Raichur RIMS Hospital: ಕಾಕ್ಲೇರ್ ಪ್ಲಾಂಟ್ ಸ್ಕೀಂ ಅಡಿ ಇಬ್ಬರು ಪುಟ್ಟ ಬಾಲಕರಿಗೆ ಸರ್ಜರಿ; ರಿಮ್ಸ್‌ ವೈದ್ಯರ ಸಾಧನೆ Vistara News
Connect with us

ಆರೋಗ್ಯ

Raichur RIMS Hospital: ಕಾಕ್ಲೇರ್ ಪ್ಲಾಂಟ್ ಸ್ಕೀಂ ಅಡಿ ಇಬ್ಬರು ಪುಟ್ಟ ಬಾಲಕರಿಗೆ ಸರ್ಜರಿ; ರಿಮ್ಸ್‌ ವೈದ್ಯರ ಸಾಧನೆ

Raichur RIMS Hospital: ಹುಟ್ಟು ಕಿವುಡುತನದಿಂದ ಬಳಲುತ್ತಿದ್ದ ಇಬ್ಬರು ಪುಟ್ಟ ಬಾಲಕರಿಗೆ ರಾಯಚೂರು ರಿಮ್ಸ್ ಆಸ್ಪತ್ರೆ ವೈದ್ಯರು ಇಯರ್ ಕಾಕ್ಲೇರ್ ಪ್ಲಾಂಟ್ ಸರ್ಜರಿ ಮಾಡಿ ಇತಿಹಾಸ ಬರೆದಿದ್ದಾರೆ.

VISTARANEWS.COM


on

Two little boys undergo surgery under The Cochlear Plant Scheme, Achievements of doctors at RIMS Hospital
Koo

ರಾಯಚೂರು: ಕಲ್ಯಾಣ ಕರ್ನಾಟಕದ ತೀರಾ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ರಾಯಚೂರಿನ ರಿಮ್ಸ್ ಆಸ್ಪತ್ರೆಯ ವೈದ್ಯಕೀಯ ವಿಭಾಗವು ಸಾಧನೆಗೈದಿದೆ. ಹುಟ್ಟು ಕಿವುಡುತನದಿಂದ ಬಳಲುತ್ತಿದ್ದ ಇಬ್ಬರು ಪುಟ್ಟ ಬಾಲಕರಿಗೆ ರಿಮ್ಸ್ ವೈದ್ಯರು ಇಯರ್ ಕಾಕ್ಲೇರ್ ಪ್ಲಾಂಟ್ ಸರ್ಜರಿ ಮಾಡಿ ಇತಿಹಾಸ ಬರೆದಿದ್ದಾರೆ.

Two little boys undergo surgery under The Cochlear Plant Scheme, Achievements of doctors at RIMS Hospital
ರಿಮ್ಸ್‌ ವೈದ್ಯರ ತಂಡ

ಆಯುಷ್ಮಾನ್ ಭಾರತ್ ಯೋಜನೆಯಡಿ ರಾಜ್ಯ ಸರ್ಕಾರವು ಹುಟ್ಟು ಕಿವುಡುತನ ಪರಿಹಾರಕ್ಕೆಂದೆ ಕಾಕ್ಲೇರ್ ಪ್ಲಾಂಟ್ ಸ್ಕೀಂ ಅನ್ನು ಪರಿಚಯಸಿದೆ. ರಾಜ್ಯಾದ್ಯಂತ ಒಟ್ಟು 500 ಹುಟ್ಟು ಕಿವುಡು ಮಕ್ಕಳಿಗೆ ಕಾಕ್ಲೇರ್ ಪ್ಲಾಂಟ್ ಸರ್ಜರಿಗೆ ಟಾರ್ಗೆಟ್ ನೀಡಲಾಗಿದೆ. ಅದರಂತೆ ರಾಯಚೂರು ನಗರದ ರಿಮ್ಸ್ ಆಸ್ಪತ್ರೆಗೆ 80 ಮಕ್ಕಳ ಟಾರ್ಗೆಟ್ ನೀಡಲಾಗಿದೆ.

ಸರ್ಜರಿ ಕುರಿತು ರಿಮ್ಸ್‌ ವೈದ್ಯರ ಮಾತು

ಅದರ ಭಾಗವಾಗಿ ಸಿಂಧನೂರು ಹಾಗೂ ಸಿರವಾರ ತಾಲೂಕಿನ ಇಬ್ಬರು ಮಕ್ಕಳಿಗೆ ಈ ಕಾಕ್ಲೇರ್ ಪ್ಲಾಂಟ್ ಸರ್ಜರಿ ಮಾಡಲಾಗಿದೆ. ಸುಮಾರು ನಾಲ್ಕೈದು ಗಂಟೆಗಳ ಕಾಲ ನಡೆಯುವ ಈ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಇದೇ ಕಾಕ್ಲೇರ್ ಪ್ಲಾಂಟ್ ಸರ್ಜರಿ ಖಾಸಗಿ ಆಸ್ಪತ್ರೆಗಳಲ್ಲಿ ಮಾಡಿಸಿಕೊಳ್ಳಲು ಸುಮಾರು‌ 12 ಲಕ್ಷ ರೂ. ಖರ್ಚಾಗುತ್ತದೆ. ಆದರೆ, ಸರ್ಕಾರದ ಈ ಸ್ಕೀಂನಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ.

Two little boys undergo surgery under The Cochlear Plant Scheme, Achievements of doctors at RIMS Hospital
ಕಾಕ್ಲೇರ್ ಪ್ಲಾಂಟ್ ಸ್ಕೀಂನಡಿ ಸರ್ಜರಿ

ಇದನ್ನೂ ಓದಿ: Praveen Nettaru Murder: ಪ್ರವೀಣ್‌ ಹತ್ಯೆ ಆರೋಪಿ ತುಫೈಲ್‌ನನ್ನು NIA ಹಿಡಿದದ್ದು ಹೀಗೆ!

ಬಿಪಿಎಲ್ ಕಾರ್ಡ್, ಎಪಿಎಲ್ ಕಾರ್ಡ್‌ದಾರರಿಗೆ ಮಾತ್ರ ಎಂಬ ನಿಯಮವಿಲ್ಲ. ಎಲ್ಲ ವರ್ಗದ ಜನರಿಗೂ ಇದು ಅನ್ವಯವಾಗಲಿದ್ದು ಹುಟ್ಟು ಕಿವುಡು ಮಕ್ಕಳನ್ನು ಹೊಂದಿರುವ ಪೋಷಕರು ಆರು ವರ್ಷದೊಳಗೆ ರಿಮ್ಸ್ ಆಸ್ಪತ್ರೆಗೆ ಕರೆತರುವಂತೆ ರಿಮ್ಸ್ ಆಸ್ಪತ್ರೆ ಆಡಳಿತ ವರ್ಗ ತಿಳಿಸಿದೆ.‌

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

Relationship

Parenting Tips: ನಿಮ್ಮ ಮಕ್ಕಳು ಅಡ್ಡ ಬೆಳೆಯದೆ, ಉದ್ದ ಬೆಳೆಯಬೇಕೆಂದರೆ ಈ ಆಹಾರವನ್ನೇ ನೀಡಿ!

ಮಕ್ಕಳು ಉದ್ದ ಬೆಳೆಯುವಂತೆ ಮಾಡುವುದೇನೂ ಬ್ರಹ್ಮವಿದ್ಯೆ ಅಂದುಕೊಳ್ಳಬೇಡಿ. ಮಕ್ಕಳ ದೇಹಕ್ಕೆ ಈ ಕೆಳಗಿನ ಆಹಾರಗಳನ್ನು ನಿಯಮಿತವಾಗಿ ಕೊಡುತ್ತಿದ್ದೇವಾ ಎಂದು ಒಮ್ಮೆ ಯೋಚಿಸಿದರೆ (Parenting tips) ಸಾಕು, ನಿಮ್ಮ ಪ್ರಶ್ನೆಗಳಿಗೆ ಉತ್ತರ ಇಲ್ಲೇ ಸಿದ್ಧ!

VISTARANEWS.COM


on

Edited by

healthy children food
Koo

ಮಕ್ಕಳು ಬೆಳೆಯುವ ವಯಸ್ಸಿನಲ್ಲಿ ಚೆನ್ನಾಗಿ ತಿನ್ನಬೇಕು ಎಂಬ ಹಿರಿಯರ ಮಾತನ್ನು ನೀವು ಕೇಳಿರಬಹುದು. ಹೆಚ್ಚಾಗಿ, ಮನೆಯಲ್ಲಿರುವ ಹಿರಿಯರು, ಮಕ್ಕಳಿಗೆ ಆರೋಗ್ಯಪೂರ್ಣವಾದ ಆಹಾರವನ್ನು (Healthy food) ನೀಡುವುದನ್ನು ಪ್ರೋತ್ಸಾಹಿಸುತ್ತಲೇ ಇರುತ್ತಾರೆ. ಕೆಲವು ಪರಂಪರಾಗತ ತಿಂಡಿಗಳು, ಹಳೆಯ ತಿನಿಸುಗಳು, ಧಾನ್ಯ ಬೇಳೆಕಾಳುಗಳು ಹಾಗೂ ತರಕಾರಿಗಳಿಂದ ಸಮೃದ್ಧವಾದ ಆಹಾರ ಇತ್ಯಾದಿಗಳು ಮಕ್ಕಳ ನಿತ್ಯಾಹಾರವಾಗಿರಲಿ (children food) ಎಂದು ಮನೆಯಲ್ಲಿರುವ ಹಿರಿಯರು ಹೆಚ್ಚು ದೇಸೀ ತಿನಿಸುಗಳು, ಪೋಷಕಾಂಶಯುಕ್ತ ಬೆಳಗಿನ ಉಪಹಾರಗಳು ಇತ್ಯಾದಿಗಳತ್ತ ಗಮನ ನೀಡುತ್ತಾರೆ. ಆದರೆ ಇತ್ತೀಚೆಗಿನ ಧಾವಂತದ ಬದುಕಿನಲ್ಲಿ ಮಕ್ಕಳ ಕಣ್ಣಿಗೆ ಮಾರುಕಟ್ಟೆಯಲ್ಲೂ ಥರಹೇವಾರಿ, ಬಣ್ಣಬಣ್ಣದ ಆಕರ್ಷಕ, ರುಚಿಕಟ್ಟಾದ ಆಹಾರಗಳು ಸಿಗುವುದರಿಂದ ಮಕ್ಕಳೂ ಕೂಡಾ ಅವುಗಳ ದಾಸರಾಗುತ್ತಿದ್ದಾರೆ. ಇದರಿಂದ ಮಕ್ಕಳು ಎಳವೆಯಲ್ಲಿಯೇ ಹಲವಾರು ಆರೋಗ್ಯ ಸಮಸ್ಯೆಗಳನ್ನೂ (Health problems) ಎದುರಿಸುತ್ತಿದ್ದಾರೆ. ಬೊಜ್ಜು (Cholesterol) ಹೆಚ್ಚಾಗುತ್ತಿದೆ. ಮಧುಮೇಹ (Diabetes) ಸಾಮಾನ್ಯವಾಗುತ್ತಿದೆ. ನಮ್ಮ ಮಕ್ಕಳು ಉದ್ದ ಬೆಳೆಯದೆ ಅಡ್ಡ ಬೆಳೆಯುತ್ತಿದ್ದಾರಲ್ಲಾ ಎಂಬ ಕೊರಗೂ ಕೂಡಾ ಪೋಷಕರದು. ಹಾಗಾದರೆ ಮಕ್ಕಳು ಉದ್ದ ಬೆಳೆಯುವಂತೆ ಮಾಡುವುದೇನೂ ಬ್ರಹ್ಮವಿದ್ಯೆ ಅಂದುಕೊಳ್ಳಬೇಡಿ. ಮಕ್ಕಳ ದೇಹಕ್ಕೆ ಈ ಕೆಳಗಿನ ಆಹಾರಗಳನ್ನು ನಿಯಮಿತವಾಗಿ ಕೊಡುತ್ತಿದ್ದೇವಾ ಎಂದು ಒಮ್ಮೆ ಯೋಚಿಸಿದರೆ (Parenting tips) ಸಾಕು, ನಿಮ್ಮ ಪ್ರಶ್ನೆಗಳಿಗೆ ಉತ್ತರ ಇಲ್ಲೇ ಸಿದ್ಧ!

1. ಡೈರಿ ಉತ್ಪನ್ನಗಳು: ಹಾಲು, ಮೊಸರು, ಚೀಸ್‌ ಮತ್ತಿತರ ಡೈರಿ ಉತ್ಪನ್ನಗಳಲ್ಲಿ ಕ್ಯಾಲ್ಶಿಯಂ ಹೇರಳವಾಗಿರುವುದರಿಂದ ಮಕ್ಕಳಿಗೆ ಅತ್ಯಂತ ಅಗತ್ಯ. ಬೆಳೆಯುವ ವಯಸ್ಸಿನಲ್ಲಿ ಮಕ್ಕಳಿಗೆ ಕ್ಯಾಲ್ಶಿಯಂನ ಅಗತ್ಯ ಅತ್ಯಂತ ಹೆಚ್ಚಿರುವುದರಿಂದ ಅವರ ಎಲುಬು ಗಟ್ಟಿಯಾಗಿ, ಶಕ್ತಿಶಾಲಿಯಾಗಿ ಬೆಳವಣಿಗೆ ಹೊಂದಲು ಪೋಷಕಾಂಶಗಳು ಬೇಕೇಬೇಕು. ಹುಟ್ಟಿದ ಮಕ್ಕಳಿಂದ ಹಿಡಿದು ಹದಿಹರೆಯ ಮುಗಿಯುವವರೆಗೂ ಮೂಳೆಗಳ ಬೆಳವಣಿಗೆ ಬಹಳ ಪ್ರಮುಖವಾಗಿ ಆಗುವುದರಿಂದ ಇಂತಹ ಸಂದರ್ಭ ಕ್ಯಾಲ್ಶಿಯಂ ಮಕ್ಕಳಿಗೆ ಸಿಗುವುದು ಅತ್ಯಂತ ಅಗತ್ಯ ಕೂಡಾ.

2. ಮೊಟ್ಟೆ: ಮೊಟ್ಟೆಯಲ್ಲಿ ಅತ್ಯಂತ ಸಮೃದ್ಧವಾಗಿ ಪ್ರೊಟೀನ್‌, ಅಮೈನೋ ಆಸಿಡ್‌ ಇರುವುದರಿಂದ ಇವು ಮಕ್ಕಳ ಪ್ರತಿಯೊಂದು ಅಂಗಾಂಶದ ಬೆಳವಣಿಗೆಯಲ್ಲೂ ಮಹತ್ವದ ಪಾತ್ರ ವಹಿಸುತ್ತವೆ. ಅಂಗಾಂಶದ ಬೆಳವಣಿಗೆ, ರಿಪೇರಿ ಇತ್ಯಾದಿಗಳ ಕೆಲಸವೂ ಪ್ರೊಟೀನ್‌ನಿಂದಲೇ ಆಗುತ್ತದೆ. ಮಕ್ಕಳಿಗೆ ಪ್ರೊಟೀನ್‌ ಮೊಟ್ಟೆಯಿಂದ ಅತ್ಯಂತ ಹೆಚ್ಚು ಸಿಗುತ್ತದೆ. ಮೊಟ್ಟೆ ತಿನ್ನದ ಮಂದಿ ಮೊಟ್ಟೆಗೆ ಪರ್ಯಾಯ ಮೂಲಗಳನ್ನು ಹುಡುಕಿಕೊಳ್ಳಬೇಕು.

3. ಮಾಂಸ: ಚಿಕನ್‌, ಟರ್ಕಿ ಮತ್ತಿತರ ಮಾಂಸಗಳಿಂದಲೂ ಪ್ರೊಟೀನ್‌, ಝಿಂಕ್‌ ಮತ್ತಿತರ ಪೋಷಕಾಂಶಗಳು ಲಭ್ಯವಾಗುವುದರಿಂದ ಇದು ಎಲುಬಿನ ಬೆಳವಣಿಗೆಯಲ್ಲಿಯೂ ಸಹಾಯ ಮಾಡುತ್ತವೆ.

4. ಮೀನು: ಸಾಲ್ಮನ್‌, ಮಕೆರೆಲ್‌ ಮತ್ತಿತರ ಮೀನುಗಳಲ್ಲಿ ಒಮೆಗಾ ೩ ಫ್ಯಾಟಿ ಆಸಿಡ್‌ಗಳು ಹೇರಳವಾಗಿರುವುದರಿಂದ ಬೆಳವಣಿಗೆಗೆ ಪೂರಕವಾಗಿದೆ.

5. ದ್ವಿದಳ ಧಾನ್ಯಗಳು ಹಾಗೂ ಬೇಳೆಕಾಳುಗಳು: ದ್ವಿದಳ ಧಾನ್ಯಗಳಲ್ಲಿಯೂ, ಬೇಳೆ ಕಾಳುಗಳಲ್ಲಿಯೂ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿರುವ ಪ್ರೊಟೀನ್‌, ಕಬ್ಬಿಣಾಂಶ, ಝಿಂಕ್‌ ಕೂಡಾ ಇದೆ. ಇವು ಸಂಪೂರ್ಣ ಆರೋಗ್ಯಕ್ಕೆ ಅತ್ಯಂತ ಅವಶ್ಯಕ ಕೂಡಾ.

6. ಹಸಿರು ಸೊಪ್ಪು ತರಕಾರಿಗಳು: ಬಸಳೆ, ಪಾಲಕ್‌ ಸೇರಿದಂತೆ ಹಸಿರು ಸೊಪ್ಪು ತರಕಾರಿಗಳಲ್ಲಿ ಸಾಕಷ್ಟು ವಿಟಮಿನ್‌, ಖನಿಜಾಂಶ ಹಾಗೂ ಆಂಟಿ ಆಕ್ಸಿಡೆಂಟ್‌ಗಳೂ ಇರುವುದರಿಂದ ಮಕ್ಕಳ ಒಟ್ಟು ಆರೋಗ್ಯಕ್ಕೆ ಇದು ಪೂರಕವಾಗಿದೆ.

7. ಬೀಜಗಳು: ಬಾದಾಮಿ, ವಾಲ್‌ನಟ್‌, ಪಿಸ್ತಾ, ಕುಂಬಳಕಾಯಿ ಬೀಜ, ಸೌತೇಕಾಯಿ ಬೀಜ, ಚಿಯಾ ಬೀಜ, ಅಗಸೆ ಬೀಜ ಸೇರಿದಂತೆ ಎಲ್ಲ ಬಗೆಯ ಬೀಜಗಳಲ್ಲೂ ಮೆಗ್ನೀಶಿಯಂ ಸೇರಿದಂತೆ ಎಲ್ಲ ಬಗೆಯ ಪೋಷಕಾಂಶಗಳೂ ಇರುವುದರಿಂದ ಬೆಳವಣಿಗೆಗೆ ಇವು ಸಹಾಯ ಮಾಡುತ್ತವೆ.

8. ಹಣ್ಣುಗಳು: ಕಿತ್ತಳೆ, ಸ್ಟ್ರಾಬೆರ್ರಿ, ಕಿವಿ ಮತ್ತಿತರ ಹಣ್ಣುಗಳಲ್ಲಿ ವಿಟಮಿನ್‌ ಸಿ ಹೇರಳವಾಗಿದ್ದು, ಮಕ್ಕಳಲ್ಲಿ ರೋಗನಿರೋಧಕತೆ ಹೆಚ್ಚಿಸಿ, ಆರೋಗ್ಯವಂತರನ್ನಾಗಿ ಮಾಡುವ ಮೂಲಕ ಬೆಳವಣಿಗೆಯನ್ನು ಪ್ರೇರೇಪಿಸುತ್ತದೆ.

ಇದನ್ನೂ ಓದಿ: Parenting Tips: ನಿಮ್ಮ ಮಕ್ಕಳು ಶಾಲೆಯಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗಬೇಕೇ? ಇಲ್ಲಿವೆ ನವಸೂತ್ರಗಳು!

Continue Reading

ಆರೋಗ್ಯ

World Lung Day: ಶ್ವಾಸಕೋಶದ ಸಮಸ್ಯೆ ಉಂಟಾಗದಿರಲು ಹೀಗೆ ಮಾಡಿ

ದೇಹದ ಉಳಿದೆಲ್ಲ ಅಂಗಗಳಿಗೆ ಅನ್ವಯಿಸುವ ಬಹಳಷ್ಟು ನಿಯಮಗಳು ನಮ್ಮ ಪುಪ್ಪುಸಗಳಿಗೂ ಅನ್ವಯಿಸುತ್ತವೆ. ಸಮತೋಲಿತವಾದ ಆಹಾರ ಶ್ವಾಸಕೋಶಗಳ (World Lung Day) ದೀರ್ಘ ಬಾಳಿಕೆಗೆ ನಾಂದಿ ಹಾಡಬಲ್ಲದು. ಒತ್ತಡ ನಿವಾರಣೆಯ ಪ್ರಮುಖ ತಂತ್ರವಾದ ಪ್ರಾಣಾಯಾಮವು ಶ್ವಾಸಕೋಶಗಳಿಗೆ ಶಕ್ತಿ ತುಂಬಬಲ್ಲದು. ನಿಯಮಿತ ವ್ಯಾಯಾಮ ಬಹಳಷ್ಟು ಮಾಡಬಲ್ಲದು.

VISTARANEWS.COM


on

Edited by

World Lung Day
Koo

ಇವು ಜಟಿಲ ಪ್ರಶ್ನೆಗಳು- ಉಸಿರಾಡುವ ಗಾಳಿ ಇಷ್ಟೊಂದು ಕಲುಷಿತವಾಗಿರುವಾಗ ಶ್ವಾಸಕೋಶದ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಸೋಂಕುಗಳು ನೇರವಾಗಿ ಶ್ವಾಸಕೋಶಕ್ಕೇ ದಾಳಿ ಇಡುವಾಗ, ಅದನ್ನು ಜೋಪಾನ ಮಾಡುವುದು ಸಾಧ್ಯವೇ? ಪುಪ್ಪುಸಗಳ ಅನಾರೋಗ್ಯ ಎಂಬುದು ಅತ್ಯಂತ ಸಾಮಾನ್ಯ ವಿಷಯ ಎನಿಸಿರುವ ದಿನಗಳಲ್ಲಿ, ಅವುಗಳ ದೀರ್ಘ ಬಾಳಿಕೆಗೆ ಏನು ಮಾಡಬೇಕು? ಸೆಪ್ಟೆಂಬರ್‌ 25ನೇ ದಿನ ವಿಶ್ವ ಶ್ವಾಸಕೋಶ ದಿನವನ್ನಾಗಿ (World Lung Day) ಆಚರಿಸುತ್ತಿರುವುದು, ಈ ಪ್ರಶ್ನೆಗಳ ಹಿನ್ನೆಲೆಯಲ್ಲಿ ಮಹತ್ವವನ್ನು ಹೆಚ್ಚಿಸಿಕೊಂಡಿದೆ.

World lung day or lung healthy concept

ಗಾಳಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಯುವಲ್ಲಿ ಸಮುದಾಯದ ಇಚ್ಛಾಶಕ್ತಿ ಬೇಕು. ಏಕಾಂಗಿಯಾಗಿ ಹೋರಾಡಿ ಯಶಸ್ಸು ಪಡೆದವರಿಲ್ಲವೆಂದಲ್ಲ; ಆದರೆ ಅದು ಎಲ್ಲರಿಗೂ ಸಾಧ್ಯವೇ ಎಂಬುದೂ ಯೋಚಿಸುವ ವಿಚಾರ. ಈ ವಿಷಯದ ಹೊರತಾಗಿ, ಇನ್ನೇನನ್ನಾದರೂ ವೈಯಕ್ತಿವಾಗಿ ನಾವು ಮಾಡಬಹುದೇ? ಖಂಡಿತ, ದೇಹದ ಉಳಿದೆಲ್ಲಾ ಅಂಗಗಳಿಗೆ ಅನ್ವಯಿಸುವ ಬಹಳಷ್ಟು ನಿಯಮಗಳು ನಮ್ಮ ಪುಪ್ಪುಸಗಳಿಗೂ ಅನ್ವಯಿಸುತ್ತವೆ. ಸಮತೋಲಿತವಾದ ಆಹಾರ ಶ್ವಾಸಕೋಶಗಳ (World Lung Day) ದೀರ್ಘ ಬಾಳಿಕೆಗೆ ನಾಂದಿ ಹಾಡಬಲ್ಲದು. ಒತ್ತಡ ನಿವಾರಣೆಯ ಪ್ರಮುಖ ತಂತ್ರವಾದ ಪ್ರಾಣಾಯಾಮವು ಶ್ವಾಸಕೋಶಗಳಿಗೆ ಶಕ್ತಿ ತುಂಬಬಲ್ಲದು. ನಿಯಮಿತ ವ್ಯಾಯಾಮ ಬಹಳಷ್ಟು ಮಾಡಬಲ್ಲದು. ಇವುಗಳನ್ನೇ ವಿವರವಾಗಿ ನೋಡುವುದಾದರೆ-

Hot Vegetable Meal

ಬಿಸಿಯಾದ, ತಾಜಾ ಆಹಾರ ಸೇವಿಸಿ

ಅಡುಗೆ ಮಾಡುವುದಕ್ಕೆ ಸಮಯವೇ ಇಲ್ಲ ಎಂಬ ನೆವ ಇಟ್ಟುಕೊಂಡು ಸಿಕ್ಕಿದಲ್ಲಿ, ಸಿಕ್ಕಿದ್ದನ್ನು ತಿಂದುಕೊಂಡು ಕಾಲ ಹಾಕುವುದು ಖಂಡಿತಕ್ಕೂ ಆರೋಗ್ಯದ ಮೇಲೆ ಬರೆ ಹಾಕುತ್ತದೆ. ಅದರಲ್ಲೂ ತಂಗಳು ತಿನ್ನುವುದು, ಫ್ರಿಜ್‌ನಲ್ಲಿರುವ ಅತಿಯಾದ ತಣ್ಣನೆಯ ಆಹಾರ, ಹಲ್ಲು ಜುಂಮ್ಮೆನ್ನುವಂಥ ಜ್ಯೂಸ್‌, ಸೋಡಾಗಳು ಶ್ವಾಸಕೋಶಗಳ ಉರಿಯೂತವನ್ನು ಹೆಚ್ಚಿಸುತ್ತವೆ. ಹಾಗಾಗಿ ಇಡೀ ಧಾನ್ಯಗಳನ್ನು ಮತ್ತು ಬಿಸಿಯಾದ ಆಹಾರಗಳನ್ನು ತಾಜಾ ಇರುವಾಗಲೇ ಸೇವಿಸುವುದು ಒಳ್ಳೆಯದು

Herbs, condiments and spices

ಸಾಂಬಾರ್ ಪದಾರ್ಥಗಳು

ಭಾರತೀಯ ಅಡುಗೆ ಮನೆಗಳಲ್ಲಿ ಬಳಕೆಯಾಗುವ ಬಹಳಷ್ಟು ಸಾಂಬಾರ್ ಪದಾರ್ಥಗಳು ರುಚಿಗೆ ಮಾತ್ರವೇ ಅಲ್ಲ, ಪಚನ ಕಾರ್ಯಕ್ಕೂ ಸೈ. ಅರಿಶಿನ, ಜೀರಿಗೆ, ಧನಿಯಾ, ಕಾಳು ಮೆಣಸು, ಶುಂಠಿ, ಚಕ್ಕೆ ಮುಂತಾದವು ಜೀರ್ಣಕ್ರಿಯೆಯನ್ನು ಚುರುಕು ಮಾಡುತ್ತವೆ. ಸರಿಯಾಗಿ ಜೀರ್ಣವಾಗದ ಆಹಾರಗಳು ಕಫಕ್ಕೂ ಕಾರಣವಾಗಬಹುದು. ಕೆಲವೊಮ್ಮೆ ಅಲರ್ಜಿಯಂಥ ಪ್ರತಿಕ್ರಿಯೆಗಳನ್ನೂ ದೇಹ ತೋರಿಸಬಹುದು. ಹಾಗಾಗಿ ಸಾಂಬಾರ ಪದಾರ್ಥಗಳನ್ನು ನಿಯಮಿತ ಮತ್ತು ಮಿತವಾಗಿ ಬಳಸಿ

Herbal tea with honey

ಹರ್ಬಲ್‌ ಚಹಾಗಳು ಅಥವಾ ಕಷಾಯಗಳು

ತುಳಸಿ, ಅತಿಮಧುರ, ಶುಂಠಿ, ನಿಂಬೆಹುಲ್ಲು, ಪುದೀನಾ ಮುಂತಾದ ಮೂಲಿಕೆಗಳ ಚಹಾ ಇಲ್ಲವೇ ಕಷಾಯಗಳು ಶ್ವಾಸಕೋಶಗಳ ಆರೋಗ್ಯಕ್ಕೆ ಹಿತಕಾರಿ. ಇವು ರೋಗ ನಿರೋಧಕ ಶಕ್ತಿಯನ್ನು ಚುರುಕು ಮಾಡುವುದೇ ಅಲ್ಲದೆ, ಗಂಟಲಿಗೆ ಆರಾಮ ನೀಡಿ, ಕಫ ಕರಗಿಸಲೂ ನೆರವು ನೀಡುತ್ತವೆ

Healthy fat source

ಆರೋಗ್ಯಕರ ಕೊಬ್ಬು

ಕೊಬ್ಬೆಲ್ಲ ಕೆಟ್ಟದ್ದು ಎಂದು ಭಾವಿಸಿದವರಿಗೆ ಇಲ್ಲೊಂದು ಕಿವಿ ಮಾತು- ಸಂಸ್ಕರಿತ ಕೊಬ್ಬುಗಳನ್ನು, ಕರಿದ ಆಹಾರಗಳನ್ನು ದೂರ ಇರಿಸಿದಷ್ಟೂ ಕ್ಷೇಮ. ಆದರೆ ಆರೋಗ್ಯಕರ ಕೊಬ್ಬುಗಳು ದೇಹಕ್ಕೆ ದೊರೆಯಲೇಬೇಕು. ತುಪ್ಪ, ಕೊಬ್ಬರಿ ಎಣ್ಣೆ, ಆಲಿವ್‌ ಎಣ್ಣೆ, ಅಗಸೆ ಎಣ್ಣೆ ಮುಂತಾದವು ಶರೀರಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತವೆ. ಇದು ಶ್ವಾಸಕೋಶಗಳ ಸಾಮರ್ಥ್ಯ ಹೆಚ್ಚಳಕ್ಕೂ ಬೇಕಾದವು.

Hand with dipper picking honey from a jar of honey

ಜೇನುತುಪ್ಪ

ಯಾವುದೇ ಸಂಸ್ಕರಣೆಗೆ ಒಳಗಾಗದ ನೈಸರ್ಗಿಕ ಜೇನುತುಪ್ಪ ಶ್ವಾಸಕೋಶ ಆರೋಗ್ಯಕ್ಕೆ ಬಹಳ ಒಳ್ಳೆಯದು. ಗಂಟಲಲ್ಲಿ ಕಿರಿಕಿರಿ, ನೆಗಡಿ, ಕೆಮ್ಮಿನಂಥ ಲಕ್ಷಣಗಳಿದ್ದರೆ, ಜೇನುತುಪ್ಪದೊಂದಿಗೆ ತುಳಸಿ ರಸ ಅಥವಾ ಶುಂಠಿ ರಸ ಮುಂತಾದ ಸರಳ ಮನೆಮದ್ದುಗಳು ಉಪಶಮನ ನೀಡುತ್ತವೆ.

Winter table appointments with macaroons and sweets

ಸಂಸ್ಕರಿತ/ರಿಫೈನ್ಡ್‌ ಆಹಾರಗಳು ಬೇಡ

ಬಿಳಿ ಅಕ್ಕಿ, ರಿಫೈನ್ಡ್‌ ಎಣ್ಣೆ, ಬಿಳಿ ಬ್ರೆಡ್‌, ಬಿಳಿ ಪಾಸ್ತಾ, ಮೈದಾದಿಂದ ತಯಾರಾದ ಆಹಾರಗಳು- ಇಂಥವೆಲ್ಲವೂ ಸಂಸ್ಕರಿತ ಆಹಾರಗಳ ಪಟ್ಟಿಯಲ್ಲಿ ಬರುತ್ತವೆ. ಆಹಾರ ಸಂಸ್ಕಾರಗೊಂಡಷ್ಟೂ ದೇಹದಲ್ಲಿ ಉರಿಯೂತಕ್ಕೆ ಕಾರಣವಾಗುತ್ತವೆ. ಅದರಲ್ಲೂ ಶ್ವಾಸಕೋಶಗಳ ಉರಿಯೂತವೆಂದರೆ ಕೆಮ್ಮು, ಉಬ್ಬಸ, ಅಸ್ತಮಾದಂಥ ಲಕ್ಷಣಗಳು ಕಾಡತೊಡಗುತ್ತವೆ. ಹಾಗಾಗಿ ಉರಿಯೂತಕ್ಕೆ ಕಾರಣವಾಗುವ ಆಹಾರಗಳನ್ನು ದೂರ ಮಾಡಿ.

Woman Sleeping In

ನೀರು-ನಿದ್ದೆ ಬೇಕು

ದಿನಕ್ಕೆ ಎಂಟು ತಾಸುಗಳ ನಿದ್ದೆಯು ದೇಹದಲ್ಲಿ ಅಗತ್ಯ ದುರಸ್ತಿ ಕಾರ್ಯಗಳನ್ನು ಮಾಡಿಸಲು ನೆರವಾಗುತ್ತದೆ. ದಿನಕ್ಕೆಂಟು ಗ್ಲಾಸ್ ನೀರು ಕುಡಿಯುವುದು ದೇಹದ ಒಟ್ಟಾರೆ ಸ್ವಾಸ್ಥ್ಯಕ್ಕೆ ಅಗತ್ಯ.

ಇದನ್ನೂ ಓದಿ: Health Tips: ಶೀತ, ನೆಗಡಿಯಾದಾಗ ಈ ಎಲ್ಲ ಹಣ್ಣುಗಳಿಂದ ದೂರವಿರುವುದು ಒಳ್ಳೆಯದು!

Continue Reading

ಆರೋಗ್ಯ

Tips For Eyes: ಕಣ್ಣು ಅದುರುವುದಕ್ಕೆ ಶಕುನ ಕಾರಣವಲ್ಲ! ಮತ್ತೇನು ಕಾರಣ?

ಕಣ್ಣು ಅದುರುವುದು (Tips For Eyes) ಸಾಮಾನ್ಯ. ಆದರೆ ಇದು ಶಕುನದ ಸೂಚಕ ಎಂದು ಹೇಳುವವರೇ ಹೆಚ್ಚು. ಆದರೆ ಇದಕ್ಕೆ ಅಸಲಿ ಕಾರಣ ಏನು? ಪರಿಹಾರ ಏನು? ಈ ಲೇಖನ ಓದಿ.

VISTARANEWS.COM


on

Edited by

Eye
Koo

ಕಣ್ಣು ಅದುರುತ್ತಿದೆಯೇ? (Tips For Eyes) ಎಡಗಣ್ಣೋ- ಬಲಗಣ್ಣೋ? ಇದೆಂಥಾ ಶಕುನವೆಂದು ಪಂಚಾಂಗ ನೋಡುವುದೋ ಅಥವಾ ಯಾರಲ್ಲೋ ಶಾಸ್ತ್ರ ಕೇಳುವವರಿಗೇನೂ ಬರವಿಲ್ಲ. ಮುಂದಾಗಲಿರುವ ಯಾವುದನ್ನೋ, ಅದುರುವ ಮೂಲಕ ಸೂಚಿಸುವುದಕ್ಕೆ ಕಣ್ಣುಗಳಿಗೆ ಸಾಧ್ಯವಿಲ್ಲದಿದ್ದರೂ, ದೇಹದ ಕುರಿತಾಗಿ ಬೇರೇನನ್ನೋ ಅವು ಸೂಚಿಸುವುದು ಹೌದು. ಅಂದರೆ, ಕಣ್ಣುಗಳ ಮೇಲೆ ಒತ್ತಡ, ಆಯಾಸ ಹೆಚ್ಚಿದಾಗ, ನೇತ್ರಗಳಲ್ಲಿ ಶುಷ್ಕತೆಯಿದ್ದರೆ, ಅತಿಯಾದ ಕೆಫೇನ್‌ ಅಥವಾ ಆಲ್ಕೊಹಾಲ್‌ ಸೇವನೆ, ನಿರ್ಜಲೀಕರಣ- ಇಂಥ ಸಂದರ್ಭಗಳಲ್ಲಿ ಕಣ್ಣುಗಳು ಅದುರುವುದಿದೆ. ಇದಲ್ಲದೆಯೂ ಬೇರೆ ಕಾರಣಗಳು ಇರಬಹುದು. ವಿಟಮಿನ್‌ ಬಿ12 ಕೊರತೆ, ಸ್ಕ್ರೀನ್‌ಗಳನ್ನು ಅತಿಯಾಗಿ ನೋಡಿದಾಗ ಉಂಟಾಗುವ ಆಯಾಸ, ಒತ್ತಡ, ಧೂಮಪಾನ, ಖಿನ್ನತೆಯಂಥ ಕಾರಣಗಳಿಗೂ ಕಣ್ಣು ಅದುರಬಹುದು.

ಏನು ಮಾಡಬೇಕು?

ಕಣ್ಣುಗಳು ನಮ್ಮ ಮಾತಿಗೆ ಬೆಲೆ ಕೊಡದಂತೆ ತಮ್ಮಷ್ಟಕ್ಕೆ ತಾವೇ ಅದುರುತ್ತಿದ್ದರೆ, ಕಿರಿಕಿರಿಯ ಸಂಗತಿಯದು. ಒಂದೊಮ್ಮೆ ಕಣ್ಣು ಒಣಗಿದಂತಾಗಿ ಅದುರುತ್ತಿದ್ದರೆ, ನೇತ್ರಗಳನ್ನು ಬಿಗಿಯಾಗಿ ಮುಚ್ಚಿಕೊಳ್ಳಿ. ಮತ್ತೆ ದೊಡ್ಡದಾಗಿ ಕಣ್ಣಗಲಿಸಿ. ಇದೊಂದು ರೀತಿಯಲ್ಲಿ ಅತಿಯಾಗಿ ಮಿಟುಕಿಸಿದಂತೆ. ಹೀಗೆ ಮಾಡುವುದರಿಂದ ಕಣ್ಣುಗಳಲ್ಲಿ ನೀರು ತುಂಬಿಕೊಳ್ಳುತ್ತವೆ. ಒಣಗಿದ ಅನುಭವ ಕಡಿಮೆಯಾಗುತ್ತದೆ. ಮಾತ್ರವಲ್ಲ, ಕಣ್ಣು ಮತ್ತು ಮುಖದ ಮಾಂಸಖಂಡಗಳಿಗೆ ಸಣ್ಣ ವ್ಯಾಯಾಮವಾದಂತಾಗಿ ಈ ಭಾಗಗಳಲ್ಲಿ ರಕ್ತ ಸಂಚಾರ ವೃದ್ಧಿಯಾಗುತ್ತದೆ.

ಮಸಾಜ್

ಬೆರಳಿನಿಂದ ಕಣ್ಣುಗಳ ಕೆಳ ರೆಪ್ಪೆಯ ಅಡಿಗೆ ಸಣ್ಣದಾಗಿ ಮಸಾಜ್‌ ಮಾಡಬಹುದು. ಈ ಸಂದರ್ಭದಲ್ಲಿ ಕಣ್ಣುಗಳನ್ನು ಸತತವಾಗಿ ಮಿಟುಕಿಸಲೂ ಬಹುದು. ಆದರೆ ಈ ಕೆಲಸ ಮಾಡುವಾಗ ಕೈಗಳನ್ನು ಮೊದಲು ಶುಚಿ ಮಾಡಿಕೊಳ್ಳಬೇಕಾಗುತ್ತದೆ. ಹಾಗಿಲ್ಲದಿದ್ದರೆ ಸೋಂಕಾಗುವ ಸಾಧ್ಯತೆ ಇಲ್ಲದಿಲ್ಲ. ಹೀಗೆ ಮಸಾಜ್‌ ಮಾಡುವುದರಿಂದ ಕಣ್ಣುಗಳಿಗೆ ರಕ್ತ ಸಂಚಾರ ವೃದ್ಧಿಸುವುದೇ ಅಲ್ಲದೆ, ಈ ಭಾಗದ ಮಾಂಸಖಂಡಗಳು ಬಲಗೊಳ್ಳುತ್ತವೆ.

ಇದನ್ನೂ ಓದಿ: Eye health foods | ಕಣ್ಣು ಆರೋಗ್ಯವಾಗಿ ಇರಬೇಕಿದ್ದರೆ ಇವನ್ನೆಲ್ಲ ತಿನ್ನುತ್ತಿರಿ!

Tips For Eyes

ವ್ಯಾಯಾಮ

ದೃಷ್ಟಿಯ ಚಲನೆಯನ್ನು ಮೇಲೆ-ಕೆಳಗೆ-ಎಡಕ್ಕೆ-ಬಲಕ್ಕೆ-ವೃತ್ತಾಕಾರದಲ್ಲಿ ಹಾಗೂ ಮುಚ್ಚಿ-ಬಿಟ್ಟು ಮಾಡಿ ಕಣ್ಣುಗಳಿಗೆ ವ್ಯಾಯಾಮ ಮಾಡಿಸಬಹುದು. ಇದರಿಂದ ಸತತವಾಗಿ ಸ್ಕ್ರೀನ್‌ ನೋಡಿದರಿಂದ ಉಂಟಾದ ಒತ್ತಡ, ಆಯಾಸ ಕಡಿಮೆಯಾಗುತ್ತದೆ.

ಆಲ್ಕೊಹಾಲ್‌ ಸೇವನೆ ನಿಲ್ಲಿಸಿ

ಕೆಫೇನ್‌ ಮತ್ತು ಆಲ್ಕೊಹಾಲ್‌ ಸೇವನೆ ಹೆಚ್ಚಿದರೂ ಈ ಕಿರಿಕಿರಿ ಎದುರಾದೀತು. ಇದೇ ಕಾರಣ ಹೌದಾದರೆ, ಪರಿಹಾರ ನಿಮ್ಮ ಕೈಯಲ್ಲೇ ಇದೆ. ದೇಹಕ್ಕೆ ನೀರು ಕಡಿಮೆಯಾದರೂ ಕಣ್ಣದುರುವುದುಂಟು. ಹಾಗಾಗಿ ಸಾಕಷ್ಟು ನೀರು ಕುಡಿಯಿರಿ.

Tips For Eyes

ಶುದ್ಧ ನೀರಿನಿಂದ ತೊಳೆಯಿರಿ

ಬೆಚ್ಚಗಿನ ಮತ್ತು ತಂಪಾದ ಶುದ್ಧ ನೀರಿನಿಂದ ಕಣ್ಣು ತೊಳೆಯಬಹುದು. ಅಂದರೆ, ಮುಚ್ಚಿದ ಕಣ್ಣುಗಳ ಮೇಲೆ ಒಮ್ಮೆ ಬೆಚ್ಚಗಿನ ನೀರು, ಇನ್ನೊಮ್ಮೆ ತಣ್ಣೀರು ಹಾಕಿ ತೊಳೆಯುವುದು. ತಣ್ಣೀರಿನಿಂದ ಕಣ್ಣಿನ ರಕ್ತನಾಳಗಳು ಸಂಕುಚಿತಗೊಂಡರೆ, ಬೆಚ್ಚಗಿನ ನೀರಿನಿಂದ ಅವು ವಿಕಸನಗೊಳ್ಳುತ್ತವೆ. ಕಣ್ಣುಗಳು ತುಂಬಾ ಅದುರುತ್ತಿದ್ದರೆ, ಇದನ್ನು ದಿನಕ್ಕೆ ನಾಕಾರು ಬಾರಿ ಮಾಡಬಹುದು. ಕಣ್ಣಿನ ರಕ್ತ ಪರಿಚಲನೆ ಉತ್ತಮಗೊಂಡು, ಅದುರುವುದು ಕಡಿಮೆಯಾಗುತ್ತದೆ.

ಈ ಎಲ್ಲಾ ಪ್ರಯತ್ನಗಳ ನಂತರವೂ ಸಮಸ್ಯೆ ಪರಿಹಾರವಾಗಲಿಲ್ಲ ಎಂದರೆ, ದೃಷ್ಟಿಯಲ್ಲಿ ದೋಷ ಕಂಡುಬಂದರೆ, ಕಣ್ಣುಗಳಲ್ಲಿ ಈವರೆಗಿಲ್ಲದ ಯಾವುದಾದರೂ ಸಮಸ್ಯೆ ಪ್ರಾರಂಭವಾದರೆ, ಅದುರುವಾಗ ಕಣ್ಣುಗಳು ಸಂಪೂರ್ಣ ಮುಚ್ಚಿಕೊಳ್ಳುತ್ತಿದ್ದರೆ ವೈದ್ಯರನ್ನು ಕಾಣಬಹುದು.

Continue Reading

ಅಂಕಣ

Raja Marga Column : ಮೊದಲು ನಿಮ್ಮ ಹೃದಯವನ್ನು ನೀವು ಪ್ರೀತಿಸಿ, ಬೇರೆಯವರ ಹೃದಯ ಆಮೇಲೆ ನೋಡ್ಕೊಳೋಣ!

Raja Marga Column: ಪ್ರತಿ ದಿನ, ಪ್ರತಿಕ್ಷಣ ಕೆಲಸ ಮಾಡುವ ಹೃದಯಕ್ಕೂ ಒಂದು ದಿನ ಬೇಕು ಅಲ್ವಾ? ಸೆಪ್ಟೆಂಬರ್ 29-ವಿಶ್ವ ಹೃದಯ ದಿನ. ಹೃದಯವನ್ನು ಉಪಯೋಗಿಸಿ, ಹೃದಯವನ್ನು ಅರಿಯಿರಿ ಎನ್ನುವುದು ಈ ವರ್ಷದ ಘೋಷಣೆ. ಜಗತ್ತಿನ ಅತೀ ದೊಡ್ಡ ಕೊಲೆಗಡುಕ ಅಂದರೆ ಅದು ಹೃದಯಾಘಾತ ಅಂತಾರೆ. ಅದನ್ನು ಮೀರುವುದು ಹೇಗೆ ಎಂದರೆ ನಿಮ್ಮ ಹೃದಯವನ್ನು ನೀವೇ ಪ್ರೀತಿಸುವುದರಿಂದ.

VISTARANEWS.COM


on

Edited by

Raja Marga world heart day
Koo
RAJAMARGA

ಸೆಪ್ಟೆಂಬರ್ 29 – ವಿಶ್ವ ಹೃದಯ ದಿನ (World Heart day). ಈದಿನ ಜಗತ್ತಿನಾದ್ಯಂತ ಹೃದಯದ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮಗಳು, ರ‍್ಯಾಲಿಗಳು, ಸಭೆಗಳು, ಸಮಾರಂಭಗಳು ನಡೆಯುತ್ತವೆ. ಜಗತ್ತಿನ 90 ರಾಷ್ಟ್ರಗಳು ಸೆ. 29ರಂದು ಹೃದಯ ದಿನ ಆಚರಿಸುತ್ತವೆ

ಪ್ರತೀ ವರ್ಷವೂ ಹೃದಯ ದಿನಕ್ಕೆ ವಿಶ್ವ ಆರೋಗ್ಯ ಸಂಸ್ಥೆಯು (World Health Organization) ಒಂದು ಘೋಷಣೆಯನ್ನು ಕೊಡುತ್ತಿದ್ದು ಈ ವರ್ಷದ ಘೋಷಣೆಯು – USE HEART, KNOW HEART ಆಗಿದೆ. ಮಾನವನ ಜೀವನದ ಉದ್ದಕ್ಕೂ ಅವಿಶ್ರಾಂತವಾಗಿ ದುಡಿಯುತ್ತ ರಕ್ತವನ್ನು ಪಂಪ್ ಮಾಡುವ ಕೆಲಸವನ್ನು ನಿರಂತರ ಮಾಡುತ್ತಿರುವ ಪುಟ್ಟ ಹೃದಯದ ಬಗ್ಗೆ ನಾವು ತುಂಬಾ ಮಾಹಿತಿ ತಿಳಿದುಕೊಳ್ಳಬೇಕಾದ ಅಗತ್ಯ (Let us Understand our own heart first) ಇದೆ (Raja marga Column).

ಮಿಡಿಯುವ ಪುಟ್ಟ ಹೃದಯ – 21 ಮಾಹಿತಿಗಳು

1. ಪ್ರತೀ ವರ್ಷವೂ ಸೆಪ್ಟೆಂಬರ್ 29ರಂದು ಹೃದಯದ ದಿನವನ್ನು ವಿಶ್ವ ಆರೋಗ್ಯ ಸಂಸ್ಥೆಯು ಆಚರಣೆ ಮಾಡುತ್ತಾ ಬಂದಿದೆ. 2000ನೇ ಇಸವಿಯಿಂದ ಇದು ಜಾರಿಯಲ್ಲಿದೆ.

Sep 29 World heart day

2. ಹೃದಯಾಘಾತವನ್ನು ‘ಜಗತ್ತಿನ ಅತೀ ದೊಡ್ಡ ಕೊಲೆಗಡುಕ’ ಎಂದು ಕರೆಯಲಾಗುತ್ತದೆ. ಏಕೆಂದರೆ ಹೃದಯದ ಆಘಾತ ಮತ್ತು ಹೃದಯದ ಕಾಯಿಲೆಯಿಂದ ಜಗತ್ತಿನಾದ್ಯಂತ ಪ್ರತೀ ವರ್ಷ ಮೃತರಾಗುವ ವ್ಯಕ್ತಿಗಳ ಸಂಖ್ಯೆ 1.7 ಕೋಟಿ ಆಗಿದೆ! ಅಂದರೆ ಮನುಷ್ಯ ಮರಣದ ಒಟ್ಟು ಪ್ರಮಾಣದ 31% ಭಾಗವು ಕೇವಲ ಹೃದಯದ ಸಮಸ್ಯೆಗಳಿಂದ ಉಂಟಾಗುತ್ತಿದೆ.

3. ಮನುಷ್ಯನ ದೇಹದ ಎಲ್ಲ ಭಾಗಗಳೂ ವಿಶ್ರಾಂತಿ ಪಡೆಯುತ್ತವೆ. ಮೆದುಳು ಕೂಡ ವಿಶ್ರಾಂತಿ ಪಡೆಯುತ್ತದೆ. ಆದರೆ ಹೃದಯವು ಒಂದರ್ಧ ಕ್ಷಣ ಕೂಡ ವಿಶ್ರಾಂತಿ ಪಡೆಯುವುದೇ ಇಲ್ಲ. ಮುಷ್ಕರವನ್ನು ಕೂಡ ಮಾಡುವುದಿಲ್ಲ. ಹೃದಯವು ಹಗಲು ರಾತ್ರಿ ಏಕ ರೀತಿಯಲ್ಲಿ ಕೆಲಸ ಮಾಡುತ್ತದೆ.

World heart day

4. ಇದುವರೆಗೆ ವಿಜ್ಞಾನಿಗಳಿಗೆ ಹೃದಯಾಘಾತಕ್ಕೆ ಸರಿಯಾದ ಕಾರಣವನ್ನು ಸಂಶೋಧನೆ ಮಾಡಲು ಸಾಧ್ಯವೇ ಆಗಲಿಲ್ಲ. ಆನುವಂಶೀಯ ಕಾರಣಗಳು ಇವೆ. ಆದರೆ ಅದಕ್ಕೂ ಪುರಾವೆ ಇಲ್ಲ.

5. ಹೃದಯದ ಭದ್ರತೆಗೆ ನಾಲ್ಕು ರಕ್ಷಣಾ ಕವಚಗಳು ಇವೆ. ಆದರೂ ಮಾನವ ಹೃದಯವು ಯಾವಾಗ ಬೇಕಾದರೂ ಸ್ತಬ್ಧ ಆಗಬಹುದು.

6. ಪುರುಷರ ಹೃದಯಕ್ಕಿಂತ ಸ್ತ್ರೀಯರ ಹೃದಯವು ಸ್ವಲ್ಪ ಕಡಿಮೆ ತೂಕ ಇರುತ್ತದೆ. ಆರೋಗ್ಯಪೂರ್ಣ ಪುರುಷರ ಹೃದಯದ ತೂಕ ಸರಾಸರಿ 280-340 ಗ್ರಾಂ ಇದ್ದರೆ ಸ್ತ್ರೀಯರ ಹೃದಯದ ತೂಕವು 230- 280 ಗ್ರಾಂ.

world heart day

7. ಪುರುಷರಲ್ಲಿ ಹೋಲಿಸಿದರೆ ಮಹಿಳೆಯರಲ್ಲಿ ಹೃದಯಾಘಾತದ ಪ್ರಮಾಣ ಕೊಂಚ ಕಡಿಮೆ ಇದೆ.
(ಮಹಿಳೆಯರಲ್ಲಿ ಹೃದಯವೇ ಇರುವುದಿಲ್ಲ ಎಂದು ಹಾಸ್ಯ ಸಾಹಿತಿ ಬೀಚಿ ಒಮ್ಮೆ ಹೇಳಿದ್ದು ತಮಾಷೆಗೆ ಆಯ್ತಾ!)

8. ಮನುಷ್ಯನ ಹೃದಯಾಘಾತಕ್ಕೆ ಯಾವುದೇ ವಯಸ್ಸಿನ ಸಮೀಕರಣ ಇಲ್ಲ. ಇತ್ತೀಚಿನ ವರ್ಷಗಳಲ್ಲಿ ಸಣ್ಣ ಮಕ್ಕಳಲ್ಲಿ ಕೂಡ ಹೃದಯಾಘಾತಗಳು ಹೆಚ್ಚುತ್ತಿವೆ.

9. ವಾಯು ಮಾಲಿನ್ಯದ ಕಾರಣಕ್ಕೆ ಹೆಚ್ಚು ಹೃದಯಾಘಾತಗಳು ನಡೆಯುತ್ತವೆ ಎಂದು ಸಂಶೋಧನೆಗಳು ಹೇಳಿವೆ. ಒಟ್ಟು ಹೃದಯಾಘಾತಗಳಲ್ಲಿ 25% ಆಘಾತಗಳು ವಾಯು ಮಾಲಿನ್ಯದ ಕಾರಣಕ್ಕೆ ಆಗುತ್ತಿವೆ.

world heart day sep 29

10. ಆರೋಗ್ಯವಂತ ಮನುಷ್ಯನ ದೇಹದಲ್ಲಿ ಇರುವ ರಕ್ತದ ಪ್ರಮಾಣ ಐದರಿಂದ ಐದೂವರೆ ಲೀಟರ್. ಆದರೆ ಹೃದಯವು ದಿನಕ್ಕೆ 6000-7500 ಲೀಟರ್ ರಕ್ತವನ್ನು ಪಂಪ್ ಮಾಡುತ್ತದೆ ಅಂದರೆ ನಂಬಲೇ ಬೇಕು! ಒಮ್ಮೆ ಎದೆಯ ಬಡಿತ ಉಂಟಾದಾಗ ರಕ್ತವು ನಮ್ಮ ಇಡೀ ದೇಹವನ್ನು ತಲುಪುತ್ತದೆ.

11. ಆರೋಗ್ಯಪೂರ್ಣ ವ್ಯಕ್ತಿಯ ಹೃದಯವು ನಿಮಿಷಕ್ಕೆ 60-100 ಬಾರಿ ಲಬ್ ಡಬ್ ಎಂದು ಬಡಿಯುತ್ತದೆ. ನವಜಾತ ಶಿಶುಗಳಲ್ಲಿ ಇದು ಕೊಂಚ ಜಾಸ್ತಿ.

12. ಹೃದಯಕ್ಕೆ ಕನೆಕ್ಟ್ ಆದ ರಕ್ತನಾಳಗಳು ಬ್ಲಾಕ್ ಆಗುವ ಕಾರಣ ಹೆಚ್ಚು ಹೃದಯಾಘಾತಗಳು ನಡೆಯುತ್ತವೆ. ಅದಕ್ಕೆ ಮುಖ್ಯ ಕಾರಣ ಕೊಲೆಸ್ಟರಾಲ್ ಮತ್ತು ಹೆಚ್ಚು ರಕ್ತದ ಒತ್ತಡ (ಬಿಪಿ).

walking medicine for heart

13. ಏರೋಬಿಕ್ಸ್, ಸೈಕ್ಲಿಂಗ್, ವೇಗವಾಗಿ ನಡೆಯುವುದು, ಓಡುವುದು, ಸ್ವಿಮ್ಮಿಂಗ್, ಬ್ಯಾಡ್ಮಿಂಟನ್ ಆಡುವುದು ಮತ್ತು ರೋಪ್ ಜಂಪ್ ಇವುಗಳನ್ನು ದಿನವೂ ಮಾಡುವುದರಿಂದ ಹೃದಯದ ಆಯಸ್ಸನ್ನು ಜಾಸ್ತಿ ಮಾಡಬಹುದು.

14. ಸ್ಮೋಕಿಂಗ್ ಮತ್ತು ಡ್ರಿಂಕ್ಸ್ ಮಾಡುವವರಲ್ಲಿ ಹೃದಯಾಘಾತಗಳ ಸಾಧ್ಯತೆ ಹೆಚ್ಚು. ಹೆಚ್ಚು ಒತ್ತಡದಲ್ಲಿ ಕೆಲಸ ಮಾಡುವವರು ಮತ್ತು ವಿಪರೀತ ಬೊಜ್ಜು ಬೆಳೆಸಿಕೊಂಡವರು ಬೇಗ ಹೃದಯದ ಕಾಯಿಲೆಗಳಿಗೆ ಒಳಗಾಗುತ್ತಾರೆ.

15. ಹೆಚ್ಚು ಸಕ್ಕರೆ ಕಾಯಿಲೆ ಇರುವ ವ್ಯಕ್ತಿಗಳಲ್ಲಿ ಹೃದಯಾಘಾತ ಸಾಧ್ಯತೆ ಹೆಚ್ಚು.

TMT test for heart

16. ಆಹಾರದಲ್ಲಿ ಸೋಡಿಯಂ ಪ್ರಮಾಣ ಕಡಿಮೆ ಮಾಡುವುದರಿಂದ ಹೃದಯದ ಜೋಪಾಸನೆ ಮಾಡಬಹುದು. ಉಪ್ಪು ಕಡಿಮೆ ಬಳಕೆ ಮಾಡುವುದು ಅಗತ್ಯ.

17. ಅನಾರೋಗ್ಯಪೂರ್ಣ ಜೀವನ ಕ್ರಮಗಳಿಂದ (Unhealthy life style) ಹೃದಯದ ಸಮಸ್ಯೆಗಳು ಹೆಚ್ಚುತ್ತವೆ. ಜಂಕ್ ಫುಡ್ ಸೇವನೆ ಮತ್ತು ನಿದ್ದೆ ಕಡಿಮೆ ಮಾಡುವುದರಿಂದ ಹೃದಯವು ದುರ್ಬಲ ಆಗುತ್ತದೆ.

18. ನಿರಂತರ ಮೆಡಿಕಲ್ ತಪಾಸಣೆ ಮಾಡುವುದು, ಇಸಿಜಿ (ECG) ಮಾಡುವುದು ಮತ್ತು ಬಾಡಿ ಮಾಸ್ ಇಂಡೆಕ್ಸ್ ಅಳತೆ ಮಾಡುವುದರಿಂದ ಹೃದಯದ ಆರೋಗ್ಯವನ್ನು ಪರೀಕ್ಷೆ ಮಾಡಬಹುದು ಮತ್ತು ಹೃದಯವನ್ನು ಕಾಪಾಡಬಹುದು.

heart foods

19. ಹೃದಯಾಘಾತಗಳು ಉಂಟಾಗುವ ಸಾಕಷ್ಟು ಮೊದಲು ಅದರ ಚಿಹ್ನೆಗಳು (Symptoms) ನಮ್ಮ ಗಮನಕ್ಕೆ ಬರುತ್ತವೆ. ಆಗ ತಕ್ಷಣ ಎಚ್ಚರವಾಗಿ ವೈದ್ಯಕೀಯ ನೆರವನ್ನು ಪಡೆದರೆ ಹೃದಯಾಘಾತ ತಡೆಗಟ್ಟಬಹುದು. ಆ ಅವಧಿಯನ್ನು ಗೋಲ್ಡನ್ ಪೀರಿಯಡ್ ಎಂದು ಕರೆಯುತ್ತಾರೆ.

20. ಹೃದಯಕ್ಕೆ ಕನೆಕ್ಟ್ ಆದ ರಕ್ತನಾಳಗಳು ಬ್ಲಾಕ್ ಆಗದ ಹಾಗೆ ನೋಡಿಕೊಳ್ಳುವುದು ತುಂಬಾ ಮುಖ್ಯ. ಅದಕ್ಕೆ ನಿರಂತರ ವೈದ್ಯಕೀಯ ತಪಾಸಣೆ ಅಗತ್ಯ.

heart day special

21. 1964ರಲ್ಲಿ ಜೇಮ್ಸ್ ಹಾರ್ಡಿ ಎಂಬ ವಿಜ್ಞಾನಿಯು ಮನುಷ್ಯನ ಹೃದಯವನ್ನು ಬದಲಾಯಿಸಿ ಅದರ ಸ್ಥಳದಲ್ಲಿ ಚಿಂಪಾಂಜಿ ಹೃದಯವನ್ನು ಕಸಿ ಮಾಡಿದ್ದ. ಆದರೆ ಆ ರೋಗಿ ಎರಡು ಘಂಟೆಗಳ ಒಳಗೆ ಮೃತ ಪಟ್ಟು ಈ ಪ್ರಯೋಗ ವಿಫಲ ಆಯಿತು.

22. 1967ರಲ್ಲಿ ದಕ್ಷಿಣ ಆಫ್ರಿಕಾದ ಒಂದು ಆಸ್ಪತ್ರೆಯಲ್ಲಿ ಒಬ್ಬ ಸರ್ಜನ್ ಕ್ರಿಶ್ಚಿಯನ್ ಬನಾರ್ಡ್ ರೋಗಿಯ ಅನಾರೋಗ್ಯ ಪೂರ್ಣ ಹೃದಯದ ಜಾಗದಲ್ಲಿ ಇನ್ನೊಂದು ಆರೋಗ್ಯಪೂರ್ಣ ಹೃದಯವನ್ನು ಕಸಿ ಮಾಡಿ ಯಶಸ್ವೀ ಅದನು. ಆ ಶಸ್ತ್ರಚಿಕಿತ್ಸೆಯನ್ನು ಇಂದು ಜಗತ್ತಿನಾದ್ಯಂತ ಸಾವಿರಾರು ಮಂದಿ ಮಾಡಿಕೊಳ್ಳುತ್ತಿದ್ದಾರೆ.

Sleep like a child
ಮಗುವಿನಂತೆ ಮಲಗಿ ಹೃದಯ ಜೋಪಾನ

ಇದನ್ನೂ ಓದಿ: Raja Marga Column : ಅಪ್ಪಾ ಪಾ!! ಅಮಿತಾಭ್ ಬಚ್ಚನ್ ಬದ್ಧತೆ, ಪ್ರಯೋಗಶೀಲತೆಗೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾ?

ಭರತ ವಾಕ್ಯ

peaceful family for hearts health
ನೆಮ್ಮದಿಯೇ ಹೃದಯದ ನಿಜವಾದ ಬಂಡವಾಳ

ಹೃದಯವು ಭಾವನೆಗಳ ಉಗಮ ಸ್ಥಾನ ಎಂದು ನಮ್ಮ ಹಿರಿಯರು ನಂಬಿದ್ದರು. ಪ್ರೀತಿಗಾಗಿ ಮಿಡಿಯುವುದು ಅದೇ ಹೃದಯ ಎಂದರು. ಇವೆಲ್ಲವೂ ವೈಜ್ಞಾನಿಕವಾಗಿ ಇನ್ನೂ ಸಾಬೀತು ಆಗಿಲ್ಲ. ಹೃದಯವು ಅತ್ಯಂತ ಸಕ್ಷಮವಾಗಿ ಮತ್ತು ವೇಗವಾಗಿ ಕೆಲಸ ಮಾಡುವ ಮಾಂಸ, ರಕ್ತ ಮತ್ತು ಸ್ನಾಯುಗಳ ಒಂದು ಪ್ರಮುಖ ದೇಹದ ಭಾಗ ಎಂದು ವಿಜ್ಞಾನಿಗಳು ಹೇಳುತ್ತಾರೆ. ಆದರೆ ಆ ಹೃದಯವನ್ನು ಪ್ರೀತಿ ಮಾಡಿ ಉಳಿಸಿಕೊಳ್ಳುವ ಹೊಣೆ ನಮ್ಮೆಲ್ಲರದು. ಲವ್ ಯುವರ್ ಹಾರ್ಟ್ ಅಂಡ್ ಲಿವ್ ಲಾಂಗ್.

Continue Reading
Advertisement
pakistan Team
ಕ್ರಿಕೆಟ್4 mins ago

Pakistan team: ಕೊನೆಗೂ ಬಗೆಹರಿದ ಪಾಕ್ ತಂಡದ​ ವೀಸಾ ಸಮಸ್ಯೆ; ಬುಧವಾರ ಭಾರತ ಪ್ರಯಾಣ

bus auto accident
ದಕ್ಷಿಣ ಕನ್ನಡ7 mins ago

Road Accident: ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ

home lizard
ಲೈಫ್‌ಸ್ಟೈಲ್28 mins ago

Lizards in home: ಹಲ್ಲಿಯನ್ನು ಮನೆಯಿಂದ ಓಡಿಸುವ ಕಲೆ ನಿಮಗೆ ಗೊತ್ತೇ? ಇಲ್ಲಿವೆ ಟಿಪ್ಸ್!

healthy children food
Relationship57 mins ago

Parenting Tips: ನಿಮ್ಮ ಮಕ್ಕಳು ಅಡ್ಡ ಬೆಳೆಯದೆ, ಉದ್ದ ಬೆಳೆಯಬೇಕೆಂದರೆ ಈ ಆಹಾರವನ್ನೇ ನೀಡಿ!

Reality Shows neads a break
ಅಂಕಣ1 hour ago

Raja Marga Column : ನಿಮ್ಮ ಮಕ್ಕಳನ್ನು ಸೂಪರ್‌ ಹೀರೊ ಮಾಡಲು ಹೋಗ್ಬೇಡಿ; ರಿಯಾಲಿಟಿ ಶೋಗಳಿಗೆ ಬೇಕು ಬ್ರೇಕ್!

bangalore bandh
Live News2 hours ago

Bangalore Bandh Live: ಬೆಂಗಳೂರು ಬಂದ್‌ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?

Vistara Editorial, Janata Darshan by CM must appreciated
ಕರ್ನಾಟಕ2 hours ago

ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

Pakistan Cricket Team Skipper Babaz azam fined exceeding speed limit
ಕ್ರಿಕೆಟ್8 hours ago

Babar Azam: ಆಡಿ ಕಾರ್ ಓವರ್‌ಸ್ಪೀಡ್ ಓಡಿಸಿ, ದಂಡ ಕಟ್ಟಿದ ಪಾಕ್ ಕ್ರಿಕೆಟ್ ಟೀಂ ನಾಯಕ ಬಾಬರ್ ಅಜಮ್!

Sara Sunny
ದೇಶ9 hours ago

Lawyer Sara Sunny: ಸುಪ್ರೀಂ ಕೋರ್ಟ್‌ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ15 hours ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ17 hours ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ19 hours ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ20 hours ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌