬಿಂದುವಾಗಿ ನಮಗೆ ಲಭಿಸುತ್ತಿದ್ದರು. ಮಾತು ಎಷ್ಟು ಮೃದುವಾಗಿರುತ್ತಿತ್ತು. ಆದರೆ ಅವರ ನಿರ್ಧಾರಗಳು ಮಾತ್ರ ಅಷ್ಟೇ ಕಠಿಣವಾಗಿರುತ್ತಿದ್ದವು. ಹಾಗೆಯೇ ಅವರ ನಿರ್ಧಾರಗಳಲ್ಲಿ ಕಲ್ಮಷ, ಪೂರ್ವಾಗ್ರಹ ಲವಲೇಶವೂ ಇರುತ್ತಿರಲಿಲ್ಲ.

ಎಲ್ಲ ನಾಯಕರಿಗೆ ಸಲಹೆಗಾರ ಇವರು

ಇದೇ ಕಾರಣಕ್ಕೆ, ಕಾಂಗ್ರೆಸ್ ಪಕ್ಷವಷ್ಟೆ ಅಲ್ಲದೆ ಬೇರೆ ಪಕ್ಷದ ನಾಯಕರು, ಮುಖಂಡರೂ ಅವರಲ್ಲಿ ಸಲಹೆಗಳನ್ನು ಕೇಳುತ್ತಿದ್ದರು. ಚುನಾವಣೆಯಲ್ಲಿ ಜಯ ಗಳಿಸುವುದರಿಂದ, ಯೋಜನೆಯ ಅನುಷ್ಠಾನದವರೆಗೆ ಧ್ರುವ ನಾರಾಯಣ ಅವರಿಂದ ಸಲಹೆ ಪಡೆಯುತ್ತಿದ್ದರು. ವಿಧಾನಮಂಡಲದಲ್ಲಿ ಬೇರೆ ಪಕ್ಷದ ನಾಯಕರು ರೈತರ ಕುರಿತು, ಸಮಾಜದ ಕುರಿತು ಕಾಳಜಿಯಿಂದ ಮಾತನಾಡಿದರೆ ದೂರವಾಣಿ ಕರೆ ಮಾಡಿ, ಎದುರಿಗೆ ಸಿಕ್ಕಾಗ ಮನಃಪೂರ್ವಕವಾಗಿ ಅಭಿನಂದಿಸುತ್ತಿದ್ದರು.

1983ರಲ್ಲಿ ಅಂದರೆ ನಾಲ್ಕು ದಶಕಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾದವರು ಎಂದಿಗೂ ಪಕ್ಷಕ್ಕೆ ನಿಷ್ಠರಾಗಿದ್ದವರು. ಇತ್ತೀಚಿನ ಸಮಯದಲ್ಲಂತೂ ಕರ್ನಾಟಕ ಕಾಂಗ್ರೆಸಿನ ಅತ್ಯಂತ ಸದೃಢ ಸ್ತಂಭದಂತೆ ಅವರು ತಮ್ಮನ್ನು ತಾವು ರೂಪಿಸಿಕೊಂಡಿದ್ದರು. ಶುದ್ಧಹಸ್ತ, ಕಳಂಕರಹಿತ ರಾಜಕಾರಣಿ, ಸಜ್ಜನ ರಾಜಕಾರಣಿ, ಸರಳ ವ್ಯಕ್ತಿತ್ವ… ಹೀಗೆ ಯಾವುದೇ ಉತ್ತಮ ಸಂಗತಿಗಳನ್ನು ಪ್ರಸ್ತಾಪಿಸಿದರೂ ಅದು ಧ್ರುವ ನಾರಾಯಣ ಅವರಿಗೆ ಒಪ್ಪುವಂತಿತ್ತು.

ಅಂಕಣಗಳನ್ನು ಓದಿ ಪ್ರತಿಕ್ರಿಯಿಸುತ್ತಿದ್ದರು, ಲೈವ್‌ ಬಂದಿದ್ದರು

ರಾಜಕಾರಣದ ಒತ್ತಡಗಳ ನಡುವೆಯೂ ನನ್ನ ಅಂಕಣಗಳನ್ನು ಓದಿ ಪ್ರತಿಕ್ರಿಯಿಸುತ್ತಿದ್ದರು. ಮೆಚ್ಚಿದ್ದೂ ಉಂಟು, ಚರ್ಚಿಸಿದ್ದು , ವಾದಿಸಿದ್ದು, ಸಲಹೆ ಕೊಟ್ಟದ್ದೂ ಉಂಟು. ಪ್ರಜಾಪ್ರಭುತ್ವಕ್ಕೆ ಯಾವುದೇ ಕಾರಣಕ್ಕೂ ಯಾರಿಂದಲೂ ಚ್ಯುತಿ ಬರಬಾರದು ಎಂಬ ನನ್ನ ಗಟ್ಟಿನಿಲುವು ಅವರದೂ ಆಗಿತ್ತು. ಅದೇ ಕಾರಣಕ್ಕೆ ಅವರು ನನ್ನ ಪಾಲಿನ ಅತ್ಯಂತ ಆಪ್ತ ಸ್ನೇಹಿತರಾಗಿದ್ದರು. ನಾನು ವಿಸ್ತಾರ ಚಾನೆಲ್ ಆರಂಭಿಸುವ ಮಾತಾಡಿದಾಗ ಅತ್ಯಂತ ಸಂತೋಷಪಟ್ಟಿದ್ದರು. ಬಂದು ಹಾರೈಸಿದರು. ಚಾನೆಲ್ ನಲ್ಲಿ ಕೂಡ ಅನೇಕ ಸಲ ಲೈವ್ ಬಂದಿದ್ದರು.

ಅವರ ಸಜ್ಜನಿಕೆ, ಪ್ರಜಾಪ್ರಭುತ್ವವಾದಿ ನಡೆ, ಶುದ್ಧ ರಾಜಕಾರಣ ಮಾದರಿಯಾಗಲಿ

ಪತ್ರಕರ್ತನಾಗಿ ನನ್ನ ಎರಡು ದಶಕಗಳ ಅನುಭವದಲ್ಲಿ ಅನೇಕ ರಾಜಕಾರಣಿಗಳು‌ ಮತ್ತು ಅವರ ರಾಜಕೀಯ ಪ್ರಯಾಣವನ್ನೂ ಕಂಡಿದ್ದೇನೆ. ಆರಂಭದಲ್ಲಿದ್ದ ಶುದ್ಧ ರಾಜಕಾರಣದ, ಆದರ್ಶ ನಿಲುವುಗಳನ್ನು ಕಡೆಯ ಕ್ಷಣದವರೆಗೂ ನಿಷ್ಠೆ ಮತ್ತು ಗಟ್ಟಿಯಾಗಿ ಉಳಿಸಿಕೊಂಡು ಬಂದ ಕೆಲವು ರಾಜಕಾರಣಿಗಳನ್ನು ಕಂಡಿದ್ದೇನೆ. ಅದರಲ್ಲಿ ಧ್ರುವನಾರಾಯಣ ಅತ್ಯಂತ ಪ್ರಮುಖರು. ನಂಜನಗೂಡಿನಿಂದ ಚುನಾವಣಾ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದರು.

ಇತ್ತೀಚೆಗೆ ನಡೆದ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಧ್ರುವ ನಾರಾಯಣ ಮತ್ತು ವಿಸ್ತಾರ ನ್ಯೂಸ್ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಜತೆಗಿದ್ದರು.

ಇಷ್ಟು ಬೇಗ ಅವರ ಕುರಿತು ಶ್ರದ್ಧಾಂಜಲಿ ಲೇಖನವೊಂದನ್ನು ಬರೆಯುತ್ತೇನೆ ಎಂದು ಊಹಿಸಿರಲಿಲ್ಲ. ವಿಧಿಯು ಧ್ರುವ ನಾರಾಯಣ ಅವರನ್ನು ಕಸಿದುಕೊಂಡಿದೆ. ಅವರು ಬಿಟ್ಟು ಹೋದ ಸಜ್ಜನಿಕೆ, ಪ್ರಜಾಪ್ರಭುತ್ವ ಪರವಾದ ನಡೆ, ಶುದ್ಧ ರಾಜಕಾರಣದ ಉದಾಹರಣೆಯಾಗಿ ನಮ್ಮನ್ನೆಲ್ಲ ಮುನ್ನಡೆಸಲಿ. ಅದರಲ್ಲೂ ಚುನಾವಣೆಯ ಸಮಯದಲ್ಲಿ ಧ್ರುವ ನಾರಾಯಣ ಅವರ ವ್ಯಕ್ತಿತ್ವ, ಪ್ರಜಾಪ್ರಭುತ್ವದ ದೃಷ್ಟಿಯಿಂದ ಅತ್ಯಂತ ಅಗತ್ಯವಾದದ್ದು. ಅಂತಹದ್ದು ಭವಿಷ್ಯದಲ್ಲಿ ಸಾಧ್ಯವಾಗಲಿ, ಮತ್ತಷ್ಟು ಚರ್ಚೆಗಳು ಬಾಕಿ ಇರುವಾಗಲೇ ಅಗಲಿದ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಕಡೆಯದಾಗಿ ಸುತ್ತೂರು ಜಾತ್ರೆಯಲ್ಲಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದೆ. “ಚಾನೆಲ್ ಚೆನ್ನಾಗಿ ಬರುತ್ತಿದೆ. ಬೇರೆಯವರ ಪ್ರತಿಕ್ರಿಯೆ ಹೇಗಿದೆ? ನಿಮ್ಮಂಥವರ ಪ್ರಯತ್ನಗಳು ಯಶಸ್ವಿಯಾಗಬೇಕು. ನಾನು ಕಚೇರಿಗೆ ಬರುವೆ…,’ ಎಂದು ಶುಭ ಹಾರೈಸಿದ್ದರು. ಆದರೆ, ಅದೆಲ್ಲದಕ್ಕೂ ಮುನ್ನವೇ ನಿರ್ಗಮಿಸಿದ್ದಾರೆ. ಸಜ್ಜನ ರಾಜಕಾರಣಿಯೊಬ್ಬರ ಅಕಾಲಿಕ ನಿರ್ಗಮನ ನಿಜಕ್ಕೂ ಶೂನ್ಯವೇ. ಧ್ರುವನಾರಾಯಣ ಅವರ ನಡವಳಿಕೆ, ಆದರ್ಶ ಈಗಿನ ರಾಜಕಾರಣಿಗಳಿಗೆ ಮಾದರಿಯಾಗಲಿ.

ಇದನ್ನೂ ಓದಿ : R Dhruvanarayana : ಸಭ್ಯತೆಯ ಸವ್ಯಸಾಚಿ, ಶುದ್ಧ- ಮೌಲ್ಯಾಧರಿತ ರಾಜಕಾರಣದ ʻಧ್ರುವʼ ನಕ್ಷತ್ರ ಕಣ್ಮರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

NDA 3.0: ರಾಜ್ಯಕ್ಕೆ ಸಿಗಲಿದ್ಯಾ 2+1 ಸಚಿವ ಸ್ಥಾನ? ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?

NDA 3.0: ಲೋಕಸಭಾ ಚುನಾವಣೆಯಲ್ಲಿ 292 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಗೆ ಏರಿದೆ. ಈಗಾಗಲೇ ಎನ್‌ಡಿಎ ಮಿತ್ರಪಕ್ಷಗಳು ಬೆಂಬಲ ಸೂಚಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ಆರಂಭಿಸಿವೆ (NDA 3.0). ನಾಳೆ (ಜೂನ್‌ 9) ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಕರ್ನಾಟಕದಿಂದ ಯಾರಿಗೆ ಕೇಂದ್ರ ಸಚಿವ ಸ್ಥಾನದ ಭಾಗ್ಯ ಒಲಿಯಲಿದೆ ಎಂಬ ಚರ್ಚೆ ಜೋರಾಗಿದೆ.

VISTARANEWS.COM


on

NDA 3.0
Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 292 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ (National Democratic Alliance) ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಗೆ ಏರಿದೆ. ಈಗಾಗಲೇ ಎನ್‌ಡಿಎ ಮಿತ್ರಪಕ್ಷಗಳು ಬೆಂಬಲ ಸೂಚಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ಆರಂಭಿಸಿವೆ (NDA 3.0). ನಾಳೆ (ಜೂನ್‌ 9) ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಕರ್ನಾಟಕದಿಂದ ಯಾರಿಗೆ ಕೇಂದ್ರ ಸಚಿವ ಸ್ಥಾನದ ಭಾಗ್ಯ ಒಲಿಯಲಿದೆ ಎಂಬ ಚರ್ಚೆ ಜೋರಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿರುವ ಜೆಡಿಎಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೇಂದ್ರ ಕ್ಯಾಬಿನೆಟ್ ಮಂತ್ರಿ ಹುದ್ದೆ ಬಹುತೇಕ ಖಚಿತಗೊಂಡಿದೆ ಎನ್ನಲಾಗಿದ್ದು, ಬಿಜೆಪಿಯಿಂದ ಯಾರಿಗೆ ಮಂತ್ರಿ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಿದೆ.

ಮೂವರಿಗೆ ಸಚಿವ ಸ್ಥಾನ?

ಕುಮಾರಸ್ವಾಮಿ ಸೇರಿದಂತೆ ಬಿಜೆಪಿಯ ಇಬ್ಬರು ಸಂಸದರಿಗೆ ಸಚಿವ ಸ್ಥಾನ ನೀಡಿದಲ್ಲಿ ರಾಜ್ಯದ ಮೂವರಿಗೆ ಮಂತ್ರಿ ಪಟ್ಟ ಸಿಕ್ಕಂತಾಗಲಿದೆ. ಈಗಿನ ಸನ್ನಿವೇಶದಲ್ಲಿ ಮೂರಕ್ಕಿಂತ ಹೆಚ್ಚು ಸಚಿವ ಸ್ಥಾನ ರಾಜ್ಯಕ್ಕೆ ಸಿಗುವುದು ಕಷ್ಟ ಎನ್ನುವ ಮಾತೂ ಕೇಳಿ ಬಂದಿದೆ. ಮುಂಬರುವ ಚುನಾವಣಾ ರಾಜ್ಯದ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಹೈ ಕಮಾಂಡ್, ಮಹಾರಾಷ್ಟ್ರ, ಹರಿಯಾಣ ಸಂಸದರಿಗೆ ಹೆಚ್ಚಿನ ಸಚಿವ ಸ್ಥಾನ ನೀಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಜತೆಗೆ ಮಿತ್ರ ಪಕ್ಷಗಳಿಗೂ ಆದ್ಯತೆ ನೀಡಬೇಕಿದೆ.

ಪ್ರಲ್ಹಾದ್ ಜೋಶಿಗೆ ಮತ್ತೆ ಅವಕಾಶ?

ರಾಜ್ಯದಲ್ಲಿ ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ದಲಿತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಎನ್‌ಡಿಎ ಬಯಸಿದೆ ಎನ್ನಲಾಗಿದೆ. ಪ್ರಹ್ಲಾದ ಜೋಶಿ (Prahlad Joshi) ಅವರು ಎನ್‌ಡಿಎ ಮೂರನೆಯ ಅವಧಿಯಲ್ಲೂ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ನಿರರ್ಗಳತೆ ಹೊಂದಿರುವ ಪ್ರಹ್ಲಾದ್‌ ಜೋಶಿ, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಭಾವ ಹೊಂದಿದ್ದಾರೆ. ನಾಲ್ಕನೇ ಬಾರಿಗೆ ಹುಬ್ಬಳ್ಳಿ- ಧಾರವಾಡದ ಸಂಸದರಾಗಿ ಆಯ್ಕೆಯಾಗಿರುವ ಜೋಶಿ, ಬ್ರಾಹ್ಮಣ ಕೋಟಾವನ್ನು ತುಂಬಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆದ್ದ ʼಹೃದಯವಂತʼ ಡಾಕ್ಟರ್ ಸಿ.ಎನ್‌. ಮಂಜುನಾಥ್‌ (Dr CN Manjunath) ಅವರೂ ಸಚಿವ ಸ್ಥಾನ ಪಡೆಯಬಲ್ಲವರ ಯಾದಿಯಲ್ಲಿ ಇದ್ದಾರೆ ಎನ್ನಲಾಗಿದೆ. ಮಂಜುನಾಥ್‌ ಅವರ ಹಿರಿತನ, ಆರೋಗ್ಯ ಕ್ಷೇತ್ರದ ಅನುಭವ ಸರಕಾರದಲ್ಲಿ ನೆರವಾಗಲಿದೆ ಎಂಬ ಮುಂದಾಲೋಚನೆ. ಜತೆಗೆ ಹಲವು ಬಾರಿಯ ಸಂಸದರಾಗಿರುವ, ಕಾಂಗ್ರೆಸ್‌ನ ಹೆಬ್ಬಂಡೆ ಡಿ.ಕೆ ಸುರೇಶ್‌ (DK Suresh) ಅವರನ್ನು ದೊಡ್ಡ ಅಂತರದಲ್ಲಿ ಸೋಲಿಸಿ ಮಣ್ಣು ಮುಕ್ಕಿಸಿ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ನೀಡಿದ ಹೆಗ್ಗಳಿಕೆ ಜತೆಗಿದೆ.

ಸದ್ಯ ಕರ್ನಾಟಕಕ್ಕೆ 2+1+1 ಫಾರ್ಮುಲಾ ಅನುಸರಿಸಲು ಬಿಜೆಪಿ ಹೈ ಕಮಾಂಡ್ ಚಿಂತನೆ ಎನ್ನಲಾಗಿದ್ದು, ಬಿಜೆಪಿಯಿಂದ 2 ಸಚಿವರು, ಜೆಡಿಎಸ್‌ಗೆ 1 ಹಾಗೂ 1 ರಾಜ್ಯ ಸಚಿವರನ್ನಾಗಿ ಮಾಡಲೂ ಬಿಜೆಪಿ ಚಿಂತನೆ ನಡೆಸಿದೆ ಎನ್ನುವ ಮಾತೂ ಕೇಳಿ ಬಂದಿದೆ.

ಇದನ್ನೂ ಓದಿ: Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Continue Reading

ಕರ್ನಾಟಕ

ಸಂಬಂಧ ಕಡಿಯಲು ಸೆಂಟಿಮೆಂಟ್ ಬೇಕಿಲ್ಲ, ಕ್ಷುಲ್ಲಕ ಕಾರಣ ಸಾಕು; ಪತಿಯ ಪೊಸೇಸೀವ್‌ನೆಸ್‌ಗೆ ಬೇಸತ್ತ ಪತ್ನಿ ಪರಾರಿ

ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ಮಧ್ಯೆ ಜಗಳ ನಡೆಯುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎಂಬಂತಾಗಿದೆ. ಇಲ್ಲೂ ಅಗಿರುವುದು ಅದೇ ರೀತಿಯ ಘಟನೆ. ಪತಿಯ ಅತಿಯಾದ ಕಾಳಜಿ, ಪೊಸೇಸೀವ್‌ನೆಸ್‌ನಿಂದ ಬೇಸತ್ತ ಪತ್ನಿ ಮನೆ ಬಿಟ್ಟು ಪರಾರಿಯಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಪತಿ ಇದೀಗ ದೂರು ಕೊಟ್ಟಿದ್ದಾರೆ.

VISTARANEWS.COM


on

crime news
Koo

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ಮಧ್ಯೆ ಜಗಳ ನಡೆಯುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎಂಬಂತಾಗಿದೆ. ಇಲ್ಲೂ ಅಗಿರುವುದು ಅದೇ ರೀತಿಯ ಘಟನೆ. ಪತಿಯ ಅತಿಯಾದ ಕಾಳಜಿ, ಪೊಸೇಸೀವ್‌ನೆಸ್‌ನಿಂದ ಬೇಸತ್ತ ಪತ್ನಿ ಮನೆ ಬಿಟ್ಟು ಪರಾರಿಯಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಪತಿ ಇದೀಗ ದೂರು ಕೊಟ್ಟಿದ್ದಾರೆ.

ಗೆಳೆಯರಿಗೆ ಡಿಯರ್ ಎಂದು ಮೆಸೇಜ್‌ ಮಾಡಬೇಡ, ಅಣ್ಣ, ಸರ್ ಎಂದು ಮೆಸೇಜ್ ಮಾಡು ಎಂದು ಪತಿ ಹೇಳಿದ್ದಕ್ಕೆ ಪತ್ನಿ ಮನೆಯನ್ನೇ ಬಿಟ್ಟು ಹೋಗಿದ್ದಾಳೆ ಎನ್ನಲಾಗಿದೆ. ಗಂಡ ಬೈದ ಎನ್ನುವ ಕಾರಣವನ್ನೇ ನೆಪವಾಗಿಟ್ಟುಕೊಂಡು ಮಹಿಳೆ ಎಸ್ಕೇಪ್‌ ಆಗಿರುವ ಆರೋಪ ಕೇಳಿ ಬಂದಿದೆ.

ಇತ್ತೀಚೆಗೆ ಪತ್ನಿ ಮೊಬೈಲ್‌ಗೆ Good morning dear ಎಂಬ ಮೆಸೇಜ್ ಬಂದಿತ್ತು. ಇದನ್ನ ನೋಡಿದ ಪತಿ ದಿಲೀಪ್ ಕುಮಾರ್, ʼʼಡಿಯರ್ ಅಂತ ಮೆಸೇಜ್ ಹಾಕ್ಬೇಡ. ಸರ್ ಅಂತ ಕಳಿಸುʼʼ ಎಂದು ಪತ್ನಿಗೆ ಸೂಚಿಸಿದ್ದರು. ಇದರಿಂದ ಕೆರಳಿದ ಪತ್ನಿ ವಾಗ್ವಾದ ನಡೆಸಿದ್ದರು. ಇದು ಅತಿರೇಕಕ್ಕೆ ತಿರುಗಿ ದಂಪತಿ ಮಧ್ಯೆ ದೊಡ್ಡ ಜಗಳವೇ ನಡೆದಿತ್ತು.

ಬಳಿಕ ʼʼಸರಿ ಹೋಗ್ಲಿ. ಕೋಪ ಮಾಡ್ಕೋಬೇಡʼʼ ಎಂದು ಮಗುವನ್ನು ಕರೆದುಕೊಂಡು ದಿಲೀಪ್‌ ಕುಮಾರ್‌ ರೂಂ ಒಳಗೆ ಹೋಗಿದ್ದರು. ಕೆಲವು ಸಮಯಗಳ ಬಳಿಕ ಕೆಲಸದವರು ದಿಲೀಪ್‌ ಬಳಿ ಬಂದು ಊಟ ಕೊಡಲು ಹೇಳಿ ನಿಮ್ಮ ಪತ್ನಿ ಆಚೆ ಹೋದರು ಎಂದು ಹೇಳಿದಾಗಲೇ ಪತ್ನಿ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಎಷ್ಟೆ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನಲೆಯಲ್ಲಿ ದಿಲೀಪ್ ದೂರು ನೀಡಿದ್ದರು. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

ಗದಗ: ವಾಟ್ಸ್ಆ್ಯಪ್‌ ಗ್ರೂಪ್‌ಗೆ ಬಂದಿದ್ದ ಮೆಸೇಜ್‌ವೊಂದನ್ನು ತೆರೆದು ನೋಡಿದ ವ್ಯಾಪಾರಿಯೊಬ್ಬರು ತಮ್ಮ ಖಾತೆಯಲ್ಲಿದ್ದ ಮೂರೂವರೆ ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ. ಸೈಬರ್‌ ವಂಚಕರು ಹಣ ಲಪಟಾಯಿಸಿದ್ದಾರೆ. ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅನಿಲ್‌ ಮಲ್ಲಪ್ಪ ಚಿನ್ನಾಪುರ ಎಂಬುವವರೇ ಸೈಬರ್‌ ವಂಚನೆಗೆ ಒಳಗಾದ ವ್ಯಕ್ತಿ. ನಗರದ ಜಿ.ಎಸ್. ಪಾಟೀಲ್‌ ಲೇಔಟ್‌ನಲ್ಲಿ ವಾಸವಾಗಿರುವ ಇವರು, ಮೊದಲು ಜಿ.ಎಸ್. ಪಾಟೀಲ್‌ ಲೇಔಟ್‌ ವಾಟ್ಸ್ಆ್ಯಪ್‌ ಗ್ರೂಪ್‌ನಲ್ಲಿ ಯುನಿಯನ್ ಬ್ಯಾಂಕ್‌ನ ಎಪಿಕೆ ಹೆಸರಿನಲ್ಲಿ ಬಂದಿದ್ದ ಲಿಂಕ್ ಮೆಸೇಜ್ ಅನ್ನು ತೆರದು ನೋಡಿದ್ದಾರೆ. ಇದಾದ ಬಳಿಕ ಮರುದಿನ ಫೋನ್‌ ಕರೆಯೊಂದು ಬಂದಿದೆ. ಯೂನಿಯನ್ ಬ್ಯಾಂಕ್ ಮುಖ್ಯಸ್ಥ ಎಂದು ಕರೆ ಮಾಡಿದ ವ್ಯಕ್ತಿಯು, ನಿಮ್ಮ ಬ್ಯಾಂಕ್ ಖಾತೆ ಡಿಆಕ್ಟಿವೇಟ್‌ ಆಗಿದೆ ಎಂದು ಕೆಲವು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಇದಾದ ಅರ್ಧಗಂಟೆಯಲ್ಲೇ ಅನಿಲ್‌ ಅವರ ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಮೊದಲ ಹಂತದಲ್ಲಿ 50 ಸಾವಿರ ರೂ, 2ನೇ ಹಂತದಲ್ಲಿ 2,25,000 ರೂ. ಹೀಗೆ ಒಟ್ಟು 3,74,998 ರೂಗಳನ್ನು ಸೈಬರ್‌ ವಂಚಕರು ಎಗರಿಸಿದ್ದಾರೆ. ಈ ಕುರಿತು ಸೈಬರ್‌ ವಂಚನೆಗೆ ಒಳಗಾದ ಅನಿಲ್ ನಗರದ ರಾಜೀವ್‌ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Road Accident: ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಅಕ್ಕ-ತಮ್ಮ ಸಾವು; ಕಾಲೇಜಿಗೆ ಹೋದ ಮೊದಲ ದಿನವೇ ದುರಂತ!

Continue Reading

ದೇಶ

Monsoon Tour: ಮಳೆಗಾಲದ ಪ್ರವಾಸಕ್ಕೆ ಸೂಕ್ತ ಬೆಂಗಳೂರು ಸಮೀಪದ ಈ 8 ಅದ್ಭುತ ಸ್ಥಳಗಳು

ಮಳೆಯ ಸೌಂದರ್ಯವನ್ನು ಅನುಭವಿಸಲು ಮಲೆನಾಡಿಗೆ ಹೋಗಬೇಕಿಲ್ಲ. ಯಾಕೆಂದರೆ ಬೆಂಗಳೂರಿನ ಸುತ್ತಮುತ್ತಲಿರುವ ಕೆಲವು ತಾಣಗಳು ಮಳೆಗಾಲದ ಅದ್ಭುತ ನೋಟವನ್ನು ತೆರೆದಿಡುತ್ತದೆ. ಈ ಬಾರಿ ಮಳೆಗಾಲದಲ್ಲಿ ಮನೆಯಲ್ಲೇ ಸುಮ್ಮನೆ ಹೊದಿಕೆ ಹೊದ್ದು ಮಲಗುವ ಬದಲು ಬೆಂಗಳೂರು ಸುತ್ತಮುತ್ತಲೂ ಇರುವ ಸುಂದರ ತಾಣಗಳಿಗೆ (Monsoon Tour) ಭೇಟಿ ನೀಡೋಣ. ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳೋಣ.

VISTARANEWS.COM


on

By

Monsoon Tour
Koo

ಸುರಿಯುತ್ತಿರುವ ಮಳೆಯ ನಡುವೆ ಹೊರಗೆ ಹೋಗುವುದು ಬೇಜಾರು. ಆದರೆ ಪ್ರಕೃತಿಯ ಸೌಂದರ್ಯ ಎದ್ದು ಕಾಣುವುದೇ ಮಳೆಗಾಲದಲ್ಲಿ (Monsoon Tour). ಈ ಸಂದರ್ಭದಲ್ಲಿ ದೂರ ಹೋಗುವುದು ಅಸಾಧ್ಯವಾದರೂ ಹತ್ತಿರ ಇರುವ ಕೆಲವು ತಾಣಗಳಲ್ಲಿ (tourist place) ಸುತ್ತಾಡಬಹುದು. ಮಳೆಯ ನಡುವೆ ಸುತ್ತಮುತ್ತಲಿನ ಪರಿಸರದಲ್ಲಿ (nature) ಕಾಣುವ ಹೊಸತನದ ಚಿಗುರನ್ನು ನೋಡಿ ಆನಂದಿಸಬಹುದು.

ಮಳೆಯ ಸೌಂದರ್ಯವನ್ನು ಅನುಭವಿಸಲು ಮಲೆನಾಡಿಗೆ (malenadu) ಹೋಗಬೇಕಿಲ್ಲ. ಯಾಕೆಂದರೆ ಬೆಂಗಳೂರಿನ (bengaluru) ಸುತ್ತಮುತ್ತಲಿರುವ ಕೆಲವು ತಾಣಗಳು ಮಳೆಗಾಲದ ಅದ್ಭುತ ನೋಟವನ್ನು ತೆರೆದಿಡುತ್ತದೆ. ಪ್ರಾಚೀನ ಭಾರತೀಯ ದೇವಾಲಯಗಳು ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ವಾಸ್ತುಶಿಲ್ಪದ ಪರಂಪರೆಯನ್ನು ಪ್ರದರ್ಶಿಸುತ್ತವೆ. ಈ ಪವಿತ್ರ ತಾಣಗಳು ಕೇವಲ ಪೂಜಾ ಸ್ಥಳಗಳಲ್ಲ. ಇತಿಹಾಸ, ಕಲೆ ಮತ್ತು ಆಧ್ಯಾತ್ಮಿಕತೆಯ ಭಂಡಾರಗಳಾಗಿವೆ. ಇವುಗಳಲ್ಲಿ ಹಲವು ದೇವಾಲಯ ನಮ್ಮ ಬೆಂಗಳೂರಿನ ಸುತ್ತಮುತ್ತಲಿದೆ. ಈ ಬಾರಿ ಮಳೆಗಾಲದಲ್ಲಿ ಈ ಎಂಟು ದೇವಾಲಯಗಳಲ್ಲಿ ಹೆಜ್ಜೆ ಹಾಕಿ ಮಳೆಗಾಲದ ನೆನಪನ್ನು ಬೆಚ್ಚಗೆ ಮನದಲ್ಲಿ ತುಂಬಿ ಇಡೋಣ.


1. ಚೆನ್ನಕೇಶವ ದೇವಸ್ಥಾನ

ಹಾಸನ ಜಿಲ್ಲೆಯಲ್ಲಿರುವ 12ನೇ ಶತಮಾನದ ಬೇಲೂರಿನ ಚೆನ್ನಕೇಶವ ದೇವಾಲಯವು ತನ್ನ ಸಂಕೀರ್ಣವಾದ ವಾಸ್ತುಶಿಲ್ಪ ಮತ್ತು ಶಿಲ್ಪಕಲೆಗಳಿಗೆ ಹೆಸರುವಾಸಿಯಾಗಿದೆ. ಇದು ನಕ್ಷತ್ರಾಕಾರದ ದೇವಾಲಯವಾಗಿದ್ದು, ಹಿಂದೂ ದೇವರಾದ ವಿಷ್ಣುವಿಗೆ ಸಮರ್ಪಿತವಾಗಿದೆ.


2. ಕೋಟಿಲಿಂಗೇಶ್ವರ ದೇವಸ್ಥಾನ

ಬೃಹತ್ ಶಿವಲಿಂಗಕ್ಕೆ ಹೆಸರುವಾಸಿಯಾಗಿರುವ ಈ ದೇವಾಲಯವು ವಿಶ್ವದ ಅತಿದೊಡ್ಡ ಲಿಂಗಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಕೋಟಿಲಿಂಗೇಶ್ವರ ದೇವಸ್ಥಾನ ಕೋಲಾರದಲ್ಲಿದೆ.


3. ಹೊಯ್ಸಳೇಶ್ವರ ದೇವಸ್ಥಾನ

12ನೇ ಶತಮಾನದ ಈ ದೇವಾಲಯವು ಹಾಸನ ಜಿಲ್ಲೆಯಲ್ಲಿದೆ ಮತ್ತು ಇದು ಶಿವನಿಗೆ ಸಮರ್ಪಿತವಾಗಿದೆ. ಹೊಯ್ಸಳ ವಾಸ್ತುಶೈಲಿಗೆ ಹೆಸರುವಾಸಿಯಾದ. ಇದು ಹಳೇಬೀಡುನಲ್ಲಿರುವ ಅತಿ ದೊಡ್ಡ ದೇವಾಲಯವಾಗಿದೆ.

Monsoon Tour


4. ಶ್ರೀ ರಂಗನಾಥಸ್ವಾಮಿ ದೇವಸ್ಥಾನ

ಮೈಸೂರಿನ ಸಮೀಪ ಶ್ರೀರಂಗಪಟ್ಟಣದಲ್ಲಿರುವ ಈ ದೇವಾಲಯವು ಕರ್ನಾಟಕದಲ್ಲಿಯೇ ಅತಿ ದೊಡ್ಡದಾಗಿದೆ ಮತ್ತು ವಿಷ್ಣುವಿನ ರೂಪವಾದ ರಂಗನಾಥನಿಗೆ ಸಮರ್ಪಿತವಾಗಿದೆ. ವೈಷ್ಣವ ಸಂಪ್ರದಾಯದ 108 ಅಭಿಮಾನ ಕ್ಷೇತ್ರಗಳಲ್ಲಿ ಒಂದಾಗಿ ಇದು ವಿಶೇಷ ಸ್ಥಾನವನ್ನು ಹೊಂದಿದೆ.


5. ಲೇಪಾಕ್ಷಿ ದೇವಸ್ಥಾನ

ಬೆಂಗಳೂರಿನಿಂದ ಇದು ತುಂಬ ದೂರ ಏನಿಲ್ಲ. ಆಂಧ್ರಪ್ರದೇಶದ ಅನಂತಪುರದಲ್ಲಿದೆ ಲೇಪಾಕ್ಷಿ ದೇವಾಲಯ. ಇಲ್ಲಿನ ಅದ್ಭುತ ವಿಜಯನಗರ ವಾಸ್ತುಶಿಲ್ಪ ಮತ್ತು ಪ್ರಸಿದ್ಧ ನೇತಾಡುವ ಸ್ತಂಭಗಳು ಪ್ರವಾಸಿಗರಲ್ಲಿ ಬೆರಗು ಮೂಡಿಸುತ್ತದೆ. 16 ನೇ ಶತಮಾನದಲ್ಲಿ ನಿರ್ಮಿಸಲಾದ ಈ ದೇವಾಲಯದ ಸಂಕೀರ್ಣ ಕೆತ್ತನೆಗಳು ಮತ್ತು ವರ್ಣಚಿತ್ರಗಳು ನಯನ ಮನೋಹರವಾಗಿದೆ.


6. ಭೋಗ ನಂದೀಶ್ವರ ದೇವಸ್ಥಾನ

ನಂದಿ ಬೆಟ್ಟದ ತಪ್ಪಲಿನಲ್ಲಿರುವ ಈ ದೇವಾಲಯದ ಸಂಕೀರ್ಣವು ಶಿವನಿಗೆ ಸಮರ್ಪಿತವಾಗಿದೆ ಮತ್ತು ದ್ರಾವಿಡ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿದೆ. ನಿಖರವಾದ ಮೂಲಗಳು ತಿಳಿದಿಲ್ಲವಾದರೂ ವಾಸ್ತುಶಿಲ್ಪವು 9ನೇ – 10ನೇ ಶತಮಾನದ ಹಿಂದಿನದು ಎಂದು ನಂಬಲಾಗಿದೆ.


7. ಶ್ರೀ ಚಾಮುಂಡೇಶ್ವರಿ ದೇವಸ್ಥಾನ

ಮೈಸೂರಿನಲ್ಲಿರುವ ವಿಶ್ವಪ್ರಸಿದ್ಧ ಈ ದೇವಾಲಯವು ಚಾಮುಂಡಿ ಬೆಟ್ಟದ ಮೇಲಿದೆ ಮತ್ತು ದುರ್ಗದ ರೂಪವಾದ ಚಾಮುಂಡೇಶ್ವರಿ ದೇವಿಯನ್ನು ಇಲ್ಲಿ ಪೂಜಿಸಲಾಗುತ್ತದೆ.

ಇದನ್ನೂ ಓದಿ: Sri Lanka Tour: ಕಡಿಮೆ ವೆಚ್ಚದಲ್ಲಿ ಶ್ರೀಲಂಕಾ ಪ್ರವಾಸ; ಐಆರ್‌ಸಿಟಿಸಿ ಸ್ಪೆಷಲ್‌ ಪ್ಯಾಕೇಜ್‌


8. ತಲಕಾಡು ಪಂಚಲಿಂಗ ದೇವಾಲಯಗಳು

ತಲಕಾಡು ಶಿವನಿಗೆ ಅರ್ಪಿತವಾದ ಪಂಚಲಿಂಗ ದೇವಾಲಯಗಳು ಸೇರಿದಂತೆ ಹಲವಾರು ಪುರಾತನ ದೇವಾಲಯಗಳಿಗೆ ನೆಲೆಯಾಗಿದೆ. ಪಂಚ ಲಿಂಗ ದರ್ಶನವು ಸಾಮಾನ್ಯವಾಗಿ ಪ್ರತಿ ಹನ್ನೆರಡು, ಏಳು, ಐದು ಅಥವಾ ಮೂರು ವರ್ಷಗಳಿಗೊಮ್ಮೆ ನಡೆಯುವ ಪ್ರಮುಖ ಕಾರ್ಯಕ್ರಮವಾಗಿದ್ದು, ಆಶೀರ್ವಾದ ಪಡೆಯಲು ಭಕ್ತರು ಐದು ದೇವಾಲಯಗಳಿಗೆ ಭೇಟಿ ನೀಡುತ್ತಾರೆ.

Continue Reading

ಮಳೆ

Karnataka Weather : ರಾಜ್ಯಾದ್ಯಂತ ಮುಂದುವರಿದ ಮಳೆ; 19 ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Heavy rain : ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (rain news) ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ (karnataka weather forecast) ಯೆಲ್ಲೋ ಹಾಗೂ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ನೈರುತ್ಯ ಮಾನ್ಸೂನ್ ರಾಜ್ಯವನ್ನು ಆವರಿಸಿದೆ. ವಾರಾಂತ್ಯದಲ್ಲಿ ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಜೂ.10ರವರೆಗೆ ಮೀನುಗಾರಿಕೆಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ ಮತ್ತು ವಿಜಯನಗರ, ಬಾಗಲಕೋಟೆ, ಕೊಪ್ಪಳ , ಧಾರವಾಡದಲ್ಲೂ ವ್ಯಾಪಕ ಮಳೆಯಾಗಲಿದೆ.

ಮಲೆನಾಡಿನ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಚದುರಿದಂತೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಿನಲ್ಲೂ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ ಸುಮಾರು 32 ಮತ್ತು 23 ಡಿ.ಸೆ ಇರಲಿದೆ.

ಮತ್ತೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿಯು ಗಂಟೆಗೆ 40-50 ಕಿ.ಮೀ ಬೀಸಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
NDA 3.0
ಕರ್ನಾಟಕ5 mins ago

NDA 3.0: ರಾಜ್ಯಕ್ಕೆ ಸಿಗಲಿದ್ಯಾ 2+1 ಸಚಿವ ಸ್ಥಾನ? ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?

Lok Sabha Election 2024
ರಾಜಕೀಯ12 mins ago

Lok Sabha Election 2024: ಈ ಬಾರಿ 74 ಮಹಿಳಾ ಸಂಸದರು, ಯಾವ ಪಕ್ಷದಲ್ಲಿ ಎಷ್ಟು ಮಂದಿ?

Kotee Movie Kannada Team Gives First Ticket To Kichcha Sudeep
ಸ್ಯಾಂಡಲ್ ವುಡ್15 mins ago

Kotee Movie Kannada: ಕಿಚ್ಚ ಸುದೀಪ್​ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್​!

Viral Video
ವೈರಲ್ ನ್ಯೂಸ್23 mins ago

Viral Video: ಮೆಟ್ರೊ ರೈಲಿನೊಳಗೆ ʼವಿದ್ಯಾವಂತ ಮಹಿಳೆಯರʼ ಫೈಟ್‌ ಹೇಗಿದೆ ನೋಡಿ!

crime news
ಕರ್ನಾಟಕ34 mins ago

ಸಂಬಂಧ ಕಡಿಯಲು ಸೆಂಟಿಮೆಂಟ್ ಬೇಕಿಲ್ಲ, ಕ್ಷುಲ್ಲಕ ಕಾರಣ ಸಾಕು; ಪತಿಯ ಪೊಸೇಸೀವ್‌ನೆಸ್‌ಗೆ ಬೇಸತ್ತ ಪತ್ನಿ ಪರಾರಿ

Viral Video
ವೈರಲ್ ನ್ಯೂಸ್41 mins ago

Viral Video: ಗ್ರಹಚಾರ ಕೆಟ್ಟಾಗ ಕಾರಿನ ಚಕ್ರ ಕಳಚಿ ತಲೆಗೆ ಅಪ್ಪಳಿಸಬಹುದು! ವಿಡಿಯೊ ನೋಡಿ

Ramoji Rao passed away
ದೇಶ51 mins ago

Ramoji Rao passed away: ಮಾಧ್ಯಮ ಲೋಕದ ದಿಗ್ಗಜ ಇನ್ನಿಲ್ಲ; ರಾಮೋಜಿ ರಾವ್ ವಿಧಿವಶ

Vastu Tips
ಧಾರ್ಮಿಕ1 hour ago

Vastu Tips: ಮನೆಯ ಗೋಡೆಗಳ ಮೇಲೆ ಎಲ್ಲೆಂದರಲ್ಲಿ ಫೋಟೊ ಅಳವಡಿಸಿದರೆ ಏನಾಗುತ್ತದೆ?

Monsoon Tour
ದೇಶ1 hour ago

Monsoon Tour: ಮಳೆಗಾಲದ ಪ್ರವಾಸಕ್ಕೆ ಸೂಕ್ತ ಬೆಂಗಳೂರು ಸಮೀಪದ ಈ 8 ಅದ್ಭುತ ಸ್ಥಳಗಳು

Karnataka Weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಮುಂದುವರಿದ ಮಳೆ; 19 ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ14 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ15 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌