Site icon Vistara News

Illicit Relationship: ಪ್ರೇಯಸಿ ಜತೆ ಹೆಡ್​ಕಾನ್ಸ್​ಟೇಬಲ್ ಲವ್ವಿ-ಡವ್ವಿ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ

Illicit Relationship

ರಾಯಚೂರು: ಪ್ರೇಯಸಿ ಜತೆ ಇರುವಾಗಲೇ ಹೆಡ್​ಕಾನ್ಸ್​ಟೇಬಲ್ ಪತ್ನಿಯ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ (Illicit Relationship). ಸಿರವಾರ ಠಾಣೆ ಹೆಡ್ ಕಾನ್ಸಟೇಬಲ್ ರಾಜ್ ಮಹಮ್ಮದ್‌ನ ಅಕ್ರಮ ಸಂಬಂಧ ಹೊರಗೆ ಬಂದಿದ್ದು, ಪತ್ನಿಯೇ ಇಬ್ಬರನ್ನೂ ರೆಡ್ ಹ್ಯಾಂಡ್ ಹಿಡಿದು ಪೊಲೀಸರಿಗೆ ವಶಕ್ಕೆ ನೀಡಿದ್ದಾರೆ (Raichur News).

ರಾಜ್ ಮಹಮ್ಮದ್‌ ಸಿರವಾರ ಠಾಣೆ ಹೆಡ್ ಕಾನ್ಸಟೇಬಲ್ ಆಗಿದ್ದರೆ ಆತನ ಪತ್ನಿ ಪ್ಯಾರಿ ಬೇಗಂ ದೇವದುರ್ಗ ಠಾಣೆ ಕಾನ್ಸ್ ಟೇಬಲ್ ಆಗಿದ್ದಾರೆ. ವಿಚ್ಚೇದಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ರಾಜ್ ಮಹಮ್ಮದ್‌ಗೆ ಹಿಂದೆಯೂ ಪತ್ನಿ ಎಚ್ಚರಿಕೆ ನೀಡಿದ್ದರು. ಆದರೂ ಬುದ್ಧಿ ಕಲಿಯದ ಆತ ಇದೀಗ ರೆಡ್‌ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾನೆ.

ಕವಿತಾಳ ಆಸ್ಪತ್ರೆಯ ಸ್ಟಾಫ್‌ ನರ್ಸ್ ಜತೆ ರಾಜ್ ಮಹಮ್ಮದ್‌ ಆಕ್ರಮ ಸಂಬಂಧ ಹೊಂದಿದ್ದು, ನಾಲ್ಕು ವರ್ಷಗಳಿಂದ ಇದು ಮುಂದುವರಿಯುತ್ತಿದೆ ಎಂದು ಆರೋಪಿಸಲಾಗಿದೆ. ಈ ಹಿಂದೆ ರಾಜ್ ಮಹಮ್ಮದ್‌ ಕವಿತಾಳ ಠಾಣೆಯಲ್ಲಿದ್ದಾಗಿನಿಂದಲೇ ಆಕ್ರಮ ಸಂಬಂಧ ಚಿಗುರಿತ್ತು. ಠಾಣೆ ಮತ್ತು ಆಸ್ಪತ್ರೆ ಎದುರು-ಬದುರಾಗಿ ಇರುವುದರಿಂದ ಇಬ್ಬರ ನಡುವೆ ಸಲುಗೆ ಬೆಳೆದಿತ್ತು. ಪತ್ನಿ ಮನೆಯಲ್ಲಿ ಇಲ್ಲದೆ ವೇಳೆ ಇವರ ಚೆಲ್ಲಾಟ ನಡೆಯುತ್ತಿತ್ತು ಎನ್ನಲಾಗಿದೆ.

ಹಿಂದೆಯೂ ದೂರು ನೀಡಿದ್ದ ಪತ್ನಿ

ರಾಜ್ ಮಹಮ್ಮದ್‌ನ ಅಕ್ರಮ ಸಂಬಂಧದ ಬಗ್ಗೆ ಈ ಹಿಂದೆ ಪತ್ನಿ ಪ್ಯಾರಿ ಬೇಗಂ ಎಸ್‌ಪಿ ಗಮನಕ್ಕೆ ತಂದಿದ್ದರು. ಆಗ ಅವರು ಕರೆದು ಬುದ್ದಿವಾದ ಹೇಳಿದ್ದರು. ಇಷ್ಟಾದರೂ ರಾಜ್ ಮಹಮ್ಮದ್‌ ತನ್ನ ಚಾಳಿ ಬಿಟ್ಟಿರಲಿಲ್ಲ. ಇದೀಗ ಸಿರವಾರ ಪಟ್ಟಣದಲ್ಲಿ ಮನೆಯೊಂದರಲ್ಲಿ ಪ್ರೇಯಸಿ ಜತೆ ಇರುವಾಗಲೇ ಸಿಕ್ಕಿ ಬಿದ್ದಿದ್ದಾನೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಪ್ಯಾರಿ ಬೇಗಂ ಮನೆಯನ್ನು ಲಾಕ್ ಮಾಡಿ, ಬಳಿಕ ಕರೆ ಮಾಡಿ ಎಸ್​​ಪಿಗೆ ದೂರು ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಠಾಣೆ ಪೊಲೀಸರು ಆಗಮಿಸಿ ಮನೆ ಲಾಕ್​ ಓಪನ್ ಮಾಡಿ ಬಳಿಕ ಹೆಡ್​ಕಾನ್ಸ್​ಟೇಬಲ್ ರಾಜ್ ಮೊಹಮ್ಮದ್ ಮತ್ತು ಆತನ ಪ್ರೇಯಸಿಯನ್ನು ಕರೆದುಕೊಂಡು ಹೋಗಿದ್ದಾರೆ. ಸದ್ಯ ರಾಜ್ ಮೊಹಮ್ಮದ್ ವಿರುದ್ಧ ಪತ್ನಿ ದೂರು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ: Love Case : ಒಂದೇ ಶಾಲೆಯ ಶಿಕ್ಷಕ-ಶಿಕ್ಷಕಿ ಲವ್ವಿ ಡವ್ವಿ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಹೆಂಡ್ತಿ!

ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಪತಿ ಆತ್ಮಹತ್ಯೆ

ತುಮಕೂರು: ಗಂಡ ಮಕ್ಕಳನ್ನು ಬಿಟ್ಟು ಮಹಿಳೆಯೊಬ್ಬಳು ಪರ ಪುರುಷನೊಂದಿಗೆ (Illicit relationship) ಓಡಿ ಹೋದ ಹಿನ್ನಲೆಯಲ್ಲಿ ಮರ್ಯಾದೆಗೆ ಅಂಜಿದ ಪತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿತ್ತು. ತುಮಕೂರು ತಾಲೂಕಿನ ಹೊಸಹಳ್ಳಿಯ ದೇವರಾಜ್ ಮೃತ ದುರ್ದೈವಿ. ದೇವರಾಜ್‌ ಹಾಗೂ ಮಾಧವಿ ಇಬ್ಬರು ಪ್ರೀತಿಸಿ 18 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಪರ ಪುರುಷನ ಮೇಲೆ ವ್ಯಾಮೋಹಕ್ಕೆ ಸಿಲುಕಿದ ಮಾಧವಿ, ಹೊಸಹಳ್ಳಿ ಗ್ರಾಮದ ಆನಂದ್ ಕುಮಾರ್ ಎಂಬಾತನೊಟ್ಟಿಗೆ ಪರಾರಿ ಆಗಿದ್ದಾಳೆ.

Exit mobile version