Murder Case : ಕಲ್ಲಿನಿಂದ ಜಜ್ಜಿ ಪತ್ನಿಯ ಕೊಂದು ನೇಣಿಗೆ ಶರಣಾದ ಅನುಮಾನ ಪಿಶಾಚಿ - Vistara News

ರಾಯಚೂರು

Murder Case : ಕಲ್ಲಿನಿಂದ ಜಜ್ಜಿ ಪತ್ನಿಯ ಕೊಂದು ನೇಣಿಗೆ ಶರಣಾದ ಅನುಮಾನ ಪಿಶಾಚಿ

Murder case : ಪತ್ನಿಯ ಶೀಲ ಶಂಕಿಸಿ ನಿತ್ಯವು ಜಗಳವಾಡುತ್ತಿದ್ದ ಪತಿಯೊಬ್ಬ ಸಿಟ್ಟಿನಲ್ಲಿ ಕಲ್ಲಿನಿಂದ ಜಜ್ಜಿ ಕೊಂದು, ಬಳಿಕ ತಾನೂ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

VISTARANEWS.COM


on

Murder case In Raichur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಕ್ಷುಲ್ಲಕ ಕಾರಣಕ್ಕೆ ಗಂಡ- ಹೆಂಡತಿ ನಡೆದ ಜಗಳವು ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಸಿಟ್ಟಿನಿಂದ ಪತ್ನಿಯನ್ನು ಕೊಂದು ಪತಿಯೂ ನೇಣಿಗೆ ಶರಣಾಗಿದ್ದಾನೆ. ರಾಯಚೂರಿನ ಸಿಂಧನೂರು ತಾಲೂಕಿನ ದಿದ್ದಿಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಕವಿತಾ (26) ಕೊಲೆಯಾದವಳು. ಭೀಮಣ್ಣ (28) ಎಂಬಾತ ಪತ್ನಿಯನ್ನು ಕೊಂದು ನೇಣಿಗೆ ಶರಣಾದವನು.

ಕವಿತಾ ಹಾಗೂ ಭೀಮಣ್ಣ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಇಬ್ಬರಿಗೂ ಮದುವೆಯಾಗಿತ್ತು. ಈ ದಂಪತಿ ಮೊದಮೊದಲು ಖುಷಿಯಾಗಿಯೇ ಇದ್ದರು. ಆದರೆ ಇತ್ತೀಚೆಗೆ ಭೀಮಣ್ಣನಿಗೆ ಕವಿತಾಳ ಮೇಲೆ ಅನುಮಾನ ಮೂಡಿತ್ತು. ಆಕೆಯ ಶೀಲವನ್ನು ಶಂಕಿಸಿದ್ದ. ಇದೇ ವಿಚಾರಕ್ಕೆ ಪದೇಪದೆ ಪತ್ನಿ ಜತೆ ಜಗಳ ಮಾಡುತ್ತಿದ್ದ.

ಇದೇ ವಿಚಾರಕ್ಕೆ ನಿನ್ನೆ ಗುರುವಾರ ಗಲಾಟೆ ನಡೆದಿದೆ.‌ ಕೋಪದ ಕೈಗೆ ಬುದ್ಧಿಕೊಟ್ಟ ಭೀಮಣ್ಣನ ಕಲ್ಲಿನಿಂದ ಕವಿತಾಳನ್ನು ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆಕೆ ಮೃತಪಟ್ಟ ಕೂಡಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಳಗಾನೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರು ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming : ಕಾಲೇಜಿನಿಂದ ಬಂದವಳೇ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

ಗದಗ: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದಲ್ಲೇ ಕೊಚ್ಚಿ ಭೀಕರವಾಗಿ ಹತ್ಯೆ (Murder Case) ಮಾಡಲಾಗಿದೆ. ಈ ಬರ್ಬರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದು, ಕೃತ್ಯದ (Crime news) ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ನೇಹಾ ಕೊಲೆ (Hubli Neha Murder) ಕೃತ್ಯ ಇನ್ನೂ ಹಸಿಯಾಗಿರುವಾಗಲೇ ಈ ಘಟನೆ ನಡೆದಿದೆ.

ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರೋಡೆ ಸೇರಿದಂತೆ ವಿವಿಧ ಆಯಾಮಗಳನ್ನು ತನಿಖೆ ನಡೆಸಲಾಗುತ್ತಿದೆ.

ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಈ ಮೂವರೂ ಕೊಪ್ಪಳ ಮೂಲದವರಾಗಿದ್ದು, ಏಪ್ರಿಲ್‌ 17ರಂದು ನಡೆದ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಂಧಿಗಳಾಗಿದ್ದಾರೆ.

ಮೇಲಿನ ಮಹಡಿಯ ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನೂ ಕೊಲೆ ಮಾಡುವ ಸಾಧ್ಯತೆಯಿತ್ತು ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ.

ಶ್ವಾನದಳ, ಫಾರೆನ್ಸಿಕ್‌ ತಂಡಗಳು ಆಗಮಿಸಿದ್ದು, ಮನೆಯ ಇಂಚಿಂಚೂ ಪರಿಶೀಲನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೇಲ್ನೋಟಕ್ಕೆ ದರೋಡೆಗೆ ಬಂದ ತಂಡ ನಡೆಸಿರುವ ಕೃತ್ಯದಂತೆ ಕಂಡುಬಂದಿದ್ದರೂ, ಪ್ರಕರಣದ ಹಲವು ಮಗ್ಗಲುಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಹಾಗೂ ಹೀಟ್‌ ವೇವ್‌ (Heat wave) ಪರಿಸ್ಥಿತಿಗಳು ಮೇಲುಗೈ ಸಾಧಿಸಿವೆ. ಈ ವಾರವೆಲ್ಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಒಣ ಹವೆ (Dry Weather) ಮುಂದುವರಿಯಲಿದ್ದು, ತಾಪಮಾನ ಏರಿಕೆ ಆಗಲಿದೆ. ಶಾಖದ ಹೊಡೆತಕ್ಕೆ ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೊ ಅಲರ್ಟ್‌ ನೀಡಿದೆ. ಇದರೊಟ್ಟಿಗೆ ಆರೋಗ್ಯ ಕಾಳಜಿ ವಹಿಸುವಂತೆ ಜನರಿಗೆ ಸಲಹೆ ಸೂಚನೆಗಳನ್ನು ನೀಡಲಾಗಿದೆ.

ಬಿಸಿಗಾಳಿ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ಇದನ್ನೂ ಓದಿ: Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ರೆಡ್ ಮತ್ತು ಆರೆಂಜ್‌, ಯೆಲ್ಲೋ ಅಲರ್ಟ್ ಇರುವ ಪ್ರದೇಶಗಳಿವು

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಬೆಂಗಳೂರಲ್ಲಿ ತಾಪಮಾನ ಹೆಚ್ಚಳ

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ. ತಾಪಮಾನ ಏರಿಕೆಯು ಜನರನ್ನು ಕಂಗಾಲು ಮಾಡಿದೆ. ಇದೇ ವಾತಾವರಣವು ಈ ಪೂರ್ತಿ ಮುಂದುವರಿಯಲಿದೆ.

ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

ರಾಯಚೂರು: ಬಿಸಿಲಿನ ತಾಪ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ. ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದು ಜಸ್ಟ್‌ ಸ್ಯಾಂಪಲ್‌ ಇನ್ನೂ ತಾಪಮಾನ (Temperature Warning ) ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಮನೆಯಲ್ಲಿ, ಆಫೀಸ್‌ನಲ್ಲಿ ಎಸಿ ಹಾಕಿಕೊಂಡು ಕುಳಿತುಕೊಳ್ಳುವವರೂ ಕೂಡ ಈ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ. ಉರಿಯುತ್ತಿರುವ ಸೂರ್ಯನ ಶಾಖಕ್ಕೆ (Heat wave) ಸ್ವಲ್ಪ ಹೊತ್ತು ಮೈಒಡ್ಡಿದ್ರೆ ಸಾಕು ಸುಟ್ಟು ಹೋಗುವಷ್ಟು ತೀವ್ರತೆ ಇದೆ. ಸದ್ಯ ಈ ಉರಿ ಬಿಸಿಲಿನಲ್ಲೇ ರಾಯಚೂರು ಮಂದಿ ಪ್ರಯೋಗವನ್ನು ಮಾಡಿದ್ದಾರೆ. ಬೆಂಕಿ ಇಲ್ಲದೆ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ತಿಂದಿದ್ದಾರೆ.

ಜನರು ಈಗಾಗಲೇ ಬಿಸಿಲಿನ ಶಾಖದಿಂದ ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಗೆ ಬರಲು ಆಗದಷ್ಟು ತಾಪಮಾನ ಹೆಚ್ಚಿದೆ. ಆದರೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಯುವಕರು ಪ್ರಯೋಗ ಮಾಡಿದ್ದಾರೆ. ಬಿಸಿಲಿನಿಂದಲೇ ಮೊಟ್ಟೆಯ ಆಮ್ಲೆಟ್ ಮಾಡಿದ್ದಾರೆ.

ಬಿಸಿಲು ಅದ್ಯಾವ ಪರಿ ಇದೆ ಎಂಬ ಕುತೂಹಲಕ್ಕಾಗಿ ಬೆಂಕಿ ಇಲ್ಲದೆ ಬಿಸಿಲಿನಲ್ಲಿ ಒಂದೂವರೆ ಗಂಟೆವರೆಗೆ ಕಬ್ಬಿಣದ ತವಾ ಇಟ್ಟಿದ್ದಾರೆ. ಅದು ಕಾದ ನಂತರ ಮೊಟ್ಟೆ ಒಡೆದು ಆಮ್ಲೆಟ್ ತಯಾರಿಸಿ ತಿಂದಿದ್ದಾರೆ. ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಪ್ರತಿ ದಿನ 44 ರಿಂದ 45 ಡಿಗ್ರಿ ಸೆಲ್ಸಿಯಸ್‍ ಗರಿಷ್ಠ ಉಷ್ಠಾಂಶ ದಾಖಲಾಗುತ್ತಿದೆ.

ಇದನ್ನೂ ಓದಿ: Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವಿದ್ಯುತ್‌ ಕಂಬದ ಲೈನ್‌ಗಳಲ್ಲಿ ಶಾರ್ಟ್‌ ಸರ್ಕ್ಯೂಟ್‌

ಇತ್ತ ರಾಯಚೂರಿನಲ್ಲಿ ದಿನೇದಿನೆ ಬಿಸಿಲು ಹೆಚ್ಚಳವಾಗುತ್ತಿದ್ದು, ಏರ್ ಕೂಲರ್ ಮತ್ತು ಎಸಿ ಬಳಕೆ ಅಧಿಕವಾಗಿದೆ. ರಾಯಚೂರು ನಗರದ ಗಾಂಧಿ ಚೌಕ್ ಬಳಿಯ ಖಾಸಗಿ ಆಸ್ಪತ್ರೆ ಪಕ್ಕದಲ್ಲಿ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದೆ.

ವಿದ್ಯುತ್ ಕಂಬದಲ್ಲಿದ್ದ ಲೈನ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿನಿಮಾ ಸ್ಟೈಲ್‌ನಲ್ಲಿ ಸ್ಪಾರ್ಕ್ ಉಂಟಾಗಿತ್ತು. ಕೆಲ ಹೊತ್ತು ಸ್ಪಾರ್ಕ್ ನೋಡಿದ ಜನರು ಗಾಬರಿ ಆದರು. ಸದರ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಯಚೂರು

Temperature Warning : ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

Heat wave : ಹೊರಗೆ ಕಾಲಿಡಲು ಆಗದಷ್ಟು ವಾತಾವರಣ ಕಾದ ಕೆಂಡವಾಗುತ್ತಿದೆ. ಬಿಸಿಲಿನ ಶಾಖಕ್ಕೆ (Temperature Warning) ರಾಯಚೂರು ಯುವಕರು ಬೆಂಕಿ ಇಲ್ಲದೆ ಮೊಟ್ಟೆಯಿಂದ ಆಮ್ಲೆಟ್​ ಮಾಡಿ ತಿಂದಿದ್ದಾರೆ. ಮತ್ತೊಂದು ಕಡೆ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ.

VISTARANEWS.COM


on

By

Temperature Warning
Koo

ರಾಯಚೂರು: ಬಿಸಿಲಿನ ತಾಪ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ. ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದು ಜಸ್ಟ್‌ ಸ್ಯಾಂಪಲ್‌ ಇನ್ನೂ ತಾಪಮಾನ (Temperature Warning ) ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಮನೆಯಲ್ಲಿ, ಆಫೀಸ್‌ನಲ್ಲಿ ಎಸಿ ಹಾಕಿಕೊಂಡು ಕುಳಿತುಕೊಳ್ಳುವವರೂ ಕೂಡ ಈ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ. ಉರಿಯುತ್ತಿರುವ ಸೂರ್ಯನ ಶಾಖಕ್ಕೆ (Heat wave) ಸ್ವಲ್ಪ ಹೊತ್ತು ಮೈಒಡ್ಡಿದ್ರೆ ಸಾಕು ಸುಟ್ಟು ಹೋಗುವಷ್ಟು ತೀವ್ರತೆ ಇದೆ. ಸದ್ಯ ಈ ಉರಿ ಬಿಸಿಲಿನಲ್ಲೇ ರಾಯಚೂರು ಮಂದಿ ಪ್ರಯೋಗವನ್ನು ಮಾಡಿದ್ದಾರೆ. ಬೆಂಕಿ ಇಲ್ಲದೆ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ತಿಂದಿದ್ದಾರೆ.

ಜನರು ಈಗಾಗಲೇ ಬಿಸಿಲಿನ ಶಾಖದಿಂದ ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಗೆ ಬರಲು ಆಗದಷ್ಟು ತಾಪಮಾನ ಹೆಚ್ಚಿದೆ. ಆದರೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಯುವಕರು ಪ್ರಯೋಗ ಮಾಡಿದ್ದಾರೆ. ಬಿಸಿಲಿನಿಂದಲೇ ಮೊಟ್ಟೆಯ ಆಮ್ಲೆಟ್ ಮಾಡಿದ್ದಾರೆ.

ಬಿಸಿಲು ಅದ್ಯಾವ ಪರಿ ಇದೆ ಎಂಬ ಕುತೂಹಲಕ್ಕಾಗಿ ಬೆಂಕಿ ಇಲ್ಲದೆ ಬಿಸಿಲಿನಲ್ಲಿ ಒಂದೂವರೆ ಗಂಟೆವರೆಗೆ ಕಬ್ಬಿಣದ ತವಾ ಇಟ್ಟಿದ್ದಾರೆ. ಅದು ಕಾದ ನಂತರ ಮೊಟ್ಟೆ ಒಡೆದು ಆಮ್ಲೆಟ್ ತಯಾರಿಸಿ ತಿಂದಿದ್ದಾರೆ. ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಪ್ರತಿ ದಿನ 44 ರಿಂದ 45 ಡಿಗ್ರಿ ಸೆಲ್ಸಿಯಸ್‍ ಗರಿಷ್ಠ ಉಷ್ಠಾಂಶ ದಾಖಲಾಗುತ್ತಿದೆ.

ಇದನ್ನೂ ಓದಿ: Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವಿದ್ಯುತ್‌ ಕಂಬದ ಲೈನ್‌ಗಳಲ್ಲಿ ಶಾರ್ಟ್‌ ಸರ್ಕ್ಯೂಟ್‌

ಇತ್ತ ರಾಯಚೂರಿನಲ್ಲಿ ದಿನೇದಿನೆ ಬಿಸಿಲು ಹೆಚ್ಚಳವಾಗುತ್ತಿದ್ದು, ಏರ್ ಕೂಲರ್ ಮತ್ತು ಎಸಿ ಬಳಕೆ ಅಧಿಕವಾಗಿದೆ. ರಾಯಚೂರು ನಗರದ ಗಾಂಧಿ ಚೌಕ್ ಬಳಿಯ ಖಾಸಗಿ ಆಸ್ಪತ್ರೆ ಪಕ್ಕದಲ್ಲಿ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದೆ.

ವಿದ್ಯುತ್ ಕಂಬದಲ್ಲಿದ್ದ ಲೈನ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿನಿಮಾ ಸ್ಟೈಲ್‌ನಲ್ಲಿ ಸ್ಪಾರ್ಕ್ ಉಂಟಾಗಿತ್ತು. ಕೆಲ ಹೊತ್ತು ಸ್ಪಾರ್ಕ್ ನೋಡಿದ ಜನರು ಗಾಬರಿ ಆದರು. ಸದರ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Karnataka Weather Forecast : ಹಗಲು ಹೊತ್ತು ಬಿಸಿ ಗಾಳಿ ಬೀಸಿದರೆ, ಮಧ್ಯಾಹ್ನದಂದು ಉರಿ ಬಿಸಿಲು ನೆತ್ತಿ ಸುಡುಲಿದೆ. ರಾತ್ರಿಯಾದರೆ ವಾತಾವರಣವು ಬೆಚ್ಚಗೆ ಇರಲಿದೆ. ಈ ಮಧ್ಯೆ ಕೆಲವೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Dry Weather) ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಇದ್ದರೂ, ಕೆಲವೆಡೆ ಮಳೆಯ (Rain News) ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಏ.2ರಂದು ಮಲೆನಾಡಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರಿನ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಮುಖ್ಯವಾಗಿ ಶುಭ್ರ ಆಕಾಶವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರೆಡ್ ಅಲರ್ಟ್

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಮೇ 5ರವರೆಗೆ ಈ ಜಿಲ್ಲೆಗಳಲ್ಲಿ ತಾಪಮಾನ ವಿಪರೀತವಾಗಿ ಇರಲಿದೆ. ಉರಿ ಸೆಕೆಯ ವಾತಾವರಣ ಇರಲಿದೆ.

ಆರೆಂಜ್ ಅಲರ್ಟ್

ಇನ್ನೂ ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ 5 ದಿನಗಳ ಕಾಲ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 5 ರವರೆಗೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ‌Prajwal Revanna Case: ಪ್ರಜ್ವಲ್ ಕಾಂಗ್ರೆಸ್‌ ಬೆಂಬಲಿತ ಸಂಸದ; ನಿಮಗಾಗದಿದ್ದರೆ ನಮಗೆ ಅಧಿಕಾರ ಕೊಡಿ, 24 ಗಂಟೆಯಲ್ಲಿ ಹಿಡಿಯುತ್ತೇವೆ: ಅಶೋಕ್

Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದಲ್ಲ, ಇನ್ನೂ ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಈ ಘೋರ ಬಿಸಿಲಿನಲ್ಲಿ ಸ್ಮೃತಿ ತಪ್ಪಿದವರ ಸುದ್ದಿಗಳು ಅಲ್ಲಲ್ಲಿ ಕೇಳುತ್ತಿವೆ. ಬಿಸಿಲಾಘಾತಕ್ಕೆ ಜೀವ ತೆತ್ತವರ ವಿಷಯಗಳೂ ಕೇಳಿಬರುತ್ತಿವೆ. ಛತ್ರಿ ಹಿಡಿದೇ ಹೋಗುತ್ತೇವೆ ಹೊರಗೆ, ಚೆನ್ನಾಗಿ ನೀರು ಕುಡಿಯುತ್ತೇವೆ ನಾವು. ನಮಗೇನು ಬಿಸಿಲಿನ ಭಯವಿಲ್ಲ ಎನ್ನುವವರಿದ್ದಾರೆ. ವಿಷಯ ಹಾಗಲ್ಲ, ಬಿಸಿಲ ದಿನಗಳಲ್ಲಿ ಆರೋಗ್ಯದ ಕಾಳಜಿಯನ್ನು ಎಷ್ಟು ಮಾಡಿದರೂ ಸಾಲದು. ಒಮ್ಮೆ ಶಾಖದ ಆಘಾತಕ್ಕೆ ಅಥವಾ ನಿರ್ಜಲೀಕರಣಕ್ಕೆ ತುತ್ತಾದರೆ, ಚೇತರಿಸಿಕೊಳ್ಳಲು ನಾಲ್ಕಾರು ದಿನಗಳಾದರೂ ಬೇಕಾಗುತ್ತದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದಿದ್ದರೆ, ಜೀವಕ್ಕೆ ಅಪಾಯ ತಪ್ಪಿದ್ದಲ್ಲ. ಹಾಗಾದರೆ ಇವುಗಳಿಂದ (Summer Tips) ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲವೇ?

Dry weather Summer Heat

ಏಕೆ ಹೀಗಾಗುತ್ತದೆ?

ಮೊದಲಿಗೆ, ಬಿಸಿಲಿಗೆ ಎಚ್ಚರ ತಪ್ಪುವುದೇಕೆ ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಹೊರಗಿನ ವಾತಾವರಣದ ಉಷ್ಣತೆಯನ್ನು ಆಧರಿಸಿ, ನಮ್ಮ ದೇಹ ತನ್ನ ಉಷ್ಣತೆಯನ್ನು ಮಾರ್ಪಾಡು ಮಾಡಿಕೊಳ್ಳುತ್ತದೆ. ಹೊರಗಿನ ತಾಪಮಾನ ತೀವ್ರವಾಗಿ ಏರಿಕೆಯಾದಾಗ, ದೇಹದೊಳಗಿನ ಉಷ್ಣತೆಯನ್ನು ತಗ್ಗಿಸುವುದಕ್ಕೆ ಶರೀರ ಬೆವರಲು ಪ್ರಾರಂಭಿಸುತ್ತದೆ. ಇದರಿಂದಲೇ ದೇಹ ತಣ್ಣಗಾಗಬೇಕು, ಆಂತರಿಕ ಉಷ್ಣತೆ ನಿಯಂತ್ರಣದಲ್ಲಿ ಇರಬೇಕು. ಆದರೆ ಈ ಎಲ್ಲ ತಂತ್ರಗಳು ಕೈಕೊಟ್ಟಾಗ, ಸಾಕಾಗದೆ ಇದ್ದಾಗ ಅಥವಾ ಅತಿಯಾಗಿ ಬೆವರಿ ದೇಹದಲ್ಲಿ ನೀರಿನಂಶ ಕಡಿಮೆ ಆದಾಗ, ಎಚ್ಚರ ತಪ್ಪುತ್ತದೆ. ಇದರಿಂದ ಮೆದುಳಿಗೆ ಅಗತ್ಯವಾದಷ್ಟು ರಕ್ತಸಂಚಾರ ಆಗದಿದ್ದರೆ, ಪಾರ್ಶ್ವವಾಯು ಸಂಭವಿಸಿ ಜೀವಹಾನಿಯೂ ಆಗಬಹುದು.

ಮಾನವ ಶರೀರ ತನ್ನಷ್ಟಕ್ಕೆ ತಡೆದುಕೊಳ್ಳಲು ಸಾಧ್ಯವಾಗುವ ಗರಿಷ್ಟ ಉಷ್ಣತೆಯೆಂದರೆ ೪೨.೩ ಡಿಗ್ರಿ ಸೆ. ಇದಿಷ್ಟು ತಡೆಯುವುದೂ ಸುಲಭವಿಲ್ಲ. ಇನ್ನು ಇದಕ್ಕಿಂತಲೂ ಹೆಚ್ಚಿನ ತಾಪಮಾನವನ್ನು ಸಹಿಸಿಕೊಳ್ಳಲು ಏನೆಲ್ಲ ಉಪಚಾರ ಸಾಧ್ಯವೋ ಅದನ್ನು ನಮಗೆ ನಾವೇ ಮಾಡಿಕೊಳ್ಳಬೇಕು. ಸಿಕ್ಕಾಪಟ್ಟೆ ನೀರು ಕುಡಿಯುವುದು, ಎಲೆಕ್ಟ್ರೋಲೈಟ್‌ ಮರುಪೂರಣ ಮಾಡುವುದು, ಚೆನ್ನಾಗಿ ಗಾಳಿಯಾಡುವ ವಾತಾವರಣದಲ್ಲಿರುವುದು- ಇಂಥವೆಲ್ಲ ನಾವು ಅಗತ್ಯವಾಗಿ ಮಾಡಬೇಕಾದ ಕೆಲಸಗಳು.

ಉಷ್ಣತೆಗೆ ಮಾತ್ರವಲ್ಲ

ತೀವ್ರ ತಾಪಮಾನಗಳಿಗೆ ಎಚ್ಚರ ತಪ್ಪುವುದು ಬಿಸಿ ಹೆಚ್ಚಾದಾಗ ಮಾತ್ರವಲ್ಲ, ತೀವ್ರ ಚಳಿಯಲ್ಲೂ ಆಗುತ್ತದೆ. ಈ ಎರಡೂ ಅತಿರೇಕದ ತಾಪಮಾನಗಳಲ್ಲಿ ದೇಹದ ಉಷ್ಣತಾ-ನಿಯಂತ್ರಕ ವ್ಯವಸ್ಥೆ ಕೈಕೊಡಬಹುದು. ಬಿಸಿ ಹೆಚ್ಚಾದಾಗ ಮೆದುಳಿಗೆ ರಕ್ತಸಂಚಾರ ಸರಾಗ ಆಗದಿರುವ ಸಂಭವ ಇರುವದಂತೆಯೇ, ಚಳಿ ಹೆಚ್ಚಾದಾಗಲೂ ಆಗುತ್ತದೆ. ಹೊರಗಿನ ಚಳಿ ತೀವ್ರವಾಗಿ ಹೆಚ್ಚಾದರೆ, ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳುವುದಕ್ಕೆ ರಕ್ತ ನಾಳಗಳು ಸಂಕೋಚಗೊಳ್ಳುತ್ತವೆ. ಹೀಗೆ ಸಂಕೋಚಗೊಳ್ಳುವುದು ಅತಿಯಾದರೆ ಆಗಲೂ ಮೆದುಳಿಗೆ ಬೇಕಾದಷ್ಟು ರಕ್ತಸಂಚಾರ ಆಗದೆ ಜ್ಞಾನ ತಪ್ಪಬಹುದು.

Summer Fashion

ತಪ್ಪಿಸಿಕೊಳ್ಳಲಾಗದೆ?

ಖಂಡಿತ ಸಾಧ್ಯವಿದೆ. ಮೊದಲಿಗೆ, 40 ಡಿ.ಸೆ. ಉಷ್ಣತೆಯನ್ನು ತಲುಪಿದಾಗ ಮನೆಯಿಂದ ಹೊರಗೆ ಹೋಗಬೇಡಿ. ಹೋಗುವುದು ಅನಿವಾರ್ಯವಾದರೆ, ಸಡಿಲವಾದ ಬಿಳಿ ಅಥವಾ ತಿಳಿ ಬಣ್ಣದ ಹತ್ತಿಯ ಬಟ್ಟೆಗಳನ್ನೇ ಧರಿಸಿ. ತಲೆಗೆ ಟೋಪಿ, ಛತ್ರಿಗಳಂಥವು ಇದ್ದರೆ ಒಳ್ಳೆಯದು. ನಿಲ್ಲಿಸಿದ ಕಾರಿನೊಳಗೆ ಯಾರನ್ನೂ ಬಿಡಬೇಡಿ. ಈ ಸೆಕೆಯಲ್ಲಿ ದಿನಕ್ಕೆ ಐದು ಲೀಟರ್‌ ನೀರು ಅಥವಾ ಪೇಯಗಳನ್ನು ಕುಡಿಯುವ ಗುರಿ ಇರಿಸಿಕೊಳ್ಳಿ. ಆಲ್ಕೋಹಾಲ್‌ ಮತ್ತು ಕೆಫೇನ್‌ ಸೇವನೆಯ ಮೇಲೆ ಕಡಿವಾಣ ಅಗತ್ಯ. ಇಲ್ಲದಿದ್ದರೆ ದೇಹ ಬೇಗನೇ ನಿರ್ಜಲೀಕರಣಕ್ಕೆ ತುತ್ತಾಗುತ್ತದೆ. ಜೊತೆಗೆ, ಸೆಕೆಯಲ್ಲಿ ದೇಹವನ್ನು ತಂಪಾಗಿಸುವ ಶಾರೀರಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ತಲೆನೋವು, ಅತಿಯಾಗಿ ಬೆವರುವುದು, ಬಾಯಿ ಒಣಗುವುದು, ತೀರದ ದಾಹ, ಮೈಯೆಲ್ಲ ಬಿಸಿಯಾದ ಅನುಭವಗಳು ಆದರೆ ಜಾಗ್ರತೆ ಮಾಡಿ. ತಕ್ಷಣವೇ ದೇಹವನ್ನು ತಂಪಾಗಿಸುವ ಬಗ್ಗೆ ಕ್ರಮ ಕೈಗೊಳ್ಳಿ. ತಂಪಾದ ಬಟ್ಟೆಯಿಂದ ಇಡೀ ದೇಹವನ್ನು ಒರೆಸಬಹುದು. ಒಆರೆಸ್‌, ಎಳನೀರು ಮುಂತಾದ ಎಲೆಕ್ಟ್ರೋಲೈಟಿಕ್‌ ಪೇಯಗಳು ಬೇಕಾಗುತ್ತವೆ. ಕೂಲರ್‌, ಎಸಿಯಂಥ ಉಪಕರಣಗಳ ಮೂಲಕ ಮನೆಯ ವಾತಾವರಣವನ್ನು ತಂಪಾಗಿಸಲು ಪ್ರಯತ್ನಿಸಿ. ಈ ಹೊತ್ತಿನಲ್ಲಿ ಮನೆಯಿಂದ ಹೊರಗಿದ್ದರೆ, ತಂಪಾದ ನೆರಳಿನಂಥ ಜಾಗಕ್ಕೆ ಹೋಗಿ. ಬಿಸಿಲಿನ ಆಘಾತ ತಾಗಿದಾಗ ತ್ವರಿತವಾಗಿ ಕ್ರಮ ಕೈಗೊಳ್ಳದಿದ್ದರೆ ಜೀವಕ್ಕೇ ಎರವಾಗುತ್ತದೆ, ನೆನಪಿರಲಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka weather Forecast : ಮಳೆಗಾಗಿ (Rain News) ಕಸರತ್ತು ಶುರುವಾಗಿದ್ದು ಮೈಸೂರಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಗಿದೆ. ತೊಪ್ಪೆಯಾಗುವಂತೆ ಮಳೆ ಹೊಯ್ಯಲೆಂದು ಕಪ್ಪೆಗಳ ಕಟ್ಟಿಕೊಂಡು ಬಂದು ಗ್ರಾಮಸ್ಥರು ತಾಳಿ ಕಟ್ಟಿಸಿದ್ದಾರೆ. ಇತ್ತ 6 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಪ್ಪಳಿಸಲಿದ್ದು, ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ.

VISTARANEWS.COM


on

By

karnataka weather Forecast
Koo

ಮೈಸೂರು/ಬೆಂಗಳೂರು: ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ದೇವರಲ್ಲಿ ಮೊರೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದೊಂದು ಕಡೆ ಒಂದೊಂದು ಸಂಪ್ರದಾಯಗಳೂ ಚಾಲ್ತಿಯಲ್ಲಿವೆ. ಈಗ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ಮಳೆ ಬಾರದಿರುವ ಸಂಕಟದ (Karnataka Weather Forecast) ಮಧ್ಯೆ ಮಳೆ ಬರಲಿ (Rain News), ವರುಣ ದೇವ ಸಂತುಷ್ಟಗೊಳ್ಳಲಿ, ದಿನವೂ ಮೈ ತೊಪ್ಪೆಯಾಗುವಷ್ಟು ಮಳೆ ಸುರಿಯಲಿ, ಕೃಷಿ ಚಟುವಟಿಕೆಗೆ ತೊಂದರೆಯಾಗದಿರಲಿ, ಭೂತಾಯಿಗೆ ಬೇಕಾಗುವಷ್ಟು ಮಳೆ ಸುರಿಯಲಿ, ಅಂತರ್ಜಲ ಪೂರ್ಣಗೊಳ್ಳಲಿ, ನದಿ, ಹಳ್ಳಕೊಳ್ಳಗಳು ತುಂಬಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಬಿಸಿಲಿನ ಬೇಗೆಗೆ ತತ್ತರಿಸಿದ ಜನರು ಮಳೆ ಸುರಿಯುವಂತೆ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದರು. ಗ್ರಾಮದ ಬೀದಿ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ತಮಟೆ ಬಾರಿಸಿದ್ದಾರೆ. ಹುಯ್ಯೋ ಹುಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಮುಂದುವರಿಯಲಿದೆ ಒಣಹವೆ

ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2-3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್‌ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ.

ರಾತ್ರಿ ಬೆಚ್ಚನೆಯ ವಾತಾವರಣ

ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮೇ 5ರಂದು ಉತ್ತರ ಕನ್ನಡ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka Weather Forecast
ಮಳೆ2 mins ago

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ

Chandrayaan 3
ದೇಶ13 mins ago

Chandrayaan 3: ಇತಿಹಾಸ ಸೃಷ್ಟಿಸಿ ಚಂದ್ರನ ಮಡಿಲಲ್ಲಿ ಮಲಗಿದ ವಿಕ್ರಮ್‌ ಲ್ಯಾಂಡರ್‌, ಪ್ರಜ್ಞಾನ್‌ ರೋವರ್; ಇಲ್ಲಿವೆ Photos

Amitabh Bachchan vanity van ambition was to pee by Vidhu Vinod Chopra
ಬಾಲಿವುಡ್14 mins ago

Amitabh Bachchan: ಅಮಿತಾಭ್‌ ಬಚ್ಚನ್‌ ವ್ಯಾನ್‌ನಲ್ಲಿ ಸುಸ್ಸು ಮಾಡೋದೇ ನನ್ನ ಗುರಿ ಎಂದ ಖ್ಯಾತ ನಿರ್ದೇಶಕ!

Prajwal Revanna Case Minister Zameer Ahmed close aide makes Prajwal obscene video pen drive viral
ರಾಜಕೀಯ19 mins ago

Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

T20 World Cup
ಕ್ರೀಡೆ24 mins ago

T20 World Cup: ರೋಹಿತ್​, ಅಗರ್ಕರ್​ ಜಂಟಿ ಸುದ್ದಿಗೋಷ್ಠಿಗೆ ಕ್ಷಣಗಣನೆ

Deepak Chahar
ಪ್ರಮುಖ ಸುದ್ದಿ25 mins ago

Deepak Chahar : ಸಹೋದರನನ್ನು ಗೇಲಿ ಮಾಡಿದವರಿಗೆ ತಿರುಗೇಟು ಕೊಟ್ಟ ದೀಪಕ್ ಚಾಹರ್​ ಸಹೋದರಿ!

Viral video
ವೈರಲ್ ನ್ಯೂಸ್28 mins ago

Viral Video:ಶಾಕಿಂಗ್‌ ವಿಡಿಯೋ! ಮಗನನ್ನು ಟ್ರೆಡ್‌ಮಿಲ್‌ನಲ್ಲಿ ಓಡಿಸಿ ಪ್ರಾಣವನ್ನೇ ತೆಗೆದ ಪಾಪಿ ತಂದೆ

assault case in Bengaluru
ಬೆಂಗಳೂರು36 mins ago

Assault Case : ವಿವಾಹಿತೆ ಹಿಂದೆ ಬಿದ್ದ ಪಾಗಲ್‌ ಪ್ರೇಮಿ; ಮದುವೆ ನಿರಾಕರಿಸಿದ್ದಕ್ಕೆ ಮನೆಗೆ ಇಟ್ಟ ಬೆಂಕಿ

Vote Jihad
ದೇಶ48 mins ago

Vote Jihad: ವೋಟ್‌ ಜಿಹಾದ್‌ಗೆ ಕರೆ ನೀಡಿದ್ದು ಇಂಡಿಯಾ ಒಕ್ಕೂಟದ ಮನಸ್ಥಿತಿಗೆ ಕನ್ನಡಿ ಎಂದ ಮೋದಿ

Prajwal Revanna Case PM Modi defends MP accused of rape says Rahul Gandhi
Lok Sabha Election 202454 mins ago

Prajwal Revanna Case: ಮಹಾನ್‌ ರೇಪಿಸ್ಟ್‌ಗೆ ಮೋದಿಯಿಂದ ರಕ್ಷಣೆ; ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ರಾಹುಲ್‌ ಗಾಂಧಿ ಗುಡುಗು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌