Road Accident: ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು - Vistara News

ರಾಯಚೂರು

Road Accident: ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು

Road Accident: ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಮಸ್ವರೂಪಿ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

VISTARANEWS.COM


on

bolero hit 3 death road accident raichur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಹನುಮ ಮಾಲಾಧಾರಿಗಳಿಗೆ (Hanuman Devotees) ಬೊಲೇರೋ ವಾಹನ (Bolero Hit) ಡಿಕ್ಕಿಯಾಗಿ ಸ್ಥಳದಲ್ಲಿಯೇ (Road Accident) ಮೂರು ಜನ ಸಾವಿಗೀಡಾಗಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಮಸ್ವರೂಪಿ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

ಅಯ್ಯನಗೌಡ (28) ಮಹೇಶ (22), ಉದಯಕುಮಾರ (28) ಮೃತ ದುರ್ದೈವಿಗಳು. ರಮೇಶ ಭೂಷಣ ಎಂಬ ಇಬ್ಬರಿಗೆ ಗಂಭೀರ ಗಾಯವಾಗಿದೆ. ಎಲ್ಲರೂ ರಾಯಚೂರಿನ ಹೆಗಸನಹಳ್ಳಿ ನಿವಾಸಿಗಳು. ಕೋಳಿ ತುಂಬಿಕೊಂಡು ಬರುತ್ತಿದ್ದ ಬುಲೇರೋ ವಾಹನ ಚಾಲಕ ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ. ಘಟನಾ ಸ್ಥಳಕ್ಕೆ ಶಕ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ವಿಮಾನದಲ್ಲಿ ಬಂತು 10 ಅನಕೊಂಡ! ಬ್ಯಾಂಕಾಕ್‌ನಿಂದ ಅಕ್ರಮ ಆಮದು, ಬಂಧನ

ಬೆಂಗಳೂರು: ಬೆಂಗಳೂರು ಏರ್ ಕಸ್ಟಮ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಕದ್ದು ತರಲಾಗುತ್ತಿದ್ದ 10 ಅನಕೊಂಡಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿವೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ತರಲಾಗಿದ್ದ 10 ಹಳದಿ ಆನಕೊಂಡಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಲಗೇಜ್ ಬ್ಯಾಗ್‌ನಲ್ಲಿ ಈ ಆನಕೊಂಡಗಳನ್ನು ತಂದಿದ್ದರು. ಏರ್ ಕಸ್ಟಮ್ ಅಧಿಕಾರಿಗಳ ಪರಿಶೀಲನೆ ವೇಳೆ ಇವು ಪತ್ತೆಯಾಗಿವೆ. ಸದ್ಯ ಅನಕೊಂಡಗಳನ್ನು ರಕ್ಷಿಸಿ ಆರೋಪಿಯನ್ನು ಏರ್ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ಹಳದಿ ಬಣ್ಣ ಉಳ್ಳ ಆನಕೊಂಡ ಹಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಅರಣ್ಯ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

ಹಳದಿ ಅನಕೊಂಡವನ್ನು ಪರಾಗ್ವೆಯನ್ ಅನಕೊಂಡ ಎಂದೂ ಕರೆಯುತ್ತಾರೆ. ಇದು ದಕ್ಷಿಣ ಅಮೆರಿಕಾಕ್ಕೆ ಸೇರಿದ ಬೋವಾ ಜಾತಿಯ ಹಾವು. ಇದು ವಿಶ್ವದ ಅತಿದೊಡ್ಡ ಹಾವುಗಳಲ್ಲಿ ಒಂದು. ಆದರೆ ಅದರ ಹತ್ತಿರದ ಸಂಬಂಧಿ ಹಸಿರು ಅನಕೊಂಡಕ್ಕಿಂತ ಚಿಕ್ಕದು. ಇವುಗಳ ಮರಿಗಳನ್ನು ಕದ್ದು ಸಾಗಿಸುವ ವ್ಯಾಪಕ ಜಾಲ ಅಂತಾರಾಷ್ಟ್ರೀಯವಾಗಿ ಸಕ್ರಿಯವಾಗಿದೆ. ಈ ನಿಟ್ಟಿನಲ್ಲಿ ಕಸ್ಟಮ್‌ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಭಾರತದಲ್ಲಿ ವಿದೇಶದ ವಿಶಿಷ್ಟ ಪ್ರಾಣಿಗಳನ್ನು (Exotic Animals) ಆಮದು ಮಾಡುವುದು ಹಾಗೂ ಸಾಕುವುದನ್ನು ನಿಷೇಧಿಸಲಾಗಿದೆ.

ʻಚುನಾವಣೆ ಪ್ರಚಾರ ಮಾಡಿದ್ರೆ ಹುಷಾರ್!‌ʼ ಎಂದು ಲಾಂಗ್‌ ಝಳಪಿಸಿದ ಜೆಡಿಎಸ್‌ ನಾಯಕ

ಚಿಕ್ಕಬಳ್ಳಾಪುರ: ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ‌ ಚಿಂತಾಮಣಿಯಲ್ಲಿ ಜೆಡಿಎಸ್‌ ನಾಯಕನೊಬ್ಬ ಎದುರಾಳಿಗಳ ಮುಂದೆ ಲಾಂಗ್‌ ಝಳಪಿಸಿ ಆವಾಜ್ ಹಾಕಿದ್ದಾನೆ. ಚುನಾವಣೆ ಪ್ರಚಾರ, ಮತದಾನದಲ್ಲಿ ಪಾಲ್ಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಜೆಡಿಎಸ್ ಮುಖಂಡನಿಂದ ಕಾಂಗ್ರೆಸ್ ಬೆಂಬಲಿಗರಿಗೆ ಬೆದರಿಕೆ ಹಾಕಿದ ಆರೋಪವಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಪಲ್ಲಕ್ಕಿ ಉತ್ಸವದಲ್ಲಿ ಲಾಂಗು ಹಿಡಿದು ಬೆದರಿಕೆ ಹಾಕಿದ್ದಾನೆ. ಇದರ ವಿಡಿಯೋ ಸಾಕ್ಷಿ ಲಭ್ಯವಾಗಿದೆ.

ಕೋದಂಡಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆ ನಡೆಯುತಿದ್ದ ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಕೆ.ವಿ‌ ಶ್ರೀನಿವಾಸರೆಡ್ಡಿ (ಕೆವಿಎಸ್) ಎಂಬಾತ ಲಾಂಗ್‌ ತೋರಿಸಿ ಬೆದರಿಕೆ ಹಾಕಿದ್ದಾನೆ. “ಏ ನನ್ನ ಮಕ್ಳಾ, ಚುನಾವಣಾ ಪ್ರಚಾರ ಅಥವಾ ಮತದಾನದಲ್ಲಿ ಪಾಲ್ಗೊಂಡರೆ‌ ಕತ್ತರಿಸುತ್ತೇನೆ” ಎಂದು ಬೆದರಿಕೆ‌ ಹಾಕಿದ್ದಾನೆ ಎನ್ನಲಾಗಿದೆ. ಎದುರಾಳಿಗಳಾದ ಕಲ್ಯಾಣ್‌ ರೆಡ್ಡಿ ಹಾಗು ಆತನ ಕುಟುಂಬದವರನ್ನು ಅಟ್ಟಾಡಿಸಿ ಬೆದರಿಸಿದ್ದಾನೆ.

ಈ ಕುರಿತು ಶ್ರೀನಿವಾಸರೆಡ್ಡಿ ವಿರುದ್ಧ ಕಲ್ಯಾಣ್ ಕುಮಾರ್ ಪ್ರಾಣಬೆದರಿಕೆ ದೂರು ದಾಖಲಿಸಿದ್ದಾರೆ. ಕಲ್ಯಾಣ್ ಕುಮಾರ್ ಹಾಲಿ ಸಚಿವ ಡಾ. ಎಂ. ಸಿ‌ ಸುಧಾಕರ್ ಬೆಂಬಲಿಗರಾಗಿದ್ದು, ಚಿಂತಾಮಣಿ‌ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather: ಯೆಲ್ಲೋ ಅಲರ್ಟ್‌; ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ಬೆಂಗಳೂರು (Bengaluru Rains) ಸೇರಿದಂತೆ ಹಲವೆಡೆ ಗುಡುಗು ಸಿಡಿಲು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗಬಹುದು. ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಅಲ್ಲಲ್ಲಿ ಮಳೆಯಾಗಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯು ಅಬ್ಬರಿಸಲಿದ್ದರೆ, ಇತ್ತ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಪ್ರಮುಖವಾಗಿ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು ಸೇರಿ ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

ನಟ ಹಾಗೂ ಬಿಗ್‌ಬಾಸ್‌ ಕಂಟೆಸ್ಟಂಟ್‌ ಶೈನ್‌ ಶೆಟ್ಟಿ ಈ ಸಮ್ಮರ್‌ನಲ್ಲಿ (Summer Fashion) ಸಖತ್‌ ಕೂಲ್‌ ಆಗಿ ಕಾಣಿಸಿಕೊಂಡಿದ್ದಾರೆ.ಹೌದು, ಶೈನ್‌ ಶೆಟ್ಟಿಯವರ ಈ ಸೀಸನ್‌ನ ಸ್ಟೈಲ್‌ ಸ್ಟೇಟ್‌ಮೆಂಟ್ಸ್‌ ಯಾವ ಮಟ್ಟಿಗೆ ಪುರುಷರಿಗೆ ಇಷ್ಟವಾಗಿದೆ ಎಂದರೇ, ಇವರ ಫ್ಯಾನ್‌ ಫಾಲೋವಿಂಗ್‌ ಹುಡುಗರು ಮಾತ್ರವಲ್ಲ, ಕಾರ್ಪೋರೇಟ್‌ ಕ್ಷೇತ್ರದ ಹುಡುಗರು ಕೂಡ ಇವರ ಫ್ಯಾಷನ್‌ ಸ್ಟೇಟ್‌ಮೆಂಟ್‌ಗೆ ಮಾರು ಹೋಗಿದ್ದಾರೆ.

Shine Shetty Summer Fashion

ಶೈನ್‌ ಶೆಟ್ಟಿ ನ್ಯಾಚುರಲ್‌ ಲುಕ್‌

“ಶೈನ್‌ ಶೆಟ್ಟಿ ಮೊದಲಿನಿಂದಲೂ ನ್ಯಾಚುರಲ್‌ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇವರು ಮೂಲತಃ ಮಂಗಳೂರಿನವರಾಗಿರುವುದರಿಂದಲೋ ಏನೋ ಬಿಸಿಲಲ್ಲೂ ಆರಾಮಾಗಿ ಕಾಣಿಸಿಕೊಳ್ಳುತ್ತಾರೆ. ಅಲ್ಲದೇ, ತಮ್ಮ ಸಿಂಪಲ್‌ ಸ್ಟೈಲ್‌ ಸ್ಟೇಟ್‌ಮೆಂಟ್‌ನಿಂದಲೇ ಎಲ್ಲರನ್ನು ಸೆಳೆಯುತ್ತಾರೆ. ಹುಡುಗಿಯರು ಮಾತ್ರವಲ್ಲ, ಹುಡುಗರು ಕೂಡ ಇವರ ಲುಕ್‌ಗೆ ಫಿದಾ ಆಗುತ್ತಾರಂತೆ. ತೀರಾ ಫ್ಯಾಷನ್‌ ಕಾನ್ಶಿಯಸ್‌ ಕೂಡ ಅಲ್ಲದ ಇವರ ಪ್ರತಿಯೊಂದು ಫ್ಯಾಷನ್‌ ಸ್ಟೇಟ್‌ಮೆಂಟ್‌ಗಳು ಕೂಡ ಇವರನ್ನು ಸದಾ ನ್ಯಾಚುರಲ್‌ ಲುಕ್‌ನಲ್ಲಿ ಬಿಂಬಿಸುತ್ತವಂತೆ. ಇನ್ನು, ಇವರ ತಿಳಿ ವರ್ಣದ ಸ್ಕಿನ್‌ ಟೋನ್‌ನಿಂದಾಗಿ ಅವರು ಧರಿಸುವ ಎಲ್ಲಾ ಬಗೆಯ ಔಟ್‌ಫಿಟ್ಸ್‌ ಕೂಡ ಇವರಿಗೆ ಮ್ಯಾಚ್‌ ಆಗುತ್ತವಂತೆ. ಎಲ್ಲದಕ್ಕಿಂತ ಹೆಚ್ಚಾಗಿ ಇವರ ಯೂನಿಕ್‌ ಫ್ಯಾಷನ್‌ನಲ್ಲಿ ಸೇರಿರುವ ಸಿಂಪಲ್‌ ಸ್ಮೈಲ್‌ ಇಡೀ ಲುಕ್‌ಗೆ ಸಾಥ್‌ ನೀಡುವುದನ್ನು ಗಮನಿಸಬಹುದು” ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕರಾದ ಅಮಿತ್‌ ಪಾಂಡ್ಯಾ ಅವರ ಪ್ರಕಾರ, ಕೆಲವು ನಟರು ತಮ್ಮ ನ್ಯಾಚುರಲ್‌ ಲುಕ್‌ನಿಂದಾಗಿಯೇ ಆಕರ್ಷಕವಾಗಿ ಕಾಣಿಸುತ್ತಾರೆ. ಇದು ಅವರ ಪ್ಲಸ್‌ ಪಾಯಿಂಟ್‌ ಎನ್ನುತ್ತಾರೆ.

Shine Shetty Summer Fashion

ಶೈನ್‌ ಶೆಟ್ಟಿ ಸಮ್ಮರ್‌ ಲುಕ್‌ನಲ್ಲಿ ಏನಿದೆ?

ಮನಸ್ಸಿಗೆ ಮುದ ನೀಡುವಂತಹ ಶೇಡ್‌ನ ಔಟ್‌ಫಿಟ್‌! ವೈಟ್‌ ಪ್ಯಾಂಟ್‌ ಕಾಟನ್‌ ಪ್ರಿಂಟೆಡ್‌ ಶರ್ಟ್.‌ ಜೊತೆಗೆ ಅದಕ್ಕೆ ಹೊಂದುವ ಹೇರ್‌ಸ್ಟೈಲ್‌, ಸಿಂಪಲ್‌ ಚಪ್ಪಲಿ ಎಲ್ಲವೂ ಶೈನ್‌ ಸಮ್ಮರ್‌ ಲುಕ್‌ನಲ್ಲಿ ಸೇರಿದೆ. ಸನ್‌ ಗ್ಲಾಸ್‌ ಇವರನ್ನು ಮತ್ತಷ್ಟು ಹ್ಯಾಂಡ್‌ಸಮ್‌ ಆಗಿ ಕಾಣುವಂತೆ ಬಿಂಬಿಸಿದೆ. ಇವರ ಒಟ್ಟಾರೆ ಲುಕ್ಗೆ ಫ್ಯಾಷನ್‌ ಸ್ಟೈಲಿಸ್ಟ್‌ಗಳಾದ ತೇಜಸ್ವಿನಿ ಹಾಗೂ ಖುಷಿಯವರ ಸ್ಟೈಲಿಂಗ್‌ ಸಪೋರ್ಟ್‌ ಇದೆ.

Shine Shetty Summer Fashion

ಶೈನ್‌ ಶೆಟ್ಟಿ ಫ್ಯಾಷನ್‌ ಮಂತ್ರ

ಇನ್ನು, ಕಳೆದ ಬಾರಿ ವಿಸ್ತಾರ ನ್ಯೂಸ್‌ನೊಂದಿಗೆ ತಮ್ಮ ಫ್ಯಾಷನ್‌ ಹಾಗೂ ಸ್ಟೈಲ್‌ಸ್ಟೇಟ್‌ಮೆಂಟ್‌ ಬಗ್ಗೆ ಮಾತನಾಡಿದ್ದ ಶೈನ್‌ ಶೆಟ್ಟಿ, ನಾನಂತೂ ಇದುವೆರಗೂ ಇಂತಹದ್ದೇ ಫ್ಯಾಷನ್‌ ಹಾಗೂ ಸ್ಟೈಲ್‌ ಫಾಲೋಮಾಡಬೇಕೆಂಬ ರೂಲ್ಸ್‌ ಹಾಕಿಕೊಂಡಿಲ್ಲ! ಯಾವುದಾದರೂ ಸರಿಯೇ ನೋಡುಗರಿಗೆ ಪ್ಲೆಸೆಂಟ್‌ ಆಗಿ ಕಾಣಿಸಬೇಕು. ಧರಿಸಿದ ಮನಕ್ಕೂ ಮುದ ನೀಡಬೇಕು. ಸೀಸನ್‌ಗೆ ತಕ್ಕಂತೆ ಉಡುಪುಗಳನ್ನು ಆಯ್ಕೆ ಮಾಡಿ ಧರಿಸಬೇಕು. ಇನ್ನು ಕಲರ್‌ಗಳ ವಿಷಯಕ್ಕೆ ಬಂದಲ್ಲಿ, ನಮ್ಮ ಮುಖಕ್ಕೆ ಹಾಗೂ ಸಿನ್‌ ಟೋನ್‌ಗೆ ಹೊಂದುವಂತಹ ಬಣ್ಣದ ಉಡುಗೆಗಳನ್ನು ಸೆಲೆಕ್ಟ್‌ ಮಾಡುವುದು ಉತ್ತಮ ಎಂದಿದ್ದರು. ಇನ್ನು, ತಾರೆಯರ ಫ್ಯಾಷನ್‌ ಫಾಲೋ ಮಾಡಲು ಬಯಸುವ ಹುಡುಗರು, ಮೊದಲಿಗೆ ತಾವು ಕಾಪಿ ಮಾಡುತ್ತಿರುವ ಸ್ಟೈಲಿಂಗ್‌ ಮ್ಯಾಚ್‌ ಆಗುತ್ತವೆಯೇ! ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಅದನ್ನು ಬಿಟ್ಟು, ಸುಖಸುಮ್ಮನೇ, ಕಂಡ ಕಂಡ ಫ್ಯಾಷನ್‌ ಫಾಲೋ ಮಾಡುವುದಲ್ಲ. ಇಮಿಟೇಟ್‌ ಮಾಡುವಾಗಲು ಅದು ತಮಗೆ ಹೊಂದುತ್ತದೆಯೇ ಎಂಬುದನ್ನು ಅರಿಯಬೇಕು ಎಂದು ಹುಡುಗರಿಗೆ ಸಲಹೆ ನೀಡಿದ್ದರು.

ಹುಡುಗರಿಗೆ ಫ್ಯಾಷನ್‌ ವಿಮರ್ಶಕರ ಟಿಪ್ಸ್‌

ಶೈನ್‌ ಶೆಟ್ಟಿಯಂತೆ ಸಮ್ಮರ್‌ ಫ್ಯಾಷನ್‌ ಫಾಲೋ ಮಾಡುವವರು ಕೆಲವು ವಿಷಯಗಳನ್ನು ಮನದಲ್ಲಿಟ್ಟುಕೊಳ್ಳಬೇಕು.

  • 1. ಲೈಟ್‌ ಶೇಡ್‌ ಆಯ್ಕೆ ಮಾಡಬೇಕು.
  • 2. ಕಾಟನ್‌ ಶರ್ಟ್‌ ಆಯ್ಕೆ ಉತ್ತಮ.
  • 3. ಗಾಳಿಯಾಡುವಂತಹ ಪಾದರಕ್ಷೆಗಳು ಕೂಲ್‌ ಆಗಿರಿಸುತ್ತವೆ.
  • 4. ಸನ್‌ಗ್ಲಾಸ್‌ ಬಿಸಿಲಿನಿಂದ ಕಣ್ಣುಗಳನ್ನು ಸಂರಕ್ಷಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Jai Shri Ram Slogan: ಜೈ ಶ್ರೀರಾಮ್ ಎಂದು ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದ ಕಾಂಗ್ರೆಸ್‌ ಮುಖಂಡ

Jai Shri Ram Slogan: ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲಿ ಒದೆಯಬೇಕು ಎಂದು ರಾಯಚೂರು ಕೈ ಮುಖಂಡ ವಿವಾದಿತ ಹೇಳಿಕೆ ನೀಡಿದ್ದಾರೆ.

VISTARANEWS.COM


on

Jai Shri Ram Slogan
Koo

ರಾಯಚೂರು: ಜೈ ಶ್ರೀರಾಮ್ (Jai Shri Ram Slogan) ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲಿ ಒದೆಯಬೇಕು ಎಂದು ರಾಯಚೂರು ಕಾಂಗ್ರೆಸ್ ಮುಖಂಡರೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ. ಸದ್ಯ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕೈ ಮುಖಂಡನ ಹೇಳಿಕೆಗೆ ಬಿಜೆಪಿ ಹಾಗೂ ಹಿಂದು ಸಂಘಟನೆಗಳ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಅವರ ಮುಂದೆಯೇ ಕಾಂಗ್ರೆಸ್‌ ಮುಖಂಡ ಬಷಿರುದ್ದೀನ್ ಉದ್ಧಟತನದ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು‌ ಒಳಗೆ ಹಾಕಬೇಕು‌ ಎಂದು ಹೇಳಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಬಷಿರುದ್ದೀನ್ ಹೇಳಿಕೆ ಎಲ್ಲೆಡೆ ವೈರಲ್ ಆಗುತ್ತಿದ್ದು, ಕೈ‌ ಮುಖಂಡನ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಗರಂ ಆಗಿದ್ದಾರೆ. ನಡುರಸ್ತೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುವ ಮೂಲಕ ಕೈ ಮುಖಂಡನ ಹೇಳಿಕೆಗೆ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ | Prajwal Revanna Case: ರೇವಣ್ಣ ಮೇಲೆ ಕಿಡ್ನ್ಯಾಪ್‌ ಕೇಸ್;‌ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ, ನಾಳೆ SIT ಮುಂದೆ ಹಾಜರ್‌?

ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Prajwal Revanna Case Wherever Prajwal escapes we will pick him up says CM Siddaramaiah

ಬಾಗಲಕೋಟೆ: ಹಾಸನದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಪ್ರಮುಖ ಆರೋಪಿ ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ದುಬೈ ಅಲ್ಲ, ಎಲ್ಲಿಯಾದರೂ ಎಸ್ಕೇಪ್‌ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಜರ್ಮನಿಯಿಂದ ದುಬೈಗೆ ಎಸ್ಕೇಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್‌ ಎಲ್ಲಿಯಾದರೂ ಎಸ್ಕೇಪ್ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ. ಯಾವ ದೇಶದಲ್ಲಿ ಇದ್ದರೂ ಬಿಡುವುದಿಲ್ಲ. ಅಲ್ಲಿಂದಲೇ ಕರೆದುಕೊಂಡು ಬರುತ್ತೇವೆ ಎಂದು ಹೇಳಿದರು.

ಈ ಕಾರಣಕ್ಕಾಗಿಯೇ ನಾನು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ಪಾಸ್‌ಪೋರ್ಟ್ ಕ್ಯಾನ್ಸಲ್ ಆದ ಮೇಲೆ ಪ್ರಜ್ವಲ್‌ ವಿದೇಶದಲ್ಲಿ ಇರಲು ಆಗುವುದಿಲ್ಲವಲ್ಲ. ಈ ಕಾರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಜ್ವಲ್‌ ಪಾಸ್‌ಪೋರ್ಟ್‌ ಅನ್ನು ಕ್ಯಾನ್ಸಲ್‌ ಮಾಡಲಿ ಮಾಡಲಿ. ಪ್ರಜ್ವಲ್‌ ವಿದೇಶಕ್ಕೆ ಹೋಗಬೇಕಾದರೆ ಕೇಂದ್ರ ಸರ್ಕಾರಕ್ಕೆ ಗೊತ್ತಿರುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಸಂತ್ರಸ್ತರ ರಕ್ಷಣೆ ಮಾಡಲು ಸೂಚಿಸಿದ್ದೇನೆ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆ ಕಿಡ್ನ್ಯಾಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಆ ಹೆಣ್ಣುಮಕ್ಕಳ ಎಲ್ಲಿ ಹೋಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅವರನ್ನು ರಕ್ಷಣೆ ಮಾಡುವಂತೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ

ಪ್ರಜ್ವಲ್‌ ಅವರ ತಂದೆ ಎಚ್.ಡಿ. ರೇವಣ್ಣ ಅವರು ಲಾಯರ್ ಹತ್ತಿರ ಯಾಕೆ ಹೋಗಿದ್ದಾರೆ? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮನೆಗೆ ಲಾಯರ್ ಅನ್ನು ಕರೆಸಿಕೊಂಡು ಏಕೆ ಚರ್ಚೆ ಮಾಡಿದ್ದಾರೆ? ಎಚ್‌ಡಿಕೆ ಒಮ್ಮೆ ಹೇಳುತ್ತಾರೆ, ರೇವಣ್ಣ, ನಾನು ಬೇರೆ ಬೇರೆ ಆಗಿದ್ದೇವೆ ಅಂತ. ದೇವೇಗೌಡರಿಗೂ, ನಮಗೂ ಈ ಪ್ರಕರಣಕ್ಕೂ ಏನೂ ಸಂಬಂಧ ಇಲ್ಲ ಅಂತ ಹೇಳುತ್ತಾರೆ. ಇನ್ನೊಂದು ಕಡೆ ಇದೆಲ್ಲವನ್ನೂ ಮಾಡುತ್ತಾರೆ. ಚುನಾವಣೆ ಪ್ರಚಾರದಲ್ಲಿ ಪ್ರಜ್ವಲ್ ಬೇರೆ ಅಲ್ಲ, ನನ್ನ ಮಗ ಬೇರೆ ಅಲ್ಲ ಎಂದು ಹೇಳಿದ್ದು ಕುಮಾರಸ್ವಾಂಇ ಅಲ್ಲವೇ? ಇದರ ಅರ್ಥ ಏನು? (What is it mean?) ಅವರು ಮಾಡೋದೆಲ್ಲವನ್ನೂ ಒಟ್ಟಿಗೆ ಮಾಡೋದು. ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು.

Continue Reading

ಕ್ರೈಂ

Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

Prajwal Revanna Case: ನಿಮಗೆ ಬೇಕಿರುವುದು ಆ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಲ್ಲ. ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡು ಗೆಲ್ಲಬೇಕು ಹಾಗೂ ಪ್ರಧಾನಿ ನರೇಂದ್ರ‌ ಮೋದಿಯವರ ಹೆಸರು ಕೆಡಿಸಬೇಕು ಎಂಬುದಷ್ಟೇ ನಿಮಗೆ ಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಅದರಲ್ಲಿ ಏನೂ ರಾಜೀ‌ ಇಲ್ಲ. ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ. ನಾವೇನೂ ಪಲಾಯನವಾದಿಗಳಲ್ಲ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪಾತ್ರವಾಗಲೀ, ನನ್ನ ಪಾತ್ರವಾಗಲೀ ಈ ಪ್ರಕರಣದಲ್ಲಿ ಇಲ್ಲ. ಆದರೂ ನಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Prajwal Revanna Case face not visible in videos says HD Kumaraswamy
Koo

ರಾಯಚೂರು: ಪ್ರಜ್ವಲ್ ರೇವಣ್ಣ (Prajwal Revanna Case) 400 ಮಹಿಳೆಯರನ್ನು ರೇಪ್ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ (Rahul Gandhi) ಹೇಳುತ್ತಾರೆ. ಅವರಿಗೆ ಈ ಮಾಹಿತಿ ಕೊಟ್ಟವರು ಯಾರು? ನೀವು (ಸರ್ಕಾರದವರು) ಕೊಟ್ಟಿದ್ದೀರಾ? ಈ ಕುರಿತು ಬೇಕಾಬಿಟ್ಟಿ ಹೇಳಿಕೆ ನೀಡಿರುವ ರಾಹುಲ್‌ಗೆ ನೋಟಿಸ್‌ ಕೊಡುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿ. ಈ ಸರ್ಕಾರಕ್ಕೆ‌ ಮಾನ, ಮರ್ಯಾದೆ ಇದ್ದಿದ್ದರೆ, ಹೆಣ್ಣು‌ಮಕ್ಕಳ‌ ಫೋಟೊಗಳನ್ನು ಇಡೀ ದೇಶಕ್ಕೆ ಕಳುಹಿಸುತ್ತಿರಲಿಲ್ಲ. ನಿಮಗೆ‌ ಹೆಣ್ಣು ಮಕ್ಕಳ ಮೇಲೆ ಗೌರವ ಇದೆಯಾ? ನಿಮಗೆ‌ ಗಂಡಸ್ತನ, ತಾಕತ್ತಿದ್ದರೆ ರಾಹುಲ್ ಗಾಂಧಿಗೆ ನೋಟಿಸ್‌ ಕೊಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸವಾಲು ಹಾಕಿದರು.

ಈ ಕುರಿತು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ನೀವು‌ ಬಿಟ್ಟಿರುವ ವಿಡಿಯೊಗಳಲ್ಲಿ ಪ್ರಜ್ವಲ್ ಮುಖವೇ ಇಲ್ಲ. ಹಾಗಂತ ನಾನೇನು ಆ ವಿಡಿಯೊಗಳನ್ನು ನೋಡಿಲ್ಲ. ಇಷ್ಟಾದರೂ ಸಹಿಸಿಕೊಂಡಿದ್ದೇವೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ನ ಮಹಾನಾಯಕ ತೋಟದಲ್ಲಿ‌ ಏನೇನಾಗಿದೆ? ನೀನೇನು 6 – 7 ಜನರನ್ನು ಹೋಟೆಲ್‌ನಲ್ಲಿ ತೆಗೆದುಕೊಂಡು ಹೋಗಿ ಇಟ್ಟೀದಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ

ನಿಮಗೆ ಬೇಕಿರುವುದು ಆ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಲ್ಲ. ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡು ಗೆಲ್ಲಬೇಕು ಹಾಗೂ ಪ್ರಧಾನಿ ನರೇಂದ್ರ‌ ಮೋದಿಯವರ ಹೆಸರು ಕೆಡಿಸಬೇಕು ಎಂಬುದಷ್ಟೇ ನಿಮಗೆ ಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಅದರಲ್ಲಿ ಏನೂ ರಾಜೀ‌ ಇಲ್ಲ. ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ. ನಾವೇನೂ ಪಲಾಯನವಾದಿಗಳಲ್ಲ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪಾತ್ರವಾಗಲೀ, ನನ್ನ ಪಾತ್ರವಾಗಲೀ ಈ ಪ್ರಕರಣದಲ್ಲಿ ಇಲ್ಲ. ಆದರೂ ನಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಪೆನ್‌ಡ್ರೈವ್‌ ಲೀಕ್‌ ಬಗ್ಗೆ ಹೊರಜಗತ್ತಿಗೆ ಗೊತ್ತಾದ ದಿನವೇ ಹೇಳಿದ್ದೇನೆ. ಈ ನೆಲದ ಕಾನೂನಿಗೆ ತಲೆ ಬಾಗಬೇಕು. ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಹೇಳಿದ್ದೇನೆ. ಆದರೂ‌ ಕ್ಯಾಮರಾ ಹಿಡಿದು ನನ್ನ ಮುಂದೆಯೇ ಏಕೆ ಬರುತ್ತೀರಿ? ಎಂದು ಮಾಧ್ಯಮದವರಿಗೆ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಏನೋ‌ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ.
ಎಸ್.ಐ.ಟಿ. ಜತೆ ಚಿಂತನೆ ಮಾಡುತ್ತೇವೆ ಎಂದು ಹೇಳಿ ಏಪ್ರಿಲ್‌ 28ಕ್ಕೆ ಎಫ್.ಐ.ಆರ್ ಮಾಡಿಸಿದ್ದೀರಿ. ಈ ವಿಚಾರದಲ್ಲಿ ಪದೇ ಪದೆ ಪ್ರಧಾನಿ ಮೋದಿ ಹಾಗೂ ಬಿಜೆಪಿಯವರನ್ನು ಏಕೆ ಎಳೆಯುತ್ತೀರಿ? ಅದಕ್ಕೂ‌ ಪ್ರಧಾನಿಗೂ ಸಂಬಂಧ ಏನು? ಎಂದು ಎಚ್‌.ಡಿ. ಕುಮಾರಸ್ವಾಮಿ ಕೇಳಿದರು.

ಸುಮ್ಮನೆ ನನ್ನನ್ನು ಕೆಣಕಿದ್ದಾರೆ

ನೋಟಿಸ್ ಕೊಟ್ಟ ನಂತರ ಒಂದು ವಾರ ಸಮಯ ಕೇಳಲಾಗಿದೆ. ರೇವಣ್ಣ ಅವರು ಎರಡು ದಿನ ಸಮಯ‌ ಕೇಳಿದ್ದಾರೆ. 8, 10 ಹತ್ತು ಬಾರಿ ಸಮನ್ಸ್ ಕೊಟ್ಟು ಸಮನ್ಸ್‌ಗೇ ಗೌರವ ಕಳಿದಿದ್ದೀರಿ. ದೇವೇಗೌಡರನ್ನು, ಪ್ರಧಾನಿಯವರನ್ನು ಎಳೆದು ತಂದಿದ್ದೀರಿ. ನಿಮ್ಮ ಸರ್ಕಾರದಲ್ಲಿ ನೀವೇ ಈ ರೀತಿಯ ಹೇಳಿಕೆಗಳನ್ನು ಕೊಡುವುದರ ಮುಖಾಂತರ ತನಿಖೆಯ ಹಾದಿಯನ್ನು ತಪ್ಪಿಸುವುದಲ್ಲದೆ, ಪ್ರಚಾರಕ್ಕೋಸ್ಕರ ಈ ಪ್ರಕರಣವನ್ನು ಬಳಸಿಕೊಳ್ಳುತ್ತಿದ್ದೀರಿ. ಕೆಲವರು ಕುಮಾರಸ್ವಾಮಿಯೇ ಈ‌ ಪೆನ್‌ಡ್ರೈವ್‌ ಬಿಟ್ಟಿದ್ದಾಗಿ ಹೇಳುತ್ತಾರೆ. ಇಲ್ಲಿ‌ ನನ್ನ ಹೆಸರನ್ನು ತರಲಾಗಿದೆ. ಸುಮ್ಮನೆ ನನ್ನನ್ನು ಕೆಣಕಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಗುಡುಗಿದರು.

ಇದನ್ನೂ ಓದಿ: Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

ತಂದೆ – ತಾಯಿಗೆ ಆತ್ಮಸ್ಥೈರ್ಯ ತುಂಬಲು ಹೋಗಿದ್ದೆ

ರಾಜ್ಯದ‌ ಮುಖ್ಯಮಂತ್ರಿಗೆ ತಂದೆ – ತಾಯಿ‌ ಮೇಲೆ ಗೌರವ ಇದೆಯೇ? ಸಿದ್ದರಾಮಯ್ಯ ಅವರಿಗೆ ಮನುಷ್ಯತ್ವ ಇಲ್ಲದಿರಬಹುದು. ಆದರೆ, ನಮಗೆ ಇದೆ. ನಾನು ಬಂದಿರುವ ಸಂಸ್ಕೃತಿ ನಮಗೆ ಇದನ್ನು ಕಲಿಸಿದೆ. ನನ್ನ ತಂದೆ – ತಾಯಿ ನೋವಿನಲ್ಲಿದಾರೆ. ಅವರಿಗೆ ಆತ್ಮಸ್ಥೈರ್ಯ ತುಂಬುವುದಕ್ಕೆ ನಾನು ಅವರ ಜತೆ ಎರಡು ದಿನ ಇದ್ದೆ. ನಮ್ಮ ಮನೆಗೆ ಯಾವ ವಕೀಲರು ಬಂದಿದ್ದರು? ಇವತ್ತು ಆರೋಪಿ‌ ಸ್ಥಾನದಲ್ಲಿ‌ ನಿಲ್ಲಿಸಿದ್ದೀರಿ ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

Continue Reading

ಮಳೆ

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Bengaluru Rains: ಬೆಂಗಳೂರು ಸುತ್ತಮುತ್ತ ಗಾಳಿ ಜತೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ದೇವಸ್ಥಾನ ಜೀರ್ಣೋದ್ಧಾರದಲ್ಲಿ ಊಟ ಮಾಡುತ್ತಿದ್ದಾಗ ದಿಢೀರ್‌ ಮಳೆಯಿಂದ ಜನರು ಊಟ ಬಿಟ್ಟು ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಕೆಲವೆಡೆ ಮಳೆ ಅನಾಹುತಗಳು ಸಂಭವಿಸಿವೆ.

VISTARANEWS.COM


on

By

Bengaluru Rains
Koo

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ (Karnataka Rains) ಬಿರುಗಾಳಿ ಸಹಿತ ಮಳೆ ಬಂದು ಹೋಯಿತು. ಆದರೆ ರಾಜಧಾನಿ ಬೆಂಗಳೂರಲ್ಲಿ ಒಂದು ಸಣ್ಣ ಹನಿಯು (Karnataka weather Forecast) ಬೀಳಲಿಲ್ಲ. ಬೆಂಗಳೂರು ಕರಗ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಆದರೂ ಮಳೆ ಬಂದೇ ಬರುತ್ತೆ ಎಂಬ ನಂಬಿಕೆ ಇದೆ. ಆದರೆ ಆಗಲೂ ಮಳೆಯು ಕಾಣಲಿಲ್ಲ. ಇದೀಗ ಬಿಸಿಲ ಧಗೆಯಿಂದ ಸುಸ್ತಾಗಿದ್ದ ಮಂದಿಗೆ ಮಳೆಯು ತನ್ನ ಭರ್ಜರಿ ಪ್ರದರ್ಶನ (Bengaluru Rains) ತೋರಿದೆ.

ಲೇಟ್‌ ಆದರೂ ಲೇಟೆಸ್ಟ್‌ ಆಗಿ ಮಳೆರಾಯ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾನೆ. ಇದರಿಂದಾಗಿ ಸೋಶಿಯಲ್‌ ಮೀಡಿಯಾದಲ್ಲಿ ನೆಟ್ಟಿಗರು ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್ ಎಂದು ಬೆಂಗಳೂರಿಗರಿಗೆ ವಿಷ್‌ ಮಾಡಿದ್ದಾರೆ. ಜತೆಗೆ ಟ್ವಿಟರ್‌, ಇನ್ಸ್ಟಾಗ್ರಾಂನಲ್ಲಿ Bengaluru rains ಹ್ಯಾಶ್‌ ಟ್ಯಾಗ್‌ ಹಾಕಿ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತೂ-ಇಂತೂ ಬೆಂಗಳೂರಲ್ಲಿ ಮಳೆ ಬಂತಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಶಿವಾಜಿನಗರ, ಮಲ್ಲೇಶ್ವರಂ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮೆಜೆಸ್ಟಿಕ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್, ಪ್ಯಾಲೇಸ್ ರಸ್ತೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನ ಮೂರು ಗಂಟೆ ಸಮಯವು ರಾತ್ರಿಯಂತೆ ಕತ್ತಲೆ ಆವರಿಸಿತ್ತು. ದಿಢೀರ್ ಮಳೆಗೆ ದ್ವಿಚಕ್ರ ವಾಹನ ಸವಾರರು ಸೇತುವೆ ಕೆಳಗೆ ಹಾಗೂ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

Bengaluru Rains

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ

ಇನ್ನೂ ಬೆಂಗಳೂರಿನ ಆರ್‌.ಟಿ‌ ನಗರದಲ್ಲಿ ಮರವು ಉರುಳಿ ಬಿದ್ದಿತ್ತು. ಇನೋವಾ ಹಾಗೂ ಓಮಿನಿ ಕಾರು ಜಖಂಗೊಂಡಿತ್ತು. ರವೀಂದ್ರನಾಥ್ ಠಾಗೋರ್ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿತ್ತು. ಅದೃಷ್ಟವಶಾತ್‌ ಕಾರಿನಲ್ಲಿ ಇದ್ದವರಿಗೆ ಯಾವುದೇ ತೊಂದರೆ ಆಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಿಬಿಎಂಪಿ ಸಿಬ್ಬಂದಿ ದೌಡಾಯಿಸಿದ್ದು, ಮರ ತೆರವು ಮಾಡುತ್ತಿದ್ದಾರೆ. ಇತ್ತ ಕೊತ್ತನೂರು ಬಳಿ ಕಾರಿನ ಮೇಲೆ ವಿದ್ಯುತ್‌ ಕಂಬ ಬಿದ್ದು ಕಾರಿನ ಬ್ಯಾನೆಟ್ ಹಾಳಾಗಿತ್ತು. ವಿದ್ಯುತ್‌ ಕಂಬ ಕಳಚಿ ಬಿದ್ದ ಕಾರಣ ಕರೆಂಟ್‌ ಕಟ್ಟ್‌ ಆಗಿತ್ತು.

Bengaluru Rains

ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ

ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗುತ್ತಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಮಂಡ್ಯ ಜನರು ಖುಷಿಯಾಗಿದ್ದಾರೆ. ಭಾರಿ ಶಬ್ಧದೊಂದಿಗೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಮೈಸೂರಿನಲ್ಲಿ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ವರುಣ ಸಿಂಚನವಾಗಿದೆ. ತಿ.ನರಸೀಪುರ ತಾಲೂಕಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಜೋರು ಗಾಳಿ ನಡುವೆ ಆಲಿಕಲ್ಲು ಮಳೆಯಾಗಿದೆ.

ಟ್ರಾನ್ಸ್ ಫಾರ್ಮರ್ ಸ್ಫೋಟ

ಬೆಂಗಳೂರಿನ ಐಟಿಐ ಲೇಔಟ್‌ನಲ್ಲಿ ಮಳೆಗೆ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಗಾಳಿ ಮಳೆಗೆ ಮರಗಳ ಎಲೆ ತಾಗಿ ಟ್ರಾನ್ಸ್ ಫಾರ್ಮನರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬ್ಲಾಸ್ಟ್‌ ಆಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರಾನ್ಸ್‌ಫಾರ್ಮನರ್‌ ಸ್ಫೋಟದಿಂದಾಗಿ ವಿದ್ಯುತ್‌ ಕಡಿತವಾಗಿದೆ.

ಹೊಸಕೋಟೆಯಲ್ಲೂ ಬಿರುಗಾಳಿ ಮಳೆ

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗಿದೆ. ವರ್ಷದ ಮೊದಲ ಮಳೆ ಕಂಡು ಜನರು ಸಂತಸಗೊಂಡಿದ್ದಾರೆ. ಇನ್ನೂ ಗಾಳಿ ಸಹಿತ ಮಳೆಯಿಂದಾಗಿ ದೇವಸ್ಥಾನ ಜೀರ್ಣೋದ್ಧಾರದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಎಲ್ಲಾ ಚೆಲ್ಲಾಪಿಲ್ಲಿಯಾಗಿದ್ದವು. ಊಟ ಮಾಡುತ್ತಿದ್ದವರೆಲ್ಲೂ ಎಲೆ ಬಿಟ್ಟು, ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಹೊಸಕೋಟೆ ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಾಮರಾಜನಗರದಲ್ಲೂ ಮಳೆಯ ಸಿಂಚನ

ಚಾಮರಾಜನಗರದಲ್ಲೂ ವರುಣ ಭೂ ಸ್ಪರ್ಶಿಸಿದ್ದಾನೆ. ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರ, ಚೆನ್ನಪ್ಪಪುರ, ಅರಕಲವಾಡಿ ವೆಂಕಟಯ್ಯನ ಛತ್ರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಬೇಸಿಗೆಯಿಂದ ಬೇಸತ್ತಿದ್ದ ರೈತರ ಮುಖದಲ್ಲಿ ಕೊಂಚ ಮಂದಹಾಸ ಮೂಡಿದೆ. ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿ, ಉಡಿಗಾಲ, ಕೆಂಗಾಕಿ, ಕುಮಚಹಳ್ಳಿ ಗ್ರಾಮದಲ್ಲಿ ಗಾಳಿಯ ಅಬ್ಬರದೊಂದಿಗೆ ಮಳೆಯಾಗಿದೆ.

ರಾಮನಗರದಲ್ಲೂ ತಂಪೆರೆದ ಮಳೆ

ಬರಗಾಲದಿಂದ ಬೇಸತ್ತಿದ್ದ ರೇಷ್ಮೆನಾಡು ರಾಮನಗರ ಜಿಲ್ಲೆಯಲ್ಲೂ ಹಲವೆಡೆ ವರುಣ ದರ್ಶನ ಕೊಟ್ಟಿದ್ದಾನೆ. ಗುಡುಗು ಸಹಿತ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಪೂರ್ವಜರ ನಂಬಿಕೆಯಂತೆ ಭರಣಿ ಮಳೆ ಆಗಮಿಸಿದೆ. ಭರಣಿ ಮಳೆ ಬಂದರೆ ರೈತರ ಕೃಷಿ ಚುಟುವಟಿಕೆ ಆರಂಭಿಸಲು ಯಶಸ್ವಿ ಎಂಬ ನಂಬಿಕೆ ಇದೆ. ಸದ್ಯ ಭರಣಿ ಮಳೆಯ ಸಿಂಚನದಿಂದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ.

ಆಲಿಕಲ್ಲು ಸಹಿತ ಮಳೆಯಾರ್ಭಟ

ಇನ್ನೂ ರಾಜ್ಯ ಗಡಿ ಡೆಂಕಣಿಕೋಟೆ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ತಮಿಳುನಾಡಿನ ಡೆಂಕಣಿಕೋಟೆ, ಹೊಸೂರು, ಸೂಲಗಿರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ ಸೇರಿದಂತೆ ಜೋರು ಮಳೆಯಾಗುತ್ತಿದೆ.

Bengaluru rains

ಬ್ಯಾರಿಕೇಟ್‌ ಹಾಕಿ ಅಂಡರ್‌ಪಾಸ್‌ ಕ್ಲೋಸ್‌

ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ನದಿಯಂತಾಗಿತ್ತು. ವಿಧಾನಸೌಧ ಪಕ್ಕದಲ್ಲಿರುವ ಎಂ.ಎಸ್ ಬಿಲ್ಡಿಂಗ್ ಸುತ್ತಮುತ್ತಲಿನ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಎಂಎಸ್‌ ಬಿಲ್ಡಿಂಗ್‌ ಸಮೀಪವೇ ಇರುವ ಅಂಡರ್ ಪಾಸ್‌ಗಳಿಗೆ ಬ್ಯಾರಿಕೇಟ್ ಹಾಕಿ ಕ್ಲೋಸ್ ಮಾಡಲಾಗಿದೆ.

ಧರೆಗೆ ಬಿದ್ದ ಮರಗಳು

ಮಳೆಯಿಂದ ಬೆಂಗಳೂರು ನಗರದಲ್ಲಿ ಮೂರು ಕಡೆ ಬೃಹತ್ ಗಾತ್ರದ ಮರ ಧರೆಗೆ ಬಿದ್ದಿದೆ. ಕೆ.ಆರ್.ಪುರಂನ ಕಸ್ತೂರಿ ನಗರ, ಆರ್‌ಟಿ ನಗರದಲ್ಲಿ ಮಳೆಗೆ ಮರ ಬಿದ್ದಿದೆ. ಇನ್ನೂ ನಾರಾಯಣಪುರದಲ್ಲಿ ಮರ ಬಿದ್ದು, ಕಾರು, ಬೈಕ್ ಜಖಂಗೊಂಡಿದೆ. ಸದ್ಯ ರಸ್ತೆಗೆ ಬಿದ್ದಿದ ಮರವನ್ನು ಬಿಬಿಎಂಪಿ ಸಿಬ್ಬಂದಿ ತೆರವು ಮಾಡಿದ್ದಾರೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದ ಎಟಿಎಂ (ATM) ಕೊಠಡಿಗೆ ಮಳೆ ನೀರು ನುಗ್ಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
hd revanna prajwal revanna case
ಪ್ರಮುಖ ಸುದ್ದಿ9 mins ago

Prajwal Revanna Case: ಕಾಣದಂತೆ ಮಾಯವಾದ ಎಚ್‌ಡಿ ರೇವಣ್ಣ ! ಇಂದು ಜಾಮೀನು ಸಿಗದೇ ಹೋದರೆ….

Cocoa Price
ಕೃಷಿ12 mins ago

Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

IPL 2024 POINTS TABLE
ಕ್ರೀಡೆ30 mins ago

IPL 2024 POINTS TABLE: ಕೆಕೆಆರ್​ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?

prajwal revanna case hassan MP home
ಕ್ರೈಂ38 mins ago

Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

Robbery Case
ಕ್ರೈಂ44 mins ago

Robbery Case: ಕಾರು ತಪಾಸಣೆ ನೆಪದಲ್ಲಿ ಸುಲಿಗೆ; ಪೊಲೀಸರ ವಿರುದ್ಧವೇ ಕೇಳಿ ಬಂತು ಗಂಭೀರ ಆರೋಪ

Food Cleaning Tips Kannada
ಲೈಫ್‌ಸ್ಟೈಲ್48 mins ago

Food Cleaning Tips Kannada: ಹಣ್ಣು, ತರಕಾರಿಗಳಿಂದ ರಾಸಾಯನಿಕ ಅಂಶ ಸ್ವಚ್ಛಗೊಳಿಸುವ 5 ವಿಧಾನಗಳಿವು

Viral Video
ವೈರಲ್ ನ್ಯೂಸ್57 mins ago

Viral Video: ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

Salaar Movie Fails To Get Expected TRP Star Suvarna
ಸಿನಿಮಾ1 hour ago

Salaar Movie: ಕಿರುತೆರೆಯಲ್ಲಿ ‘ಸಲಾರ್’ಗೆ ಕಡಿಮೆ ಟಿಆರ್‌ಪಿ: ಪ್ಲಾಪ್‌ ಆಗಲು ಕಾರಣವೇನು?

RCB vs GT
ಕ್ರಿಕೆಟ್1 hour ago

RCB vs GT: ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ; ಮೆಟ್ರೋ ಸೇವೆ ವಿಸ್ತರಣೆ

Ajay Devgn 'Shaitaan' to stream on OTT
ಒಟಿಟಿ1 hour ago

Ajay Devgn: ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗ್ತಾ ಇದೆ ಅಜಯ್‌ ದೇವಗನ್‌ ʻಶೈತಾನ್ʼ ಸಿನಿಮಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ18 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌