Ramakrishna Ashram : ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ! - Vistara News

ರಾಯಚೂರು

Ramakrishna Ashram : ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ!

Ramakrishna Ashram: ಬಾಲಕನೊಬ್ಬ ಪೆನ್ನು ಕದ್ದ ಎಂದು ರಾಯಚೂರಿನ ರಾಮಕೃಷ್ಣ ಆಶ್ರಮದ ಗುರೂಜಿ ಮನಸೋ ಇಚ್ಛೆ ಥಳಿಸಿದ್ದಾರೆ. ಮತ್ತೊಂದು ಕಡೆ ಕಳ್ಳರ ಗ್ಯಾಂಗ್‌ವೊಂದು ವ್ಯಕ್ತಿಗೆ ಹಲ್ಲೆ ನಡೆಸಿ, ಲೂಟಿ ಮಾಡಿ ಎಸ್ಕೇಪ್‌ ಆಗಿದ್ದಾರೆ.

VISTARANEWS.COM


on

Ramakrishna Ashram
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ (Ramakrishna Ashram) ಅಮಾನವೀಯ ಘಟನೆಯೊಂದು ನಡೆದಿದೆ. ಬಾಲಕನೊಬ್ಬ ಪೆನ್ನು ಕದ್ದಿದ್ದಕ್ಕೆ ಆಶ್ರಮದ ಗುರೂಜಿ ಮನಬಂದಂತೆ ಹಲ್ಲೆ (Assault Case) ನಡೆಸಿದ್ದಾರೆ. ಮೂರು ದಿನಗಳ ಕಾಲ ಕತ್ತಲೆ ಕೋಣೆಯಲ್ಲಿ ಕೂಡಿಟ್ಟು ವಿದ್ಯಾರ್ಥಿಯ ಕಣ್ಣುಗಳು ಬಾವು ಬರುವಂತೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ವಿದ್ಯಾರ್ಥಿ ಶ್ರವಣ್ ಕುಮಾರ್ ಹಲ್ಲೆಗೊಳಗಾದ ಬಾಲಕನಾಗಿದ್ದಾನೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಶ್ರವಣ ಬಡತನದ ಕಾರಣ ಆಶ್ರಮದಲ್ಲಿದ್ದ. ಸಹಪಾಠಿಗಳ ಜತೆ ಆಟವಾಡುತ್ತಾ ಪೆನ್ನು ಕದ್ದಿದ್ದ. ಶ್ರವಣಕುಮಾರ್ ವಿರುದ್ಧ ಸಹಪಾಠಿಗಳು ದೂರೂ ನೀಡಿದ್ದರು. ದೂರಿನ್ವಯ ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ ಎಂಬಾತ ಶ್ರವಣಗೆ ಮನಬಂದಂತೆ ಥಳಿಸಿದ್ದಾರೆ. ಚಿಕ್ಕ ಹುಡುಗ ಎಂಬುದನ್ನು ಪರಿಗಣಿಸಿದೇ ಮೂರು ದಿನಗಳು ಕತ್ತಲೇ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ.

ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರು ರಾಮಕೃಷ್ಣ ಆಶ್ರಮಕ್ಕೆ ಆಕಸ್ಮಿಕವಾಗಿ ಶ್ರವಣ ತಾಯಿ ಭೇಟಿ ನೀಡಿದಾಗ ವಿಷಯ ಬಹಿರಂಗವಾಗಿದೆ. ಸದ್ಯ ಶ್ರವಣಕುಮಾರ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೈಕೈ ತುಂಬಾ ಗಾಯಗಳಾಗಿದ್ದು, ಕಣ್ಣು ಪೂರ್ತಿ ಬಾವು ಬಂದಿದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪುಟ್ಟ ಬಾಲಕನ ಸ್ಥಿತಿಗೆ ಪೋಷಕರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ದುರಂತದಲ್ಲಿ ಮೃತರ ಸಂಖ್ಯೆ 344ಕ್ಕೆ ಏರಿಕೆ; ರಾಡಾರ್‌ಗೆ ಸಿಕ್ಕ ನಿಗೂಢ ಉಸಿರಾಟ ಯಾರದ್ದು?

ಯುವತಿಯ ಪರ್ಸ್‌ ಕಿತ್ತುಕೊಂಡು ಮಂಗಳಮುಖಿಯರಿಂದ ಕಿರುಕುಳ

ಮಂಗಳಮುಖಿಯರ ಕುಕೃತ್ಯವನ್ನು ಯುವತಿಯೊಬ್ಬಳು ಬಿಚ್ಚಿಟ್ಟಿದ್ದಾಳೆ. 10 ರೂಪಾಯಿ ನಿವಾಳಿಸಿ ಕೊಡುತ್ತಿನಿ ಎಂದು 700 ರೂಪಾಯಿ ಪಡೆದರಂತೆ. ಪರ್ಸ್ ಕಿತ್ತು ಅದರಲ್ಲಿದ್ದ ಹಣವನ್ನು ಬಲವಂತವಾಗಿ ಪಡೆದು ಕಿರುಕುಳ ನೀಡಿದ್ದರಂತೆ. 700 ಪಡೆದು ಹತ್ತು ರೂಪಾಯಿ ವಾಪಾಸ್ ಕೊಟ್ಟರಂತೆ. ಮೂರು ಮಂಗಳಮುಖಿಯರಿಂದ ಯುವತಿಗೆ ಬೆಂಗಳೂರಿನ ಮಾರತ್ ಹಳ್ಳಿ ಸಿಗ್ನಲ್ ಬಳಿ ಕಿರುಕುಳ ನೀಡಿದ್ದಾರೆ. ಅಷ್ಟು ಜನ ಇದ್ದರೂ ಏನೂ ಮಾಡೋದಕ್ಕೆ ಸಾಧ್ಯವಾಗಿಲ್ಲ ಎಂದು ವಿಡಿಯೋ ಮಾಡಿ, ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದಾಳೆ.

ರಾಯಚೂರಿನಲ್ಲಿ ವ್ಯಕ್ತಿಗೆ ಹಲ್ಲೆ ನಡೆಸಿ ದರೋಡೆ

ರಾಯಚೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ದರೋಡೆ ನಡೆಸಲಾಗಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಘಟನೆ ನಡೆದಿದೆ. ನಿನ್ನೆ ಶುಕ್ರವಾರ ಮದ್ಯಾಹ್ನ ಮುದಗಲ್ ಪಟ್ಟಣದ ಮೇಗಳಪೇಟೆ ಬಡಾವಣೆಯಲ್ಲಿ ಕಳ್ಳರ ಗ್ಯಾಂಗ್‌ವೊಂದು ಕಳ್ಳತನಕ್ಕೆ ಯತ್ನಿಸಿತ್ತು.

ಈ ವೇಳೆ ಕಳ್ಳರನ್ನು ತಡೆಯಲು ಸ್ಥಳೀಯ ವ್ಯಕ್ತಿ ನಿಂಗಪ್ಪ ಮುಂದಾಗಿದ್ದರು. ಕಳ್ಳರು ಗ್ಯಾಂಗ್ ನಿಂಗಪ್ಪ ಮೇಲೆ ಹಲ್ಲೆ ನಡೆಸಿದ್ದಾರೆ. ತಲೆಗೆ ಕಬ್ಬಿಣದ ರಾಡಿನಿಂದ ಎರಡು ಬಾರಿ ಬಲವಾಗಿ ಹೊಡೆದು ಹಲ್ಲೆ ನಡೆಸಿದ್ದಾರೆ. ಬಳಿಕ ಆತ ಕುಸಿದು ಬೀಳಿತ್ತಿದ್ದಂತೆಯೇ ಮನೆಗಳ್ಳತನ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

Karnataka Rain : ಕಾರವಾರದಲ್ಲಿ ಬಿಣಗಾ ಕಾರವಾರ ಟನೆಲ್‌ ಬಳಿ ಕಲ್ಲು ಕುಸಿದಿದ್ದು, ರಸ್ತೆ ಬಂದ್‌ ಮಾಡಿದ್ದಾರೆ. ಬೆಳಗಾವಿಯಲ್ಲಿ ದೇವಸ್ಥಾನದ ಗೋಪುರ ಕುಸಿದು ಬಿದ್ದಿದೆ. ವಿಜಯನಗರದಲ್ಲಿ ರಾಮ-ಲಕ್ಷ್ಮಣ ದೇಗುಲಕ್ಕೆ ಜಲದಿಗ್ಭಂದನ ಹಾಕಲಾಗಿದೆ.

VISTARANEWS.COM


on

By

karnataka rain
Koo

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ (Karnataka Rain) ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿದೆ. ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಕಲ್ಲು, ಮಣ್ಣು ಜಾರಿ ಬಿದ್ದಿದೆ. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದಾರೆ.

ಸ್ಥಳಕ್ಕೆ ಕಾರವಾರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿದ್ದಾರೆ. ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

karnataka rain
karnataka rain

ಕುಸಿದು ಬಿದ್ದ ದೇವಸ್ಥಾನದ ಗೋಪುರ

ಬೆಳಗಾವಿ: ನಿರಂತರ ಮಳೆಗೆ ಬೆಳಗಾವಿಯ ಕಿತ್ತೂರಿನ ಕೊಂಡವಾಡ ಚೌಕಿನಲ್ಲಿರುವ ಕರೆಮ್ಮ ದೇವಿ ದೇವಸ್ಥಾನದ ಗೋಪುರ ಕುಸಿದು ಬಿದ್ದಿದೆ. ಕಳೆದ ಮೂರು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಗೋಪುರ ಸಂಪೂರ್ಣವಾಗಿ ಕುಸಿದು, ಪಕ್ಕದ ಮಳಿಗೆಯ ಮೇಲೆ ಗೋಪುರ ಬಿದ್ದಿದೆ. ಘಟನೆಯಲ್ಲಿ ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ನಿನ್ನೆ ಶುಕ್ರವಾರವಷ್ಟೇ ಕಿತ್ತೂರು ಕೋಟೆಯ ಆವರಣದಲ್ಲಿದ್ದ ಐತಿಹಾಸಿಕ ವಾಚ್ ಟವರ್ ಕುಸಿದು ಬಿದ್ದಿತ್ತು.

ರಾಮ-ಲಕ್ಷ್ಮಣ ದೇಗುಲಕ್ಕೆ ಜಲದಿಗ್ಭಂದನ

ಜಲಾಶಯದಿಂದ 1.80 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಹರಿಬಿಟ್ಟ ಹಿನ್ನೆಲೆಯಲ್ಲಿ ವಿಜಯನಗರದ ವಿಶ್ವ ವಿಖ್ಯಾತ ಹಂಪಿಯಲ್ಲಿ ತುಂಗಭದ್ರಾ ಉಕ್ಕಿ ಹರಿಯುತ್ತಿದೆ. ನದಿಯ ರೌದ್ರ ನರ್ತನ ಹೆಚ್ಚಾಗಿದ್ದರಿಂದ ಹಂಪಿಯ ಹಲವು ಸ್ಮಾರಕಗಳು ಮುಳುಗಿವೆ. ಅದರಲ್ಲೂ ಐತಿಹಾಸಿಕ ರಾಮ – ಲಕ್ಷ್ಮಣ ದೇಗುಲಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಪ್ರವಾಸಿಗರು ಉಳಿದುಕೊಳುತ್ತಿದ್ದ ಮೂರು ಕಲ್ಲಿನ ಮಂಟಪಗಳು ಮುಕ್ಕಾಲು ಭಾಗ ಮುಳುಗಡೆಯಾಗಿದೆ.

ತುಂಗಭದ್ರಾ ನದಿ ನೀರು ನುಗ್ಗಿದ್ದರಿಂದ ದೇಗುಲಕ್ಕೆ ಭಕ್ತರ ಸಂಖ್ಯೆಯಲ್ಲಿ ಭಾರೀ ವಿರಳವಾಗಿದೆ. ರಾಮ – ಲಕ್ಷ್ಮಣ, ಸೀತೆ ದೇಗುಲ 2011, 2017ರಲ್ಲಿ ಎರಡು ಬಾರಿ ಸಂಪೂರ್ಣ ಮುಳುಗಡೆ ಆಗಿತ್ತು. ವಾಲಿ ಎನ್ನುವ ರಾಜನನ್ನು ಸಂಹರಿಸಿ ಸುಗ್ರೀವ ಅನ್ನೋ ರಾಜನಿಗೆ ಪಟ್ಟಾಭಿಷೇಕ ಮಾಡಿದ ಜಾಗವೇ ರಾಮ-ಲಕ್ಷ್ಮಣ ದೇಗುಲವಾಗಿದೆ. ರಾಮ-ಲಕ್ಷ್ಮಣ, ಸೀತಾಮಾತೆ, ಆಂಜನೇಯ ಹಾಗೂ ಸುಗ್ರೀವ ರಾಜ ಸೇರಿ ಐದು ಜನರ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

ವಿಧಿ, ವಿಧಾನ ಮಂಟಪ, ಸ್ನಾನ ಘಟ್ಟ, ಪುರಂದರ ದಾಸರ ಮಂಟಪ ಸೇರಿ ಹತ್ತಾರು ಸ್ಮಾರಕಗಳು ಈಗಾಗಲೇ ಮುಳುಗಡೆಯಾಗಿದೆ. ಸ್ಮಾರಕಗಳು ಎಲ್ಲಿವೆ ಎಂಬುದು ಗೊತ್ತಾಗದ ರೀತಿ ತುಂಗಭದ್ರಾ ಉಕ್ಕಿ ಹರಿಯುತ್ತಿದೆ.

ಇದನ್ನೂ ಓದಿ: Murder case : ಮಲೆನಾಡಲ್ಲಿ ಒಂಟಿ ಮಹಿಳೆ ಕೊಲೆ; ಕತ್ತು ಹಿಸುಕಿ ಕೊಂದವರು ಯಾರು?

ಮುಳುಗಿದ ಸಂಗಮೇಶ್ವರ ದೇವಾಲಯ

ಮಲೆನಾಡಿನ ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆ ಅಬ್ಬರಕ್ಕೆ ಮಲೆನಾಡಿನ ನದಿಗಳು ಮೈದುಂಬಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ತುಂಗಾ, ಭದ್ರಾ ಹರಿಯುತ್ತಿದೆ‌. ತುಂಗಾ, ಭದ್ರಾ ನದಿ ಸಂಗಮ ಕ್ಷೇತ್ರ ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕೂಡ್ಲಿ ತುಂಗಾ ಹಾಗೂ ಭದ್ರಾ ನದಿ ಬಂದು ಸಂಗಮ ಆಗುವ ಪುಣ್ಯಕ್ಷೇತ್ರವಾಗಿದ್ದು, ಸಂಗಮೇಶ್ವರ ದೇವಾಲಯ ಮುಳುಗಿದೆ.

ಏತ ನೀರಾವರಿ ಬ್ಯಾರೇಜ್‌ಗೆ ಪ್ರವಾಸಿಗರ ದಂಡು

ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಬ್ಯಾರೇಜ್‌ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಮುಂಡರಗಿ ತಾಲೂಕಿನ ಹಮ್ಮಿಗಿ, ಗುಮ್ಮಗೋಳ, ವಿಠಲಾಪುರ ಸೇರಿದಂತೆ ಅನೇಕ ಗ್ರಾಮದ ರೈತರು ತತ್ತರಿಸಿದ್ದಾರೆ.

ಬ್ಯಾರೇಜ್‌ನ 26 ಗೇಟ್‌ಗಳಲ್ಲಿ 19 ಗೇಟ್‌ಗಳು ತೆರದು 2,90,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಬ್ಯಾರೇಜ್‌ನಿಂದ ರಭಸವಾಗಿ ಹರಿಯುತ್ತಿರುವ ನೀರು ನೋಡಲು ಕಿರು ಆಣೆಕಟ್ಟು ವೀಕ್ಷಿಸಲು ಪ್ರವಾಸಿಗರು ದೌಡಯಿಸಿದ್ದಾರೆ. ಬ್ಯಾರೇಜ್ ಎದುರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ.

ಜೋಗ ಜಲಪಾತಕ್ಕೆ ಪ್ರವಾಸಿಗರು ಫಿದಾ

ಲಿಂಗನಮಕ್ಕಿ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ವಿಶ್ವವಿಖ್ಯಾತ ಜೋಗ ಜಲಪಾತ ಕಣ್ಮನ ಸೆಳೆಯುತ್ತಿದೆ. ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : 7 ಜಿಲ್ಲೆಗಳಲ್ಲಿ ವ್ಯಾಪಿಸಲಿದೆ ಭರ್ಜರಿ ಮಳೆ

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲಗೊಂಡಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವಡೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Rain News) ಅಬ್ಬರ ಕಡಿಮೆ ಆಗುತ್ತಿದ್ದು, ಕೆಲವಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather forecast) ನೀಡಿದೆ. 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು,ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿತ

ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿದು ಬಿದ್ದಿದೆ. 15ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದ ವಾಚ್ ಟವರ್ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಕುಸಿದಿದೆ.

ಹಾವೇರಿಯಲ್ಲಿ ಬಾಲಕನ ಮೇಲೆ ಕುಸಿದ ಚಾವಣಿ

ಹಾವೇರಿ ಜಿಲ್ಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ನಿರಂತರ ಮಳೆಗೆ ಶಾಲೆಯ ಚಾವಣಿ ಕುಸಿದು ಬಾಲಕನಿಗೆ ಗಾಯವಾಗಿದೆ. ಹಾವೇರಿಯ ನೀರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. 25 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 5 ನೇ ತರಗತಿಯಲ್ಲಿ ಓದುತ್ತಿದ್ದ ವಿನಾಯಕ್ ಮೋರೆ ಗಾಯಗೊಂಡವನು. ಬಾಲಕನ ಕಾಲಿನ ಮೇಲೆ ಚಾವಣಿ ಕಂಬ ಬಿದ್ದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹರವಿ ಗ್ರಾಮದಲ್ಲೂ ಮನೆ ಕುಸಿದಿದೆ. ಕುಮಾರ ಮಳೆಪ್ಪನವರ ಮನೆಯು ಕುಸಿದು ಬಿದ್ದಿದೆ. ಬೆಳಗಿನ ಜಾವದಲ್ಲಿ ಮಣ್ಣು ಕುಸಿದಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪಾರಾಗಿದ್ದಾರೆ.

ಇದನ್ನೂ ಓದಿ: Governor Versus State: ಶುರುವಾಯ್ತು ರಾಜ್ಯದಲ್ಲಿ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲ ಸಂಘರ್ಷ; ರಾಜ್ಯಪಾಲರ ಮುಂದಿನ ನಡೆ ಏನು?

ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಸತತ ಮೂರನೇ ಬಾರಿಗೆ ನೆರೆ ಹಾವಳಿಯಿಂದಾಗಿ ಬೈಂದೂರು ತಾಲೂಕಿನ ನಾವುಂದ ಕುದ್ರು ವಿನಲ್ಲಿ ವಾಸವಾಗಿರುವ ಏಳು ಮನೆಗಳಿಗೆ ಜಲದಿಗ್ಬಂದನ ಹಾಕಲಾಗಿದೆ. ದೋಣಿಯ ಮೂಲಕವೇ ದೈನಂದಿನ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮನೆ ಮುಂಭಾಗವೇ ಭೂಮಿ ಛಿದ್ರ

ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ. ಭಾರಿ ಮಳೆಗೆ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಕೊಪ್ಪ ತಾಲೂಕಿನ ಬಸರಿ ಕಟ್ಟೆ ಚೆನ್ನಕಲ್ಲು ಗ್ರಾಮದಲ್ಲಿ ನಾಗರಾಜ್ ಎಂಬುವವರ ಮನೆ ಮುಂದೆ ಭೂಮಿ ಛಿದ್ರ ಛಿದ್ರಗೊಂಡಿದೆ. 300 ಅಡಿಯಷ್ಟು ದೂರಕ್ಕೆ ಭೂಮಿ ಜಾರಿ ಹೋಗಿದೆ. ಭೂಮಿ ಕುಸಿತದ ರಭಸಕ್ಕೆ ಮನೆಯ ಅಡಿಪಾಯ, ಗೋಡೆಗಳಲ್ಲಿ ಬಿರುಕು ಉಂಟಾಗಿದೆ. ಮಳೆ ಹೆಚ್ಚಾದಂತೆ ಮನೆಯ ಮುಂಭಾಗ ಮತ್ತಷ್ಟು ಧರೆ ಕುಸಿತ ಉಂಟಾಗುವ ಸಾಧ್ಯತೆ ಇದೆ. ಭೂ ಕುಸಿತದಿಂದಾಗಿ 4-5 ಎಕರೆ, ಅಡಿಕೆ ತೋಟವು ನಾಶವಾಗಿದೆ.

ಶಿರಾಡಿಘಾಟ್ ಭೂ ಕುಸಿತ; ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಟೀಂ ಭೇಟಿ

ಹಾಸನದ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಸಮೀಪದ ಗುಡ್ಡಕುಸಿತ ಸ್ಥಳಕ್ಕೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕುಸಿತಕ್ಕೆ ಕಾರಣ ತಿಳಿಯಲು ಸ್ಥಳ ಪರಿಶೀಲನೆ ನಡೆಸಿದ್ದರು. ಒಂದೇ ಸ್ಥಳದಲ್ಲಿ ನಿರಂತರವಾಗಿ ಭೂಮಿ ಕುಸಿಯುತ್ತಿದೆ. ಸಕಲೇಶಪುರ ತಾಲೂಕಿನ ಹಾರ್ಲೇ ಕೂಡಿಗೆ ಗ್ರಾಮದ ಸಮೀಪ ಭೂಮಿ ಕುಸಿದಿತ್ತು. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಕುಸಿತವಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾರಾಂತ್ಯದಲ್ಲಿ ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಎಚ್ಚರಿಕೆ

Karnataka Weather Forecast : ವಾರಾಂತ್ಯದಲ್ಲಿ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಇನ್ನೂ ಜಲಾವೃತ ರಸ್ತೆಯಲ್ಲಿ‌ ಗ್ರಾಮಸ್ಥರು ಬೈಕ್‌ ಓಡಿಸಿ ಹುಚ್ಚಾಟ ಮೆರೆದಿದ್ದಾರೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿಯಲ್ಲಿ (Karnataka Weather Forecast) ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ (Rain News) ದುರ್ಬಲವಾಗಿತ್ತು. ಮಣಿ 19 ಸೆಂ.ಮೀ, ಪುತ್ತೂರು ಎಚ್‌ಎಂಎಸ್ 16 ಸೆಂ.ಮೀ, ಮಂಗಳೂರು, ಪಣಂಬೂರು ವೀಕ್ಷಣಾಲಯ 15 ಸೆಂ.ಮೀ ಮಳೆಯಾಗಿದೆ. ಕಾರ್ಕಳ, ಮಂಕಿ , ಆಗುಂಬೆ ಎಮೋ 14 ಸೆಂ.ಮೀ ಮಳೆಯಾಗಿದೆ. ಅಂಕೋಲಾ, ಕದ್ರ, ಉಪ್ಪಿನಂಗಡಿ13 ಸೆಂ.ಮೀ ಮಳೆಯಾಗಿದೆ. ಮಂಗಳೂರು ಎಪಿ ವೀಕ್ಷಣಾಲಯ , ಗೇರ್ಸೊಪ್ಪ, ಕುಂದಾಪುರ 12 ಸೆಂ.ಮೀ ಮಳೆಯಾಗಿದೆ.

ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ

ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಲಿದೆ. ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಹಾಸನದಲ್ಲಿ ಗಾಳಿ- ಮಳೆಗೆ ಕುಸಿದು ಬಿದ್ದ ಮನೆ; ಮಂಗಳೂರಿನಲ್ಲಿ ಜಾನುವಾರುಗಳು ಸಾವು

ಜಲಾವೃತ ರಸ್ತೆಯಲ್ಲಿ‌ ಗ್ರಾಮಸ್ಥರ ಹುಚ್ಚಾಟ

ತುಂಗಭದ್ರಾ ಜಲಾಶಯ‌ ಹಿನ್ನೀರು ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ. ವಿಜಯನಗರ ಜಿಲ್ಲೆಯ ಮಕರಬ್ಬಿ-ಬ್ಯಾಲಹುಣಸೆ ಗ್ರಾಮದ ಸಂಪರ್ಕ ರಸ್ತೆ ಜಲಾವೃತಗೊಂಡಿದೆ. ಸಂಪರ್ಕ ಕಡಿತದಿಂದಾಗಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ವ್ಯಾಪ್ತಿಗೆ ಒಳಪಡುವ ಮಕರಬ್ಬಿ ಗ್ರಾಮಸ್ಥರು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ.

ಮಕರಬ್ಬಿ ಗ್ರಾಮದಿಂದ ಬ್ಯಾಲಹುಣಸೆ ಶಾಲೆಗೆ ತೆರಳಬೇಕಿದ್ದ ಶಾಲಾ ಮಕ್ಕಳಿಗೆ ಸಂಕಷ್ಟ ಎದುರಾಗಿದೆ. ರಸ್ತೆ ಸಂಪರ್ಕ ಕಡಿತವಾಗಿದ್ದರಿಂದ 2 ದಿನದಿಂದ‌ ಶಾಲೆಗೆ ತೆರಳದೇ ಮಕ್ಕಳು ಗೈರಾಗಿದ್ದಾರೆ. ಮಕ್ಕಳ ಪರದಾಟ ಒಂದೆಡೆಯಾದರೆ ವಯೋವೃದ್ಧರು, ಮಹಿಳೆಯರು ಬೇರೆ ಗ್ರಾಮಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ.

ಇವೆಲ್ಲದರ ಮಧ್ಯೆ ಬೈಕ್ ಸವಾರರು ಹುಚ್ಚಾಟ ಮೆರೆದಿದ್ದಾರೆ. ಜಲಾವೃತವಾದ ರಸ್ತೆ ಮಧ್ಯೆ ಸಾಲು ಸಾಲು ವಾಹನ ನಿಲ್ಲಿಸಿ ಕ್ಲೀನಿಂಗ್‌ನಲ್ಲಿ ತೊಡಗಿದ್ದರು. ಮೊಣಕಾಲುವರೆಗೆ ಜಲಾವೃತವಾದ ರಸ್ತೆಯಲ್ಲಿಯೇ ಬೈಕ್ ನಿಲ್ಲಿಸಿ ಸ್ವಚ್ಚಗೊಳಿಸುತ್ತಿದ್ದರು. ಜತೆಗೆ ಜಲಾವೃತ ರಸ್ತೆಯಲ್ಲಿ ‌ ಬೈಕ್‌ ಓಡಿಸಿದ್ದಾರೆ. ಸ್ವಲ್ಪ ಯಾಮಾರಿದ್ದರೂ ನೀರಿನ‌ ರಭಸಕ್ಕೆ ಬೈಕ್ ಸಮೇತ ಕೊಚ್ಚಿಕೊಂಡು ಹೋಗುವ ಸಾಧ್ಯತೆ ಇದೆ. ಟಿಬಿ ಡ್ಯಾಂ ಭರ್ತಿಯಾಗಿದ್ದರಿಂದ ಹಿನ್ನೀರು ಪ್ರದೇಶದ ಗ್ರಾಮಗಳಲ್ಲಿ ಇದೀಗ ಪ್ರವಾಹ ಭೀತಿ ಎದುರಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Woman Deliver Baby in Auto: ಆಸ್ಪತ್ರೆಗೆ ಹೋಗುವಾಗ ಆಟೋದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Woman Deliver Baby in Auto: ಆಟೋದಲ್ಲಿ ಹೋಗುತ್ತಿದ್ದಾಗ ಗರ್ಭಿಣಿಗೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಮಾರ್ಗ ಮಧ್ಯದಲ್ಲಿಯೇ ಆಟೊ ನಿಲ್ಲಿಸಿದ್ದಾನೆ. ನೆರೆಹೊರೆ ಮಹಿಳೆಯರು ಹಾಗೂ ಕುಟುಂಬದ ಸದಸ್ಯರು ಆಟೋ ಸುತ್ತ ಪರದೆ ಕಟ್ಟಿ ಹೆರಿಗೆ ಮಾಡಿಸಿದ್ದಾರೆ.

VISTARANEWS.COM


on

Woman Deliver Baby in Auto
Koo

ರಾಯಚೂರು: ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ವೇಳೆ ಆಟೊದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ. ಪಟ್ಟಣದ ಸಂತೆ ಬಜಾರ್‌ ರಸ್ತೆಯ ಮನೆಯೊಂದರ ಗರ್ಭಿಣಿಗೆ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ತಕ್ಷಣ ಆಟೋ ಕರೆಸಿದ್ದರು. ಆಟೋದಲ್ಲಿ ಮಹಿಳೆಯನ್ನು ಕೂರಿಸಿಕೊಂಡು ಆಸ್ಪತ್ರೆಗೆ ಹೋಗುವ ವೇಳೆ ಹೆರಿಗೆ ನೋವು ಹೆಚ್ಚಾಗಿದ್ದು, ಈ ವೇಳೆ ಗಂಡು ಮಗುವಿಗೆ ಜನ್ಮ (Woman Deliver Baby in Auto) ನೀಡಿದ್ದಾಳೆ.

ಆಟೋದಲ್ಲಿ ಹೋಗುತ್ತಿದ್ದಾಗ ಗರ್ಭಿಣಿಗೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಮಾರ್ಗ ಮಧ್ಯದಲ್ಲಿಯೇ ಆಟೊ ನಿಲ್ಲಿಸಿದ್ದಾನೆ. ನೆರೆಹೊರೆ ಮಹಿಳೆಯರು ಹಾಗೂ ಕುಟುಂಬದ ಸದಸ್ಯರು ಆಟೋ ಸುತ್ತ ಪರದೆ ಕಟ್ಟಿ ಹೆರಿಗೆಗೆ ಸಹಕಾರ ನೀಡಿದ್ದಾರೆ. ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಆಶಾ ಕಾರ್ಯಕರ್ತೆಯರು ಮಹಿಳೆ ಹಾಗೂ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲು ನೆರವಾಗಿದ್ದಾರೆ.

ಇದನ್ನೂ ಓದಿ | Viral Video: ನಿನಗೆಷ್ಟು ಬಾಯ್‌ಫ್ರೆಂಡ್‌ ಎನ್ನುತ್ತ ಗೆಳತಿಗೆ ಭೀಕರವಾಗಿ ಇರಿದ ಯುವ ಕಾಂಗ್ರೆಸ್ ಮುಖಂಡ!

Viral Video: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬಿದ್ದ ಕಬ್ಬಿಣದ ಗೇಟ್; ಶಾಕಿಂಗ್‌ ವಿಡಿಯೊ

Viral Video
Viral Video

ಪುಣೆ : ಮಕ್ಕಳನ್ನು ಮನೆಯ ಹೊರಗೆ ಆಟವಾಡಲು ಬಿಡುವಾಗ ಪೋಷಕರು ಸ್ವಲ್ಪ ಎಚ್ಚರ ವಹಿಸಬೇಕು. ಮಕ್ಕಳನ್ನು ಅವರ ಪಾಡಿಗೆ ಬಿಡಬಾರದು. ಅವರು ಮನೆಯ ಹೊರಗೆ ಆಟವಾಡುತ್ತಿದ್ದರೆ ಅವರ ಕಡೆ ಗಮನ ಕೊಡುತ್ತಿರಬೇಕು. ಇಲ್ಲವಾದರೆ ಇದರಿಂದ ದುರ್ಘಟನೆಗಳು ಸಂಭವಿಸಿ ಮಕ್ಕಳಿಗೆ ಅಪಾಯವಾಗಬಹುದು. ಅಂತಹದೊಂದು ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಮೂರುವರೆ ವರ್ಷದ ಬಾಲಕಿಯ ಮೇಲೆ ಭಾರವಾದ ಕಬ್ಬಿಣದ ಗೇಟ್ ಬಿದ್ದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಪುಣೆಯ ಪಿಂಪ್ರಿ-ಚಿಂಚ್ವಾಡಿಯ ಗಣೇಶ್ ನಗರದ ಬೋಪ್ಖೇಲ್‍ನಲ್ಲಿ ಬುಧವಾರ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ನಾಲ್ಕು ಮಕ್ಕಳು ತಮ್ಮ ಮನೆಯ ಹೊರಗೆ ಆಟವಾಡುತ್ತಿದ್ದರು. ಕೆಲವು ಕ್ಷಣಗಳ ನಂತರ, ಹುಡುಗರಲ್ಲಿ ಒಬ್ಬ ಸೈಕಲ್ ಹೊಂದಿರುವ ಮತ್ತೊಂದು ಹುಡುಗನಿಗೆ ಮನೆಯೊಳಗೆ ಹೋಗಲು ಗೇಟ್ ಅನ್ನು ಹಿಂದಕ್ಕೆ ತಳ್ಳಿದನು. ಹುಡುಗ ಪ್ರವೇಶಿಸಿದಾಗ, ಅವನು ಅದನ್ನು ಲಾಕ್ ಮಾಡಲು ಗೇಟ್ ಅನ್ನು ಮುಂದಕ್ಕೆ ಎಳೆದಿದ್ದಾನೆ. ಇದನ್ನು ನೋಡಿದ ಇಬ್ಬರು ಹುಡುಗಿಯರು ಕಬ್ಬಿಣದ ಗೇಟ್ ಕಡೆಗೆ ಓಡಿ ಬಂದಿದ್ದಾರೆ. ಆಗ ಗೇಟ್ ಆಯತಪ್ಪಿ ಕೆಳಗೆ ಬಿದ್ದಿದೆ. ಆ ವೇಳೆ ಟೆಡ್ಡಿ ಬೇರ್ ಹಿಡಿದಿದ್ದ ಒಬ್ಬ ಹುಡುಗಿ ಸಮಯಕ್ಕೆ ಸರಿಯಾಗಿ ಅಲ್ಲಿಂದ ಜಿಗಿದರೆ, ಗೇಟ್ ಕೆಳಗೆ ಬಿದ್ದು ಇನ್ನೊಬ್ಬ ಹುಡುಗಿ ನಜ್ಜುಗುಜ್ಜಾಗಿದ್ದಾಳೆ.

ಭಯಭೀತರಾದ ಮಕ್ಕಳು ಸಹಾಯಕ್ಕಾಗಿ ಕೂಗುತ್ತಾ ಓಡಿಹೋದರು. ನಂತರ ಅಲ್ಲಿಗೆ ಬಂದ ವ್ಯಕ್ತಿಯೊಬ್ಬರು ಗೇಟ್ ಅನ್ನು ಎತ್ತಿ ಮಗುವನ್ನು ಎತ್ತಿಕೊಂಡು ಓಡಿದ್ದಾರೆ. ವರದಿಗಳ ಪ್ರಕಾರ, ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಪ್ರಾರಂಭವಾಗುವ ಮೊದಲೇ ಅವಳು ಸತ್ತಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪ್ರೀತಿಸಿದ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕ; ಗಾಬರಿಗೊಳಿಸುವ ವಿಡಿಯೊ

ಮೃತಪಟ್ಟ ಹುಡುಗಿಯನ್ನು ಗಿರಿಜಾ ಗಣೇಶ್ ಶಿಂಧೆ ಎಂದು ಗುರುತಿಸಲಾಗಿದೆ. ಕಟ್ಟಡದ ಮಾಲೀಕರು ಮತ್ತು ನಿವಾಸಿಗಳು ಗೇಟ್ ಸರಿಯಾಗಿರಲಿಲ್ಲ. ಹಾಗಾಗಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ತನಿಖೆಯ ವೇಳೆ ತಿಳಿಸಿದ್ದಾರೆ. ಈ ಘಟನೆಯು ನಿವಾಸಿಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಕಟ್ಟಡ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Continue Reading
Advertisement
ಮಾಲಿವುಡ್9 mins ago

Mohanlal Visits Landslide: ಸೇನಾ ಸಮವಸ್ತ್ರ ಧರಿಸಿ ವಯನಾಡಿಗೆ ಬಂದ ಮೋಹನ್​ಲಾಲ್!

M R Mamata
ಶ್ರದ್ಧಾಂಜಲಿ10 mins ago

M R Mamata: ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾ ನಿಧನ

wayanad landslide cm siddaramaiah pinarayi vijayan
ಕರ್ನಾಟಕ26 mins ago

Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

Paris Olympics
ಪ್ರಮುಖ ಸುದ್ದಿ26 mins ago

Paris Olympics: ಹ್ಯಾಟ್ರಿಕ್​ ಪದಕ ತಪ್ಪಿಸಿಕೊಂಡ ಮನು ಭಾಕರ್​; 4ನೇ ಸ್ಥಾನಕ್ಕೆ ತೃಪ್ತಿ

Self Harming
ಚಿಕ್ಕೋಡಿ43 mins ago

Self Harming : ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

BJP-JDS Padayatra
ಕರ್ನಾಟಕ44 mins ago

BJP-JDS Padayatra: ಮೈಸೂರು ಚಲೋ ಪಾದಯಾತ್ರೆ ಆರಂಭ; ದಲಿತರು, ರೈತರಿಗೆ ನ್ಯಾಯ ಕೊಡಿಸಲು ಹೋರಾಟ ಎಂದ ವಿಜಯೇಂದ್ರ

Narco-Terrorism
ದೇಶ46 mins ago

Narco-Terrorism: ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸುತ್ತಿದ್ದ ಆರು ಸರ್ಕಾರಿ ಅಧಿಕಾರಿಗಳ ಅಮಾನತು

Ismail Haniyeh
ವಿದೇಶ1 hour ago

Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

karnataka rain
ಮಳೆ1 hour ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

hd kumaraswamy muda
ಪ್ರಮುಖ ಸುದ್ದಿ1 hour ago

HD Kumaraswamy: ಇನ್ನೂ ಹತ್ತು ತಿಂಗಳು ಸರ್ಕಾರ ನಡೆಸಿ ನೋಡೋಣ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ1 hour ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌