Site icon Vistara News

Road Accident : ಇನ್ನೋವಾ ಕಾರಿಗೆ ಬಸ್‌ ಡಿಕ್ಕಿ; ಇಬ್ಬರು ಸಾವು, ಐವರು ಗಂಭೀರ

Bus collides with Innova car Two dead five critical

ರಾಯಚೂರು: ರಾಯಚೂರಿನ ಕಸಬೆ ಕ್ಯಾಂಪ್ ಬಳಿ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಖಾಸಗಿ ಬಸ್ ಹಾಗೂ ಇನ್ನೋವಾ ಕಾರ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಾರಿಯಾ ಗೀತಾ (38) ಹಾಗೂ ಅಮಲ್ ಪಾಲ್ ಮೇರಿ (64) ಮೃತ ದುರ್ದೈವಿ.

ಖಾಸಗಿ ಬಸ್‌ ಹೈದ್ರಾಬಾದ್‌ನಿಂದ ಸಿಂಧನೂರು ಮಾರ್ಗವಾಗಿ ಹೊರಟಿತ್ತು. ಗದಗನಿಂದ ರಾಯಚೂರು ಮಾರ್ಗವಾಗಿ ಇನ್ನೋವಾ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎರಡು ವಾಹನಗಳು ವೇಗವಾಗಿ ಇದ್ದ ಕಾರಣ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಐವರು ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯದಿಂದ ಪಾರಾಗಿದ್ದಾರೆ. ರಾಯಚೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್‌ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Murder Case : ಕಡೂರು ಕೊಲೆ ಕೇಸ್‌; ಒಂದೇ ತಟ್ಟೆಯಲ್ಲಿ ಅನ್ನ ತಿಂದು ಮುಹೂರ್ತ ಇಟ್ಟ ಸ್ನೇಹಿತರು

ನೀರಿನ ಟ್ಯಾಂಕರ್‌ ಕದ್ದ ಕಳ್ಳರು

ಹುಬ್ಬಳ್ಳಿಯ ಅದರಗುಂಚಿ ಗ್ರಾಮದಲ್ಲಿ ಮನೆಮುಂದೆ ನಿಲ್ಲಿಸಿದ್ದ ನೀರಿನ ಟ್ಯಾಂಕರ್‌ ಅನ್ನೇ ಕಳ್ಳರು ಕದ್ದಿದ್ದಾರೆ. ರೈತ ಶಿವಲಿಂಗಪ್ಪ ರೇವಣಕರ ಎಂಬುವವರಿಗೆ ಸೇರಿದ ವಾಹನ ಇದಾಗಿದೆ. ಕಳ್ಳತನ ಮಾಡಿಕೊಂಡು ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಿವಲಿಂಗಪ್ಪ ಜಮೀನಿಗೆ ನೀರು ಹಾಯಿಸಲು‌ ನೀರಿ‌ನ ಟ್ಯಾಂಕರ್ ಮಾಡಿಸಿದ್ದರು. ರಾತ್ರಿ ಟ್ರ್ಯಾಕ್ಟರ್‌ನಿಂದ ಟ್ಯಾಂಕರ್ ಬೇರ್ಪಡಿಸಿ ಕಳ್ಳತನ ಮಾಡಿದ್ದಾರೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ‌

Exit mobile version