Site icon Vistara News

Accident case | ಮುದಗಲ್‌ನಲ್ಲಿ ಬೈಕಿಗೆ ಕಾರು ಡಿಕ್ಕಿ, ತಾಯಿ- ಮಗ ಸಾವು

raichur accident

ರಾಯಚೂರು: ಜಿಲ್ಲೆಯ ಮುದಗಲ್‌ನಲ್ಲಿ ಬೈಕ್- ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಾಯಿ-ಮಗ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್‌ನಲ್ಲಿ ಈ ಘಟನೆ ನಡೆದಿದೆ. ಭಾರತಿ ಉಮೇಶ್(39) ಹಾಗೂ ಉದಯಶಂಕರ್(8) ಮೃತಪಟ್ಟವರು. ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಲಿಂಗಸಗೂರು ತಾಲೂಕಿನ ಯರದೊಡ್ಡಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಬೈಕ್‌ ಸವಾರರು ಯರದೊಡ್ಡಿಯಿಂದ ಮರಿಯಮ್ಮನಹಳ್ಳಿ ಕಡೆ ತಡರಾತ್ರಿ ಹೊರಟಿದ್ದರು. ಇಳಕಲ್‌ ‌ಮಾರ್ಗವಾಗಿ ಮುದಗಲ್ ಟೌನ್ ಕಡೆ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತಾಯಿ-ಮಗನ ಮೃತದೇಹಗಳನ್ನು ಮುದಗಲ್ ಸರಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Accident Case : ಕಾರು-ಬೈಕ್ ನಡುವೆ ಅಪಘಾತ; ಬೈಕ್‌ ಸವಾರನಿಗೆ ಗಂಭೀರ ಗಾಯ

Exit mobile version