Raichur : ನಡುಗಡ್ಡೆಯಲ್ಲಿ ಸಿಲುಕಿದ್ದ ರೋಗಿಗೆ ಔಷಧಿ ತಲುಪಿಸಿದ ವೈದ್ಯರು Vistara News
Connect with us

ಮಳೆ

Raichur : ನಡುಗಡ್ಡೆಯಲ್ಲಿ ಸಿಲುಕಿದ್ದ ರೋಗಿಗೆ ಔಷಧಿ ತಲುಪಿಸಿದ ವೈದ್ಯರು 

VISTARANEWS.COM


on

ಉಡುಪಿ

Karnataka Rain: ಮುಂದಿನ 24 ಗಂಟೆಯಲ್ಲಿ ಉಡುಪಿ, ಬೆಂಗಳೂರು, ಬೀದರ್‌ನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Karnataka Rain: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (weather report) ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಸಾಧ್ಯತೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Edited by

heavy rainfall likely in Udupi Bengaluru and Bidar in next 24 hours
Koo

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು (Rain alert) ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ತುಮಕೂರಿನಲ್ಲೂ ಮಳೆಯ ಅಬ್ಬರ ಇರಲಿದೆ.

ಬೆಂಗಳೂರು ನಗರದಲ್ಲಿ ಭಾಗಶ: ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆ ಪ್ರಮಾಣ ಹೀಗಿದೆ?

ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಶನಿವಾರ ಮಳೆಯಾಗಿದೆ. ಬೀದರ್‌ನ ಔರಾದ್, ಕೋಲಾರದ ಚಿಂತಾಮಣಿ, ರಾಯಲ್ಪಾಡು ತಲಾ 4 ಸೆ.ಮೀ ಮಳೆ ಆಗಿದ್ದು, ಗೇರುಸೊಪ್ಪ, ಚಿಂಚೋಳಿ, ಮಂತಾಲ, ಮನ್ನಾಳಿ, ಸಿಂದಗಿ, ಸೈದಾಪುರದಲ್ಲಿ ತಲಾ 2 ಸೆ.ಮೀ ಮಳೆಯಾಗಿದೆ.

ಬ್ರಹ್ಮಾವರ, ಬೀದರ್, ಹುಮನಾಬಾದ್, ಅಫಜಲಪುರ, ಸುಲೇಪೇಟೆ, ರಾಯಚೂರು, ಮಧುಗಿರಿ, ರಾಮನಗರ, ವೈ.ಎನ್. ಹೊಸಕೋಟೆ, ಶಿರಾ, ಶೃಂಗೇರಿ, ಕುಡುತಿನಿ, ಹರದನಹಳ್ಳಿಯಲ್ಲಿ ತಲಾ 1 ಸೆ.ಮೀ ಮಳೆಯಾಗಿದೆ. ಇನ್ನು ಪಣಂಬೂರು ಹಾಗೂ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 35.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದರೆ, ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ 14.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿಯಾಗಿದ್ದ. ಉಡುಪಿಯಲ್ಲಿ ಬೆಳಗ್ಗಿನಿಂದಲೇ ತುಂತುರು ಮಳೆ ಶುರುವಾಗಿದ್ದರಿಂದ ಜನರ ಕೆಲಸ ಕಾರ್ಯಗಳಿಗೆ ಕಿರಿಕಿರಿ ಉಂಟಾಗಿತ್ತು. ಇನ್ನು ಕಳೆದ ಒಂದು ವಾರದಿಂದ ತಾಪಮಾನ 35 ರಿಂದ 37 ಡಿಗ್ರಿವರೆಗೂ ಹೆಚ್ಚಾಗಿತ್ತು. ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿ ಜನರಿಗೆ ತುಂತುರು ಮಳೆಯಿಂದ ವಾತಾವರಣ ತಂಪಾಗಿತ್ತು. ಮುಂದಿನ ಒಂದು ವಾರಗಳ ಕಾಲ ಸಾಧಾರಣ ಮಳೆ ಆಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.

ಆಲಿಕಲ್ಲು ಮಳೆಗೆ ಕಲ್ಲಂಗಡಿ ಹಣ್ಣು ನಾಶ

ಆಲಿಕಲ್ಲು ಮಳೆಗೆ ಕಲ್ಲಂಗಡಿ ಬೆಳೆ ನಾಶ

ಕಲಬುರಗಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಮಳೆ ಅವಾಂತರದಿಂದ ಲಕ್ಷಾಂತರ ರೂಪಾಯಿ ಕಲ್ಲಂಗಡಿ ಬೆಳೆ ನಾಶವಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಅಲ್ಲಪೂರ್ ಗ್ರಾಮದಲ್ಲಿ ಆಲಿಕಲ್ಲು ಮಳೆಯಿಂದಾಗಿ ಶರಣಗೌಡ ಪಾಟೀಲ ಎಂಬುವವರ 3.5 ಎಕರೆಯಲ್ಲಿ ಬೆಳೆದಿದ್ದ ಕಲ್ಲಂಗಡಿ ಬೆಳೆ ಹಾಳಾಗಿದೆ. 5 ಲಕ್ಷ ರೂ. ಖರ್ಚು ಮಾಡಿ ಬೆಳೆ ಬೆಳೆಯಲಾಗಿತ್ತು, 2 ದಿನದಲ್ಲಿ ಕಟಾವು ಮಾಡಲು ಬಂದಿದ್ದ ಕಲ್ಲಂಗಡಿ ಹಣ್ಣುಗಳು ಹಾಳಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಅವೈಜ್ಞಾನಿಕ ರಸ್ತೆ ಕಾಮಗಾರಿ

ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಯಿಂದ ಮಳೆ ನೀರು ರೈತರ ಹೊಲಕ್ಕೆ ನುಗ್ಗಿದೆ. ಪರಿಣಾಮ ಹತ್ತಾರು ಎಕರೆಗಳಷ್ಟು ಜಮೀನಿನಲ್ಲಿ ಬೆಳೆಸಿದ್ದ ಜೋಳ ಮುಳುಗಿ ನಷ್ಟವಾಗಿದೆ. ಬೀದರ್ ತಾಲೂಕಿನ ಮರಕಲ್ ಗ್ರಾಮಸ್ಥರಿಂದ ಗುತ್ತಿಗೆ ದಾರನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಟಾವಿಗೆ ಬಂದಿದ್ದ ಜೋಳ ನೀರು ಪಾಲಾಗಿದೆ ಎಂದು ರಸ್ತೆ ತಡೆದು ಮರಕಲ್ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

heavy rainfall likely in Udupi Bengaluru and Bidar in next 24 hours
ಅವೈಜ್ಞಾನಿಕ ರಸ್ತೆ ಕಾಮಗಾರಿ ಎಫೆಕ್ಟ್‌ ಜಮೀನುಗಳಿಗೆ ನುಗ್ಗಿದ ಮಳೆನೀರು

ಇದನ್ನೂ ಓದಿ: Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಇಂದು ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದವರು ರೈತರ ಬೆಳೆ ಹಾನಿ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಸ್ಥಳೀಯ ಶಾಸಕ ರಹೀಂಖಾನ್ ಭೇಟಿ ನೀಡಿ, ಸೂಕ್ತ ಪರಿಹಾರ ಕೊಡಿಸುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Karnataka Rain: ಸಿಡಿಲು ಬಡಿದು ಕುರಿಗಳು ಬಲಿ; ಶೆಡ್‌ ಕುಸಿದು ಸಾವಿರಾರು ಕೋಳಿಗಳ ಮಾರಣ ಹೋಮ

Karnataka Rain: ಗುಡುಗು ಸಹಿತ ಗಾಳಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿರುವುದು ಮಾತ್ರವಲ್ಲದೆ ಜಾನುವಾರುಗಳ ಪ್ರಾಣಹಾನಿಯೂ ಸಂಭವಿಸಿದೆ. ಶನಿವಾರ ರಾಯಚೂರಲ್ಲಿ ಸಿಡಿಲು ಬಡಿದು ಕುರಿಗಳು ಬಲಿಯಾಗಿದ್ದರೆ, ಹಾಸನದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಶ್ವಾನವೊಂದು ಮೃತಪಟ್ಟಿದೆ. ಇತ್ತ ಬೀದರ್‌ನಲ್ಲಿ ಮಳೆಗೆ ಶೆಡ್‌ ಕುಸಿದು ಸಾವಿರಾರು ಕೋಳಿಗಳು ಮೃತಪಟ್ಟಿವೆ.

VISTARANEWS.COM


on

Edited by

Sheep killed in lightning in Raichur
Koo

ರಾಯಚೂರು/ಹಾಸನ/ಬೀದರ್‌: ರಾಯಚೂರಿನ ದೇವದುರ್ಗ ತಾಲೂಕಿನಲ್ಲಿ ಲಿಂಗದಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಮೂರು ಕುರಿಗಳು ಮೃತಪಟ್ಟಿವೆ. ದೇವದುರ್ಗ ಭಾಗದಲ್ಲಿ ಕಳೆದೆರಡು ದಿನಗಳಿಂದ ಗುಡುಗು ಸಹಿತ ಭಾರಿ ಮಳೆ (Karnataka Rain) ಆಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

Sheep killed in lightning in Raichur
ಸಿಡಿಲಿಗೆ ಬಲಿಯಾಗಿರುವ ಕುರಿಗಳು

ಗ್ರಾಮದ ಬಸವರಾಜ್ ಎಂಬುವವರಿಗೆ ಸೇರಿದ ಮೂರು ಕುರಿಗಳು ಮಳೆ ಹಿನ್ನೆಲೆ ಮರದ ಕೆಳಗೆ ನಿಂತಿದ್ದವು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿವೆ. ವಿಷಯ ತಿಳಿದು ಸ್ಥಳಕ್ಕೆ ದೇವದುರ್ಗದ ಕಂದಾಯ ನಿರೀಕ್ಷಕ ದೇವರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೆ ವೇಳೆ ಬಸವರಾಜ್‌ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.

ಶೆಡ್‌ ಕುಸಿದು 8 ಸಾವಿರಕ್ಕೂ ಅಧಿಕ ಕೋಳಿಗಳ ಮಾರಣ ಹೋಮ

ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಎಂಟು ಸಾವಿರಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೂಡ್ಲಿ ಗ್ರಾಮದಲ್ಲಿ ಮಳೆ ಹಾಗೂ ಗಾಳಿಗೆ ಕೋಳಿ ಸಾಕಾಣಿಕೆಯ ಶೆಡ್‌ ಕುಸಿದಿದೆ. ಪರಿಣಾಮ ಸಾವಿರಾರು ಕೋಳಿಗಳ ಮಾರಣಹೋಮವಾಗಿದೆ.

ಕೂಡ್ಲಿ ಗ್ರಾಮದ ಮದನ್ ರಾವ್ ಪಾಟೀಲ್ ಎಂಬುವರಿಗೆ ಸೇರಿದ ಕೋಳಿ ಫಾರಂ ಕುಸಿದಿದೆ. ಸಾಲಸೋಲ ಮಾಡಿ ಇನ್ನೇನು ಮಾರಾಟಕ್ಕೆ ಬಂದಿದ್ದ ಕೋಳಿಗಳು ಮೃತಪಟ್ಟಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

Sheep killed in lightning in Raichur
ಶ್ವಾನ ಸಾವು

ಹಾಸನದಲ್ಲಿ ಮಳೆಗೆ ತುಂಡಾದ ವಿದ್ಯುತ್‌ ತಂತಿ

ಹಾಸನ ಜಿಲ್ಲೆಯ ವಿವಿಧೆಡೆ ಗಾಳಿ ಸಹಿತ ಭಾರಿ ಮಳೆ ಆಗುತ್ತಿದ್ದು, ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರು ಗ್ರಾಮದಲ್ಲಿ ಭಾರಿ ಗಾಳಿಯಿಂದ ವಿದ್ಯುತ್ ತಂತಿಯೊಂದು ತುಂಡಾಗಿ ಇನ್ನೊಂದು ತಂತಿ ಮೇಲೆ ಬಿದ್ದಿದೆ. ಪರಿಣಾಮ ಶಾರ್ಟ್‌ ಸರ್ಕ್ಯೂಟ್‌ನಿಂದ ಶ್ವಾನವೊಂದು ಮೃತಪಟ್ಟಿರುವ ಘಟನೆ ನಡೆದಿದೆ. ಶಿವು ಎಂಬುವವರು ಸಾಕಿದ್ದ ಶ್ವಾನ ಮೃತಪಟ್ಟಿದೆ. ಸುಮಾರು ಆರಕ್ಕೂ ಹೆಚ್ಚು ಮನೆಯಲ್ಲಿದ್ದ ರೆಫ್ರಿಜರೇಟರ್, ಟಿವಿಗಳಿಗೆ ಹಾನಿ ಆಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸ್ಥಳಕ್ಕೆ ವಿದ್ಯುತ್ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain: ವೀಕೆಂಡ್‌ನಲ್ಲೂ ಇರಲಿದೆ ಮಳೆರಾಯನ ಕಿರಿಕ್‌; ಬೆಂಗಳೂರು ಸೇರಿ 18 ಜಿಲ್ಲೆಗಳಿಗೆ ಮಳೆ ಅಲರ್ಟ್‌

Sheep killed in lightning in Raichur
ಬಿರುಗಾಳಿಗೆ ಜನ ತತ್ತರ

ಬಿರುಗಾಳಿಗೆ ಹೆದರಿ ಓಡಿದ ಜನರು

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮದ ಹಾಸನ-ಮಡಿಕೇರಿ ರಸ್ತೆಯಲ್ಲಿ ಬಿರುಗಾಳಿಯ ರಭಸಕ್ಕೆ ರಸ್ತೆ ಬದಿಯ ಕ್ಯಾಂಟೀನ್‌‌ನ ಮೇಲೆ ಹಾಕಿದ್ದ ಟಾರ್ಪಲ್ ಹಾರಿ ಹೋಗಿದೆ. ಏಕಾಏಕಿ ಜೋರಾಗಿ ಗಾಳಿ ಬೀಸಿದ ಕಾರಣಕ್ಕೆ ಜನರು ಭೀತಿಗೊಂಡು ಓಡಿಹೋಗಿ ಸೂಕ್ತ ಸ್ಥಳದಲ್ಲಿ ರಕ್ಷಣೆ ಪಡೆದುಕೊಂಡರು. ರಸ್ತೆ ಬದಿಯ ಕೆಲವು ಅಂಗಡಿಗಳ ಮುಂದೆ ಇಟ್ಟಿದ್ದ ವಸ್ತುಗಳೆಲ್ಲವೂ ಚೆಲ್ಲಾಪಿಲ್ಲಿ ಆಗಿದ್ದವು. ಹಾರಿ ಹೋಗುತ್ತಿದ್ದ ಗೂಡಂಗಡಿಗಳ ಶೀಟ್‌ಗಳನ್ನು ಹಿಡಿಯಲು ಹರಸಾಹಸ ಪಡಬೇಕಾಯಿತು. ಜೋರು ಗಾಳಿಗೆ ರಸ್ತೆ ಹಾಗೂ ಅಂಗಡಿಗಳು, ಸುತ್ತಮುತ್ತಲಿನ ಮನೆಗಳು ಧೂಳುಮಯವಾಗಿದ್ದವು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Karnataka Rain: ವೀಕೆಂಡ್‌ನಲ್ಲೂ ಇರಲಿದೆ ಮಳೆರಾಯನ ಕಿರಿಕ್‌; ಬೆಂಗಳೂರು ಸೇರಿ 18 ಜಿಲ್ಲೆಗಳಿಗೆ ಮಳೆ ಅಲರ್ಟ್‌

Karnataka Rain: ರಾಜ್ಯಾದ್ಯಂತ ಭಾನುವಾರವೂ ಮಳೆಯ ಅಬ್ಬರ ಮುಂದುವರಿಯಲಿದೆ. ಹವಾಮಾನ ಇಲಾಖೆಯು ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಮಳೆ ಅಲರ್ಟ್‌ ನೀಡಿದೆ. ಎಲ್ಲೆಲ್ಲಿ ಮಳೆಯಾಗಲಿದೆ ಎಂಬುದರ ವಿವರ ಇಲ್ಲಿದೆ.

VISTARANEWS.COM


on

Edited by

Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ (Karnataka Rain) ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹಾಗೂ ಹಾಸನ, ಕೋಲಾರ, ಮಂಡ್ಯ , ಮೈಸೂರು, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾದಗಿರಿಯ ನಿರ್ಣದಲ್ಲಿ ದಾಖಲೆ ಮಳೆ

ಶುಕ್ರವಾರದಂದು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ಯಾದಗಿರಿಯ ನಿರ್ಣದಲ್ಲಿ 7 ಸೆಂ.ಮೀ, ಶಹಪುರದಲ್ಲಿ 6 ಸೆಂ.ಮೀ ಹಾಗೂ ನಿಟ್ಟೂರು 5 ಸೆಂ.ಮೀ, ಮನ್ನಾಲಿ, ಮಂಠಾಳ, ಸಂತಪುರ, ಜನವಾಡ, ಹುಮನಾಬಾದ್ ಹಾಗೂ ಕಲಬುರಗಿಯ ಕಮಲಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: Karnataka Rain: ಆಲಿಕಲ್ಲು ಮಳೆಗೆ ನೆಲಕಚ್ಚಿದ ಬೆಳೆ; ರೈತರು ಕಂಗಾಲು, ಗೋಳು ಕೇಳುವವರ‍್ಯಾರು?

ಮುಡಬಿ, ಕೋಲಾರ, ಮಾಲೂರು ಹಾಗೂ ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಎಂಪ್ರಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ರಾಜೇಶ್ವರ್, ಹಲಬರ್ಗ, ಮುಧೋಳ, ಅಡಕಿ, ಮಹಾಗೋನ್, ಕೋಡ್ಲಾ ಹಾಗೂ ಗುಂಡಗುರ್ತಿ, ತಾಳಿಕೋಟೆ, ಗೋಪಾಲ ನಗರ, ಉತ್ತರಹಳ್ಳಿ, ಹೊಸಕೋಟೆ, ಗೌರಿಬಿದನೂರುನಲ್ಲಿ ತಲಾ 1 ಸೆಂ.ಮೀ ಮಳೆ ಸುರಿದಿದೆ. ಇನ್ನು ಪಣಂಬೂರಿನಲ್ಲಿ ಗರಿಷ್ಠ ಉಷ್ಣಾಂಶ 36.1 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದರೆ, ಬೀದರ್‌ನಲ್ಲಿ ಕನಿಷ್ಠ ಉಷ್ಣಾಂಶ 12.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Karnataka Rain: ವಿಜಯಪುರ, ಬಳ್ಳಾರಿಯಲ್ಲಿ ಭರ್ಜರಿ ವರ್ಷಧಾರೆ; ಸಿಂದಗಿಯಲ್ಲಿ ಆಲಿಕಲ್ಲನ್ನು ಹೆಕ್ಕಿ ತಿಂದ ವಿದ್ಯಾರ್ಥಿಗಳು

ಕಳೆದರಡು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದ್ದು, ವಿಜಯಪುರದ ಸಿಂದಗಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರು ಆಲಿಕಲ್ಲು ಆಯ್ದುಕೊಂಡು ಖುಷಿಪಟ್ಟರು. ಮತ್ತೊಂದು ಕಡೆ ಆಲಿಕಲ್ಲು ಮಳೆಯು ಬೆಳೆಗೆ ಮಾರಕವಾಗಿ ರೈತರಿಗೆ ಸಂಕಷ್ಟವನ್ನುಂಟು ಮಾಡಿದೆ.

VISTARANEWS.COM


on

Edited by

Farmers in distress due to hailstorm
Koo

ವಿಜಯಪುರ/ ಬಳ್ಳಾರಿ: ರಾಜ್ಯದ ಹಲವು ಕಡೆ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮುಂಜಾನೆ ಬಿಸಲು, ಮಧ್ಯಾಹ್ನ ಮೋಡ ಮುಸುಕಿದ ವಾತಾವರಣ, ಸಂಜೆ ವೇಳೆಗೆ ದಿಢೀರ್‌ ಬರುವ ಮಳೆಗೆ ಜನರು ಹೈರಾಣಾಗಿದ್ದಾರೆ. ಜನಜೀವನವೂ ಅಸ್ತವ್ಯಸ್ತವಾಗಿದೆ. ವಿಜಯಪುರ ಹಾಗೂ ಬಳ್ಳಾರಿ ಜಿಲ್ಲೆಯ ಅಲ್ಲಲ್ಲಿ ಶನಿವಾರ (ಮಾ. 18) ಭರ್ಜರಿ ಮಳೆಯಾಗಿದೆ. ಸಿಂದಗಿಯಲ್ಲಿ ಆಲಿಕಲ್ಲು ಮಳೆ ಸುರಿದಿದ್ದು, ವಿದ್ಯಾರ್ಥಿಗಳು ಮಳೆಯನ್ನೂ ಲೆಕ್ಕಿಸದೇ ಹೆಕ್ಕಿ ತಿಂದರು.

Farmers in distress due to hailstorm
ಸಿಂದಗಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಆಲಿಕಲ್ಲು ಮಳೆ

ಶನಿವಾರವೂ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ವಿಜಯಪುರದ ಸಿಂದಗಿ ನಗರ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ಮಧ್ಯಾಹ್ನದ ಹೊತ್ತಿಗೆ ಸುಮಾರು 20 ನಿಮಿಷಕ್ಕೂ ಅಧಿಕ ಕಾಲ ಆಲಿಕಲ್ಲು ಮಳೆ ಸುರಿದಿದೆ. ಸಿಂದಗಿಯಲ್ಲಿ ಮನೆಗೆ ಹೊರಟಿದ್ದ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಬಂಧಿಯಾಗುವಂತಾಯಿತು. ಕಾಲೇಜು ಆವರಣದಲ್ಲಿ ನಿಂತು ಆಲಿಕಲ್ಲುಗಳನ್ನು ಆಯ್ದುಕೊಂಡು ಓಡುತ್ತಿದ್ದ ಚಿತ್ರಣ ಕಂಡು ಬಂತು.

Farmers in distress due to hailstorm
ಆಲಿಕಲ್ಲು ಆಯ್ದುಕೊಳ್ಳುತ್ತಿರುವ ವಿದ್ಯಾರ್ಥಿನಿಯರು

ಬಳ್ಳಾರಿಯಲ್ಲೂ ಆಲಿಕಲ್ಲು ಮಳೆ; ಬೆಳೆ ಹಾನಿ

ಬಳ್ಳಾರಿಯ ಕೃಷ್ಣನಗರ ಕ್ಯಾಂಪ್ ಸೇರಿದಂತೆ ನಗರದ ವಿವಿಧೆಡೆ ಆಲಿಕಲ್ಲು ಮಳೆ ಆಗಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಅಕಾಲಿಕ ಮಳೆಯಿಂದಾಗಿ, ಬಯಲಿನಲ್ಲಿ ಒಣಗಿ ಹಾಕಿದ್ದ ಮೆಣಸಿನಕಾಯಿ ಕೊಚ್ಚಿಹೋಗಿತ್ತು. ಇದು ರೈತರನ್ನು ಕಂಗಾಲಾಗುವಂತೆ ಮಾಡಿತು. ಮಳೆ ನೀರಲ್ಲಿ ಕೊಚ್ಚಿ ಹೋಗಿದ್ದ ಮೆಣಸಿನಕಾಯಿಯನ್ನು ಆಯ್ದುಕೊಳ್ಳುವುದು ಕಂಡುಬಂತು.

Farmers in distress due to hailstorm

ಆಲಿಕಲ್ಲು ಮಳೆಗೆ ಅಪಾರ ಪ್ರಮಾಣ ಬೆಳೆ ಹಾನಿ

ಕಳೆದೆರಡು ದಿನಗಳಿಂದ ಸುರಿದ ಆಲಿಕಲ್ಲು ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಬಯಲು ಸೀಮೆ ಕೋಲಾರದಲ್ಲಿ ಬೇಸಿಗೆಯ ಮೊದಲ ಮಳೆಗೆ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಕೈಗೆ ಬರಬೇಕಿದ್ದ ಮಾವು ನೆಲಕ್ಕೆ ಉದುರಿದ್ದು, ರೈತನಿಗೆ ದಿಕ್ಕು ತೋಚದಂತಾಗಿದೆ.

ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಹಾಗೂ ಹೊಸೂರು ಗ್ರಾಮದಲ್ಲಿನ ಮಾವಿನ ತೋಟಗಳಲ್ಲಿ ಮಾವಿನ ಕಾಯಿ ಪಿಂದೆಗಳು ಹಾಗು ಹೂಗಳು ಉದುರಿಹೋಗಿದ್ದು, ಆಲಿಕಲ್ಲು ಮಳೆ ರಭಸಕ್ಕೆ ಎಲೆಗಳು ಉದುರಿ ಹೋಗಿ ಮಾವು ಬೆಳೆಗಾರರ ಆಸೆಗೆ ತಣ್ಣೀರು ಎರಚಿದೆ. ಶ್ರೀನಿವಾಸಪುರ ಕ್ಷೇತ್ರದಲ್ಲಿ ಸುಮಾರು 34ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವನ್ನು ಬೆಳೆಯಲಾಗಿತ್ತು.

Farmers in distress due to hailstorm
ನೆಲ ಕಚ್ಚಿದ ಮಾವು

ಶ್ರೀನಿವಾಸಪುರ ಮಾವು ಬೆಳೆಗಾರರು ಎರಡು ವರ್ಷಗಳಿಂದ ಕೈ ಕೊಟ್ಟ ಬೆಳೆ ಈ ಬಾರಿ ಮಳೆ ಇಲ್ಲದೆ ಉತ್ತಮ ಇಳುವರಿಗೆ ಸೂಕ್ತವಾದ ವಾತಾವರಣದಲ್ಲಿ ಉತ್ತಮ ಫಸಲು ಬಂದಿತ್ತು. ಆದರೆ ಕಾಯಿ ಕಟ್ಟುವ ವೇಳೆಗೆ ಆಲಿಕಲ್ಲು ಮಳೆ ಎರಡು ದಿನ ಸುರಿದು ಮಾವು ಹೂ ಸೇರಿದಂತೆ ಎಲಚು ಕಾಯಿಗಳು ನಾಶವಾಗಿವೆ. ಮಾವು ಬೆಳೆಗಾರರ ನಿರೀಕ್ಷೆಯನ್ನು ಹುಸಿಯಾಗಿದೆ. ಈ ಬಗ್ಗೆ ಸರ್ಕಾರ ಪರಿಹಾರ ನೀಡಲೇಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ರಸ್ತೆ ಕಾಮಗಾರಿಗೆ ಅಕಾಲಿಕ ಮಳೆ ಎಫೆಕ್ಟ್

ವಿಜಯಪುರದ ಸಿಂದಗಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗೆ ಮಳೆ ಅಡ್ಡಿಯಾಗಿದೆ. ಕಳೆದ 3 ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ಹಲವಾರು ರಸ್ತೆಗಳು ಸಂಪೂರ್ಣ ಬ್ಲಾಕ್ ಆಗಿದ್ದು, ವಾಹನ ಸಂಚಾರ ತುಂಬಾ ವಿರಳವಾಗಿದೆ. ಮೊದಲೇ ಅಮೆಗತಿಯಿಂದ ಸಾಗುತ್ತಿರುವ ಕಾಮಗಾರಿಗಳಿಂದ ಬೇಸತ್ತಿರುವ ಸಾರ್ವಜನಿಕರಿಗೆ ಈ ಅಕಾಲಿಕ ಮಳೆ ಮತ್ತಷ್ಟು ಕಣ್ಣು ಕೆಂಪಾಗುವಂತೆ ಮಾಡಿದೆ. ಮಳೆ ಬಂದ ಕಾರಣ ತಗ್ಗು ಗುಂಡಿಗಳಿಗೆ ನೀರು ತುಂಬಿದ್ದು ಪಾದಚಾರಿ ಮತ್ತು ವಾಹನ ಸವಾರರು ಪರದಾಡುವಂತಹ ಪರಸ್ಥಿತಿ ಎದುರಾಗಿದೆ.

Farmers in distress due to hailstorm
ರಸ್ತೆ ಕಾಮಗಾರಿಗೆ ಅಡ್ಡಿಯಾದ ಮಳೆ

ಇದನ್ನೂ ಓದಿ: Murder Case: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತಮ್ಮನನ್ನೇ ತುಂಡು ತುಂಡಾಗಿ ಕತ್ತರಿಸಿದ್ದ ಅಕ್ಕ; 8 ವರ್ಷಗಳ ಬಳಿಕ ಸೆರೆ ಸಿಕ್ಕಿದ್ದು ಹೇಗೆ?

ಕಳೆದ 6 ತಿಂಗಳಿನಿಂದ ಮಂದಗತಿಯಲ್ಲಿ ಸಾಗುತ್ತಿರುವ ನಗರದ ಪ್ರಮುಖ ರಸ್ತೆ ಕಾಮಗಾರಿಗಳಿಂದ ತಾಲೂಕಿನ ಸಾರ್ವಜನಿಕರು ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡುವುದನ್ನೇ ಬಿಟ್ಟಿದ್ದಾರೆ. ಎಲ್ಲೆಂದರಲ್ಲಿ ತಗ್ಗು ಗುಂಡಿ ತೋಡಿ ಎಚ್ಚರಿಕೆ ಸೂಚನಾ ಫಲಕ ಅಳವಡಿಕೆ ಮಾಡದೆ ಕಾಮಗಾರಿಯ ನಿಯಮಗಳನ್ನು ಗಾಳಿಗೆ ತೂರಿ ಕೆಲಸ ಮಾಡುತ್ತಿದ್ದಾರೆ ಎಂಬುದು ಸಾರ್ವಜನಿಕರ ಗಂಭೀರ ಆರೋಪವಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Had Kohli not appealed, he would not have applied for the post of head coach
ಕ್ರಿಕೆಟ್3 mins ago

Team India : ಕೊಹ್ಲಿ ಮನವಿ ಮಾಡದೇ ಹೋಗಿದ್ದರೆ ಹೆಡ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ​

Man Dips Leafy Vegetables In Chemical Solution, Here is a video
ದೇಶ11 mins ago

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

ಸಿನಿಮಾ16 mins ago

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

inflation
ವಾಣಿಜ್ಯ18 mins ago

Retail inflation : ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಆರ್‌ಬಿಐ ಕಳವಳ

Delhi team won the toss against UP and chose fielding
ಕ್ರಿಕೆಟ್20 mins ago

WPL 2023 : ಯುಪಿ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ತಂಡದಿಂದ ಫೀಲ್ಡಿಂಗ್ ಆಯ್ಕೆ

savadatti accident
ಕರ್ನಾಟಕ24 mins ago

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

HP Pavilion Aero 13 Laptop Launched and Check details
ಗ್ಯಾಜೆಟ್ಸ್26 mins ago

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

ಕರ್ನಾಟಕ27 mins ago

Basavaraj Bommai: ವಿಜಯಪುರದಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ; ಬೊಮ್ಮಾಯಿ

congress says cm basavraj bommai will not get chance to contest inkarnataka election
ಕರ್ನಾಟಕ39 mins ago

Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್‌ ಸಿಗುವುದು ಡೌಟು ಎಂದ ಕಾಂಗ್ರೆಸ್‌

Azam peer Khadri
ಕರ್ನಾಟಕ50 mins ago

Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್‌ಗೆ ಈಗ ಖಾದ್ರಿ ಸಂಕಟ!

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ2 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ7 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ7 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!